Article Image

ಧಾರವಾಡ, ಸತ್ತೂರು: ವಿಶ್ವ ಪ್ರಿಕ್ಲಾಂಪ್ಸಿಯಾ ದಿನಾಚರಣೆ

Article Image

ಧಾರವಾಡ, ಸತ್ತೂರು: ವಿಶ್ವ ಪ್ರಿಕ್ಲಾಂಪ್ಸಿಯಾ ದಿನಾಚರಣೆ

ಧಾರವಾಡದ ಸತ್ತೂರಿನ ಎಸ್.ಡಿ.ಎಂ. ನರ್ಸಿಂಗ್ ಕಾಲೇಜಿನ ಪ್ರಸೂತಿ ಮತ್ತು ಸ್ತ್ರೀರೋಗ ನರ್ಸಿಂಗ್ ವಿಭಾಗ ಮತ್ತು ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರಿಕ್ಲಾಂಪ್ಸಿಯಾ ದಿನದ ಅಂಗವಾಗಿ, ಮೇ 22 ರಂದು ಸತ್ತೂರು ಗ್ರಾಮದಲ್ಲಿ ಗರ್ಭಾವಸ್ಥೆಯಲ್ಲಿ ಅಧಿಕ ರಕ್ತದೊತ್ತಡದ ಬಗ್ಗೆ ಜಾಗೃತಿ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ಜಾಥಾವನ್ನು ಸತ್ತೂರಿನ ಕಾರ್ಪೊರೇಟರ್ ಆದ ಬಸವರಾಜ ಅರಳವಾಡಿ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಆಶಾದೇವಿ ನೆರವಿ ಅವರು ಮಾತನಾಡುತ್ತಾ, ಗರ್ಭಿಣಿಯರು ಆಗಾಗ ವೈದ್ಯರನ್ನು ಸಂಪರ್ಕಿಸಿ ರಕ್ತದೊತ್ತಡವನ್ನು ಪರೀಕ್ಷಿಸಿಕೊಳ್ಳಬೇಕು. ಆರಂಭಿಕ ರಕ್ತದೊತ್ತಡದ ಪತ್ತೆಯು ಉತ್ತಮವಾಗಿ ನಿರ್ವಹಿಸಲು ಸಹಾಯಕಾರಿಯಾಗಿದ್ದು, ಅದನ್ನು ತಡೆಯಬಹುದು. ಆರೋಗ್ಯಕರ ಹೆರಿಗೆ ಮತ್ತು ಆರೋಗ್ಯಕರ ಮಗು ಎಲ್ಲಾ ಗರ್ಭಿಣಿಯರ ಆಶಯವಾಗಿದೆ. ಗರ್ಭಾವಸ್ಥೆಯಲ್ಲಿ ಉತ್ತಮ ಜೀವನಶೈಲಿ, ಆಹಾರ ಮತ್ತು ವ್ಯಾಯಾಮದಿಂದ ರಕ್ತದೊತ್ತಡವನ್ನು ತಡೆಯಬಹುದು ಎಂದು ಹೇಳಿದರು. ಈ ಜಾಥಾದಲ್ಲಿ 70ಕ್ಕೂ ಹೆಚ್ಚು ನರ್ಸಿಂಗ್ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸುಮಾರು 100ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ, ಗರ್ಭಾವಸ್ಥೆಯಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸುವುದು ಮತ್ತು ಅದರ ನಿರ್ವಹಣೆಯ ಕುರಿತು ವಿವರಿಸಿ ಕರಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಪುಷ್ಪಾ ಪಾಟೀಲ ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ನರ್ಸಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಮನಿ ಬಿಜ್ಲಿ ಉಪಸ್ಥಿತರಿದ್ದರು. ಅಕ್ಷತಾ ಅತಿಥಿಗಳನ್ನು ಸ್ವಾಗತಿಸಿದರು ಮತ್ತು ಸುನೀತಾ ವಂದನಾರ್ಪಣೆ ಸಲ್ಲಿಸಿದರು.

ಚರ್ಮರೋಗ: ಉಚಿತ ತಪಾಸಣಾ ಶಿಬಿರ

Article Image

ಚರ್ಮರೋಗ: ಉಚಿತ ತಪಾಸಣಾ ಶಿಬಿರ

ಉಜಿರೆ: ಇಲ್ಲಿಯ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚರ್ಮರೋಗ ಉಚಿತ ತಪಾಸಣಾ ಶಿಬಿರವನ್ನು ಇದೇ ಬರುವ ಮೇ.26 ರಂದು ಭಾನುವಾರ ಬೆಳಿಗ್ಗೆ ಗಂಟೆ 9 ರಿಂದ ಅಪರಾಹ್ನ 1 ಗಂಟೆವರೆಗೆ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಾಯಿಸಲು ಸಂಪರ್ಕಿಸಿ: 8073349216 / 7760397878

ಉಜಿರೆ: ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Article Image

ಉಜಿರೆ: ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರೂ ಆದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪುರ, ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಎಂ. ಸುರೇಶ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 2023-24ರ ಸಂಸ್ಥೆಯ ಎಲ್ಲಾ ಚಟುವಟಿಕೆಗಳನ್ನು ಗಮನಿಸಿ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ವರ್ಷದ ಗುರಿಯನ್ನು ತಲುಪಲು ಕೆಲವು ಮಾರ್ಗದರ್ಶನವನ್ನು ತಿಳಿಸಿದರು. ಸಂಸ್ಥೆಯು ಕಳೆದ ವರ್ಷದಲ್ಲಿ 762 ಶಿಬಿರಾರ್ಥಿಗಳಿಗೆ ವಿವಿಧ ತರಬೇತಿಗಳನ್ನು ಕೊಟ್ಟು ಅದರಲ್ಲಿ 577 ಯುವಕ/ಯುವತಿಯರು ಸ್ವಂತ ಉದ್ಯೋಗವನ್ನು ಪ್ರಾರಂಬಿಸಿದ್ದಾರೆ. ಹೊಸ ತರಬೇತಿಗಳಾಗಿ ಕೋಳಿ ಸಾಕಾಣಿಕೆ, ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ಮತ್ತು ಮದುಮಗಳ ಶೃಂಗಾರ ಮೊದಲಾದ ತರಬೇತಿಗಳನ್ನು ಹಮ್ಮಿಕೊಂಡಿರುತ್ತೇವೆ. ಕಳೆದ ವರ್ಷದಲ್ಲಿ ಕರ್ನಾಟಕ ಸರಕಾರದ ವಿದಾನಸಭಾ ಅಧ್ಯಕ್ಷರಾದ ಯು.ಟಿ. ಖಾದರ್‌ರವರು ಮತ್ತು ದೆಹಲಿಯ ಗ್ರಾಮೀಣ ಸಚಿವಾಲಯದ ನಿರ್ದೇಶಕರಾದ ಸಂತೋಷ್ ಕುಮಾರ್ ತಿವಾರಿರವರು ಸಂಸ್ಥೆಗೆ ಭೇಟಿ ನೀಡಿದ್ದರು. ಜೊತೆಗೆ ಬ್ಯಾಂಕಿನ ಅಧಿಕಾರಿಗಳು, ಉದ್ಯಮಿಗಳು ಮತ್ತು ಸರಕಾರಿ ಉನ್ನತ ಅಧಿಕಾರಿಗಳು ಸಂಸ್ಥೆಗೆ ಭೇಟಿ ಸಂಸ್ಥೆಯ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಶುಶ್ರೂಷಕಿಯರ ಸಪ್ತಾಹ ಆಚರಣೆ

