Article Image

ಎಕ್ಸಲೆಂಟ್: ಸ್ಕೌಟ್ಸ್ ಗೈಡ್ಸ್ ನಾಲ್ಕು ದಿನದ ಬೇಸಿಗೆ ಶಿಬಿರ ಜ್ಞಾನ ರಶ್ಮಿ ಉದ್ಘಾಟನೆ

Article Image

ಎಕ್ಸಲೆಂಟ್: ಸ್ಕೌಟ್ಸ್ ಗೈಡ್ಸ್ ನಾಲ್ಕು ದಿನದ ಬೇಸಿಗೆ ಶಿಬಿರ ಜ್ಞಾನ ರಶ್ಮಿ ಉದ್ಘಾಟನೆ

ಮೂಡುಬಿದಿರೆ: ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ನಾಲ್ಕು ದಿನದ ಬೇಸಿಗೆ ಶಿಬಿರ ಜ್ಞಾನ ರಶ್ಮಿ. ಇದರ ಉದ್ಘಾಟನೆಯನ್ನು ಖ್ಯಾತ ರಂಗಕರ್ಮಿ ರಾಷ್ಟ್ರಪ್ರಶಸ್ತಿ ವಿಜೇತ ಡಾಕ್ಟರ್ ಜೀವನ್ ರಾಮ್ ಸುಳ್ಯ ಉದ್ಘಾಟಿಸಿ, ಸಮಾಜದಲ್ಲಿ ಸಾಧಕ ನೆನೆಸಿಕೊಳ್ಳಲು ಹಲವು ದಿನಗಳ ನಿದ್ದೆ ಹಸಿವು ಸಮಯ ಇತ್ಯಾದಿಗಳ ಪರಿವೇ ಇಲ್ಲದೆ ಪರಿಶ್ರಮ ಪಟ್ಟರೆ ಯಶಸ್ಸು ಕಟ್ಟಿಟ್ಟ ಬುತ್ತಿ. ವಿದ್ಯಾರ್ಥಿಗಳಲ್ಲಿ ಸುಪ್ತ ಪ್ರತಿಭೆಗಳಿದ್ದು ಹೊರತೆಗೆಯಲು ಈ ತರದ ಶಿಬಿರಗಳು ಅನುಕೂಲಕರವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬದುಕಬೇಕು ಅಂದರೆ ಜ್ಞಾನ ದೊಂದಿಗೆ ಈಜಬೇಕು. ತಾಂತ್ರಿಕ ಯುಗದಲ್ಲಿ ಜ್ಞಾನಕ್ಕೆ ಬೆಲೆ ಬರುವುದು ಸಕಲ ವಿದ್ಯೆಯಿಂದ. ಮಕ್ಕಳು ಸಾಧ್ಯವಾದಷ್ಟು ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಪ್ರತಿಭೆಯನ್ನು ಹೊರೆಸು ಚೆಲ್ಲಬೇಕು. ಆಗ ಸಮಾಜದ ಆಸ್ತಿಯಾಗುತ್ತಾರೆ ಮತ್ತು ಅತ್ಯುತ್ತಮ ಗೌರವ ಸಿಗುತ್ತದೆ ಎಂದರು. ವೇದಿಕೆಯ ಮೇಲೆ ಎಕ್ಸಲೆಂಟ್ ಸಿಬಿಎಸ್‌ಸಿ ಸಂಸ್ಥೆಯ ಪ್ರಾಂಶುಪಾಲರಾದ ಸುರೇಶ, ಸ್ಕೌಟ್ ಮತ್ತು ಗೈಡ್ಸ್ ಶಿಕ್ಷಕರು ಉಪಸ್ಥಿತರಿದ್ದರು. ಕಲಾ ಶಿಕ್ಷಕ ಭಾಸ್ಕರ್ ನೆಲ್ಯಾಡಿಯವರು ಅತಿಥಿ ಪರಿಚಯಿಸಿ, ಸುಧೀಕ್ಷಾ ಸ್ವಾಗತಿಸಿ, ಮಾನಿತಾ ವಂದಿಸಿ, ಕಾರ್ಯಕ್ರಮವನ್ನು ಲಕ್ಷ್ಮೀ ನಿರೂಪಿಸಿದರು.

ಮೂಡುಬಿದಿರೆ: ಆಳ್ವಾಸ್ ನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

Article Image

ಮೂಡುಬಿದಿರೆ: ಆಳ್ವಾಸ್ ನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

ವಿದ್ಯಾಗಿರಿ: 'ರಂಗ ಚಟುವಟಿಕೆಯೇ ನನ್ನ ಬದುಕಿನ ಯಶಸ್ಸಿನ ಸೂತ್ರ' ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ.ಮೋಹನ ಆಳ್ವ ಹೇಳಿದರು. ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ 'ವಿಶ್ವರಂಗಭೂಮಿ ದಿನಾಚರಣೆ' ಅಂಗವಾಗಿ ಶುಕ್ರವಾರ ಹಮ್ಮಿಕೊಂಡ 'ರಂಗಗೀತೆ- ಉಪನ್ಯಾಸ- ಸನ್ಮಾನ- ನಾಟಕ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜ ಮತ್ತು ಬದುಕಿಗೆ ರಂಗಭೂಮಿ ಕೊಡುಗೆ ಅಪಾರ. ಪಠ್ಯಕ್ಕಿಂತ ರಂಗ ಚಟುವಟಿಕೆಗಳ ನೆನಪು ನನಗೆ ಇಂದಿಗೂ ಚಿರಸ್ಥಾಯಿಯಾಗಿದೆ' ಎಂದರು. ಭೋಜ ಶೆಟ್ಟ ನಮ್ಮ ಸಮಕಾಲೀನರು. ರಂಗದಲ್ಲಿ ಅವರ ಒಡನಾಟವೇ ಸುಂದರ ಎಂದು ಶ್ಲಾಘಿಸಿದರು. ಲಂಕೇಶ್ ಬರೆದ 'ಪೋಲಿಸರಿದ್ದಾರೆ ಎಚ್ಚರಿಕೆ' ನಾಟಕದ 'ರುದ್ರಮೂರ್ತಿ' ಪಾತ್ರ ಸೇರಿದಂತೆ ತಾವು ನಿರ್ವಹಿಸಿದ ‘ಗುಂಡ', ‘ತುಘಲಕ್', 'ಬಯ್ಯಮಲ್ಲಿಗೆ' ನಾಟಕದಲ್ಲಿ ತಾವು ನಿರ್ವಹಿಸಿದ ‘ವಿದೂಷಕ' ಪಾತ್ರ ಸೇರಿದಂತೆ ಎಲ್ಲ ಪಾತ್ರಗಳನ್ನು ತೃಪ್ತ ಭಾವದಿಂದ ಮೆಲುಕು ಹಾಕಿದರು. ವಿಠಲ್ ಮಾಸ್ಟರ್ ಮೂಲಕ ಭರತ ನಾಟ್ಯ ಕಲಿತು ದೇಶ- ವಿದೇಶಗಳಲ್ಲಿ ಪ್ರದರ್ಶನ ನೀಡಿರುವುದನ್ನು ನೆನಪಿಸಿಕೊಂಡರು. ‘ಮೂಕಾನಭಿಯ, ಮ್ಯಾಜಿಕ್ ಕಲಿತ - ಪ್ರಯೋಗಿಸಿದ ಅನುಭವ ನನ್ನನ್ನು ಗಟ್ಟಿಗೊಳಿಸಿದೆ' ಎಂದ ಅವರು, 'ಮಕ್ಕಳೇ ನೀವು ಎಲ್ಲಿಯೇ ಪ್ರದರ್ಶನ ನೀಡಿದರೂ, ನಾನು ಪ್ರೇಕ್ಷಕನಾಗಿದ್ದೇನೆ ಎಂಬುದನ್ನು ನೆನಪಿಸಿಕೊಳ್ಳಿ' ಎಂದು ಹಿತವಚನ ಹೇಳಿದರು. ‘ಬೆಸ್ತರ, ಬೇಡರ ನೃತ್ಯ ನಿರಂತರವಾಗಿ ಮಾಡಿದ್ದೇನೆ. ಅದೇ ರೀತಿ ಅವಿರತವಾಗಿ ತೊಡಗಿಸಿಕೊಂಡಾಗ ಬದುಕಿನ ಯಶಸ್ಸು ದೊರೆಯುತ್ತದೆ' ಎಂದರು. ‘ಬದುಕೇ ಒಂದು ನಾಟಕ, ವಿವಿಧ ಹಂತದಲ್ಲಿ ನಾವು ನಟನೆ ಮಾಡಬೇಕಾಗುತ್ತದೆ' ಎಂದು ಮಾರ್ಮಿಕವಾಗಿ ಹೇಳಿದರು. ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಹಾಗೂ ಹಿರಿಯ ರಂಗಕರ್ಮಿ ಡಾ| ನರಸಿಂಹಮೂರ್ತಿ ಆರ್. ಮಾತನಾಡಿ, ‘ಲಲಿತಕಲೆಗಳ ಸಂಗಮ ಕ್ಷೇತ್ರವೇ ‘ರಂಗಭೂಮಿ' ಎಂದು ವಿಶ್ಲೇಷಿಸಿದರು. ಪಂಚೇಂದ್ರಿಯ ಮೂಲಕ ನೆಮ್ಮದಿ ನೀಡುವ ಮನುಷ್ಯ ಕೃತ ಕ್ರಿಯೆಗಳೇ ಕಲೆ. ಪ್ರಾಚೀನ ಭಾರತದಲ್ಲಿ 64 ಕಲೆಗಳನ್ನು ಗುರುತಿಸಲಾಗಿದೆ. ನಾಟಕ ಎಂಬುದು ‘ಕಲಾ ರಸಾಯನ'. ಹಲವು ಕಲೆಗಳ ಮೇಳೈಸುವಿಕೆ ಎಂದು ವಿವರಿಸಿದರು.ವಿಭಿನ್ನ ರುಚಿ ಉಳ್ಳವರ ಭೋಜನವೇ ನಾಟಕ. ಎಲ್ಲರಿಗೂ ಏಕ ಕಾಲದಲ್ಲಿ ಕಲೆಗಳ ಖಾದ್ಯ ಲಭ್ಯ. ನಾಟಕ ಅರಿವು- ಮನುಷ್ಯತ್ವ ಮೂಡಿಸಬೇಕು ಎಂದರು. ‘ದೇಗುಲಗಳಿಗೆ ಹೋಗದಿದ್ದರೂ ರಂಗಭೂಮಿಯನ್ನು ಕಳೆದುಕೊಳ್ಳಬೇಡಿ' ಎಂದು ಬರ್ನಾಡ್ ಷಾ ಹೇಳಿದ್ದಾರೆ ಎಂದು ಅವರು ಉಲ್ಲೇಖಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜೀವನ್ ರಾಮ್ ಸುಳ್ಯ, ನಾಟಕವಿಲ್ಲದೇ ಜೀವನ ಇಲ್ಲ. ನಾವು ರಂಗದಲ್ಲಿ ನಾಟಕಕಾರರು, ಆದರೆ, ಎಲ್ಲರೂ ಜೀನದಲ್ಲಿ ನಾಟಕಕಾರರು. ಪಾತ್ರಗಳು ಮಾತ್ರ ವಿಭಿನ್ನ. ಎಲ್ಲ ವೃತ್ತಿಗಳು ‘ನಾಟಕ' ಬಯಸುತ್ತವೆ ಎಂದು ರಂಗಭೂಮಿ ದಿನದ ಕುರಿತು ಮಾಹಿತಿ ಹಂಚಿಕೊಂಡರು. ವಿಶ್ವರಂಗ ಸನ್ಮಾನ: ರಂಗಭೂಮಿಯ ಹಿರಿಯ ಮತ್ತು ಚಲನಚಿತ್ರ ಕಲಾವಿದ ಎಂ.ಭೋಜ ಶೆಟ್ಟಿ ತೋಟದಮನೆ ಅವರನ್ನು ಸನ್ಮಾನಿಸಲಾಯಿತು. ಜೀವನ್ ರಾಮ್ ಸುಳ್ಯ, ವಿದುಷಿ ಸುಮನಾ ಪ್ರಸಾದ್ ಮತ್ತು ಮಮತಾ ಕಲ್ಮಕಾರು ಅವರು, ‘ಸಾವಿರದ ಮಾಯೆ', ‘ಸಣ್ಣ ಹುಡುಗಿ ನಿನ್ನ', 'ಮದುವೆ ಎಂಬ ಮೂರಕ್ಷರ' ‘ಅಂತಿಂಥ ಮದುವೆಯಲ್ಲ, ಊಟ', ‘ಗೋರ್ ಮಾಟಿ' ರಂಗಗೀತೆಗಳನ್ನು ಹಾಡಿದರು. ಚಿನ್ಮಯ ಕಮಲಾಕರ ಭಟ್ ಹಾಗೂ ಮನುಜ ನೇಹಿಗೆ ಸುಳ್ಯ ಹಿನ್ನೆಲೆಯಲ್ಲಿ ಸಾಥ್ ನೀಡಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಧ್ಯಾಪಕ ಡಾ.ಯೋಗೀಶ್ ಕೈರೋಡಿ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಮ್ ಸುಳ್ಯ ನಿರ್ದೇಶನದಲ್ಲಿ ಶಶಿರಾಜ್ ಕಾವೂರು ಬರೆದ ‘ಏಕಾದಶಾನನ' ನಾಟಕವನ್ನು ಕೇಂದ್ರದ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು. ಮನುಜ ನೇಹಿಗೆ ಸುಳ್ಯ ಸಂಗೀತ ನೀಡಿದರು.

ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳ ಚಿಕಿತ್ಸಾ ಶಿಬಿರ

Article Image

ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳ ಚಿಕಿತ್ಸಾ ಶಿಬಿರ

ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳ ಚಿಕಿತ್ಸಾ ಶಿಬಿರ. ಸ್ಪಾಂಡಿಲೋಆರ್ಥೈಟಿಸ್, ಸಿಸ್ಟಮಿಕ್ ಲೂಪಸ್, ಎರಿಥೆಮಾಟೋಸಸ್ (SLE), ಸಂಧಿವಾತ, ಅಸ್ಥಿಸಂಧಿವಾತ, ಸೋರಿಯಾಸಿಸ್, ವಾಸ್ತುಲೈಟಿಸ್‌, ಸ್ಟೆರೋಡರ್ಮಾ, ಮಕ್ಕಳ ಸಂಧಿವಾತ, ರುಮ್‌ಟಾಯ್ಡ್ ಸಂಧಿವಾತ‌ ರೋಗ ಲಕ್ಷಣ ಹೊಂದಿರುವವರು ಭಾಗವಹಿಸಬಹುದು. ಶಿಬಿರದಲ್ಲಿ ಲಭ್ಯಏರುವ ತಜ್ಞ ವೈದ್ಯರು: ಡಾ. ಶಿವ್‌ರಾಜ್‌ ಪಡಿಯಾ‌ (MBBS, MD, DM ಕನ್ದಪ್ಟೆಂಟ್ ರುಮಟಾಲಜಸ್ಟ್ ಮತ್ತು ಕ್ಲಿನಿಕಲ್ ಇಮ್ಮೂನಾಲಜಸ್ಟ್ ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರ, ಮಂಗಳೂರು) ಡಾ. ಪ್ರತ್ಯಷ ಮಣಿಕುಪ್ಪಂ (MBBS, MD, DM ಕನ್ಸಲ್ಲೆಂಟ್ ರುಮಟಾಲಜಿಸ್ಟ್ ಮತ್ತು ಕ್ಲಿನಿಕಲ್ ಇನ್ನೂ ನಾಲಟಿಸ್ಟ್ ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರ, ಮಂಗಳೂರು) ಸೌಲಭ್ಯಗಳು: ನುರಿತ ತಜ್ಞ ವೈದ್ಯರ ಜತೆ ಉಚಿತ ಸಮಾಲೋಚನೆ, ರಕ್ತ ಪರೀಕ್ಷೆಗಳಿಗೆ ಶೇ. 10 ಲಿಯಾಯಿತಿ, ಔಷಧಿಗಳಿಗೆ ಶೇ. 10 ರಿಯಾಯಿತಿ. ದಿನಾಂಕ: 2 ಏಪ್ರಿಲ್ 2025 ಬುಧವಾರದಂದು ಬೆಳಗ್ಗೆ 9.00ರಿಂದ ಅಪರಾಹ್ನ 2.30 ರವರೆಗೆ ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಇಲ್ಲಿನ ಹೊರರೋಗಿ ಏಭಾಗದಲ್ಲಿ ನಡೆಯಲಿದೆ. ನೋಂದಾವಣಿಗಾಗಿ ದಯವಿಟ್ಟು ಕರೆ ಮಾಡಿ: 77603 97878, 77603 97878 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 99720 00438

ಪ್ರಥ್ವಿ ಪರ್ವ ರಾಷ್ಟೀಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ

Article Image

ಪ್ರಥ್ವಿ ಪರ್ವ ರಾಷ್ಟೀಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆ

ವಿದ್ಯಾಗಿರಿ: ಸಮಾಜದಿಂದ ಎಲ್ಲವನ್ನು ಪಡೆದು, ಸಮಾಜಕ್ಕೆ ಹಿಂತಿರುಗಿಸುವ ಬದ್ಧತೆಯನ್ನು ಪ್ರತಿಯೊಬ್ಬರು ಹೊಂದಿರಬೇಕು. ಇದು ದೇಶದ ಸಮತೋಲಿತ ಬೆಳವಣಿಗೆಗೆ ಸಹಕಾರಿ ಎಂದು ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್. ಮರಿಯಪ್ಪ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಮಾನವಿಕ ವಿಭಾಗ ಕುವೆಂಪು ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಎರಡು ದಿನಗಳ ‘ಪ್ರಥ್ವಿ ಪರ್ವ’ ರಾಷ್ಟೀಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜಕ್ಕೆ ಕೊಡುಗೆ ಕೇವಲ ಆರ್ಥಿಕ ನೆರವಿನ ಮೂಲಕ ಮಾತ್ರ ಆಗಬೇಕೆಂದಿಲ್ಲ. ಪರಿಸರದ ರಕ್ಷಣೆ ಹಾಗೂ ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ನಮ್ಮ ಭವಿಷ್ಯ ಪೀಳಿಗೆಗೆ ಉಚಿತವಾಗಿ ನೀಡಬಹುದಾದ ಅಮೂಲ್ಯ ಕೊಡುಗೆಯಾಗಿದೆ. ನಾವಿಂದು ಪ್ರಕೃತಿಯಿಂದ ಎಲ್ಲವನ್ನು ಪಡೆದು, ಅದೇ ಪ್ರಕೃತಿಯನ್ನು ನಾಶ ಮಾಡಲು ಹೊರಟಿದ್ದೇವೆ. ಪರಿಸರದ ಸಂರಕ್ಷಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡದಿದ್ದರೆ ಭವಿಷ್ಯದಲ್ಲಿ ಹಲವು ಸಂಕಟಗಳನ್ನು ಎದುರಿಸಬೇಕಾಗುತ್ತದೆ. "ನಾವು ಪ್ರಕೃತಿಯನ್ನು ಸಂರಕ್ಷಿಸಿದರೆ, ಅದು ನಮ್ಮನ್ನು ಸಂರಕ್ಷಿಸುತ್ತದೆ" ಎಂಬ ಸತ್ಯವನ್ನು ಅರಿಯಬೇಕಿದೆ. ನೈಸರ್ಗಿಕ ಸಂಪನ್ಮೂಲಗಳನ್ನು ಮಿತವಾಗಿ ಬಳಸಬೇಕು. ನಾವು ಬಳಸುವ ಪ್ರತಿಯೊಂದು ವಸ್ತುವಿನಲ್ಲಿ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಜೈವಿಕವಾಗಿ ವಿಘಟನೆಯಾಗುವ ವಸ್ತುಗಳನ್ನ ಹೆಚ್ಚೆಚ್ಚು ಬಳಸಬೇಕು. ಬಳಸಿದ ವಸ್ತುಗಳನ್ನು ಮರುಬಳಕೆ ಮಾಡಬೇಕು. ಅನಗತ್ಯ ತಿರುಗಾಟ, ಅನಗತ್ಯ ವಿದ್ಯುತ್ ಬಳಕೆ ಇವೆಲ್ಲವೂ ಪರಿಸರ ರಕ್ಷಣೆಯ ಭಾಗ ಎಂದು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ಕೇವಲ ಪರಿಸರ ಸಂರಕ್ಷಣೆಯ ಧ್ಯೇಯದೊಂದಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಸಾಲದು, ಪರಿಸರ ಸಂರಕ್ಷಣೆ ಕೆಲಸಗಳು ವಿದ್ಯಾರ್ಥಿ ಸಮುದಾಯದಿಂದ ಮೂಡಿಬರಬೇಕು ಎಂದರು ಕಲಾ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿದ್ದು, ಅವುಗಳ ಸದ್ಭಳಕೆಯಾದರೆ ದಕ್ಷಿಣ ಭಾರತದಲ್ಲೂ ಕಲಾ ವಿಭಾಗದ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬಹುದು ಎಂದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ ಇಂದಿನ ಯುಗದಲ್ಲಿ "ಬಳಸಿ-ಬಿಸಾಡುವ’’ ಮನೋಭಾವ ವ್ಯಾಪಕವಾಗಿ ಹೆಚ್ಚುತ್ತಿದೆ. ಈ ಪ್ರವೃತ್ತಿ ಪರಿಸರದ ಮಟ್ಟದಲ್ಲಿ ದೊಡ್ಡ ಸಮಸ್ಯೆಯನ್ನು ಉಂಟುಮಾಡುತ್ತಿದೆ. ಸಂಪನ್ಮೂಲಗಳನ್ನು ಮಿತವಾದ ಬಳಕೆ ಅತ್ಯಗತ್ಯ. ಪ್ಲಾಸ್ಟಿಕ್ ಉತ್ಪಾದನೆ ಕಡಿಮೆಯಾದಾಗ ಬಳಕೆಯೂ ಕಡಿಮೆಯಾಗುತ್ತದೆ. ಭೂಮಿಯೂ ನಮ್ಮ ಅಗತ್ಯಗಳನ್ನು ಈಡೇರಿಸಬಹುದೇ ಹೊರತು ನಮ್ಮ ಅತಿಯಾಸೆಯನ್ನಲ್ಲ. ಪ್ರತಿಯೊಬ್ಬರಲ್ಲೂ ಪರಿಸರ ಸಂರಕ್ಷಣೆಯ ಚಿಂತನೆ ಮೂಡಬೇಕಿದೆ ಎಂದರು. ಕಾರ್ಯಕ್ರಮದ ವಿದ್ಯಾರ್ಥಿ ಸಂಯೋಜಕಿ ದಿಶಾ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಶ್ರೀವಲ್ಲಿ ಹಾಗೂ ಸುದರ್ಶಿನಿ ನಿರೂಪಿಸಿದರು. ತೇಜಸ್ವಿನಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಧಿಕಾರಿ ಬಾಲಕೃಷ್ಣ ಶೆಟ್ಟಿ, ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ. ಎಸ್. ಉಪನ್ಯಾಸಕಿ ರಕ್ಷಿತಾ ತೋಡಾರ್, ವಿದ್ಯಾರ್ಥಿ ಸಂಯೋಜಕ ಚೇತನ್ ಇದ್ದರು.

