Article Image

ಶಿಶಿಲ ವಾರ್ಷಿಕೋತ್ಸವ

Article Image

ಶಿಶಿಲ ವಾರ್ಷಿಕೋತ್ಸವ

ಬೆಳ್ತಂಗಡಿ: ತಾಲೂಕಿನ, ಶಿಶಿಲ, ಶ್ರೀ ಕ್ಷೇತ್ರ ಚಂದ್ರಪುರದಲ್ಲಿರುವ ಭ| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕೋತ್ಸವವು ಕಾರ್ಕಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮಾ. 11ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಪೂಜಾ ಕಾರ್ಯಕ್ರಮಗಳು: ತಾ. 11-03-2025ನೇ ಮಂಗಳವಾರ ಬೆಳಿಗ್ಗೆ 7.45ರ ಶುಭ ಲಗ್ನದಲ್ಲಿ ತೋರಣ ಮುಹೂರ್ತ ನಂತರ ವಿಮಾನ ಶುದ್ಧಿ ಪ್ರಾರಂಭ, ಬೆಳಿಗ್ಗೆ 9.19ರ ಶುಭ ಲಗ್ನದಲ್ಲಿ ಮುಖವಸ್ತ್ರ ಉದ್ಘಾಟನೆ, ಬೆಳಿಗ್ಗೆ 9.30ರಿಂದ ಶಾಂತಿ ಚಕ್ರ ಆರಾಧನೆ ಮತ್ತು ಪದ್ಮಾವತಿ ಆರಾಧನೆ, ಮಧ್ಯಾಹ್ನ 12ರಿಂದ 24 ಕಲಶ ಅಭಿಷೇಕ ಮಹೋತ್ಸವ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪಾದಪೂಜೆ, ಶ್ರೀ ಜಿನಗಂಧೋದಕ ವಿತರಣೆ. ವಿ.ಸೂ.: ಪೂಜ್ಯ ಸ್ವಾಮೀಜಿಯವರಿಂದ ಶ್ರೀಕ್ಷೇತ್ರ ಚಂದ್ರಪುರ-ಶಿಶಿಲದ ಸ್ಥಳ ಪರಿಚಯ ಪುಸ್ತಕ ಬಿಡುಗಡೆ

ವೇಣೂರು: ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ವೇಣೂರು: ವಾರ್ಷಿಕ ರಥಯಾತ್ರಾ ಮಹೋತ್ಸವ

ವೇಣೂರು: ದಿನಾಂಕ 14.03.2025ನೇ ಶುಕ್ರವಾರ ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವವು ಜರಗಲಿರುವುದು ಅದರ ಪೂರ್ವಭಾವಿಯಾಗಿ ದಿನಾಂಕ 11.03.2025ನೇ ಮಂಗಳವಾರ (ಇಂದು) ಸಾಯಂಕಾಲ ಗಂಟೆ 6.00ಕ್ಕೆ ತೋರಣ ಮುಹೂರ್ತ, ವಿಮಾನ ಶುದ್ಧಿ, ದ್ವಜಾರೋಹಣ, ಪಾದಾಭಿಷೇಕ ಜರಗಲಿರುವುದು. ವಿ.ಸೂ.: ದಿನಾಂಕ 13.03.2025ನೇ ಗುರುವಾರ ರಾತ್ರಿ ಗಂಟೆ 7.00ರಿಂದ ಶ್ರೀ ದೇವರ ಶ್ರೀ ವಿಹಾರ ನೆರವೇರಲಿದೆ.

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಥ್ರೋ ಬಾಲ್‌ ಪಂದ್ಯಾಟ

Article Image

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಥ್ರೋ ಬಾಲ್‌ ಪಂದ್ಯಾಟ

ಬೆಂಗಳೂರಿನ ಸುಹಾಸ್ತಿ ಜೈನ್‌ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09‌ ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಏ. 06ರಂದು ಥ್ರೋ ಬಾಲ್‌ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿದೆ. ತಂಡದ ದಾಖಲಾತಿ ಮತ್ತು ಕ್ರೀಡಾ ನಿಯಮಗಳು * ಪ್ರತಿ ತಂಡದಲ್ಲಿ ಏಳು ಜನ ಆಟಗಾರರನ್ನು ಮತ್ತು ಮೂರು ಜನ ಬದಅ ಆಟಗಾರರನ್ನು ಹೊಂದಿರಬೇಕು. * ತಂಡವನ್ನು ದಿನಾಂಕ 30 ಮಾರ್ಚ್ 2025 ರ ಒಳಗೆ ನೋಂದಣಿ ಮಾಡಿಕೊಳ್ಳಬೇಕು. * ಒಂದು ತಂಡಕ್ಕೆ ಪ್ರವೇಶ ಶುಲ್ಕ 1000/- ರೂ ಅಗಿರುತ್ತದೆ. * ಒಬ್ಬ ಆಟಗಾರರಿಗೆ ಒಂದು ತಂಡದಲ್ಲಿ ಮಾತ್ರ ಅಡಲು ಅವಕಾಶವಿರುತ್ತದೆ. * ವಿಜೇತ ತಂಡಗಳಿಗೆ ವಿಶೇಷ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ಏರುತ್ತದೆ. * ನಿರ್ಣಾಯಕರ ಮತ್ತು ಆಯೋಜಕರ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ. ಸ್ಥಳ : ಸೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜನಗರ, ಬೆಂಗಳೂರು, ಸಂಯೋಜಕರು: ಅರ್ಹನ್ ಜೈನ್, ತನುಜ ಜೈನ್, ಕವಿತ ಮಂಜಯ್ಯ ಜೈನ್, ವೃಷಭ್ ಜೈನ್ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: 9481252358, 9036109108

ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ಜರಗುವ ಆಯನ ಮತ್ತು ಸಿರಿಗಳ ಜಾತ್ರೆ

Article Image

ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ಜರಗುವ ಆಯನ ಮತ್ತು ಸಿರಿಗಳ ಜಾತ್ರೆ

ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ಜರಗುವ ಆಯನ ಮತ್ತು ಸಿರಿಗಳ ಜಾತ್ರೆಯು ಇಂದಿನಿಂದ ಪ್ರಾರಂಭಗೊಂಡು ದಿನಾಂಕ 13-03-2025ನೇ ಗುರುವಾರದವರೆಗೆ ಜರಗಲಿರುವುದು. ದಿನಾಂಕ 13-03-2025ನೇ ಗುರುವಾರ ರಾತ್ರಿ ಗಂಟೆ 9.00ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ಸಂಚಾರಿ ಚಿಕ್ಕಮೇಳದ ಸಹಯೋಗದೊಂದಿಗೆ ಊರ-ಪರವೂರ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ "ಕದಂಬ ಕೌಶಿಕ" ಎಂಬ ಕನ್ನಡ ಯಕ್ಷಗಾನ ಬಯಲಾಟ ಜರಗಲಿದೆ.

ವೇಣೂರು: ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ವೇಣೂರು: ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ

ವೇಣೂರು: ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವವು ದಿನಾಂಕ 11-03-2025 ಮಂಗಳವಾರದಿಂದ ಮೊದಲ್ಗೊಂಡು 15-03-2025ರ ಶನಿವಾರದವರೆಗೆ ಜರುಗಲಿದೆ. ದಿನಾಂಕ 14-03-2025ರ ಶುಕ್ರವಾರ ರಾತ್ರಿ ಗಂಟೆ 7-00ರಿಂದ ಭಗವಾನ್‌ ಶ್ರೀ ೧೦೦೮ ಬಾಹುಬಲಿ ಸ್ವಾಮಿ ಸನ್ನಿಧಿಯಲ್ಲಿ ರಥಯಾತ್ರಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಭಾರತಭೂಷಣ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಜರಗಲಿರುವುದು. ರಾತ್ರಿ ಗಂಟೆ 7-30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ: ಆಶೀರ್ವಚನ: ಪ. ಪೂ. ಭಾರತಭೂಷಣ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಶ್ರೀ ಜೈನ ಮಠ ಮೂಡುಬಿದಿರೆ ಅಧ್ಯಕ್ಷತೆ: ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ ಅರಮನೆ, ಉಪಾಧ್ಯಕ್ಷರು, ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ, ವೇಣೂರು ಮುಖ್ಯ ಅತಿಥಿಗಳು: ಕೆ. ಅಭಯಚಂದ್ರ ಜೈನ್‌, ಮಾಜಿ ಸಚಿವರು, ಕರ್ನಾಟಕ ಸರಕಾರ ಪ್ರತಿಭಾ ಪುರಸ್ಕಾರ: 2024ರ ಎಸ್.ಎಸ್.‌ಎಲ್‌.ಸಿ. ಮತ್ತು ಪಿ.ಯು.ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಅಭಿನಂದನೆ: 90 ವರ್ಷ ದಾಟಿದ ಹಿರಿಯ ಶ್ರಾವಕ/ಶ್ರಾವಕಿಯರಿಗೆ. ಯಾತ್ರಿ ನಿವಾಸದಲ್ಲಿ ನೂತನ ಶ್ರುತ ಭಂಡಾರ (ಸ್ವಾಧ್ಯಾಯ ಕೇಂದ್ರ) ಉದ್ಘಾಟನಾ ಸಮಾರಂಭ: ಸಂಜೆ ಗಂಟೆ 6-00ಕ್ಕೆ ಪಾವನ ಸಾನ್ನಿಧ್ಯ: ಪ. ಪೂ. ಭಾರತಭೂಷಣ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಶ್ರೀ ಜೈನ ಮಠ ಮೂಡುಬಿದಿರೆ ಉಪಸ್ಥಿತಿ: ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ ಅರಮನೆ ಉದ್ಘಾಟನೆ: ಕೆ. ಅಭಯಚಂದ್ರ ಜೈನ್‌, ಮಾಜಿ ಸಚಿವರು, ಕರ್ನಾಟಕ ಸರಕಾರ

ವೇಣೂರು: ಬಾಹುಬಲಿ ಬೆಟ್ಟದ ರಥೋತ್ಸವದಂದು ವಿದ್ಯಾರ್ಥಿವೇತನ

Article Image

ವೇಣೂರು: ಬಾಹುಬಲಿ ಬೆಟ್ಟದ ರಥೋತ್ಸವದಂದು ವಿದ್ಯಾರ್ಥಿವೇತನ

ವೇಣೂರು: ಬೆಳ್ತಂಗಡಿ ತಾಲೂಕು, ವೇಣೂರು ಭ| ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವವು ಮಾ.14ರಂದು ಜರಗಲಿರುವುದು. ಅಂದು ರಾತ್ರಿ 7.30ರಿಂದ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ.ಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಜೈನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ, ದಿ| ಡಾ| ಪಿ. ಅಂತಪ್ಪ ಆಳ್ವ ರವರ ಸ್ಮರಣಾರ್ಥ ಪತ್ನಿ ಮತ್ತು ಮಕ್ಕಳು ಪಂಜಾಲಬೈಲು ವೇಣೂರು ಹಾಗೂ ಬಡಕೋಡಿ ಹೊಸಮನೆ ದಿ| ಪಿ. ಆದಿರಾಜ ಶೆಟ್ಟಿ ಹಾಗೂ ಶ್ರೀಮತಿ ದಿ| ಶಾರದಾದೇವಿಯವರ ಸ್ಮರಣಾರ್ಥ ಮಕ್ಕಳಿಂದ ಹಾಗೂ ಮಾರಗುತ್ತು ದಿ|ವಿಜಯರಾಜ ಅಧಿಕಾರಿಯವರ ಸ್ಮರಣಾರ್ಥ ಪತ್ನಿ ರಾಜೇಶ್ವರಿ ವಿ.ಅಧಿಕಾರಿ ಹಾಗೂ ಶ್ರೀ ಅಕ್ಷಯ ಕುಮಾರ್ ಕಂಬಳಿ ಮತ್ತು ಮಕ್ಕಳು ಜಿನಪದ ಬೆಳಾಲುರಸ್ತೆ ಉಜಿರೆ ಇವರಿಂದ ವಿದ್ಯಾರ್ಥಿ ವೇತನ ನೀಡಲಾಗುವುದು. ಅರ್ಹ ಪ್ರತಿಭಾವಂತ ಜೈನ ವಿದ್ಯಾರ್ಥಿಗಳು 2024ನೇ ಸಾಲಿನ ಪಿ.ಯು.ಸಿ. ಹಾಗೂ ಎಸ್.ಎಸ್.ಎಲ್.ಸಿ. ಅಂಕಪಟ್ಟಿಯ ಜೆರಾಕ್ಸ್‌ ನೊಂದಿಗೆ ಅರ್ಜಿಯನ್ನು ಕಾರ್ಯದರ್ಶಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ಯಾತ್ರಿ ನಿವಾಸ ಶ್ರೀ ಮಹಾವೀರ ನಗರ ವೇಣೂರು-574242 ಇವರಿಗೆ ಕಳುಹಿಸಿಕೊಡುವಂತೆ ವಿನಂತಿಸಲಾಗಿದೆ. ಅರ್ಜಿದಾರರು ಸರಿಯಾದ ವಿಳಾಸ ಹಾಗೂ ಮೊಬೈಲ್ ನಂಬರ್ ನಮೂದಿಸಬೇಕು. ಮಾರ್ಚ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಛೇರಿ ಮೊಬೈಲ್ ನಂ: 9606356288

