Article Image

ಸರಣಿ ಉಪನ್ಯಾಸ ಕಾರ್ಯಕ್ರಮ

Article Image

ಸರಣಿ ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರವಣಬೆಳಗೊಳದ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಇತ್ತೀಚೆಗೆ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕರಾದ ಬಿ. ಸೋಮಶೇಖರ ಶೆಟ್ಟಿ ರವರು ಜೀವನ ಮೌಲ್ಯ ಹಾಗೂ ಉತ್ತಮ ಆರೋಗ್ಯ ಕಾಪಾಡುವಲ್ಲಿ ವಿಧ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಗಳ ವತಿಯಿಂದ ಸಂಪನ್ಮೂಲ ವ್ಯಕ್ತಿಯಾದ ಬಿ.ಸೋಮಶೇಖರ ಶೆಟ್ಟಿ ಇವರನ್ನು ಗೌರವಿಸಲಾಯಿತು, ಶ್ರೀ ಕ್ಷೇತ್ರದ ವತಿಯಿಂದ ನಡೆಸಲ್ಪಡುವ ಪಿಯು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶೃತಕೀರ್ತಿ ರಾಜ್ ಉಪಸ್ಥಿತರಿದ್ದರು.

ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ ಫಲಿತಾಂಶ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Article Image

ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ ಫಲಿತಾಂಶ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಸ್ಟಾನ್ ವಾಸ್ (355), ಶೆಟ್ಟಿ ರಾಹುಲ್ ಉಮೇಶ್(313), ಎನ್. ಚಿರಂತನಾ(312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ. ಇಂಟರ್ ಮೀಡಿಯಟ್ ಗ್ರೂಪ್-02 ವಿಭಾಗದಲ್ಲಿ ಗಿರೀಶ್ (179) ಹಾಗೂ ತರುಣ್ ಕುಮಾರ್(152) ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

ದಿಯಾ ಆಳ್ವಾ :-ರಾಜ್ಯಕ್ಕೆ 10 ನೇ ರ‍್ಯಾಂಕ್

Article Image

ದಿಯಾ ಆಳ್ವಾ :-ರಾಜ್ಯಕ್ಕೆ 10 ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಮೂಡುಬಿದಿರೆ ಡಿ.ಜೆ.ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ. ದಿಯಾ ಆಳ್ವಾರವರು 625ಕ್ಕೆ 616 ಅಂಕಗಳನ್ನು ಪಡೆದು ರಾಜ್ಯಕ್ಕೆ 10ನೇ ರ‍್ಯಾಂಕನ್ನು ಪಡೆದಿರುತ್ತಾರೆ. ಇವರು ಮೂಡುಬಿದಿರೆಯ ಪ್ರಕಾಶ್ ಮತ್ತು ಪ್ರಸನ್ನ ದಂಪತಿಗಳ ಪುತ್ರಿ. ಪ್ರಸ್ತುತ ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಇವರ ಸಾಧನೆಗಳು:- *ನಮ್ಮ T.V ರಿಯಾಲಿಟಿ ಶೋ ಸೀಸನ್ 2 ರಾಜ್ಯ ಮಟ್ಟದ ಡಾನ್ಸ್ ಸ್ಪರ್ಧೆಯ ವಿನ್ನರ್ ಆಗಿ ಹೊರಹೊಮ್ಮಿರುತ್ತಾರೆ. *ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಮಂಗಳೂರು, ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಮಂಗಳೂರಿನಲ್ಲಿ ನಡೆದ ತುಳು ಹಾಗೂ ಕನ್ನಡ ಸಾಹಿತ್ಯೋತ್ಸವದಲ್ಲಿ ‘ಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ’ ಗೆ ಭಾಜನರಾಗಿರುತ್ತಾರೆ. * ಶ್ರೀ ಕ್ಷೇತ್ರ ಶ್ರವಣ ಬೆಳಗೊಳ ಜೈನಮಠ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಇದರ ಸಹಯೋಗದಲ್ಲಿ 13-05-2022ರಂದು ಉಡುಪಿನಲ್ಲಿ ದಡೆದ 12 ನೇ ಅಖಿಲ ಕರ್ನಾಟಕ ಬೆಳಂದಿಗಳ ಸಾಹಿತ್ಯ ಸಮ್ಮೇಳನದಲ್ಲಿ ‘ಕರ್ನಾಟಕ ಪ್ರತಿಭಾ ರತ್ನ ಪ್ರಶಸ್ತಿ’ಯನ್ನು ಪಡೆದಿರುತ್ತಾರೆ. * ಶಟಲ್, ವಾಲಿಬಾಲ್ ಜಿಲ್ಲಾಮಟ್ಟ, ಅತ್ಲೆಟಿಕ್ ಕ್ರೀಡೆಗಳಲ್ಲಿ ರಾಜ್ಯ ಮಟ್ಟದವರೆಗೆ ಪ್ರತಿನಿಧಿಸಿದ್ದಾರೆ. * ಮಕ್ಕಿಮನೆ ಕಲಾವೃಂದದ ಸಕ್ರಿಯ ಸದಸ್ಯೆಯಾಗಿ ರಾಜ್ಯಾಂದತ್ಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ.

ಡಾ. ಅರ್ಹಂತ್ ಕುಮಾರ್ ಎ. ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

Article Image

ಡಾ. ಅರ್ಹಂತ್ ಕುಮಾರ್ ಎ. ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

ಆಯುರ್ವೇದ, ಸಂಸ್ಕೃತ ಹಾಗೂ ವೈದ್ಯಕೀಯ ಹಸ್ತಪ್ರತಿಶಾಸ್ತ್ರ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ ಉಡುಪಿಯ ಡಾ. ಅರ್ಹಂತ್ ಕುಮಾರ್ ಎ. ಅವರಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS), ಬೆಂಗಳೂರು ವತಿಯಿಂದ ಪಿಎಚ್.ಡಿ. ಪದವಿ ಪ್ರದಾನ ಮಾಡಲಾಗಿದೆ. ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪ್ರೇರಣೆಯಿಂದ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಕೃತಿ ಸಂಶೋಧನಾ ಕೇಂದ್ರದಲ್ಲಿ ಸಂಗ್ರಹಿಸಲ್ಪಟ್ಟ ಆಚಾರ್ಯ ಪೂಜ್ಯಪಾದ ವಿರಚಿತ ವೈದ್ಯಕೀಯ ತಾಳೆಗರಿ ಗ್ರಂಥಗಳ ಕುರಿತು ನಡೆಸಿದ ಮಹತ್ವದ ಸಂಶೋಧನೆಗಾಗಿ ಈ ಗೌರವ ಅವರಿಗೆ ಲಭಿಸಿದೆ. ಅವರ ಸಂಶೋಧನಾ ವಿಷಯ “Compendious Literary Research on the Medical Literatures of Acharya Pujyapada: A Regional Jaina Vaidya of Karnataka” ಆಗಿದ್ದು, ಈ ಸಂಶೋಧನೆಯನ್ನು ಮೈಸೂರಿನ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶ್ರೀವತ್ಸ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಶೈಕ್ಷಣಿಕ ಸಾಧನೆಗಳ ಪಯಣ: ಡಾ. ಅರ್ಹಂತ್ ಕುಮಾರ್ ಅವರು ಸುಳ್ಯದ ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಿಂದ ಬಿ.ಎ.ಎಂ.ಎಸ್. ಪದವಿಯನ್ನು ಪಡೆದಿದ್ದಾರೆ. ಬಳಿಕ ಮೈಸೂರು ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಿಂದ ಆಯುರ್ವೇದ ಸಂಹಿತಾ ಮತ್ತು ಸಿದ್ಧಾಂತ ವಿಭಾಗದಲ್ಲಿ ಎಂ.ಡಿ. ಪದವಿ ಪಡೆದರು. ಇದರ ಜೊತೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಸಂಸ್ಕೃತದಲ್ಲಿ ಎಂ.ಎ. ಪದವಿ ಹಾಗೂ ಮುಂಬೈ ವಿಶ್ವವಿದ್ಯಾಲಯದಿಂದ ಹಸ್ತಪ್ರತಿಶಾಸ್ತ್ರ (Manuscriptology) ವಿಷಯದಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿದ್ದಾರೆ. ಸಂಶೋಧನೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೊಡುಗೆ: ವೈದ್ಯಕೀಯ ಹಸ್ತಪ್ರತಿಶಾಸ್ತ್ರ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವ ಡಾ. ಅರ್ಹಂತ್ ಕುಮಾರ್ ಅವರು 26ಕ್ಕೂ ಅಧಿಕ ಆಯುರ್ವೇದ ಗ್ರಂಥಗಳನ್ನು ರಚಿಸಿದ್ದಾರೆ. ಫ್ಲೋರಲ್ ಮೆಡಿಸಿನ್ ಇನ್ ಆಯುರ್ವೇದ, ವೈದ್ಯವಲ್ಲಭ ಹಾಗೂ ವೈದ್ಯಕೌಸ್ತುಭ ಮೊದಲಾದ ಕೃತಿಗಳು ವಿಶೇಷವಾಗಿ ಪ್ರಸಿದ್ಧಿ ಪಡೆದಿವೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ 100ಕ್ಕೂ ಹೆಚ್ಚು ಸಮ್ಮೇಳನಗಳು, ಕಾರ್ಯಾಗಾರಗಳು ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸಗಳನ್ನು ನೀಡಿರುವ ಅವರು, ಆಯುರ್ವೇದ ಜ್ಞಾನ ಪ್ರಸಾರದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಪ್ರತಿಷ್ಠಿತ ಪ್ರಶಸ್ತಿ: ಆಯುರ್ವೇದ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ, ಸಂಶೋಧನಾ ಕೊಡುಗೆ ಮತ್ತು ಶೈಕ್ಷಣಿಕ ಸಾಧನೆಗಳನ್ನು ಪರಿಗಣಿಸಿ, 2025ರಲ್ಲಿ ಬೆಂಗಳೂರಿನಲ್ಲಿ ನಡೆದ ದ್ವಿತೀಯ ವಿಶ್ವ ಆಯುರ್ವೇದ ಶೃಂಗಸಭೆಯಲ್ಲಿ ಇವರಿಗೆ ಪ್ರತಿಷ್ಠಿತ “ಆಯುರ್ವೇದ ವಿಶ್ವರತ್ನ ಪ್ರಶಸ್ತಿ” ನೀಡಿ ಗೌರವಿಸಲಾಯಿತು. ಪ್ರಸ್ತುತ ಸೇವೆ: ಡಾ. ಅರ್ಹಂತ್ ಕುಮಾರ್ ಅವರು ಉಡುಪಿ ಜಿಲ್ಲೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸ್ನಾತಕೋತ್ತರ ಸಂಹಿತಾ, ಸಿದ್ಧಾಂತ ಮತ್ತು ಸಂಸ್ಕೃತ ವಿಭಾಗದಲ್ಲಿ ವೈದ್ಯರು ಹಾಗೂ ಸಹ ಪ್ರಾಧ್ಯಾಪಕರಾಗಿ ಕಳೆದ 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕುಟುಂಬ ಮತ್ತು ವ್ಯಕ್ತಿತ್ವ: ನಿವೃತ್ತ ಬ್ಯಾಂಕ್ ವ್ಯವಸ್ಥಾಪಕರಾದ ಚಂದ್ರಶೇಖರ್ ಮತ್ತು ನಾಗರತ್ನ ದಂಪತಿಗಳ ಪುತ್ರರಾಗಿರುವ ಡಾ. ಅರ್ಹಂತ್ ಕುಮಾರ್ ಅವರು ಆಯುರ್ವೇದ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ವಿದ್ವಾಂಸರು ಹಾಗೂ ವೈದ್ಯರಾಗಿದ್ದಾರೆ. ಇವರ ಪತ್ನಿ ನಂದಶ್ರೀ ಅವರು ಹಾಗೂ ಪುತ್ರರಾದ ಸರ್ವಾರ್ಥ್ ಮತ್ತು ಸಿದ್ಧಾಂತ್ ಇವರ ಸಾಧನೆಗೆ ಸದಾ ಬೆಂಬಲವಾಗಿದ್ದಾರೆ.

