Article Image

ಹಾಸನದ ಶ್ರೀ ಮಹಾವೀರ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನಿಂದ ವಿದ್ಯಾರ್ಥಿ ವೇತನ

Article Image

ಹಾಸನದ ಶ್ರೀ ಮಹಾವೀರ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನಿಂದ ವಿದ್ಯಾರ್ಥಿ ವೇತನ

ಹೊಂಬುಜ, ಶ್ರೀ ಜೈನ ಮಠದ ಪೀಠಾಧ್ಯಕ್ಷರಾಗಿರುವ ಪರಮಪೂಜ್ಯ ಶ್ರೀಮದ್ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮಿಗಳು, ಟ್ರಸ್ಟಿನ ಗೌರವಾನ್ವಿತ ಪರಮ ಸಂರಕ್ಷಕರು ಹಾಗೂ ಅಧ್ಯಕ್ಷರು ಆಗಿರುವ ಹಾಸನದ ಶ್ರೀ ಮಹಾವೀರ ಎಜುಕೇಷನಲ್ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಈ ವರ್ಷವೂ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕರ್ನಾಟಕ ರಾಜ್ಯ ಜೈನ ಸಮಾಜದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ವಿದ್ಯಾರ್ಥಿ ವೇತನಕ್ಕೋಸ್ಕರ ಅರ್ಜಿ ಆಹ್ವಾನಿಸಿದೆ. ಇದು ವೈದ್ಯಕೀಯ, ದಂತವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ, ಇಂಜಿನಿಯರಿಂಗ್, ಡಿಪ್ಲೋಮೋ ಮತ್ತು ಜೈನಾಲಜಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುವುದು. ಅರ್ಹ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಹಿಂದಿನ ಪರೀಕ್ಷೆಯಲ್ಲಿ ಗಳಿಸಿರುವ ಅಂಕಪಟ್ಟಿ ನಕಲು, ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರವೇಶ ಪತ್ರದ ನಕಲು ಹಾಗೂ ಆಧಾರ್‌ಕಾರ್ಡನ ಪ್ರತಿ ಹಾಗೂ ತಮ್ಮ ಬ್ಯಾಂಕಿನ ವಿವರದೊಂದಿಗೆ ಅರ್ಜಿಯನ್ನು P.D.F Formatನಲ್ಲಿ ಈ ಇಮೇಲ್ ವಿಳಾಸ mahaveeraeducationaltrust@gmail.com ವಾಟ್ಸಾಪ್ ನಂ-9448544333 ಗೆ ದಿನಾಂಕ 15/11/2025ರ ಒಳಗಾಗಿ ಕಳುಹಿಸುವುದು.

ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

Article Image

ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

BA, BSc, B.Com ವಿವಿಧ ಡಿಗ್ರಿ ಕೋರ್ಸ್‌ಗಳನ್ನು ಪೂರ್ಣಗೊಳಿಸಲು ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ತೆರೆಯಲಾಗಿದೆ. ಇದರ ಸಂಪೂರ್ಣ ಶುಲ್ಕವನ್ನು ನಿರ್ದೇಶನಾಲಯದಿಂದಲೇ ಭರಿಸಲಾಗುವುದು. ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 01.07.2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.08.2025 ವೆಬ್ ಸೈಟ್: https://minority. Ksouportal.com/ https://dom.karnataka.gov.in/

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Article Image

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಬಯಸುವ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳು 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ./ಐ ಎ ಎಸ್., ಕೆ.ಎ.ಎಸ್. ಕೆ.ಪಿ.ಎಸ್.ಸಿ- ಗ್ರೂಪ್ ಸಿ, RRB & SSCಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02.08.2025 ಹೆಚ್ಚಿನ ವಿವರ ಹಾಗೂ ಅರ್ಜಿ ಸಲ್ಲಿಸಲು https://sevasindhu.karnataka.gov.in/sevasindhu/departmentservices https://dom.karnataka.gov.in/

