Article Image

ದಶಲಕ್ಷಣ ಪರ್ವದ ಅಂಗವಾಗಿ ಅಷ್ಟವಿಧಾರ್ಚನೆ ಪೂಜೆ

Article Image

ದಶಲಕ್ಷಣ ಪರ್ವದ ಅಂಗವಾಗಿ ಅಷ್ಟವಿಧಾರ್ಚನೆ ಪೂಜೆ

ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಡಿ ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ದಿನಾಂಕ 8/ 9/ 2024 ರಿಂದ 17/9/2024 ರವರೆಗೆ ದಶಲಕ್ಷಣ ಪರ್ವದ ಅಂಗವಾಗಿ ಅಷ್ಟವಿಧಾರ್ಚನೆ ಪೂಜೆ ಹಾಗೂ ದಶಲಕ್ಷಣ ಪರ್ವಗಳಿಗೆ ಸಂಬಂಧಿಸಿದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಹಾಗೆಯೇ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮತ್ತು ಸ್ವಾಧ್ಯಾಯವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಶ್ರಾವಕ ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು.

ಹೊಸ್ಮಾರು: ಸಾಮೂಹಿಕ ಉಚಿತ ವ್ರತ ಸ್ವೀಕಾರ (ವ್ರತೋಪದೇಶ) ಕಾರ್ಯಕ್ರಮ

Article Image

ಹೊಸ್ಮಾರು: ಸಾಮೂಹಿಕ ಉಚಿತ ವ್ರತ ಸ್ವೀಕಾರ (ವ್ರತೋಪದೇಶ) ಕಾರ್ಯಕ್ರಮ

ಹೊಸ್ಮಾರು, ಶ್ರೀ ಸಿದ್ದಿಕ್ಷೇತ್ರ ಸಿದ್ಧರವನ ಭ| 1008 ಶ್ರೀ ಮಹಾವೀರ ಸ್ವಾಮಿ ಬಸದಿಯಲ್ಲಿ ಪ.ಪೂ. ಗಣಿನೀ ಆರ್ಯಿಕಾ 105 ಮುಕ್ತಿಮತಿ ಮಾತಾಜೀಯವರ ಚಾತುರ್ಮಾಸ್ಯದ ಪ್ರಯುಕ್ತ ದಿನಾಂಕ 15-09-2024ನೇ ಆದಿತ್ಯವಾರ ಗಂಟೆ 8.00ರಿಂದ ಸಾಮೂಹಿಕ ಉಚಿತ “ವ್ರತ ಸ್ವೀಕಾರ” (ವ್ರತೋಪದೇಶ) ಕಾರ್ಯಕ್ರಮವು ಕಾರ್ಕಳ ಶ್ರೀ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ, ಮಹಾಸ್ವಾಮಿಗಳು ಮತ್ತು ಎನ್.ಆರ್.ಪುರ ಸಿಂಹನಗದ್ದೆ ಬಸ್ತಿಮಠದ, ಪರಮಪೂಜ್ಯ ಸ್ವಸ್ತಿಶ್ರೀ ಮದಭಿನವ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ ಜರುಗಲಿದೆ. ವಿ.ಸೂ: 8 ವರ್ಷ ಮೇಲ್ಪಟ್ಟ ಸದ್ಧರ್ಮ ಬಂಧುಗಳ ಮಕ್ಕಳ ಹೆಸರನ್ನು ನೋಂದಾಯಿಸಿ ಸಹಕರಿಸ ಬೇಕಾಗಿ ವಿನಂತಿ. ವಿವಾಹ ಆಗದೇ ಇರುವ ಯುವಕ ಯುವತಿಯರಿಗೆ ಸಿಂಹನಗದ್ದೆ ಬಸ್ತಿಮಠ, ಎನ್.ಆರ್.ಪುರ ಪೂಜ್ಯ ಸ್ವಾಮೀಜಿಯವರಿಂದ ವಿಶೇಷ ವ್ರತೋಪದೇಶ ಕಾರ್ಯಕ್ರಮ ಜರುಗಲಿದೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸದ್ಭರ್ಮ ಬಂಧುಗಳ ಮಕ್ಕಳು ಮತ್ತು ಅವಿವಾಹಿತ ಯುವಕ ಯುವತಿಯರು ಆಗಮಿಸಿ ಸಹಕರಿಸಬೇಕಾಗಿ ವಿನಂತಿ. ತಮ್ಮ ಹೆಸರು ನೋಂದಾಯಿಸಲು ಕೊನೆಯ ದಿನಾಂಕ 12.09.20124 ನೋಂದಾವಣೆಗಾಗಿ ಸಂಪರ್ಕಿಸಿ: 7483068903, 9902066870.

ನಾರಾವಿ: 13 ನೇ ವರ್ಷದ ಅನಂತನೋಂಪಿ ಆರಾಧನಾ ಪೂಜಾ ವಿಧಾನ

Article Image

ನಾರಾವಿ: 13 ನೇ ವರ್ಷದ ಅನಂತನೋಂಪಿ ಆರಾಧನಾ ಪೂಜಾ ವಿಧಾನ

ನಾರಾವಿ ಮಾಗಣೆ ಭ| 1008 ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ ದಿನಾಂಕ 16.09.2024ನೇ ಸೋಮವಾರದಿಂದ 18.09.2024ನೇ ಬುಧವಾರ ಪರ್ಯಂತ 13 ನೇ ವರ್ಷದ "ಅನಂತನೋಂಪಿ ಆರಾಧನಾ ಪೂಜಾ ವಿಧಾನ"ವು ಜರುಗಲಿರುವುದು. ಆ ಪ್ರಯುಕ್ತ ದಿನಾಂಕ 16.09.24ನೇ ಸೋಮವಾರ ಅನಂತ ತ್ರಯೋದಶಿಯಂದು ಬೆಳಿಗ್ಗೆ 8 ಗಂಟೆಗೆ ಆರಾಧನಾ ಪೂಜಾ ವಿಧಾನ ಆರಂಭ. ದಿನಾಂಕ 17.09.24ನೇ ಮಂಗಳವಾರ ಅನಂತ ಚತುರ್ದಶಿಯಂದು ಬೆಳಿಗ್ಗೆ 8 ಗಂಟೆಗೆ ಆರಾಧನಾ ಪೂಜಾ ವಿಧಾನವು ಸೌಮ್ಯ ಸರ್ವೆಶ್ ಜೈನ್ ಮತ್ತು ಸರ್ವೆಶ್ ಜೈನ್ ಹಾಗೂ ಬಳಗ ಮೂಡಬಿದ್ರೆ ಇವರ "ಸಂಗೀತ ಪೂಜಾಷ್ಟಕ"ದೊಂದಿಗೆ ಆರಂಭ. ದಿನಾಂಕ 18.09.24 ನೇ ಬುಧವಾರ ಅನಂತ ಹುಣ್ಣಿಮೆ ಯಂದು 8 ಗಂಟೆಗೆ ಆರಾಧನಾ ಪೂಜಾವಿಧಾನ ಆರಂಭ. ಈ ದಿನ ಮಧ್ಯಾಹ್ನ 12 ಗಂಟೆಗೆ ಬೆಳಿಗ್ಗೆ ಕಾರ್ಕಳ ಶ್ರೀ ಜೈನ ಮಠದ, ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಆಶೀರ್ವಚನ ಮಾಡಲಿದ್ದಾರೆ.

ಕುತ್ಲೂರು, ಪರುಷಗುಡ್ಡೆ: ಶ್ರಾವಣ ಮಾಸದ ಸಂಪತ್ತು ಶುಕ್ರವಾರದ ವಿಶೇಷ ಪೂಜೆ

Article Image

ಕುತ್ಲೂರು, ಪರುಷಗುಡ್ಡೆ: ಶ್ರಾವಣ ಮಾಸದ ಸಂಪತ್ತು ಶುಕ್ರವಾರದ ವಿಶೇಷ ಪೂಜೆ

ಅತಿಶಯ ಕ್ಷೇತ್ರ ಕುತ್ಲೂರು ಪರುಷಗುಡ್ಡೆ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯ ಆಡಳಿತ ಟ್ರಸ್ಟ್, ಭಾರತೀಯ ಚೈನ್ ಮಿಲನ್ ಪರುಷಗುಡ್ಡೆ ಶಾಖೆ, ಶ್ರೀ ಶಾಂತಿ ಸೌಹಾರ್ದ ಸಂಘ, ಪರುಷಗುಡ್ಡೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರಾವಣ ಮಾಸದ ಸಂಪತ್ತು ಶುಕ್ರವಾರ ನಾಳೆ (ಸೆ. 13)ವಿಶೇಷ ಪೂಜೆಯೊಂದಿಗೆ ಬೆಳಗ್ಗೆ 10.30ರಿಂದ ಭರತೇಶ ವೈಭವ ಎಂಬ ಜೈನ ಪುಣ್ಯ ಕಥಾ ಭಾಗ ಯಕ್ಷಗಾನ - ತಾಳಮದ್ದಳೆ ಜರಗಲಿದೆ.

ಇಂದಿನಿಂದ ದಶಲಕ್ಷಣ ಮಹಾ-ಪರ್ವ ಆಚರಣೆ

Article Image

ಇಂದಿನಿಂದ ದಶಲಕ್ಷಣ ಮಹಾ-ಪರ್ವ ಆಚರಣೆ

ವೇಣೂರು: ಇಲ್ಲಿಯ ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿ (ರಿ.) ವತಿಯಿಂದ ದಶಲಕ್ಷಣ ಪರ್ವ ಆಚರಣೆಯು ಇತಿಹಾಸ ಪ್ರಸಿದ್ಧ ಭಗವಾನ್ ಶ್ರೀ ಬಾಹುಬಲಿ ಕ್ಷೇತ್ರದಲ್ಲಿ ಮೂಡುಬಿದಿರೆ ಶ್ರೀ ದಿಗಂಬರ ಜೈನ ಮಠದ ಪರಮಪೂಜ್ಯ 'ಭಾರತಭೂಷಣ' ಜಗದ್ಗುರು ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ, ದಿವ್ಯ ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ಸಮಿತಿಯ ಅಧ್ಯಕ್ಷರಾದ 'ಪದ್ಮವಿಭೂಷಣ' ರಾಜರ್ಷಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಪ್ರೇರಣೆ ಹಾಗೂ ಸಮಿತಿಯ ಉಪಾಧ್ಯಕ್ಷರಾದ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಅರಮನೆ ಇವರ ನೇತೃತ್ವದಲ್ಲಿ ತಾ. 08-09-2024ನೇ ಆದಿತ್ಯವಾರದಿಂದ ತಾ. 17-09-2024ನೇ ಮಂಗಳವಾರದವರೆಗೆ ಪ್ರತಿ ದಿನ ಅಪರಾಹ್ನ ಗಂಟೆ 4-30ರಿಂದ 6-00ರ ವರೆಗೆ ಜರುಗಲಿದೆ. ವಿ. ಸೂ.: ಪ್ರತೀ ದಿನ ಅಪರಾಹ್ನ ಗಂಟೆ 4-00ರಿಂದ ವೇಣೂರು ಬಸದಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಯಾತ್ರಿ ನಿವಾಸದಲ್ಲಿ ಉಪನ್ಯಾಸ ನಡೆಯಲಿದೆ.