Article Image

ಶುಶ್ರೂಷಕಿಯರ ಸಪ್ತಾಹ ಆಚರಣೆ

ಸತ್ತೂರು, ಧಾರವಾಡ: ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಮತ್ತು ಎಸ್.ಡಿ.ಎಂ. ಆಸ್ಪತ್ರೆಯ ನರ್ಸಿಂಗ್ ಸೇವಾ ವಿಭಾಗದಿಂದ ಶುಶ್ರೂಷಕಿಯರ ಸಪ್ತಾಹ “ಉತ್ಕರ್ಷ 2024” ಅನ್ನು ಮೇ 13 ರಿಂದ 20ರ ವರೆಗೆ ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಶುಶ್ರೂಷಕಿಯರಿಗೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ರಂಗೋಲಿ ಸ್ಪರ್ಧೆ, ರಸಪ್ರಶ್ನೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಶುಶ್ರೂಷಕಿಯರ ಸಪ್ತಾಹವನ್ನು ಉದ್ಘಾಟಿಸಿದರು. ಶುಶ್ರೂಷಕಿಯರ ಸಪ್ತಾಹದ ಅಂಗವಾಗಿ ಮೇ 20 ರಂದು ಶುಶ್ರೂಷಕಿಯರ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು. ಸಮಾರೋಪ ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಶ್ರೀಮತಿ ಪದ್ಮಲತಾ ನಿರಂಜನ್ ಅವರು ಆಗಮಿಸಿ ನರ್ಸಿಂಗ್‌ನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಮತ್ತು ನರ್ಸಿಂಗ್‌ನಲ್ಲಿ ಉತ್ತಮ ಸೇವೆ ನೀಡಿದ ಶುಶ್ರೂಷಕಿಯರಿಗೆ ಸ್ಮರಣಿಕೆ ಮತ್ತು ಚಿನ್ನದ ಪದಕಗಳನ್ನು ನೀಡಿ ಸನ್ಮಾನಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್.ಡಿ.ಎಂ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ ಹೆಗ್ಡೆ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ: ಶುಶ್ರೂಷಕಿಯವರ ಸ್ಪರ್ಶವು ರೋಗಿಗಳನ್ನು ವೇಗವಾಗಿ ಮತ್ತು ಉತ್ತಮವಾಗಿ ಗುಣಪಡಿಸುತ್ತದೆ. ಶುಶ್ರೂಷಕಿಯವರು ಕಾಲಕ್ಕೆ ಅಣುಗುಣವಾಗಿ ತಮ್ಮ ಜ್ಞಾನವನ್ನು ನವೀಕರಿಸಬೇಕು. ಶುಶ್ರೂಷಕಿಯವರು ಸಣ್ಣ ಕೆಲಸಗಳನ್ನು ಉತ್ತಮವಾಗಿ ಮಾಡುವ ಮೂಲಕ ಶ್ರೇಷ್ಠರಾಗುತ್ತಾರೆ. ಶುಶ್ರೂಷಕಿಯರಿಗೆ ಪ್ರಪಂಚದಾದ್ಯಂತ ಸಾಕಷ್ಟು ಬೇಡಿಕೆಯಿದೆ, ಆದ್ದರಿಂದ ವೃತ್ತಿ ಪ್ರಗತಿ ಮತ್ತು ಉತ್ಕೃಷ್ಟತೆಯು ಮುಖ್ಯವಾಗಿದೆ. ವಿದೇಶಗಳಲ್ಲಿ ಸೇವೆ ಸಲ್ಲಿಸಲು ಶುಶ್ರೂಷಕಿಯರು ವಿವಿಧ ಭಾಷೆಗಳನ್ನು ಕಲಿಯಬೇಕು. ಹಿರಿಯ ಪ್ರಾಧ್ಯಾಪಕರಾದ ಡಾ. ಗಂಗಾಬಾಯಿ ಕುಲಕರ್ಣಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡಾ. ಪ್ರಸನ್ನ ದೇಶಪಾಂಡೆ, ಅತಿಥಿಗಳನ್ನು ಸ್ವಾಗತಿಸಿದರು. ಡಾ. ನಾಗೇಶ ಅಜ್ಜವಾಡಿಮಠ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ನಾನ್ಸಿ ಮೇರಿ ಕಾರ್ಯಕ್ರಮವನ್ನು ನಿರೂಪಿಸಿದರು. ಮಂಜುಳಾ ಕೆ.ಬಿ. ವಂದನಾರ್ಪಣೆ ಸಲ್ಲಿಸಿದರು. ಸಭಾ ಕಾರ್ಯಕ್ರಮದ ನಂತರ ಶುಶ್ರೂಷಕಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬೆಂಗಳೂರು: ಜೂನ್ 14ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ-2

Article Image

ಬೆಂಗಳೂರು: ಜೂನ್ 14ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ-2

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್ 7ರಿಂದ 14ರವರೆಗೆ ನಡೆಸಲು ತೀರ್ಮಾನಿಸಿದ್ದ ಪರೀಕ್ಷೆಯನ್ನು ಜೂನ್ 14ರಿಂದ 22ರವರೆಗೆ ನಡೆಸುವುದಾಗಿ ಘೋಷಿಸಲಾಗಿದೆ. ಈ ಹಿಂದಿನ ವೇಳಾಪಟ್ಟಿ ಪ್ರಕಾರ ಜೂನ್ 14ಕ್ಕೆ ಪರೀಕ್ಷೆ ಮುಗಿಯಬೇಕಿತ್ತು. ಆದರೆ, ಪರಿಹಾರ ಬೋಧನಾ ಅವಧಿ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ. ಎಲ್ಲ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ. ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪಡೆದು ಶಿಕ್ಷಕರು ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿ: ಜೂನ್ 14-ಕನ್ನಡ, ಜೂನ್ 15-ಹಿಂದಿ NSQF, ಜೂನ್ 18-ಗಣಿತ, ಜೂನ್ 20-ವಿಜ್ಞಾನ, ಜೂನ್ 21-ಇಂಗ್ಲಿಷ್, ಜೂನ್ 22 -ಸಮಾಜವಿಜ್ಞಾನ.

ಡಿಪ್ಲೊಮಾ ಕೋರ್ಸ್: ಅರ್ಜಿ ಆಹ್ವಾನ

Article Image

ಡಿಪ್ಲೊಮಾ ಕೋರ್ಸ್: ಅರ್ಜಿ ಆಹ್ವಾನ

ಮಂಗಳೂರು: ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಎಸೆಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ. ಡಿಪ್ಲೊಮಾ ಇನ್ ‘ಟೂಲ್ ಆ್ಯಂಡ್ ಡೈ ಮೇಕಿಂಗ್ ವಿಭಾಗದಲ್ಲಿ 60 ವಿದ್ಯಾರ್ಥಿಗಳು, ಡಿಪ್ಲೊಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಟರಿಂಗ್ ವಿಭಾಗದಲ್ಲಿ 30 ವಿದ್ಯಾರ್ಥಿಗಳು, ಹಾಗೂ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಆ್ಯಂಡ್ ಮಿಷಿನ್ ಲರ್ನಿಂಗ್ ವಿಭಾಗದಲ್ಲಿ 60 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಕೋರ್ಸುಗಳ ಅಧ್ಯಯನ ಮಾಡುವಾಗ ಒಂದು ವರ್ಷದ ಇಂಟರ್ನ್ಶಿಪ್ ತರಬೇತಿ ಜೊತೆಗೆ ವಿದ್ಯಾರ್ಥಿಗಳಿಗೆ ಮಾಸಿಕ 15,000 ದಿಂದ 20,000 ರೂ. ವರೆಗೆ ಶಿಷ್ಯವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಬೈಕಂಪಾಡಿಯಲಿರುವ ಕೈಗಾರಿಕಾ ವಲಯದ, ಪ್ಲಾಟ್ ನಂಬರ್ 7ಇ ಯಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು ಸಂಪರ್ಕಿಸುವಂತೆ ಜಿಟಿಟಿಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಲೇಜುಗಳ ಸಂಯೋಜನೆ: ಅರ್ಜಿ ಆಹ್ವಾನ

Article Image

ಕಾಲೇಜುಗಳ ಸಂಯೋಜನೆ: ಅರ್ಜಿ ಆಹ್ವಾನ

ಮಂಗಳೂರು: ಮಂಗಳೂರು ವಿವಿ ಸಂಯೋಜನೆಗಳ ಪಟ್ಟಿರುವ ಎಲ್ಲ ಕಾಲೇಜು, ವಿದ್ಯಾಸಂಸ್ಥೆಗಳಿಂದ 2024-25ನೇ ಸಾಲಿಗೆ ಸಂಯೋಜಿತ ಕಾಲೇಜುಗಳಿಗೆ ಹೊಸ ವ್ಯಾಸಂಗ ಕ್ರಮ ಮತ್ತು ಹೊಸ ವಿಷಯಗಳು, ಮುಂದುವರಿಕೆ, ವಿಸ್ತರಣೆ ಸಂಯೋಜನೆ, ವಿದ್ಯಾರ್ಥಿ ಪ್ರಮಾಣ ಹೆಚ್ಚಳ, ಕಾಲೇಜಿನ ಹೆಸರು ಬದಲಾವಣೆ, ಮ್ಯಾನೇಜ್‌ಮೆಂಟ್ ಬದಲಾವಣೆ ಮತ್ತು ಆಸಕ್ತ ವಿದ್ಯಾಸಂಸ್ಥೆಗಳಿಂದ ಹೊಸ ಸಂಯೋಜನೆ ನೀಡುವ ಬಗ್ಗೆ ಪೋರ್ಟಲ್ www.uucms.karnataka.gov.in ಮೂಲಕ 2000 ರೂ. ಶುಲ್ಕ ಪಾವತಿಸಿ ಮೇ 25ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ www.mangloreuniversity.ac.in ವೆಬ್ ಸೈಟ್ ನೋಡುವಂತೆ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರ್‌ಟಿಇ ಅರ್ಜಿ: ಅವಧಿ ವಿಸ್ತರಣೆ

Article Image

ಆರ್‌ಟಿಇ ಅರ್ಜಿ: ಅವಧಿ ವಿಸ್ತರಣೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 20ರ ವರೆಗೆ ವಿಸ್ತರಿಸಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೂ.19ರಂದು ಆನ್‌ಲೈನ್ ಮೂಲಕ 2ನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ. ಇಲ್ಲಿ ಆಯ್ಕೆಯಾದವರಿಗೆ ಜೂ.20ರಿಂದ 27ರ ವರೆಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ದಾಖಲಾದ ಮಕ್ಕಳ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಲು ಜೂ.20ರಿಂದ 28ರವರೆಗೆ ಅವಕಾಶ ಕಲ್ಪಿಸಿ ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿ ಹೊರಡಿಸಿದೆ. ಜೂ.1ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಿದೆ. ಜೂ.5ರಂದು ಅನ್‌ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆಯ ಪಲಿತಾಂಶ ಪ್ರಕಟವಾಗಲಿದೆ. ಆಯ್ಕೆಯಾದ ಮಕ್ಕಳಿಗೆ ಜೂ.6ರಿಂದ 13ರವರೆಗೆ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದೆ.

