Article Image

ಹೊಂಬುಜ: ಶ್ರೀ ಕುಂದಕುಂದ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

Article Image

ಹೊಂಬುಜ: ಶ್ರೀ ಕುಂದಕುಂದ ವಿದ್ಯಾಪೀಠಕ್ಕೆ ಪ್ರವೇಶಾವಕಾಶ

ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ಶುಭಾಶೀರ್ವಾದದೊಂದಿಗೆ ಜೈನ ಮಠದ ಆಶ್ರಯದಲ್ಲಿ ಸುವ್ಯವಸ್ಥಿತಗೊಂಡಿರುವ ಶ್ರೀ ಕುಂದಕುಂದ ವಿದ್ಯಾಪೀಠವು ಜೈನ ಬಾಂಧವರ ಪ್ರೋತ್ಸಾಹಕ್ಕೆ ಪಾತ್ರವಾಗಿ ಜೈನ ವಿದ್ಯಾರ್ಥಿಗಳಿಗೆ ಲೌಕಿಕ ಹಾಗೂ ಧಾರ್ಮಿಕ ಶಿಕ್ಷಣ ನೀಡುವಲ್ಲಿ ಯಶಸ್ಸುಗಳಿಸಿ ಪ್ರಗತಿ ಪಥದಲ್ಲಿ ಮುನ್ನಡೆದಿದೆ. ಶ್ರೀ ಕುಂದಕುಂದ ವಿದ್ಯಾಪೀಠಕ್ಕೆ 5 ರಿಂದ 10ನೇ ತರಗತಿಯವರೆಗಿನ, 2024-25ನೇ ಸಾಲಿನ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ವಿದ್ಯಾರ್ಥಿಗಳ ‌ನೋಂದಣಿ ಆರಂಭವಾಗಿದೆ. ಜೈನ ಪೋಷಕರು/ತಂದೆ ತಾಯಿಯರು ಬಾಲಕರನ್ನು ಈ ವಿದ್ಯಾಸ್ಫೂರ್ತಿ ಸೆಲೆಯ ವಿದ್ಯಾಪೀಠದ ಪ್ರವೇಶಕ್ಕೆ ತಾವು ಹಿಂದಿನ ತರಗತಿಯ ಉತ್ತೀರ್ಣರಾದ ಅಂಕಪಟ್ಟಿ ಹಾಗೂ ಅಲ್ಲಿಯ ಜೈನ ಸಮಾಜದ ಮುಖಂಡರಿಂದ ಪಡೆದ ಪರಿಚಯ ಪತ್ರ, ಮೂಲ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ವಿ.ಸೂ: ಶ್ರೀ ಹೊಂಬುಜ ಪದ್ಮಾವತಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಪರಂಜ್ಯೋತಿ ಆಂಗ್ಲಮಾಧ್ಯಮ ಪ್ರಾಥಮಿಕ ಪಾಠಶಾಲೆಗೆ 8ನೇ ತರಗತಿಯಿಂದ ಅವಕಾಶವಿರುತ್ತದೆ ವ್ಯವಸ್ಥಾಪಕರು, ಶ್ರೀಕುಂದ ಕುಂದ ವಿದ್ಯಾಪೀಠ : 8123924492, 8762180697, 9481249127, 9481944083

