Article Image

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’

Article Image

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’

“ಸಂಸ್ಕೃತವು ಸಾರ್ವಕಾಲಿಕ ಶ್ರೇಷ್ಠ ಭಾಷೆ ಹಾಗೂ ಜ್ಞಾನ ಪರಂಪರೆಯ ಭಾಷೆ. ನಾವು ಭಾಷೆಯನ್ನು ಕಲಿಯುವುದು, ಭಾಷೆಯ ಬಗ್ಗೆ ಕಲಿಯುವುದು ಹಾಗೂ ಭಾಷೆಯ ಮೂಲಕ ಕಲಿಯುವುದು ಇದು ಪ್ರತ್ಯೇಕ ಆಯಾಮಗಳುಳ್ಳ ವಿಷಯವಾಗಿದೆ. ಇದನ್ನು ಅರಿತರೆ ಭಾಷೆಯ ಬಗ್ಗೆ ವಿಶಾಲ ವ್ಯಾಪ್ತಿಯಲ್ಲಿ ಅರಿಯಬಹುದು” ಎಂದು ಬೆಳಾಲಿನ ಎಸ್.ಡಿ.ಎಂ. ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೊಕ್ಕಾಡಿ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಆ. 30ರಂದು ಆಯೋಜಿಸಿದ್ದ ‘ಸಂಸ್ಕೃತೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು. "ಭಾಷೆಯ ಮೂಲಕ ಹಲವು ವಿಚಾರಗಳನ್ನು ನಾವು ತಿಳಿದುಕೊಳ್ಳುತ್ತೇವೆ. ಅಷ್ಟೇ ಅಲ್ಲದೆ ಇತ್ತೀಚಿಗೆ ವಿದೇಶಿಗರು ಕೂಡ ಸಂಸ್ಕೃತ ಭಾಷೆಯನ್ನು ಕಲಿಯುತ್ತಿದ್ದಾರೆ. ಸಂಸ್ಕೃತ ಎಲ್ಲಾ ಭಾಷೆಗಳಿಗೆ ಪ್ರೇರಣೆ ಹಾಗೂ ಪೋಷಣೆಯನ್ನು ನೀಡಿದೆ. ಶಿಕ್ಷಣದಲ್ಲಿ ಜ್ಞಾನ ಮತ್ತು ವೃತ್ತಿಯ ನಡುವೆ ಭಾಷೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ” ಎಂದು ಅವರು ಹೇಳಿದರು. “ಸಂಸ್ಕೃತ ಭಾಷೆಯ ಮೂಲಕ ನಮ್ಮ ಪ್ರಾಚೀನ ಪರಂಪರೆ ಹಾಗೂ ಸೊಗಡನ್ನು ಪಸರಿಸಬೇಕಾಗಿರುವುದು ವಿದ್ಯಾರ್ಥಿಗಳ ಜವಾಬ್ದಾರಿ" ಎಂದು ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಬಿ. ಗಣೇಶ್ ನಾಯಕ್ ಮಾತನಾಡಿ, “ಭಾಷೆಗಳು ನಮ್ಮಲ್ಲಿರುವ ಆಲೋಚನೆಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಲು ಸಹಕಾರಿಯಾಗುತ್ತವೆ. ಸಂಸ್ಕೃತ ಭಾಷೆಯು ವ್ಯಾವಹಾರಿಕ ಹಾಗೂ ನೈತಿಕ ಬದುಕಿಗೆ ಸಹಕಾರಿಯಾಗುತ್ತದೆ. ಸಂಸ್ಕೃತ ಭಾಷೆಯ ಮೂಲಕ ತಾಂತ್ರಿಕ ದೃಷ್ಟಿಕೋನ, ಶಬ್ದ ಭಂಡಾರ, ಭಾರತೀಯ ಸಂಸ್ಕೃತಿ, ಪರಂಪರೆ, ಐತಿಹಾಸಿಕ ನೆಲೆಯ ಬಗ್ಗೆ ತಿಳಿದುಕೊಳ್ಳಬಹುದು” ಎಂದರು. ವಿಭಾಗದ 'ಸುಬೋಧಿನೀ' ಭಿತ್ತಿಪತ್ರಿಕೆ ಬಿಡುಗಡೆಗೊಳಿಸಲಾಯಿತು. ಸಂಸ್ಕೃತ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಅತಿಥಿಯನ್ನು ಸನ್ಮಾನಿಸಲಾಯಿತು. ಕಾಲೇಜಿನ ವಿಜ್ಞಾನ ನಿಕಾಯದ ಡೀನ್ ಸವಿತಾ ಕುಮಾರಿ ಹಾಗೂ ಸಂಸ್ಕೃತ ವಿಭಾಗದ ಸಹ ಪ್ರಾಧ್ಯಾಪಕ ಶ್ರೇಯಸ್ ಪಾಳಂದೆ ಉಪಸ್ಥಿತರಿದ್ದರು. ಸಂಸ್ಕೃತ ವಿಭಾಗ ಮುಖ್ಯಸ್ಥ ಡಾ. ಶ್ರೀಧರ್ ಭಟ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸುಮುಖ್ ಪ್ರಾರ್ಥಿಸಿ, ವಂಶಿ ಆರ್ ಭಟ್ ವಂದನಾರ್ಪಣೆಗೈದರು. ವಿದ್ಯಾರ್ಥಿನಿಯರಾದ ಸಿಂಚನ ಪಾಳಂದೆ ಹಾಗೂ ಸಿಂಚನ ಜೋಶಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ‘ಸಂಸ್ಕೃತ ಪ್ರತಿಭಾ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಎಸ್.ಡಿ.ಎಂ. ನೆನಪಿನಂಗಳ'ದ ಹದಿನೈದನೇ ಕಂತಿನ ಕಾರ್ಯಕ್ರಮ: ಹದಿನೈದು ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

Article Image

ಎಸ್.ಡಿ.ಎಂ. ನೆನಪಿನಂಗಳ'ದ ಹದಿನೈದನೇ ಕಂತಿನ ಕಾರ್ಯಕ್ರಮ: ಹದಿನೈದು ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಇಂದು (ಆ.31) ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ (ಕಾಲೇಜಿನ ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) 'ಎಸ್.ಡಿ.ಎಂ. ನೆನಪಿನಂಗಳ'ದ ಹದಿನೈದನೇ ಕಂತಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ, ಕಾಲೇಜಿನ ಹದಿನೈದು ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂ. ಸಹಾಯಧನ ವಿತರಿಸಲಾಯಿತು. ಹಿರಿಯ ವಿದ್ಯಾರ್ಥಿಗಳಾದ ಕೇಂದ್ರ ಸರಕಾರದ ಸಮಾಚಾರ ಮತ್ತು ಪ್ರಸಾರ ಸಚಿವಾಲಯದ ಸೆಂಟ್ರಲ್ ಬ್ಯುರೋ ಆಫ್ ಕಮ್ಯೂನಿಕೇಶನ್ ನ ಮಂಗಳೂರು ಕ್ಷೇತ್ರ ಪ್ರಚಾರ ಅಧಿಕಾರಿ ಜಿ. ತುಕಾರಾಮ್ ನಿಡ್ಲೆ (ಜಿತು ನಿಡ್ಲೆ), ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಆಡಳಿತ ನಿರ್ದೇಶಕ, ಉಜಿರೆ ಶ್ರೀ ಧ.ಮಂ. ಕಾಲೇಜಿನ ವಿಶ್ರಾಂತ ಕುಲಸಚಿವ ಡಾ. ಬಿ.ಪಿ. ಸಂಪತ್ ಕುಮಾರ ಹಾಗೂ ಮಂಗಳೂರಿನ ನ್ಯಾಶನಲ್ ಟ್ಯುಟೋರಿಯರ್ ಕಾಲೇಜಿನ ಪ್ರಾಂಶುಪಾಲ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯು.ಹೆಚ್. ಖಾಲಿದ್ ಮುಖ್ಯ ಅತಿಥಿಗಳಾಗಿದ್ದರು. ಜಿ. ತುಕಾರಾಮ್ ನಿಡ್ಲೆ ಮಾತನಾಡಿ, “ನೆನಪು ಮಾಡಿಕೊಳ್ಳುವುದಕ್ಕಿಂತ, ನೆನಪಿನ ಜೊತೆ ಬದುಕುವವರು ನಾವು. ಎಸ್.ಡಿ.ಎಂ. ಕಾಲೇಜಿನ ನೆನಪು ನನಗೆ ಮತ್ತೆ ಮತ್ತೆ ಆಗುತ್ತಿರುತ್ತದೆ” ಎಂದರು. “ಆ ಕಾಲದಲ್ಲಿ ಇಲ್ಲಿನಷ್ಟು ಸುಸಜ್ಜಿತ ಗ್ರಂಥಾಲಯ ಬೇರೆ ಎಲ್ಲೂ ಇರಲಿಲ್ಲ. ಸಾಹಿತಿ ಕೆ.ಟಿ. ಗಟ್ಟಿ ಅವರ ಪ್ರೇರಣೆಯಿಂದ ನಾನು ಇಂಗ್ಲಿಷ್ ಪುಸ್ತಕ ಓದಲು ಆರಂಭಿಸಿದೆ. ನಾವು ‘ಲಹರಿ’ ಎಂಬ ಕೈ ಬರಹದ ಪತ್ರಿಕೆ ಪ್ರಾರಂಭಿಸಿದ್ದೆವು. ಕಾಲೇಜು ನನಗೆ ರಂಗಭೂಮಿ ಕ್ಷೇತ್ರದಲ್ಲಿ, ಸಾಹಿತ್ಯ ಕ್ಷೇತ್ರದಲ್ಲಿ ಹಾಗೂ ಸಾಮಾಜಿಕವಾಗಿ ಬೆಳೆಯಲು ಹೇರಳ ಅವಕಾಶ ಕೊಟ್ಟಿದೆ” ಎಂದರು. ಡಾ. ಬಿ.ಪಿ. ಸಂಪತ್ ಕುಮಾರ ಮಾತನಾಡಿ, “ಬೀಜವು ಭೂಮಿಗೆ ಬಿದ್ದು ಬೃಹತ್ ವೃಕ್ಷವಾಗುವ ರೀತಿಯಲ್ಲಿಯೇ ವಿದ್ಯೆ ಕೂಡ. ಅನ್ನದಾನಕ್ಕಿಂತ ಶ್ರೇಷ್ಠದಾನ, ವಿದ್ಯಾದಾನ. ಓದಬೇಕು, ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ ಹಂಬಲ ಮೂಡಿದ್ದೇ ಈ ಕಾಲೇಜಿಗೆ ಬಂದ ಬಳಿಕ. ಈ ಕಾಲೇಜು, ಸಿದ್ಧವನ ಗುರುಕುಲ ವಿದ್ಯೆಯನ್ನು ನೀಡಿ ನಮ್ಮ ಜೀವನ ರೂಪಿಸಿದೆ” ಎಂದರು. “ನಿಮ್ಮ ಜೀವನದ ಯಶಸ್ಸು ಯಾವುದೆಂದರೆ ಅದು ನಿಮಗೆ ಸಿಗುವ ಅವಕಾಶವನ್ನು ಬಳಸಿಕೊಳ್ಳುವುದು. ನೀವು ಉತ್ತಮ ಕೆಲಸ ಮಾಡಿ. ಇದರಿಂದ ನಿಮಗೂ ನಿಮ್ಮ ಮುಂದಿನವರಿಗೂ ಶ್ರೇಯಸ್ಸು ಸಿಗುತ್ತದೆ” ಎಂದು ಕಿವಿಮಾತು ಹೇಳಿದರು. ಯು.ಹೆಚ್. ಖಾಲಿದ್ ಮಾತನಾಡಿ, “ನನ್ನೆಲ್ಲಾ ಸಾಧನೆಗೆ ಕಾರಣ ಎಸ್.ಡಿ.ಎಂ. ಕಾಲೇಜು. ನನ್ನ ಬದುಕನ್ನು ಬೆಳಗಿಸಿ ನನ್ನ ಮುಂದಿನ ಬದುಕಿಗೆ ದಾರಿ ಮಾಡಿಕೊಟ್ಟಿದೆ” ಎಂದರು. “ಇಂದಿನ ಮಕ್ಕಳು ನಾಳೆಯ ಪ್ರಜೆಗಳು ಎಂಬ ಮಾತಿದೆ. ಹಾಗೆಯೇ ನಮ್ಮ ಶಕ್ತಿ, ಆಸಕ್ತಿ, ಕಾಳಜಿ, ಪ್ರಯತ್ನವನ್ನು ನಾವೇ ಮೆಚ್ಚಿಕೊಳ್ಳಬೇಕು. ವಿದ್ಯಾವಂತರಾಗಿ ನೀವು ಏನು ಬೇಕಾದರೂ ಮಾಡಿ. ಆದರೆ ಸುಳ್ಳುಗಾರರು, ಪುಂಡರು, ವಂಚಕರು, ಕುಡುಕರು, ಕಟುಕರು ಆಗಬೇಡಿ” ಎಂದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ ಮಾತನಾಡಿ, “ಏನೇ ಆಗುವ ಮೊದಲು ನೀವು ಉತ್ತಮ ಮನುಷ್ಯರಾಗಿ, ನಿಮ್ಮ ಜೀವನದಲ್ಲಿ ಶಿಸ್ತು, ಗುರಿ ಇರಲಿ” ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಈಗಿನ ಮಕ್ಕಳ ಓದಿಗೆ ಸಹಾಯವಾಗಲಿ ಎಂದು ಸಹಾಯಧನ ನೀಡುತ್ತಿದ್ದಾರೆ. ಮಧ್ಯಾಹ್ನದ ಬಿಸಿ ಊಟಕ್ಕೆ ನೆರವು ನೀಡುತ್ತಿದ್ದಾರೆ. ಅವರು ನೀಡಿದ ಹಣದ ಮೌಲ್ಯವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು. ಅತಿಥಿಗಳನ್ನು ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ಗುರುನಾಥ ಪ್ರಭು, ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಸಂಘದ ಕಾರ್ಯಕ್ರಮ ಸಂಯೋಜಕ ಡಾ. ಎಂ. ಪಿ. ಶ್ರೀನಾಥ್ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಅಭಿಲಾಷ್ ವಂದಿಸಿ, ಡಾ. ದಿವಾಕರ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.

‘’ಒನ್ ಟೀಮ್, ಒನ್ ಡ್ರೀಮ್’’- ಸಾಮೂಹಿಕ ಯಶಸ್ಸಿನ ಹಾದಿ

Article Image

‘’ಒನ್ ಟೀಮ್, ಒನ್ ಡ್ರೀಮ್’’- ಸಾಮೂಹಿಕ ಯಶಸ್ಸಿನ ಹಾದಿ

ಮೂಡುಬಿದಿರೆ: ಎಲ್ಲರೂ ಒಂದೇ ಮನಸ್ಸಿನಿಂದ ಒಂದು ನಿಗದಿತ ಗುರಿಯೆಡೆಗೆ ಹೆಜ್ಜೆ ಹಾಕಿದಾಗ ಯಶಸ್ಸು ನಮ್ಮದಾಗುತ್ತದೆ ಎಂದು ಮಾಜಿ ವಿಧಾನ ಪರಿಷತ ಸದಸ್ಯ ಗಣೇಶ್ ಕಾರ್ಣಿಕ್ ತಿಳಿಸಿದರು. ಅವರು ಸೋಮವಾರ, ಆಳ್ವಾಸ್‌ನ ಶಿವರಾಮ್ ಕಾರಂತ ವೇದಿಕೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ- ದಿ ಮ್ಯಾಟ್ರಿಕ್ಸ್ ಗ್ರೂಪ್ ಆಯೋಜಿಸಿದ್ದ- ‘’ಒನ್ ಟೀಮ್, ಒನ್ ಡ್ರೀಮ್’’- ಸಾಮೂಹಿಕ ಯಶಸ್ಸಿನ ಹಾದಿ ವಿಷಯದ ಕುರಿತು ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಸಾಮಾರ್ಥ್ಯ ಹಾಗೂ ದೌರ್ಬಲ್ಯಗಳನ್ನು ಅರಿತು, ತಮ್ಮಲ್ಲಿರುವ ನ್ಯೂನತೆಗಳನ್ನು ಮಣಿಸಲು ಆರಂಬಿಸಿದಾಗ ಸಾಧಿಸಲು ಹೊರಟ ಕೆಲಸದಲ್ಲಿ ಜಯ ಲಭಿಸಲು ಸಾಧ್ಯ. ಇದರ ಜೊತೆಗೆ ಪ್ರತಿಯೊಬ್ಬರು ತಂಡದಲ್ಲಿ ಕೆಲಸಮಾಡುವ ಅಗತ್ಯತೆಯನ್ನು ಅರಿಯಬೇಕು. ಇಲ್ಲಿ ವೈಯಕ್ತಿಕ ಹಿತಾಸಕ್ತಿಗಳಿಗೆ ಪ್ರಾಶಸ್ತö್ಯವಿರುವುದಿಲ್ಲ. ತಂಡದ ಶ್ರೇಯಸ್ಸೇ ಪ್ರತಿಯೊಬ್ಬರ ಗುರಿಯಾಗಿರುತ್ತದೆ. ಈ ಹಂತದಲ್ಲಿ ನಾವು ಪಡೆಯುತ್ತಿರುವ ಶಿಕ್ಷಣ ಈ ಪ್ರಕ್ರಿಯೆಗೆ ಎಷ್ಟು ಪರಿಣಾಮಕಾರಿಯಾಗಿ ಸ್ಪಂದಿಸುತ್ತಿದೆ ಎಂಬುದು ಮುಖ್ಯ. ಶಿಕ್ಷಣ ನಮ್ಮನ್ನು ಜವಾಬ್ದಾರಿಯುತ ಹಾಗೂ ಉತ್ತರದಾಯಿತ್ವದ ವಿದ್ಯಾರ್ಥಿಗಳನ್ನಾಗಿಬೇಕು. ಈ ಹಂತದಲ್ಲಿ ಹೆಚ್ಚಿನ ಜವಾಬ್ದಾರಿಗಳನ್ನು ವಹಿಸಿಕೊಂಡು ಬೆಳವಣಿಗೆ ಹೊಂದುವತ್ತಾ ಶ್ರಮಿಸಬೇಕು ಎಂದರು. ಮ್ಯಾಟ್ಟಿಕ್ಸ್ ಟೀಮ್‌ನ ಸಂಯೋಜಕ ಆದಿತ್ಯ ಟೀಮ್ ಬೆಳೆದುಬಂದ ಹಾದಿ ಹಾಗೂ ತೊಡಿಗಿಕೊಂಡಿರುವ ಚಟುವಟಿಕೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಆಳ್ವಾಸ್ ಕಾಲೇಜಿನ ಪ್ರಾಚರ‍್ಯ ಡಾ ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಕುಲಸಚಿವರು ಮೌಲ್ಯಮಾಪನ ಡಾ. ನಾರಾಯಣ ಶೆಟ್ಟಿ ಇದ್ದರು. ಸನ್ವಿತ್ ಕಾರ‍್ಯಕ್ರಮ ನಿರ್ವಹಿಸಿ, ಆದರ್ಶ ಸ್ವಾಗತಿಸಿ, ವೆಂಕಟೇಶ್ ಮಲ್ಯ ಹಾಗೂ ತಂಡ ಪ್ರಾರ್ಥಿಸಿ, ಕಾರ್ತಿಕ್ ಅತಿಥಿಯನ್ನು ಪರಿಚಯಿಸಿ, ಆದಿ ಎಸ್ ರೈ ವಂದಿಸಿದರು.