ಸವಣಾಲು: ಧಾಮ ಸಂಪ್ರೋಕ್ಷಣ ವೈಭವ

Article Image

ಸವಣಾಲು: ಧಾಮ ಸಂಪ್ರೋಕ್ಷಣ ವೈಭವ

ಉಜಿರೆ: ಆಧ್ಯಾತ್ಮವೇ ಭಾರತದ ಆತ್ಮವಾಗಿದ್ದು ಪರಿಶುದ್ಧ ಶ್ರದ್ಧಾ-ಭಕ್ತಿಯಿಂದ ದೇವರ ಸೇವೆ ಮಾಡಿದಾಗ ಸರ್ವಶಕ್ತನಾದ ಭಗವಂತನು ನಮ್ಮ ಎಲ್ಲಾ ಕಷ್ಟಗಳನ್ನು ಪರಿಹರಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಹೇಳಿದರು. ಅವರು ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಆದಿನಾಥಸ್ವಾಮಿ ಬಸದಿಯಲ್ಲಿ ಭಾನುವಾರ ಧಾಮ ಸಂಪ್ರೋಕ್ಷಣ ಸಂದರ್ಭದಲ್ಲಿ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಎಲ್ಲರಲ್ಲಿಯೂ ದೇವರನ್ನು ಕಂಡು ಗೌರವಿಸುವ ಸಂಸ್ಕೃತಿ ನಮ್ಮದಾಗಿದೆ. ನಂಬಿಕೆಗಿಂತಲೂ ಜಿಜ್ಞಾಸೆ ಹಾಗೂ ಅನ್ವೇಷಣಾ ಪ್ರವೃತ್ತಿಯಿಂದಾಗಿ ಕಷ್ಟ ಬಂದಾಗ ಆರ್ತರಾಗಿ ಪರಿಹಾರಕ್ಕಾಗಿ ನಾವು ದೇವರ ಭಕ್ತಿ ಮಾಡುತ್ತೇವೆ. ದೇವರ ಅನುಗ್ರಹದಿಂದ ನಮ್ಮ ಇಷ್ಟಾರ್ಥಗಳು ಈಡೇರುತ್ತವೆ. ಕರ್ಮ ಸಿದ್ಧಾಂತವನ್ನು ನಂಬುವ ನಾವು ತಾಳ್ಮೆಯಿಂದ ಧರ್ಮದ ಮರ್ಮವನ್ನರಿತು ಆಚರಿಸಿದಾಗ ಜೀವನ ಪಾವನವಾಗುತ್ತದೆ. ನಮ್ಮ ಹಿರಿಯರು, ಸಾಧು-ಸಂತರು ಇದನ್ನು ಸಾಧಿಸಿ ತೋರಿಸಿದ್ದಾರೆ ಎಂದು ಹೇಳಿದ ಅವರು ಜೈನರ ತ್ಯಾಗ, ಅಹಿಂಸೆ, ಅಪರಿಗ್ರಹ ಮೊದಲಾದ ತತ್ವ-ಸಿದ್ಧಾಂತಗಳಿಂದ ಶಾಂತಿ-ಸಾಮರಸ್ಯದ ಬದುಕು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಪಡುಬಿದ್ರೆ ಬೀಡು ರತ್ನಾಕರ ರಾಜ್ ಅರಸು, ರಕ್ಷಿತ್ ಶಿವರಾಂ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಶುಭಾಶಂಸನೆ ಮಾಡಿದರು. ವಿಶಿಷ್ಠ ಸೇವೆ-ಸಾಧನೆ ಮಾಡಿದ ವೇಣೂರಿನ ಪ್ರವೀಣಕುಮಾರ್ ಇಂದ್ರ ಮತ್ತು ಉಜಿರೆಯ ಸುರೇಶ್‌ಕುಮಾರ್ ಅವರನ್ನು ಗೌರವಿಸಲಾಯಿತು. ಪ್ರತಿಷ್ಠಾಚಾರ್ಯರಾದ ಬೆಳ್ತಂಗಡಿಯ ಕೆ. ಜಯರಾಜ ಇಂದ್ರ, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಬಿ. ರಾಜಶೇಖರ ಅಜ್ರಿ, ಬಸದಿ ಸಮಿತಿಯ ಕೋಶಾಧಿಕಾರಿ ಚಾಮರಾಜ ಸೇಮಿತ, ವೃಷಭರಾಜ ಇಂದ್ರ ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ ಮಾತನಾಡಿ, ಸ್ವಧರ್ಮದಲ್ಲಿ ಜೀವಿಸಿ, ಪರಧರ್ಮವನ್ನು ಪ್ರೀತಿಸುವ ಜೈನರು ಗುಣಗಳ ಆರಾಧಕರಾಗಿದ್ದು ಸರ್ವಧರ್ಮೀಯರೊಂದಿಗೂ ಶಾಂತಿ-ಸಾಮರಸ್ಯದ ಜೀವನ ನಡೆಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಬಸದಿಯ ಸೇವೆಯಲ್ಲಿ ಜನರ ಶ್ರದ್ಧಾ-ಭಕ್ತಿಯ ಪರಿಶ್ರಮವನ್ನು ಶ್ಲಾಘಿಸಿ, ಅಭಿನಂದಿಸಿದರು. ಕಿಶೋರ್‌ಹೆಗ್ಡೆ ಎರ್ಮೆತ್ತೋಡಿಗುತ್ತು ಸ್ವಾಗತಿಸಿದರು. ಮುಂಡೂರುಗುತ್ತು ಆಕರ್ಷ್ ಜೈನ್ ಧನ್ಯವಾದವಿತ್ತರು. ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರ್ವಹಿಸಿದರು. ಧಾರ್ಮಿಕ ವಿಧಿ-ವಿಧಾನಗಳು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಹಾಗೂ ಕುಟುಂಬಸ್ಥರು ಭಾನುವಾರದ ಪೂಜೆಯ ಸೇವಾಕರ್ತೃಗಳಾಗಿ ಪುಣ್ಯಭಾಗಿಗಳಾದರು. ಭಗವಾನ್ ಆದಿನಾಥ ಸ್ವಾಮಿಯ ಪ್ರತಿಷ್ಠೆ, ಶಿಖರಾರೋಹಣ, ಭಕ್ತಾಮರ ಆರಾಧನೆ, ೧೦೮ ಕಲಶ ಅಭಿಷೇಕದ ಬಳಿಕ ಮಹಾಪೂಜೆ ನಡೆಯಿತು. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ನಿರೀಕ್ಷಾ ಜೈನ್ ಹೊಸ್ಮಾರು ಇವರು ಸುಶ್ರಾವ್ಯ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.

ಬೆಂಗಳೂರಿನ ಕುಬೇರ ಜೈನ್ ಮಿಲನ್ ನ 180ನೇ ವಾರ್ಷಿಕ ಸಭೆ

Article Image

ಬೆಂಗಳೂರಿನ ಕುಬೇರ ಜೈನ್ ಮಿಲನ್ ನ 180ನೇ ವಾರ್ಷಿಕ ಸಭೆ

ಇಂದಿನ ಜಾಗತೀಕರಣ ಹಾಗೂ ಉಧಾರಿಕರಣದ ಕಾಲಘಟ್ಟದಲ್ಲಿ ಸಂಸ್ಕೃತಿ, ಸಂಸ್ಕಾರ, ಶಾಂತಿ ಮತ್ತು ಅಹಿಂಸೆಗಳ ಸಂರಕ್ಷಣೆಯ ಹಿನ್ನೆಲೆಯಲ್ಲಿ ಕಾಲಕ್ಕೆ ತಕ್ಕಂತೆ ನಾವು ಬದಲಾವಣೆ ಕಾಣುವುದು ಅಗತ್ಯವಾಗಿದೆ ಎಂದು ಧಾರವಾಡದ ಎಸ್‌.ಡಿ.ಎಂ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ನಿರಂಜನ್ ಕುಮಾರ್ ತಿಳಿಸಿದರು. ಅವರು ಆಂಧ್ರ ಪ್ರದೇಶದ ಸತ್ಯ ಸಾಯಿ ಜಿಲ್ಲೆ, ಪೆನುಗೊಂಡೇ ಪಟ್ಟಣದ ಶ್ರೀ ಅಜಿತನಾಥ ತೀರ್ಥಂಕರ ಬಸದಿ ಆವರಣದಲ್ಲಿ ನಡೆದ ಬೆಂಗಳೂರಿನ ಕುಬೇರ ಜೈನ್ ಮಿಲನ್ ನ 180ನೇ ವಾರ್ಷಿಕ ಸಭೆಯಲ್ಲಿ ಮಾತನಾಡಿದರು. ಶ್ರೀ ಧರ್ಮಸ್ಥಳ ಧರ್ಮೊತ್ತನ ಟ್ರಸ್ಟ ನಿಂದ ಶ್ರೀ ಅಜಿತನಾಥ ಬಸದಿ ಜೀರ್ಣೋದ್ಧಾರಗೊoಡು ಹೊಸ ರೂಪ ಕಂಡಿದೆ, ಜೈನ ಧರ್ಮ ಚಿಕ್ಕ ಧರ್ಮವಾದರೂ ಸುರಕ್ಷಿತ ಹಾಗೂ ವಿಶಿಷ್ಟ ಧರ್ಮವಾಗಿದೆ, ನಮ್ಮ ಧರ್ಮ ಶ್ರಮಣ ಪರಂಪರೆ ಹೊಂದಿದೆ, ಇತ್ತೀಚಿನ ದಿನಗಳಲ್ಲಿ ವಿಶ್ವದಲ್ಲಿ ಅಶಾಂತಿ, ಹಿಂಸೆ, ರಕ್ತಪಾತ, ತಾಂಡವ ಮಾಡುತ್ತಿದ್ದು ಯುದ್ಧದ ಕಾರ್ಮೋಡ ಕವಿದಿದೆ. ಬದಲಾವಣೆ ಇಂದು ಅಗತ್ಯವಾಗಿದ್ದು ಇವಕ್ಕೆಲ್ಲ ಶಾಂತಿ ಮತ್ತು ಅಹಿಂಸೆಗೆ ಪೂರಕವಾಗಿರುವ ಜೈನ ಧರ್ಮದ ಸಿದ್ಧಾಂತಗಳು ಅಗತ್ಯ ಎಂದರು. ಯಾವುದೇ ಕಾರ್ಯಕ್ಕೆ ನಾವು ಹೊಂದಿಕೊಳ್ಳುವ ಭಾವನೆ, ಭೂಮಿಯ ಮೇಲೆ ಬದುಕುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು. ಡಾ ಪದ್ಮಲತ ನಿರಂಜನ್ ಮಾತನಾಡಿ ಎಲ್ಲರಿಗೂ ಪ್ರೀತಿಸುವ ಶಕ್ತಿ ನೀಡಲಿ ಎಂದು ಹಾರೈಸಿ ಭಕ್ತಿಗೀತೆ ಹಾಡಿದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೇ ಪದ್ಮಿನಿ ಪದ್ಮರಾಜ್ ಮಾತನಾಡಿ ಭಾರತೀಯ ಜೈನ ಮಿಲನ್ ಹಾಗೂ ಜೈನ ಮಹಿಳಾ ಒಕ್ಕೂಟಗಳು ಧರ್ಮಸ್ಥಳದ ಧರ್ಮಕಾರ್ಯಗಳು ಪ್ರಶಂಸನಿಯ, ಧರ್ಮ ಸಂಸ್ಕಾರ ಕಾರ್ಯಗಳನ್ನು ಅಳವಡಿಸಿಕೊಳ್ಳುವಂತೆ ಸಮಾಜ ಬಂದುಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಅಮರಾಪುರ ಜೈನ ಸಮಾಜದ ಅಧ್ಯಕ್ಷ ಪದ್ಮರಾಜ್, ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷ ಕೆ. ಜೆ. ಎ. ಮಂಜುನಾಥ್ ಯುವರಾಜ್, ನಾಗಕುಮಾರ್ ಸಂಜು, ಮಂಜು, ಅಮರಾಪುರ ಚಂದ್ರಿಕೀರ್ತಿ, ಅಮರಾಪುರ ಅನಿಲ್, ಬೆಂಗಳೂರಿನ ಕುಬೇರ ಜೈನ್ ಮಿಲನ್ ಅಧ್ಯಕ್ಷರು, ಪದಾಧಿಕಾರಿಗಳು, ಅಮರಾಪುರ, ಪೆನಗೊಂಡೆ, ಜೈನ್ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಜೈನ ಸಮಾಜದ ಮುಖಂಡರುಗಳು, ವಿವಿಧ ಮಹಿಳಾ ಸಮಾಜದ ಮುಖಂಡರುಗಳು ಭಾಗವಹಿಸಿದ್ದರು. ಇಸ್ರೋ ಅಜಿತ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಪುರೋಹಿತ್ ಕೋಮಲ್ ಕುಮಾರ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಜೆ ರಂಗನಾಥ- ತುಮಕೂರು

