Article Image

ವಾಲ್ಪಾಡಿ ಗ್ರಾಮದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವ

Article Image

ವಾಲ್ಪಾಡಿ ಗ್ರಾಮದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವ

ದ.ಕ ಜಿಲ್ಲೆಯ ಮೂಡಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವವು ಮೂಡಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ, ನೇತೃತ್ವ ಮತ್ತು ಪಾವನ ಸಾನ್ನಿಧ್ಯದಲ್ಲಿ, ಮಂಡ್ಯ ಶ್ರೀ ಕ್ಷೇತ್ರ ಆರತಿಪುರದ ಸ್ವಸ್ತಿಶ್ರೀ ಸಿದ್ಧಾಂತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಉಪಸ್ಥಿತಿಯೊಂದಿಗೆ ಮಾ.28ರಿಂದ ಮೊದಲ್ಗೊಂಡು ಮಾ.30ರವರೆಗೆ ಜೈನ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಜರಗಲಿರುವುದು.

ವೇಣೂರು : ಮಾ. 25ರಂದು ಭಗವಾನ್‌ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ, ಮಹೋತ್ಸವ ಹಾಗೂ ಮಹಾಪೂಜೆ

Article Image

ವೇಣೂರು : ಮಾ. 25ರಂದು ಭಗವಾನ್‌ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ, ಮಹೋತ್ಸವ ಹಾಗೂ ಮಹಾಪೂಜೆ

ಬೆಳ್ತಂಗಡಿ ತಾಲೂಕಿನ ವೇಣೂರಿನ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕವು ಇತ್ತೀಚೆಗೆ ಸಂಪನ್ನಗೊಂಡಿದ್ದು, ಇದೀಗ ಮಾ. 25ರಂದು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವದ ದಿನವಾಗಿದ್ದು, ಆ ಪ್ರಯುಕ್ತ ನಾಳೆ (ಮಾ. 25)ರಂದು ಸಾಯಂಕಾಲ ಗಂಟೆ 6.00ರಿಂದ ಭ|| ಶ್ರೀ ಬಾಹುಬಲಿ ಸ್ವಾಮಿಗೆ ೫೪ ಕಲಶಗಳಿಂದ ಪಾದಾಭಿಷೇಕ, ಮಹೋತ್ಸವ ಹಾಗೂ ಮಹಾಪೂಜೆಯು ನೆರವೇರಲಿದೆ ಎಂದು ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಪ್ರಕಟಣೆ ತಿಳಿಸಿದೆ.

ದರೆಗುಡ್ಡೆ: ಶ್ರೀ ೧೦೦೮ ಅನಂತನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಸಿದ್ಧರ ಪಂಚಾಮೃತ ಅಭಿಷೇಕ

Article Image

ದರೆಗುಡ್ಡೆ: ಶ್ರೀ ೧೦೦೮ ಅನಂತನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಸಿದ್ಧರ ಪಂಚಾಮೃತ ಅಭಿಷೇಕ

ದ.ಕ.ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕೆಲ್ಲಪುತ್ತಿಗೆ- ದರೆಗುಡ್ಡೆ ಗ್ರಾಮದ ಭಗವಾನ್ ಶ್ರೀ ೧೦೦೮ ಅನಂತನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಸಿದ್ಧರ ಪಂಚಾಮೃತ ಅಭಿಷೇಕ ಮತ್ತು ಅಷ್ಟಮ ನಂದೀಶ್ವರದ ಐವತ್ತೆರಡು ನೂತನ ಜಿನ ಬಿಂಬಗಳಿಗೆ ಮಹಾಭಿಷೇಕವು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ನೇತೃತ್ವ ಮತ್ತು ಆಶೀರ್ವಚನದೊಂದಿಗೆ ಮಾ.24 ರಂದು ನೆರವೇರಲಿರುವುದು.

ಮಾ. 24 : ಕಣ್ಣಿನ ಉಚಿತ ತಪಾಸಣೆ - ಪೊರೆ ಶಸ್ತ್ರಚಿಕಿತ್ಸಾ ಶಿಬಿರ

Article Image

ಮಾ. 24 : ಕಣ್ಣಿನ ಉಚಿತ ತಪಾಸಣೆ - ಪೊರೆ ಶಸ್ತ್ರಚಿಕಿತ್ಸಾ ಶಿಬಿರ

ಕಾರ್ಕಳ : ಜಿನವಾಣಿ ಮಹಿಳಾ ಸಂಘ ದಾನಶಾಲೆ ಮತ್ತು ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಾ. 24ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಾರ್ಕಳ ಜೈನ ಮಠದ ಬಳಿಯಿರುವ ಸಭಾಂಗಣದಲ್ಲಿ ಕಣ್ಣಿನ ಉಚಿತ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ: 9880015655 (ಸುಮನಾಜಿ), 9844511211 (ಹರ್ಷ) ಅಥವಾ 9591918216 (ವಿಶುಕುಮಾರ್) ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಡುಬಿದ್ರೆ: ಗುರುಗಳ ಬಸದಿಯ ಎಂಟನೇಯ ವಾರ್ಷಿಕೋತ್ಸವ

Article Image

ಮೂಡುಬಿದ್ರೆ: ಗುರುಗಳ ಬಸದಿಯ ಎಂಟನೇಯ ವಾರ್ಷಿಕೋತ್ಸವ

ಮೂಡುಬಿದ್ರೆ ಗುರುಗಳ ಬಸದಿ ಭಗವಾನ್ ಶ್ರೀ 1008 ಪಾರ್ಶ್ಶ್ವನಾಥ ಸ್ವಾಮಿ ತೀರ್ಥಂಕರ ಬಸದಿಯ ಎಂಟನೇಯ ವಾರ್ಷಿಕೋತ್ಸವವು ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ, ನೇತೃತ್ವ, ಪಾವನ ಸಾನಿಧ್ಯದಲ್ಲಿ ಮಾ.16 ಜರುಗಿತು. ಕಾರ್ಯಕ್ರಮದ ಅಂಗವಾಗಿ ತೋರಣ ಮಹೂರ್ತ, ನಾಗ ಕ್ಷೇತ್ರಪಾಲ ಪೂಜೆ, ಶ್ರೀ ಸರಸ್ವತಿ ಪೂಜೆ, ಪದ್ಮಾವತಿ ಯಕ್ಷಿ ಷೋಡಶೋಪಚಾರ ಪೂಜೆ, ಬ್ರಹ್ಮ ದೇವರ ಪೂಜೆ, ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿತು. ಆಶೀರ್ವಚನ ನೀಡಿದ ಪ.ಪೂ ಸ್ವಾಮೀಜಿಗಳವರು ಇಂದಿನಿಂದ ಜೈನರ ಎಂಟು ದಿನಗಳ ಪಾಲ್ಗುಣ ಮಾಸದ ಪರ್ವ ಅಷ್ಟಮ ನಂದಿಶ್ವರ ದ್ವೀಪಗಳ ಐವತ್ತ ಎರಡು ಜಿನಲಾಯಗಳ ಅಕೃತಿಮ ಜಿನ ಮಂದಿರ ಪೂಜೆ ನೆರವೇರಲಿದೆ. ಪ್ರಾರಂಭದ ದಿನ ಗುರು ಬಸದಿ ವಾರ್ಷಿಕೋತ್ಸವದ ನಿಮಿತ್ತ ಜಿನ ಭಗವಂತರ ಕೇವಲ ಜ್ಞಾನದಿಂದ ಪಡೆದ ದಿವ್ಯ ಸಂದೇಶ ತಿಳಿದುಕೊಳ್ಳಲು ಪ್ರಯತ್ನ ಮಾಡುವ ದಿನ ಲೋಕಕಲ್ಯಾಣ ಭಾವನೆಯಿಂದ ಜಿನ ಭಗವಂತ ನೀಡಿದ ಸಂದೇಶ ಅಳವಡಿಸಿ ಜೀವನ ಪಾವನವಾಗುವುದು ಎಂದರು ಹಾಗೂ ಪೂಜಾ ಸೇವಾದಾತರನ್ನು ಹರಸಿ ಆಶೀರ್ವಾದ ಮಾಡಿದರು. ಬಸದಿ ಮೋಕ್ತೆಸರರಾದ ಪಟ್ಣ ಶೆಟ್ಟಿ ಸುದೇಶ್ ಕುಮಾರ್, ದಿನೇಶ್ ಕುಮಾರ್, ಆದರ್ಶ್, ಮಂಜುಳಾ ಅಭಯ ಚಂದ್ರ ಜೈನ್, ವೀಣಾ ರಘುಚಂದ್ರ ಶೆಟ್ಟಿ, ಬಿ.ವಿಮಲ್ ಕುಮಾರ್, ವೀರೇಂದ್ರ ಕುಮಾರ್, ವೀರೇಂದ್ರ ಇಂದ್ರ, ಶ್ರೀನಾಥ್ ಬಲ್ಲಾಳ್, ಎಸ್. ಪಿ. ವಿದ್ಯಾಕುಮಾರ್, ಜ್ಞಾನ ಚಂದ್ರ, ಅಜಿತ್ ಪ್ರಸಾದ್, ನವೀನ್ ಲಂಡನ್ ಉಪಸ್ಥಿತರಿದ್ದರು. ವ್ಯವಸ್ಥಾಪಕ ಸಂಜಯಂತ ಕುಮಾರ್ ವಂದಿಸಿದರು.

ಲೋಕ ಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Article Image

ಲೋಕ ಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

ಶಿಶಿಲದ ಚಂದ್ರಪುರ ಭಗವಾನ್ ಶ್ರೀ, ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ ನಡೆಯಿತು. ಕಾರ್ಕಳ ಜೈನಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಅಮ್ಮನವರ ಮಾರ್ಗದರ್ಶನದೊಂದಿಗೆ ಕಾರ್ಯಕ್ರಮ ನಡೆಯಿತು. ಶಶಿಪ್ರಭ ಉಜಿರೆ, ಚಂಚಲ ಕೃಷ್ಣರಾಜ ಧರ್ಮಸ್ಥಳ, ಶಕುಂತಲಾ ಡಾ. ಜಯಕೀರ್ತಿ ಜೈನ್, ಶೋಭಾ ಸಂತೋಷ್ ಜೈನ್, ಚಂದನ ವೃಷಭ, ವಿಮಲ ವಿಜಯ್ ಕುಮಾರ್, ಶಾಂತಿ ರಾಜೇಂದ್ರ ಕುಮಾರ್ ಮುಡಾರು, ಪ್ರೇಮ ವಸಂತ್ ಕುಮಾರ್ ಉಜಿರೆ, ರೇಷ್ಮಾ ಫಣಿರಾಜ್, ಸುರಭಿ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಜಯಕುಮಾರ್ ಮತ್ತಿತರರು ಪೂಜೆ ನೆರವೇರಿಸಿದರು. ಪ್ರಧಾನ ಪುರೋಹಿತರಾಗಿ ಪ್ರತಿಷ್ಠಾಚಾರ್ಯ ಜಯರಾಜ್ ಇಂದ್ರ ಬೆಳ್ತಂಗಡಿ, ಅರಹಂತ ಇಂದ್ರ ಶಿಶಿಲ, ಕೀರ್ತಿ ಇಂದ್ರ ಬೈಲಂಗಡಿ, ಚಿತ್ತರಂಜನ್ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಾಲ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

ಇಂದು ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Article Image

ಇಂದು ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

ಬೆಳ್ತಂಗಡಿ ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿ ವೇಣೂರು [ರಿ]. ವತಿಯಿಂದ ಇಂದು ಸಂಜೆ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ಜರಗಲಿರುವುದು. ಫೆ.22 ರಿಂದ ಮಾ. 01ರವರೆಗೆ ಜರಗಿದ ಮಹಾಮಸ್ತಕಾಭಿಷೇಕದ ಯಶಸ್ವಿಗೆ ಸಹಕರಿಸಿದ ಶ್ರಾವಕ ಶ್ರಾವಕಿಯರ ಅಭಿನಂದನಾ ಕಾರ್ಯಕ್ರಮವು ಮೂಡಬಿದ್ರೆ ಶ್ರೀ ಜೈನ ಮಠದ ಪರಮಪೂಜ್ಯ ‘ಭಾರತಭೂಷಣ' ಜಗದ್ಗುರು ಸ್ವಸಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್‌ರವರ ಗೌರವ ಉಪಸ್ಥಿತಿಯಲ್ಲಿ, ಅಪರಾಹ್ನ ಗಂಟೆ 3-30 ಕ್ಕೆ ಶ್ರೀ ಭರತೇಶ ಸಮುದಾಯ ಭವನದಲ್ಲಿ ನಡೆಯಲಿದೆ. ಸಂಜೆ 5-00 ರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಶ್ರೀ ಕೊಡಮಣಿತ್ತಾಯ ದೈವ ಹಾಗೂ ಕಲ್ಕುಡ-ಕಲ್ಲುರ್ಟಿ ದೈವಗಳ ಭಂಡಾರಗಳ ಆಗಮನ. 6-00 ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಜಲಾಭಿಷೇಕ ಪ್ರಾರಂಭ. ರಾತ್ರಿ 7-00 ರಿಂದ ಶ್ರೀ ಮಹಾಲಿಂಗೇಶ್ವರ ದೇವರಿಗೆ ರಂಗ ಪೂಜೆ, 7-30 ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ವಿವಿಧ ದ್ರವ್ಯಗಳಿಂದ ಮಹಾಮಸ್ತಕಾಭಿಷೇಕ, 8-00 ರಿಂದ ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಕುಡ ಕಲ್ಲುರ್ಟಿ ದೈವಗಳ ನೇಮ. ಈ ಎಲ್ಲ ಕಾರ್ಯಕ್ರಮಗಳು ಜರಗಲಿದೆ. ವಿ.ಸೂ: ಶ್ರಾವಕ ಬಂಧುಗಳು ರೂ.3000. ರೂ.5000, ರೂ.10000 ಕಲಶಗಳನ್ನು ಪಡೆದು ಅಭಿಷೇಕ ಮಾಡಬಹುದು. ದ್ರವ್ಯಾಬಿಷೇಕ ಮಾಡಲಿಚ್ಚಿಸುವ ಬಂಧುಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು. ಮೊ: 9606356288

