Article Image

ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Article Image

ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಶಿಕ್ಷಣ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಏ.22 ಕೊನೆ ದಿನವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡುವ ಉದ್ದೇಶಕ್ಕಾಗಿ ಅರ್ಜಿ ವಿಸ್ತರಣೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಇಂದಿನಿಂದ ದ .ಕ. ಜಿಲ್ಲೆಯಾದ್ಯಂತ ಕಾಲು ಬಾಯಿ ಜ್ವರ ಲಸಿಕೆ ಅಭಿಯಾನ

Article Image

ಇಂದಿನಿಂದ ದ .ಕ. ಜಿಲ್ಲೆಯಾದ್ಯಂತ ಕಾಲು ಬಾಯಿ ಜ್ವರ ಲಸಿಕೆ ಅಭಿಯಾನ

ಮಂಗಳೂರು: ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ದ.ಕ. ಜಿಲ್ಲೆಯಾದ್ಯಂತ ಎ. 1ರಿಂದ 30ರ ವರೆಗೆ ನಡೆಯಲಿದೆ. ಪ್ರತಿ ಬಾರಿಯಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕೆಎಂಎಫ್‌ನ ಲಸಿಕೆದಾರರು ಪ್ರತೀ ಮನೆ ಮನೆಗೆ ತೆರಳಿ ರೈತರ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ಕಾಲು ಬಾಯಿ ಜ್ವರ ರೋಗವು ವೈರಸ್‌ನಿಂದ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದನ್ನು ತಡೆಗಟ್ಟಲು ಲಸಿಕೆ ನೀಡುವುದೊಂದೇ ಪರಿಣಾಮಕಾರಿಯಾದ ವಿಧಾನವಾಗಿದೆ. ಈ ಹಿಂದೆ ರೈತರು ತಮ್ಮ ಜಾನುವಾರುಗಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಪ್ರತಿ ಸುತ್ತಿನಲ್ಲಿ ಲಸಿಕೆ ಹಾಕುವುದು ಅವಶ್ಯವಾಗಿದೆ ಎಂದು ಪಶುಪಾಲನ ಇಲಾಖೆಯ ಉಪನಿರ್ದೇಶಕ ಡಾ| ಅರುಣ್ ಕುಮಾರ್ ಶೆಟ್ಟಿ ಎನ್. ತಿಳಿಸಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 2,50,569 ದನ, ಹಾಗೂ 1,832 ಎಮ್ಮೆ ಒಟ್ಟು 2,52,401 ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಿಸಲು ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸನ್ನದ್ಧವಾಗಿದ್ದು, ರೈತರು ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮೂಲಕ ನಿಗದಿತ ದಿನದಂದು ಜಾನುವಾರುಗಳನ್ನು ಮನೆಯಲ್ಲಿ ಕಟ್ಟಿ ಹಾಕಿ, ಲಸಿಕೆ ಹಾಕಲು ಬರುವ ಸಿಬ್ಬಂದಿಯೊಡನೆ ಸಹಕರಿಸಬೇಕು ಎಂದು ಹೇಳಿದ್ದಾರೆ.

ಹೊಸದಿಲ್ಲಿ: ಪಿಎಚ್‌ಡಿ ಪ್ರವೇಶ ಸುಗಮ

Article Image

ಹೊಸದಿಲ್ಲಿ: ಪಿಎಚ್‌ಡಿ ಪ್ರವೇಶ ಸುಗಮ

ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪಿಎಚ್‌ಡಿ ಪ್ರವೇಶಕ್ಕೆ ಪ್ರತ್ಯೇಕ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಗೊಂದಲ ಹಾಗೂ ಇದರಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಮಾನಸಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಯುಜಿಸಿ ಹೊಸ ಉಪಕ್ರಮಕ್ಕೆ ಮುಂದಾಗಿದೆ. ಪಿಎಚ್‌ಡಿ ಪ್ರವೇಶಕ್ಕೆ ಇನ್ನು ಮುಂದೆ 'ಎನ್‌ಇಟಿ' ಅಂಕಗಳನ್ನೇ ಪರಿಗಣಿಸಲಾಗುತ್ತದೆ. ಈ ಸಂಬಂಧ ಯುಜಿಸಿ ಗುರುವಾರ ಅಧಿಸೂಚನೆ ಹೊರಡಿಸಿದೆ. 2024-25ನೇ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಅನ್ವಯವಾಗಲಿದೆ. “2020ರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಸಾರವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ'' ಎಂದು ಯುಜಿಸಿ ಮುಖ್ಯಸ್ಥ ಎಂ. ಜಗದೀಶ್ ಕುಮಾರ್ ತಿಳಿಸಿದ್ದಾರೆ.

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Article Image

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರ ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ನೀಡಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ. ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು : 1. ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. 2. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು. 3. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. 4. ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. 5. ನೀವು https://ahara.kar.nic.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು: 1. ಮತದಾರರ ಗುರುತಿನ ಚೀಟಿ, 2. ವಯಸ್ಸಿನ ಪ್ರಮಾಣಪತ್ರ, 3. ಆಧಾರ್ ಕಾರ್ಡ್, 4.ಚಾಲನಾ ಪರವಾನಿಗೆ, 5. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, 6. ಮೊಬೈಲ್ ನಂಬರ್, 7.ಸ್ವಯಂ ಘೋಷಿತ ಪ್ರಮಾಣಪತ್ರ.

ಮಾ. 31ರ ಭಾನುವಾರ ಬ್ಯಾಂಕ್‌ಗೆ ಇಲ್ಲ ರಜೆ

Article Image

ಮಾ. 31ರ ಭಾನುವಾರ ಬ್ಯಾಂಕ್‌ಗೆ ಇಲ್ಲ ರಜೆ

ಹೊಸದಿಲ್ಲಿ: ಮಾರ್ಚ್ 31ರ ಭಾನುವಾರ ದೇಶದ ಪ್ರಮುಖ ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಬ್ಯಾಂಕ್ ವ್ಯವಹಾರಗಳನ್ನು ಮಾಡಬಹುದಾಗಿದೆ. ಸರಕಾರದ ವಹಿವಾಟುಗಳನ್ನು ನಿರ್ವಹಿಸುತ್ತಿರುವ ಎಲ್ಲಾ ಏಜೆನ್ಸಿ ಬ್ಯಾಂಕುಗಳು ಆರ್ಥಿಕ ವರ್ಷದ ಕೊನೆ ದಿನ (ಮಾ.31) ಕಾರ್ಯನಿರ್ವಹಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ. ಮಾ.31ರಂದು ಸೇವೆ ನೀಡಲಿರುವ ಬ್ಯಾಂಕ್‌ಗಳ ಮಾಹಿತಿ ಇಲ್ಲಿದೆ. ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯುಸಿಒ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ. ಖಾಸಗಿ ವಲಯದ ಬ್ಯಾಂಕ್‌ಗಳು: ಎಕ್ಸಿಸ್ ಬ್ಯಾಂಕ್, ಸಿಟಿ ಯೂನಿಯನ್ ಬ್ಯಾಂಕ್, ಡಿಸಿಬಿ ಬ್ಯಾಂಕ್, ಫೆಡರಲ್ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಐಡಿಬಿಐ ಬ್ಯಾಂಕ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್, ಕರ್ಣಾಟಕ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಆರ್‌ಬಿಎಲ್ ಬ್ಯಾಂಕ್, ಸೌತ್ ಇಂಡಿಯನ್ ಬ್ಯಾಂಕ್, ಯೆಸ್ ಬ್ಯಾಂಕ್, ಧನಲಕ್ಷ್ಮಿ ಬ್ಯಾಂಕ್, ಬಂಧನ್ ಬ್ಯಾಂಕ್, ಸಿಎಸ್‌ಬಿ ಬ್ಯಾಂಕ್.

247 ಪಿಡಿಒ ಹುದ್ದೆಗಳಿಗೆ ಅರ್ಜಿ ಆಹ್ವಾನ

Article Image

247 ಪಿಡಿಒ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ 247 ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್ ಕರ್ನಾಟಕ ವೃಂದದ 97, ಉಳಿಕೆ ಮೂಲ ವೃಂದದ 150 ಸೇರಿ ಒಟ್ಟು 247 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ಏ.15ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅರ್ಜಿ ಸಲ್ಲಿಸಲು ಮೇ 15 ಕಡೆಯ ದಿನವಾಗಿದೆ. ಪಿಡಿಒ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿಯನ್ನು ನಿಗದಿಪಡಿಸಲಾಗಿದೆ. ಗ್ರೂಪ್ 'ಸಿ' ವೃಂದದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಯ ವೇತನ ಶ್ರೇಣಿ 37,900 ರೂ.ಗಳಿಂದ 70,850 ರೂ. ನಿಗದಿಪಡಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಕನಿಷ್ಠ ವಯೋಮಿತಿ 18 ವರ್ಷ. ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ, 2ಬಿ, 3ಎ, 3ಬಿಗೆ 38 ವರ್ಷ ಹಾಗೂ ಪ.ಜಾ, ಪ.ಪಂ/ಪ್ರವರ್ಗ-1ಕ್ಕೆ 40 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಹೆಚ್ಚಿನ ವಿವರಗಳನ್ನು ಲೋಕಸೇವಾ ಆಯೋಗದ ವೆಬ್‌ಸೈಟ್ ನಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಮಸ್ಯೆ ಎದುರಾದರಲ್ಲಿ ಸಹಾಯವಾಣಿ ಸಂಖ್ಯೆ 080-30574957, 30574901 ನ್ನು ಸಂಪರ್ಕಿಸಬಹುದಾಗಿದೆ ಎಂದು ಆಯೋಗದ ಕಾರ್ಯದರ್ಶಿ ಡಾ. ಕೆ. ರಾಕೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್‌ಐ ಹುದ್ದೆ: ಅರ್ಜಿ ಆಹ್ವಾನ