ವೇಣೂರು: ಮುನಿಮಹಾರಾಜರ ಪುರಪ್ರವೇಶ

Article Image

ವೇಣೂರು: ಮುನಿಮಹಾರಾಜರ ಪುರಪ್ರವೇಶ

ಪರಮ ಪೂಜ್ಯ ವಾತ್ಸಲ್ಯಮೂರ್ತಿ ಗಣಾಧರ ಆಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಸತ್ಗಂಗ ಸಮೇತರಾಗಿ ವೇಣೂರು ಶ್ರೀ ಬಾಹುಬಲಿ ಕ್ಷೇತ್ರಕ್ಕೆ ಇಂದು ಬೆಳಿಗ್ಗೆ 8.00ಗಂಟೆಗೆ ಪುರಪ್ರವೇಶ ಗೈದಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು, ಕಾರ್ಯದರ್ಶಿಗಳಾದ ವಿ. ಪ್ರವೀಣ್‌ ಕುಮಾರ್‌ ಇಂದ್ರ, ಕೋಶಾಧಿಕಾರಿಗಳಾದ ಜಯರಾಜ್‌ ಕಂಬಳಿ ಮತ್ತು ಸಮಿತಿಯ ಎಲ್ಲಾ ಸದಸ್ಯರು ಹಾಗೂ ಸಮಸ್ತ ಶ್ರಾವಕ-ಶ್ರಾವಕಿಯರು ಪಾಲ್ಗೊಂಡಿದ್ದರು. ಮುನಿಮಹಾರಾಜರುಗಳು ಇಂದು ಸಂಜೆ 4.00ಗಂಟೆಗೆ ವೇಣೂರಿನಿಂದ ಪೆರಿಂಜೆ ಬಸದಿಗೆ ವಿಹಾರ ಹೊರಡಲಿದ್ದಾರೆ.

ಸವಣಾಲು: ಧಾಮ ಸಂಪ್ರೋಕ್ಷಣ ಮಹೋತ್ಸವ

Article Image

ಸವಣಾಲು: ಧಾಮ ಸಂಪ್ರೋಕ್ಷಣ ಮಹೋತ್ಸವ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಆದಿನಾಥಸ್ವಾಮಿ ಬಸದಿಯು ಜೀಣೋದ್ಧಾರಗೊಂಡಿದ್ದು ಶುಕ್ರವಾರ ಬೆಳಿಗ್ಗೆ ಇಂದ್ರಪ್ರತಿಷ್ಠೆ ಹಾಗೂ ತೋರಣ ಮುಹೂರ್ತದೊಂದಿಗೆ ಧಾಮಸಂಪ್ರೋಕ್ಷಣೆಯ ವಿಧಿ-ವಿಧಾನಗಳು ಶುಭಾರಂಭಗೊಂಡವು. ಪ್ರತಿಷ್ಠಾಚಾರ್ಯರಾದ ಬೆಳ್ತಂಗಡಿಯ ಜಯರಾಜ ಇಂದ್ರರು ಇಂದ್ರಪ್ರತಿಷ್ಠೆಯ ವಿಧಿ-ವಿಧಾನಗಳ ಮಹತ್ವವನ್ನು ವಿವರಿಸಿದರು. ಶುಕ್ರವಾರದಿಂದ ಮೂರು ದಿನಗಳಲ್ಲಿ ನಡೆಯುವ ಪೂಜಾಕಾರ್ಯಕ್ರಮಗಳಲ್ಲಿ ಪುರೋಹಿತರು, ಸೇವಾಕರ್ತರು ಹಾಗೂ ಶ್ರಾವಕರು ಮತ್ತು ಶ್ರಾವಕಿಯರು ಮನ, ವಚನ, ಕಾಯದಿಂದ ತ್ರಿಕರಣಪೂರ್ವಕವಾಗಿ ಪರಿಶುದ್ಧರಾಗಿದ್ದು ಶ್ರದ್ಧಾ-ಭಕ್ತಿಯಿಂದ, ವೃತ-ನಿಯಮಗಳ ಪಾಲನೆಯೊಂದಿಗೆ ಭಾಗವಹಿಸಿ ಪುಣ್ಯ ಸಂಚಯ ಮಾಡಿಕೊಳ್ಳಬೇಕು ಎಂದು ಹೇಳಿದರು. ಪ್ರತಿಷ್ಠಾಚಾರ್ಯರುಗಳಾದ ಜಯರಾಜಇಂದ್ರರು ಮತ್ತು ಪುಷ್ಪರಾಜಇಂದ್ರರು, ಸ್ಥಳ ಪುರೋಹಿತರುಗಳಾದ ವೃಷಭರಾಜಇಂದ್ರರ ನೇತೃತ್ವದಲ್ಲಿ ಸಹಪುರೋಹಿತರ ಸಹಭಾಗಿತ್ವದೊಂದಿಗೆ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ವಿಮಾನಶುದ್ಧಿ, ಮುಖವಸ್ತ್ರ ಉದ್ಘಾಟನೆ, ನಾಂದಿಮಂಗಲ ಪೂಜಾವಿಧಾನ, ಕ್ಷೇತ್ರಪಾಲ ಪ್ರತಿಷ್ಠೆ, ನಾಗಪ್ರತಿಷ್ಠೆ ಹಾಗೂ ಭಗವಾನ್ ಆದಿನಾಥಸ್ವಾಮಿಗೆ ೨೪ ಕಲಶ ಅಭಿಷೇಕ ಹಾಗೂ ಮಹಾಪೂಜೆ ನಡೆಯಿತು. ಕಿಶೋರ್ ಹೆಗ್ಡೆ, ಎರ್ಮೆತ್ತೋಡಿಗುತ್ತು , ಉಜಿರೆಯ ಸುರೇಶ್ ಕುಮಾರ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಇಂದು ಶನಿವಾರ ವಾಸ್ತುಪೂಜಾ ವಿಧಾನ, ನವಗ್ರಹಶಾಂತಿ, ಪದ್ಮಾವತಿದೇವಿಗೆ ರಜತಕವಚ ಸಮರ್ಪಣೆ, ಲಕ್ಷ ಹೂವಿನಪೂಜೆ, ಭಗವಾನ್ ಆದಿನಾಥಸ್ವಾಮಿಗೆ ೫೪ ಕಲಶ ಅಭಿಷೇಕ ಮತ್ತು ಮಹಾಪೂಜೆ ನಡೆಯುತ್ತದೆ. ನಾಳೆ, ಭಾನುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬಸ್ಥರು ಸೇವಾಕರ್ತೃಗಳಾಗಿದ್ದು ಭಗವಾನ್ ಆದಿನಾಥ ಸ್ವಾಮಿ ಪ್ರತಿಷ್ಠೆ ಹಾಗೂ ೧೦೮ ಕಲಶ ಅಭಿಷೇಕ, ಶಿಖರಾರೋಹಣ, ಭಕ್ತಾಮರ ಆರಾಧನೆ, ಮಹಾಪೂಜೆ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ. ಧಾರ್ಮಿಕ ಸಭೆ: ಸಂಜೆ 5 ಗಂಟೆಗೆ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕಸಭೆಯಲ್ಲಿ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ. ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ. ಹರೀಶ್ ಕುಮಾರ್, ರಕ್ಷಿತ್‌ಶಿವರಾಂ, ಸುಮಂತ್ ಕುಮಾರ್, ಸಂದೀಪ್ ಜೈನ್, ಪ್ರವೀಣ ಕುಮಾರ್ ಇಂದ್ರ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಮೂಡುಬಿದಿರೆ: ಪ್ರಥಮ ವಾರ್ಷಿಕೋತ್ಸವ

Article Image

ಮೂಡುಬಿದಿರೆ: ಪ್ರಥಮ ವಾರ್ಷಿಕೋತ್ಸವ

ಮೂಡಬಿದಿರೆ: ಸಂಪೂರ್ಣ ಜೀರ್ಣೋದ್ಧಾರಗೊಂಡ ಶ್ರೀ ಶಾಂತಿನಾತ ಸ್ವಾಮಿ ಬಸದಿ, ಹಿರೇ ಅಮ್ಮನವರ ಬಸದಿ ಹಾಗೂ ಮೇಗಿನ ನೆಲೆಯ ಚತುರ್ವಿಂಶತಿ ತೀರ್ಥಂಕರರ ಬಸದಿ, ದ್ವಜಾಸ್ತಂಭ ಮತ್ತು ಚಂದ್ರಶಾಲೆ ಇದರ ಧಾಮ ಸಂಪ್ರೋಕ್ಷಣೆ ಹಾಗೂ ಪ್ರತಿಷ್ಠಾ ಮಹೋತ್ಸವವು ತಾ. 10.02.2024 ರಿಂದ 16.02.2024ರ ಪರ್ಯಂತ ವೈಭವಯುತವಾಗಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಂಡ ಮಹೋತ್ಸವದ ಪ್ರಥಮ ವಾರ್ಷಿಕೋತ್ಸವವು ಮೂಡಬಿದಿರೆ ಶ್ರೀ ಜೈನ ಮಠದ ಪ. ಪೂ. ಭಾರತ ಭೂಷಣ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ನಾಳೆ (ಫೆ. 26) ಧಾಮ‍್ಕ ವಿಧಿವಿಧಾನಗಳೊಂದಿಗೆ ಜರಗಲಿರುವುದು.