ಎಸ್.ಡಿ.ಎಂ ರಸಾಯನಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಅಂತರ್‌ಕಾಲೇಜು ಫೆಸ್ಟ್

Article Image

ಎಸ್.ಡಿ.ಎಂ ರಸಾಯನಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಅಂತರ್‌ಕಾಲೇಜು ಫೆಸ್ಟ್

ಉಜಿರೆ, ಮಾರ್ಚ್: 24: ವಿಜ್ಞಾನದ ಎಲ್ಲಾ ವಲಯಗಳಿಗೂ ಪೂರಕವಾಗುವ ಸಂಶೋಧನಾ ಫಲಿತಗಳೊಂದಿಗೆ ಸಂಶ್ಲೇಷಿತ ಸಾವಯವ ರಸಾಯನಶಾಸ್ತ್ರ ಗಮನ ಸೆಳೆಯುತ್ತಿದೆ ಎಂದು ಕೊಟ್ಟಾಯಂನ ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯದ ಕೆಮಿಕಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಡಾ.ಜಿ.ಅನಿಲ್‌ಕುಮಾರ್ ಅಭಿಪ್ರಾಯಪಟ್ಟರು. ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ‘ಅಡ್ವಾನ್ಸಸ್ ಇನ್ ಸಿಂಥೆಟಿಕ್ ರ‍್ಗಾನಿಕ್ ಕೆಮಿಸ್ಟ್ರೀʼ ಕುರಿತು ಆಯೋಜಿಸಿದ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ರಾಷ್ಟ್ರಮಟ್ಟದ ‘ಕೆಮ್‌ಶೋಧನಾ’ ಅಂತರ್‌ಕಾಲೇಜು ಸ್ಪರ್ಧಾ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಸಾಯನಶಾಸ್ತ್ರವು ವಿಜ್ಞಾನದ ಶಕ್ತಿಯನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಔಷಧೀಯ ಸಂಶೋಧನೆಗೆ ನೆರವಾಗುವ ನಿಟ್ಟಿನಲ್ಲಿ ಸಾವಯವ ರಸಾಯನಶಾಸ್ತ್ರ ಮಹತ್ವದ ಕೊಡುಗೆಗಳನ್ನು ನೀಡುತ್ತಿದೆ. ಸಂಶೋಧನಾ ಫಲಿತಗಳ ಸಾಮಾಜಿಕ ಪ್ರಯೋಜನದ ಸಂದರ್ಭದಲ್ಲಿ ಗಮನಾರ್ಹ ಸುಧಾರಣೆಗಳಾಗುತ್ತಿವೆ ಎಂದು ಹೇಳಿದರು. ಸಾವಯವ ರಸಾಯನಶಾಸ್ತ್ರದ ಸಂಕೀರ್ಣ ವಿಭಾಗಗಳ ಕುರಿತು ವಿಸ್ತೃತ ಅಧ್ಯಯನಕ್ಕೆ ಇರುವ ಅವಕಾಶಗಳನ್ನು ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಬಳಸಿಕೊಳ್ಳಬೇಕು. ಸಂಶೋಧನೆಯ ತೊಡಗಿಸಿಕೊಳ್ಳುವಿಕೆಯೊಂದಿಗೆ ರಾಸಾಯನಿಕ ಜ್ಞಾನಶಿಸ್ತಿಗೆ ಮಹತ್ವದ ಕೊಡುಗೆಗಳನ್ನು ನೀಡುವತ್ತ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು. ಗೋವಾದ ಸೈಂಗೆಟಾ ಬಯೋಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪ್ರಧಾನ ಸಂಶೋಧನಾ ವಿಜ್ಞಾನಿ ಡಾ.ಮಂಜುನಾಥ ಚೆನ್ನಾಪುರ ಮುಖ್ಯ ಅತಿಥಿಯಾಗಿ ಮಾತನಾಡಿದರು. ಭವಿಷ್ಯದ ದಿನಗಳನ್ನು ಸುಸ್ಥಿರ ಅಭಿವೃದ್ಧಿಯ ನೆಲೆಗಟ್ಟಿನಲ್ಲಿ ರೂಪಿಸಿಕೊಳ್ಳಲು ಹಸಿರು ರಸಾಯನಶಾಸ್ತ್ರದ ಪರಿಕಲ್ಪನೆಯನ್ನು ಅನ್ವಯಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಪ್ರತಿಪಾದಿಸಿದರು. ಹಸಿರು ಸಮೃದ್ಧಿಯೊಂದಿಗೆ ಮನುಷ್ಯ ಬದುಕು ಸುಸ್ಥಿರವಾಗುತ್ತದೆ. ಇದನ್ನು ದೃಷ್ಟಿಯಲ್ಲಿರಿಸಿಕೊಂಡು ಹಸಿರು ರಸಾಯನಶಾಸ್ತ್ರದ ಪರಿಕಲ್ಪನೆಯನ್ನು ಗಟ್ಟಿಗೊಳಿಸುವಂಥ ಸಂಶೋಧನಾ ಹೆಜ್ಜೆಗಳು ರೂಪುಗೊಳ್ಳಬೇಕು. ಹಾಗಾದಾಗ ಮಾತ್ರ ರಸಾಯನಶಾಸ್ತ್ರದ ಸಂಶೋಧನಾತ್ಮಕತೆಗೆ ಸುಸ್ಥಿರತೆಯ ಆಯಾಮ ದೊರಕುತ್ತದೆ ಎಂದು ನುಡಿದರು. ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ಅವರು ಮಾತನಾಡಿದರು. ಹೊಸ ರೀತಿಯಲ್ಲಿ ಆಲೋಚಿಸುವ ಯುವ ಪೀಳಿಗೆ ಶಿಕ್ಷಣ ವಲಯದಲ್ಲಿ ಗಮನ ಸೆಳೆಯುತ್ತಿದೆ. ಶೈಕ್ಷಣಿಕ ಕಲಿಕೆಯ ಸ್ವರೂಪ ಬದಲಾಗುತ್ತಿದ್ದಂತೆ ಅದಕ್ಕೆ ತಕ್ಕಂತೆ ಸಾಮರ್ಥ್ಯ ರೂಪಿಸಿಕೊಳ್ಳುವ ಉತ್ಸಾಹವೂ ಕಂಡುಬರುತ್ತಿದೆ. ಇಂತಹ ಉತ್ಸಾಹಕ್ಕೆ ಪೂರಕವಾಗಿ ರಾಷ್ಟ್ರೀಯ ವಿಚಾರ ಸಂಕಿರಣಗಳಂತಹ ಕಾರ್ಯಕ್ರಮಗಳು ಹೊಸದೊಂದನ್ನು ಆವಿಷ್ಕರಿಸುವುದಕ್ಕೆ ಪ್ರೇರಣೆ ಒದಗಿಸುವ ವೇದಿಕೆಗಳಾಗಿ ಪ್ರಮುಖ ಪಾತ್ರವಹಿಸುತ್ತವೆ ಎಂದರು. ಸ್ಪರ್ಧಾತ್ಮಕ ಉತ್ಸವಗಳು ವಿದ್ಯಾರ್ಥಿಗಳ ಜ್ಞಾನಾಧಾರಿತ ಕೌಶಲ್ಯಗಳ ಪ್ರದರ್ಶನಕ್ಕೆ ಅವಕಾಶ ಒದಗಿಸಿಕೊಡುತ್ತವೆ. ಸೃಜನಶೀಲತೆಯೊಂದಿಗೆ ಮುನ್ನಡೆಯಲು ಸ್ಫೂರ್ತಿ ನೀಡುತ್ತವೆ ಎಂದು ಹೇಳಿದರು. ಸಹಾಯಕ ಪ್ರಾಧ್ಯಾಪಕರಾದ ಡಾ.ವಸಂತಕುಮಾರ್, ಡಾ.ರಾಜೇಶ್ ಹೆಗ್ಡೆ ಉಪಸ್ಥಿತರಿದ್ದರು. ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ ಸ್ವಾಗತಿಸಿದರು. ಸಹ ಪ್ರಾಧ್ಯಾಪಕಿ ಡಾ.ನೆಫಿಸತ್ ವಂದಿಸಿದರು. ವಿದ್ಯಾರ್ಥಿನಿ ಸೋನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

ಜೈವಿಕ ತಂತ್ರಜ್ಞಾನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಪ್ರಾಯೋಜಿತ ರಾಷ್ಟ್ರೀಯ ಸಮ್ಮೇಳನ

Article Image

ಜೈವಿಕ ತಂತ್ರಜ್ಞಾನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಪ್ರಾಯೋಜಿತ ರಾಷ್ಟ್ರೀಯ ಸಮ್ಮೇಳನ

ವಿದ್ಯಾಗಿರಿ: ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನ ಮತ್ತು ಜೈವಿಕ ವಿಜ್ಞಾನ ವಿಲೀನಗೊಂಡು ಸಂಶೋಧನಾ ಅಧ್ಯಯನ ನಡೆಸಲು ಪೂರಕ ವಾತವರಣ ನಿರ್ಮಾಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮಣಿಪಾಲ ಕೆಎಂಸಿಯ ಔಷಧಶಾಸ್ತ್ರ ವಿಭಾಗದ ಸಂಶೋಧನಾ ಸಹಾಯಕಿ ಡಾ. ರಮ್ಯಾ ಕಟೀಲ್ ಹೇಳಿದರು. ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಜೈವಿಕ ವಿಜ್ಞಾನ ವಿಭಾಗ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಇದರ ಸಹಯೋಗದೊಂದಿಗೆ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ "ಜೈವಿಕ ವಿಜ್ಞಾನಗಳಲ್ಲಿ ಇತ್ತೀಚಿನ ಪ್ರಗತಿಗಳು ಮತ್ತು ನಾವೀನ್ಯತೆಗಳು" ಕುರಿತು ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ವೈಜ್ಞಾನಿಕ ವಿಚಾರ ಸಂಕಿರಣವು ಸಂಶೋಧನಾರ್ಥಿಗಳಿಗೆ ಸೃಜನಾತ್ಮಕ ಜ್ಞಾನ, ವಿಚಾರ ವಿನಿಮಯ ಮತ್ತು ಅಧ್ಯಯನದಲ್ಲಿ ಪಾಲ್ಗೊಳ್ಳಲು ಸಹಕಾರಿ ಎಂದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಇಲ್ಲಿನ ಪರಿಸರ ಅಧಿಕಾರಿ ಡಾ. ಎಚ್. ಲಕ್ಷ್ಮಿಕಾಂತ, ಸಂಶೋಧನಾ ಪ್ರಬಂಧಗಳನ್ನು ತಯಾರಿಸುವ ಸಂದರ್ಭಗಳಲ್ಲಿ ಹಲವಾರು ಬಾರಿ ನಿರಾಕರಣೆಯಾಗುವ ಸಂಭವ ಎದುರಾಗಬಹುದು. ಪರಿಶ್ರಮ ಮತ್ತು ಸ್ಥಿರತೆಯಿಂದ ಅಧ್ಯಯನವನ್ನು ಪೂರ್ಣಗೊಳಿಸಿ. ಪ್ರತಿ ಅಧ್ಯಯನದಲ್ಲಿಯೂ ಕುತೂಹಲ ಮತ್ತು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ. ಜೀವನದ ಪ್ರತಿ ಹಂತವನ್ನು ಸವಾಲಾಗಿ ಸ್ವೀಕರಿಸಿ, ಯಶಸ್ಸನ್ನು ಪಡೆಯಿರಿ ಎಂದರು. ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ಸಂಶೋಧಕನಿಗೆ ಸಮಾಜದಲ್ಲಾಗುವ ಎಲ್ಲಾ ಪ್ರಚಲಿತ ಘಟನೆಗಳ ಅರಿವು ಬಹಳ ಅವಶ್ಯಕ ಎಂದು ತಿಳಿಸಿದರು. ಈ ರೀತಿಯ ವೈಜ್ಞಾನಿಕ ವಿಚಾರ ಸಂಕಿರಣ ವಿದ್ಯಾರ್ಥಿಗಳ ಜ್ಞಾನಮಟ್ಟವನ್ನು ಉತ್ತೇಜಿಸಲು ಪೂರಕ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅಧಿಕೃತ ಸಂಶೋಧನಾ ಲೇಖನಗಳ ಪುಸ್ತಕದ ಪ್ರತಿಯನ್ನು ಬಿಡುಗಡೆಗೊಳಿಸಲಾಯಿತು. ನಂತರ ನಡೆದ ವಿವಿಧ ವಿಷಯವಾರು ಅಧಿವೇಶನಗಳಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಡಾ. ಎಚ್. ಲಕ್ಷ್ಮಿಕಾಂತ, ಬೆಂಗಳೂರು ನ್ಯೂಟ್ರೇಸ್‌ನ ಎಲೆಕ್ಟ್ರೋ ಕೆಮಿಸ್ಟ್ರೀ ವಿಭಾಗದ ಪ್ರಧಾನ ಸಂಶೋಧಕಿ ಡಾ. ಹರ್ಷಿತಾ ಬಿ. ಎ. ಹಾಗೂ ಮಂಗಳೂರಿನ ಎ.ಜೆ. ವೈದ್ಯಕೀಯ ಕಾಲೇಜಿನ ಜೀವ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ ಪ್ರಿಯಾಂಕಾ ಶ್ರೀಧರನ್‌ರಿಂದ ಉಪನ್ಯಾಸ ನಡೆಯಿತು. ಆಳ್ವಾಸ್ ಕಾಲೇಜು ಮತ್ತು ವಿವಿಧ ಕಾಲೇಜಿನ ಜೈವಿಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ 'ಜೈವಿಕ ವಿಜ್ಞಾನಗಳಲ್ಲಿ ಇತ್ತೀಚಿನ ಪ್ರಗತಿಗಳು ಮತ್ತು ನಾವೀನ್ಯತೆಗಳು' ಕುರಿತ ಮೌಖಿಕ ಪ್ರಸ್ತುತಿ ಮತ್ತು ಪೋಸ್ಟರ್ ಪ್ರಸ್ತುತಿ ನೆರವೇರಿತು. ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಜೈವಿಕ ತಂತ್ರಜ್ಞಾನ ವಿಭಾಗ ಮುಖ್ಯಸ್ಥ ಹಾಗೂ ಸಂಚಾಲಕ ಡಾ. ರಾಮ ಭಟ್ ಪಿ. ಇದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸಹನಾ ಪೂಜಾರಿ ನಿರೂಪಿಸಿ, ಅನಿಕೇತ ಸುಧೀರ್ ವಂದಿಸಿದರು.

ರೀಡರ್ಸ್ ಕ್ಲಬ್ ವತಿಯಿಂದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ

Article Image

ರೀಡರ್ಸ್ ಕ್ಲಬ್ ವತಿಯಿಂದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ರೀಡರ್ಸ್ ಕ್ಲಬ್ ವತಿಯಿಂದ "ಸಂಘರ್ಷ(ಕಾನ್ಫಿಕ್ಟ್) ಪತ್ರಕರ್ತನಾಗಿದ್ದಾಗ ಅಹಿತಕರ ಘಟನೆಗಳಿಂದ ಕಲಿತ ಪಾಠಗಳು" ವಿಷಯದ ಕುರಿತು ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ ಆಳ್ವಾಸ್ ಎಂಬಿಎ ಸೆಮಿನಾರ್‌ನಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಸಂಘರ್ಷ ವರದಿಗಾರ, ಲೇಖಕ ಮತ್ತು ಸಿನಿಮಾ ನಿರ್ಮಾಪಕ ಅವಲೋಕ್ ಲ್ಯಾಂಗರ್ ಪತ್ರಿಕೋದ್ಯಮ ವೃತ್ತಿಯಲ್ಲಿ ಊಹೆ ಸಲ್ಲದು. ರವಾನಿಸುವ ಪ್ರತಿ ಸುದ್ದಿಯನ್ನು ಸೂಕ್ಶ್ಮತೆಯಿಂದ ಅವಲೋಕಿಸಿ. ಜಾಲತಾಣದಲ್ಲಿ ಬರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಹೊಸ ಆವಿಷ್ಕಾರ, ಪ್ರಯೋಗಗಳ ಕಡೆಗೆ ಹೆಚ್ಚು ಗಮನ ನೀಡುವುದರೊಂದಿಗೆ ಸತ್ಯವನ್ನು ಶೋಧಿಸುವ ಮಾರ್ಗದಲ್ಲಿ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿ ದಿನಗಳಲ್ಲೇ ಬೆಳೆಸಿಕೊಳ್ಳಿ. ಲಭಿಸಿದ ಎಲ್ಲಾ ಅವಕಾಶಗಳನ್ನು ಸದ್ವಿನಿಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ , ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಜ್ಞಾನವನ್ನು ಹೆಚ್ಚಿಸಲು ರೀಡರ್ಸ್ ಕ್ಲಬ್ ಕೈಗೊಳ್ಳುತ್ತಿರುವ ಕರ‍್ಯಗಳು ಶ್ಲಾಘನೀಯ. ಇಂದಿನ ಯುವಜನತೆಯಲ್ಲಿ ಆಲೋಚನಾ ಶಕ್ತಿಯ ಕೊರತೆ ಇದೆ. ಎಲ್ಲ ಮಾಹಿತಿಗಳನ್ನು ಯೋಚಿಸದೆ ಸ್ವೀಕರಿಸುವ ಮನೋಭಾವ ಹೊಂದಿರುವುದು ಬೇಸರದ ಸಂಗತಿ. ಇಂದಿನ ಯುವ ಸಮುದಾಯ, ತನ್ನ ಸುತ್ತಮುತ್ತಲಿನ ಎಲ್ಲ ಸುದ್ದಿ ಸಮಾಚಾರಗಳ ಕುರಿತು ಹೆಚ್ಚು ಜಾಗೃತರಾಗಿ ತಮ್ಮ ನಿರ್ದಿಷ್ಟ ನಿಲುವನ್ನು ಹೊಂದುವುದು ಉತ್ತಮ ಎಂದು ಸಲಹೆ ನೀಡಿದರು. ಸಂಘರ್ಷ ಪತ್ರಿಕೋದ್ಯಮದಲ್ಲಿನ ಸವಾಲುಗಳು ಮತ್ತು ಅಹಿತಕರ ಘಟನೆಗಳನ್ನು ಎದುರಿಸಿ, ಸತ್ಯವನ್ನು ಜನರೆದುರಿಗೆ ತೆರೆದಿಡಲು ಪಟ್ಟ ಶ್ರಮವನ್ನು ವಿಧ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಹಂಚಿಕೊAಡರು. ಕಾರ್ಯಕ್ರಮದಲ್ಲಿ ರೀಡರ್ಸ್ ಕ್ಲಬ್ ಸಂಯೋಜಕ ಶಶಿಕುಮಾರ್ ಮತ್ತು ರೀಡರ್ಸ್ ಕ್ಲಬ್ ಸದಸ್ಯರು, ವಿವಿಧ ವಿಭಾಗದ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಜೀವಿಟಾ ಪರ್ಲ್ ಕ್ರಾಸ್ತಾ ನಿರೂಪಿಸಿ, ಅಮಂಡಾ ವಂದಿಸಿದರು.

ಉಜಿರೆ ಎಸ್.ಡಿ.ಎಂ. ಕಾಲೇಜು ವಾರ್ಷಿಕೋತ್ಸವ

Article Image

ಉಜಿರೆ ಎಸ್.ಡಿ.ಎಂ. ಕಾಲೇಜು ವಾರ್ಷಿಕೋತ್ಸವ

ಉಜಿರೆ, ಮಾರ್ಚ್ 21: ಹೊಸ ಕಾಲದ ಸಂಕೀರ್ಣ ಬಿಕ್ಕಟ್ಟುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ವಿಜ್ಞಾನ, ತಂತ್ರಜ್ಞಾನ ಮತ್ತು ಮಾನವಿಕ ಶೈಕ್ಷಣಿಕ ವಲಯಗಳ ಸಂಯೋಜಿತ ಕಾರ್ಯತಂತ್ರಗಳನ್ನು ಅನ್ವಯಿಸಬೇಕಾದ ಅಗತ್ಯವಿದೆ ಎಂದು ಸುರತ್ಕಲ್‌ನ ಎನ್‌ಐಟಿಕೆಯ ನಿರ್ದೇಶಕರಾದ ಪ್ರೊ. ಬಿ.ರವಿ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಅವರು ಮಾತನಾಡಿದರು. ವಿಜ್ಞಾನ ಮತ್ತುತಂತ್ರಜ್ಞಾನ ವಲಯಗಳಿಂದಲಷ್ಟೇ ವಿಶ್ವ, ದೇಶ ಮತ್ತು ಪ್ರದೇಶ ಮಟ್ಟದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂಬುದು ತಪ್ಪುಕಲ್ಪನೆ. ಮಾನವಿಕ ಶೈಕ್ಷಣಿಕ ವಲಯಗಳವರನ್ನೂ ಒಳಗೊಂಡು ವರ್ತಮಾನದ ಸಂಕೀರ್ಣ ಸಮಸ್ಯೆಗಳನ್ನು ನಿವಾರಿಸುವ ಪ್ರಯತ್ನಗಳಾಗಬೇಕು. ಈ ಬಗೆಯ ಒಳಗೊಳ್ಳುವಿಕೆಯ ಸಂಯೋಜಿತ ಹೊಣೆಗಾರಿಕೆಯ ನಿರ್ವಹಣೆಯಿಂದ ಅನಿಶ್ಚಿತತೆ ಮತ್ತು ಸಂಕೀರ್ಣ ಬಿಕ್ಕಟ್ಟುಗಳಿಂದ ಉಂಟಾಗುವ ಸವಾಲುಗಳನ್ನು ಸಮರ್ಥವಾಗಿಎದುರಿಸಬಹುದುಎಂದರು. ಕಲೆ, ವಿಜ್ಞಾನ ಮತ್ತು ತಂತ್ರಜ್ಞಾನ ವಲಯಗಳ ನಡುವೆ ಕೊಡುಕೊಳ್ಳುವಿಕೆ ನಡೆಯಬೇಕು. ಒಂದುಕ್ಷೇತ್ರ ಮತ್ತೊಂದು ಕ್ಷೇತ್ರಕ್ಕೆ ಪೂರಕವಾಗುವ ಜ್ಞಾನದ ಮಾದರಿಗಳನ್ನು ಹಂಚಿಕೊಳ್ಳಬೇಕು.ಈ ವಲಯಗಳ ಜ್ಞಾನಶಿಸ್ತುಗಳ ವಿಶೇಷ ಪರಿಣತಿಯನ್ನು ಆಧರಿಸಿದ ಚರ್ಚೆ, ಸಂವಾದಗಳ ಮೂಲಕ ಜ್ಞಾನವನ್ನು ಸದ್ಯದ ಅಗತ್ಯಗಳಿಗೆ ತಕ್ಕಂತೆ ಅನ್ವಯಿಸುವ ಮಾರ್ಗಗಳು ಹೊಳೆಯುತ್ತವೆ. ಈ ಮೂಲಕ ಭಾರತಕ್ಕೆ ಬೇಕಾದ ಅಭ್ಯುದಯದ ಹಾದಿ ಸುಗಮಗೊಳ್ಳುತ್ತದೆ ಎಂದು ನುಡಿದರು. ಬದ್ಧತೆ, ಸಾಮರ್ಥ್ಯ, ಸೃಜನಶೀಲತೆಯೊಂದಿಗೆ ಗುರುತಿಸಿಕೊಂಡಾಗ ವಿದ್ಯಾರ್ಥಿಗಳು ಕಲಿಕೆಯ ಹಂತದಿಂದಲೇ ವೃತ್ತಿಪರ ವಲಯ ನಿರೀಕ್ಷಿಸುವ ಸಾಮರ್ಥ್ಯವನ್ನು ರೂಢಿಸಿಕೊಳ್ಳಬಹುದು. ಕಲಿಕೆಯ ವಿಷಯಗಳನ್ನಷ್ಟೇ ಅಲ್ಲದೇ ಉಳಿದ ಜ್ಞಾನಶಿಸ್ತುಗಳಿಗೆ ಸಂಬಂಧಿಸಿದ ಅಂಶಗಳನ್ನು ತಿಳಿದುಕೊಳ್ಳುವ ಕುತೂಹಲದೊಂದಿಗೆಇದ್ದರೆ ವಿಶೇಷ ವೃತ್ತಿಪರ ಕೌಶಲ್ಯಗಳನ್ನು ಗಳಿಸಿಕೊಳ್ಳುವುದಕ್ಕೆ¸ ಸಾಧ್ಯವಾಗುತ್ತದೆ.ಕೃತಕ ಬುದ್ಧಿಮತ್ತೆಯಂತಹ ವಿಸ್ತೃತ ತಂತ್ರಜ್ಞಾನದ ಮೇಲೆ ಅವಲಂಬನೆಯಾಗದೇ ವ್ಯಕ್ತಿಗತವಾದ ಜ್ಞಾನಾಧಾರಿತ ಸಾಮರ್ಥ್ಯವನ್ನು ಹೆಚ್ಚು ನೆಚ್ಚಿಕೊಳ್ಳಬೇಕು.ಆಗ ಮಾತ್ರ ಹೊಸ ತಂತ್ರಜ್ಞಾನವನ್ನುಎಚ್ಚರದೊಂದಿಗೆ ಬಳಸಿಕೊಂಡು ನಿರೀಕ್ಷಿತಯಶಸ್ಸು ಗಳಿಸಬಹುದು ಎಂದರು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿದರು. ಎಸ್. ಡಿ. ಎಂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ, ವಿಶ್ವಮಟ್ಟದಲ್ಲಿ ಹೆಗ್ಗುರುತು ಮೂಡಿಸಿದ್ದಾರೆ. ತಿಳಿದುಕೊಂಡ ಜ್ಞಾನದ ಅಂಶಗಳನ್ನು ಪುನರ್ ಮನನ ಮಾಡಿಕೊಂಡು ಕಲಿಕೆಯಲ್ಲಿ ಮುನ್ನಡೆ ಸಾಧಿಸಬೇಕು. ಹೊಸ ಕಾಲದ ಅಗತ್ಯಗಳಿಗೆ ತಕ್ಕಂತೆ ಸಾಮರ್ಥ್ಯ ರೂಪಿಸಿಕೊಂಡು ಸಾಧನೆಯ ಹೊಸ ಹೆಜ್ಜೆಗಳನ್ನು ಕ್ರಮಿಸಬೇಕು ಎಂದು ಹೇಳಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರಕುಮಾರ್, ಡಾ. ಸತೀಶ್ಚಂದ್ರ ಎಸ್., ಎಸ್.ಡಿ.ಎಂ. ಕಾಲೇಜಿನ ಅಕ್ಯಾಡೆಮಿಕ್ ಸಂಯೋಕರಾದ ಎಸ್.ಎನ್.ಕಾಕತ್ಕರ್, ನಿವೃತ್ತ ಪ್ರಾಶುಂಪಾಲ ಡಾ.ಬಿ.ಎ. ಕುಮಾರ ಹೆಗ್ಡೆ, ನಿವೃತ್ತ ಉಪ ಪ್ರಾಂಶುಪಾಲರಾದ ಡಾ. ಶಲೀಫ್ ಬಿ.ಪಿ, ನಿವೃತ್ತ ಪ್ರಾಧ್ಯಾಪಕರಾದ ಡಾ.ರಾಮಚಂದ್ರ ಪುರೋಹಿತ, ಶಾಂತಿಪ್ರಕಾಶ್, ಬೋಧಕೇತರ ಸಿಬ್ಬಂದಿ ಸದಾನಂದ್ ಬಿ. ಮುಂಡಾಜೆ, ತುಕಾರಾಂ ಸಾಲಿಯಾನ, ಪದವಿ ಹಾಗೂ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗದ ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರವಣ, ಪ್ರಕೃತಿ, ಮೇಘನಾ, ಮಾರುತಿ ಭಗವಾನ್, ಅಮೀರ್, ಸುದೇಶ್‌ಗೌಡ, ಉಪಸ್ಥಿತರಿದ್ದರು. ನಿವೃತ್ತ ಬೋಧಕರು, ಬೋಧಕೇತರ ಸಿಬ್ಬಂದಿ, ರ‍್ಯಾಂಕ್ ವೀಜೇತರು, ಪಿ.ಹೆಚ್.ಡಿ ಪದವೀಧರ ಅಧ್ಯಾಪಕರು, ವಿಶೇಷ ಸಾಧಕ ಅಧ್ಯಾಪಕರು, ವಿಶೇಷ ಸಾಧಕ ವಿದ್ಯಾರ್ಥಿಗಳು, ಕ್ರೀಡಾ ವಿಭಾಗದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಯಿತು. ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳ "ಚಿಗುರು" ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಸ್ವಾಗತಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ನಂದಾಕುಮಾರಿ ವರದಿ ವಾಚನ ಮಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಕುಲಸಚಿವರಾದ ಶ್ರೀಧರ ಎನ್. ಭಟ್ಟ ವಂದಿಸಿದರು. ಡಾ. ನೆಫಿಸತ್ ನಿರೂಪಿಸಿದರು.