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರಕ್ಕೆ ಪೂಜ್ಯ ಹೆಗ್ಗಡೆಯವರ ಭೇಟಿ

Article Image

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರಕ್ಕೆ ಪೂಜ್ಯ ಹೆಗ್ಗಡೆಯವರ ಭೇಟಿ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಜಿನಮಂದಿರದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ. ಕೆ. ಜಯಕೀರ್ತಿ ಜೈನ್, ವಿಜಯ ಕುಮಾರ್, ಯುವರಾಜ್ ಪೂವಣಿ, ಫಣಿರಾಜ್ ಜೈನ್, ಜಿನರಾಜ್ ಪೂವಣಿ, ರಾಜೇಂದ್ರ ಕುಮಾರ್, ಪಿ. ಏನ್. ರವಿರಾಜ್, ಸಂತೋಷ ಜೈನ್, ವೀರೇಂದ್ರ ಕುಮಾರ್, ಜಿತೇoದ್ರ, ಸುದೀಂದ್ರ ಗುಣವರ್ಮ ಜೈನ್, ಅಜಿತ್ ಕುಮಾರ್, ಶ್ರೀ ಪಾರ್ಶ್ವ ಹಾಗೂ ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ನಾಗಕನ್ನಿಕಾ, ಶಕುಂತಲಾ ಜೈನ್, ವತ್ಸಲಾ, ಅಪೂರ್ವ, ವಿಮಲಾ, ಮಂಜುಳಾ, ಶೋಭಾ, ಸುರಭಿ, ಚಂಪಾ ಮುಂತಾದವರು ಉಪಸ್ಥಿತರಿದ್ದರು.

ವಾರ್ಷಿಕೋತ್ಸವ

Article Image

ವಾರ್ಷಿಕೋತ್ಸವ

ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಚಂದ್ರಪುರದ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕೋತ್ಸವವು ಕಾರ್ಕಳ ಜೈನ ಮಠದ ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಮತ್ತು ರಾಜಸ್ಥಾನ ತೀಜಾರ ಸಂಸ್ಥಾನ ಮಠದ ಪ.ಪೂ. ಸ್ವಸ್ತಿಶ್ರೀ ಸೌರಭಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಮಾ.11ರಂದು ನೆರವೇರಲಿರುವುದು.

ದ.ಕ.ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ಸೇವಾ ನಿವೃತ್ತಿಗೊಂಡ ಡಾ.ಕೆ.ಜಯಕೀರ್ತಿ ಜೈನ್ ಅವರಿಗೆ ಸನ್ಮಾನ

Article Image

ದ.ಕ.ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ಸೇವಾ ನಿವೃತ್ತಿಗೊಂಡ ಡಾ.ಕೆ.ಜಯಕೀರ್ತಿ ಜೈನ್ ಅವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಪಶುವೈದ್ಯಕೀಯ ಪರಿಕ್ಷಕರ ಸಂಘದಿಂದ ಜಿಲ್ಲಾ ಸಂಘದ ಅಧ್ಯಕ್ಷ ರಾಗಿ 30 ವರ್ಷ ಸೇವೆ ಸಲ್ಲಿಸಿದ ಡಾ.ಕೆ. ಜಯಕೀರ್ತಿ ಜೈನ್ ಅವರನ್ನು ಪಶು ಸಂಗೋಪನೆ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಡಾ.ಅರುಣ್ ಕುಮಾರ್ ಶೆಟ್ಟಿ ಯವರು ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಮಂಗಳೂರಿನಲ್ಲಿ ಸನ್ಮಾನಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೃಷ್ಣಮೂರ್ತಿ.ಜಿ. ವಹಿಸಿದ್ದರು. ಈ ಸಂದರ್ಭದಲ್ಲಿ ಪುಷ್ಪರಾಜ್ ಶೆಟ್ಟಿ, ಪ್ರಶಾಂತ್ ಕುಮಾರ್, ಶ್ರೀಮಂದರ ಜೈನ್, ಮೋಹನ್ ದಾಸ್, ಡಾ. ವಸಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Article Image

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

ಧರ್ಮಸ್ಥಳ,ಮಾ.7: ಶಿವರಾತ್ರಿ ಎಂಬುದು ತಾಳ್ಮೆ. ಸಂಯಮ, ಜಾಗರಣೆ, ಉಪವಾಸ, ವ್ರತ - ನಿಯಮಗಳ ಪಾಲನೆಯೊಂದಿಗೆ ಪಂಚೇಂದ್ರಿಯಗಳ ನಿಯಂತ್ರಣ ಮಾಡಿ ಎಲ್ಲರಿಗೂ ಮಾನಸಿಕ ಪರಿವರ್ತನೆಯ ಶುಭರಾತ್ರಿಯಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಕಳೆದ 45 ವರ್ಷಗಳಿಂದ ಶಿವರಾತ್ರಿ ಸಂದರ್ಭ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರತಿವರ್ಷ ಪಾದಯಾತ್ರೆಯನ್ನು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಆಯೋಜಿಸುತ್ತಿರುವ ಹನುಮಂತಪ್ಪ ಸ್ವಾಮೀಜಿ ಮತ್ತು ಅವರ ಶಿಷ್ಯರನ್ನು ಗೌರವಿಸಿ ಅಭಿನಂದಿಸಿದರು. ಮುಂದೆ ನಿರ್ಧಿಷ್ಠ ಗುರಿ ಮತ್ತು ಹಿಂದೆ ಆದರ್ಶ ಗುರು ಇದ್ದಾಗ ಯಾವುದೇ ಕಾರ್ಯ ಯಶಸ್ವಿಯಾಗುತ್ತದೆ. ಪಾದಯಾತ್ರೆಯಲ್ಲಿ ಶ್ರದ್ಧಾ - ಭಕ್ತಿಯಿಂದ ಭಗವಂತನ ನಾಮಸ್ಮರಣೆಯೊಂದಿಗೆ ಕೆಟ್ಟ ಅಭ್ಯಾಸಗಳನ್ನು ಬಿಟ್ಟು ತ್ಯಾಗ ಮನೋಭಾವ ಮತ್ತು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಯುವಜನರು ಹೆಚ್ಚಾಗಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಚಲನಚಿತ್ರ ನಿರ್ದೇಶಕ ಶಶಿಕುಮಾರ್, ನಾಗರಾಜ ರೆಡ್ಡಿ, ಕಮಲಾ. ಮೋಹನ ಗೌಡ, ಚಂದ್ರಪ್ಪ, ಹನುಂತರಾಯಪ್ಪ, ನರಸಿಂಹಪ್ಪ ಮತ್ತು ಮರಿಯಪ್ಪ ಅವರನ್ನು ಸನ್ಮಾನಿಸಲಾಯಿತು. ಪಾದಯಾತ್ರಿಗಳ ಕ್ಷೇತ್ರದರ್ಶನ ಸುಗಮವಾಗಲು ಸಹಕರಿಸಿದ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರನ್ನು ಪಾದಯಾತ್ರಿಗಳ ಪರವಾಗಿ ಗೌರವಿಸಲಾಯಿತು.

ಶಿವನಾಮ ಸ್ಮರಣೆಯಿಂದ ಸಕಲದೋಷಗಳ ಪರಿಹಾರ

Article Image

ಶಿವನಾಮ ಸ್ಮರಣೆಯಿಂದ ಸಕಲದೋಷಗಳ ಪರಿಹಾರ

ಧರ್ಮಸ್ಥಳ,ಮಾ. 8: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ಎಲ್ಲಾ ಮನೋವಿಕಾರಗಳನ್ನು ದೂರಮಾಡಿ ಸಕಲ ಜೀವಿಗಳಿಗೆ ಲೇಸನ್ನೆ ಬಯಸಿ ಉನ್ನತ ಸಾಧನೆ ಮಾಡಬೇಕು. ಶಿವನ ಜೊತೆಗೆ ಶಿವಭಕ್ತರ ಸೇವೆ ಮಾಡಿದರೂ ಪುಣ್ಯ ಬರುತ್ತದೆ ಎಂದು ಅವರು ಹೇಳಿದರು. ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರು ನೊಂದು ಕಣ್ಣೀರು ಹಾಕಿದರೂ ಅದು ಶಾಪವಾಗಿ ಪರಿಣಮಿಸುತ್ತದೆ. ಹಿತ-ಮಿತ, ಸುಮಧುರ ಮಾತುಗಳನ್ನಾಡಬೇಕು. ಮಾತೇ ಮಾಣಿಕ್ಯ. ಮಾತು ಬಿಡ ಮಂಜುನಾಥ ಎಂಬ ಮಾತನ್ನು ಎಲ್ಲರೂ ಸದಾ ನೆನಪಿಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು. ಮನ, ವಚನ, ಕಾಯದಿಂದ ಪರಿಶುದ್ಧ, ದೃಢಸಂಕಲ್ಪ ಮತ್ತು ಪರಿಶುದ್ಧ ಭಕ್ತಿಯಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಿ ಉನ್ನತ ಸಾಧನೆ ಮಾಡಬಹುದು. ಶಿವರಾತ್ರಿ ಒಂದೇ ರಾತ್ರಿಗೆ ಸೀಮಿತವಾಗದೆ ಪ್ರತಿ ರಾತ್ರಿಯೂ ಶಿವರಾತ್ರಿಯಾಗಿ, ಶುಭರಾತ್ರಿಯಾಗಿ ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲೆಂದು ಅವರು ಹಾರೈಸಿದರು. ಬಳಿಕ ಡಾ. ಪವನ್ ಸಂಪಾದಿಸಿದ “ವೈದ್ಯಾಮೃತ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ, ಮರಿಯಪ್ಪ ಉಪಸ್ಥಿತರಿದ್ದರು. ಶಿವರಾತ್ರಿ ಪ್ರಯುಕ್ತ ಆಹೋರಾತ್ರಿ ಜಾಗರಣೆಯಿಂದಾಗಿ ಧರ್ಮಸ್ಥಳ ಅನ್ನಛತ್ರದ ಸೇವೆ ಇರುವುದಿಲ್ಲ. ಈ ಹಿನ್ನಲೆಯಲ್ಲಿ ಭಕ್ತರು ಭಕ್ತರಿಗಾಗಿ ವಿವಿಧ ಉಪಾಹಾರ ವ್ಯವಸ್ಥೆ ಕಲ್ಪಿಸಿರುವುದು ವಿಶೇಷ. ಈ ಬಾರಿ ಧರ್ಮಸ್ಥಳದಲ್ಲಿ ಧರ್ಮಶಾಸ್ತ ಅನ್ನದಾನ ಸಮಿತಿ, ಶ್ರೀ ಪಾಪಣ್ಣ ಗೆಳೆಯರ ಬಳಗ, ತಿಮ್ಮಾರೆಡ್ಡಿ, ಯಲಹಂಕ, ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಅನ್ನಸಂತರ್ಪಣಾ ಸಮಿತಿ, ನಾಗರಬಾವಿ, ಬೆಂಗಳೂರು, ಜನಜಾಗೃತಿ ವೇದಿಕೆ, ಹೊಸಪೇಟೆ, ವಿಜಯನಗರ, ಶ್ರೀ ಮಂಜುನಾಥ ಸ್ವಾಮಿ ಸೇವಾ ಸಮಿತಿ, ಬೆಂಗಳೂರು ಇನ್ನು ಹಲವಾರು ಸಂಘಟನೆಗಳು ಸೇರಿ ಶುಕ್ರವಾರ ರಾತ್ರಿ ಭಕ್ತರಿಗೆ ಉಪಾಹಾರ ನೀಡಿದರು.