ಬೆಳ್ತಂಗಡಿ: ವಾರ್ಷಿಕ ಸಮಾರಂಭ

Article Image

ಬೆಳ್ತಂಗಡಿ: ವಾರ್ಷಿಕ ಸಮಾರಂಭ

ಶ್ರೀ ಅತಿಶಯ ಕ್ಷೇತ್ರ ಪರುಷಗುಡ್ಡೆ ಬಸದಿಯ 1008 ಭ|| ಶ್ರೀ ಪಾಶ್ವ೯ನಾಥ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವದ ಹಾಗೂ ಶ್ರೀ ಪದ್ಮಾವತೀ ಅಮ್ಮನವರ ಬಿಂಬ ಪ್ರತಿಷ್ಠಾ ಮಹೋತ್ಸವದ ವಾರ್ಷಿಕೋತ್ಸವ ಸಮಾರಂಭವು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ ಭಾರತಭೂಷಣ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮಾರ್ಗದರ್ಶನ ಮತ್ತು ಆಶೀರ್ವಾದಗಳೊಂದಿಗೆ ಜರಗಲಿರುವುದು ಹಾಗೂ ಬೆಳಿಗ್ಗೆ 10.00ಗಂಟೆಗೆ ಚತುರ್ವಿಂಶತಿ ತೀರ್ಥಂಕರರ ಚರಣ ಕೂಟಗಳ ದರ್ಶನದ ದಾರಿಯನ್ನು ಲೋಕಾರ್ಪಣೆ ಮಾಡಲಿರುವರು ಹಾಗೂ ಶಾಸಕರ ಅನುದಾನದಿಂದ ಬಸದಿಗೆ ಪ್ರವೇಶಿಸುವ ಕಾಂಕ್ರೀಟ್ ರಸ್ತೆಯ ಲೋಕಾರ್ಪಣೆಯನ್ನು ಶಾಸಕರಾದ ಹರೀಶ್ ಪೂಂಜಾರವರು ನೆರವೇರಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

ನಲ್ಲೂರು ಜಗತ್ಪಾಲ ಕಡಂಬರಿಗೆ ಸನ್ಮಾನ

Article Image

ನಲ್ಲೂರು ಜಗತ್ಪಾಲ ಕಡಂಬರಿಗೆ ಸನ್ಮಾನ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ 'ಹಿರಿಯ ರೆಡೆಗೆ ಸಾಹಿತ್ಯ ನಡಿಗೆ' ಕಾರ್ಯಕ್ರಮದಲ್ಲಿ ಬಜಗೋಳಿ ನಲ್ಲೂರು ಜಗತ್ಪಾಲ ಕಡಂಬರಿಗೆ ಕನ್ನಡ ನಾಡು ನುಡಿಗೆ ಸಲ್ಲಿಸಿದ ಸೇವೆಗಾಗಿ ನಲ್ಲೂರು ಗುಣಲಲಿತ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಕಳ ತಾಲೂಕು ಸಮ್ಮೇಳನದ ಸಭಾಧ್ಯಕ್ಷರಾದ ಕೆ ಗುಣಪಾಲ ಕಡಂಬ, ಕ.ಸಾ.ಪ. ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಉದ್ಯಮಿ ಬಜಗೋಳಿ ಡಾ ರವೀಂದ್ರ ಶೆಟ್ಟಿ, ನಿತ್ಯಾನಂದ ಪೈ, ಹಿರಿಯ ಸಾಹಿತಿ ಉಪೇಂದ್ರ ಸೋಮಯಾಜಿ, ರೂಪ ರವೀಂದ್ರ ಶೆಟ್ಟಿ, ನಲ್ಲೂರು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ನಾಗೇಶ್, ದೇವದಾಸ ಕೆರೆಮನೆ ಮತ್ತಿತರರು ಈ ಸಂದರ್ಭದಲ್ಲಿದ್ದರು.

ವರಂಗ: ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ವರಂಗ: ವಾರ್ಷಿಕ ರಥಯಾತ್ರಾ ಮಹೋತ್ಸವ

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ವರಂಗದಲ್ಲಿರುವ ಭಗವಾನ್ ಶ್ರೀ 1008 ನೇಮಿನಾಥ ಸ್ವಾಮಿ ಬಸದಿಯ ವಾರ್ಷಿಕ ರಥಯಾತ್ರಾ ಮಹೋತ್ಸವವು ಪರಮ ಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ ಮತ್ತು ಪಾವನ ಸಾನ್ನಿಧ್ಯದಲ್ಲಿ ನಾಳೆ (ಫೆ.13) ಯಿಂದ ಪ್ರಾರಂಭಗೊಂಡು ಫೆ.17ರವರೆಗೆ ನೆರವೇರಲಿದೆ.

ಪಾಣೆಮಂಗಳೂರು: 72ನೇ ವಾರ್ಷಿಕೋತ್ಸವ

Article Image

ಪಾಣೆಮಂಗಳೂರು: 72ನೇ ವಾರ್ಷಿಕೋತ್ಸವ

ಶ್ರೀ ಕ್ಷೇತ್ರ ಪಾಣೇರ್ ಭ|| 1008 ಶ್ರೀ ಅನಂತನಾಥ ತೀರ್ಥಂಕರ ಜಿನ ಚೈತ್ಯಾಲಯದ 72ನೇ ವಾರ್ಷಿಕೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಡಾ|| ಭಾರತ ಭೂಷಣ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ ಹಾಗೂ ಶುಭಾಶೀರ್ವಾದಗಳೊಂದಿಗೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಸಹಕಾರದೊಂದಿಗೆ ದಿನಾಂಕ 14-02-2025ನೇ ಶುಕ್ರವಾರದಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಾರ್ಷಿಕ ಮಹೋತ್ಸವ

Article Image

ವಾರ್ಷಿಕ ಮಹೋತ್ಸವ

ಬೆಳ್ತಂಗಡಿ ತಾಲೂಕಿನ ಪೆರಿಂಜೆಯಲ್ಲಿರುವ ಶ್ರೀ ಪುಷ್ಪದಂತ ಸ್ವಾಮಿ ಬಸದಿಯ ವಾರ್ಷಿಕ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನಮಠದ ಪ. ಪೂ. ಭಾರತಭೂಷಣ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಜಿಯವರ ದಿವ್ಯ ಸಾನ್ನಿಧ್ಯದಲ್ಲಿ ತೋರಣ ಮುಹೂರ್ತ, ವಿಮಾನಶುದ್ಧಿ, ನವಗ್ರಹ ಶಾಂತಿ 24 ಕಲಶ ಅಭಿಷೇಕ ಹಾಗೂ ಮಹೋತ್ಸವದೊಂದಿಗೆ ಫೆ. 14ರಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಾರ್ಷಿಕೋತ್ಸವ ಕಾರ್ಯಕ್ರಮ

Article Image

ವಾರ್ಷಿಕೋತ್ಸವ ಕಾರ್ಯಕ್ರಮ

ಕಾರ್ಕಳ: ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಮತ್ತು ಸಮಾಜ ಬಾಂಧವರ ಸಹಕಾರದೊಂದಿಗೆ ನಿರ್ಮಾಣಗೊಂಡ ಶ್ರೀ ಜೈನ ಮಠದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಕಾರ್ಯಕ್ರಮವು ನಾಳೆ(ಜ.26) ಜರುಗಲಿದೆ. ನರಸಿಂಹರಾಜಪುರ, ಶ್ರೀ ಸಿಂಹನಗದ್ದೆ ಬಸ್ತಿಮಠದ ಪ.ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

ವಾರ್ಷಿಕ ಪೂಜಾ ಮಹೋತ್ಸವ ಮತ್ತು ಕಲಿಕುಂಡ ಯಂತ್ರಾರಾಧನೆ, ಅಷ್ಟಾವಧಾನ ಪೂಜೆ ಹಾಗೂ ಧಾರ್ಮಿಕ ಪ್ರವಚನ

Article Image

ವಾರ್ಷಿಕ ಪೂಜಾ ಮಹೋತ್ಸವ ಮತ್ತು ಕಲಿಕುಂಡ ಯಂತ್ರಾರಾಧನೆ, ಅಷ್ಟಾವಧಾನ ಪೂಜೆ ಹಾಗೂ ಧಾರ್ಮಿಕ ಪ್ರವಚನ

ವೇಣೂರು: ಬಜಿರೆ ಹಲ್ಲಂದೋಡಿ ಬಸದಿ ಭಗವಾನ್ 1008 ಶ್ರೀ ವರ್ಧಮಾನ ಸ್ವಾಮಿ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ ವಾರ್ಷಿಕ ಪೂಜಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ “ಭಾರತಭೂಷಣ” ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಆಶೀರ್ವಚನಗಳೊಂದಿಗೆ 108 ಕಲಶ ಮಹಾಭಿಷೇಕ, ಕಲಿಕುಂಡ ಯಂತ್ರಾರಾಧನೆ, ಶ್ರೀ ಸರ್ವಾಹ್ಣಯಕ್ಷ ಅಷ್ಟಾವಧಾನ ಪೂಜೆ, ಮಹೋತ್ಸವ, ಮಹಾಪೂಜೆ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಲಕ್ಷ ಹೂವಿನ ಪೂಜೆ ಮುಂತಾದ ಧರ್ಮಕಾರ್ಯಗಳೊಂದಿಗೆ ನಾಳೆ(ಜ.26) ನೆರವೇರಲಿದೆ.

ವಾರ್ಷಿಕ ಪೂಜಾ ಮಹೋತ್ಸವ ಮತ್ತು ಕಲಿಕುಂಡ ಯಂತ್ರಾರಾಧನೆ ಅಷ್ಟಾವಧಾನ ಪೂಜೆ ಹಾಗೂ ಧಾರ್ಮಿಕ ಪ್ರವಚನ

Article Image

ವಾರ್ಷಿಕ ಪೂಜಾ ಮಹೋತ್ಸವ ಮತ್ತು ಕಲಿಕುಂಡ ಯಂತ್ರಾರಾಧನೆ ಅಷ್ಟಾವಧಾನ ಪೂಜೆ ಹಾಗೂ ಧಾರ್ಮಿಕ ಪ್ರವಚನ

ವೇಣೂರು: ಬಜಿರೆ ಹಲ್ಲಂದೋಡಿ ಬಸದಿ ಭಗವಾನ್ 1008 ಶ್ರೀ ವರ್ಧಮಾನ ಸ್ವಾಮಿ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ ವಾರ್ಷಿಕ ಪೂಜಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ “ಭಾರತಭೂಷಣ” ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಆಶೀರ್ವಚನಗಳೊಂದಿಗೆ 108 ಕಲಶ ಮಹಾಭಿಷೇಕ, ಕಲಿಕುಂಡ ಯಂತ್ರಾರಾಧನೆ, ಶ್ರೀ ಸರ್ವಾಹ್ಣಯಕ್ಷ ಅಷ್ಟಾವಧಾನ ಪೂಜೆ, ಮಹೋತ್ಸವ, ಮಹಾಪೂಜೆ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಲಕ್ಷ ಹೂವಿನ ಪೂಜೆ ಮುಂತಾದ ಧರ್ಮಕಾರ್ಯಗಳೊಂದಿಗೆ ನಾಳೆ(ಜ.26) ನೆರವೇರಲಿದೆ.

ಪೂಜಾ ಕಾರ್ಯಕ್ರಮಗಳು

Article Image

ಪೂಜಾ ಕಾರ್ಯಕ್ರಮಗಳು

ಕಾರ್ಕಳ ತಾಲೂಕಿನ ಬಜಗೋಳಿ ಧರ್ಮಶಾಲೆ ತೀರ್ಥಕ್ಷೇತ್ರದಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ, ಭಗವಾನ್ ಶ್ರೀ ಮುನಿಸುವ್ರತ ಸ್ವಾಮಿ ಮಂದಿರದ ವಾರ್ಷಿಕೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಹಾಗೂ ದಿವ್ಯ ನೇತೃತ್ವದಲ್ಲಿ ಭಗವಾನ್ ಶ್ರೀ ಮುನಿಸುವ್ರತ ಸ್ವಾಮಿಯ ವಿಶೇಷ ಉತ್ಸವ, ಅಭಿಷೇಕ, ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕವು ವಿವಿಧ ಧಾರ್ಮಿಕ ವಿಧಿ- ವಿಧಾನಗಳೊಂದಿಗೆ ನಾಳೆ(ಜ.26) ಜರುಗಲಿದೆ.