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Article Image

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ವಿದ್ಯಾರ್ಥಿವೇತನಕ್ಕೆ SSP ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ: 30.09.2025 ಅರ್ಜಿಗಳನ್ನು SSP ಪೋರ್ಟಲ್ https://ssp.postmatric.karnataka.gov.in/ssppre/ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ https://dom.karnataka.gov.in/

ವಿದ್ಯಾರ್ಥಿವೇತನಕ್ಕಾಗಿ‌ ಆನ್‌ಲೈನ್ ಅರ್ಜಿ ಆಹ್ವಾನ

Article Image

ವಿದ್ಯಾರ್ಥಿವೇತನಕ್ಕಾಗಿ‌ ಆನ್‌ಲೈನ್ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ QS Top 500 ಪಟ್ಟಿಯಲ್ಲಿ ಸ್ಥಾನ ಪಡೆದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.09.2025 ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ https://dom.karnataka.gov.in/ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/ Sevasindhu/DepartmentService ಮೂಲಕ ಸಲ್ಲಿಸಬೇಕು.

ಮೆಟ್ರಿಕ್ ನಂತರದ ಶುಲ್ಕ ಮರುಪಾವತಿಗೆ ಆನ್‌ಲೈನ್ ಅರ್ಜಿ ಆಹ್ವಾನ

Article Image

ಮೆಟ್ರಿಕ್ ನಂತರದ ಶುಲ್ಕ ಮರುಪಾವತಿಗೆ ಆನ್‌ಲೈನ್ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಪಿ ಹೆಚ್ ಡಿ ತಾಂತ್ರಿಕ & ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ SSP ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.09.2025 ಅರ್ಜಿಗಳನ್ನು SSP ಪೋರ್ಟಲ್ https://ssp.postmatric.karnataka.gov. in/post_sa/signin.aspx ಮೂಲಕ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್: https://dom.karnataka.gov.in/

ವಿಶೇಷ ಚೇತನ (PHYSICALLY HANDICAP) ಮಕ್ಕಳ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Article Image

ವಿಶೇಷ ಚೇತನ (PHYSICALLY HANDICAP) ಮಕ್ಕಳ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಿಗಂಬರ ಜೈನ ಪಂಗಡಕ್ಕೆ ಸೇರಿದ್ದು ಪ್ರಸ್ತುತ 9ನೇ ತರಗತಿಯಿಂದ ಉತ್ತೀರ್ಣರಾಗಿ SSLCಗೆ ಬರುವ ಮತ್ತು ಮೊದಲನೇ ವರ್ಷದ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎರಡನೇ PUCಗೆ ಬರುವ ಅರ್ಹ ವಿಶೇಷ ಚೇತನ (PHYSICALLY HANDICAP) ಮಕ್ಕಳಿಗೆ ತುಮಕೂರಿನ ದಿ| ಎನ್.ಸಿ. ಬೊಮ್ಮಣ್ಣಯ್ಯ ಗುಬ್ಬಿ ರವರ ಹೆಸರಿನಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು, ಆಸಕ್ತ ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ 30-04-2025ರ ಒಳಗೆ ಅರ್ಜಿ ಸಲ್ಲಿಸಬಹುದು ಬಂದ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಸಲ್ಲಿಸಬೇಕಾದ ದಾಖಲಾತಿಗಳು 1) ತಂದೆ/ತಾಯಿ/ಪೋಷಕರ ವಿವರ 2) ವಾರ್ಷಿಕ ವರಮಾನದ ದೃಢೀಕೃತ ಪ್ರತಿ 3) ಅಧಿಕೃತ ವೈದ್ಯರಿಂದ Disability ಬಗ್ಗೆ ಪಡೆದ ಪ್ರಮಾಣ ಪತ್ರ 4) ಆಧಾರ್ ಕಾರ್ಡ್ ಮತ್ತು ಮೊಬೈಲ್ ನಂಬರ್ 5) ಅಂಕ ಪಟ್ಟಿ ಅರ್ಜಿಸಲ್ಲಿಸಬೇಕಾದ ವಿಳಾಸ ಎನ್. ಬಿ. ಶ್ರೇಯಾಂಸ ಕುಮಾ‌ರ್ “ರಾಜಗೃಹ” ಸಾಧನ ರಸ್ತೆ, ಕೆ.ಆರ್. ಬಡಾವಣೆ, ತುಮಕೂರು-572101 ಮೊ: 9901311970.

ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Article Image

ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

1ರಿಂದ 8ನೇ ತರಗತಿಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ(PRE-MATRIC SCHOLARSHIP) ಯೋಜನೆಯಡಿಯಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್‌ನ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 31ರಂದು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು 1)ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. 2)ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. 3)ಎಲ್ಲ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು ರೂ.1.00 ಲಕ್ಷಗಳನ್ನು ಮೀರಿರಬಾರದು. ಅರ್ಜಿ ಸಲ್ಲಿಸುವವರಿಗೆ ವಿಶೇಷ ಸೂಚನೆ: *ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. *ಕಳೆದ ವರ್ಷದಲ್ಲಿ ವಿದ್ಯಾರ್ಥಿ ವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು Auto Renewal ಎಂದು ಪರಿಗಣಿಸಲಾಗುವುದರಿಂದ ಸದರಿ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. *ಹಿಂದಿನ ವರ್ಷ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು. *ಪ್ರೀ ಮೆಟ್ರಿಕ್ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವ ಬಗ್ಗೆ ಹಾಗೂ NPCI Mapping | Active ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಜಿ ಆಹ್ವಾನ

Article Image

ಅರ್ಜಿ ಆಹ್ವಾನ

ರಾಜಸ್ಥಾನ ಸಾಂಗನೇರದಲ್ಲಿರುವ ಶ್ರಮಣ ಸಂಸ್ಕೃತಿ ಸಂಸ್ಥಾನದಲ್ಲಿ ಸಂತ ಶಿರೋಮಣಿ 108 ಆಚಾರ್ಯ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರ ಆಶೀರ್ವಾದ ಮತ್ತು ಮುನಿಪುಂಗವ 108 ಶ್ರೀ ಸುಧಾಸಾಗರ ಮಹಾರಾಜರ ಪ್ರೇರಣೆಯಿಂದ ನಡೆಯುತ್ತಿರುವ ದ್ವಾದಶ ವರ್ಷಿಯ ಕೋರ್ಸ್ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದರಲ್ಲಿ ಉತ್ತಮ ಪಂಡಿತರಿಂದ ಗ್ರಂಥ ಸ್ವಾಧ್ಯಾಯ ಮತ್ತು ಪ್ರತಿ ವರ್ಷ ಪರೀಕ್ಷೆ ಬರೆಯ ಬೇಕಾಗುತ್ತದೆ. ಇಲ್ಲಿಯವರೆಗೂ ಹಿಂದಿಯಲ್ಲಿ ನಡೆಯುತ್ತಿದ್ದು, ಪ್ರಥಮ ಬಾರಿಗೆ ಮೈಸೂರಿನಲ್ಲಿ ಪಠ್ಯಕ್ರಮವನ್ನು ಕನ್ನಡಕ್ಕೆ ಅನುವಾದಿಸಿ, ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅನುಮತಿ ನೀಡಲಾಗಿದೆ. ಕರ್ನಾಟಕ ರಾಜ್ಯಾದ್ಯಂತ ಎಲ್ಲರಿಗೂ ಈ ಪರೀಕ್ಷೆ ಬರೆಯುವ ಅವಕಾಶವಿದ್ದು, ಪರೀಕ್ಷೆಯನ್ನು ಬರೆಯಲು ಯಾವುದೇ ವ್ಯಾಸಂಗದ ಅರ್ಹತೆ ಮತ್ತು ವಯಸ್ಸಿನ ಮಿತಿ ಇರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-01-2024 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸಪ್ನ ಲಕ್ಷ್ಮೀಶ್ ಮೈಸೂರು: 9448254546 / 8660747004

First Previous

Showing 1 of 1 pages

Next Last