ಸಮಾಜದ ಅಭಿವೃದ್ಧಿಗೆ ಸಂಘಟನೆ ಮುಖ್ಯ: ಬಿ. ಸೋಮ ಶೇಖರ ಶೆಟ್ಟಿ
ಉಜಿರೆ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆಯು ಮಿಲನ್ ಅಧ್ಯಕ್ಷರಾದ ಡಾಕ್ಟರ್ ನವೀನ್ ಕುಮಾರ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಜೈನ್ ಮಿಲನ್ ನ ಕಾರ್ಯ ಕ್ರಮಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸವಿವರವಾಗಿ ಅಧ್ಯಕ್ಷರು ವಿವರಿಸಿ ತಿಳಿಸಿದರು. ಭುಜಬಲಿಯವರು ಯಶಸ್ವಿ ಮಾಸಿಕ ಸಭೆ ನಡೆಸುವ ಬಗ್ಗೆ ಸಲಹೆ ನೀಡಿದರು. ಧೀಮಹಿ ಮಹಿಳಾ ಸಮಾಜದ ಅಧ್ಯಕ್ಷೆ ಡಾಕ್ಟರ್ ರಜತ ಅವರು ಮಾತನಾಡಿ ತಿಂಗಳಿಗೆ ಒಂದು ಸಲ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲು ಇಂತಹ ಸಭೆಗಳಿಂದ ಅವಕಾಶ ದೊರೆಯುತ್ತದೆ ಮತ್ತು ಇದನ್ನು ಎಲ್ಲಾ ಸದಸ್ಯರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಮಿಲನ್ ನಿರ್ದೇಶಕರಾದ ಬಿ. ಸೋಮ ಶೇಖರ ಶೆಟ್ಟಿ ಅವರು ಮಾತನಾಡಿ ಮಿಲನ್ ಸಂಘಟನೆಯ ಮಹತ್ವ ಹಾಗೂ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಸಂಘಟನೆ ಬಲಗೊಳಿಸುವಲ್ಲಿ ಸದಸ್ಯರ ಸಹಕಾರವನ್ನು ಕೋರಿದರು, ವೇದಿಕೆಯಲ್ಲಿ ಮುನಿರಾಜ ಅಜ್ರಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಸಂಪತ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು, ನಿಖಿತ್ ವಂದಿಸಿದರು.
