Article Image

ಮೂಡುಬಿದಿರೆ ತಾಲ್ಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ- ಪಾರಮ್ಯ ಮೆರೆದ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ

Article Image

ಮೂಡುಬಿದಿರೆ ತಾಲ್ಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ- ಪಾರಮ್ಯ ಮೆರೆದ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ವಲಯ ಮತ್ತು ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆ ಕಲ್ಲಬೆಟ್ಟು, ಮೂಡುಬಿದಿರೆ ಇವರ ಸಹಯೋಗದಲ್ಲಿ ಮೂಡುಬಿದಿರೆ ತಾಲ್ಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಗಳು 2025-26, ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವಿರೂಪಾಕ್ಷಪ್ಪ ಹೆಚ್ ಅವರು ಮಕ್ಕಳು – ತಾಂತ್ರಿಕ, ವೈದ್ಯಕೀಯ ಕ್ಷೇತ್ರಗಳ ಜೊತೆಗೆ ನಿಮ್ಮ ಆಸಕ್ತಿಯನ್ನು ಮೂಲ ವಿಜ್ಞಾನದ ಸಂಶೋಧನೆಗಳಿಗೆ ತೋರಿಸಬೇಕು ಎಂದು ಕರೆಯನ್ನಿತ್ತು ಶುಭ ಹಾರೈಸಿದರು. ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾಗಿರುವ ಯುವರಾಜ್ ಜೈನ್ ಮಾತನಾಡಿ “ಮಕ್ಕಳೇ ಕೇವಲ ನೀವು ಬದಲಾಗುವುದಲ್ಲ, ಅದರ ಜೊತೆಗೆ ನಿಮ್ಮ ಅಭ್ಯಾಸಗಳನ್ನು ಬದಲಾಯಿಸಿಕೊಳ್ಳಿ. ಅದು ನಿಮ್ಮ ಭವಿಷ್ಯವನ್ನು ಬದಲಿಸಬಲ್ಲದು. ವಿಜ್ಞಾನವೆಂಬ ಸುಜ್ಞಾನದ ಬೆಳಕಿನಲ್ಲಿ ಸಮಾಜಕ್ಕೆ ಒಳಿತಾಗುವ ಕೊಡುಗೆಗಳನ್ನು ನೀಡುವಂತವರಾಗಿ ಬೆಳೆಯಿರಿ” ಎಂದು ಶುಭ ಹಾರೈಸಿದರು. ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್‌ರವರು ಮಾತನಾಡಿ “ವಿಜ್ಞಾನವೆಂಬ ವಿಶೇಷವಾದ ಜ್ಞಾನವನ್ನು ವೃದ್ಧಿಸಿಕೊಂಡು, ಹೊಸ ಹೊಸ ಆವಿಷ್ಕಾರಗಳೊಂದಿಗೆ ಸದೃಢ ದೇಶ ಕಟ್ಟುವ ಸತ್ಪçಜೆಗಳಾಗಿ” ಎಂಬ ಶುಭಾಷಯಗಳನ್ನಿತ್ತರು. ವಿಜ್ಞಾನ ಮಾದರಿ ತಯಾರಿ ಹಾಗೂ ಪ್ರದರ್ಶನದ ಈ ಸ್ಪರ್ಧೆಯಲ್ಲಿ ಗುಂಪು ವಿಭಾಗದಲ್ಲಿ ಎಕ್ಸಲೆಂಟ್ ವಿದ್ಯಾರ್ಥಿಗಳಾದ ನಿಹಾರ್ ಹಾಗೂ ಶಾಶ್ವತ್ (ಪ್ರಥಮ), ಗಗನದೀಪ ಹಾಗೂ ಚಿನ್ಮಯಿ (ದ್ವಿತೀಯ) ಮತ್ತು ಅಭಿನೀತ್ ಹಾಗೂ ಪ್ರಣವ್ (ತೃತೀಯ) ಬಹುಮಾನ ಪಡೆದರೆ, ವೈಯುಕ್ತಿಕ ವಿಭಾಗದಲ್ಲಿ ಸಂತ ಥೋಮಸ್ ಆಂಗ್ಲ ಮಾಧ್ಯಮ ಶಾಲೆ ಇಲ್ಲಿನ ವಿದ್ಯಾರ್ಥಿ ಯಶಸ್ (ಪ್ರಥಮ) ಮತ್ತು ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮೈತ್ರಿ (ದ್ವಿತೀಯ) ಹಾಗೂ ತರುಣ್ (ತೃತೀಯ) ಬಹುಮಾನವನ್ನು ಗಳಿಸುವ ಮೂಲಕ ಈ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಶಾಲೆ ಪಾರಮ್ಯ ಮೆರೆಯಿತು. ಕಾರ್ಯಕ್ರಮದಲ್ಲಿ ಹಿರಿಯ ವಿಜ್ಞಾನ ಶಿಕ್ಷಕರಾದ ಪಶುಪತಿ ಶಾಸ್ತ್ರೀ, ಮೂಡಬಿದಿರೆ ಮಹಾವೀರ ಕಾಲೇಜಿನ ಉಪನ್ಯಾಸಕರಾಗಿರುವ ಚೈತ್ರಾ ಹಾಗೂ ಆಶ್ವಿತಾ ತೀರ್ಪುಗಾರರಾಗಿ ಸಹಕರಿಸಿದರು. ಉಪ ಮುಖ್ಯಶಿಕ್ಷಕರಾದ ಜಯಶೀಲ, ವಿಜ್ಞಾನ ವಿಭಾಗದ ಮುಖ್ಯಸ್ಥರಾದ ವೆಂಕಟೇಶ್ ಭಟ್ ಉಪಸ್ಥಿತರಿದ್ದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಹೇಶ್ವರಿ ಇವರು ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿ, ನಂತರ ವಂದನಾರ್ಪಣೆಗೈದರು. ವಿಜ್ಞಾನ ಶಿಕ್ಷಕರಾದ ಪ್ರಜ್ವಲ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಎನ್.ಎ.ಬಿ.ಎಚ್. (NABH) ಮಾನ್ಯತೆ

Article Image

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಎನ್.ಎ.ಬಿ.ಎಚ್. (NABH) ಮಾನ್ಯತೆ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಗುಣಮಟ್ಟ ಭರವಸೆ ಕೋಶ ವಿಭಾಗವು ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ NABH ಮಾನ್ಯತೆಯ ಸಂಭ್ರಮವನ್ನು ಆಚರಿಸಲಾಯಿತು. NABH ಮಾನ್ಯತೆ ಪ್ರಕ್ರಿಯೇಯು 2021ರಲ್ಲಿ ಪ್ರಾರಂಭವಾಗಿ, ಜೂನ್ 2025ರಲ್ಲಿ ನಡೆದ NABH ಪರೀವಿಕ್ಷಣೆ ನಡೆದು ಇದೀಗ NABH ಮಾನ್ಯತೆ ಲಭಿಸಿದೆ. ಎಸ್.ಡಿ.ಎಂ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗ್ಡೆ ಮತ್ತು ಉಪ ವೈದ್ಯಕೀಯ ಅಧೀಕ್ಷಕ ಮತ್ತು ಗುಣಮಟ್ಟ ಭರವಸೆ ಕೋಶದ ಮುಖ್ಯಸ್ಥರಾದ ಡಾ. ಮಖ್ದೂಮ್ ಕಿಲ್ಲೇದಾರ್ ಅವರು NABH ಮಾನ್ಯತೆಯ ಪ್ರಮಾಣಪತ್ರ ಮತ್ತು NABH ಮಾನ್ಯತೆ ಪಡೆದ ವಿಭಾಗಗಳ ಪ್ರಮಾಣಪತ್ರವನ್ನು ವೈದ್ಯಕೀಯ ನಿರ್ದೇಶಕರಾದ ಡಾ. ನಿರಂಜನ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. NABH ಪ್ರಮಾಣಪತ್ರವನ್ನು ಸ್ವೀಕರಿಸಿದ ವೈದ್ಯಕೀಯ ನಿರ್ದೇಶಕರು ಮತ್ತು ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ NABH ಮಾನ್ಯತೆಯ ಪ್ರಮುಖ ಮೈಲಿಗಲ್ಲನ್ನು ಸಾಧಿಸಲು ಕೊಡುಗೆ ನೀಡಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿ, ಮಾತನಾಡುತ್ತಾ: ನಮ್ಮ ದೈನಂದಿನ ಕೆಲಸದಲ್ಲಿ ಗುಣಮಟ್ಟದ ಸೇವೆಯ ಕಡೆಗೆ ಗಮನವಿರಬೇಕು. ಉದ್ಯೋಗದಲ್ಲಿ ಪರಿಪೂರ್ಣತೆಯು ಎಲ್ಲಾ ಉದ್ಯೋಗಿಯ ಧ್ಯೇಯವಾಗಬೇಕು. ರೋಗಿಗಳಿಗೆ ಸೇವೆ ಸಲ್ಲಿಸುವಾಗ ದಕ್ಷತೆ ಮತ್ತು ಪ್ರೀತಿ ಸೇವೆ ನೀಡಬೇಕು. ಶಿಸ್ತು ಮತ್ತು ನಿರಂತರ ಸುಧಾರಣೆಯೊಂದಿಗೆ ದೊಡ್ಡ ಗುರಿಯನ್ನು ಸಾಧಿಸಬಹುದು. ಸಣ್ಣ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವದರೊಂದಿಗೆ ಉತ್ತಮ ಸಂಸ್ಥೆಗಳನ್ನು ಸೃಷ್ಟಿಸಬಹುದು. ಸುರಕ್ಷತಾ ಮನೋಭಾವ ಮತ್ತು ಸಹಾನುಭೂತಿ ರೋಗಿಗಳ ಆರೈಕೆಯ ಮುಖ್ಯ ಧ್ಯೇಯೆಗಳಾಗಿವೆ. ಸಹ ಉಪ ಕುಲಪತಿಗಳಾದ ವಿ ಜೀವಂಧರ್ ಕುಮಾರ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಹಣಕಾಸು ಅಧಿಕಾರಿಗಳಾದ ವಿ ಜಿ ಪ್ರಭು, ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ, ಕೋರ್ ಕಮಿಟಿ ಮತ್ತು ಸ್ಟೀರಿಂಗ್ ಕಮಿಟಿ ಸದಸ್ಯರ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರತಿಯೊಂದು ಕೋರ್ ಕಮಿಟಿ ಮತ್ತು ಸ್ಟೀರಿಂಗ್ ಕಮಿಟಿ ಸದಸ್ಯರಿಗೆ ಗೌರವ ಪ್ರಮಾಣಪತ್ರವನ್ನು ವಿತರಿಸಲಾಯಿತು. ಡಾ. ಮಖ್ದೂಮ್ ಕಿಲ್ಲೇದಾರ್ NABH ಮಾನ್ಯತೆಯ ಪ್ರಯಾಣ ನಡೆದು ಬಂದ ದಾರಿಯನ್ನು ತಿಳಿಸಿದರು. ಗುಣಮಟ್ಟ ಭರವಸೆ ಕೋಶದ ಅಧಿಕಾರಿಯಾದ ನಿಶಾಂತ್ ಜೈನ್ ಅತಿಥಿಗಳನ್ನು ಸ್ವಾಗತಿಸಿದರು. ಗುಣಮಟ್ಟ ಭರವಸೆ ಇನ್ನೊಬ್ಬ ಅಧಿಕಾರಿಯವರಾದ ಐಶ್ವರ್ಯ ವಿ ಎನ್ ಕಾರ್ಯಕ್ರಮವನ್ನು ನಿರೂಪಿಸಿದರು. ನರ್ಸಿಂಗ್ ಅಧೀಕ್ಷಕಿಯವರಾದ ಮಂಜುಳಾ ಕೆ ಬಿ ವಂದನಾರ್ಪಣೆ ಸಲ್ಲಿಸಿದರು.

