Article Image

ಇಜಿಲಂಪಾಡಿ: ಧಾಮ ಸಂಪ್ರೋಕ್ಷಣಾಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವ

Article Image

ಇಜಿಲಂಪಾಡಿ: ಧಾಮ ಸಂಪ್ರೋಕ್ಷಣಾಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಇಜಿಲಂಪಾಡಿ ಭಗವಾನ್ ೧೦೦೮ ಶ್ರೀ ಅನಂತನಾಥ ಸ್ವಾಮಿ ಬಸದಿಯು ಸಂಪೂರ್ಣ ಶಿಲಾಮಯವಾಗಿ ಜೀಣೋದ್ಧಾರಗೊಂಡು, ಧಾಮ ಸಂಪ್ರೋಕ್ಷಣಾಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವವು ಕಾರ್ಕಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಹಾಗೂ ಮಾರ್ಗದರ್ಶನದಲ್ಲಿ, ನಾಡಿನ ಎಲ್ಲಾ ಶ್ರೀ ಮಠದ ಪ.ಪೂ. ಭಟ್ಟಾರಕ ಸ್ವಾಮೀಜಿಗಳವರ ಆರ್ಶೀವಾದಗಳೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ, ದಿನಾಂಕ 26-04-2024ನೇ ಶುಕ್ರವಾರ ಮೊದಲ್ಗೊಂಡು ದಿನಾಂಕ 28-04-2024ನೇ ಭಾನುವಾರ ಪರ್ಯಂತ ಜೈನ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಳ್ಳಲಿರುವುದು.

ಧರ್ಮಸ್ಥಳ: ವಿಷು ಜಾತ್ರೆ ಸಂಪನ್ನ

Article Image

ಧರ್ಮಸ್ಥಳ: ವಿಷು ಜಾತ್ರೆ ಸಂಪನ್ನ

ಬೆಳ್ತಂಗಡಿ, ಏ. 23: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಎ. 13ರಂದು ಮೊದಲ್ಗೊಂಡು ಎ. 23ರಂದು ಶ್ರೀ ಮಂಜುನಾಥ ಸ್ವಾಮಿಯ ಉತ್ಸವ ಮೂರ್ತಿ ಓಕುಳಿಯಾಗಿ ನೇತ್ರಾವತಿ ನದಿಯಲ್ಲಿ ಅವಭೃಥ ಸ್ನಾನ ಹಾಗೂ ಧ್ವಜಾವರೋಹಣದೊಂದಿಗೆ ಭಕ್ತಿ, ಸಂಭ್ರಮದಿಂದ ವಿಧ್ಯುಕ್ತವಾಗಿ ಸಂಪನ್ನಗೊಂಡಿತು. ಎ.22ರಂದು ರಾತ್ರಿ ಶ್ರೀ ಸ್ವಾಮಿಯ ಮಹಾರಥೋತ್ಸವ ಪ್ರಯುಕ್ತ ದೇವಸ್ಥಾನದ ಒಳಾಂಗಣದಲ್ಲಿ ಉತ್ಸವ ಮೂರ್ತಿಯ ಉಡ್ಕು ಹಾಗೂ ವಿವಿಧ ವಾದ್ಯ ವೈಭವಗಳ ನಾಲ್ಕು ಸುತ್ತು ಬಲಿ ಉತ್ಸವ ನಡೆದು, ಹೊರಾಂಗಣದಲ್ಲಿ ಚೆಂಡೆ, ನಾದಸ್ವರ, ಶಂಖ ಜಾಗಟೆ, ಬ್ಯಾಂಡ್ ವಾಲಗ, ಸರ್ವ ವಾದ್ಯ, ತಟ್ಟಿರಾಯ ಸಹಿತ ಪ್ರದಕ್ಷಿಣೆ ಬಂದು ಬ್ರಹ್ಮ ರಥಕ್ಕೆ ಸುತ್ತು ಪ್ರದಕ್ಷಿಣೆ ಬಂದು ರಥಾರೋಹಣ ನಡೆಯಿತು. ಕ್ಷೇತ್ರದ ಸಕಲ ಬಿರುದಾವಲಿಗಳೊಂದಿಗೆ ಬಸವ, ಎರಡು ಆನೆಗಳು, ಸಹಸ್ರಾರು ಭಕ್ತರು ಮಹೋತ್ಸವದಲ್ಲಿ ಭಾಗಿಗಳಾಗಿದ್ದರು. ರಥಕ್ಕೆ ಭಕ್ತರು ಬಾಳೆಹಣ್ಣು ಎಸೆದು ತಮ್ಮ ಭಕ್ತಿ ಸಮರ್ಪಿಸಿದರು. ಡಾ| ಡಿ.ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಹೆಗ್ಗಡೆ ಕುಟುಂಬಸ್ಥರು, ಸೋನಿಯಾ ವರ್ಮಾ, ಕೆ.ಎನ್.ಜನಾರ್ದನ, ಜನಾರ್ದನ ಎಂ., ಡಾ| ಸತೀಶ್ಚಂದ್ರ ಎಸ್., ಡಾ| ಬಿ.ಎ.ಕುಮಾರ ಹೆಗ್ಡೆ, ಡಾ| ಶ್ರೀನಾಥ್ ಎಂ.ಪಿ., ವೀರು ಶೆಟ್ಟಿ, ಲಕ್ಷ್ಮೀನಾರಾಯಣ ರಾವ್, ಕ್ಷೇತ್ರದ ಅರ್ಚಕವೃಂದ, ಸಿಬ್ಬಂದಿ ಹಾಗೂ ಊರ ಪರವೂರ ಭಕ್ತರು ಪಾಲ್ಗೊಂಡಿದ್ದರು.