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ

Article Image

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿರುವ ಭಗವಾನ್ ಬಾಹುಬಲಿಮೂರ್ತಿಗೆ ಫೆ. 2 ರಂದು ಭಾನುವಾರ ಬೆಳಿಗ್ಯೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು. ಇದಕ್ಕೆ ಪೂರ್ವಭಾವಿಯಾಗಿ ಫೆ. ಒಂದರಂದು ಶನಿವಾರ ಬೆಳಿಗ್ಗೆ ಗಂಟೆ 9 ರಿಂದ ರತ್ನಗಿರಿಯಲ್ಲಿ ತೋರಣಮುಹೂರ್ತ, ವಿಮಾನಶುದ್ಧಿ ಷೋಡಶ ಕಲಶಾಭಿಷೇಕ ಮತ್ತು ಸಂಜೆ ನಾಲ್ಕು ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.

ಕುಂದಾದ್ರಿ ವಾರ್ಷಿಕ ಜಾತ್ರ ಮಹೋತ್ಸವ

Article Image

ಕುಂದಾದ್ರಿ ವಾರ್ಷಿಕ ಜಾತ್ರ ಮಹೋತ್ಸವ

ತೀರ್ಥಹಳ್ಳಿ :- ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಶಾಖಾ ಕ್ಷೇತ್ರ ಶ್ರೀ ಕುಂದ ಕುಂದರ ತಪೋಭೂಮಿ ಶ್ರೀ ಕ್ಷೇತ್ರ ಕುಂದಾದ್ರಿ ವಾರ್ಷಿಕ ಜಾತ್ರ ಮಹೋತ್ಸವ ಶ್ರೀ ಕ್ಷೇತ್ರ ಹೊಂಬುಜ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ಪಾವನ ಸಾನಿಧ್ಯದಲ್ಲಿ 14-1-2025 ನೇ ಮಂಗಳವಾರ ಅತ್ಯಂತ ವೈಭವದಿಂದ ಜರುಗಿತು. ಈ ಸಂದರ್ಭದಲ್ಲಿ ಮಕ್ಕಿಮನೆ ಕಲಾವೃಂದ ಬಳಗದ ಸಂಯೋಜನೆಯಲ್ಲಿ ಜಿನ ಭಜನೆ ಕಾರ್ಯಕ್ರಮ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

ಜನವರಿ 14 ಕ್ಕೆ ಅತಿಶಯ ಶ್ರೀ ಕ್ಷೇತ್ರ ಕುಂದಾದ್ರಿಯಲ್ಲಿ ವಾರ್ಷಿಕ ಜಾತ್ರ ಮಹೋತ್ಸವ

Article Image

ಜನವರಿ 14 ಕ್ಕೆ ಅತಿಶಯ ಶ್ರೀ ಕ್ಷೇತ್ರ ಕುಂದಾದ್ರಿಯಲ್ಲಿ ವಾರ್ಷಿಕ ಜಾತ್ರ ಮಹೋತ್ಸವ

ತೀರ್ಥಹಳ್ಳಿ : ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಶಾಖಾ ಕ್ಷೇತ್ರ ಅಚಾರ್ಯ ಶ್ರೀ ಕುಂದ ಕುಂದಾಚಾರ್ಯ ತಪೋಭೂಮಿ ಶ್ರೀ ಕ್ಷೇತ್ರ ಕುಂದಾದ್ರಿಯಲ್ಲಿ ಭಗವಾನ್ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ವಾರ್ಷಿಕ ಜಾತ್ರ ಮಹೋತ್ಸವ 14-1-2025ನೇ ಮಂಗಳವಾರ ಪರಮಪೂಜ್ಯ ಜಗದ್ಗುರು ಸ್ವಸ್ತೀಶ್ರೀ ಡಾ‌. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ಪಾವನ ಸಾನಿಧ್ಯದಲ್ಲಿ ಜರುಗಲಿದೆ. ಕಲಿಕುಂಡ ಯಂತ್ರಾರಾಧನೆ, ಬ್ರಹ್ಮ ಯಕ್ಷ ಆರಧಾನೆ, ವಿಶೇಷ ಅಭಿಷೇಕ ಪೂಜೆ ಸಹಿತ ಅನೇಕ ದಾರ್ಮಿಕ ವಿಧಿಗಳ ಜೊತೆಗೆ ಜಿನ ಭಜನೆ, ಸಾಂಸ್ಕ್ರತಿಕ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭೆ, ದೀಪೋತ್ಸವ ನಡೆಯಲಿದೆ. ಶ್ರೀ ಕ್ಷೇತ್ರ ಕುಂದಾದ್ರಿ ವಾರ್ಷಿಕ ಜಾತ್ರ ಮಹೋತ್ಸವ ಇದು ಕುಂದಾದ್ರಿ ಬೆಟ್ಟದ ಸುಂದರ ಮನಮೋಹಕ ದೃಶ್ಯ. ಈ ಬೆಟ್ಟವು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿದೆ. ತೀರ್ಥಹಳ್ಳಿಯಿಂದ ಆಗೊಂಬೆ ಕಡೆಗೆ ಪಯಣಿಸಿದಾಗ ಗುಡ್ಡಕೇರಿ ಗ್ರಾಮಕ್ಕೆ ತಲುಪುತ್ತೇವೆ. ಅಲ್ಲಿಂದ 9ಕಿ. ಮೀ ಮುಂದುವರಿದರೆ ಕುಂದಾದ್ರಿ ಬೆಟ್ಟವನ್ನು ಸೇರುತ್ತೇವೆ. ಈ ಬೆಟ್ಟವು 1343ಮೀ ಎತ್ತರವಿದ್ದು, ಬೆಟ್ಟವನ್ನು ತಲುಪಲು ಡಾಂಬರು ರಸ್ತೆಯಿದೆ. ಕಾಲುನಡಿಗೆಯಲ್ಲಿ ಬೆಟ್ಟದೆಡೆ ಬರುವವರಿಗೆ ಬಹು ಹತ್ತಿರದ ಕಾಲುದಾರಿಯೂ ಇದೆ. ಬೆಟ್ಟದ ಮೇಲೆ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿ ಇದ್ದು, ಹತ್ತಿರದಲ್ಲಿ ಬೆಟ್ಟದ ಕಲ್ಲಿನಲ್ಲಿಯೇ ಕೊರೆದ ವರ್ಷ ಪೂರ್ತಿ ನೀರು ತುಂಬಿರುವ ಕೆರೆಯೂ ಇದೆ. ಇವುಗಳನ್ನು ನೋಡಲೆಂದೇ ಪ್ರತಿ ವರ್ಷ ಸಾವಿರಾರು ಪ್ರವಾಸಿಗರು, ಭಕ್ತರು ಭೇಟಿ ನೀಡುತ್ತಾರೆ. ಇದು ಚಾರಣ ಪ್ರಿಯ ಸ್ಥಳವೂ ಹೌದು. ಬೆಟ್ಟದ ಮೇಲಿಂದ್ದ ಕಾಣುವ ಪ್ರಕೃತಿ ಸೌಂದರ್ಯ ಕಣ್ಣಿಗೆ ಬಹು ಹಬ್ಬವಾಗುತ್ತದೆ. ಮನಸ್ಸಿಗೆ ಮುದವಾಗುತ್ತದೆ. ಸೂರ್ಯೋದಯ ಮತ್ತು ಸೂರ್ಯಾಸ್ತ ನೋಡುವುದಕ್ಕೆ ವಿಸ್ಮಯವೋ ವಿಸ್ಮಯ. ಜೈನ ಮುನಿ ಶ್ರೇಷ್ಠರಾದ ಕುಂದಕುಂದಾಚಾರ್ಯರ ತಪೋ ಭೂಮಿಯಾಗಿದ್ದರಿಂದ ಈ ಬೆಟ್ಟಕ್ಕೆ ಕುಂದಾದ್ರಿ ಬೆಟ್ಟ ಎಂಬ ಹೆಸರು ಬಂದಿದೆ ಎನ್ನಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ‘ಶ್ರೀಸಾನ್ನಿಧ್ಯ’ ಕ್ಯೂಕಾಂಪ್ಲೆಕ್ಸ್‌ ಉದ್ಘಾಟನೆ

Article Image

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ‘ಶ್ರೀಸಾನ್ನಿಧ್ಯ’ ಕ್ಯೂಕಾಂಪ್ಲೆಕ್ಸ್‌ ಉದ್ಘಾಟನೆ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ಸುಸಜ್ಜಿತ ಸೌಕರ್ಯಗಳೊಂದಿಗೆ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಗಳನ್ನೊಳಗೊಂಡ ನೂತನ ಸಂಕೀರ್ಣ ‘ಶ್ರೀಸಾನ್ನಿಧ್ಯ’ ಮತ್ತು 2024-25ರ ಜ್ಞಾನದೀಪ ಕಾರ್ಯಕ್ರಮದ ಶುಭಾರಂಭ ನೆರವೇರಿಸಿ ಅವರು ಮಂಗಳವಾರ ಇಲ್ಲಿನ ಅಮೃತವರ್ಷಿಣಿ ಸಭಾಭವನದಲ್ಲಿ ಮಾತನಾಡಿದರು. ಧಾರ್ಮಿಕ ಸಂಸ್ಥೆಗಳೇ ಈ ದೇಶದ ಗ್ರಾಮೀಣ ಪ್ರದೇಶದ ಶಕ್ತಿಯಾದರೆ, ಶಿಕ್ಷಣವೇ ದೇಶದಲ್ಲಿ ಸಮಾನತೆ ತರುವ ಮುಖ್ಯ ಸಾಧನವಾಗಿದೆ. ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು ಎಂದು ಅಭಿಪ್ರಾಯಪಟ್ಟರು. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ್ಯ ಇದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆ ಇದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಸಂವಿಧಾನವೇ ನಮ್ಮಲ್ಲಿ ಪರಮೋಚ್ಛವಾದುದು. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದು ಅವರು ಹೇಳಿದರು. ದೇಸ ಸೇವೆಗೆ ಮುಂದೆ ಬನ್ನಿ: ನಾವು ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು. ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕು. ಮೆಸಪಟೋಮಿಯಾ, ಚೀನಾ ನಾಗರಿಕತೆ ನಾಶವಾಗಿದೆ. ಆದರೆ ನಮ್ಮ ನಾಗರಿಕತೆ ಮಾತ್ರ ಇನ್ನೂ ಬೆಳೆಯುತ್ತಿದೆ. ಬಾಹ್ಯ ಶಕ್ತಿಗಳು ನಮ್ಮನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಸಾರ್ವಜನಿಕ ಸೊತ್ತುಗಳನ್ನು ನಾಶಮಾಡುವಂತಹ ವೈಪರೀತ್ಯಗಳು ಸಂಭವಿಸುತ್ತಿವೆ. ಇವುಗಳಿಗೆ ಪೂರ್ಣ ತಿಲಾಂಜಲಿ ನೀಡಬೇಕು. 2047ರ ವೇಳೆಗೆ ಪರಿಪೂರ್ಣ ಸಶಕ್ತ ಭಾರತದ ಗುರಿಯನ್ನು ತಲುಪಬೇಕಾಗಿದೆ. ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ. ದೇಶದ ಸೇವೆಗಾಗಿ ಜನತೆ ಮುಂದೆ ಬರಬೇಕಿದೆ ಎಂದರು. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು. ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಮರೆಯಬಾರದು. ದಿನದ 24 ಗಂಟೆಯೂ ರಾಜಕಾರಣವೇ ಮುಖ್ಯವಾಗಿರಬೇಕೇ ? ದೇಶ ಸೇವೆಗೆ ಸಮಯ ವಿನಿಯೋಗ ಮಾಡುತ್ತಿದ್ದಾರೆಯೇ ? ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ ಇತ್ಯಾದಿ ಬಗ್ಗೆ ಯೋಚಿಸಬೇಕು. ಅತ್ಯುನ್ನತ ನಾಗರಿಕತೆ ನಮ್ಮದು. ಯಾವುದಕ್ಕೂ ದ್ವೇಷ ಉತ್ತರವಲ್ಲ. ದೇಶದಲ್ಲಿ ಸಮಗ್ರತೆ, ವೈವಿಧ್ಯತೆಯನ್ನು ಉಳಿಸಿಕೊಳ್ಳಬೇಕಾಗಿದೆ. ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ. ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಮೂಡಬೇಕಾಗಿದೆ. ಸಾಮಾಜಿಕ ಸದ್ಭಾವ ಬರಬೇಕಾದರೆ ಭಾರತಮಾತೆ ಒಂದೇ ಎಂದು ಭಾವಿಸಿದಾಗ ಈ ಭಾವನೆ ಬರುತ್ತದೆ. ನಾವು ದೇಶಕ್ಕಾಗಿ ಕೆಲಸ ಮಾಡಬೇಕಿದೆ. ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ಅವರು ಆಶಿಸಿದರು. ಭಾರತೀಯ ಕಾರ್ಪೊರೇಟ್‌ ಸಂಸ್ಥೆಗಳು ಧಾರ್ಮಿಕ ಸಂಸ್ಥೆಗಳ ಮೂಲಸೌಕರ್ಯ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಉತ್ತೇಜಿಸಲು ಸಿಎಸ್‌ಆರ್‌ ನಿಧಿಯನ್ನು ಕಾಣಿಕೆಯಾಗಿ ನೀಡುತ್ತಿವೆ. ಈ ಭೂಮಿಯನ್ನು ಪರಿಸರಸ್ನೇಹಿಯಾಗಿ ಕಾಣುವುದರ ಜೊತೆಗೆ ಎಳವೆಯಲ್ಲೇ ಮಕ್ಕಳು ಧಾರ್ಮಿಕತೆಗೆ ತೆರೆದುಕೊಳ್ಳುವಂತೆ ಮಾಡಬೇಕು. ದೇಶಕ್ಕಾಗಿ ಕೆಲಸ ಮಾಡುವ ಮಾನಸಿಕತೆಯನ್ನು ಎಲ್ಲರಲ್ಲೂ ಬೆಳೆಸಬೇಕು ಎಂದು ಅವರು ಆಶಿಸಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ,.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ, ಜ್ಞಾನವಿಕಾಸ ಮಹಿಳಾ ಸಬಲೀಕರಣ ಕಾರ್ಯಕ್ರಮಗಳ ಅಧ್ಯಕ್ಷೆ ಡಾ.ಹೇಮಾವತಿ ಹೆಗ್ಗಡೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್‌, ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್‌ ವೇದಿಕೆಯಲ್ಲಿದ್ದರು. ಉಪನ್ಯಾಸಕ ಡಾ.ಶ್ರೀಧರ ಭಟ್‌ ನಿರೂಪಿಸಿದರು.

