ಫೆ. 8 : ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಮಾವಿನಕಟ್ಟೆ ಶಾಖೆಯ ಉದ್ಘಾಟನೆ
ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ 3ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಎಲಿಯನಡುಗೋಡು ಗ್ರಾಮದ ಮಾವಿನಕಟ್ಟೆಯ ಚಾಮುಂಡೇಶ್ವರಿ ಕಾಂಪ್ಲೆಕ್ಸ್ನಲ್ಲಿ ಫೆ. 8ರಂದು ನಡೆಯಿತು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಈ ಸಂದರ್ಭದಲ್ಲಿ ಚಾಲನೆ ನೀಡಿ ಮಾತನಾಡುತ್ತಾ, ಸಹಕಾರಿ ಸಂಘಗಳು ಜನರಿಂದ, ಜನರಿಗಾಗಿ ಪ್ರಾಮಾಣಿಕತೆ, ವಿಶ್ವಾಸದಿಂದ ವ್ಯವಹಾರ ನಡೆಸುವ ಅತೀ ದೊಡ್ಡ ಹಣಕಾಸಿನ ಸಂಸ್ಥೆಯಾಗಿದೆ. ದೇಹದ ಅಂಗಗಳು ಪರಸ್ಪರ ಪೂರಕವಾಗಿ ಸಹಕಾರ ನೀಡುತ್ತಾ ಕಾರ್ಯ ನಿರ್ವಹಿಸಿದಂತೆ ಗ್ರಾಹಕರು ಮತ್ತು ಸಹಕಾರಿ ಸಂಘಗಳು ಪರಸ್ಪರ ಸಹಕಾರ ನೀಡಿದಾಗ ಜನ, ಸಂಘ ಹಾಗೂ ಊರಿನ ಅಭಿವೃದ್ಧಿಯಾಗುತ್ತದೆ ಎಂದರು.
ಬಳಿಕ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಮ ಭಟ್ ಭದ್ರತಾ ಕೊಠಡಿ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಗಣಕಯಂತ್ರ ವ್ಯವಸ್ಥೆ ಉದ್ಘಾಟಿಸಿದರು. ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿ'ಸೋಜಾ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಮಾಜಿ ಅಧ್ಯಕ್ಷ ಗೋಪಿನಾಥ್ ರೈ, ಕುಕ್ಕಿಪಾಡಿ ಗ್ರಾಪಂ, ಉಪಾಧ್ಯಕ್ಷೆ ಬೇಬಿ, ಸದಸ್ಯರಾದ ಯೋಗೀಶ್ ಆಚಾರ್ಯ, ಸುಜಾತ, ಲಿಂಗಪ್ಪ ಪೂಜಾರಿ, ಪ್ರತಿಭಾ ಶೆಟ್ಟಿ, ಪುಷ್ಪಾ, ಶೋಭ, ಚಂದ್ರ, ದಿನೇಶ್, ಗೀತಾ, ಪೂರ್ಣಿಮಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ, ನಿರ್ದೇಶಕರಾದ ಸಂದೇಶ್ ಶೆಟ್ಟಿ, ರಾಜೇಶ್ ಶೆಟ್ಟಿ, ಹರೀಶ್ ಆಚಾರ್ಯ, ದಿನೇಶ್ ಪೂಜಾರಿ, ದೇವರಾಜ್ ಸಾಲ್ಯಾನ್, ಜಾರಪ್ಪ ನಾಯ್ಕ, ಉಮೇಶ್ ಗೌಡ, ವೀರಪ್ಪ ಪರವ, ಅರುಣಾ ಎಸ್. ಶೆಟ್ಟಿ, ವೃತ್ತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್, ಶಾಖಾ ಪ್ರಬಂಧಕ ಜೇಸನ್ ಫೆರ್ನಾಂಡಿಸ್ ಮುಂತಾದವರು ಉಪಸ್ಥಿತರಿದ್ದರು.