ಎಕ್ಸಲೆಂಟ್ ಸಂಸ್ಥೆಯಲ್ಲಿ ರಾಜ್ಯ ಮಟ್ಟದ ಜೈನ ಯುವ ಸಮ್ಮೇಳನ ಉದ್ಘಾಟನೆ

Article Image

ಎಕ್ಸಲೆಂಟ್ ಸಂಸ್ಥೆಯಲ್ಲಿ ರಾಜ್ಯ ಮಟ್ಟದ ಜೈನ ಯುವ ಸಮ್ಮೇಳನ ಉದ್ಘಾಟನೆ

ಕಲ್ಲಬೆಟ್ಟು: ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜೈನ ಸಮುದಾಯದ ಯುವ ಮನಸ್ಸುಗಳನ್ನು ಒಂದುಗೂಡಿಸಿ ವಿವಿಧ ಕ್ಷೇತ್ರಗಳ ಹಿರಿಯ ಸಾಧಕರಿಂದ ಜ್ಞಾನಾಮೃತವನ್ನು ಕೊಡಿಸುವ ಮೂಲಕ ಜೈನ ಸಮುದಾಯದ ಯುವಕ ಯುವತಿಯರನ್ನು ಸದೃಢಗೊಳಿಸುವ ಎರಡು ದಿನಗಳ ರಾಜ್ಯಮಟ್ಟದ ಜೈನ ಯುವ ಸಮ್ಮೇಳನ ಉದ್ಘಾಟನೆಗೊಂಡಿತು. ಮಾಜಿ ಸಚಿವರಾದ ಅಭಯ ಚಂದ್ರ ಜೈನ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಾ ಸಮುದಾಯದ ಯುವ ಜನರು ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣಗಳು ಮತ್ತು ಸಮಾಜದೊಂದಿಗೆ ಬೆರೆತು ಹೊಣೆಗಾರಿಕೆಯನ್ನು ನಿರ್ವಹಿಸುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ದೂರದೃಷ್ಟಿಯ ಚಿಂತನೆಯಿಂದ ಪ್ರಪಂಚಕ್ಕೆ ಮಾದರಿಯಾಗಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಂದ ಪ್ರೇರಣೆಯನ್ನು ಪಡೆದು ಸಾಧನಾ ಮಾರ್ಗದಲ್ಲಿ ದಾಪುಗಾಲಿಡಬೇಕು. ಸಮಾಜದಲ್ಲಿ ಸುಶಿಕ್ಷಿತನಿಗೆ ಗೌರವ ಸದಾ ದೊರಕುತ್ತದೆ. ನಾಗರಿಕ ಸೇವೆಯನ್ನು ವೃತ್ತಿಯಾಗಿಸಿಕೊಂಡು ಸಮಾಜ ಸೇವೆ ಮಾಡುತ್ತಾ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಮಾತನಾಡಿ ಸಂಸ್ಥೆಯಲ್ಲಿ ಧ್ಯಾನ ಮಂದಿರ, ಜೈನ ಪಾಠಗಳು, ಭಜನೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಿಂತನೆಗೆ ಅವಕಾಶ ಮಾಡಿಕೊಡಲಾಗಿದೆ. ಆತ್ಮಶುದ್ಧಿಯ ಮೂಲಕ ಅದರ ಸದುಪಯೋಗವನ್ನು ನಮ್ಮ ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಿರುವಾಗ ರಾಜ್ಯದ ಬೇರೆ ಬೇರೆ ಭಾಗಗಳ ಜೈನ ಸಮಾಜದ ಯುವಶಕ್ತಿಯನ್ನು ಒಂದುಗೂಡಿಸಿ ಜೈನ ಪರಂಪರೆಯ ಶ್ರೇಷ್ಠತೆಯ ಅರಿವನ್ನು ಮೂಡಿಸುವುದಷ್ಟೇ ಅಲ್ಲದೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರ ಪರಿಚಯದ ಮೂಲಕ ಯುವ ಜನರಲ್ಲಿ ಸ್ಫೂರ್ತಿಯನ್ನು ತುಂಬುವ ಸಲುವಾಗಿ ಈ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಸ್ತಾವನೆಗೈದರು. ಎರಡು ದಿನಗಳ ಈ ಸಮ್ಮೇಳನದಲ್ಲಿ ರಾಜ್ಯದ ನಾನಾ ಭಾಗಗಳ ಸುಮಾರು ಐದುನೂರು ಯುವಕ ಯುವತಿಯರು ಭಾಗವಹಿಸುತ್ತಿದ್ದಾರೆ. ನ್ಯಾಯಾಂಗ, ನಾಗರಿಕ ಸೇವೆ, ಮಾಧ್ಯಮ, ಶಿಕ್ಷಣ, ಕ್ರೀಡೆ ಮತ್ತು ಉದ್ಯಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜೈನ ಸಮಾಜದ ಬಂಧುಗಳು ಸಮ್ಮೇಳನದಲ್ಲಿ ಪಾಲ್ಗೊಂಡು ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ. ವೇದಿಕೆಯಲ್ಲಿ ಖ್ಯಾತ ನ್ಯಾಯವಾದಿಗಳಾದ ಎಂ. ಕೆ. ವಿಜಯಕುಮಾರ್, ಭಾರತೀಯ ಅರಣ್ಯ ಸೇವಾ ಅಧಿಕಾರಿಗಳಾದ ವಿಜಯಕುಮಾರ್ ಗೋಗಿ, ಕಾರ್ಯಕ್ರಮ ಸಂಚಾಲಕರಾದ ಅಜಿತ್ ಮುರುಗುಂಡೆ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ವಂದಿಸಿದರು. ಆಡಳಿತ ನಿರ್ದೇಶಕ ಡಾ. ಬಿ ಪಿ ಸಂಪತ್ ಕುಮಾರ್ ನಿರೂಪಿಸಿದರು.

ವರೂರ ನವಗ್ರಹತೀರ್ಥದ ದ್ವಿತೀಯ ಮಹಾಮಸ್ತಕಾಭಿಷೇಕದ ಸರ್ವಾಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಸನ್ಮಾನ

Article Image

ವರೂರ ನವಗ್ರಹತೀರ್ಥದ ದ್ವಿತೀಯ ಮಹಾಮಸ್ತಕಾಭಿಷೇಕದ ಸರ್ವಾಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಸನ್ಮಾನ

ಅಂತರಾಷ್ಟ್ರೀಯ ಮಟ್ಟದ ಮತ್ತು ಪ್ರಪಂಚಕ್ಕೆ ಮಾದರಿಯಾಗಲಿರುವ ನವ ತೀರ್ಥoಕರರ ದ್ವಿತೀಯ ಮಹಾಮಸ್ತಕಾಭಿಷೇಕ, ಹಾಗೂ ಪ್ರಪಂಚದ ಮೊದಲ 405 ಅಡಿ ಎತ್ತರದ " ಸುಮೇರು ಪರ್ವತದ" ಲೋಕಾರ್ಪಣೆ ಮತ್ತು ಜಿನಬಿಂಬಗಳ ಪ್ರತಿಷ್ಠಾ ಮಹಾಮಹೋತ್ಸವದ ಸರ್ವಾಧ್ಯಕ್ಷರಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಭೂಷಣ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆ ಯವರನ್ನು ಆಯ್ಕೆ ಮಾಡಿದ ಹಿನ್ನಲೆಯಲ್ಲಿ ಇಂದು ಡಾ. ಹೆಗ್ಗಡೆಯವರ ನಿವಾಸದಲ್ಲಿ ಪರಮಪೂಜ್ಯ ರಾಷ್ಟ್ರಸಂತ ಯುವಾಚಾರ್ಯ ಶ್ರೀ 108 ಗುಣದರಂದಿ ಮುನಿ ಮಹಾರಾಜರ ಹಾಗೂ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಸ್ವಾಮಿಗಳ ಶುಭ ಆಶೀರ್ವಾದದೊಂದಿಗೆ ಮತ್ತು ಸೂಚನೆಯ ಪ್ರಕಾರ ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರಿಸಿದ ಡಾ. ಹೆಗ್ಗಡೆಯವರು ನನ್ನ ಮೇಲಿನ ಪ್ರೀತಿ ವಿಶ್ವಾಸದಿಂದ ನನಗೆ ಅಧ್ಯಕ್ಷ ಸ್ಥಾನ ನೀಡಿ ಜವಾಬ್ದಾರಿ ವಹಿಸಿದ ಪೂಜ್ಯರ ಆಶಯದಂತೆ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಸಮಾರಂಭದಲ್ಲಿ ನವಗ್ರಹ ಕ್ಷೇತ್ರದ ವತಿಯಿಂದ ರಾಜೇಶ್ವರಿ ದಿದಿ, ಸಂದೀಪ ಖ್ಯಾತನವರ ಹಾಗೂ ಎ ಜಿ ಎಂ ಸಮೂಹ ಸಂಸ್ಥೆಯ ಸಿಬ್ಬಂದಿ ಮತ್ತು ಜೈನ ಬೋರ್ಡಿಂಗ ಅಧ್ಯಕ್ಷ ವಿದ್ಯಾಧರ ಪಾಟೀಲ, ಸದಸ್ಯರಾದ ದೇವಿಂದ್ರಪ್ಪ ಕಾಗೆನವರ, ವಿಮಲ್ ತಾಳಿಕೋಟಿ ಸಂತೋಷ್ ಮುರಗಿ ಪಾಟೀಲ್, ವಿಮಲನಾಥ ಸಂಗಮಿ, ಪ್ರಶಾಂತ ಬಿಶೆಟ್ಟಿ, ಭರತ ಬಿಳಗಿ ಮತ್ತು ಹುಬ್ಬಳ್ಳಿ ಜೈನ ಸಮಾಜದ ಅಧ್ಯಕ್ಷ ರಾಜೇಂದ್ರ ಬೀಳಗಿ, ಶಾಂತಿನಾಥ ಹೋತಪೇಟೆ ಛಬ್ಬಿ ಹುಬ್ಬಳ್ಳಿ ವರೂರ ಗ್ರಾಮಗಳ ಮತ್ತು ಹಲವಾರು ಜೈನ ಸಮಾಜದ ಮುಖಂಡರು ಭಾಗವಹಿಸಿದ್ದರು. ವರದಿ: ಎಸ್ ಆರ್ ಮಲ್ಲಸಮುದ್ರ

ಮೂಡಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನ್ಯೂಪಡಿವಾವಾಳ್ಸ್ ನ ಹರ್ಷವರ್ಧನ್ ಪಡಿವಾಳ್ ಅವರಿಗೆ ಸನ್ಮಾನ

Article Image

ಮೂಡಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನ್ಯೂಪಡಿವಾವಾಳ್ಸ್ ನ ಹರ್ಷವರ್ಧನ್ ಪಡಿವಾಳ್ ಅವರಿಗೆ ಸನ್ಮಾನ

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳ ಉದ್ಘಾಟನಾ ಸಮಾರಂಭದಲ್ಲಿ ನರಸಿಂಹರಾಜಪುರದ ಅತಿಶಯ ಕ್ಷೇತ್ರ ಬಸ್ತಿಮಠದ ಪರಮಪೂಜ್ಯ ಡಾ. ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಉದ್ಘಾಟಿಸಿ ಆಶೀರ್ವಚನವನ್ನಿತ್ತರು. ಬಳಿಕ ಇದೇ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಕಂಬಳ ಕ್ರೀಡೆ ಹಾಗೂ ಇನ್ನಿತರ ಬೇರೆ ಬೇರೆ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು, ‘ಬೆದ್ರ ಫ್ರೆಂಡ್ಸ್’ ಇದರ ರುವಾರಿಯಾಗಿ ಅನೇಕ ಸೇವಾ ಕಾರ್ಯಕ್ರಮಗಳನ್ನು ಕೈಗೊಂಡ ಸ್ನೇಹ ಜೀವಿ, ಸರಳಜೀವಿ ಹಾಗೂ ಮೂಡಬಿದ್ರೆಗೆ ಆಪ್ತರಾಗಿರುವ ಮೂಡುಬಿದಿರೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನ್ಯೂಪಡಿವಾವಾಳ್ಸ್ ನ ಹರ್ಷವರ್ಧನ್ ಪಡಿವಾಳ್ ಅವರನ್ನು ಉಪಸ್ಥಿತ ಗಣ್ಯರ ಸಮಕ್ಷಮದಲ್ಲಿ ಗೌರವಿಸಿ ಅಭಿನಂದಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಾರಾವಿ ಬಸದಿ ಆಡಳಿತ ಸಮಿತಿ ಅಧ್ಯಕ್ಷರಾಗಿರುವ ಬಿ. ನಿರಂಜನ ಅಜ್ರಿ, ರಾಮೇರಗುತ್ತು ಅವರನ್ನು ಅವರ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳ ಕೊಡುಗೆಗಾಗಿ ಗೌರವಿಸಲಾಯಿತು. ವೇದಿಕೆಯಲ್ಲಿ ಕುಲದೀಪ್ ಜೈನ್, ಚೌಟರ ಅರಮನೆ ಮೂಡಬಿದ್ರೆ ಕೃಷ್ಣರಾಜ್ ಹೆಗ್ಡೆ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು. ಕಾರ್ಯದರ್ಶಿ ರಶ್ಮಿತಾ ಜೈನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಆಡಳಿತ ನಿರ್ದೇಶಕರಾದ ಡಾ. ಬಿ.ಪಿ ಸಂಪತ್‌ಕುಮಾರ್ ನಿರೂಪಿಸಿದರು.

ಕವಿತಾ ರಚನಾ ಕಮ್ಮಟ

Article Image

ಕವಿತಾ ರಚನಾ ಕಮ್ಮಟ

ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದಿರೆ ಶಾಲೆಯ ಸಭಾ ಭವನದಲ್ಲಿ ದಿನಾಂಕ 26-07-2024ರಂದು ಒಂದು ದಿನದ ಕವಿತಾ ರಚನಾ ಕಮ್ಮಟ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಪವನ್ ಕುಮಾರ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ದಿವಾಕರ್ ಬಲ್ಲಾಲ್ ರವರು ಮಕ್ಕಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಸಭೆಯ ಅಧ್ಯಕ್ಷರಾದ ಮಂಜುಳಾ ಜೈನ್ ರವರು ತಮ್ಮ ಅಧ್ಯಕ್ಷತೆ ನುಡಿಯಲ್ಲಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದರು. ಸಾಹಿತ್ಯ ಸಂಘದ ಮಾರ್ಗದರ್ಶಿ ಶಿಕ್ಷಕರಾದ ಮಂಜುಳಾರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಣ್ಯರನ್ನು ಸಂಧ್ಯಾ ಸ್ವಾಗತಿಸಿದರು. ಸಾಕ್ಷಿ ಧನ್ಯವಾದಗೈದರು. ರೊಲಿಟಾ ಕಾರ್ಯಕ್ರಮವನ್ನು ನಿರೂಪಿಸಿದರು. ಕವಿತಾ ರಚನಾ ಕಮ್ಮಟ ಕಾರ್ಯಗಾರದ ಸಮಾರೋಪ ಸಮಾರಂಭವನ್ನು ಮಧ್ಯಾಹ 3.30 ಕ್ಕೆ ಶಾಲಾ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಯರಾದ ಶಶಿಕಾಂತ್ ವೈ ವಹಿಸಿದ್ದರು. ಅತಿಥಿಗಳಾಗಿ ಟಿ.ಎನ್. ಖಂಡಿಗೆ ಲೇಖಕರು ಮತ್ತು ವಿಮರ್ಶಕರು, ಪುರಸಭೆಯ ಸದಸ್ಯರಾದ ಶ್ವೇತಾ ಪವೀಣ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಪವನ್ ಕುಮಾರ್, ಶಾಲಾ ಹಿರಿಯ ಶಿಕ್ಷಕಿ ಅನುಪಮಾ ಕುಮಾರಿ ಹಾಗೂ ಸಾಹಿತ್ಯ ಸಂಘದ ಮೇಲ್ವಿಚಾರಕರಾದ ಮಂಜುಳರವರು ಉಪಸ್ಥಿತರಿದ್ದರು. ಟಿ.ಎನ್ ಖಂಡಿಗ ಇವರು ಕಾರ್ಯಕ್ರಮದ ಆಯೋಜನೆಯ ಕುರಿತು ಸಂತಸ ವ್ಯಕ್ತಪಡಿಸಿದರು. ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ಓದುವಿಕೆಯ ಮಹತ್ವದ ಬಗ್ಗೆ ಕವನ ಮೂಲಕ ತಿಳಿಸಿದರು. ಇನ್ನೋರ್ವ ಅತಿಥಿಯಾದ ಶ್ವೇತಾ ಪ್ರವೀಣ್ ರವರು ಇನ್ನಷ್ಟು ಕವಿತೆಯನ್ನು ಬರೆಯಲು ವಿದ್ಯಾರ್ಥಿಗಳು ಮತ್ತಷ್ಟು ಪ್ರಯತ್ನವನ್ನು ಮಾಡಬೇಕೆಂದು ಶುಭ ಹಾರೈಸಿದರು. ಪವನ್ ಕುಮಾರ್ ರವರು ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಕಾರ್ಯಗಾರದ ಅನುಭವವನ್ನು ವೇದಿಕೆಯಲ್ಲಿ ಹಂಚಿಕೊಂಡರು. ಹಾಗೂ ತಾವೇ ಸ್ವತ: ರಚಿಸಿದ ಕವನಗಳನ್ನು ವಾಚಿಸಿದರು. ಶಾಲಾ ಮುಖ್ಯೋಪಾಧ್ಯಾಯರು ಅಧ್ಯಕ್ಷೀಯ ನುಡಿಯಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಳ್ಳಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ಈ ಕಾರ್ಯಕ್ರಮವನ್ನು ಸಂಧ್ಯಾರವರು ನಿರೂಪಿಸಿದರು.