ಜೈನ ಶ್ರಾವಕ ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Article Image

ಜೈನ ಶ್ರಾವಕ ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಭ| ೧೦೦೮ ಧರ್ಮನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಇದೇ ಬರುವ ದಿನಾಂಕ 3, 4 ಮತ್ತು 5 ಮೇ 2024 ರಂದು ವಿಜೃಂಭಣೆಯಿಂದ ಜರಗಲಿರುವುದು. ಈ ಪ್ರಯುಕ್ತ ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳ ವಿವರ ಮತ್ತು ನಿಯಮ 1.ಧರ್ಮನಾಥ ಸ್ವಾಮಿಯ ಸಂಗೀತ/ಭಜನೆ ಸ್ಪರ್ಧೆ ಪ್ರಥಮ ಬಹುಮಾನ : 10,000 ನಗದು ಮತ್ತು ಸ್ಮರಣಿಕೆ ದ್ವಿತೀಯ ಬಹುಮಾನ : 8,000 ನಗದು ಮತ್ತು ಸ್ಮರಣಿಕೆ ನಿಯಮಗಳು :- ಧರ್ಮನಾಥ ಸ್ವಾಮಿಯ ಬಗ್ಗೆ ಹಾಡು/ಭಜನೆಯನ್ನು ಒಬ್ಬರೇ ಹಾಡಿ (ಹಿನ್ನೆಲೆ/ಮುನ್ನೆಲೆ) ವಿಡಿಯೋ ಮಾಡಿ ಕಳುಹಿಸಬೇಕು. ಸಾಹಿತ್ಯ ರಚಿಸುವವರು ಮತ್ತು ಗಾಯಕರು ಕಡ್ಡಾಯವಾಗಿ ‌‌ಶ್ರಾವಕ/ಶ್ರಾವಕಿಯರೇ ಆಗಿರಬೇಕು ಮತ್ತು ವಿಡಿಯೋದಲ್ಲಿ ಪ್ರತಿಯೊಬ್ಬರ ಹೆಸರುಗಳನ್ನು ನಮೂದಿಸಬೇಕು. ರಚನೆ ಮತ್ತು ಗಾಯನಕ್ಕೆ ಒಬ್ಬರಿಗೆ ಒಂದೇ ವಿಡಿಯೋಕ್ಕೆ ಮಾತ್ರ ಅವಕಾಶ. ಸಾಹಿತ್ಯ, ಸ್ವರ, ಹಿನ್ನೆಲೆ ಸಂಗೀತ, ಛಾಯಾಗ್ರಹಣ, ಇತ್ಯಾದಿ ಅಂಶಗಳನ್ನು ಪರಿಗಣಿಸಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ನಕಲು ಮಾಡಿದ ಅಥವಾ ಈ ಹಿಂದೆ ಪ್ರಕಟವಾದ ಹಾಡು/ಭಜನೆಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಭಜನೆ/ಸಂಗೀತ ಕನ್ನಡ ಅಥವಾ ಹಿಂದಿ ಭಾಷೆಯಲ್ಲಿರಬೇಕು. 2. ಪ್ರಬಂಧ ಸ್ಪರ್ಧೆ ಪ್ರಥಮ ಬಹುಮಾನ : 3,000 ನಗದು ಮತ್ತು ಸ್ಮರಣಿಕೆ ದ್ವಿತೀಯ ಬಹುಮಾನ : 2000 ನಗದು ಮತ್ತು ಸ್ಮರಣಿಕೆ ನಿಯಮಗಳು :- ಪ್ರಬಂಧದ ವಿಷಯ : "ಜೈನ ಧರ್ಮದ ಆಚರಣೆಗಳು ಮತ್ತು ವೈಜ್ಞಾನಿಕತೆ". ಪ್ರಬಂಧವು 900 ಶಬ್ದಗಳನ್ನು ಮೀರಬಾರದು. (ಅಂದಾಜು 2 ಪುಟಗಳು) ಪ್ರಬಂಧವನ್ನು ಕನ್ನಡ ನುಡಿಯಲ್ಲಿ ಟೈಪ್ ಮಾಡಿ PDF ಮಾಡಿ ಕಳುಹಿಸಬೇಕು. ವಿಶೇಷ ಸೂಚನೆಗಳು ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸಲು ಕೊನೆಯ ದಿನಾಂಕ 30 ಎಪ್ರಿಲ್ 2024. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ವಿಡಿಯೋ ಮತ್ತು ಪ್ರಬಂಧಗಳನ್ನು ಕಳುಹಿಸುವವರು ತಮ್ಮ ಫೋಟೊ, ವಿಳಾಸ, ಹಾಗೂ ಮೊಬೈಲ್ ನಂಬರ್ ನೊಂದಿಗೆ 9481016887 ಈ ವಾಟ್ಸಪ್ ನಂಬರ್ ಗೆ ಅಥವಾ naravibasadi24@gmail.com ಗೆ ಕಳುಹಿಸಬೇಕಾಗಿ ವಿನಂತಿ. ದಿನಾಂಕ 1 ಮೇ 2024 ರಂದು ವಿಜೇತರನ್ನು ಆಯ್ಕೆ ಮಾಡಲಾಗುವುದು ಮತ್ತು ದಿನಾಂಕ 5 ಮೇ 2024 ರಂದು ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಿಜೇತರನ್ನು ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಅತುಲ್ ಎಸ್. ಸೇಮಿತ: 9481016887 ಜ್ಞಾನೇಂದ್ರ ಕುಮಾರ್ ಜೈನ್: 9902799196

