Article Image

ಎಕ್ಸಲೆ0ಟ್ ಮೂಡುಬಿದಿರೆ : ಜೆ ಇ ಇ ಅಡ್ವಾನ್ಸ್ಡ್ ರಾ‌ಷ್ಟ್ರಮಟ್ಟದ ಸಾಧನೆ

Article Image

ಎಕ್ಸಲೆ0ಟ್ ಮೂಡುಬಿದಿರೆ : ಜೆ ಇ ಇ ಅಡ್ವಾನ್ಸ್ಡ್ ರಾ‌ಷ್ಟ್ರಮಟ್ಟದ ಸಾಧನೆ

ಮೂಡುಬಿದಿರೆ: ಇತ್ತೀಚೆಗೆ ನಡೆದ ರಾ‌ಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆ0ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅ0ಕಗಳನ್ನು ಪಡೆದು ಉತ್ಕೃಷ್ಟ ಸಾಧನೆಗೈದಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ರಾ‌ಷ್ಟ್ರಮಟ್ಟದಲ್ಲಿ 664 ನೇ ಸ್ಥಾನ (OPEN), ಕಾರ್ತಿಕ್ ಎಸ್ 12072 ನೇ ಸ್ಥಾನ (OPEN) , ಶ್ರೇಯಾಂಕ್ ಮನೋಹರ್ ಪೈ 4601ನೇ ಸ್ಥಾನ (C), ಶೌರ್ಯ್ ಬಿ ತಲ್‌ವಾರ್ 610ನೇ ಸ್ಥಾನ (C) , ಸ್ಮಿರಾ ತಲ್‌ವಾರ್ 27 ನೇ ಸ್ಥಾನ (C), ಪೂರ್ಣಚಂದ್ರ ಎಸ್ 2367 ನೇ ಸ್ಥಾನ (C), ಪಡೆದು ಉತ್ತಮ ಸ್ಥಾನ ಗಳಿಸುವುದರ ಮೂಲಕ ಸ0ಸ್ಥೆಗೆ ಕೀರ್ತಿ ತ0ದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾ0ಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಸ್ಪರ್ಧಾತ್ಮಕ ಪರೀಕ್ಷಾ ನಿರ್ದೇಶಕರಾದ ಡಾ. ಪ್ರಶಾಂತ್ ಹೆಗ್ಡೆ , ಜೆಇಇ ಸ0ಯೋಜಕರಾದ ವಿ ಅರುಣ್, ಹಾಗೂ ಉಪನ್ಯಾಸಕ ವೃ0ದದವರು ವಿದ್ಯಾರ್ಥಿಗಳನ್ನು ಅಭಿನ0ದಿಸಿದ್ದಾರೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ: ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

Article Image

ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ: ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಇದರ ದಶಮ ಸಂಭ್ರಮದ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡ್ನಲ್ಲಿ 15 ವರ್ಷದಿಂದ 25 ವರ್ಷದೊಳಗಿನ ಯುವ ಪ್ರತಿಭೆಗಳಿಗಾಗಿ ಏರ್ಪಡಿಸಿದ ಯಕ್ಷಗಾನ ಸ್ಪರ್ಧೆಯಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ತಂಡವು ಪ್ರಥಮ ಬಹುಮಾನವನ್ನು ಪಡೆಯಿತು. ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ವಿರಚಿಸಿದ, ಶೇಖರ ಶೆಟ್ಟಿಗಾರ್ ಮತ್ತು ಆದಿತ್ಯ ಅಂಬಲಪಾಡಿ ನಿರ್ದೇಶನದಲ್ಲಿ ‘ಸತಿ ಉಲೂಪಿ’ ಪ್ರಸಂಗ ಪ್ರದರ್ಶನವನ್ನು ನೀಡಿ, ಒಂದು ಲಕ್ಷ ರೂಪಾಯಿ ಹಾಗೂ ಸ್ಮರಣಿಕೆಯನ್ನು ಒಳಗೊಂಡ ಪ್ರಥಮ ಬಹುಮಾನವನ್ನು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಪಡೆಯಿತು. ಸಮಗ್ರ ವೈಯಕ್ತಿಕ ವಿಭಾಗದಲ್ಲಿ ಶಬರೀಶ್ ಆಚಾರ್ಯ, ಆಹಾರ್ಯ ವಿಭಾಗದಲ್ಲಿ ಮುಖೇಶ್ ದೇವಧರ್, ಲಿಖಿತ ವಿಭಾಗಲ್ಲಿ ಪ್ರಜ್ವಲ್ ಬಿ ಶೆಟ್ಟಿ ಬಹುಮಾನಗಳನ್ನು ಪಡೆದರು. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಕಳೆದ ಎರಡು ದಶಕಗಳಿಂದ ಯಕ್ಷಗಾನದ ವಿವಿಧ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ನಮ್ಮ ನಾಡಿನ ವಿವಿಧ ಯಕ್ಷಗಾನ ಮೇಳಗಳಲ್ಲಿ ವೃತ್ತಿಪರವಾಗಿ ದುಡಿಯುತ್ತಿದ್ದು ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ಪ್ರದರ್ಶನಗಳನ್ನು ನೀಡುತ್ತಿದ್ದಾರೆ. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಈ ಮೊದಲು ಹಲವಾರು ಸ್ಪರ್ಧೆಗಳನ್ನು ಗೆದ್ದು ಬಹುಮಾನಗಳನ್ನು ಪಡೆದುಕೊಂಡಿರುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು. ವಿಜೇತ ತಂಡವನ್ನು ಅವರು ಅಭಿನಂದಿಸಿದ್ದಾರೆ.

ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Article Image

ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಮೂಡುಬಿದಿರೆ : ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಬಹಳ ವಿಜೃಂಭಣೆಯಿಂದ ನೆರವೇರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ರವರು ಹಾಗೂ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ದೀಪವನ್ನು ಬೆಳಗಿಸುವುದರ ಮೂಲಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನರವರು ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸುತ್ತಾ, ವಿದ್ಯಾರ್ಥಿಗಳು ಗುರುಹಿರಿಯರನ್ನು ಗೌರವಭಾವದಿಂದ ಕಾಣುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಜೀವನವನ್ನು ಸಂತೋಷದಿಂದ ಮುಂದುವರಿಸಿ, ಕ್ರಿಯಾಶೀಲರಾಗಿ ಬೆಳೆಯಬೇಕು ಎಂದು ಶುಭ ಹಾರೈಸಿದರು. ಈ ಸುಸಂದರ್ಭದಲ್ಲಿ ಶೈಕ್ಷಣಿಕ ನಿರ್ದೇಶಕರಾದ ಪುಷ್ಪರಾಜ್ ಬಿ, ಟ್ರಸ್ಟಿನ ಸದಸ್ಯರಾದ ನಟರಾಜ, ಶಾಲಾ ಪ್ರಾಂಶುಪಾಲರಾದ ಪ್ರಸಾದ್, ಸಿಬಿಎಸ್ಇ ಸಂಯೋಜಕರಾದ ವಿಮಲಾ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿಯಾದ ಸ್ವಾತಿ ನೆರವೇರಿಸಿ, ಹರ್ಷಿತಾರವರು ಸ್ವಾಗತಿಸಿ, ಪದ್ಮಾವತಿಯವರು ವಂದಿಸಿದರು.

ಸತ್ತೂರು, ಧಾರವಾಡ: ಕ್ರೀವಾ-2025 ಸಾಂಸ್ಕೃತಿಕ ಕಾರ್ಯಕ್ರಮ

Article Image

ಸತ್ತೂರು, ಧಾರವಾಡ: ಕ್ರೀವಾ-2025 ಸಾಂಸ್ಕೃತಿಕ ಕಾರ್ಯಕ್ರಮ

ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜು “ಕ್ರೀವಾ 2025” - “ಅಸ್ತಿತ್ವದ ಸಾರ” ಎಂಬ ಧ್ಯೇಯೆಯೊಂದಿಗೆ 28ರಿಂದ 31 ಮೇ, 2025ರ ವರೆಗೆ ನಾಲ್ಕು ದಿನಗಳ ಸಾಂಸ್ಕೃತಿಕ ಕಾರ್ಯಕ್ರವನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ಕ್ರೀವಾ 2025 ಕಲೆ, ಸಂಸ್ಕೃತಿ ಮತ್ತು ಸಂಗೀತಗಳನ್ನೋಳಗೊಂಡ ವಾರ್ಷಿಕ ಸಾಂಸ್ಕೃತಿಕ ವೇದಿಕೆಯಾಗಿದೆ. ಯುವ ಗಾಯಕ ಮತ್ತು ಸಂಗೀತ ಸಂಯೋಜಕರಾದ ವಿಶ್ವನಾಥ ಹಾವೇರಿ ಅವರು ಮುಖ್ಯ ಅತಿಥಿಗಳಾಗಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಗೌರವ ಅತಿಥಿಗಳಾಗಿ ಕ್ರೀವಾ-2025 ಲಾಂಛನವನ್ನು ಅನಾವರಣಗೊಳಿಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ ಶೆಟ್ಟಿ, ಸಹ ಉಪ ಕುಲಪತಿಗಳಾದ ವಿ. ಜೀವಂಧರ ಕುಮಾರ, ಹಣಕಾಸು ಅಧಿಕಾರಿಗಳಾದ ವಿ. ಜಿ. ಪ್ರಭು, ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ ಪರಮಾರ ಉಪಸ್ಥಿತರಿದ್ದರು. ಡಾ. ಸಂಗೀತಾ ಅಪ್ಪಣ್ಣವರ ಅತಿಥಿಗಳನ್ನು ಸ್ವಾಗತಿಸಿದರು. ನಿತೀಶ ಶೆಟ್ಟಿ ಕ್ರೀವಾದ ಅವಲೋಕನ ನೀಡಿದರು. ಚಾಂದನಿ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಲಲಿತಾ ಮತ್ತು ಹಾರ್ದಿಕ ಕಾರ್ಯಕ್ರಮವನ್ನು ನಿರೂಪಿಸಿದರು. ವೆದಾಂಗ ವಂದನಾರ್ಪಣೆ ಸಲ್ಲಿಸಿದರು.

ಸತ್ತೂರು, ಧಾರವಾಡ: ನಾನ್ ಇನ್ವ್ಸಿವ್ ವೆಂಟಿಲೇಷನ್ ಕುರಿತು ಒಂದು ದಿನದ ಕಾರ್ಯಾಗಾರ

Article Image

ಸತ್ತೂರು, ಧಾರವಾಡ: ನಾನ್ ಇನ್ವ್ಸಿವ್ ವೆಂಟಿಲೇಷನ್ ಕುರಿತು ಒಂದು ದಿನದ ಕಾರ್ಯಾಗಾರ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ತುರ್ತು ಚಿಕಿತ್ಸಾ ವಿಭಾಗದಿಂದ 25 ಮೇ 2025 ರಂದು “ಆಮ್ಲಜನಕ ವಿತರಣಾ ಸಾಧನಗಳು” ಎಂಬ ವಿಷಯದೊಂದಿಗೆ “ನಾನ್ ಇನ್ವ್ಸಿವ್ ವೆಂಟಿಲೇಷನ್” ಕುರಿತು ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಉತ್ತರ ಕರ್ನಾಟಕದ ವಿವಿಧ ವೈದ್ಯಕೀಯ ಕಾಲೇಜುಗಳಿಂದ ಸುಮಾರು 170ಕ್ಕೂ ಹೆಚ್ಚು ಅಧ್ಯಾಪಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಶ್ವಾಸಕೋಶ ವಿಭಾಗದ ಮುಖ್ಯಸ್ಥರಾದ ಡಾ. ಸಂಜಯ್, ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅರವಳಿಕೆ ವಿಭಾಗದ ಮುಖ್ಯಸ್ಥರಾದ ಡಾ. ಮಾಧುರಿ ಕುರ್ದಿ, ಕೆ.ಎಲ್.ಇ ಬೆಳಗಾವಿಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀನಿವಾಸ್ ಕುಲಕರ್ಣಿ, ಹುಬ್ಬಳ್ಳಿಯ ಜೆಜಿಎಂಎಂ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಕಾಂತ್ ಹಿರೇಮಠ, ಬಿಜಾಪುರದ ಬಿ.ಎಲ್.ಡಿ.ಇ. ತುರ್ತು ಚಿಕಿತ್ಸಾ ವಿಭಾಗದ ಡಾ. ಉದಯಕುಮಾರ್ ಜೆ ಖಾಸಗೆ, ಕೆ.ಎಲ್.ಇ. ಬೆಳಗಾವಿಯ ಡಾ. ಗುರುಪ್ರಸಾದ್ ಆಂಟಿನ್ ಕಾರ್ಯಾಗಾರದ ಕುರಿತು ವಿಶೇಷ ತಜ್ಞ ಉಪನ್ಯಾಸ ನೀಡಿದರು. ಡಾ. ಸುಚಿತಾ ಹಾಗೂ ಡಾ. ನರೇಂದ್ರ ರೆಡ್ಡಿ ಅವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಲಕ್ಷ್ಮೀ ಕಾರ್ಯಗಾರದ ಪ್ರಾಸ್ತಾವಿಕ ಭಾಷಣವನ್ನು ನೀಡಿದರು. ಡಾ. ರಜನಿಕಾಂತ ವಂದನಾರ್ಪಣೆ ಸಲ್ಲಿಸಿದರು.