ಕರ್ನಾಟಕ ರಾಜ್ಯ ಮಕ್ಕಳ ಶಸ್ತ್ರಚಿಕಿತ್ಸೆ ಸಮ್ಮೇಳನ- ಹುಬ್ಬಳ್ಳಿ ಧಾರವಾಡ

Article Image

ಕರ್ನಾಟಕ ರಾಜ್ಯ ಮಕ್ಕಳ ಶಸ್ತ್ರಚಿಕಿತ್ಸೆ ಸಮ್ಮೇಳನ- ಹುಬ್ಬಳ್ಳಿ ಧಾರವಾಡ

ಧಾರವಾಡ, 8,9 ಮತ್ತು 10 ಆಗಸ್ಟ್ 2025: ಕರ್ನಾಟಕ ರಾಜ್ಯದ ಮಕ್ಕಳ ಶಸ್ತ್ರಚಿಕಿತ್ಸಕರ ಸಂಘದ (ಐ ಎ ಪಿಎಸ್-ಕೆ.ಎಸ್.ಸಿ.) -20 ನೇ ವಾರ್ಷಿಕ ಸಮ್ಮೇಳನವನ್ನು ಧಾರವಾಡದ ಎಸ್.ಡಿ.ಮ್ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಹುಬ್ಬಳ್ಳಿಯ ಕರ್ನಾಟಕ ವೈದ್ಯಕಿಯ ಮಹಾವಿದ್ಯಾಲಯ (ಕೆ.ಎಂ.ಸಿ) ಜಂಟಿ ಸಹಯೋಗದೊಂದಿಗೆ “ಪೆಸುಕಾನ್ 2025“ ಎಂಬ ಶೀರ್ಷಿಕೆ ಅಡಿಯಲ್ಲಿ ಆಗಸ್ಟ್ 8ರಿಂದ 10ರವರಗೆ, "ಮಕ್ಕಳ ಶಸ್ತ್ರಚಿಕಿತ್ಸೆಯ ಆಯಾಮವನ್ನು ವಿಸ್ತರಿಸುವುದು" ಎಂಬ ಪರಿಕಲ್ಪನೆಯ ಸ್ಪೂರ್ತಿದಾಯಕ ವಿಷಯದೊಂದಿಗೆ ನಡೆಸಲಾಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಕುಲಪತಿಗಳಾದ ಡಿ. ವೀರೇಂದ್ರ ಹೆಗ್ಗಡೆ, ಉಪಕುಲಪತಿ ಡಾ. ನಿರಂಜನ್ ಕುಮಾರ್ ಅವರ ಆಶೀರ್ವಾದದೊಂದಿಗೆ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಆಗಸ್ಟ್ 9 ರಂದು ಎಸ್.ಡಿ.ಮ್ ಆಸ್ಪತ್ರೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಯತೀಂದ್ರ ನಂಜಯ್ಯ, (ಮಕ್ಕಳ ಶಸ್ತ್ರಚಿಕಿತ್ಸಕರು, ರಾಜ್ಯ ಮಟ್ಟಡ ಅಧ್ಯಕ್ಷರು), ಗೌರವಾನ್ವಿತ ಅತಿಥಿಗಳಾಗಿ ಸಾಕೆತ್ ಶೆಟ್ಟಿ, (ನಿರ್ವಾಹಕ ನಿರ್ದೇಶಕ, ಎಸ್.ಡಿ.ಮ್ ), ಡಾ. ವಿಜಯ್ ಕುಲಕರ್ಣಿ (ಪ್ರಾಂಶುಪಾಲರು ಎಸ್.ಡಿ.ಮ್), ಡಾ. ಅನಿಲ್ ಹಲಗೆರಿ ಬಿ, (ಪೆಸುಕಾನ್ 2025 ರ ಅಧ್ಯಕ್ಷರು), ಡಾ. ವಿಜಯ್ ಪೂಜಾರ್ ಸಿ (ಪೆಸುಕಾನ್ 2025, ರ ಸಹ-ಅಧ್ಯಕ್ಷರು), ಡಾ. ಕಿರಣ್ ಎಂ (ಗೌರವಾನ್ವಿತ ರಾಜ್ಯ ಮಟ್ತ್ಟದ ಕಾರ್ಯದರ್ಶಿ, ಐಎಪಿಎಸ್–ಕೆಎಸ್‌ಸಿ), ಡಾ. ಅಕ್ಷಯ್ ಕಲಾವಂತ್ (ಪೆಸುಕಾನ್ 2025, ರ ಸಂಘಟನಾ ಕಾರ್ಯದರ್ಶಿ), ಡಾ. ಪ್ರಶಾಂತ್ ಕೆ ಜುಲ್ಪಿ (ಪೆಸುಕಾನ್ 2025, ಖಜಾಂಚಿ) ಮತ್ತು ಡಾ. ವೆಂಕಟೇಶ್ ಕೆ ಎಲ್,ಬೆಂಗಳೂರು (ಐಎಪಿಎಸ್–ಕೆಎಸ್‌ಸಿಯ ಚುನಾಯಿತ ಅಧ್ಯಕ್ಷರು) ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ಆಗಸ್ಟ್ 8 ರಂದು, ಹುಬ್ಬಳ್ಳಿಯ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಡಾ. ರಾಜಶಂಕರ ಸಂಕಲ್ ಹಾಗೂ ಡಾ ರವೀಂದ್ರ ಖಾಸನಿಸ್ ರವರ ಸಹಯೋಗದೋಂದಿಗೆ ಮಕ್ಕಳ ಮೂತ್ರಪಿಂಡದ ಕಲ್ಲಿನ ಚಿಕಿತ್ಸೆ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಯಿತು. ಆಗಸ್ಟ್ 9 ಮತ್ತು 10 2025 ರಂದು ಎಸ್‌ಡಿಎಂ ಆಸ್ಪತ್ರೆ ಧಾರವಾಡದಲ್ಲಿ ನಡೆದ ಮುಖ್ಯ ಸಮ್ಮೇಳನದಲ್ಲಿ ಮಕ್ಕಳ ಅರ್ಭುಧರೋಗ, ಎದೆಗೂಡಿನ ಮತ್ತು ವಾಯುಮಾರ್ಗ ಶಸ್ತ್ರಚಿಕಿತ್ಸೆ, ಭ್ರೂಣದ ಶಸ್ತ್ರಚಿಕಿತ್ಸೆ ಹಾಗೂ ಲಾಪ್ರೋಸ್ಕೋಪಿ ಮತ್ತು ರೊಬೊಟಿಕ್ ಶಸ್ತ್ರಚಿಕಿತ್ಸೆ ಕುರಿತು ಉಪನ್ಯಾಸ ನೀಡಲಾಯಿತು. ಈ ಕಾರ್ಯಾಕ್ರಮದಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಉಪನ್ಯಾಸಕರು ಮತ್ತು ಪ್ರತಿನಿಧಿಗಳು ಪಾಲ್ಗೊಂಡಿದರು.

ಯಶಸ್ಸಿನ ಬದುಕಿಗೆ ಕೌಶಲಯುತ ಶಿಕ್ಷಣ ಅತ್ಯಗತ್ಯ -ಕೆ ಆರ್ ಪಂಡಿತ್

Article Image

ಯಶಸ್ಸಿನ ಬದುಕಿಗೆ ಕೌಶಲಯುತ ಶಿಕ್ಷಣ ಅತ್ಯಗತ್ಯ -ಕೆ ಆರ್ ಪಂಡಿತ್

ಕಲ್ಲಬೆಟ್ಟು : ಶಿಸ್ತು ಸಂಯಮದ ನಡವಳಿಕೆ ಬೌದ್ಧಿಕ ವಿಕಾಸಕ್ಕೆ ಪೂರಕ. ಸ್ವಯಂಪ್ರೇರಣೆಯಿಂದ ಪ್ರಾಮಾಣಿಕವಾಗಿ ಸಲ್ಲಿಸುವ ಸೇವೆ ಸಾರ್ಥಕ ಬದುಕಿಗೆ, ಸಮಾಜದ ಉನ್ನತಿಗೆ ಸಹಾಯಕ. ಕಠಿಣ ಪರಿಶ್ರಮ ಮತ್ತು ಕೌಶಲಗಳು ಯಶಸ್ಸಿನ ಆಧಾರಸ್ತಂಭಗಳು. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಬೆಳೆವಣಿಗೆ ಸಾಧ್ಯ. ಮನಸಾರೆ ಕಲಿತು ಹೃದಯಪೂರ್ವಕವಾಗಿ ಅನುಷ್ಠಾನ ಮಾಡಿದರೆ ಪ್ರತಿಫಲವೂ ಒಳ್ಳೆಯದಾಗಿರುತ್ತದೆ ಎಂದು ಮೂಡುಬಿದಿರೆ ಹಿರಿಯ ನ್ಯಾಯವಾದಿಗಳಾದ ಕೆ.ಆರ್. ಪಂಡಿತ್ ಹೇಳಿದರು. ಅವರು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ, ಎನ್ಎಸ್ಎಸ್, ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿಯವರು ಮಾತನಾಡುತ್ತ ಹಿರಿಯರ ಅನುಭವದ ಮಾತು ಕಿರಿಯರಿಗೆ ದಾರಿದೀಪ. ಭೂಮಿಯಲ್ಲಿ ಬಿತ್ತಿದ ಬೀಜಕ್ಕೆ  ನೀರು ಗೊಬ್ಬರವನ್ನು ಕೊಟ್ಟು ಬಂದ ಕಳೆಯನ್ನು ಕಾಲಕಾಲಕ್ಕೆ ಕೀಳುತ್ತ ಮುಂದೆ ಫಲವನ್ನು ಪಡೆಯುವಂತೆ ಬದುಕೆಂಬ ತೋಟದಲ್ಲಿ ಗುಣಗಳಿಗೆ ನೀರೆರೆದು ಪೋಷಿಸಿ ದೋಷಗಳನ್ನು ನಿವಾರಿಸಿಕೊಂಡಾಗ ಅರ್ಥಪೂರ್ಣವೂ ಸಮಾಜಕ್ಕೆ ಉಪಯುಕ್ತ ಜೀವನವೂ ನಮ್ಮದಾಗುತ್ತದೆ. ಆ ನಿಟ್ಟಿನಲ್ಲಿ ವಿವಿಧ ಘಟಕಗಳ ಕಾರ್ಯಚಟುವಟಿಕೆಗಳಲ್ಲಿ ಬದ್ಧತೆಯಿಂದ ಪಾಲ್ಗೊಂಡು ಬದುಕನ್ನು ಉಜ್ವಲಗೊಳಿಸಿಕೊಳ್ಳುವಂತೆ ಪ್ರೇರಣೆಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಮಾತನಾಡಿ ಸಮಾಜ ಸೇವೆಯ ಮೂಲಕ ದೇಶದ ಅಭಿವೃದ್ಧಿಯ ಕನಸನ್ನು ಕಾಣಬೇಕಾದರೆ ಶಾಲೆ ಕಾಲೇಜುಗಳಲ್ಲಿ  ವಿವಿಧ ಘಟಕಗಳ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಪಾಲ್ಗೊಳ್ಳಬೇಕು. ನೋಡಿ ಕಲಿ ಮಾಡಿ ತಿಳಿ ತತ್ವವನ್ನು ಅಳವಡಿಸಿಕೊಳ್ಳಬೇಕು. ಇಂದಿನ ಸವಾಲಿನ ಪಾಠಗಳು ಮುಂದಿನ ಸಂತೋಷದ ಬದುಕಿಗೆ ಪ್ರೇರಣೆಯಾಗುತ್ತದೆ. ಇಂದು ಬದುಕಿನಲ್ಲಿ ಮಾಡಿಕೊಳ್ಳುವ ಚಿಕ್ಕ ಬದಲಾವಣೆ ದೊಡ್ಡ ಸಾಧನೆಗೆ ಕಾರಣವಾಗುತ್ತದೆ. ಜೀವನವನ್ನು ಬಂದ ರೀತಿಯಲ್ಲಿ ಸ್ವೀಕರಿಸುವುದು ಒಂದು ಕಲೆ. ಧೈರ್ಯ ಮತ್ತು ಸಾಹಸದ ಬದುಕಿಗೆ ನಮ್ಮನ್ನು ತೆರೆದುಕೊಂಡಾಗ ನೈಜ ಜೀವನ ದರ್ಶನವಾಗುತ್ತದೆ ಎಂದು ನುಡಿದರು. ವೇದಿಕೆಯಲ್ಲಿ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಎನ್ ಸಿಸಿ ಅಧಿಕಾರಿ ಲೆಫ್ಟಿನೆಂಟ್ ಮಹೇಂದ್ರ ಜೈನ್, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ತೇಜಸ್ವಿ ಭಟ್, ರೋವರ್ಸ್ ಅಧಿಕಾರಿ ಪ್ರದೀಪ್ ಕೆಪಿ ಮತ್ತು ವಿವಿಧ ಘಟಕಗಳ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ರೆಡ್ ಕ್ರಾಸ್ ಅಧಿಕಾರಿ ಪ್ರಶಾಂತ ಶೆಟ್ಟಿ ಸ್ವಾಗತಿಸಿ, ರೋವರ್ಸ್ ವಿದ್ಯಾರ್ಥಿ ರೇವಣ್ಣ ಸಿದ್ದು ಮತ್ತು ರೆಡ್ ಕ್ರಾಸ್ ವಿದ್ಯಾರ್ಥಿ ಮನ್ನಾ ಭೋಜಕ್ಕ ಅತಿಥಿಗಳನ್ನು ಪರಿಚಯಿಸಿದರು. ಎನ್ ಸಿಸಿ ಕೆಡೆಟ್ ದಿಶಾಂತ್ ಗೌಡ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್ಎಸ್ಎಸ್ ಸ್ವಯಂಸೇವಕಿ ರಶ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ರೇಂಜರ್ಸ್ ಅಧಿಕಾರಿ ಸಂಧ್ಯಾ ನಾಯಕ್ ವಂದಿಸಿದರು.