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳ ಉದ್ಘಾಟನಾ ಸಮಾರಂಭ

Article Image

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳ ಉದ್ಘಾಟನಾ ಸಮಾರಂಭ

ಅರಿಷಡ್ವರ್ಗಗಳನ್ನು ಗೆದ್ದು ಪಂಚೇಂದ್ರಿಯಗಳನ್ನು ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡವರು ಜಿನರು ಆಸ್ತೇಯ ಅಪರಿಗ್ರಹದಂತಹ ಶ್ರೇಷ್ಠ ಸಿದ್ಧಾಂತಗಳನ್ನು ಪಾಲಿಸುತ್ತಾ ಬಂದಿರುವ ಜೈನ ಧರ್ಮದ ಕುರಿತು ಶಿಕ್ಷಣವನ್ನು ನೀಡುವುದು ಅತ್ಯುತ್ತಮ ಕಾರ್ಯವಾಗಿದೆ ಎಂದು ನರಸಿಂಹರಾಜಪುರದ ಅತಿಶಯ ಕ್ಷೇತ್ರ ಬಸ್ತಿಮಠದ ಪರಮಪೂಜ್ಯ ಡಾ. ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಹೇಳಿದರು. ಅವರು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನವನ್ನಿತ್ತರು. ಬಳಿಕ ಮಾತಾಡಿದ ಅವರು ಹೆಣ್ಣು ಮಗುವನ್ನು ನಿರ್ಲಕ್ಷಿಸುವ ಧೋರಣೆಯು ನಾಗರಿಕ ಸಮಾಜದಲ್ಲಿ ಹುಟ್ಟಿಕೊಂಡಿರುವುದು ಅತ್ಯಂತ ಖೇದಕರ ಹೆಣ್ಣಿನ ಮನೋವ್ಯಕ್ತಿತ್ವವನ್ನು ಗೌರವಿಸುವ ಮಾನವೀಯ ಧೋರಣೆಯನ್ನು ಎಲ್ಲರೂ ಬೆಳೆಸಿಕೊಳ್ಳಬೇಕಾಗಿದೆ. ಬದುಕಿನ ಎಲ್ಲಾ ರಂಗಗಳಲ್ಲೂ ತಾರತಮ್ಯ ಅವಕಾಶವಿಲ್ಲದಂತೆ ಸಮಾಜ ನಿರ್ಮಾಣ ಮಾಡಬೇಕಾಗಿರುವುದು ಇಂದಿನ ಅಗತ್ಯ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ದೀರ್ಘವಾದ ಬದುಕಿನಲ್ಲಿ ಬರುವ ಸಂಘರ್ಷಗಳಿಗೆ ಉತ್ತರವಾಗಬಲ್ಲ ಧರ್ಮಶಿಕ್ಷಣ ನಮ್ಮನ್ನು ಸತ್‌ಪಥದಲ್ಲಿ ನಡೆಯುವಂತೆ ಮಾಡುತ್ತದೆ. ಆ ನಿಟ್ಟಿನಲ್ಲಿ ನಮ್ಮ ಸಂಸ್ಥೆ ವಿದ್ಯಾರ್ಥಿಗಳಿಗೆ ಧರ್ಮಸಮನ್ವಯತೆಗೆ ಹೆಚ್ಚಿನ ಮಹತ್ವ ನೀಡುತ್ತದೆ ಎಂದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನ್ಯೂಪಡಿವಾಳ್ಸ್ ನ ಹರ್ಷವರ್ಧನ್ ಪಡಿವಾಳ್ ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ನಾರಾವಿ ಬಸದಿ ಆಡಳಿತ ಸಮಿತಿ ಅಧ್ಯಕ್ಷರಾಗಿರುವ ಬಿ. ನಿರಂಜನ ಅಜ್ರಿ, ರಾಮೇರಗುತ್ತು ಅವರನ್ನು ಅವರ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳ ಕೊಡುಗೆಗಾಗಿ ಗೌರವಿಸಲಾಯಿತು. ವೇದಿಕೆಯಲ್ಲಿ ಕುಲದೀಪ್ ಜೈನ್, ಚೌಟರ ಅರಮನೆ ಮೂಡಬಿದ್ರೆ ಕೃಷ್ಣರಾಜ್ ಹೆಗ್ಡೆ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು. ಕಾರ್ಯದರ್ಶಿ ರಶ್ಮಿತಾ ಜೈನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಆಡಳಿತ ನಿರ್ದೇಶಕರಾದ ಡಾ. ಬಿ. ಪಿ. ಸಂಪತ್‌ಕುಮಾರ್ ನಿರೂಪಿಸಿದರು.

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟ

Article Image

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22 ರಂದು ಪ್ರಾರಂಭಗೊಂಡು ಸೆಪ್ಟೆಂಬರ್ 29 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ. ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳು ಈ ಕೆಳಗಿನಂತಿವೆ. • 18 ವರ್ಷದಿಂದ 45 ವರ್ಷದ ಒಳಗಿನವರಾಗಿರಬೇಕು. • ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವುಳ್ಳವರಾಗಿರಬೇಕು. • ಇದುವರೆಗಿನ ಯಾವುದೇ ಭಜನಾ ಕಮ್ಮಟದಲ್ಲಿ ಭಾಗವಹಿಸದೇ ಇರುವವರಾಗಿರಬೇಕು. • ಒಂದು ಭಜನಾ ಮಂಡಳಿಯಿಂದ 2 ಜನ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ. • ತಾವು ಕಲಿತು, ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು. ಆಸಕ್ತರು ಸೆಪ್ಟೆಂಬರ್ 10ರ ಮೊದಲು ಸಂಬಂಧಪಟ್ಟ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿಗಳಾದ ವೀರು ಶೆಟ್ಟಿಯವರು ತಿಳಿಸಿದ್ದಾರೆ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9632064164, 8130132835, 9663464648

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ

Article Image

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ

ಉಜಿರೆ: ಅಜ್ಞಾನದ ಅಂಧಕಾರವನ್ನು ತೊಲಗಿಸಿ ಸುಜ್ಞಾನದ ಬೆಳಕನ್ನು ನೀಡುವವನೆ ಗುರು. ಗುರುವಿನ ಮಹಿಮೆ ಅಪಾರವಾಗಿದ್ದು, ಗುರುವಿಗೆ ವಿಶೇಷ ಮಾನ್ಯತೆಗೆ, ಗೌರವ ಇದೆ. ಗುರು ಇಲ್ಲದಿದ್ದರೆ ಜೀವನವೇ ಶೂನ್ಯವಾಗುತ್ತದೆ ಎಂದು ಪೂಜ್ಯ ಆರ್ಯಿಕಾ ಮುಕ್ತಿಮತಿ ಮಾತಾಜಿ ಹೇಳಿದರು. ಬೆಳ್ತಂಗಡಿ ತಾಲೂಕಿನ ನಾರಾವಿ ಬಳಿ ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿ ಬಸದಿಯಲ್ಲಿ ತಮ್ಮ ಚಾತುರ್ಮಾಸ ವೃತಾಚರಣೆಯ ಅಂಗವಾಗಿ ಗುರುಪೂರ್ಣಿಮೆಯ ದಿನ ಭಾನುವಾರ ಮಂಗಳಕಲಶ ಸ್ಥಾಪನೆ ಸಮಾರಂಭದಲ್ಲಿ ಅವರು ಮಂಗಳ ಪ್ರವಚನ ನೀಡಿದರು. ಗುರುಗಳ ಮೂಲಕ ಆತ್ಮನ ನಿಜಸ್ವರೂಪವನ್ನು ತಿಳಿದು ವೃತ- ನಿಯಮಗಳ ಪಾಲನೆ, ಸ್ವಾಧ್ಯಾಯ, ಜಪ, ತಪ, ಧ್ಯಾನ, ಸತ್ಯ, ಅಹಿಂಸೆ, ಅಪರಿಗ್ರಹ ಮೊದಲಾದ ಪಂಚಾಣು ವೃತಗಳ ಪಾಲನೆಯೊಂದಿಗೆ, ರತ್ನತ್ರಯ ಧರ್ಮದ ಅನುಷ್ಠಾನದಿಂದ ಅಕ್ಷಯ ಸುಖವನ್ನೀಯುವ ಮೋಕ್ಷಪ್ರಾಪ್ತಿ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿ, ಕಾಲ್ನಡಿಗೆಯಲ್ಲೆ ಸಂಚರಿಸಿ ಧರ್ಮಪ್ರಭಾವನೆ ಮಾಡುವ ಮುನಿಗಳು, ಸಾಧು-ಸಂತರು, ಮಾತಾಜಿಯವರು ನಲಿದಾಡುವ ದೇವರು. ಅವರ ವಾಸ್ತವ್ಯ, ದರ್ಶನ ಮತ್ತು ಸೇವೆಯಿಂದ ಸಾನ್ನಿಧ್ಯ ವೃದ್ಧಿಯಾಗುತ್ತದೆ. ಬದುಕಿನಲ್ಲಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ. ಧರ್ಮದ ಮರ್ಮವನ್ನರಿತು ಬದುಕಿನಲ್ಲಿ ಅನುಷ್ಠಾನಗೊಳಿಸಬೇಕು. ಹಿಂದಿನ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು. ಮಕ್ಕಳಿಗೆ ಉತ್ತಮ ಧಾರ್ಮಿಕ ಸಂಸ್ಕಾರ ನೀಡಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಭಕ್ತಿಯೇ ಮುಕ್ತಿಗೆ ಸಾಧನ, ಸರ್ವಶ್ರೇಷ್ಠ ಎಂದು ಅವರು ತಿಳಿಸಿದರು. ಹಿರಿಯ ವಿದ್ವಾಂಸ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಮಾತನಾಡಿ, ಚಾತುರ್ಮಾಸವು ಜ್ಞಾನಸಂಪಾದಿಸುವ ಜ್ಞಾನಯಜ್ಞವಾಗಿದ್ದು, ಆತ್ಮಕಲ್ಯಾಣಕ್ಕೆ ಪ್ರೇರಕವಾಗಿದೆ. ಮಾತಾಜಿಯವರ ಶ್ರದ್ಧಾ-ಭಕ್ತಿಯ ಸೇವೆಯಿಂದ ಮಾನಸಿಕ ಶಾಂತಿ, ನೆಮ್ಮದಿ ದೊರಕಿ ಜೀವನ ಪಾವನವಾಗುತ್ತದೆ ಎಂದರು. ಅಂಡಾರು ಗುಣಪಾಲ ಹೆಗ್ಡೆ ಶುಭಾಶಂಸನೆ ಮಾಡಿದರು. ಅಧ್ಯಕ್ಷತೆ ವಹಿಸಿದ ಸುದರ್ಶನ ಜೈನ್, ಬಂಟ್ವಾಳ ಮಾತನಾಡಿ ಯುವಜನತೆ ಹೃದಯ ಶ್ರೀಮಂತಿಕೆಯೊಂದಿಗೆ ಧಾರ್ಮಿಕ ಸಭೆ-ಸಮಾರಂಭಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು. ಮೊದಲ ಮಂಗಳಕಲಶಗಳನ್ನು ಚಾತುರ್ಮಾಸ ಸಮಿತಿ ಅಧ್ಯಕ್ಷ ಪ್ರೇಮ್ ಕುಮಾರ್ ಹೊಸ್ಮಾರು ಸ್ಥಾಪನೆ ಮಾಡಿದರು. ನಿರೀಕ್ಷಾ ಹೊಸ್ಮಾರು ಅವರ ಸುಶ್ರಾವ್ಯ ಜಿನಭಕ್ತಿಗೀತೆಗಳ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು. ಪ್ರೇಮ್‌ಕುಮಾರ್ ಸ್ವಾಗತಿಸಿದರು. ಶಿಶುಪಾಲ ಜೈನ್ ನಾರಾವಿ ಧನ್ಯವಾದವಿತ್ತರು. ನಿರಂಜನ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ಚಾತುರ್ಮಾಸದ ಅವಧಿಯಲ್ಲಿ ವಿಶೇಷ ಪೂಜೆ, ಆರಾಧನೆ, ಸಾಮೂಹಿಕ ವೃತೋಪದೇಶ, ಮಾತಾಜಿಯವರಿಂದ ಮಂಗಳ ಪ್ರವಚನ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ 53ನೆ ವರ್ಷದ ಪುರಾಣ ಕಾವ್ಯ ವಾಚನ - ಪ್ರವಚನ ಉದ್ಘಾಟನೆ