ರೋಟರಿಯಿಂದ ರಕ್ಷಾಬಂಧನ ಸಂಭ್ರಮಾಚರಣೆ

Article Image

ರೋಟರಿಯಿಂದ ರಕ್ಷಾಬಂಧನ ಸಂಭ್ರಮಾಚರಣೆ

ಉಜಿರೆ : ಸಂಕುಚಿತವಾಗುತ್ತಿರುವ ಮಾನವ ಸಂಬಂಧಗಳಿಗೆ ಹಬ್ಬ- ಆಚರಣೆಗಳ ಮಹತ್ವವನ್ನು ಅರಿತುಕೊಳ್ಳಬೇಕು. ರಕ್ಷಾಬಂಧನದಂತ ಆಚರಣೆಯಿಂದ ಸಮಾಜದಲ್ಲಿ ಒಬ್ಬರನೊಬ್ಬರು ಸದಾ ಗೌರವಿಸುವ ಮತ್ತು ಪ್ರೀತಿಸುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳೋಣ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ದಿವ್ಯ ಕುಮಾರಿ ಅಭಿಪ್ರಾಯಪಟ್ಟರು. ಇವರು ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ರೋಟರಿ ಸೇವಾ ಭವನ ಕಾಶಿಬೆಟ್ಟು, ರೊ.ಕೆ ರಮಾನಂದ ಸಾಲಿಯಾನ್ ಸಭಾಂಗಣದಲ್ಲಿ ನಡೆದ ರಕ್ಷಾ ಬಂಧನ ಸಂಭ್ರಮಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪುರಾಣ ಹಾಗೂ ಇತಿಹಾಸಗಳಲ್ಲೂ ರಕ್ಷಾ ಬಂಧನಕ್ಕೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಹಬ್ಬ ಹರಿದಿನಗಳು ತಾಂತ್ರಿಕಗೊಳ್ಳುತ್ತಿರುವ ವರ್ತಮಾನದಲ್ಲಿ ಹಬ್ಬಗಳ ವೈಜ್ಞಾನಿಕ ಮತ್ತು ಧಾರ್ಮಿಕ ಹಿನ್ನೆಲೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. ರೋಟರಿಯ ಸೇವಾ ಮನೋಭಾವದ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮಾ ಮಾತನಾಡಿ, ರಕ್ಷಾ ಬಂಧನ ರಕ್ಷೆ ಮತ್ತು ಪ್ರೀತಿಯ ಸಂಕೇತ. ಕೈ ಕಟ್ಟುವ ಒಂದಗಲದ ದಾರಕ್ಕೆ ತನ್ನದೇ ಆದ ಶಕ್ತಿ ಇದೆ ಎಂದರು. ದೀಪ ಬೆಳಗುವ ಮೂಲಕ ಗೌರವಿಸಿ ರಕ್ಷಾಬಂಧನವನ್ನು ಕಟ್ಟಿ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಎಂ.ಎಲ್.ಸಿ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ರೊಟೆರಿಯನ್ ಸೋನಿಯಾ ವರ್ಮಾ ಸೇರಿದಂತೆ ಇತರೆ ಸದಸ್ಯರು ಉಪಸ್ಥಿತರಿದ್ದರು.

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ‘ಎಸ್ ಡಿ ಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024’

Article Image

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ‘ಎಸ್ ಡಿ ಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024’

ಉಜಿರೆ, ಆ.24: ಋಣಭಾರ ಕಡಿಮೆಯಾಗದ ಹೊರತು ಜೀವನ ಸಾರ್ಥಕ್ಯ ಕಾಣಲಾರದು. ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಬಹುದು ಎಂದು ಉಜಿರೆ ಎಸ್ ಡಿ ಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಬೆಂಗಳೂರು ಘಟಕದ ಅಧ್ಯಕ್ಷ ಎನ್. ಸತ್ಯನಾರಾಯಣ ಹೊಳ್ಳ ಹೇಳಿದರು. ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಆ. 24ರಂದು ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಪುನರ್ಮಿಲನ (ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024) ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ವ್ಯಕ್ತಿಗೆ ವಿದ್ಯಾಋಣ, ಅನ್ನಋಣ ಇತ್ಯಾದಿ ಋಣಗಳಿರುತ್ತವೆ. ಅದು ದೊಡ್ಡ ಭಾರವಾಗಿದ್ದು, ಸಮಾಜಕ್ಕೆ ಮರಳಿ ಕೊಡುಗೆ ನೀಡುವ ಮೂಲಕ ಋಣದ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದು. ನೈತಿಕ ಬೆಂಬಲ ನೀಡುವುದು, ಧನಸಹಾಯ ನೀಡುವುದು, ಸಂಘ ಸಂಸ್ಥೆಗಳ ಮೂಲಕ ನೆರವು ನೀಡುವುದು ಇತ್ಯಾದಿ ಕ್ರಮಗಳ ಮೂಲಕ ಋಣಭಾರ ಇಳಿಸಿಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು. “ಹಿರಿಯ ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉದ್ಯೋಗ ಪಡೆಯುವಲ್ಲಿ ನೆರವು ನೀಡುತ್ತಿದ್ದು, ಆ ಮೂಲಕ ವಿದ್ಯಾಸಂಸ್ಥೆಯ ಋಣಭಾರ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ” ಎಂದರು. ಧನಾತ್ಮಕ ಚಿಂತನೆಯೊಂದಿಗೆ, ಇಚ್ಚಾಶಕ್ತಿ ಹೊಂದಿ ಜೀವನದಲ್ಲಿ ಅಭಿವೃದ್ಧಿ ಕಾಣಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮುಖ್ಯ ಅತಿಥಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, “ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಧರ್ಮಸ್ಥಳದ ಅಂದಿನ ಧರ್ಮಾಧಿಕಾರಿ ರತ್ನವರ್ಮ ಹೆಗ್ಗಡೆ ಅವರಿಂದ ಪ್ರಾರಂಭವಾದ ಉಜಿರೆ ಎಸ್.ಡಿ.ಎಂ. ಕಾಲೇಜು 58 ವರ್ಷಗಳಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಜೀವನೋಪಾಯಕ್ಕೆ ಮಾತ್ರವಲ್ಲದೆ, ಉತ್ತಮ ಬದುಕಿಗೆ ಹೇತುವಾಗಿದೆ. ವೀರೇಂದ್ರ ಹೆಗ್ಗಡೆ ಅವರ ಪೋಷಣೆಯಲ್ಲಿ ಸಂಸ್ಥೆ ಇನ್ನಷ್ಟು ಬೆಳೆದಿದೆ. ಸಂಸ್ಥೆಯಿಂದ ಔದ್ಯೋಗಿಕ, ವೈಯಕ್ತಿಕ ಕೊಡುಗೆ ಪಡೆದಿರುವ ನಾವು ಪ್ರಸ್ತುತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ರೀತಿಯಲ್ಲಿ ಕೊಡುಗೆ ನೀಡುವುದು ನಮ್ಮ ಜವಾಬ್ದಾರಿ. ಹಿರಿಯ ವಿದ್ಯಾರ್ಥಿಗಳಿಂದ ಸಂಸ್ಥೆಗೆ ಶ್ರೇಷ್ಠತೆ ಬರುತ್ತದೆ. ಅವರಿಂದ ಸಂಸ್ಥೆಗೆ ಬ್ರ್ಯಾಂಡ್ ವ್ಯಾಲ್ಯೂ ಲಭಿಸಿದೆ. ಸಂಸ್ಥೆಯ ಷಷ್ಟ್ಯಬ್ದಿ ಕೂಡ ಉತ್ತಮ ರೀತಿಯಲ್ಲಿ ಆಚರಿಸುವಂತಾಗಲಿ” ಎಂದರು. ಇನ್ನೋರ್ವ ಅತಿಥಿ, ಎಸ್.ಡಿ.ಎಂ. ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ, "ಎಸ್.ಡಿ.ಎಂ. ವಿದ್ಯಾ ಸಂಸ್ಥೆ ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟ ಗ್ರಾಮೀಣ ಭಾಗದ ವಿದ್ಯಾಸಂಸ್ಥೆ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ನಮ್ಮ ಕಾಲೇಜು ಶ್ರೇಷ್ಠ ಸಾಧನೆಗಳನ್ನು ಮಾಡಿದೆ. ಇಂದಿನ ಕಾರ್ಯಕ್ರಮ ಮತ್ತೊಮ್ಮೆ ಹಿರಿಯ ವಿದ್ಯಾರ್ಥಿಗಳ ಮಿಲನಕ್ಕೆ ಕಾರಣವಾಗಿದೆ. ಹಿರಿಯ ವಿದ್ಯಾರ್ಥಿಗಳು ಅತ್ಯಂತ ಸಂವೇದನಾಶೀಲರಾಗಿ ಇಂದಿನ ವಿದ್ಯಾರ್ಥಿಗಳಿಗೆ ಅನೇಕ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ. ಮುಂದೆಯೂ ಕೂಡ ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನ ಹೀಗೇ ಇರಲಿ" ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ ಮಾತನಾಡಿ, "ಇಂದು ವಿವಿಧ ಹುದ್ದೆಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಎಸ್.ಡಿ.ಎಂ. ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ರತ್ನವರ್ಮ ಹೆಗ್ಗಡೆ ಅವರ ಕನಸು ಸಾಕಾರಗೊಂಡಿದೆ. ಕಾಲೇಜಿನ ಬೆಳವಣಿಗಾಗಿ ಹಿರಿಯ ವಿದ್ಯಾರ್ಥಿ ಸಂಘ ಸದಾ ನಿಲ್ಲುತ್ತದೆ. ಪ್ರತಿ ತಿಂಗಳ ನೆನಪಿನಂಗಳ ಕಾರ್ಯಕ್ರಮದ ಆಯೋಜನೆ ಹಾಗೂ ವಿವಿಧ ಚಟುವಟಿಕೆಗಳ ಆಯೋಜನೆ ಮಾಡುವುದರ ಮೂಲಕ ನಮ್ಮ ಮಾತೃ ಸಂಸ್ಥೆ ಎಸ್.ಡಿ.ಎಂ. ಕಾಲೇಜಿನ ಋಣವನ್ನು ಭರಿಸಲು ಸಾಧ್ಯವಾಗಿದೆ. ಸಂಘಟನೆಗೆ ಅಂದಿನ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ಭದ್ರ ತಳಪಾಯ ಹಾಕಿದ್ದಾರೆ. ಮಾರ್ಗದರ್ಶನ ನೀಡಿದ್ದಾರೆ" ಎಂದರು. ಕಾಲೇಜಿನ ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಸಂಘದ ವತಿಯಿಂದ 5 ಲಕ್ಷ ರೂ. ಚೆಕ್ ಹಸ್ತಾಂತರಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕಾಲೇಜಿನ ವಿದ್ಯಾರ್ಥಿಗಳಾದ ಸುಶಾಂತ್ ಶೆಟ್ಟಿ ಮತ್ತು ಸಿರಿ ಶರ್ಮ ಅವರನ್ನು ಸನ್ಮಾನಿಸಲಾಯಿತು. ಪ್ರಾಸ್ತಾವಿಕ ನುಡಿಗಳನ್ನಾಡಿದ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಬಿ.ಕೆ. ಧನಂಜಯ ರಾವ್, "ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ. ವಿದ್ಯಾಸಂಸ್ಥೆ ವರದಾನವಾಗಿದೆ. ಇಂತಹ ವಿದ್ಯಾಸಂಸ್ಥೆಯ ಜೊತೆ ಒಡನಾಟವನ್ನು ಹಾಗೆಯೇ ಉಳಿಸಿಕೊಳ್ಳಬೇಕು, ಆಗಾಗ ಕಾಲೇಜಿಗೆ ಭೇಟಿ ನೀಡಿ ನಮ್ಮ ಸಂಬಂಧವನ್ನು ನೆನಪಿಸಿಕೊಳ್ಳಬೇಕು ಎನ್ನುವುದೇ ಸಂಘದ ಉದ್ದೇಶ” ಎಂದರು. ಎಸ್ ಡಿ ಎಂ ಹಿರಿಯ ವಿದ್ಯಾರ್ಥಿಗಳ ಸಂಘವು ಪ್ರಸ್ತುತ ಅತ್ಯಂತ ರಚನಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿದೆ. ಕಾಲೇಜಿನಲ್ಲಿ ಪ್ರತಿ ತಿಂಗಳು ನಿರಂತರ ಎಸ್.ಡಿ.ಎಂ. ನೆನಪಿನಂಗಳ (ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈವರೆಗೆ 14 ಕಾರ್ಯಕ್ರಮ ನಡೆದಿದ್ದು ಒಟ್ಟು 14 ಹಿರಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇವರು ತಲಾ 5 ಸಾವಿರದಂತೆ ಒಟ್ಟು 75 ಸಾವಿರ ರೂ. ವಿದ್ಯಾರ್ಥಿ ವೇತನವನ್ನು ಅರ್ಹ 15 ಮಂದಿ ವಿದ್ಯಾರ್ಥಿಗಳಿಗೆ ವಿತರಿಸಿ ಉದಾರತೆ ತೋರಿದ್ದಾರೆ ಎಂದರು. ಸಂಘದ ಉಪಾಧ್ಯಕ್ಷ ಗುರುನಾಥ ಪ್ರಭು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಹಾಗೂ ಸ್ಥಳೀಯ ಎಸ್.ಡಿ.ಎಂ. ಸಂಸ್ಥೆಗಳ ಸಿಬ್ಬಂದಿ ಉಪಸ್ಥಿತರಿದ್ದರು. ವೈದೇಹಿ ಮತ್ತು ಬಳಗದವರು ಪ್ರಾರ್ಥಿಸಿದರು. ಸಂಘದ ಕಾರ್ಯಕ್ರಮ ಸಂಯೋಜಕ ಡಾ. ಎಂ.ಪಿ. ಶ್ರೀನಾಥ್ ವಂದಿಸಿದರು. ಡಾ. ದಿವಾಕರ ಕೆ. ಮತ್ತು ದಿವ್ಯಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಉಡುಪಿಯ ಕಲಾಮಯಂ ತಂಡದವರಿಂದ ವಿಶೇಷ ರಸಮಂಜರಿ ಕಾರ್ಯಕ್ರಮ ನಡೆಯಿತು.