ಫೆ.29 : ಮಹಾಮಸ್ತಕಾಭಿಷೇಕದ 8ನೇ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Article Image

ಫೆ.29 : ಮಹಾಮಸ್ತಕಾಭಿಷೇಕದ 8ನೇ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಇಂದಿನ (9ನೇ ದಿನ) ಸೇವಾಕರ್ತರುಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ರಾಜರ್ಷಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಹಾಗೂ ಕುಟುಂಬಸ್ಥರು ಮಾಡಿಸುವ ನಿತ್ಯವಿಧಿ ಸಹಿತ, ಆಹಾರ ದಾನ ವಿಧಿ, ಗಂಧ ಯಾಂತ್ರಾರಾಧನಾ ವಿಧಾನ, ಬೆಳಿಗ್ಗೆ 11.28ರಿಂದ 11.40ರ ವೃಷಭ ಲಗ್ನದಲ್ಲಿ ಮಂತ್ರನ್ಯಾಸ ಪೂರ್ವಕ ಶ್ರೀ ಕೇವಲಜ್ಞಾನ ಕಲ್ಯಾಣ, ಮುಖವಸ್ತ್ರ ಉದ್ಘಾಟನೆ ಮಧ್ಯಾಹ್ನ ಗಂಟೆ 3.00ರಿಂದ ಸಮವಸರಣ ಪೂಜೆಯು ಯುಗಳ ಮುನಿಶ್ರೀಗಳಾದ ಪ.ಪೂ. 108 ಶ್ರೀ ಅಮೋಘಕೀರ್ತಿ ಮಹಾರಾಜರು ಹಾಗೂ ಪ.ಪೂ. 108 ಶ್ರೀ ಅಮರಕೀರ್ತಿ ಮಹಾರಾಜರುಗಳ ಪಾವನ ಸಾನ್ನಿಧ್ಯ ಮತ್ತು ಧರ್ಮೋಪದೇಶಗಳೊಂದಿಗೆ ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಕಾರ್ಕಳ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆದು ಬಳಿಕ ಅಗ್ರೋದಕ ಮೆರವಣಿಗೆ. ಸಂಜೆ ಗಂಟೆ 7.00ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ 504 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ಜರಗಲಿದೆ. ಭರತೇಶ ಸಮುದಾಯ ಭವನದ ಮುಖ್ಯ ವೇದಿಕೆಯಲ್ಲಿ ರಾತ್ರಿ 7.30 ರಿಂದ ಉಜಿರೆ ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳು (ರಿ.) ನ ಎಸ್.ಡಿ.ಎಮ್. ಕಲಾ ಕೇಂದ್ರದ ಕಲಾವಿದರಿಂದ ಕಲಾ ವೈಭವ, ರಾತ್ರಿ 9.30ರಿಂದ ಕಾರ್ಕಳದ ಶ್ರೀ ಲಲಿತಕೀರ್ತಿ ಯಕ್ಷಗಾನ ಕಲಾ ಮಂಡಳಿ ಇವರಿಂದ ಯಕ್ಷಗಾನ- ಕಮಠೋಪಸರ್ಗ ವಿಜಯಿ, ವಸ್ತು ಪ್ರದರ್ಶನ ವೇದಿಕೆಯಲ್ಲಿ ರಾತ್ರಿ 7.00ರಿಂದ ಗುಂಡೂರಿ ಸ್ಪೂರ್ತಿ ಭಟ್ ಬಳಗದವರಿಂದ ಭಕ್ತಿಗೀತೆ ಹಾಗೂ ಭಾವಗೀತೆ, ವೇಣೂರು ಶಿವಾಂಜಲಿ ಡ್ಯಾನ್ಸ್ ಇನ್‌ಸ್ಟಿಟ್ಯೂಟ್ ಇವರಿಂದ ನೃತ್ಯ ಪ್ರದರ್ಶನ ನಡೆಯಲಿದೆ

ಮಾ. 01: ಕೊನೆಯ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

Article Image

ಮಾ. 01: ಕೊನೆಯ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

12 ವರ್ಷಗಳಿಗೊಮ್ಮೆ ನೆರವೇರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಸಂಭ್ರಮವು ವೇಣೂರಿನಲ್ಲಿ ಫೆ. 22ರಂದು ಮೊದಲ್ಗೊಂಡು, ಇಂದು(ಮಾ. 1) ಸಂಪನ್ನಗೊಳ್ಳಲಿದೆ. ಈ ದಿನದ ಸೇವಾಕರ್ತರಾದ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯಿಂದ 1008 ಕಲಶಾಭಿಷೇಕ ನಡೆಯಲಿದೆ. ಬೆಳಗ್ಗೆ 9.00ಕ್ಕೆ ನಿತ್ಯ ವಿಧಿ ಸಹಿತ ಸಿದ್ದಚಕ್ರ ಯಂತ್ರಾರಾಧನಾ ವಿಧಾನ, ಗಂಟೆ 10.15ರಿಂದ ಅಗ್ನಿತ್ರಯಾರ್ಚನಾ ಪೂರ್ವಕ ನಿರ್ವಾಣ ಕಲ್ಯಾಣ, ಅಗ್ರೋದಕ ಮೆರವಣಿಗೆ, ಸಂಜೆ ಗಂಟೆ 4.00ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ ಮಹೋತ್ಸವ, ಮಹಾಪೂಜೆ, ಸಂಘಪೂಜೆ, ಮಹಾಮಂಗಳಾರತಿ, ಕುಂಕುಮೋತ್ಸವ, ಅವಭೃತ ಸ್ನಾನ, ಧ್ವಜಾವರೋಹಣ, ತೋರಣ ವಿಸರ್ಜನೆ, ಮತ್ತು ಕಂಕಣ ವಿಸರ್ಜನೆ ಜರಗಲಿದೆ. ಅಪರಾಹ್ನ 3.00 ಗಂಟೆಗೆ ಯುಗಳ ಮುನಿಶ್ರೀಗಳಾದ, ಪ. ಪೂ. ೧೦೮ ಶ್ರೀ ಅಮೋಘಕೀರ್ತಿ ಮಹಾರಾಜರು ಹಾಗೂ ಪ. ಪೂ. ೧೦೮ ಶ್ರೀ ಅಮರ ಕೀರ್ತಿ ಮಹಾರಾಜರ ಪಾವನ ಸಾನಿಧ್ಯದಲ್ಲಿ, ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಮತ್ತು ಶ್ರೀ ಕ್ಷೇತ್ರ ಜಿನಕಂಚಿಯ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರ ಉಪಸ್ಥಿತಿಯಲ್ಲಿ, ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ಜರಗಲಿದೆ. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು, ಚಿತ್ರದುರ್ಗದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್ ಎಂ.ಎಲ್., ಎಂಎಲ್‌ಸಿ ಕೆ. ಪ್ರತಾಪಸಿಂಹ ನಾಯಕ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ನಾಗಪುರದ ಡಿ.ಪಿ. ಜೈನ್, ನಾಸಿಕ್‌ನ ರವೀಂದ್ರ ಪಾಟೀಲ್ ಉಪಸ್ಥಿತರಿರಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ ಭರತೇಶ ಸಮುದಾಯ ಭವನದ ಮುಖ್ಯ ವೇದಿಕೆಯಲ್ಲಿ ಸಂಜೆ 7.00ರಿಂದ ಸಾಲಿಗ್ರಾಮದ ಶ್ರೀ ಗುರು ಪ್ರಸಾದಿತ ಯಕ್ಷಗಾನ ಮಂಡಳಿ ಇವರಿಂದ ‘ಹೊಂಬುಜ ಕ್ಷೇತ್ರ ಮಹಾತ್ಮೆ'. ವಸ್ತುಪ್ರದರ್ಶನ ವೇದಿಕೆಯಲ್ಲಿ ರಾತ್ರಿ 7.00ರಿಂದ ವೇಣೂರಿನ ಅನುಸೂಯ ಫಾಟಕ ಮತ್ತು ತಂಡದವರಿಂದ ‘ಸಂಗೀತ ಕಾರ್ಯಕ್ರಮ’, ರಾತ್ರಿ 8.30ರಿಂದ ಮಂಜೇಶ್ವರದ ನಾಟ್ಯ ನಿಲಯಂ ತಂಡದವರಿಂದ ‘ನೃತ್ಯ ಕಾರ್ಯಕ್ರಮ’, ರಾತ್ರಿ 11.00ರಿಂದ ಪುಷ್ಕಳ್ ಕುಮಾರ್ ತೋನ್ಸ್‌ರವರ ತಂಡದವರಿಂದ ‘ಜಿನಕಥೆ-ಶ್ರೀ ಬಾಹುಬಲಿ ಚರಿತೆ’. ಈ ಎಲ್ಲಾ ಕಾರ್ಯಕ್ರಮಗಳು ಇಂದು ನಡೆಯಲಿದೆ.

ಮಹಾಮಸ್ತಕಾಭಿಷೇಕದ 7ನೇ ದಿನ - ಫೆ. 28 : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

Article Image

ಮಹಾಮಸ್ತಕಾಭಿಷೇಕದ 7ನೇ ದಿನ - ಫೆ. 28 : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ 7ನೇ ದಿನವಾದ ಇಂದು (ಫೆ.28) ಸೇವಾಕರ್ತರಾದ ಸ್ವಸ್ತಿಕ್ ಜೈನ್ ಹಾಗೂ ಕುಟುಂಬಸ್ಥರು ಮಾಡಿಸುವ ನಿತ್ಯವಿಧಿ ಸಹಿತ, ಯಾಗಮಂಡಲ ಆರಾಧನಾ ವಿಧಾನ, ಮಧ್ಯಾಹ್ನ 2.00 ಗಂಟೆಗೆ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿಯ ರಾಜ್ಯಾಭಿಷೇಕ, ರಾಜ್ಯಭಾರ, ಸಂಜೆ ಗಂಟೆ 4.05ರ ಕರ್ಕಾಟಕ ಲಗ್ನದಲ್ಲಿ ವೈರಾಗ್ಯ ಪೂರ್ವಕ ದೀಕ್ಷಾ ವಿಧಿ, ಕೇಶಲೋಚನಾ ವಿಧಿ, ಪರಿಷ್ಕೃಮಣ ಕಲ್ಯಾಣ, ಅಗ್ರೋದಕ ಮೆರವಣಿಗೆ, ಬಳಿಕ ಸಂಜೆ ಗಂಟೆ 7.00ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ಜರಗಲಿದೆ. ಭರತೇಶ ಸಮುದಾಯ ಭವನದ ಮುಖ್ಯ ವೇದಿಕೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮವು ಅಪರಾಹ್ನ 3.00 ಗಂಟೆಗೆ ಯುಗಳ ಮುನಿಶ್ರೀಗಳಾದ ಪ.ಪೂ. ೧೦೮ ಶ್ರೀ ಅಮೋಘಕೀರ್ತಿ ಮಹಾರಾಜರು ಮತ್ತು ಪ.ಪೂ. ೧೦೮ ಶ್ರೀ ಅಮರಕೀರ್ತಿ ಮಹಾರಾಜರ ಪಾವನ ಸಾನ್ನಿಧ್ಯದಲ್ಲಿ, ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ವರೂರು ಜೈನ ಮಠದ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಹಾಗೂ ಶ್ರೀಕ್ಷೇತ್ರ ಕೊಲ್ಲಾಪುರ ಜೈನಮಠದ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಜರಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಭಾ.ಜ.ಪ. ಅಧ್ಯಕ್ಷರು ಮತ್ತು ಶಾಸಕರಾದ ಬಿ.ವೈ. ವಿಜಯೇಂದ್ರ ಇವರು ವಹಿಸಲಿದ್ದು, ಐಪಿಎಸ್ ಪೋಲಿಸ್ ಆಯುಕ್ತರಾದ ಅನುಪಮ್ ಅಗ್ರವಾಲ್, ಚೆನ್ನೈನ ಐ.ಎ.ಎಫ್. ಗ್ರೂಪ್ ಕ್ಯಾಪ್ಟನ್ ವೀರಚಕ್ರ ಅಭಿನಂದನ್ ವರ್ಧಮಾನ್, ಜೈಪುರ್ ರಿಲಯನ್ಸ್ ಇಂಡಸ್ಟ್ರೀಸ್ ಲಿ. ನ ಅಧ್ಯಕ್ಷರಾದ ಉಮೇಶ ಭಂಡಾರಿ, ಬೆಂಗಳೂರು ಗ್ರೀನ್‌ಚೆಫ್‌ನ ಸ್ಥಾಪಕಾಧ್ಯಕ್ಷರಾದ ಸುಖಲಾಲ್ ಜೈನ್, ಬೆಂಗಳೂರು ಮೈಕ್ರೊ ಲ್ಯಾಬ್ ಅಧ್ಯಕ್ಷರು ಮತ್ತು ಎಂ.ಡಿ. ದಿಲೀಪ್ ಸುರಾನ್, ಉಜಿರೆ ಎಸ್.ಡಿ.ಎಮ್. ಸೊಸೈಟಿ (ರಿ.)ನ ಪ್ರಾಜೆಕ್ಟ್ ಡೈರೆಕ್ಟರ್ ಶ್ರೇಯಸ್ ಕುಮಾರ್ ಮತ್ತು ಉದ್ಯಮಿ ಕಿರಣ್ ಜೈನ್ ಉಪಸ್ಥಿತರಿರುವರು. ಬೆಂಗಳೂರಿನ ಲೇಖಕಿ, ಪ್ರಾಧ್ಯಾಪಕಿ ಡಾ. ಪದ್ಮಿನಿ ನಾಗರಾಜ್ ರವರು ವಿಶ್ವಧರ್ಮವಾದ ಜೈನಧರ್ಮದ ಪ್ರಸ್ತುತತೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿರುವರು. ಮುಖ್ಯ ವೇದಿಕೆಯಲ್ಲಿ ರಾತ್ರಿ 8.00ರಿಂದ ಹೊಸದೆಹಲಿಯ ಸ್ವಾತಿ ನಿಹಾಲ್ ಜೈನ್ ಮತ್ತು ಬಳಗದವರಿಂದ ಸಂಗೀತ ಸುಧೆ ಮತ್ತು ವಸ್ತು ಪ್ರದರ್ಶನ ವೇದಿಕೆಯಲ್ಲಿ ರಾತ್ರಿ 7.00ರಿಂದ ಧಾರವಾಡದ ಕು. ಪ್ರಾಪ್ತಿ ಜೈನ್ ಕೆ.ಎ. ಇವರಿಂದ ಭರತ ನಾಟ್ಯ, ವೇಣೂರು ತುಳುನಾಡ ಕಲಾವಿದರಿಂದ ತುಳುನಾಡ ವೈಭವ ನಡೆಯಲಿದೆ.