ಭಾರತೀಯ ಜೈನ್ ಮಿಲನ್‌: ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ

Article Image

ಭಾರತೀಯ ಜೈನ್ ಮಿಲನ್‌: ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ

ಮಹಾನಗರ, ಜು. 20: ಭಾರತೀಯ ಜೈನ್ ಮಿಲನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಗರದ ಲಾರ್ಡ್ ಮಹಾವೀರ್ ಜೈನ್ ಬೋರ್ಡಿಂಗ್‌ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ಭಾರತೀಯ ಜೈನ್ ಮಿಲನ್ ಅಧ್ಯಕ್ಷ ರತ್ನಾಕರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಶಾರದಾ ವಿದ್ಯಾ ಸಮೂಹದ ಟ್ರಸ್ಟಿ ಸುಧಾಕರ್ ರಾವ್‌ ಪೇಜಾವರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಡಾ| ಸಿ.ಕೆ. ಬಲ್ಲಾಳ್ ಹಾಗೂ ಉದ್ಯಮಿ ದರ್ಶನ್ ಜೈನ್‌, ದಿಲೀಪ್‌ ಜೈನ್‌ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮಿಲನ್‌ ವತಿಯಿಂದ ಗೌರವಿಸಲಾಯಿತು. ನ್ಯಾಯಾಂಗ ಇಲಾಖೆಯ ಆಡಳಿತಾಧಿಕಾರಿಯಾಗಿ ನೇಮಕಗೊಂಡ ರಾಜೇಶ್ ಎಂ. ಅವರನ್ನು ಮಿಲನ್ ವತಿಯಿಂದ ಸಮ್ಮಾನಿಸಲಾಯಿತು. ವಲಯ ನಿರ್ದೇಶಕ ಸುಕುಮಾರ್ ಬಲ್ಲಾಳ್, ಕಾರ್ಯದರ್ಶಿ ವೈಶಾಲಿ ಪಡೀವಾಳ್ ಇದ್ದರು. ಪ್ರೀಯ ಸುದೇಶ್, ಶಿಲ್ಪಾ ಸಂದೀಪ್ ನಿರೂಪಿಸಿದರು. ನಿರ್ಮಲಾ ಜ್ಞಾನಚಂದ್ರ, ಯಶೋಧರ ಜೈನ್‌ ಸಹಕರಿಸಿದರು.

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಪಿತೃದೇವೋಭವ ಕಾರ್ಯಕ್ರಮ

Article Image

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಪಿತೃದೇವೋಭವ ಕಾರ್ಯಕ್ರಮ

ಮೂಡುಬಿದಿರೆ: ನಾವೆಲ್ಲಾ ಅಪ್ಪ ಎಂದರೆ ಪ್ರೀತಿ ಮಾಡುತ್ತೇವೆ. ನಮ್ಮ ಎಲ್ಲಾ ತಪ್ಪುಗಳನ್ನು ತಿದ್ದಿ ಸರಿದಾರಿಗೆ ತರುವ ಹೀರೋ ಅಪ್ಪ. ಅಮ್ಮನಿಂದ ಜೀವ ಲಭಿಸಿದರೆ, ಅಪ್ಪನಿಂದ ಜೀವನ ಲಭಿಸುತ್ತದೆ. ನಮ್ಮ ಧೈರ್ಯವೇ ಅಪ್ಪನ ಕೈ ಬೆರಳು. ಅಪ್ಪನ ಹೆಗಲ ಮೇಲೆ ಮಲಗಿದಾಗ ಆಗುವ ಆನಂದ ಮತ್ತೆಲ್ಲಿಯೂ ಸಿಗುವುದಿಲ್ಲ. ಅಪ್ಪ ನಮ್ಮ ಕಣ್ಣ ಮುಂದಿರುವ ನಿಜವಾದ ದೇವರು. ಅಪ್ಪನಿಂದ ಜೀವನದಲ್ಲಿ ಶಿಸ್ತು, ಬದುಕುವ ಕಲೆ ಎಲ್ಲವನ್ನೂ ಮಕ್ಕಳು ಕಲಿಯುತ್ತಾರೆ. ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಹೇಳಿದರು. ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಿದ್ದ ತಂದೆಗೆ ಗೌರವ ಸಲ್ಲಿಸುವ ವಿನೂತನ “ಪಿತೃ ದೇವೋಭವ” ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಮಾತನಾಡಿ, ತಂದೆಯೇ ನನಗೆ ದೇವರು. ತಂದೆಯೇ ನನ್ನ ಖುಷಿ, ಸಂತಸ ಎಲ್ಲವೂ ಆಗಿದ್ದಾರೆ. ಅವರ ಮಮತೆ, ಮಾರ್ಗದರ್ಶನ ಮತ್ತು ತಾಳ್ಮೆ ನನ್ನ ಜೀವನವನ್ನು ಬೆಳಗಿಸುತ್ತಿವೆ. ಅವರು ಬೋಧಿಸಿದ ಪ್ರತೀ ಪಾಠ, ತೋರಿಸಿದ ಪ್ರತೀ ದಾರಿಯಲ್ಲಿ ನಾ ನನ್ನ ಕನಸುಗಳನ್ನು ಸಾಕಾರಗೊಳಿಸಿಕೊಂಡು ಸಾಗುತ್ತಿದ್ದೇನೆ. ನನ್ನ ಕನಸುಗಳಿಗೆ ಚೆನ್ನಾಗಿ ನಿಂತು ನಾ ಓಡಿದಾಗ ಹಿಂದೆಯೇ ಓಡಿ ನೀಡಿದ ಆಶೀರ್ವಾದಗಳ ನೆರಳನ್ನು ನಾನು ಇಂದಿಗೂ ಅನುಭವಿಸುತ್ತಿದ್ದೇನೆ. ತಂದೆ ಮಕ್ಕಳ ನಡುವಿನ ಪ್ರೀತಿ, ಒಲುಮೆ, ಭಾಂದವ್ಯ ಎಂದಿಗೂ ಮರೆಯಲಾಗದು. ಮಕ್ಕಳಾದ ನಾವು ನಮ್ಮ ತಂದೆಯ ನೋವು-ನಲಿವುಗಳೆಲ್ಲವೂ ತಿಳಿದಿರಬೇಕು. ಅವರ ಪ್ರತೀ ಹೆಜ್ಜೆಯಲ್ಲಿಯೂ ನಾವೂ ಅವರ ಜೊತೆಯಾಗಿರಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳವರ ತಂದೆ ಹಾಗೂ ಟ್ರಸ್ಟಿಯೂ ಆಗಿರುವ ಕೆ. ರಾಜರತ್ನ ಜೈನ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಬಿ. ಪಿ. ಸಂಪತ್ ಕುಮಾರ್, ಮುಖ್ಯೋಪಾಧ್ಯಾ ಯರಾದ ಶಿವಪ್ರಸಾದ್ ಭಟ್, ಉಪ ಮುಖ್ಯೋಪಾಧ್ಯಾಯ ಜಯ ಶೀಲ, ಕಾರ್ಕಳದ ಸೂಪರ್ ಮಾರ್ಕೆಟ್‌ನ ಮಾಲಿಕರಾದ ರೂಪೇಶ್ ಉಪಸ್ಥಿತರಿದ್ದರು. ನಂತರ ತಂದೆಯ ಮಹತ್ವವನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳಾದ ಧನುಷ್ ನಿರೂಪಿಸಿದರು. ಸಾನ್ವಿ ಸ್ವಾಗತಿಸಿದರು. ವರುಣ್ ವಂದಿಸಿದರು.

ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೆ ಸಾಲಿನ ಶೈಕ್ಷಣಿಕ ತರಗತಿಗಳ ಶುಭಾರಂಭ ಕಾರ್ಯಕ್ರಮ

Article Image

ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೆ ಸಾಲಿನ ಶೈಕ್ಷಣಿಕ ತರಗತಿಗಳ ಶುಭಾರಂಭ ಕಾರ್ಯಕ್ರಮ

ಮೂಡುಬಿದಿರೆ, ಜೂ.12: ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೆ ಸಾಲಿನ ಶೈಕ್ಷಣಿಕ ತರಗತಿಗಳ ಶುಭಾರಂಭ ಕಾರ್ಯಕ್ರಮವನ್ನು ಪ. ಪೂ. ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಮಹಾಸ್ವಾಮೀಜಿಗಳವರು ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವಿಧ್ಯೆ ಯಾರೂ ಅಪಹರಿಸಲಾಗದ ಅಮೂಲ್ಯ ನಿಧಿ ಅದನ್ನು ಉತ್ತಮ ಮನಸ್ಸೆಂಬ ಕುಂಭದಲ್ಲಿ ಭೋದಕರ ಅಮೃತವಾಣಿ ತುಂಬಿ ಉದಾಸೀನ ಮರೆವು ಎಂಬ ಕೊಳೆಯನ್ನು ತೊಳೆದು ಯಶಸ್ವಿ ಜೀವನಕ್ಕಾಗಿ ಉಪಯೋಗಿಸಿ ಎಂದು ಆಶೀರ್ವಾದ ನೀಡಿದರು. ಕಾರ್ಯಕ್ರಮವು ಬೆಳಿಗ್ಗೆ 10.00 ಗಂಟೆಗೆ ರಮಾ ರಾಣಿ ಶೋಧ ಸಂಸ್ಥಾನ ಬಳಿ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಶುಭಾರoಭಗೊಂಡು, ಧವಳತ್ರಯ ಜೈನ ಕಾಶಿ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ನೀಡಲಾಯಿತು. ಮೂಡಬಿದ್ರೆ ಎಂ.ಸಿ.ಸಿ. ಬ್ಯಾಂಕ್ ನ ಅಧ್ಯಕ್ಷರೊ ಸಂಸ್ಥೆ ಯ ಆಡಳಿತ ಮಂಡಳಿಯಾವರೂ ಅದ ಎಂ. ಬಾಹುಬಲಿ ಪ್ರಸಾದ್ ರವರು 2024-25ರ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಾದ ಮನಸ್ವೀನಿ, ರೋಹಿತ್, ಶ್ರುತಿ ಇವರಿಗೆ ನಗದು ಮೊತ್ತ ಬಹುಮಾನ ವಿತರಿಸಿದರು ಹಾಗೂ ವಿದ್ಯಾರ್ಥಿಗಳಿಗೆ ವಿಧ್ಯೆಯ ಮಹತ್ವವನ್ನು ತಿಳಿಸಿಕೊಟ್ಟರು. ಮೂಡಬಿದಿರೆಯ ಖ್ಯಾತ ನ್ಯಾಯವಾದಿಗಳು ಹಾಗೂ ನೋಟರಿ ಹಾಗೂ ಸಂಸ್ಥೆಯ ನೂತನ ಬಾಲಕ ಪಾಲಕ ಸಮಿತಿ ಅಧ್ಯಕ್ಷರಾಗಿ ನಿಯುಕ್ತಗೊಂಡ ಶ್ವೇತಾ ಜೈನ್ ಇವರು ಇನ್ನೆರವೀಲ್ ಕ್ಲಬ್ ನ ಮೂಲಕ ಕಾಲೇಜ್ ಗೆ ಕುಡಿಯುವ ನೀರಿನ ಡ್ರಮ್ ಅನ್ನು ತಮ್ಮ ತಂಡ ಸದಸ್ಯರೊಂದಿಗೆ ಕೊಡುಗೆಯಾಗಿ ನೀಡಿ ಮಾತನಾಡಿದರು, ಮೂಡುಬಿದಿರೆ ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ವಿದ್ಯಾಕೇಂದ್ರ ಎಂದರು. ಸಂಜಯಂತ ಕುಮಾರ್ ಶೆಟ್ಟಿ ಶುಭಕೋರಿದರು ವಿದ್ಯಾರ್ಥಿಗಳಿಗೆ ಶ್ರೀ ದವಳತ್ರಯ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕಗಳನ್ನು ನೀಡಲಾಯಿತು. ಉಪನ್ಯಾಸಕರಾದ ಹಿತೇಶ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಸುಷ್ಮಾ ಇವರು ಸ್ವಾಗತಿದರು. ಉಪನ್ಯಾಸಕಿ ಸುಜಾತಾ ಇವರು ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಪದಾಧಿಕಾರಿಗಳಾದ ಅನಿತಾ ಪೃಥ್ವಿರಾಜ್, ಸುಮಂಗಲ ತಂತ್ರಿ, ದಿವ್ಯ ಹರ್ಷಪಡಿವಾಳ, ಶೋಭಾ ಸಿಕ್ವೆರಾ, ರೇಷ್ಮಾ ಮಹೇಂದ್ರವರ್ಮ, ವೀಣಾ ರತ್ನರಾಜ್, ಪದ್ಮಜಾ ಮಹೇಂದ್ರ ಉಪಸ್ಥಿತರಿದ್ದರು.

ಕಾರ್ಕಳ, ಹಿರಿಯಂಗಡಿ: ವಿದ್ಯಾರ್ಥಿಗಳ ನೋಂದಾವಣೆ ಆರಂಭ

Article Image

ಕಾರ್ಕಳ, ಹಿರಿಯಂಗಡಿ: ವಿದ್ಯಾರ್ಥಿಗಳ ನೋಂದಾವಣೆ ಆರಂಭ

ಕಾರ್ಕಳ ತಾಲೂಕಿನ ಹಿರಿಯಂಗಡಿಯಲ್ಲಿರುವ ಶ್ರೀ ಭುಜಬಲಿ ಬ್ರಹ್ಮಚರ್ಯಾಶ್ರಮ ಮತ್ತು ಇದರ ಆಡಳಿತಕ್ಕೊಳಪಟ್ಟ ಎಸ್ ಎನ್ ವಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 2025-26 ನೇ ಸಾಲಿಗೆ ವಿದ್ಯಾರ್ಥಿಗಳ ನೋಂದಾವಣೆ ಆರಂಭಗೊಂಡಿದೆ. ನಿಲಯದಲ್ಲಿ 6ನೇ ತರಗತಿಯಿಂದ ಪಿಯುಸಿ ತರಗತಿವರೆಗೆ ಪ್ರವೇಶ ನೀಡಲಾಗುತ್ತದೆ. ಕಳೆದ 80 ವರ್ಷಗಳಿಂದ ಗುರುಕುಲ ಪದ್ಧತಿಯೊಂದಿಗೆ ಸಂಸ್ಕಾರಯುತ ಜೀವನದ ಮೌಲ್ಯಗಳನ್ನು ಸಾವಿರಾರು ವಿದ್ಯಾರ್ಥಿಗಳಿಗೆ ದಯಪಾಲಿಸಿ ನಾಡಿನಾದ್ಯಂತ ಉತ್ತಮ ಶಿಕ್ಷಣ ಸಂಸ್ಥೆ ಎಂದು ಗುರುತಿಸಲ್ಪಟ್ಟಿರುತ್ತದೆ. ಗುಣಮಟ್ಟದ ಶಾಲಾ ಶಿಕ್ಷಣದೊಂದಿಗೆ ಕಡ್ಡಾಯ ಧಾರ್ಮಿಕ ಶಿಕ್ಷಣ, ನೈತಿಕತೆ, ಕ್ರೀಡೆ, ಭಾಷಣ ಕಲೆ, ಭಜನೆ, ಸಮಾಜ ಸೇವೆ, ಪೌರೋಹಿತ್ಯ ಅಧ್ಯಯನದ ಬಗ್ಗೆಯೂ ಗಮನಕೊಡಲಾಗುವುದು. ಉತ್ತಮ ವಸತಿ, ಊಟ – ತಿಂಡಿ, ಸ್ನಾನಕ್ಕೆ ಬಿಸಿನೀರು, ಶುದ್ಧ ಕುಡಿಯುವ ನೀರು, ಸುಸಜ್ಜಿತ ರೂಮಿನ ವ್ಯವಸ್ಥೆ, ಕ್ರೀಡೆ ಮತ್ತು ಮನೋರಂಜನ ಚಟುವಟಿಕೆಗಳೊಂದಿಗೆ ಪ್ರಶಾಂತ ವಾತಾವರಣದಲ್ಲಿ ಜ್ಞಾನಾರ್ಜನೆಗೆ ಸರ್ವ ರೀತಿಯ ಪ್ರೋತ್ಸಾಹ ನೀಡಲಾಗುತ್ತದೆ. ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಸ್ವಸ್ತಿ ಶ್ರೀ ನೇಮಿಸಾಗರ ವರ್ಣೀಜಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಪ್ರಸ್ತುತ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಸಕ್ತ ಪೋಷಕರು ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 20.05.2025 ರೊಳಗೆ ಕಚೇರಿಯನ್ನು ದೂರವಾಣಿ ಸಂಖ್ಯೆ 8197500498 ಮೂಲಕ ಸಂಪರ್ಕಿಸಲು ಕೋರಲಾಗಿದೆ.