Article Image

ಎಸ್‌ಐ ಹುದ್ದೆ: ಅರ್ಜಿ ಆಹ್ವಾನ

ಉಡುಪಿ/ಮಂಗಳೂರು, ಮಾ. 19: ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರದ ನೇಮಕಾತಿ ಪ್ರಾಧಿಕಾರವು ದಿಲ್ಲಿ ಪೊಲೀಸ್ ಮತ್ತು ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ www.ssckkr.kar.nic.in ಮತ್ತು https://ssc. gov.in ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಿದೆ. ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾ. 29ರೊಳಗೆ ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ 080-25502520 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಮಾದರಿ ಉತ್ತರ ಪತ್ರಿಕೆ ಬಿಡುಗಡೆ

Article Image

ದ್ವಿತೀಯ ಪಿಯುಸಿ ಮಾದರಿ ಉತ್ತರ ಪತ್ರಿಕೆ ಬಿಡುಗಡೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾ.1ರಿಂದ 18ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ವಿಷಯವಾರು ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು https://kseab.karnataka.gov.in/english ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾ.20ರಿಂದ 22ರವರೆಗೆ ನಡೆಯಲಿರುವ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ. ದ್ವಂದ್ವಾರ್ಥ ಬರುವ ಪ್ರಶ್ನೆ, ಅಪೂರ್ಣ ಪ್ರಶ್ನೆ, ಪಠ್ಯಕ್ರಮದಲ್ಲಿ ಇಲ್ಲದೇ ಇರುವುದು, ಕನ್ನಡ ಮತ್ತು ಇಂಗ್ಲಿಷ್ ಆವೃತ್ತಿಯಲ್ಲಿ ಬೇರೆ ಬೇರೆ ಅರ್ಥ ಬರುವಂಥದ್ದು, ಒಂದಕ್ಕಿಂತ ಹೆಚ್ಚು ಆಯ್ಕೆಗಳು ಸರಿ ಇರುವ ಬಹು ಆಯ್ಕೆ ಪ್ರಶ್ನೆಗಳಿದ್ದಲ್ಲಿ ಆಕ್ಷೇಪಣೆಗೆ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ಮಾ.19ರಿಂದ 21ರವೆಗೆ ಅವಕಾಶ ಕಲ್ಪಿಸಿದೆ. ಬಳಿಕ ಬರುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಧರ್ಮಸ್ಥಳ ಸಿರಿ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ಸನ್ಮಾನ

Article Image

ಧರ್ಮಸ್ಥಳ ಸಿರಿ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ಸನ್ಮಾನ

ಉಜಿರೆ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ ಅವರಿಗೆ ಅಭಿನಂದನಾ ಕಾರ್ಯಕ್ರಮ ಸಿರಿ ಕೇಂದ್ರ ಕಚೇರಿಯಲ್ಲಿ ಜರುಗಿತು. ಸಿರಿ ಬ್ರ್ಯಾಂಡ್ ರಾಯಭಾರಿ, ಚಲನಚಿತ್ರ ನಟ ರಮೇಶ್ ಅರವಿಂದ್ ಅಭಿನಂದಿಸಿ ಮಾತನಾಡಿ, “ಖಾವಂದರ ಆದರ್ಶ ತತ್ವವನ್ನು ಮೈಗೂಡಿಸಿಕೊಂಡಿರುವ ಜನಾರ್ದನ್ ಅವರು ಸದಾ ಕ್ರಿಯಾಶೀಲರಾಗಿದ್ದಾರೆ. ಇಂತಹ ಸಜ್ಜನಿಕೆ, ಸಹೃದಯವನ್ನು ಹೊಂದಿರುವ ವ್ಯಕ್ತಿ ಸಿರಿ ಸಂಸ್ಥೆಯ ಎಂಡಿಯಾಗಿರುವುದು ನಮ್ಮೆಲ್ಲರ ಸೌಭಾಗ್ಯ'' ಎಂದರು. ಕೊಡಗು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಅಶೋಕ್ ಅಲೂರು ಮತ್ತು ಡಾಕ್ಟರೇಟ್ ಪದವಿ ಪುರಸ್ಕೃತ ಡಾ. ರೂಪಾ ಅಶೋಕ್ ಅಲೂರು ದಂಪತಿ ಉಪಸ್ಥಿತರಿದ್ದರು. ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ರಾಜೇಶ್ ಪೈ, ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ ಮೋಗರಾಜ್ ಉಪಸ್ಥಿತರಿದ್ದರು. ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕ ಪ್ರಸನ್ನ ಸ್ವಾಗತಿಸಿದರು. ಜೀವನ್ ಕುಮಾರ್ ನಿರೂಪಿಸಿದರು.

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಿಗೆ ಸನ್ಮಾನ

Article Image

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಿಗೆ ಸನ್ಮಾನ

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೆ. ಜಯಕೀರ್ತಿ ಜೈನ್ ಅವರು ಸರಕಾರಿ ಸೇವೆಯಿಂದ ನಿವೃತ್ತಿಯಾಗಿದ್ದು, ಸಹಕಾರಿ ಸಂಘದ ವತಿಯಿಂದ ಶನಿವಾರ ಸನ್ಮಾನಿಸಲಾಯಿತು. ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಎಸ್. ಹೂಗಾರ್ ಅಧ್ಯಕ್ಷತೆ ವಹಿಸಿದ್ದರು. ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ತಾಲೂಕು ಪಂಚಾಯಿತಿ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಸಿ. ಆರ್. ನರೇಂದ್ರ ಕುಮಾರ್ ಮಂಗಳೂರು, ಉದ್ಯಮಿ ನಾಣ್ಯಪ್ಪ ಪೂಜಾರಿ, ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ. ಚಂದ್ರಕಾಂತ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಕಾನೂನು ಸಲಹೆಗಾಲ ಶಶಿಕಿರಣ್ ಜೈನ್, ಪಶು ಸಂಗೋಪನಾ ಇಲಾಖೆಯ ಮುಖ್ಯ ಆಡಳಿತ ಪಶು ವೈದ್ಯಾಧಿಕಾರಿ ಡಾ.ರವಿ ಕುಮಾರ್ ಉಪಸ್ಥಿತರಿದ್ದರು. ನಿತ್ಯ ನಿಧಿ ಠೇವಣಿ ಸಂಗ್ರಾಹಕರು ಹಾಗೂ ಸಂಘ ಸಂಸ್ಥೆಗಳಿಂದ ಅಭಿನಂದನೆ ನಡೆಯಿತು. ನಿರ್ದೇಶಕರಾದ ಜಯರಾಜ್ ಜೈನ್, ಅಬ್ದುಲ್ ರಝಾಕ್, ಆರತಿ, ವಾರಿಜಾ ಕೆ., ಪ್ರಶಾಂತ್ ಕುಮಾರ್, ಪರಮೇಶ್ ಟಿ., ರತ್ನಾವತಿ, ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ವತ್ಸಲಾ ಜ್ಯೋತಿ ರಾಜ್, ಶಾಖಾ ಪ್ರಬಂಧಕ ಅತಿಶಯ್ ಜೈನ್, ವಿಶಾಲಾ, ನ್ಯಾಯವಾದಿ ಶಿವಯ್ಯ, ಸಾಲ ವಸೂಲಾತಿಗಾರ ನಿರ್ಮಲ್ ಕುಮಾರ್ ಜೈನ್, ಸಲಹೆಗಾರ ವಸಂತ ಸುವರ್ಣ ಭಾಗವಹಿಸಿದ್ದರು. ಚಂದ್ರಶೇಖರ ಸ್ವಾಗತಿಸಿದರು. ನಿರ್ದೇಶಕಿ ಹೇಮಲತಾ ವಂದಿಸಿದರು. ಶಿಕ್ಷಣ ಇಲಾಖೆಯ ಸಿಆರ್‌ಪಿ ರಾಜೇಶ್ ನಿರೂಪಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಬೆಂಗಳೂರಿನ ಸೆಲ್ಕೊ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಮಹಿಳಾ

Article Image

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಬೆಂಗಳೂರಿನ ಸೆಲ್ಕೊ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಮಹಿಳಾ

ಧರ್ಮಸ್ಥಳ, ಮಾ.16: ಮಹಿಳೆಯರು ಮನೆ ಮತ್ತು ಮನ ಬೆಳಗುವ ಸೂರ್ಯನಂತೆ ಸದಾ ಪ್ರಕಾಶಮಾನವಾಗಿರುತ್ತಾರೆ. ಮಹಿಳೆಯರು ಮನಸ್ಸು ಮಾಡಿದರೆ ಏನೂ ಮಾಡಬಲ್ಲರು. ಅವರ ಶ್ರಮದ ಫಲ ಎಲ್ಲರಿಗೂ ಹಂಚಿ ಹೋಗುತ್ತದೆ. ಮಹಿಳೆಯರು ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದು ಸ್ವ-ಉದ್ಯೋಗದಿಂದ ಮಹಿಳೆಯರ ಆತ್ಮ, ವಿಶ್ವಾಸ, ಗೌರವ ಹೆಚ್ಚಾಗುತ್ತದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು. ಅವರು ಶನಿವಾರ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಬೆಂಗಳೂರಿನ ಸೆಲ್ಕೊ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಮಹಿಳಾ ಉದ್ಯಮಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಸೂಕ್ಷ್ಮಮತಿಗಳಾಗಿದ್ದು ಸಂಸಾರ, ವ್ಯವಹಾರ ಮತ್ತು ಸ್ವ-ಉದ್ಯೋಗವನ್ನು ಜಾಣ್ಮೆಯಿಂದ ಹಾಗೂ ಸಮನ್ವಯದಿಂದ ನಿಭಾಯಿಸಿ ತಮಗೆ ಸಿಗುವ ಅವಕಾಶದ ಸದುಪಯೋಗ ಪಡೆದು ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗುತ್ತಾರೆ. ಮಹಿಳೆಯರನ್ನು ಎಲ್ಲರೂ ನಂಬುತ್ತಾರೆ. ಬಾಲ್ಯ ಮತ್ತು ವೃದ್ದಾಪ್ಯದಲ್ಲಿ ಎಲ್ಲರೂ ಪರಾವಲಂಬಿಗಳಾಗುತ್ತಾರೆ. ಆದುದರಿಂದ ಯೌವನದಲ್ಲಿ ಪರಿಶ್ರಮಪಟ್ಟು ಸಂಪಾದನೆ ಮಾಡಬೇಕು. ಮಹಿಳೆಯರನ್ನು ಮದುವೆಗಾಗಿ ಬೆಳೆಸದೆ, ಉತ್ತಮ ಶಿಕ್ಷಣ, ಉದ್ಯೋಗ ಮತ್ತು ಸಂಸ್ಕಾರ ನೀಡಿ ಸಾರ್ಥಕ, ಸ್ವಾವಲಂಬಿ ಜೀವನಕ್ಕಾಗಿ ಬೆಳೆಸಬೇಕು ಎಂದು ಹೇಮಾವತಿ ವೀ. ಹೆಗ್ಗಡೆಯವರು ಸಲಹೆ ನೀಡಿದರು. ಸ್ವ-ಸಹಾಯ ಸಂಘಗಳು ಹಾಗೂ ಸೌರಶಕ್ತಿ ಬಳಕೆಯಲ್ಲಿಯೂ ಮಹಿಳೆಯರ ಸೇವೆ-ಸಾಧನೆಯನ್ನು ಅವರು ಶ್ಲಾಘಿಸಿ, ಅಭಿನಂದಿಸಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಸೌರಶಕ್ತಿ ಅಪಾರ ಶಕ್ತಿಯ ಮೂಲವಾಗಿದ್ದು ಎಲ್ಲರೂ ಪ್ರಯೋಗಶೀಲರಾಗಿ, ಸಂಶೋಧಕರಾಗಿ ಹೊಸ ಆವಿಷ್ಕಾರಗಳನ್ನು ಮಾಡಿ ಸೌರಶಕ್ತಿಯ ಸದುಪಯೋಗ ಮಾಡಬೇಕು. ಗ್ರಾಮೀಣ ಪ್ರದೇಶಗಳ ಜನರು ಕೂಡಾ ಅನೇಕ ಹೊಸ ಪ್ರಯೋಗಗಳನ್ನು ಮಾಡಿ ಯಶಸ್ವಿಯಾಗಿದ್ದಾರೆ ಎಂದು ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದರು. ಯಶಸ್ವಿ ಮಹಿಳಾ ಉದ್ಯಮಿಗಳ ಪರವಾಗಿ ಹುಬ್ಬಳ್ಳಿಯ ರೂಪಾ ರೆಡ್ಡಿ ಮತ್ತು ಬೆಳಗಾವಿಯ ಪ್ರಮೋದ್ ಮೋದಿ ತಮ್ಮ ಸಾಧನೆಯ ಅನುಭವವನ್ನು ಹಂಚಿಕೊಂಡರು. ಸ್ವಾಮಿವಿವೇಕಾನಂದ ಯುವಚಳವಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸವಿತಾ ಸುಳುಗೋಡು ಮಾತನಾಡಿ, ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಸಬಲೀಕರಣಗೊಂಡಾಗ ಮಾತ್ರ ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ. ಪ್ರಸ್ತುತ 1000 ಪುರುಷರಿದ್ದಲ್ಲಿ 914 ಮಹಿಳೆಯರು ಮಾತ್ರ ಇದ್ದಾರೆ. ಹೆಣ್ಣುಭ್ರೂಣಹತ್ಯೆ ತಡೆದು ಲಿಂಗತಾರತಮ್ಯ ನಿವಾರಣೆಯಾಗಬೇಕು ಎಂದು ಅವರು ಸಲಹೆ ನೀಡಿದರು. ಉದ್ಘಾಟಕರಾದ ಹೇಮಾವತಿ ವೀ. ಹೆಗ್ಗಡೆಯವರ ಭಾಷಣದ ಮಾಹಿತಿ, ಮಾರ್ಗದರ್ಶನದ ಬಗ್ಗೆ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ ಸೆಲ್ಕೊ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್ ಹಂದೆ, ಇತರ ಭಾಷೆಗಳಿಗೂ ಅದನ್ನು ಅನುವಾದ ಮಾಡಿ ಪ್ರಕಟಿಸುವುದಾಗಿ ಭರವಸೆ ನೀಡಿದರು. ಈಗ ಓದುವ ಹವ್ಯಾಸ ಕಡಿಮೆ ಇರುವುದರಿಂದ ಭಾಷಣದ ವೀಡಿಯೊ ಬುಕ್ ತಯಾರಿಸುವಂತೆ ಅವರು ಸಲಹೆ ನೀಡಿದರು. ಮುಂದಿನ ವರ್ಷ ಸೌರಶಕ್ತಿ ಬಳಕೆ ಬಗ್ಗೆ ಜಾಗತಿಕ ಸಮ್ಮೇಳನವನ್ನು ಧರ್ಮಸ್ಥಳದಲ್ಲಿ ಆಯೋಜಿಸುವುದಾಗಿ ಅವರು ಭರವಸೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್‌ಕುಮಾರ್, ಎಸ್.ಎಸ್. ಉಪಸ್ಥಿತರಿದ್ದರು. ಸೆಲ್ಕೊ ಸೋಲಾರ್ ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಮೋಹನ್ ಭಾಸ್ಕರ ಹೆಗಡೆ ಸ್ವಾಗತಿಸಿದರು. ಸೌಮ್ಯ ಧನ್ಯವಾದವಿತ್ತರು. ಶ್ರೀನಿವಾಸ ಪೂಜಾರಿ, ಗುರುಪ್ರಸಾದ್ ಮತ್ತು ಪ್ರಸನ್ನ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.

ಆಳ್ವಾಸ್ ವಿದ್ಯಾರ್ಥಿ ವೇತನಕ್ಕೆ ಪ್ರವೇಶ ಪರೀಕ್ಷೆ

Article Image

ಆಳ್ವಾಸ್ ವಿದ್ಯಾರ್ಥಿ ವೇತನಕ್ಕೆ ಪ್ರವೇಶ ಪರೀಕ್ಷೆ

ಮಂಗಳೂರು, ಮಾ. 15: ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಎರಡು ವರ್ಷಗಳಿಗೆ 10 ಕೋ.ರೂ. ಗಳಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ.ಮೋಹನ್ ಆಳ್ವ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಎಸೆಸೆಲ್ಸಿಯಲ್ಲಿ ಸಿಬಿಎಸ್‌ಸಿ, ಐಸಿಎಸ್‌ಇ ಹಾಗೂ ರಾಜ್ಯ ಪಠ್ಯಕ್ರಮ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ಬರೆಯಬಹುದು ಎಂದರು. ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು 100 ನಿಮಿಷಗಳ ಪರೀಕ್ಷೆಯು ಮಾ. 31ರಂದು ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಹಾಗೂ ಎ. 14ರಂದು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಮೂಡುಬಿದಿರೆಯ ವಿದ್ಯಾಗಿರಿ ಸುಂದರಿ ಆಳ್ವ ಆವರಣದ ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಮಾಧ್ಯಮದಲ್ಲಿ ಪ್ರಶ್ನೆಪತ್ರಿಕೆ ಇರಲಿದೆ. ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾ. 28 ಕೊನೆಯ ದಿನಾಂಕವಾಗಿದ್ದು, ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಎ. 10ರ ವರೆಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. https:// scholarship.Alvas.org/PUC/login. php ಮೂಲಕ ಅರ್ಜಿ ಸಲ್ಲಿಸಬಹುದು ಎಂದರು. ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳು ದೇಶದಲ್ಲೇ ಅತ್ಯುತ್ತಮ ಹಾಗೂ ಅನನ್ಯ ಮಾದರಿಯ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿಪೂರ್ವ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ ಎಂದರು. ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜತೆಯಲ್ಲಿ ಪ್ರತ್ಯೇಕವಾಗಿ ಪ್ರತೀ ವರ್ಷದಂತೆ ಎಸೆಸೆಲ್ಸಿ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯುತ್ತವೆ. ಮಕ್ಕಳಿಗೆ ಅರ್ಹತೆಯ ಆಧಾರದಲ್ಲಿ ಅತ್ಯುನ್ನತ ಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಆಶಯದೊಂದಿಗೆ ಈ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