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 30 ದಿನಗಳಲ್ಲಿ ನಡೆದ “ಫೋಟೊಗ್ರಫಿ ಮತ್ತು ವೀಡಿಯೊಗ್ರಫಿ” ತರಬೇತಿಯ ಸಮಾರೋಪ ಸಮಾರಂಭ

Article Image

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 30 ದಿನಗಳಲ್ಲಿ ನಡೆದ “ಫೋಟೊಗ್ರಫಿ ಮತ್ತು ವೀಡಿಯೊಗ್ರಫಿ” ತರಬೇತಿಯ ಸಮಾರೋಪ ಸಮಾರಂಭ

ಉಜಿರೆ: ಛಾಯಾಗ್ರಹಣ (ಫೋಟೊಗ್ರಫಿ) ವಿಶಿಷ್ಟ ಕಲೆಯಾಗಿದ್ದು, ಸಮಯ, ಸಂದರ್ಭ ಮತ್ತು ಭಾವನೆಗಳನ್ನು ಗಮನಿಸಿ ಫೋಟೊ ತೆಗೆಯುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ಬೆಳಕು, ಮುಖದ ಭಾವನೆಗಳು, ಹಾಗೂ ಮಾನಸಿಕ ಸ್ಥಿತಿಯನ್ನು ಗಮನಿಸಿ ಫೋಟೊ ತೆಗೆದರೆ ಮಾತ್ರ ಅದು ಆಕರ್ಷಕವಾಗಿ ಮೂಡಿ ಬರಲು ಸಾಧ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಉಜಿರೆಯಲ್ಲಿ ರುಡ್‌ಸೆಟ್ ಸಂಸ್ಥೆಯಲ್ಲಿ 30 ದಿನಗಳಲ್ಲಿ ನಡೆದ “ಫೋಟೊಗ್ರಫಿ ಮತ್ತು ವೀಡಿಯೊಗ್ರಫಿ” ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು. ಇಂದು ವಿವಿಧ ರೀತಿಯ ಪ್ರಿಂಟಿಂಗ್ ಪೇಪರ್‌ಗಳು ಬಂದಿವೆ. ಅದರ ಬಗ್ಯೆಯೂ ಮಾಹಿತಿ ಕಲೆ ಹಾಕಿ, ಆಲ್ಬಂ ಮಾಡುವಾಗಲೂ ಹತ್ತು ಸಾರಿ ಮತ್ತೆ ಮತ್ತೆ ನೋಡುವಂತೆ ಅದನ್ನು ತಯಾರಿಸಬೇಕು. ಜೀವನದಲ್ಲಿ ಉತ್ತಮ ಶಿಸ್ತನ್ನು ಕೂಡಾ ಅಳವಡಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು. ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತುಸಂಗ್ರಹಾಲಯದಲ್ಲಿ 700 ಕ್ಯಾಮರಾಗಳು ಇವೆ. ಕ್ಯಾಮರಾಗಳ ಮೌಲ್ಯವರ್ಧನೆ ಹಾಗೂ ಮಾದರಿಗಳನ್ನು ಗಮನಿಸಿ ಬುದ್ಧಿವಂತಿಕೆಯಿಂದ ಪ್ರಗತಿ ಸಾಧಿಸಬೇಕು ಎಂದು ಹೆಗ್ಗಡೆಯವರು ತಿಳಿಸಿದರು. “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್ ರುಡ್‌ಸೆಟ್ ಬೆಳೆದು ಬಂದ ವಿಧಾನದ ಅವಲೋಕನ ಮಾಡಿದರು. ಜಯರಾಮ ಮತ್ತು ಸಿದ್ದಾರ್ಥ ತರಬೇತಿಯ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಮತ್ತು ಅತಿಥಿ ಉಪನ್ಯಾಸಕ ಸೂರ್ಯಪ್ರಕಾಶ್ ಉಪಸ್ಥಿತರಿದ್ದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಕರುಣಾಕರ ಜೈನ್ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರು.

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Article Image

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

ಉಜಿರೆ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳ ಕಾಲ ಅನುಪಮವಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾದ ನೌಕರರು ಸರ್ಕಾರಕ್ಕೂ, ಸಮಾಜಕ್ಕೂ ಉತ್ತಮ ಸೇವೆ ನೀಡಿದ್ದು ಸ್ವಾಭಿಮಾನದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ತಮ್ಮ ಅನುಭವದ ಪರಿಪಕ್ವತೆಯೊಂದಿಗೆ ನಿವೃತ್ತರು ಸಮಾಜಸೇವೆಯಲ್ಲಿ ಪ್ರವೃತ್ತರಾಗಬೇಕು ಎಂದು ಉಜಿರೆಯ ಎಸ್. ಡಿ. ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಹೇಳಿದರು. ಅವರು ಮಂಗಳವಾರ ಉಜಿರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆಯೋಜಿಸಿದ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ಉದ್ಘಾಟಿಸಿ, ಮನವಿಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ಪ್ರತಿಯೊಬ್ಬರ ಜೀವನದಲ್ಲಿಯೂ ನಿವೃತ್ತಿ ಒಂದು ಅನಿವಾರ್ಯ ಹಂತವಾಗಿದ್ದು ನಿವೃತ್ತರು ತಾಳ್ಮೆ , ಪ್ರೀತಿ-ವಿಶ್ವಾಸ ಹಾಗೂ ಮಾನಸಿಕ ಪರಿಪಕ್ವತೆಯೊಂದಿಗೆ ಆರೋಗ್ಯಪೂರ್ಣ ಜೀವನ ನಡೆಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ನಿವೃತ್ತ ಪ್ರಾಂಶುಪಾಲರುಗಳಾದ ಪ್ರೊ ಟಿ. ಕೃಷ್ಣಮೂರ್ತಿ ಮತ್ತು ಪ್ರೊ. ಎ. ಜಯಕುಮಾರ್ ಶೆಟ್ಟಿ ಹಾಗೂ ವೇಣೂರಿನ ಶೀಲಾ ಎಸ್. ಹೆಗ್ಡೆ ಶುಭಾಶಂಸನೆ ಮಾಡಿದರು. ಅಧ್ಯಕ್ಷತೆ ವಹಿಸಿದ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲಶೆಟ್ಟಿ ಮಾತನಾಡಿ, ನಿವೃತ್ತರು ವೃದ್ಧರಲ್ಲ, ಪ್ರಬುದ್ದರು. ಕಿರಿಯರಿಗೆ ಸಕಾಲಿಕ ಮಾಹಿತಿ, ಮಾರ್ಗದರ್ಶನ ನೀಡಬೇಕು. ಪ್ರತಿಯೊಬ್ಬ ಸದಸ್ಯರೂ ಸಂಘಟನೆ ಬಗ್ಗೆ ಅಭಿಮಾನ ಮತ್ತು ಆಸಕ್ತಿಯಿಂದ ಸೇವೆ ಮಾಡಬೇಕು ಎಂದು ಹೇಳಿದರು. ಎಲ್ಲಾ ವಿಭಾಗಸಂಘಟಕರು ಮತ್ತು ಹೊಸ ಸದಸ್ಯರನ್ನು ಗೌರವಿಸಲಾಯಿತು. ಸನ್ಮತ್ ಕುಮಾರ್ ನಾರಾವಿ ಪ್ರಾಸ್ತ್ತಾವಿಕವಾಗಿ ಮಾತನಾಡಿದರು. ಬಿ ಸೋಮಶೇಖರ್ ಶೆಟ್ಟಿ ಸ್ವಾಗತಿಸಿದರು. ವಿಶ್ವಾಸ ರಾವ್ ಧನ್ಯವಾದವಿತ್ತರು. ವಸಂತ ರಾವ್ ನಾರಾವಿ ಕಾರ್ಯಕ್ರಮ ನಿರ್ವಹಿಸಿದರು.

ಸೂಚನೆ: ಬೆಳೆ ವಿಮೆ ಯೋಜನೆ ಜಾರಿ

Article Image

ಸೂಚನೆ: ಬೆಳೆ ವಿಮೆ ಯೋಜನೆ ಜಾರಿ

ಮಂಗಳೂರು: ಹವಾಮಾನ ವೈಪರೀತ್ಯದಿಂದ ತೋಟಗಾರಿಕೆ ಬೆಳೆ ನಷ್ಟವಾಗಿದ್ದರೆ ಪರಿಹಾರ ತುಂಬಿ ಕೊಡಲು 2024-25ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರಕಾರ ಜಾರಿಗೊಳಿಸಿದ್ದು, ಇದರಲ್ಲಿ ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರಿಗೆ ಮಾತ್ರ ಅನ್ವಯಿಸುವಂತೆ ನೋಂದಣಿಗೊಳಿಸಲು ಆಗಸ್ಟ್ 25ರವರೆಗೆ ಅವಧಿ ವಿಸ್ತರಿಸಲಾಗಿದೆ. ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಪ್ರತಿನಿಧಿ ಅಥವಾ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಮಂಜುನಾಥ ಡಿ. ಅವರ ಮೊಬೈಲ್ ಸಂಖ್ಯೆ 9448999226 ಹಾಗೂ ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿ ಶುಭಂ ಅವರ ಸಂಪರ್ಕ ಸಂಖ್ಯೆ 9131962255 ಆಗಿದೆ ಎಂದು ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Article Image

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.5 ಕೊನೆಯ ದಿನವಾಗಿದೆ. ಈ ವರ್ಷದ ಡಿ. 8ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕೆಎಸ್‌ಕ್ಯುಎಎಸಿ ವತಿಯಿಂದ ವಿದ್ಯಾರ್ಥಿ ನಿಧಿಗೆ ಅರ್ಹತಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯನ್ನು ಸರಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ಬಡ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಪರೀಕ್ಷೆಯ ಆನ್‌ಲೈನ್ ಅರ್ಜಿ ಕೆಎಸ್‌ಇಎಬಿಯ ವೆಬ್‌ಸೈಟ್ https://kseeb.karnataka. gov.inನಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ 080-23341615 ಸಂಪರ್ಕಿಸಬಹುದು.

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿಗೆ ಪ್ರಶಸ್ತಿ

Article Image

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿಗೆ ಪ್ರಶಸ್ತಿ

ಉತ್ಕರ್ಷ ಪ್ರತಿಷ್ಠಾನ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಯೋಗದೊಂದಿಗೆ 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆದ ವಿಷಯದಡಿ ನಡೆದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಅದಿತಿ.ಕೆ ಪ್ರಥಮ ಹಾಗೂ ತನಿಷಾ ಹೆಚ್ ಹೆಗ್ಡೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಅಂಚೆ ಚೀಟಿ ಸಂಗ್ರಹ: ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

Article Image

ಅಂಚೆ ಚೀಟಿ ಸಂಗ್ರಹ: ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

ಅಂಚೆ ಇಲಾಖೆ ವತಿಯಿಂದ ವಿದ್ಯಾರ್ಥಿಗಳಲ್ಲಿ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್ ಶಿಪ್‌ಗಾಗಿ 6ರಿಂದ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023- 24ನೇ ಸಾಲಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಅಧಿಕ ಅಂಕ ಗಳಿಸಿ, ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರುವ ವಿದ್ಯಾರ್ಥಿಗಳು ಸೆ. 3ರ ಮೊದಲು ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ವೆಬ್‌ಸೈಟ್ ವಿಳಾಸ: www.karnatakapost.gov.in ಅಥವಾ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು.

ಆಳ್ವಾಸ್ ಪದವಿ ಪೂರ್ವ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Article Image

ಆಳ್ವಾಸ್ ಪದವಿ ಪೂರ್ವ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ವಿದ್ಯಾಗಿರಿ: ವಿದ್ಯಾರ್ಥಿಗಳು ಶಿಸ್ತು ಹಾಗೂ ಸಮಯ ಪ್ರಜ್ಞೆಯನ್ನು ಮೈಗೂಡಿಸಿ ಕೊಂಡಾಗ ಯಶಸ್ಸು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಮತ್ತು ಮಹಿಳಾ ಕಲ್ಯಾಣ ಸಂಘದ ಉದ್ಘಾಟನೆ ಹಾಗೂ ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ಪಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಋಣಾತ್ಮಕ ಚಿಂತೆಯನ್ನು ಬಿಡಬೇಕು. ಭಾವನಾತ್ಮಕ ವಿಷಯಗಳಿಗೆ ಮಹತ್ವ ನೀಡಬಾರದು. ದೈನಂದಿನ ಬದುಕಿನಲ್ಲಿ ಶೈಕ್ಷಣಿಕವಾಗಿ ಪರಿಶ್ರಮ ಹಾಕಬೇಕು. ವಾಣಿಜ್ಯ ಶಿಕ್ಷಣಕ್ಕೆ ಜಾಗತಿಕ ಮಟ್ಟದಲ್ಲಿ ಮಹತ್ವ ದೊರೆತಿದ್ದು, ಈ ನಿಟ್ಟಿನಲ್ಲಿ ಕಠಿಣ ಪರಿಶ್ರಮ ಹಾಕಿದರೆ ವಿದ್ಯಾರ್ಥಿಗಳ ಬದುಕು ಹಸನಾಗುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ. ಹಾಗೂ ಕಲಾವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕಿ ರಶ್ಮೀನ್ ಸ್ವಾಗತಿಸಿದರು. ಉಪನ್ಯಾಸಕ ಪ್ರಭಾತ್ ಎಸ್. ಆರ್. ವಂದಿಸಿದರು. ಉಪನ್ಯಾಸಕ ರಾಜೇಶ್ ಡಿ'ಸೋಜ ಕಾರ್ಯಕ್ರಮ ನಿರೂಪಿಸಿದರು. ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ 42 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ನವಜೀವನೋತ್ಸವ

Article Image

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ನವಜೀವನೋತ್ಸವ

ಉಜಿರೆ: ಅನ್ನದಾಸೋಹ, ಅರಿವುದಾಸೋಹ ಮತ್ತು ಅಕ್ಷರದಾಸೋಹ ಎಂಬ ತ್ರಿವಿಧ ದಾಸೋಹದೊಂದಿಗೆ ಮನಪರಿವರ್ತನೆ ಮೂಲಕ ಕ್ರಾಂತಿಕಾರಿ ಸಮಾಜಸುಧಾರಣೆಯೊಂದಿಗೆ ಲೋಕಕಲ್ಯಾಣ ಕಾರ್ಯಗಳನ್ನು ನಿರಂತರ ಮಾಡುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗಡೆಯವರು ಸಾಧುಸಂತರಿಗಿಂತಲೂ ಮಿಗಿಲಾಗಿ ಎಲ್ಲರಿಂದಲೂ ದೇವಮಾನವರಾಗಿ ಗೌರವಿಸಲ್ಪಡುತ್ತಾರೆ. ಅವರ ದರ್ಶನದಿಂದ ದೇವರ ದರ್ಶನ ಮಾಡಿದಷ್ಟೇ ಸಂತೋಷ, ಮಾನಸಿಕ ಶಾಂತಿ ಮತ್ತು ನೆಮ್ಮದಿ ಸಿಗುತ್ತದೆ ಎಂದು ತುಮಕೂರಿನ ಕಾರದೇಶ್ವರ ಮಠದ ಕಾರದ ವೀರಬಸವ ಸ್ವಾಮೀಜಿ ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಮದ್ಯವ್ಯಸನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರ ಶತದಿನೋತ್ಸವದ ಸಂಭ್ರಮದ ನವಜೀವನೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಮದ್ಯಪಾನದಂತಹ ವ್ಯಸನಗಳಿಗೆ ಬಿದ್ದವರನ್ನು ಮತ್ತು ಬೀಳುತ್ತಿರುವವರನ್ನು ಎತ್ತಿ ಹಿಡಿಯುವುದೇ ನಿಜವಾದ ಧರ್ಮವಾಗಿದೆ. “ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು” ಎನ್ನುವಂತೆ ಮನೆಯಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಕಾರ್ಯವಾಗಬೇಕು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಮಾತಾ-ಪಿತರಂತೆ ಬಹಳ ಪ್ರೀತಿ-ವಿಶ್ವಾಸದಿಂದ ಸಮಾಜದ ಸರ್ವರ ಕಲ್ಯಾಣಕ್ಕಾಗಿ ಮಾಡುತ್ತಿರುವ ಸೇವಾಕಾರ್ಯಗಳು ವಿಶ್ವಮಾನ್ಯವಾಗಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಹಿಳಾಸಬಲೀಕರಣ, ಕೆರೆಗಳ ಪುನಶ್ಚೇತನ, ಶುದ್ಧ ಕುಡಿಯುವ ನೀರಿನಘಟಕ, ಮನಪರಿವರ್ತನೆ ಮೂಲಕ ಮದ್ಯವರ್ಜನ ಶಿಬಿರಗಳು, ಸ್ವ-ಉದ್ಯೋಗ ತರಬೇತಿ ಇತ್ಯಾದಿ ಸೇವಾ ಕಾರ್ಯಕ್ರಮ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರವಾಗಿವೆ ಎಂದರು. ತುಮಕೂರಿನಲ್ಲಿ ತಮ್ಮ ಮಠದ ಭಕ್ತರಾದ ಚಂದ್ರಶೇಖರ ಎಂಬವರು ಮದ್ಯವ್ಯಸನಿಯಾಗಿದ್ದು ಮದ್ಯವರ್ಜನ ಶಿಬಿರಕ್ಕೆ ಸೇರಿ ವ್ಯಸನಮುಕ್ತರಾಗಿ ಈಗ ಎಂಜಿನಿಯರ್‌ರಾಗಿ ಸ್ವಂತ ಉದ್ಯಮದೊಂದಿಗೆ ಸ್ವಾವಲಂಬಿ ಜೀವನ ನಡೆಸುತ್ತಿರುವುದನ್ನು ಸ್ವಾಮೀಜಿ ಉಲ್ಲೇಖಿಸಿ ಕಾರ್ಯಕರ್ತರ ಸೇವೆಯನ್ನು ಶ್ಲಾಘಿಸಿದರು. ಸಮಾರಂಭವನ್ನು ಉದ್ಘಾಟಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರು ಮನ, ವಚನ, ಕಾಯದಿಂದ ದೃಢ ಸಂಕಲ್ಪ ಮಾಡಿ ಮುಂದೆ ಸಾರ್ಥಕ ಜೀವನ ನಡೆಸಬೇಕು. ಅಂತರಂಗದಲ್ಲಿಯೂ ಬಹಿರಂಗದಲ್ಲಿಯೂ ಪರಿಶುದ್ಧರಾಗಿ ದೇವರ ದರ್ಶನ ಮಾಡಿ ಅನುಗ್ರಹ ಪಡೆದು ಮುಂದೆ ಸುಖ-ಶಾಂತಿ, ನೆಮ್ಮದಿಯ ಕೌಟುಂಬಿಕ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ವ್ಯಸನಮುಕ್ತರ ಭಾಗ್ಯದ ಬಾಗಿಲು ತೆರೆದಿದೆ ಎಂದು ಅವರಿಗೆ ಉಜ್ವಲ ಭವಿಷ್ಯವನ್ನು ಹೆಗ್ಗಡೆಯವರು ಹಾರೈಸಿದರು. ಮಾಜಿ ವಿಧಾನಪರಿಷತ್ ಸದಸ್ಯ ಕೆ ಹರೀಶ್ ಕುಮಾರ್ ಶುಭಾಶಂಸನೆ ಮಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಕನಸು ಕಂಡ ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯ ಹಾಗೂ ವ್ಯಸನಮುಕ್ತ ಭಾರತವನ್ನು ಹೆಗ್ಗಡೆಯವರು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಶೇ. ನೂರರಷ್ಟು ನನಸಾಗುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ಶ ತದಿನೋತ್ಸವವನ್ನು ಆಚರಿಸಿದ ವ್ಯಸನಮುಕ್ತರು ಜೀವನಪರ್ಯಂತ ಆತ್ಮಸಾಕ್ಷಿಗೆ ಅನುಗುಣವಾಗಿ ಉತ್ತಮ ಜೀವನ ನಡೆಸಬೇಕು. ತಮಗೆ ಯಾವುದೇ ಸಮಸ್ಯೆ ಬಂದರೂ ಯೋಜನಾಧಿಕಾರಿ ಅಥವಾ ಶಿಬಿರಾಧಿಕಾರಿಗಳನ್ನು ಸಂಪರ್ಕಿಸಿದಲ್ಲಿ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಯ ಡಾ. ಅಭಿಷೇಕ್ ಚತುರ್ವೇದಿ ಮತ್ತು ದೇರಳೆಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಡಾ. ಮೇಖಲಾ ದಿವಾಕರ್ ಅವರು ಮದ್ಯವರ್ಜನ ಶಿಬಿರಗಳ ಬಗ್ಗೆ ರಚಿಸಿದ ಸಂಶೋಧನಾ ಪ್ರಬಂಧಗಳನ್ನು ಡಿ. ವೀರೇಂದ್ರ ಹೆಗಡೆಯವರಿಗೆ ಅರ್ಪಿಸಿದರು. ಮಂಗಳೂರಿನ ಡಾ. ಶ್ರೀನಿವಾಸ ಭಟ್, ಎಸ್. ಡಿ. ಸಂಪತ್ ಸಾಮ್ರಾಜ್ಯ, ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ಅಧಿಕಾರಿ ದುಗ್ಗೇಗೌಡ, ಜಿಲ್ಲಾಧ್ಯಕ್ಷ ಪದ್ಮನಾಭ ಭಟ್, ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯಾನ್, ಕಾಸಿಂ ಮಲ್ಲಿಗೆಮನೆ ಮೊದಲಾದವರು ಉಪಸ್ಥಿತರಿದ್ದರು. ಪ್ರಾಸ್ತಾವಿಕ ಮಾತುಗಳೊಂದಿಗೆ ವಿವೇಕ್ ವಿ. ಪಾÊಸ್, ಸ್ವಾಗತಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ ಧನ್ಯವಾದವಿತ್ತರು. ಯೋಜನಾಧಿಕಾರಿಗಳಾದ ನಾಗೇಶ್ ಮತ್ತು ಭಾಸ್ಕರ್, ಎನ್. ಕಾರ್ಯಕ್ರಮ ನಿರ್ವಹಿಸಿದರು.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ತುಳುವೆರೆ ಆಟಿ ಕಾರ್ಯಕ್ರಮ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ತುಳುವೆರೆ ಆಟಿ ಕಾರ್ಯಕ್ರಮ