ವೇಣೂರು ಭಗವಾನ್‌ ಬಾಹುಬಲಿ ಕ್ಷೇತ್ರಕ್ಕೆ ಮೈಸೂರು ಮಹಾರಾಜರ ಭೇಟಿ

Article Image

ವೇಣೂರು ಭಗವಾನ್‌ ಬಾಹುಬಲಿ ಕ್ಷೇತ್ರಕ್ಕೆ ಮೈಸೂರು ಮಹಾರಾಜರ ಭೇಟಿ

ವೇಣೂರು ಭ| ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ 5ನೇ ದಿನದ ಕಾರ್ಯಕ್ರಮಕ್ಕೆ ಮೈಸೂರು ಅರಮನೆ, ಮೈಸೂರು ಮಹಾಸಂಸ್ಥಾನದ ಮಹಾರಾಜರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗಮಿಸಿದ್ದರು. ಮಹಾರಾಜರನ್ನು ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಸ್ವಾಗತಿಸಿ ಬಾಹುಬಲಿ ಕ್ಷೇತ್ರಕ್ಕೆ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು, ಸೇವಾಕರ್ತರಾದ ಎಕ್ಸಲೆಂಟ್‌ ವಿದ್ಯಾಸಂಸ್ಥೆಯ ಯುವರಾಜ್‌ ಜೈನ್ ದಂಪತಿಗಳು, ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ್‌ ಕುಮಾರ್‌ ಇಂದ್ರ, ಕೆ. ಕೃಷ್ಣರಾಜ್‌ ಹೆಗ್ಡೆ, ಮುಲ್ಕಿ ಅರಮನೆಯ ಎಂ. ಗೌತಮ್‌ ಜೈನ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಮೊದಲಿಗೆ ಭ| ಬಾಹುಬಲಿ ಸ್ವಾಮಿಗೆ ನಮಿಸಿ, ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಕೊನೆಗೆ ರಾತ್ರಿ ನಡೆದ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿಯೂ ಭಾಗವಹಿಸಿದ್ದರು. ಇದಕ್ಕೂ ಮೊದಲು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಅರಮನೆಗೆ ತಿಮ್ಮಣರಸರಾದ ಡಾ. ಪದ್ಮಪ್ರಸಾದ್ ಅಜಿಲರ ಆಹ್ವಾನದ ಮೇರೆಗೆ ಮೈಸೂರಿನ ಅರಮನೆಯ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿದರು. ಅಜಿಲರು ಮಹಾರಾಜರನ್ನು ಗೌರವಿಸಿದ ಸಂದರ್ಭದಲ್ಲಿ ಶಿವಪ್ರಸಾದ್ ಅಜಿಲರು, ದೇವೇಂದ್ರ ಹೆಗ್ಡೆ ಕೊಕ್ರಾಡಿ ಮತ್ತಿತರರು ಉಪಸ್ಥಿತರಿದ್ದರು.

ಫೆ. 26 : ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆದ 5ನೇ ದಿನದ ಮಹಾಮಸ್ತಕಾಭಿಷೇಕ

Article Image

ಫೆ. 26 : ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆದ 5ನೇ ದಿನದ ಮಹಾಮಸ್ತಕಾಭಿಷೇಕ

ವೇಣೂರು ಭ| ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕದ 5 ದಿನವಾದ ಫೆ. 26ರಂದು ಶಾಂತಿಯ ಮೂರುತಿಗೆ ದ್ರವ್ಯಗಳ ಅಭಿಷೇಕ, ಭಕ್ತರಿಗೆ ಕಣ್ತುಂಬಿಕೊಳ್ಳುವ ಸಂಭ್ರಮ ಸಡಗರ. ಕಳೆದ ನಾಲ್ಕು ದಿನಗಳಿಂದ ಮಹಾಮಸ್ತಕಾಭಿಷೇಕವು ವೈಭವಪೋರಿತವಾಗಿ ನೆರವೇರಿ, ಸೋಮವಾರದಂದು ನಿತ್ಯವಿಧಿ ಸಹಿತ ಬೃಹತ್ ಯಾಂತ್ರಾರಾಧನಾ ವಿಧಾನ, ಮಂಟಪ ಪ್ರತಿಷ್ಠೆ, ವೇದಿ ಪ್ರತಿಷ್ಠೆ, ಅಗ್ರೋದಕ ಮೆರವಣಿಗೆ, ಜಲಯಾತ್ರಾ ಮಹೋತ್ಸವ ಮೊದಲಾದ ಧಾರ್ಮಿಕ ವಿಧಿ - ವಿಧಾನಗಳು ಜರುಗಿತು. ಗರ್ಭಾವತರಣ ಕಲ್ಯಾಣದ ದೃಶ್ಯ ರೂಪಕ ಎಲ್ಲರನ್ನು ಮಂತ್ರಮುಗ್ದರನ್ನಾಗಿಸಿತು. ಬಳಿಕ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಿತು. ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ ಮತ್ತು ರಶ್ಮಿತಾ ಜೈನ್ ಹಾಗೂ ಕುಟುಂಬಸ್ಥರು ದಿನದ ಸೇವಾಕೃರ್ತರಾಗಿದ್ದರು. ಭ| ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ವಿಶೇಷ ಗಣ್ಯರಾಗಿ ಮೈಸೂರು ಅರಮನೆ ಮಹಾರಾಜರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌, ಕಮಿಷನರ್‌ ಅನುಪಮ ಅಗರ್‌ವಾಲ್‌, ಐಜಿಪಿ ಬೋರಲಿಂಗಯ್ಯ ಪಾಲ್ಗೊಂಡರು.

ಫೆ. 26: ಮಹಾಮಸ್ತಕಾಭಿಷೇಕದ 5ನೇ ದಿನದ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Article Image

ಫೆ. 26: ಮಹಾಮಸ್ತಕಾಭಿಷೇಕದ 5ನೇ ದಿನದ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

"ದಕ್ಷಿಣ ಭಾರತದಲ್ಲಿ ಜೈನ ಪರಂಪರೆಯ ಪ್ರಭಾವ ಚಂದ್ರಗುಪ್ತ ಮೌರ್ಯನ ಕಾಲದಿಂದಲೂ ಅನೇಕ ಕೊಡುಗೆಗಳ ಮೂಲಕ ಬೆಳೆದು ಬಂದಿತ್ತು. ಮೈಸೂರು ಸಂಸ್ಥಾನಕ್ಕೂ ಜೈನ ಪರಂಪರೆಯ ಮಾರ್ಗದರ್ಶನವಿದ್ದು, ಸಂಸ್ಥಾನದಿಂದಲೂ ಜೈನ ಪರಂಪರೆಗೆ ದೊಡ್ಡ ಕೊಡುಗೆ ನೀಡಿದೆ" ಎಂದು ಮೈಸೂರು ಮಹಾ ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ 5ನೇ ದಿನವಾದ ಫೆ. 26ರಂದು ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುನಿಶ್ರೀ ಅಮೋಘಕೀರ್ತಿ ಮಹಾರಾಜರು ಪ್ರವಚನ ನೀಡಿ, ವ್ಯಕ್ತಿಯ ಸುಖ-ಭೋಗ, ವೈಭವ, ಆಡಂಬರ ನೋಡಿ ಗೌರವಿಸುವುದಲ್ಲ. ಮಹಾಮಸ್ತಕಾಭಿಷೇಕದಿಂದ ಮಾನಸಿಕ ಪರಿವರ್ತನೆಯೊಂದಿಗೆ ಸಾಮಾಜಿಕ ಸುಧಾರಣೆಯಾಗಬೇಕು ಎಂದರು. ಮುನಿಶ್ರೀ ಅಮರಕೀರ್ತಿ ಮುನಿಮಹಾರಾಜರು ಆಶೀರ್ವಚನ ನೀಡಿ ಪರಿಶುದ್ಧವಾದ ಅಚಲ ಭಕ್ತಿಯಿಂದ ಮಾನವನೇ ಮಾಧವನಾಗಬಲ್ಲ ಆತ್ಮನೇ ಪರಮಾತ್ಮನಾಗುತ್ತಾನೆ. ಅದಕ್ಕಾಗಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಎಂದರು. ಮೂಡುಬಿದಿರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಮಹಾಸ್ವಾಮೀಜಿಗಳವರು ಆಶೀರ್ವಚನ ನೀಡಿದರು. ಜಮಖಂಡಿಯ ಸಾಹಿತಿ ಬಿ.ಪಿ. ನ್ಯಾಮಗೌಡ ವಿಶೇಷ ಉಪನ್ಯಾಸ ನೀಡಿದರು. ಅಂಚೆ ಕಾರ್ಡ್ ಬಿಡುಗಡೆ: ಕರ್ನಾಟಕದ ಮುಖ್ಯ ಅಂಚೆ ಮಹಾಪ್ರಬಂಧಕ ಶಿರ್ತಾಡಿ ರಾಜೇಂದ್ರ ಕುಮಾರ್, ಅಂಚೆ ಇಲಾಖೆ ಮೂಲಕ ರೂಪಿಸಿದ ಬಾಹುಬಲಿ ಸ್ವಾಮಿಯ ಸಚಿತ್ರ ಅಂಚೆ ಕಾರ್ಡ್‌ನ್ನು ಮೈಸೂರು ಮಹಾರಾಜರು ಬಿಡುಗಡೆಗೊಳಿಸಿದರು. ಕು| ಮೌಲ್ಯ ಅವರ "ಬಾಹುಬಲಿ ಗೀತಾಮೃತ" ಗಾನಲಹರಿ ಬಿಡುಗಡೆಗೊಳಿಸಿ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ವಿ. ಪ್ರವೀಣ್ ಕುಮಾರ್ ಇಂದ್ರ, ಪಿ. ಜಯರಾಜ್ ಕಂಬಳಿ ಮತ್ತು ಹುಬ್ಬಳ್ಳಿಯ ಮಹಾವೀರ ಕುಂದೂರು ಉಪಸ್ಥಿತರಿದ್ದರು. ಸೇವಾಕರ್ತರಾದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಸ್ವಾಗತಿಸಿದರು. ಕಾರ್ಯದರ್ಶಿ ರಶ್ಮಿತಾ ಜೈನ್ ವಂದಿಸಿದರು. ಆಡಳಿತಾಧಿಕಾರಿ ಬಿ.ಪಿ. ಸಂಪತ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

ಮಹಾಮಸ್ತಕಾಭಿಷೇಕದ 6ನೇ ದಿನ - ಫೆ. 27 : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

Article Image

ಮಹಾಮಸ್ತಕಾಭಿಷೇಕದ 6ನೇ ದಿನ - ಫೆ. 27 : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