Article Image

ಧರ್ಮಸ್ಥಳದಲ್ಲಿ 53ನೆ ವರ್ಷದ ಪುರಾಣ ಕಾವ್ಯ ವಾಚನ - ಪ್ರವಚನ ಉದ್ಘಾಟನೆ

ಉಜಿರೆ: ಪುರಾಣಕ್ಕೆ ಹಲವಾರು ಅರ್ಥಗಳಿವೆ. ಭಾರತ ಮತ್ತು ಚೀನಾ ದೇಶದಲ್ಲಿ ಅತೀ ಹೆಚ್ಚು ಪುರಾಣಗಳಿದ್ದು ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ಪುರಾಣ ವಾಚನ - ಪ್ರವಚನದಿಂದ ಪ್ರತಿ ಕಲೆಯೂ, ಕಲಾವಿದರೂ ಬೆಳೆಯಬೇಕು ಎಂದು ಹಿರಿಯ ವಿದ್ವಾಂಸ ಪ್ರೊ. ಎಮ್. ಪ್ರಭಾಕರ ಜೋಶಿ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಜು. 16 ರಿಂದ ಆಗೋಸ್ಟ್ 17 ರ ವರೆಗೆ ಪ್ರತಿ ದಿನ ಸಂಜೆ ಗಂಟೆ 6.30 ರಿಂದ 8.00 ರ ವರೆಗೆ ನಡೆಯಲಿರುವ 53ನೆ ವರ್ಷದ “ಜೈಮಿನಿ ಭಾರತ” ಮತ್ತು “ತುರಂಗ ಭಾರತ” ಪುರಾಣ ಕಾವ್ಯ ವಾಚನ - ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇವರ ಕಲ್ಪನೆಯನ್ನು ಜನಮನಕ್ಕೆ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ವಿಷ್ಣುಪುರಾಣ, ಭಾಗವತ, ರಾಮಾಯಣ, ಮಹಾಭಾರತ ಮೊದಲಾದ ಅನೇಕ ಪುರಾಣಗಳಿವೆ. ರಾಮಾಯಣದಲ್ಲಿಯೂ ಬೇರೆ ಬೇರೆ ಭಾಷೆಗಳಲ್ಲಿ ಹಲವು ರೀತಿಯ ರಾಮಾಯಣಗಳು ರಚನೆಯಾಗಿವೆ. ನಮ್ಮ ಸನಾತನ ಧಾರ್ಮಿಕ ಪರಂಪರೆಯನ್ನು ವಿಸ್ತರಿಸಿ ಸೃಜನಶೀಲತೆಯೊಂದಿಗೆ ಜನರಿಗೆ ತಲುಪಿಸುವ ಕಾಯಕವನ್ನು ಪುರಾಣಗಳು ಮಾಡುತ್ತವೆ. ಪುರಾಣಗಳಲ್ಲಿ ಜ್ಞಾನ, ವಿಜ್ಞಾನ, ಸಾಹಿತ್ಯ, ಕಲೆ, ಸಂಗೀತ, ಮಾನವೀಯ ಮೌಲ್ಯಗಳು – ಎಲ್ಲವೂ ಅಡಕವಾಗಿವೆ ಎಂದು ಪ್ರೊ. ಎಮ್. ಪ್ರಭಾಕರ ಜೋಶಿ ಅಭಿಪ್ರಾಯಪಟ್ಟರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಪುರಾಣ ವಾಚನ - ಪ್ರವಚನದಿಂದ ಸಮಯದ ಸದುಪಯೋಗದೊಂದಿಗೆ ವಿಶಿಷ್ಟ ಮಾಹಿತಿ, ಮಾರ್ಗದರ್ಶನ ದೊರಕುತ್ತದೆ. ನಮ್ಮ ಜ್ಞಾನ ಕ್ಷಿತಿಜ ವಿಸ್ತರಣೆಯಾಗುತ್ತದೆ ಎಂದು ಹೇಳಿದರು. ಪ್ರಸ್ತುತ ಜನರಲ್ಲಿ ಮಾತನಾಡುವ ಚಟ ಹೆಚ್ಚಾಗಿದೆ. ಕೇಳುವ ವ್ಯವಧಾನ ಯಾರಲ್ಲೂ ಇರುವುದಿಲ್ಲ. ಎಲ್ಲರೂ ಉತ್ತಮ ಶ್ರೋತೃಗಳಾಗಿ ಜೀವನಶೈಲಿ ಸುಧಾರಣೆ ಮಾಡಿಕೊಳ್ಳಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು. ಹೇಮಾವತಿ ವಿ. ಹೆಗ್ಗಡೆಯವರು ಉಪಸ್ಥಿತರಿದ್ದರು. ಪ್ರಾಸ್ತಾವಿಕ ಮಾತುಗಳೊಂದಿಗೆ ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧರ್ಮಸ್ಥಳ ಕೊನೆಯಲ್ಲಿ ಧನ್ಯವಾದವಿತ್ತರು.

ಉಜಿರೆ: ಸ್ನೇಹಕೂಟ

Article Image

ಉಜಿರೆ: ಸ್ನೇಹಕೂಟ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ, ವಿದ್ಯಾರ್ಥಿ ಕ್ಷೇಮಪಾಲನ ಮುಖ್ಯ ಅಧಿಕಾರಿಯಾಗಿ ಸುಮಾರು ಐದು ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಬಿ. ಸೋಮಶೇಖರ ಶೆಟ್ಟಿಯವರು ಏರ್ಪಡಿಸಿದ ಸ್ನೇಹಕೂಟದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ| ಸತೀಶ್ಚಂದ್ರ ಎಸ್. ವಹಿಸಿದ್ದರು. ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಾದ ಬಿ. ಸೋಮಶೇಖರ ಶೆಟ್ಟಿಯವರು ದಣಿವರಿಯದ ದುಡಿಮೆಗಾರ, ನಿಷ್ಠೆ, ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕೆಲಸ ಮಾಡುವ ಪರಿಯಿಂದ ಆಡಳಿತ ಮಂಡಳಿಯ ಮೆಚ್ಚುಗೆಗೆ ಪಾತ್ರರಾದವರು. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ರಚಿಸಿದ ಪ್ರಗತಿ ಪರಿಶೀಲನ ತಂಡದ ಸಂಚಾಲಕರಾಗಿ ಶಾಲೆಗಳಿಗೆ ಭೇಟಿ ನೀಡಿ, ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದಿಂದ ಶಾಲಾ ಫಲಿತಾಂಶದಲ್ಲಿ ವಿಶೇಷ ಸಾಧನೆಗಳ ಮೂಲಕ ಎಸ್.ಡಿ.ಎಂ. ನ ಎಲ್ಲಾ ಪ್ರೌಢ ಶಾಲೆಗಳಲ್ಲಿಯೂ ಕಳೆದ ಶೈಕ್ಷಣಿಕ ವರ್ಷದಲ್ಲಿ ಶೇಕಡಾ ನೂರು ಫಲಿತಾಂಶ ದಾಖಲಿಸುವಲ್ಲಿ ಇವರ ಪ್ರಯತ್ನ ಗಮನಾರ್ಹವಾದುದು. ಶಿಕ್ಷಣ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿದ್ದು, ಪ್ರಾರಂಭದ ವರ್ಷದಲ್ಲಿ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಣೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದರು. ಸಂಸ್ಥೆಯ ಸಹೋದ್ಯೋಗಿಗಳ ಜೊತೆ ಆತ್ಮೀಯರಾಗಿದ್ದು ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ನಿಷ್ಠುರವಾದಿ. ಎಸ್.ಡಿ.ಎಂ. ಕಲಾ ಕೇಂದ್ರದಲ್ಲಿ ಕಲಾ ವೈಭವ ತಂಡ ಕಟ್ಟುವಲ್ಲಿ ವಿಶೇಷ ಶ್ರಮವಹಿಸಿದ್ದರು ಎಂದು ತಿಳಿಸಿದರು. ಕಾರ್ಯಕ್ರಮ ಸಂಘಟಕರೂ, ಉತ್ತಮ ತರಬೇತುದಾರರೂ, ವಾಗ್ಮಿಗಳೂ ಆಗಿರುವ ಬಿ. ಸೋಮಶೇಖರ ಶೆಟ್ಟಿ ಹಾಗೂ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ಜಯಭಾರತಿ ಇವರನ್ನು ಗೌರವಿಸಿ ನಿವೃತ್ತ ಜೀವಕ್ಕೆ ಶುಭ ಹಾರೈಸಿದರು. ಬಿ. ಸೋಮಶೇಖರ ಶೆಟ್ಟಿಯವರು ಮಾತನಾಡಿ, ಶ್ರೀ ಕ್ಷೇತ್ರ ದರ್ಮಸ್ಥಳದ ಪೂಜ್ಯ ಡಾ| ವೀರೇಂದ್ರ ಹೆಗ್ಗಡೆಯವರು ಶಿಕ್ಷಣದ ಜೊತೆಗೆ ಉದ್ಯೋಗ ನೀಡಿ ಬದುಕಿಗೆ ಆಶ್ರಯ ನೀಡಿದವರು ಸುಮಾರು ಐದು ದಶಕಗಳ ಕಾಲ ಸೇವೆ ಸಲ್ಲಿಸುವ ವಿಶೇಷ ಅವಕಾಶದ ಜೊತೆಗೆ, ಶ್ರೀ ಕ್ಷೇತ್ರದ ಅನೇಕ ಸಮಾರಂಭಗಳಲ್ಲಿ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಹೊಣೆಗಾರಿಕೆಯನ್ನು ಒದಗಿಸಿದ್ದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ, ಆಧುನಿಕತೆ, ಮೌಲ್ಯ ಶಿಕ್ಷಣ, ಭೌತಿಕ ಸೌಲಭ್ಯಗಳ ಮೂಲಕ, ಮಾದರಿ ಶಿಕ್ಷಣ ಸಂಸ್ಥೆಗಳನ್ನಾಗಿ ಮಾಡುವಲ್ಲಿ ನಿರಂತರ ಮಾರ್ಗದರ್ಶನ ಮಾಡಿದ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯವರಾದ ಡಿ. ಹರ್ಷೇಂದ್ರ ಕುಮಾರ್‌ರವರ ಆಶಯದಂತೆ ಕರ್ತವ್ಯ ನಿರ್ವಹಿಸಿದ ಬಗ್ಗೆ ತೃಪ್ತಿಯ ಮಾತುಗಳನ್ನಾಡಿದರು. ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಸುಪ್ರೀಯ ಹರ್ಷೇಂದ್ರ ಕುಮಾರ್‌ರವರ ಹಾಗೂ ಕೀರ್ತಿ ಶೇಷ ಡಾ| ಬಿ. ಯಶೋವರ್ಮರ ಮಾರ್ಗದರ್ಶನ, ಸಹಕಾರವನ್ನು ನೆನಪಿಸಿಕೊಂಡು ಕೃತಜ್ಞತೆ ಸಲ್ಲಿಸಿದರು. ಕಳೆದ ಎರಡು ವರ್ಷಗಳಿಂದ ಕಾರ್ಯದರ್ಶಿಯಾಗಿ, ನಿರಂತರ ಮಾರ್ಗದರ್ಶನ ಮಾಡಿದ ಡಾ| ಸತೀಶ್ಚಂದ್ರ ಎಸ್. ಇವರ ನೇತೃತ್ವದಲ್ಲಿ ಯಶಸ್ವೀ ಕರ್ತವ್ಯ ನಿರ್ವಹಿಸಿದ ಸಂತೋಷವನ್ನು ವ್ಯಕ್ತಪಡಿಸಿ ವಂದಿಸಿದರು. ವೃತ್ತಿ ಜೀವನದಲ್ಲಿ ಸಹಕರಿಸಿದ ಎಲ್ಲರನ್ನು ನೆನಪಿಸಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ CEO ಪೂರಣ್ ವರ್ಮ, ವಿವಿಧ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು, ಮುಖ್ಯ ಶಿಕ್ಷಕರೂ, ಶಾರೀರಿಕ ನಿರ್ದೇಶಕರು, ಬಂಧು ಬಳಗ, ಸ್ನೇಹಿತರು ಸ್ನೇಹಕೂಟದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಪತ್ನಿ ಜಯಭಾರತಿ, ಪುತ್ರ ಬಿ. ಮಿಥುನ್ ಕುಮಾರ್, ಅಪೂರ್ವ ಮಿಥುನ್ ಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಪುನೀತ್ ಸ್ವಾಗತಿಸಿ, ನಿರೂಪಿಸಿದ ಕಾರ್ಯಕ್ರಮದಲ್ಲಿ ನೂತನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯ ಕುಮಾರ್ ಎಂ. ಇವರು ವಂದಿಸಿದರು.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ನವೀಕೃತ ಸಭಾಂಗಣ ಲೋಕಾರ್ಪಣೆ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ನವೀಕೃತ ಸಭಾಂಗಣ ಲೋಕಾರ್ಪಣೆ