ಮೂಡುಬಿದಿರೆ: ಎಂತುಝಿಯಾ ಕೋರ್ಪೊ ಕನೆಕ್ಟ್ ಫೆಸ್ಟ್

Article Image

ಮೂಡುಬಿದಿರೆ: ಎಂತುಝಿಯಾ ಕೋರ್ಪೊ ಕನೆಕ್ಟ್ ಫೆಸ್ಟ್

‘ಶಿಕ್ಷಣ ವ್ಯವಸ್ಥೆಯ ಆರಂಭದಲ್ಲೆ, ಒಬ್ಬ ವ್ಯಕ್ತಿಯಾಗಿ ತನ್ನ ಜೀವನದ ಉದ್ದೇಶವೇನೆಂಬುದನ್ನು ಅರಿಯಬೇಕು’ ಎಂದು ಕೋಟೇಶ್ವರದ ರಾಜಾರಾಮ್ ಪೋಲಿಮರ್ಸ್ ಸಂಸ್ಥೆಯ ಸ್ಥಾಪಕ ಸುರೇಶ್ ಕಾಮತ್ ಹೇಳಿದರು. ಆಳ್ವಾಸ್(ಸ್ವಾಯತ್ತ) ಕಾಲೇಜಿನ ಮ್ಯಾನೇಜ್‌ಮೆಂಟ್ ವಿಭಾಗದ ವತಿಯಿಂದ ಹಮ್ಮಿಕೊಂಡ ಎಂತುಝಿಯಾ ಕೋರ್ಪೊ ಕನೆಕ್ಟ್ ಫೆಸ್ಟ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೀವನದಲ್ಲಿ ಗುರಿಯನ್ನು ಆರಂಭದಲ್ಲೆ ಅರಿಯುವುದು ಉತ್ತಮ. ಪ್ರತಿ ಕೆಲಸದಿಂದ ಬರುವ ಅನುಭವದಿಂದ ಬದುಕನ್ನು ಶ್ರೇಷ್ಠತೆಯೆಡೆಗೆ ಒಯ್ಯುವ ಕೆಲಸವಾಗಬೇಕಿದೆ ಎಂದರು. ಮುಖ್ಯಅತಿಥಿ ನೆಲೆಯಲ್ಲಿ ಮಾತನಾಡಿದ ಯುವ ಪ್ರತಿನಿಧಿ ಮಿಥುನ್ ರೈ, ವೃತ್ತಿಪರ ಜೀವನವನ್ನು ಅತ್ಯುತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಮ್ಯಾನಜ್ಮೆಂಟ್ ಪದವಿ ಸೂಕ್ತ ಆಯ್ಕೆ ಎಲ್ಲವನ್ನು ಪರಿಶ್ರಮದಿಂದ ಕಲಿಯಬೇಕು. ಸವಾಲುಗಳನ್ನು ಎದುರಿಸಿ ಮುನ್ನಡೆಯುವವ ನಿಜವಾದ ನಾಯಕನೆನಿಸಿಕೊಳ್ಳಬಲ್ಲ. ಪ್ರತಿಯೊಬ್ಬರಲ್ಲೂ ಪ್ರತಿಭೆ ಇದೆ ಅದನ್ನು ತಾವೇ ಗುರುತಿಸಿಕೊಳ್ಳಬೇಕು ಹಾಗೂ ಉಪನ್ಯಾಸಕರು ಸರಿಯಾದ ಮಾರ್ಗದರ್ಶನ ನೀಡಬೇಕು ಎಂದರು. ದಶಕಗಳ ಹಿಂದೆ ತಾನು ಪದವಿ ವಿದ್ಯಾರ್ಥಿಯಾಗಿದ್ದಾಗ ಆಯೋಜಿಸಿದ ಅಂತರಾಷ್ಟ್ರೀಯ ಸಮ್ಮೇಳನ ಯಶಸ್ಸನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಏಷ್ಯಾ ಖಂಡದ ಹಲವು ದೇಶಗಳ ಪ್ರತಿನಿಧಿಗಳು ಪಾಲ್ಗೊಂಡು, ಸರ್ವರಿಂದಲೂ ಪ್ರಶಂಸೆಗೆ ಪಾತ್ರವಾದ ಸನ್ನಿವೇಶ ತನ್ನ ಮುಂದಿನ ಬದುಕಿಗೆ ನಾಯಕತ್ವ ವಹಿಸಲು ಸಹಕರಿಯಾದದ್ದನ್ನು ಸ್ಮರಿಸಿದರು. ತನ್ನ ಸಹಪಾಠಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವರ ಕಾಲೇಜು ದಿನಗಳಲ್ಲಿನ ನಾಯಕತ್ವ ಗುಣವನ್ನು ಕೊಂಡಾಡಿದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ಅರಳುವಂತೆ ಮಾಡಲು ಆಳ್ವಾಸ್ ನೀಡುತ್ತಿರುವ ಪ್ರೋತ್ಸಾಹವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಇನ್ನೊರ್ವ ಮುಖ್ಯ ಅತಿಥಿ ಹಾಗೂ ಯುವ ಪ್ರತಿನಿಧಿ ನಂದನ್ ಮಲ್ಯ ಮಾತನಾಡಿ, ದೊಡ್ಡ ಕನಸುಗಳನ್ನು ಕಟ್ಟಿಕೊಳ್ಳುವ ಸ್ವಾತಂತ್ರ‍್ಯ ಪ್ರತಿಯೊಬ್ಬರಿಗೂ ಇದೆ. ಕನಸುಗಳನ್ನು ಕಟ್ಟಿಕೊಂಡಲ್ಲಿ ಮಾತ್ರ ಯಶಸ್ಸನ್ನು ಕಾಣುತ್ತೇವೆ. ಸೋಲು ಯಶಸ್ಸಿನ ಭಾಗ, ಹೊರತು ಪ್ರತಿಸ್ಪರ್ಧಿಯಲ್ಲ. ಅವಕಾಶಗಳ ಬಳಸುವಿಕೆಯಲ್ಲಿ ಫಲಿತಾಂಶವನ್ನು ಕಾಣಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಅನುಭವಗಳಿಂದ ಶ್ರೇಷ್ಠ ಪಾಠವನ್ನು ಕಲಿಯಬೇಕು. ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯವಲ್ಲ. ಅದರಿಂದ ಲಭಿಸುವ ಅನುಭವ ಮುಖ್ಯ ಎಂದರು. ಎಂತುಝಿಯಾ ಕೋರ್ಪೊ ಕನೆಕ್ಟ್ ಫಸ್ಟ್ನ ಪೋಸ್ಟರ್ ಬಿಡುಗಡೆ ನಡೆಯಿತು. ಕಾರ್ಯಕ್ರಮದಲ್ಲಿ ಪದವಿ ಮ್ಯಾನೇಜ್‌ಮೆಂಟ್ ವಿಭಾಗದ ಮುಖ್ಯಸ್ಥೆ ಸುರೇಖಾ ರಾವ್, ಸಂಯೋಜಕಿ ಅಕ್ಷತಾ ಪ್ರಭು, ಸಂಯೋಜಕ ಸುಹಾಸ್ ಶೆಟ್ಟಿ, ವಿದ್ಯಾರ್ಥಿ ಸಂಯೋಜಕ ಪ್ರಾಣೇಶ್ ಶೆಟ್ಟಿ ಮತ್ತು ವಿಧಿತ್ ಜೈನ್ ಇದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಸಾಥ್ವಿಕ್ ಸ್ವಾಗತಿಸಿ, ಸಾಗರ್ ವಂದಿಸಿ, ವಿದ್ಯಾರ್ಥಿನಿ ವೃಂದ ನಿರೂಪಿಸಿದರು.

ಮಂಗಳೂರು ವಿವಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ -2025

Article Image

ಮಂಗಳೂರು ವಿವಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ -2025

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್-2025ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 17 ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್‌ವಿ ಕಮಲೇಶ್ ರೋಲಿಂಗ್ ಟ್ರೋಪಿಯನ್ನು ಸತತ 14ನೇ ಬಾರಿ ಪಡೆದು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರುಷರ ಖೋ-ಖೋ ತಂಡ 27-5 ಅಂಕಗಳ ಅಂತರದಿಂದ ಪುತ್ತೂರಿನ ವಿವೇಕಾನಂದ ಕಾಲೇಜು ವಿರುದ್ಧ ಗೆಲುವು ಸಾಧಿಸಿದರೆ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್‌ನ ತಂಡ ಏಕಪಕ್ಷೀಯವಾಗಿ 18-0 ಅಂಕಗಳ ಅಂತರದಲ್ಲಿ ಬೆಳ್ತಂಗಡಿಯ ಜಿಎಫ್‌ಜಿಸಿ ಕಾಲೇಜು ವಿರುದ್ಧ ಗೆಲುವು ಸಾಧಿಸಿ ಎರಡು ವಿಭಾಗದಲ್ಲಿ ''ಸಮಗ್ರ ಪ್ರಶಸ್ತಿ'' ಗೆ ಭಾಜನವಾಯಿತು. ವೈಯಕ್ತಿಕ ಪುರುಷರ ಚಾಂಪಿಯನ್‌ಶಿಪ್‌ನಲ್ಲಿ "ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ"ಗೆ ಆಳ್ವಾಸ್ ಕಾಲೇಜಿನ ನಿಖಿಲ್ ಮತ್ತು"ಬೆಸ್ಟ್ ಡಿಫೆಂಡರ್ ಪ್ರಶಸ್ತಿ"ಗೆ ಪ್ರಮೋದ್ ಡಿ ಹಾಗೂ ವೈಯಕ್ತಿಕ ಮಹಿಳೆಯರ ಚಾಂಪಿಯನ್‌ಶಿಪ್‌ನಲ್ಲಿ "ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ"ಗೆ ಆಳ್ವಾಸ್ ಕಾಲೇಜಿನ ಪ್ರೇಕ್ಷಾ ಮತ್ತು ''ಬೆಸ್ಟ್ ಚೇಸರ್ '' ಪ್ರಶಸ್ತಿಗೆ ಕವನ ಭಾಜನರಾದರು. ಪುರುಷರ ವಿಭಾಗದ ಖೋ-ಖೋ ಚಾಂಪಿಯನ್‌ಶಿಪ್‌ನಲ್ಲಿ ಕಾರ್ಕಳದ ಭುವನೇಂದ್ರ ಕಾಲೇಜಿಗೆ 4ನೇ ಸ್ಥಾನ, ಹಂಪನಕಟ್ಟೆ ವಿ. ವಿ ಕಾಲೇಜಿಗೆ ತೃತೀಯ ಸ್ಥಾನ, ಪುತ್ತೂರಿನ ವಿವೇಕಾನಂದ ಕಾಲೇಜಿಗೆ ರನ್ನರ್ಸ್ ಅಪ್ ಪ್ರಶಸ್ತಿ ಮತ್ತು ಆಳ್ವಾಸ್ ಕಾಲೇಜಿಗೆ ಸತತ 17ನೇ ಬಾರಿ''ಸಮಗ್ರ ಪ್ರಶಸ್ತಿ''ಲಭಿಸಿತು. ಮಹಿಳೆಯರ ವಿಭಾಗದ ಖೋ-ಖೋ ಚಾಂಪಿಯನ್‌ಶಿಪ್‌ನಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿಗೆ ತೃತೀಯ ಸ್ಥಾನ, ಬೆಳ್ತಂಗಡಿಯ ಜಿಎಫ್‌ಜಿಸಿ ಕಾಲೇಜಿಗೆ ರನ್ನರ್ಸ್ ಅಪ್ ಪ್ರಶಸ್ತಿ ಮತ್ತು ಆಳ್ವಾಸ್ ಕಾಲೇಜಿಗೆ ಸತತ 14ನೇ ಬಾರಿ ''ಸಮಗ್ರ ಪ್ರಶಸ್ತಿ'' ಲಭಿಸಿತು. ಸಮಾರೋಪ ಸಮಾರಂಭ: ದೇಸಿ ಕ್ರೀಡೆಯಾದ ಖೋ- ಖೋ ಆಟವು ಕ್ರೀಡಾಳುಗಳಲ್ಲಿ ಉತ್ತಮ ಕ್ರೀಡಾ ಮನೋಭಾವವನ್ನು ಹುಟ್ಟು ಹಾಕುವ ಶಕ್ತಿ ಹೊಂದಿದೆ ಎಂದು ಆಳ್ವಾಸ್ ಪ. ಪೂ ಕಾಲೇಜಿನ ಪ್ರಾಂಶುಪಾಲ ಪ್ರೊ ಎಂ ಸದಾಕತ್ ನುಡಿದರು. ಕ್ರೀಡೆಯಲ್ಲಿ ಮಾನವೀಯತೆ ಸಾರುವ ಮನೋಭಾವ ಬೆಳೆಸಿಕೊಳ್ಳಿ ಎಂದು ತಿಳಿಸಿದರು. ಖೋ-ಖೋ ಆಟದಲ್ಲಿ ಸ್ಪರ್ಧಾರ್ಥಿಗಳು ಕ್ರೀಡಾ ಸ್ಪೂರ್ತಿ, ಚುರುಕುತನ ಮತ್ತು ಬದ್ಧತೆಯನ್ನು ಅಳವಡಿಸಿಕೊಂಡು ಗೆಲ್ಲುವುದರ ಕಡೆಗೆ ಶ್ರಮವಿರಲಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ಡಾ. ಪ್ರಸನ್ನ ಕುಮಾರ್ ಬಿ ಕೆ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಾ ಮಧು ಜಿ ಆರ್, ಆಳ್ವಾಸ್ ಹಣಕಾಸು ಅಧಿಕಾರಿ ಶಾಂತಾರಾಮ್ ಕಾಮತ್, ಆಳ್ವಾಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ತಿಲಕ್ ಶೆಟ್ಟಿ, ವಿವಿಧ ಕಾಲೇಜಿನ ಕ್ರೀಡಾ ನಿರ್ದೇಶಕರು, ಕ್ರೀಡಾಧಿಕಾರಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ನಿಯಾ ಸೆಬಾಸ್ಟಿಯನ್ ನಿರೂಪಿಸಿದರು.

ವಿದ್ಯಾಗಿರಿ: ವಿಶ್ವ ಕಾವ್ಯ ದಿನ

Article Image

ವಿದ್ಯಾಗಿರಿ: ವಿಶ್ವ ಕಾವ್ಯ ದಿನ

ಆಳ್ವಾಸ್ ಸ್ವಾಯತ್ತ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರದಂದು ಇಂಗ್ಲಿಷ್ ವಿಭಾಗದ ಗ್ಲಿಸನ್ ಸಂಘದ ವತಿಯಿಂದ ವಿಶ್ವ ಕಾವ್ಯ ದಿನವನ್ನು ಆಚರಿಸಲಾಯಿತು. ಕಾರ‍್ಯಕ್ರಮದ ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದ ಉಡುಪಿಯ ಶ್ರೀ ಅದಮಾರು ಮಠದ ಶಿಕ್ಷಣ ಸಮೂಹಗಳ ಉಪ ಆಡಳಿತಾಧಿಕಾರಿ ಪುಂಡರಿಕಾಕ್ಷ ಕೊಡಂಚ, ಕಾವ್ಯವು ನಮ್ಮ ಸಂಸ್ಕೃತಿಯ ಮಹತ್ವಪೂರ್ಣ ಅಂಗ. ಆ ಮೂಲಕ ನಮ್ಮ ಭಾವನೆ ಹಾಗೂ ಅನುಭವಗಳನ್ನು ವ್ಯಕ್ತಪಡಿಸಲು ಸಹಕಾರಿಯಾಗಿದೆ. ಕಾವ್ಯ ದಿನವನ್ನು ಆಚರಿಸುವುದರ ಮೂಲಕ ಮಹಾನ್ ಕವಿಗಳ ಕೊಡುಗೆಗಳನ್ನು ಗೌರವಿಸುವುದರ ಜೊತೆಗೆ ಹೊಸ ಬರಹಗಾರರಿಗೆ ಪ್ರೇರಣೆಯಾಗಲು ಸಹಾಯ ಮಾಡುತ್ತದೆ ಎಂದರು. ತಾರ್ಕಿಕವಾಗಿ ಯೋಚಿಸಿ ಮತ್ತು ಸಾಮಾನ್ಯ ಜ್ಞಾನವನ್ನು ಬಳಸಿದರೆ ಯಾರೂ ಬದುಕಿನಲ್ಲಿ ಪ್ರಮಾದವನ್ನೆಸಗಲಾರರು. ತಾರ್ಕಿಕ ಯೋಚನೆಯುಳ್ಳ ವ್ಯಕ್ತಿಗೆ ಅವಕಾಶಗಳು ವಿಫುಲವಾಗಿರುತ್ತವೆ ಎಂದು ಸಲಹೆ ನೀಡಿದರು. ಸುಂದರವಾದ ಭೂಮಿಯನ್ನು ಉಳಿಸಬೇಕು. ಅದು ನಮ್ಮ ಆಸೆಗಳನ್ನು ಪೂರೈಸ ಬಲ್ಲದೇ ಹೊರತು, ನಮ್ಮ ದುರಾಸೆಯನ್ನಲ್ಲ ಎಂದರು. ನಂತರ ಗ್ಲಿಸನ್ ಸಂಘದ ವತಿಯಿಂದ ಆಯೋಜಿಸಲಾದ ಕಾವ್ಯ ವಾಚನ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಬಿಎಸ್ಸಿಯ ಮೇಘಾ ಡಿವಿ ಪ್ರಥಮ ಸ್ಥಾನ ಪಡೆದರೆ, ಎಫ್‌ಎನ್ಡಿಯ ಪ್ರೇರಣಾ ಜೈನ್ ದ್ವಿತೀಯ, ಬಿಎಯ ಸಮೀಕ್ಷಾ ರಾವ್ ತೃತೀಯ ಸ್ಥಾನ ಪಡೆದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಚಾರ‍್ಯ ಡಾ. ಕುರಿಯನ್, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಆಡಳಿತ ಅಧಿಕಾರಿ ಬಾಲಕೃಷ್ಣ ಶೆಟ್ಟಿ, ಮಾನವಿಕ ವಿಭಾಗದ ಮುಖ್ಯಸ್ಥೆ ಸಂಧ್ಯಾ ಕೆ.ಎಸ್, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಮಚೇಂದ್ರ ಬೆಲ್ಕಿ, ಗ್ಲಿಸನ್ವೇ ದಿಕೆಯ ಸಂಯೋಜಕರಾದ ಹರ್ಷಿಣಿ ಪಿಂಟೋ ಹಾಗೂ ಸುಮಂತ್ ಇದ್ದರು. ಶ್ರಾವ್ಯ ಶೆಟ್ಟಿ ಸ್ವಾಗತಿಸಿ, ದಿಶಾ ಕೋಟ್ಯಾನ್ ವಂದಿಸಿ, ಸಮೀಕ್ಷಾ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Article Image

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

ಉಜಿರೆ: ನಂದಿ ರಥ ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನಂದಿ ರಥಕ್ಕೆ ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು. ಚಲನಚಿತ್ರ ನಟ ಹಾಗೂ ಕನ್ನಡ ಬಿಗ್‌ಬಾಸ್ ರಿಯಾಲಿಟಿ ಶೋ ವಿಜೇತರಾದ ಪ್ರಥಮ್, ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ದೇವಳದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು. ಕನ್ಯಾಡಿ ಮೂಲಕ ಉಜಿರೆಗೆ ರಥಯಾತ್ರೆ ಮುಂದುವರಿಯಿತು.

ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನಲ್ಲಿ ಅಂತರ್ ಕಾಲೇಜು ಖೋ-ಖೋ ಟೂರ್ನಮೆಂಟ್

Article Image

ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನಲ್ಲಿ ಅಂತರ್ ಕಾಲೇಜು ಖೋ-ಖೋ ಟೂರ್ನಮೆಂಟ್

ವಿದ್ಯಾಗಿರಿ: ದೇಸಿ ಕ್ರೀಡೆ ಖೋ-ಖೋ ಎಲ್ಲಾ ಕ್ರೀಡೆಗಳಿಗೆ ಅಡಿಪಾಯವಿದ್ದಂತೆ. ಈ ಆಟವನ್ನು ಪ್ರೋತ್ಸಾಹಿಸುವ ಮೂಲಕ, ಯುವ ಜನತೆಯಲ್ಲಿ ಶಾರೀರಿಕ ಹಾಗೂ ಮಾನಸಿಕ ಸಿದ್ಧತೆಯನ್ನು ಹೆಚ್ಚಿಸಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಡಿʼಸೋಜಾ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್ -2025 ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾ ಮನೋಭಾವ ನಮ್ಮನ್ನು ಈ ಕ್ಷೇತ್ರದಲ್ಲಿ ಹೆಚ್ಚಿನದ್ದನ್ನು ಸಾಧಿಸಲು ಸಹಕಾರಿಯಾಗುತ್ತದೆ. ಅಂತರ್ ಕಾಲೇಜು ಪಂದ್ಯಾಟವು ಎಲ್ಲಾ ಕ್ರೀಡಾಳುಗಳನ್ನು ಒಟ್ಟು ಗೂಡಿಸುವ ಉದ್ದೇಶ ಹೊಂದಿರುತ್ತದೆ. ಪ್ರತಿಯೊಬ್ಬರೂ ಅವರವರ ಕ್ರೀಡಾ ಶಕ್ತಿಯ ಅನುಸಾರ ಪ್ರದರ್ಶನ ನೀಡಬೇಕು ಎಂದರು. ಆಳ್ವಾಸ್ ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಹಿಂದೆಲ್ಲ ದೇಸಿ ಕ್ರೀಡೆಯಾದ ಖೋ-ಖೋ ಆಟವು ಗ್ರಾಮೀಣ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಮೀಸಲಾಗಿತ್ತು. ಆದರೆ, ಇಂದು ಕ್ರೀಡೆಯಲ್ಲಿನ ಬೆಳವಣಿಗೆಯು ದೇಸಿ ಕ್ರೀಡೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆಗಳಿಸುವತ್ತ ಕೊಂಡೊಯ್ಯುತ್ತಿರುವುದು ಬಹಳ ಹೆಮ್ಮೆ ಮತ್ತು ಸಂತಸದ ಸಂಗತಿ ಎಂದರು. ಕ್ರೀಡಾ ಕ್ಷೇತ್ರಕ್ಕೆ ಮಂಗಳೂರು ವಿಶ್ವವಿದ್ಯಾಲಯ ನೀಡುತ್ತಿರುವ ಪ್ರೋತ್ಸಾಹ, ಸಹಕಾರ ಸದಾ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರೀಡಾಪಟುಗಳಿಗೆ, ಕ್ರೀಡಾ ಪೋಷಕರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ದೊರಕುವಂತಾಗಲಿ ಎಂದು ಆಶಿಸಿದರು. ಖೋ-ಖೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಸಂಸ್ಥೆಯ ಪ್ರತಿಭಾನ್ವಿತ ಕ್ರೀಡಾಪಟುಗಳಾದ ಮರಿಯಪ್ಪ, ದಿವ್ಯ ಕೆ ಆರ್ ಮತ್ತು ನಿಖಿಲ್ ಬಿ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ, ಪ್ರಸನ್ನ ಕುಮಾರ್ ಬಿ ಕೆ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಾ ಮಧು ಜಿ ಆರ್ ಇದ್ದರು. ಅಂತರ್ ಕಾಲೇಜು ಖೋ-ಖೋ ಟೂರ್ನಮೆಂಟ್‌ನಲ್ಲಿ ಪುರುಷರ ವಿಭಾಗದಿಂದ 18 ತಂಡ ಮತ್ತು ಮಹಿಳೆಯರ ವಿಭಾಗದಿಂದ 18 ತಂಡಗಳು ಭಾಗವಹಿಸಿದ್ದವು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ನಿಯಾ ಸೆಬಾಸ್ಟಿಯನ್ ನಿರೂಪಿಸಿ, ದೈಹಿಕ ಶಿಕ್ಷಣ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ ಉದಯಕುಮಾರ್ ವಂದಿಸಿದರು.

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಅಂತರ್ ಕಾಲೇಜು ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಉತ್ಸವ ವೆಂಚುರ- 2025

Article Image

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಅಂತರ್ ಕಾಲೇಜು ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಉತ್ಸವ ವೆಂಚುರ- 2025

ಉಜಿರೆ, ಮಾ. 15: ಪ್ರತಿಯೊಂದು ವಿಚಾರವನ್ನು ನೇರವಾಗಿ ಒಪ್ಪದೇ ಅದನ್ನು ಪ್ರಶ್ನಿಸುವ ಅಭ್ಯಾಸ ಬೆಳೆಸಿಕೊಂಡಾಗ ಕ್ರಿಯಾಶೀಲತೆ ಹೆಚ್ಚಾಗುತ್ತದೆ ಎಂದು ಬೆಂಗಳೂರಿನ ಅಮೆಜಾನ್ ಡೆವಲಪ್ ಮೆಂಟ್ ಸೆಂಟರ್ನ ರಿಸ್ಕ್ ಇನ್ವೆಸ್ಟಿಗೇಷನ್ ಮ್ಯಾನೇಜರ್ ದೀಪಕ್ ರಾಜ್ ಹೇಳಿದರು. ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ವಾಣಿಜ್ಯ ಮತ್ತು ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗಗಳ ಆಶ್ರಯದಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ (ಸಿ.ಸಿ.ಎ.) ಇಂದು (ಮಾ. 15) ಆಯೋಜಿಸಿದ್ದ ರಾಜ್ಯ ಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಉತ್ಸವ 'ವೆಂಚುರ- 2025' ಉದ್ಘಾಟಿಸಿ ಅವರು ಮಾತನಾಡಿದರು. "ಪ್ರತಿಯೊಂದು ವಿಚಾರದಲ್ಲೂ ಏನು ಮತ್ತು ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ನಮ್ಮಲ್ಲಿರಬೇಕು. ಆ ಸ್ಪಷ್ಟತೆ ಇದ್ದರೆ ಮಾತ್ರ ಯಶಸ್ಸು ನಮ್ಮದಾಗುತ್ತದೆ. ಪ್ರಪಂಚವು ಅನ್ವೇಷಕರನ್ನು (Inventors) ಸದಾ ನೆನಪಿನಲ್ಲಿ ನೆನಪಿಟ್ಟುಕೊಳ್ಳುತ್ತದೆ. ಹಾಗಾಗಿ ಕುತೂಹಲ ಇರುವ ಮನಸ್ಸುಗಳು ಮಾತ್ರ ಇನ್ವೆಂಟರ್ ಆಗಲು ಸಾಧ್ಯ. ಪ್ರತೀ ದಿನ 5 ನಿಮಿಷ ನಮ್ಮನ್ನು ಅವಲೋಕನ ಮಾಡಲು ಸಮಯ ನೀಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ನಮ್ಮನ್ನು ನಾವು ಅರಿತುಕೊಳ್ಳಬೇಕು" ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ)ದ ಸಂಯೋಜಕ ಗಜಾನನ ಆರ್. ಭಟ್ ಮಾತನಾಡಿ, "ವಾಣಿಜ್ಯ ಮತ್ತು ಉದ್ಯಮ ಎನ್ನುವುದು ಎಲ್ಲಾ ಅಪಾಯಗಳ ವಿರುದ್ಧ ಹೋರಾಡುವುದನ್ನು ಕಲಿಸುವ ಪ್ರಪಂಚವಾಗಿದೆ. ಉದ್ಯಮಿಗಳು ಈ ದೇಶವನ್ನು ನಿರ್ಮಾಣ ಮಾಡುವವರು. ಹಣ ಎನ್ನುವುದು ನಮಗೆ ಹೂಡಿಕೆ, ಗಳಿಸುವಿಕೆಯನ್ನು ಕಲಿಸುತ್ತದೆ" ಎಂದರು. ಇದೇ ಸಂದರ್ಭದಲ್ಲಿ, ಕಾಲೇಜಿನ ವಾಣಿಜ್ಯ ನಿಕಾಯದ ಡೀನ್, ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗ ಮುಖ್ಯಸ್ಥೆ ಶಕುಂತಲಾ ಅವರಿಗೆ ನಿವೃತ್ತ ಪ್ರಾಂಶುಪಾಲ ಡಾ. ಉದಯಚಂದ್ರ ಪಿ.ಎನ್. ಅವರು ಸಂಶೋಧನೆಗೆ ನೆರವಾಗಲು ಪ್ರೋತ್ಸಾಹಧನ ನೀಡಿದರು. ಫೆಸ್ಟ್ ಅಂಗವಾಗಿ ಆಯೋಜಿಸಿದ್ದ ಅಂತರ್ ತರಗತಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಿ.ಎಸ್.ಇ.ಇ.ಟಿ. ಮತ್ತು ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರತ್ನಾವತಿ ಕೆ., ಕಾರ್ಯಕ್ರಮ ಸಂಯೋಜಕರಾದ ವಿನುತಾ ಡಿ.ಎಂ. ಮತ್ತು ಗುರುರಾಜ್ ಜಿ., ಸಿ.ಸಿ.ಎ. ಸಿಇಒ ದೀಕ್ಷಿತಾ, ಕಾಲೇಜಿನ ವಿವಿಧ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ವಿವಿಧ ಕಾಲೇಜುಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಶಕುಂತಲಾ ಸ್ವಾಗತಿಸಿದರು. ಕ್ಷಿತಿ ಮತ್ತು ತಂಡ ಪ್ರಾರ್ಥಿಸಿದರು. ಸಿ.ಸಿ.ಎ. ಕಾರ್ಯದರ್ಶಿ ಸಹನಾ ಡೋಂಗ್ರೆ ವಂದಿಸಿದರು. ಸುಶ್ಮಿತಾ ಬಿ., ಜಯಸೂರ್ಯ ನಾಯಕ್, ಕ್ಷಿತಿ ಕೆ. ರೈ, ಐಶ್ರೀ ಕೆ., ಶರ್ಮಿಳಾ ಎಂ.ಆರ್., ಭೂಮಿಕಾ ಕೆ.ಎಲ್. ಜೈನ್ ಕಾರ್ಯಕ್ರಮ ನಿರ್ವಹಿಸಿದರು.

ಮಂಗಳೂರು ವಿವಿ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧಾಕೂಟ

Article Image

ಮಂಗಳೂರು ವಿವಿ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧಾಕೂಟ

ಮೂಡುಬಿದಿರೆ: ಕುಂದಾಪುರದ ಭಂಡಾರಕರ‍್ಸ್ ಕಾಲೇಜಿನ ಆಶ್ರಯದಲ್ಲಿ ಜರುಗಿದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ ಸ್ಪರ್ಧಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಹಿಳಾ ಮತ್ತು ಪುರುಷರ ಎರಡು ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಮಹಿಳಾ ತಂಡವು ಒಟ್ಟು 6 ಚಿನ್ನ, 2 ಬೆಳ್ಳಿ ಪದಕ ಪಡೆದು ಒಟ್ಟು 58 ಅಂಕ ಪಡೆದು ಈ ಸಾಧನೆ ಮೆರೆದಿದೆ. ಪುರುಷರ ವಿಭಾಗವು 4 ಚಿನ್ನ, 4 ಬೆಳ್ಳಿ, 1 ಕಂಚಿನ ಪದಕ ಗಳಿಸಿ ಒಟ್ಟು 55 ಅಂಕಗಳೊಂದಿಗೆ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆಯಿತು. 55ಕೆಜಿ ದೇಹ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಆಳ್ವಾಸ್ ಕಾಲೇಜಿನ ಪ್ರಶಾಂತ್ ‘’ಬೆಸ್ಟ್ ಲಿಫ್ಟರ್’ ವೈಯಕ್ತಿಕ ಪ್ರಶಸ್ತಿಯನ್ನು ಪಡೆದರು. ಪುರುಷರ ವಿಭಾಗದಲ್ಲಿ ಪ್ರಶಾಂತ್, ಸಂತೋಷ್, ಪ್ರತ್ಯೂಶ್, ಜೋಸುವ ರಾಜ್‌ಕುಮಾರ್ ಚಿನ್ನದ ಪದಕ ಪಡೆದರೆ, ನಾಗರಾಜ್, ನಾಗೇಂದ್ರ ಅಣ್ಣಪ್ಪ, ದರ್ಶನ್, ಶಶಾಂಕ್ ಬೆಳ್ಳಿ ಪದಕ ಪಡೆದರು. ಮಹಿಳಾ ವಿಭಾಗದಲ್ಲಿ ಶ್ರಾವ್ಯ, ಸೀಮಾ, ಅನುಷಾ, ತನುಷಾ, ವಿತಶ್ರೀ, ದಿವ್ಯಾ ಚಿನ್ನದ ಗಳಿಸಿದರೆ, ಮಲ್ಲಮ್ಮ, ನಾಗಶ್ರೀ ಬೆಳ್ಳಿ ಪದಕ ಮಡೆದುಕೊಂಡರು. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

ಆಳ್ವಾಸ್ ನಲ್ಲಿ 2 ದಿನದ ಟೆಕ್ ಉತ್ಸವ್ - 2025

Article Image

ಆಳ್ವಾಸ್ ನಲ್ಲಿ 2 ದಿನದ ಟೆಕ್ ಉತ್ಸವ್ - 2025

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ನಡೆಯಲಿರುವ 2 ದಿನಗಳ ಟೆಕ್ ಉತ್ಸವ್ - 2025, ಅಂತರಕಾಲೇಜು ತಂತ್ರಜ್ಞಾನ ಸಂಬAಧಿ ಸ್ಪರ್ಧೆಗಳಿಗೆ ವಿದ್ಯಾಗಿರಿಯ ಡಾ ವಿ ಎಸ್ ಅಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು . ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಜ್ಯುಗೊ ಸ್ಟುಡಿಯೋ ಪ್ರೈ. ಲಿ. ನ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಮಾತನಾಡಿ, ತಂತ್ರಜ್ಞಾನ ಮುಂದುವರಿದAತೆ ಅವುಗಳ ಬಳಕೆಗೆ ಅಗತ್ಯವಿರುವ ಪರಿಣತಿಯನ್ನು ಪಡೆದುಕೊಳ್ಳುವುದು ಬಹಳ ಅವಶ್ಯ. ಬದಲಾಗುತ್ತಿರುವ ತಂತ್ರಜ್ಞಾನದ ಅವಶ್ಯಕತೆ ಹಾಗೂ ಅವುಗಳ ಬಳಕೆ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಕಳೆದ 15 ವರ್ಷಗಳ ತಾಂತ್ರಿಕ ಬದಲಾವಣೆ ಗಣನೀಯವಾಗಿದ್ದು, ಮುಂದಿನ 2 ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆಯ ಬೆಳವಣಿಗೆಯು ಇನ್ನಷ್ಟು ಪ್ರಗತಿ ಹೊಂದಲಿದೆ. ಟೆಕ್ಕಿಗಳು, ಇಂಜಿನಿಯರ್ ಗಳು ತಂತ್ರಜ್ಞಾನವನ್ನು ಬಳಸುವ ವಿಧಾನದ ಮೇಲೆ ಒಟ್ಟು ಸಮಾಜದ ರೀತಿ ಅವಲಂಬಿತವಾಗಿರುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ತಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಫೆಸ್ಟ್ಗಳಿಗೆ ಯಾವ ರೀತಿಯ ಹೆಚ್ಚು ಮಹತ್ವ ನೀಡುತ್ತಾರೋ ಅದೇ ರೀತಿ ತಮ್ಮ ಜೀವನದ ಕೌಶಲ್ಯಗಳ ವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕು. ಸರ್ಟಿಫಿಕೇಟ್ ಪಡೆಯುವುದಕ್ಕಾಗಿ ಕಲಿಕೆಯನ್ನ ಸೀಮಿತಗೊಳಿಸದೆ ಕಲಿತ ಪಾಠವನ್ನು ಅಳವಡಿಸಿಕೊಳ್ಳುವ ಪ್ರಯತ್ನವಿರಬೇಕು ಆಗ ಮಾತ್ರ ಬದುಕಿನಲ್ಲಿ ಒಂದು ಉನ್ನತಿಯೆಡೆಗಿನ ಪಯಣ ಸಾಧ್ಯ. ಐಟಿ ಯುಗದಲ್ಲಿರುವ ನಾವುಗಳು ನೂತನ ತಂತ್ರಜ್ಞಾನಗಳ ಮಾಹಿತಿಯನ್ನು ತಿಳಿಯುವುದು ಹಾಗೂ ಅವುಗಳನ್ನು ಬಳಸಿಕೊಂಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಅಗತ್ಯ ಎಂದರು. ಉದ್ಘಾಟನೆಯ ಬಳಿಕ ಐಟಿ ಕ್ವಿಜ್ , ಕಲ್ಚರಲ್ ಡಾನ್ಸ್, ಐಟಿ ಮ್ಯಾನೇಜರ್, ವೆಬ್ ಡಿಸೈನಿಂಗ್, ಕೊಡಿಂಗ್, ವೀಡಿಯೊಗ್ರಾಫಿ ಮುಂತಾದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಎರಡು ದಿನಗಳ ಟೆಕ್ ಉತ್ಸವ್‌ದಲ್ಲಿ ವಿವಿಧ ಭಾಗಗಳಿಂದ 400 ಅಧಿಕ ವಿದ್ಯಾರ್ಥಿಗಳು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್, ವಿಭಾಗದ ಮುಖ್ಯಸ್ಥೆ ವನಿತಾ ಪ್ರಭು, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ವಿದ್ಯಾರ್ಥಿ ಸಂಯೋಜಕಿ ಸಮೀಕ್ಷಾ ಎಸ್ ಹಾಗೂ ಶಿಶಿರ್ ಎಸ್ ಉಪಸ್ಥಿತರಿದ್ದರು. ಶ್ರೀಶ್ ಕೋಟೆಗಾರ ಕಾರ್ಯಕ್ರಮ ನಿರೂಪಿಸಿದರು.

ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು

Article Image

ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು

ಉಜಿರೆ, ಮಾ.12: ಹೆಣ್ಣುಮಕ್ಕಳಿಗೆ ಶಿಕ್ಷಣ ಎನ್ನುವುದು ಪಠ್ಯವಲ್ಲ, ಅದು ಅವರ ಸಶಕ್ತೀಕರಣದ ಸಾಧನ. ಪ್ರಸ್ತುತ ಹೆಣ್ಣುಮಕ್ಕಳು ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ. ಹೆಣ್ಣು ಶಕ್ತಿಯಾದಾಗ ಸಮಾಜ ಮತ್ತಷ್ಟು ಬೆಳೆಯಲು ಸಾಧ್ಯ ಎಂದು ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆ ಹೇಳಿದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಇಂದು (ಮಾ. 12) ಮಹಿಳಾ ಕುಂದುಕೊರತೆ ನಿವಾರಣಾ ಕೋಶ, ಆಂತರಿಕ ದೂರುಗಳ ಸಮಿತಿ, ಮಹಿಳಾ ಅಭಿವೃದ್ಧಿ ಕೋಶ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ಆಯೋಜಿಸಿದ್ದ ‘ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು’ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. “ಮಹಿಳೆ ಎಂದರೆ ಕೇವಲ ಗೃಹಿಣಿಯಲ್ಲ, ಅವಳು ಧೈರ್ಯ, ಸಾಹಸ, ಛಲದ ಪ್ರತೀಕ. ಎಲ್ಲಿ ಮಹಿಳೆಗೆ ಗೌರವ ಸಿಗುತ್ತದೆಯೋ ಅಲ್ಲಿ ಸಮೃದ್ಧಿ ಲಭಿಸುತ್ತದೆ. ಮಹಿಳೆಯರು ದೇಶದ ಆಸ್ತಿಯಾಗಬೇಕು. ನಮ್ಮ ಯೋಜನೆಗಳಿಂದ ಅನೇಕ ಗ್ರಾಮೀಣ ಮಹಿಳೆಯರು ಪ್ರಗತಿ ಸಾಧಿಸಿದ್ದು ಸಂತಸದಾಯಕ" ಎಂದು ಅವರು ಹೇಳಿದರು. “ನಮ್ಮ ಹಲವು ಯೋಜನೆಗಳಿಂದ ಅನೇಕ ಗ್ರಾಮೀಣ ಮಹಿಳೆಯರು ಪ್ರಗತಿ ಸಾಧಿಸಿದ್ದು, ಜ್ಞಾನ ವಿಕಾಸ, ಗೆಳತಿ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಅನೇಕ ಮನೆಗಳಿಗೆ ಒಳಿತಾಗಿದೆ. ನಮ್ಮ ಯೋಜನೆಗಳಿಂದ ಸಬಲರಾದ ಅನೇಕ ಮಹಿಳೆಯರು ತಮ್ಮ ಸಾಧನೆಗಳನ್ನು ಹಂಚಿಕೊಂಡಾಗ ಅವರ ಕಣ್ಣಲ್ಲಿ ಹೆಮ್ಮೆ ಕಾಣುತ್ತದೆ" ಎಂದರು. ಮುಖ್ಯ ಅತಿಥಿ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, "ಮಹಿಳೆಯರ ಸಶಕ್ತೀಕರಣದ ವಿಚಾರ ಬಂದಾಗ ಕಲ್ಪನಾ ಚಾವ್ಲಾ, ಇಂದಿರಾ ಗಾಂಧಿ, ರಾಣಿ ಅಬ್ಬಕ್ಕ ಅವರಂತಹ ಹೆಮ್ಮೆಯ ನಾರಿಯರು ನೆನಪಿಗೆ ಬರುತ್ತಾರೆ. ಇವರು ಯಾವುದೇ ಕ್ಷೇತ್ರದಲ್ಲೂ ಮಹಿಳೆಯರು ಕಮ್ಮಿ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಅವರ ಹಾದಿಗಳು ಇಂದಿನ ಮಹಿಳೆಯರಿಗೆ ಆದರ್ಶ ಮತ್ತು ಸ್ಫೂರ್ತಿದಾಯಕ. ಯಾವ ದೇಶದಲ್ಲಿ ಹೆಣ್ಣನ್ನು ಪೂಜಿಸುತ್ತಾರೋ ಆ ದೇಶ ಸಶಕ್ತವಾಗುತ್ತದೆ"ಎಂದು ಹೇಳಿದರು. "ಮಹಿಳಾಭಿವೃದ್ಧಿಗಾಗಿ ಡಾ. ಹೇಮಾವತಿ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಶ್ರೀ ಕ್ಷೇತ್ರದ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಅನೇಕ ಹೆಣ್ಣು ಮಕ್ಕಳು ಸ್ವಾವಲಂಬಿಗಳಾಗಿದ್ದಾರೆ" ಎಂದರು. ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, "ದೇಶದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಇರಬಹುದು. ಆದರೆ ಉನ್ನತ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚು ಎನ್ನುವುದು ಹೆಮ್ಮೆಯ ವಿಚಾರ. ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ, ಮಹಿಳೆಯರು ಇನ್ನಷ್ಟು ಶಿಕ್ಷಣ ಪಡೆಯಬೇಕು ಮತ್ತು ದೇಶದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಬೇಕು. ಈ ಕಾರ್ಯ ಮುಂದುವರಿಯಲು ಸಮಾಜದಲ್ಲಿ ಸಮಾನ ಅವಕಾಶಗಳನ್ನು ನೀಡಬೇಕಾಗುತ್ತದೆ" ಎಂದರು. ದೇಶದ ಮಹಿಳೆಯರ ಕೊಡುಗೆ ಮತ್ತು ಸಾಧನೆಗಳನ್ನು ನೆನೆಯಲು, ವಿದ್ಯಾರ್ಥಿನಿಯರಿಂದ ಕಿರು ರೂಪಕ ಪ್ರದರ್ಶಶಿಸಲಾಯಿತು. ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು ಎಂಬ ವಿಷಯದ ಕುರಿತು ಬೆಂಗಳೂರಿನ ಜನಮನ್ ಫಾರ್ಮಸುಟಿಕಲ್ಸ್ ಪ್ರೈ.ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕಿ ಅನಿಲಾ ದೀಪಕ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮ ಸಂಚಾಲಕರಾದ ಮಾಲಿನಿ ಅಂಚನ್ ಸ್ವಾಗತಿಸಿ, ಅಕ್ಷತಾ ಜೈನ್ ವಂದಿಸಿದರು. ವಿದ್ಯಾರ್ಥಿನಿಯರಾದ ಪೂರ್ವಿ ಮತ್ತು ತಂಡ ಪ್ರಾರ್ಥಿಸಿದರು. ಮಾನಸ ಅಗ್ನಿಹೋತ್ರಿ, ಹರ್ಷಿನಿ ಹಾಗೂ ಧರಿತ್ರಿ ಭಿಡೆ ನಿರೂಪಿಸಿದರು. ವಾಣಿಜ್ಯ ಕ್ಷೇತ್ರದ ತಜ್ಞರು, ಉದ್ಯಮಿಗಳು, ಮತ್ತು ಅಂತರಸಂಸ್ಥಾ ಪ್ರತಿನಿಧಿಗಳು ಭಾಗವಹಿಸಿ, ಕ್ರಿಯಾಶೀಲತೆಯ ಮಹತ್ವ ಕುರಿತು ಚರ್ಚೆ ನಡೆಸಿದರು. ಚರ್ಚಾ ಕೂಟದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕಿ ಮತ್ತು ಅಧ್ಯಕ್ಷೆ ಡಾ. ಪ್ರೀತಿ ಕೀರ್ತಿ ಡಿಸೋಜ ವಹಿಸಿದ್ದರು. ಚರ್ಚೆಯಲ್ಲಿ ಉಜಿರೆಯ ಶ್ರೀ ಧ.ಮಂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಟಿ. ಎನ್. ಕೇಶವ, ಸಂಧ್ಯಾ ಫ್ರೆಶ್‌ನ ಸಹಸಂಸ್ಥಾಪಕಿ ಮನೋರಮಾ ಭಟ್ಟ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಪೂರ್ವಾಧ್ಯಕ್ಷೆ ಅರ್ಚನಾ ರಾಜೇಶ್ ಪೈ ಭಾಗವಹಿಸಿದರು. ಮಹಿಳೆ ಮತ್ತು ಹೂಡಿಕೆ ಎಂಬ ವಿಷಯದ ಕುರಿತು ವಿಶೇಷ ಸಂವಾದಾತ್ಮಕ ಚಟುವಟಿಕೆ ನಡೆಯಿತು. ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ. ಜ್ಞಾನ ವಿಕಾಸ ಯೋಜನಾಧಿಕಾರಿ ಸಂಗೀತಾ ಮತ್ತು ಬೆಳ್ತಂಗಡಿ ತಾ.ಪಂ. ಕ್ಲಸ್ಟರ್ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ‘ಎಂಪವರ್ ಎಕ್ಸ್ಪೋ’ ವಿಶಿಷ್ಟ ಪ್ರದರ್ಶನ ಮತ್ತು ಮಾರಾಟ ಮಳಿಗೆ ಏರ್ಪಡಿಸಲಾಗಿತ್ತು, ಇದರಲ್ಲಿ ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಿದರು. ಡಾ ಹೇಮಾವತಿ ವೀ ಹೆಗ್ಗಡೆ ಉದ್ಘಾಟಿಸಿದರು.