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Article Image

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ಇ0ಜಿನಿಯರಿ0ಗ್ ವಿಭಾಗದಲ್ಲಿ 4 ನೇ ರ‍್ಯಾಂಕ್, ನೂತನ್ ಕೃಷ್ಣ ಬಿ.ಬಿ.ಎನ್.ವೈ.ಎಸ್. ನಲ್ಲಿ 4 ನೇ ರ‍್ಯಾಂಕ್, ಬಿ ಫಾರ್ಮ ಮತ್ತು ಫಾರ್ಮಾ ಡಿ ನಲ್ಲಿ 5 ನೇ ರ‍್ಯಾಂಕ್, ಬಿ ಎಸ್ಸಿ ನರ್ಸಿ0ಗ್ ಮತ್ತು ವೆಟರಿನರಿ ಸಾಯನ್ಸ್ ನಲ್ಲಿ 6 ನೇ ರ‍್ಯಾಂಕ್ ನ್ನು ಗಳಿಸಿರುತ್ತಾನೆ. ವಿವಿಧ ವಿಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿಗಳು ನೂರರ ಒಳಗೆ 13 ರ‍್ಯಾಂಕ್, ಐದುನೂರರ ಒಳಗೆ 38 ರ‍್ಯಾಂಕ್, ಸಾವಿರದ ಒಳಗೆ 64 ರ‍್ಯಾಂಕ್ ಗಳನ್ನು ಪಡೆದು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಹತೆ ಗಳಿಸಿದ್ದಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ರಾಜ್ಯಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ ಶೆಟ್ಟಿ, ಮತ್ತು ಉಪನ್ಯಾಸಕ ವೃ0ದ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ

ಉಜಿರೆ, ಮೇ.21: ಭಯೋತ್ಪಾದನಾ ವಿರೋಧಿ ದಿನಾಚರಣೆಯ ಪ್ರಯುಕ್ತ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿವಿಧ ತರಗತಿಗಳ ವಿದ್ಯಾರ್ಥಿಗಳಿಗೆ ಉಗ್ರಗಾಮಿ ಚಟುವಟಿಕೆಗಳ ವಿರುದ್ಧದ ಪ್ರಮಾಣ ವಚನವನ್ನು ಬೋಧಿಸಲಾಯಿತು. ಆಯಾ ತರಗತಿಗಳ ಬೋಧಕರು ಕಾಲೇಜಿನ ಆರಂಭಿಕ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿಗಳಿಂದ ಅಹಿಂಸೆ, ಸಹನೆಯೊಂದಿಗೆ ಗುರುತಿಸಿಕೊಳ್ಳುವ ಭಾರತದ ಅಸ್ಮಿತೆಗೆ ಅನುಗುಣವಾಗಿ ದೃಢವಿಶ್ವಾಸದ ಹೆಜ್ಜೆಗಳನ್ನಿರಿಸುವ ಸಂಕಲ್ಪದ ಧ್ವನಿ ಈ ಸಂದರ್ಭದಲ್ಲಿ ವ್ಯಕ್ತವಾಯಿತು. ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ಎದುರಿಸುವ ಪ್ರತಿಜ್ಞೆ ಮೊಳಗಿತು. ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸುವ ಆಕಾಂಕ್ಷೆ ವ್ಯಕ್ತವಾಯಿತು. ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡುವ ಪಣವನ್ನು ವಿದ್ಯಾರ್ಥಿಗಳು ತೊಟ್ಟರು. ಮೇ 21ರಂದು ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸುವ ನಿರ್ಧಾರಕ್ಕೆ ಅನುಗುಣವಾಗಿ ಈ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಪಹಲ್ಗಾಮ್ ಘಟನೆಯ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರತವು ಭಯೋತ್ಪಾದನಾ ಕೃತ್ಯಗಳನ್ನು ಎಂದಿಗೂ ಸಹಿಸಿಕೊಳ್ಳುವುದಿಲ್ಲ ಎಂಬ ಸಂದೇಶ ರವಾನಿಸುವ ದೃಷ್ಟಿಯಿಂದ ಯುವಮನಸುಗಳಿಗೆ ಬೋಧಿತವಾದ ಈ ಪ್ರತಿಜ್ಞಾವಿಧಿ ಮಹತ್ವಪೂರ್ಣ ಎನ್ನಿಸಿತು.

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ

Article Image

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ

ಕಳೆಂಜ : ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಐಡಿಎ ಪುತ್ತೂರು ಘಟಕ, ಕೆವಿಜಿ ಡೆಂಟಲ್ ಕಾಲೇಜು ಮತ್ತು ಹಾಸ್ಪಿಟಲ್ ಸುಳ್ಯ, ಜೆಸಿಐ ಕೊಕ್ಕಡ ಕಪಿಲಾ ಮತ್ತು ಇತರೆ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮಪಂಚಾಯತ್ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಲೆತಡ್ಕದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ರೋ. ಸಂದೇಶ್ ಕುಮಾರ್ ರಾವ್ ಮತ್ತು ರೋ. ಡಾ. ರಾಘವೇಂದ್ರ ಪಿದಮಲೆ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರೋ. ಸಂದೇಶ್ ಕುಮಾರ್ ರಾವ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಸುಸಜ್ಜಿತವಾದ ಆಸ್ಪತ್ರೆಯ ಸವಲತ್ತುಗಳ ಅಗತ್ಯವಿರುತ್ತದೆ. ರೋಟರಿಯಂತಹ ಸಂಘ ಸಂಸ್ಥೆಗಳು ಹಲವರ ಸಹಕಾರದಿಂದ ಆರೋಗ್ಯದ ಸವಲತ್ತುಗಳನ್ನು ಗ್ರಾಮೀಣ ಭಾಗಕ್ಕೆ ತಲುಪಿಸಿದಾಗ ಅತ್ಯಂತ ಉಪಯುಕ್ತವಾಗುತ್ತದೆ. ಜನರ ಆರೋಗ್ಯ ಜಾಗೃತಿಯ ದೃಷ್ಟಿಕೋನದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಸಾಮಾನ್ಯವಾಗಿ ಆಸ್ಪತ್ರೆ ಮತ್ತು ಡಾಕ್ಟರ್ ಗಳ ಬಳಿಗೆ ಅನಾರೋಗ್ಯಗೊಂಡವರು ತೆರಳುತ್ತಾರೆ ಆದರೆ ಶಿಬಿರದಂತ ಕಾರ್ಯಕ್ರಗಳಲ್ಲಿ ವೈದ್ಯರೇ ಗ್ರಾಮೀಣ ಪ್ರದೇಶದ ಜನರ ಬಳಿಗೆ ಬಂದಿರುವುದು ನಿಜಕ್ಕೂ ಫಲಕಾರಿ. ಇದನ್ನು ಚಿಕಿತ್ಸೆಯ ಅವಶ್ಯಕ ಇರುವವರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ರೋ. ಡಾ. ರಾಘವೇಂದ್ರ ಪಿದಮಲೆ ಅಭಿಪ್ರಾಯ ಪಟ್ಟರು. ಶಿಬಿರದಲ್ಲಿ ಕೆವಿಜಿ ಡೆಂಟಲ್ ಕಾಲೇಜು ಮತ್ತು ಹಾಸ್ಪಿಟಲ್ ನ ವೈದ್ಯರು ಸೇರಿದಂತೆ ನುರಿತ ತಜ್ಞರಿಂದ ಉಚಿತ ತಪಾಸಣೆ ಹಾಗು ಅಗತ್ಯವಿದ್ದವರಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ 60 ಕ್ಕೂ ಹೆಚ್ಚು ಜನರು ದಂತ ಭರ್ತಿ, ದಂತ ಶುಚಿಗೊಳಿಸುವಿಕೆ, ಹಲ್ಲು ಹೊರತೆಗೆಯುವಿಕೆ, ಕೃತಕ ಹಲ್ಲುಗಳ ಜೋಡಣೆಯಂತಹ ವಿವಿಧ ದಂತ ಚಿಕಿತ್ಸೆಗಳನ್ನು ಪಡೆದರು. ಈ ಸಂದರ್ಭದಲ್ಲಿ ಆನ್. ಡಾ. ದೀಪಾಲಿ ಡೊಂಗ್ರೆ, ರೋ. ಉದಯ ಶಂಕರ್ ಸೇರಿದಂತೆ ಗ್ರಾಮಸ್ಥರು, ಜೆಸಿಐ ಕೊಕ್ಕಡ ಕಪಿಲಾ ಸದಸ್ಯರು ಹಾಗೂ ಶಾಲೆಯ ಆಡಳಿತ ಮಂಡಳಿ ಭಾಗಿಯಾಗಿದ್ದರು. ಶಿಬಿರವನ್ನು ಜೆಸಿಐ ಕೊಕ್ಕಡ ಕಪಿಲಾ ಅಧ್ಯಕ್ಷೆ ಶೋಭಾ ಪಿ ನಿರೂಪಿಸಿ, ವಂದಿಸಿದರು. ಜನರ ಸೇವೆ ಮಾಡುವಂತಹ ಅವಕಾಶವನ್ನು ಮತ್ತು ಜವಾಬ್ದಾರಿಯನ್ನು ಬೆಳ್ತಂಗಡಿ ರೋಟರಿ ಸಂಸ್ಥೆ ನಮಗೆ ನೀಡಿದೆ. ಗ್ರಾಮೀಣ ಜನರ ಆರೋಗ್ಯ ಜಾಗೃತಿಯ ಉದ್ದೇಶದಿಂದ ಹಲವರ ಸಹಕಾರದೊಂದಿಗೆ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದ್ದು, ಇದರಿಂದ ಎಲ್ಲ ವರ್ಗದ ಜನರು ಉಪಯೋಗ ಪಡೆದುಕೊಂಡಿದ್ದಾರೆ. - ಸಂದೇಶ್ ಕುಮಾರ್ ರಾವ್ ಕಾರ್ಯದರ್ಶಿ ಬೆಳ್ತಂಗಡಿ ರೋಟರಿ ಕ್ಲಬ್

ಉಜಿರೆ ಎಸ್.ಡಿ.ಎಂ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Article Image

ಉಜಿರೆ ಎಸ್.ಡಿ.ಎಂ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

ಸಂಬಂಧಿಕರೇ ಕೆಲವೊಂದು ರೋಗಿಗಳ ಶುಶ್ರೂಷೆ ಮಾಡಲು ಹಿಂಜರಿಯುತ್ತಾರೆ. ಆದರೆ ದಾದಿಯರು ಮತ್ತು ವೈದ್ಯರು ಅದನ್ನು ಕರ್ತವ್ಯದ ದೃಷ್ಟಿಯಿಂದ ಯಾವುದೇ ಹಿಂಜರಿಕೆ ಇಲ್ಲದೆ ರೋಗಿಗಳ ಸೇವೆ ಮಾಡುತ್ತಾರೆ. ಮಧ್ಯರಾತ್ರಿಯೂ ನಿದ್ದೆ ಇಲ್ಲದೆ ರೋಗಿಗಳ ಸೇವೆ ಮಾಡುವ ದಾದಿಯರ ಸೇವೆ ನಿಜವಾಗಿಯೂ ಶ್ಲಾಘನೀಯ. ರೋಗಿಗಳ ಸೇವೆ ಮಾಡುವ ಎಲ್ಲಾ ದಾದಿಯರ ಬಗ್ಗೆ ಅತ್ಯಂತ ಹೆಚ್ಚು ಕಾಳಜಿ ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ದಂಪತಿಗಳ ಶುಭಾಶೀರ್ವಾದ ದಾದಿಯರ ಪಾಲಿಗೆ ಸದಾ ಇದೆ ಎಂದು ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಹೇಳಿದರು. ಅವರು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾದ ದಾದಿಯರ ದಿನಾಚರಣೆಯ ಪ್ರಯುಕ್ತ ದಾದಿಯರನ್ನು ಗೌರವಿಸಿ ಮಾತನಾಡುತ್ತಾ ವೈದ್ಯಕೀಯ ಕ್ಷೇತ್ರದ ಸೇವೆಯಲ್ಲಿ ಅತೀ ಹೆಚ್ಚು ಪ್ರಾಮುಖ್ಯತೆಯ ಸೇವೆ ದಾದಿಯರದ್ದು ಎಂದರು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ದಾದಿಯರಿಗೆ ಶುಭ ಹಾರೈಸಿದರು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಶುಭ ಹಾರೈಸಿ ಮಾತನಾಡಿ, ವೈದ್ಯರಿಗೆ ರೋಗಿಗಳ ಸೇವೆ ಮಾಡಲುದಾದಿಯರ ಸಹಾಯ ಅತ್ಯಂತ ಅಗತ್ಯ. ಅದರಲ್ಲೂ ನಮ್ಮ ಆಸ್ಪತ್ರೆಯ ದಾದಿಯರ ಸೇವೆ ಅಮೋಘವಾದದ್ದು ಎಂದರು. ನರ್ಸಿಂಗ್ ಅಧೀಕ್ಷಕಿ ಶೆರ್ಲಿ ಇವರು ಎಲ್ಲಾ ದಾದಿಯರಿಗೆ ಕರ್ತವ್ಯದ ಪ್ರತಿಜ್ಞಾವಿಧಿ ಬೋಧಿಸಿ, ಮಾತನಾಡುತ್ತಾ, ದಾದಿಯರು ವೈದ್ಯಕೀಯ ಕ್ಷೇತ್ರದ ಬೆನ್ನೆಲುಬು, ಪೂಜ್ಯ ಹೆಗ್ಗಡೆಯವರು ಮತ್ತು ಅವರ ಪರಿವಾರದವರ ಪ್ರೀತಿ, ಇಲ್ಲಿನ ವ್ಯವಸ್ಥಾಪಕ ನಿರ್ದೇಶಕರ ಕಾಳಜಿ ಮತ್ತು ಪ್ರೋತ್ಸಾಹ, ವೈದ್ಯರ ಬೆಂಬಲದೊಂದಿಗೆ ಈ ಸಂಸ್ಥೆಯಲ್ಲಿ ದುಡಿಯುವ ಸದಾವಕಾಶ ನಮಗೆ ದೊರೆತಿದೆ. ಪೂಜ್ಯರ ಸಂಸ್ಥೆಯಲ್ಲಿ ಸೇವೆ ಸಲ್ಲಿಸುವುದೇ ನಮ್ಮೆಲ್ಲರ ಸೌಭಾಗ್ಯ ಎಂದರು. ಇದೇ ಸಂದರ್ಭದಲ್ಲಿ ನರ್ಸಿಂಗ್ ಅಧೀಕ್ಷಕಿ ಶೆರ್ಲಿ ಇವರನ್ನು ಸನ್ಮಾನಿಸಲಾಯಿತು. ಎಲ್ಲಾ ದಾದಿಯರಿಗೆ ಉಡುಗೊರೆ ನೀಡಿ ಗೌರವಿಸಲಾಯಿತು. ಆಸ್ಪತ್ರೆಯ ವೈದ್ಯರು, ದಾದಿಯರು ಹಾಗೂ ಇತರ ಸಿಬ್ಬಂದಿ ಉಪಸ್ಥಿತರಿದ್ದರು.