ಹಂಸಶ್ರೀ- ಪಿ.ಎಚ್.ಡಿ. ಪದವಿ

Article Image

ಹಂಸಶ್ರೀ- ಪಿ.ಎಚ್.ಡಿ. ಪದವಿ

ಹಂಸಶ್ರೀ ಅವರು ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT), ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಸ್ಕೂಲ್ ಆಫ್ ಸಿವಿಲ್ ಅಂಡ್ ಕೆಮಿಕಲ್ ಎಂಜಿನಿಯರಿಂಗ್ ವಿಭಾಗದ ಡಾ. ಪೂರ್ಣಚಂದ್ರ ಪಂಡಿತ್ ಅವರ ಮಾರ್ಗದರ್ಶನದಲ್ಲಿ “Mechanical and Durability Performance of One-Part Alkali-Activated Concrete Incorporating Concrete Wash Water” ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ, ಯಶಸ್ವಿಯಾಗಿ ಪ್ರಬಂಧ ಮಂಡಿಸಿ, ಪಿ.ಎಚ್.ಡಿ. ಪದವಿ ಪಡೆದಿರುತ್ತಾರೆ. ಇವರು ಮೂಡಬಿದ್ರೆಯ ನಿವೃತ್ತ ಬ್ಯಾಂಕ್ ಉದ್ಯೋಗಿ ಶಾಂತಿರಾಜ್ ಕೆ. ಹಾಗೂ ನಿವೃತ್ತ ಶಿಕ್ಷಕಿ ಶೋಭಾ ಕೆ. ಅವರ ಪುತ್ರಿ.

ಶಿಶಿಲ: ಪ್ರೀತಮ್ ಜೈನ್ ಇಂಡಿಯನ್ ಆರ್ಮಿಗೆ ಆಯ್ಕೆ

Article Image

ಶಿಶಿಲ: ಪ್ರೀತಮ್ ಜೈನ್ ಇಂಡಿಯನ್ ಆರ್ಮಿಗೆ ಆಯ್ಕೆ

ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕ್ಷೇತ್ರ ಚಂದ್ರಪುರ ಶಿಶಿಲದ ಆಡಳಿತ ಮಂಡಳಿ ವತಿಯಿಂದ ಬೆಳ್ತಂಗಡಿಯ ಕೊಕ್ಕಡದ ಎಳ್ನೀರಿನ ಸಂಪತ್ ಕುಮಾರ್ ಹಾಗೂ ಶೋಭಿತರವರ ಪುತ್ರ ಪ್ರೀತಮ್ ಜೈನ್ ಇವರು ಇಂಡಿಯನ್ ಆರ್ಮಿಗೆ ಆಯ್ಕೆಯಾಗಿರುವುದಕ್ಕೆ ಸನ್ಮಾನಿಸಿ, ಶುಭಹಾರೈಸಲಾಯಿತು. ಇವರು ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಬಿಕಾಂ ಪದವಿಧರರಾಗಿದ್ದು ಕೃಷಿಕರಾಗಿರುತ್ತಾರೆ. ಶಿಶಿಲ ಬಸದಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದು ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರಿಯರಾಗುತ್ತಿದ್ದರು. ಈ ಸಂದರ್ಭದಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಹೆಚ್. ವಿಜಯ ಕುಮಾರ್ ಜೈನ್, ಫಣಿರಾಜ್ ಜೈನ್, ಪಿ ಅತಶಯ ಜೈನ್, ಪ್ರೀತಮ್ ಜೈನ್, ಸಂಪತ್ ಜೈನ್ ಮುಂತಾದವರು ಉಪಸ್ಥಿತರಿದ್ದರು.

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಪಶ್ಚಿಮ ಘಟ್ಟಗಳ ಸಸ್ಯ ವೈವಿಧ್ಯತೆ ಕುರಿತು ಜಾಗೃತಿ ಕಾರ್ಯಕ್ರಮ

Article Image

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಪಶ್ಚಿಮ ಘಟ್ಟಗಳ ಸಸ್ಯ ವೈವಿಧ್ಯತೆ ಕುರಿತು ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ,ಕಲ್ಲಬೆಟ್ಟು: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ‘ಪಶ್ಚಿಮ ಘಟ್ಟಗಳ ಸಸ್ಯ ವೈವಿಧ್ಯತೆ’ ಕುರಿತು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಮತ್ತು ಜೈವಿಕ ವೈವಿಧ್ಯತೆಯ ಕುರಿತು ಅರಿವು ಮೂಡಿಸುವುದು, ಕಾರ್ಯಕ್ರಮದ ಉದ್ದೇಶವಾಗಿತ್ತು. ಸಂಪನ್ಮೂಲ ವ್ಯಕ್ತಿ ಎಂ. ದಿನೇಶ್ ನಾಯಕ್ ಅವರು ನಾಗ ಸಂಪಿಗೆ, ಗುಲಗುಂಜಿ, ಕಾಗೆ ಮಾರಿ ಬಳ್ಳಿ, ಹೊಳೆ ದಾಸವಾಳ, ಅಗ್ನಿ, ಶಿಖೆ, ಅಮೃತ ಬಳ್ಳಿ, ಸೀತಾ ಅಶೋಕ ಸೇರಿದಂತೆ ಅಪರೂಪದ ಔಷಧೀಯ ಸಸ್ಯಗಳ ಮಹತ್ವ ಮತ್ತು ಪರಿಸರ ಸಮತೋಲನದಲ್ಲಿ ಅವುಗಳ ಪಾತ್ರವನ್ನು ವಿವರಿಸಿದರು. ಅರಣ್ಯ ನಾಶ ಹಾಗೂ ಹವಮಾನ ಬದಲಾವಣೆಯಿಂದ ಸಸ್ಯ ವೈವಿಧ್ಯತೆಗೆ ಉಂಟಾಗುವ ಅಪಾಯಗಳ ಬಗ್ಗೆಯೂ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಇವರು ಮಾತಾನಾಡುತ್ತಾ ಪಶ್ಚಿಮ ಘಟ್ಟವು ಅತ್ಯಂತ ಅಧಿಕ ಸಂಖ್ಯೆಯ ವೈವಿಧ್ಯಮಯ ಸಸ್ಯ ಪ್ರಭೇದವನ್ನು ಹೊಂದಿದ್ದು, ಹೆಚ್ಚಿನ ಔಷಧೀಯ ಗುಣಗಳನ್ನು ಕೂಡ ಹೊಂದಿದೆ. ನಮ್ಮ ಸುತ್ತಲಿನ ಪರಿಸರದಲ್ಲಿರುವ ಇಂತಹ ಔಷಧೀಯ ಸಸ್ಯಗಳ ಬಗ್ಗೆಯೂ ಕೂಡ ನಾವು ತಿಳಿಯುವ ಪ್ರಯತ್ನವನ್ನು ಮಾಡಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳು ಸ್ಥಳೀಯ ಔಷದೀಯ ಸಸ್ಯಗಳ ಪ್ರದರ್ಶನವನ್ನು ಆಯೋಜಿಸಿ ಅವುಗಳ ಉಪಯೋಗಗಳ ಬಗ್ಗೆ ಮಾಹಿತಿ ನೀಡಿದರು. ಉಪಮುಖ್ಯೋಪಾಧ್ಯಾಯ ಜಯಶೀಲ ಅವರು ಅತಿಥಿ ಪರಿಚಯ ಮಾಡಿದರು. ಶಿಕ್ಷಕಿ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಹಾಗೂ ಶಿಕ್ಷಕ ವೃಂದವು ಸಂಪನ್ಮೂಲ ವ್ಯಕ್ತಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಜವಾಬ್ದಾರಿ ಕುರಿತು ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು.

ಅಮಿತ್ ಕೆ ಜೈನ್ ಅವರಿಗೆ PHD ಪದವಿ ಪ್ರದಾನ

Article Image

ಅಮಿತ್ ಕೆ ಜೈನ್ ಅವರಿಗೆ PHD ಪದವಿ ಪ್ರದಾನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗದ ಉಪನ್ಯಾಸಕರಾದ ಅಮಿತ್ ಕೆ ಜೈನ್ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಯಿಂದ ಪಿ.ಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಇವರು ಮೈಸೂರಿನ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ನವೀನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ “Facial Expression Classification Through Machine Learning Algorithms: Extracting Discernible Patterns for Enhanced Recognition” ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಯಶಸ್ವಿಯಾಗಿ ಪ್ರಬಂಧ ಮಂಡಿಸಿದ್ದಾರೆ. ಅವರ ಸಂಶೋಧನೆಯು ಕೃತಕ ಬುದ್ಧಿಮತ್ತೆ (Artificial Intelligence) ಹಾಗೂ ಯಂತ್ರ ಕಲಿಕೆ (Machine Learning) ತಂತ್ರಜ್ಞಾನಗಳ ನೆರವಿನಿಂದ ಮಾನವರ ಮುಖಭಾವಗಳನ್ನು ನಿಖರವಾಗಿ ಗುರುತಿಸುವ ವಿಧಾನಗಳ ಅಭಿವೃದ್ಧಿಯ ಮೇಲೆ ಕೇಂದ್ರೀಕೃತವಾಗಿದೆ. ಸಂತೋಷ, ದುಃಖ, ಕೋಪ, ಆಶ್ಚರ್ಯ, ಭಯ ಸೇರಿದಂತೆ ವಿವಿಧ ಭಾವನೆಗಳನ್ನು ಕಂಪ್ಯೂಟರ್ ವ್ಯವಸ್ಥೆಗಳು ಸ್ವಯಂಚಾಲಿತವಾಗಿ ಅರ್ಥಮಾಡಿಕೊಳ್ಳುವಂತೆ ಮಾಡುವ ಹೊಸ ತಂತ್ರಗಳನ್ನು ಈ ಅಧ್ಯಯನದಲ್ಲಿ ಪ್ರಸ್ತಾಪಿಸಲಾಗಿದೆ. ಮುಖಭಾವ ಗುರುತಿಸುವಿಕೆ (Facial Expression Recognition) ತಂತ್ರಜ್ಞಾನವು ಭವಿಷ್ಯದಲ್ಲಿ ಅನೇಕ ಕ್ಷೇತ್ರಗಳಲ್ಲಿ ಉಪಯುಕ್ತವಾಗುವ ನಿರೀಕ್ಷೆಯಿದೆ. ಆರೋಗ್ಯ ಕ್ಷೇತ್ರದಲ್ಲಿ ರೋಗಿಗಳ ಭಾವನಾತ್ಮಕ ಸ್ಥಿತಿಯನ್ನು ವಿಶ್ಲೇಷಿಸಲು, ಮಾನಸಿಕ ಆರೋಗ್ಯ ಮೌಲ್ಯಮಾಪನಕ್ಕೆ, ಆಟಿಸಂ ಹಾಗೂ ವಿಶೇಷ ಅಗತ್ಯತೆ ಹೊಂದಿರುವ ಮಕ್ಕಳ ವರ್ತನೆ ಅಧ್ಯಯನಕ್ಕೆ ಇದು ನೆರವಾಗಲಿದೆ. ಜೊತೆಗೆ ಸ್ಮಾರ್ಟ್ ಶಿಕ್ಷಣ ವ್ಯವಸ್ಥೆಗಳಲ್ಲಿ ವಿದ್ಯಾರ್ಥಿಗಳ ಆಸಕ್ತಿ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ಅಳೆಯಲು, ಭದ್ರತಾ ವ್ಯವಸ್ಥೆಗಳಲ್ಲಿ ಅನುಮಾನಾಸ್ಪದ ವರ್ತನೆಗಳನ್ನು ಗುರುತಿಸಲು ಹಾಗೂ ಮಾನವ-ಯಂತ್ರ ಸಂವಹನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಲು ಈ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸಲಿದೆ. ಮುಂದಿನ ದಿನಗಳಲ್ಲಿ ರೋಬೋಟಿಕ್ಸ್, ಸ್ವಯಂಚಾಲಿತ ವಾಹನಗಳು, ಡಿಜಿಟಲ್ ಆರೋಗ್ಯ ಸೇವೆಗಳು ಹಾಗೂ ಸ್ಮಾರ್ಟ್ ಸಾಧನಗಳ ಅಭಿವೃದ್ಧಿಯಲ್ಲಿಯೂ ಇಂತಹ ಸಂಶೋಧನೆಗಳು ಹೊಸ ಸಾಧ್ಯತೆಗಳನ್ನು ತೆರೆದಿಡಲಿವೆ. ಅಮಿತ್ ಕೆ ಜೈನ್ ಅವರು ಸಂಸೆಯ ನಿವೃತ್ತ ಉಪ ತಹಶೀಲ್ದಾರ್ ಕೀರ್ತಿ ಜೈನ್ ಹಾಗೂ ಕಲ್ಪನಾ ಕೆ ಜೈನ್ ದಂಪತಿಗಳ ಪುತ್ರ. ಪ್ರಸ್ತುತ ಇವರು ಮೂಡಬಿದಿರೆಯಲ್ಲಿ ನೆಲೆಸಿರುತ್ತಾರೆ.