ಉಜಿರೆ: ಆಟಿ ಕಳೆಂಜ ಶಿವನ ಪ್ರತಿರೂಪ ಎಂಬ ನಂಬಿಕೆ ತುಳುನಾಡಿನಲ್ಲಿದೆ. ಆಟಿಕಳೆಂಜನ ವಿಶೇಷ ವೇಶಭೂಷಣ ತುಂಬಾ ಸರಳ ಮತ್ತು ಅರ್ಥಪೂರ್ಣವಾಗಿದ್ದು ಆಟಿ ಕಳೆಂಜ ಮನೆಮನೆಗೆ ಬಂದರೆ ದುಷ್ಟಶಕ್ತಿಗಳು ಹಾಗೂ ರೋಗರುಜಿನನಗಳು ದೂರವಾಗುತ್ತವೆ ಎಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಕನ್ನಡ ಮುಖ್ಯಸ್ಥ ಪ್ರೊ. ಯೋಗೀಶ್ ಕೈರೋಡಿ ಹೇಳಿದರು. ಅವರು ಶನಿವಾರ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಇತಿಹಾಸ ವಿಭಾಗ ಮತ್ತು ತುಳು ಸಂಘದ ಆಶ್ರಯದಲ್ಲಿ ಆಯೋಜಿಸಿದ ತುಳುವೆರೆ ಆಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಪೂರ್ವಜರಿಗೆ ಓದಲು, ಬರೆಯಲು ಬಾರದಿರುವುದರಿಂದ ಅವರನ್ನು ಅಜ್ಞಾನಿಗಳು ಎಂದು ಭಾವಿಸಬಾರದು. ಅನಿವಾರ್ಯತೆಯಿಂದ ಅವರು ಆಹಾರ ಪದಾರ್ಥಗಳನ್ನು ಅವರು ಸಂಶೋಧಿಸಿದರು. ಆದರೆ ಈಗ ಜನರು ಅಕ್ಷರಸ್ಥರಾದರು ತೀವ್ರ ಪೈಪೋಟಿ, ಧನದಾಹ, ಸುಖ-ಭೋಗಗಳ ಲಾಲಾಸೆ, ಹೋಲಿಕೆ, ಅಸೂಯೆ, ದ್ವೇಷಭಾವನೆಯಿಂದ ಪರಸ್ಪರ ನಂಬಿಕೆ, ಪ್ರೀತಿ-ವಿಶ್ವಾಸ ಮಾಯವಾಗಿದೆ ಯಾರಲ್ಲಿಯೂ ಆತ್ಮೀಯ ಸಂಬಂಧವಿಲ್ಲ ಎಂದು ಅವರು ಹೇಳಿದರು. “ಮರಿ ತುಚ್ಚಿಂಡ ಮರ್ದುಂಡು, ಅರಿ ತುಚ್ಚಿಂಡ ಮರ್ದಿಜ್ಜಿ” ಎಂಬ ಮಾತಿದೆ. ಆದರೆ ಆಹಾರವಿಲ್ಲದೆ ಬದುಕಲು ಸಾಧ್ಯವಿಲ್ಲ. ಹಿಂದೆ ಆಹಾರವೇ ಔಷಧಿಯಾಗಿದ್ದರೆ ಇಂದು ಹೆಚ್ಚಿನವರಿಗೆ ಔಷದಿಯೇ ಆಹಾರವಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ ಆಧುನಿಕ ಜನತೆಗೆ ಆಟಿ ಅಡಂಬರವಾಗಿದೆ. ಮಾಲ್, ಹೋಟೆಲ್‌ಗಳಲ್ಲಿ ಹಬ್ಬಗಳನ್ನು ಆಚರಿಸುವಂತಾಗಿದೆ. ಇಂತಹ ಕಾರ್ಯಕ್ರಮಗಳಿಂದ ನಮ್ಮ ತುಳುನಾಡಿನ ಭವ್ಯ ಇತಿಹಾಸ ಮತ್ತು ಪರಂಪರೆ ಹಾಗೂ ಆಹಾರ ಔಷಧಿಗಳ ಬಗ್ಗೆ ಅರಿವು ಜಾಗೃತಿ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕೊಯೂರಿನ ಅಮ್ಮಿ ನಲಿಕೆ ಮತ್ತು ಬಳಗದವರ ಆಟಿಕಳೆಂಜ ವೇಷ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು. ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಪ್ರಾಚೀನ ವಸ್ತುಗಳ ವಸ್ತುಪ್ರದರ್ಶನ ಆಯೋಜಿಸಲಾಗಿತ್ತು. ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಸನ್ಮತಿಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಅಭಿಜ್ಞಾ ಉಪಾಧ್ಯಾಯ ಧನ್ಯವಾದವಿತ್ತರು. ವಿದ್ಯಾರ್ಥಿನಿಯರಾದ ಕುಮಾರಿ ಶ್ರದ್ದಾ ಮತ್ತು ಕುಮಾರಿ ಸೃಷ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಡೆಂಗ್ಯೂ ಜ್ವರ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Article Image

ಡೆಂಗ್ಯೂ ಜ್ವರ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ಎನ್‌ಎಸ್‌ಎಸ್ ಘಟಕವು ಉದ್ಯಾನವನ ವಿಭಾಗದ ಸಿಬ್ಬಂದಿಗಳಿಗೆ “ಡೆಂಗ್ಯೂ ಜ್ವರ ತಡೆಗಟ್ಟುವಿಕೆ” ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕೀಟಶಾಸ್ತ್ರಜ್ಞರಾದ ಮಂಜುನಾಥ್ ಅವರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಈ ಕಾರ್ಯಕ್ರಮವು ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ಗುರುತಿಸಿ ಮತ್ತು ಅವುಗಳ ನಿಯಂತ್ರಣ ಮಾಡುವ ಪ್ರಾಮುಖ್ಯತೆಯನ್ನು ತಿಳಿಸಿದರು. ಸೊಳ್ಳೆ ಕಡಿತದಿಂದ ರಕ್ಷಿಸಲು ವೈಯಕ್ತಿಕ ರಕ್ಷಣಾ ಕ್ರಮಗಳ ಬಳಕೆಗೆ ಒತ್ತು ನೀಡಿತು, ಲಾರ್ವಿವೋರಸ್ ಮೀನುಗಳ (ಗಪ್ಪಿ ಮೀನು) ಜೊತೆಗೆ ಸೊಳ್ಳೆಗಳ ಲಾರ್ವಾ ಮತ್ತು ಪ್ಯೂಪಲ್ ಹಂತಗಳ ನೇರ ಪ್ರದರ್ಶನವನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜಕ ಡಾ. ಉಮೇಶ್ ಆರ್. ದೀಕ್ಷಿತ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ರಾಕೇಶ್ ಕೆ. ನಾಯಕ್ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಎಸ್ ಸ್ವಯಂ ಸೇವಕರು ಕರಪತ್ರಗಳು ಮತ್ತು ಸ್ಕ್ಯಾಂಡಿಗಳನ್ನು ಬಳಸಿಕೊಂಡು ಸಿಬ್ಬಂದಿಗೆ ಶಿಕ್ಷಣ ನೀಡಿದರು.

ಕಾರ್ಗಿಲ್ ವಿಜಯ ದಿವಸ್ ಬೆಳ್ಳಿಹಬ್ಬ ಆಚರಣೆ; ಎನ್ನೆಸ್ಸೆಸ್ ಸರಣಿ ಕಾರ್ಯಕ್ರಮಗಳ ಸಮಾರೋಪ

Article Image

ಕಾರ್ಗಿಲ್ ವಿಜಯ ದಿವಸ್ ಬೆಳ್ಳಿಹಬ್ಬ ಆಚರಣೆ; ಎನ್ನೆಸ್ಸೆಸ್ ಸರಣಿ ಕಾರ್ಯಕ್ರಮಗಳ ಸಮಾರೋಪ

ಉಜಿರೆ, ಆ.7: ಕಾರ್ಗಿಲ್ ವಿಜಯ ದಿನಾಚರಣೆಯು ದೀಪಾವಳಿ ಹಬ್ಬದಂತೆ ಸಮಸ್ತ ದೇಶವಾಸಿಗಳಿಂದ ಆಚರಿಸಲ್ಪಡುತ್ತಿರುವುದು ಸಂತಸದ ಸಂಗತಿ ಎಂದು ಕಾರ್ಗಿಲ್ ಯುದ್ಧ ಸೇನಾನಿ ಕ್ಯಾಪ್ಟನ್ ನವೀನ್ ನಾಗಪ್ಪ ಹೇಳಿದರು. ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಇಂದು (ಆ.7) ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ್ ಬೆಳ್ಳಿಹಬ್ಬ ಆಚರಣೆ ಹಾಗೂ ಕಾರ್ಗಿಲ್ ವಿಜಯ ದಿವಸ್ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು. ಆರಂಭದಲ್ಲಿ ಕಾರ್ಗಿಲ್ ವಿಜಯ ದಿನಾಚರಣೆಯು ಸೈನ್ಯದಿಂದ ಮಾತ್ರ ಆಚರಿಸಲ್ಪಡುತ್ತಿತ್ತು. ಕ್ರಮೇಣ ನಾಗರಿಕರು ಆಚರಿಸಲು ಆರಂಭಿಸಿದರು. ಪ್ರಸ್ತುತ ದೇಶಾದ್ಯಂತ ವ್ಯಾಪಕವಾಗಿ ಆಚರಿಸಲ್ಪಡುತ್ತಿದೆ ಎಂದು ಅವರು ಹೇಳಿದರು. “ದೇಶದ ಪ್ರಾಂತೀಯ ಸಮಗ್ರತೆಗಾಗಿ ನಾವು ಹೋರಾಟ ಮಾಡಿದೆವು. ಕಿರಿಯ ವಯಸ್ಸಿನ ಸೈನಿಕರು ಪ್ರಾಣತ್ಯಾಗ ಮಾಡಿದರು. ಇಲ್ಲಿಯವರೆಗೆ ನಾವು ದೇಶವನ್ನು ಮುಂದೆ ತೆಗೆದುಕೊಂಡು ಬಂದಿದ್ದೇವೆ, ಇನ್ನು ಮುಂದೆ ದೇಶವನ್ನು ಮುನ್ನಡೆಸಬೇಕಾದವರು ನೀವು. ಈಗ ನಿಮ್ಮ ಸರದಿ” ಎಂದರು. “ದೇಶವು ಸುರಕ್ಷಿತ ಕೈಗಳಲ್ಲಿದೆ” ಎಂದು ಅವರು ಸಮಾಧಾನ ವ್ಯಕ್ತಪಡಿಸಿದರು. “ಈ ಮಣ್ಣಿನಲ್ಲಿ ಹುಟ್ಟಲು ನಾನು ಅದೃಷ್ಟ ಮಾಡಿದ್ದೇನೆ. ಹಲವು ಜನರಿಗೆ ಹಲವು ಪ್ರಯತ್ನಗಳ ಬಳಿಕವೂ ಸೈನ್ಯ ಸೇರಲು ಸಾಧ್ಯವಾಗುವುದಿಲ್ಲ. ಆದರೆ ನಾನು ಪ್ರಥಮ ಪ್ರಯತ್ನದಲ್ಲಿಯೇ ಯಶಸ್ವಿಯಾದೆ. ಯುದ್ಧದಲ್ಲಿ ಪಾಲ್ಗೊಳ್ಳುವ ಅವಕಾಶವೂ ಸಿಕ್ಕಿತು. ಭಾರತಾಂಬೆಗೆ ಅಳಿಲುಸೇವೆ ಸಲ್ಲಿಸುವ ಅವಕಾಶ ನನಗೆ ಸಿಕ್ಕಿತು. ದೇಶಕ್ಕೆ ಈಗ ಸೇವೆ ಮಾಡದಿದ್ದಲ್ಲಿ ಇನ್ನು ಯಾವಾಗ? ನಾವಲ್ಲದೆ ಇನ್ನಾರು?” ಎಂದು ಅವರು ಹೇಳಿದರು. ಅತಿಥಿ, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿದರು. ದೇಶಕ್ಕೆ ಸೈನ್ಯ ಮತ್ತು ಸೈನಿಕರು ಎಷ್ಟು ಅನಿವಾರ್ಯ ಎಂಬುವುದು ಎಲ್ಲರಿಗೂ ಗೊತ್ತು. ನಾವು ರಾತ್ರಿ ನೆಮ್ಮಯಿಂದ ಮಲಗಿ ನಿದ್ದೆ ಹೋಗುತ್ತೇವೆ ಎಂದರೆ ಅದಕ್ಕೆ ಕಾರಣ ನಮ್ಮ ಹೆಮ್ಮೆಯ ಯೋಧರು. ದೇಶವನ್ನು ಕಾಪಾಡುವವರು ಯೋಧರು. ಆದ್ದರಿಂದ ಸೈನ್ಯದ ವ್ಯವಸ್ಥೆ ದೇಶಕ್ಕೆ ಅತೀ ಅಗತ್ಯ ಎಂದರು. ಮಾತೃಋಣ, ಪಿತೃಋಣ, ಗುರುಋಣಕ್ಕಿಂತಲೂ ಸೈನ್ಯ ಋಣ ಮಿಗಿಲು. ನಮ್ಮ ನಮ್ಮ ಕರ್ತವ್ಯದಲ್ಲಿ ಸೈನಿಕರ ಬದ್ಧತೆ, ಸೇವಾ ಮನೋಭಾವ ಅಳವಡಿಸಿಕೊಳ್ಳುವ ಮೂಲಕ ಆ ಋಣ ತೀರಿಸಬಹುದು. ಆ ನಿಟ್ಟಿನಲ್ಲಿ ಈ ಕಾರ್ಯಕ್ರಮ ಪೂರಕ ಎಂದು ಅವರು ಅಭಿಪ್ರಾಯಪಟ್ಟರು. ದೈಹಿಕ, ಮಾನಸಿಕ, ಭಾವನಾತ್ಮಕ ದೃಢತೆ ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, ದೇಶದ ಸೈನಿಕರು ದೇಶದ ರಕ್ಷಣೆ ಮಾಡುವಾಗ ದೇಶವಾಸಿಗಳಾದ ನಾವು ದೇಶದೊಳಗಡೆ ಏನು ಮಾಡುತ್ತಿದ್ದೇವೆ ಎಂಬುದನ್ನು ಅವಲೋಕನ ಮಾಡಬೇಕಿದೆ. ಸೈನಿಕರ ಶ್ರಮವನ್ನು ಯುವಜನರು ಅರಿತುಕೊಳ್ಳಬೇಕು. ನಮ್ಮ ಕಾಲೇಜಿನ ಎನ್ನೆಸ್ಸೆಸ್ ಘಟಕ ತನ್ನ ಸುವರ್ಣ ಸಂಭ್ರಮದ ಸಂದರ್ಭದಲ್ಲಿ ಈ ಕಾರ್ಯಕ್ರಮ ಆಯೋಜಿಸಿರುವುದು ಸಂತಸದಾಯಕ ಎಂದರು. ಭಾರತ ಎಂದಿಗೂ ಯಾವ ದೇಶದ ಮೇಲೆಯೂ ಕೂಡ ಯುದ್ಧ ಸಾರಿಲ್ಲ. ಆದರೆ ತನ್ನ ಮೇಲೆ ದಾಳಿ ಮಾಡಿದವರನ್ನು ಎಂದಿಗೂ ಸದೆ ಬಡಿಯದೆ ಬಿಟ್ಟಿಲ್ಲ ಎಂಬುದಕ್ಕೆ ಕಾರ್ಗಿಲ್ ಯುದ್ಧವೇ ಸಾಕ್ಷಿ ಎಂದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ಎನ್ ಎಸ್ ಎಸ್ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್., "24ನೇ ಕಾರ್ಗಿಲ್ ವಿಜಯ ದಿನಾಚರಣೆ ಸಂದರ್ಭದಲ್ಲಿ ನಾವು ಸರಣಿ ಕಾರ್ಯಕ್ರಮಗಳನ್ನು ನಡೆಸುವ ಸಂಕಲ್ಪ ಮಾಡಿದ್ದೆವು. ಶಾಲಾ ಕಾಲೇಜುಗಳಲ್ಲಿ ದೇಶಭಕ್ತಿ ಕುರಿತ ಸರಣಿ ಕಾರ್ಯಕ್ರಮ ನಡೆಸಿ, ಇಂದು ಸಮಾರೋಪ ಸಮಾರಂಭ ಆಯೋಜಿಸಿದ್ದೇವೆ" ಎಂದರು. ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ನಡೆಸಿದ ಭಾಷಣ ಮತ್ತು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪಟ್ಟಿಯನ್ನು ಎನ್ ಎಸ್ ಎಸ್ ಯೋಜನಾಧಿಕಾರಿ ಪ್ರೊ. ದೀಪ ಆರ್.ಪಿ. ವಾಚಿಸಿದರು. ಗಣ್ಯರು ಬಹುಮಾನ ವಿತರಿಸಿದರು. ಎನ್ನೆಸ್ಸೆಸ್’ನ ಭಿತ್ತಿ ಪತ್ರಿಕೆ ‘ಯುವ ಚೇತನ’ದ ನೂತನ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಭಾರತಾಂಬೆ ಭಾವಚಿತ್ರ ಹಾಗೂ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಲಾಯಿತು. ಅತಿಥಿಯನ್ನು ಸನ್ಮಾನಿಸಲಾಯಿತು. ಪ್ರಥಮ ಬಿ.ಕಾಂ. ವಿದ್ಯಾರ್ಥಿ ಶಯನ್ ಕುಮಾರ್ ರಚಿಸಿದ ಪೆನ್ಸಿಲ್ ಸ್ಕೆಚ್ ಅನ್ನು ಅತಿಥಿಗೆ ನೀಡಿದರು. ಸ್ವಯಂಸೇವಕಿಯರಾದ ಶ್ವೇತಾ ಕೆ ಜಿ ನಿರೂಪಿಸಿ, ಸಿಂಚನ ಕಲ್ಲೂರಾಯ ವಂದಿಸಿದರು. ಬಳಿಕ, ಕ್ಯಾಪ್ಟನ್ ಅವರೊಂದಿಗೆ ಎನ್ನೆಸ್ಸೆಸ್ ಅಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಸಂವಾದ ನಡೆಸಿದರು. ವಿದ್ಯಾರ್ಥಿಗಳಿಂದ ಗಾಯನ ಕಾರ್ಯಕ್ರಮ ನಡೆಯಿತು.

ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Article Image

ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಉಜಿರೆ: "ನಮ್ಮ ಭಾರತದ ಜನಸಂಖ್ಯೆ 145 ಕೋಟಿಗೂ ಅಧಿಕವಾಗಿದ್ದು ಚೀನಾವನ್ನು ಹಿಂದಿಕ್ಕಿದೆ. ಚಾರ್ಲ್ಸ್ ಡಾರ್ವಿನ್ ಹೇಳಿದಂತೆ ಅತಿಯಾದ ಜನಸಂಖ್ಯೆಯಿಂದಾಗಿ ಉಳಿಯುವಿಕೆ ಕಷ್ಟವಾದಾಗ, ಅವರಲ್ಲಿ ಯಾರು ಬಲಿಷ್ಠನು ಹಾಗೂ ಕೌಶಲವನ್ನು ಹೊಂದಿರುತ್ತಾನೋ ಆತ ಮಾತ್ರ ಈ ಸಮಾಜದಲ್ಲಿ ಉಳಿಯಲು ಸಾಧ್ಯ" ಎಂದು ಉಜಿರೆ ಶ್ರೀ ಧ.ಮಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಹೇಳಿದರು. ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಸಹಯೋಗದಲ್ಲಿ ಆ.8ರಂದು ಆಯೋಜಿಸಲಾಗಿದ್ದ ವಾಣಿಜ್ಯ ಕ್ಯಾಂಪಸ್ ಅಸೋಸಿಯೇಷನ್’ನ 2024-25ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಮನುಷ್ಯನ ಜೀವನ ಎಂದರೆ ಏಳು- ಬೀಳು ಸಹಜ. ಆದರೆ ಬಿದ್ದಾಗ ಹೇಗೆ ಎದ್ದು ನಿಂತು ಧೈರ್ಯದಿಂದ ಕಷ್ಟವನ್ನು ಎದುರಿಸುತ್ತಾನೆ ಎಂಬುದು ಬಹುಮುಖ್ಯವಾಗಿರುತ್ತದೆ. ನಿಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ನಮ್ಮ ಕಾಲೇಜು ಬಹುಮುಖ್ಯ ಪಾತ್ರವನ್ನು ವಹಿಸಲಿದ್ದು, ಮುಂದಿನ ಭವಿಷ್ಯದ‌ ಒಳಿತಿಗಾಗಿ ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಿ" ಎಂದು ಅವರು ಕರೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪರೀಕ್ಷಾ ಅಕಾಡೆಮಿಯ ಚೀಫ್ ಮಾರ್ಕೆಟಿಂಗ್ ಆಫೀಸರ್ ಮತ್ತು ಸಾಫ್ಟ್‌ಸ್ಕಿಲ್ಸ್ ಟ್ರೈನರ್ ಎಂ.ಆರ್. ಚಂದನ್ ರಾವ್, "ನಿಮ್ಮ ಜೀವನದಲ್ಲಿ ವಾಣಿಜ್ಯ ಎಷ್ಟು ಮುಖ್ಯ ಮತ್ತು ಅದನ್ನು ಹೇಗೆ ಬಳಸಬಹುದು ಎಂಬುದನ್ನು ಅರಿಯಿರಿ. ಶ್ರದ್ಧೆ ಮತ್ತು ಕೌಶಲಗಳನ್ನು ಬಳಸಿಕೊಂಡು ನಿಮ್ಮ ವ್ಯವಹಾರ ಜ್ಞಾನವನ್ನು ವಿಸ್ತರಿಸಿ. ಆಗ ಯಶಸ್ಸು ಸದಾ ನಿಮ್ಮೊಟ್ಟಿಗಿರುತ್ತದೆ" ಎಂದು ಕಿವಿಮಾತು ಹೇಳಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ, 2022-23ನೇ ಸಾಲಿನ ರಾಜ್ಯಮಟ್ಟದ ಉತ್ತಮ ರಾಷ್ಟ್ರೀಯ ಸೇವಾಯೋಜನಾ ಘಟಕದ ಆಫೀಸರ್ ಪ್ರಶಸ್ತಿ ಪಡೆದ ಡಾ. ಲಕ್ಷ್ಮಿನಾರಾಯಣ ಕೆ.ಎಸ್. ಹಾಗೂ ಇತ್ತೀಚೆಗೆ ಪಿಎಚ್.ಡಿ. ಪದವಿ ಪಡೆದ ಭಾನುಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು. 2023 -24ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವ್ಯವಹಾರ ಆಡಳಿತ ವಿಭಾಗದ ದ್ವಿತೀಯ ಪದವಿ ವಿದ್ಯಾರ್ಥಿ ನಿಹಾಲ್ ಸಿಂಗ್ ಪಿ. ಅವರು ಪ್ರಸ್ತುತ ವ್ಯಾಪಾರ ಬೆಳವಣಿಗೆ ಮತ್ತು ನಿರ್ವಹಣೆಯ ವಿಕಸನದ ಅಗತ್ಯತೆಗಳ ಕುರಿತು ಬರೆದಿರುವ ‘ಟ್ರೆಂಡ್ ಮ್ಯಾಟ್ರಿಕ್ಸ್ – ಮಂತ್ಲಿ ಡೈಜೆಸ್ಟ್ ಆಫ್ ಬ್ಯುಸಿನೆಸ್ ಟ್ರೆಂಡ್ಸ್’ ಪುಸ್ತಕವನ್ನು ಪ್ರಾಂಶುಪಾಲರು ಬಿಡುಗಡೆಗೊಳಿಸಿದರು. ವಾಣಿಜ್ಯ ಕ್ಯಾಂಪಸ್ ಅಸೋಸಿಯೇಶನ್ ನೂತನ ಪದಾಧಿಕಾರಿಗಳಿಗೆ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರತ್ನಾವತಿ ಕೆ. ಪ್ರಮಾಣವಚನ ಬೋಧಿಸಿದರು. ಅಸೋಸಿಯೇಶನ್ ಕಾರ್ಯದರ್ಶಿ ಸಹನಾ ಡೋಂಗ್ರೆ 2023-24ನೇ ಸಾಲಿನ ವಾರ್ಷಿಕ ವರದಿ ವಾಚಿಸಿದರು. ವಾಣಿಜ್ಯ ವಿಭಾಗದ ಭಿತ್ತಿಪತ್ರಿಕೆ ‘ವಾಣಿಕ’ ಅನಾವರಣಗೊಳಿಸಲಾಯಿತು. ಕಾಲೇಜಿನ ಆಡಳಿತಾಂಗ ಕುಲಸಚಿವೆ ಡಾ. ಶಲೀಫ್ ಕುಮಾರಿ, ವಾಣಿಜ್ಯ ನಿಕಾಯದ ಡೀನ್ ಹಾಗೂ ವ್ಯವಹಾರ ಆಡಳಿತ ವಿಭಾಗ ಮುಖ್ಯಸ್ಥೆ ಶಕುಂತಲಾ, ವಾಣಿಜ್ಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥೆ ಡಾ. ಪ್ರಿಯಾ ಕುಮಾರಿ, ವಾಣಿಜ್ಯ ಕ್ಯಾಂಪಸ್ ಅಸೋಸಿಯೇಶನ್ ಸಂಯೋಜಕರಾದ ಗುರುರಾಜ್ ಮತ್ತು ವಿನುತ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುಷ್ಮಿತಾ ಮತ್ತು ತಂಡದವರು ಪ್ರಾರ್ಥಿಸಿದರು. ವಾಣಿಜ್ಯ ಕ್ಯಾಂಪಸ್ ಅಸೋಸಿಯೇಶನ್ ಸಿ.ಇ.ಒ. ದೀಕ್ಷಿತ ಸ್ವಾಗತಿಸಿ, ಸಿ.ಎಫ್.ಒ. ಶ್ರೀಗಣೇಶ್ ವಂದಿಸಿದರು. ಧಾರಿಣಿ ಮತ್ತು ಧರಿತ್ರಿ ಕಾರ್ಯಕ್ರಮ ನಿರ್ವಹಿಸಿದರು.

ಉಜಿರೆ ಶ್ರೀ ಧ. ಮಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

Article Image

ಉಜಿರೆ ಶ್ರೀ ಧ. ಮಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

ಉಜಿರೆಯ ಶ್ರೀ ಧ. ಮಂ. ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಕ್ರಿಯ ಸಂಘಗಳಾದ ಸಸ್ಯಸೌರಭ ಹಾಗೂ ಇಕೋ-ಕ್ಲಬ್ ವತಿಯಿಂದ ಉಜಿರೆಯ ರತ್ನಮಾನಸದಲ್ಲಿ ಆ.2ರಂದು ನೇಜಿ ನೆಡುವ ಕಾರ್ಯಕ್ರಮ ನಡೆಯಿತು. ರತ್ನಮಾನಸದ ಮೇಲ್ವಿಚಾರಕ ಯತೀಶ್ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ಮಾಹಿತಿಗಳನ್ನು ನೀಡಿದರು. ದ್ವಿತೀಯ ಮತ್ತು ತೃತೀಯ ಬಿ.ಎಸ್ಸಿಯ ಸುಮಾರು 40 ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶಕುಂತಲಾ ಬಿ., ಅಭಿಲಾಷ್ ಕೆ.ಎಸ್., ಮಂಜುಶ್ರೀ ಹಾಗೂ ಭವ್ಯ ಡಿ. ನಾಯಕ್ ಪಾಲ್ಗೊಂಡರು. ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಇವರು ಶುಭ ಹಾರೈಸಿದರು.

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೆಬಲ್ ಟೆನ್ನಿಸ್ ಪಂದ್ಯಾಟ

Article Image

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೆಬಲ್ ಟೆನ್ನಿಸ್ ಪಂದ್ಯಾಟ

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ-ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡುಬಿದಿರೆ ತಾಲೂಕು, ದ.ಕ ಮತ್ತು ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ- ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ 2024-25ನೇ ಸಾಲಿನ ಮೂಡಬಿದಿರೆ ತಾಲೂಕು ಮಟ್ಟದ- ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ಸಿಸ್ ಪಂದ್ಯಾಟ ಆಗಸ್ಟ್ 3ರ ಶನಿವಾರದಂದು ನಡೆಯಿತು. ಪಂದ್ಯಾಟಗಳನ್ನು ಉದ್ಘಾಟಿಸಿ ಮಾತನಾಡಿದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್- “ಮಕ್ಕಳೇ, ವಿದ್ಯಾರ್ಥಿ ಜೀವನ ಬಹು ಅಮೂಲ್ಯವಾದದ್ದು, ಇಲ್ಲಿ ನಿಮಗೆ ದೊರೆಯುವ ಎಲ್ಲಾ ರೀತಿಯ ಅವಕಾಶಗಳನ್ನು ಬಳಸಿಕೊಳ್ಳಿ, ಗುರಿಯಿಟ್ಟು ಛಲಬಿಡದೇ, ನಿರಂತರವಾಗಿ ಯಶಸ್ಸಿಗಾಗಿ ಶ್ರಮಿಸಿ, ಗೆದ್ದಾಗ ಅತೀಯಾಗಿ ಹಿಗ್ಗದೇ, ಸೋತಾಗ ಕುಗ್ಗದೇ, ಸೋಲನ್ನು ಗೆಲುವಿನ ಮೆಟ್ಟಿಲುಗಳನ್ನಾಗಿ ಬಳಸಿಕೊಂಡು ನಿಮ್ಮ ಗುರಿಯತ್ತ ಮುನ್ನಡೆಯಿರಿ. ಬೇರೆಯವರು ಗೆದ್ದಾಗ ಅಸೂಯೆ ಪಡದೇ, ಅವರಿಂದ ಪಾಠ ಕಲಿಯಿರಿ- ನನ್ನಿಂದಾಗದು ಎಂಬ ಕೆಟ್ಟ ಯೋಚನೆಯನ್ನು ಮನಸ್ಸಿನಿಂದ ತೆಗೆದುಹಾಕಿ. ಮುಂದಿನ ದಿನಗಳಲ್ಲಿ ಒಲಂಪಿಕ್ಸ್ ನಂತಹ ಶ್ರೇಷ್ಠ ಮಟ್ಟದ ಕ್ರೀಡಾಕೂಟಗಳಲ್ಲಿ ಭಾರತಮಾತೆಯನ್ನು ಪ್ರತಿನಿಧಿಸಿ-ಪದಕ ಗೆಲ್ಲುವ ಸಾಧಕರು ನೀವಾಗಿ. ಇದಕ್ಕೆ ಬೇಕಾಗುವ ಎಲ್ಲಾ ರೀತಿಯ ಸಹಕಾರವನ್ನು ಅರ್ಹ ವಿದ್ಯಾರ್ಥಿಗಳಿಗೆ ಒದಗಿಸಿಕೊಡಲು ಎಕ್ಸಲೆಂಟ್ ವಿದ್ಯಾಸಂಸ್ಥೆ ಸದಾ ಸಿದ್ಧವಿದೆ” ಎನ್ನುತ್ತಾ ಎಲ್ಲ ಮಕ್ಕಳಿಗೂ ಶುಭಹಾರೈಸಿದರು. ಪ್ರಸ್ತಾವಿಕವಾಗಿ ಮಾತನಾಡಿದ ಮೂಡುಬಿದಿರೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾದ ನಿತ್ಯಾನಂದ ಶೆಟ್ಟಿಯವರು, ಈ ಆಟಗಳ ರೂಪುರೇಷೆಗಳನ್ನು ವಿವರಿಸಿ, ಅತ್ಯಂತ ಅಚ್ಚುಕಟ್ಟಾದ ಒಳಾಂಗಣ ಕ್ರೀಡಾಂಗಣದಲ್ಲಿ ಸುಂದರ ರೀತಿಯಲ್ಲಿ ಇಂದಿನ ಆಟಗಳಿಗೆ ಮಾಡಿದ ವ್ಯವಸ್ಥೆಗಳಿಗಾಗಿ ಇಲಾಖೆಯ ವತಿಯಿಂದ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಅಭಿನಂದನೆಗಳನ್ನು ಸಲ್ಲಿಸಿದರು. ಮಕ್ಕಳು ಇದರ ಪ್ರಯೋಜನಗಳನ್ನು ಪಡೆದುಕೊಂಡು ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಿ, ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಕ್ರೀಡೆಯಲ್ಲಿ ಪ್ರತಿನಿಧಿಸುವಂತಹ ಮಕ್ಕಳಾಗಿ ಬೆಳೆಯಿರಿ ಎಂಬ ಶುಭಹಾರೈಕೆಯನ್ನಿತ್ತರು. ಈ ಸಂದರ್ಭದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ‍್ಯದರ್ಶಿಗಳಾದ- ರಶ್ಮಿತಾ ಜೈನ್, ಮೂಡಬಿದಿರೆ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ನವೀನ್ ಪುತ್ರನ್, ಹಾಗೂ ಎಕ್ಸಲೆಂಟ್ ಕ್ರೀಡಾ ತರಬೇತುದಾರರಾದ- ಯಸ್.ಯಸ್ ಪಾಟೀಲ್‌ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕಿನ ಬೇರೆ ಬೇರೆ ಶಾಲೆಗಳಿಂದ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ಪಂದ್ಯಾಟಗಳಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಹದಿನೇಳು ವರ್ಷದೊಳಗಿನ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಹದಿನಾಲ್ಕು ವರ್ಷದೊಳಗಿನ ಬಾಲಕರ ಶಟಲ್ ಬ್ಯಾಡ್ಮಿಂಟನ್ ಮತ್ತು ಬಾಲಕಿಯರ ಟೇಬಲ್ ಟೆನ್ನೀಸ್ ಹದಿನೇಳು ವರ್ಷದೊಳಗಿನ ಬಾಲಕರ ಟೇಬಲ್ ಟೆನ್ನೀಸ್ ತಂಡಗಳು ಜಯಗಳಿಸಿ ಜಿಲ್ಲಾ ಹಂತಕ್ಕೆ ಪ್ರವೇಶ ಪಡೆದವು. ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕರಾದ ಶಿವಪ್ರಸಾದ್ ಭಟ್ ಅತಿಥಿಗಳನ್ನು ಸ್ವಾಗತಿಸಿದರು, ಸಂಸ್ಥೆಯ ವಿಜ್ಞಾನ ಶಿಕ್ಷಕ ಪ್ರಜ್ವಲ್ ಶೆಟ್ಟಿಯವರು ಕಾರ‍್ಯಕ್ರಮ ನಿರೂಪಿಸಿ, ವಂದನಾರ್ಪಣೆಗೈದರು.

ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಮಾಹಿತಿ ಕಾರ್ಯಗಾರ

Article Image

ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಮಾಹಿತಿ ಕಾರ್ಯಗಾರ

ವಿದ್ಯಾಗಿರಿ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯ ತಿಳಿಸಿದರು. ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ‘ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ ದ ಕುರಿತು ಕಾರ್ಯಗಾರದಲ್ಲಿ ಮಾತನಾಡಿದರು. ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ನೃತ್ಯ, ಸಂಗೀತ, ನಾಟಕ, ಸೃಜನಶೀಲ ಬರವಣಿಗೆ, ರಂಗಭೂಮಿ ಇತ್ಯಾದಿಗಳನ್ನು ಒಳಗೊಂಡಿರಬೇಕು. ನಾಟಕಗಳು ನಮ್ಮ ಸುತ್ತಮುತ್ತಲಿನ ಸುಂದರ ದೃಶ್ಯಗಳನ್ನು ನಮ್ಮ ಕಣ್ಣ ಮುಂದೆ ಸೃಷ್ಟಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ಕಲೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಸುಧಾರಿಸಲು ಸಹಾಯಕ. ಪ್ರದರ್ಶನದ ಕಲೆಗಳು ಮಕ್ಕಳಲ್ಲಿ ತಮ್ಮ ಭಾವನೆ ಮತ್ತು ಕಲ್ಪನೆಗಳನ್ನು ಹಾಗೂ ತಮ್ಮದೇ ಆದ ವಿಶಿಷ್ಟ ಧ್ವನಿಗಳನ್ನು ಅಭಿವೃದ್ಧಿ ಪಡಿಸಲು ಸಹಾಯ ಮಾಡುತ್ತವೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಶಿಕ್ಷಕರಾದವರು ಕಲೆಗಾರರು, ನಾಟಕಗಾರರು ಆಗಿರಬೇಕು. ಯಾವುದೇ ವಿಷಯವನ್ನು ಕಲೆ ಮತ್ತು ನಾಟಕದ ಮೂಲಕ ಕಲಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ವಿಷಯವನ್ನು ಮನ ಮುಟ್ಟವಂತೆ ತಿಳಿಸಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಡಾ. ಶಂಕರಮೂರ್ತಿ ಹೆಚ್. ಕೆ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಜಾನೆಟ್ ಸ್ವಾಗತಿಸಿ, ಅಪೂರ್ವ ವಂದಿಸಿ, ಕಾವ್ಯ ಕೆ ಕಾರ್ಯಕ್ರಮ ನಿರೂಪಿಸಿದರು.

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Article Image

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕದ ಸ್ವಯಂಸೇವಕ ನಾಯಕ ರಾಮಕೃಷ್ಣ ಶರ್ಮ ಎನ್. ಅವರು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ರಾ.ಸೇ.ಯೋ. ಕೋಶದ ಸಹಯೋಗದೊಂದಿಗೆ ಆ.6 ರಿಂದ 12 ರ ವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು 20 ಸ್ವಯಂಸೇವಕರು ಪ್ರತಿನಿಧಿಸಲಿದ್ದು, ಎಸ್.ಡಿ.ಎಂ. ಎನ್.ಎಸ್.ಎಸ್. ಘಟಕವನ್ನು ರಾಮಕೃಷ್ಣ ಶರ್ಮ ಪ್ರತಿನಿಧಿಸಲಿದ್ದಾರೆ. ದ್ವಿತೀಯ ಬಿ.ಕಾಂ. ವಿದ್ಯಾರ್ಥಿಯಾಗಿರುವ ಇವರು ಬೆಳ್ತಂಗಡಿಯ ಎನ್. ಮಹಾಲಿಂಗೇಶ್ವರ ಭಟ್ ಮತ್ತು ವಿದ್ಯಾ ದಂಪತಿಯ ಪುತ್ರ.

ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ: ಕೆಸರಾಟ ಪಾಠ

Article Image

ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ: ಕೆಸರಾಟ ಪಾಠ

ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಹಾಗೂ ರೋವರ್ ರೇಂಜರ್ಸ್ ಘಟಕದ ಘಟಕದ ವತಿಯಿಂದ ಕಾರ್ಕಳದ ಮಿಯ್ಯಾರು ಗ್ರಾಮದಲ್ಲಿ ‘ಕೆಸರಾಟ ಪಾಠ’ ಕಾರ‍್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಿಯ್ಯಾರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಮಾಧವ ಕಾಮತ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಿಯ್ಯಾರು ಗ್ರಾಮಕ್ಕೂ ಎನ್‌ಎಸ್‌ಎಸ್ ಚಟುವಟಿಕೆಗಳಿಗೂ ಅವಿನಾಭಾವ ನಂಟಿದೆ. ಈ ಗ್ರಾಮದಲ್ಲಿ ಹೆಚ್ಚಿನ ಎನ್‌ಎಸ್‌ಎಸ್ ಕ್ಯಾಂಪ್‌ಗಳು ನಡೆಯುತ್ತವೆ. ಈ ಕಾರ‍್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಜೀವನ ಪಾಠ ಲಭಿಸಲಿ ಎಂದು ಹಾರೈಸಿದರು. ಆಳ್ವಾಸ್ ವಿದ್ಯಾಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕೆಸರಾಟದ ಮಹತ್ವ ಹಾಗೂ ಕೃಷಿಯ ಮಹತ್ವವನ್ನು ತಿಳಿಸಿದರು. ವಿವಿಧ ಆಟಗಳಲ್ಲಿ ತಾವೂ ಭಾಗವಹಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಕೆಸರಾಟ ಪಾಠದ ಅಂಗವಾಗಿ ಹಗ್ಗ ಜಗ್ಗಾಟ, ವಾಲಿಬಾಲ್, ತ್ರೋಬಾಲ್, 100 ಮೀಟರ್ ಓಟ, 400ಮೀಟರ್ ರಿಲೇ, ಪಿರಮಿಡ್ ರಚಿಸುವುದು, ನಿಧಿ ಹುಡುಕುವುದು, ಮಡಕೆ ಒಡೆಯುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಗದ್ದೆಯನ್ನು ಒದಗಿಸಿದಂತಹ ರಾಜೇಶ್ ಹಾಗೂ ಸಹಕಾರವನ್ನು ನೀಡಿದ ರಮೇಶ್ ಹೆಗ್ಡೆಯನ್ನು ಅಭಿನಂದಿಸಲಾಯಿತು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂಡಿ, ಎನ್‌ಎಸ್‌ಎಸ್ ಘಟಕದ ಸಂಯೋಜಕರಾದ ಧರ್ಮೇಂದ್ರ ಕುದ್ರೋಳಿ, ಸಂಸ್ಕೃತ ವಿಭಾಗದ ಮುಖ್ಯಸ್ಥ ಅಂಬರೀಶ್ ಚಿಪ್ಳೂಣಕರ್ ರೋವರ್ ರೇಂಜರ್ಸ್ ಘಟಕದ ಸಂಯೋಜಕರಾದ ವೀಣಾ ಹಾಗೂ ಸುನಿಲ್, ಉಪನ್ಯಾಸಕ ವರ್ಗದವರು ಇದ್ದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರೋವರ್ ರೇಂಜರ್ಸ್ ಹಾಗೂ ಎನ್‌ಎಸ್‌ಎಸ್ ಘಟಕದ 175 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಎಕ್ಸಲೆಂಟ್: ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ

Article Image

ಎಕ್ಸಲೆಂಟ್: ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ

ನಮ್ಮನ್ನು ರಕ್ಷಣೆ ಮಾಡುತ್ತಿರುವ ಸೈನಿಕರನ್ನು ಪ್ರತೀಕ್ಷಣ ಸ್ಮರಿಸಬೇಕು. ಸೈನಿಕರು ಭಾವಜೀವಿಗಳು, ನಚೀಕೇತ್, ಸೌರಭ್ ಕಾಲಿಯಾರಂತಹ ಮೊದಲಾದ ವೀರ ಯೋಧರ ಬಲಿದಾನದ ಪ್ರತಿಫಲವಾಗಿ ಇಂದಿನ ಭಾರತ ಭವ್ಯವಾಗಿದೆ. ಕಾರ್ಗಿಲ್ ಯುದ್ಧವಲ್ಲ ಅದೊಂದು ಕಾರ್ಯಾಚರಣೆ. ಯಾಕೆ ಭಾರತಕ್ಕೆ ಕಾರ್ಗಿಲ್ ಮುಖ್ಯವೆಂದರೆ 527 ಸೈನಿಕರು ತಮ್ಮ ಯಶಸ್ವಿ ಕಾರ್ಯಚರಣೆಯಿಂದ ಭಾರತಕ್ಕೆ ಜಯ ತಂದುಕೊಟ್ಟು ಹುತಾತ್ಮರಾದರು. ಇಂದು ಆ ಕಾರ್ಯಚರಣೆಯಲ್ಲಿ ಮಡಿದ ಅಷ್ಟೂ ಸೈನಿಕರನ್ನು ಸ್ಮರಿಸಿಕೊಳ್ಳುವುದು ಅತೀ ಮುಖ್ಯ ಎಂಬುದಾಗಿ ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಗಣೇಶ್ ಅಭಿಪ್ರಾಯಪಟ್ಟರು. ಎಕ್ಸಲೆಂಟ್ ಶಿಕ್ಷನ ಸಂಸ್ಥೆಗಳು ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಇಲ್ಲಿಯ ತನಕ ಹುತಾತ್ಮರಾದ ಎಲ್ಲಾ ಸೈನಿಕರಿಗೂ ಎದೆಗೆ ಗುಂಡುಬಿದ್ದಿದೆಯೇ ವಿನಃ ಬೆನ್ನಿಗಲ್ಲ. ಅಷ್ಟಿದ್ದರೂ ದೇಶಕ್ಕಾಗಿ ಬದುಕಬೇಕು ಎಂಬ ಭಾವುಕತೆ ಸೈನಿಕರದ್ದು. ಅವರು ದೇಶದ ರಕ್ಷಣೆ ಕಣ್ಣಮುಂದೆ ಬಂದರೆ ಸದಾ ಬಲಿದಾನಕ್ಕೆ ಮುಂದಾಗುತ್ತಾರೆ. ಬಲಿದಾನಗೈದ ವೀರಯೋಧರ ಕನಸುಗಳನ್ನು ಹೊತ್ತ ಭೂಮಿ ಇದು ಕಾರ್ಗಿಲ್ ಎಂದಿಗೂ ಭಾರತದ ಭಾಗ ಅಲ್ಲಿ ಮಡಿದ ಯೋಧರ ಪರಿಶ್ರಮ ನಮ್ಮ ನೆಮ್ಮದಿಯ ನಿದ್ರೆಗೆ ಕಾರಣ. ಆದರೆ ಇಂದು ನಾವುಗಳು ಜಾತಿ ಮತ ಭಾಷೆ ಇತ್ಯಾದಿ ಬಂಧನಗಳಿಗೆ ಒಳಗಾಗಿದ್ದೇವೆ. ಅದರಿಂದ ಹೊರಬಂದು ನಾವೆಲ್ಲಾ ಒಂದೇ, ನಾವೆಲ್ಲಾ ಭಾರತೀಯರು ಎನ್ನುವ ಹೆಮ್ಮೆ ನಮಗಿರಬೇಕು. ಜೀವನದಲ್ಲಿ ಗುರಿಯ ಸ್ಪಷ್ಟತೆ ಇದ್ದರೆ ಎಂತಹ ಸಮಸ್ಯೆಗಳನ್ನು ಮೆಟ್ಟಿನಿಲ್ಲಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಯೋಧರ ತ್ಯಾಗ ಬಲಿದಾನಗಳನ್ನು ಸದಾ ಗೌರವಿಸಬೇಕು. ದೇಶ ಮೊದಲು ಎಂಬ ಮನೋಭಾವ ಎಲ್ಲರಲ್ಲಿಯೂ ಮೂಡಬೇಕು. ಯೋಧರ ಆದರ್ಶಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಈ ಕಾರ್ಗಿಲ್ ವಿಜಯ ಸುಲಭವಾಗಿ ಲಭಿಸಿದ್ದಲ್ಲ ಅದರಲ್ಲಿ ನೂರಾರು ಸೈನಿಕರು ವೀರತನದಿಂದ ಹೋರಾಡಿ ತಮ್ಮ ಬಲಿದಾನ ಮಾಡಿದ್ದಾರೆ. ಇಂದು ನಾವೆಲ್ಲಾ ಈ ಸಂಭ್ರಮಾಚರಣೆ ಮಾಡುತ್ತಿರುವುದು ಅವರಿಗೆ ಸಲ್ಲಿಸುತ್ತಿರುವ ಗೌರವ ಎಂದು ಹೇಳುತ್ತಾ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮದ ಅರಿವನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಉಪಮುಖ್ಯೋಪಾಧ್ಯಾಯ ಜಯಶೀಲ, ಎನ್ ಸಿ ಸಿ ನೌಕದಳದ ಕೇರ್‌ಟೇಕರ್ ಆಫೀಸರ್ ರೇಣುಕಾಚಾರ್ಯ, ಭೂದಳದ ಕೇರ್‌ಟೇಕರ್ ಆಫೀಸರ್ ಪ್ರಶಾಂತ್ ಜೈನ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮನಿಷಾ, ನವ್ಯ ಕಾರ್ಯಕ್ರಮ ನಿರೂಪಿಸಿದರು. ಹರ್ಷ ಅತಿಥಿಗಳನ್ನು ಪರಿಚಯಿಸಿದರು, ಗುಂಜನ್ ಕಾರ್ಗಿಲ್ ವಿಜಯ ದಿವಸದ ಮಹತ್ವ ತಿಳಿಸಿದರು. ಪ್ರನ್ಶು ವಂದಿಸಿದರು. ಇದೇ ಸಂದರ್ಭದಲ್ಲಿ ಕಾರ್ಗಿಲ್ ವಿಜಯ ದಿವಸದ ಸವಿನೆನಪಿಗಾಗಿ ಶಾಲಾ ಆವರಣದಲ್ಲಿ ಗಿಡ ನೆಡಲಾಯಿತು.

ಮೂಡುಬಿದಿರೆ: ವಿಶೇಷ ಉಪನ್ಯಾಸ ಕಾರ್ಯಕ್ರಮ

Article Image

ಮೂಡುಬಿದಿರೆ: ವಿಶೇಷ ಉಪನ್ಯಾಸ ಕಾರ್ಯಕ್ರಮ

ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ. ಆದರೆ ಪತ್ರಿಕೆಗಳ ಮೂಲಕ ದೊರೆಯುವ ಸಕಾರಾತ್ಮಕ ಮತ್ತು ಮಹತ್ವಪೂರ್ಣ ದಾಖಲೆಗಳು ಜ್ಞಾನದ ಜೊತೆ ಓದಿನ ಸುಖವನ್ನು ನೀಡುತ್ತವೆ ಎಂದರು. ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿ ಪ್ರಕಟವಾಗುವ ಸಂಪಾದಕೀಯ ಪುಟ, ಸ್ಥಳೀಯ, ರಾಜ್ಯ, ರಾಷ್ಟ್ರಮಟ್ಟದ ಸುದ್ದಿಗಳ ಜೊತೆಗೆ ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟ ಆಸಕ್ತಿದಾಯಕ ಸಂಗತಿಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ತಿಳಿಸಿದರು. ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶೆಟ್ಟಿ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಸಾಪ ಮೂಡುಬಿದಿರೆ ತಾಲೂಕು ಘಟಕ ಅಧ್ಯಕ್ಷ ಕೆ ವೇಣುಗೋಪಾಲ್ ಶೆಟ್ಟಿ, ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಬೇರೆ ಬೇರೆ ಮಾತೃಭಾಷೆಗಳನ್ನು ಹೊಂದಿದ್ದರು ಕನ್ನಡಕ್ಕೆ ವಿಶೇಷ ಸ್ಥಾನಮಾನ ನೀಡುತ್ತಾ ಅದನ್ನು ನಮ್ಮ ಜೀವನದ ಅಂಗವನ್ನಾಗಿ ಮಾಡಿಕೊಂಡಿದ್ದು ಉಲ್ಲೇಖನೀಯ ಎಂದರು. ವಿದ್ಯಾರ್ಥಿನಿ ಖ್ಯಾತಿ ಪ್ರಾರ್ಥಿಸಿ, ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಸಾಪ ತಾಲೂಕು ಘಟಕದ ಕಾರ್ಯದರ್ಶಿ ಸದಾನಂದ ನಾರಾವಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ವಿಜಯಲಕ್ಷ್ಮಿ ಮಾರ್ಲಾ ವಂದಿಸಿದರು.