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

Article Image

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

ಉಜಿರೆ: ಮನುಷ್ಯರು ವ್ಯಸನಗಳ ದಾಸರಾಗಬಾರದು. ಚಟಗಳಿಂದಾಗಿ ಹಣ, ಆರೋಗ್ಯ, ಮರ್ಯಾದೆ, ಪ್ರೀತಿ-ವಿಶ್ವಾಸ ಎಲ್ಲವನ್ನೂ ಮದ್ಯವ್ಯಸನಿಗಳು ಕಳೆದುಕೊಳ್ಳುತ್ತಾರೆ. ವ್ಯಸನಮುಕ್ತರು ನರಕವನ್ನು ದಾಟಿ ಬಂದ ನಾಯಕರು ಎಂದು ಶಿರಹಟ್ಟಿ ಭಾವೈಕ್ಯತಾ ಪೀಠದ ಪೂಜ್ಯ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಆಯೋಜಿಸಿದ ೨೯೦೦ ಮಂದಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಸರ್ಕಾರ ಮದ್ಯ ಕುಡಿಸಬೇಕು ಎಂದು ಹೇಳಿದರೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮದ್ಯಪಾನ ಬಿಡಿಸಬೇಕು ಎಂದು ಪ್ರಯತ್ನಿಸುತ್ತಿದ್ದಾರೆ. ಸರ್ಕಾರ ಮದ್ಯದಂಗಡಿಗಳನ್ನು ಹೆಚ್ಚಿಸುವುದಲ್ಲದೆ ಮದ್ಯಪಾನ ನಿಯಂತ್ರಣ ಮಂಡಳಿಗೂ ಕೋಟಿಗಟ್ಟಲೆ ಹಣ ವೆಚ್ಚ ಮಾಡುತ್ತಿದೆ. ಆರೋಗ್ಯಪೂರ್ಣ ಸಭ್ಯ, ಸುಸಂಸ್ಕೃತ ಸಮಾಜ ರೂಪಿಸಲು ಹೆಗ್ಗಡೆಯವರು ಮಾಡುತ್ತಿರುವ ಸೇವೆ-ಸಾಧನೆಗಳ ಬಗ್ಗೆ ಶಾಲಾ-ಕಾಲೇಜುಗಳ ಪಠ್ಯದಲ್ಲಿ ಮಾಹಿತಿ ನೀಡಬೇಕು. ವಿಶ್ವವಿದ್ಯಾಲಯಗಳಲ್ಲಿ ಕೂಡಾ ಈ ಬಗ್ಗೆ ಸಂಶೋಧನಾತ್ಮಕ ಅಧ್ಯಯನ ನಡೆಸಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಮದ್ಯಪಾನ ನಿಷೇಧ ಮಾಡುವ ಸರ್ಕಾರ ಬಂದರೆ ಮಾತ್ರ ರಾಜ್ಯದ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ. ವ್ಯಸನಗಳ ಚಟದಿಂದಾಗಿ ಇಂದು ಪುರುಷರ ಬಂಜೆತನವೂ ಹೆಚ್ಚಾಗುತ್ತಿರುವುದು ಖೇದಕರವಾಗಿದೆ ಎಂದು ಅವರು ತಿಳಿಸಿದರು. ವ್ಯಸನಮುಕ್ತರು ಮುಂದೆ ದೃಢಸಂಕಲ್ಪದೊಂದಿಗೆ ಸಾರ್ಥಕ ಜೀವನ ನಡೆಸಿ ಪರಿಸರದವರಿಗೂ ವ್ಯಸನಮುಕ್ತರಾಗುವ ಪ್ರೇರಣೆ ನೀಡಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಬೆಂಗಳೂರಿನ ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾಅಮಿತ್ ಸ್ವಸ್ಥ್ಯಾಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಶುಭ ಹಾರೈಸಿದರು. ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ ಮದ್ಯವ್ಯಸನಿಗಳು ಅನ್ಯಾಯ, ಅತ್ಯಾಚಾರ ಮಾಡುತ್ತಾ ಸಂಸ್ಕಾರಕ್ಕೂ ಸಮಾಜಕ್ಕೂ ಹೊರೆಯಾಗುತ್ತಾರೆ. ವ್ಯಸನಮುಕ್ತರಾಗಿ ಹೊಸ ಬದುಕನ್ನು ಆರಂಭಿಸಿದವರು. ಪಂಚೇಂದ್ರಿಯಗಳ ನಿಗ್ರಹದೊಂದಿಗೆ ಮಾನಸಿಕ ಮಾಲಿನ್ಯರಹಿತರಾಗಿ ಆದರ್ಶ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ವ್ಯಸನಮುಕ್ತರು ಕುಟುಂಬದ ಸದಸ್ಯರೊಂದಿಗೆ ಪ್ರೀತಿ-ವಿಶ್ವಾಸದಿಂದ ಮುಕ್ತವಾಗಿ ಬೆರೆಯಬೇಕು. ಮತ್ತೆ ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬಾರದು. ವ್ಯಸನಮುಕ್ತರು ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಇಂದು ದೇವರ ದರ್ಶನ ಮಾಡಿರುವುದರಿಂದ ವಿಶೇಷ ಅನುಗ್ರಹಕ್ಕೆ ಪಾತ್ರರಾಗಿರುವಿರಿ ಎಂದು ಹೇಳಿ ಶುಭ ಹಾರೈಸಿದರು. ವ್ಯಸನಮುಕ್ತರ ಪರವಾಗಿ ರಾಮದುರ್ಗದ ಶಂಕರಪ್ಪ ಮತ್ತು ಉಡುಪಿಯ ಶಶಿಕಲರಾಜು ಅನಿಸಿಕೆ ವ್ಯಕ್ತಪಡಿಸಿದರು. ಮೂಡಬಿದಿರೆ ಡಾ. ವಿನಯ್ ಆಳ್ವ ಜಾಗೃತಿಅಣ್ಣ ಮತ್ತು ಜಾಗೃತಿಮಿತ್ರ ಪ್ರಶಸ್ತಿ ಪ್ರದಾನ ಮಾಡಿದರು. ಡಾ. ಪಿ. ವಿ. ಭಂಡಾರಿ, ಡಾ. ಶ್ರೀನಿವಾಸ ಭಟ್, ವಿ.ರಾಮಸ್ವಾಮಿ, ಪದ್ಮನಾಭ ಶೆಟ್ಟಿ ಮತ್ತು ಕಾಸಿಂ ಉಪಸ್ಥಿತರಿದ್ದರು. ಅನಿಲ್ ಕುಮಾರ್ ಆಶಯ ನುಡಿಗಳನ್ನು ಆಡಿ ಶುಭ ಹಾರೈಸಿದರು. ವಿವೇಕ್ ವಿ. ಪಾಯಸ್ ಸ್ವಾಗತಿಸಿದರು. ನಟರಾಜ್ ಬಾದಾಮಿ ಧನ್ಯವಾದವಿತ್ತರು. ಯೋಜನಾಧಿಕಾರಿಗಳಾದ ನಾಗರಾಜ್ ಮತ್ತು ರಾಜೇಶ್ ಕಾರ್ಯಕ್ರಮ ನಿರ್ವಹಿಸಿದರು.

ಎಸ್.ಡಿ.ಎಂ. ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಝಿನ್ ಮನ್ನಣೆ

Article Image

ಎಸ್.ಡಿ.ಎಂ. ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಝಿನ್ ಮನ್ನಣೆ

ಉಜಿರೆ, ಮೇ 21: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಹೊರತಂದ ‘ಮನೀಷಾ’ ವಾರ್ಷಿಕ ಸಂಚಿಕೆಯು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮೊದಲ ಬಹುಮಾನಿತ ಆದ್ಯತೆಯೊಂದಿಗೆ ‘ಅತ್ಯುತ್ತಮ ಕಾಲೇಜು ಮ್ಯಾಗಝಿನ್’ ಎಂಬ ಮನ್ನಣೆಗೆ ಪಾತ್ರವಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ಅವರಿಗೆ ‘ಮನೀಷಾ’ ಸಂಚಿಕೆಯ ಅನನ್ಯ ಪ್ರಯೋಗಶೀಲತೆಗಾಗಿ ಪ್ರಥಮ ಬಹುಮಾನಿತ ಮನ್ನಣೆಯ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಆಡಳಿತಾಂಗ ಕುಲಸಚಿವರಾದ ಕೆ.ರಾಜು ಮೊಗವೀರ, ಪರೀಕ್ಷಾಂಗ ಕುಲಸಚಿವರಾದ ಡಾ.ಎಚ್.ದೇವೇಂದ್ರಪ್ಪ, ಹಣಕಾಸು ಅಧಿಕಾರಿ ಡಾ.ಸಂಗಪ್ಪ ವೈ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕಿ ಡಾ.ಪರಿಣಿತಾ ಅವರ ಅಧ್ಯಕ್ಷತೆಯ ಕಾಲೇಜು ಮ್ಯಾಗಝೀನ್ ತಜ್ಞರ ಆಯ್ಕೆ ಸಮಿತಿಯು ವಿ.ವಿ. ವ್ಯಾಪ್ತಿಯ ಸಂಯೋಜಿತ ಕಾಲೇಜುಗಳ ವಾರ್ಷಿಕ ಸಂಚಿಕೆಗಳನ್ನು ಪರಿಶೀಲಿಸಿ ‘ಮನೀಷಾ’ ಸಂಚಿಕೆಯನ್ನು ಮೊದಲ ಬಹುಮಾನಕ್ಕೆ ಆಯ್ಕೆ ಮಾಡಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಡಾ.ಪರಿಣಿತಾ ಅವರು ‘ಮನೀಷಾ’ ಸೇರಿದಂತೆ ಸ್ಪರ್ಧೆಗೆ ಪರಿಗಣಿತವಾದ ವಿವಿಧ ಕಾಲೇಜುಗಳು ಹೊರತಂದ ಸಂಚಿಕೆಗಳ ವಿಶೇಷತೆಯನ್ನು ಪರಿಚಯಿಸಿದರು. ಸ್ಪರ್ಧೆಗೆ ಬಂದ ಕಾಲೇಜು ಸಂಚಿಕೆಗಳ ವಿದ್ಯಾರ್ಥಿ ಬರಹಗಳು ಪ್ರಚಲಿತ ಘಟನೆಗಳನ್ನು ಕೇಂದ್ರೀಕರಿಸಿಕೊಂಡಿದ್ದವು. ಬಹಳ ಮುಖ್ಯವಾಗಿ ಸ್ಥಳೀಯ ಸಂಸ್ಕೃತಿಯನ್ನು ಅನಾವರಣಗೊಳಿಸುವ ಬರಹಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಅಲ್ಲದೇ, ಜ್ಞಾನ ಸಂವಹನದ ಉದ್ದೇಶದ ಬರಹಗಳಿಗಿಂತ ಬಹಳ ಮುಖ್ಯವಾಗಿ ಗಮನ ಸೆಳೆದದ್ದು ಆದರ್ಶ ಮೌಲ್ಯಗಳು ಮತ್ತು ಸಂಸ್ಕಾರಯುತ ಚಿಂತನೆಯನ್ನು ಕಾಣಿಸುವ ಲೇಖನಗಳು. ಅಲ್ಲದೇ, ಈ ಸಲದ ಬಹಳಷ್ಟು ಸಂಚಿಕೆಗಳಲ್ಲಿ ಜನರಿಗೆ ಸಾಮಾಜಿಕವಾಗಿ ನೆರವಾಗಿ ಜನಜನಿತರಾದ ಸ್ಥಳೀಯ ವ್ಯಕ್ತಿತ್ವಗಳ ಹಿರಿಮೆಯನ್ನು ಧ್ವನಿಸುವ ಬರಹಗಳು ಇದ್ದವು. ಅಲ್ಲದೇ ಉಚಿತ ಬಸ್ ಪ್ರಯಾಣದ ಕುರಿತ ನಿಲುವುಗಳನ್ನು ವಿದ್ಯಾರ್ಥಿ ಬರಹಗಾರರು ಈ ಸಂಚಿಕೆಗಳ ಮೂಲಕ ಅಭಿವ್ಯಕ್ತಿಸಿದ್ದಾರೆ ಎಂದು ಡಾ.ಪರಿಣಿತಾ ತಿಳಿಸಿದರು. ಪ್ರಚಲಿತ ಘಟನೆಗಳು, ಮೌಲಿಕ ಪುಸ್ತಕಗಳ ಪರಿಚಯಾತ್ಮಕ ನಿಲುವುಗಳು, ತಾರುಣ್ಯದ ಹೊಸಿಲಲ್ಲಿರುವ ಯುವ ಮನಸುಗಳ ತವಕ-ತಲ್ಲಣಗಳು, ಹೊಸ ಕಾಲವನ್ನು ವ್ಯಾಖ್ಯಾನಿಸುವ ಕಾವ್ಯಾತ್ಮಕ ಧ್ವನಿ, ಸ್ವಾನುಭವಗಳ ವಿನೂತನ ಅಭಿವ್ಯಕ್ತಿಯ ಆಶಯಗಳನ್ನು ಈ ಬಹುಮಾನಿತ ಸಂಚಿಕೆ ಒಳಗೊಂಡಿದೆ. ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿಯನ್ನು ಧ್ವನಿಸುವ ಭಾಷಿಕ ಸೊಗಡಿನ ಬರಹಗಳು ಮಾತ್ರವಲ್ಲದೇ ವಿವಿಧ ಭಾಷೆಗಳಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳು ಬರೆದ ಬರಹಗಳು ‘ಮನೀಷಾ’ ಸಂಚಿಕೆಯಲ್ಲಿವೆ. ಇವುಗಳ ಮೌಲಿಕತೆಯನ್ನು ಪರಿಗಣಿಸಿ ಒಟ್ಟು 350 ಅಂಕಗಳಲ್ಲಿ 266 ಅಂಕಗಳನ್ನು ತಜ್ಞರ ಸಮಿತಿ ನೀಡಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಮನೀಷಾ’ ಸಂಚಿಕೆಯ ಎಸ್.ಡಿ.ಎಂ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಬಿ.ಗಣೇಶ್‌ನಾಯಕ್, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ಸೌಮ್ಯ ಬಿ.ಪಿ, ‘ಮನೀಷಾ’ ಸಂಪಾದಕೀಯ ಮಂಡಳಿಯ ಸಂಯೋಜಕರಾದ ಡಾ.ರಾಜಶೇಖರ ಹಳೆಮನೆ, ಸದಸ್ಯ ವಿರಾಟ್ ಪದ್ಮನಾಭ ಅವರು ಭಾಗವಹಿಸಿದ್ದರು.