ಪಠ್ಯಕ್ರಮ ಅನುಷ್ಠಾನ ಬೆಂಬಲ ಕಾರ್ಯಕ್ರಮ

Article Image

ಪಠ್ಯಕ್ರಮ ಅನುಷ್ಠಾನ ಬೆಂಬಲ ಕಾರ್ಯಕ್ರಮ

ಸತ್ತೂರು, ಧಾರವಾಡ : ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಶಿಕ್ಷಣ ಘಟಕವು ರಾಷ್ಟ್ರೀಯ ವೈದ್ಯಕೀಯ ಆಯೋಗದ ಪ್ರಾಂತೀಯ ನೋಡಲ್ ಕೇಂದ್ರ, ಜೆ.ಎನ್.ಎಂ.ಸಿ. ಬೆಳಗಾವಿಯ ಸಹಯೋಗದೊಂದಿಗೆ ಏಪ್ರಿಲ್ 03 ಮತ್ತು 04, 2025ರಂದು “ಪಠ್ಯಕ್ರಮ ಅನುಷ್ಠಾನ ಬೆಂಬಲ ಕಾರ್ಯಕ್ರಮ” ಎಂಬ ವಿಷಯದ ಮೇಲೆ 2 ದಿನಗಳ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಾಗಾರವು ಅಧ್ಯಾಪಕರಿಗೆ, ವೈದ್ಯಕೀಯ ವಿಷಯದಲ್ಲಿ ಹೊಸ ಬೋಧನೆ ಮತ್ತು ಕಲಿಕೆಯ ವಿಧಾನಗಳನ್ನು ಅಳವಡಿಸಿಕೊಳ್ಳಲು ಹೆಚ್ಚು ಸಹಕಾರಿಯಾಗಿದ್ದು, ಈ ಕಾರ್ಯಾಗಾರವು ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಅನುಮೋದಿಸಲ್ಪಟ್ಟಿದೆ. ಅಧ್ಯಾಪಕರು ತಮ್ಮ ದೈನಂದಿನ ವೈದ್ಯಕೀಯ ಜ್ಞಾನವನ್ನು ನವೀಕರಿಸಲು ಇದು ಉತ್ತಮ ವೇದಿಕೆಯಾಗಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ ಅವರು ಮುಖ್ಯ ಅತಿಥಿಗಳಾಗಿದ್ದು, ಜೆ.ಎನ್.ಎಂ.ಸಿಯ, ಎನ್.ಎಂ.ಸಿ. ಪ್ರಾಂತೀಯ ನೋಡಲ್ ಕೇಂದ್ರದ ಸಂಯೋಜಕರಾದ ಡಾ. ಸುನಿತಾ ಪಾಟೀಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾದ ಡಾ. ನಿರಂಜನ್ ಕುಮಾರ, ಉಪ ಕುಲಪತಿಗಳು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ: ಪ್ರೀತಿ ಮತ್ತು ಉತ್ಸಾಹದಿಂದ ಬೋದಿಸುತ್ತಾ ಉತ್ತಮ ಶಿಕ್ಷಕರಾಗಬೇಕು. ವೈದ್ಯಕೀಯ ಶಿಕ್ಷಕರು ಉತ್ತಮ ಜ್ಞಾನ ಮತ್ತು ಸಂವಹನ ಕೌಶಲ್ಯಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳನ್ನು ಸ್ವತಂತ್ರರಾಗುವಂತೆ ರೂಪಿಸುವುದು ಶಿಕ್ಷಕರಿಗೆ ಉತ್ತಮ ತೃಪ್ತಿಯನ್ನು ನೀಡುತ್ತದೆ. ಶಿಕ್ಷಣವು ವೃತ್ತಿಪರತೆ ಮತ್ತು ಜೀವನದ ಕಲೆಯನ್ನು ಕಲಿಸುತ್ತದೆ. ಬದಲಾಗುತ್ತಿರುವ ಶಿಕ್ಷಣ ವ್ಯವಸ್ಥೆಯಲ್ಲಿ ವಿಮರ್ಶಾತ್ಮಕ ಚಿಂತನೆ ಅಗತ್ಯ. ಶಿಕ್ಷಣದ ಜ್ಞಾನವನ್ನು ಹಂಚಿಕೊಳ್ಳಲು ಸಹಯೋಗ ಮತ್ತು ಸಹಕಾರ ಅಗತ್ಯ. ಉತ್ತಮ ಶಿಕ್ಷಣವು ವ್ಯಕ್ತಿಯ ಬುದ್ಧಿವಂತಿಕೆಯನ್ನು ಜಾಗೃತಗೊಳಿಸುತ್ತದೆ. ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಡಾ. ದೀಪಕ ಕನಬೂರ, ಔಷಧಗುಣ ಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ವೈದ್ಯಕೀಯ ಶಿಕ್ಷಣ ಘಟಕದ ಸಂಯೋಜಕರಾದ ಡಾ. ರಾಧಿಕಾ ಶೇರ್ಖಾನೆ ಮತ್ತಿತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಾ. ಅರ್ಚನಾ ಡಂಬಳ ಅವರು ಅತಿಥಿಗಳನ್ನು ಸ್ವಾಗತಿಸಿ, ಎನ್.ಎಂ.ಸಿ. ಪ್ರಾಂತೀಯ ನೋಡಲ್ ಕೇಂದ್ರದ ಸಂಯೋಜಕರಾದ ಡಾ. ಸುನಿತಾ ಪಾಟೀಲ್ ಅವರನ್ನು ಪರಿಚಯಿಸಿದರು. ಡಾ. ಸ್ಮೀತಾ ಪ್ರಭು ಕಾರ್ಯಕ್ರವನ್ನು ನಿರೂಪಿಸಿದರು. ಡಾ. ಸ್ನೇಹಾ ವಂದನಾರ್ಪಣೆ ಸಲ್ಲಿಸಿದರು.

ಸೌಟ್ಸ್ - ಗೈಡ್ಸ್ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ

Article Image

ಸೌಟ್ಸ್ - ಗೈಡ್ಸ್ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ

ದಿಗಂಬರ ಜೈನ ವಿದ್ಯಾ ವರ್ಧಕ ಸಂಘ (ರಿ) ಮೂಡಬಿದ್ರೆ ಇದರ ಆಡಳಿತಕ್ಕೆ ಒಳಪಟ್ಟ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮತ್ತು ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ 2025ನೇ ಸಾಲಿನ ಸ್ಕೌಟ್-ಗೈಡ್ಸ್ ಮತ್ತು ಕಬ್ಸ್- ಬುಲ್ ಬುಲ್ಸ್ ಐದು ದಿನಗಳ ಬೇಸಿಗೆ ಶಿಬಿರವು ದಿನಾಂಕ 24/03/25 ರಂದು ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡಿತು. ಶಿಬಿರದ ಉದ್ಘಾಟನೆಯನ್ನು ಶಾಲಾ ತಾಯಂದಿರ ಸಮಿತಿಯ ಅಧ್ಯಕ್ಷರಾದ ಆರತಿ ಜೈನ್ ರವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪವನ್ ಕುಮಾರ್ ಇವರು ಧ್ವಜಾರೋಹಣ ಮಾಡುವುದರ ಮೂಲಕ ಶಿಬಿರಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ ಜೈನ್ ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಿಬಿರದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದೆಂದು ತಿಳಿಸಿದರು. ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ವೀಣಾ ಪ್ರಮೋದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗೈಡ್ ಕ್ಯಾಪ್ಟನ್ ಮಂಜುಳಾ ಜೈನ್, ಬುಲ್ ಬುಲ್ ಕ್ಯಾಪ್ಟನ್ ಸಾಕ್ಷಿ ಉಪಸ್ಥಿತರಿದ್ದರು. ಸ್ಕೌಟ್ ಮಾಸ್ಟರ್ ಪದ್ಮಶ್ರೀ ಸ್ವಾಗತಿಸಿದರು. ಗೈಡ್ಸ್ ಕ್ಯಾಪ್ಟನ್ ಜಯಲಕ್ಷ್ಮಿ ಕಾರ‍್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಸುಮಾರು 100 ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.

ಜೈನ ಧರ್ಮವು ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದು: ಅಜಿತ್‌ ಜೈನ್‌ ಅಭಿಮತ

Article Image

ಜೈನ ಧರ್ಮವು ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದು: ಅಜಿತ್‌ ಜೈನ್‌ ಅಭಿಮತ

ಜೈನ ಧರ್ಮವು ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದಾಗಿದೆ. ಯಾವುದೇ ಆಸೆ ಪೂರೈಸಲು ಪೂಜೆ ಮಾಡಬಾರದು. ಬದಲಿಗೆ ಜಿನನ ಗುಣಗಳನ್ನು ಅನುಸರಿಸುತ್ತ ಅವರ ಹಾಗೆ ನಾನೂ ಕೂಡ ಆತ್ಮ ಸಾಕ್ಷತ್ಕಾರವನ್ನು ಹೊಂದುವ ಸಲುವಾಗಿ ಪ್ರಾರ್ಥಿಸಬೇಕು ಎಂದು ಅಜಿತ್‌ ಜೈನ್‌ ಕೊಕ್ರಾಡಿ ಇವರು ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜೈನ ವಿದ್ಯಾರ್ಥಿಗಳಿಗೆ ನಡೆದ ಅಷ್ಟ ವಿಧಾರ್ಚನ ಪೂಜಾ ತರಬೇತಿ ಶಿಬಿರದ ಉದ್ಘಾಟನೆಯನ್ನು ಮಾಡಿ ಹೇಳಿದರು. ಮುಂದುವರಿದು ಮಾತಾನಾಡಿದ ಅವರು ಜೈನ ಧರ್ಮದ ವಿಧಿ ವಿಧಾನಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಜನನಿಗೆ ಅರ್ಘ್ಯ ನೀಡುವ ಪ್ರಕ್ರಿಯೆಯ ಅರ್ಥವನ್ನು ವಿದ್ಯಾರ್ಥಿಗಳು ಅರಿಯಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕೃಷ್ಣರಾಜ ಹೆಗ್ಗಡೆ ಮಾತನಾಡಿ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಪರಿಶ್ರಮವನ್ನು ಶ್ಲಾಘಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್‌ ಜೈನ್ ಮಾತನಾಡಿ ವಿದ್ಯಾರ್ಥಿಗಳು ಧರ್ಮದ ಮಾರ್ಗವನ್ನು ಅನುಸರಿಸುತ್ತಾ ಸ್ಪರ್ಧಾತ್ಮಕ ಜಗತ್ತಿಗೆ ಸಜ್ಜಾಗಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಉಪಸ್ಥಿತರಿದ್ದು, ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಸಂಪತ್‌ ಕುಮಾರ್‌ ಕಾರ್ಯಕ್ರಮವನ್ನು ಸಂಘಟಿಸಿ ನಿರೂಪಿಸಿದರು. ಪಾವನ ಪಂಚನ್ಮೋಕಾರ ಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಎಕ್ಸಲೆಂಟ್ ಸಿ.ಬಿ.ಎಸ್.ಇ, ಮೂಡುಬಿದಿರೆ ಶಾಲಾ ವಾರ್ಷಿಕೋತ್ಸವ