ಶ್ರೀ ಧ. ಮಂ. ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ

Article Image

ಶ್ರೀ ಧ. ಮಂ. ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ

ಉಜಿರೆ: ಬ್ಯಾಂಕಿಂಗ್‌ ಸಂಸ್ಥೆಗಳು ಜಾಗತಿಕ ಆರ್ಥಿಕತೆಯಲ್ಲಿನ ಬೆಳವಣಿಗೆಯಲ್ಲಿ ಬಹುದೊಡ್ಡ ಪಾತ್ರವನ್ನು ವಹಿಸುತ್ತಿವೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಾಗುವ ಬೆಳವಣಿಗೆಗಳ ಬಗ್ಗೆ ತಿಳಿದುಕೊಂಡಾಗ ಇಂದಿನ ಆಧುನಿಕ ಯುಗದಲ್ಲಿ ಬದುಕು ಮತ್ತಷ್ಟು ಸರಾಗವಾಗುತ್ತದೆ ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಹೇಳಿದರು. ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗ, ವ್ಯವಹಾರ ಆಡಳಿತ ವಿಭಾಗ, ಶ್ರೀ ಧ. ಮಂ. ವಾಣಿಜ್ಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ವತಿಯಿಂದ ಇಂಟರ್ನಲ್‌ ಕ್ವಾಲಿಟಿ ಅಶ್ಯೂರೆನ್ಸ್‌ ಸೆಲ್‌ ಸಹಯೋಗದಲ್ಲಿ ಜು.27 ಆಯೋಜಿಸಿದ್ದ ‘ಬ್ಯಾಂಕಿಂಗ್, ಹಣಕಾಸು ಮತ್ತು ವಿಮೆಯಲ್ಲಿ ಇತ್ತೀಚಿನ ಪ್ರವೃತ್ತಿಗಳು’ ಕುರಿತ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. 1947ರ ಸಮಯದಲ್ಲಿ ಜನರು ಕೇವಲ ರೋಟಿ, ಕಪಡಾ ಮತ್ತು ಮಕಾನ್‌ (ಅಶನ, ವಸನ, ವಸತಿ)ಗಳ ಬಗ್ಗೆ ಮಾತ್ರ ಗಮನ ಹರಿಸುತ್ತಿದ್ದರು. ಆದರೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜನರ ಬೇಡಿಕೆಗಳು ಹೆಚ್ಚಾಗಿವೆ. ಆರ್ಥಿಕ ವ್ಯವಸ್ಥೆಯನ್ನು ಸರಾಗಗೊಳಿಸುವಲ್ಲಿ ಬ್ಯಾಂಕಿಂಗ್ ಸಂಸ್ಥೆಗಳು ಅನೇಕ ರೀತಿ ಯೋಜನೆಗಳನ್ನು ಮುನ್ನೆಲೆಗೆ ತರುತ್ತಿವೆ. ಆದರೆ ಮಾಹಿತಿಯ ಕೊರತೆಯಿಂದಾಗಿ ಅನೇಕ ರೈತರು, ಅನಕ್ಷರಸ್ಥರು ಹಾಗೂ ಗ್ರಾಮೀಣ ಭಾಗದವರು ಬ್ಯಾಂಕಿಂಗ್ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಅವರು ಹೇಳಿದರು. “ವಿದ್ಯಾರ್ಥಿ ಹಂತದಲ್ಲಿ ಈ ರೀತಿಯ ವಿಚಾರ ಸಂಕಿರಣಗಳ ಮೂಲಕ ಮಾಹಿತಿ ನೀಡುವುದು ಉತ್ತಮ ಆಲೋಚನೆ. ಸಂಸ್ಥೆಯು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವಂತೆ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ವಿದ್ಯಾರ್ಥಿಗಳು ಈ ರೀತಿಯ ಅವಕಾಶಗಳ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು” ಎಂದು ಅವರು ಕರೆ ನೀಡಿದರು. ಮುಖ್ಯ ಅತಿಥಿ, ಕಾಲೇಜಿನ ಹಿರಿಯ ವಿದ್ಯಾರ್ಥಿ, ಅಬುದಬಿಯ ಝಯದ್‌ ಸಂಸ್ಥೆಯ ಮಾಜಿ ಹಣಕಾಸು ನಿಯಂತ್ರಕ ಸಿಎ ಅಬ್ದುಲ್ಲ ಮಾಡುಮೂಲೆ, “ನಮ್ಮ ಸುತ್ತಮುತ್ತಲಿನ ಬೆಳವಣಿಗೆ ಅರಿತುಕೊಂಡು ನಾವು ಅದಕ್ಕೆ ಹೊಂದಿಕೊಳ್ಳಬೇಕು, ಇಲ್ಲವಾದರೆ ನಮ್ಮ ಉಳಿಯುವಿಕೆ ಕಷ್ಟಸಾಧ್ಯ. ಬದಲಾವಣೆಗಳನ್ನು ಗಮನಿಸಿ ವಿಶ್ಲೇಷಿಸಿ ನಂತರ ಅವುಗಳನ್ನು ಮೈಗೂಡಿಸಿಕೊಳ್ಳುವುದು ಯಶಸ್ಸಿನ ಬಹುದೊಡ್ಡ ಮಾರ್ಗ. ನಿರಂತರ ಕಲಿಕೆ ನಮ್ಮದಾಗಲಿ” ಎಂದರು. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಆಗಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ಬೆಳವಣಿಗೆಗಳ ಬಗ್ಗೆ ಬೆಳಕು ಚೆಲ್ಲಿದರು. ಸಂಪನ್ಮೂಲ ವ್ಯಕ್ತಿ, ಮುಂಬೈ ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಸಿಎಂಎ ಡಾ. ಕಿನ್ನರಿ ಥಾಕರ್‌, ನಮ್ಮ ಯಶಸ್ಸಿನ ಮಾನದಂಡ ನಾವು ಸಮಾಜಕ್ಕೆ ಎಷ್ಟರ ಮಟ್ಟಿಗೆ ಕೊಡುಗೆ ನೀಡಬಲ್ಲೆವು ಎಂಬುದರ ಮೇಲೆ ನಿಂತಿದೆ. ಬ್ಯಾಂಕಿಂಗ್ ಸಂಸ್ಥೆಗಳು ಸಮಾಜದ ಏಳಿಗೆಗೆ ಅನಿವಾರ್ಯ ಎಂಬುದನ್ನು ನಾವು ಒಪ್ಪಲೇಬೇಕು. ಬ್ಯಾಂಕಿಂಗ್‌ ಕ್ಷೇತ್ರ ಸೇರಿದಂತೆ ಉಳಿದೆಲ್ಲ ಕ್ಷೇತ್ರಗಳು ಸುಸ್ಥಿರ ಯೋಜನೆಗಳನ್ನು ತಮ್ಮದಾಗಿಸಿಕೊಳ್ಳಬೇಕು” ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, ವಾಣಿಜ್ಯ ಕ್ಷೇತ್ರದ ತಜ್ಞರು ಮತ್ತು ಗ್ರಾಹಕರ ನಡುವೆ ಸೇತುವೆ ಕಟ್ಟುವ ಕೆಲಸವಾಗಬೇಕಿದೆ. ತಂತ್ರಜ್ಞಾನ ಬಳಕೆಯಿಂದ ಬ್ಯಾಂಕಿಂಗ್ ಕ್ಷೇತ್ರಗಳು ಮತ್ತಷ್ಟು ಮುಂದುವರಿದಿವೆ. ಆದರೆ ತಂತ್ರಜ್ಞಾನದ ನ್ಯೂನತೆಯಿಂದ ಎದುರಾಗುವ ಸೈಬರ್‌ ಕ್ರೈಮ್‌ ನಂತಹ ಸವಾಲುಗಳನ್ನು ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಬ್ಯಾಂಕಿಂಗ್ ವಿಚಾರದ ಹೊರತಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಆಯೋಜಿಸಲಾದ ಈ ವಿಚಾರ ಸಂಕಿರಣ ಸೂಕ್ತವಾಗಿದೆ ಎಂದು ಹೇಳಿದರು. ಕಾರ್ಯಕ್ರಮ ಸಂಯೋಜಕರಾದ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಶಕುಂತಲಾ, ಶ್ರೀ ಧ. ಮಂ. ವಾಣಿಜ್ಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥೆ ಡಾ. ಪ್ರಿಯಾ ಕುಮಾರಿ, ಸಂಘಟನಾ ಕಾರ್ಯದರ್ಶಿ, ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕ ಶರಶ್ಚಂದ್ರ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕಿ, ವಾಣಿಜ್ಯ ವಿಭಾಗ ಮುಖ್ಯಸ್ಥೆ ಡಾ. ರತ್ನಾವತಿ ಕೆ. ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಡಾ. ಲಕ್ಷ್ಮೀನಾರಾಯಣ ಕೆ.ಎಸ್‌. ವಂದಿಸಿದರು. ವಿದ್ಯಾರ್ಥಿನಿ ಕ್ಷಿತಿ ಹಾಗೂ ತಂಡದವರು ಪ್ರಾರ್ಥಿಸಿದರೆ, ವಾಣಿಜ್ಯ ಪ್ರಾಧ್ಯಾಪಕಿಯರಾದ ದೀಕ್ಷಿತ ಕುಮಾರಿ ಮತ್ತು ಫಾತಿಮ ಶಫೀರ ಕಾರ್ಯಕ್ರಮ ನಿರ್ವಹಿಸಿದರು.

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Article Image

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ಎನ್.ಸಿ.ಸಿ. ಭೂದಳ ಮತ್ತು ನೌಕಾದಳ ಘಟಕದ ವತಿಯಿಂದ ಇಂದು (ಜು.26) 25ನೇ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿ, "ಈ ದಿನ ಹುತಾತ್ಮರಾದ ಯೋಧರ ತ್ಯಾಗ ಬಲಿದಾನವನ್ನು ನೆನೆದು, ಯೋಧರ ಜೊತೆಗೆ ಅವರ ಕುಟುಂಬವನ್ನೂ ಸ್ಮರಿಸಬೇಕು. ಪ್ರಜ್ಞಾವಂತ ನಾಗರಿಕರಾಗಿ ದೇಶದ ಏಳಿಗೆ, ಏಕತೆ, ಸಾರ್ವಭೌಮತ್ವವನ್ನು ಹೆಚ್ಚಿಸುವ ಯೋಜನೆ ಮತ್ತು ನಿರ್ಧಾರವನ್ನು ಕೈಗೊಳ್ಳಬೇಕಾಗಿದೆ" ಎಂದರು. ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಎನ್.ಸಿ.ಸಿ. ಕೆಡೆಟ್’ಗಳು ಹುತಾತ್ಮ ಯೋಧರಿಗೆ ರೈಫಲ್ ಸೆಲ್ಯೂಟ್ ಮುಖಾಂತರ ಗೌರವ ಸಲ್ಲಿಸಿದರು. ಕೆಡೆಟ್’ಗಳಿಂದ ತಯಾರಿಸಲ್ಪಟ್ಟ ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ಕಾಲೇಜಿನ ಆಡಳಿತ ಕುಲಸಚಿವ ಡಾ. ಶಲೀಫ್ ಎ. ಪಿ., ಪರೀಕ್ಷಾಂಗ ಕುಲಸಚಿವೆ ಪ್ರೊ. ನಂದಾಕುಮಾರಿ, ಅಸೋಸಿಯೇಟ್ ಎನ್.ಸಿ.ಸಿ. ಅಧಿಕಾರಿ (ಎಎನ್ಒ)ಗಳಾದ ಲೆಫ್ಟಿನೆಂಟ್ ಭಾನುಪ್ರಕಾಶ್, ಲೆ. ಶುಭಾ ರಾಣಿ, ಕೇರ್ ಟೇಕಿಂಗ್ ಆಫೀಸರ್ (ಸಿಟಿಒ)ಗಳಾದ ಶೋಭಾ, ಹರೀಶ್ ಶೆಟ್ಟಿ, ಹಿರಿಯ ಎಎನ್ಒ ಲೆಫ್ಟಿನೆಂಟ್ ಕಮಾಂಡರ್ ಡಾ. ಶ್ರೀಧರ್ ಭಟ್, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಕೆಡೆಟ್ ಗಳು ಉಪಸ್ಥಿತರಿದ್ದರು. ಕೆಡೆಟ್ ದೀಪ್ತಿ ಆಚಾರ್ಯ ಪಿ. ಕಾರ್ಯಕ್ರಮ ನಿರೂಪಿಸಿದರು.

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ

Article Image

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ

ದೇಶಪ್ರೇಮ ಎಂದಾಕ್ಷಣ ಸೇನೆ ಸೇರುವುದು ಮಾತ್ರವಲ್ಲ. ದೇಶದ ಅಭ್ಯುದಯಕ್ಕಾಗಿ ಸಲ್ಲಿಸುವ ಪ್ರತೀ ಕಾರ್ಯಕ್ರಮ ದೇಶಪ್ರೇಮವೆನಿಸುತ್ತದೆ ಎಂದು ಪತ್ರಕರ್ತ ಹಾಗೂ ಯುವ ವಾಗ್ಮಿ ಶ್ರೀಕಾಂತ್ ಶೆಟ್ಟಿ ನುಡಿದರು. ಅವರು ಶುಕ್ರವಾರ (ಜು. 26) ಶಿವರಾಮ ಕಾರಂತರ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024-25ನೇ ವರ್ಷದ ಚಟುವಟಿಕೆಗಳು ಹಾಗೂ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಭಾರತದ ಸ್ವಾತಂತ್ರ‍್ಯದ ನಂತರ ಐದು ಪ್ರಮುಖ ಯುದ್ಧಗಳು ನಡೆದಿವೆ. ಪಾಕಿಸ್ತಾನ ನಾಲ್ಕು ಯುದ್ಧಗಳಲ್ಲೂ ನಮ್ಮ ವಿರುದ್ಧ ಗೆಲ್ಲಲಾಗಲಿಲ್ಲ. ಸೈನಿಕರ ಸಾವು ನಮಗೆ ಸ್ವಾಭಾವಿಕ ಸಂಗತಿ ಎಂದೆನಿಸಬಾರದು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರ ಬಲಿದಾನವನ್ನು ಸ್ಮರಿಸಬೇಕು. ಸೈನಿಕರ ನಿಸ್ವಾರ್ಥ ಸೇವೆ ಮತ್ತು ನಿಷ್ಠೆ ಸದಾ ಸ್ಮರಣೀಯ ಎಂದರು. ಕೆಂಗುರಸೆ ಎಂಬ ಯೋಧ ಘಾತಕ್ ಪ್ಲಟೂನ್ ಸೇರಿ ಹುತಾತ್ಮನಾದ ಮೇಲೆ ನಾಗಲ್ಯಾಂಡ್‌ನಲ್ಲಿ ಸೈನ್ಯದ ಬಗ್ಗೆ ಇದ್ದ ನಕಾರಾತ್ಮಕತೆ ಹೋಗಿ ಹೆಚ್ಚು ಹೆಚ್ಚು ಯುವಕರು ಸೇನೆ ಸೇರುವಂತಾದ ಪ್ರಸಂಗವನ್ನು ವಿವರಿಸಿದರು. ನಮ್ಮ ದೇಶದ ಮೇಲೆ ಎಷ್ಟೇ ದಾಳಿಗಳಾದರೂ ನಮ್ಮ ಸಾಂಸ್ಕೃತಿಕ ಹಿನ್ನೆಲೆಯನ್ನು ನಾಶಮಾಡಲು ಸಾಧ್ಯವಾಗಲಿಲ್ಲ. ಕಾರ್ಗಿಲ್‌ಯುದ್ಧ ಪಾಕಿಸ್ತಾನ ನಮ್ಮ ಬೆನ್ನಿಗೆ ಹಾಕಿದ ಚೂರಿ. ಕ್ಯಾ.ವಿಕ್ರಂ ಬಾತ್ರ, ರಾಜೇಶ್ ಅಧಿಕಾರಿ, ಕರ್ನಲ್ ರವೀಂದ್ರನಾಥ್ ಸೇರಿ ಹಲವು ಸೈನಿಕರ ಬಲಿದಾನದ ನಂತರ ನಾವು ಕಾರ್ಗಿಲ್ ಕದನ ಗೆದ್ದೆವು. ಮೊದಲ ಬಾರಿ ಈ ದೇಶದಲ್ಲಿ ಯುದ್ಧದ ನಂತರ ಎಲ್ಲಾ ಹುತಾತ್ಮರ ದೇಹಗಳನ್ನು ಮನೆಗೆ ತಲುಪಿಸುವ ಕೆಲಸ ನಡೆಯಿತು. ಹಾಗೆಯೇ ಅದರ ಮೂಲಕ ಭಾವನಾತ್ಮಕವಾಗಿ ಭಾರತವನ್ನು ಬೇಸೆಯೋ ಕೆಲಸವಾಯಿತು. ಇಂದಿಗೂ ಯುದ್ಧ ನಿಂತಿಲ್ಲ ಆದರೆ ಯುದ್ಧದ ರೂಪ ಬದಲಾಗಿದೆ ಎಂದರು. ಮೂಡುಬಿದಿರೆ ಜೈನ ಪ್ರೌಢಶಾಲೆಯ ನಿವೃತ್ತ ಅಧ್ಯಾಪಕ ಮುನಿರಾಜ ರೆಂಜಾಳ ರಾಷ್ಟ್ರೀಯ ಸೇವಾ ಯೋಜನೆಯ 2024-25ನೇ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ವೃತ್ತಿಯಲ್ಲಿ ನಿವೃತ್ತರಾದ ಪ್ರತಿಯೊಬ್ಬರಿಗೂ ಅವರ ಹಿಂದಿನ ವೃತ್ತಿಯ ಬಗ್ಗೆ ಆಸಕ್ತಿ ಇರುತ್ತದೆ. ನಾನು ಕಳೆದ 40 ವರ್ಷದಿಂದ ಎನ್.ಎಸ್.ಎಸ್. ಸಂಪರ್ಕದಲ್ಲಿದ್ದೇನೆ. ವಿಶ್ವಮಾನವನಾಗಿಸುವ ವೇದಿಕೆ ಯಾವುದಾದರೂ ಇದ್ದರೆ ಅದು ರಾ.ಸೇ.ಯೋ ಎಂದರು. ಒಂದು ಕೆಲಸವನ್ನು ಆರಂಭಿಸಿದ ನಂತರ ಅದಕ್ಕೆ ಪೂರಕವಾದ ಶ್ರಮ ಮತ್ತು ನಿರಂತರತೆ ಅಗತ್ಯ. ಈಗಿನ ಮಕ್ಕಳಲ್ಲಿ ಕಷ್ಟದ ಪರಿಚಯ ಇಲ್ಲ, ಹೊಂದಾಣಿಕೆಯೂ ಇಲ್ಲ. ಶ್ರಮಪಟ್ಟಾಗ ಮಾತ್ರ ಸುಂದರ ಜೀವನವನ್ನು ರೂಪಿಸಿಕೊಳ್ಳುಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್ ಜೀವನದಲ್ಲಿ ಶಿಸ್ತುತನ್ನು ಪಾಲಿಸಬೇಕು. ತರಗತಿ ಹೊರಗಿನ ಶಿಕ್ಷಣ ಅದು ನಿಜವಾದ ಶಿಕ್ಷಣ. ಪ್ರಾಮಾಣಿಕವಾಗಿ ಕೆಲಸ ಮಾಡಿ ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳಿ. ಆಗ ಮಾತ್ರ ಜೀವನದಲ್ಲಿ ಯಶಸ್ಸುನ್ನು ಸಾದಿಸಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಸಂಸ್ಕೃತ ವಿಭಾಗದ ಮುಖ್ಯಸ್ಥ ಅಂಬರೀಶ್ಚಿ ಪ್ಳೂಣಕರ್ ಉಪಸ್ಥಿತರಿದ್ದರು. ರಾಷ್ಟೀಯ ಸೇವಾ ಯೋಜನೆಯ ಸಂಯೋಜಕ ಧರ್ಮೇಂದ್ರ ಕುದ್ರೋಳಿ ಸ್ವಾಗತಿಸಿ, ಗಣಪತಿ ನಾಯಕ್ ವಂದಿಸಿ, ಶಾಲೆಟ್ ಮೋನೀಸ್ ನಿರೂಪಿಸಿದರು.