ಯೋಗ ಮತ್ತು ಪ್ರಕೃತಿ ಚಿಕಿತ್ಸೆ: ಮೂರನೆ ಅಂತರರಾಷ್ಟ್ರೀಯ ಸಮ್ಮೇಳನ ಸಮಾರೋಪ ಸಮಾರಂಭ

Article Image

ಯೋಗ ಮತ್ತು ಪ್ರಕೃತಿ ಚಿಕಿತ್ಸೆ: ಮೂರನೆ ಅಂತರರಾಷ್ಟ್ರೀಯ ಸಮ್ಮೇಳನ ಸಮಾರೋಪ ಸಮಾರಂಭ

ಉಜಿರೆ: ದೇಹ ಮತ್ತು ಮನಸ್ಸಿಗೆ ಅವಿನಾಭಾವ ಸಂಬಂಧವಿದ್ದು, ಔಷಧಿರಹಿತ ಪ್ರಕೃತಿಚಿಕಿತ್ಸೆ ಮೂಲಕ ನಾವು ಆರೋಗ್ಯಭಾಗ್ಯವನ್ನು ಹೊಂದಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸಬಹುದು ಎಂದು ಕೇಂದ್ರ ಸಚಿವ ಅರ್ಜುನ್‌ರಾಮ್ ಮೇಘವಾಲ್ ಹೇಳಿದರು. ಅವರು ಶುಕ್ರವಾರ ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಆಯುಷ್ ಇಲಾಖೆ ಮತ್ತು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ ಯೋಗ ಮತ್ತು ಪ್ರಕೃತಿಚಿಕಿತ್ಸೆ ಬಗ್ಗೆ ಮೂರನೆ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಸಮಾರೋಪ ಭಾಷಣ ಮಾಡಿದರು. ನಮ್ಮ ದೇಹ ಮತ್ತು ನಮ್ಮ ಸುತ್ತಲಿನ ಪ್ರಕೃತಿ, ಪರಿಸರ ಪಂಚಭೂತಗಳಿಂದ ರೂಪಿಸಲ್ಪಟ್ಟಿದೆ. ಎಲ್ಲದರಲ್ಲಿಯೂ ಅಧಿಕ ಪ್ರಮಾಣದಲ್ಲಿ ನೀರಿನ ಅವಶ್ಯಕತೆ ಇದೆ. ಆಹಾರ-ವಿಹಾರಕ್ಕೆ ದೇಹ ಸಹಕಾರಿಯಾದರೆ ಪ್ರೀತಿ-ವಿಶ್ವಾಸ, ಸೇವೆ, ಅನುಕಂಪ ಮೊದಲಾದ ಮಾನವೀಯಮೌಲ್ಯಗಳ ಉದ್ದೀಪನಕ್ಕೆ ಮನಸ್ಸು ಪ್ರೇರಕವಾಗಿದೆ. ಪರಿಶುದ್ಧ ಮನದೊಂದಿಗೆ ನಾವು ಎಲ್ಲರೊಂದಿಗೆ ಪ್ರೀತಿ-ವಿಶ್ವಾಸದಿಂದ ಬೆರೆತಾಗ ಸುಖ-ಶಾಂತಿ, ನೆಮ್ಮದಿಯ ಬದುಕು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಧರ್ಮಸ್ಥಳದಲ್ಲಿ ನಿತ್ಯವೂ ನಡೆಯುತ್ತಿರುವ ಅನ್ನದಾನ, ವಿದ್ಯಾದಾನ, ಔಷಧದಾನ ಮತ್ತು ಅಭಯದಾನ ಎಂಬ ಚತುರ್ವಿಧ ದಾನಪರಂಪರೆ ತ್ಯಾಗ, ಸೇವೆ ಹಾಗೂ ಲೋಕಕಲ್ಯಾಣ ಕಾರ್ಯಗಳನ್ನು ಅವರು ಶ್ಲಾಘಿಸಿ ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಿದರು. ಇಂತಹ ಕಲ್ಯಾಣಕಾರ್ಯಗಳಿಂದ ಭಾರತ “ವಿಶ್ವಗುರು” ಮಾನ್ಯತೆ ಹೊಂದಿದೆ. ತಾವು ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆಯವರನ್ನು ದೆಹಲಿಯಲ್ಲಿ ತಮ್ಮ ಮನೆಗೆ ಆಹ್ವಾನಿಸಿ ಗೌರವಿಸುವುದಾಗಿ ಸಚಿವರು ತಿಳಿಸಿದರು. ಸಚಿವರು ಪ್ರಶ್ನೋತ್ತರ ರೂಪದಲ್ಲಿ ಪ್ರತಿನಿಧಿಗಳಿಂದಲೆ ಮಾಹಿತಿ ಪಡೆದು ತಮ್ಮ ಭಾಷಣವನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ಯಶಸ್ವಿಯಾದರು. ಪ್ರತಿನಿಧಿಗಳ ಪರವಾಗಿ ಉತ್ತರ ಪ್ರದೇಶದ ಡಾ. ನೀರಜ್, ಆಂಧ್ರಪ್ರದೇಶದ ಡಾ. ಶಶಿಕಲಾ ಮತ್ತು ಪುತ್ತೂರಿನ ಡಾ. ಸುಲೇಖಾ ವರದರಾಜ್ ತಮ್ಮ ಅಭಿಪ್ರಾಯ, ಅನಿಸಿಕೆ ವ್ಯಕ್ತಪಡಿಸಿದರು. ಬೆಂಗಳೂರಿನ ಡಾ. ಸೀತಾರಾಮ ಜಿಂದಾಲ್ ಅವರ ವಿಶೇಷ ಸೇವೆ, ಸಾಧನೆಗಾಗಿ ಜೀವಮಾನ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ಪರವಾಗಿ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಡಾ. ಬಬಿನಾ ಪ್ರಶಸ್ತಿ ಸ್ವೀಕರಿಸಿದರು. ಪ್ರಕೃತಿ ಚಿಕಿತ್ಸಾ ಕ್ಷೇತ್ರದಲ್ಲಿ ವಿಶೇಷ ಸೇವೆ ಮಾಡಿದ ಡಾ. ನವೀನ್ ಕೆ.ವಿ. ಡಾ. ಕನಕಸೋನಿ, ಡಾ. ಗಾಯತ್ರಿ, ಡಾ. ನಿತೇಶ್, ಡಾ. ರಾಘವೇಂದ್ರ ರಾವ್, ಡಾ. ಬಬಿನಾ, ಡಾ. ಮಂಜುನಾಥ್ ಮತ್ತು ಡಾ. ಅಖಿಲಾ ಅವರನ್ನು ಸನ್ಮಾನಿಸಲಾಯಿತು. ಡಾ. ನವೀನ್ ಕೆ.ವಿ. ವರದಿ ಸಾದರಪಡಿಸಿದರು. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ ಪ್ರಕೃತಿಚಿಕಿತ್ಸಾ ಪದ್ಧತಿಯಿಂದ ಔಷಧಿ ರಹಿತವಾಗಿ ಹೆಚ್ಚಿನ ರೋಗಗಳನ್ನು ಶಮನಗೊಳಿಸಬಹುದು. ಆಧುನಿಕ ಜೀವನಶೈಲಿ, ಆಹಾರ-ವಿಹಾರ ಹಾಗೂ ಪ್ರಕೃತಿಯಿಂದ ನಾವು ವಿಮುಖರಾಗಿರುವುದೇ ಹೆಚ್ಚಿನ ರೋಗಗಳು ಬರಲು ಕಾರಣ ಎಂದು ಅವರು ಹೇಳಿದರು. ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಡಿ. ಹರ್ಷೇಂದ್ರ ಕುಮಾರ್, ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಸ್ವಾಗತಿಸಿದರು. ಉಪಪ್ರಾಂಶುಪಾಲ ಡಾ. ಸುಜಾತ ಧನ್ಯವಾದವಿತ್ತರು.

ಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಗೆ ಶೇ. 100 ಫಲಿತಾಂಶ

Article Image

ಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಗೆ ಶೇ. 100 ಫಲಿತಾಂಶ

ಮೂಡುಬಿದಿರೆ : ಮೂಡುಬಿದಿರೆಯ ಕಲ್ಲಬೆಟ್ಟುಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಯ ಅಂತಿಮ ಪರೀಕ್ಷೆಯಲ್ಲಿ ಶೇ. 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 20 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿರುತ್ತಾರೆ. ರುಚಿರಾ ಕುಂದರ್ ಶೇ. 91% ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಶೇ. 90% ಅಂಕ ಗಳಿಸಿದ ಆಂಥಿಯಾ ಶೈನ, ಮಿರಂಡಾ ದ್ವಿತೀಯ ಸ್ಥಾನ ಹಾಗೂ ಶಿಖಾ ಶೆಟ್ಟಿ ಶೇ 86.6 % ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಸಂಸ್ಥೆಯ ಅಧ್ಯಕ್ಷರು ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್ ನ ಗೋಲ್ಡ್ ಮೆಡಲ್

Article Image

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್ ನ ಗೋಲ್ಡ್ ಮೆಡಲ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ನಾನ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಡಾ. ಗನ್ಯಾಶ್ರೀ ಮೊದಲ ಶ್ರೇಯಾಂಕಕ್ಕಾಗಿ ಹಾಗೂ ಆಯುಷ್ ವಿಭಾಗದಲ್ಲಿಯೂ ಮೊದಲನೇ ಸ್ಥಾನ ಪಡೆದು 4 ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 27ನೇ ಘಟಿಕೋತ್ಸವದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಥಾವರ್ ಚಂದ್ ಗೆಹ್ಲೋಟ್ ಅವರು ಚಿನ್ನದ ಪದಕವನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷರು, ಅಜೀಂ ಪ್ರೇಮ್‌ಜಿ ಫೌಂಡೇಶನ್, ಸಂಸ್ಥಾಪಕ ಮತ್ತು ಅಧ್ಯಕ್ಷರು, ವಿಪ್ರೋ ಲಿಮಿಟೆಡ್ ಮತ್ತು ವಿಪ್ರೋ ಎಂಟರ್‌ಪ್ರೈಸಸ್ ಲಿಮಿಟೆಡ್ ಹಾಗೂ ಡಾ. ಶರಣಪ್ರಕಾಶ್ ಆರ್ ಪಾಟೀಲ್, ಕರ್ನಾಟಕದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರು, ವಿಶ್ವವಿದ್ಯಾಲಯದ ಸಹ-ಕುಲಪತಿಗಳು ಹಾಗೂ ಕುಲಸಚಿವರು ಉಪಸ್ಥಿತರಿದ್ದರು.

ಅರ್ಥಶಾಸ್ತ್ರದಲ್ಲಿ ಒಳಗೊಳ್ಳುವಿಕೆಯ ಅಭಿವೃದ್ಧಿಗಾಗಿ ಒಂದು ಶೋಧ ಪುಸ್ತಕ ಬಿಡುಗಡೆ

Article Image

ಅರ್ಥಶಾಸ್ತ್ರದಲ್ಲಿ ಒಳಗೊಳ್ಳುವಿಕೆಯ ಅಭಿವೃದ್ಧಿಗಾಗಿ ಒಂದು ಶೋಧ ಪುಸ್ತಕ ಬಿಡುಗಡೆ

ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಜಿ.ವಿ. ಜೋಶಿ ಮತ್ತು ನವದೆಹಲಿಯ ಜೆ.ಎನ್.ಯು. ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ರಮೇಶ್ ಸಾಲಿಯಾನ್ ಅವರು ಬರೆದ ‘ಅರ್ಥಶಾಸ್ತ್ರದಲ್ಲಿ ಒಳಗೊಳ್ಳುವಿಕೆಯ ಅಭಿವೃದ್ಧಿಗಾಗಿ ಒಂದು ಶೋಧ' (A Search for Inclusive Growth in Arthashastra) ಪುಸ್ತಕದ ಬಿಡುಗಡೆಯು ಎಪ್ರಿಲ್ 26 ರಂದು ಪುಣೆಯಲ್ಲಿ ನಡೆಯಿತು. ಐತಿಹಾಸಿಕ ಮಹತ್ವವುಳ್ಳ ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸಮಾಜ ವಿಜ್ಞಾನ ಪರಿಷತ್ತು ಏರ್ಪಡಿಸಿದ್ದ ಏಳನೇ ವಾರ್ಷಿಕ ಸಮ್ಮೇಳನದಲ್ಲಿ ಮಹಾರಾಷ್ಟ್ರ ಸರ್ಕಾರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವರಾದ ಚಂದ್ರಕಾಂತ್ ಪಾಟೀಲ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿದರು. ಡಾ. ಜಿ.ವಿ. ಜೋಶಿ ತಮ್ಮ ಭಾಷಣದಲ್ಲಿ ಕೌಟಿಲ್ಯನ ಒಳಗೊಳ್ಳುವಿಕೆಯ ಅಭಿವೃದ್ಧಿಯ ಪ್ರಕ್ರಿಯೆ ದುರ್ಬಲ ವರ್ಗದವರಿಗೆ ನೆರವಾಗಬೇಕೆಂದು ಸ್ಪಷ್ಟಪಡಿಸಿದ್ದಾರೆಂದು ಬೃಹತ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡುತ್ತ ತಿಳಿಸಿದರು. ಇಂಥ ಅಪರೂಪದ ಕೃತಿ ರಚಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ ಜೋಶಿ ಅವರನ್ನು ರಾಷ್ಟ್ರೀಯ ಸಮಾಜ ವಿಜ್ಞಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಪ್ರೊ. ಶೀಲಾ ರೈ ಶ್ಲಾಘಿಸಿದರು.

ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Article Image

ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ಸ ಸಹಯೋಗದಲ್ಲಿ ಮಾ. 7ರಂದು ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ನಡೆಯಿತು. ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಂತೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಸಹಕಾರದಲ್ಲಿ ಈ ಆಸ್ಪತ್ರೆಯಲ್ಲಿ ಹಲವಾರು ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ನೂರಾರು ಉಚಿತ ಶಿಬಿರಗಳಿಂದ ಜನಮನ ಗೆದ್ದಿರುವ ನಮ್ಮ ಆಸ್ಪತ್ರೆಯಲ್ಲಿ ಈ ದಿನ ವಿಶೇಷವಾಗಿ ಮಹಿಳೆಯರ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ನಡೆಸಲಾಗುತ್ತಿದೆ ಎಂದರು. ಕೆನರಾ ಬ್ಯಾಂಕ್ ಡಿ.ಜಿ.ಎಂ, ನಾಗಪುರ ಇದರ ರೀಜನಲ್ ಹೆಡ್ ಆಗಿರುವ ಸುರೇಂದ್ರ ಬಾಬು ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಗ್ರಾಮೀಣ ಭಾಗದಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಹೈಟೆಕ್ ಸೌಲಭ್ಯವಿರುವ ಆಸ್ಪತ್ರೆ ತೆರೆದು ವೈದ್ಯಕೀಯ ಸೇವೆ ಒದಗಿಸಿರುವ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯ ನಿಜವಾಗಲೂ ಶ್ಲಾಘನೀಯ. ಎಲ್ಲರೂ ಈ ಆಸ್ಪತ್ರೆಯ ಮತ್ತು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಂತಾನೋತ್ಪತ್ತಿ ಔಷಧ ಕನ್ಸಲ್ಟೆಂಟ್ ಆಗಿರುವ ಡಾ. ಪ್ರಮೋದ ಲಕ್ಷ್ಮಣ ಮಾತನಾಡಿ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ವೈದ್ಯಕೀಯ ಸೇವೆ ನೀಡುತ್ತಿರುವ ಗ್ರಾಮೀಣ ಭಾಗದ ಈ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವುದು ನನ್ನ ಸೌಭಾಗ್ಯ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ಸ್ವರ್ಣಲತಾ ಇವರು ಮಾತನಾಡಿ, ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನದ ಕ್ಯಾನ್ಸರ್ ಇತ್ಯಾದಿಗಳನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದುಕೊಂಡÀರೆ ರೋಗಿಗಳು ಗುಣಮುಖರಾಗುತ್ತಾರೆ. ಇದೇ ಉದ್ದೇಶದಿಂದ ನಡೆಸಲ್ಪಡುವ ಈ ಶಿಬಿರದ ಪ್ರಯೋಜನವನ್ನು ಎಲ್ಲರು ಪಡೆದುಕೊಳ್ಳುವಂತೆ ವಿನಂತಿಸಿದರು. ಸ್ಕ್ಯಾನಿಂಗ್ ತಜ್ಞರಾದ ಡಾ| ಮಹೇಶ್, ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್.ಪಿ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ಪ್ರಿಯಾಂಕ, ಡಾ. ಅನ್ವಿತಾ ರಾವ್ ಉಪಸ್ಥಿತರಿದ್ದು, ಶಿಬಿರಕ್ಕೆ ಶುಭ ಹಾರೈಸಿದರು. 100ಕ್ಕೂ ಅಧಿಕ ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು. ಮಾರ್ಕೆಟಿಂಗ್ ಎಕ್ಷಕ್ಯೂಟಿವ್ ಸುಮಂತ್ ರೈ ಕಾರ್ಯಕ್ರಮ ಸಂಯೋಜಿಸಿ, ಸಂಪರ್ಕ ಅಧಿಕಾರಿ ಚಿದಾನಂದ ಕಾರ್ಯಕ್ರಮ ನಡೆಸಿಕೊಟ್ಟರು.

ವತ್ಸಲೆ ಕೃತಿ ಬಿಡುಗಡೆ

Article Image

ವತ್ಸಲೆ ಕೃತಿ ಬಿಡುಗಡೆ

ಉಜಿರೆ: “ವಾತ್ಸಲ್ಯ” ಮನೆ ನಿವಾಸಿಗಳ ಸಂತೃಪ್ತ ಮತ್ತು ನೆಮ್ಮದಿಯ ಜೀವನ ನಮಗೆ ಹೆಚ್ಚಿನ ಸಂತೋಷ ಮತ್ತು ತೃಪ್ತಿಯನ್ನು ನೀಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಬುಧವಾರ ಧರ್ಮಸ್ಥಳದಲ್ಲಿ ಬೀಡಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೂಜಾ ಪ್ರಶಾಂತ್ ಶೆಟ್ಟಿ ರಚಿಸಿದ “ವತ್ಸಲೆ” ಕೃತಿಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ತಾವು ಇತ್ತೀಚೆಗೆ ಮೈಸೂರಿನಲ್ಲಿ “ವಾತ್ಸಲ್ಯ” ಮನೆಗೆ ಭೇಟಿ ನೀಡಿ ಪುಟ್ಟ ಮನೆಯಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳಿದ್ದು ನಿವಾಸಿಗಳ ಸಂತೃಪ್ತ ಜೀವನ ಕಂಡು ತಮಗೆ ಅತೀವ ಸಂತೋಷ ಮತ್ತು ತೃಪ್ತಿ ಉಂಟಾಯಿತು ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಮಹಿಳಾ ಸಬಲೀಕರಣದ ರೂವಾರಿ ಹೇಮಾವತಿ ವೀ. ಹೆಗ್ಗಡೆಯವರ ಕನಸಿನ ಕೂಸು “ವಾತ್ಸಲ್ಯ” ಯೋಜನೆ. ಬದುಕಿನುದ್ದಕ್ಕೂ ಶ್ರಮ ಜೀವನ ಮಾಡಿ ಹೋರಾಡಿ ಬಳಲಿ ಬೆಂಡಾದ ಹಿರಿಯ ಜೀವಗಳಿಗೆ ಅಂತಿಮ ದಿನಗಳಲ್ಲಿ ಗೌರವದ, ನೆಮ್ಮದಿಯ ಸಂತೃಪ್ತ ಜೀವನ ಮಾಡಲು ಸೂರನ್ನು ಕಟ್ಟಿ ಕೊಡುವ ಕಾರ್ಯಕ್ರಮವೇ “ವಾತ್ಸಲ್ಯ”. ರಾಜ್ಯದೆಲ್ಲೆಡೆ ಈಗಾಗಲೆ 610 ಮನೆಗಳನ್ನು ಈ ಯೋಜನೆಯಡಿ ನಿರ್ಮಿಸಿದ್ದು ಬಡವರ ಪಾಲಿಗೆ ಆಶಾಜ್ಯೋತಿಯಾಗಿ, “ನಂದಾದೀಪ”ವಾಗಿ ಬೆಳಗುತ್ತಿವೆ. ಲೇಖಕಿ ಪೂಜಾಪ್ರಶಾಂತ್ ಶೆಟ್ಟಿ ಫಲಾನುಭವಿಗಳ ಅನುಭವ, ಅನಿಸಿಕೆಗಳನ್ನು ಹೃದಯಸ್ಪರ್ಶಿಯಾಗಿ ಕಥೆಗಳ ಮೂಲಕ ಸಾದರಪಡಿಸಿದ್ದಾರೆ. ಇವರಿಗೆ ಸಂದೀಪ್ ದೇವ್ ಸಹಕರಿಸಿರುತ್ತಾರೆ. ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ “ವಾತ್ಸಲ್ಯ” ಯೋಜನೆಯ ಅನುಷ್ಠಾನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ನಿಷ್ಠೆ, ಕಾಳಜಿ ಹಾಗೂ ಶ್ರಮವನ್ನು ಶ್ಲಾಘಿಸಿ ಅಭಿನಂದಿಸಿದರು. ಇದು ತಮಗೆ ಅತ್ಯಂತ ಆಪ್ತವಾದ ಕಾರ್ಯಕ್ರಮವಾಗಿದ್ದು “ವಾತ್ಸಲ್ಯ” ನಿವಾಸಿಗಳ ಪ್ರೀತಿ, ವಿಶ್ವಾಸ ಹಾಗೂ ಗೌರವ ತಿಳಿದು ನಮಗೆ ಸಂತೋಷವಾಗಿದೆ. ತಮ್ಮನ್ನೂ ಪ್ರೀತಿಸುವವರು “ಅಭಯ” ನೀಡುವವರೂ ಇದ್ದಾರೆ ಎಂಬ ವಿಶ್ವಾಸದಿಂದ ಅವರು ಇಂದು ಸಂತೃಪ್ತ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು. ಲೇಖಕಿ ಪೂಜಾ ಪ್ರಶಾಂತ್ ಶೆಟ್ಟಿ ಅವರನ್ನು ಹೇಮಾವತಿ ವೀ. ಹೆಗ್ಗಡೆಯವರು ಸನ್ಮಾನಿಸಿ ಅಭಿನಂದಿಸಿದರು. ಡಿ. ಸುರೇಂದ್ರ ಕುಮಾರ್, ಅನಿತಾಸುರೇಂದ್ರ ಕುಮಾರ್, ಸೋನಿಯಾಯಶೋವರ್ಮ, ಅಮಿತ್, ಶ್ರದ್ಧಾಅಮಿತ್, ಡಿ. ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್, ನಿಶ್ಚಲ್ ಕುಮಾರ್, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಪ್ರಾದೇಶಿಕ ಹಣಕಾಸು ನಿರ್ದೇಶಕರು ಶಾಂತಾರಾಮ ಪೈ, ಕೇಂದ್ರ ಕಚೇರಿಯ ಪ್ರಾದೇಶಿಕ ನಿರ್ದೇಶಕರು, ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ಧಾ ಶೆಟ್ಟಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ

Article Image

ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ಧಾ ಶೆಟ್ಟಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ

ಉಜಿರೆ : ಅತಿ ದೊಡ್ಡ ಪುಷ್ಪ ರಂಗೋಲಿ ರಚಿಸಿದಕ್ಕಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಸ್ಥಾನ ಪಡೆದ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆಗೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿನಂದಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಣಿಂಜೆ ನಿವಾಸಿ ಶೇಖರ್ ಶೆಟ್ಟಿ ಅವರ ಪುತ್ರಿ ಶ್ರದ್ಧಾ ಶೆಟ್ಟಿ ಅವರು ಎಂಟು ಅಡಿ ಅಂದರೆ 246 ಸೆಂಟಿಮೀಟರ್ ವ್ಯಾಸದ ವೃತ್ತಾಕಾರದ ಹೂವಿನಿಂದ ರಚಿಸಿದ ರಂಗೋಲಿಗೆ ಪ್ರಶಸ್ತಿ ಲಭಿಸಿದೆ. ಇದನ್ನು 1 ಗಂಟೆ 39 ನಿಮಿಷಗಳಲ್ಲಿ ಗುಲಾಬಿ, ಮಲ್ಲಿಗೆ ಮೊದಲಾದ ವಿವಿಧ ಜಾತಿಯ ಬಣ್ಣ ಬಣ್ಣದ ಹೂಗಳ ದಳದಲ್ಲಿ ರಂಗೋಲಿಯನ್ನು ರಚಿಸಿ ದಾಖಲೆ ಮಾಡಿದ್ದಾರೆ. ಪ್ರಸ್ತುತ ಶ್ರದ್ಧಾ ಶೆಟ್ಟಿ ಅವರು ಎಸ್‌ಡಿಎಂ ಕಾಲೇಜಿನಲ್ಲಿ ತೃತೀಯ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದು ಪೋಷಕರು ಹಾಗೂ ಕಾಲೇಜಿನ ಅಧ್ಯಾಪಕರ ಪ್ರೇರಣೆಯೊಂದಿಗೆ ವಿದ್ಯಾರ್ಥಿನಿ ಈ ದಾಖಲೆಯನ್ನು ಬರೆದಿದ್ದಾರೆ. ಈ ಸಾಧನೆಯನ್ನು ಶ್ಲಾಘಿಸಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿನಿಯ ಪರಿಶ್ರಮದ ಪ್ರತಿಫಲಕ್ಕೆ ಅಭಿನಂದಿಸಿದರು.