ಇಂದಿನಿಂದ ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವರ್ಷಾವಧಿ ಜಾತ್ರೆ

Article Image

ಇಂದಿನಿಂದ ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವರ್ಷಾವಧಿ ಜಾತ್ರೆ

ಬೆಳ್ತಂಗಡಿ: ಪಡ್ಯಾರಬೆಟ್ಟ ಪೆರಿಂಜೆಯ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೆಯು ಇಂದಿನಿಂದ ಪ್ರಾರಂಭಗೊಂಡು 19ರವರೆಗೆ ನಡೆಯಲಿದೆ. ಇಂದು ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ಪಡ್ಯೋಡಿ ಗುತ್ತಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಆಗಮನ, ಧ್ವಜಾರೋಹಣ, ಬಲಿ, ಚೆಂಡು ನಡೆಯಲಿದೆ. ಮಾ.15ರಂದು ಭೂತಬಲಿ ಉತ್ಸವ, ಮಾ.16ರಂದು ಅಂಬೋಡಿ, ಬಲಿ, ಹೂವಿನ ಪೂಜೆ, ರಥಾರೋಹಣ ನಡೆಯಲಿದೆ. ಮಾ.17ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ 12ರಿಂದ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ, 1.30 ರಿಂದ ಮಹಾ ಅನ್ನಸಂತರ್ಪಣೆ, ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ಜರುಗಲಿದೆ. ಮಾ.18ರಂದು ಧ್ವಜಾವರೋಹಣ, ಸಂಪ್ರೋಕ್ಷಣೆ,ಪಡ್ಯೋಡಿಗುತ್ತಿಗೆ ಭಂಡಾರ ಹಿಂದಿರುಗಲಿದೆ. ಮಾ.19ರಂದು ರಾತ್ರಿ 7.30ರಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ. ಪ್ರತಿ ಸಂಕ್ರಮಣ ಮತ್ತು ಜಾತ್ರಾ ಸಮಯದ 5 ದಿನಗಳಲ್ಲಿ ಅನ್ನಸಂತರ್ಪಣೆ ಸೇವೆ ನೆರವೇರಲಿದೆ. ಸಾಂಸ್ಕೃತಿಕ ಕಾರ್ಯಕ್ರಮ: ಮಾ.16ರಂದು ಸಂಜೆ 6 ರಿಂದ 7.30ರವರೆಗೆ ತುಳಸಿ ಪೆಜತ್ತಾಯ ಮತ್ತು ಶಿಷ್ಯವೃಂದದವರಿಂದ 'ಭಕ್ತಿ-ಸಂಗೀತ' ಕಾರ್ಯಕ್ರಮ ನಡೆಯಲಿದೆ. ಮಾ.19ರಂದು ರಾತ್ರಿ 8ರಿಂದ ಕರಾವಳಿ ಕರ್ನಾಟಕದ ಪ್ರಖ್ಯಾತ ಕಲಾವಿದರಿಂದ 'ನಾದ ನಿನಾದ' ಸಂಗೀತ ರಸಸಂಜೆ ಕಾರ್ಯಕ್ರಮ ಜರುಗಲಿದೆ.

ಸಾಂಸ್ಕೃತಿಕ ಯೋಜನೆಯಡಿ ಉಚಿತ ಶಿಕ್ಷಣ

Article Image

ಸಾಂಸ್ಕೃತಿಕ ಯೋಜನೆಯಡಿ ಉಚಿತ ಶಿಕ್ಷಣ

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ(ರಿ.) ವತಿಯಿಂದ ಸಾಂಸ್ಕೃತಿಕ ಯೋಜನೆಯಡಿ ಉಚಿತ ಶಿಕ್ಷಣ ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ (ವಾಣಿಜ್ಯ ಮತ್ತು ಕಲಾ), ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಕರ್ನಾಟಕ ಮತ್ತು ಹಿಂದೂಸ್ತಾನಿ ಶಾಸ್ತ್ರಿಯ ಸಂಗೀತ, ಸುಗಮ ಸಂಗೀತ, ಶಾಸ್ತ್ರಿಯ ನೃತ್ಯ-ಭರತನಾಟ್ಯ, ಕೂಚುಪುಡಿ, ಮೋಹನಿಯಾಟ್ಟಮ್ ಮತ್ತು ಒಡಿಸ್ಸಿ, ಪಕ್ಕವಾದ್ಯಗಳು, ಯಕ್ಷಗಾನ, ನಾಟಕ, ಜಾನಪದ ನೃತ್ಯ ಮತ್ತು ಸಂಗೀತ, ಚಿತ್ರಕಲೆ, ಯೋಗ, ಮಲ್ಲಕಂಬ ಈ ಎಲ್ಲಾ ಸಾಂಸ್ಕçತಿಕ ಕ್ಷೇತ್ರಗಳಲ್ಲಿ ಪ್ರತಿಭಾ ಕಾರಂಜಿ, ವಿಶ್ವವಿದ್ಯಾನಿಲಯ, ರಾಜ್ಯ ಮತ್ತು ರಾಷ್ಟçಮಟ್ಟದ ಸಾಧನೆಗೈದ ದಾಖಲೆ ನಿರ್ಮಿಸಿರುವ ಹಾಗೂ ಜೂನಿಯರ್- ಸೀನಿಯರ್-ವಿದ್ವತ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಅವಕಾಶವನ್ನು ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸ್ವ-ವಿವರಗಳೊಂದಿಗೆ ಅಧ್ಯಕ್ಷರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ, ದ.ಕ- 574227 ಈ ವಿಳಾಸಕ್ಕೆ ಎಪ್ರಿಲ್ 10 ರೊಳಗೆ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9480529236,8971161797.

ಬೆಂಗಳೂರು: 10 ದಿನ ಎಸ್ಕಾಂ ಆನ್‌ಲೈನ್ ಸೇವೆ ಅಲಭ್ಯ

Article Image

ಬೆಂಗಳೂರು: 10 ದಿನ ಎಸ್ಕಾಂ ಆನ್‌ಲೈನ್ ಸೇವೆ ಅಲಭ್ಯ

ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಹತ್ತು ದಿನಗಳ ಕಾಲ ಮೆಸ್ಕಾಂ ಸಹಿತ ರಾಜ್ಯದ ಎಲ್ಲ ವಿದ್ಯುತ್ ಸರಬರಾಜು ಕಂಪೆನಿ (ಎಸ್ಕಾಂ)ಗಳ ಆನ್‌ಲೈನ್ ಸೇವೆಗಳು ಅಲಭ್ಯವಾಗಲಿದೆ. ಮಾರ್ಚ್ 10ರಿಂದ 19ರವರೆಗೆ ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ನಗರ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸಹಿತ ಯಾವುದೇ ಆನ್ ಲೈನ್ ಸೇವೆಗಳು ಇರುವುದಿಲ್ಲ. ನಿತ್ಯ ಸಾವಿರಾರು ಜನ ವಿದ್ಯುತ್‌ಗೆ ಸಂಬಂಧಿಸಿದ ಆನ್‌ಲೈನ್ ಸೇವೆಗಳನ್ನು ಪಡೆಯುತ್ತಿದ್ದು, ಅವರೆಲ್ಲರಿಗೂ ಇದರಿಂದ ಕೊಂಚ ಕಿರಿಕಿರಿ ಆಗಲಿದೆ. ಆದರೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಎಸ್ಕಾಂಗಳು ಸ್ಪಷ್ಟಪಡಿಸಿವೆ. ಬಿಲ್ ತಂತ್ರಾಂಶವು ಕಾರ್ಯಾರಂಭಗೊಂಡ ಬಳಿಕ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು. ಆದರೆ ಸಾಫ್ಟ್‌ವೇ‌ರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದಿಲ್ಲ.

ರಾಜ್ಯಸಭೆಗೆ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಆಯ್ಕೆ

Article Image

ರಾಜ್ಯಸಭೆಗೆ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಆಯ್ಕೆ

ಹೊಸದಿಲ್ಲಿ,ಮಾ.8: ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿಮುರ್ಮ ಅವರು ಶುಕ್ರವಾರ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. ಅಂತರಾಷ್ಟ್ರೀಯ ಮಹಿಳಾ ದಿನದಂದೇ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದು, ಇದೊಂದು ಅನಿರೀಕ್ಷಿತ ಅಚ್ಚರಿ ಎಂದು ಸುಧಾಮೂರ್ತಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಸಂಗೀತ, ಸಾಹಿತ್ಯ, ಕಲೆ ಮತ್ತು ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡ 12 ಮಂದಿಯನ್ನು ರಾಷ್ಟ್ರಪತಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುತ್ತಾರೆ. ಈ ವಿಭಾಗದಲ್ಲಿ ಸುಧಾಮೂರ್ತಿ ಆಯ್ಕೆಯಾಗಿದ್ದಾರೆ. ಇವರು ಇನ್ಫೋಸಿಸ್ ಸಂಸ್ಥಾಪಕ ಎನ್. ಆರ್. ನಾರಾಯಣಮೂರ್ತಿ ಅವರ ಪತ್ನಿ.