ಅಧಿಕ ರಕ್ತದೊತ್ತಡದ ಜಾಗೃತಿ ಮತ್ತು ಸಲಹಾ ಶಿಬಿರ

Article Image

ಅಧಿಕ ರಕ್ತದೊತ್ತಡದ ಜಾಗೃತಿ ಮತ್ತು ಸಲಹಾ ಶಿಬಿರ

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರದ ಎಸ್.ಡಿ.ಎಂ. ಪಾಲಿಕ್ಲಿನಿಕ್‌ನಲ್ಲಿ ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜು ಮತ್ತು ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಮೆಡಿಸಿನ್ ವಿಭಾಗದವರ ಮತ್ತು ಎನ್.ಎಸ್.ಎಸ್. ಘಟಕದ ಸಹಯೋಗದೊಂದಿಗೆ “ಜಾಗತಿಕ ಅಧಿಕ ರಕ್ತದೊತ್ತಡದ ದಿನ”ದಂದು ಉಚಿತ ರಕ್ತದೊತ್ತಡ ತಪಾಸಣೆ ಮತ್ತು ತಡೆಗಟ್ಟಲು ಮಾಡಬೇಕಾದ ವ್ಯಾಯಾಮದ ಮಹತ್ವದ ಬಗ್ಗೆ ಶಿಬಿರವನ್ನು ಮೇ 17ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಎಸ್.ಡಿ.ಎಂ. ಮೆಡಿಕಲ್ ಕಾಲೇಜಿನ, ವೈದ್ಯಕೀಯ ಚಿಕಿತ್ಸಾ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಬಸವರಾಜ ಹಳಕಟ್ಟಿ ಅವರು ಉದ್ಘಾಟಿಸಿ ಮಾತನಾಡುತ್ತಾ 40 ವರ್ಷ ಮೇಲ್ಪಟ್ಟ ಜನರು ಆಗಾಗ ಅಧಿಕ ರಕ್ತದೊತ್ತಡ ತಪಾಸಣೆ ಮಾಡಿಸಿಕೊಳ್ಳಬೇಕು. ರಕ್ತದೊತ್ತಡದಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಅಧಿಕ ರಕ್ತದೊತ್ತಡ ಹೊಂದಿರುವವರು ವೈದ್ಯರನ್ನು ಸಂಪರ್ಕಿಸಬೇಕು. ಉತ್ತಮ ಜೀವನಶೈಲಿಯಿಂದ ರೋಗಗಳನ್ನು ತಡೆಯಬಹುದು. ಕೆಲವೊಮ್ಮೆ ಅಧಿಕ ರಕ್ತದೊತ್ತಡವು ಅನುವಂಶೀಯವಾಗಿದ್ದು, ಯಾವುದೇ ರೋಗ ಲಕ್ಷಣಗಳು ಕಾಣದಿರಬಹುದು ಎಂದರು. ಕಾರ್ಡಿಯೋರೆಸ್ಪಿರೇಟರಿ ವಿಭಾಗದ ಮುಖ್ಯಸ್ಥರಾದ ಡಾ. ಸಂಗಿತಾ ಅಪ್ಪಣ್ಣವರ ಮತ್ತು ಡಾ. ಶರಣ ಅವರು ಅಧಿಕ ರಕ್ತದೊತ್ತಡದ ಜಾಗೃತಿಯ ಕುರಿತು ವಿವರಿಸಿದರು. ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ ಪರಮಾರ ಅವರು ಉಪಸ್ಥಿತರಿದ್ದರು. ಡಾ. ತುಳಸಿ ಕುಲಕರ್ಣಿ ಕಾರ್ಯಕ್ರಮವನ್ನು ನಿರೂಪಿಸಿ, ವಂದನಾರ್ಪಣೆ ಸಲ್ಲಿಸಿದರು.

ಜಂಗಮಶೆಟ್ಟಿ ರಂಗಪ್ರಶಸ್ತಿಗೆ ಆಹ್ವಾನ

Article Image

ಜಂಗಮಶೆಟ್ಟಿ ರಂಗಪ್ರಶಸ್ತಿಗೆ ಆಹ್ವಾನ

ಕಲಬುರಗಿ: ಇಲ್ಲಿನ ರಂಗಸಂಗಮ ಕಲಾವೇದಿಕೆ ನೀಡುವ ಎಸ್. ಬಿ. ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಧನೆಗೈದ ರಂಗಕರ್ಮಿಗಳ ಹೆಸರನ್ನು ರಂಗಾಸಕ್ತರು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದು ಎಂದು ರಂಗಸಂಗಮ ಕಲಾವೇದಿಕೆ ಕಾರ್ಯದರ್ಶಿ ಡಾ. ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ. ಪ್ರಶಸ್ತಿಯು ತಲಾ 10,000 ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸನ್ಮಾನ ಒಳಗೊಂಡಿದ್ದು, ಜುಲೈ 18ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಸಕ್ತ ಸಾಲಿನ ಪ್ರಶಸ್ತಿಗೆ ಅರ್ಜಿ ಅಥವಾ ನಾಮನಿರ್ದೇಶನಗಳನ್ನು ಜೂ.6 ರೊಳಗೆ ಕಳುಹಿಸಬಹುದು. ವಿಳಾಸ: ಡಾ.ಸುಜಾತಾ ಜಂಗಮ ಶೆಟ್ಟಿ, ಓಂ ರೆಸಿಡೆನ್ಸಿ, ಎರಡನೇ ಮಹಡಿ, ಶ್ರೀನಿವಾಸ ಕಣ್ಣಿನ ಆಸ್ಪತ್ರೆ ಪಕ್ಕ, ಸಿದ್ದೇಶ್ವರ ಕಲ್ಯಾಣ ಮಂಟಪದ ಹತ್ತಿರ, ಹಳೆಯ ಜೇವರ್ಗಿ ರಸ್ತೆ, ಕಲಬುರಗಿ- 585102.

ಸಿಇಟಿ: ಕೇಂದ್ರ ಪಠ್ಯಕ್ರಮದ ಪಿಯು ಅಂಕ ದಾಖಲಿಸಲು ಮೇ 20ರವರೆಗೆ ಅವಕಾಶ

Article Image

ಸಿಇಟಿ: ಕೇಂದ್ರ ಪಠ್ಯಕ್ರಮದ ಪಿಯು ಅಂಕ ದಾಖಲಿಸಲು ಮೇ 20ರವರೆಗೆ ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) 12ನೇ ತರಗತಿಯನ್ನು ಸಿಬಿಎಸ್‌ಇ (ಜಮ್ಮು ಮತ್ತು ಕಾಶ್ಮೀರ ಸೇರಿದಂತೆ), ಸಿಐಎಸ್‌ಸಿಇ, 10+2, ಐಜಿಸಿಎಸ್‌ಇ ಮತ್ತಿತರ ಬೋರ್ಡುಗಳಲ್ಲಿ 2024ರಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ದಾಖಲಿಸಲು ಮೇ 14ರಿಂದ 20ರವರೆಗೆ ಆನ್‌ಲೈನ್ ಪೋರ್ಟಲ್ ಲಿಂಕ್ ಅನ್ನು ಸಕ್ರಿಯಗೊಳಿಸಲಿದೆ. ಅರ್ಹ ಅಭ್ಯರ್ಥಿಗಳು ಮೇ 20ರ ಒಳಗೆ ಕಡ್ಡಾಯವಾಗಿ ತಮ್ಮ 12ನೇ ತರಗತಿಯ ಅಂಕಗಳ ವಿವರಗಳನ್ನು ನಿಗದಿತ ಲಿಂಕ್‌ನಲ್ಲಿ ದಾಖಲಿಸಿ, ಅಂಕಪಟ್ಟಿಯ ಪಿಡಿಎಫ್‌ ಪ್ರತಿಯನ್ನು ತಪ್ಪದೇ ಅಪ್ ಲೋಡ್ ಮಾಡಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2024ಕ್ಕಿಂತ ಹಿಂದಿನ ವರ್ಷಗಳಲ್ಲಿ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಮತ್ತು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರುವವರೂ ಅಂಕಗಳನ್ನು ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಅರ್ಹತಾ ಕಂಡಿಕೆ 'Ckause-Y' ಅನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳೂ ಅಂಕಗಳನ್ನು ಪೋರ್ಟಲ್ ನಲ್ಲಿ ದಾಖಲಿಸಬೇಕು. ಕರ್ನಾಟಕ ದ್ವಿತೀಯ ಪಿಯುಸಿ 2024ರ ಅಂಕಗಳನ್ನು ಪ್ರಾಧಿಕಾರವು ನೇರವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಪಡೆದುಕೊಳ್ಳುತ್ತದೆ. ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2024ರ 'ನಾಟಾ' ಪರೀಕ್ಷೆಯ ಅಂಕಗಳನ್ನು ಅರ್ಹತೆಗೆ‌ ಅನುಗುಣವಾಗಿ ದಾಖಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.inಗೆ ಭೇಟಿ ನೀಡಲು ಕೋರಿದೆ.