ಸತ್ತೂರು, ಧಾರವಾಡ : ಜೀವ ಉಳಿಸುವ ಕೌಶಲ್ಯಗಳ ತರಬೇತಿ

Article Image

ಸತ್ತೂರು, ಧಾರವಾಡ : ಜೀವ ಉಳಿಸುವ ಕೌಶಲ್ಯಗಳ ತರಬೇತಿ

ಸತ್ತೂರು, ಧಾರವಾಡ ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ, ತುರ್ತು ಚಿಕಿತ್ಸಾ ವಿಭಾಗವು AHA (ಅಮೇರಿಕನ್ ಹಾರ್ಟ್ ಅಸೋಸಿಯೇಷನ್) ಸಹಯೋಗದೊಂದಿಗೆ ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಕೌಶಲ್ಯಗಳನ್ನು ತರಬೇತಿ ನೀಡಲು AHA ಪ್ರಮಾಣೀಕೃತ BLS (ಬೇಸಿಕ್ ಲೈಫ್ ಸಪೋರ್ಟ್) ಮತ್ತು ACLS (ಅಡ್ವಾನ್ಸ್ಡ್ ಕಾರ್ಡಿಯಾಕ್ ಲೈಫ್ ಸಪೋರ್ಟ್) ಕೋರ್ಸ್ಗಳ ಘಟಕವನ್ನು ಪ್ರಾರಂಭಿಸುತ್ತಿದೆ. ಈ ತರಬೇತಿಯು ಉತ್ತರ ಕರ್ನಾಟಕದಲ್ಲಿ ಇದೇ ಮೊದಲನೆಯದು. ಒಂದು ದಿನದ BLS ತರಬೇತಿ ಕಾರ್ಯಕ್ರಮದ ಉದ್ದೇಶವು ವೈದ್ಯಕೀಯ ಸಹಾಯವನ್ನು ಪಡೆಯುವ ಮೊದಲು ಯಾರಾದರೂ ಯಾವುದೇ ಸ್ಥಳದಲ್ಲಿ ಹೃದಯ ಸ್ತಂಭನ ಎದುರಾದಾಗ ಜೀವ ಉಳಿಸುವ ಕೌಶಲ್ಯವನ್ನು ಕಲಿಸುತ್ತದೆ. ಸಾಮಾನ್ಯ ಜನರು ಇದರ ತರಬೇತಿ ಪಡೆದು ತುರ್ತು ಸಂದರ್ಭದಲ್ಲಿ ಜೀವ ಉಳಿಸಲು ಸಹಾಯ ಮಾಡಬಹುದಾಗಿದೆ. 2 ದಿನಗಳ ACLS ತರಬೇತಿ ಕಾರ್ಯಕ್ರಮವು ಮುಖ್ಯವಾಗಿ ಆರೋಗ್ಯ ವೃತ್ತಿಪರರಾದ ವೈದ್ಯರು, ದಾದಿಯರು, ಭೌತಚಿಕಿತ್ಸಕರು, ದಂತ ಮತ್ತು ವೈದ್ಯಕೀಯ ಪದವೀಧರರು, ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಸ್ನಾತಕೋತ್ತರ ಪದವೀಧರರಿಗೆ ಅಗತ್ಯವಾಗಿರುತ್ತದೆ. ACLS ತರಬೇತಿಯು ಔಷಧಿಗಳನ್ನು ನೀಡುವುದು, ಸುಧಾರಿತ ವಾಯುಮಾರ್ಗ ತಂತ್ರಗಳನ್ನು ಬಳಸುವುದು ಮತ್ತು ಡಿಫಿಬ್ರಿಲೇಷನ್‌ನೊಂದಿಗೆ ಹೃದಯದ ಸ್ತಂಭನವನ್ನು ನಿರ್ವಹಿಸುವಂತಹ ಕೌಶಲ್ಯಗಳನ್ನು ಒಳಗೊಂಡಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಡಾ. ಶಾಹನವಾಜ್ (ಮೊ: 97401 44367) ಮತ್ತು ಡಾ. ಅಮೀತ್ (ಮೊ: 72597 85318) ತುರ್ತು ಚಿಕಿತ್ಸಾ ವಿಭಾಗ, ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಧಾರವಾಡ ದೂರವಾಣಿ: 0836 247 4104, Extn.: 7063 Email: emergencymed@sdmucmsh.edu.in

ಮೂಡುಬಿದಿರೆ: ಎಕ್ಸಲೆಂಟ್ ಜೆಇಇ ಮೈನ್-2 ಫಲಿತಾಂಶ ರಾಷ್ಟ್ರಮಟ್ಟದ ರ‍್ಯಾಂಕ್‌ಗಳ ಸಾಧನೆ

Article Image

ಮೂಡುಬಿದಿರೆ: ಎಕ್ಸಲೆಂಟ್ ಜೆಇಇ ಮೈನ್-2 ಫಲಿತಾಂಶ ರಾಷ್ಟ್ರಮಟ್ಟದ ರ‍್ಯಾಂಕ್‌ಗಳ ಸಾಧನೆ

ಎನ್‌ಟಿಎ ನಡೆಸುವ ರಾಷ್ಟ್ರಮಟ್ಟದ ಇಂಜಿನಿಯರ್ ಪ್ರವೇಶ ಪರೀಕ್ಷೆಯ ಜೆಇಇ ಮೈನ್-2 ಇದರ ಫಲಿತಾಂಶ ಪ್ರಕಟವಾಗಿದ್ದು ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಭಾರತೀಯ ತಂತ್ರಜ್ಞಾನ ಸಂಸ್ಥೆ ಜೆಇಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆಯಲು ನಡೆಸುವ ಈ ಪರೀಕ್ಷೆಯ ಈ ಬಾರಿಯ ಫಲಿತಾಂಶದಲ್ಲಿ ಸಂಸ್ಥೆಯ ಶಿಶಿರ್ ಶೆಟ್ಟಿ ರಾಷ್ಟ್ರಮಟ್ಟದಲ್ಲಿ 528 ನೇ ರ‍್ಯಾಂಕ್ ಪಡೆದಿದ್ದಾರೆ. ಅಲ್ಲದೆ ಸಂಸ್ಥೆಯ ಶ್ರೇಯಾಂಕ್ ಮನೋಹರ್ ಪೈ ರಾಷ್ಟ್ರಮಟ್ಟದಲ್ಲಿ 2800 ನೇ ರ‍್ಯಾಂಕ್, ಕಾರ್ತಿಕ್ ಎಸ್ 3620ನೇ (ews) ರ‍್ಯಾಂಕ್ ಸ್ಮಿರಾ ತಲ್ವಾರ್ 480 ನೇ ರ‍್ಯಾಂಕ್ (c), ಶ್ರೇಯಸ್ ಹೆಚ್.ಎಸ್ 1648(c)ನೇ ರ‍್ಯಾಂಕ್, ಶೌರ್ಯ ಬಿ ತಲ್ವಾರ್ 1962ನೇ ರ‍್ಯಾಂಕ್(c), ಪೂರ್ಣಚಂದ್ರ 3051ನೇರ‍್ಯಾಂಕ್(c) ಪಡೆಯುದರೊಂದಿಗೆ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಪರೀಕ್ಷೆಗೆ ಹಾಜರಾದ 97 ವಿದ್ಯಾರ್ಥಿಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ಎನ್‌ಟಿಎ ನಡೆಸುವ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೇದಿರುತ್ತಾರೆ. ಅದರಲ್ಲಿ 3 ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಿಂತ ಹೆಚ್ಚು, 5 ವಿದ್ಯಾರ್ಥಿಗಳು 98 ಪರ್ಸೆಂಟೈಲ್‌ಗಿಂತ ಹೆಚ್ಚು ಮತ್ತು 12 ವಿದ್ಯಾರ್ಥಿಗಳು 97 ಪರ್ಸೆಂಟೈಲ್‌ಗಿಂತ ಹೆಚ್ಚು, 63 ವಿದ್ಯಾರ್ಥಿಗಳು 90 ಪರ್ಸೆಂಟೈಲ್‌ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರುತ್ತಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ರಾಷ್ಟ್ರಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

ಕ್ರೀಡೆಯಲ್ಲಿ ಸಾಧನೆ ಮಾಡಬಹುದು: ಡಾ. ಮೋಹನ ಆಳ್ವ

Article Image

ಕ್ರೀಡೆಯಲ್ಲಿ ಸಾಧನೆ ಮಾಡಬಹುದು: ಡಾ. ಮೋಹನ ಆಳ್ವ

ವಿದ್ಯಾಗಿರಿ: ನಮ್ಮ ದೇಶದಲ್ಲಿ 11 ಕೋಟಿಗೂ ಹೆಚ್ಚು ವಿದ್ಯಾರ್ಥಿ ಸಮುದಾಯವಿದ್ದು, ನಾವು ಕ್ರೀಡೆಗೆ ವಿಶೇಷ ಆಸಕ್ತಿ ನೀಡಬೇಕು. ಕ್ರೀಡಾಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶವಿದೆ. ದೇಶದ ಯುವಶಕ್ತಿ ರಾಷ್ಟ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ. ಆದರೆ ನಮ್ಮ ಸರ್ಕಾರ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡದೆ ಇರುವುದು ವಿದ್ಯಾರ್ಥಿಗಳ ಸಾಧನೆಗೆ ಅಡ್ಡಿಯಾಗುತ್ತಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಅತ್ಯಂತ ಕಡಿಮೆ ಯುವ ಸಂಪನ್ಮೂಲ ಇರುವ ದೇಶದ ಜೊತೆಗೂ ನಮಗೂ ಹೊರಡಲು ಕಷ್ಟವಾಗುತ್ತಿದೆ ಎಂದು ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ನುಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಈಜುಕೊಳ ಆವರಣದಲ್ಲಿ ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಖೇಲೋ ಇಂಡಿಯಾಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಈಜುಗಾರರಿಗೆ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಹಕಾರಿಯಾಗುವಂತ ವ್ಯವಸ್ಥೆ ಕಲ್ಪಿಸಬೇಕು ಎಂದರು. ದಕ್ಷಿಣ ಕನ್ನಡ ಈಜುಗಾರರ ಸಂಘದ ಅಧ್ಯಕ್ಷ ಯತೀಶ್ ಬೈಕಂಪಾಡಿ ಮಾತನಾಡಿ ಡಾ. ಮೋಹನ ಆಳ್ವರ ಗುರಿ ವಿದ್ಯಾರ್ಥಿಗಳ ಯಶಸ್ಸು. ಅದು ಆಳ್ವರಿಗೆ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸ್ಪೂರ್ತಿ ನೀಡುತ್ತಿದೆ. ವಿದೇಶಗಳಲ್ಲಿ ವಿದ್ಯಾರ್ಥಿಗಳಿಗೆ ಈಜು ಪಠ್ಯದ ಒಂದು ಭಾಗವಾಗಿರುತ್ತದೆ. ಅದು ಸಾಧನೆಗೆ ಸಹಕರಿಯಾಗುತ್ತದೆ. ಪ್ರತಿಯೊಬ್ಬರೂ ಈಜು ಕಲಿಯಬೇಕು. ಆಗ ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಈಜುಪಟುಗಳ ಸಂಖ್ಯೆ ಅಭಿವೃದ್ಧಿಯಾಗುತ್ತದೆ ಎಂದರು. ಭಾರತದ ಮಾಜಿ ಸ್ವಿಮ್ಮಿಂಗ್ ಕೋಚ್ ಪಾರ್ಥ ವಾರಣಾಸಿ ಮಾತನಾಡಿ ಭಾರತದಲ್ಲಿ 2030ರ ಹೊತ್ತಿಗೆ ಕ್ರೀಡೆ ಮುಖ್ಯವಾದ ವೃತ್ತಿಯಾಗಲಿದೆ. ಜನರು ಕ್ರೀಡೆಯಲ್ಲಿ ಹೆಚ್ಚಿನ ಗೌರವವನ್ನು ಪಡೆಯಲಿದ್ದಾರೆ. ಈಜು ಕ್ರೀಡೆಯಲ್ಲಿ ಪ್ರಮುಖ ಬದಲಾವಣೆಗಳಾಗಲಿದೆ ಎಂದರು. ಬಿಹಾರದ ಗಯಾದಲ್ಲಿ ಮೇ 5 ರಿಂದ 9 ರ ವರೆಗೆ ನಡೆಯಲಿರುವ ಖೇಲೋ ಇಂಡಿಯಾ ಯೂತ್ ಗೇಮ್ಸ್ ನಲ್ಲಿ ಕರ್ನಾಟಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಚಿಂತನ್ ಶೆಟ್ಟಿ, ಪ್ರತೀಕ್ಷಾ ಶೆಣೈ ಹಾಗೂ ಅಲೈಸ್ಟರ್ ಸ್ಯಾಮುಲ್ ರೆಗೋ ರವರಿಗೆ ದಕ್ಷಿಣ ಕನ್ನಡ ಈಜುಗಾರರ ಸಂಘದಿAದ ತಲಾ 15000 ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ 5,000ಯನ್ನು ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಈಜುಗಾರರ ಸಂಘದ ಕಾರ್ಯದರ್ಶಿ ಮಹೇಶ್ ಕೋಡಿಕಲ್, ಮಂಗಳ ಈಜುಗಾರರ ಕ್ಲಬ್‌ನ ಅಧ್ಯಕ್ಷ ಶಿವಾನಂದ ಗಟ್ಟಿ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಈಜುಗಾರರ ಸಂಘದ ಸಹ ಕಾರ್ಯದರ್ಶಿ ಶರ್ಲಿ ರೇಗೋ ಕಾರ್ಯಕ್ರಮ ನಿರೂಪಿಸಿದರು.

ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ ನಾಳೆ

Article Image

ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ ನಾಳೆ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣಮಂಟಪಗಳ ಸಮುಚ್ಚಯವನ್ನು ನಿರ್ಮಿಸಿದ್ದು, ಇದೇ 20ರಂದು ಭಾನುವಾರ ಅಪರಾಹ್ನ ನಾಲ್ಕು ಗಂಟೆಗೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಸುರೇಂದ್ರ ಕುಮಾರ್ ಶುಭಾಶಂಸನೆ ಮಾಡುವರು. ಶಾಸಕರುಗಳಾದ ಕೆ. ಹರೀಶ್ ಪೂಂಜ, ಮತ್ತು ಕೆ. ಪ್ರತಾಪಸಿಂಹ ನಾಯಕ್, ಹಾಗೂ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಅಮೃತವರ್ಷಿಣಿ ಸಭಾಭವನದಲ್ಲಿ ಸಭಾಕಾರ್ಯಕ್ರಮ ನಡೆಯಲಿದೆ.

ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಹೆಗ್ಗಡೆಯವರು ಅಭಿನಂದಿಸಿದರು

Article Image

ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಹೆಗ್ಗಡೆಯವರು ಅಭಿನಂದಿಸಿದರು

ಸ್ಥಳೀಯ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ಪಿ.ಯು.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ಭಾನುವಾರ ಧರ್ಮಸ್ಥಳಕ್ಕೆ ಹೋಗಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಹೆಗ್ಗಡೆಯವರು ಅಭಿನಂದಿಸಿ ಅವರಿಗೆ ಉಜ್ವಲ ಭವಿಷ್ಯವನ್ನು ಹಾರೈಸಿದರು. ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು: ವಿಜ್ಞಾನ ವಿಭಾಗ: • ಕುಮಾರಿ ತುಷಾರ ಬಿ.ಎಸ್., (5ನೇ ರ‍್ಯಾಂಕ್) ಪಡೆದ ಅಂಕಗಳು: 595 • ಕುಮಾರಿ ನೀತಿ ಕೆ.ಪಿ. (9ನೇ ರ‍್ಯಾಂಕ್) ಪಡೆದ ಅಂಕಗಳು: 591 ವಾಣಿಜ್ಯ ವಿಭಾಗ: • ಆರ್ಯದಿನೇಶ್ (7ನೇ ರ‍್ಯಾಂಕ್) ಪಡೆದ ಅಂಕಗಳು: 593 ಕಲಾ ವಿಭಾಗ: • ಶ್ರೇಯಾ, ಎಚ್.ಎ. (9ನೆ ರ‍್ಯಾಂಕ್) ಪಡೆದ ಅಂಕಗಳು: 589 ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಿಂದ ಒಟ್ಟು 1099 ವಿದ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ಹಾಜರಾಗಿದ್ದು, 1069 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 97.27 ಫಲಿತಾಂಶ ಬಂದಿರುತ್ತದೆ. ಉತ್ತಮ ಫಲಿತಾಂಶಕ್ಕಾಗಿ ಹೆಗ್ಗಡೆಯವರು ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರಾಂಶುಪಾಲ ಬಿ. ಪ್ರಮೋದ್ ಕುಮಾರ್, ಉಪನ್ಯಾಸಕರು, ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಳಿಯ ಹೊಸ ಲೋಗೋ ಅನಾವರಣ

Article Image

ಮುಳಿಯ ಹೊಸ ಲೋಗೋ ಅನಾವರಣ

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ. ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು. ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ. "ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ. ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ ಲೋಗೋ ಆಧುನಿಕತೆಯನ್ನು ಮತ್ತು ಡಿಸೈನ್ ಎಲಿಮೆಂಟ್ ಹೊಂದಿದ್ದು ಹೊಸ ಟ್ರೆಂಡ್ ಗಳನ್ನು ಹೊರ ಸೂಸುತ್ತದೆ. ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ mascot ಆಗಿರುವ ಆನೆ ಮರಿ ದೃಢತೆ ಮತ್ತು ನಾಯಕತ್ವ ಮತ್ತು ಎಗ್ರೆಸಿವ್ ವಿಚಾರಗಳನ್ನು ಮುಂದಿಡುತ್ತದೆ" ಶುದ್ಧತೆ ಮೀರಿದ ಪರಿಪೂರ್ಣತೆ ಯೆಡೆಗೆ ಸಾಗಿ ಬಂದು ಮುಳಿಯ ತನ್ನ ಸುತ್ತಮುತ್ತ ಸಂತೋಷ ಉಣ ಬಡಿಸಿದೆ ಎನ್ನುತ್ತಾರೆ ಕೇಶವ ಪ್ರಸಾದ್ ಮುಳಿಯ. ಕಳೆದ ಮೂರು ತಲೆಮಾರುಗಳಿಂದ ಗ್ರಾಹಕರ ಮತ್ತು ಜನತೆಯ ವಿಶ್ವಾಸ ಗಳಿಸಿ-ಉಳಿಸುತ್ತಿರುವುದು ನಮ್ಮ ಮುಳಿಯ ಪರಂಪರೆ. ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ,- ಸಂತೋಷ ನೀಡಿದ್ದೇವೆ.. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ.. Creating happiness (ಸದಾ ಸಂತೋಷ ) ನೀಡುವ ನಮ್ಮ ಹೊಸತನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು, ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ" ಎನ್ನುತ್ತಾರೆ ಕೃಷ್ಣ ನಾರಾಯಣ ಮುಳಿಯ. "ಈ ಹೊಸ ಲೋಗೋವನ್ನು ಪುತ್ತೂರಿನ ಸಾಫ್ಟ್ವೇರ್ ಕಂಪನಿಯಾದ " ದ ವೆಬ್ ಪೀಪಲ್ "ಮಾಡಿರುತ್ತದೆ ಎಂದು ಮುಳಿಯ ಸಂಸ್ಥೆಯ ಬ್ರಾಂಡ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಈ ಸಂದರ್ಭದಲ್ಲಿ ಲೋಗೋದ ವಿನ್ಯಾಸದ ಕುರಿತು ವಿವರಿಸಿದರು. ಸಂಸ್ಥೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಸಂಜೀವ ಹಾಗೂ ದ ವೆಬ್ ಪೀಪಲ್ ಪಾಲುದಾರರಾದ ಆದಿತ್ಯ ಕಲ್ಲುರಾಯ ಮತ್ತು ಶರತ್ ಉಪಸ್ಥಿತರಿದ್ದರು...

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ 13 ಸ್ಥಾನಗಳನ್ನು ಮಡಿಲಿಗೆಳೆದುಕೊ0ಡ ಎಕ್ಸಲೆಂಟ್

Article Image

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ 13 ಸ್ಥಾನಗಳನ್ನು ಮಡಿಲಿಗೆಳೆದುಕೊ0ಡ ಎಕ್ಸಲೆಂಟ್

ಮೂಡುಬಿದಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 1 ರಿ0ದ ಮಾರ್ಚ್ 20 ರ ವರಗೆ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯ ಮಟ್ಟದಲ್ಲಿ ವಿಜ್ಞಾನ ವಿಭಾಗದಲ್ಲಿ ನಾಲ್ಕನೇ ಸ್ಥಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ನಾಲ್ಕನೇ ಸ್ಥಾನದೊ0ದಿಗೆ 13 ಸ್ಥಾನಗಳನ್ನು ಬಾಚಿಕೊಳ್ಳುವ ಮೂಲಕ ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿ ಮತ್ತೊಮ್ಮೆ ಗುಣಮಟ್ಟದ ಶಿಕ್ಷಣವನ್ನು ಸಾಬೀತುಪಡಿಸಿದೆ. ಸಂಸ್ಥೆಯಲ್ಲಿ ಪರೀಕ್ಷೆ ಬರೆದ 953 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದರ‍್ಯಾಂಕ್ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನಗಳನ್ನು ಪಡೆದಿದ್ದಾರೆ. ಜೈನ ಕಾಶಿಯಾದ ಮೂಡುಬಿದಿರೆ ಶಿಕ್ಷಣ ಕಾಶಿಯಾಗಿ ರೂಪುಗೊ0ಡಿದ್ದು, ಎಕ್ಸಲೆಂಟ್ ವಿದ್ಯಾ ಸ0ಸ್ಥೆ ಕಳೆದ ಹದಿಮೂರು ವರ್ಷಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ಸಲ್ಲಿಸುತ್ತಿದ್ದು, ಶಿಸ್ತು ಸಂಸ್ಕಾರ ಬದ್ಧ ಜೀವನದ ಧ್ಯೇಯೋದ್ದೇಶವನ್ನು ಇಟ್ಟುಕೊಂಡು ಗುಣಮಟ್ಟದ ವಿದ್ಯಾರ್ಥಿಗಳನ್ನು ಸಿದ್ಧಪಡಿಸುತ್ತಿದೆ. ದ್ವಿತೀಯ ಪದವಿಪೂರ್ವ ಶಿಕ್ಷಣದಲ್ಲಿ ನಿರಂತರವಾಗಿ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸುತ್ತಾ ಬಂದಿರುತ್ತದೆ. ವಿಜ್ಞಾನ ವಿಭಾಗದಲ್ಲಿ ಪ್ರಮುಖ್ ತುಳುಪುಳೆ (596) 4ನೇ ಸ್ಥಾನ, ರೋಹಿತ್ ಕಾಮತ್ (593) 7ನೇ ಸ್ಥಾನ, ಶಿಶಿರ್ ಎಚ್ ಶೆಟ್ಟಿ(593) 7ನೇ ಸ್ಥಾನ, ಥಿಯಾನ್ ಮಹೇಶ್ ಸೋನ್ಸ್(593) 7ನೇ ಸ್ಥಾನ, ವರುಣ್ ವಿ (593) 7ನೇ ಸ್ಥಾನ, ಸುಜನಾ (591) 9ನೇ ಸ್ಥಾನ, ಮೂಡುಬಿದಿರೆಯ ಪಾಂಡುರ0ಗ ಪೈ ಮತ್ತು ಸವಿತಾ ಪೈ ಅವರ ಪುತ್ರಿ ಕೆ ಸುಮಾ ಪೈ (591) 9ನೇ ಸ್ಥಾನ, ಸಕಲೇಶಪುರದ ವಿಶ್ವಾ ಜೆ ಎಸ್ ಮತ್ತು ಬವಿತಾ ಡಿ ಎಸ್ ಅವರ ಪುತ್ರ ಧನಾ0ಶ್ ವಿ(590) 10ನೇ ಸ್ಥಾನ, ದಿವ್ಯೇಶ್ ಶರ್ಮಾ (590) 10ನೇ ಸ್ಥಾನ, ಎಡುಲಾ ಓ0ಸಾಯಿ(590) 10ನೇ ಸ್ಥಾನ ಪಡೆದಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಅನೂಪ್ ಶಾನ್ ಗೋಮ್ಸ್ (596) ರಾಜ್ಯಕ್ಕೆ 4ನೇ ಸ್ಥಾನ, ಅದಿತಿ ಕೆ (594) 6ನೇ ಸ್ಥಾನ, ಆದಿತ್ಯ ಶೆಟ್ಟಿ (590) 10ನೇ ಸ್ಥಾನವನ್ನು ಪಡೆದಿದ್ದು ಸ0ಸ್ಥೆಗೆ ಕೀರ್ತಿಯನ್ನು ತ0ದಿದ್ದಾರೆ. ಪರೀಕ್ಷೆಗೆ ಹಾಜರಾದ 953 ವಿದ್ಯಾರ್ಥಿಗಳಲ್ಲಿ 595 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಶೆಕಡಾ ನೂರು ಫಲಿತಾ0ಶ ದಾಖಲಾಗಿದ್ದು ಸ0ಸ್ಥೆಯ 241 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 100ಕ್ಕೆ 100 ಅ0ಕಗಳನ್ನು ಪಡೆದಿರುತ್ತಾರೆ. ಸ0ಸ್ಥೆಯ ಒಟ್ಟು ಫಲಿತಾ0ಶ 99.895 ಎ0ದು ಸ0ಸ್ಥೆಯ ಪ್ರಕಟಣೆ ತಿಳಿಸಿದೆ. ವಿದ್ಯಾರ್ಥಿಗಳ ಅತ್ಯುತ್ತಮ ಫಲಿತಾಂಶಕ್ಕೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ನಿರ್ದೇಶಕರು, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.

ಜೈನ ಪದವಿಪೂರ್ವ ಕಾಲೇಜಿಗೆ 96 ಡಿಸ್ಟಿಂಕ್ಷನ್

Article Image

ಜೈನ ಪದವಿಪೂರ್ವ ಕಾಲೇಜಿಗೆ 96 ಡಿಸ್ಟಿಂಕ್ಷನ್

ಮೂಡುಬಿದಿರೆಯ ಸ್ಥಳೀಯ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಜೈನ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಫಲಿತಾಂಶ ಲಭ್ಯವಾಗಿದ್ದು ಪರೀಕ್ಷೆ ಬರೆದ 355 ವಿದ್ಯಾರ್ಥಿಗಳಲ್ಲಿ 335 ವಿದ್ಯಾರ್ಥಿಗಳು ಉತ್ತೀರ್ಣರಾಗಿ 94.5% ಪಲಿತಾಂಶ ಲಭ್ಯವಾಗಿರುತ್ತದೆ. ವಾಣಿಜ್ಯ ವಿಭಾಗದ ಸುಧೀಕ್ಷಾ 587 (97.83% )ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 13ನೇ ಸ್ಥಾನವನ್ನು ಪಡೆದಿರುತ್ತಾಳೆ. ವಿಜ್ಞಾನ ವಿಭಾಗದಲ್ಲಿ ವಿಜೇತ್ ಜೈನ್ 586(97.66%) ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ 14ನೆಯ ಸ್ಥಾನವನ್ನು ಪಡೆದಿರುತ್ತಾನೆ. ಕಲಾ ವಿಭಾಗದ ಕೀರ್ತನ 531 ಅಂಕ ಗಳಿಸಿರುತ್ತಾಳೆ. ಯಶಸ್ಸು ಪಡೆದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ದಿಗಂಬರ ಜೈನ ವಿದ್ಯಾವರ್ಧಕ ಸಂಘ ಅಭಿನಂದನೆಗಳನ್ನು ಸಲ್ಲಿಸಿದೆ.

ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮ ಹಿರಿಯಂಗಡಿ ಕಾರ್ಕಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Article Image

ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮ ಹಿರಿಯಂಗಡಿ ಕಾರ್ಕಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

ನಿಲಯದ ಒಟ್ಟು 13 ವಿದ್ಯಾರ್ಥಿಗಳ ಪೈಕಿ 5 ವಿದ್ಯಾರ್ಥಿಗಳು ಅತ್ತ್ಯುನ್ನತ ಶ್ರೇಣಿಯಲ್ಲಿ ಹಾಗೂ 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ವಿದ್ಯಾರ್ಥಿ ಪಾರ್ಶ್ವನಾಥ್ ಜೈನ್ 573/600 ಅಂಕಗಳೊಂದಿಗೆ (Statistics 100) ಆಶ್ರಮಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಅದೇ ರೀತಿ ಚವೀಶ್ (572), ರಜತ್ (563), ಸೂರಜ್ ಜೆ ಜೈನ್ (557) ( Stats -100) ಮತ್ತು ಯತಿನ್ (513) ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