ಶಾಲೆಗಳ ಉನ್ನತೀಕರಣಕ್ಕೆ ಅರ್ಜಿ ಆಹ್ವಾನ

Article Image

ಶಾಲೆಗಳ ಉನ್ನತೀಕರಣಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2024-25ನೇ ಸಾಲಿಗೆ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹೊಸದಾಗಿ 6ರಿಂದ 10ನೇ ತರಗತಿವರೆಗೆ ಉನ್ನತೀಕರಣ, ಆಂಗ್ಲ ಮಾಧ್ಯಮ ಆರಂಭಿಸುವ ಶಾಲೆಗಳ ಬಲವರ್ಧನೆ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಶಿಕ್ಷಣ ಇಲಾಖೆಯು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. ಪ್ರತಿ ಶಾಲೆಗಳ ಉನ್ನತೀಕರಣಕ್ಕೆ ಇಲಾಖೆಯು ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದೆ. ಇದರ ಅನ್ವಯ ಶಾಲೆಗಳು ಪ್ರಸ್ತಾವನೆಯನ್ನು ಸಲ್ಲಿಸಬಹುದಾಗಿದೆ. ಹಾಲಿ ಚಾಲ್ತಿಯಲ್ಲಿರುವ 1ರಿಂದ 5ನೇ ತರಗತಿ ಆಂಗ್ಲಮಾಧ್ಯಮ ವಿಭಾಗವನ್ನು 6ನೇ ತರಗತಿ ಸ್ವಾಭಾವಿಕ ಬೆಳವಣಿಗೆ ಅಡಿಯಲ್ಲಿ ಮುಂದುವರಿಸಲು ಉಪ ನಿರ್ದೇಶಕರು ಪ್ರಾಧಿಕಾರವಾಗಿರುತ್ತಾರೆ. ಇನ್ನು 1 ರಿಂದ 7 ಹಾಗೂ 8ನೇ ತರಗತಿ ಆಂಗ್ಲ ಮಾಧ್ಯಮ ವಿಭಾಗಗಳಿರುವ ಶಾಲೆಗಳು 8, 9ನೇ ತರಗತಿಯಿಂದ ಆಂಗ್ಲ ಮಾಧ್ಯಮ ವಿಭಾಗ ಮುಂದುವರಿಸಲು ನಿರ್ದೇಶಕರು ಪ್ರಾಧಿಕಾರಗಳಾಗಿರುತ್ತಾರೆ. ಪ್ರತಿ ಪ್ರಸ್ತಾವನೆಗೂ ದಿನಾಂಕ ನಿಗದಿ ಮಾಡಿದೆ. ಹೆಚ್ಚಿನ ಮಾಹಿತಿಯನ್ನು : https://schooleducation. karnataka.gov.in/ ಈ ಲಿಂಕ್ ಮೂಲಕ ತಿಳಿದುಕೊಳ್ಳಬಹುದು.

ಕೋಕೋ ಕೃಷಿಕರಿಗೆ ಸಂತಸ... ಮೊದಲ ಬಾರಿಗೆ ಕೆ.ಜಿ.ಗೆ 100 ರೂ.

Article Image

ಕೋಕೋ ಕೃಷಿಕರಿಗೆ ಸಂತಸ... ಮೊದಲ ಬಾರಿಗೆ ಕೆ.ಜಿ.ಗೆ 100 ರೂ.

ಕೋಕೋ ಬೆಳೆ ಧಾರಣೆ ಏರುಗತಿಯಲ್ಲಿರುವುದು ಬೆಳೆಗಾರರ ಮುಖದಲ್ಲಿ ಮಂದಹಾಸ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ಹಸಿ ಕೋಕೋ ಕೆ.ಜಿ.ಗೆ 100 ರೂ. ಧಾರಣೆಯನ್ನು ತಲುಪಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ಕೃಷಿಕರ ಸಂಖ್ಯೆ ಹೆಚ್ಚಾಗಿದ್ದು, ಅಡಿಕೆ, ತೆಂಗು ಜತೆ ಕೋಕೋ ಬೆಳೆಯನ್ನು ಬೆಳೆಯುತ್ತಿದ್ದಾರೆ. ಆದರೆ ಇದಕ್ಕೂ ರೋಗ ಬಾಧೆ, ಬೆಲೆ ಇಳಿಕೆ ಸಮಸ್ಯೆ ಇದ್ದು ಕೃಷಿಕರಿಗೆ ನಿರೀಕ್ಷಿತ ಆದಾಯ ಕೈಗೆ ಸಿಗುತ್ತಿರಲಿಲ್ಲ. ಕೆ.ಜಿ.ಗೆ 100 ರೂ.: ಕೋಕೋಗೆ ಉತ್ತಮ ಬೇಡಿಕೆ ಇದ್ದರೂ ಬೆಳೆಗಾರರಿಗೆ ಉತ್ತಮ ಧಾರಣೆ ಸಿಗದ ಕಾರಣ ಕೋಕೋ ಬೆಳೆಯ ಬಗ್ಗೆ ನಿರಾಸಕ್ತಿ ವಹಿಸಿದ್ದರು. ಆದರೆ ಈಗ ಹಸಿ ಕೋಕೋ ಕೆ.ಜಿ.ಗೆ 80ರಿಂದ 100 ರೂ.ಗಳಂತೆ ಕ್ಯಾಂಪ್ಕೋ ಸಂಸ್ಥೆ ಖರೀದಿಸುತ್ತಿದೆ. ಮುಂದಿನ ದಿನಗಳಲ್ಲಿ ಹಸಿ ಕೋಕೋ ಕೆ.ಜಿ.ಗೆ 100ರಿಂದ 120 ರೂ. ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಒಣ ಕೋಕೋ ಕೆ.ಜಿ.ಗೆ 370ರಿಂದ 400ರಂತೆ ಖರೀದಿಸಲಾಗುತ್ತಿದೆ. ಆದರೆ ಈ ಬೇಸಗೆಯಲ್ಲಿ ಮಾತ್ರವೇ ಸಿಗಲಿದೆ ಎನ್ನಲಾಗುತ್ತಿದೆ. ಮಳೆಗಾಲದಲ್ಲಿ ಹೆಚ್ಚಾಗಿ ನೀರಿನ ಅಂಶವನ್ನು ಹೊಂದಿರುವುದರಿಂದ ಕೋಕೋ ಹೆಚ್ಚಿನ ಧಾರಣೆ ನೀಡಲು ಸಾಧ್ಯವಾಗುತ್ತಿಲ್ಲ. ಬೇಸಗೆಯಲ್ಲಿ ಉತ್ಪನ್ನಗಳಿಗೆ ಗುಣಮಟ್ಟದ ಕೋಕೋ ಸಿಗುವುದರಿಂದ ಬೆಲೆ ಏರಿಕೆ ಆಗುತ್ತದೆ. ಬೆಲೆ ಏರಿಕೆಗೆ ಕಾರಣ-ವಿವಿಧ ಉತ್ಪನ್ನಗಳಿಗಾಗಿ ಕಂಪೆನಿಗಳು ವಿದೇಶದ ಆಶ್ರಯಿಸಿಕೊಂಡಿದ್ದವು. ಕೋಕೋಗಳನ್ನೇ ಐವರಿಕೋಸ್ಟ್ ಎಂಬಲ್ಲಿ ಕೋಕೋ ಬೆಳೆ ಉತ್ಪಾದನೆ ಕುಸಿತಗೊಂಡು ಅಲ್ಲಿಂದ ಭಾರತಕ್ಕೆ ಕೋಕೋ ಪೂರೈಕೆ ಆಗುತ್ತಿಲ್ಲ ಎನ್ನಲಾಗಿದೆ. ಇದರಿಂದ ದೇಶಿ ಕೋಕೋಗೆ ಬೇಡಿಕೆ ಹೆಚ್ಚಾಗಿದೆ. ಇತರೆ ಕೋಕೋ ಖರೀದಿ ಮಾಡುವ ವ್ಯಾಪಾರಸ್ಥರು ಹಾಗೂ ಕ್ಯಾಂಪ್ಕೋ ಸಂಸ್ಥೆ ಇದರಿಂದ ಬೆಲೆ ಏರಿಕೆ ಮಾಡಿದೆ ಎಂದು ಪ್ರಕಟಣೆಯಿಂದ ತಿಳಿದುಬಂದಿದೆ.

ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಎಲೆಚುಕ್ಕೆ ರೋಗ

Article Image

ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಎಲೆಚುಕ್ಕೆ ರೋಗ

ಎಲೆಚುಕ್ಕೆ ರೋಗವನ್ನು ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಸಾಮಾನ್ಯವಾಗಿ ಬೇಸಿಗೆ ಮತ್ತು ಮಳೆಗಾಲದಲ್ಲಿ ಕಾಣಬಹುದು. ಕೆಳಭಾಗದ ಒಂದೆರಡು ಎಲೆಗಳಲ್ಲಿ ಚುಕ್ಕೆಗಳಿರುತ್ತವೆ. ಇತ್ತೀಚೆಗೆ ಈ ರೋಗವು ಹಲವೆಡೆ ಗಂಭೀರ ಸ್ವರೂಪವನ್ನು ಪಡೆದಿದೆ. ತಕ್ಷಣ ನಿರ್ವಹಣಾ ಕ್ರಮಗಳನ್ನು ಅನುಸರಿಸಿಕೊಳ್ಳಬೇಕಾದದ್ದು ಅನಿವಾರ್ಯ. ಮೊತ್ತಮೊದಲು ಎಲೆಚುಕ್ಕೆ ರೋಗದ ತೀವ್ರತೆಯನ್ನು ಗಮನಿಸಿದ್ದು ಭಾರತದ ಈಶಾನ್ಯ ರಾಜ್ಯ ತ್ರಿಪುರದ ಜಂಪುಯಿ ಹಿಲ್ಸ್ ಪ್ರದೇಶದಲ್ಲಿ, ಕರ್ನಾಟಕದ ಮೂಡಿಗೆರೆ ತಾಲೂಕಿನ ಕಳಸದ ಮರಸಣಿಗೆ ಪ್ರದೇಶದಲ್ಲಿ ಕೆಲವೇ ತೋಟಗಳಿಗೆ ಸೀಮಿತವಾಗಿದ್ದ ರೋಗಲಕ್ಷಣ, ಮರು ವರ್ಷದಲ್ಲಿ ಹಲವು ತೋಟಗಳಿಗೆ ಹಬ್ಬಿತ್ತು. ಗಾಳಿ ಮುಖೇನ ಈ ಹರಡುವ ಕಾರಣ, ಪ್ರಾಥಮಿಕ ಹಂತದಲ್ಲೇ ನಿರ್ವಹಣೆ ಮಾಡದಿದ್ದರೆ ಈ ರೋಗವನ್ನು ನಿಯಂತ್ರಿಸುವುದು ಕಷ್ಟ, ಶಿವಮೊಗ್ಗ, ಚಿಕ್ಕಮಗಳೂರು, ಮಡಿಕೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಎಲೆಚುಕ್ಕೆ ರೋಗದ ಲಕ್ಷಣಗಳು ಇತ್ತೀಚೆಗೆ ಕಾಣಿಸಿಕೊಂಡಿವೆ. ಕೇರಳ ಮತ್ತು ತಮಿಳುನಾಡಿಗೂ ರೋಗ ಪಸರಿದೆ. ರೋಗಾಣು: ಕೊಲೆಟೋಟೈಕಮ್ ಸ್ವಿಸಿಸ್ ಮತ್ತು ಫಿಲೋಸ್ಟಿಕ್ಷಾ ಅರೆಕೆ ಎನ್ನುವ ಶಿಲೀಂಧ್ರಗಳು ಸಾಮಾನ್ಯವಾಗಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗವನ್ನು ಉಂಟುಮಾಡುತ್ತವೆ. ಆದರೆ, ಇತ್ತೀಚೆಗೆ ಗಂಭೀರ ಸ್ವರೂಪದಲ್ಲಿ ಕಾಣಿಸಿಕೊಂಡಿರುವ ಎಲೆಚುಕ್ಕೆ ರೋಗಕ್ಕೆ ಕೊಲೆಟೋಟೈಕಮ್ ಕಹಾವೆ ಸಬ್ಸ್ಟಿಸಿಸ್ ಸಿಗ್ಗಾರೊ ಎನ್ನುವ ಶಿಲೀಂಧ್ರವು ಪ್ರಮುಖ ಕಾರಣವೆಂದು ತಿಳಿದುಬಂದಿದೆ. ಎಲೆಚುಕ್ಕೆ ರೋಗದಿಂದ ಪತ್ರಹರಿತ್ತು ಕಡಿಮೆಯಾಗಿ ಉತ್ಪಾದನೆ ಕುಂಠಿತವಾಗುತ್ತದೆ. ಇದು ಮರದ ಬೆಳವಣಿಗೆ ಮತ್ತು ಇಳುವರಿಯ ಮೇಲೆ ದೀರ್ಘ ಕಾಲದ ದುಷ್ಪರಿಣಾಮ ಬೀರಬಹುದು. ರೋಗ ಲಕ್ಷಣಗಳು: ಅಡಿಕೆ ಮರದ ಎಲೆಯಲ್ಲಿ “ಹಳದಿ ಬಣ್ಣದಿಂದ ಆವೃತವಾಗಿರುವ ಕಂದು ಬಣ್ಣದ ಸಣ್ಣ ಚುಕ್ಕೆಗಳಿದ್ದರೆ, ಅದು ಎಲೆಚುಕ್ಕೆ ರೋಗವೆಂದರ್ಥ. ಕೆಲವೊಮ್ಮೆ, ಕಪ್ಪು ಬಣ್ಣದ ಅಂಚು ಇರುವ ಬೂದು ಬಣ್ಣದ ಸಣ್ಣ ಚುಕ್ಕೆಗಳನ್ನೂ ಕಾಣಬಹುದು. ಈ ರೀತಿಯ ಸಣ್ಣ ಚುಕ್ಕೆಗಳು ದೊಡ್ಡದಾಗಿ, ಈ ಒಂದಕ್ಕೊಂದು ಸೇರಿ ಇಡೀ ಸೋಗೆಗೆ ಹಬ್ಬಿ ಅದನ್ನು ಒಣಗಿಸುತ್ತವೆ. ಮೊದಲು ಕೆಳಭಾಗದ ಒಂದೆರಡು ಎಲೆಗಳಲ್ಲಿ ರೋಗಲಕ್ಷಣ ಕಾಣಿಸಿಕೊಂಡರೆ, ರೋಗ ತೀವ್ರತೆ ಹೆಚ್ಚಾದಾಗ ನಾಲ್ಕೈದು ಎಲೆಗಳಿಗದು ಹಬ್ಬುತ್ತದೆ. ಅಡಿಕೆ ಕಾಯಿ ಮತ್ತು ಹಾಳೆಯ ಮೇಲೂ ಚುಕ್ಕೆಗಳನ್ನು ಕಾಣಬಹುದು. ರೋಗಬಾಧಿತ ಕಾಯಿಗಳು ಬಲಿಯುವ ಮೊದಲೇ ಹಳದಿಯಾಗಿ ಬೀಳುತ್ತವೆ. ಕೆಲವೊಮ್ಮೆ ಕಾಯಿಯ ಮೇಲೆ ಚುಕ್ಕೆ ಮೂಡಿದ ಜಾಗವು ಸೀಳಿ ಅವು ಉದುರುವುದಿದೆ. ನಿರ್ವಹಣೆ ಹೇಗೆ: ಅಧಿಕ ರೋಗಬಾಧಿತ ಎಲೆಗಳನ್ನು ತುಂಡರಿಸಿ ತೆಗೆದು ನಾಶ ಮಾಡುವುದು ಸೋಂಕು ಕಡಿಮೆಗೊಳಿಸಲು ಪ್ರಯೋಜನಕಾರಿ. ಈ ಕೆಲಸ ಪ್ರಾಯೋಗಿಕವಾಗಿ ಕಷ್ಟ, ಆದರೆ, ತೀವ್ರ ಬಾಧೆಯಿರುವಲ್ಲಿ ಅನಿವಾರ್ಯ. ರೋಗಬಾಧಿತ ತೋಟಗಳಲ್ಲಿ ಅಡಿಕೆ ಗೊನೆಗಳಿಗೆ ಬೋರ್ಡೋ ಮಿಶ್ರಣ ಸಿಂಪಡಣೆ ಮಾಡುವಾಗ, ಎಲೆಗಳಿಗೂ ಮಾಡುವುದೊಳಿತು. ಹೆಚ್ಚು ರೋಗಬಾಧೆಯಿರುವ ತೋಟಗಳಲ್ಲಿ ಆಗಸ್ಟ್ - ಸೆಪ್ಟೆಂಬರ್ ಸಮಯದಲ್ಲಿ ಮಳೆ ಇಲ್ಲದಾಗ (Propiconazole 25EC) (Hexaconazole 5EC/5SC) ಶಿಲೀಂಧ್ರನಾಶಕವನ್ನು ಒಂದು ಲೀಟರ್ ನೀರಿಗೆ ಒಂದು ಮಿಲಿಲೀಟರ್ ಪ್ರಮಾಣದಲ್ಲಿ ಎಲೆಗಳಿಗೆ ಸಿಂಪಡಿಸಬೇಕು. ಮೂರರಿಂದ ನಾಲ್ಕು ವಾರಗಳ ನಂತರ, ಪ್ರೊಪಿನಬ್ 70WP ಶಿಲೀಂಧ್ರನಾಶಕವನ್ನು ಒಂದು ಲೀಟರ್ ನೀರಿಗೆ ಎರಡು ಗ್ರಾಂ ಪ್ರಮಾಣದಲ್ಲಿ ಸಿಂಪಡಿಸಬೇಕು. ಶಿಲೀಂದ್ರ ನಾಶಕ ದ್ರಾವಣ ತಯಾರಿಸುವಾಗ ಪ್ರತೀ ಲೀಟರ್ ದ್ರಾವಣಕ್ಕೆ ಒಂದು ಮಿಲಿಲೀಟರ್ ಪ್ರಮಾಣದಲ್ಲಿ ಅಂಟನ್ನು ಸೇರಿಸಬೇಕು. ತೀವ್ರ ರೋಗಬಾಧೆ ಇರುವಲ್ಲಿ, ಜನವರಿ ತಿಂಗಳ ನಂತರ ಸಿಂಗಾರ ಒಣಗುವ ರೋಗಕ್ಕೆ ಪ್ರೋಪಿಕೊನರೋಲ್ ಶಿಲೀಂಧ್ರನಾಶಕ ಸಿಂಪಡಿಸುವಾಗ ಎಲೆಚುಕ್ಕೆ ರೋಗವಿರುವ ಮರದ ಎಲೆಗಳಿಗೂ ಸಿಂಪಡಿಸಬಹುದು. ಮಣ್ಣು ಪರೀಕ್ಷೆ ಆಧಾರದ ಮೇಲೆ ಗೊಬ್ಬರ ನೀಡುವುದು ಮತ್ತು ಹುಳಿ ಮಣ್ಣಿಗೆ ಸುಣ್ಣ ಹಾಕುವುದು ಒಳಿತು. ಸಾಮಾನ್ಯವಾಗಿ, ಅಡಿಕೆ ಮರಕ್ಕೆ 12 ಕಿಲೋ ಗ್ರಾಂ ಹಟ್ಟಿಗೊಬ್ಬರ ಮತ್ತು ಹಸಿರೆಲೆ, ಯೂರಿಯ(220 ಗ್ರಾಂ), ರಾಕ್ ಫಾಸ್ಪೆಟ್ (200 ಗ್ರಾಂ) ಮತ್ತು ಪೊಟಾಷ್ (240 - 350 ಗ್ರಾಂ) ನೀಡಬೇಕು. ರಸಗೊಬ್ಬರಗಳನ್ನು ಕನಿಷ್ಠ ಎರಡು ಕಂತುಗಳಲ್ಲಿ ನೀಡಬೇಕು. ಜೊತೆಗೆ, ಲಘುಪೋಷಕಾಂಶಗಳಾದ ಸತುವಿನ ಸಲ್ವೇಟ್ (5 ಗ್ರಾಂ) ಮತ್ತು ಬೊರಾಕ್ಸ್ (5 ಗ್ರಾಂ) ಕೂಡ ನೀಡಬಹುದು. ಗಾಳಿಯಲ್ಲಿ ರೋಗಾಣು ಬಹಳ ಬೇಗನೆ ಹರಡುತ್ತದೆ. ಹಾಗಾಗಿ, ರೋಗ ಪೀಡಿತ ಅಡಿಕೆ ಸಸಿಗಳನ್ನು ರೋಗವಿಲ್ಲದ ಪ್ರದೇಶಕ್ಕೆ ಸಾಗಿಸದಿರುವುದು ಮತ್ತು ಸಮುದಾಯ ಮಟ್ಟದ ರೋಗ ನಿಯಂತ್ರಣ ಕ್ರಮಗಳು ಬಲು ಮುಖ್ಯವಾಗುತ್ತವೆ.