ವೇಣೂರು ಭ| ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕದ 6 ದಿನದ ಸೇವಾಕೃರ್ತಗಳಾದ ಎಂ. ಅನಂತ ಕುಮಾರ್ ಸಹೋದರರು ಮತ್ತು ಸಹೋದರಿಯರು ಹಾಗೂ ಕೆ. ಹೇಮರಾಜ್ ಜೈನ್ ಬೆಳ್ಳಿಬೀಡು ಅವರಿಂದ ಬೆಳಿಗ್ಗೆ 9.30ಕ್ಕೆ ಕಲ್ಲುಬಸದಿಯ ಪಾಂಡುಕಶಿಲೆಯಲ್ಲಿ ಜನ್ಮಾಭಿಷೇಕ ಕಲ್ಯಾಣ ನೆರವೇರಲಿದ್ದು, ನಿತ್ಯವಿಧಿ ಸಹಿತ ಬೆಳಗ್ಗೆ 9.35ರ ಮೇಷ ಲಗ್ನದಲ್ಲಿ ಶ್ರೀ ಜಿನ ಬಾಲಕನ ಜನ್ಮ ಕಲ್ಯಾಣ, ಅಷ್ಟದಿಕ್ಷು ಧಾಮ ಸಂಪ್ರೋಕ್ಷಣೆ, ಚತುರ್ದಿಕ್ಷು ಹೋಮ, ಪಾಂಡುಕಾಶಿಲೋಪರಿ ಜನ್ಮಾಭಿಷೇಕ ಕಲ್ಯಾಣ, ಅಗ್ರೋದಕ ಮೆರವಣಿಗೆ ನಡೆದು ಸಂಜೆ ಗಂಟೆ 6ರಿಂದ ನಾಮಕರಣ, ಬಾಲಲೀಲೋತ್ಸವದ ಬಳಿಕ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ಜರಗಲಿದೆ. ಭರತೇಶ ಸಮುದಾಯ ಭವನದಲ್ಲಿ ಅಪರಾಹ್ನ 3.00 ಗಂಟೆಗೆ ಯುಗಳ ಮುನಿಶ್ರೀಗಳಾದ ಪ.ಪೂ. 108 ಶ್ರೀ ಅಮೋಘಕೀರ್ತಿ ಮಹಾರಾಜರು ಮತ್ತು ಪ.ಪೂ. 108 ಶ್ರೀ ಅಮರಕೀರ್ತಿ ಮಹಾರಾಜರುಗಳ ಪಾವನ ಸಾನ್ನಿಧ್ಯದಲ್ಲಿ ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಮಹಾಸ್ವಾಮೀಜಿಗಳವರು, ಕಾರ್ಕಳ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಶ್ರೀ ಕ್ಷೇತ್ರ ನಾಂದಣಿ ಜೈನ ಮಠದ ಸ್ವಸ್ತಿಶ್ರೀ ಜಿನಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಧಾರ್ಮಿಕ ಸಭೆ ಜರಗಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯಿಲಿರವರು ವಹಿಸಲಿರುವರು. ಕಾರ್ಯಕ್ರಮದಲ್ಲಿ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಮಾಜಿ ಸಚಿವ ರಮಾನಾಥ ರೈ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ., ಮೂಡುಬಿದಿರೆ ಎಂ.ಸಿ.ಎಸ್. ಬ್ಯಾಂಕ್‌ನ ಸಿ.ಇ.ಒ., ಚಂದ್ರಶೇಖರ ಉಪಸ್ಥಿತರಿರುವರು. ಧಾರವಾಡದ ವಿಶ್ರಾಂತ ಕುಲಸಚಿವರಾದ ಡಾ. ಶಾಂತಿನಾಥ ದಿಬ್ಬದ ಅವರು "ಆದಿಪುರಾಣದಲ್ಲಿ ಜೀವನ ದರ್ಶನ" ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿರುವರು. ಮುಖ್ಯ ವೇದಿಕೆಯಲ್ಲಿ ರಾತ್ರಿ 8.00ರಿಂದ ಧಾರವಾಡದ ವಿಶ್ವಾಂಬರಿ ನೃತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ (ರಿ) ಇವರಿಂದ ವಿರಾಗಿ ಬಾಹುಬಲಿ ನೃತ್ಯ ರೂಪಕ, ವಸ್ತು ಪ್ರದರ್ಶನ ವೇದಿಕೆಯಲ್ಲಿ ರಾತ್ರಿ 7.00ರಿಂದ ಶ್ರುತಿ ಕಾಂತಾಜೆ ಮತ್ತು ಬಳಗದವರಿಂದ ಭಕ್ತಿ ಸಂಗೀತ ಬಳಿಕ ರಾತ್ರಿ 8.30ರಿಂದ ವೇಣೂರು ಐಸಿರಿ ಕಲಾವಿದರು ಇವರಿಂದ "ಮುತ್ತು ಮನಿಪುಜೆ" ತುಳು ಹಾಸ್ಯಮಯ ನಾಟಕ ನಡೆಯಲಿದೆ.

ಫೆ. 25 : ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆದ 4ನೇ ದಿನದ ಮಹಾಮಸ್ತಕಾಭಿಷೇಕ

Article Image

ಫೆ. 25 : ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆದ 4ನೇ ದಿನದ ಮಹಾಮಸ್ತಕಾಭಿಷೇಕ

ವೇಣೂರು ಭ| ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕದ 4 ದಿನವಾದ ಫೆ. 25ರಂದು ಬೆಳಿಗ್ಗೆ ಯುಗಳ ಮುನಿ ಮಹಾರಾಜರ ದೀಕ್ಷಾ ಮಹೋತ್ಸವದ ರಜತ ಸಂಭ್ರಮದ ಪ್ರಯುಕ್ತ ಬೆಳಿಗ್ಗೆ 108 ಕಲಶಗಳಿಂದ ಸ್ವಾಮಿಗೆ ಮಹಾಮಸ್ತಕಾಭಿಷೇಕ ಜರಗಿತು. ಈ ಮಹಾಮಸ್ತಕಾಭಿಷೇಕವನ್ನು ವೀಕ್ಷಿಸಲು ಭಕ್ತಾದಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. 4ನೇ ದಿನದ ಸೇವಾಕರ್ತರಾದ ಪೆರಿಂಜೆ ಪಡ್ಯೋಡಿಗುತ್ತು ಜೀವಂಧರ ಕುಮಾರ್‌, ಪತ್ನಿ ಸುಲೋಚನ ಮತ್ತು ಮಕ್ಕಳು ಹಾಗೂ ಮನೆಯವರ ನೇತೃತ್ವದಲ್ಲಿ ಬೆಳಿಗ್ಗೆ ಪಂಚ ಕುಂಭ ವಿನ್ಯಾಸಯುಕ್ತ ಗ್ರಹಯಜ್ಞ ವಿಧಾನ, ಜಲಾಗ್ನಿ ಹೋಮ, ಬೃಹತ್‌ ಶಾಂತಿ ಯಂತ್ರಾರಾಧನೆ, ಅಗ್ರೋದಕ ಮೆರವಣಿಗೆ, ಸಂಜೆ ಭ| ಬಾಹುಬಲಿ ಸ್ವಾಮಿಗೆ 108 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ನೆರವೇರಿತು. ಹೀಗೆ 4ನೇ ದಿನ ಹಗಲು ಮತ್ತು ರಾತ್ರಿಗಳಲ್ಲಿ ನಡೆದ ಮಹಾಮಸ್ತಕಾಭಿಷೇಕಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸಾಕ್ಷಿಯಾದರು.

ಮಹಾಮಸ್ತಕಾಭಿಷೇಕದ 5ನೇ ದಿನ - ಫೆ. 26 : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

Article Image

ಮಹಾಮಸ್ತಕಾಭಿಷೇಕದ 5ನೇ ದಿನ - ಫೆ. 26 : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

ವೇಣೂರು ಭ| ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕದ 5 ದಿನದ ಸೇವಾಕರ್ತರಾದ ಮೂಡುಬಿದಿರೆ ಎಕ್ಸಲೆಂಟ್‌ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್‌ ಜೈನ್‌ ಮತ್ತು ಕಾರ್ಯದರ್ಶಿ ರಶ್ಮಿತಾ ಜೈನ್‌ ಹಾಗೂ ಕುಟುಂಬಸ್ಥರ ವತಿಯಿಂದ ಬೃಹತ್‌ ಯಾಗಮಂಡಲ ಯಂತ್ರಾರಾಧನೆ, ಮಂಟಪ ಪ್ರತಿಷ್ಠೆ, ವೇದಿ ಪ್ರತಿಷ್ಠೆ ಬಳಿಕ ಅಗ್ರೋದಕ ಮೆರವಣಿಗೆ, ಸಂಜೆ ಜಲಯಾತ್ರಾ ಮಹೋತ್ಸವ, ಗರ್ಭಾವತರಣಾ ಕಲ್ಯಾಣ , ರಾತ್ರಿ ಭಗವಾನ್‌ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ಜರಗಲಿದೆ. ಭರತೇಶ ಸಮುದಾಯ ಭವನದ ಮುಖ್ಯವೇದಿಕೆಯಲ್ಲಿ ಬೆಳಿಗ್ಗೆ ವೇಣೂರು, ನಾರಾವಿ, ಬೆಳುವಾಯಿ ಜೈನ್‌ ಮಿಲನ್‌ ಸದಸ್ಯರಿಂದ ಜಿನ ಭಜನೆ ನಡೆಯಲಿದ್ದು, ಅಪರಾಹ್ನ ಯುಗಳ ಮುನಿಗಳಾದ ಅಮೋಘಕೀರ್ತಿ ಹಾಗೂ ಅಮರಕೀರ್ತಿ ಮಹಾರಾಜರು, ಮೂಡುಬಿದಿರೆಯ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಮಹಾಸ್ವಾಮೀಜಿಗಳವರು, ಕನಕಗಿರಿ ಜೈನ ಮಠದ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು, ಕಂಬದಹಳ್ಳಿ ಜೈನ ಮಠದ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ಪಾವನ ಸಾನಿಧ್ಯದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಲಿದೆ. ಈ ಕಾರ್ಯಕ್ರಮದಲ್ಲಿ ಮೈಸೂರು ಮಹಾಸಂಸ್ಥಾನದ ಮಹಾರಾಜರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ವಿ.ಪ. ಸದಸ್ಯ ಭೋಜೇಗೌಡ, ಬೆಂಗಳೂರಿನ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್, ಸೇವಾಕರ್ತರಾದ ಯುವರಾಜ್ ಜೈನ್, ರಶ್ಮಿತಾ ಜೈನ್ ಉಪಸ್ಥಿತರಿರುವರು. ಜಮಖಂಡಿಯ ನಿವೃತ್ತ ಪ್ರಾಧ್ಯಾಪಕ ಡಾ| ಬಿ.ಪಿ. ನ್ಯಾಮಗೌಡ ಅವರು ಜೈನ ಸಂಸ್ಕೃತಿಗೆ ಜೈನ ಆಚಾರ್ಯರು ಹಾಗೂ ಜೈನ ಅರಸು ಮನೆತನಗಳ ಕೊಡುಗೆ ಈ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ. ಬಳಿಕ ಮುಖ್ಯ ವೇದಿಕೆಯಲ್ಲಿ ಸಂಜೆ 6.30ರಿಂದ ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಲಾವಿದರಿಂದ ಭ| ಶ್ರೀ ಶಾಂತಿನಾಥ ಭಗವಾನರ ಗರ್ಭಾವತರಣ ಕಲ್ಯಾಣ ಧಾರ್ಮಿಕ ವಿಧಿ ನಡೆಯಲಿದೆ. ರಾತ್ರಿ 8.30ರಿಂದ ಜ್ಞಾನ ಐತಾಳ ನೇತೃತ್ವದಲ್ಲಿ ಹೆಜ್ಜೆನಾದ ನೃತ್ಯ-ಸಂಗೀತ ವೈವಿಧ್ಯ, ವಸ್ತು ಪ್ರದರ್ಶನ ವೇದಿಕೆಯಲ್ಲಿ ಡಾ. ದರ್ಶನಾ ಜೈನ್ ಸಾಂಗ್ಲಿ ಇವರಿಂದ ಭರತನಾಟ್ಯ, ಸುಮಾ ಕೋಟ ಮತ್ತು ಬಳಗದವರಿಂದ ಭಕ್ತಿ-ಭಾವ-ಸಂಗೀತ, ವೇಣೂರು ಸೇವಾ ಶರಧಿ ವಿಶ್ವಶ್ಥ ಮಂಡಳಿ (ರಿ.) ಇವರ ಸಂಯೋಜನೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಫೆ. 25: ಮಹಾಮಸ್ತಕಾಭಿಷೇಕದ 4ನೇ ದಿನದ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Article Image

ಫೆ. 25: ಮಹಾಮಸ್ತಕಾಭಿಷೇಕದ 4ನೇ ದಿನದ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