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Article Image

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

ಉಜಿರೆ: ಯುವಜನತೆ ಸಮಾಜದ ಅಮೂಲ್ಯ ಮಾನವಸಂಪನ್ಮೂಲವಾಗಿದ್ದು, ವಿದ್ಯಾವಂತರು ವಿಚಾರವಂತರಾಗುವುದರೊಂದಿಗೆ ಪರಿಶುದ್ಧ ಆಚಾರವಂತರು ಆಗಬೇಕು ಎಂದು ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಅವರು ಶನಿವಾರ ಸುಲ್ಕೇರಿಯಲ್ಲಿ ಭಗವಾನ್ ಶ್ರೀ ನೇಮನಾಥಸ್ವಾಮಿ ಬಸದಿ ವಠಾರದಲ್ಲಿ ನಿರ್ಮಿಸಲಾದ ಶ್ರೀ ನೇಮಿನಾಥಸ್ವಾಮಿ ಸಭಾಭವನವವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಯಾವುದೇ ಸತ್ಕಾರ್ಯ ನಡೆಯಬೇಕಾದರೆ ಯೋಗ ಮತ್ತು ಸಂದರ್ಭ ಒದಗಿ ಬರಬೇಕು ಕಟ್ಟಡ ನಿರ್ಮಾಣದಲ್ಲಿ ವಾಸ್ತುವಿನ ಪ್ರಭಾವ ಇರುತ್ತದೆ. ಧರ್ಮಸ್ಥಳದ ವತಿಯಿಂದ ಕಾರ್ಕಳದಲ್ಲಿರುವ ಜೈನಮಠವನ್ನು ನವೀಕರಣಗೊಳಿಸಿ ಸಮಾಜಕ್ಕೆ ಅರ್ಪಿಸಿದ ಬಳಿಕ ಕಾರ್ಕಳ ಸೀಮೆಯ ಅನೇಕ ಪ್ರಾಚೀನ ಬಸದಿಗಳು ಜೀರ್ಣೋದ್ಧಾರಗೊಂಡು ಪಂಚಕಲ್ಯಾಣ ಸಹಿತ ಪ್ರತಿಷ್ಠಾ ಮಹೋತ್ಸವಗಳು ನಡೆಯುತ್ತಿರುವುದು ಶುಭದಾಯಕವಾಗಿದೆ. ದಾನ - ಧರ್ಮಾದಿ ಸತ್ಕಾರ್ಯಗಳಲ್ಲಿ ಯುವಜನತೆ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಸ್ತುತ್ಯಾರ್ಹವಾಗಿದೆ ಎಂದರು. ಆಶೀರ್ವಚನ ನೀಡಿದ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಧರ್ಮದ ಮರ್ಮವನ್ನರಿತು ಆಚರಣೆ ಮಾಡಿದಾಗ ಪಾಪಕರ್ಮಗಳ ಕ್ಷಯವಾಗಿ ಅಕ್ಷಯ ಸುಖವನ್ನೀಯುವ ಮೋಕ್ಷಪ್ರಾಪ್ತಿ ಸಾಧ್ಯವಾಗುತ್ತದೆ. ನಿತ್ಯವೂ ಮಂದಿರಗಳಿಗೆ ಹೋಗಿ ದೇವರದರ್ಶನ, ಜಪ, ತಪ, ಧ್ಯಾನ ಮಾಡಬೇಕು. ಮಕ್ಕಳಿಗೆ ಉತ್ತಮ ಧಾರ್ಮಿಕ ಸಂಸ್ಕಾರ ನೀಡಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ವಿಧಾನಪರಿಷತ್ತಿನ ಮಾಜಿಸದಸ್ಯ ಕೆ. ಹರೀಶ್‌ಕುಮಾರ್ ಮಾತನಾಡಿ ಅಲ್ಪಸಂಖ್ಯಾತರಾದರೂ ಜೈನರ ಶಿಸ್ತು, ಶ್ರದ್ಧೆ, ಭಕ್ತಿ, ಅಹಿಂಸೆ ಹಾಗೂ ಸಮಾಜ ಸೇವಾಕಳಕಳಿಯನ್ನು ಶ್ಲಾಘಿಸಿದರು. ಸರ್ಕಾರದಿಂದ ಈಗಾಗಲೇ ಸಭಾಭವನಕ್ಕೆ 50 ಲಕ್ಷ ರೂ. ಮಂಜೂರಾಗಿದ್ದು ಸದ್ಯದಲ್ಲೇ ಇನ್ನೂ 30 ಲಕ್ಷ ರೂ. ಅನುದಾನ ದೊರಕಲಿದೆ ಎಂದರು. ಕೆ. ಹರೀಶ್‌ಕುಮಾರ್ ಅವರನ್ನು ಗೌರವಿಸಲಾಯಿತು. ಶಾಸಕ ಹರೀಶ್ ಪೂಂಜ, ತುಮಕೂರಿನ ಉದ್ಯಮಿ ಜಿ. ಎಸ್. ರಾಜೇಂದ್ರ ಕುಮಾರ್ ಮತ್ತು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ಶುಭಾಶಂಸನೆ ಮಾಡಿದರು. ಅಧ್ಯಕ್ಷತೆ ವಹಿಸಿದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ ಮಾತನಾಡಿ, ಪಂಚಕಲ್ಯಾಣ ಮತ್ತು ಬಸದಿ ಜೀರ್ಣೋದ್ಧಾರ ಕಾರ್ಯದಲ್ಲಿ ಯುವಜನತೆಯ ಸಕ್ರಿಯ ಸಹಕಾರಕ್ಕೆ ಅಭಿನಂದಿಸಿದರು. ಬಸದಿಯ ಆಡಳಿತ ಮೊಕ್ತೇಸರ ಎನ್. ರವಿರಾಜ್ ಹೆಗ್ಡೆ ನಾವರಗುತ್ತು ಉಪಸ್ಥಿತರಿದ್ದರು. ಪ್ರಾಂಜಲಿ, ಪಿಲ್ಯ ಪ್ರಾರ್ಥನೆ ಹಾಡಿದರು ವಕೀಲರಾದ ಅಜಿತ್, ನಾವರಗುತ್ತು ಸ್ವಾಗತಿಸಿದರು. ಉಜಿರೆಯ ಎಸ್.ಡಿ.ಎಮ್. ಸ್ವಾಯತ್ತ ಕಾಲೇಜಿನ ಉಪನ್ಯಾಸಕ ಪ್ರೊ. ನವೀನ್‌ಕುಮಾರ್ ಜೈನ್ ಧನ್ಯವಾದವಿತ್ತರು. ಶಿಕ್ಷಕ ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರ್ವಹಿಸಿದರು. ಬಸದಿಯಲ್ಲಿ ಋಷಿಮಂಡಲ ಆರಾಧನೆ, ಕೂಷ್ಮಾಂಡಿನಿ ಆರಾಧನೆ, ಪದ್ಮಾವತಿದೇವಿಗೆ ಕುಂಕುಮಾರ್ಚನೆ, ಕ್ಷೇತ್ರಪಾಲ ಮತ್ತು ನಾಗದೇವರಿಗೆ ನವಕಲಶ ಅಭಿಷೇಕ ನಡೆಯಿತು.

ಭ. ಶ್ರೀ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ 2024ರ ಲೆಕ್ಕ ಪತ್ರ ಮಂಡಣೆ

Article Image

ಭ. ಶ್ರೀ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ 2024ರ ಲೆಕ್ಕ ಪತ್ರ ಮಂಡಣೆ

ವೇಣೂರು: ಭ| ಶ್ರೀ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ-2024ರ ಲೆಕ್ಕ ಪತ್ರ ಮಂಡಣೆಯು ನಾಳೆ(ಡಿ.15) ಅಪರಾಹ್ನ ಗಂಟೆ 4.30ಕ್ಕೆ ಸರಿಯಾಗಿ ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ಜರುಗಲಿರುವುದು. ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ ಭಾರತಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಪಾವನ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ಮಹಾಮಸ್ತಕಾಭಿಷೇಕ ಮಹೋತ್ಸವ-2024ರ ಅಧ್ಯಕ್ಷರೂ ಆಗಿರುವ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಗೌರವ ಮಾರ್ಗದರ್ಶನ ನೀಡಲಿದ್ದಾರೆ. ಅಳದಂಗಡಿ ಅರಮನೆಯ ತಿಮ್ಮಣ್ಣರಸರು, ಮಹಾಮಸ್ತಕಾಭಿಷೇಕ ಮಹೋತ್ಸವದ 2024ರ ಕಾರ್ಯಧ್ಯಕ್ಷರಾಗಿರುವ ಡಾ. ಪದ್ಮಪ್ರಸಾದ ಅಜಿಲರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿರುವರು. ಮಾಜಿ ಸಚಿವರು, ಮಹಾಮಸ್ತಕಾಭಿಷೇಕ ಮಹೋತ್ಸವದ 2024ರ ಉಪಾಧ್ಯಕ್ಷರು ಹಾಗೂ ಸರಕಾರಿ ಸಂಪರ್ಕ ಸಮಿತಿಯ ಸಂಚಾಲಕರಾಗಿರುವ ಕೆ. ಅಭಯಚಂದ್ರ ಜೈನ್‌ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವೇಣೂರಿನ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿಗಳು, ಮಹಾಮಸ್ತಕಾಭಿಷೇಕ ಮಹೋತ್ಸವ-2024ರ ಪ್ರಧಾನ ಕಾರ್ಯದರ್ಶಿಗಳಾಗಿರುವ ವಿ. ಪ್ರವೀಣ್ ಕುಮಾರ್ ಇಂದ್ರರವರು ತಿಳಿಸಿರುತ್ತಾರೆ.