ಮೂಡುಬಿದಿರೆ: ಪ್ರೋತ್ಸಾಹ ಧನ ವಿತರಣೆ

Article Image

ಮೂಡುಬಿದಿರೆ: ಪ್ರೋತ್ಸಾಹ ಧನ ವಿತರಣೆ

ಮೂಡುಬಿದಿರೆ, ಜೂ.8: ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಸಾಲಿನ 7ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಲಿಖಿತ್, ಸ್ತುತಿ ಮತ್ತು ನಿಶ್ಚಿತಾ ಜೈನ್ ಇವರಿಗೆ ನಮ್ಮ ಶಾಲೆಯ ಹಿತೈಷಿ ಕೊಡುಗೈದಾನಿಯಾಗಿರುವ ಟೆಲಿಕಾಂನ ನಿವೃತ್ತ ಎ.ಜಿ.ಎಂ. ಅಧಿಕಾರಿಯಾಗಿರುವ ಶ್ರೀಯುತ ಎಂ. ವಾರಿಸೇನ ಶೆಟ್ಟಿ ಇವರು ಪ್ರೋತ್ಸಾಹ ಧನ ನೀಡಿ ಗೌರವಹಿಸಿದರು. ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಬದುಕು ಉಜ್ವಲವಾಗಲಿ ಎಂದು ಆಶಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ ಜೈನ್ , 7ನೇ ತರಗತಿಯ ಶಿಕ್ಷಕಿ ಮಂಜುಳಾ.ಪಿ. ಪೂಜಾರಿ ಉಪಸ್ಥಿತರಿದ್ದರು.

ಸಿಇಟಿ ಫಲಿತಾಂಶದಲ್ಲಿ ಎಕ್ಸಲೆಂಟ್ ಕಾಲೇಜಿನ ಅದ್ಭುತ ಸಾಧನೆ

Article Image

ಸಿಇಟಿ ಫಲಿತಾಂಶದಲ್ಲಿ ಎಕ್ಸಲೆಂಟ್ ಕಾಲೇಜಿನ ಅದ್ಭುತ ಸಾಧನೆ

ಮೂಡುಬಿದಿರೆ, ಜೂ. 6: ರಾಜ್ಯಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ ) ಫಲಿತಾಂಶದಲ್ಲಿ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ದಾಖಲಿಸಿದ್ದು ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್ ಬಿಎಸ್ಸಿ ಕೃಷಿ, ನರ್ಸಿಂಗ್ ಪ್ರವೇಶಕ್ಕೆ ನೂರರ ಒಳಗಿನ rankಗಳನ್ನು ಪಡೆದಿರುತ್ತಾರೆ. ಕಾಲೇಜಿನ ತನ್ಮಯಿಕೋಟಿ, ( 18 ನೇ) ತನುಶ್ರೀಎಚ್ಆರ್ ( 23 ನೇ) ಧ್ರುವಂತ್ಕೆ (41ನೇ) , ನಿಖಿಲ್ಎಸ್ಎಸ್ ( 41 ನೇ) ನಿಶ್ಚಲ್ ( 58 ನೇ ) rank ಪಡೆದು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಇದರೊಂದಿಗೆ ವಿವಿಧ ವೃತ್ತಿಪರ ಕೋಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ ಐವತ್ತಕ್ಕೂ ಅಧಿಕ ವಿದ್ಯಾರ್ಥಿಗಳು rank ಗಳಿಸಿ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಅಧ್ಯಕ್ಷರಾದ ಯುವರಾಜಜೈನ್, ಕಾರ್ಯದರ್ಶಿ ರಶ್ಮಿತಾಜೈನ್, ಪ್ರಾಂಶುಪಾಲರಾದ ಪುಷ್ಪರಾಜ್, ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ದೇಶಕ ಡಾಕ್ಟರ್ ಪ್ರಶಾಂತ್ ಹೆಗಡೆ , ಸಿಇಟಿ ಸಮನ್ವಯಕಾರ ರಂಜಿತ್ ಜೈನ್ ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ. ನಿರಂತರ ಶೈಕ್ಷಣಿಕ ಮಾರ್ಗದರ್ಶನ, ಪರೀಕ್ಷಾ ಪೂರ್ವ ತರಬೇತಿ, ವಿಶೇಷ ಅಭ್ಯಾಸ ತರಗತಿಗಳು, ಈ ಯಶಸ್ಸಿಗೆ ಕಾರಣವಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

ಎಕ್ಸಲೆಂಟ್: ನೂತನ ಪ್ರಾಂಶುಪಾಲರಾಗಿ ಪುಷ್ಪರಾಜ್ ಬಿ. ಅಧಿಕಾರ ಸ್ವೀಕಾರ

Article Image

ಎಕ್ಸಲೆಂಟ್: ನೂತನ ಪ್ರಾಂಶುಪಾಲರಾಗಿ ಪುಷ್ಪರಾಜ್ ಬಿ. ಅಧಿಕಾರ ಸ್ವೀಕಾರ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರಸಿದ್ಧ ಶಿಕ್ಷಣ ತಜ್ಞ ಹಾಗೂ ಆಡಳಿತಗಾರರಾದ ಪುಷ್ಪರಾಜ್ ಬಿ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಇದೇ ಸಂಸ್ಥೆಯಲ್ಲಿ ಶೈಕ್ಷಣಿಕ ನಿರ್ದೇಶಕರಾಗಿ (Academic Director) ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಬರೋಬ್ಬರಿ 30 ವರ್ಷಗಳ ಸುದೀರ್ಘ ಬೋಧನಾ ಮತ್ತು ಆಡಳಿತಾತ್ಮಕ ಅನುಭವ ಹೊಂದಿರುವ ಪುಷ್ಪರಾಜ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯಂತ ಪರಿಚಿತ ಹಾಗೂ ಗೌರವಾನ್ವಿತ ಹೆಸರಾಗಿದ್ದಾರೆ. ಅವರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಆಪ್ತಸಮಾಲೋಚಕರು (Counsellor), ತರಬೇತುದಾರರು ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕಾ ವಿಧಾನಗಳ ಕುರಿತು ತರಬೇತಿ ನೀಡಿದ್ದಾರೆ. ಇದರೊಂದಿಗೆ, ರಾಜ್ಯದಾದ್ಯಂತ ವಿವಿಧ ಕಾಲೇಜುಗಳ 20,000 ಕ್ಕೂ ಹೆಚ್ಚು ಶಿಕ್ಷಕರಿಗೆ 'ತರಗತಿ ನಿರ್ವಹಣೆ' (Classroom Management) ಕುರಿತು ವಿಶೇಷ ಕಾರ್ಯಾಗಾರ ಹಾಗೂ ತರಬೇತಿಯನ್ನು ನೀಡಿದ್ದಾರೆ. ದಕ್ಷ ಆಡಳಿತಗಾರರಾಗಿರುವ ಪುಷ್ಪರಾಜ್ ಬಿ. ಅವರು ಇದೀಗ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ಈ ಸಂದರ್ಭದಲ್ಲಿ, ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್, ಅವರು ನೂತನ ಪ್ರಾಂಶುಪಾಲರನ್ನು ಅಭಿನಂದಿಸಿ, ಇವರ ಸಮರ್ಥ ನಾಯಕತ್ವದಲ್ಲಿ ಕಾಲೇಜು ಶೈಕ್ಷಣಿಕವಾಗಿ ಮತ್ತಷ್ಟು ಉನ್ನತ ಯಶಸ್ಸನ್ನು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಸಂಪತ್ ಕುಮಾರ್, ಆಡಳಿತಾಧಿಕಾರಿ ಹರೀಶ್ ಶೆಟ್ಟಿ ಹಾಗೂ ಕಾಲೇಜಿನ ಹಿರಿಯ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪ್ರೊ. ಅಪ್ಪಣ್ಣ ಹಂಜೆ: ವಿಷಯ ಪರಿಣಿತರಾಗಿ ನೇಮಕ

Article Image

ಪ್ರೊ. ಅಪ್ಪಣ್ಣ ಹಂಜೆ: ವಿಷಯ ಪರಿಣಿತರಾಗಿ ನೇಮಕ

ಕರ್ನಾಟಕ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳ ಆದೇಶದಂತೆ ಕುಲಸಚಿವರು ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಅಪ್ಪಣ್ಣ ಹಂಜೆ ಅವರನ್ನು 2026-27 ಮತ್ತು 2027-28ರ ಸಾಲಿಗೆ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಷಯದ ಸ್ನಾತಕ ಅಭ್ಯಾಸ ಮಂಡಳಿಯ ವಿಷಯ ಪರಿಣಿತರಾಗಿ ನೇಮಕ ಮಾಡಿದ್ದಾರೆ. ಇವರು ಜೈನ ಇತಿಹಾಸ, ಸಂಸ್ಕೃತಿ, ಸಾಹಿತ್ಯ, ಸಮಾಜ, ವಾಸ್ತುಕಲೆ, ಶಿಲ್ಪಕಲೆ, ಶಾಸನಗಳು, ಮುನಿಪರಂಪರೆ, ಕವಿಗಳು ಮುಂತಾದ ವಿಷಯಗಳ ಕುರಿತು ತಲಸ್ಪರ್ಶಿ ಸಂಶೋಧನ ಅಧ್ಯಯನ ಕೈಗೊಂಡು ಮೌಲ್ಯಯುತ ಕೃತಿಗಳು ಮತ್ತು ಲೇಖನಗಳನ್ನು ಪ್ರಕಟಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ಅಧ್ಯಯನ ವಿಭಾಗದ ಸಂಯೋಜಿತ ಉಜಿರೆಯ ಹಾಮಾನಾ ಸಂಶೋಧನ ಕೇಂದ್ರದಲ್ಲಿ ಪಿಎಚ್.ಡಿ. ವಿದ್ಯಾರ್ಥಿಗಳಿಗೆ ಬಾಹ್ಯ ಮಾರ್ಗದರ್ಶಕರಾಗಿ ಹಾಗೂ ಕರ್ನಾಟಕ ಪುರಾತತ್ವ ಮತ್ತು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ ಶೈಕ್ಷಣಿಕ ಯೋಜನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಮೂಡುಬಿದಿರೆ ತಾಲ್ಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ- ಪಾರಮ್ಯ ಮೆರೆದ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ

Article Image

ಮೂಡುಬಿದಿರೆ ತಾಲ್ಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ- ಪಾರಮ್ಯ ಮೆರೆದ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ವಲಯ ಮತ್ತು ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆ ಕಲ್ಲಬೆಟ್ಟು, ಮೂಡುಬಿದಿರೆ ಇವರ ಸಹಯೋಗದಲ್ಲಿ ಮೂಡುಬಿದಿರೆ ತಾಲ್ಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಗಳು 2025-26, ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವಿರೂಪಾಕ್ಷಪ್ಪ ಹೆಚ್ ಅವರು ಮಕ್ಕಳು – ತಾಂತ್ರಿಕ, ವೈದ್ಯಕೀಯ ಕ್ಷೇತ್ರಗಳ ಜೊತೆಗೆ ನಿಮ್ಮ ಆಸಕ್ತಿಯನ್ನು ಮೂಲ ವಿಜ್ಞಾನದ ಸಂಶೋಧನೆಗಳಿಗೆ ತೋರಿಸಬೇಕು ಎಂದು ಕರೆಯನ್ನಿತ್ತು ಶುಭ ಹಾರೈಸಿದರು. ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾಗಿರುವ ಯುವರಾಜ್ ಜೈನ್ ಮಾತನಾಡಿ “ಮಕ್ಕಳೇ ಕೇವಲ ನೀವು ಬದಲಾಗುವುದಲ್ಲ, ಅದರ ಜೊತೆಗೆ ನಿಮ್ಮ ಅಭ್ಯಾಸಗಳನ್ನು ಬದಲಾಯಿಸಿಕೊಳ್ಳಿ. ಅದು ನಿಮ್ಮ ಭವಿಷ್ಯವನ್ನು ಬದಲಿಸಬಲ್ಲದು. ವಿಜ್ಞಾನವೆಂಬ ಸುಜ್ಞಾನದ ಬೆಳಕಿನಲ್ಲಿ ಸಮಾಜಕ್ಕೆ ಒಳಿತಾಗುವ ಕೊಡುಗೆಗಳನ್ನು ನೀಡುವಂತವರಾಗಿ ಬೆಳೆಯಿರಿ” ಎಂದು ಶುಭ ಹಾರೈಸಿದರು. ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್‌ರವರು ಮಾತನಾಡಿ “ವಿಜ್ಞಾನವೆಂಬ ವಿಶೇಷವಾದ ಜ್ಞಾನವನ್ನು ವೃದ್ಧಿಸಿಕೊಂಡು, ಹೊಸ ಹೊಸ ಆವಿಷ್ಕಾರಗಳೊಂದಿಗೆ ಸದೃಢ ದೇಶ ಕಟ್ಟುವ ಸತ್ಪçಜೆಗಳಾಗಿ” ಎಂಬ ಶುಭಾಷಯಗಳನ್ನಿತ್ತರು. ವಿಜ್ಞಾನ ಮಾದರಿ ತಯಾರಿ ಹಾಗೂ ಪ್ರದರ್ಶನದ ಈ ಸ್ಪರ್ಧೆಯಲ್ಲಿ ಗುಂಪು ವಿಭಾಗದಲ್ಲಿ ಎಕ್ಸಲೆಂಟ್ ವಿದ್ಯಾರ್ಥಿಗಳಾದ ನಿಹಾರ್ ಹಾಗೂ ಶಾಶ್ವತ್ (ಪ್ರಥಮ), ಗಗನದೀಪ ಹಾಗೂ ಚಿನ್ಮಯಿ (ದ್ವಿತೀಯ) ಮತ್ತು ಅಭಿನೀತ್ ಹಾಗೂ ಪ್ರಣವ್ (ತೃತೀಯ) ಬಹುಮಾನ ಪಡೆದರೆ, ವೈಯುಕ್ತಿಕ ವಿಭಾಗದಲ್ಲಿ ಸಂತ ಥೋಮಸ್ ಆಂಗ್ಲ ಮಾಧ್ಯಮ ಶಾಲೆ ಇಲ್ಲಿನ ವಿದ್ಯಾರ್ಥಿ ಯಶಸ್ (ಪ್ರಥಮ) ಮತ್ತು ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮೈತ್ರಿ (ದ್ವಿತೀಯ) ಹಾಗೂ ತರುಣ್ (ತೃತೀಯ) ಬಹುಮಾನವನ್ನು ಗಳಿಸುವ ಮೂಲಕ ಈ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಶಾಲೆ ಪಾರಮ್ಯ ಮೆರೆಯಿತು. ಕಾರ್ಯಕ್ರಮದಲ್ಲಿ ಹಿರಿಯ ವಿಜ್ಞಾನ ಶಿಕ್ಷಕರಾದ ಪಶುಪತಿ ಶಾಸ್ತ್ರೀ, ಮೂಡಬಿದಿರೆ ಮಹಾವೀರ ಕಾಲೇಜಿನ ಉಪನ್ಯಾಸಕರಾಗಿರುವ ಚೈತ್ರಾ ಹಾಗೂ ಆಶ್ವಿತಾ ತೀರ್ಪುಗಾರರಾಗಿ ಸಹಕರಿಸಿದರು. ಉಪ ಮುಖ್ಯಶಿಕ್ಷಕರಾದ ಜಯಶೀಲ, ವಿಜ್ಞಾನ ವಿಭಾಗದ ಮುಖ್ಯಸ್ಥರಾದ ವೆಂಕಟೇಶ್ ಭಟ್ ಉಪಸ್ಥಿತರಿದ್ದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಹೇಶ್ವರಿ ಇವರು ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿ, ನಂತರ ವಂದನಾರ್ಪಣೆಗೈದರು. ವಿಜ್ಞಾನ ಶಿಕ್ಷಕರಾದ ಪ್ರಜ್ವಲ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಎನ್.ಎ.ಬಿ.ಎಚ್. (NABH) ಮಾನ್ಯತೆ

Article Image

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಎನ್.ಎ.ಬಿ.ಎಚ್. (NABH) ಮಾನ್ಯತೆ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಗುಣಮಟ್ಟ ಭರವಸೆ ಕೋಶ ವಿಭಾಗವು ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ NABH ಮಾನ್ಯತೆಯ ಸಂಭ್ರಮವನ್ನು ಆಚರಿಸಲಾಯಿತು. NABH ಮಾನ್ಯತೆ ಪ್ರಕ್ರಿಯೇಯು 2021ರಲ್ಲಿ ಪ್ರಾರಂಭವಾಗಿ, ಜೂನ್ 2025ರಲ್ಲಿ ನಡೆದ NABH ಪರೀವಿಕ್ಷಣೆ ನಡೆದು ಇದೀಗ NABH ಮಾನ್ಯತೆ ಲಭಿಸಿದೆ. ಎಸ್.ಡಿ.ಎಂ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗ್ಡೆ ಮತ್ತು ಉಪ ವೈದ್ಯಕೀಯ ಅಧೀಕ್ಷಕ ಮತ್ತು ಗುಣಮಟ್ಟ ಭರವಸೆ ಕೋಶದ ಮುಖ್ಯಸ್ಥರಾದ ಡಾ. ಮಖ್ದೂಮ್ ಕಿಲ್ಲೇದಾರ್ ಅವರು NABH ಮಾನ್ಯತೆಯ ಪ್ರಮಾಣಪತ್ರ ಮತ್ತು NABH ಮಾನ್ಯತೆ ಪಡೆದ ವಿಭಾಗಗಳ ಪ್ರಮಾಣಪತ್ರವನ್ನು ವೈದ್ಯಕೀಯ ನಿರ್ದೇಶಕರಾದ ಡಾ. ನಿರಂಜನ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. NABH ಪ್ರಮಾಣಪತ್ರವನ್ನು ಸ್ವೀಕರಿಸಿದ ವೈದ್ಯಕೀಯ ನಿರ್ದೇಶಕರು ಮತ್ತು ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ NABH ಮಾನ್ಯತೆಯ ಪ್ರಮುಖ ಮೈಲಿಗಲ್ಲನ್ನು ಸಾಧಿಸಲು ಕೊಡುಗೆ ನೀಡಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿ, ಮಾತನಾಡುತ್ತಾ: ನಮ್ಮ ದೈನಂದಿನ ಕೆಲಸದಲ್ಲಿ ಗುಣಮಟ್ಟದ ಸೇವೆಯ ಕಡೆಗೆ ಗಮನವಿರಬೇಕು. ಉದ್ಯೋಗದಲ್ಲಿ ಪರಿಪೂರ್ಣತೆಯು ಎಲ್ಲಾ ಉದ್ಯೋಗಿಯ ಧ್ಯೇಯವಾಗಬೇಕು. ರೋಗಿಗಳಿಗೆ ಸೇವೆ ಸಲ್ಲಿಸುವಾಗ ದಕ್ಷತೆ ಮತ್ತು ಪ್ರೀತಿ ಸೇವೆ ನೀಡಬೇಕು. ಶಿಸ್ತು ಮತ್ತು ನಿರಂತರ ಸುಧಾರಣೆಯೊಂದಿಗೆ ದೊಡ್ಡ ಗುರಿಯನ್ನು ಸಾಧಿಸಬಹುದು. ಸಣ್ಣ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವದರೊಂದಿಗೆ ಉತ್ತಮ ಸಂಸ್ಥೆಗಳನ್ನು ಸೃಷ್ಟಿಸಬಹುದು. ಸುರಕ್ಷತಾ ಮನೋಭಾವ ಮತ್ತು ಸಹಾನುಭೂತಿ ರೋಗಿಗಳ ಆರೈಕೆಯ ಮುಖ್ಯ ಧ್ಯೇಯೆಗಳಾಗಿವೆ. ಸಹ ಉಪ ಕುಲಪತಿಗಳಾದ ವಿ ಜೀವಂಧರ್ ಕುಮಾರ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಹಣಕಾಸು ಅಧಿಕಾರಿಗಳಾದ ವಿ ಜಿ ಪ್ರಭು, ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ, ಕೋರ್ ಕಮಿಟಿ ಮತ್ತು ಸ್ಟೀರಿಂಗ್ ಕಮಿಟಿ ಸದಸ್ಯರ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರತಿಯೊಂದು ಕೋರ್ ಕಮಿಟಿ ಮತ್ತು ಸ್ಟೀರಿಂಗ್ ಕಮಿಟಿ ಸದಸ್ಯರಿಗೆ ಗೌರವ ಪ್ರಮಾಣಪತ್ರವನ್ನು ವಿತರಿಸಲಾಯಿತು. ಡಾ. ಮಖ್ದೂಮ್ ಕಿಲ್ಲೇದಾರ್ NABH ಮಾನ್ಯತೆಯ ಪ್ರಯಾಣ ನಡೆದು ಬಂದ ದಾರಿಯನ್ನು ತಿಳಿಸಿದರು. ಗುಣಮಟ್ಟ ಭರವಸೆ ಕೋಶದ ಅಧಿಕಾರಿಯಾದ ನಿಶಾಂತ್ ಜೈನ್ ಅತಿಥಿಗಳನ್ನು ಸ್ವಾಗತಿಸಿದರು. ಗುಣಮಟ್ಟ ಭರವಸೆ ಇನ್ನೊಬ್ಬ ಅಧಿಕಾರಿಯವರಾದ ಐಶ್ವರ್ಯ ವಿ ಎನ್ ಕಾರ್ಯಕ್ರಮವನ್ನು ನಿರೂಪಿಸಿದರು. ನರ್ಸಿಂಗ್ ಅಧೀಕ್ಷಕಿಯವರಾದ ಮಂಜುಳಾ ಕೆ ಬಿ ವಂದನಾರ್ಪಣೆ ಸಲ್ಲಿಸಿದರು.

ಹಾಸನದ ಶ್ರೀ ಮಹಾವೀರ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನಿಂದ ವಿದ್ಯಾರ್ಥಿ ವೇತನ

Article Image

ಹಾಸನದ ಶ್ರೀ ಮಹಾವೀರ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನಿಂದ ವಿದ್ಯಾರ್ಥಿ ವೇತನ

ಹೊಂಬುಜ, ಶ್ರೀ ಜೈನ ಮಠದ ಪೀಠಾಧ್ಯಕ್ಷರಾಗಿರುವ ಪರಮಪೂಜ್ಯ ಶ್ರೀಮದ್ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮಿಗಳು, ಟ್ರಸ್ಟಿನ ಗೌರವಾನ್ವಿತ ಪರಮ ಸಂರಕ್ಷಕರು ಹಾಗೂ ಅಧ್ಯಕ್ಷರು ಆಗಿರುವ ಹಾಸನದ ಶ್ರೀ ಮಹಾವೀರ ಎಜುಕೇಷನಲ್ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಈ ವರ್ಷವೂ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕರ್ನಾಟಕ ರಾಜ್ಯ ಜೈನ ಸಮಾಜದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ವಿದ್ಯಾರ್ಥಿ ವೇತನಕ್ಕೋಸ್ಕರ ಅರ್ಜಿ ಆಹ್ವಾನಿಸಿದೆ. ಇದು ವೈದ್ಯಕೀಯ, ದಂತವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ, ಇಂಜಿನಿಯರಿಂಗ್, ಡಿಪ್ಲೋಮೋ ಮತ್ತು ಜೈನಾಲಜಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುವುದು. ಅರ್ಹ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಹಿಂದಿನ ಪರೀಕ್ಷೆಯಲ್ಲಿ ಗಳಿಸಿರುವ ಅಂಕಪಟ್ಟಿ ನಕಲು, ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರವೇಶ ಪತ್ರದ ನಕಲು ಹಾಗೂ ಆಧಾರ್‌ಕಾರ್ಡನ ಪ್ರತಿ ಹಾಗೂ ತಮ್ಮ ಬ್ಯಾಂಕಿನ ವಿವರದೊಂದಿಗೆ ಅರ್ಜಿಯನ್ನು P.D.F Formatನಲ್ಲಿ ಈ ಇಮೇಲ್ ವಿಳಾಸ mahaveeraeducationaltrust@gmail.com ವಾಟ್ಸಾಪ್ ನಂ-9448544333 ಗೆ ದಿನಾಂಕ 15/11/2025ರ ಒಳಗಾಗಿ ಕಳುಹಿಸುವುದು.