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಸೇರಿದಂತೆ ಮಹತ್ವದ ಬೃಹತ್ ಕಾರ್ಯಕ್ರಮಗಳಿಗೆ ವೇದಿಕೆ ಒದಗಿಸಿಕೊಡುವ ಬಹುಉದ್ದೇಶಿತ ಸುಸಜ್ಜಿತ ನವೀಕೃತ ಇಂದ್ರಪಸ್ಥ ಒಳಾಂಗಣ ಸಭಾಂಗಣವನ್ನು ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆ ಅವರು ಶುಕ್ರವಾರ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ಶೈಕ್ಷಣಿಕ ಕಲಿಕೆಯೊಂದಿಗೆ ಸಂಸ್ಕೃತಿನಿಷ್ಠ ವಿವೇಕವನ್ನು ಯುವಪೀಳಿಗೆಗೆ ದಾಟಿಸುವುದಕ್ಕೆ ಆದ್ಯತೆ ನೀಡುವ ಎಸ್.ಡಿ.ಎಂ ಕಾಲೇಜಿನ ಉದಾತ್ತ ಆಶಯಕ್ಕೆ ಅನುಗುಣವಾಗಿ ಇಂದ್ರಪ್ರಸ್ಥ ಸಭಾಂಗಣ ರೂಪುಗೊಂಡಿದೆ ಎಂದರು. ಶೈಕ್ಷಣಿಕ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಂಡು ಬಹುಮುಖೀ ವ್ಯಕ್ತಿತ್ವದೊಂದಿಗೆ ಬೆಳಗಬೇಕೆಂಬುದು ಸಂಸ್ಥೆಯ ಆಶಯವಾಗಿದ್ದು, ಅದಕ್ಕೆ ಪೂರಕವಾಗಿ ಸುಸಜ್ಜಿತ ಅತ್ಯಾಧುನಿಕ ಸೌಲಭ್ಯಗಳೊಂದಿಗಿನ ಇಂದ್ರಪ್ರಸ್ಥ ಸಭಾಂಗಣ ವೇದಿಕೆ ಒದಗಿಸಿಕೊಡುತ್ತದೆ ಎಂದು ಹೇಳಿದರು. ಕರಾವಳಿ ಭಾಗದಲ್ಲಿ ನಾಲ್ಕು ತಿಂಗಳ ಕಾಲವೂ ನಿರಂತರ ಮಳೆ ಇರುತ್ತದೆ. ಇದರ ಮಧ್ಯೆಯೂ ನಾಟಕ, ನೃತ್ಯ, ಮನರಂಜನೆ ಹಾಗೂ ಕ್ರೀಡಾ ಚಟುವಟಿಕೆಗಳು ಮಳೆಗಾಲದಲ್ಲಿಯೂ ನಿರಂತರವಾಗಿ ನಡೆಯಬೇಕು ಎಂಬ ಉದ್ದೇಶ ಇಂದ್ರಪ್ರಸ್ಥ ಸಭಾಂಗಣದ ನವೀಕರಣದ ಹಿಂದಿದೆ. ಕಾಲಕ್ಕನುಗುಣವಾಗಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳು ಇಲ್ಲಿ ಅಳವಡಿಕೆಯಾಗಿರುವುದು ಸಂತಸದ ವಿಚಾರ ಎಂದರು. ಇಂದ್ರಪ್ರಸ್ತ ಸಭಾಂಗಣದ ನವೀಕರಣದ ಸಂಪೂರ್ಣ ನಿರ್ವಹಣಾ ಜವಾಬ್ದಾರಿ ಹೊಂದಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರಕುಮಾರ್ ಅವರು ಮಾತನಾಡಿ ಸಭಾಂಗಣದ ವೈಶಿಷ್ಟ್ಯತೆಯ ಸಂಪೂರ್ಣ ವಿವರ ನೀಡಿದರು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದೊಂದಿಗೆ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಸಭಾಂಗಣಕ್ಕೆ ವಿಶೇಷ ಮಹತ್ವವಿದೆ ಎಂದರು. 1991ರಲ್ಲಿ ಕಾಲೇಜಿನ ಬೆಳ್ಳಿಹಬ್ಬದ ಸಂದರ್ಭದಲ್ಲಿ ಸಭಾಂಗಣದ ಪರಿಕಲ್ಪನೆ ಹುಟ್ಟಿಕೊಂಡಿತು. 1994ರಲ್ಲಿ ಸಭಾಂಗಣ ಉದ್ಘಾಟನೆಗೊಂಡಿತ್ತು. ಪ್ರಸ್ತುತ ಕಾಲಘಟ್ಟದ ಅವಶ್ಯಕತೆಗೆ ಅನುಗುಣವಾಗಿ ಸಭಾಂಗಣವನ್ನು ನವೀಕರಿಸಲಾಗಿದೆ. ಕಾರ್ಯಕ್ರಮಗಳು ಆಯೋಜಿತವಾದಾಗ ಕಾಂಕ್ರೀಟ್ ಗೋಡೆ ಇದ್ದಕಾರಣದ ಪ್ರತಿಧ್ವನಿಯ ಸಮಸ್ಯೆ ಇತ್ತು. ಇದರೊಂದಿಗೆ ಇತರೆ ತಾಂತ್ರಿಕ ನ್ಯೂನತೆಗಳು ಮತ್ತು ಸವಾಲುಗಳೂ ಇದ್ದವು. ಈಗ ಪುನರ್ನಿರ್ಮಾಣದ ಹಂತದಲ್ಲಿ ಇವೆಲ್ಲಾ ನ್ಯೂನತೆಗಳನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು. ಧ್ವನಿ ಮತ್ತು ಬೆಳಕಿನ ವ್ಯವಸ್ಥೆಗೆ ಹೊಸ ಆಯಾಮ ನೀಡಲಾಗಿದೆ. ಪ್ರೇಕ್ಷಕರ ಸಾಲುಗಳನ್ನೂ ಸುವ್ಯವಸ್ಥಿತಗೊಳಿಸಲಾಗಿದೆ. ವೇದಿಕೆಯು ಹಿಂದಿಗಿಂತಲೂ ಈಗ ಇನ್ನಷ್ಟು ವಿಸ್ತಾರಗೊಂಡಿದೆ. ಗ್ರೀನ್ ರೂಮ್‌ನಲ್ಲೂ ಕೂಡಾ ಅತ್ಯಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಲಾಗಿದೆ. ತುಂಬಾ ಅತ್ಯಾಕರ್ಷಕವಾಗಿ ರೂಪುಗೊಂಡಿರುವ ಈ ಸಭಾಂಗಣವು ನಿರಂತರವಾಗಿ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವಂತೆ ಸದ್ಬಳಕೆ ಆಗಲಿ ಎಂದು ಆಶಯ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಸುಪ್ರಿಯಾ ಹರ್ಷೇಂದ್ರಕುಮಾರ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ.ಕುಮಾರ ಹೆಗಡೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಐಟಿ ವಿಭಾಗದ ಸಿಇಓ ಪೂರಣ್ ವರ್ಮಾ, ಸೋನಿಯಾ ವರ್ಮಾ, ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಅಧ್ಯಾಪಕರು, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ, ಟ್ರಸ್ಟ್ ಸದಸ್ಯರು ಹಾಗೂ ಉದ್ಯೋಗಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಡಾ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರು ಸುಶ್ರಾವ್ಯ ಪ್ರಾರ್ಥನೆ ಹಾಗೂ ಗೀತೆಗಳಿಂದ ಮನಸೆಳೆದರು.

ಬೀಜ ಬಿತ್ತನೆ ಹಾಗೂ ಗಿಡ ನೆಡುವ ಕಾರ್ಯಕ್ರಮ

Article Image

ಬೀಜ ಬಿತ್ತನೆ ಹಾಗೂ ಗಿಡ ನೆಡುವ ಕಾರ್ಯಕ್ರಮ

ದಕ್ಷಿಣಕನ್ನಡ ಜಿಲ್ಲಾ ಬಸದಿ ಸ್ವಚ್ಛತಾ ತಂಡ ಬಸದಿಯ ಸ್ವಚ್ಛತೆಯ ಜೊತೆಗೆ ಸಮಾಜಮುಖಿ ಕೆಲಸಕಾರ್ಯಗಳತ್ತ ಹೆಜ್ಜೆ ಇಟ್ಟಿತ್ತು . ಇದೀಗ ಪರಿಸರ ಸಂರಕ್ಷಣೆಯ ಕೆಲಸದತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವೃತ್ತ, ಮಂಗಳೂರು ವಿಭಾಗ ಮತ್ತು ಬಂಟ್ವಾಳ ವಲಯದ ಸಹಯೋಗದಲ್ಲಿ ಬಸದಿ ಸ್ವಚ್ಛತಾ ತಂಡವು ಕಾರಿಂಜದ ಕುಂಟರ ಪಲ್ಕೆ ಕೊಡ್ಯಾ ಮಲೆ ಎಂಬಲ್ಲಿ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ ಹಾಗೂ ಹಸಿರಿಗಾಗಿ ಮಾವು ಹಲಸು ಪೇರಳೆ ಪುನರ್ಪುಳಿ ಹುಣಸೆ ಹುಳಿ, ಕೊಕ್ಕೋ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಸಿದರು. ಊರ ಪರಿಸರ ಪ್ರೇಮಿಗಳು ಕೈ ಜೋಡಿಸಿದರು. ಇದೀಗ ಬಸದಿ ಸ್ವಚ್ಛತಾ ತಂಡದವರ ಮರ ಗಿಡಗಳನ್ನು ಬೆಳೆಸಿ ಪ್ರಾಣಿ ಪಕ್ಷಿ ಸಂಕುಲ ಉಳಿಸಿ, ಪ್ರಕೃತಿಯನ್ನು ಪ್ರೀತಿಸಿ ಎಂಬ ಧ್ಯೇಯದ ಪ್ರಾಮಾಣಿಕ ಕಾರ್ಯಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ಎಕ್ಸಲೆಂಟ್: ವನಮಹೋತ್ಸವ ಆಚರಣೆ

Article Image

ಎಕ್ಸಲೆಂಟ್: ವನಮಹೋತ್ಸವ ಆಚರಣೆ

ಕಲ್ಲಬೆಟ್ಟು ವ್ಯಾಪ್ತಿಯ ಗಂಟಾಲ್‌ಕಟ್ಟೆ ಹಾಗೂ ಮಹಾವೀರ ಕಾಲೇಜು ಪರಿಸರದ ವ್ಯಾಪ್ತಿಯ ಜನತೆಗೆ ಪರಿಸರದ ಬಗ್ಗೆ, ಗಿಡ ಮರ, ಸಸಿಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಲು ಗಿಡ ವಿತರಣಾ ಕಾರ್ಯಕ್ರಮವನ್ನು ಎಕ್ಸಲೆಂಟ್ ಸಂಸ್ಥೆಯು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಲೆಕ್ಕಪರಿಶೋಧಕ ಮೊಹಮ್ಮದ್ ಯಾಸಿರ್ ಉಪಸ್ಥಿತರಿದ್ದು, ಪರಿಸರದ ಜಾಗೃತಿಯ ಕನಸನ್ನು ಎಕ್ಸಲೆಂಟ್ ಸಂಸ್ಥೆಯು ಹೊಂದಿರುವುದು ನಿಜಕ್ಕೂ ಹೆಮ್ಮೆಯ ವಿಚಾರ ಎನ್ನುವುದನ್ನು ತಿಳಿಸಿದರು. ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್‌ರವರು ಮಾತನಾಡಿ ಪರಿಸರವನ್ನು ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕಲ್ಲಬೆಟ್ಟು ವ್ಯಾಪ್ತಿಯಿಂದ ವೇಣೂರು ಪರಿಸರದ ವ್ಯಾಪ್ತಿಯವರೆಗೂ ಒಂದು ಸಾವಿರದಷ್ಟು ಹಸಿರು ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು. ಈ ಸುಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್‌ನ ಮ್ಯಾನೇಜರ್ ಆಗಿರುವ ರಕ್ಷಿತ್ ಹಾಗೂ ಕರ್ನಾಟಕ ಬ್ಯಾಂಕ್‌ನ ಸಿಬ್ಬಂದಿವರ್ಗದವರು, ರೊಟೇರಿಯನ್ ಆಗಿರುವ ಉದಯ್ ಕುಮಾರ್‌ರವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಶೈಕ್ಷಣಿಕ ಸಂಯೋಜಕರಾದ ಶ್ರೀಪ್ರಸಾದ್‌ರವರು ನೆರವೇರಿಸಿ ವಂದಿಸಿದರು.

ಬೆಳ್ತಂಗಡಿ : ರೋಟರಿ ಕ್ಲಬ್ ಪದಗ್ರಹಣ ಸಮಾರಂಭ

Article Image

ಬೆಳ್ತಂಗಡಿ : ರೋಟರಿ ಕ್ಲಬ್ ಪದಗ್ರಹಣ ಸಮಾರಂಭ

ರೋಟರಿ ಕ್ಲಬ್‌ನ ಸದಸ್ಯರೆಲ್ಲ ಹೃದಯ ಶ್ರೀಮಂತಿಕೆಯನ್ನು ಹೊಂದಿದವರಾಗಿದ್ದು, ನಿಸ್ವಾರ್ಥ ಸೇವೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿ ಬದುಕಿನಲ್ಲಿ ಪರಿವರ್ತನೆ ಮಾಡುವುದೇ ರೋಟರಿ ಕ್ಲಬ್‌ನ ಉದ್ದೇಶವಾಗಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷ ಉಜಿರೆಯ ಪೂರನ್‌ವರ್ಮ ಹೇಳಿದರು. ಅವರು ಗುರುವಾರ ಉಜಿರೆಯಲ್ಲಿ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಬಳಿಕ ಮಾತನಾಡಿದರು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷನಾಗಿ ತಾನು ಆಯ್ಕೆಯಾಗಿರುವುದು ದೇವರು ಸಮಾಜಸೇವೆ ಮಾಡಲು ಕೊಟ್ಟ ವಿಶೇಷ ಅವಕಾಶ ಎಂದು ಭಾವಿಸಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರ ಆಶೀರ್ವಾದ ಮತ್ತು ಮಾರ್ಗದರ್ಶನದಲ್ಲಿ ಶಿಸ್ತಿನ ಚೌಕಟ್ಟಿನೊಳಗೆ ಎಲ್ಲಾ ಸೇವಾಕಾರ್ಯಗಳನ್ನು ಯಶಸ್ವಿಯಾಗಿ ಮಾಡುವುದಾಗಿ ಭರವಸೆ ನೀಡಿದರು. ಇದಕ್ಕೆ ತಾಯಿ ಸೋನಿಯಾವರ್ಮ ಮತ್ತು ತಮ್ಮ ಕೆಯೂರ್‌ವರ್ಮ ಅವರ ಬಲವೂ, ಬೆಂಬಲವೂ ಇದೆ ಎಂದರು. ರೋಟರಿ ಕ್ಲಬ್‌ನಲ್ಲಿ ಎಲ್ಲರಿಗೂ ಸೇವೆ ಮೂಲಕ ಕಲಿಯುವ ಅವಕಾಶಗಳಿವೆ. ಎಲ್ಲಾ ಸದಸ್ಯರೂ ಪರಸ್ಪರ ಪ್ರೀತಿ-ವಿಶ್ವಾಸದಿಂದ ತಮ್ಮ ಕುಟುಂಬದ ಕಾರ್ಯಕ್ರಮದಂತೆ ಎಲ್ಲಾ ಸೇವಾಕಾರ್ಯಗಳನ್ನು ಮಾಡುವುದಾಗಿ ಭರವಸೆ ನೀಡಿದರು. ಹೊಸ ಸೇವಾ ಕಾರ್ಯಗಳು: ಸೌರಶಕ್ತಿ ಬಳಕೆ, ಕನ್ನಡ ಶಾಲೆಗಳಿಗೆ ಕಾಯಕಲ್ಪ, ರಸ್ತೆ ಸುರಕ್ಷತೆ, ಹಿರಿಯ ನಾರಿಕರ ಆರೋಗ್ಯ ರಕ್ಷಣೆ, ಹೃದಯರೋಗಿಗಳ ಚಿಕಿತ್ಸೆಗೆ ನೆರವು ಮೊದಲಾದ ಸೇವಾಕಾರ್ಯಗಳನ್ನು ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಮಾಡುವುದಾಗಿ ಪ್ರಕಟಿಸಿದರು. ರೋಟರಿ ಜಿಲ್ಲಾ ರಾಜ್ಯಪಾಲ ಪಿ.ಕೆ. ರಾಮಕೃಷ್ಣ ಮಾತನಾಡಿ, ನಮ್ಮಲ್ಲಿ ಮೊದಲು ಪರಿವರ್ತನೆ ಮಾಡಿಕೊಂಡು ನಂತರ ಸಮಾಜದಲ್ಲಿಯೂ ಧನಾತ್ಮಕ ಸುಧಾರಣೆ ಮಾಡಬೇಕು. ಬೆಳ್ತಂಗಡಿ ರೋಟರಿ ಕ್ಲಬ್‌ನ ಸೇವೆ-ಸಾಧನೆಗೆ ಅಭಿನಂದಿಸಿ ರೋಟರಿ ಜಾಗತಿಕ ಅನುದಾನದ ಮೂಲಕ ಇನ್ನೂ ಹೆಚ್ಚಿನ ಸೇವೆ ಮಾಡಬೇಕೆಂದು ಸಲಹೆ ನೀಡಿದರು. ರೋಟರಿ ಜಿಲ್ಲಾ ಉಪರಾಜ್ಯಪಾಲ ಮೊಹಮ್ಮದ್ ವೊಳವೂರು “ರೋಟರ್” ಸಂಚಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ವಿದ್ಯಾಕುಮಾರ್ ಕಾಂಚೋಡು ವರದಿ ಸಾದರ ಪಡಿಸಿದರು. ನೂತನ ಸದಸ್ಯರು: ಸೋನಿಯಾವರ್ಮ, ಪ್ರವೀಣ್ ಗೋರೆ, ಸುವೀರ್ ಜೈನ್, ಪ್ರಶಾಂತ್ ಜೈನ್ ಮತ್ತು ಆದರ್ಶ ಕಾರಂತ ಅವರನ್ನು ರೋಟರಿ ಕ್ಲಬ್‌ನ ನೂತನ ಸದಸ್ಯರಾಗಿ ಸೇರ್ಪಡೆಗೊಳಿಸಲಾಯಿತು. ಅನಂತ ಭಟ್ ಮಚ್ಚಿಮಲೆ ಸ್ವಾಗತಿಸಿದರು. ಸಂದೇಶ್ ರಾವ್ ಧನ್ಯವಾದವಿತ್ತರು. ಡಾ. ಎ. ಜಯಕುಮಾರ ಶೆಟ್ಟಿ ಮತ್ತು ವಕೀಲ ಬಿ.ಕೆ. ಧನಂಜಯ ರಾವ್ ಕಾರ್ಯಕ್ರಮ ನಿರ್ವಹಿಸಿದರು.

ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದಿರೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Article Image

ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದಿರೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

ಡಿ.ಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದ್ರೆ ಇದರ 2024-25 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಶಾಲಾ ಅಮೃತಮಹೋತ್ಸವ ಕಟ್ಟಡದಲ್ಲಿ ನೆರವೇರಿತು. ಈ ಸಭೆಯ ಅಧ್ಯಕ್ಷ ಸ್ಥಾನವನ್ನು ಗೌರವಾನ್ವಿತ ಶಾಲಾ ಸಂಚಾಲಕರಾದ ಕೆ.ಹೇಮರಾಜ್ ಇವರು ವಹಿಸಿದ್ದರು. ಇದರ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ವೀರ ಮಾರುತಿ ಎಂಟರ್ ಪ್ರೈಸಸ್ ಕಲ್ಸಂಕ ಇದರ ಮಾಲಕರಾದ ವೆಂಕಟೇಶ್ ಪ್ರಭು ನೆರವೇರಿಸಿದರು. ವಿವಿಧ ಸಂಘಗಳ ಕಡತಗಳನ್ನು ಅನಾವರಣಗೊಳಿಸಿ ಮಂತ್ರಿಮಂಡಲದ ಪದಾಧಿಕಾರಿಗಳಿಗೆ ಪದಕ ಧಾರಣೆಯನ್ನು ಮಾಡಿದರು. ಇವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಈ ಸಂಸ್ಥೆಯ ಹಳೆ ವಿದ್ಯಾರ್ಥಿಯಾಗಿ ತಮ್ಮ ಬಾಲ್ಯ ಜೀವನವನ್ನು ಮೆಲುಕು ಹಾಕುತ್ತಾ ಶಾಲೆಗೆ ವಿದ್ಯಾರ್ಥಿ ಸಂಘದ ಅವಶ್ಯಕತೆಗಳನ್ನು ತಿಳಿಸುತ್ತಾ ಮಕ್ಕಳಿಗೆ ತಮ್ಮ ಕೆಲಸ ಕಾರ್ಯಗಳ ಜವಾಬ್ದಾರಿಯನ್ನು ತಿಳಿಸಿದರು. ಶಿಸ್ತು ಬದ್ಧ ಹಾಗೂ ಸಂಸ್ಕಾರಯುತ ಶಿಕ್ಷಣವು ಮಕ್ಕಳನ್ನು ಯಶಸ್ಸಿನ ದಾರಿಯಲ್ಲಿ ಸಾಗಲು ಕಾರಣವಾಗುತ್ತದೆ ಎಂದು ಹೇಳಿ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಮಾಡಿರುವುದರ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ನಮ್ಮ ಶಾಲೆಯಲ್ಲಿ ಆಧುನಿಕ ತಂತಜ್ಞಾನವನ್ನು ಬಳಸಿ ನಡೆಸಿದ ಚುಣಾವಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಮಂತ್ರಿಮಂಡಲಕ್ಕೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಜ್ಞಾ ವಿಧಿಯನ್ನು ವಿಧಿಸಿ ತಮ್ಮ ಜವಾಬ್ದಾರಿಯ ಬಗ್ಗೆ ಅರಿವು ಮೂಡಿಸಿದರು. ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷರು, ಉಪಾಧ್ಯಕ್ಷರು, ತಾಯಂದಿರ ಸಮಿತಿಯ ಅಧ್ಯಕ್ಷರು ಚುನಾಯಿತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಶಾಲಾ ಸಂಚಾಲಕರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಈ ಸಂಸ್ಥೆಯ ಯಶಸ್ವಿಗೆ ಶ್ರಮಿಸುತ್ತಿರುವ ಪ್ರತಿಯೊಬ್ಬರಿಗೂ ತನ್ನ ಕೃತಜ್ಞತೆಯನ್ನು ಸಲ್ಲಿಸಿ ಶಾಲಾ ದಾಖಲಾತಿಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಹಾಗೂ ವೆಂಕಟೇಶ್ ಪ್ರಭು ಇವರು ವೇದಿಕೆಯಲ್ಲಿ ದೇಣಿಗೆಯಾಗಿ ನೀಡಿದ 10,000 ರೂಪಾಯಿಗಳನ್ನು ಶಾಲಾ ಬ್ಯಾಂಡ್ ಸೆಟ್‌ನ ಸಮವಸ್ತ್ರಕ್ಕಾಗಿ ಉಪಯೋಗಿಸಿಕೊಳ್ಳುವುದಾಗಿ ಭರವಸೆ ನೀಡಿ ಕೃತಜ್ಞತೆ ಸಲ್ಲಿಸಿದರು. ಶಾಲಾ ವಿದ್ಯಾರ್ಥಿ ನಾಯಕಿಯಾಗಿ ಆಯ್ಕೆಯಾದ ಶ್ರೇಯಾ ಹಾಗೂ ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆಯಾದ ತನ್ವಿ ಇವರು ತಮ್ಮ ಭಾಷಣದಲ್ಲಿ ಶಾಲೆಯ ಅಭಿವೃದ್ಧಿಯಲ್ಲಿ ತನ್ನ ಜವಾಬ್ದಾರಿಯ ಬಗ್ಗೆ ಮಾತನಾಡಿ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಸಿ ಗೆಲ್ಲಿಸಿದ ವಿದ್ಯಾರ್ಥಿಗಳಿಗೆ ಧನ್ಯವಾದ ಸಲ್ಲಿಸಿದರು. ಮಂಜುಳಾ ಜೈನ್ ಇವರು ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ದಿವ್ಯಶ್ರೀ ಧನ್ಯವಾದಗೈದರು. ಮಂಜುಳಾ ಪಿ. ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

ನಾರಾವಿಯಲ್ಲಿ ಮಂಡಲ ಪೂಜೆ

Article Image

ನಾರಾವಿಯಲ್ಲಿ ಮಂಡಲ ಪೂಜೆ

ನಾರಾವಿಯಲ್ಲಿ ಭಗವಾನ್ ಧರ್ಮನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪ್ರತಿಷ್ಠಾ ಮಹೋತ್ಸವ ನಡೆದು 48 ದಿನಗಳ ಬಳಿಕ ಶನಿವಾರ ಬಸದಿಯಲ್ಲಿ ಮಂಡಲ ಪೂಜೆ ನಡೆಯಿತು. ಕಾರ್ಕಳ ಜೈನಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ಆರ್ಯಿಕಾ ಮುಕ್ತಿಶ್ರೀ ಮಾತಾಜಿ ಉಪಸ್ಥಿತರಿದ್ದರು. ಪೂರ್ವಾಹ್ನ ತೋರಣಮುಹೂರ್ತ, ವಿಮಾನಶುದ್ಧಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳ ಬಳಿಕ ಸಾಮೂಹಿಕ ಜಿನಾಭಿಷೇಕ ಮತ್ತು ಋಷಿಮಂಡಲ ಆರಾಧನೆ ನಡೆಯಿತು. ಊರಿನ ಶ್ರಾವಕರು-ಶ್ರಾವಕಿಯರು ಮಂಗಲದ್ರವ್ಯಗಳಿಂದ ಅಭಿಷೇಕ ಮತ್ತು ಆರಾಧನೆಯಲ್ಲಿ ಭಾಗವಹಿಸಿ ಧನ್ಯತೆಯನ್ನು ಹೊಂದಿದರು. ಹೊರನಾಡು ಜಯಶ್ರೀ ಧರಣೇಂದ್ರ ಕುಮಾರ್ ಮತ್ತು ಬಳಗದವರ ಸುಶ್ರಾವ್ಯ ಸಂಗೀತ ಪೂಜಾಷ್ಟಕ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು. ಪದ್ಮಾವತಿ ದೇವಿ ಆರಾಧನೆ, ನೂತನ ಉಯ್ಯಾಲೆ ಸಮರ್ಪಣೆ, ಅಷ್ಟಾವಧಾನ ಪೂಜೆ ನಡೆಯಿತು. ಊರಿನ-ಪರವೂರಿನ ಶ್ರಾವಕ-ಶ್ರಾವಕಿಯರು ಉಪಸ್ಥಿತರಿದ್ದರು.

ನಾರಾವಿ: ಮಂಡಲ ಪೂಜೆ

Article Image

ನಾರಾವಿ: ಮಂಡಲ ಪೂಜೆ

ನಾರಾವಿ ಮಾಗಣೆ ಭ| ೧೦೦೮ ಶ್ರೀ ಧರ್ಮನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪ್ರತಿಷ್ಠಾ ಮಹೋತ್ಸವದ 48ನೇ ದಿನದ ಮಂಡಲ ಪೂಜೆಯು ಕಾರ್ಕಳ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಉಪಸ್ಥಿತಿ ಮತ್ತು ಆಶೀರ್ವಚನ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಜೂನ್ 22ರಂದು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರುಗಲಿರುವುದು.

ಮಂಡಲ ಪೂಜಾ ಕಾರ್ಯಕ್ರಮ

Article Image

ಮಂಡಲ ಪೂಜಾ ಕಾರ್ಯಕ್ರಮ

ಹುಬ್ಬಳ್ಳಿ-ಧಾರವಾಡದ ನವನಗರ ಬಡಾವಣೆ ಪಂಚಾಕ್ಷರಿ ನಗರದ ಭ| ಶ್ರೀ ೧೦೦೮ ಮುನಿಸುರತ ತೀರ್ಥಂಕರರ ಜೈನ ಮಂದಿರದ ನೂತನ ಮಾನಸ್ಥಂಭದ ಚತುರ್ಮುಖ ಜಿನಬಿಂಬದ ಪಂಚಕಲ್ಯಾಣ ಪೂಜಾ ಮಹೋತ್ಸವದ ಮಂಡಲ ಪೂಜಾ ಕಾರ್ಯಕ್ರಮವು ಪ. ಪೂ. ಅಭಿಕ್ಷಣ ಜ್ಞಾನ ವಾತ್ಸಲ್ಯಮೂರ್ತಿ ೧೦೮ ಪುಣ್ಯ ಸಾಗರ ಮುನಿ ಮಹಾರಾಜರ ಪಾವನ ಸಾನ್ನಿಧ್ಯ ಮತ್ತು ಆಶೀರ್ವಾದದೊಂದಿಗೆ ಹಾಗೂ ಸೋಂದ ಮಠದ ಪ. ಪೂ. ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಮತ್ತು ವರೂರು ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಜೂ. 23 ರಂದು ನೆರವೇರಲಿದೆ.