ಕಾರ್ಕಳ: ಶ್ರೀ ಬಾಹುಬಲಿ ಶ್ರಾವಿಕಾಶ್ರಮದ ಪಿ.ಯು.ಸಿ ವಿದ್ಯಾರ್ಥಿಗಳ ಸಾಧನೆ

Article Image

ಕಾರ್ಕಳ: ಶ್ರೀ ಬಾಹುಬಲಿ ಶ್ರಾವಿಕಾಶ್ರಮದ ಪಿ.ಯು.ಸಿ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ ದಾನಶಾಲೆಯಲ್ಲಿರುವ ಶ್ರೀ ಬಾಹುಬಲಿ ಶ್ರಾವಿಕಾಶ್ರಮದಲ್ಲಿ ವಾಸ್ತವ್ಯವಿದ್ದು, ಹಿರಿಯಂಗಡಿ ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪದವಿಪೂರ್ವ ಕಾಲೇಜಿನ ಪಿ.ಯು.ಸಿ.ಯಲ್ಲಿ ಸಿಂಚನಾ 97% (582-ವಾಣಿಜ್ಯ), ಮಾನ್ಯ 96.8% (581-ವಾಣಿಜ್ಯ), ನಮಿತಾ 96.7% (580-ವಾಣಿಜ್ಯ), ಪ್ರಾಪ್ತಿ 96.5% (579-ವಾಣಿಜ್ಯ), ಅನ್ವೇಶ 96% (578-ವಾಣಿಜ್ಯ), ನಮ್ರತಾ 95.3% (572-ವಾಣಿಜ್ಯ), ಕುಶಿ 91.7% (550-ವಾಣಿಜ್ಯ) ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಜಿತೋ ಸಂಸ್ಥೆ ವತಿಯಿಂದ ಜೈನ ಸಮಾಜದ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ ಉಚಿತ ತರಬೇತಿ

Article Image

ಜಿತೋ ಸಂಸ್ಥೆ ವತಿಯಿಂದ ಜೈನ ಸಮಾಜದ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ ಉಚಿತ ತರಬೇತಿ

ಬೆಳಗಾವಿ, ಏ.6: ಜೈನ ಇಂಟರ್‌ನ್ಯಾಷನಲ್ ಟ್ರೆಡ್ ಆರ್ಗನೈಝೇಶನ್ ಜಿತೋ ಸಂಸ್ಥೆಯ ವತಿಯಿಂದ ಕಳೆದ 11 ವರ್ಷಗಳಿಂದ ಜೈನ ಸಮಾಜದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಯುಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ದತೆಗಾಗಿ ಉಚಿತ ತರಬೇತಿಯನ್ನು ನೀಡುತ್ತ ಬಂದಿದೆ. ಈ ವರ್ಷವೂ ಸಹ ಜಿತೋ ಸಂಸ್ಥೆಯ ವತಿಯಿಂದ ಯುಪಿಎಸ್‌ಸಿ ಪರೀಕ್ಷೆಯ ಸಿದ್ದತೆಗಾಗಿ ಉಚಿತ ತರಬೇತಿಯನ್ನು ನೀಡಲಿದೆ. ವಿದ್ಯಾರ್ಥಿಗಳು ಹೆಸರು ನೋಂದಾಯಿಸುವುದು ಕಡ್ಡಾಯವಾಗಿರುತ್ತದೆ. ಹೆಸರು ನೋಂದಣಿಗೆ ಯಾವುದೇ ಶುಲ್ಕ ಇರುವುದಿಲ್ಲ. ಹೆಸರು ನೋಂದಣಿ ಮಾಡುವ ಕೊನೆಯ ದಿನಾಂಕ 24-04-2024 ಆಗಿದ್ದು, ಈ ಅವಧಿಯೊಳಗೆ ಹೆಸರು ನೊಂದಾಯಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕುಂತಿನಾಥ ಕಲಮನಿ ಮೊ: 94804-48108 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭ. ಶ್ರೀ ಮಹಾವೀರ ತೀರ್ಥಂಕರರ 2250ನೇ ಜನ್ಮಕಲ್ಯಾಣದ ಪ್ರಯುಕ್ತ ಪ್ರಬಂಧ ಸ್ಪರ್ಧೆ