ಕರ್ನಾಟಕ ರಾಜ್ಯ ಮಕ್ಕಳ ಶಸ್ತ್ರಚಿಕಿತ್ಸೆ ಸಮ್ಮೇಳನ- ಹುಬ್ಬಳ್ಳಿ ಧಾರವಾಡ

Article Image

ಕರ್ನಾಟಕ ರಾಜ್ಯ ಮಕ್ಕಳ ಶಸ್ತ್ರಚಿಕಿತ್ಸೆ ಸಮ್ಮೇಳನ- ಹುಬ್ಬಳ್ಳಿ ಧಾರವಾಡ

ಧಾರವಾಡ, 8,9 ಮತ್ತು 10 ಆಗಸ್ಟ್ 2025: ಕರ್ನಾಟಕ ರಾಜ್ಯದ ಮಕ್ಕಳ ಶಸ್ತ್ರಚಿಕಿತ್ಸಕರ ಸಂಘದ (ಐ ಎ ಪಿಎಸ್-ಕೆ.ಎಸ್.ಸಿ.) -20 ನೇ ವಾರ್ಷಿಕ ಸಮ್ಮೇಳನವನ್ನು ಧಾರವಾಡದ ಎಸ್.ಡಿ.ಮ್ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಹುಬ್ಬಳ್ಳಿಯ ಕರ್ನಾಟಕ ವೈದ್ಯಕಿಯ ಮಹಾವಿದ್ಯಾಲಯ (ಕೆ.ಎಂ.ಸಿ) ಜಂಟಿ ಸಹಯೋಗದೊಂದಿಗೆ “ಪೆಸುಕಾನ್ 2025“ ಎಂಬ ಶೀರ್ಷಿಕೆ ಅಡಿಯಲ್ಲಿ ಆಗಸ್ಟ್ 8ರಿಂದ 10ರವರಗೆ, "ಮಕ್ಕಳ ಶಸ್ತ್ರಚಿಕಿತ್ಸೆಯ ಆಯಾಮವನ್ನು ವಿಸ್ತರಿಸುವುದು" ಎಂಬ ಪರಿಕಲ್ಪನೆಯ ಸ್ಪೂರ್ತಿದಾಯಕ ವಿಷಯದೊಂದಿಗೆ ನಡೆಸಲಾಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಕುಲಪತಿಗಳಾದ ಡಿ. ವೀರೇಂದ್ರ ಹೆಗ್ಗಡೆ, ಉಪಕುಲಪತಿ ಡಾ. ನಿರಂಜನ್ ಕುಮಾರ್ ಅವರ ಆಶೀರ್ವಾದದೊಂದಿಗೆ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಆಗಸ್ಟ್ 9 ರಂದು ಎಸ್.ಡಿ.ಮ್ ಆಸ್ಪತ್ರೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಯತೀಂದ್ರ ನಂಜಯ್ಯ, (ಮಕ್ಕಳ ಶಸ್ತ್ರಚಿಕಿತ್ಸಕರು, ರಾಜ್ಯ ಮಟ್ಟಡ ಅಧ್ಯಕ್ಷರು), ಗೌರವಾನ್ವಿತ ಅತಿಥಿಗಳಾಗಿ ಸಾಕೆತ್ ಶೆಟ್ಟಿ, (ನಿರ್ವಾಹಕ ನಿರ್ದೇಶಕ, ಎಸ್.ಡಿ.ಮ್ ), ಡಾ. ವಿಜಯ್ ಕುಲಕರ್ಣಿ (ಪ್ರಾಂಶುಪಾಲರು ಎಸ್.ಡಿ.ಮ್), ಡಾ. ಅನಿಲ್ ಹಲಗೆರಿ ಬಿ, (ಪೆಸುಕಾನ್ 2025 ರ ಅಧ್ಯಕ್ಷರು), ಡಾ. ವಿಜಯ್ ಪೂಜಾರ್ ಸಿ (ಪೆಸುಕಾನ್ 2025, ರ ಸಹ-ಅಧ್ಯಕ್ಷರು), ಡಾ. ಕಿರಣ್ ಎಂ (ಗೌರವಾನ್ವಿತ ರಾಜ್ಯ ಮಟ್ತ್ಟದ ಕಾರ್ಯದರ್ಶಿ, ಐಎಪಿಎಸ್–ಕೆಎಸ್‌ಸಿ), ಡಾ. ಅಕ್ಷಯ್ ಕಲಾವಂತ್ (ಪೆಸುಕಾನ್ 2025, ರ ಸಂಘಟನಾ ಕಾರ್ಯದರ್ಶಿ), ಡಾ. ಪ್ರಶಾಂತ್ ಕೆ ಜುಲ್ಪಿ (ಪೆಸುಕಾನ್ 2025, ಖಜಾಂಚಿ) ಮತ್ತು ಡಾ. ವೆಂಕಟೇಶ್ ಕೆ ಎಲ್,ಬೆಂಗಳೂರು (ಐಎಪಿಎಸ್–ಕೆಎಸ್‌ಸಿಯ ಚುನಾಯಿತ ಅಧ್ಯಕ್ಷರು) ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ಆಗಸ್ಟ್ 8 ರಂದು, ಹುಬ್ಬಳ್ಳಿಯ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಡಾ. ರಾಜಶಂಕರ ಸಂಕಲ್ ಹಾಗೂ ಡಾ ರವೀಂದ್ರ ಖಾಸನಿಸ್ ರವರ ಸಹಯೋಗದೋಂದಿಗೆ ಮಕ್ಕಳ ಮೂತ್ರಪಿಂಡದ ಕಲ್ಲಿನ ಚಿಕಿತ್ಸೆ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಯಿತು. ಆಗಸ್ಟ್ 9 ಮತ್ತು 10 2025 ರಂದು ಎಸ್‌ಡಿಎಂ ಆಸ್ಪತ್ರೆ ಧಾರವಾಡದಲ್ಲಿ ನಡೆದ ಮುಖ್ಯ ಸಮ್ಮೇಳನದಲ್ಲಿ ಮಕ್ಕಳ ಅರ್ಭುಧರೋಗ, ಎದೆಗೂಡಿನ ಮತ್ತು ವಾಯುಮಾರ್ಗ ಶಸ್ತ್ರಚಿಕಿತ್ಸೆ, ಭ್ರೂಣದ ಶಸ್ತ್ರಚಿಕಿತ್ಸೆ ಹಾಗೂ ಲಾಪ್ರೋಸ್ಕೋಪಿ ಮತ್ತು ರೊಬೊಟಿಕ್ ಶಸ್ತ್ರಚಿಕಿತ್ಸೆ ಕುರಿತು ಉಪನ್ಯಾಸ ನೀಡಲಾಯಿತು. ಈ ಕಾರ್ಯಾಕ್ರಮದಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಉಪನ್ಯಾಸಕರು ಮತ್ತು ಪ್ರತಿನಿಧಿಗಳು ಪಾಲ್ಗೊಂಡಿದರು.

ಯಶಸ್ಸಿನ ಬದುಕಿಗೆ ಕೌಶಲಯುತ ಶಿಕ್ಷಣ ಅತ್ಯಗತ್ಯ -ಕೆ ಆರ್ ಪಂಡಿತ್

Article Image

ಯಶಸ್ಸಿನ ಬದುಕಿಗೆ ಕೌಶಲಯುತ ಶಿಕ್ಷಣ ಅತ್ಯಗತ್ಯ -ಕೆ ಆರ್ ಪಂಡಿತ್

ಕಲ್ಲಬೆಟ್ಟು : ಶಿಸ್ತು ಸಂಯಮದ ನಡವಳಿಕೆ ಬೌದ್ಧಿಕ ವಿಕಾಸಕ್ಕೆ ಪೂರಕ. ಸ್ವಯಂಪ್ರೇರಣೆಯಿಂದ ಪ್ರಾಮಾಣಿಕವಾಗಿ ಸಲ್ಲಿಸುವ ಸೇವೆ ಸಾರ್ಥಕ ಬದುಕಿಗೆ, ಸಮಾಜದ ಉನ್ನತಿಗೆ ಸಹಾಯಕ. ಕಠಿಣ ಪರಿಶ್ರಮ ಮತ್ತು ಕೌಶಲಗಳು ಯಶಸ್ಸಿನ ಆಧಾರಸ್ತಂಭಗಳು. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಬೆಳೆವಣಿಗೆ ಸಾಧ್ಯ. ಮನಸಾರೆ ಕಲಿತು ಹೃದಯಪೂರ್ವಕವಾಗಿ ಅನುಷ್ಠಾನ ಮಾಡಿದರೆ ಪ್ರತಿಫಲವೂ ಒಳ್ಳೆಯದಾಗಿರುತ್ತದೆ ಎಂದು ಮೂಡುಬಿದಿರೆ ಹಿರಿಯ ನ್ಯಾಯವಾದಿಗಳಾದ ಕೆ.ಆರ್. ಪಂಡಿತ್ ಹೇಳಿದರು. ಅವರು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ, ಎನ್ಎಸ್ಎಸ್, ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿಯವರು ಮಾತನಾಡುತ್ತ ಹಿರಿಯರ ಅನುಭವದ ಮಾತು ಕಿರಿಯರಿಗೆ ದಾರಿದೀಪ. ಭೂಮಿಯಲ್ಲಿ ಬಿತ್ತಿದ ಬೀಜಕ್ಕೆ  ನೀರು ಗೊಬ್ಬರವನ್ನು ಕೊಟ್ಟು ಬಂದ ಕಳೆಯನ್ನು ಕಾಲಕಾಲಕ್ಕೆ ಕೀಳುತ್ತ ಮುಂದೆ ಫಲವನ್ನು ಪಡೆಯುವಂತೆ ಬದುಕೆಂಬ ತೋಟದಲ್ಲಿ ಗುಣಗಳಿಗೆ ನೀರೆರೆದು ಪೋಷಿಸಿ ದೋಷಗಳನ್ನು ನಿವಾರಿಸಿಕೊಂಡಾಗ ಅರ್ಥಪೂರ್ಣವೂ ಸಮಾಜಕ್ಕೆ ಉಪಯುಕ್ತ ಜೀವನವೂ ನಮ್ಮದಾಗುತ್ತದೆ. ಆ ನಿಟ್ಟಿನಲ್ಲಿ ವಿವಿಧ ಘಟಕಗಳ ಕಾರ್ಯಚಟುವಟಿಕೆಗಳಲ್ಲಿ ಬದ್ಧತೆಯಿಂದ ಪಾಲ್ಗೊಂಡು ಬದುಕನ್ನು ಉಜ್ವಲಗೊಳಿಸಿಕೊಳ್ಳುವಂತೆ ಪ್ರೇರಣೆಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಮಾತನಾಡಿ ಸಮಾಜ ಸೇವೆಯ ಮೂಲಕ ದೇಶದ ಅಭಿವೃದ್ಧಿಯ ಕನಸನ್ನು ಕಾಣಬೇಕಾದರೆ ಶಾಲೆ ಕಾಲೇಜುಗಳಲ್ಲಿ  ವಿವಿಧ ಘಟಕಗಳ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಪಾಲ್ಗೊಳ್ಳಬೇಕು. ನೋಡಿ ಕಲಿ ಮಾಡಿ ತಿಳಿ ತತ್ವವನ್ನು ಅಳವಡಿಸಿಕೊಳ್ಳಬೇಕು. ಇಂದಿನ ಸವಾಲಿನ ಪಾಠಗಳು ಮುಂದಿನ ಸಂತೋಷದ ಬದುಕಿಗೆ ಪ್ರೇರಣೆಯಾಗುತ್ತದೆ. ಇಂದು ಬದುಕಿನಲ್ಲಿ ಮಾಡಿಕೊಳ್ಳುವ ಚಿಕ್ಕ ಬದಲಾವಣೆ ದೊಡ್ಡ ಸಾಧನೆಗೆ ಕಾರಣವಾಗುತ್ತದೆ. ಜೀವನವನ್ನು ಬಂದ ರೀತಿಯಲ್ಲಿ ಸ್ವೀಕರಿಸುವುದು ಒಂದು ಕಲೆ. ಧೈರ್ಯ ಮತ್ತು ಸಾಹಸದ ಬದುಕಿಗೆ ನಮ್ಮನ್ನು ತೆರೆದುಕೊಂಡಾಗ ನೈಜ ಜೀವನ ದರ್ಶನವಾಗುತ್ತದೆ ಎಂದು ನುಡಿದರು. ವೇದಿಕೆಯಲ್ಲಿ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಎನ್ ಸಿಸಿ ಅಧಿಕಾರಿ ಲೆಫ್ಟಿನೆಂಟ್ ಮಹೇಂದ್ರ ಜೈನ್, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ತೇಜಸ್ವಿ ಭಟ್, ರೋವರ್ಸ್ ಅಧಿಕಾರಿ ಪ್ರದೀಪ್ ಕೆಪಿ ಮತ್ತು ವಿವಿಧ ಘಟಕಗಳ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ರೆಡ್ ಕ್ರಾಸ್ ಅಧಿಕಾರಿ ಪ್ರಶಾಂತ ಶೆಟ್ಟಿ ಸ್ವಾಗತಿಸಿ, ರೋವರ್ಸ್ ವಿದ್ಯಾರ್ಥಿ ರೇವಣ್ಣ ಸಿದ್ದು ಮತ್ತು ರೆಡ್ ಕ್ರಾಸ್ ವಿದ್ಯಾರ್ಥಿ ಮನ್ನಾ ಭೋಜಕ್ಕ ಅತಿಥಿಗಳನ್ನು ಪರಿಚಯಿಸಿದರು. ಎನ್ ಸಿಸಿ ಕೆಡೆಟ್ ದಿಶಾಂತ್ ಗೌಡ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್ಎಸ್ಎಸ್ ಸ್ವಯಂಸೇವಕಿ ರಶ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ರೇಂಜರ್ಸ್ ಅಧಿಕಾರಿ ಸಂಧ್ಯಾ ನಾಯಕ್ ವಂದಿಸಿದರು.