Article Image

ಎಕ್ಸಲೆಂಟ್ ಸಿ.ಬಿ.ಎಸ್.ಇ, ಮೂಡುಬಿದಿರೆ ಶಾಲಾ ವಾರ್ಷಿಕೋತ್ಸವ

ವಿದ್ಯಾರ್ಥಿಗಳಾದವರು ತಮ್ಮ ವ್ಯಕ್ತಿತ್ವ, ಮಾನಸಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಜೊತೆಗೆ ನಮ್ಮ ದೇಶ, ನಮ್ಮ ಸಮಾಜ, ನಮ್ಮ ಕುಟುಂಬ ಎಂಬ ಭಾವನೆಯನ್ನು ಹೊಂದಿರಬೇಕು ಅಲ್ಲದೇ ನೈತಿಕ ಮೌಲ್ಯವನ್ನು ಬೆಳೆಸುವುದರೊಂದಿಗೆ ಇನ್ನೊಬ್ಬರ ಕಷ್ಟದಲ್ಲಿ ಭಾಗಿಯಾಗುವುದೇ ನಿಜವಾದ ಮಾನವೀಯತೆ. ವಿದ್ಯೆಯೆಂಬುದು ಮನುಷ್ಯನ ಪ್ರಶಸ್ತಿ ಪಾತ್ರದಲ್ಲಿ ಇರುವುದಲ್ಲ ಬದಲಾಗಿ ಅವನ ವ್ಯಕ್ತಿತ್ವದಲ್ಲಿರುತ್ತದೆ ಎಂದು ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ Dr. ಎಂ ಬಿ ಪುರಾಣಿಕ್ ರವರು ಎಕ್ಸಲೆಂಟ್ ಸಿಬಿಎಸ್ಈ ಶಾಲಾ ವಾರ್ಷಿಕೋತ್ಸವದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪುಸ್ತಕದ ವಿದ್ಯೆಯನ್ನು ಮಸ್ತಕಕ್ಕೆ ತೆಗೆದುಕೊಳ್ಳಬೇಕು ವಿದ್ಯಾರ್ಥಿಯಾದವನು ಜೀವನದ ನಾಲ್ಕು ಕಂಬಗಳಾದ ಹೆತ್ತವರು, ಸಮಾಜ, ಗುರು ಹಿರಿಯರು ಹಾಗೂ ಸ್ನೇಹಿತರನ್ನು ಹೊಂದಿರಬೇಕು, ಎಂದು ಕ್ಷೇತ್ರ ಶಿಕ್ಷಣಾಧಿಕಾರಿಯವರಾದ ವಿರೂಪಾಕ್ಷಪ್ಪರವರು ತಿಳಿಸಿದರು. ಪ್ರತಿಯೊಬ್ಬ ವ್ಯಕ್ತಿಗೆ ಹುಟ್ಟಿನಿಂದಲೇ ಪ್ರತಿಭೆ ಬಂದಿರುತ್ತದೆ. ಅದು ಹೊರ ಹೊಮ್ಮಬೇಕಾದರೆ ವ್ಯಕ್ತಿಗೆ ಸೂಕ್ತ ವೇದಿಕೆ ಬೇಕು, ಸೂಕ್ತ ವಾತಾವರಣ ಹಾಗೂ ಪ್ರೋತ್ಸಾಹ ಬೇಕು. ಶಿಕ್ಷಣವು ಕೇವಲ ಪುಸ್ತಕದ ಬದನೆಕಾಯಿ ಆಗದೇ ಅದು ನೈಜ ರೀತಿಯಲ್ಲಿ ಇರಬೇಕು ಎಂದು ಮುಖ್ಯ ಅತಿಥಿಗಳಾದ ಮಾಜಿ ಎಪಿಎಂಸಿ ಅಧ್ಯಕ್ಷರಾದ ಕೃಷ್ಣರಾಜ ಹೆಗ್ಡೆಯವರು ಹೇಳಿದರು. ವಿದ್ಯಾರ್ಥಿಗಳಾದವರು ಓದು-ಬರಹದ ಜೊತೆಗೆ ಜೀವನದ ಪ್ರತಿ ಕ್ಷಣವನ್ನು ಆನಂದಿಸಬೇಕು. ಒಳ್ಳೆಯ ವಿಚಾರಗಳನ್ನು ಮನಸ್ಸಿಗೆ ತೆಗೆದುಕೊಳ್ಳಬೇಕು. ಹೆತ್ತವರ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು ಆ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ಹೊಂದಿದ ವ್ಯಕ್ತಿಯಾಗಬೇಕು ಎಂಬುವುದನ್ನು ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ರವರು ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ರವರು ಸಾಂಸ್ಕೃತಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವ ಮೂಲಕ ಶುಭ ಹಾರೈಸಿದರು. ಪ್ರಾಂಶುಪಾಲರಾದ ಸುರೇಷರವರು ಶಾಲಾ ಶೈಕ್ಷಣಿಕ ವರದಿಯನ್ನು ವಾಚಿಸಿದರು. ಕಾರ್ಯಕ್ರಮದಲ್ಲಿ ಮೂಡುಬಿದಿರೆ ಪುರಸಭೆಯ ಮಾಜಿ ಉಪಾಧ್ಯಕ್ಷೆಯಾದ ಸುಜಾತ, ಆಡಳಿತ ನಿರ್ದೇಶಕರಾದ ಬಿ. ಪಿ ಸಂಪತ್ ಕುಮಾರ್, ಶೈಕ್ಷಣಿಕ ನಿರ್ದೇಶಕರಾದ ಬಿ. ಪುಷ್ಪರಾಜ್, ಸಂಸ್ಥೆಯ ಹಳೆ ವಿದ್ಯಾರ್ಥಿಯಾದ ನಿಶಾಂತ್ ಪಿ ಹೆಗ್ಡೆ, ಶಾಲಾ ವಿದ್ಯಾರ್ಥಿ ನಾಯಕ ಪೃಥ್ವಿರಾಜ್ ಹಾಗೂ ನಾಯಕಿ ಸಾತ್ವಿಕ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿಯಾದ ಸ್ವಾತಿ ನಿರೂಪಿಸಿ, ಶೈಕ್ಷಣಿಕ ಸಂಯೋಜಕರಾದ ಶ್ರಿಪ್ರಸಾದ್ ರವರು ಸ್ವಾಗತಿಸಿ, ಸಾತ್ವಿಕ ರವರು ವಂದಿಸಿದರು.

ರಾಜ್ಯ ಮಟ್ಟದ ಆನ್‌ಲೈನ್ ಭಾಷಣ ಸ್ಪರ್ಧೆ-2024

Article Image

ರಾಜ್ಯ ಮಟ್ಟದ ಆನ್‌ಲೈನ್ ಭಾಷಣ ಸ್ಪರ್ಧೆ-2024

ಚಾತುರ್ಮಾಸ ಹಾಗೂ ದಶಲಕ್ಷಣ ಮಹಾಪರ್ವದ ನಿಮಿತ್ಯವಾಗಿ ವಿಜಯ ಪಥ ಆಯೋಜಿಸಿರುವ ರಾಜ್ಯ ಮಟ್ಟದ ಆನ್‌ಲೈನ್ ಭಾಷಣ ಸ್ಪರ್ಧೆ-2024. “ಜೈನ ತೀರ್ಥಂಕರ ತತ್ವಾದರ್ಶಗಳು ಈಗ ಹೆಚ್ಚು ಪ್ರಸ್ತುತ” ಈ ವಿಷಯದ ಕುರಿತು ಮಾತನಾಡಿ ಅದನ್ನು ಲ್ಯಾಂಡ್ ಸ್ಕೆಪ್ ಮೋಡ್‌ನಲ್ಲಿ ವಿಡಿಯೋ ಮಾಡಿ ನಮ್ಮ ಟೆಲಿಗ್ರಾಂ (8152970080)ಗೆ ಕಳುಹಿಸಿಕೊಡುವುದು. ವಯೋಮಿತಿ: 12+ ಸಮಯ ಮಿತಿ: 8-10 ನಿಮಿಷ ವಿಡಿಯೋ ಕಳಿಸುವ ಮುನ್ನ ಉಚಿತವಾಗಿ ಹೆಸರು ನೊಂದಾಯಿಸಿಕೊಂಡು ಹೆಚ್ಚಿನ ಮಾಹಿತಿ ಪಡೆಯುವುದು ಕಡ್ಡಾಯ. ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ಅತ್ಯಾಕರ್ಷಕ ನಗದು ಬಹುಮಾನ ಹಾಗೂ ಭಾಗವಹಿಸಿದ ಎಲ್ಲರಿಗೂ ಇ-ಪ್ರಶಸ್ತಿ ನೀಡಲಾಗುವುದು. ಮಾಹಿತಿ ಪಡೆದು ವೀಡಿಯೋ ಕಳಿಸಲು ಕೊನೆಯ ದಿನ: 30-ಸೆಪ್ಟೆಂಬರ್-2024. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದಿನೇಶ್ ಜೈನ್: 8152970080/9844221864.

ವೇಣೂರು : ಡಾ. ಸುಕೇಶ್ ಕುಮಾರ್ ಬಜಿರೆ ಇವರಿಗೆ ಪಿಎಚ್.ಡಿ ಪದವಿ

Article Image

ವೇಣೂರು : ಡಾ. ಸುಕೇಶ್ ಕುಮಾರ್ ಬಜಿರೆ ಇವರಿಗೆ ಪಿಎಚ್.ಡಿ ಪದವಿ

ಡಾ. ಸುಕೇಶ್ ಕುಮಾರ್ ಬಜಿರೆ ಇವರು ಡಾ. ರಾಜೇಶ್ ಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ "ರೋಲ್ ಆಫ್ ಕ್ವೊರಮ್ ಸೆನ್ಸಿಂಗ್ ಇನ್ ಸುಡೋಮೋನಾಸ್ ಅರಜಿನೋಸ ಅಡಾಪ್ಟ್ಯೇಷನ್ ಡ್ಯೂರಿಂಗ್ ಕ್ರಾನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್" ಎಂಬ ಮಹಾಪ್ರಬಂಧಕ್ಕೆ ದೇರಳಕಟ್ಟೆಯ ಯೇನೆಪೊಯ ಪರಿಗಣಿತ ವಿಶ್ವವಿದ್ಯಾನಿಲಯವು ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿಯನ್ನು ನೀಡಿ ಗೌರವಿಸಿದೆ. ಬಜಿರೆ ಹಲ್ಲಂದೋಡಿ ಶಶಿ ಕುಮಾರ್ ಇಂದ್ರ ಹಾಗು ಭಾರತಿ ದಂಪತಿಗಳ ಪುತ್ರನಾದ ಇವರು ಪ್ರಸ್ತುತ 'ಯೂನಿವರ್ಸಿಟಿ ಆಫ್ ಟೆಕ್ಸಾಸ್ ಅಟ್ ಟೈಲರ್' ಅಮೇರಿಕಾದಲ್ಲಿ ಪೋಸ್ಟ್ ಡಾಕ್ಟೋರಲ್ ರಿಸರ್ಚ್ ಅಸೋಸಿಯೇಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಶಿಕ್ಷಕ ಕೌಶಲ್ಯ ವರ್ಧನಾ ತರಬೇತಿ ಕಾರ್ಯಗಾರ

Article Image

ಶಿಕ್ಷಕ ಕೌಶಲ್ಯ ವರ್ಧನಾ ತರಬೇತಿ ಕಾರ್ಯಗಾರ

ದಿಗಂಬರ ಜೈನ ವಿದ್ಯಾವರ್ಧಕ ಸಂಘ(ರಿ.)ಮೂಡಬಿದ್ರೆ ಇದರ ಆಶ್ರಿತ ಸಂಸ್ಥೆಗಳಾದ ಜೈನ ಪ್ರೌಢಶಾಲೆ, ಡಿ.ಜೆ ಆಂಗ್ಲ ಮಾಧ್ಯಮ ಶಾಲೆ ಮತ್ತು ಡಿ.ಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಒಂದು ದಿನದ ‘ಶಿಕ್ಷಕ ಕೌಶಲ್ಯ ವರ್ಧನಾ’ ತರಬೇತಿ ಕಾರ್ಯಕ್ರಮವನ್ನು (Teacher’s skill Enhancement training program) ಜೈನ ಪ್ರೌಢಶಾಲೆಯ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಸಂಚಾಲಕರಾದ ಕೆ. ಹೇಮರಾಜ್ ರವರು ನೆರವೇರಿಸಿದರು. ತರಬೇತುದಾರರಾಗಿ ರಾಷ್ಟ್ರೀಯ ತರಬೇತುದಾರರಾದ ಬಾಸುಮ ಕೊಡಗು ಆಗಮಿಸಿದ್ದರು. ಬೆಳಗ್ಗೆ 9.30 ರಿಂದ ಸಂಜೆ 4.00 ಗಂಟೆಯವರೆಗೆ ನಡೆದ ಈ ತರಬೇತಿ ಕಾರ್ಯಗಾರದಲ್ಲಿ ಶಿಕ್ಷಕರ ಅವಲೋಕನ, ವಿದ್ಯಾರ್ಥಿ-ಶಿಕ್ಷಕ ಸಂಬಂಧ, ಸಂವಹನ ಮಾಧ್ಯಮ, ಅಂತರ್ಜಾಲ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಪ್ರಭಾವ ಇತ್ಯಾದಿ ವಿಷಯಗಳನ್ನು ತರಬೇತುದಾರರು ಗುಂಪು ಚರ್ಚೆಗಳ ಮೂಲಕ ಪ್ರಸ್ತುತ ಪಡಿಸಿದರು. ಕಾರ್ಯಕ್ರಮದಲ್ಲಿ ಜೈನ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೆ. ಶ್ಯಾಮ್ ಪ್ರಸಾದ್, ಡಿ.ಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ, ಡಿ.ಜೆ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ವೀಣಾ ಹಾಗೂ 3 ವಿದ್ಯಾಸಂಸ್ಥೆಗಳ ಶಿಕ್ಷಕರು ಭಾಗವಹಿಸಿದ್ದರು. ಶಿಕ್ಷಕರಾದ ನಿತೇಶ್ ಬಲ್ಲಾಳ್ ಕಾರ್ಯಕ್ರಮ ನಿರೂಪಿಸಿದರು ಮತ್ತು ಸುಧಾ ಕೆ. ತರಬೇತುದಾರರನ್ನು ಪರಿಚಯಿಸಿದರು.