ಆಳ್ವಾಸ್ ಕಾಲೇಜಿನ ಹಿಂದಿ ವಿಭಾಗದಿಂದ ಉಮಂಗ್-2025

Article Image

ಆಳ್ವಾಸ್ ಕಾಲೇಜಿನ ಹಿಂದಿ ವಿಭಾಗದಿಂದ ಉಮಂಗ್-2025

ವಿದ್ಯಾಗಿರಿ: ‘ಉಮಂಗ್ ಮೇ ಮತ್ ಫಾಸ್ ಯೇ ದುನಿಯಾ ಕಾ ಖೇಲ್ ಹೇ’ (ಅತ್ಯುತ್ಸಾಹದಲ್ಲಿ ಮುಳುಗದಿರು, ಇದು ಜಗದ ಆಟ) ಎಂದು ಮೂಡುಬಿದಿರೆಯ ಜೈನ್ ಪ್ರೌಢಶಾಲೆಯ ನಿವೃತ್ತ ಹಿಂದಿ ಶಿಕ್ಷಕ ರಾಯಿ ರಾಜಕುಮಾರ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಿಂದಿ ವಿಭಾಗದ ವತಿಯಿಂದ ಆಯೋಜಿಸಲಾದ 'ಉಮಂಗ್-2025' ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಎಲ್ಲಾ ಭಾಷೆಯು ನಮಗೆ ಉಪಯೋಗಿಯಾಗಿರುತ್ತೆ. ಅದು ಇಂಗ್ಲಿಷ್, ಹಿಂದಿ, ಕನ್ನಡ ಯಾವುದೇ ಭಾಷೆ ಆಗಲಿ. ಅವುಗಳನ್ನು ಬಳಸಿಕೊಂಡು ನಮ್ಮನು ನಾವು ಬೆಳಸಿಕೊಳ್ಳಬೇಕಾದ ಅವಶ್ಯಕತೆ ಇದೆ’ ಎಂದರು. ಉಮಂಗ್ ಎಂದರೆ ಖುಷಿ, ಆನಂದ, ಉಲ್ಲಾಸ, ಅತ್ಯುತ್ಸಾಹ. ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ, ಸುಖದ ಅನುಭವ ಎಲ್ಲರಿಗೂ ಸಿಗಬೇಕು ಅದುವೇ ಉಮಂಗ್ ಎಂದರು. ಯಾವುದೇ ಕೆಲಸವಾಗಲಿ, ಅದನ್ನು ಮನಸ್ಸಿನಿಂದ ಮಾಡಿದಾಗಲೇ ಉತ್ಸಾಹ. ಖುಷಿ ಎನ್ನುವಂತದ್ದು, ಈ ಕಾರ್ಯಕ್ರಮದ ಮುಖ್ಯ ಉದ್ದೇಶ. ನಮ್ಮ ಬದುಕನ್ನು ನಾವು ಎಷ್ಟರ ಮಟ್ಟಿಗೆ ಉಪಯೋಗಿಸಿಕೊಳ್ಳುತ್ತೇವೆ. ಅಷ್ಟರ ಮಟ್ಟಿಗೆ ನಾವು ಬೆಳೆಯಲು ಸಾಧ್ಯವಿದೆ’ ಎಂದರು. ಝೆಂಕೊ.ಐಒ ಸಂಸ್ಥೆಯ ಸಿಇಒ ಡಿಂಪಲ್ ಪರ್ಮಾರ್ ಮಾತನಾಡಿ, ‘ಹಿಂದಿ ಕೇವಲ ಒಂದು ಭಾಷೆಯಲ್ಲ. ಅದು ನಮ್ಮ ಸಾಂಸ್ಕೃತಿಕ ಗುರುತು ಹಾಗೂ ಘನತೆಯಾಗಿದೆ. ಭಾಷೆಯಯೊಂದಿಗೆ ಅಭಿವೃದ್ಧಿ ಹೊಂದುವ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತದೆ. ಹಿಂದಿ ನಮ್ಮನು ಪ್ರೀತಿ ಸೂತ್ರದಲ್ಲಿ ಒಂದಾಗಿಸುತ್ತದೆ. ಇದು ಸಂವಹನದ ಮಾದ್ಯಮವಷ್ಟೇ ಅಲ್ಲ. ಇದು ಸಂವೇದನೆಯ ಆತ್ಮವಾಗಿದೆ. ಭಾಷೆ ಗಟ್ಟಿಯಾಗಿದ್ದರೆ, ಆ ಭಾಷಿಕರ ಯೋಚನೆಯೂ ದೃಢವಾಗಿರುತ್ತದೆ. ನಿಮಗೆ ಜೀವನದಲ್ಲಿ ದೊಡ್ಡ ಸವಾಲುಗಳು ಬರಲಿವೆ. ನಾವು ಯಾವುದಕ್ಕೂ ಹೆದರುವ ಅವಶ್ಯಕತೆ ಇಲ್ಲ ಎಂದರು. ಜೀವನದಲ್ಲಿ ಫಲಿತಾಂಶದ ಬಗ್ಗೆ ಯೋಚಿಸಬೇಡಿ, ಯಾವಾಗಲೂ ನೀವು ಸ್ಪರ್ಧೆಯನ್ನು ಹೇಗೆ ಎದುರಿಸುತ್ತೀರಿ ಎಂಬುದರ ಮೇಲೆ ನಿಮ್ಮ ಗುರಿಯನ್ನು ಕೇಂದ್ರೀಕರಿಸಿ. ನೀವು ನಿಮ್ಮ ಮೇಲೆ ನಂಬಿಕೆ ಇಡಿ. ಏಕೆಂದರೆ ಸೋಲು ಗೆಲುವು ಮುಖ್ಯವಲ್ಲ. ನಿಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪ ಮಾತ್ರ ಮುಖ್ಯವಾಗುತ್ತದೆ. ನೀವು ನಿಮ್ಮನ್ನು ಯಾರಿಗೂ ಸಾಬೀತುಪಡಿಸುವ ಅಗತ್ಯವಿಲ್ಲ ನೀವು ಸುಧಾರಿಸಿಕೊಳ್ಳುವುದು ಮುಖ್ಯ. ಅದಕ್ಕಾಗಿ ನಿರಂತರ ಪ್ರಯತ್ನ ಮುಂದುವರಿಸಿ’ ಎಂದರು. ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದ ಆಳ್ವಾಸ್ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ ಎನ್ ಪಿ ನಾರಾಯಣ ಶೆಟ್ಟಿ, ಮಾತನಾಡಿ ಭಾಷೆ ಮನುಷ್ಯನ ವಿಕಾಸಕ್ಕೆ ದಾರಿಯನ್ನು ಒದಗಿಸುತ್ತದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಸಾಮಾನ್ಯ. ಸೋತಾಗ ಧೃತಿಗೆಡದೆ, ಧೈರ್ಯದಿಂದ ಎದುರಿಸಬೇಕು ಎಂದರು. ‘ಉಮಂಗ್-2025' ರ ಅಂಗವಾಗಿ ನಡೆದ ಸ್ಪರ್ಧೆಗಳಾದ ಚರ್ಚಾ ಸ್ಪರ್ಧೆ, ಸ್ಟ್ಯಾಂಡ್ ಅಪ್ ಕಾಮಿಡಿ, ಭಾಷಾಂತರ, ರೀಲ್ಸ್, ಕಿರು ಪ್ರಹಸನದಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದರು. ಸೈಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿವಿಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಹಿಂದಿ ವಿಭಾಗದ ಸಂಯೋಜಕ ಡಾ. ದತ್ತಾತ್ರೇಯ ಹೆಗ್ಡೆ, ಹಿರಿಯ ವಿದ್ಯಾರ್ಥಿಗಳಾದ ತನೀಷಾ, ಸ್ಪರ್ಷ, ವಿದ್ಯಾರ್ಥಿ ಸಂಯೋಜಕರಾದ ಖುಷಿ ಕುಡಾಲ್ಕರ್ ಮತ್ತು ಜೊನಾಥನ್ ಡಿ’ಸೋಜಾ ಇದ್ದರು. ವಿದ್ಯಾರ್ಥಿನಿ ವಿನೆಟ್ ವಾಸ್, ವೃದ್ಧಿ ರೈ ನಿರೂಪಿಸಿದರು.

ಉಜಿರೆ ಎಸ್‌.ಡಿ.ಎಂ. ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವ

Article Image

ಉಜಿರೆ ಎಸ್‌.ಡಿ.ಎಂ. ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವ

ಉಜಿರೆ: ಯುವ ಪತ್ರಕರ್ತರು ಯಾವುದೇ ಬೆದರಿಕೆಗಳಿಗೆ ಬಗ್ಗದೆ ನಿರ್ಭೀತ ನಡೆಯಿಂದ ವೃತ್ತಿಪರತೆಯಿಂದ ಕಾರ್ಯಪ್ರವೃತ್ತರಾದಾಗ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಶಿರಾದ ವರ್ಧಮಾನ್ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ, ಶಿಕ್ಷಣ ತಜ್ಞ ಸಂಜಯ್ ಎಸ್. ಗೌಡ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಯೋಗದೊಂದಿಗೆ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ (ಪದವಿ ಮತ್ತು ಸ್ನಾತಕೋತ್ತರ), ಬಿ.ವೋಕ್ ವಿಭಾಗ (ಡಿಜಿಟಲ್ ಮೀಡಿಯಾ ಆ್ಯಂಡ್ ಫಿಲ್ಮ್ ಮೇಕಿಂಗ್) ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ 'ಸಮೂಹ ಮಾಧ್ಯಮ ವೃತ್ತಿಪರತೆ ಮತ್ತು ಸದ್ಯದ ಸವಾಲುಗಳು' ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ‘ಮಾಧ್ಯಮ ಪರ್ವ’ ಉತ್ಸವವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ವೇಗವಾಗಿ ಪ್ರಸಾರವಾಗುತ್ತಿವೆ. ಅವುಗಳಲ್ಲಿ ಸತ್ಯ ಮತ್ತು ವಸ್ತುನಿಷ್ಠತೆ ಕಾಯ್ದುಕೊಳ್ಳುವುದು ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ಅಗತ್ಯವಾಗಿದೆ. ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಂಶೋಧನಾತ್ಮಕವಾಗಿ ಕಾರ್ಯನಿರ್ವಹಿಸಿದರೆ ಸುದ್ದಿಗಳಲ್ಲಿ ನಿಖರತೆ ಕಾಯ್ದುಕೊಳ್ಳಬಹುದು. ಯುವಜನರ ವ್ಯವಸ್ಥಿತ ಭಾಗವಹಿಸುವಿಕೆಯಿಂದ ಉತ್ತಮ ಸಮಾಜ ಕಟ್ಟಲು ಸಾಧ್ಯ ಎಂದರು. ವಿದ್ಯಾರ್ಥಿಗಳು ಪದವೀಧರರಾಗಿ ಹೊರಹೋದ ನಂತರವೂ ಕಾಲೇಜಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ಇದು ಪರಸ್ಪರರ ಅಭಿವೃದ್ಧಿಗೆ ಅವಶ್ಯ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಾಧ್ಯಮಗಳು ಪ್ರಜಾಪ್ರಭುತ್ವದ ಜೀವಾಳ. ಪತ್ರಕರ್ತರು ಸಮರ್ಪಕವಾಗಿ ಕೆಲಸ ಮಾಡಿದಾಗ ಪ್ರಜಾಪ್ರಭುತ್ವ ಸದೃಢವಾಗಿ ಉಳಿಯುತ್ತದೆ ಎಂದು ಹೇಳಿದರು. ಸರಿಯಾದ ಸಮಯದಲ್ಲಿ ಮಾಹಿತಿ ಮತ್ತು ತರಬೇತಿ ಪಡೆದುಕೊಳ್ಳುವುದರಿಂದ ಆವಶ್ಯಕ ಕೌಶಲ್ಯಗಳನ್ನು ವೃತ್ತಿಬದುಕಿನಲ್ಲಿ ಹೊಂದಬಹುದು. ವಿದ್ಯಾರ್ಥಿಗಳು ಅವಕಾಶಗಳು ಸಿಕ್ಕಿದಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಕಾರ್ಯಕ್ರಮದ ಪ್ರಧಾನ ಆಶಯವನ್ನು ಪ್ರಸ್ತುತಪಡಿಸಿ ಮಾತನಾಡಿದರು. ನಂಬಿಕೆ, ವಿಶ್ವಾಸ ಮತ್ತು ನಿರೀಕ್ಷೆಗಳನ್ನು ಸಮಾಜದಲ್ಲಿ ಮೂಡಿಸುವುದು ಮಾಧ್ಯಮಗಳ ಕೆಲಸವಾಗಿದೆ. ಮಾಧ್ಯಮಗಳು ಸಮಾಜದ ನಂಬಿಕೆ ಉಳಿಸಿಕೊಳ್ಳಬೇಕಾದರೆ ದಮನಿತರ ಧ್ವನಿಯಾಗಬೇಕು. ಆಗ ಅವುಗಳ ಅಸ್ತಿತ್ವವೂ ಉಳಿಯುತ್ತದೆ. ಸಾಮಾಜಿಕ ಮಾಧ್ಯಮಗಳ ಕಾರಣದಿಂದ ಮುಖ್ಯವಾಹಿನಿಯ ಮಾಧ್ಯಮಗಳಿಗೆ ಸವಾಲುಗಳು ಎದುರಾಗಿವೆ. ಇವುಗಳನ್ನು ಎದುರಿಸಬೇಕಾದರೆ ಮಾಧ್ಯಮದ ವಿದ್ಯಾರ್ಥಿಗಳು ಪತ್ರಿಕೋದ್ಯಮದ ಆಶಯ ಮತ್ತು ನೈತಿಕತೆಯನ್ನು ವೃತ್ತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸದ್ಯ ಪಾಸಿಟಿವ್ ಜರ್ನಲಿಸಂ ವಿಸ್ತರಿಸುವ ಅಗತ್ಯವಿದೆ. ಸುದ್ದಿ ಕೆರಳಿಸುವಂತಿರದೆ, ಶಮನ ನೀಡುವಂತಿರಬೇಕು ಎಂದರು. ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ, ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ವಿರಾಟ್ ಪದ್ಮನಾಭ ಅವರ 'ಬೆಟ್ಟದ ಹೂವು' ಪುಸ್ತಕ ಇತ್ತೀಚೆಗೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಲಾಯಿತು. ಉದ್ಘಾಟನಾ ಸಮಾರಂಭದ ಕುರಿತು ಪದವಿ ಪತ್ರಿಕೋದ್ಯಮ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ತಕ್ಷಣಕ್ಕೆ ಸಂಯೋಜಿಸಿದ ‘ಚಿಗುರು’ ಭಿತ್ತಿಪತ್ರಿಕೆಯ ವಿಶೇಷ ಸಂಚಿಕೆ ಅನಾವರಣಗೊಳಿಸಲಾಯಿತು. ವಿಚಾರ ಸಂಕಿರಣದೊಂದಿಗೆ ಆಯೋಜಿಸಿರುವ ಮಾಧ್ಯಮ ಪರ್ವ ಫೆಸ್ಟ್ ಥೀಮ್ ಸಾಂಗ್ ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಆಯೇಶಾ ಖಾನಂ, ಸಂಜಯ್ ಎಸ್. ಗೌಡ ಮತ್ತು ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ., ಉಜಿರೆಯ ಮಂಜುಶ್ರೀ ಪ್ರಿಂಟರ್ಸ್ ಪ್ರಬಂಧಕ ಶೇಖರ್ ಮತ್ತು ಉದ್ಯಮಿ ಶ್ರೀನಿವಾಸ ಗಲಗಲಿ ಅವರನ್ನು ಸನ್ಮಾನಿಸಲಾಯಿತು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಪ್ರಸ್ತಾವಿಸಿ, ಸ್ವಾಗತಿಸಿದರು. ವಿದ್ಯಾರ್ಥಿಗಳಾದ ನೈದಿಲೆ ಮತ್ತು ಸಿಂಚನ ನಿರೂಪಿಸಿದರು. ಸಹನಾ ವಂದಿಸಿದರು.

ಉದ್ಯಮದಲ್ಲಿ ಯಶಸ್ಸಿಗಿಂತ ಪ್ರಗತಿ ಅಗತ್ಯ : ವಾಲ್ಟರ್ ನಂದಳಿಕೆ

Article Image

ಉದ್ಯಮದಲ್ಲಿ ಯಶಸ್ಸಿಗಿಂತ ಪ್ರಗತಿ ಅಗತ್ಯ : ವಾಲ್ಟರ್ ನಂದಳಿಕೆ

ಮೂಡುಬಿದಿರೆ: ಯಾವುದೇ ಉದ್ಯಮದಲ್ಲಿ ಯಶಸ್ಸು ಗಳಿಸುವುದಕ್ಕಿಂತಲೂ ಪ್ರಗತಿ ಹೊಂದುವುದು ಮುಖ್ಯ, ಸೋಲು ಕಂಡ ವ್ಯಕ್ತಿ ಗೆಲ್ಲುವ ಗುಟ್ಟನ್ನು ಚೆನ್ನಾಗಿ ಕಲಿಸಬಲ್ಲನು ಎಂದು ದೈಜಿವರ್ಲ್ಡ್ ವಾಹಿನಿಯ ಸ್ಥಾಪಕ ಹಾಗೂ ಮುಖ್ಯ ಸಂಪಾದಕ ವಾಲ್ಟರ್ ನಂದಳಿಕೆ ಹೇಳಿದರು. ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ‘ಟ್ರೈಬ್ಲೇಜ್’ ವಿದ್ಯಾರ್ಥಿ ವೇದಿಕೆವತಿಯಿಂದ ಹಮ್ಮಿಕೊಂಡ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ದೈಜಿವರ್ಲ್ಡ್ ಸಂಸ್ಥೆ ಮುಖಾಂತರ ಕಂಡುಕೊಂಡ ಉದ್ಯಮಶೀಲತೆಯ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಉದ್ಯಮಿಗಳಾಗಲು ಆಶಯ ಹೊಂದಿರುವ ವಿದ್ಯಾರ್ಥಿಗಳು ಶಿಕ್ಷಣದ ಪ್ರಮಾಣ ಪತ್ರಗಳ ಜತೆಗೆ ಆತ್ಮವಿಶ್ವಾಸದೊಂದಿಗೆ ಸಂವಹನ ನಡೆಸುವದನ್ನೂ ಬೆಳೆಸಿಕೊಳ್ಳಬೇಕು. ಕಠಿಣ ಪರಿಶ್ರಮಕ್ಕೆ ಯಾವುದೇ ಪರ್ಯಾಯ ವಿಧಾನ ಇಲ್ಲ, ಹೊಸ ವಿಷಯಗಳನ್ನು ತಿಳಿದುಕೊಂಡು ಆಯಾ ಕಾಲದ ಪ್ರವೃತ್ತಿಗಳಿಗೆ ಅನುಗುಣವಾಗಿ ನವೀಕರಿಸಿಕ್ಕೊಳ್ಳುವುದು ಯಶಸ್ವಿ ಉದ್ಯಮಕ್ಕೆ ಬಹಳ ಅಗತ್ಯ. ಅವಮಾನಗಳಿಗೆ ಹಿಂಜರಿಯದೆ ಉತ್ಸಾಹವಿರುವ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಹಾಗೂ ಉತ್ತಮ ಜೀವನ ಶೈಲಿಗೆ ಬದಲಾವಣೆಯಾಗಲು ಆರಂಭಿಕ ಹಂತದಲ್ಲಿ ಸ್ವಲ್ಪ ಕಷ್ಟವೆನಿಸಿದರೂ ಅಪ್ಡೇಟ್, ಅಪ್‌ಗ್ರೇಡ್ ಹಾಗೂ ಅಪ್ಲಿಫ್ಟ್ ಎನ್ನುವ ರೂಡಿಯನ್ನು ಪ್ರತಿಯೊಬ್ಬರೂ ಕಂಡುಕೊಳ್ಳಿ ಎಂದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಪುಸ್ತಕ ಓದುವುದರಿಂದ ಜ್ಞಾನ ವೃದ್ಧಿಯಾಗಬಹುದು, ಯಶಸ್ವಿ ವ್ಯಕ್ತಿಯನ್ನು ಅನುಸರಿಸುವುದರಿಂದ ಜೀವನಕ್ಕೆ ಪರಿಣಾಮಕಾರಿಯಾದ ಪ್ರೇರಣೆ ದೊರಕುತ್ತದೆ. ಬದುಕಿನಲ್ಲಿ ಸವಾಲುಗಳನ್ನು ಎದುರಿಸಿದಾಗ ಮಾತ್ರ ಹೊಸ ಕಲಿಕೆಯ ಆರಂಭವಾಗುತ್ತದೆ. ಹೊಸ ಪ್ರಯತ್ನದ ದಾರಿಯಲ್ಲಿ ಹಲವಾರು ಟೀಕೆಗಳು ಎದುರಾದರೂ ಯಶಸ್ಸು ದೊರೆತಾಗ ಸಹಜವಾಗಿಯೇ ಸಮಾಜ ಒಪ್ಪಿಕೊಳ್ಳುತ್ತದೆ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ವಿಭಾಗ ಮುಖ್ಯಸ್ಥೆ ಸುರೇಖಾ, ಟ್ರೈಬ್ಲೇಜ್ ವಿದ್ಯಾರ್ಥಿ ವೇದಿಕೆ ಮಾರ್ಗದರ್ಶಕಿ ಸೋನಿ, ವಿದ್ಯಾರ್ಥಿ ಸಂಯೋಜಕರಾದ ಆದರ್ಶ್ ಶೆಟ್ಟಿ, ಭೂಮಿಕಾ ಉಪಸ್ಥಿತರಿದ್ದರು. ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಖುಷಿ ಶೆಟ್ಟಿ ಸ್ವಾಗತಿಸಿ, ಸಮೃದ್ಧಿ ಪ್ರಭು ವಂದಿಸಿದರು.