ಮೂಡುಬಿದಿರೆ: ಸಾವಿರ ಕಂಬ ಬಸದಿಯ ಕಿರಿಯ ಮತ್ತು ಹಿರಿಯ ರಥೋತ್ಸವ

Article Image

ಮೂಡುಬಿದಿರೆ: ಸಾವಿರ ಕಂಬ ಬಸದಿಯ ಕಿರಿಯ ಮತ್ತು ಹಿರಿಯ ರಥೋತ್ಸವ

ವರ್ಷಂಪ್ರತಿ ಜರುಗುವ ಜಗತ್ಪ್ರಸಿದ್ಧ ತ್ರಿಭುವನ ತಿಲಕ ಚೂಡಾಮಣಿ ಸಾವಿರ ಕಂಬ ಬಸದಿಯ ಕಿರಿಯ ಮತ್ತು ಹಿರಿಯ ರಥೋತ್ಸವವು ಎ. 18ರಿಂದ ಪ್ರಾರಂಭಗೊಂಡಿದ್ದು, ಇಂದು (ಏ.23) ಹಿರಿಯ ರಥೋತ್ಸವ ಮತ್ತು ಶ್ರವಣ ಸಂಸ್ಕೃತಿ ಸಮ್ಮೇಳನ ೧೦೮ ಚಾರಿತ್ರ ಚಕ್ರವರ್ತಿ ಶಾಂತಿಸಾಗರ ಮುನಿಮಹಾರಾಜರ ಆಚಾರ್ಯ ಪದಾರೋಹಣ ಶತಾಬ್ಧಿವರ್ಷ ಆಚರಣೆಯು, ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ, ಪಾವನ ಸಾನಿಧ್ಯ ಮತ್ತು ಆಶೀರ್ವಚನದೊಂದಿಗೆ ಜರಗಲಿರುವುದು.