Article Image

ಭ. ಶ್ರೀ ಮಹಾವೀರ ತೀರ್ಥಂಕರರ 2250ನೇ ಜನ್ಮಕಲ್ಯಾಣದ ಪ್ರಯುಕ್ತ ಪ್ರಬಂಧ ಸ್ಪರ್ಧೆ

ಭ. ಶ್ರೀ ಮಹಾವೀರ ತೀರ್ಥಂಕರರ 2250ನೇ ಜನ್ಮಕಲ್ಯಾಣದ ಪ್ರಯುಕ್ತ 'ಪ್ರಾತಃಸ್ಮರಣೀಯ ಪ.ಪೂ. ಆಚಾರ್ಯ ಶ್ರೀ 108 ವಿದ್ಯಾಸಾಗರ ಮಹಾರಾಜರು, ಭ. ಮಹಾವೀರ ಸ್ವಾಮಿಯವರ ಅಹಿಂಸಾ ಪರಮೋ ಧರ್ಮ ಸಂದೇಶವನ್ನು ಜಗತ್ತಿಗೆ ಪಂಚಮಕಾಲದಲ್ಲಿ ಪರಿಚಯಿಸಿದ ಮಹಾಸಂತರು' ಈ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದ್ದು, ಸ್ವಂತ ಕೈ ಬರಹದಲ್ಲಿ ಬರೆದ ಪ್ರಬಂಧ 2 ಪುಟ ಮೀರದಂತಿರಬೇಕು. ಪ್ರಬಂಧವನ್ನು ದಿನಾಂಕ 10-04-2024ರ ಒಳಗಾಗಿ ಕಳುಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ವೈ.ಡಿ. ರತ್ನಾಕರ್ : ದೂ. 9886589725, 7892159744 ಇವರನ್ನು ಸಂಪರ್ಕಿಸಬಹುದು.

ಉಜಿರೆ : “ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

Article Image

ಉಜಿರೆ : “ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುವ “ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಛಿಸುವ ಬಡ, ಹಿಂದುಳಿದ ಹಾಗೂ ಕೃಷಿಕ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳು ಇಲ್ಲಿ ನಮ್ಮ ಆಯ್ಕೆ ಪರೀಕ್ಷೆಗೆ ಹಾಜರಾಗಿ ಮೂರು ದಿನ ರತ್ನಮಾನಸದಲ್ಲಿ ಉಳಿದು ಇಲ್ಲಿನ ಪರಿಸರ ಹಾಗೂ ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ಕ್ರಮವನ್ನು ಅಳವಡಿಸಿಕೊಳ್ಳುವ ಅಂಗವಾಗಿ ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವ-ಉದ್ಯೋಗ ತರಬೇತಿಯನ್ನು ನೀಡಲಾಗುವುದು. ಇಲ್ಲಿನ ಜೀವನ ಶಿಕ್ಷಣ ಕ್ರಮದ ಮಾಹಿತಿಯನ್ನು ಪಡೆದ ಬಳಿಕ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಯ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಛಿಸುವ ಅರ್ಹ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ದಿನಾಂಕ 05-04-2024ರಿಂದ ಅರ್ಜಿಗಳನ್ನು ನೀಡಲಾಗುವುದು ಮತ್ತು 25-04-2024ರಂದು ಅರ್ಜಿ ನೀಡಲು ಕೊನೆಯ ದಿನಾಂಕವಾಗಿರುತ್ತದೆ. ವಿ.ಸೂ. : ಆಂಗ್ಲಮಾಧ್ಯಮ, 9ನೇ ಮತ್ತು 10ನೇ ತರಗತಿ ದಾಖಲಾತಿಗೆ ಅವಕಾಶವಿರುವುದಿಲ್ಲ. ಹಾಗೂ ಹುಡುಗಿಯರಿಗೆ ದಾಖಲಾತಿ ಇರುವುದಿಲ್ಲ. ಅರ್ಜಿಯನ್ನು ರತ್ನಮಾನಸ ವಸತಿ ನಿಲಯದಲ್ಲಿಯೇ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : 08023901791, 9480351201, 9449244425, 9901546846

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ.): 2023-24ನೇ ಸಾಲಿನ ಸ್ವಯಂ ಉದ್ಯೋಗ ಯೋಜನೆ

Article Image

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ.): 2023-24ನೇ ಸಾಲಿನ ಸ್ವಯಂ ಉದ್ಯೋಗ ಯೋಜನೆ