ಸರಕಾರಿ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಆಹ್ವಾನ

Article Image

ಸರಕಾರಿ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಆಹ್ವಾನ

ಬಂಟ್ವಾಳ: ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಆಯುಕ್ತರ ಆದೇಶದ ಪ್ರಕಾರ 2024-25ನೇ ಸಾಲಿನಲ್ಲಿ ಮೆರಿಟ್ ಆಧಾರಿತ ಆನ್‌ಲೈನ್ ಮೂಲಕ ಸೀಟು ಹಂಚಿಕೆ ಮಾಡುವ ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕೆ ಎಸೆಸೆಲ್ಸಿ/ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಶಿಕ್ಷಣ ಇಲಾಖೆಯ ತಾಂತ್ರಿಕ ವೆಬ್‌ಸೈಟ್ https://dtetech.karnataka.gov.in/kartechnical ನಿಂದ ಮಾಹಿತಿ ಪುಸ್ತಕವನ್ನು ಡೌನ್ ಲೋಡ್ ಮಾಡಿಕೊಂಡು ಅದರ ಸೂಚನೆಗಳನ್ವಯ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಸಿಬಂದಿಯವರ ಸಹಾಯದೊಂದಿಗೆ ತಮ್ಮ ಇಚ್ಛೆಗನುಗುಣವಾಗಿ ಕೋರ್ಸ್/ಕಾಲೇಜು ಆಯ್ಕೆ ಮಾಡಿ ಆನ್‌ಲೈನ್ ಮೂಲಕ ಅರ್ಜಿ ದಾಖಲಿಸಲು ಮೇ 21 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

ಪ್ರಾಯೋಗಿಕ ಪರೀಕ್ಷೆ ಮುಂದಕ್ಕೆ

Article Image

ಪ್ರಾಯೋಗಿಕ ಪರೀಕ್ಷೆ ಮುಂದಕ್ಕೆ

ರಾಜ್ಯದ ನಾನಾ ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿ ವಿವಿಧ ಸ್ನಾತಕ ಪದವಿಗಳ ಪ್ರವೇಶಕ್ಕೆ ಮೇ 14ರಂದು ನಿಗದಿಯಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ. 2024-25ನೇ ಸಾಲಿನ ಪ್ರಥಮ ವರ್ಷದ ಸ್ನಾತಕ ಪದವಿಗಳಿಗೆ ಬೆಂಗಳೂರು, ಧಾರವಾಡ ಕೃಷಿ ವಿವಿ, ರಾಯಚೂರು ಮತ್ತು ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿವಿಯಲ್ಲಿ ವಿವಿಧ ಸ್ನಾತಕ ಪದವಿಗಳಿಗೆ ಮೇ 17ರಂದು ಸಂಜೆ 4 ಗಂಟೆಯೊಳಗೆ ಸೂಕ್ತ ದಾಖಲೆಗಳನ್ನು ಖುದ್ದು ಸಂಬಂಧಪಟ್ಟ ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಲ್ಲೇ ಸಲ್ಲಿಸಬೇಕು ಎಂದು ಕೃಷಿ ವಿವಿ ಪ್ರಕಟಣೆ ತಿಳಿಸಿದೆ. ಮುಂದೂಡಿರುವ ಸ್ನಾತಕ ಪದವಿಯ ಪ್ರಾಯೋಗಿಕ ಪರೀಕ್ಷೆಗಳ ಕುರಿತು ಹಾಗೂ ದಾಖಲಾತಿ ಸಲ್ಲಿಕೆಯ ಕುರಿತ ಪೂರ್ಣ ಮಾಹಿತಿಯನ್ನು ಕರ್ನಾಟಕ ರಾಜ್ಯದ ಎಲ್ಲಾ ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಗಳ ಅಧಿಕೃತ ಅಂತರ್ಜಾಲದಿಂದ ಪಡೆಯಬಹುದು ಎಂದು ತಿಳಿಸಿದೆ.

ವೈದ್ಯಕೀಯ ಕಾಲೇಜುಗಳ ಬಾಸ್ಕೆಟ್‌ಬಾಲ್ ಪಂದ್ಯಾವಳಿ

Article Image

ವೈದ್ಯಕೀಯ ಕಾಲೇಜುಗಳ ಬಾಸ್ಕೆಟ್‌ಬಾಲ್ ಪಂದ್ಯಾವಳಿ

ಸತ್ತೂರು, ಧಾರವಾಡ: ವೈದ್ಯಕೀಯ ಕಾಲೇಜುಗಳ ಬಾಸ್ಕೆಟ್‌ಬಾಲ್ (ಪುರುಷ ಮತ್ತು ಮಹಿಳೆಯರ) ಪಂದ್ಯಾವಳಿಯನ್ನು ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮೇ 9 ರಿಂದ 12 ರವರೆಗೆ “ಕ್ರಾಸ್‌ಓವರ್-2024” ಅನ್ನು ಆಯೋಜಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ಕರ್ನಾಟಕದ ವೈದ್ಯಕೀಯ ಕಾಲೇಜುಗಳಿಂದ 11 ಪುರುಷರ ಮತ್ತು 6 ಮಹಿಳಾ ವೈದ್ಯಕೀಯ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದ್ದವು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ ಅವರು ಈ ಪಂದ್ಯಾವಳಿಯನ್ನು ಉದ್ಘಾಟಿಸಿದರು. ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಪುರುಷ ಮತ್ತು ಮಹಿಳಾ ತಂಡಗಳು ಪ್ರಥಮ ಸ್ಥಾನ ಮತ್ತು ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪುರುಷ ಮತ್ತು ಮಹಿಳಾ ತಂಡಗಳು ದ್ವಿತಿಯ ಸ್ಥಾನಗಳನ್ನು ಗಳಿಸಿವೆ. ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ ಮತ್ತು ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ ಹೆಗ್ಡೆ ಅವರು ಪಂದ್ಯಾವಳಿಗಳ ವಿಜೇತರಿಗೆ ಮೇ 12 ರಂದು ಬಹುಮಾನಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಡಾ. ದೀಪಕ ಕಣಬೂರ, ಡಾ. ನೈದಿಲ ಶೆಟ್ಟಿ ಮತ್ತು ಡಾ. ಶರದ್ ಜವಳಿ ಉಪಸ್ಥಿತರಿದ್ದರು.

ಸಿಬಿಎಸ್ಇ: ಎಕ್ಸೆಲೆಂಟ್ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Article Image

ಸಿಬಿಎಸ್ಇ: ಎಕ್ಸೆಲೆಂಟ್ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

ಮೂಡುಬಿದಿರೆ: ಎಕ್ಸೆಲೆಂಟ್ ಮೂಡುಬಿದಿರೆ ಆಡಳಿತದಲ್ಲಿ ನಡೆಯುತ್ತಿರುವ ಎಂ. ಕೆ. ಶೆಟ್ಟಿ ಸ್ಕೂಲ್ ಮೂಡುಬಿದಿರೆ ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 27 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಹಾಗೂ 21 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿರುತ್ತಾರೆ. ಸುವಿತ್ ಭಂಡಾರಿ ಶೇ.92 ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಶೇ.90 ಅಂಕಗಳಿಸಿದ ಸುಯೋಗ್ ಎಸ್. ಅಂಚನ್ ಹಾಗೂ ಪೃಥ್ವಿ ಪ್ರಕಾಶ್ ಭಂಡಾರಿ ದ್ವಿತೀಯ ಹಾಗೂ ತೃತೀಯ ಸ್ಥಾನಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಆಡಳಿತ ನಿರ್ದೇಶಕರಾದ ಬಿ .ಪಿ. ಸಂಪತ್ ಕುಮಾರ್, ಶೈಕ್ಷಣಿಕ ನಿರ್ದೇಶಕರಾದ ಬಿ. ಪುಷ್ಪರಾಜ್ ಹಾಗೂ ಪ್ರಾಂಶುಪಾಲರಾದ ಸುರೇಶ ಅಭಿನಂದನೆ ಸಲ್ಲಿಸಿದ್ದಾರೆ.

ನೀಟ್ ಅಭ್ಯರ್ಥಿಗಳ ಸಿಇಟಿ ನೋಂದಣಿ: ಕೆಇಎ ಸ್ಪಷ್ಟನೆ

Article Image

ನೀಟ್ ಅಭ್ಯರ್ಥಿಗಳ ಸಿಇಟಿ ನೋಂದಣಿ: ಕೆಇಎ ಸ್ಪಷ್ಟನೆ

ಬೆಂಗಳೂರು: ನೀಟ್ ಪರೀಕ್ಷೆ ಬರೆದವರು ಕೂಡ ರಾಜ್ಯದ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಸೀಟು ಪಡೆಯಲು ಸಿಇಟಿಗೆ ನೋಂದಣಿ ಮಾಡಿಸಬೇಕು ಎಂಬ ನಿಯಮ ಹಿಂದಿನಿಂದಲೂ ಜಾರಿಯಲ್ಲಿದೆ. ಇದು ಹೊಸದಾಗಿ ಜಾರಿಯಾಗಿರುವ ನಿಯಮವಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸ್ಪಷ್ಟಪಡಿಸಿದೆ. ಈ ಸಂಬಂಧ ಕೆಇಎ ಹೊಸ ನಿಯಮ ಜಾರಿಗೊಳಿಸಿರುವುದರಿಂದ ಹಲವಾರು ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ ಎಂದು ಕೆಲವರು ಅನಗತ್ಯವಾಗಿ ಗುಲ್ಲೆಬ್ಬಿಸುತ್ತಿದ್ದಾರೆ ಎಂದು ಕೆಇಎ ಹೇಳಿದೆ. ಪ್ರಸಕ್ತ ಸಾಲಿನಲ್ಲಿ ನೀಟ್ ಬರೆದಿರುವ ಸುಮಾರು 2 ಲಕ್ಷ ಅಭ್ಯರ್ಥಿಗಳು ಸಿಇಟಿಗೆ ನೋಂದಣಿ ಮಾಡಿಸಿದ್ದಾರೆ. ಇದರಲ್ಲಿ 50,000 ವಿದ್ಯಾರ್ಥಿಗಳು ಹೊರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ರಾಜ್ಯದಲ್ಲಿ ವೈದ್ಯಕೀಯ ಸೀಟು ಹಂಚಿಕೆಗೆ ಕೆಇಎ ನೋಡಲ್ ಸಂಸ್ಥೆ ಎಂದೂ ಕೆಇಎ ಸ್ಪಷ್ಟಪಡಿಸಿದೆ.