ಜೈನ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರ

Article Image

ಜೈನ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರ

ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರ ಇಂದು ಸಂಚಾಲಕರಾದ ಕೆ. ಹೇಮರಾಜ್ ಇವರು ದೀಪ ಬೆಳಗುವುದರೊಂದಿಗೆ ಪ್ರಾರಂಭಗೊಂಡಿತು. ಸವಣೂರು ವಿದ್ಯಾರಶ್ಮಿ ಕಾಲೇಜಿನ ಪ್ರಾಂಶುಪಾಲರಾದ ಮತ್ತು ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಸೀತಾರಾಮ ಕೇವಳ ಇವರು ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಡಾ. ಪ್ರಭಾತ್ ಬಲ್ನಾಡು ಮತ್ತು ಎಲ್ಲ ಉಪನ್ಯಾಸಕ ವೃಂದದವರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ಮೂಡುಬಿದಿರೆ ಜೈನ್ ಮಿಲನ್ ಮಾಸಿಕ ಸಭೆ, ಸನ್ಮಾನ

Article Image

ಮೂಡುಬಿದಿರೆ ಜೈನ್ ಮಿಲನ್ ಮಾಸಿಕ ಸಭೆ, ಸನ್ಮಾನ

ಮೂಡುಬಿದಿರೆ ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಘಟಕದ ಮಾಸಿಕ ಸಭೆಯು ಇಲ್ಲಿನ ಎಂ. ಸಿ. ಎಸ್. ಬ್ಯಾಂಕ್ ಸಭಾಭವನದಲ್ಲಿ ಜೈನ್ ಮಿಲನ್ ಅಧ್ಯಕ್ಷ ಆನಡ್ಕ ದಿನೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭಾ ಕಾಯ೯ಕ್ರಮಕ್ಕೂ ಮೊದಲು ಹೃದ್ರೋಗ ಸಂಬಂಧಿ ತಪಾಸಣೆ ಮತ್ತು ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮೂಡುಬಿದಿರೆಯ ಹೃದ್ರೋಗ ತಜ್ಞ ಡಾ. ದಿತೇಶ್ ಹೃದ್ರೋಗಕ್ಕೆ ಸಂಬಂಧಿಸಿದಂತೆ ಸವಿಸ್ತಾರವಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿರುವ ರವಿರಾಜ್ ಎಂ. ಮತ್ತು ಕೊಡುಗೈ ದಾನಿ ನಿವೃತ್ತ ಟೆಲಿಕಾಂ ಇಂಜಿನಿಯರ್ ಎಂ. ವಿ. ಶೆಟ್ಟಿ ಅವರನ್ನು ಮಿಲನ್ ವತಿಯಿಂದ ಸನ್ಮಾನಿಸಲಾಯಿತು. ಭಾರತೀಯ ಜೈನ್ ಮಿಲನ್ ವಲಯ ನಿದೇ೯ಶಕರಾದ ಪಿ. ಜಯರಾಜ್ ಕಂಬಳಿ, ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗದ ಜೊತೆ ಕಾರ್ಯದರ್ಶಿ ನ್ಯಾಯವಾದಿ ಶ್ವೇತಾ ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಾಸಿಕ ಸಭಾ ಕಾರ್ಯಕ್ರಮದ ಪ್ರಾಯೋಜಕರಾದ ಎಂ. ಸಿ. ಎಸ್. ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ನೇಮಿರಾಜ್, ಜೈನ್ ಮಿಲನ್ ಪದಾಧಿಕಾರಿಗಳಾದ ರಾಜೇಶ್, ಪುಷ್ಪರಾಜ್ ಜೈನ್, ಅನಂತವೀರ್ ಜೈನ್ ಉಪಸ್ಥಿತರಿದ್ದರು. ಸುರೇಖಾ ವಿ. ಹೆಗ್ಡೆ ಪ್ರಾಥಿ೯ಸಿದರು. ಪ್ರಶಾಂತ್ ಜೈನ್ ಮತ್ತು ಸಂಪತ್ ಕುಮಾರ್ ಸನ್ಮಾನ ಪತ್ರ ವಾಚಿಸಿದರು. ದಿನೇಶ್ ಚೌಟ ಸ್ವಾಗತಿಸಿದರು. ಡಾ. ಕ್ಷಮಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಶ್ರುತ ಪಂಚಮಿ

Article Image

ಶ್ರುತ ಪಂಚಮಿ

ಮೂಡುಬಿದಿರೆ ಶ್ರೀ ಜೈನ ಮಠದಲ್ಲಿ ಶ್ರುತ ಪಂಚಮಿ ನಿಮಿತ್ತ ಪ. ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾ‌ಯ೯ವಯ೯ ಮಹಾಸ್ವಾಮೀಜಿಗಳವರ ಮಾಗ೯ದಶ೯ನ, ನೇತೃತ್ವ ಮತ್ತು ದಿವ್ಯ ಉಪಸ್ಥಿತಿಯಲ್ಲಿ ದಿನಾಂಕ 9-6-2024 ರಿಂದ 11-6-2024ರವರೆಗೆ ಸಾಮೂಹಿಕ ಸರಸ್ವತಿ ಶತಾಷ್ಠ ನಾಮಾವಳಿ ಹಾಗೂ ಶ್ರುತ ಸ್ಕಂದ ಆರಾಧನೆ ಜರುಗಲಿರುವುದು.

ಮೋಕ್ಷ ಪ್ರಾಪ್ತಿಯೇ ಬದುಕಿನ ಪರಮ ಗುರಿಯಾಗಬೇಕು. ಜನರೆಲ್ಲ ಜಿನರಾಗಬೇಕು

Article Image

ಮೋಕ್ಷ ಪ್ರಾಪ್ತಿಯೇ ಬದುಕಿನ ಪರಮ ಗುರಿಯಾಗಬೇಕು. ಜನರೆಲ್ಲ ಜಿನರಾಗಬೇಕು

ಶ್ರಾವಕರ ಷಟ್ಕರ್ಮಗಳಾದ ದೇವರಪೂಜೆ, ಆರಾಧನೆ, ಗುರುಗಳಸೇವೆ, ಸ್ವಾಧ್ಯಾಯ ಮೊದಲಾದವುಗಳನ್ನು ಪರಿಶುದ್ಧ ಮನಸ್ಸಿನಿಂದ ನಿತ್ಯವೂ ಮಾಡಿದಾಗ, ಆತ್ಮನಿಗಂಟಿದ ಸಕಲ ಪಾಪಕರ್ಮಗಳ ಕೊಳೆ ಕಳೆದು ಆತ್ಮನೇ ಪರಮಾತ್ಮನಾಗುತ್ತಾನೆ. ಜನರೆಲ್ಲ ಜಿನರಾಗಬೇಕು. ಮೋಕ್ಷ ಪ್ರಾಪ್ತಿಯೇ ಬದುಕಿನ ಪರಮ ಗುರಿಯಾಗಬೇಕು ಎಂದು ಮೂಡಬಿದ್ರೆ ಜೈನಮಠದ ಪರಮ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು ಹೇಳಿದರು. ಅವರು ಶುಕ್ರವಾರ ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಪುಂಜಾಲಕಟ್ಟೆ ಕಟ್ಟೆಮನೆ ಗುತ್ತು ದಿವಂಗತ ಉದಯಕುಮಾರ್ ಅವರ ಸ್ಮರಣಾರ್ಥ ಶಾಸ್ತ್ರದಾನಕ್ಕಾಗಿ ಪ್ರಕಟಿಸಿದ “ಸೂರ್ಯೋದಯ” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕ್ರೋಧಾದಿ ಮಾನಕಷಾಯಗಳನ್ನು ತೊರೆದು ನಮ್ಮೊಳಗಿರುವ ವೀತರಾಗ ಸ್ವರೂಪಿ ಆತ್ಮನನ್ನು ಗುರುತಿಸಿಕೊಂಡು ಮೋಕ್ಷಪ್ರಾಪ್ತಿಗೆ ನಿರಂತರ ಪ್ರಯತ್ನಿಸಬೇಕು. ಮೋಹನೀಯ ಕರ್ಮ ಎಲ್ಲಾ ಕರ್ಮಗಳ ರಾಜ. ದ್ರವ್ಯ, ಕ್ಷೇತ್ರ, ಕಾಲ, ಭವ ಮತ್ತು ಭಾವವನ್ನು ಹೊಂದಿಕೊಂಡು ಚಾಕಚಕ್ಯತೆಯಿಂದ ಬದುಕಿನ ಎಲ್ಲಾ ಕಷ್ಟಗಳನ್ನು ತಾಳ್ಮೆಯಿಂದ ಎದುರಿಸಿ ಕರ್ಮ ಬಂಧವನ್ನು ತಡೆದು ಮೋಕ್ಷ ಪ್ರಾಪ್ತಿ ಮಾಡಿಕೊಳ್ಳಬೇಕು ಎಂದು ಸ್ವಾಮೀಜಿಗಳವರು ಸಲಹೆ ನೀಡಿದರು. ಇವರು ಕಟ್ಟೆಮನೆ ಉದಯಕುಮಾರರ ಸೇವಾ ಮನೋಭಾವ, ಆದರ್ಶ ನಾಯಕತ್ವ, ಶ್ರಾವಕ ಧರ್ಮದ ಪರಿಪಾಲನೆಯನ್ನು ಶ್ಲಾಘಿಸಿದರು. ಭಗವಾನ್ ಶಾಂತಿನಾಥ ಸ್ವಾಮಿಗೆ ೫೦೪ ಕಲಶ ಅಭಿಷೇಕ, ಮೂರೂ ಬಸದಿಗಳಲ್ಲಿ ಪಂಚಾಮೃತ ಅಭಿಷೇಕ ಮತ್ತು ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಬ್ರಹ್ಮಯಕ್ಷ ದೇವರಿಗೆ ವರಹ ಪೂಜೆ ನಡೆಯಿತು. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಬಸದಿಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್, ಡಾ. ಕೆ. ಜೀವಂಧರ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಮಾಜಿ ಸಚಿವರುಗಳಾದ ಬಿ. ರಮಾನಾಥ ರೈ ಮತ್ತು ಅಭಯಚಂದ್ರ ಜೈನ್, ಕೆ. ಪ್ರಸನ್ನ ಕುಮಾರ್ ಬೆಳ್ತಂಗಡಿ, ಎಸ್.ಡಿ. ಸಂಪತ್‌ಸಾಮ್ರಾಜ್ಯ ಶಿರ್ತಾಡಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ, ಬ್ಯಾಂಕ್ ಆಫ್ ಬರೋಡದ ನಿವೃತ್ತ ಪ್ರಬಂಧಕರುಗಳಾದ ಎಂ. ಜಿನರಾಜ ಶೆಟ್ಟಿ ಮತ್ತು ಮೋಹನ ಪಡಿವಾಳ್, ಕೆ.ಪಿ. ಜಗದೀಶ ಅಧಿಕಾರಿ ಮೂಡಬಿದ್ರೆ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕ ಧರಣೇಂದ್ರ ಕುಮಾರ್ ಸಭಾಕಾರ್ಯಕ್ರಮ ನಿರ್ವಹಣೆ ಮಾಡಿದರು.

ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲಾ ಪ್ರಾರಂಭೋತ್ಸವ

Article Image

ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲಾ ಪ್ರಾರಂಭೋತ್ಸವ

ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲಾ ಪ್ರಾರಂಭೋತ್ಸವವು ಜೂನ್ 3ರಂದು ಶಾಲಾ ಆವರಣದಲ್ಲಿ ನೆರವೇರಿತು. ಕಾರ್ಯಕ್ರಮದ ಉದ್ಘಾಟಕರಾಗಿ ಮೂಡುಬಿದಿರೆಯ ಖ್ಯಾತ ಲೆಕ್ಕ ಪರಿಶೋಧಕರಾದ ಉಮೇಶ್ ರಾವ್ ಮಿಜಾರುರವರು ಉಪಸ್ಥಿತರಿದ್ದು, ಕಷ್ಟವನ್ನು ಎದುರಿಸುವ ಸಾಮರ್ಥ್ಯ, ಸಮಯಪ್ರಜ್ಞೆ ಹಾಗೂ ಶಾಲಾ ನಿಯಮಗಳನ್ನು ಸರಿಯಾಗಿ ವಿದ್ಯಾರ್ಥಿಗಳು ಪಾಲಿಸಿದರೆ ಗೆಲುವು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್‌ರವರು ಶಾಲೆಯಲ್ಲಿ ಪೂರಕವಾದ ಕಲಿಕಾ ವಾತಾವರಣ ಇದ್ದಾಗ ಮಕ್ಕಳು ಉತ್ತಮ ರೀತಿಯಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಹತ್ತನೆಯ ತರಗತಿಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಸುವಿತ್ ಭಂಡಾರಿ, ಸುಯೋಗ್ ಅಂಚನ್, ಪೃಥ್ವಿ ಪ್ರಕಾಶ್ ಭಂಡಾರಿ ಇವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಇಸ್ರೋ ‘ಯುವಿಕ’ ರಾಷ್ಟ್ರಮಟ್ಟದ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ, ಸಂಸ್ಥೆಯ ಹಳೆಯ ವಿದ್ಯಾರ್ಥಿನಿಯಾಗಿರುವ ಮೌಲ್ಯ ವೈ. ಆರ್. ಜೈನ್ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಶಾಲಾ ಆಡಳಿತ ನಿರ್ದೇಶಕರಾದ ಡಾ. ಬಿ. ಪಿ. ಸಂಪತ್ ಕುಮಾರ್, ಶೈಕ್ಷಣಿಕ ನಿರ್ದೇಶಕರಾದ ಪುಪ್ಪರಾಜ್ ಬಿ., ಶಾಲಾ ಪ್ರಾಂಶುಪಾಲರಾದ ಸುರೇಶ ಹಾಗೂ ಶೈಕ್ಷಣಿಕ ಸಂಯೋಜಕರಾದ ಶ್ರೀಪ್ರಸಾದ್‌ರವರು ಉಪಸ್ಥಿತರಿದ್ದರು. ವಿಮಲಾ ಶೆಟ್ಟಿಯವರು ಕಾರ್ಯಕ್ರಮದ ನಿರೂಪಿಸಿ, ಪದ್ಮಾವತಿಯವರು ವಂದಿಸಿದರು.