2023-24ನೇ ಸಾಲಿನ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ್ರ, ಕೃಷಿ ಆಧಾರಿತ ಚಟುವಟಿಕೆಗಳು ಮುಂತಾದವುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಒದಗಿಸಲಾಗುವುದು. ಘಟಕ ವೆಚ್ಚದ ಶೇ. 33% ಅಥವಾ ಗರಿಷ್ಠ ಮಿತಿ ರೂ. 1 ಲಕ್ಷದ ಸಹಾಯಧನ ನೀಡಲಾಗುವುದು. ಅರ್ಹತೆಗಳು : 1. ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. 2. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 3. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷ ಒಳಗಿರಬೇಕು. 4 ಎಲ್ಲಾ ಮೂಲಗಳಿಂದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ ರೂ. 81,000/- ಹಾಗೂ ನಗರ ಪ್ರದೇಶದಲ್ಲಿ ರೂ. 1,03,000/- ಮಿತಿಯಲ್ಲಿರಬೇಕು 5. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ/ಪಿಎಸ್‌ಯು ಉದ್ಯೋಗಿಯಾಗಿರಬಾರದು. 6. ಅರ್ಜಿದಾರರು ಕೆ.ಎಂ.ಟಿ.ಸಿ.ಯಲ್ಲಿ ಸುಸ್ತಿದಾರರಾಗಿರಬಾರದು. ದಾಖಲಾತಿಗಳು : 1. ಜಾತಿ ಮತ್ತು ಆದಾಯ ಪ್ರಮಾಣಪತ್ರ 2. ಆಧಾರ್ ಕಾರ್ಡ್ 3. ಬ್ಯಾಂಕ್ ಪಾಸ್ ಬುಕ್ 4. ಯೋಜನಾ ವರದಿ 5. ಫೋಟೊ-2 6. ಸ್ವಯಂ ಘೋಷಣಾ ಪತ್ರ. ಅರ್ಜಿ ಸಲ್ಲಿಸಲು ವೆಬ್‌ಸೈಟ್ ಲಿಂಕ್: https://kmdconline.karnataka.gov.in ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆ. 29 ಆಗಿರುತ್ತದೆ.

ಅರ್ಜಿ ಆಹ್ವಾನ

Article Image

ಅರ್ಜಿ ಆಹ್ವಾನ

ರಾಜಸ್ಥಾನ ಸಾಂಗನೇರದಲ್ಲಿರುವ ಶ್ರಮಣ ಸಂಸ್ಕೃತಿ ಸಂಸ್ಥಾನದಲ್ಲಿ ಸಂತ ಶಿರೋಮಣಿ 108 ಆಚಾರ್ಯ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರ ಆಶೀರ್ವಾದ ಮತ್ತು ಮುನಿಪುಂಗವ 108 ಶ್ರೀ ಸುಧಾಸಾಗರ ಮಹಾರಾಜರ ಪ್ರೇರಣೆಯಿಂದ ನಡೆಯುತ್ತಿರುವ ದ್ವಾದಶ ವರ್ಷಿಯ ಕೋರ್ಸ್ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದರಲ್ಲಿ ಉತ್ತಮ ಪಂಡಿತರಿಂದ ಗ್ರಂಥ ಸ್ವಾಧ್ಯಾಯ ಮತ್ತು ಪ್ರತಿ ವರ್ಷ ಪರೀಕ್ಷೆ ಬರೆಯ ಬೇಕಾಗುತ್ತದೆ. ಇಲ್ಲಿಯವರೆಗೂ ಹಿಂದಿಯಲ್ಲಿ ನಡೆಯುತ್ತಿದ್ದು, ಪ್ರಥಮ ಬಾರಿಗೆ ಮೈಸೂರಿನಲ್ಲಿ ಪಠ್ಯಕ್ರಮವನ್ನು ಕನ್ನಡಕ್ಕೆ ಅನುವಾದಿಸಿ, ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅನುಮತಿ ನೀಡಲಾಗಿದೆ. ಕರ್ನಾಟಕ ರಾಜ್ಯಾದ್ಯಂತ ಎಲ್ಲರಿಗೂ ಈ ಪರೀಕ್ಷೆ ಬರೆಯುವ ಅವಕಾಶವಿದ್ದು, ಪರೀಕ್ಷೆಯನ್ನು ಬರೆಯಲು ಯಾವುದೇ ವ್ಯಾಸಂಗದ ಅರ್ಹತೆ ಮತ್ತು ವಯಸ್ಸಿನ ಮಿತಿ ಇರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-01-2024 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸಪ್ನ ಲಕ್ಷ್ಮೀಶ್ ಮೈಸೂರು: 9448254546 / 8660747004

First Previous

Showing 2 of 2 pages

Next Last