"ಅಧಿಕಾರ, ಶ್ರೀಮಂತಿಕೆಯಿಂದ ಹೊರತಾದ ಜೀವನ ಶ್ರೇಷ್ಠ ಕ್ಷಣಗಳಿವೆ ಎಂಬುದಕ್ಕೆ ಮಹಾಚಕ್ರವರ್ತಿ ಬಾಹುಬಲಿಯ ತ್ಯಾಗವೇ ಸಾಕ್ಷಿ. ದೈವಾರಾಧನೆ ಮೂಲಕ ಸಾಮಾಜಿಕ ಏಕತೆಯನ್ನು ಸಾರಿದ ಸಮುದಾಯ ಜೈನರದು. ಎಲ್ಲಾ ಕ್ಷೇತ್ರದಲ್ಲೂ ಜಿಲ್ಲೆಗೆ ಅತೀ ಹೆಚ್ಚಿನ ಕೊಡುಗೆಯನ್ನು ಜೈನ ಸಮುದಾಯ ನೀಡಿದೆ" ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವೇಣೂರಿನ‌ ಭ| ಬಾಹುಬಲಿ ಮಸ್ತಕಾಭಿಷೇಕದ ನಾಲ್ಕನೇ ದಿನವಾದ ರವಿವಾರ(ಫೆ. 25)ದಂದು ಭರತೇಶ ಸಮುದಾಯ ಭವನದಲ್ಲಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲೋಕಸಭಾ ನಿಧಿಯಿಂದ ಕ್ಷೇತ್ರದ ಅಭಿವೃದ್ಧಿಗೆ 20 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಈ ಮೂಲಕ ಬಾಹುಬಲಿಯ ಸಂದೇಶವನ್ನು ರಾಜಕೀಯ ಜೀವನಕ್ಕೂ ಅಳವಡಿಸುವ ಕಾರ್ಯವಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಜಗತ್ತಿಗೆ ಅಹಿಂಸೆಯ ಸಂದೇಶ ಸಾರಿದ ಶ್ರೇಷ್ಠ ಧರ್ಮ ಜೈನ ಧರ್ಮ ಎಂದು ಹೇಳಿದರು. ನಂತರ ಸ್ವರ್ಣಲತಾ ನೆಲ್ಲಿಕಾರು ಬರೆದಿರುವ ರಾಜೇಶ್ ಭಟ್ ಸಂಗೀತ ಸಂಯೋಜನೆಯಲ್ಲಿ ವೃತಿಕ್ ಜೈನ್ ಪಡ್ಯೋಡಿಗುತ್ತು ಧ್ವನಿಯಲ್ಲಿ ಮೂಡಿ ಬಂದ "ವೇಣುಪುರದಿ ಭುಜಬಲೀಶನೇ" ಎಂಬ ಹಾಡಿನ ಸಿ.ಡಿ. ಬಿಡುಗಡೆ ಮಾಡಲಾಯಿತು. ವಿಶ್ರಾಂತ ಪ್ರಾಂಶುಪಾಲ ತುಮಕೂರಿನ ಡಾ| ಎಸ್.ಪಿ. ಪದ್ಮಪ್ರಸಾದ್ ಅವರು ವಿಶೇಷ ಉಪನ್ಯಾಸ ನೀಡಿದರು. ಸೇವಾಕರ್ತರಾದ ಪೆರಿಂಜೆ ಪಡ್ಯೋಡಿಗುತ್ತು ಜೀವಂಧರ್ ಕುಮಾರ್ ಮತ್ತು ಸುಲೋಚನಾ ಅವರನ್ನು ಮಹಾಮಸ್ತಕಾಭಿಷೇಕ ಸಮಿತಿಯ ವತಿಯಿಂದ ಕಾ‌ರ್ಯಾಧ್ಯಕ್ಷ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು ಸಮ್ಮಾನಿಸಿದರು. ಶಾಸಕರಾದ ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್, ಕೆ. ಹರೀಶ್‌ ಕುಮಾರ್, ಮಂಜುನಾಥ ಭಂಡಾರಿ, ಸಮಿತಿ ಪ್ರ. ಕಾರ್ಯದರ್ಶಿ ವಿ. ಪ್ರವೀಣ್ ಕುಮಾರ್ ಇಂದ್ರ, ಕೋಶಾಧಿಕಾರಿ ಪಿ. ಜಯರಾಜ್ ಕಂಬಳಿ, ನೋಡಲ್ ಅಧಿಕಾರಿ ಮಾಣಿಕ್ಯ ಎಂ., ವಿಕಾಸ್ ಜೈನ್, ರಮ್ಯಾ ವಿಕಾಸ್ ಮತ್ತು ವಿಶ್ವಾಸ್ ಜೈನ್, ಶುಭರೇಖಾ ವಿಶ್ವಾಸ್ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು. ದಿನದ ಸೇವಾಕರ್ತರಾದ ಪೆರಿಂಜೆ ಪಡ್ಯೋಡಿಗುತ್ತು ಜೀವಂಧರ್ ಕುಮಾರ್ ಸ್ವಾಗತಿಸಿದರು. ಶಿಕ್ಷಕ ನವೀನ್ ಕುಮಾರ್ ವಂದಿಸಿದರು. ಪ್ರಾಂಶುಪಾಲ ಡಾ| ಪ್ರಭಾತ್ ಬಲ್ನಾಡ್ ನಿರೂಪಿಸಿದರು. ಮುಖ್ಯವೇದಿಕೆಯಲ್ಲಿ ಬೆಳಿಗ್ಗೆ ಮೂಡುಬಿದಿರೆ, ಕಾರ್ಕಳ, ಕೆರ್ವಾಶೆ ಜೈನ್ ಮಿಲನ್ ಸದಸ್ಯರಿಂದ ಜಿನಭಜನೆ ಜರುಗಿತು. ರಾತ್ರಿ ಬೆಂಗಳೂರಿನ ಶಂಕರ್ ಶಾನಬೋಗ್ ಮತ್ತು ಬಳಗದವರಿಂದ ಭಕ್ತಿ, ಭಾವ, ಜನಪದಗೀತೆಗಳ ಸಂಯೋಜನೆಯ ಭಕ್ತಿರಸಾಮೃತವು ಜನರನ್ನು ಭಾವನ ಲೋಕಕ್ಕೆ ಕೊಂಡೊಯ್ಯಿತು. ವಸ್ತುಪ್ರದರ್ಶನ ವೇದಿಕೆಯಲ್ಲಿ ರಾತ್ರಿ ಮೂಡುಬಿದಿರೆಯ ಕು| ಅನನ್ಯಾ ರಂಜನಿ ಇವರಿಂದ ಭರತನಾಟ್ಯ ಬಳಿಕ ವೇಣೂರಿನ ಪ್ರತಿಭೆಗಳಿಂದ ನೃತ್ಯ ವೈವಿಧ್ಯ ಹಾಗೂ ವೇಣೂರಿನ ಬಾಹುಬಲಿ ಕಲಾ ತಂಡ ಇವರಿಂದ ತ್ಯಾಗವೀರ ಬಾಹುಬಲಿ ಯಕ್ಷಗಾನ ಪ್ರಸಂಗವು ನಡೆಯಿತು. ಈ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಮನಸೂರೆಗೊಂಡಿತು.

ಫೆ. 25 ವೇಣೂರು ಮಹಾಮಸ್ತಕಾಭಿಷೇಕ : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

Article Image

ಫೆ. 25 ವೇಣೂರು ಮಹಾಮಸ್ತಕಾಭಿಷೇಕ : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಮೂಡುಬಿದಿರೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ, ತಮಿಳುನಾಡು ತಿರುಮಲೈ ಸ್ವಸ್ತಿಶ್ರೀ ಧವಲಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ಶ್ರೀಕ್ಷೇತ್ರ ಸ್ವಾದಿ ದಿಗಂಬರ ಜೈನಮಠ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರ ಪಾವನ ಸಾನ್ನಿಧ್ಯ ಇರಲಿದ್ದು, ಮಾಜಿ ಮುಖ್ಯಮಂತ್ರಿ ಬಿ. ಬಸವರಾಜ ಬೊಮ್ಮಾಯಿ, ಸಚಿವ ಎನ್.ಎಸ್. ಬೋಸರಾಜ್, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಎಸ್. ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್, ದ.ಕ.ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆನಂದ್ ಕೆ., ದಿನದ ಸೇವಾಕರ್ತರಾದ ಜೀವಂಧರ್ ಕುಮಾರ್ ಉಪಸ್ಥಿತರಿರುವರು. ಡಾ| ಎಸ್.ಪಿ. ಪದ್ಮಪ್ರಸಾದ್ ಅವರಿಂದ ವಿಶೇಷ ಉಪನ್ಯಾಸವೂ ಇರಲಿದೆ. ರಾತ್ರಿ 7.30ಕ್ಕೆ ಮುಖ್ಯವೇದಿಕೆಯಲ್ಲಿ ಶಂಕರ್ ಶಾನಭೋಗ್ ಮತ್ತು ಬಳಗದಿಂದ ಭಕ್ತಿರಸಾಮೃತ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಸ್ತುಪ್ರದರ್ಶನ ವೇದಿಕೆಯಲ್ಲಿ ರಾತ್ರಿ 7ರಿಂದ 7.30ರ ವರೆಗೆ ಅನನ್ಯಾ ರಂಜನಿ, ಮೂಡುಬಿದಿರೆ ಅವರಿಂದ ಭರತನಾಟ್ಯ, 7.30ರಿಂದ 11ರ ವರೆಗೆ ಬಾಹುಬಲಿ ಕಲಾ ತಂಡ ವೇಣೂರು ಆದರಿಂದ ನೃತ್ಯ ವೈವಿಧ್ಯ ಹಾಗೂ ತ್ಯಾಗವೀರ ಬಾಹುಬಲಿ ಎಂಬ ಯಕ್ಷಗಾನ ಕಾರ್ಯಕ್ರಮಗಳು ಜರಗಲಿದೆ.

ವೇಣೂರು ಭಗವಾನ್ ಬಾಹುಬಲಿಗೆ ಮೂರನೇ ದಿನದ ಮಹಾಮಸ್ತಕಾಭಿಷೇಕ

Article Image

ವೇಣೂರು ಭಗವಾನ್ ಬಾಹುಬಲಿಗೆ ಮೂರನೇ ದಿನದ ಮಹಾಮಸ್ತಕಾಭಿಷೇಕ

ವೇಣೂರು,ಫೆ.24: ಉಪಾಧಿಗಳಿಂದ ಬಾಹುಬಲಿಯ ವ್ಯಕ್ತಿತ್ವದ ಸತ್ಯ ತಿಳಿಯಬಹುದು. ಈ ಭೂಮಿಯಲ್ಲಿ ನೈತಿಕತೆ ಎಂಬುದು ಶಾಶ್ವತವಾಗಿರಬೇಕು ಎಂಬ ಸಂದೇಶ ಬಾಹುಬಲಿಯದ್ದು. ಹಾಗಾಗಿ ಈ ಭೂಮಿಯಲ್ಲಿ ಅಹಿಂಸೆಯನ್ನು ಪಾಲಿಸಿದವರು ಮಹಾವೀರನ ಸರ್ವೋದಯ ಪರಿಪಾಲಕರು ಎಂದು ಹೊಂಬುಜ ಜೈನ ಮಠದ ಸ್ವಸ್ತಿಶ್ರೀ ದೇವೇಂದ್ರ ಕೀರ್ತಿ ಮಹಾಸ್ವಾಮೀಜಿಗಳವರು ನುಡಿದರು. “ವೇಣೂರು ಫಲ್ಗುಣಿ ತಟದಲ್ಲಿ ವಿರಾಜಮಾನನಾದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕದ ಮೂರನೇ ದಿನವಾದ ಫೆ. 24ರಂದು ಭರತೇಶ ಸಭಾಭವನದಲ್ಲಿ ಯುಗಳ ಮುನಿಗಳ ದಿವ್ಯ ಉಪಸ್ಥಿತಿಯಲ್ಲಿ ಆಯೋಜಿಸಿದ ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು ಮಾತನಾಡಿ, ಜೈನಧರ್ಮ ಶ್ರೇಷ್ಠ ವಿಶ್ವಧರ್ಮವಾಗಿದ್ದು ಅದರ ಎಲ್ಲ ತತ್ವಸಿದ್ಧಾಂತಗಳು ವೈಜ್ಞಾನಿಕವಾಗಿಯೂ ಸತ್ಯ ಮತ್ತು ಪರಿಪೂರ್ಣ ಎಂದು ಖಚಿತವಾಗಿದೆ ಎಂದರು. ಪತ್ರಕರ್ತ ಅಜಿತ್ ಹನುಮಕ್ಕನವರ್ ಜಿನಸಿದ್ಧಾಂತದ ಶ್ರೇಷ್ಠತೆ-ಅನೇಕಾಂತವಾದ ವಿಚಾರವಾಗಿ ಮಾತನಾಡಿ, ತ್ಯಾಗವನ್ನು ಮತ್ತು ತ್ಯಾಗಿಗಳನ್ನು ಸದಾಕಾಲ ಪೂಜಿಸಿದ ನಾಡು ನಮ್ಮದು ವಿಶ್ವದಲ್ಲಿ ಹುಟ್ಟಿದ ಅನೇಕ ಭೋಗಿಗಳಿದ್ದರೂ ಪೂಜನೀಯರಾದದ್ದು ತ್ಯಾಗಿಗಳು ಮಾತ್ರ ಎಂದರು. ಏರ್ ಇಂಡಿಯಾದಲ್ಲಿ ಪೈಲೆಟ್ ಆಗಿ ನೇಮಕಗೊಂಡ ವೇಣೂರಿನ ದಿ| ಬಿ.ಪಿ. ಇಂದ್ರರ ಮೊಮ್ಮಗಳು ಅನನ್ಯಾ ಜೈನ್ ಅವರನ್ನು ಸಮಿತಿ ಪರವಾಗಿ ಡಿ. ಹರ್ಷೇಂದ್ರ ಕುಮಾರ್ ಗೌರವಿಸಿದರು. ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿ ಜಿನೇಂದ್ರ ಕಣಗಾವಿ, ಹಿರಿಯ ವಕೀಲ ಪಿ.ಪಿ. ಹೆಗ್ಡೆ, ಎಚ್.ಪಿ.ಸಿ.ಎಲ್.ನ ನವೀನ್ ಕುಮಾರ್, ಶಾಸಕ ಹರೀಶ ಪೂಂಜ ಶುಭಾಶಂಸನೆ ಮಾಡಿದರು. ಕಾರ್ಯಾಧ್ಯಕ್ಷ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲ ಮತ್ತು ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ ಕುಮಾರ್ ಇಂದ್ರ, ಕೋಶಾಧಿಕಾರಿ ಪಿ. ಜಯರಾಜ್ ಕಂಬಳಿ, ಸೇವಾಕರ್ತರಾದ ಸುನಂದದೇವಿ ಬಿ.ಪಿ. ಇಂದ್ರ ಉಪಸ್ಥಿತರಿದ್ದರು. ಡಾ| ಶಾಂತಿಪ್ರಸಾದ್ ಸ್ವಾಗತಿಸಿದರು. ಶಾಲಿನಿ ನಿರಂಜನ್ ವಂದಿಸಿದರು. ನವಿತಾ ಜೈನ್ ನಿರ್ವಹಿಸಿದರು. ಮುಖ್ಯ ವೇದಿಕೆಯಲ್ಲಿ ಬೆಳಿಗ್ಗೆ ಪರುಷಶ್ರೀ ಜಿನಭಜನ ತಂಡ ಪರುಷಗುಡ್ಡೆ, ಕುಪ್ಪೆಪದವು, ರೆಂಜಾಳ ಜೈನ್ ಮಿಲನ್ ಸದಸ್ಯರಿಂದ ಜಿನಭಜನೆ ನಡೆಯಿತು. ಸಂಜೆ ಮುಖ್ಯ ವೇದಿಕೆಯಲ್ಲಿ ಅಜಯ್ ವಾರಿಯರ್ ಅವರಿಂದ ಸಂಗೀತಯಾನ, ವಸ್ತುಪ್ರದರ್ಶನ ವೇದಿಕೆಯಲ್ಲಿ ಭರತನಾಟ್ಯ, ನೃತ್ಯ ಸಂಗಮ ಪ್ರದರ್ಶನಗೊಂಡಿತು. ದಿನದ ಸೇವಾಕರ್ತರಾದ ಸುನಂದದೇವಿ ಬಿ.ಪಿ. ಇಂದ್ರ, ಮಕ್ಕಳು ಮತ್ತು ಕುಟುಂಬಸ್ಥರಿಂದ ಬಾಹುಬಲಿ ಸ್ವಾಮಿಗೆ ಸಂಜೆ 108 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ ನೆರವೇರಿತು. ಇದಕ್ಕೂ ಮುನ್ನ ಪೂಜಾವಿಧಾನ ನಡೆದು ಅಗ್ರೋದಕ ಮೆರವಣಿಗೆ ಭವ್ಯವಾಗಿ ನೆರವೇರಿತು.