ಉಜಿರೆ: ಸಾಂಪ್ರದಾಯಿಕ ಔಷಧ ಕುರಿತ ಕಾರ್ಯಾಗಾರ

Article Image

ಉಜಿರೆ: ಸಾಂಪ್ರದಾಯಿಕ ಔಷಧ ಕುರಿತ ಕಾರ್ಯಾಗಾರ

“ಗಿಡಗಳನ್ನು ಸಂರಕ್ಷಿಸುವ ಹೊಣೆಗಾರಿಕೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು” ಎಂದು ನಾಟಿ ವೈದ್ಯ ಪರಿಣತ, ಉಜಿರೆಯ ಧ.ಮಂ. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮಾಜಿ ಸಿಬ್ಬಂದಿ ಸದಾನಂದ ಬಿ. ಮುಂಡಾಜೆ ಹೇಳಿದರು. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಸಸ್ಯಸೌರಭ ಸಂಘ ಮತ್ತು ಇಕೋ ಕ್ಲಬ್ ಇಂದು (ಜು.19) ಆಯೋಜಿಸಿದ್ದ ಸಾಂಪ್ರದಾಯಿಕ ಔಷಧ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ತನ್ನ ಬೇರುಗಳ ಮೂಲಕ ನೀರನ್ನು ಹೀರಿಕೊಂಡು ಹೂ ಹಣ್ಣು ಇವನ್ನೆಲ್ಲ ನೀಡುವ ಯಾವುದೇ ಗಿಡ ಮರ ಬಳ್ಳಿಗಳು ಪ್ರಪಂಚದಲ್ಲಿ ಶ್ರೇಷ್ಠವಾದದ್ದು. ಹಲವಾರು ರೋಗಗಳನ್ನು ನಿವಾರಿಸುವಲ್ಲಿ ಸಸ್ಯಗಳ ಪಾತ್ರ ಬಹಳ ಮುಖ್ಯವಾದಂತದ್ದು. ಅಂತಹ ಗಿಡ ಮರಗಳನ್ನು ಉಳಿಸುವ ಉತ್ಸಾಹ ಅಗತ್ಯ ಎಂದು ಅವರು ಹೇಳಿದರು. ಒಂದು ರೋಗ ಬರಲು ಮನಸ್ಸು ಕಾರಣ. ಆ ರೋಗ ಗುಣವಾಗಲು ಕೂಡ ಮನಸ್ಸೇ ಕಾರಣ. ಹೀಗಾಗಿ ಔಷಧ ಕೊಡುವವನು ಮತ್ತು ತೆಗೆದುಕೊಳ್ಳುವವನ ಮಧ್ಯೆ ನಂಬಿಕೆ ಇದ್ದಾಗ ಮಾತ್ರ ಔಷಧ ಫಲಿಸುತ್ತದೆ ಎಂದು ಅವರು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, “ಪ್ರಕೃತಿಯಲ್ಲಿರುವ ಯಾವುದೇ ಗಿಡಗಳಲ್ಲಿ ಒಂದಲ್ಲ ಒಂದು ಔಷಧೀಯ ಗುಣ ಇದ್ದೇ ಇರುತ್ತದೆ. ಸಸ್ಯಗಳನ್ನು ಪ್ರೀತಿಸಿ, ಅವುಗಳೊಂದಿಗೆ ಮಾತನಾಡಿ. ಅವುಗಳು ಸ್ಪಂದಿಸುವ ಗುಣ ಹೊಂದಿವೆ” ಎಂದರು. ವಿಭಾಗದ ಭಿತ್ತಿಪತ್ರಿಕೆ ‘ಸಸ್ಯಸೌರಭ’ದ ‘ಹರ್ಬಲ್ಸ್ ದ್ಯಾಟ್ ಹೀಲ್’ ಸಂಚಿಕೆ ಅನಾವರಣಗೊಳಿಸಲಾಯಿತು. ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರಥಮ್ ಪ್ರಾರ್ಥಿಸಿದರು. ನಯನ ಕೆ. ಸ್ವಾಗತಿಸಿ, ಲಾವಣ್ಯ ವಂದಿಸಿ, ವೈದೇಹಿ ನಿರೂಪಿಸಿದರು.

ಶಿಷ್ಯವೇತನ: ಅರ್ಜಿ ಆಹ್ವಾನ

Article Image

ಶಿಷ್ಯವೇತನ: ಅರ್ಜಿ ಆಹ್ವಾನ

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೊಮಾ ಮತ್ತು ವೃತ್ತಿಪರ ಪದವಿವರೆಗೆ ರಾಜ್ಯದಲ್ಲಿರುವ ಹಾಗೂ ಸರಕಾರದಿಂದ ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆಗಳಲ್ಲಿ ಕಲಿಯುತ್ತಿರುವ ರಾಜ್ಯದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. 1ನೇ ತರಗತಿಯಿಂದ ಅಂತಿಮ ವರ್ಷದ ಪದವಿ ಹಾಗೂ ಡಿಪ್ಲೊಮಾವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೆ.15 ಹಾಗೂ ವೃತ್ತಿಪರ ಪದವಿ ವಿದ್ಯಾರ್ಥಿಗಳು ಅ.15ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Article Image

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ

ಉಜಿರೆ, ಜು. 23: ಯುವಜನತೆ ಕ್ಷುಲ್ಲಕ ಕಾರಣಗಳಿಗಾಗಿ ಅತಿರೇಕದ ಕ್ರಮಗಳನ್ನು ಕೈಗೊಳ್ಳುವುದು ಬಹಳ ನೋವಿನ ಸಂಗತಿ ಎಂದು ಮಂಗಳೂರು ಉತ್ತರ ವಲಯದ ಸಹಾಯಕ ಪೊಲೀಸ್ ಆಯುಕ್ತ, ಉಜಿರೆ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಮನೋಜ್ ಕುಮಾರ್ ನಾಯಕ್ ಹೇಳಿದರು. ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನಲ್ಲಿ ಇಂದು (ಜು.23) 2024-25ನೇ ಸಾಲಿನ ವಿದ್ಯಾರ್ಥಿ ಸಂಘ(Students' Council 2024-25)ದ ವಿವಿಧ ವಿದ್ಯಾರ್ಥಿ ಚಟುವಟಿಕೆ ವೇದಿಕೆ(Students' Activity Fora)ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಯಶಸ್ವಿಯಾಗಲು ವಿಫಲವಾದ ಕೂಡಲೇ ಎಲ್ಲವೂ ಮುಗಿಯಿತು ಎಂದರ್ಥವಲ್ಲ. ಪ್ರಸ್ತುತ ಯುವಜನತೆ ಪರೀಕ್ಷೆಯಲ್ಲಿ ಅನುತ್ತೀರ್ಣರಾದೆವೆಂದು, ಪೋಷಕರು ಫೋನ್ ಕೊಡಿಸಲಿಲ್ಲ ಎಂಬ ಇತ್ಯಾದಿ ಸಣ್ಣ ಸಣ್ಣ ಕಾರಣಗಳಿಗೆ ಆತ್ಮಹತ್ಯೆಯಂತಹ ಅತಿರೇಕದ ಕ್ರಮಕ್ಕೆ ಮುಂದಾಗುವುದನ್ನು ಕಂಡಾಗ ನೋವಾಗುತ್ತದೆ. ವೈಫಲ್ಯ ಮತ್ತು ಒತ್ತಡವನ್ನು ನಿಭಾಯಿಸಲು ಕಲಿಯಿರಿ” ಎಂದು ಅವರು ಹೇಳಿದರು.“ವೈಫಲ್ಯಗಳನ್ನು ಸ್ವೀಕರಿಸಿ. ಪರಿಹಾರವಿಲ್ಲದ ಸಮಸ್ಯೆಯೇ ಇಲ್ಲ. ಸಮಸ್ಯೆಯಿಂದ ದೂರ ಓಡಬೇಡಿ, ಎದುರಿಸಿ. ಒಂದೋ ಯಶಸ್ಸು ಸಿಗಬಹುದು ಇಲ್ಲವೇ ವಿಫಲವಾದರೆ ಅನುಭವ ದೊರಕಬಹುದು. ಒತ್ತಡದ ಸಂದರ್ಭದಲ್ಲಿಯೇ ನಮ್ಮಿಂದ ಅತ್ಯುತ್ತಮ ಫಲಿತಾಂಶ ಲಭಿಸುತ್ತದೆ. ದೇವರು ಕಷ್ಟದ ಸಂದರ್ಭಗಳನ್ನು ನೀಡುತ್ತಿದ್ದಾನೆಂದರೆ ನಿಮ್ಮಿಂದ ಏನೋ ಸಾಧನೆ ಆಗುವುದರಲ್ಲಿದೆ ಎಂದರ್ಥ” ಎಂದರು. ಯುವಜನತೆ ಮಾದಕ ದ್ರವ್ಯಗಳ ದಾಸರಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಅವರು, “ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೆ ಕಾಲೇಜಿಗೆ, ಹುಟ್ಟಿದ ಊರಿಗೆ, ರಾಜ್ಯಕ್ಕೆ ಮತ್ತು ದೇಶಕ್ಕೆ ಒಳ್ಳೆಯ ಪ್ರಜೆಗಳಾಗಿ, ಪೋಷಕರಿಗೆ ಉತ್ತಮ ಮಕ್ಕಳಾಗಿ. ದ್ವಿಚಕ್ರ ವಾಹನ ಓಡಿಸುವಾಗ ತಪ್ಪದೆ ಹೆಲ್ಮೆಟ್ ಧರಿಸಿ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಠಿಣ ಪರಿಶ್ರಮ ಮತ್ತು ಶಿಸ್ತು ಇದ್ದಾಗ ಜೀವನದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ. ವಿದ್ಯಾರ್ಥಿಗಳಲ್ಲಿ ಪ್ರತಿಭೆ ಎಷ್ಟು ಮುಖ್ಯವೋ ಶಿಸ್ತು ಸಹ ಅಷ್ಟೇ ಮುಖ್ಯ. ಎಸ್.ಡಿ.ಎಂ. ಕಾಲೇಜಿನಲ್ಲಿ ಪಠ್ಯ ಚಟುವಟಿಕೆಗಳಿಗಷ್ಟೇ ಅಲ್ಲದೆ, ಮೌಲ್ಯ, ಕೌಶಲವೃದ್ಧಿಗೆ ಹೇರಳ ಅವಕಾಶವಿದೆ. ಸಾವಿರಾರು ಕನಸು ಹೊತ್ತು ಇಲ್ಲಿ ಬಂದಿದ್ದೀರಿ, ಒಳ್ಳೆಯ ಜಾಗಕ್ಕೆ ಬಂದಿದ್ದೀರಿ. ನಿಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಪ್ರಯತ್ನ ಮುಂದುವರಿಸಿ” ಎಂದು ಅವರು ಸಲಹೆ ನೀಡಿದರು. ಮುಖ್ಯ ಅತಿಥಿ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿದರು. ನಾಯಕತ್ವವೆಂಬುದು ರಾಜಕೀಯಕ್ಕೆ ಸೀಮಿತವಲ್ಲ. ಜೀವನದಲ್ಲಿ ನಾಯಕತ್ವ ಮುಖ್ಯ. ಶಿಕ್ಷಣದ ಸಂದರ್ಭದಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘಗಳು ನೆರವಾಗುತ್ತವೆ ಎಂದು ಅವರು ತಿಳಿಸಿದರು. “ಒಬ್ಬ ಗುರುವಿಗೆ ಖುಷಿ ಸಿಗುವುದು ತನ್ನ ವಿದ್ಯಾರ್ಥಿ ಶ್ರೇಷ್ಠ ಸಾಧನೆ ಮಾಡಿದಾಗ. ನಮ್ಮ ಸಂಸ್ಥೆಯಲ್ಲಿ ಕಲಿತ ಮನೋಜ್ ಕುಮಾರ್ ನಾಯಕ್ ಶಿಸ್ತು, ಪರಿಶ್ರಮ ಹಾಗೂ ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿ ಶ್ರೇಷ್ಠ ಸಾಧನೆ ಮಾಡಿದ್ದಾರೆ” ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದರು. ವಿದ್ಯಾರ್ಥಿ ಸಂಘಗಳಿಂದ ವಿದ್ಯಾರ್ಥಿಗಳು ವಿವಿಧ ರಾಜಕೀಯ ಪಕ್ಷಗಳ ಸಿದ್ಧಾಂತಗಳಿಂದ ಪ್ರೇರಿತರಾಗಿ ಪರಸ್ಪರ ಹೊಡೆದಾಟ, ವೈಷಮ್ಯದಿಂದ ಇರುವುದರ ಬದಲು ಪರಸ್ಪರ ಪ್ರೀತಿ, ವಿಶ್ವಾಸದಿಂದ ಇದ್ದು, ವ್ಯಕ್ತಿತ್ವ ವಿಕಸನ ಹೊಂದಬೇಕು ಎಂಬ ಉದ್ದೇಶದಿಂದ ಅಂದಿನ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ಅವರ ಪರಿಕಲ್ಪನೆಯಂತೆ ವಿಭಿನ್ನ ರೀತಿಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿ ಸಂಘ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ವಿವರಿಸಿದರು. ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ 'ಚಿಗುರು' ಹಾಗೂ ಉದ್ಘಾಟನಾ ಸಮಾರಂಭದ ಚಿತ್ರಣಗಳನ್ನೊಳಗೊಂಡ 'ಚಿಗುರು' ಭಿತ್ತಿಪತ್ರಿಕೆ ಬಿಡುಗಡೆಗೊಂಡಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೇಯಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಜ್ಞಾನ ಸಂಘದ‌ ಅಧ್ಯಕ್ಷ, ತೃತೀಯ ಬಿಸಿಎ ವಿದ್ಯಾರ್ಥಿ ಸುದೇಶ್ ಸ್ವಾಗತಿಸಿದರು. ವೈದೇಹಿ ಮತ್ತು ತಂಡದವರು ಪ್ರಾರ್ಥಿಸಿದರು. ಧರಿತ್ರಿ ಭಿಡೆ ಅತಿಥಿ ಪರಿಚಯ ನೀಡಿದರು. ವೀಕ್ಷಾ ವಂದಿಸಿದರು. ಮಾನಸ ಅಗ್ನಿಹೋತ್ರಿ ಮತ್ತು ರುಚಿರಾ ನಿರೂಪಿಸಿದರು.

First Previous

Showing 10 of 15 pages

Next Last