ಮಾ. 12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ

Article Image

ಮಾ. 12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ‘ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು’ ಕುರಿತ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ ಮಾ. 12ರಂದು (ನಾಳೆ) ಬೆಳಗ್ಗೆ 10ಕ್ಕೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ. ಕಾಲೇಜಿನ ಮಹಿಳಾ ಕುಂದುಕೊರತೆ ನಿವಾರಣಾ ಕೋಶ, ಆಂತರಿಕ ದೂರುಗಳ ಸಮಿತಿ ಮತ್ತು ಮಹಿಳಾ ಅಭಿವೃದ್ಧಿ ಕೋಶದ ವತಿಯಿಂದ ಆಂತರಿಕ ಗುಣಮಟ್ಟ ಖಾತರಿ ಕೋಶ (ಐಕ್ಯುಎಸಿ) ಸಹಯೋಗದೊಂದಿಗೆ ನಡೆಯಲಿರುವ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಹೇಮಾವತಿ ವೀ. ಹೆಗ್ಗಡೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಜನಮನ್ (JANMAN) ಫಾರ್ಮಾಸುಟಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕಿ (Chief Executive Director) ಅನಿಲಾ ದೀಪಕ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಜೆ 4ಕ್ಕೆ ಸೆಮಿನಾರ್ ಹಾಲ್ ನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ನ್ಯೂಸ್ ಫಸ್ಟ್ ಕನ್ನಡ ಸುದ್ದಿ ವಾಹಿನಿಯ ಆ್ಯಂಕರ್ ಹಾಗೂ ಅಸೋಸಿಯೇಟ್ ಎಡಿಟರ್ ವಿದ್ಯಾಶ್ರೀ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಪರೀಕ್ಷಾಂಗ ಕುಲಸಚಿವೆ ನಂದ ಕುಮಾರಿ ಕೆ.ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಐಕ್ಯುಎಸಿ ಸಂಯೋಜಕ ಗಜಾನನ ಆರ್. ಭಟ್ ಉಪಸ್ಥಿತರಿರಲಿದ್ದಾರೆ.

ಎಸ್.ಡಿ.ಎಂ ವಾಣಿಜ್ಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ

Article Image

ಎಸ್.ಡಿ.ಎಂ ವಾಣಿಜ್ಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ

ಉಜಿರೆ, ಮಾರ್ಚ್ 11: ಕೃತಕ ಬುದ್ಧಿಮತ್ತೆ ಸೇರಿದಂತೆ ತಂತ್ರಜ್ಞಾನ ವಲಯದಲ್ಲಿ ಆಗುತ್ತಿರುವ ಕ್ಷಿಪ್ರ ಬೆಳವಣಿಗೆಗಳ ನಡುವೆ ವಿನೂತನವಾಗಿ ಆಲೋಚಿಸುವ ಸಾಮರ್ಥ್ಯ ಹೊಸ ಬಗೆಯ ಔದ್ಯೋಗಿಕ ಅವಕಾಶಗಳನ್ನು ಪಡೆಯಲು ನೆರವಾಗುತ್ತದೆ ಎಂದು ಮಂಗಳೂರಿನ ಎ. ಜೆ. ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ. ವಿಭಾಗದ ಮುಖ್ಯಸ್ಥರಾದ ಡಾ. ಶರಣ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನೆ ವಿಭಾಗವು ‘ಸುಸ್ಥಿರ ಬೆಳವಣಿಗೆಗಾಗಿ ವಿವಿಧ ಕಾರ್ಯತಂತ್ರಗಳು ಕುರಿತ ‘ಎಕ್ಸ್ಪ್ಯಾಂಡಿಂಗ್ ಹಾರಿಜನ್’ ಶೀರ್ಷಿಕೆಯ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಜಗತ್ತಿನಲ್ಲಿ ವಿಶೇಷ ರೀತಿಯಲ್ಲಿ ಹೊಸ ಆಲೋಚನೆಗಳಿಂದ ಮತ್ತು ವಿಶೇಷ ರೀತಿಯ ಕೆಲಸಗಳಿಂದ ವಿದ್ಯಾರ್ಥಿಗಳು ತಮ್ಮನ್ನು ಗುರುತಿಸಿಕೊಳ್ಳಬೇಕು. ಈ ಬಗೆಯ ಕ್ರಿಯಾಶೀಲ ಗುರುತಿಸಿಕೊಳ್ಳುವಿಕೆಯಿಂದ ಔದ್ಯೋಗಿಕ ಅವಕಾಶಗಳ ಬಾಗಿಲು ತೆರೆಯುತ್ತದೆ. ತಂತ್ರಜ್ಞಾನದ ಅವಲಂಬನೆ ಹೆಚ್ಚಾದಾಗಲೂ ಆತಂಕ ಪಡುವ ಅನಿವಾರ್ಯತೆ ಎದುರಾಗುವುದಿಲ್ಲ ಎಂದರು. ಉದೋಗ್ಯ ಅವಕಾಶಗಳನ್ನು ಕಲ್ಪಿಸಿಕೊಳ್ಳುವುದು ಇಂದಿನ ದಿನಗಳಲ್ಲಿ ತುಂಬಾ ಕಷ್ಟಕರ ಸಂಗತಿಯಾಗಿದೆ. ಉಳಿದವರಿಗಿಂತ ಭಿನ್ನವಾಗಿ ಆಲೋಚಿಸುವ ಪ್ರಯತ್ನಗಳ ಕಡೆಗೆ ಹೆಚ್ಚಿನ ಗಮನವಿರಬೇಕು. ಎ.ಐ ತಂತ್ರಜ್ಞಾನಗಳಿಂದ ಉದೋಗ್ಯ ಅವಕಾಶಗಳು ಕುಗ್ಗುತ್ತವೆ. ಪ್ರತಿದಿನವೂ ಹೊಸ ಸಂಶೋಧನೆಯಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು. ಒಂದೇ ಆದಾಯದ ಮೇಲಿನ ಆವಲಂಬನೆ ಕಡಿಮೆಯಾಗಬೇಕು. ಮಾರುಕಟ್ಟೆಯ ಏರಿಳಿತಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಸಾಮರ್ಥ್ಯವನ್ನು ಮರೂಪಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ.ಅವರು ಮಾತನಾಡಿದರು. ವಿದ್ಯಾರ್ಥಿಗಳು ರಾಷ್ಟ್ರೀಯ ವಿಚಾರ ಸಂಕಿರಣಗಳಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಜ್ಞಾನಾಭಿವೃದ್ದಿ ಸಾಧ್ಯವಾಗುತ್ತದೆ. ಪಾಠಗಳ ಜೊತೆಗೆ ಹೊರಗಿನ ವಿದ್ಯಮಾನಗಳನ್ನು ತಿಳಿದುಕೊಳ್ಳಬೇಕು. ಉದ್ಯೋಗ ಅವಕಾಶಗಳು ವಿಭಿನ್ನವಾದ ಆಲೋಚನೆಯನ್ನು ಮಾಡುವ ವ್ಯಕ್ತಿಯನ್ನು ಹುಡುಕಿಕೊಂಡು ಬರುತ್ತವೆ. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಭಾರತವನ್ನು ಅಭಿವೃದ್ದಿ ಹೊಂದಿದ ರಾಷ್ಟçವನ್ನಾಗಿ ಮಾಡುವುದು ನಮ್ಮ ಕರ್ತವ್ಯ.ಎಂದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ಪ್ರಿಯಾಕುಮಾರಿ ಎಸ್.ವಿ ಹಾಗೂ ಉಜಿರೆ ಎಸ್.ಡಿ.ಎಂಕಾಲೇಜಿನ ವಾಣಿಜ್ಯ ನಿಕಾಯದ ಡೀನ್ ಶಂಕುತಲಾ, ಸಂಘಟನಾ ಕಾರ್ಯದರ್ಶಿ ಡಾ. ಸುರೇಶ ಬಾಬು, ಕೆ.ಎನ್, ಹರ್ಷಿತ್‌ ಕುಮಾರ್ ಶೆಟ್ಟಿ ಎನ್, ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸ ಬಿ.ಕೆ. ಸ್ವಾಗತಿಸಿದರು, ಡಾ. ಸುರೇಶ್ ಬಾಬು ಕೆ.ಎನ್ ವಂದಿಸಿದರು. ದೀಕ್ಷಾ ಮತ್ತು ಕ್ಷಮಾ ಆಚಾರ್ಯ ನಿರೂಪಿಸಿದರು.

‘ಸಕ್ಷಮ’ ಆಳ್ವಾಸ್ ವುಮೆನ್ಸ್ ಅಸೋಸಿಯೇಷನ್ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 2025

Article Image

‘ಸಕ್ಷಮ’ ಆಳ್ವಾಸ್ ವುಮೆನ್ಸ್ ಅಸೋಸಿಯೇಷನ್ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 2025

ವಿದ್ಯಾಗಿರಿ: ‘ಮಹಿಳೆ ಇಲ್ಲದೇ ಪ್ರಕೃತಿ ಇಲ್ಲ. ‘ಶಕ್ತಿ’ ಇಲ್ಲದೆ ಶಿವನೂ ನಿಶ್ಶಕ್ತ. ಶೋಷಣೆ ಮೆಟ್ಟಿ ನಿಲ್ಲುವವಳೇ ನಿಜವಾದ ‘ಹೆಣ್ಣು’. ಹೆಣ್ಣಿಗೆ ವಿದ್ಯೆಯೇ ಸೌಂದರ್ಯ, ತೇಜಸ್ಸು’ ಎಂದು ಹಿರಿಯ ರಂಗಕರ್ಮಿ, ಬೆಳ್ಳಿತೆರೆ ಮತ್ತು ಕಿರುತೆರೆ ನಟಿ ಗಿರಿಜಾ ಲೋಕೇಶ್ ಹೇಳಿದರು. ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣ (ಕೃಷಿಸಿರಿ) ವೇದಿಕೆಯಲ್ಲಿ ಶನಿವಾರ ಆಳ್ವಾಸ್ ಮಹಿಳಾ ವೇದಿಕೆ ‘ಸಕ್ಷಮ’ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡರ ಸ್ಮರಣೆಯಲ್ಲಿ ಆಯೋಜಿಸಿದ ‘ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ-2025’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಮಹಿಳೆ ಇಲ್ಲದೇ ಪ್ರಕೃತಿಯ ಇಲ್ಲ. ಆದರೆ ಹಿಂದೆ ಪುರಷನೂ ಬೇಕು ಎಂಬುದು ಗುಟ್ಟು’ ಎಂದು ನಸುನಕ್ಕ ಅವರು, ‘ವಿದ್ಯೆ- ವಿನಯ ಇಲ್ಲದವರಿಗೆ ಮೇಕಪ್ ಹೆಚ್ಚು ಬೇಕು’ ಎಂದು ಚಟಾಕಿ ಹಾರಿಸಿದರು. ‘ಅಮ್ಮ ಹೊಡೆದು ತಿದ್ದಿ ತೀಡಿದಾಗ ಗೊತ್ತಾಗಲಿಲ್ಲ. ಈಗ ಅದರ ಫಲ ಅನುಭವಿಸುತ್ತಿದ್ದೇನೆ. ಅಮ್ಮನ ಋಣ ಹೇಗೆ ತೀರಿಸಲಿ’ ಎಂದು ಭಾವುಕರಾದರು. ‘ಆಳ್ವಾಸ್’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ನನ್ನ ಬಹುದಿನದ ಕನಸು. ಕರೆದುದಕ್ಕೆ ಧನ್ಯವಾದ ಎಂದು ಗ್ರೀಷ್ಮಾ ಆಳ್ವ ಅವರಿಗೆ ಹೇಳಿದರು. ‘ಆಳ್ವಾಸ್ ಆವರಣದ ಶಿಸ್ತು ಮತ್ತು ನೈರ್ಮಲ್ಯ ದೇಶಕ್ಕೆ ಮಾದರಿ. ಹೀಗಾಗಿ ಇಲ್ಲಿ ಕಲಿತರೆ ದೇಶದ ಉತ್ತಮ ಪ್ರಜೆ ಆಗುವ ಅವಕಾಶ ಮಕ್ಕಳಿಗೆ ಲಭಿಸುತ್ತದೆ. ಆಳ್ವಾಸ್ ನಲ್ಲಿ ಓದುವುದು ದೊಡ್ಡ ಹೆಮ್ಮೆ’ ಎಂದ ಅವರು, ‘ಡಾ. ಮೋಹನ ಆಳ್ವರಿಗೂ ನಮಗೂ 50 ವರ್ಷಗಳ ನಂಟು. ಆದರೆ ವಯಸ್ಸಾಗಲಿಲ್ಲ. ಏಕೆಂದರೆ ಅವರ ಸಾಮಾಜಿಕ ಕೊಡುಗೆ ಅಪಾರ’ ಎಂದು ಶ್ಲಾಘಿಸಿದರು. ‘ನೀವು ಗ್ರಾಮೀಣ ಮಹಿಳೆ ಸುಕ್ರಿ ಬೊಮ್ಮನಗೌಡ ಅವರಿಗೆ ನೀಡಿದ ಗೌರವ ಶ್ಲಾಘನೀಯ. ಇಂದಿನ ‘ಸಿ’ ಶಸ್ತ್ರಚಿಕಿತ್ಸೆ ಹೆರಿಗೆಯ ನಡುವೆ ಸೂಲಗಿತ್ತಿಯರು ಅಂದು ನಿರ್ವಹಿಸಿದ ಪಾತ್ರ ಬಹುಮುಖ್ಯ. ಅದೇ ರೀತಿ ಸಾಲುಮರ ತಿಮ್ಮಕ್ಕ ಅವರ ಸಾಧನೆ’ ಎಂದು ಕೊಂಡಾಡಿದರು. ‘ನಾಳೆ ಎಲ್ಲ ನಮ್ಮದೂ’ ಎಂದು ವಿದ್ಯಾರ್ಥಿಗಳಿಗೆ ಹಾಡುವ ಮೂಲಕ ಮಹಿಳಾ ದಿನಾಚರಣೆಯ ಶುಭ ಕೋರಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಮಾತನಾಡಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 2025ರ “ಸಮಾನತೆಗಾಗಿನ ಪ್ರಯತ್ನವನ್ನು ವೇಗಗೊಳಿಸಿ’’ ಎಂಬ ಧ್ಯೇಯವಾಕ್ಯವನ್ನು ವಿಶ್ವದೆಲ್ಲೆಡೆ ಕಾರ್ಯಗತಗೊಳಿಸುವ ಕೆಲಸವಾಗಬೇಕಿದೆ ಎಂದು ಕರೆ ನೀಡಿದರು. ಪುರುಷರಲ್ಲಿ ಸೌಂದರ್ಯ ಪ್ರಜ್ಞೆಯ ಗುಣವನ್ನು ಬಿತ್ತಿದ ಕೀರ್ತಿ ಮಹಿಳೆಗೆ ಸಲ್ಲುತ್ತದೆ. ಮಹಿಳೆಯು ವಿಭಿನ್ನ ಮತ್ತು ಜವಾಬ್ದಾರಿಯುತ ಪಾತ್ರದ ಮೂಲಕ ಪುರುಷರ ಬದುಕಿನಲ್ಲಿ ಪ್ರಜ್ಞೆ ಮತ್ತು ಶಕ್ತಿಯನ್ನು ಮೂಡಿಸುವಲ್ಲಿ ಕಾರಣಿಕರ್ತೆಯಾಗಿದ್ದಾಳೆ. ಸಮಾಜದಲ್ಲಿ ಹೆಣ್ಣಿಂದು ಅನೇಕ ರೀತಿಯ ಪಾತ್ರಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿಕೊಂಡು ಬರುತ್ತಿದ್ದಾಳೆ. ಪ್ರಸ್ತುತ ಕಾಲಮಾನದಲ್ಲಿ ಮಹಿಳೆ- ನರ್ಸ್, ಆಶಾ ಕಾರ್ಯಕರ್ತೆ, ಅಧ್ಯಾಪನಾ ವೃತ್ತಿ, ಪೊಲೀಸ್, ಪೈಲೆಟ್, ಲೋಕೋ ಪೈಲೆಟ್, ಉದ್ಯಮ ಕ್ಷೇತ್ರ , ಕ್ರೀಡೆ, ರಾಜಕೀಯ, ಸರ್ಕಾರೇತರ ಉದ್ಯೋಗ, ವಕೀಲಿ ವೃತ್ತಿ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ತನ್ನನ್ನು ತಾನು ಪುರುಷನಿಗೆ ಸಮಾನಳಾಗಿ ಸ್ಫರ್ಧೆ ನೀಡುತ್ತಾ ಬಂದಿದ್ದಾಳೆ. ಪುರುಷ ಪ್ರದಾನ ಸಮಾಜದಲ್ಲಿ ಹಿಂದೆ ಸ್ಥಳೀಯ ಜನಪದ ಕಲೆಗಳಾದ ಕಂಬಳ, ಹುಲಿವೇಷ, ಯಕ್ಷಗಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಸ್ಥಾನವಿರಲಿಲ್ಲ. ಆದರೆ, ಇಂದು ಮಹಿಳೆ ಹಂತ ಹಂತವಾಗಿ ಪುರುಷನ ಸಮಾನಕ್ಕೆ ತೆರೆದುಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಬೆಂಗಳೂರಿನ ಎಸ್-ವ್ಯಾಸ ಪರಿಗಣಿತ ವಿಶ್ವವಿದ್ಯಾಲಯದ ಯೋಗ ಮತ್ತು ಮಾನವಿಕ ವಿಭಾಗದ ಡೀನ್, ಪ್ರೊ ಕರುಣಾ ವಿಜಯೇಂದ್ರ ಮಾತನಾಡಿ, ತಾಳ್ಮೆ , ಸಹಜತೆ ಮತ್ತು ಅಭಿವ್ಯಕ್ತಿ ಸ್ವಾತಂತ್ಯವನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕು. ಮಹಿಳೆಯ ಆತ್ಮಶಕ್ತಿಯ ಮುಂದೆ ಎಲ್ಲವೂ ನಗಣ್ಯ. ಛಲದಿಂದ ಸಶಕ್ತರಾಗಿ ನಿಂತು ಆಸಕ್ತ ಕ್ಷೇತ್ರದಲ್ಲಿ ಮುನ್ನಡೆಯಲು ಮಹಿಳೆಯರು ಮುಂಬರಬೇಕು ಎಂದು ಸಲಹೆ ನೀಡಿದರು. ಯುವಜನತೆಯ ವಯೋಸಹಜ ಆಕರ್ಷಣೆಗಳ ಎಲ್ಲೆ ಮೀರದೆ ತಮ್ಮ ನೆಲದ ಸಂಸ್ಕೃತಿಯನ್ನು ಕಾಪಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು. ಮಂಗಳೂರಿನ ಸಂಚಾರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರುಕಿ ಮಾತನಾಡಿ, ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎಂಬ ಸಂಸ್ಕೃತಿಯನ್ನು ಪರಿಪಾಲಿಸುವುದು ಪ್ರಸ್ತುತತೆಗೆ ಹೆಚ್ಚು ಅಗತ್ಯವಿದೆ. ಮಾಡುವ ಎಲ್ಲಾ ಒಳ್ಳೆಯ ಕಾರ್ಯದಲ್ಲಿ ಆತ್ಮ ವಿಶ್ವಾಸ, ಧೈರ್ಯ ಮತ್ತು ಪರಿಶ್ರಮವಹಿಸುವ ಮನಸ್ಥಿತಿ ಇದ್ದಾಗ ಗುರಿಯನ್ನು ಸಾಧಿಸಲು ಸಾಧ್ಯ ಎಂದರು. ಇಂದಿನ ಮಹಿಳಾ ಸಮಾಜಕ್ಕೆ ಹಾಲಕ್ಕಿ ಜನಾಂಗದ ಸುಕ್ರಿ ಬೊಮ್ಮಗೌಡರ ಸರಳ ಜೀವನ ಆದರ್ಶಪ್ರಾಯ. ಪ್ರತಿ ಮಹಿಳೆ ತನ್ನಲ್ಲಿ ಅಡಗಿರುವ ಅಮೋಘ ಶಕ್ತಿಯನ್ನು ಅರಿತುಕೊಳ್ಳಬೇಕು. ದೇಶದ ಮಹಿಳೆ ವಿದ್ಯಾವಂತಳಾದರೆ ಶಿಶು ಮರಣವನ್ನು ಗಣನೀಯವಾಗಿ ತಡೆಯಲು ಸಾಧ್ಯ ಎಂದು ತಿಳಿಸಿದ ಯುನೆಸ್ಕೋ ಸಂಸ್ಥೆ ವರದಿಯನ್ನು ಉಲ್ಲೇಶಿಸಿದರು. ಮಂಗಳೂರಿನ ಸೆಂಟರ್ ಫಾರ್ ಅಡ್ವಾನ್ಸ್ ಲರ್ನಿಂಗ್(ಸಿಎಫ್‌ಎಎಲ್)ನ ಸಂಶೋಧನಾ ನಿರ್ದೇಶಕಿ ಪ್ರೊ. ಸ್ಮಿತಾ ಹೆಗ್ಡೆ ಮಾತನಾಡಿ, 1908ರಲ್ಲಿ ನ್ಯೂಯಾರ್ಕ್ ಪಟ್ಟಣದ ಬೀದಿಬದಿಯಲ್ಲಿ ಮಹಿಳೆಯರು ತಮ್ಮ ವೃತ್ತಿಯಲ್ಲಿ ಸಮಾನತೆಯನ್ನು ಕೋರಿ ಪ್ರತಿಭಟನೆ ಮಾಡುವುದರ ಮೂಲಕ ಮಹಿಳಾ ಚಳುವಳಿಗೆ ನಾಂದಿ ಹಾಡಿದರು. ಮುಂದೆ ವಿಶ್ವಸಂಸ್ಥೆ 1977 ಮಾರ್ಚ್ 8ರಂದು ಮಹಿಳಾ ದಿನಾಚರಣೆಯನ್ನು ಜಗತ್ತಿನಾದ್ಯಂತ ಆಚರಿಸಲು ಅವಕಾಶ ನೀಡಿತು. ಸಾಮಾಜಿಕ ಮತ್ತು ಸಂತಾನೋತ್ಪತ್ತಿ ಹಕ್ಕು ಮಹಿಳೆಗೆ ದೊರೆತ ಅತ್ಯಂತ ದೊಡ್ಡ ಶಕ್ತಿ ಎನ್ನುವುದನ್ನು ಎಲ್ಲರು ಅರಿಯಬೇಕು ಎಂದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈಯುತ್ತಿರುವ ಮೂವರು ಸಾಧಕಿಯರನ್ನು ಮಹಿಳಾ ದಿನಾಚರಣೆಯ ಅಂಗವಾಗಿ ಗೌರವಿಸಲಾಯಿತು. ಮಹಿಳಾ ಉದ್ಯಮಿ ಮತ್ತು ಇವೊಲ್ವ್ ಸಂಸ್ಥೆಯ ಅಧ್ಯಕ್ಷೆ ದಿವ್ಯಾ ಡಿ’ಸೋಜಾ, ರಾಷ್ಟ್ರೀಯ ಚಿಂತಕಿ ಮಾತಾ ಮೀನಾಕ್ಷಿ, ಭತ್ತದ ತಳಿಯನ್ನು ಸಂಗ್ರಹಿಸಿ ಪೋಷಿಸುವ ಸಾಣೂರಿನ ಸಾಧಕಿ ಬಾಲಕಿ ಮರಿಯಂ ಅಫ್ನಾ ಅವರನ್ನು ಗೌರವಿಸಲಾಯಿತು. ಗಿರಿಜಾ ಲೋಕೇಶ್‌ರವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಆಳ್ವ ಫಾರ್ಮಸಿಯ ಆಡಳಿತ ನಿರ್ವಾಹಕಿ ಡಾ ಗ್ರೀಷ್ಮಾ ಆಳ್ವ, ಜಯಶ್ರೀ ಅಮರನಾಥ ಶೆಟ್ಟಿ, ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಹೆಲ್ತ್ ಸೆಂಟರ್‌ನ ಸ್ತ್ರೀರೋಗ ತಜ್ಞೆ ಡಾ| ಹನ ಶೆಟ್ಟಿ ಇದ್ದರು. ಬಂಟ್ಸ್ ಅಸೋಸಿಯೇಶನ್‌ನ ಸದಸ್ಯರು, ಸಂಸ್ಥೆಯ ಹಿತೈಷಿಗಳು, ಸಕ್ಷಮದ ಪದಾಧಿಕಾರಿಗಳು, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ‍್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ಆಳ್ವಾಸ್ ಪ.ಪೂ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕಿ ಡಾ ಸುಧಾರಾಣಿ ನಿರೂಪಿಸಿ, ಸಕ್ಷಮ ವುಮೆನ್ಸ್ ಅಸೋಸಿಯೇಷನ್ ಅಧ್ಯಕ್ಷೆ ಮೂಕಾಂಬಿಕಾ ಸ್ವಾಗತಿಸಿ, ಆಳ್ವಾಸ್ ಪ. ಪೂ ಕಾಲೇಜಿನ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ರುಚಿಕಾ ವಂದಿಸಿದರು. ತದನಂತರ, ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ಸಂಸ್ಥೆಯ ಮಹಿಳಾ ಸಿಬ್ಬಂದಿ, ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಈ ಕರ‍್ಯಕ್ರಮವನ್ನು ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಚರ‍್ಯ ಸದಾಕತ್, ಆಳ್ವಾಸ್ ಸಹಕಾರ ಬ್ಯಾಂಕ್‌ನ ಮುಖ್ಯ ಪ್ರಬಂಧಕಿ ಅರ್ಪಿತಾ ಶೆಟ್ಟಿ ನರವೇರಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡವರಲ್ಲಿ ಒಬ್ಬರನ್ನು “ಲಕ್ಕಿ ಸ್ಟಾರ್” ಎಂದು ಗುರುತಿಸಿ ಈ ವರ್ಷದ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ಪದವಿಪೂರ್ವ ಕಾಲೇಜಿನ ಅಧ್ಯಾಪಕವೃಂದದಿಂದ ಸೆಮಿಕ್ಲಾಸಿಕಲ್ ನೃತ್ಯ ಪ್ರದರ್ಶನಗೊಂಡಿತು. ನಂತರ ಝುಂಬಾ ಟ್ರೈನರ್ ನಿತೇಶ್ ಕುಲಾಲ್‌ರಿಂದ ನಡೆದ ಝುಂಬಾ ಡ್ಯಾನ್ಸ್ ಸಭಿಕರನ್ನು ಸಂಗೀತಕ್ಕೆ ಅನುಗುಣವಾಗಿ ನೃತ್ಯ ಮಾಡಲು ಹುರಿದುಂಬಿಸಿತು. ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ ನಮೃತಾ ಕುಲಾಲ್ ನಡೆಸಿಕೊಟ್ಟರು. ಆರಂಭದಲ್ಲಿ ಅತಿಥಿಗಳನ್ನು ಸಾಂಸ್ಕೃತಿಕ ಕಲಾತಂಡಗಳು, ಸಾಧಕಿಯರ ವೇಷಭೂಷಣಧಾರಿ ಮಕ್ಕಳು ಸೇರಿದಂತೆ ವಿಜೃಂಭಣೆಯಿಂದ ವೇದಿಕೆಗೆ ಕರೆದುಕೊಂಡು ಬರಲಾಯಿತು.