ಮಂಗಳೂರು: ಪಶುಪಾಲಕರಿಂದ ಅರ್ಜಿ ಆಹ್ವಾನ

Article Image

ಮಂಗಳೂರು: ಪಶುಪಾಲಕರಿಂದ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಶೇ.50 ಸಹಾಯಧನ ಮೂಲಕ 2024-25 ನೇ ಸಾಲಿಗೆ 2 ಎಚ್‌ಪಿ ಮೇವು ಕತ್ತರಿಸುವ ಯಂತ್ರಗಳ ಸರಬರಾಜು ಯೋಜನೆಗೆ ಪಶುಪಾಲಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಸ್ಥಳೀಯ ಪಶು ವೈದ್ಯಾಧಿಕಾರಿ ಅಥವಾ ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ), ಹತ್ತಿರದ ಪಶು ಆಸ್ಪತ್ರೆ ಕಚೇರಿಯನ್ನು ಸಂಪರ್ಕಿಸಿ, ಅರ್ಜಿಯನ್ನು ಅವಶ್ಯಕ ದಾಖಲೆಯೊಂದಿಗೆ ಮೇ 18ರೊಳಗೆ ಸಲ್ಲಿಸುವಂತೆ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಡಿಪ್ಲೊಮಾ ಪ್ರವೇಶ: ಅರ್ಜಿ ಆಹ್ವಾನ

Article Image

ಡಿಪ್ಲೊಮಾ ಪ್ರವೇಶ: ಅರ್ಜಿ ಆಹ್ವಾನ

ಮಂಗಳೂರು: ಬೊಂದೇಲ್‌ನಲ್ಲಿರುವ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್ (ಇಂಗ್ಲಿಷ್, ಕನ್ನಡ ) ಹಾಗೂ ಲೈಬ್ರರಿ ಆ್ಯಂಡ್ ಇನ್ಫಾರ್ಮೇಷನ್ ಸೈನ್ಸ್ ಕೋರ್ಸುಗಳ ದಾಖಲಾತಿಗೆ ಎಸ್‌ಎಸ್‌ಎಲ್‌ಸಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಮೇ 14ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜನ್ನು ಸಂಪರ್ಕಿಸಬಹುದು ಎಂದು ಪ್ರಿನ್ಸಿಪಾಲ್‌ರವರು ತಿಳಿಸಿದ್ದಾರೆ.

ಮಂಗಳೂರು: ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ

Article Image

ಮಂಗಳೂರು: ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಉಳಾಯಿಬೆಟ್ಟುವಿನ ಮೌಲಾನ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. 6ರಿಂದ 10ನೇ ತರಗತಿವರೆಗೆ ಕನ್ನಡ, ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಬೋಧಿಸಲು ಬಿಎಸ್ಸಿ-ಬಿಎಡ್ ಮತ್ತು ಬಿಎ-ಬಿಎಡ್ ಪದವೀಧರ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಉಜಿರೆ: ರುಡ್ ಸೆಟ್‌ ಸಂಸ್ಥೆ-“ಮಹಿಳೆಯರಿಗೆ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ಬಹಳ ಮುಖ್ಯ”

Article Image

ಉಜಿರೆ: ರುಡ್ ಸೆಟ್‌ ಸಂಸ್ಥೆ-“ಮಹಿಳೆಯರಿಗೆ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ಬಹಳ ಮುಖ್ಯ”

ಹೆಣ್ಣು ಮಕ್ಕಳನ್ನು ಪೋಷಕರು ಬೆಳೆಸುವಾಗ ಸಾಮಾನ್ಯವಾಗಿ ಮದುವೆಯ ಬಗ್ಗೆ ಯೋಚನೆ ಮಾಡುತ್ತಾರೆ ವಿದ್ಯಾಭ್ಯಾಸ ನೀಡುತ್ತಾರೆ ಆದರೆ ಉದ್ಯೋಗದ ಬಗ್ಗೆ ಯೋಚಿಸುವುದು ಕಡಿಮೆ. ಇಂದಿನ ಹೆಣ್ಣು ಮಕ್ಕಳಿಗೆ ವಿದ್ಯೆಯ ಜೊತೆಗೆ ಉದ್ಯೋಗ ಬೇಕು ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ‍್ಯ ಬಹು ಮುಖ್ಯವಾಗುತ್ತದೆ. ನಮ್ಮ ಕೈಯಲ್ಲಿ ನಮ್ಮ ದುಡ್ಡು ಇರಬೇಕು ನಮ್ಮ ಮತ್ತು ಮಕ್ಕಳ ಬೇಕು-ಬೇಡಗಳಿಗೆ, ಸ್ಪಂದಿಸಲು ಅನುಕೂಲವಾಗುತ್ತದೆ. ಇನ್ನೂ ಮುಖ್ಯವಾಗಿ ನಮ್ಮ ಮನೋಬಲ ಏನು, ನಮ್ಮ ಒಳಗೆ ಏನು ಆಸೆ ಇದೆ. ನಮ್ಮಲ್ಲಿ ಏನು ಪ್ರತಿಭೆ ಇದೆ. ನಮ್ಮ ವ್ಯಕ್ತಿತ್ವ ಏನು ಎಂಬುದನ್ನು ತಿಳಿದಿರಬೇಕು. ಪದವಿ ಓದಿದ ನಂತರ ಕೂಡ ಮುಂದೆ ಏನು ಮಾಡಬೇಕು ಎಂಬುದನ್ನು ತಿಳಿದಿರಬೇಕು. ನಮ್ಮಲ್ಲಿ ಏನು ಕೌಶಲ್ಯ ಇದೆ ಎಂಬುದು ಗೊತ್ತಿರಬೇಕು. ಬೇರೆ ಬೇರೆ ವ್ಯಕ್ತಿಗಳಿಗೆ ಬೇರೆ ಬೇರೆ ಕೌಶಲ್ಯಗಳು ಇರುತ್ತದೆ. ಅದನ್ನು ಗುರುತಿಸಿ, ಪೋಷಿಸಿ ಬೆಳೆಸಬೇಕು ಇದು ಮುಖ್ಯ. ಇಂದು ಬೇರೆ ಬೇರೆ ಸಾಮಾಜಿಕ ಜಾಲತಾಣ ಮೂಲಕ ವಿಷಯಗಳನ್ನು ಕಲಿತು ಜ್ಙಾನ ವೃದ್ಧಿ ಮಾಡಿಕೊಳ್ಳಬಹುದು, ರುಡ್ ಸೆಟ್ ಸಂಸ್ಥೆಯಲ್ಲಿ ಮಾತ್ರ ಕೌಶಲ್ಯದ ಜೊತೆಗೆ ವ್ಯಕ್ತಿತ್ವ ವಿಕಸನವನ್ನು ಕಲಿಸಿಕೊಡುತ್ತಾರೆ ಇದು ವ್ಯವಹಾರದಲ್ಲಿ ಬಹಳ ಮುಖ್ಯವಾಗಿರುತ್ತದೆ. ರುಡ್ ಸೆಟ್ ಸಂಸ್ಥೆಯಲ್ಲಿ ಎಲ್ಲಾ ವಿಷಯಗಳನ್ನು ಒಟ್ಟಿಗೆ ಸಿಗುವುದರಿಂದ ನಿಮಗೆ ಅನುಕೂಲವಾಗುತ್ತದೆ ಮುಂದೆ ತರಬೇತಿಯಲ್ಲಿ ಕಲಿತ ವಿಷಯವನ್ನು ನೀವು ಗ್ರಾಹಕರಿಗೆ ಯಾವ ರೀತಿ ವಿಭಿನ್ನವಾಗಿ ನಿರೂಪಿಸುತ್ತೀರಿ ಅದರ ಮೂಲಕ ನಿಮ್ಮನ್ನು ನೀವು ತೋರಿಸಿಕೊಡಬೇಕು. ಅನ್ನುವುದನ್ನು ನೀವು ರೂಪಿಸಕೊಳ್ಳಲು ನಿಮ್ಮಲ್ಲಿ ಸಮಯ ನಿರ್ವಹಣೆ, ಹಣಕಾಸಿ ವ್ಯವಹಾರ, ಉತ್ತಮ ಮಾತುಗಾರಿಕೆ ಮುಖ್ಯವಾಗಿ ಇರಲಿ, ಗ್ರಾಹಕರ ನಂಬಿಕೆ ಉಳಿಸಿಕೊಂಡು ಉತ್ತಮವಾದ ಬಾಂಧವ್ಯವನ್ನು ಬೆಳೆಸಿಕೊಳ್ಳಿ, ನಿಮ್ಮ ವೃತ್ತಿ ಜೀವನದ ದಾರಿಯಲ್ಲಿ ನಿಮಗೆಲ್ಲ ಯಶಸ್ಸು ಸಿಗಲಿ ಎಂದು ಬೆಂಗಳೂರು ಕ್ಷೇಮವನದ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಶೃದ್ಧಾ ಅಮಿತ್ ಅಭಿಪ್ರಾಯಪಟ್ಟರು. ಅವರು ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 06 ದಿನ ಗಳ ಕಾಲ ನಡೆದ ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಶುಭ ಹಾರೈಸಿದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಎಮ್. ಸುರೇಶ್‌ರವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಕಾರ್ಯಕ್ರಮದಲ್ಲಿ ಎಸ್.ಕೆ.ಡಿ.ಆರ್.ಡಿ.ಪಿಯ ನಿಕಟಪೂರ್ವಕ ಪ್ರಾದೇಶಿಕ ನಿರ್ದೇಶಕರಾದ ಮಹಾವೀರ ಅಜ್ರಿ ಅವರು ಉಪಸ್ಥಿತರಿದ್ದರು ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ರವರು ಕಾರ್ಯಕ್ರಮ ನಿರೂಪಿಸಿದರು, ಹಿರಿಯ ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ಅವರು ವಂದಿಸಿದರು. ತರಬೇತಿಯಲ್ಲಿ ಒಟ್ಟು 35 ಜನ ಅಭ್ಯರ್ಥಿಗಳು ಭಾಗವಹಿಸಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಕಾರ್ಯನಿರ್ವಾಹಕ, ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Article Image