ಉಜಿರೆ: ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Article Image

ಉಜಿರೆ: ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

ಸೇವಾ ನಿವೃತ್ತಿ ಪಡೆದ ಡಾ| ಬಾಲಕೃಷ್ಣ ಭಟ್ ಮತ್ತು ಡಾ| ಕಮಲಾ ಭಟ್ ಇವರ ಅತ್ಯುತ್ತಮ ಸೇವೆಯನ್ನು ಗೌರವಿಸಿ, ಬೀಳ್ಕೊಡುಗೆ ನೀಡುತ್ತಾ, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಮಾತನಾಡಿದರು. ಜನಸೇವೆಯ ಉದ್ದೇಶದೊಂದಿಗೆ ಡಾ.ಡಿ. ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಹರ್ಷೇಂದ್ರ ಕುಮಾರ್ ಹಾಗೂ ಹೆಗ್ಗಡೆ ಪರಿವಾರದವರ ಸಹಕಾರದಲ್ಲಿ ನಡೆಯುತ್ತಿರುವ ಈ ಆಸ್ಪತ್ರೆಯಲ್ಲಿ ಸಮಯದ ಬಗ್ಗೆ ಚಿಂತಿಸದೆ, ರೋಗಿಯ ಆರೈಕೆಯಲ್ಲಿಯೇ ತಮ್ಮ ಬದುಕಿನ ಅತೀ ಹೆಚ್ಚಿನ ಸಮಯವನ್ನು ಕಳೆದವರು ಇವರು. ತಮ್ಮ ಇಳಿವಯಸ್ಸಿನಲ್ಲಿಯೂ ರೋಗಿಗಳ ಹಿತವನ್ನೇ ಬಯಸಿದ ಇವರ ಸೇವೆ ಈ ಆಸ್ಪತ್ರೆಗೆ ಅತ್ಯುತ್ತಮ ಕೊಡುಗೆಯಾಗಿದೆ ಎಂದರು. ನಿವೃತ್ತರಾದ ಡಾ| ಬಾಲಕೃಷ್ಣ ಭಟ್ ಮಾತನಾಡಿ, ದೇವಮಾನವರಾದ ಹೆಗ್ಗಡೆಯವರ ಸಂಸ್ಥೆಯಲ್ಲಿ ವೈದ್ಯಕೀಯ ಸೇವೆ ಮಾಡುವ ಸದಾವಕಾಶ ನಮಗೆ ದೊರೆತಿದೆ. ಇದಕ್ಕಾಗಿ ಹೆಗ್ಗಡೆಯವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ವಯೋ ಸಹಜ ಸಮಸ್ಯೆಯಿಂದ ನಿವೃತ್ತಿ ಪಡೆಯುತ್ತಿದ್ದು, ವೈದ್ಯಕೀಯ ಸೇವಾ ಬದುಕಿನಲ್ಲಿ ಅತ್ಯಂತ ಉತ್ತಮ ರೀತಿಯಲ್ಲಿ ರೋಗಿಗಳ ಸೇವೆ ಮಾಡಿದ ಸಂತೃಪ್ತಿ ನಮಗಿದೆ. ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಅವರ ಸಮರ್ಥ ನಾಯಕತ್ವದಲ್ಲಿ ಜನಪ್ರಿಯಗೊಂಡಿರುವ ಈ ಆಸ್ಪತ್ರೆಯಲ್ಲಿ ಅತ್ಯುತ್ತಮ ವೈದ್ಯವೃಂದ, ನುರಿತ ದಾದಿಯರು, ಒಳ್ಳೆಯ ಸಿಬ್ಬಂದಿಗಳೊAದಿಗೆ ಸೇವೆ ಮಾಡಿದ್ದು, ಎಲ್ಲರೂ ನಮಗೆ ಸದಾ ಸ್ಮರಣೀಯರು ಎಂದರು. ಡಾ| ಚಿನ್ಮಯ್ ಇವರು ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ಧೀರ್ಘಕಾಲದ ಅನುಭವ ಹೊಂದಿರುವ ಮತ್ತು ತಮ್ಮ ಇಳಿವಯಸ್ಸಿನಲ್ಲಿಯೂ ಲವಲವಿಕೆ ಮತ್ತು ಸದಾ ಕಳೆದ 13 ವರ್ಷಗಳಿಂದ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್ವಿ ಭಾಗದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ ಡಾ| ಬಾಲಕೃಷ್ಣ ಭಟ್, ಹಾಗೂ ಡಾ| ಕಮಲಾ ಭಟ್ ಇವರು ವಯೋಸಹಜ ಸಮಸ್ಯೆಗಳಿಂದಾಗಿ ಸೇವಾ ನಿವೃತ್ತಿ ಪಡೆದರು. ಚಟುವಟಿಕೆಯಲ್ಲಿರುವ ಇವರಿಬ್ಬರೂ ಕೂಡ ನಮ್ಮಂತಹ ವೈದ್ಯರಿಗೆ ಸ್ಪೂರ್ತಿಯಾಗಿದ್ದಾರೆ ಎಂದರು. ಆಸ್ಪತ್ರೆಯ ನರ್ಸಿಂಗ್ ಅಧೀಕ್ಷಕಿ ಶೆರ್ಲಿ ಇವರು ಮಾತನಾಡಿ, ತಮ್ಮ ವೈದ್ಯಕೀಯ ವೃತ್ತಿ ಜೀವನದಲ್ಲಿ ಅಪಾರ ಅನುಭವ ಹೊಂದಿರುವ ಡಾ| ಬಾಲಕೃಷ್ಣ ಭಟ್, ಮೆಡಿಸಿನ್ ವಿಭಾಗದಲ್ಲಿದ್ದರೂ ಮೂಳೆಚಿಕಿತ್ಸೆ, ಮಕ್ಕಳ ಚಿಕಿತ್ಸೆಯಲ್ಲಿಯೂ ಪರಿಣತಿ ಪಡೆದಿದ್ದರು. ಡಾ| ಕಮಲಾ ಭಟ್ ತಮ್ಮ ವೃತ್ತಿ ಜೀವನದಲ್ಲಿ ಅತೀ ಹೆಚ್ಚು ರೋಗಿಗಳಿಗೆ ಅತ್ಯುತ್ತಮ ಸೇವೆ ನೀಡುವ ಮೂಲಕ ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ ಎಂದರು. ಇನ್ಯೂರೆನ್ಸ್ ವಿಭಾಗದ ಜಗನ್ನಾಥ್ ನಿರೂಪಿಸಿದರು. ವೈದ್ಯರು, ದಾದಿಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ

Article Image

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಆದೇಶದಂತೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ, ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟುಹಬ್ಬದ ಸಂದರ್ಭದಲ್ಲಿ ಆಯೋಜಿಸಲಾಗಿದ್ದ, ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ಏ.2 ಬುಧವಾರ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 2.30ರವರೆಗೆ ನಡೆಯಿತು. ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಶಿಬಿರ ಉದ್ಘಾಟಿಸಿ ಮಾತನಾಡಿದರು. ದೇಹದ ರೋಗನಿರೋಧಕ ಅವ್ಯವಸ್ಥೆಯಿಂದ ಆರೋಗ್ಯಕರ ಅಂಗಾಂಶಗಳ ಮೇಲೆ ಪರಿಣಾಮ ಬೀಳುತ್ತದೆ. ಇದರಿಂದ ಆಟೋಇಮ್ಯೂನ್ ಕಾಯಿಲೆಗಳು ಸಂಭವಿಸುತ್ತವೆ. ರುಮಟಾಯ್ಡ್ ಸಂಧಿವಾತ, ಮಲ್ಟಿಪಲ್ ಸ್ಕೆರೋಸಿಸ್ ಇತ್ಯಾದಿ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಈ ಎಲ್ಲಾ ತೊಂದರೆಗಳಿಗೆ ಈ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಪ್ರತೀಕ್ಷ್. ಪಿ ಇವರು ಮಾತನಾಡಿ, ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಮತ್ತು ಪ್ರತ್ಯೂಷ ಮಣಿಕುಪ್ಪಂ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಚಿಕಿತ್ಸೆ ನೀಡುವ ನುರಿತ ತಜ್ಞ ವೈದ್ಯರಾಗಿದ್ದು, ಎಲ್ಲರೂ ಈ ಶಿಬಿರದ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು. ಅಧ್ಯಕ್ಷತೆ ವಹಿಸಿದ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡಿ, ಎಲ್ಲಾ ಖಾಯಿಲೆಗಳಿಗೆ ಇಲ್ಲಿಯೇ ಅತ್ಯುತ್ತಮ ಚಿಕಿತ್ಸೆ ದೊರೆಯಬೇಕು ಎಂಬುದು ಹೆಗ್ಗಡೆಯವರ ಬಯಕೆ. ಹೆಗ್ಗಡೆಯವರ ಆದೇಶದಂತೆ ಹಲವಾರು ಉಚಿತ ಶಿಬರಗಳನ್ನು ನಡೆಸಲಾಗುತ್ತಿದೆ. ಹಲವಾರು ಜನರ ಕಾಯಿಲೆಗಳನ್ನು ಪ್ರಾರಂಭದ ಹಂತದಲ್ಲಿಯೇ ಪತ್ತೆಹಚ್ಚಲು ಸಾಧ್ಯವಾಗುವುದರಿಂದ ರೋಗಿಗಳಿಗೆ ಚಿಕಿತ್ಸಾ ವೆಚ್ಚ ಕಡಿಮೆಯಾಗುವುದಲ್ಲದೇ ಅತ್ಯಂತ ಶೀಘ್ರವಾಗಿ ಗುಣಮುಖರಾಗುತ್ತಾರೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಷಿಯನ್ ಡಾ| ಯಶಸ್ವಿನಿ, ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ರಜತ್ ಉಪಸ್ಥಿತರಿದ್ದರು. ಇನ್ಶೂರೆನ್ಸ್ ವಿಭಾಗದ ಜಗನ್ನಾಥ್ ಕಾರ್ಯಕ್ರಮ ನಿರೂಪಿಸಿದರು. ಈ ಶಿಬಿರದಲ್ಲಿ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ| ಶಿವರಾಜ್ ಪಡಿಯಾರ್ ಮತ್ತು ಪ್ರತ್ಯೂಷ ಮಣಿಕುಪ್ಪಂ ಭಾಗವಹಿಸಿದ್ದರು. ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ್, ಆರ್ಥೈಟಿಸ್, ಸ್ಟಾಂಡಿಲೋ ಆರ್ಥೈಟಿಸ್, ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಭಾಗವಹಿಸಿ ಚಿಕಿತ್ಸೆ ಪಡೆದರು.

ಎಕ್ಸಲೆಂಟ್ ಸಿಬಿಎಸ್ಇ ಕಿಂಡರ್ ಗಾರ್ಟನ್ ಪುಟಾಣಿ ವಿದ್ಯಾರ್ಥಿಗಳಿಗೆ ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭ

Article Image

ಎಕ್ಸಲೆಂಟ್ ಸಿಬಿಎಸ್ಇ ಕಿಂಡರ್ ಗಾರ್ಟನ್ ಪುಟಾಣಿ ವಿದ್ಯಾರ್ಥಿಗಳಿಗೆ ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭ

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಯುಕೆಜಿ ತರಗತಿಯ ಪುಟಾಣಿ ವಿದ್ಯಾರ್ಥಿಗಳಿಗೆ ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭವನ್ನು ಪುಟಾಣಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದಿರೆಯ ಖ್ಯಾತ ಮಕ್ಕಳ ತಜ್ಞ ಡಾಕ್ಟರ್. ಟಿ. ವಸಂತ್ ರವರು ಉಪಸ್ಥಿತಿಯಲ್ಲಿದ್ದು ಮಕ್ಕಳ ಮನಸ್ಸು ಸೂಕ್ಷ್ಮವಾದುದು, ಎಳೆಯ ವಯಸ್ಸಿನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಎಲ್ಲಾ ಚೌಕಟ್ಟನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರದ್ದೂ ಆಗಿರುತ್ತದೆ ಎಂದು ತಿಳಿಸಿದರು. ಎಕ್ಸಲೆಂಟ್ ಸಿಬಿಎಸ್ಇ ಶಾಲೆಯ ಶೈಕ್ಷಣಿಕ ನಿರ್ದೇಶಕರು ಹಾಗೂ ಶೈಕ್ಷಣಿಕ ಮನಶಾಸ್ತ್ರಜ್ಞರು ಆಗಿರುವ ಬಿ. ಪುಷ್ಪರಾಜ ರವರು ಮಾತನಾಡಿ, ಎಳೆಯ ಮಕ್ಕಳ ಕಲಿಕೆಗೆ ಅನುಕೂಲಕರವಾದ ಚಟುವಟಿಕೆ ಆಧಾರಿತ ಶಿಕ್ಷಣ ನೀಡುವುದರಿಂದ ಮಕ್ಕಳು ಹೆಚ್ಚು ಕ್ರಿಯಾಶೀಲರಾಗಿ ಬೆಳೆಯಲು ಸಾಧ್ಯವಾಗುವುದು.ಅಲ್ಲದೆ ಎಳೆಯ ಮಕ್ಕಳಿಗೆ ಮಾತನಾಡುವ ಕೌಶಲ್ಯವನ್ನು ಬೆಳೆಸುವ ಹಲವು ಚಟುವಟಿಕೆಗಳನ್ನು ನೀಡುವುದರಿಂದ ಅವರ ಜ್ಞಾನವನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗುತ್ತದೆ ಎನ್ನುವುದನ್ನು ತಿಳಿಸಿದರು. ಈ ಸಂದರ್ಭದಲ್ಲಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ಮಾತನಾಡಿ, ಮಕ್ಕಳಲ್ಲಿ ಶಿಸ್ತು, ಸಂಯಮ, ಗೌರವಭಕ್ತಿಯ ಮನೋಭಾವವನ್ನು ಬೆಳೆಸುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವೂ ಆಗಿದೆ ಎಂದು ಹೇಳುವ ಮೂಲಕ ಎಳೆಯ ವಯಸ್ಸಿನ ಮಕ್ಕಳು ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕಾದರೆ ಮಗು ಬೆಳೆದಿರುವ ಸುತ್ತಮುತ್ತಲಿನ ಪರಿಸರ ಉತ್ತಮವಾಗಿರಬೇಕು ಅನ್ನುವುದನ್ನು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರು ಆಗಿರುವ ಬಿ. ಪುಷ್ಪರಾಜ್, ಆಡಳಿತ ನಿರ್ದೇಶಕರಾದ ಬಿ. ಪಿ.ಸಂಪತ್ ಕುಮಾರ್, ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲರಾದ ಸುರೇಶ್, ಶೈಕ್ಷಣಿಕ ಸಂಯೋಜಕರಾದ ಪ್ರಸಾದ್ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯುಕೆಜಿ ಪುಟಾಣಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಯುಕೆಜಿ ವಿದ್ಯಾರ್ಥಿನಿಯರಾದ ಶ್ರುತಿಕ ಕಾಮತ್ ಹಾಗೂ ಅಮೂಲ್ಯ ನೆರವೇರಿಸಿದರು. ಅತುಲಿತ್ ಗ್ಯಾನ್ ಸ್ವಾಗತಿಸಿ, ಆರಲ್ ಲೋಬೊ ವಂದಿಸಿದರು. ಯುಕೆಜಿಯ ರಕ್ಷಿತ್ ಕಾಮತ್ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

First Previous

Showing 5 of 15 pages

Next Last