ಸತ್ತೂರು,ಧಾರವಾಡ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

Article Image

ಸತ್ತೂರು,ಧಾರವಾಡ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯವು ಮಾರ್ಚ್ 08ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು, ಇದು ವಿವಿಧ ವಿಭಾಗಗಳಲ್ಲಿ ಮಹಿಳೆಯರ ಸಾಧನೆಗಳನ್ನು ಗೌರವಿಸಲು ಮತ್ತು ಜಾಗತಿಕವಾಗಿ ಲಿಂಗ ಸಮಾನತೆಯನ್ನು ಮುನ್ನಡೆಸಲು ಉದ್ದೇಶಿಸಲಾಗಿದೆ. ತಾಯಂದಿರು, ಸಹೋದರಿಯರು, ಪತ್ನಿಯರು, ಸಹೋದ್ಯೋಗಿಗಳು ಮತ್ತು ಸ್ನೇಹಿತರಾಗಿ ಮಹಿಳೆಯರು ವಹಿಸುವ ಅಮೂಲ್ಯ ಪಾತ್ರಗಳನ್ನು ಶ್ಲಾಘಿಸುವ ದಿನವೂ ಆಗಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಅವರು ಮುಖ್ಯ ಅತಿಥಿಯಾಗಿದ್ದರು ಮತ್ತು ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಗೌರವ ಅತಿಥಿಯಾಗಿದ್ದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಮಾನಸಿಕ ಆರೋಗ್ಯ, ಮಹಿಳೆಯರಿಗೆ ಪೋಷಣೆ ಮತ್ತು ಮಹಿಳೆಯರಿಗೆ ಸದೃಢತೆ ಎಂಬ ವಿಷಯಗಳ ಕುರಿತು ವಿಶೇಷ ಉಪನ್ಯಾಸಗಳನ್ನು ಆಯೋಜಿಸಲಾಗಿತ್ತು. ಮಹಿಳೆಯರಿಗಾಗಿ ರಸಪ್ರಶ್ನೆ ಸ್ಪರ್ಧೆ, ಕಿರು ನಾಟಕ ಮತ್ತು ಮೋಜಿನ ಆಟಗಳನ್ನು ನಡೆಸಲಾಯಿತು. ಸಮಾರಂಭದಲ್ಲಿ ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಜೀವರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಮತ್ತು ಹಿರಿಯ ಶಿಕ್ಷಕಿಯವರಾದ ಡಾ. ವಿದ್ಯಾ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು. ಡಾ. ಶುಭ ಅಕಾದಾಸ್ ಅತಿಥಿಗಳನ್ನು ಸ್ವಾಗತಿಸಿ ಮತ್ತು ಡಾ. ವಿದ್ಯಾ ಪಾಟೀಲ್ ಅವರನ್ನು ಪರಿಚಯಿಸಿದರು. ಡಾ. ಸಂಗೀತಾ ಅಪ್ಪನ್ನವರ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಶ್ವೇತಾ ಕುಲಕರ್ಣಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸಂಯೋಜಿಸಿದರು. ಡಾ. ಜ್ಯೋತಿ ಜೀವಣ್ಣನವರ ವಂದನಾರ್ಪಣೆ ಸಲ್ಲಿಸಿದರು.

ದೂರ ಶಿಕ್ಷಣ: ಆಳ್ವಾಸ್‌ನಲ್ಲಿ ಅವಕಾಶ

Article Image

ದೂರ ಶಿಕ್ಷಣ: ಆಳ್ವಾಸ್‌ನಲ್ಲಿ ಅವಕಾಶ

ವಿದ್ಯಾಗಿರಿ: ಆಳ್ವಾಸ್ ಪದವಿ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಹಯೋಗದ ‘ಆಳ್ವಾಸ್‌ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ವು 2024- 2025ರ ಜನವರಿ ಆವೃತ್ತಿಯ ಪ್ರಥಮ ವರ್ಷದ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಈ ಕೇಂದ್ರದ ಮೂಲಕ ವಿದ್ಯಾರ್ಥಿಗಳು ಸ್ನಾತಕ (ಯುಜಿ)ದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್.ಸಿ, ಬಿ.ಬಿ.ಎ, ಬಿ.ಎಸ್.ಡಬ್ಲೂ, ಬಿ.ಎಸ್ಸಿ (ಸಂಯೋಜನೆಗಳು), ಬಿ.ಎಸ್‌ಸಿ ಹೋಮ್ – ಇನ್ಫಾರ್ಮೇಷನ್ ಟೆಕ್ನಾಲಜಿ, ಬಿ.ಸಿ.ಎ (ಬ್ಯಾಚುರಲ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್) ಪದವಿಗಳನ್ನು ಮಾಡಬಹುದಾಗಿದೆ. ಸ್ನಾತಕೋತ್ತರ ವಿಭಾಗದಲ್ಲಿ ಎಂ.ಎ- ಶಿಕ್ಷಣ, ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ಇತಿಹಾಸ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಉರ್ದು, ಸಂಸ್ಕೃತ, ಸಮಾಜಶಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಎಂ.ಎಸ್.ಡಬ್ಲೂ, ಎಂ.ಬಿ.ಎ-ಆನ್‌ಲೈನ್ ಪ್ರವೇಶ ಪರೀಕ್ಷೆ ಮೂಲಕ (ಫೈನಾನ್ಸ್, ಮಾರ್ಕೆಟಿಂಗ್, ಎಚ್.ಆರ್. ಆಪರೇಷನ್. ಟೂರಿಸಂ ಕಾಪ್ರೊರೇಟ್ ಲಾ, ಇನ್‌ಫರ್ಮನೇಷನ್ ಟೆಕ್ನಾಲಜಿ, ಆಸ್ಪತ್ರೆ ಮತ್ತು ಆರೋಗ್ಯ ಕಾಳಜಿ ನಿರ್ವಹಣೆ.), ಎಂ.ಕಾಂ ಡ್ಯುಯೆಲ್ ಸ್ಪೆಷಲೈಜೇಷನ್ (ಅಕೌಂಟಿಂಗ್ ಮತ್ತು ಫೈನಾನ್ಸ್ / ಎಚ್‌ಆರ್‌ಎಂ ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್ ಮತ್ತು ಎಚ್‌ಆರ್‌ಎಂ / ಫೈನಾನ್ಸ್), ಎಂ.ಸಿ.ಎ, ಎಂ.ಲಿಬ್.ಐ.ಎಸ್‌ಸಿ, ಎಂ.ಎಸ್‌ಸಿ (ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ, ಬಯೋಕೆಮಿಸ್ಟ್ರಿ, ಬಯೋಟೆಕ್ನಾಲಜಿ, ಕ್ಲಿನಿಕಲ್ ನ್ಯೂಟ್ರಿಷನ್ ಮತ್ತು ಡಯಟಿಷಿಯನ್, ಪರಿಸರ ವಿಜ್ಞಾನ, ಭೂಗೋಳಶಾಸ್ತ್ರ, ಮೈಕ್ರೋಬಯಾಲಜಿ ಮನಃಶಾಸ್ತ್ರ, ಸಸ್ಯಶಾಸ್ತ್ರ ಪ್ರಾಣಿಶಾಸ್ತ್ರ, ಫುಡ್‌ ಮತ್ತು ನ್ಯೂಟ್ರಿಷನ್ ಸೈನ್ಸ್ ಮಾಹಿತಿ ತಂತ್ರಜ್ಞಾನ ಡಾಟಸೈನ್, ಕಂಪ್ಯೂಟರ್‌ಸೈನ್ಸ್). ಪಿಜಿ ಸರ್ಟಿಫಿಕೇಟ್‌ ಕಾರ್ಯಕ್ರಮಗಳು- ಇಂಗ್ಲಿಷ್, ಕಮ್ಯುನಿಕೇಶನ್, ಇಂಗ್ಲಿಷ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಕುವೆಂಪು ಸಾಹಿತ್ಯ, ಹಣಕಾಸು ನಿರ್ವಹಣೆ ಮಾನವ ಸಂಪನ್ಮೂಲ ನಿರ್ವಹಣೆ, ಬಿಸಿನೆಸ್ ಲಾ, ಬಿಸಿನೆಸ್ ಅಡ್ಮಿನಿಸ್ಟ್ರೆಷನ್ ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್, ಅಂಬೇಡ್ಕರ್ ಅಧ್ಯಯನಗಳನ್ನು ಅಭ್ಯಸಿಸಬಹುದಾಗಿದೆ. ಡಿಪ್ಲೋಮ ಶಿಕ್ಷಣ ಕಾರ್ಯಕ್ರಮಗಳಾದ ಕನ್ನಡ, ಪತ್ರಿಕೋದ್ಯಮ, ನ್ಯೂಟ್ರಿಷನ್ ಮತ್ತು ಹೆಲ್ತ್ಎಜುಕೇಷನ್, ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ‌ ಅಪ್ಲಿಕೇಷನ್, ಅರ್ಲಿ ಚೈಲ್ಡ್ಹುಡ್‌ಕೇರ್ ಎಜುಕೇಷನ್‌ ಹಾಗೂ ಸರ್ಟಿಫಿಕೇಟ್ ಶಿಕ್ಷಣ ಕಾರ್ಯಕ್ರಮಗಳಾದ(ಆರು ತಿಂಗಳು)- ಪಂಚಾಯತ್‌ರಾಜ್, ನ್ಯೂಟ್ರಿಷನ್ ಮತ್ತು ಫುಡ್, ಮಾಹಿತಿ ಸಂವಹನ ತಂತ್ರಜ್ಞಾನದ (ಐಸಿಟಿ) ಕೋರ್ಸಗಳನ್ನು ಮಾಡಬಹುದಾಗಿದೆ. ಈ ಮೇಲಿನ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮಾಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ +917090715010, 9591546202 ಸಂಪರ್ಕಿಸಬಹುದು. ಇಲ್ಲವೇ, ಇಮೇಲ್:administration@alvas.org ಮೂಲಕವೂ ಮಾಹಿತಿ ಪಡೆದುಕೊಳ್ಳಬಹುದು. ಆಳ್ವಾಸ್‌ನಲ್ಲಿ ಪರೀಕ್ಷಾ ಕೇಂದ್ರವನ್ನೂ ಹೊಂದಿರುವ ಕಾರಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುವ ಜೊತೆಯಲ್ಲಿ ಈ ಶೈಕ್ಷಣಿಕ ಸಾಲಿನಿಂದ ಪ್ರವೇಶಾತಿ ಪಡೆಯುವ ವಿಜ್ಞಾನ ವಿಷಯದ ಅಭ್ಯರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಔದ್ಯೋಗಿಕ ನೆಲೆಯಲ್ಲಿ ಸ್ನಾತಕೋತ್ತರ, ಪದವಿ, ಒಂದು ವರ್ಷದ ಡಿಪ್ಲೊಮಾ ಹಾಗೂ ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಗಳನ್ನು ವಿವಿಧ ವಿಷಯಗಳಲ್ಲಿ ಮಾಡಲು ಅವಕಾಶವಿದ್ದು, ಉದ್ಯೋಗ ಮಾಡಿಕೊಂಡು ಕೋರ್ಸ್ ಮಾಡಲು ಸುವರ್ಣಾವಕಾಶ ದೊರೆತಿದೆ.

ಕಬಡ್ಡಿ ಪಂದ್ಯಾವಳಿಗೆ ಚಾಲನೆ

Article Image

ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಉಜಿರೆ ಮಾರ್ಚ್ 7: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯನ್ನು ವ್ಯಕ್ತಿಗತ ದಿನಚರಿಯ ಭಾಗವಾಗಿಸಿಕೊಂಡರೆ ಮಾನಸಿಕ ಸೌಕರ್ಯ, ಬೌದ್ಧಿಕ ಬೆಳವಣಿಗೆ ಮತ್ತು ಭಾವನಾತ್ಮಕ ಸಮತೋಲನದ ಪ್ರಜ್ಞೆಯೊಂದಿಗೆ ವ್ಯಕ್ತಿತ್ವವನ್ನು ಸಮಗ್ರಗೊಳಿಸಿಕೊಳ್ಳಬಹುದು ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಆಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾಲಯ ಮತ್ತು ಉಜಿರೆಯ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಂಗಳೂರು ವಿಶ್ವವಿದ್ಯಾಲಯದ ಅಂತರ್‌ಕಾಲೇಜು ಪುರುಷ ಕಬ್ಬಡ್ಡಿ ಪಂದ್ಯಾವಳಿಯನ್ನು ಇಂದ್ರಪ್ರಸ್ಥ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿಯ ದಿನಚರಿಯಲ್ಲಿ ಕ್ರೀಡೆಯನ್ನು ಅಳವಡಿಸಿಕೊಂಡಾಗ ವ್ಯಕ್ತಿತ್ವ ವಿಕಸನವಾಗುತ್ತದೆ. ಮಾನಸಿಕವಾಗಿ ಬೌದ್ಧಿಕವಾಗಿ ಭಾವನಾತ್ಮಕವಾಗಿ ಒಬ್ಬ ವ್ಯಕ್ತಿ ಬೆಳವಣಿಗೆಗೆ ಕ್ರೀಡೆ ಬಹಳ ಮುಖ್ಯ. ಅದರ ಜೊತೆಗೆ ಕ್ರೀಡಾಸ್ಪೂರ್ತಿಯು ಅವಶ್ಯಕ. ವಿದ್ಯಾರ್ಥಿಗಳು ಕೇವಲ ಭೌದ್ಧಿಕ ಚಟುವಟಿಕೆಯಲ್ಲದೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು. ದೇಶದ ಅನೇಕ ಕಡೆ ನಡೆದ ಕ್ರೀಡಾಕೂಟಗಳಲ್ಲಿ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆಗೈದಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈಯ್ಯುವುದಕ್ಕೆ ಪೂರಕವಾದ ಸ್ಫೂರ್ತಿದಾಯಕ ವಾತಾವರಣ ಎಸ್.ಡಿ.ಎಂ ಕಾಲೇಜಿನಿಂದ ದೊರಕುತ್ತಿದೆ. ವಿದ್ಯಾರ್ಥಿಗಳು ಅಂಕ ಗಳಿಕೆಯ ಜೊತೆ ಜೊತೆಗೆ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಆಗ ವ್ಯಕ್ತಿತ್ವದ ಸಮಗ್ರ ಬೆಳವಣಿಗೆ ಸಾಧ್ಯ ಎಂದರು. ಕಬ್ಬಡ್ಡಿ ಒಂದು ಚುರುಕಿನ ಆಟ. ಇಂತಹ ಆಟಗಳು ವ್ಯಕ್ತಿಯನ್ನು ಆರೋಗ್ಯಕರ ,ಸಮೃದ್ಧ ಹಾಗೂ ಕ್ರೀಯಾಶೀಲರನ್ನಾಗಿಸುತ್ತವೆ. ಸೋಲು ಮತ್ತು ಗೆಲುವುಗಳನ್ನು ಸಮವಾಗಿ ಸ್ವೀಕರಿಸುವ ಮನೋಭಾವನೆಯನ್ನು ಬೆಳೆಸುವಲ್ಲಿ ಇಂತಹ ಕ್ರೀಡೆಗಳ ಪಾತ್ರ ಅಪಾರ ಎಂದರು. ಕಾರ್ಯಕ್ರಮದ ಅಧ್ಯಕ್ಷ್ಯತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ ಅವರು ಮಾತನಾಡಿದರು. ಕಬ್ಬಡ್ಡಿಯಂತಹ ತಂಡಸ್ಫೂರ್ತಿಯ ಆಟಗಳು ಒಬ್ಬ ಆಟಗಾರನಲ್ಲಿ ತಂಡದ ನಿರ್ವಹಣೆ, ನಾಯಕತ್ವದ ಗುಣ ಹಾಗೂ ಸಂವಹನ ಕಲೆಯನ್ನು ಅಭಿವೃದ್ಧಿಗೊಳಿಸುತ್ತವೆ ಎಂದರು. ಇತ್ತೀಚಿನ ದಿನಗಳಲ್ಲಿ ಕ್ರೀಡೆಯಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ಪಾಲ್ಗೊಳ್ಳಲು ಇಂತಹ ಕ್ರೀಡಾಕೂಟಗಳು ಪ್ರೋತ್ಸಾಹಿಸುತ್ತವೆ. ಎಸ್. ಡಿ. ಎಂ ಶಿಕ್ಷಣ ಸಂಸ್ಥೆಯು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸಮಾನ ಅವಕಾಶವನ್ನು ಪ್ರಾರಂಭದಿಂದಲೂ ನೀಡುತ್ತಾ ಬಂದಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೆಶಕರಾದ ರಮೇಶ್ ಎಚ್, ಶಾರದಾ, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಅವರು ಉಪಸ್ಥಿತರಿದ್ದರು. ಅಧ್ಯಾಪಕ ಡಾ.ಸುವೀರ್ ಜೈನ್ ನಿರೂಪಿಸಿದರು.

ಸಾಧಕರ ಸನ್ಮಾನ

Article Image

ಸಾಧಕರ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ಆಶ್ರಯದಲ್ಲಿ ಪ್ರೊ. ಗಣಪತಿ ಕುಳಮರ್ವ, ಬೆಳಾಲು ಎಸ್.ಡಿ.ಎಂ. ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್, ಚೊಕ್ಕಾಡಿ ಮತ್ತು ದಾಸಪ್ಪ ಗೌಡ ಕೊಲ್ಲಿ ಇವರ ಸೇವೆ-ಸಾಧನೆಯನ್ನು ಮನ್ನಿಸಿ ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ನಡೆದ ಸಂಘದ ಮಾಸಿಕ ಸಭೆಯಲ್ಲಿ ಗೌರವಿಸಲಾಯಿತು. ಹಿರಿಯರನ್ನು ಗೌರವಿಸಿ ಸನ್ಮಾನಿಸಿದ ಪ್ರಜಾವಾಣಿ ಪತ್ರಿಕೆಯ ವರದಿಗಾರ ಆರ್.ಎನ್. ಪೂವಣಿ ಮಾತನಾಡಿ, ಮೂರು ಮಂದಿ ಹಿರಿಯ ಸಾಧಕರ ಸೇವೆ, ಸಾಧನೆ ಕಿರಿಯರಿಗೆ ಪ್ರೇರಕ ಶಕ್ತಿಯಾಗಿ ಸ್ಪೂರ್ತಿಯಾಗಿದೆ. ಅವರ ದಕ್ಷ ಸೇವೆಗೆ ಅಭಿನಂದಿಸಿ ಶುಭ ಹಾರೈಸಿದರು. ಸಂಘದ ಕಟ್ಟಡ ನಿರ್ಮಾಣಕ್ಕೆ ಒಂದು ಲಕ್ಷ ರೂ. ಗೂ ಅಧಿಕ ದೇಣಿಗೆ ನೀಡಿದ ನಿವೃತ್ತ ಮುಖ್ಯೋಪಾಧ್ಯಾಯ ಬಿ. ಸೋಮಶೇಖರ ಶೆಟ್ಟಿ ಇವರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷರಾದ ಬಿ. ವಿಠಲ ಶೆಟ್ಟಿ ಅವರ ದಕ್ಷ ನೇತೃತ್ವದಲ್ಲಿ ಸರ್ವ ಸದಸ್ಯರ ಸಕ್ರಿಯ ಸಹಕಾರದೊಂದಿಗೆ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲೆಂದು ಪೂವಣಿ ಅವರು ಶುಭ ಹಾರೈಸಿದರು. ಸಂಘದ ಅಧ್ಯಕ್ಷರಾದ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಇತೀಚೆಗೆ ನಿಧನರಾದ ನಿವೃತ್ತ ಮುಖ್ಯೋಪಾಧ್ಯಾಯ ಕಾಶ್ಮೀರ್ ಮಿನೇಜಸ್ ಅವರ ಬಗ್ಗೆ ತೆರೆಸಾ ಲೋಬೊ ನುಡಿನಮನ ಸಲ್ಲಿಸಿ, ಬಳಿಕ ಮಿನೆಜಸ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯದರ್ಶಿ ವಿಶ್ವಾಸ ರಾವ್ ಗತ ಸಭೆಯ ವರದಿ ಸಾದರಪಡಿಸಿದರು. ವಸಂತ ಸುವರ್ಣ ಧನ್ಯವಾದವಿತ್ತರು.