ಕಾರ್ಯನಿರ್ವಾಹಕ, ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್.ಎಚ್. ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭವು ಮೇ.11ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ ಡಾ.ಎಲ್.ಎಚ್. ಮಂಜುನಾಥರವರು ಅದ್ಬುತ ಕೆಲಸಗಳ ಮೂಲಕ ಜನರ ಪ್ರೀತಿ ವಿಶ್ವಾಸ ನಂಬಿಕೆಗಳಿಸಿದ್ದಾರೆ. ನಮ್ಮಲ್ಲಿ ಸಮಾಜಕ್ಕಾಗಿ ದುಡಿಯುವ ತುಡಿತವಿರಬೇಕು, ಏನೂ ಮಾಡಬೇಕೆಂಬುದರ ಬಗ್ಗೆ ಜ್ಞಾನವಿರಬೇಕು ಎಂದರು. ಡಾ.ಎಲ್.ಎಚ್ ಮಂಜುನಾಥ್ ಅವರು ಮಾತನಾಡಿ ಡಾ. ಹೆಗ್ಗಡೆಯವರು ನನಗೆ ದೇವರಿದ್ದಾಗೆ. ಕಳೆದ 23 ವರ್ಷಗಳ ಕಾಲ ಯೋಜನೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ ಪೂಜ್ಯರಿಗೆ ಕೃತಜ್ಞತೆ ಅರ್ಪಿಸಿದರು. ಭಾರತೀಯ ಜೀವ ವಿಮಾ ನಿಗಮದ ಮುಂಬೈ ಕೇಂದ್ರ ಕಚೇರಿ ವ್ಯವಸ್ಥಾಪಕ, ನಿರ್ದೇಶಕ ಎಂ. ಜಗನ್ನಾಥ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಟಿಗಳು, ಜ್ಞಾನವಿಕಾಸ ಕಾರ್ಯಕ್ರಮ ಅಧ್ಯಕ್ಷೆ ಡಾ. ಹೇಮಾವತಿ ವೀ. ಹೆಗ್ಗಡೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಟಿಗಳಾದ ಡಿ.ಸುರೇಂದ್ರ ಕುಮಾರ್, ವೈ ನಾಗೇಶ್ವರ ರಾವ್, ಸಂಪತ್ ಸಾಮ್ರಾಜ್ಯ, ಉದಯಕುಮಾರ್ ಶೆಟ್ಟಿ, ಶ್ಯಾಮ್ ಭಟ್, ಯೋಜನೆಯ ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ್ ಆರ್. ಪೈ, ಡಾ.ಎಲ್.ಎಚ್. ಮಂಜುನಾಥ್ ಅವರ ಧರ್ಮಪತ್ನಿ ನಳಿನಿ, ಪುತ್ರ ಡಾ. ರೋಹನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸುಪ್ರೀಯಾ ಹರ್ಷೇಂದ್ರ ಕುಮಾರ್, ಶ್ರದ್ದಾ ಅಮಿತ್ ಹಾಗೂ ಯೋಜನೆಯ ವಿವಿಧ ವಿಭಾಗದ ಅಧಿಕಾರಿಗಳು, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. ಡಾ.ಎಲ್.ಎಚ್. ಮಂಜುನಾಥ್ ದಂಪತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಯೋಜನೆಯ ಪ್ರಾದೇಶಿಕ ಕಚೇರಿ, ಕೇಂದ್ರ ಕಚೇರಿ ಹಾಗೂ ಎಸ್.ಡಿ.ಎಂ ನ ವಿವಿಧ ವಿಭಾಗಗಳಿಂದ ಗೌರವಿಸಲಾಯಿತು. ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪೂಜಾ ಪಕ್ಕಳ, ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ಸಮುದಾಯ ವಿಭಾಗದ ಅಭಿವೃದ್ಧಿ ಅಧಿಕಾರಿ ಆನಂದ ಸುವರ್ಣ ವಂದಿಸಿದರು.

ಕನ್ನಡ ಸಾಹಿತ್ಯ ಪರಿಷತ್: ಸಂಸ್ಥಾಪನಾ ದಿನಾಚರಣೆ

Article Image

ಕನ್ನಡ ಸಾಹಿತ್ಯ ಪರಿಷತ್: ಸಂಸ್ಥಾಪನಾ ದಿನಾಚರಣೆ

ಉಜಿರೆ: ತಾಯಿ ಮತ್ತು ಜನ್ಮಭೂಮಿ ಸ್ವರ್ಗಕ್ಕಿಂತಲೂ ಮಿಗಿಲಾಗಿದೆ. ಕನ್ನಡನಾಡು, ನುಡಿ ಮತ್ತು ಸಂಸ್ಕೃತಿಯನ್ನು ಸದಾ ಲವಲವಿಕೆಯೊಂದಿಗೆ ಜೀವಂತವಾಗಿರಿಸಲು ಕನ್ನಡ ಸಾಹಿತ್ಯ ಪರಿಷತ್ತನ್ನು ಸದೃಢಗೊಳಿಸಬೇಕಾದ ಅನಿವಾರ್ಯತೆ ಇದೆ ಎಂದು ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕುಮಾರ ಹೆಗ್ಡೆ ಅವರು ಭಾನುವಾರ(ಮೇ 5) ಸಿದ್ಧವನ ಗುರುಕುಲದಲ್ಲಿ ಆಯೋಜಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ 110ನೆ ಸಂಸ್ಥಾಪನಾ ದಿನಾಚರಣೆ ಉದ್ಘಾಟಸಿ ಶುಭ ಹಾರೈಸಿದರು. ಇಂದು ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಹೋಬಳಿ ಮಟ್ಟದವರೆಗೂ ಹೆಚ್ಚಿನ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಎಲ್ಲರೂ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಮಾತನಾಡಿ ಜಿಲ್ಲೆಯಲ್ಲಿ ನಾಲ್ಕುನೂರಕ್ಕೂ ಮಿಕ್ಕಿ ಕಾರ್ಯಕ್ರಮಗಳ ಮೂಲಕ ಕನ್ನಡ ಸಾಹಿತ್ಯ, ನುಡಿ, ಸಂಸ್ಕೃತಿ ಬಗ್ಗೆ ಅರಿವು, ಜಾಗೃತಿ ಮೂಡಿಸಲಾಗಿದೆ ಎಂದರು. ಪುತ್ತೂರು ವಿವೇಕಾನಂದ ಕಾಲೇಜಿನ ಸಂಸ್ಕೃತಿ ವಿಭಾಗದ ಮುಖ್ಯಸ್ಥ ಪ್ರೊ. ಶ್ರೀಶ ಕುಮಾರ್ ಅವರು ಮಾತನಾಡಿ, ಶಬ್ದ ಮತ್ತು ಅರ್ಥಗಳ ಮಂಜುಳ ಸಂಯೋಜನೆಯೇ ಮನಕ್ಕೆ ಮುದ ನೀಡುವ ಸಾಹಿತ್ಯ ಆಗುತ್ತದೆ. ಸಾಹಿತ್ಯ ಕೃತಿಗಳನ್ನು ಓದುವ, ಬರೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಮಂಗಳೂರಿನ ಡಾ. ಮಾಧವ ಎಂ.ಕೆ. ಮಾತನಾಡಿ ವಿದೇಶೀಯರ ದಾಳಿಗಳು ಕನ್ನಡ ಭಾಷೆಯ ಮೇಲೂ ಗಾಢ ಪರಿಣಾಮ ಬೀರಿವೆ. ಕನ್ನಡದ ಬಗ್ಗೆ ಕೀಳರಿಮೆ ಸಲ್ಲದು ಎಂದರು. ರಾಮಕೃಷ್ಣ ಭಟ್ ಚೊಕ್ಕಾಡಿ ಕಾರ್ಯಕ್ರಮ ನಿರ್ವಹಿಸಿದರು.

ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ ‘ನೀಟ್' ಪರೀಕ್ಷೆ

Article Image

ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ ‘ನೀಟ್' ಪರೀಕ್ಷೆ

ಮಂಗಳೂರು,ಉಡುಪಿ: ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ರವಿವಾರ (ಮೇ 5) ಕರಾವಳಿಯಾದ್ಯಂತ ಸಾಂಗವಾಗಿ ನಡೆದಿದೆ. ವಿದ್ಯಾರ್ಥಿಗಳ ಹಾಲ್‌ಟಿಕೆಟ್ ಹಾಗೂ ಐಡಿ ದಾಖಲೆಯನ್ನು ಪರೀಕ್ಷಾ ಕೇಂದ್ರದ ಗೇಟ್‌ನಲ್ಲಿಯೇ ಪರಿಶೀಲಿಸಿ ಒಳಗೆ ಬಿಡಲಾಯಿತು. ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕುಲೇಟರ್, ಗಡಿಯಾರ, ಇಯರ್ ಫೋನ್, ಮೈ ಮೇಲೆ ಆಭರಣ ಧರಿಸಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅವಕಾಶವಿರಲಿಲ್ಲ. ಪರೀಕ್ಷೆ ಬರೆಯಲು ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದರು. ಮಧ್ಯಾಹ್ನ ಅನಂತರ ಪರೀಕ್ಷೆ ಇದ್ದರೂ ಬಹುತೇಕ ವಿದ್ಯಾರ್ಥಿಗಳು ಬೆಳಗ್ಗೆಯೇ ಆಗಮಿಸಿದ್ದರು. ದ.ಕ. ಜಿಲ್ಲೆಯ 18 ಕೇಂದ್ರಗಳಲ್ಲಿ 9,670 ವಿದ್ಯಾರ್ಥಿಗಳು, ಪರೀಕ್ಷೆಗಾಗಿ ನೋಂದಣಿ ಮಾಡಿದ್ದರು. ಈ ಪೈಕಿ 9,235 ಮಂದಿ ಪರೀಕ್ಷೆ ಬರೆದಿದ್ದಾರೆ. ಉಡುಪಿ ಜಿಲ್ಲೆಯ 9 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ನೋಂದಣಿ ಮಾಡಿಕೊಂಡಿದ್ದ 3,241 ವಿದ್ಯಾರ್ಥಿಗಳಲ್ಲಿ 3,084 ಮಂದಿ ಹಾಜರಾಗಿದ್ದಾರೆ. ದ.ಕ., ಉಡುಪಿ ಜಿಲ್ಲೆಗಳ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ಗುಲ್ಬರ್ಗ, ಹಾಸನ ಸಹಿತ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಡ್ರೋನ್ಸ್ ಫಾರ್ ಅಗ್ರಿಕಲ್ಚರ್: ತರಬೇತಿ ಕಾರ್ಯಾಗಾರ

Article Image

ಡ್ರೋನ್ಸ್ ಫಾರ್ ಅಗ್ರಿಕಲ್ಚರ್: ತರಬೇತಿ ಕಾರ್ಯಾಗಾರ

ಉಡುಪಿ: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣೆ ಸಂಸ್ಥೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಸಹಯೋಗದಲ್ಲಿ ‘ಅಪ್ಲಿಕೇಶನ್ಸ್ ಆಫ್ ಯುಎವಿ ಆ್ಯಂಡ್ ಡ್ರೋನ್ಸ್ ಫಾರ್ ಅಗ್ರಿಕಲ್ಚರ್' ಮೇ 14 ರಿಂದ 16ರ ವರೆಗೆ ಆನ್‌ಲೈನ್ ಮೂಲಕ ತರಬೇತಿ ಕಾರ್ಯಾಗಾರ ಆಯೋಜಿಸಲಾಗುತ್ತಿದೆ. ಪ್ರತಿಷ್ಠಿತ ಸಂಸ್ಥೆಗಳ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸಗಳನ್ನು ನೀಡಲಿದ್ದಾರೆ. ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಹಾಗೂ ಯುವ ವಿಜ್ಞಾನಿಗಳು ಮೇ 10ರ ಒಳಗಾಗಿ https://forms.gle/LwxDoR5sktBVHktf9 ನೋಂದಾಯಿಸಿಕೊಂಡು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಮಾಹಿತಿಗೆ 9743084194 ಪ್ರಕಟಣೆ ತಿಳಿಸಿದೆ.

ಬೆಳ್ತಂಗಡಿ: ಸುದರ್ಶನ ಕ್ರಿಯಾ ಯೋಗ ಶಿಬಿರ

Article Image

ಬೆಳ್ತಂಗಡಿ: ಸುದರ್ಶನ ಕ್ರಿಯಾ ಯೋಗ ಶಿಬಿರ

ಗುರುದೇವ್ ಶ್ರೀ ರವಿಶಂಕರ್ ಅವರ ಆನಂದೋತ್ಸವ ಸುದರ್ಶನ ಕ್ರಿಯಾ ಯೋಗ ಶಿಬಿರ ಉಜಿರೆಯ ಅರಿಪ್ಪಾಡಿ ಮಠ ಸಭಾಂಗಣದಲ್ಲಿ ಮೇ 15 ರಿಂದ 20ರ ವರೆಗೆ ಪ್ರತೀ ಸಂಜೆ 5.30 ರಿಂದ 8ರ ವರೆಗೆ ನಡೆಯಲಿದೆ. ಶಿಬಿರದಲ್ಲಿ ಯೋಗ, ಧ್ಯಾನ, ಪ್ರಾಣಾಯಾಮ, ಸುದರ್ಶನ ಕ್ರಿಯಾ ಮತ್ತು ಜೀವನಕ್ಕೆ ಸಂಬಂಧಿಸಿದ ಜ್ಞಾನ ಒದಗಿಸಲಾಗುವುದು. ವಿಶ್ವದ ಮಿಲಿಯಾಂತರ ಜನರ ಜೀವನವನ್ನು ಪರಿವರ್ತಿಸಿದ ಸರಳವಾದ ಉಸಿರಾಟ ಪ್ರಕ್ರಿಯೆ ಸುದರ್ಶನ ಕ್ರಿಯೆ ಕಲಿಯುವ ಸುವರ್ಣಾವಕಾಶವಿದ್ದು ಒತ್ತಡ ರಹಿತ, ಶಾಂತವಾದ ಮನಸ್ಸು ಸಂತೋಷ ಉತ್ಸಾಹ ಮತ್ತು ಕ್ರಿಯಾಶೀಲತೆ, ಮಾನಸಿಕ ಖಿನ್ನತೆ, ಚಿಂತೆ ಮತ್ತು ಆತಂಕಗಳಿಂದ ಮುಕ್ತಿ, ಆರೋಗ್ಯಕರವಾದ ದೇಹ ಮತ್ತು ಉತ್ತಮ ನಿದ್ದೆಗೆ ಸುದರ್ಶನ ಕ್ರಿಯಾ ಯೋಗ ಉಪಯುಕ್ತವಾಗಿದ್ದು ಆಸಕ್ತರು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Article Image

ಬೆಂಗಳೂರು: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿನ ಗ್ರೂಪ್ 'ಸಿ' ವೃಂದದ 76 ಮೋಟಾರು ವಾಹನ ನಿರೀಕ್ಷಕರ ನೇಮಕಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಿದೆ. ಮೊದಲೇ ನಿಗದಿಯಾಗಿದ್ದಂತೆ ಏ.22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ವಿಳಂಬವಾಗುತ್ತಿರುವುದರಿಂದ ಕೊನೆಯ ದಿನಾಂಕವನ್ನು ಮೇ 21ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಡಾ.ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ವಾಹನ ಚಾಲನಾ ಪರವಾನಗಿ (ಡಿಎಲ್)ಗೆ ಸಂಬಂಧಿಸಿದ ಅರ್ಜಿಯಲ್ಲಿ ಡಿಎಲ್ ಸಂಖ್ಯೆ ನಮೂದಿಸಿದಾಗ ಅದರ ಸಂಪೂರ್ಣ ಮಾಹಿತಿ ಎಪಿಐ ತಂತ್ರಾಂಶದ ಮೂಲಕ ಅರ್ಜಿಯಲ್ಲಿ ಬರುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಅದು ತಾಂತ್ರಿಕ ಕಾರಣದಿಂದ ವಿಳಂಬವಾಗುತ್ತಿರುವುದರಿಂದ ಅರ್ಜಿ ಸಲ್ಲಿಸುವ ಕಾಲಮಿತಿ ವಿಸ್ತರಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಜೆಇಇ ಮೈನ್ಸ್ ಪರೀಕ್ಷೆ: ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾರ್ಥಿಗಳ ಸಾಧನೆ