ಮಂಗಳೂರು: ಬೃಹತ್ ಉದ್ಯೋಗ ಮೇಳ

Article Image

ಮಂಗಳೂರು: ಬೃಹತ್ ಉದ್ಯೋಗ ಮೇಳ

ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ.26, 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. https://skillconnect.kaushalkar.com/ ಗೆ ಭೇಟಿ ನೀಡಿ, ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿ ನೋಂದಣಿ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಬಹುದು

ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಣೆ

Article Image

ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಣೆ

ವಿಧಾನ್ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ, ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಎಚ್‌ಎಸ್‌ಆರ್‌ಪಿ ನೇಮ್ ಪ್ಲೇಟ್ ಅಳವಡಿಸಿಲ್ಲ. ಆನ್‌ಲೈನ್‌ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್ ವೆಬ್ಸೈಟ್ ಹಾವಳಿ ಹೆಚ್ಚಾಗಿದೆ. ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿಯನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಹೇಳಿದರು. ಫೇಕ್ ವೆಬ್ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ನಂಬರ್ ಅಚ್ಚಾಗಿರುತ್ತದೆ. ಈ ಪ್ಲೇಟ್‌ನ ಮೇಲ್ಬಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತದೆ. https://transport.karnataka.gov.in ಅಥವಾ http://www.siam.in ಭೇಟಿ ನೀಡಿ ಅಥವಾ Book HSRP ಮೂಲಕ ಈ ನಂಬರ್ ಪ್ಲೇಟ್ ಪಡೆದುಕೊಳ್ಳಲು ಸಾಧ್ಯವಿದೆ.

ಫೆ. 13ರಿಂದ ಫೆ. 22: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Article Image

ಫೆ. 13ರಿಂದ ಫೆ. 22: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ. 13ರಿಂದ ಫೆ. 22ರ ವರೆಗೆ ನಡೆಯಲಿದ್ದು ಫೆ. 20ರಂದು ಶ್ರೀ ಮನ್ಮಹಾರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿರುವುದು ಎಂದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆಲ್ಲಗುತ್ತು ಸಬ್ರಬೈಲು ಜಯವರ್ಮರಾಜ ಬಳ್ಳಾಲ್‌ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅರಮಲೆಬೆಟ್ಟ: ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Article Image

ಅರಮಲೆಬೆಟ್ಟ: ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಬೆಳ್ತಂಗಡಿ ತಾಲೂಕು ಗುರುವಾಯನಕೆರೆ ಕುವೆಟ್ಟು ಗ್ರಾಮದ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ. 13ರಂದು ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ಅನುವಂಶಿಕ ಆಡಳಿತ ಮೋಕ್ತೇಸರರಾದ ಸುಖೇಶ್ ಕುಮಾರ್ ಕಡಂಬುರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಫೆ. 25: ಪೊಲೀಸ್ ಕಾನ್ ಸ್ಟೇಬಲ್ ಪರೀಕ್ಷೆ

Article Image

ಫೆ. 25: ಪೊಲೀಸ್ ಕಾನ್ ಸ್ಟೇಬಲ್ ಪರೀಕ್ಷೆ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್) (ಪುರುಷ, ಮಹಿಳಾ) (ತೃತೀಯ ಲಿಂಗ ಪುರುಷ ಮತ್ತು ಮಹಿಳಾ), ಸೇವಾನಿರತ ಹಾಗೂ ಬ್ಯಾಕ್ ಲಾಗ್-1137 ಹುದ್ದೆಗಳಿಗೆ ಫೆ. 25ರಂದು ಬೆಳಗ್ಗೆ 11ರಿಂದ 12.30ರ ವರೆಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಅರ್ಹ ಅಭ್ಯಥಿ೯ಗಳಿಗೆ ಕರೆಪತ್ರದ ಬಗ್ಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು. ಕರೆಪತ್ರದ ಲಿಂಕ್ ಕಳುಹಿಸಲಾಗುವುದು. ಇನ್ನೂ ಅಭ್ಯಥಿ೯ಗಳಿಗೆ ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ. ವಸ್ತ್ರಸಂಹಿತೆ: ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳಿಗೆ ಅರ್ಧ ತೋಳಿನ ಶರ್ಟ್ ಕಡ್ಡಾಯವಾಗಿ ಧರಿಸುವುದು, ಸಾಧ್ಯವಾದಷ್ಟು ಕಾಲರ್ ರಹಿತ ಶಟ್೯ಗಳನ್ನು ಧರಿಸುವುದು, ಝಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳಿರುವ ಶರ್ಟ್ ಧರಿಸುವಂತಿಲ್ಲ. ಜೀನ್ಸ್ ಹಾಗೂ ಹೆಚ್ಚಿನ ಜೇಬುಗಳಿರುವ ಪ್ಯಾಂಟ್ ಧರಿಸತಕ್ಕದ್ದಲ್ಲ, ತೆಳುವಾದ ಅಡಿಭಾಗವಿರುವ ಪಾದರಕ್ಷೆ (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತ ಲೋಹದ ಆಭರಣ ಅಥವಾ ಉಂಗುರ, ಕಡಗಗಳನ್ನು ಧರಿಸುವುದು ನಿಷೇಧ. ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳಿಗೆ: ವಿಸ್ತಾರವಾದ ಕಸೂತಿ, ಹೂ, ಬೂಚ್ ಅಥವಾ ಬಟನ್‌ಗಳು ಹೊಂದಿರುವ ಉಡುಗೆ, ಪರ್ಣ ತೋಳಿನ ಬಟ್ಟೆ/ ಜೀನ್ಸ್ ಪ್ಯಾಂಟ್ ಧರಿಸಬಾರದು. ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಧರಿಸಬೇಕು. ಎತ್ತರವಾದ ಹಿಮ್ಮಡಿಯ ಶೂ/ಚಪ್ಪಲಿ ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂ/ ಚಪ್ಪಲಿ ಧರಿಸಬಾರದು. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಲೋಹದ ಆಭರಣ ಧರಿಸುವಂತಿಲ್ಲ.

ಫೆ. 8 : ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಮಾವಿನಕಟ್ಟೆ ಶಾಖೆಯ ಉದ್ಘಾಟನೆ

Article Image

ಫೆ. 8 : ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಮಾವಿನಕಟ್ಟೆ ಶಾಖೆಯ ಉದ್ಘಾಟನೆ

ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ 3ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಎಲಿಯನಡುಗೋಡು ಗ್ರಾಮದ ಮಾವಿನಕಟ್ಟೆಯ ಚಾಮುಂಡೇಶ್ವರಿ ಕಾಂಪ್ಲೆಕ್ಸ್‌ನಲ್ಲಿ ಫೆ. 8ರಂದು ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಈ ಸಂದರ್ಭದಲ್ಲಿ ಚಾಲನೆ ನೀಡಿ ಮಾತನಾಡುತ್ತಾ, ಸಹಕಾರಿ ಸಂಘಗಳು ಜನರಿಂದ, ಜನರಿಗಾಗಿ ಪ್ರಾಮಾಣಿಕತೆ, ವಿಶ್ವಾಸದಿಂದ ವ್ಯವಹಾರ ನಡೆಸುವ ಅತೀ ದೊಡ್ಡ ಹಣಕಾಸಿನ ಸಂಸ್ಥೆಯಾಗಿದೆ. ದೇಹದ ಅಂಗಗಳು ಪರಸ್ಪರ ಪೂರಕವಾಗಿ ಸಹಕಾರ ನೀಡುತ್ತಾ ಕಾರ್ಯ ನಿರ್ವಹಿಸಿದಂತೆ ಗ್ರಾಹಕರು ಮತ್ತು ಸಹಕಾರಿ ಸಂಘಗಳು ಪರಸ್ಪರ ಸಹಕಾರ ನೀಡಿದಾಗ ಜನ, ಸಂಘ ಹಾಗೂ ಊರಿನ ಅಭಿವೃದ್ಧಿಯಾಗುತ್ತದೆ ಎಂದರು. ಬಳಿಕ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಮ ಭಟ್ ಭದ್ರತಾ ಕೊಠಡಿ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಗಣಕಯಂತ್ರ ವ್ಯವಸ್ಥೆ ಉದ್ಘಾಟಿಸಿದರು. ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿ'ಸೋಜಾ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಮಾಜಿ ಅಧ್ಯಕ್ಷ ಗೋಪಿನಾಥ್ ರೈ, ಕುಕ್ಕಿಪಾಡಿ ಗ್ರಾಪಂ, ಉಪಾಧ್ಯಕ್ಷೆ ಬೇಬಿ, ಸದಸ್ಯರಾದ ಯೋಗೀಶ್‌ ಆಚಾರ್ಯ, ಸುಜಾತ, ಲಿಂಗಪ್ಪ ಪೂಜಾರಿ, ಪ್ರತಿಭಾ ಶೆಟ್ಟಿ, ಪುಷ್ಪಾ, ಶೋಭ, ಚಂದ್ರ, ದಿನೇಶ್‌, ಗೀತಾ, ಪೂರ್ಣಿಮಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ, ನಿರ್ದೇಶಕರಾದ ಸಂದೇಶ್‌ ಶೆಟ್ಟಿ, ರಾಜೇಶ್‌ ಶೆಟ್ಟಿ, ಹರೀಶ್‌ ಆಚಾರ್ಯ, ದಿನೇಶ್‌ ಪೂಜಾರಿ, ದೇವರಾಜ್‌ ಸಾಲ್ಯಾನ್‌, ಜಾರಪ್ಪ ನಾಯ್ಕ, ಉಮೇಶ್‌ ಗೌಡ, ವೀರಪ್ಪ ಪರವ, ಅರುಣಾ ಎಸ್.‌ ಶೆಟ್ಟಿ, ವೃತ್ತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್‌, ಶಾಖಾ ಪ್ರಬಂಧಕ ಜೇಸನ್‌ ಫೆರ್ನಾಂಡಿಸ್‌ ಮುಂತಾದವರು ಉಪಸ್ಥಿತರಿದ್ದರು.