ಮೂಡಬಿದಿರೆ: ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ವಿತರಣೆ

Article Image

ಮೂಡಬಿದಿರೆ: ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ವಿತರಣೆ

ಕೊಡುಗೈ ದಾನಿಗಳು ಶಾಲಾ ಹಿತೈಶಿಗಳು ಹಾಗೂ ಶಾಲಾ ಹಳೆ ವಿದ್ಯಾರ್ಥಿಯಾಗಿರುವ ಎಂ. ವಿ. ಶೆಟ್ಟಿಯವರು ಜುಲೈ 8ರಂದು ಮೂಡಬಿದಿರೆಯ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲಾ ಅರ್ಹ ಬಡ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ಜೈನ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ. ಇವರು ಉಪಸ್ಥಿತರಿದ್ದರು.

ಶಟಲ್ ಬ್ಯಾಡ್ಮಿಂಟನ್: ವಿನೀತ್ ಪ್ರಥಮ ಸ್ಥಾನ

Article Image

ಶಟಲ್ ಬ್ಯಾಡ್ಮಿಂಟನ್: ವಿನೀತ್ ಪ್ರಥಮ ಸ್ಥಾನ

ಉಜಿರೆ: ನೆಲ್ಯಾಡಿಯಲ್ಲಿ ಪ್ರೀಮಿಯರ್ ಲೀಗ್ 2024 ಆಶ್ರಯದಲ್ಲಿ ಇತ್ತೀಚೆಗೆ ನಡೆದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎಸ್.ಎಂ. ಸ್ಮಾಟರ್ಸ್ ತಂಡವನ್ನು ಪ್ರತಿನಿಧಿಸಿದ ಧರ್ಮಸ್ಥಳದ ವಿನೀತ್ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಬಿ.ಸಿ.ಎ. ಪದವಿ ತರಗತಿಯ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ. ವಿ. ಶೆಟ್ಟಿ ಮತ್ತು ಅರುಣಾ ದಂಪತಿಗಳ ಪುತ್ರರಾಗಿರುತ್ತಾರೆ. ಇವರಿಗೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕುಮಾರ್ ತರಬೇತಿ ನೀಡಿರುತ್ತಾರೆ.

ಸತ್ತೂರು, ಧಾರವಾಡ: “ಪರ್ವ 2024”-ಸಾಂಸ್ಕೃತಿಕ ಕಾರ್ಯಕ್ರಮ

Article Image

ಸತ್ತೂರು, ಧಾರವಾಡ: “ಪರ್ವ 2024”-ಸಾಂಸ್ಕೃತಿಕ ಕಾರ್ಯಕ್ರಮ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಅಲೈಡ ಹೆಲ್ತ್ ಸೈನ್ಸ್ ವಿಭಾಗದವರಿಂದ “ಪರ್ವ 2024”-ಸಾಗರ ಸಂರಕ್ಷಣೆಯ ಭಾಗವಾಗಿ “ಸಮುದ್ರ ನಮ್ಮ ಜೀವನದ ಸೌಂದರ್ಯ” ಎಂಬ ಧ್ಯೇಯೆಯೊಂದಿಗೆ ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರವನ್ನು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ, ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ ಮತ್ತಿತರ ಗಣ್ಯರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪದ್ಮಲತಾ ನಿರಂಜನ್, ಸಾಕೇತ್ ಶೆಟ್ಟಿ, ಡಾ. ಚಿದೇಂದ್ರ ಶೆಟ್ಟರ ಮತ್ತಿತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಲೈಡ ಹೆಲ್ತ್ ಸೈನ್ಸ್ ನ ಸಂಯೋಜಕರಾದ ಡಾ. ವಿದ್ಯಾ ಪಾಟೀಲ ಅವರು ಪರ್ವ 2024 ಸಾಂಸ್ಕೃತಿಕ ಕಾರ್ಯಕ್ರಮದ ಅವಲೋಕನವನ್ನು ನೀಡಿದರು. ಶೋಧನ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಮೀನಾಜ್ ಮತ್ತು ತಾಂಜೀಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಸೌಮ್ಯ ವಂದನಾರ್ಪಣೆ ಸಲ್ಲಿಸಿದರು.

ನಿರಂಜನ ಲಹರಿ ಮಾಧ್ಯಮದ ಮೂಲಕ ಮಕ್ಕಳ ಬೇಸಿಗೆ ಧಾರ್ಮಿಕ ಶಿಬಿರ

Article Image

ನಿರಂಜನ ಲಹರಿ ಮಾಧ್ಯಮದ ಮೂಲಕ ಮಕ್ಕಳ ಬೇಸಿಗೆ ಧಾರ್ಮಿಕ ಶಿಬಿರ

ನಿರಂಜನ ಲಹರಿ ಮಾಧ್ಯಮದ ಮೂಲಕ ಮಕ್ಕಳ ಬೇಸಿಗೆ ಧಾರ್ಮಿಕ ಶಿಬಿರ (ಉಚಿತ ) online ( zoom app) ಮಾಧ್ಯಮದ ಮೂಲಕ ನಡೆಸಲಾಗುತ್ತದೆ. ಕಾಯ೯ಕ್ರಮದ ನೇರ ಪ್ರಸಾರವನ್ನು ನಿರಂಜನ ಲಹರಿ ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಬಹುದು. ಧಾರ್ಮಿಕ ಶಿಬಿರದಲ್ಲಿ ಶಿಕ್ಷಕಿಯಾಗಿ ಸುಮನಾ ಪತ್ರಾವಳಿ ಬೆಳಗಾವಿರವರು ಪಾಲ್ಗೊಳ್ಳಲಿದ್ದಾರೆ. 12.05.2024ರಿಂದ 16.05.2024 ಗುರುವಾರದವರೆಗೆ ಪ್ರತೀ ದಿನ ಮಧ್ಯಾಹ್ನ 12.00ರಿಂದ 1.00 ರವರೆಗೆ ನಡೆಯುತ್ತದೆ. ವಿಶೇಷ ಆಕರ್ಷಣೆಯಾಗಿ 16.05.2024 ರ ಗುರುವಾರ ಮಕ್ಕಳಿಗಾಗಿ ಅಷ್ಟವಿಧಾರ್ಚನೆಯನ್ನು ಕಲಿಸಿಕೊಡಲಾಗುವುದು, ಈ ಕಾರ್ಯಕ್ರಮ ಮಕ್ಕಳಲ್ಲಿ ಧಾರ್ಮಿಕ ಸಂಸ್ಕಾರವನ್ನು ಉದ್ದೀಪನಗೊಳಿಸಲು ಆಯೋಜಿಸಲಾಗಿದೆ. ಹೆಸರು ನೊಂದಾಯಿಸಲು ಸಂಪರ್ಕಿಸಿ ನಿರಂಜನ್ ಜೈನ್- 9945563529.

ನರಸಿಂಹರಾಜಪುರ: ಶ್ರೀ ಸಮಂತಭದ್ರ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

Article Image

ನರಸಿಂಹರಾಜಪುರ: ಶ್ರೀ ಸಮಂತಭದ್ರ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

ಶ್ರೀ ಜ್ವಾಲಾಮಾಲಿನಿ ದೇವಿ ಅತಿಶಯ ಕ್ಷೇತ್ರ ಸಿಂಹನಗದ್ದೆ ನರಸಿಂಹರಾಜಪುರ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ನಡೆಸುತ್ತಿರುವ ಶ್ರೀ ಸಮಂತಭದ್ರ ವಿದ್ಯಾಪೀಠಕ್ಕೆ ಜೈನ ವಿದ್ಯಾರ್ಥಿಗಳಿಗೆ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣವನ್ನು ನೀಡಲಾಗುತ್ತಿದೆ. 2024-25ನೇ ಸಾಲಿನ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ವಿದ್ಯಾರ್ಥಿಗಳ ನೋಂದಣಿ ಆರಂಭವಾಗಿದೆ. ಜೈನ ಪೋಷಕರು ಬಾಲಕರನ್ನು ವಿದ್ಯಾಪೀಠದ ಪ್ರವೇಶಕ್ಕೆ ತಮ್ಮ ಹಿಂದಿನ ತರಗತಿಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳೊಂದಿಗೆ ಸಂಪರ್ಕಿಸಬೇಕಾಗಿ ಅಪೇಕ್ಷಿಸಲಾಗಿದೆ. ಸಂಪರ್ಕ: ಶ್ರೀ ಜ್ವಾಲಾಮಾಲಿನಿ ದೇವಿ ಅತಿಶಯ ಕ್ಷೇತ್ರ ಪೆನುಗೊಂಡೆ ದಿಗಂಬರ ಜೈನ ಮಹಾಸಂಸ್ಥಾನ ಮಠ ಸಿಂಹನಗದ್ದೆ ಬಸ್ತಿಮಠ, ನರಸಿಂಹರಾಜಪುರ - 577134 ಮೊ: 8277741008, 08266220609

ಫಿಜೋಥೆರಪಿ ಪದವಿಯಲ್ಲಿ ಸನ್ನಿಧಿ ಜೈನ್‌ರವರು ಉತ್ತಮ ಅಂಕ

Article Image

ಫಿಜೋಥೆರಪಿ ಪದವಿಯಲ್ಲಿ ಸನ್ನಿಧಿ ಜೈನ್‌ರವರು ಉತ್ತಮ ಅಂಕ

ಬೆಂಗಳೂರು ರಾಜೀವ್ ಗಾಂಧಿ ವೈದ್ಯಕೀಯ ವಿಶ್ವ ವಿದ್ಯಾಲಯ ವ್ಯಾಪ್ತಿಯಲ್ಲಿ ಇರುವ ಮೂಡಬಿದಿರೆಯ ಆಳ್ವಾಸ್ ವೈದ್ಯಕೀಯ ಕಾಲೇಜು, ಫಿಜೋಥೆರಫಿ ವೈದ್ಯಕೀಯ ವಿಭಾಗದ ಡಾಕ್ಟರ್ ಫಿಜೋಥೆರಪಿ ಪದವಿಯಲ್ಲಿ ಸನ್ನಿಧಿ ಜೈನ್‌ರವರು ಉತ್ತಮ ಅಂಕಗಳನ್ನು ಪಡೆದಿದ್ದಾರೆ. ಇವರು ನಾರಾವಿ ಹಂಬಡದ ಸಂಧ್ಯಾ ಮತ್ತು ಮುನಿರಾಜ್ ಜೈನ್ ಇವರ ಸುಪುತ್ರಿ.