Article Image

ಜೆಇಇ ಮೈನ್ಸ್ ಪರೀಕ್ಷೆ: ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಇತ್ತೀಚೆಗೆ ನಡೆದ ರಾಷ್ಟçಮಟ್ಟದ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದು ಉತ್ಕ್ರಷ್ಟ ಸಾಧನೆಗೈದಿದ್ದಾರೆ. ಎರಡು ಹಂತಗಳಲ್ಲಿ ನಡೆದ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಒಟ್ಟು 130 ವಿದ್ಯಾರ್ಥಿಗಳು ಹಾಜರಾಗಿದ್ದು 78 ವಿದ್ಯಾರ್ಥಿಗಳು ಉತ್ತಮ ಪರ್ಸೆಂಟೆಜ್ ಪಡೆದು ಜೆಇಇ ಅಡ್ವಾನ್ಸ್ ಗೆ ಅರ್ಹತೆ ಪಡೆದಿರುತ್ತಾರೆ. ನಿಶಾಂತ್ ಪಿ. ಹೆಗಡೆ (99.5545), ಸಂಜಯ್ ಬಿರಾದಾರ್ (99.4222), ಸಚಿನ್ ವಿ. ನಾಗರೆಡ್ಡಿ(99.3426), ಸೃಜನ್ ಎಂ. ಆರ್. (99.0462) 99 ಪರ್ಸೆಂಟೆಜ್‌ಗಿ0ತ ಅಧಿಕ ಅಂಕವನ್ನು ಗಳಿಸಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ವಿ. ಚಿರಾಗ್ ಕಂಚಿರಾಯ ರಾಷ್ಟ್ರಮಟ್ಟದಲ್ಲಿ 1106ನೇ ರ‍್ಯಾಂಕ್(ಎಸ್.ಸಿ), ಸಂಜಯ್ ಬಿರಾದಾರ್ 1321 ನೇ ರ‍್ಯಾಂಕ್(ಇ.ಡಬ್ಲು.ಎಸ್), ಸಚಿನ್ ವಿ. ನಾಗರೆಡ್ಡಿ 1517 ನೇ ರ‍್ಯಾಂಕ್(ಇ.ಡಬ್ಲು.ಎಸ್), ಮತ್ತು ಸಾನ್ವಿ ಟಿ. ಎಸ್. 3022ನೇ ರ‍್ಯಾಂಕ್(ಎಸ್.ಟಿ), ಶ್ರೀಶೈಲ್ ಬಿ. ಪಾಟೀಲ್ 4590ನೇ ರ‍್ಯಾಂಕ್(ಇ.ಡಬ್ಲು.ಎಸ್), ರೋಹನ್ 4803 ನೇ ರ‍್ಯಾಂಕ್(ಇ.ಡಬ್ಲು.ಎಸ್), ಮತ್ತು ನಿಶಾಂತ್ ಪಿ. ಹೆಗಡೆ 7251 ನೇ ರ‍್ಯಾಂಕ್(ಸಿ.ಆರ್.ಎಲ್) ಪಡೆದಿರುತ್ತಾರೆ. ಎರಡನೇ ಹಂತದ ಪ್ರವೇಶ ಪರೀಕ್ಷೆಯಲ್ಲಿ ನಿಖಿಲ್ ಬಿ. ಗೌಡ ಮತ್ತು ಭಾರ್ಗವಿ ಭೌತಶಾಸ್ತ್ರ ವಿಷಯದಲ್ಲಿ 100 ಪರ್ಸೆಂಟೆಜ್‌ನ್ನು ಪಡೆದಿರುತ್ತಾರೆ. ಭೌತಶಾಸ್ತ್ರದಲ್ಲಿ 11 ವಿದ್ಯಾರ್ಥಿಗಳು, ರಸಾಯನಶಾಸ್ತ್ರದಲ್ಲಿ 6 ವಿದ್ಯಾರ್ಥಿಗಳು ಮತ್ತು ಗಣಿತಶಾಸ್ತ್ರದಲ್ಲಿ 4 ವಿದ್ಯಾರ್ಥಿಗಳು 99 ಪರ್ಸೆಂಟೆಜ್‌ಗಿ0ತ ಅಧಿಕ ಅಂಕವನ್ನು ಪಡೆದಿರುತ್ತಾರೆ.

ಪಿಯು ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Article Image

ಪಿಯು ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ-2 ಏ. 29ರಿಂದ ಆರಂಭಗೊಳ್ಳಲಿದ್ದು, ಮೇ 16ರವರೆಗೆ ನಡೆಯಲಿದೆ. ಪರೀಕ್ಷೆ ಬರೆಯಲು 1,49,300 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರೆಲ್ಲರೂ ಪ್ರವೇಶ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವೆಬ್ ಸೈಟ್‌ನಿಂದ ಪಡೆಯಬಹುದಾಗಿದೆ. 32,848 ವಿದ್ಯಾರ್ಥಿಗಳು ಉನ್ನತೀಕರಣ (ಇಂಪ್ರೂವ್‌ಮೆಂಟ್) ಬಯಸಿ ಪರೀಕ್ಷೆ ತೆಗೆದುಕೊಂಡಿದ್ದು, 27,092 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. 89,221 ನಾಟ್ ಕ್ಲಿಯರ್ಡ್ ವಿದ್ಯಾರ್ಥಿಗಳಾಗಿದ್ದು, 139 ವಿದ್ಯಾರ್ಥಿಗಳು ಶೇ.75 ರಷ್ಟು ಹಾಜರಾತಿ ಇಲ್ಲದೇ 17 ವರ್ಷ ತುಂಬಿದ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯಾದ್ಯಂತ 301 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಎಲ್ಲಾ ವಿದ್ಯಾರ್ಥಿಗಳು https://kseab.karnataka.gov.in ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರ ಪಡೆಯಬಹುದಾಗಿದೆ. 11 ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು ಆನ್‌ಲೈನ್‌ನಲ್ಲಿ ಪಡೆಯಬಹುದಾಗಿದೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶಪತ್ರ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಉಜಿರೆ: ನಿವೃತ್ತ ನೌಕರನಿಗೆ ಸನ್ಮಾನ

Article Image

ಉಜಿರೆ: ನಿವೃತ್ತ ನೌಕರನಿಗೆ ಸನ್ಮಾನ

ಸಂಸ್ಥೆಯ ನೌಕರರು ಸಂಸ್ಥೆಯ ಎಲ್ಲಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಸಂಸ್ಥೆಯ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ. ನೌಕರರು ಎಂದೂ ಅಡಗಿಸಿಕೊಳ್ಳಬಾರದು ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಅವರು ಬುಧವಾರ ಧರ್ಮಸ್ಥಳದಲ್ಲಿರುವ ಶಾಂತಿವನದಲ್ಲಿ 36 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಚಂದು ನಾಯ್ಕ ಅವರನ್ನು ಸನ್ಮಾನಿಸಿ ಮಾತನಾಡಿದರು. ನೌಕರರು ಸಂಸ್ಥೆಯ ಧ್ಯೇಯವನ್ನು ಅರಿತು ಕರ್ತವ್ಯ ಪಾಲನೆ ಮಾಡಿದರೆ ಸಂಸ್ಥೆ ಬೆಳೆಯುತ್ತದೆ, ಬೆಳಗುತ್ತದೆ ಎಂದು ಅವರು ಹೇಳಿದರು. ಎಸ್.ಡಿ.ಎಂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ಶ್ರೀಧರ ಭಟ್ ಅಭಿನಂದನಾ ಭಾಷಣ ಮಾಡಿದರು. ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಡಾ. ಶಶಿಕಾಂತ್ ಜೈನ್ ಧನ್ಯವಾದವಿತ್ತರು. ಅನನ್ಯಾ ಕಾರ್ಯಕ್ರಮ ನಿರ್ವಹಿಸಿದರು.

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ) ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

Article Image

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ) ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ)ವು ರಾಜ್ಯ ಸರಕಾರಿ ನೌಕರರ ಸಂಘದ ಕಟ್ಟಡದಲ್ಲಿ ಈ ವರೆಗೆ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಸುವರ್ಣ ಆರ್ಕೇಡ್ ಕಟ್ಟಡಕ್ಕೆ ಇಂದು ಸ್ಥಳಾಂತರಗೊಂಡಿತು . ತಾಲೂಕು ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ.ರವರು ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ಕೆ. ಜಯಕೀರ್ತಿ ಜೈನ್‌ರವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಪರಮೇಶ್ ಟಿ., ಚಂದ್ರಶೇಖರ್, ರತ್ನಾವತಿ, ಪ್ರಶಾಂತ ಕುಮಾರ್, ಹರಿಪ್ರಸಾದ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವತ್ಸಲಾ ಜ್ಯೋತಿರಾಜ್, ಶಾಖಾ ವ್ಯವಸ್ಥಾಪಕ ಪಿ. ಅತಿಶಯ್ ಜೈನ್, ಮುಖ್ಯ ಪಶು ವೈದ್ಯಾಧಿಕಾರಿ ಡಾ| ರವಿ ಕುಮಾರ್, ಸಬ್ ರಿಜಿಸ್ಟ್ರಾರ್ ನಾಗರಾಜ್, ಸಿಬ್ಬಂದಿಗಳಾದ ವಿಶಾಲ, ನಿತಿನ್ ಹಾಗೂ ನಿತ್ಯನಿಧಿ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು..ಸಹಕಾರಿ ಸಂಘದ ಸಲಹೆಗಾರರಾದ ವಸಂತ ಸುವರ್ಣರವರು ಸ್ವಾಗತಿಸಿ, ಉಪಾಧ್ಯಕ್ಷರಾದ ಚಿದಾನಂದ ಎಸ್. ಹೂಗಾರ್‌ರವರು ವಂದಿಸಿದರು. ಈ ಸಹಕಾರಿ ಸಂಘದಲ್ಲಿ ಇ-ಸ್ಟ್ಯಾಂಪಿಂಗ್ , ಕಲರ್ ಝೆರಾಕ್ಸ್,, ಝೆರಾಕ್ಸ್,, ಆಯುಷ್ಮಾನ್ ಹೆಲ್ತ್ ಕಾರ್ಡ್, ಪಹಣಿ ಪತ್ರ, ಎಲ್ಲಾ ಬಗೆಯ ಸ್ಟೇಷನರಿಗಳು ಮಿತ ದರದಲ್ಲಿ ದೊರೆಯುವ ಸೌಲಭ್ಯಗಳು ಇರುತ್ತದೆ.

First Previous

Showing 4 of 6 pages

Next Last