ವೇಣೂರು : ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Article Image

ವೇಣೂರು : ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

ವೇಣೂರು, ಫೆ. 24: ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆಯು ಪರಮಪೂಜ್ಯ ಯುಗಳ ಮುನಿಶ್ರೀಗಳಿಂದ ನೆರವೇರಿತು. ಈ ಸಂದರ್ಭ ಹೊಂಬುಜ ಮಠಾಧೀಶರಾದ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು, ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು, ಕ್ಷೇತ್ರದ ಸ್ಥಾಪಕ ವಂಶೀಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ತೀರ್ಥಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ್ ಕುಮಾರ್ ಇಂದ್ರ, ಕಾಮಗಾರಿಯ ದಾನಿಗಳಾದ ಪೆರಿಂಜೆ ರಾಜ್ಯಗುತ್ತು ದೇವಕುಮಾರ್ ಕಂಬಳಿ ಮತ್ತು ಕುಟುಂಬಸ್ಥರು ಹಾಗೂ ಮಹಾಮಸ್ತಕಾಭಿಷೇಕ ಸಮಿತಿ ಸ್ವಯಂಸೇವಕರು ಮತ್ತು ಶ್ರಾವಕರು ಉಪಸ್ಥಿತರಿದ್ದರು.

ಫೆ. 25 : 4ನೇ ದಿನವಾದ ಇಂದು ದಿನವಿಡೀ ಮಹಾಮಸ್ತಕಾಭಿಷೇಕ

Article Image

ಫೆ. 25 : 4ನೇ ದಿನವಾದ ಇಂದು ದಿನವಿಡೀ ಮಹಾಮಸ್ತಕಾಭಿಷೇಕ

ವೇಣೂರು ಭಗವಾನ್‌ ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕದ 4ನೇ ದಿನವಾದ ಇಂದು (ಫೆ. 25) ಮಧ್ಯಾಹ್ನ 1ರಿಂದ 2.30ರ ವರೆಗೆ ಯುಗಳ ಮುನಿಗಳಾದ ಪೂಜ್ಯ ೧೦೮ ಶ್ರೀ ಅಮೋಘಕೀರ್ತಿ ಮಹಾರಾಜರು ಹಾಗೂ ೧೦೮ ಶ್ರೀ ಅಮರಕೀರ್ತಿ ಮಹಾರಾಜರ ರಜತ ದೀಕ್ಷಾ ಜಯಂತಿ ಸಮಾರಂಭ ನೆರವೇರಲಿದ್ದು, ಈ ಪ್ರಯುಕ್ತ ಮುಂಜಾನೆಯಿಂದಲೇ ಮಹಾಮಸ್ತಕಾಭಿಷೇಕ ಪ್ರಾರಂಭವಾಗಿದ್ದು, ಮಹಾಪೂಜೆ, ಮಹಾಮಂಗಳಾರತಿಯೊಂದಿಗೆ ಸಂಪನ್ನಗೊಳ್ಳಲಿದೆ. ಈ ದಿನದ ಸಂಜೆಯ ಮಹಾಮಸ್ತಕಾಭಿಷೇಕದ ಸೇವಾಕರ್ತರು ಪೆರಿಂಜೆ ಪಡ್ಯೋಡಿಗುತ್ತು ಜೀವಂಧರ ಕುಮಾರ್ ಮತ್ತು ಕುಟುಂಬದವರಾಗಿದ್ದು, ಬೆಳಗ್ಗೆ 8ರಿಂದ ಪಂಚಕುಂಭ ವಿನ್ಯಾಸಯುಕ್ತ ಗ್ರಹಯಜ್ಞ ವಿಧಾನ, ಜಲಾಗ್ನಿ ಹೋಮ, ಅಪರಾಹ್ನ 2ರಿಂದ ಬೃಹತ್ ಶಾಂತಿ ಯಂತ್ರಾರಾಧನಾ ವಿಧಾನ, ಆಗ್ರೋದಕ ಮೆರವಣಿಗೆ, ಸಂಜೆ 4ರಿಂದ ಶ್ರೀ ಬಾಹುಬಲಿ ಸ್ವಾಮಿಗೆ 108 ಕಲಶಗಳಿಂದ ಮಹಾಮಸ್ತಕಾಭಿಷೇಕ ಮಹಾಪೂಜೆ, ನೆರವೇರಲಿದೆ. ಹೀಗೆ ಈ ದಿನ ದಿನವೀಡಿ ಮಹಾಮಸ್ತಕಾಭಿಷೇಕದ ಸಂಭ್ರಮವನ್ನು ಭಕ್ತರು ಕಣ್ತುಂಬಿಕೊಳ್ಳಬಹುದು.

ಭ|| ಶ್ರೀ ಬಾಹುಬಲಿಗೆ ಮಹಾಮಸ್ತಕಾಭಿಷೇಕ

Article Image

ಭ|| ಶ್ರೀ ಬಾಹುಬಲಿಗೆ ಮಹಾಮಸ್ತಕಾಭಿಷೇಕ

ಬೆಳ್ತಂಗಡಿ, ಫೆ. 23: ವೇಣೂರು ವಿರಾಟ್ ವಿರಾಗಿಗೆ ಗುರುವಾರದಿಂದ ಮಹಾಮಸ್ತಕಾಭಿಷೇಕ ಆರಂಭವಾಗುತ್ತಲೆ ಫಲ್ಗುಣಿ ತಟದೆತ್ತರ ಬಾಹುಬಲಿ ಸ್ವಾಮೀಕಿ ಜೈ ಘೋಷ ಮೊಳಗಿದೆ. ರಾಜ್ಯದಲ್ಲಿರುವ ಪ್ರಮುಖ ನಾಲ್ಕು ಬಾಹುಬಲಿ ಮೂರ್ತಿಗಳ ಪೈಕಿ ಮೂರು ಮೂರ್ತಿಗಳು ಅವಿಭಜಿತ ದ.ಕ. ಜಿಲ್ಲೆಯಲ್ಲಿದ್ದರೆ, ಅತಿ ಎತ್ತರದ ಮೂರ್ತಿ ಶ್ರವಣಬೆಳಗೊಳದಲ್ಲಿದೆ. ಕಾರ್ಕಳದಲ್ಲಿ 42 ಅಡಿ, ಧರ್ಮಸ್ಥಳದಲ್ಲಿ 39 ಅಡಿ ಎತ್ತರದ ಬಾಹುಬಲಿ ಮೂರ್ತಿಗಳಿವೆ. ವೇಣೂರಿನಲ್ಲಿ ಅಜಿಲ ಮನೆತನದವರು ಸ್ಥಾಪಿಸಿದ 35 ಅಡಿ ಎತ್ತರದ ನಗುಮೊಗದ ಹಸನ್ಮುಖಿ ಗೊಮ್ಮಟನಿಗೆ ಮಹಾ ಮಸ್ತಕಾಭಿಷೇಕವನ್ನು ಕಂಡಾಗ ಯುಗಮುನಿಗಳ ಸಾನ್ನಿಧ್ಯದಲ್ಲಿ ಯುಗದಾಚೆಗಿನ ಮಹೋನ್ನತ ಜೈನ ಪರಂಪರೆಯ ಶ್ರೇಷ್ಠತೆ ಸಾರಿದೆ. ಭ|| ಶ್ರೀ ಬಾಹುಬಲಿಗೆ ಜಲಾಭಿಷೇಕದಿಂದ ಮೊದಲ್ಗೊಂಡು ಏಳನೀರು, ಇಕ್ಷುರಸ, ಕ್ಷೇರಾಭಿಷೇಕ, ಕಲ್ಕಚೂರ್ಣ, ಅರಶಿನ, ಚತುಷ್ಕೋಣ ಕಲಶ, ಕಷಾಯ, ಗಂಧಮ, ಚಂದನ, ಅಷ್ಠಗಂಧ, ಪುಷ್ಪವೃಷ್ಟಿಗೊಳಿಸಿ ಮಹಾ ಮಂಗಳಾರತಿಯೊಂದಿಗೆ ಮಹಾಕಲಶವನ್ನು ಶಾಂತಿ ಮಂತ್ರದೊಂದಿಗೆ ಪೂರ್ಣಕುಂಭ ಅಭಿಷೇಕವೇ ಮಹಾಮಸ್ತಕಾಭಿಷೇಕದ ವಿಶೇಷ ಕ್ಷಣವಿದು. ವಸ್ತು ಪ್ರದರ್ಶನ ಮಳಿಗೆ ಮಜ್ಜನದ ಇನ್ನೊಂದು ಪ್ರಮುಖ ಆಕರ್ಷಣೆ ಕೇಂದ್ರವೆಂದರೆ ವಸ್ತುಪ್ರದರ್ಶನ ಮಳಿಗೆಯಾಗಿದೆ. ಒಟ್ಟು 200ಕ್ಕೂ ಅಧಿಕ ಸ್ಟಾಲ್‌ಗಳು ಬಂದಿದ್ದು, ಅದರಲ್ಲೂ ವಸ್ತುಪ್ರದರ್ಶನದಲ್ಲಿ 110 ಸ್ಟಾಲ್‌ಗಳು, 10 ಸರಕಾರದ ಅಂದರೆ ಅರಣ್ಯ ಇಲಾಖೆ, ವಾರ್ತಾ ಇಲಾಖೆ, ಕೃಷಿ, ತೋಟಗಾರಿಕೆ, ನಂದಿನಿ ಸೇರಿದಂತೆ ಮಳಿಗೆಗಗಳು ರಚನೆಯಾಗಿದೆ. ಬೆಳಗ್ಗೆ8ರಿಂದ ರಾತ್ರಿ 11 ಗಂಟೆವರೆಗೆ ಪ್ರತಿದಿನ ವಸ್ತುಪ್ರದರ್ಶನ ವೇದಿಕೆಯಲ್ಲಿ ಸಾಂಸ್ಕೃತಿಕ ವೈಭವ ಇದೆ. ಬೆಟ್ಟದ 2 ಕಿ.ಮೀ. ವ್ಯಾಪ್ತಿಯಲ್ಲಿ ನೀಲನಕಾಶೆ ಮಜ್ಜನದ ಹಿನ್ನೆಲೆ ಜಿಲ್ಲಾಡಳಿತದಿಂದ ಈಗಾಗಲೆ ಬೆಟ್ಟದ 2 ಕಿ.ಮೀ. ವ್ಯಾಪ್ತಿಗೊಳ ಪಟ್ಟಂತೆ ನೀಲನಕಾಶೆ ಸಿದ್ಧಪಡಿಸಲಾಗಿದೆ. ಪ್ರಮುಖವಾಗಿ ಬಾಹುಬಲಿ ಬೆಟ್ಟ ಆಸ್ಪತ್ರೆ, ಪಾರ್ಕಿಂಗ್, ವಸ್ತುಪ್ರದರ್ಶನ ಮಳಿಗೆ, ಅನ್ನಛತ್ರ, ವಸತಿಗೃಹ ಸಹಿತ ಬರುವ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳ ಮಾಹಿತಿ ನೀಡಲಾಗಿದೆ. ನಾಲ್ಕು ಕಡೆಗಳಲ್ಲಿ ವಸತಿಗೃಹ ಸ್ವಯಂಸೇವಕರಿಗೆ, ಪೊಲೀಸರಿಗೆ, ಮೀಸಲು ಪಡೆ ಸೇರಿದಂತೆ ಸ್ವಯಂ ಸೇವಕ ಸಮಿತಿ, ಪೂಜಾ ಸಮಿತಿ, ಮೆರವಣಿಗೆಯ ತಂಡಗಳಿಗೆ ನಿಟ್ಟಡೆ, ವೇಣೂರು ಐಟಿಐ, ಹುಂಬೆಟ್ಟು ಶಾಲೆ, ವಿದ್ಯೋದಯ, ಕುಂಭಶ್ರೀ, ಸರಕಾರಿ ಪ್ರೌಢ ಶಾಲೆಗಳಲ್ಲಿ ಸುಮಾರು 500 ಮಂದಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ವಿಐಪಿ ಸೇರಿದಂತೆ ವಿವಿಐಪಿ ಯಾತ್ರಿಕರಿಗೆ ವೇಣೂರು, ಕಾರ್ಕಳ, ಬೆಳ್ತಂಗಡಿಯಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ದಿನದ 24 ತಾಸು ಆಸ್ಪತ್ರೆ ಸೇವೆ ಬರುವ ಯಾತ್ರಿಕರ ಆರೋಗ್ಯ ಕ್ಷೇಮಕ್ಕಾಗಿ ವೇಣೂರು ಪ್ರಾ.ಆರೋಗ್ಯ ಕೇಂದ್ರ, ಬಾಹುಬಲಿ ಬೆಟ್ಟದ ಮುಂಭಾಗ ಎಸ್.ಡಿ.ಎಂ. ಆಸ್ಪತ್ರೆಯಿಂದ ಉಳಿದಂತೆ ದಿನವೊಂದರಂತೆ ಮಂಗಳೂರಿನ ಪ್ರಖ್ಯಾತ ಆಸ್ಪತ್ರೆಗಳು ಆರೋಗ್ಯ ಸೇವೆ ಒದಗಿಸುತ್ತಿದೆ. ಜತೆಗೆ ತುರ್ತು ಸೇವೆಗೆಂದು 4 ಮತ್ತು 108 ಆ್ಯಂಬುಲೆನ್ಸ್ ನಿಯೋಜಿಸಲಾಗಿದೆ. ಪಾರ್ಕಿಂಗ್ ವ್ಯವಸ್ಥೆ: ವೇಣೂರು ಐಟಿಐ ಸಮೀಪ, ಕಲ್ಲಬಸದಿ, ಬೆಟ್ಟದ ಸುತ್ತ ವಿಐಪಿ, ವಿವಿಐಪಿ, ಮಾರ್ಗದ ಬದಿ, ಬೆಟ್ಟದ ಕೆಳಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಐಟಿಐನ 150 ವಿದ್ಯಾರ್ಥಿಗಳು, 100 ಗೃಹರಕ್ಷಕ, 200 ಪೊಲೀಸರು 3 ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 75 ಸಿಸಿ ಕಣ್ಣಾವಲು: ಬರುವ ಭಕ್ತರ ಸುರಕ್ಷತೆಗಾಗಿ ಒಟ್ಟು 75 ಕಿಒಗಳಲ್ಲಿ ಸಿಸಿ ಕೆಮರಾ ಅಳವಡಿಸಲಾಗಿದೆ. ಒಂದು ಪೊಲೀಸ್ ಕಂಟ್ರೋಲ್ ರೂಂ ಎಲ್ಲವನ್ನು ನಿಯಂತ್ರಿಸುವ ಬೆಟ್ಟದ ಮುಂಭಾಗ ವಾಚ್ ಜತೆಗೆ ಟವರ್ ಅಳವಡಿಸಲಾಗಿದೆ. ಡಿವೈಎಸ್‌ಪಿ, 8 ಮಂದಿ ವೃತ್ತ ನಿರೀಕ್ಷಕರು, ಎಲ್ಲ ಠಾಣೆ ಎಸ್.ಐ.ಗಳು ಜತೆಗಿದ್ದು ಭಕ್ತರ ಸುರಕ್ಷತೆಗೆ ಬೇಕಾದ ಅಗತ್ಯ ಕ್ರಮ ಕೈಗೊಂಡಿದ್ದಾರೆ. ದಿನವೊಂದರಂತೆ ಮೂಲಕ ಪುಷ್ಪವೃಷ್ಟಿ: ಶುಕ್ರವಾರ ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕರ್ತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ ಮತ್ತು ಅಶ್ವಿನಿಕುಮಾರಿ ಹಾಗೂ ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವನ್ ಹಾಗೂ ಕುಟುಂಬಸ್ಥರ ವತಿಯಿಂದ ಹೆಲಿಕಾಪ್ಟರ್‌ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಸೇವಾಕರ್ತರ ವತಿಯಿಂದ ವಿವಿಧ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