ವರಂಗ: ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾವಕಾಶ

Article Image

ವರಂಗ: ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾವಕಾಶ

ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನದಲ್ಲಿ ಶ್ರೀಕ್ಷೇತ್ರ ವರಂಗ ಜೈನ ಮಠದಲ್ಲಿ ನಡೆಯುತ್ತಿರುವ ವಿದ್ಯಾಪೀಠಕ್ಕೆ 2024-25ನೇ ಸಾಲಿನ ಪ್ರವೇಶ ಪ್ರಾರಂಭಿಸಲಾಗಿದ್ದು, 8 ರಿಂದ 10ನೇ ತರಗತಿಯ, ಪದವಿಪೂರ್ವ ಹಾಗೂ ಪದವಿ ವಿದ್ಯಾಭ್ಯಾಸ ಮಾಡಲು ಜೈನ ವಿದ್ಯಾರ್ಥಿಗಳಿಗೆ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು. ಮೂಲ ದಾಖಲೆಗಳೊಂದಿಗೆ ಶ್ರೀಮಠದ ಆಡಳಿತ ಮಂಡಳಿಯನ್ನು ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 8762785044, 8123924492, 9481249127, 9481944083,

ಹೊಂಬುಜ: ಶ್ರೀ ಕುಂದಕುಂದ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

Article Image

ಹೊಂಬುಜ: ಶ್ರೀ ಕುಂದಕುಂದ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ಶುಭಾಶೀರ್ವಾದದೊಂದಿಗೆ ಜೈನ ಮಠದ ಆಶ್ರಯದಲ್ಲಿ ಸುವ್ಯವಸ್ಥಿತಗೊಂಡಿರುವ ಶ್ರೀ ಕುಂದಕುಂದ ವಿದ್ಯಾಪೀಠವು ಜೈನ ಬಾಂಧವರ ಪ್ರೋತ್ಸಾಹಕ್ಕೆ ಪಾತ್ರವಾಗಿ ಜೈನ ವಿದ್ಯಾರ್ಥಿಗಳಿಗೆ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣ ನೀಡುವಲ್ಲಿ ಯಶಸ್ಸುಗಳಿಸಿ ಪ್ರಗತಿ ಪಥದಲ್ಲಿ ಮುನ್ನಡೆದಿದೆ. ಶ್ರೀ ಕುಂದಕುಂದ ವಿದ್ಯಾಪೀಠಕ್ಕೆ 5 ರಿಂದ 10ನೇ ತರಗತಿಯವರೆಗಿನ, 2024-25ನೇ ಸಾಲಿನ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ವಿದ್ಯಾರ್ಥಿಗಳ ‌ನೋಂದಣಿ ಆರಂಭವಾಗಿದೆ. ಜೈನ ಪೋಷಕರು/ತಂದೆ ತಾಯಿಯರು ಬಾಲಕರನ್ನು ಈ ವಿದ್ಯಾಸ್ಫೂರ್ತಿ ಸೆಲೆಯ ವಿದ್ಯಾಪೀಠದ ಪ್ರವೇಶಕ್ಕೆ ತಾವು ಹಿಂದಿನ ತರಗತಿಯ ಉತ್ತೀರ್ಣರಾದ ಅಂಕಪಟ್ಟಿ ಹಾಗೂ ಅಲ್ಲಿಯ ಜೈನ ಸಮಾಜದ ಮುಖಂಡರಿಂದ ಪಡೆದ ಪರಿಚಯ ಪತ್ರ, ಮೂಲ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ವಿ.ಸೂ: ಶ್ರೀ ಹೊಂಬುಜ ಪದ್ಮಾವತಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಪರಂಜ್ಯೋತಿ ಆಂಗ್ಲಮಾಧ್ಯಮ ಪ್ರಾಥಮಿಕ ಪಾಠಶಾಲೆಗೆ 8ನೇ ತರಗತಿಯಿಂದ ಅವಕಾಶವಿರುತ್ತದೆ ವ್ಯವಸ್ಥಾಪಕರು, ಶ್ರೀಕುಂದ ಕುಂದ ವಿದ್ಯಾಪೀಠ : 8123924492, 8762180697, 9481249127, 9481944083

ಕಾರ್ಕಳ: ಶ್ರೀ ಬಾಹುಬಲಿ ಶ್ರಾವಿಕಾಶ್ರಮದ ಪಿ.ಯು.ಸಿ ವಿದ್ಯಾರ್ಥಿಗಳ ಸಾಧನೆ

Article Image

ಕಾರ್ಕಳ: ಶ್ರೀ ಬಾಹುಬಲಿ ಶ್ರಾವಿಕಾಶ್ರಮದ ಪಿ.ಯು.ಸಿ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ ದಾನಶಾಲೆಯಲ್ಲಿರುವ ಶ್ರೀ ಬಾಹುಬಲಿ ಶ್ರಾವಿಕಾಶ್ರಮದಲ್ಲಿ ವಾಸ್ತವ್ಯವಿದ್ದು, ಹಿರಿಯಂಗಡಿ ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪದವಿಪೂರ್ವ ಕಾಲೇಜಿನ ಪಿ.ಯು.ಸಿ.ಯಲ್ಲಿ ಸಿಂಚನಾ 97% (582-ವಾಣಿಜ್ಯ), ಮಾನ್ಯ 96.8% (581-ವಾಣಿಜ್ಯ), ನಮಿತಾ 96.7% (580-ವಾಣಿಜ್ಯ), ಪ್ರಾಪ್ತಿ 96.5% (579-ವಾಣಿಜ್ಯ), ಅನ್ವೇಶ 96% (578-ವಾಣಿಜ್ಯ), ನಮ್ರತಾ 95.3% (572-ವಾಣಿಜ್ಯ), ಕುಶಿ 91.7% (550-ವಾಣಿಜ್ಯ) ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಜಿತೋ ಸಂಸ್ಥೆ ವತಿಯಿಂದ ಜೈನ ಸಮಾಜದ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ ಉಚಿತ ತರಬೇತಿ

Article Image

ಜಿತೋ ಸಂಸ್ಥೆ ವತಿಯಿಂದ ಜೈನ ಸಮಾಜದ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ ಉಚಿತ ತರಬೇತಿ

ಬೆಳಗಾವಿ, ಏ.6: ಜೈನ ಇಂಟರ್‌ನ್ಯಾಷನಲ್ ಟ್ರೆಡ್ ಆರ್ಗನೈಝೇಶನ್ ಜಿತೋ ಸಂಸ್ಥೆಯ ವತಿಯಿಂದ ಕಳೆದ 11 ವರ್ಷಗಳಿಂದ ಜೈನ ಸಮಾಜದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಯುಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ದತೆಗಾಗಿ ಉಚಿತ ತರಬೇತಿಯನ್ನು ನೀಡುತ್ತ ಬಂದಿದೆ. ಈ ವರ್ಷವೂ ಸಹ ಜಿತೋ ಸಂಸ್ಥೆಯ ವತಿಯಿಂದ ಯುಪಿಎಸ್‌ಸಿ ಪರೀಕ್ಷೆಯ ಸಿದ್ದತೆಗಾಗಿ ಉಚಿತ ತರಬೇತಿಯನ್ನು ನೀಡಲಿದೆ. ವಿದ್ಯಾರ್ಥಿಗಳು ಹೆಸರು ನೋಂದಾಯಿಸುವುದು ಕಡ್ಡಾಯವಾಗಿರುತ್ತದೆ. ಹೆಸರು ನೋಂದಣಿಗೆ ಯಾವುದೇ ಶುಲ್ಕ ಇರುವುದಿಲ್ಲ. ಹೆಸರು ನೋಂದಣಿ ಮಾಡುವ ಕೊನೆಯ ದಿನಾಂಕ 24-04-2024 ಆಗಿದ್ದು, ಈ ಅವಧಿಯೊಳಗೆ ಹೆಸರು ನೊಂದಾಯಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕುಂತಿನಾಥ ಕಲಮನಿ ಮೊ: 94804-48108 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭ. ಶ್ರೀ ಮಹಾವೀರ ತೀರ್ಥಂಕರರ 2250ನೇ ಜನ್ಮಕಲ್ಯಾಣದ ಪ್ರಯುಕ್ತ ಪ್ರಬಂಧ ಸ್ಪರ್ಧೆ

Article Image

ಭ. ಶ್ರೀ ಮಹಾವೀರ ತೀರ್ಥಂಕರರ 2250ನೇ ಜನ್ಮಕಲ್ಯಾಣದ ಪ್ರಯುಕ್ತ ಪ್ರಬಂಧ ಸ್ಪರ್ಧೆ

ಭ. ಶ್ರೀ ಮಹಾವೀರ ತೀರ್ಥಂಕರರ 2250ನೇ ಜನ್ಮಕಲ್ಯಾಣದ ಪ್ರಯುಕ್ತ 'ಪ್ರಾತಃಸ್ಮರಣೀಯ ಪ.ಪೂ. ಆಚಾರ್ಯ ಶ್ರೀ 108 ವಿದ್ಯಾಸಾಗರ ಮಹಾರಾಜರು, ಭ. ಮಹಾವೀರ ಸ್ವಾಮಿಯವರ ಅಹಿಂಸಾ ಪರಮೋ ಧರ್ಮ ಸಂದೇಶವನ್ನು ಜಗತ್ತಿಗೆ ಪಂಚಮಕಾಲದಲ್ಲಿ ಪರಿಚಯಿಸಿದ ಮಹಾಸಂತರು' ಈ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದ್ದು, ಸ್ವಂತ ಕೈ ಬರಹದಲ್ಲಿ ಬರೆದ ಪ್ರಬಂಧ 2 ಪುಟ ಮೀರದಂತಿರಬೇಕು. ಪ್ರಬಂಧವನ್ನು ದಿನಾಂಕ 10-04-2024ರ ಒಳಗಾಗಿ ಕಳುಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ವೈ.ಡಿ. ರತ್ನಾಕರ್ : ದೂ. 9886589725, 7892159744 ಇವರನ್ನು ಸಂಪರ್ಕಿಸಬಹುದು.

ಉಜಿರೆ : “ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

Article Image

ಉಜಿರೆ : “ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುವ “ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಛಿಸುವ ಬಡ, ಹಿಂದುಳಿದ ಹಾಗೂ ಕೃಷಿಕ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳು ಇಲ್ಲಿ ನಮ್ಮ ಆಯ್ಕೆ ಪರೀಕ್ಷೆಗೆ ಹಾಜರಾಗಿ ಮೂರು ದಿನ ರತ್ನಮಾನಸದಲ್ಲಿ ಉಳಿದು ಇಲ್ಲಿನ ಪರಿಸರ ಹಾಗೂ ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ಕ್ರಮವನ್ನು ಅಳವಡಿಸಿಕೊಳ್ಳುವ ಅಂಗವಾಗಿ ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವ-ಉದ್ಯೋಗ ತರಬೇತಿಯನ್ನು ನೀಡಲಾಗುವುದು. ಇಲ್ಲಿನ ಜೀವನ ಶಿಕ್ಷಣ ಕ್ರಮದ ಮಾಹಿತಿಯನ್ನು ಪಡೆದ ಬಳಿಕ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಯ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಛಿಸುವ ಅರ್ಹ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ದಿನಾಂಕ 05-04-2024ರಿಂದ ಅರ್ಜಿಗಳನ್ನು ನೀಡಲಾಗುವುದು ಮತ್ತು 25-04-2024ರಂದು ಅರ್ಜಿ ನೀಡಲು ಕೊನೆಯ ದಿನಾಂಕವಾಗಿರುತ್ತದೆ. ವಿ.ಸೂ. : ಆಂಗ್ಲಮಾಧ್ಯಮ, 9ನೇ ಮತ್ತು 10ನೇ ತರಗತಿ ದಾಖಲಾತಿಗೆ ಅವಕಾಶವಿರುವುದಿಲ್ಲ. ಹಾಗೂ ಹುಡುಗಿಯರಿಗೆ ದಾಖಲಾತಿ ಇರುವುದಿಲ್ಲ. ಅರ್ಜಿಯನ್ನು ರತ್ನಮಾನಸ ವಸತಿ ನಿಲಯದಲ್ಲಿಯೇ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : 08023901791, 9480351201, 9449244425, 9901546846

First Previous

Showing 1 of 1 pages

Next Last