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ ಪ್ರವೇಶ ಪರೀಕ್ಷೆ

Article Image

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ ಪ್ರವೇಶ ಪರೀಕ್ಷೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2025-26ನೇ ಸಾಲಿನ, 6 ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆ ವಿದ್ಯಾಗಿರಿ ಹಾಗೂ ಪುತ್ತಿಗೆ ಆವರಣದಲ್ಲಿ ಭಾನುವಾರ ನಡೆಯಿತು. ರಾಜ್ಯಾದ್ಯಾಂತ 32 ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ಗಡಿಭಾಗದ ಜಿಲ್ಲೆಯಾದ ಕಾಸರಗೋಡು ಹಾಗೂ ಮಹಾರಾಷ್ಟ್ರದ ಗಡಿಜಿಲ್ಲೆಗಳಿಂದ 20134 ವಿದ್ಯಾರ್ಥಿಗಳು ಅನ್‌ಲೈನ್ ಮೂಲಕ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ್ದು, ಅವುಗಳಲ್ಲಿ 18634 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಂತರ ಮಾತನಾಡಿದ ಅವರು ಈ ಕನ್ನಡನಾಡಿನಲ್ಲಿ ಜನ್ಮತಾಳಿ, ಬದುಕನ್ನ ನಡೆಸಿ, ಸಂಪಾದನೆಯನ್ನು ಗಳಿಸಿದ ನಮಗೆ ಈ ಕನ್ನಡ ನಾಡಿನ ಋಣ ಎಷ್ಟಿದೆ ಎಂಬುದನ್ನು ನಾವೆಲ್ಲ ಅರಿಯಬೇಕಿದೆ. ನಮ್ಮೆಲ್ಲರ ಕನ್ನಡದ ಬಗೆಗಿನ ಪ್ರೀತಿ ವೇದಿಕೆಯಲ್ಲಿ ಭಾಷಣ ಮಾಡಲು ಮಾತ್ರ ಸೀಮಿತವಾಗಿದೆ. ರಾಜಕಾರಣಿಗಳು ಅಥವಾ ಕನ್ನಡದ ಸಂಘ ಸಂಸ್ಥೆಗಳು ಕನ್ನಡಕ್ಕೆ ಕಿಂಚಿತ್ತು ಸಮಸ್ಯೆಯಾದರೂ ಗಂಭೀರವಾಗಿ ಮಾತನಾಡಲು, ಹೋರಾಟ ಮಾಡಲು ಮುಂದೆ ಬಂದರೂ, ಕನ್ನಡ ಮಾಧ್ಯಮ ಶಾಲೆಗಳ ಸ್ಥಿತಿಗತಿಯನ್ನು ಸುಧಾರಿಸಲು ಅವರ ಕೂಡುಗೆ ಸಾಲದು. ಕನ್ನಡ ಮಾಧ್ಯಮ ಶಾಲೆ ಗಟ್ಟಿಗೊಳಿಸದೆ ವಿನಃ ಕನ್ನಡ ಭಾಷೆಗೆ ಭವಿಷ್ಯವಿದೆ ಎಂದು ಹೇಳಲು ತಾನು ಸಿದ್ದನಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಜನರು ಮಾತನಾಡುವ ಭಾಷೆಯಾಗಿ ಸ್ವಲ್ಪ ಸಮಯ ಉಳಿಯಬಹುದೇ ಹೊರತು, ಕನ್ನಡದ ಸಾಹಿತ್ಯ, ಅದರ ಸಾಂಸ್ಕೃತಿಕ ವಿಚಾರವನ್ನು ಸೂರ್ಯ ಚಂದ್ರರಿರುವಷ್ಟು ಕಾಲ ಮುಂದೆ ಕೊಂಡುಹೋಗಲು ಸಾಧ್ಯವಿಲ್ಲ. ಈ ಶಕ್ತಿ ಕನ್ನಡ ಮಾಧ್ಯಮ ಶಾಲೆಗಳಿಂದ ಮಾತ್ರ ಸಾಧ್ಯ. ಸರಕಾರದ 1800 ಪ್ರಾಥಮಿಕ ಶಾಲೆಗಳು ಈ ವರ್ಷ ಮುಚ್ಚಲ್ಪಟ್ಟಿವೆ. 1200ಗಳಷ್ಟು ಶಾಲೆಗಳಲ್ಲಿ ಏಳು ಕ್ಲಾಸುಗಳಿಗೆ ಒಬ್ಬ ಉಪಾಧ್ಯಯರಿರುವುದು ಶೋಷನೀಯ. ನಮ್ಮ ರಾಜ್ಯದಲ್ಲಿ 2000ನೇ ಇಸವಿಯ ತನಕ ಹತ್ತು ಹಲವು ವಸತಿ ಶಾಲೆಗಳು ಅಂಬೇಡ್ಕರ್ ಶಾಲೆಗಳು, ಮೋರಾರ್ಜಿ ದೇಸಾಯಿ ಶಾಲೆಗಳು, ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗಳು, ನಾರಾಯಣ ಗುರುವಿನ ಶಾಲೆಗಳು, ಅಬ್ದುಲ್ ಕಲಾಂ ಶಾಲೆಗಳು, ಅಟಲ್ ಬಿಹಾರಿ ವಾಜಪೇಯಿ ಶಾಲೆಗಳು ಕನ್ನಡ ಮಾಧ್ಯಮದಲ್ಲಿ ಉತ್ತಮ ಶಿಕ್ಷಣವನ್ನು ನೀಡುತ್ತಿದ್ದವು. 3ತದನಂತರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ಸುಮಾರು 840 ವಸತಿ ಶಾಲೆಗಳನ್ನು ನಿರ್ಮಿಸಿದವು. ಒಂದು ವಸತಿ ಶಾಲೆಯನ್ನು ನಿರ್ಮಿಸಲು ಕನಿಷ್ಠ 10 ಎಕರೆಯಷ್ಟು ಜಾಗ, 24.5 ಕೋಟಿಯಷ್ಟು ಹಣ, ಒಬ್ಬ ವಿದ್ಯಾರ್ಥಿಯ ಶಿಕ್ಷಣಕ್ಕೆ ಸರಿಸುಮಾರು 2 ಲಕ್ಷದಷ್ಟು ಹಣವನ್ನು ವ್ಯಯಿಸುತ್ತಿದೆ. ಒಟ್ಟು 840 ವಸತಿ ಶಾಲೆಗಳ ಮೇಲೆ ಸರಕಾರ ವಾರ್ಷಿಕವಾಗಿ 36 ಸಾವಿರ ಕೋಟಿ ರೂಪಾಯಿಗಳ ಬಜೆಟ್‌ನ್ನು ಮೀಸಲಿಟ್ಟಿದೆ. ಆದರೆ ಈ ಎಲ್ಲಾ 840 ವಸತಿ ಶಾಲೆಗಳ ಪೈಕಿ ಚಾಮರಾಜಪೇಟೆಯ ಒಂದು ಶಾಲೆಯನ್ನು ಹೊರತುಪಡಿಸಿ ಉಳಿದೆಲ್ಲಾ ಶಾಲೆಗಳು ಇಂಗ್ಲೀಷ್ ಮಾಧ್ಯಮ ಶಾಲೆಗಳಾಗಿ ಬದಲಾಗಿರುವುದು ಮಾತ್ರ ದುರಂತವೇ ಸರಿ. ನಾವಿಂದು ಬಡಮಕ್ಕಳಿಗೆ ಕನ್ನಡ ಮಾಧ್ಯಮ, ಸ್ಥಿತಿವಂತರಿಗೆ ಇಂಗ್ಲೀಷ್ ಮಾಧ್ಯಮ ಎಂಬ ಮನಸ್ಥಿತಿಗೆ ಬಂದಿದ್ದೇವೆ. ಇದು ಸಲ್ಲದು. ಬುದ್ದಿವಂತಿಕೆಗೆ ಬಾಷೆಯ ತೊಡಕಿಲ್ಲ ಎಂಬುದನ್ನು ಜರ್ಮನಿ, ಜಪಾನ್, ಚೀನಾ, ರಷ್ಯಾ ದೇಶಗಳು ಸಾಬೀತುಪಡಿಸಿವೆ. ಇನ್ನೂ ಮುಂದಾದರೂ ಜಿಲ್ಲೆಗೊಂದರಂತೆ ಮಾದರಿ ಕನ್ನಡ ಮಾಧ್ಯಮ ಶಾಲೆಯನ್ನು ತೆರೆಯಲು ಸರಕಾರ ಮುಂದಾಗಬೇಕು. ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯನ್ನು 15 ವರ್ಷಗಳ ಹಿಂದೆ ಪ್ರಾರಂಭಿಸಿ ಸದ್ಯ 640 ವಿದ್ಯಾರ್ಥಿಗಳು ಸಂಪೂರ್ಣ ಉಚಿತ ಶಿಕ್ಷಣದಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಈ ಶಾಲೆಗಾಗಿ ನಮ್ಮ ಪ್ರತಿಷ್ಠಾನ ಪ್ರತಿ ವಿದ್ಯಾರ್ಥಿಯ ಮೇಲೆ 1.30 ಲಕ್ಷದಂತೆ ಸುಮಾರು 8ಕೋಟಿಯಷ್ಟು ಹಣವನ್ನು ವಿನಿಯೋಗಿಸುತ್ತಿದೆ. ಸರಕಾರ, ಇಲಾಖೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯನ್ನು ಮಾದರಿಯಾಗಿ ಪರಿಗಣಿಸಿ, ಇದೇ ರೀತಿಯ ಗುಣಾತ್ಮಕ ಶಿಕ್ಷಣವನ್ನು ನೀಡಿದರೆ ಕನ್ನಡ ಮಾಧ್ಯಮ ಶಾಲೆಗಳಿಗೆ ಎಂದು ಸೋಲಾಗದು. ನಮ್ಮ ರಾಜ್ಯದಲ್ಲಿರುವ ಹತ್ತು ಹಲವು ಶ್ರೀಮಂತ ಸಂಸ್ಥೆಗಳು, ಖಾಸಗಿ ಕಂಪೆನಿಗಳು, ಕಾರ್ಪೋರೇಟ್ ಸಂಸ್ಥೆಗಳು ಆಳ್ವಾಸ್ ಮಾದರಿಯ ಕನ್ನಡ ಮಾಧ್ಯಮ ಶಾಲೆಗಳನ್ನು ನಿರ್ಮಿಸಲು ಮುಂದೆ ಬರಬೇಕು. ತಮ್ಮ ಸಿಎಸ್‌ಆರ್ ಫಂಡ್‌ನ್ನು ಈ ನೆಲೆಯಲ್ಲಿ ವಿನಿಯೋಗಿಸಲು ಮನಸ್ಸು ಮಾಡಬೇಕು. ಈ ಸಂಸ್ಥೆಗಳು ತಮ್ಮ ಸಿಎಸ್‌ಆರ್ ಫಂಡ್‌ನ್ನು ಕನ್ನಡ ಮಾಧ್ಯಮ ಶಾಲೆಗಳನ್ನು ನಿರ್ಮಿಸಲು ಅಥವಾ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಅಭಿವೃದ್ಧಿಗೆ ಬಳಸಲು ಮುಂದೆ ಬಂದರೆ ತಾನೇ ಖುದ್ದಾಗಿ ಜವಾಬ್ದಾರಿಯನ್ನು ವಹಿಸಿಕೊಂಡು ಮಕ್ಕಳಿಗೆ ಈ ಕಾಲಕ್ಕುನುಗುಣವಾದ ಶಿಕ್ಷಣವನ್ನು ನೀಡಲು ಸಿದ್ದ. ಯಾರೇ ಒಬ್ಬ ವ್ಯಕ್ತಿ, ಸಂಘ ಸಂಸ್ಥೆ ಅಥವಾ ಸರಕಾರವಿರಬಹುದು ತನಗೆ ಇಂತಹ ಅವಕಾಶವನ್ನು ನೀಡಿ, ವಿಶ್ವಾಸಕ್ಕೆ ತೆಗೆದುಕೊಂಡರೆ, ಅವರ ಹೆಸರಿನಲ್ಲಿ ತನ್ನ ಕ್ಯಾಂಪಸನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ತಾನು ಉತ್ಸುಕನಾಗಿದ್ದೆನೆ. ಸರಕಾರವು ಬಯಸಿದಲ್ಲಿ ಆಳ್ವಾಸ್ ಕ್ಯಾಂಪಸ್‌ನಲ್ಲೆ ಒಂದು ಮಾದರಿ ಕನ್ನಡ ಮಾಧ್ಯಮ ಶಾಲೆಯನ್ನು ತೆರೆಯಲು ಮುಂದೆ ಬಂದರೆ, ಈ ವರ್ಷದಲ್ಲೆ ಅಂತಹ ಶಾಲೆಯನ್ನು ಪ್ರಾರಂಭಿಸಲು ಸಿದ್ಧ ಎಂದರು. 35ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆಗಮಿಸಿದ್ದರೂ ಬಹಳ ಅಚ್ಚುಕಟ್ಟಿನ ವ್ಯವಸ್ಥೆಯೊಂದಿಗೆ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಆಳ್ವಾಸ್ ಸಂಸ್ಥೆಯ ವತಿಯಿಂದ ವ್ಯವಸ್ಥಿತ ಶೌಚಾಲಯದೊಂದಿಗೆ ಉಚಿತ ತಂಗುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಸದ್ಯ ಇಡೀ ಕನ್ನಡ ಮಾಧ್ಯಮ ಶಾಲೆಯಲ್ಲಿ 6ರಿಂದ 9ನೇ ತರಗತಿಯವರೆಗೆ 640ಕ್ಕೂ ಅಧಿಕ ಮಕ್ಕಳಿದ್ದು, ಉಚಿತ ಊಟ, ವಸತಿ ವ್ಯವಸ್ಥೆಯಲ್ಲಿ ವಿಧ್ಯಾಭ್ಯಾಸ ಪಡೆಯುತ್ತಿದ್ದಾರೆ. ವಾರ್ಷಿಕ ಈ ವಿದ್ಯಾರ್ಥಿಗಳ ಮೇಲೆ ಸಂಸ್ಥೆ ಸುಮಾರು 8 ಕೋಟಿಯಷ್ಟು ಹಣವನ್ನು ವ್ಯಯಿಸುತ್ತಿದೆ. 6 ರಿಂದ 9ನೇ ತರಗತಿಯವರೆಗಿನ ಪಠ್ಯ ವಿಷಯಗಳು ಮತ್ತು ತಾರ್ಕಿಕ ಸಾಮರ್ಥ್ಯ ಸೇರಿ ಒಟ್ಟು 2 ಗಂಟೆ 30 ನಿಮಿಷದಂತೆ 150 ಅಂಕಗಳಿಗೆ ಪರೀಕ್ಷೆ ನಡೆದಿದೆ. ಈಗಾಗಲೇ ಕ್ರೀಡಾ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಗಾಗಿ ಪತ್ರಿಕಾ ಪ್ರಕಟಣೆ ನೀಡಿದ್ದು, ಕ್ರೀಡಾ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿಶೇಷ ಆದ್ಯತೆಯನ್ನು ನೀಡಿ ಪ್ರತ್ಯೇಕ ಆಯ್ಕೆ ಶಿಬಿರಗಳನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ.

ಮುಳಿಯ ಜ್ಯುವೆಲ್ಸ್‌ ನಲ್ಲಿ ಡೈಮಾಂಡ್ ಫೆಸ್ಟ್ ಗೆ ಚಾಲನೆ

Article Image

ಮುಳಿಯ ಜ್ಯುವೆಲ್ಸ್‌ ನಲ್ಲಿ ಡೈಮಾಂಡ್ ಫೆಸ್ಟ್ ಗೆ ಚಾಲನೆ

ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಾಗಿ ಬರುತ್ತಿದ್ದ ನಾನು ಇಂದು ಅತಿಥಿಯಾಗಿರುವುದು ಸಂತಸ ತಂದಿದೆ. ಆಭರಣ ಖರೀದಿಗೆಂದು ಚಿಂತಿಸಿದಾಗ ಮನದಲ್ಲಿ ಬರುವುದು ಮುಳಿಯ ಸಂಸ್ಥೆ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮಾನಸದಲ್ಲಿ ನಲ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ ನಲ್ಲಿ 3ರಂದು ನಡೆದ ಡೈಮಾಂಡ್ ಫೆಸ್ಟ್ ಚಾಲನೆ ಸಮಾರಂಭದಲ್ಲಿ ಮಾತನಾಡಿದರು. ಜೇಸಿಐ ಭಾರತದ ವಲಯ 15 ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80 ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ, ಚಿನ್ನಾಭಾರಣಗಳಲ್ಲಿ ಉತ್ತಮ ಗುಣ ಮಟ್ಟವನ್ನು ನೀಡುತ್ತಾ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ವ್ಯವಹಾರಕ್ಕೆ ಸಾಮಾಜಿಕವಾಗಿ ತೊಡಗಿಸಿಕೊಂಡು ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಸಂಸ್ಥೆ ಮುಳಿಯ ಎಂದು ಅಭಿಪ್ರಾಯಪಟ್ಟರು. ಮರ‍್ಕೇಟಿಂಗ್ ಕನ್ಸಲ್‌ಟೆಂಟ್ ವೇಣುಶರ್ಮ ಮಾತನಾಡಿ, ಚಿನ್ನಾಭರಣ ಸುರಕ್ಷಿತ ಹೂಡಿಕೆಯ ಉದ್ಯಮವಾಗಿದೆ. ವಿಶಿಷ್ಟ ಹಾಗೂ ವಿನೂತನ ವಜ್ರಾಭರಣಗಳ ಸಂಗ್ರಹಣೆ ಈ ಬಾರಿಯ ಡೈಮಾಂಡ್ ಫೆಸ್ಟ್ ನಲ್ಲಿದೆ. ಜೀವನದ ಮೊದಲ ವಜ್ರಾಭರಣ ಖರೀದಿಯನ್ನು ಮುಳಿಯೊಂದಿಗೆ ಪ್ರಾರಂಭಿಸಿ ಎಂದು ಹೇಳಿದರು. ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್‌ ಸ್ವಾಗತಿಸಿ, ಸಿಬ್ಬಂದಿ ಅಶ್ವಥ್ ವಂದಿಸಿ, ಕನ್ನಿಕಾ ನಿರೂಪಿಸಿದರು.

ಆಳ್ವಾಸ್‌ನಲ್ಲಿ ಫಿಸಿಯೋ ಕನೆಕ್ಟ್ - 2025 ವಿಚಾರ ಸಂಕಿರಣ

Article Image

ಆಳ್ವಾಸ್‌ನಲ್ಲಿ ಫಿಸಿಯೋ ಕನೆಕ್ಟ್ - 2025 ವಿಚಾರ ಸಂಕಿರಣ

ಮೂಡುಬಿದಿರೆ: ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಫಿಸಿಯೋ ಕನೆಕ್ಟ್ - 2025 ವಿದ್ಯಾಗಿರಿಯ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತೇಜಸ್ವಿನಿ ಆಸ್ಪತ್ರೆಯ ಆರ್ಥೋಸ್ಕೊಪಿ ಹಾಗೂ ಸ್ಪೋರ್ಟ್ಸ್ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಸುಮಂತ್ ನಾಯಕ್, ಶಸ್ತ್ರಚಿಕಿತ್ಸೆಯು ಆರೋಗ್ಯದ ಸಮಸ್ಯೆಗೆ ಪರಿಹಾರ ನೀಡಬಲ್ಲದು ಆದರೆ ನಿಜವಾದ ಸವಾಲು ರೋಗಿಯ ಚೇತರಿಕೆಯಲ್ಲಿ ಕಂಡುಬರುತ್ತದೆ. ಫಿಸಿಯೋತೆರಪಿಸ್ಟ್ ಗಳು ಅಂತಹ ಸವಾಲುಗಳನ್ನು ಬಗೆಹರಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು. ಅದ್ಯಕ್ಷತೆ ವಹಿಸಿದ್ದ ಆಳ್ವಾಸ್ ಹೆಲ್ತ್ ಸೆಂಟರ್‌ನ ಪ್ರಸೂತಿ ತಜ್ಞೆ ಡಾ. ಹನಾ ಶೆಟ್ಟಿ ಮಾತನಾಡಿ, ಕಲಿಯುವಿಕೆಯು ಒಂದು ನಿರಂತರ ಪ್ರಕ್ರಿಯೆ. ಈ ವಿಚಾರ ಸಂಕಿರಣದ ಮೂಲಕ ಪ್ರತಿಯೊಬ್ಬರು ಸವಾಲನ್ನು ಅರಿಯುವ ಜೊತೆಗೆ, ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿ. ಜ್ಞಾನದ ವಿನಿಮಯವಾಗುವುದು ಅಗತ್ಯ ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್‌ನ ಪ್ರಾಧ್ಯಪಕ ಡಾ. ಪ್ರಭು ರಾಜ ಗಾಯಗಳ ಚೇತರಿಕೆಯಲ್ಲಿ ಉಂಟಾಗುವ ತೋರಕೊಲಂಬರ್ ಫಾಸಿಯ ಕುರಿತು ಮಾಹಿತಿ ನೀಡಿದರು. ಆಕ್ಸ್ಫರ್ಡ್ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ. ವಸಂತನ್, ಸ್ಟ್ರೋಕ್ಉಂಟಾದ ರೋಗಿಗಳಿಗೆ ಕೊಡಮಾಡುವ ಫಿಸಿಯೋಥೆರಪಿ ವ್ಯಾಯಾಮದ ಕುರಿತು ಮಾತನಾಡಿದರು. ಚೆನ್ನೈನ ಸವಿತ ಫಿಸಿಯೋಥೆರಪಿ ಕಾಲೇಜಿನ ಪ್ರಾಧ್ಯಾಪಕ ಡಾ. ಸರವನ ಕುಮಾರ್ ಜೆಐಸಿಯು ರೋಗಿಗಳ ನಿರ್ವಹಣೆಯಲ್ಲಿ ಫಿಸಿಯೋಥೆರಪಿ ಪಾತ್ರದ ಕುರಿತು ಹಾಗೂ ಡಾ. ಪರ್ತಿಪನ್ ರಾಮಸ್ವಾಮಿ ವ್ಯವಹಾರಿಕ ಉದ್ಯಮವಾಗಿ ಫಿಸಿಯೋಥೆರಪಿ ಎಂಬ ವಿಷಯದ ಕುರಿತು ವಿಚಾರ ಮಂಡಿಸಿದರು. ವಿಚಾರ ಸಂಕಿರಣದಲ್ಲಿ ಭಾರತದ ವಿವಿಧ ಕಾಲೇಜುಗಳಿಂದ 420 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಕ್ಷಮಾ ಶೆಟ್ಟಿ ಉಪಸ್ಥಿತರಿದ್ದರು. ಡಾ. ಉಮ್ಮೆ ಸೌದಾ ಕಾರ್ಯಕ್ರಮ ನಿರೂಪಿಸಿದರು.

First Previous

Showing 6 of 15 pages

Next Last