ಭಾರತೀಯ ಜೈನ್ ಮಿಲನ್‌: ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ

Article Image

ಭಾರತೀಯ ಜೈನ್ ಮಿಲನ್‌: ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ

ಮಹಾನಗರ, ಜು. 20: ಭಾರತೀಯ ಜೈನ್ ಮಿಲನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಗರದ ಲಾರ್ಡ್ ಮಹಾವೀರ್ ಜೈನ್ ಬೋರ್ಡಿಂಗ್‌ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ಭಾರತೀಯ ಜೈನ್ ಮಿಲನ್ ಅಧ್ಯಕ್ಷ ರತ್ನಾಕರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಶಾರದಾ ವಿದ್ಯಾ ಸಮೂಹದ ಟ್ರಸ್ಟಿ ಸುಧಾಕರ್ ರಾವ್‌ ಪೇಜಾವರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಡಾ| ಸಿ.ಕೆ. ಬಲ್ಲಾಳ್ ಹಾಗೂ ಉದ್ಯಮಿ ದರ್ಶನ್ ಜೈನ್‌, ದಿಲೀಪ್‌ ಜೈನ್‌ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮಿಲನ್‌ ವತಿಯಿಂದ ಗೌರವಿಸಲಾಯಿತು. ನ್ಯಾಯಾಂಗ ಇಲಾಖೆಯ ಆಡಳಿತಾಧಿಕಾರಿಯಾಗಿ ನೇಮಕಗೊಂಡ ರಾಜೇಶ್ ಎಂ. ಅವರನ್ನು ಮಿಲನ್ ವತಿಯಿಂದ ಸಮ್ಮಾನಿಸಲಾಯಿತು. ವಲಯ ನಿರ್ದೇಶಕ ಸುಕುಮಾರ್ ಬಲ್ಲಾಳ್, ಕಾರ್ಯದರ್ಶಿ ವೈಶಾಲಿ ಪಡೀವಾಳ್ ಇದ್ದರು. ಪ್ರೀಯ ಸುದೇಶ್, ಶಿಲ್ಪಾ ಸಂದೀಪ್ ನಿರೂಪಿಸಿದರು. ನಿರ್ಮಲಾ ಜ್ಞಾನಚಂದ್ರ, ಯಶೋಧರ ಜೈನ್‌ ಸಹಕರಿಸಿದರು.

ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

Article Image

ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

BA, BSc, B.Com ವಿವಿಧ ಡಿಗ್ರಿ ಕೋರ್ಸ್‌ಗಳನ್ನು ಪೂರ್ಣಗೊಳಿಸಲು ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ತೆರೆಯಲಾಗಿದೆ. ಇದರ ಸಂಪೂರ್ಣ ಶುಲ್ಕವನ್ನು ನಿರ್ದೇಶನಾಲಯದಿಂದಲೇ ಭರಿಸಲಾಗುವುದು. ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 01.07.2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.08.2025 ವೆಬ್ ಸೈಟ್: https://minority. Ksouportal.com/ https://dom.karnataka.gov.in/

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Article Image

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಬಯಸುವ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳು 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ./ಐ ಎ ಎಸ್., ಕೆ.ಎ.ಎಸ್. ಕೆ.ಪಿ.ಎಸ್.ಸಿ- ಗ್ರೂಪ್ ಸಿ, RRB & SSCಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02.08.2025 ಹೆಚ್ಚಿನ ವಿವರ ಹಾಗೂ ಅರ್ಜಿ ಸಲ್ಲಿಸಲು https://sevasindhu.karnataka.gov.in/sevasindhu/departmentservices https://dom.karnataka.gov.in/

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Article Image

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ವಿದ್ಯಾರ್ಥಿವೇತನಕ್ಕೆ SSP ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ: 30.09.2025 ಅರ್ಜಿಗಳನ್ನು SSP ಪೋರ್ಟಲ್ https://ssp.postmatric.karnataka.gov.in/ssppre/ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ https://dom.karnataka.gov.in/

ವಿದ್ಯಾರ್ಥಿವೇತನಕ್ಕಾಗಿ‌ ಆನ್‌ಲೈನ್ ಅರ್ಜಿ ಆಹ್ವಾನ

Article Image

ವಿದ್ಯಾರ್ಥಿವೇತನಕ್ಕಾಗಿ‌ ಆನ್‌ಲೈನ್ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ QS Top 500 ಪಟ್ಟಿಯಲ್ಲಿ ಸ್ಥಾನ ಪಡೆದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.09.2025 ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ https://dom.karnataka.gov.in/ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/ Sevasindhu/DepartmentService ಮೂಲಕ ಸಲ್ಲಿಸಬೇಕು.

ಮೆಟ್ರಿಕ್ ನಂತರದ ಶುಲ್ಕ ಮರುಪಾವತಿಗೆ ಆನ್‌ಲೈನ್ ಅರ್ಜಿ ಆಹ್ವಾನ

Article Image

ಮೆಟ್ರಿಕ್ ನಂತರದ ಶುಲ್ಕ ಮರುಪಾವತಿಗೆ ಆನ್‌ಲೈನ್ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಪಿ ಹೆಚ್ ಡಿ ತಾಂತ್ರಿಕ & ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ SSP ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.09.2025 ಅರ್ಜಿಗಳನ್ನು SSP ಪೋರ್ಟಲ್ https://ssp.postmatric.karnataka.gov. in/post_sa/signin.aspx ಮೂಲಕ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್: https://dom.karnataka.gov.in/

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಪಿತೃದೇವೋಭವ ಕಾರ್ಯಕ್ರಮ

Article Image

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಪಿತೃದೇವೋಭವ ಕಾರ್ಯಕ್ರಮ

ಮೂಡುಬಿದಿರೆ: ನಾವೆಲ್ಲಾ ಅಪ್ಪ ಎಂದರೆ ಪ್ರೀತಿ ಮಾಡುತ್ತೇವೆ. ನಮ್ಮ ಎಲ್ಲಾ ತಪ್ಪುಗಳನ್ನು ತಿದ್ದಿ ಸರಿದಾರಿಗೆ ತರುವ ಹೀರೋ ಅಪ್ಪ. ಅಮ್ಮನಿಂದ ಜೀವ ಲಭಿಸಿದರೆ, ಅಪ್ಪನಿಂದ ಜೀವನ ಲಭಿಸುತ್ತದೆ. ನಮ್ಮ ಧೈರ್ಯವೇ ಅಪ್ಪನ ಕೈ ಬೆರಳು. ಅಪ್ಪನ ಹೆಗಲ ಮೇಲೆ ಮಲಗಿದಾಗ ಆಗುವ ಆನಂದ ಮತ್ತೆಲ್ಲಿಯೂ ಸಿಗುವುದಿಲ್ಲ. ಅಪ್ಪ ನಮ್ಮ ಕಣ್ಣ ಮುಂದಿರುವ ನಿಜವಾದ ದೇವರು. ಅಪ್ಪನಿಂದ ಜೀವನದಲ್ಲಿ ಶಿಸ್ತು, ಬದುಕುವ ಕಲೆ ಎಲ್ಲವನ್ನೂ ಮಕ್ಕಳು ಕಲಿಯುತ್ತಾರೆ. ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಹೇಳಿದರು. ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಿದ್ದ ತಂದೆಗೆ ಗೌರವ ಸಲ್ಲಿಸುವ ವಿನೂತನ “ಪಿತೃ ದೇವೋಭವ” ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಮಾತನಾಡಿ, ತಂದೆಯೇ ನನಗೆ ದೇವರು. ತಂದೆಯೇ ನನ್ನ ಖುಷಿ, ಸಂತಸ ಎಲ್ಲವೂ ಆಗಿದ್ದಾರೆ. ಅವರ ಮಮತೆ, ಮಾರ್ಗದರ್ಶನ ಮತ್ತು ತಾಳ್ಮೆ ನನ್ನ ಜೀವನವನ್ನು ಬೆಳಗಿಸುತ್ತಿವೆ. ಅವರು ಬೋಧಿಸಿದ ಪ್ರತೀ ಪಾಠ, ತೋರಿಸಿದ ಪ್ರತೀ ದಾರಿಯಲ್ಲಿ ನಾ ನನ್ನ ಕನಸುಗಳನ್ನು ಸಾಕಾರಗೊಳಿಸಿಕೊಂಡು ಸಾಗುತ್ತಿದ್ದೇನೆ. ನನ್ನ ಕನಸುಗಳಿಗೆ ಚೆನ್ನಾಗಿ ನಿಂತು ನಾ ಓಡಿದಾಗ ಹಿಂದೆಯೇ ಓಡಿ ನೀಡಿದ ಆಶೀರ್ವಾದಗಳ ನೆರಳನ್ನು ನಾನು ಇಂದಿಗೂ ಅನುಭವಿಸುತ್ತಿದ್ದೇನೆ. ತಂದೆ ಮಕ್ಕಳ ನಡುವಿನ ಪ್ರೀತಿ, ಒಲುಮೆ, ಭಾಂದವ್ಯ ಎಂದಿಗೂ ಮರೆಯಲಾಗದು. ಮಕ್ಕಳಾದ ನಾವು ನಮ್ಮ ತಂದೆಯ ನೋವು-ನಲಿವುಗಳೆಲ್ಲವೂ ತಿಳಿದಿರಬೇಕು. ಅವರ ಪ್ರತೀ ಹೆಜ್ಜೆಯಲ್ಲಿಯೂ ನಾವೂ ಅವರ ಜೊತೆಯಾಗಿರಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳವರ ತಂದೆ ಹಾಗೂ ಟ್ರಸ್ಟಿಯೂ ಆಗಿರುವ ಕೆ. ರಾಜರತ್ನ ಜೈನ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಬಿ. ಪಿ. ಸಂಪತ್ ಕುಮಾರ್, ಮುಖ್ಯೋಪಾಧ್ಯಾ ಯರಾದ ಶಿವಪ್ರಸಾದ್ ಭಟ್, ಉಪ ಮುಖ್ಯೋಪಾಧ್ಯಾಯ ಜಯ ಶೀಲ, ಕಾರ್ಕಳದ ಸೂಪರ್ ಮಾರ್ಕೆಟ್‌ನ ಮಾಲಿಕರಾದ ರೂಪೇಶ್ ಉಪಸ್ಥಿತರಿದ್ದರು. ನಂತರ ತಂದೆಯ ಮಹತ್ವವನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳಾದ ಧನುಷ್ ನಿರೂಪಿಸಿದರು. ಸಾನ್ವಿ ಸ್ವಾಗತಿಸಿದರು. ವರುಣ್ ವಂದಿಸಿದರು.

ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೆ ಸಾಲಿನ ಶೈಕ್ಷಣಿಕ ತರಗತಿಗಳ ಶುಭಾರಂಭ ಕಾರ್ಯಕ್ರಮ

Article Image

ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೆ ಸಾಲಿನ ಶೈಕ್ಷಣಿಕ ತರಗತಿಗಳ ಶುಭಾರಂಭ ಕಾರ್ಯಕ್ರಮ

ಮೂಡುಬಿದಿರೆ, ಜೂ.12: ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೆ ಸಾಲಿನ ಶೈಕ್ಷಣಿಕ ತರಗತಿಗಳ ಶುಭಾರಂಭ ಕಾರ್ಯಕ್ರಮವನ್ನು ಪ. ಪೂ. ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಮಹಾಸ್ವಾಮೀಜಿಗಳವರು ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವಿಧ್ಯೆ ಯಾರೂ ಅಪಹರಿಸಲಾಗದ ಅಮೂಲ್ಯ ನಿಧಿ ಅದನ್ನು ಉತ್ತಮ ಮನಸ್ಸೆಂಬ ಕುಂಭದಲ್ಲಿ ಭೋದಕರ ಅಮೃತವಾಣಿ ತುಂಬಿ ಉದಾಸೀನ ಮರೆವು ಎಂಬ ಕೊಳೆಯನ್ನು ತೊಳೆದು ಯಶಸ್ವಿ ಜೀವನಕ್ಕಾಗಿ ಉಪಯೋಗಿಸಿ ಎಂದು ಆಶೀರ್ವಾದ ನೀಡಿದರು. ಕಾರ್ಯಕ್ರಮವು ಬೆಳಿಗ್ಗೆ 10.00 ಗಂಟೆಗೆ ರಮಾ ರಾಣಿ ಶೋಧ ಸಂಸ್ಥಾನ ಬಳಿ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಶುಭಾರoಭಗೊಂಡು, ಧವಳತ್ರಯ ಜೈನ ಕಾಶಿ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ನೀಡಲಾಯಿತು. ಮೂಡಬಿದ್ರೆ ಎಂ.ಸಿ.ಸಿ. ಬ್ಯಾಂಕ್ ನ ಅಧ್ಯಕ್ಷರೊ ಸಂಸ್ಥೆ ಯ ಆಡಳಿತ ಮಂಡಳಿಯಾವರೂ ಅದ ಎಂ. ಬಾಹುಬಲಿ ಪ್ರಸಾದ್ ರವರು 2024-25ರ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಾದ ಮನಸ್ವೀನಿ, ರೋಹಿತ್, ಶ್ರುತಿ ಇವರಿಗೆ ನಗದು ಮೊತ್ತ ಬಹುಮಾನ ವಿತರಿಸಿದರು ಹಾಗೂ ವಿದ್ಯಾರ್ಥಿಗಳಿಗೆ ವಿಧ್ಯೆಯ ಮಹತ್ವವನ್ನು ತಿಳಿಸಿಕೊಟ್ಟರು. ಮೂಡಬಿದಿರೆಯ ಖ್ಯಾತ ನ್ಯಾಯವಾದಿಗಳು ಹಾಗೂ ನೋಟರಿ ಹಾಗೂ ಸಂಸ್ಥೆಯ ನೂತನ ಬಾಲಕ ಪಾಲಕ ಸಮಿತಿ ಅಧ್ಯಕ್ಷರಾಗಿ ನಿಯುಕ್ತಗೊಂಡ ಶ್ವೇತಾ ಜೈನ್ ಇವರು ಇನ್ನೆರವೀಲ್ ಕ್ಲಬ್ ನ ಮೂಲಕ ಕಾಲೇಜ್ ಗೆ ಕುಡಿಯುವ ನೀರಿನ ಡ್ರಮ್ ಅನ್ನು ತಮ್ಮ ತಂಡ ಸದಸ್ಯರೊಂದಿಗೆ ಕೊಡುಗೆಯಾಗಿ ನೀಡಿ ಮಾತನಾಡಿದರು, ಮೂಡುಬಿದಿರೆ ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ವಿದ್ಯಾಕೇಂದ್ರ ಎಂದರು. ಸಂಜಯಂತ ಕುಮಾರ್ ಶೆಟ್ಟಿ ಶುಭಕೋರಿದರು ವಿದ್ಯಾರ್ಥಿಗಳಿಗೆ ಶ್ರೀ ದವಳತ್ರಯ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕಗಳನ್ನು ನೀಡಲಾಯಿತು. ಉಪನ್ಯಾಸಕರಾದ ಹಿತೇಶ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಸುಷ್ಮಾ ಇವರು ಸ್ವಾಗತಿದರು. ಉಪನ್ಯಾಸಕಿ ಸುಜಾತಾ ಇವರು ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಪದಾಧಿಕಾರಿಗಳಾದ ಅನಿತಾ ಪೃಥ್ವಿರಾಜ್, ಸುಮಂಗಲ ತಂತ್ರಿ, ದಿವ್ಯ ಹರ್ಷಪಡಿವಾಳ, ಶೋಭಾ ಸಿಕ್ವೆರಾ, ರೇಷ್ಮಾ ಮಹೇಂದ್ರವರ್ಮ, ವೀಣಾ ರತ್ನರಾಜ್, ಪದ್ಮಜಾ ಮಹೇಂದ್ರ ಉಪಸ್ಥಿತರಿದ್ದರು.

ಕಾರ್ಕಳ, ಹಿರಿಯಂಗಡಿ: ವಿದ್ಯಾರ್ಥಿಗಳ ನೋಂದಾವಣೆ ಆರಂಭ

Article Image

ಕಾರ್ಕಳ, ಹಿರಿಯಂಗಡಿ: ವಿದ್ಯಾರ್ಥಿಗಳ ನೋಂದಾವಣೆ ಆರಂಭ

ಕಾರ್ಕಳ ತಾಲೂಕಿನ ಹಿರಿಯಂಗಡಿಯಲ್ಲಿರುವ ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮ ಮತ್ತು ಇದರ ಆಡಳಿತಕ್ಕೊಳಪಟ್ಟ ಎಸ್ ಎನ್ ವಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 2025-26 ನೇ ಸಾಲಿಗೆ ವಿದ್ಯಾರ್ಥಿಗಳ ನೋಂದಾವಣೆ ಆರಂಭಗೊಂಡಿದೆ. ನಿಲಯದಲ್ಲಿ 6ನೇ ತರಗತಿಯಿಂದ ಪಿಯುಸಿ ತರಗತಿವರೆಗೆ ಪ್ರವೇಶ ನೀಡಲಾಗುತ್ತದೆ. ಕಳೆದ 80 ವರ್ಷಗಳಿಂದ ಗುರುಕುಲ ಪದ್ಧತಿಯೊಂದಿಗೆ ಸಂಸ್ಕಾರಯುತ ಜೀವನದ ಮೌಲ್ಯಗಳನ್ನು ಸಾವಿರಾರು ವಿದ್ಯಾರ್ಥಿಗಳಿಗೆ ದಯಪಾಲಿಸಿ ನಾಡಿನಾದ್ಯಂತ ಉತ್ತಮ ಶಿಕ್ಷಣ ಸಂಸ್ಥೆ ಎಂದು ಗುರುತಿಸಲ್ಪಟ್ಟಿರುತ್ತದೆ. ಗುಣಮಟ್ಟದ ಶಾಲಾ ಶಿಕ್ಷಣದೊಂದಿಗೆ ಕಡ್ಡಾಯ ಧಾರ್ಮಿಕ ಶಿಕ್ಷಣ, ನೈತಿಕತೆ, ಕ್ರೀಡೆ, ಭಾಷಣ ಕಲೆ, ಭಜನೆ, ಸಮಾಜ ಸೇವೆ, ಪೌರೋಹಿತ್ಯ ಅಧ್ಯಯನದ ಬಗ್ಗೆಯೂ ಗಮನಕೊಡಲಾಗುವುದು. ಉತ್ತಮ ವಸತಿ, ಊಟ – ತಿಂಡಿ, ಸ್ನಾನಕ್ಕೆ ಬಿಸಿನೀರು, ಶುದ್ಧ ಕುಡಿಯುವ ನೀರು, ಸುಸಜ್ಜಿತ ರೂಮಿನ ವ್ಯವಸ್ಥೆ, ಕ್ರೀಡೆ ಮತ್ತು ಮನೋರಂಜನ ಚಟುವಟಿಕೆಗಳೊಂದಿಗೆ ಪ್ರಶಾಂತ ವಾತಾವರಣದಲ್ಲಿ ಜ್ಞಾನಾರ್ಜನೆಗೆ ಸರ್ವ ರೀತಿಯ ಪ್ರೋತ್ಸಾಹ ನೀಡಲಾಗುತ್ತದೆ. ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಸ್ವಸ್ತಿ ಶ್ರೀ ನೇಮಿಸಾಗರ ವರ್ಣೀಜಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಪ್ರಸ್ತುತ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಸಕ್ತ ಪೋಷಕರು ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 20.05.2025 ರೊಳಗೆ ಕಚೇರಿಯನ್ನು ದೂರವಾಣಿ ಸಂಖ್ಯೆ 8197500498 ಮೂಲಕ ಸಂಪರ್ಕಿಸಲು ಕೋರಲಾಗಿದೆ.