ಫೆ. 10-11 : ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Article Image

ಫೆ. 10-11 : ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿಪೂಜೆಯು ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಫೆ. 10 ಮತ್ತು 11ರಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳು, ದೈವಗಳ ನೇಮೋತ್ಸವದೊಂದಿಗೆ ಜರುಗಲಿರುವುದು ಎಂದು ಆಡಳಿತ ಮೊಕ್ತೇಸರರಾದ ಅಮರನಾಥ ಹೆಗ್ಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ. 1ರಿಂದ : ಮೂಡುಬಿದಿರೆ ಉತ್ಸವ ಮತ್ತು ಮ್ಯೂಸಿಕಲ್ ಡ್ಯಾನ್ಸಿಂಗ್ ವಾಟರ್ ಕೌಂಟರ್

Article Image

ಫೆ. 1ರಿಂದ : ಮೂಡುಬಿದಿರೆ ಉತ್ಸವ ಮತ್ತು ಮ್ಯೂಸಿಕಲ್ ಡ್ಯಾನ್ಸಿಂಗ್ ವಾಟರ್ ಕೌಂಟರ್

ಮೂಡುಬಿದಿರೆಯ ಶಾಲಿಮಾರ್ ಹಾಲ್ ಬಳಿ ನ್ಯಾಷನಲ್ ಅಮ್ಯೂಸ್‌ಮೆಂಟ್ ಪಾರ್ಕ್ ಇವರಿಂದ ಮೂಡುಬಿದಿರೆ ಉತ್ಸವ ಮತ್ತು ಮ್ಯೂಸಿಕಲ್ ಡ್ಯಾನ್ಸಿಂಗ್ ವಾಟರ್ ಕೌಂಟರ್ ಇಂದಿನಿಂದ (ಫೆ. 1) ಪ್ರಾರಂಭಗೊಳ್ಳಲಿದೆ. ಮೂಡುಬಿದಿರೆಯಲ್ಲಿ ಪ್ರಪ್ರಥಮ ಬಾರಿಗೆ ಈ ಉತ್ಸವ ನಡೆಯುತ್ತಿದ್ದು, ಶಾಪಿಂಗ್, ಗೃಹೋಪಯೋಗಿ ವಸ್ತುಗಳು, ಸಿದ್ಧ ಉಡುಪುಗಳು, ಮಹಿಳೆಯರ ಇಮಿಟೇಷನ್ ಜ್ಯುವೆಲ್ಲರಿಗಳು, ಮಕ್ಕಳ ಆಟದ ಸಾಮಾಗ್ರಿಗಳು, ಶುಚಿ ರುಚಿಯಾದ ತಿಂಡಿ ತಿನಿಸುಗಳು, ಪುಟಾಣಿಗಳಿಗಾಗಿ ಕಿಡ್ಸ್ ರೈಡ್ಸ್, ಬೃಹತ್ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಇನ್ನೂ ಅನೇಕ ಮನರಂಜನೆಗಳು ಅಭ್ಯವಿರುತ್ತದೆಯೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಜಿರೆಯಲ್ಲಿ ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರ

Article Image

ಉಜಿರೆಯಲ್ಲಿ ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರ

ಉಜಿರೆಯ ಪೆರ್ಲ ರಸ್ತೆಯಲ್ಲಿರುವ ಪ್ರಾಣನೆಸ್ಟ್, ಪ್ರಾಣಿಕ್ ಹೀಲಿಂಗ್ ಮತ್ತು ಅರ್ಹಾಟಿಕ್ ಯೋಗ ಕೇಂದ್ರದಲ್ಲಿ ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರವನ್ನು ದಿನಾಂಕ ಫೆಬ್ರವರಿ 3 ಮತ್ತು 4 (ಶನಿವಾರ ಮತ್ತು ಭಾನುವಾರ)ರಂದು ಹಮ್ಮಿಕೊಳ್ಳಲಾಗಿದೆ. ಪ್ರಾಣಿಕ್ ಹೀಲಿಂಗ್ ಒಂದು ಪುರಾತನವಾದ ಕಲೆ ಮತ್ತು ವಿಜ್ಞಾನವಾಗಿದ್ದು, ಇದರಲ್ಲಿ ಸ್ಪಶಿ೯ಸದೆ, ಔಷಧಗಳನ್ನು ಕೊಡದೇ, ಕೇವಲ ಪ್ರಾಣ ಶಕ್ತಿಯಿಂದ ಖಾಯಿಲೆಗಳನ್ನು  ಗುಣಪಡಿಸುವ ಪೂರಕ‌ ಚಿಕಿತ್ಸಾ ವಿಧಾನವಾಗಿದೆ. 16 ವರ್ಷ ಮೇಲ್ಪಟ್ಟ ಎಲ್ಲಾ ಆಸಕ್ತರು ಇದನ್ನು ಕಲಿಯಬಹುದಾಗಿದೆ. ಶುಲ್ಕ, ಹೆಸರು ನೋಂದಾಯಿಸಲು ಮತ್ತು ‌ಇತರ ಮಾಹಿತಿಗೆ 8105023414 ಇವರನ್ನು ಸಂಪರ್ಕಿಸಬಹುದು.

ಸತ್ತೂರು-ಧಾರವಾಡ ಜ.30: ವಿಶ್ವ ಕುಷ್ಠರೋಗ ದಿನ

Article Image

ಸತ್ತೂರು-ಧಾರವಾಡ ಜ.30: ವಿಶ್ವ ಕುಷ್ಠರೋಗ ದಿನ

ಸತ್ತೂರು/ಧಾರವಾಡ: ಇಲ್ಲಿಯ ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಚರ್ಮರೋಗ ವಿಭಾಗದಲ್ಲಿ ವಿಶ್ವ ಕುಷ್ಠರೋಗ ದಿನವನ್ನು ಜನವರಿ 30ರಂದು ಆಚರಿಸಲಾಯಿತು. “ಕುಷ್ಠರೋಗವನ್ನು ಸೋಲಿಸಿ” ಎಂಬ ಧ್ಯೇಯೆಯೊಂದಿಗೆ ಭಿತ್ತಿಪತ್ರ ಪ್ರದರ್ಶನ ಸ್ಪರ್ಧೆ ಏರ್ಪಡಿಸುವ ಮೂಲಕ ಜನರಲ್ಲಿ ರೋಗದ ಕುರಿತು ಜಾಗೃತಿ ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ, ವೈದ್ಯಕೀಯ ಉಪ ಅಧೀಕ್ಷಕರಾದ ಡಾ. ಮಖ್ದೂಮ ಕಿಲ್ಲೆದಾರ, ಚರ್ಮರೋಗ ವಿಭಾಗದ ಮುಖ್ಯಸ್ಥರಾದ ಡಾ. ನವೀನ ಕೆ. ಎನ್., ಡಾ. ಎಸ್.ಬಿ. ಅಥಣಿಕರ ಮತ್ತಿತರರು ಉಪಸ್ಥಿತರಿದ್ದರು. ಕುಷ್ಠರೋಗ ಕಳಂಕದ ನಿರ್ಮೂಲನೆ, ಆರಂಭಿಕ ಹಂತದಲ್ಲೆ ಪತ್ತೆ ಹಚ್ಚುವುದು ಮತ್ತು ಸಮುದಾಯ ಜಾಗೃತಿಯನ್ನು ಕೇಂದ್ರಿಕರಿಸುತ್ತಾ ಕುಷ್ಠರೋಗ ಪೀಡಿತ ವ್ಯಕ್ತಿಗಳ ತಾರತಮ್ಯವನ್ನು ತೊಡೆದುಹಾಕಲು ಎಲ್ಲಾ ಸದಸ್ಯರಿಂದ ಪ್ರತಿಜ್ಞೆ ಮಾಡಲಾಯಿತು.

ಧರ್ಮಸ್ಥಳ, ಜ.30: ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Article Image

ಧರ್ಮಸ್ಥಳ, ಜ.30: ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಉಪಸ್ಥಿತಿಯಲ್ಲಿ ಮಂಗಳವಾರ ಧರ್ಮಸ್ಥಳದಲ್ಲಿ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ಮಧ್ಯೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರಕ್ಕೆ ಸಹಿ ಮಾಡಿ ಒಪ್ಪಿಗೆ ಸೂಚಿಸಲಾಯಿತು. ಆಯುರ್ವಿಜ್ಞಾನ ಸಂಪದ ಸಂಸ್ಥಾನದ ಹೈದರಾಬಾದ್‌ನ ಸಹಾಯಕ ನಿರ್ದೇಶಕ ಡಾ. ಗೋಲಿ ಪೆಂಚಲ ಪ್ರಸಾದ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನದ ಪ್ರಾಂಶುಪಾಲರಾದ ಡಾ. ಪ್ರಸನ್ನ ಎನ್. ರಾವ್ ಮತ್ತಿತರರು ಉಪಸ್ಥಿತರಿದ್ದರು.

First Previous

Showing 14 of 15 pages

Next Last