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Article Image

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಈಗ ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಸಂಭ್ರಮ, ಸಡಗರ. ದೇವಸ್ಥಾನ, ಬೀಡು, ವಸತಿಛತ್ರಗಳು, ಬಾಹುಬಲಿಬೆಟ್ಟ, ಪ್ರವೇಶದ್ವಾರ ಮೊದಲಾದ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನಾಡಿನೆಲ್ಲೆಡೆಯಿಂದ ಪ್ರತಿದಿನ ಸಹಸ್ರಾರು ಭಕ್ತಾದಿಗಳು ಹಾಗೂ ಪ್ರವಾಸಿಗರು ಬರುತ್ತಿದ್ದು, ದೇವರ ದರ್ಶನದ ಬಳಿಕ ಮಂಜೂಷಾ ವಸ್ತುಸಂಗ್ರಹಾಲಯ, ಕಾರ್‌ಮ್ಯೂಸಿಯಂ, ಲಲಿತೋದ್ಯಾನ, ರತ್ನಗಿರಿ (ಬಾಹುಬಲಿಬೆಟ್ಟ) ವೀಕ್ಷಿಸಿ ಸುಂದರ ಪ್ರಾಕೃತಿಕ ಪರಿಸರದ ಸೊಗಡನ್ನು ಸವಿಯುವುದರೊಂದಿಗೆ ತಮ್ಮ ಜ್ಞಾನಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ರೇಕ್ಷಕರನ್ನು ಸೆಳೆಯುವ ವಸ್ತುಪ್ರದರ್ಶನ: ಪ್ರೌಢಶಾಲಾ ವಠಾರದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ವಸ್ತುಪ್ರದರ್ಶನದಲ್ಲಿ ಮುನ್ನೂರಕ್ಕೂ ಮಿಕ್ಕಿ ಮಳಿಗೆಗಳಿದ್ದು, ಪ್ರೇಕ್ಷಕರ ಕಣ್ಮನ ಸೆಳೆಯುತ್ತಿವೆ. ಪುಸ್ತಕಮಳಿಗೆಗಳು, ಕೃಷಿ, ವಿಜ್ಞಾನ, ಕಲೆ, ಸಂಸ್ಕೃತಿ ಹಾಗೂ ಗ್ರಾಮೀಣ ಕರಕುಶಲ ಕಲೆಗಳಿಗೆ ಸಂಬAಧಪಟ್ಟ ಮಳಿಗೆಗಳು ಪ್ರೇಕ್ಷಕರ ಗಮನ ಸೆಳೆಯುತ್ತಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಳಿಗೆ, ಪುಸ್ತಕದ ಮಳಿಗೆಗಳು, ಮಡಿಕೆ ತಯಾರಿ, ಹಾಳೆತಟ್ಟೆಗಳ ಮಳಿಗೆ, ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಮಳಿಗೆ, ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯ ಮಳಿಗೆ ಪ್ರೇಕ್ಷಕರ ಕಣ್ಮನ ಸೆಳೆಯುತ್ತವೆ. ಕರ್ನಾಟಕ ಬ್ಯಾಂಕ್, ಕೆನರಾ ಬ್ಯಾಂಕ್, ಜೀವವಿಮೆ, ಸರ್ಕಾರದ ವಿವಿಧ ಇಲಾಖೆಗಳ ಮಳಿಗೆಗಳು ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ, ಮಾರ್ಗದರ್ಶನ ನೀಡುತ್ತಿವೆ. ಕೆ.ಎಸ್.ಆರ್.ಟಿ.ಸಿ. ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಹಲವಾರು ಮಂದಿ ಭಕ್ತರು ಪಾದಯಾತ್ರೆಯಲ್ಲಿ, ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬರುತ್ತಿದ್ದಾರೆ. ಭಕ್ತರು ತಾವು ಬೆಳೆದ ತರಕಾರಿ, ಹಣ್ಣುಹಂಪಲು, ಅಕ್ಕಿ, ದವಸಧಾನ್ಯಗಳನ್ನು ಕೂಡಾ ಕಾಣಿಕೆಯಾಗಿ ಅರ್ಪಿಸುತ್ತಿದ್ದಾರೆ. ಎಲ್ಲೆಲ್ಲೂ ಸೊಬಗಿದೆ, ಸೊಗಸಿದೆ. ಶಿಸ್ತು, ಸ್ವಚ್ಛತೆ, ದಕ್ಷತೆ ಹಾಗೂ ದೇವಳ ಸಿಬ್ಬಂದಿ ಮತ್ತು ಸ್ವಯಂ ಸೇವಕರ ನಗುಮೊಗದ ಸೇವೆ ಭಕ್ತರ ಮುಕ್ತ ಪ್ರಶಂಸೆಗೆ ಪಾತ್ರವಾಗಿದೆ. ವಸ್ತುಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30 ರಿಂದ ರಾತ್ರಿ 10.30ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇಂದು ಶುಕ್ರವಾರ ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 92ನೆ ಅಧೀವೇಶನವನ್ನು ಗೃಹಸಚಿವ ಡಾ. ಜಿ.ಪರಮೇಶ್ವರ ಉದ್ಘಾಟಿಸುವರು. ಬೆಂಗಳೂರಿನ ಕೈಲಾಸ ಆಶ್ರಮದ ಜಯೇಂದ್ರಪುರಿ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಡಾ. ಜಿ.ಬಿ. ಹರೀಶ್, ಡಾ. ಜೋಸೇಫ್, ಎನ್. ಎಂ. ಮತ್ತು ಬಿಜಾಪುರದ ಮೆಹತಾಬ ಇಬ್ರಾಹಿಂ ಸಾಬ ಕಾಗವಾಡ ಧಾರ್ಮಿಕ ಉಪನ್ಯಾಸ ನೀಡುವರು.

ತುಳುನಾಡಿನ ಸಾಂಸ್ಕೃತಿಕ ಅನನ್ಯತೆಗೆ ಜೈನ ಅರಸರ ಕೊಡುಗೆ ಅಪೂರ್ವವಾದದ್ದು: ಡಾ. ಪುಂಡಿಕಾಯಿ ಗಣಪಯ್ಯ ಭಟ್

Article Image

ತುಳುನಾಡಿನ ಸಾಂಸ್ಕೃತಿಕ ಅನನ್ಯತೆಗೆ ಜೈನ ಅರಸರ ಕೊಡುಗೆ ಅಪೂರ್ವವಾದದ್ದು: ಡಾ. ಪುಂಡಿಕಾಯಿ ಗಣಪಯ್ಯ ಭಟ್

ತುಳುನಾಡಿನ ಸಾಂಸ್ಕೃತಿಕ ಅನನ್ಯತೆಗೆ ಉದಾರವಾದಿ ನಿಲುಮೆಗೆ ಸ್ವಾಭಿಮಾನದ ಚಿಂತನೆಗಳಿಗೆ ಜೈನ ಅರಸರ ಕೊಡುಗೆ ಗಣನೀಯವಾದದ್ದು ಎಂಬುದಾಗಿ ಡಾ. ಪುಂಡಿ ಕಾಯಿ ಗಣಪಯ್ಯ ಭಟ್ ಅಭಿಪ್ರಾಯಪಟ್ಟರು. ಇಂದು ಮೂಡುಬಿದರೆ ಜೈನ್ ಮಿಲನ್ ಆಶ್ರಯದಲ್ಲಿ ಜೈನ ಹೈಸ್ಕೂಲಿನಲ್ಲಿ ನಡೆದ ಮಾಸಿಕ ಸಭೆಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಇವರು ತುಳುನಾಡಿಗೆ ಜೈನ ಅರಸರ ಕೊಡುಗೆಗಳು ಎನ್ನುವ ವಿಚಾರದಲ್ಲಿ ಉಪನ್ಯಾಸವನ್ನು ನೀಡಿದರು ಅಳುಪರ ನಂತರ ಸುಮಾರು ಐದು ಶತಮಾನಗಳಷ್ಟು ದೀರ್ಘಾವಧಿಗೆ ತುಳುನಾಡನ್ನು ಆಳ್ವಿಕೆ ಮಾಡಿದ ಸುಮಾರು 15 ಕಿಂತ ಹೆಚ್ಚು ರಾಜಮನೆತನಗಳು ಬೀಡು ಬಲ್ಲಾಳರು ತುಳುನಾಡಿನ ಸ್ವಾಭಿಮಾನಿ ಅಸ್ಮಿತೆಗೆ ಕಾರಣರಾಗಿದ್ದಾರೆ ಎಂಬುದಾಗಿ ತಿಳಿಸಿದರು ವಿಜಯನಗರ ಹಾಗೂ ಕೆಳಗೆ ಅರಸರೊಂದಿಗೂ ಸಂಘರ್ಷಕ್ಕೆ ಇಳಿದ ಇಲ್ಲಿನ ಅರಸರು ಇಲ್ಲಿಯ ವಿಶಿಷ್ಟ ಸಂಸ್ಕೃತಿಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು ತಮ್ಮೊಳಗೆ ಸಂಘರ್ಷಗಳು ನಡೆಸಿದ್ದರು ರಕ್ತಪಾತವಿಲ್ಲದೆ ಒಪ್ಪಂದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಿದ ಹತ್ತಾರು ಉದಾಹರಣೆಗಳನ್ನ ಜೈನ ಸಂಸ್ಕೃತಿಯ ಹಿನ್ನೆಲೆಯಲ್ಲಿ ಗಮನಿಸಬಹುದು ಹಿಂದೂ ದೇವಾಲಯಗಳ ಸ್ಥಾಪನೆ ಧರ್ಮ ಸಾಮರಸ್ಯದ ಮೂಲಕ ಬಹು ಜನರಿಗೆ, ಪ್ರಜೆಗಳಿಗೆ ಬೇಕಾದ ರೀತಿಯಲ್ಲಿ ಬದುಕಿ ಬಾಳಿದವರು ಇಲ್ಲಿಯ ಅರಸು ಮನೆತನದವರು ಎಂದು ಉದಾಹರಣೆಗಳ ಮೂಲಕ ವಿವರಿಸಿದರು ಸಭೆಯ ಅಧ್ಯಕ್ಷತೆ ವಹಿಸಿದ್ದ ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾತ್ ಬಲ್ನಾಡು ಅವರು ಸುಳ್ಯ ಭಾಗದಲ್ಲಿ ಆಳ್ವಿಕೆ ಮಾಡಿದ ಬಲ್ಲಾಳರ ಮತ್ತು ಉಳಿದಿರುವ ಬಸದಿಗಳ ಕುರುಹುಗಳನ್ನು ರಕ್ಷಿಸುವ ಅಗತ್ಯವನ್ನು ವಿವರಿಸಿದರು. ಸ್ವಧರ್ಮ ನಿಷ್ಠೆ ಪರಧರ್ಮ ಸಹಿಷ್ಣುತೆ ರಕ್ತಗತವಾಗಿ ಇರುವುದರಿಂದಲೇ ನೂರಾರು ದೇವಾಲಯಗಳನ್ನು ದೈವಸ್ಥಾನಗಳನ್ನು ಬಸದಿಗಳನ್ನು ನಿರ್ಮಾಣ ಮಾಡುವ ಆಶ್ರಯ ಕೊಡುವ ಪೋಷಕರಾಗಿ ಗುತ್ತು ಬೀಡು ಅರಮನೆಗಳು ಬೆಳೆದು ಬರಲು ಕಾರಣವಾಯಿತು ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಕಾರ್ಯಕ್ರಮದಲ್ಲಿ ಜೈನ್ ಮಿಲನ್ ಅಧ್ಯಕ್ಷರಾದ ಆನಡ್ಕ ದಿನೇಶ್ ಕುಮಾರ್ ಅವರ ಕಲ್ಪನೆಯ ಬೆಳ್ಳಿಯ ಚಿತ್ತಾರ ಸಹಿತದ ಸನ್ಮಾನ ಪತ್ರವನ್ನು ನೀಡಿ ವೀಣಾ ರಘು ಚಂದ್ರ ಶೆಟ್ಟಿ ಅವರನ್ನು ಅವರ ಸಾಹಿತ್ಯ ಸೇವೆಗಳಿಗಾಗಿ ಸನ್ಮಾನಿಸಲಾಯಿತು. ಕೃಷಿ ವಿಚಾರ ವಿನಿಮಯ ಕೇಂದ್ರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಭಯ್ ಕುಮಾರ್ ಅವರನ್ನು ಗೌರವಿಸಲಾಯಿತು. ಡಾ. ಬಿ.ಪಿ. ಸಂಪತ್ ಕುಮಾರ್ ಸ್ವಾಗತಿಸಿ ಅನಂತವೀರ ಜೈನ್ ವರದಿ ವಾಚಿಸಿ ವಂದಿಸಿದರು. ಖಜಾಂಜಿ ಪುಷ್ಪರಾಜ್ ಜೈನ್ ಮುಖ್ಯ ಅತಿಥಿಯವರ ಪರಿಚಯ ಮಾಡಿದರು. ವಲಯ ನಿರ್ದೇಶಕರಾದ ಜಯರಾಜ್ ಕಂಬಳಿ ಅತಿಥೇಯರ ಪರವಾಗಿ ಸಂಪತ್ ಸಾಮ್ರಾಜ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಿನ್ಮಯಿ ಪ್ರಾರ್ಥನೆ ನೆರವೇರಿಸಿ, ಅಪೇಕ್ಷ ಕಾರ್ಯಕ್ರಮ ನಿರ್ವಹಿಸಿದರು.