ಪಠ್ಯಕ್ರಮ ಅನುಷ್ಠಾನ ಬೆಂಬಲ ಕಾರ್ಯಕ್ರಮ

Article Image

ಪಠ್ಯಕ್ರಮ ಅನುಷ್ಠಾನ ಬೆಂಬಲ ಕಾರ್ಯಕ್ರಮ

ಸತ್ತೂರು, ಧಾರವಾಡ : ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಶಿಕ್ಷಣ ಘಟಕವು ರಾಷ್ಟ್ರೀಯ ವೈದ್ಯಕೀಯ ಆಯೋಗದ ಪ್ರಾಂತೀಯ ನೋಡಲ್ ಕೇಂದ್ರ, ಜೆ.ಎನ್.ಎಂ.ಸಿ. ಬೆಳಗಾವಿಯ ಸಹಯೋಗದೊಂದಿಗೆ ಏಪ್ರಿಲ್ 03 ಮತ್ತು 04, 2025ರಂದು “ಪಠ್ಯಕ್ರಮ ಅನುಷ್ಠಾನ ಬೆಂಬಲ ಕಾರ್ಯಕ್ರಮ” ಎಂಬ ವಿಷಯದ ಮೇಲೆ 2 ದಿನಗಳ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಾಗಾರವು ಅಧ್ಯಾಪಕರಿಗೆ, ವೈದ್ಯಕೀಯ ವಿಷಯದಲ್ಲಿ ಹೊಸ ಬೋಧನೆ ಮತ್ತು ಕಲಿಕೆಯ ವಿಧಾನಗಳನ್ನು ಅಳವಡಿಸಿಕೊಳ್ಳಲು ಹೆಚ್ಚು ಸಹಕಾರಿಯಾಗಿದ್ದು, ಈ ಕಾರ್ಯಾಗಾರವು ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಅನುಮೋದಿಸಲ್ಪಟ್ಟಿದೆ. ಅಧ್ಯಾಪಕರು ತಮ್ಮ ದೈನಂದಿನ ವೈದ್ಯಕೀಯ ಜ್ಞಾನವನ್ನು ನವೀಕರಿಸಲು ಇದು ಉತ್ತಮ ವೇದಿಕೆಯಾಗಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ ಅವರು ಮುಖ್ಯ ಅತಿಥಿಗಳಾಗಿದ್ದು, ಜೆ.ಎನ್.ಎಂ.ಸಿಯ, ಎನ್.ಎಂ.ಸಿ. ಪ್ರಾಂತೀಯ ನೋಡಲ್ ಕೇಂದ್ರದ ಸಂಯೋಜಕರಾದ ಡಾ. ಸುನಿತಾ ಪಾಟೀಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾದ ಡಾ. ನಿರಂಜನ್ ಕುಮಾರ, ಉಪ ಕುಲಪತಿಗಳು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ: ಪ್ರೀತಿ ಮತ್ತು ಉತ್ಸಾಹದಿಂದ ಬೋದಿಸುತ್ತಾ ಉತ್ತಮ ಶಿಕ್ಷಕರಾಗಬೇಕು. ವೈದ್ಯಕೀಯ ಶಿಕ್ಷಕರು ಉತ್ತಮ ಜ್ಞಾನ ಮತ್ತು ಸಂವಹನ ಕೌಶಲ್ಯಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳನ್ನು ಸ್ವತಂತ್ರರಾಗುವಂತೆ ರೂಪಿಸುವುದು ಶಿಕ್ಷಕರಿಗೆ ಉತ್ತಮ ತೃಪ್ತಿಯನ್ನು ನೀಡುತ್ತದೆ. ಶಿಕ್ಷಣವು ವೃತ್ತಿಪರತೆ ಮತ್ತು ಜೀವನದ ಕಲೆಯನ್ನು ಕಲಿಸುತ್ತದೆ. ಬದಲಾಗುತ್ತಿರುವ ಶಿಕ್ಷಣ ವ್ಯವಸ್ಥೆಯಲ್ಲಿ ವಿಮರ್ಶಾತ್ಮಕ ಚಿಂತನೆ ಅಗತ್ಯ. ಶಿಕ್ಷಣದ ಜ್ಞಾನವನ್ನು ಹಂಚಿಕೊಳ್ಳಲು ಸಹಯೋಗ ಮತ್ತು ಸಹಕಾರ ಅಗತ್ಯ. ಉತ್ತಮ ಶಿಕ್ಷಣವು ವ್ಯಕ್ತಿಯ ಬುದ್ಧಿವಂತಿಕೆಯನ್ನು ಜಾಗೃತಗೊಳಿಸುತ್ತದೆ. ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಡಾ. ದೀಪಕ ಕನಬೂರ, ಔಷಧಗುಣ ಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ವೈದ್ಯಕೀಯ ಶಿಕ್ಷಣ ಘಟಕದ ಸಂಯೋಜಕರಾದ ಡಾ. ರಾಧಿಕಾ ಶೇರ್ಖಾನೆ ಮತ್ತಿತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಾ. ಅರ್ಚನಾ ಡಂಬಳ ಅವರು ಅತಿಥಿಗಳನ್ನು ಸ್ವಾಗತಿಸಿ, ಎನ್.ಎಂ.ಸಿ. ಪ್ರಾಂತೀಯ ನೋಡಲ್ ಕೇಂದ್ರದ ಸಂಯೋಜಕರಾದ ಡಾ. ಸುನಿತಾ ಪಾಟೀಲ್ ಅವರನ್ನು ಪರಿಚಯಿಸಿದರು. ಡಾ. ಸ್ಮೀತಾ ಪ್ರಭು ಕಾರ್ಯಕ್ರವನ್ನು ನಿರೂಪಿಸಿದರು. ಡಾ. ಸ್ನೇಹಾ ವಂದನಾರ್ಪಣೆ ಸಲ್ಲಿಸಿದರು.

ಸೌಟ್ಸ್ - ಗೈಡ್ಸ್ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ

Article Image

ಸೌಟ್ಸ್ - ಗೈಡ್ಸ್ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ

ದಿಗಂಬರ ಜೈನ ವಿದ್ಯಾ ವರ್ಧಕ ಸಂಘ (ರಿ) ಮೂಡಬಿದ್ರೆ ಇದರ ಆಡಳಿತಕ್ಕೆ ಒಳಪಟ್ಟ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮತ್ತು ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ 2025ನೇ ಸಾಲಿನ ಸ್ಕೌಟ್-ಗೈಡ್ಸ್ ಮತ್ತು ಕಬ್ಸ್- ಬುಲ್ ಬುಲ್ಸ್ ಐದು ದಿನಗಳ ಬೇಸಿಗೆ ಶಿಬಿರವು ದಿನಾಂಕ 24/03/25 ರಂದು ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡಿತು. ಶಿಬಿರದ ಉದ್ಘಾಟನೆಯನ್ನು ಶಾಲಾ ತಾಯಂದಿರ ಸಮಿತಿಯ ಅಧ್ಯಕ್ಷರಾದ ಆರತಿ ಜೈನ್ ರವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪವನ್ ಕುಮಾರ್ ಇವರು ಧ್ವಜಾರೋಹಣ ಮಾಡುವುದರ ಮೂಲಕ ಶಿಬಿರಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ ಜೈನ್ ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಿಬಿರದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದೆಂದು ತಿಳಿಸಿದರು. ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ವೀಣಾ ಪ್ರಮೋದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗೈಡ್ ಕ್ಯಾಪ್ಟನ್ ಮಂಜುಳಾ ಜೈನ್, ಬುಲ್ ಬುಲ್ ಕ್ಯಾಪ್ಟನ್ ಸಾಕ್ಷಿ ಉಪಸ್ಥಿತರಿದ್ದರು. ಸ್ಕೌಟ್ ಮಾಸ್ಟರ್ ಪದ್ಮಶ್ರೀ ಸ್ವಾಗತಿಸಿದರು. ಗೈಡ್ಸ್ ಕ್ಯಾಪ್ಟನ್ ಜಯಲಕ್ಷ್ಮಿ ಕಾರ‍್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಸುಮಾರು 100 ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.

ಜೈನ ಧರ್ಮವು ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದು: ಅಜಿತ್‌ ಜೈನ್‌ ಅಭಿಮತ

Article Image

ಜೈನ ಧರ್ಮವು ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದು: ಅಜಿತ್‌ ಜೈನ್‌ ಅಭಿಮತ

ಜೈನ ಧರ್ಮವು ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದಾಗಿದೆ. ಯಾವುದೇ ಆಸೆ ಪೂರೈಸಲು ಪೂಜೆ ಮಾಡಬಾರದು. ಬದಲಿಗೆ ಜಿನನ ಗುಣಗಳನ್ನು ಅನುಸರಿಸುತ್ತ ಅವರ ಹಾಗೆ ನಾನೂ ಕೂಡ ಆತ್ಮ ಸಾಕ್ಷತ್ಕಾರವನ್ನು ಹೊಂದುವ ಸಲುವಾಗಿ ಪ್ರಾರ್ಥಿಸಬೇಕು ಎಂದು ಅಜಿತ್‌ ಜೈನ್‌ ಕೊಕ್ರಾಡಿ ಇವರು ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜೈನ ವಿದ್ಯಾರ್ಥಿಗಳಿಗೆ ನಡೆದ ಅಷ್ಟ ವಿಧಾರ್ಚನ ಪೂಜಾ ತರಬೇತಿ ಶಿಬಿರದ ಉದ್ಘಾಟನೆಯನ್ನು ಮಾಡಿ ಹೇಳಿದರು. ಮುಂದುವರಿದು ಮಾತಾನಾಡಿದ ಅವರು ಜೈನ ಧರ್ಮದ ವಿಧಿ ವಿಧಾನಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಜನನಿಗೆ ಅರ್ಘ್ಯ ನೀಡುವ ಪ್ರಕ್ರಿಯೆಯ ಅರ್ಥವನ್ನು ವಿದ್ಯಾರ್ಥಿಗಳು ಅರಿಯಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕೃಷ್ಣರಾಜ ಹೆಗ್ಗಡೆ ಮಾತನಾಡಿ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಪರಿಶ್ರಮವನ್ನು ಶ್ಲಾಘಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್‌ ಜೈನ್ ಮಾತನಾಡಿ ವಿದ್ಯಾರ್ಥಿಗಳು ಧರ್ಮದ ಮಾರ್ಗವನ್ನು ಅನುಸರಿಸುತ್ತಾ ಸ್ಪರ್ಧಾತ್ಮಕ ಜಗತ್ತಿಗೆ ಸಜ್ಜಾಗಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಉಪಸ್ಥಿತರಿದ್ದು, ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಸಂಪತ್‌ ಕುಮಾರ್‌ ಕಾರ್ಯಕ್ರಮವನ್ನು ಸಂಘಟಿಸಿ ನಿರೂಪಿಸಿದರು. ಪಾವನ ಪಂಚನ್ಮೋಕಾರ ಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ವಿಶೇಷ ಚೇತನ (PHYSICALLY HANDICAP) ಮಕ್ಕಳ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Article Image

ವಿಶೇಷ ಚೇತನ (PHYSICALLY HANDICAP) ಮಕ್ಕಳ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಿಗಂಬರ ಜೈನ ಪಂಗಡಕ್ಕೆ ಸೇರಿದ್ದು ಪ್ರಸ್ತುತ 9ನೇ ತರಗತಿಯಿಂದ ಉತ್ತೀರ್ಣರಾಗಿ SSLCಗೆ ಬರುವ ಮತ್ತು ಮೊದಲನೇ ವರ್ಷದ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎರಡನೇ PUCಗೆ ಬರುವ ಅರ್ಹ ವಿಶೇಷ ಚೇತನ (PHYSICALLY HANDICAP) ಮಕ್ಕಳಿಗೆ ತುಮಕೂರಿನ ದಿ| ಎನ್.ಸಿ. ಬೊಮ್ಮಣ್ಣಯ್ಯ ಗುಬ್ಬಿ ರವರ ಹೆಸರಿನಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು, ಆಸಕ್ತ ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ 30-04-2025ರ ಒಳಗೆ ಅರ್ಜಿ ಸಲ್ಲಿಸಬಹುದು ಬಂದ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಸಲ್ಲಿಸಬೇಕಾದ ದಾಖಲಾತಿಗಳು 1) ತಂದೆ/ತಾಯಿ/ಪೋಷಕರ ವಿವರ 2) ವಾರ್ಷಿಕ ವರಮಾನದ ದೃಢೀಕೃತ ಪ್ರತಿ 3) ಅಧಿಕೃತ ವೈದ್ಯರಿಂದ Disability ಬಗ್ಗೆ ಪಡೆದ ಪ್ರಮಾಣ ಪತ್ರ 4) ಆಧಾರ್ ಕಾರ್ಡ್ ಮತ್ತು ಮೊಬೈಲ್ ನಂಬರ್ 5) ಅಂಕ ಪಟ್ಟಿ ಅರ್ಜಿಸಲ್ಲಿಸಬೇಕಾದ ವಿಳಾಸ ಎನ್. ಬಿ. ಶ್ರೇಯಾಂಸ ಕುಮಾ‌ರ್ “ರಾಜಗೃಹ” ಸಾಧನ ರಸ್ತೆ, ಕೆ.ಆರ್. ಬಡಾವಣೆ, ತುಮಕೂರು-572101 ಮೊ: 9901311970.

First Previous

Showing 1 of 2 pages

Next Last