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ರಜತ ಮಹೋತ್ಸವ ಉದ್ಘಾಟನೆ

Article Image

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ರಜತ ಮಹೋತ್ಸವ ಉದ್ಘಾಟನೆ

ಧರ್ಮಸ್ಥಳ: ಮಹಿಳೆಯರು ಬುದ್ಧಿವಂತರಾಗಿದ್ದು, ಸದಾ ಜಾಗೃತರಾಗಿರುತ್ತಾರೆ. ಅವರಲ್ಲಿ ಅದ್ಭುತ ಶಕ್ತಿ ಇದೆ. ಆದುದರಿಂದಲೇ ಇಂದು ಅವರು ತಮಗೆ ಸಿಗುವ ಎಲ್ಲಾ ಅವಕಾಶ, ಸೌಲಭ್ಯಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡುತ್ತಿದ್ದಾರೆ ಎಂದು ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಗುರುವಾರ ಅಮೃತವರ್ಷಿಣಿ ಸಭಾಭವನದಲ್ಲಿ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರಿಗೆ ಪುರುಷರಿಂದ ಆಶ್ರಯ ಬೇಕಾಗಿಲ್ಲ. ಸದಾ ಸಕಾಲಿಕ ಪ್ರೋತ್ಸಾಹ, ಪ್ರೇರಣೆ ಅಗತ್ಯವಾಗಿದೆ. ಕುಟುಂಬ ಮತ್ತು ಸಮಾಜದ ಸುಗಮ ನಿರ್ವಹಣೆಯಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಾರೆ. ಬಾಲ್ಯದಿಂದಲೆ ಮಕ್ಕಳನ್ನು ತಿದ್ದಿ, ತೀಡಿ ಉತ್ತಮ ಸಂಸ್ಕಾರ ನೀಡಿ ಆದರ್ಶ ವ್ಯಕ್ತಿತ್ವ ರೂಪಿಸುವುದು ಮಾತೆಯರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ. ಆದುದರಿಂದಲೆ ಧರ್ಮಸ್ಥಳದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡುವಾಗ ಪೋಷಕರಿಗೂ ತಜ್ಞರಿಂದ ಮಾಹಿತಿ, ಮಾರ್ಗದರ್ಶನ ನೀಡಲಾಗುತ್ತದೆ ಎಂದು ಹೆಗ್ಗಡೆಯವರು ಹೇಳಿದರು. ಎಲ್ಲಾ ಶಾಖೆಗಳ ಕಾರ್ಯನಿರ್ವಹಣೆಯನ್ನು ಏಕಸೂತ್ರದಲ್ಲಿ ಪೋಣಿಸಿ ಸಂದರ್ಭೋಚಿತವಾಗಿ ಮಾಹಿತಿ, ಮಾರ್ಗದರ್ಶನ ನೀಡುವುದು ಒಕ್ಕೂಟದ ಜವಾಬ್ದಾರಿಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸ್ವ-ಸಹಾಯ ಸಂಘಗಳಿಗೆ ಒಕ್ಕೂಟದ ನೇತೃತ್ವದಲ್ಲಿ ಸದಾ ಪ್ರೋತ್ಸಾಹ, ಮಾರ್ಗದರ್ಶನ ನೀಡಲಾಗುತ್ತದೆ ಎಂದರು. ಕಾಲಕ್ಕೆ ತಕ್ಕಂತೆ ಅವರವರ ಪ್ರಾಯಕ್ಕೆ ಅನುಗುಣವಾಗಿ ಮಾತೆಯರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಸಮಾಜದ ಮುಂದಿನ ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪಿಸಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಸಾಧನೆಯನ್ನು ಹೆಗ್ಗಡೆಯವರು ಶ್ಲಾಘಿಸಿ ಎಲ್ಲಾ ಪದಾಧಿಕಾರಿಗಳನ್ನು ಹಾಗೂ ಸದಸ್ಯರನ್ನು ಅಭಿನಂದಿಸಿದರು. ಹೇಮಾವತಿ ಹೆಗ್ಗಡೆಯವರು ಬರೆದ “ಗೆಳತಿ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಚಲನಚಿತ್ರ ನಟಿ ಪದ್ಮಜಾ ರಾವ್ ಮಾತನಾಡಿ ಧರ್ಮಸ್ಥಳದಲ್ಲಿ ತಮಗೆಲ್ಲ ದೊರೆತ ರಾಜಮರ್ಯಾದೆಯೊಂದಿಗೆ ಗೌರವಪೂರ್ವಕ ಆತಿಥ್ಯಕ್ಕೆ ಸಂತಸ ವ್ಯಕ್ತಪಡಿಸಿದರು. ಯಾವುದೇ ಕ್ಷೇತ್ರದಲ್ಲಿ ಮಹಿಳೆಯರು ಸ್ವಾವಲಂಬಿಗಳಾದರೆ ಧೈರ್ಯ ಮತ್ತು ಆತ್ಮವಿಶ್ವಾಸ ಮೂಡಿ ಬರುತ್ತದೆ. ಮಹಿಳಾ ಸಬಲೀಕರಣವೂ ಆಗುತ್ತದೆ ಎಂದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಸಂಚಿಕೆ ಬಿಡುಗಡೆಗೊಳಿಸಿದ ಮಕ್ಕಳ ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ ಮಾತನಾಡಿ, ದಾನ ಚಿಂತಾಮಣಿ ಅತ್ತಿಮಬ್ಬೆ, ಉಳ್ಳಾಲದ ರಾಣಿ ಅಬ್ಬಕ್ಕ, ಮೊದಲಾದವರು ಮಹಿಳೆಯರಿಗೆ ಪ್ರೇರಕ ಶಕ್ತಿಯಾಗಿದ್ದಾರೆ. ಮಹಿಳೆಯರು ಸದಾ ಮಾತನಾಡುವ ಮಾತೆಯರಾಗದೆ, ಚಿಂತೆಯನ್ನು ಬಿಟ್ಟು ಸದಾಚಿಂತನೆಯನ್ನು ಮಾಡುವ ಚಿಂತಾಮಣಿಗಳಾಗಬೇಕು. ಮಹಿಳೆಯರು ಸಮರ್ಪಣಾ ಮನೋಭಾವದಿಂದ ಆರೋಗ್ಯಪೂರ್ಣ, ಕುಟುಂಬ, ಸಮಾಜ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆ ನೀಡಬೇಕು. ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆ ಸಲ್ಲದು ಎಂದು ಅವರು ಕಿವಿಮಾತು ಹೇಳಿದರು. ಸಾಧಕರ ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ ಬೆಳಗಾವಿಯ ಸುಮನ್ ಪತ್ರಾವಳಿ, ಮೂಡಬಿದ್ರೆಯ ವೀಣಾ ಶೆಟ್ಟಿ, ಬೆಂಗಳೂರಿನ ಸುಶೀಮಾ ಯಶವಂತ್, ಛಾಯಾಚಿತ್ರಗ್ರಾಹಕಿ ಹುಣಸೂರಿನ ಛಾಯಾ ಸುನಿಲ್ ಮತ್ತು ಮೈಸೂರಿನ ಕುಮಾರಿ ಅನನ್ಯ ಜೈನ್ ಅವರನ್ನು ಗೌರವಿಸಲಾಯಿತು. ಅಧ್ಯಕ್ಷತೆ ವಹಿಸಿದ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಗೌರವಾಧ್ಯಕ್ಷರಾದ ಹೇಮಾವತಿ ಹೆಗ್ಗಡೆಯವರು ಮಾತನಾಡಿ, ಜೈನಧರ್ಮದಲ್ಲಿ ತ್ಯಾಗ, ಅಹಿಂಸೆ ಮತ್ತು ವಿರಕ್ತಿಗೆ ಪ್ರಾಶಸ್ತ್ಯವಿದೆ. ಮಹಿಳೆಯರು ಕುಟುಂಬದ ಮತ್ತು ಸಮಾಜದ ಅವಿಭಾಜ್ಯ ಅಂಗವಾಗಿದ್ದು ಬಿಂದುವಾಗಿ ಮಾತ್ರವಲ್ಲದೆ ಸಿಂಧುವಾಗಿಯೂ ಎಲ್ಲರೊಂದಿಗೂ ಮುಕ್ತವಾಗಿ ಬೆರೆತು ನಿರಂತರ ಪ್ರಗತಿಗೆ ಸಹಕರಿಸಬೇಕು. ಮಹಿಳೆಯರಿಗೆ ಮಂದಿರಗಳು ಪಾಠಶಾಲೆಯಾದರೆ, ಸಮಾಜ ಪ್ರಯೋಗ ಶಾಲೆಯಾಗಬೇಕು. ಮಹಿಳೆಯರ ತ್ಯಾಗ, ಸೇವೆ, ಪ್ರೀತಿ-ವಿಶ್ವಾಸಕ್ಕೆ, ಸಮಾಜಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ. ಸೇವೆಯಿಂದ ಸಿಗುವ ತೃಪ್ತಿ, ಸಂತೋಷ ಮತ್ತು ನೆಮ್ಮದಿಯೇ ಮಹಿಳೆಯರಿಗೆ ದೊರಕುವ ನಿಜವಾದ ಪ್ರಶಸ್ತಿ ಎಂದು ಅಭಿಪ್ರಾಯಪಟ್ಟರು. ಮಹಿಳೆಯರು ತಮ್ಮ ಮಕ್ಕಳನ್ನು ಉತ್ತಮ ಸಂಸ್ಕಾರವಂತರಾಗಿ ರೂಪಿಸಬೇಕು ಎಂದು ಅವರು ಹೇಳಿದರು. ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಪದ್ಮಿನಿ ಪದ್ಮರಾಜ್ ಸ್ವಾಗತಿಸಿದರು. ಜಯಶ್ರೀ ಧನ್ಯವಾದವಿತ್ತರು. ಕುಮುದಾ ನಾಗಭೂಷಣ್ ಕಾರ್ಯಕ್ರಮ ನಿರ್ವಹಿಸಿದರು.

”ಕ್ರೀವಾ-2024” ಸಾಂಸ್ಕೃತಿಕ ಕಾರ್ಯಕ್ರಮ

Article Image

”ಕ್ರೀವಾ-2024” ಸಾಂಸ್ಕೃತಿಕ ಕಾರ್ಯಕ್ರಮ

ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳಿಗೆ “ಕ್ರೀವಾ 2024”-“ವಸಂತ- ಹೊಸ ಹೆಜ್ಜೆ, ಹೊಸ ಆರಂಭ” ಎಂಬ ಧ್ಯೇಯೆಯೊಂದಿಗೆ ಮೇ 29ರಿಂದ ಜೂನ್ 1, 2024ವರೆಗೆ ನಾಲ್ಕು ದಿನಗಳ ಸಾಂಸ್ಕೃತಿಕ ಕಾರ್ಯಕ್ರವನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು "ಕ್ರೀವಾ 2024" ಕಲೆ, ಸಂಸ್ಕೃತಿ ಮತ್ತು ಸಂಗೀತಗಳನ್ನೊಳಗೊಂಡ ವಾರ್ಷಿಕ ಸಾಂಸ್ಕೃತಿಕ ವೇದಿಕೆಯಾಗಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಮತ್ತು ನರರೋಗ ವಿಭಾಗದ ಮುಖ್ಯಸ್ಥರಾದ ಡಾ. ಬಸವರಾಜ ಬಣಕಾರ ಮುಖ್ಯ ಅತಿಥಿಗಳಾಗಿದ್ದು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡುತ್ತಾ: ಪ್ರಕೃತಿಯ ಸಂರಕ್ಷಣೆಯು ಬಹಳ ಮುಖ್ಯವಾಗಿದೆ. ಪ್ರತಿಯೊಬ್ಬರೂ ಜೀವನದಲ್ಲಿ ಉತ್ತಮ ಗುರಿಯನ್ನು ಹೊಂದಬೇಕು ಮತ್ತು ಯಶಸ್ಸು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗುತ್ತದೆ. ನಾವು ಮಾಡುವ ಕೆಲಸವು ಉತ್ತಮ ಫಲಿತಾಂಶಗಳನ್ನು ನೀಡಿವುದರೊಂದಿಗೆ ಇತರರನ್ನು ತೃಪ್ತಿಪಡಿಸಬೇಕು. ನಿರಂತರ ಪರಿಶ್ರಮ ಮತ್ತು ಉತ್ತಮ ಅಭ್ಯಾಸದಿಂದ ಸಾಧನೆಗಳ ಶಿಖರವನ್ನೇರಬಹುದು. ನಾವು ವೃತ್ತಿ ಮತ್ತು ವೈಯಕ್ತಿಕ ಜೀವನವನ್ನು ಸಮತೋಲನದಿಂದ ಮುನ್ನಡೆಸಬೇಕು. ವಿಶಾಲ ಮನೋಭಾವನೆಯಿಂದ ವಿದ್ಯಾರ್ಥಿಗಳು ಅತ್ಯುತ್ತಮ ಸೇವೆಯನ್ನು ನೀಡಲು ಸಾಧ್ಯ. ನೈತಿಕತೆ ಮತ್ತು ಉದ್ದೇಶ ಶಿಕ್ಷಣದ ಪ್ರಮುಖ ಉದ್ದೇಶವಾಗಿರಬೇಕು. ಎಸ್. ಡಿ. ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಅವರು “ಕ್ರೀವಾ-2024” ಲಾಂಛನವನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಸಹ ಉಪಕುಲಪತಿಗಳಾದ ವಿ. ಜೀವಂಧರ ಕುಮಾರ, ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ, ಆಡಳಿತ ನಿರ್ದೇಶಕರಾದ ಸಾಕೇತ ಶೆಟ್ಟಿ, ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ ಪರಮಾರ ಉಪಸ್ಥಿತರಿದ್ದರು. ಡಾ. ಸಂಗೀತಾ ಅಪ್ಪಣ್ಣವರು ಅತಿಥಿಗಳನ್ನು ಸ್ವಾಗತಿಸಿದರು. ರಶ್ಮಿ ಭಟ್ ರವರು ಕ್ರೀವಾದ ಅವಲೋಕನ ನೀಡಿದರು. ಚಾಂದನಿ ಮತ್ತು ಅಂಕಿತ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಜ್ಯೋತಿ ಜೀವನ್‌ರವರು ವಂದನಾರ್ಪಣೆ ಸಲ್ಲಿಸಿದರು.

ಜೈನ ಬಸದಿಗಳ ಅಭಿವೃದ್ಧಿಗೆ ಇರುವ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿಯವರಿಗೆ ಮನವಿ

Article Image

ಜೈನ ಬಸದಿಗಳ ಅಭಿವೃದ್ಧಿಗೆ ಇರುವ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿಯವರಿಗೆ ಮನವಿ

ಬೆಳ್ತಂಗಡಿ; ಕರ್ನಾಟಕ ಸರಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಗೌರವಾನ್ವಿತ ಸಿದ್ದರಾಮಯ್ಯನವರನ್ನು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭೇಟಿ ಮಾಡಿ ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಇರುವ ಸಮಸ್ಯೆಗಳನ್ನು ಗಮನಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ನಾಭಿರಾಜ್ ಜೈನ್ ಬೆಂಗಳೂರು, ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ, ಸುದರ್ಶನ್ ಜೈನ್ ಬಂಟ್ವಾಳ, ವಿಜಯಕುಮಾರ್ ಕಾರ್ಯತ್ತಡ್ಕ, ಧನ ಕೀರ್ತಿ ಶೆಟ್ಟಿ ಧರ್ಮಸ್ಥಳ, ಶಶಿಕಿರಣ್ ಜೈನ್ ಬೆಳ್ತಂಗಡಿ, ಪಣಿರಾಜ್ ಜೈನ್ ಕೊಕ್ಕಡ, ಪ್ರಜ್ವಲ್ ಜೈನ್ ಅಳದoಗಡಿ ಮುಂತಾದವರಿದ್ದರು.

First Previous

Showing 1 of 4 pages

Next Last