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ

Article Image

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ

ತೌಳವ ಇಂದ್ರ ಸಮಾಜ(ರಿ) ಇದರ ಮಹಾಸಭೆ ದಿನಾಂಕ 3/11/2024ರಂದು ಮೂಡಬಿದ್ರೆಯ ಶ್ರೀ ಧವಲಾ ಕಾಲೇಜ್ ನ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. "ತುಳು ಇಂದ್ರರ ಜೀವನ ಶೈಲಿ, ಸಾಮಾಜಿಕ ಪರಂಪರೆ, ಪೌರೋಹಿತ್ಯದ ಮಾದರಿಗಳು ವಿಭಿನ್ನವಾಗಿಯೂ ಶಾಸ್ತ್ರೋಕ್ತವೂ ಆಗಿದ್ದು ಸರ್ವ ಜನಾಧರಣೆಗೆ ಪಾತ್ರವಾಗಿದೆ, ಈ ಉನ್ನತ ಪರಂಪರೆಯನ್ನು ಕಾಪಾಡುವುದು ಮತ್ತು ಪರಸ್ಪರ ಬಂಧುತ್ವ ಸಂವರ್ಧನೆ ಈ ಸಂಘಟನೆಯ ಉದ್ದೇಶ" ಎಂದು ಪ್ರಾಸ್ತಾವಿಕ ಮಾತುಗಳನ್ನು ಆಡುತ್ತಾ ಉಪಾಧ್ಯಕ್ಷರಾದ ಎಂ. ಅಕ್ಷಯ ಕುಮಾರ್ ರವರು ಅತಿಥಿಗಳನ್ನೂ, ಸನ್ಮಾನಗೊಳ್ಳಲಿರುವ ಮಹನೀಯರನ್ನೂ ಪದಾಧಿಕಾರಿಗಳನ್ನೂ ಸ್ವಾಗತಿಸಿದರು. ಸಭೆಯ ಅಧ್ಯಕ್ಷತೆಯನ್ನು ನಿವೃತ್ತ ಶಿಕ್ಷಕರಾಗಿರುವ ಮೂಡಬಿದ್ರೆ ಜ್ಞಾನಚಂದ್ರ ಇಂದ್ರರು ಮಾತಾಡುತ್ತ "ಹಿಂದೆ ಇಂದ್ರರ ಕುಲಕಸುಬು ಪೌರೋಹಿತ್ಯ ಆದರೂ ಇಂದು ಜೀವನ ನಿರ್ವಹಣೆಗಾಗಿ ಬೇರೆ ಬೇರೆ ಉದ್ಯೋಗ, ಬುಸ್ಸಿನೆಸ್ ಗಳನ್ನು ನೆಚ್ಚಿಕೊಂಡಿದ್ದಾರೆ. ಪೌರೋಹಿತ್ಯ ಈಗ ಮುಖ್ಯ ಕಸುಬಾಗಿ ಉಳಿದಿಲ್ಲಾ ಎಂದರಲ್ಲದೆ, ಸದಸ್ಯರೆಲ್ಲರೂ ಅಂಗಸಂಸ್ಥೆಯಾದ ಸದ್ಧರ್ಮ ಸೌಹಾರ್ದ ಸಹಕಾರಿ ಸಂಸ್ಥೆ ಲಾಭದಲ್ಲಿ ನಡೆಯುತ್ತಿದ್ದು, ಆ ಸಹಕಾರಿಯನ್ನು ಇನ್ನೂ ಚೆನ್ನಾಗಿ ಬೆಳೆಸಬೇಕಾಗಿದೆ"ಎಂದರು. ನಂತರ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ವಾನ್ ಡಾ I ಎಸ್.ಪಿ.ವಿಧ್ಯಾಕುಮಾರ್, ವಿಜ್ಞಾನಿ ಡಾI ಸುಕೇಶ್ ಕುಮಾರ್ ಬಜಿರೆ ಹಾಗೂ ಪ್ರಾಂಶುಪಾಲೆ ಆಶಾಲತಾ ದಾಂಡೇಲಿಯವರನ್ನೂ ಹಿರಿಯ ಪುರೋಹಿತರಾದ ಚಂದ್ರಶೇಖರ ಇಂದ್ರ ಬೋಳ ಬಸದಿ ಮತ್ತು ದೇವಕುಮಾರ್ ಇಂದ್ರ ಮುಳಿಕಾರು ಬಸದಿ ಇವರುಗಳನ್ನು ಶಾಲು, ಹಾರ, ಫಲ ಕಾಣಿಕೆ, ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು. ಹತ್ತನೇ ತರಗತಿ ಹಾಗೂ ದ್ವಿತೀಯ ಪಿ.ಯು.ಸಿ. ಯ ಪ್ರತಿಭಾವಂತ ಸಮಾಜದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಕಾರ್ಯದರ್ಶಿ ಬಿ. ಅಭಯ ಕುಮಾರ್ ಇಂದ್ರ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ವಿಜಯಕುಮಾರಿ ಯವರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಪ್ರತಿಷ್ಠಾ ಪುರೋಹಿತರಾದ ಪದ್ಮಪ್ರಭ ಇಂದ್ರ, ನಾಗೇಂದ್ರ ಇಂದ್ರ, ಅಜಿತಕುಮಾರ್ ಇಂದ್ರ, ಅರುಣಕುಮಾರ್ ಇಂದ್ರರವರನ್ನು ಗೌರವಿಸಲಾಯಿತು. ದಿವ್ಯಾ ವೀರೇಂದ್ರರವರು ಪ್ರಸ್ತುತ ವರ್ಷದಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಅರ್ಪಣಾ ಕಾರ್ಯಕ್ರಮ ನೆರವೇರಿಸಿದರು. ನಿರ್ದೇಶಕ ಶೀತಲ್ ಕುಮಾರ್ ಸರಕಾರದಿಂದ ಅಲ್ಪಸಂಖ್ಯಾತರಿಗೆ ಕೊಡಮಾಡಿದ ಸೌಲಭ್ಯಗಳ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಇಂದ್ರ ಸಮಾಜದ ಸದಸ್ಯರ ವಿಳಾಸದ ತಿದ್ದುಪಡಿ ಮಾಡಿದ ಡೈರೆಕ್ಟರಿ ಪ್ರತಿಯನ್ನು ಬಿಡುಗಡೆ ಗೊಳಿಸಲಾಯಿತು. ಆರತಿ ವಿರಾಜ್ ಪ್ರಾರ್ಥನೆ ಮಾಡಿದರು, ನಿರ್ದೇಶಕ ಹರಿಶ್ಚಂದ್ರ ಜೈನ್ ಸನ್ಮಾನಕಾರ್ಯಕ್ರಮದ ನಿರೂಪಣೆ ಮಾಡಿದರು. ಸದ್ಧರ್ಮ ಸೌಹಾರ್ಧ ಸಹಕಾರಿ ಅಧ್ಯಕ್ಷರಾದ ಪ್ರವೀಣ ಕುಮಾರ್ ಉಜಿರೆ, ನಿರ್ದೇಶಕರಾದ ವೃಷಭ ಕುಮಾರ್ ಇಂದ್ರ, ಅರ್ಕ ಕೀರ್ತಿ ಇಂದ್ರ, ಯುವತೌಳವ ಇಂದ್ರ ಸಮಾಜದ ಅಧ್ಯಕ್ಷರಾದ ಶ್ವೇತ ಪ್ರವೀಣ್ ಹಾಗೂ ಕಾರ್ಯದರ್ಶಿ ಅನಿತ್ ಕುಮಾರ್ ಬಿ. ಮತ್ತು ತೌಳವ ಇಂದ್ರ ಸಮಾಜದ ಎಲ್ಲಾ ನಿರ್ದೇಶಕರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿರ್ದೇಶಕ ಪ್ರಮೋದ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಜೊತೆ ಕಾರ್ಯದರ್ಶಿ ಸುವಿಧಿ ಇಂದ್ರರು ಧನ್ಯವಾದ ಅರ್ಪಿಸಿದರು. ಅರುಣಾ ಇಂದ್ರರ ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ಭಗವಾನ್ ಮಹಾವೀರ ಸ್ವಾಮಿ ನಿರ್ವಾಣೋತ್ಸವ

Article Image

ಭಗವಾನ್ ಮಹಾವೀರ ಸ್ವಾಮಿ ನಿರ್ವಾಣೋತ್ಸವ

ಉಜಿರೆ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಗವಾನ್ ಮಹಾವೀರಸ್ವಾಮಿ ನಿರ್ವಾಣೋತ್ಸವದ ಪ್ರಯುಕ್ತ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ಶುಕ್ರವಾರ ಮುಂಜಾನೆ ಸಮಸ್ತ ಶ್ರಾವಕರು, ಶ್ರಾವಕಿಯರು ಅಷ್ಟವಿಧಾರ್ಚನೆ ಪೂಜೆ ಸಹಿತ ಅರ್ಘ್ಯವೆತ್ತಿದರು. ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಬಾಹುಬಲಿ ಸೇವಾಸಮಿತಿಯ ಸರ್ವಸದಸ್ಯರು ಹಾಗೂ ಊರಿನ ಶ್ರಾವಕರು, ಶ್ರಾವಕಿಯರು ಅಷ್ಟವಿಧಾರ್ಚನೆ ಪೂಜೆ ಸಹಿತ ಅರ್ಘ್ಯ ಎತ್ತುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದೇಶದ ಎಲ್ಲಾ ಜಿನಮಂದಿರಗಳಲ್ಲಿ ಶುಕ್ರವಾರ ಮುಂಜಾನೆ ಭಗವಾನ್ ಮಹಾವೀರ ಸ್ವಾಮಿಯ ನಿರ್ವಾಣಮಹೋತ್ಸವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಜೈನರು ಜಪ, ತಪ, ಧ್ಯಾನ, ಸ್ವಾಧ್ಯಾಯದೊಂದಿಗೆ ಉಪವಾಸ ಮೊದಲಾದ ವೃತ-ನಿಯಮಗಳನ್ನು ಪಾಲಿಸಿ ಪುಣ್ಯಸಂಚಯ ಮಾಡಿದರು.

First Previous

Showing 3 of 8 pages

Next Last