ವೇಣೂರು : ಮೂಡುಬಿದಿರೆ ಶ್ರೀಗಳ ಉಪಸ್ಥಿತಿಯಲ್ಲಿ ಸಮಾಲೋಚನಾ ಸಭೆ

Article Image

ವೇಣೂರು : ಮೂಡುಬಿದಿರೆ ಶ್ರೀಗಳ ಉಪಸ್ಥಿತಿಯಲ್ಲಿ ಸಮಾಲೋಚನಾ ಸಭೆ

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ವೈಭವದ ಮಹಾಮಸ್ತಕಾಭಿಷೇಕಕ್ಕೆ ಇನ್ನು ಕೆಲವೇ ದಿನಗಳ ಅಂತರ. ಫೆ. 17ರಂದು ಮೂಡುಬಿದಿರೆ ಶ್ರೀ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀತಿ೯ ಭಟ್ಟಾರಕ ಪಂಡಿತಾಚಾಯ೯ವಯ೯ ಮಹಾಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ ಮಹಾಮಸ್ತಕಾಭಿಷೇಕದ ಪೂವ೯ಸಿದ್ಧತೆಯ ಕುರಿತು ಸಮಾಲೋಚನಾ ಸಭೆಯು ಯಾತ್ರಿ ನಿವಾಸದಲ್ಲಿ ನಡೆಯಿತು. ಪೂಜ್ಯ ಸ್ವಾಮೀಜಿಯವರು ಮಹಾಮಸ್ತಕಾಭಿಷೇಕದ ಧಾಮಿ೯ಕ ವಿಧಿ-ವಿಧಾನವು ಯಾವುದೇ ಅಡೆತಡೆಗಳಿಲ್ಲದೆ ಸಾಂಗವಾಗಿ ನೆರವೇರಲಿ ಎಂದು ಆಶಿಸಿದರು. ಅಭಿಷೇಕ ಸಮಿತಿ, ಪೂಜಾ ಸಮಿತಿ, ಆಹಾರ ಸಮಿತಿ, ಮಹಿಳಾ ಸಮಿತಿ ಹಾಗೂ ಸೇವಾಕರ್ತೃಗಳ ಜೊತೆ ಸಮಾಲೋಚನೆ ನಡೆಸಿ ಎಲ್ಲಾ ಸಮಿತಿಗಳಿಗೆ ಮಾಗ೯ದಶ೯ನ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಮಸ್ತಕಾಭಿಷೇಕ ಸಮಿತಿಯ ಕಾಯಾ೯ಧ್ಯಕ್ಷರಾದ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಾಮಸ್ತಕಾಭಿಷೇಕಕ್ಕೆ ದ್ಯವ್ಯಗಳನ್ನು ಸೇವೆಯಾಗಿ ನೀಡಿದ ತುಮಕೂರಿನ ಉದ್ಯಮಿ ರಾಜೇಂದ್ರ ಕುಮಾರ್‌ ಅವರನ್ನು ಪೂಜ್ಯ ಶ್ರೀಗಳು ಮತ್ತು ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಗೌರವಿಸಿದರು. ಈ ಸಂದಭ೯ದಲ್ಲಿ ನೋಡಲ್ ಅಧಿಕಾರಿ ಮಾಣಿಕ್ಯ ಎಂ., ಮಸ್ತಕಾಭಿಷೇಕ ಸಮಿತಿಯ ಕೋಶಾಧಿಕಾರಿ ಜಯರಾಜ್ ಕಂಬಳಿ, ಮಸ್ತಕಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಮತ್ತಿತರರು ಉಪಸ್ಥಿತರಿದ್ದರು. ಕಾಯ೯ದಶಿ೯ ಮಹಾವೀರ್ ಜೈನ್ ಮೂಡುಕೋಡಿ ಗುತ್ತು ಕಾರ್ಯಕ್ರಮ ನಿರೂಪಿಸಿದರು.

ಸುಲ್ಕೇರಿ: ಭಗವಾನ್‌ ನೇಮಿನಾಥ ಬಸದಿಯಲ್ಲಿ ಮಂಡಲ ಪೂಜಾ ಮಹೋತ್ಸವ

Article Image

ಸುಲ್ಕೇರಿ: ಭಗವಾನ್‌ ನೇಮಿನಾಥ ಬಸದಿಯಲ್ಲಿ ಮಂಡಲ ಪೂಜಾ ಮಹೋತ್ಸವ

ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಭಗವಾನ್ ೧೦೦೮ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಮಂಡಲ ಪೂಜಾ ಮಹೋತ್ಸವವು ಕಾರ್ಕಳ ದಾನಶಾಲಾ ಶ್ರೀ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ಪಾವನ ಸಾನ್ನಿಧ್ಯದಲ್ಲಿ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಫೆ. 17ರಂದು ಜೈನ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಜರಗಲಿದೆ ಎಂದು ಆಡಳಿತ ಮೊಕ್ತೇಸರರಾದ ನಾವರಗುತ್ತು ಎನ್. ರವಿರಾಜ ಹೆಗ್ಡೆರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವೇಣೂರು ಭ. ಬಾಹುಬಲಿ ಕ್ಷೇತ್ರಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Article Image

ವೇಣೂರು ಭ. ಬಾಹುಬಲಿ ಕ್ಷೇತ್ರಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಫೆ. 14ರಂದು ಮಹಾಮಸ್ತಕಾಭಿಷೇಕ ಸಮಿತಿ ಹಾಗೂ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಅಧ್ಯಕ್ಷರೂ ಆಗಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಾಹುಬಲಿ ಕ್ಷೇತ್ರಕ್ಕೆ ಆಗಮಿಸಿ, ವಸ್ತುಪ್ರದರ್ಶನ, ಆಹಾರ, ಮಹಾಮಸ್ತಕಾಭಿಷೇಕ ವೀಕ್ಷಣೆಗೆ ನಿರ್ಮಿಸಿರುವ ಗ್ಯಾಲರಿಗಳ ಪೂರ್ವ ತಯಾರಿ ಕಾಮಗಾರಿಗಳ ಬಗ್ಗೆ ವಿವಿಧ ಸಮಿತಿಗಳ ಸಂಚಾಲಕರೊ೦ದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಬಳಿಕ ಅಟ್ಟಳಿಗೆ ವೀಕ್ಷಿಸಿ, ಕ್ಷೇತ್ರದಲ್ಲಿ ಆಗಿರುವ ಕಾಮಗಾರಿಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಅಳದಂಗಡಿ ಅರಮನೆಯ ತಿಮ್ಮಣ್ಡರಸರಾದ ಡಾ| ಪದ್ಮಪ್ರಸಾದ್ ಅಜಿಲರು ಇದುವರೆಗಿನ ಕಾಮಗಾರಿಗಳು ಮತ್ತು ಸರಕಾರದ ಅನುದಾನಗಳ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಮಹಾಮಸ್ತಕಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ್ ಕುಮಾ‌ರ್ ಇಂದ್ರ ಇದುವರೆಗಿನ ಖರ್ಚು ವೆಚ್ಚಗಳು, ಆಗಲಿರುವ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಮಾಜಿ ಸಚಿವ ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಉಪಾಧ್ಯಕ್ಷರಾದ ಕೆ. ಅಭಯಚಂದ್ರ ಜೈನ್, ಕಾರ್ಯನಿರ್ವಾಹಕ ಅಭಿಯಂತರರಾದ ಶಿವಪ್ರಸಾದ್‌ ಅಜಿಲ, ಜಿಲ್ಲಾ ನೋಡಲ್ ಅಧಿಕಾರಿ ಮಾಣಿಕ್ಯ ಎಂ., ಸಮನ್ವಯ ಅಧಿಕಾರಿ ಡಾ. ಕೆ. ಜಯಕೀತಿ೯ ಜೈನ್ ಧಮ೯ಸ್ಥಳ, ಮಹಾವೀರ ಅಜ್ರಿ ಧರ್ಮಸ್ಥಳ, ಪಡೋಡಿಗುತ್ತು ಎ. ಜೀವಂಧ‌ರ್ ಕುಮಾರ್, ಅಭಿಜಿತ್‌ ಎಂ., ಸುಭಾಶ್ಚಂದ್ರ ಜೈನ್ ಕೆಲ್ಲಪುತ್ತಿಗೆ, ಬಿ. ರತ್ನವರ್ಮ ಇಂದ್ರ, ನವೀನ್‌ಚಂದ್‌ ಬಲ್ಲಾಳ್, ಎಂ. ವಿಜಯರಾಜ್‌ ಅಧಿಕಾರಿ, ಡಾ| ಶಾಂತಿಪ್ರಸಾದ್, ಡಾ| ಕೆ. ಆರ್‌. ಪ್ರಸಾದ್‌, ವಿಕಾಸ್‌ ಜೈನ್, ತೀಥ೯ಕ್ಷೇತ್ರದ ಕಾಯ೯ಕಾರಿ ಸಮಿತಿ ಸದಸ್ಯರು ಮತ್ತು ಶ್ರೀ ಬಾಹುಬಲಿ ಯುವಜನ ಸಂಘದ ಸದಸ್ಯರು, ವೇಣೂರು ಜೈನ್‌ ಮಿಲನ್ ಸದಸ್ಯರು, ಬ್ರಾಹ್ಮಿ ಮಹಿಳಾ ಸಂಘದ ಸದಸ್ಯರು, ಕಲ್ಲು ಬಸದಿ ಬ್ರಿಗೇಡಿಯರ್ಸ್‌ ಸದಸ್ಯರು ಹಾಗೂ ಮಹಾಮಸ್ತಕಾಭಿಷೇಕ ಮಹೋತ್ಸವದ ವಿವಿಧ ಸಮಿತಿಗಳ ಸಂಚಾಲಕರು, ಸಂಯೋಜಕರು ಉಪಸ್ಥಿತರಿದ್ದರು. ಸಮಿತಿ ಕಾಯ೯ದಶಿ೯ ಮಹಾವೀರ ಜೈನ್ ಮೂಡುಕೋಡಿಗುತ್ತು ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

First Previous

Showing 3 of 4 pages

Next Last