ಬೆಳ್ತಂಗಡಿ: ಮಹಾವೀರ ಜಯಂತಿ ಆಚರಣೆ, ಚತುರ್ವಿಂಶತಿ ತೀರ್ಥಂಕರರ ಆರಾಧನೆ

Article Image

ಬೆಳ್ತಂಗಡಿ: ಮಹಾವೀರ ಜಯಂತಿ ಆಚರಣೆ, ಚತುರ್ವಿಂಶತಿ ತೀರ್ಥಂಕರರ ಆರಾಧನೆ

ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಇದೇ 21 ರಂದು ಭಾನುವಾರ ಹತ್ತನೆ ವಾರ್ಷಿಕೋತ್ಸವ, ಚತುರ್ವಿಂಶತಿ (ಇಪ್ಪತ್ತನಾಲ್ಕು) ತೀರ್ಥಂಕರರ ಆರಾಧನೆ, ೧೦೮ ಕಲಶಾಭಿಷೇಕ ಹಾಗೂ ಭಗವಾನ್ ಮಹಾವೀರ ಜಯಂತಿ ಆಚರಣೆ ನಡೆಯಲಿದೆ ಎಂದು ಬಸದಿಯ ಅನುವಂಶೀಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ ಏಳು ಗಂಟೆಯಿಂದ ತೋರಣಮುಹೂರ್ತ, ವಿಮಾನಶುದ್ಧಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ. ಪೂರ್ವಾಹ್ನ ಗಂಟೆ 8.45 ರಿಂದ ಸಾಮೂಹಿಕ ಚತುರ್ವಿಂಶತಿ (24) ತೀರ್ಥಂಕರರ ಆರಾಧನೆ ನಡೆಯಲಿದೆ. ಭಗವಾನ್ ಮಹಾವೀರ ಸ್ವಾಮಿಗೆ ನವಕಲಶಾಭಿಷೇಕ, ಭಗವಾನ್ ಶಾಂತಿನಾಥ ಸ್ವಾಮಿಗೆ ೧೦೮ ಕಲಶಗಳಿಂದ ಅಭಿಷೇಕ, ನೂತನ ಗಂಧಕುಟಿಯಲ್ಲಿ 24 ತೀರ್ಥಂಕರರ ಬಿಂಬಗಳ ಸ್ಥಾಪನೆ ನಡೆಯಲಿದೆ. ಅಪರಾಹ್ನ 3.00 ಗಂಟೆಗೆ ಹೊಂಬುಜ ಶ್ರೀ ಜೈನಮಠದ ಪ.ಪೂ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಮಹಾವೀರ ಜಯಂತಿ ಆಚರಣೆ ಬಗ್ಗೆ ಮಂಗಲ ಪ್ರವಚನ ನೀಡಲಿದ್ದಾರೆ. ಬಳಿಕ ನೂತನ ಘಂಟಾಮಂಟಪ ಹಾಗೂ ಜಲಧಾರ ಲೋಕಾರ್ಪಣೆಗೊಳ್ಳಲಿದೆ.

ಧರ್ಮಸ್ಥಳ: 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Article Image

ಧರ್ಮಸ್ಥಳ: 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ನೆರವೇರುವ ಉಚಿತ ಸಾಮೂಹಿಕ ವಿವಾಹವು ದಿನಾಂಕ 01-05-2024ನೇ ಬುಧವಾರ ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಜರುಗಲಿರುವುದು. ಈ ಸಾಮೂಹಿಕ ವಿವಾಹ ಸಮಾರಂಭದಲ್ಲಿ ವಿವಾಹವಾಗಲಿಚ್ಛಿಸುವವರು ದಿನಾಂಕ 25-04-2024ನೇ ಗುರುವಾರದ ಒಳಗಾಗಿ ವಧೂ-ವರರ ಹೆಸರು ದಾಖಲು ಮಾಡಿಸುವುದು. ಬರುವಾಗ ಮಂಡಲ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಯಾ ಕಾರ್ಯದರ್ಶಿಯವರಿಂದ ವಧೂ-ವರರ ಹೆಸರು, ಪ್ರಾಯ, ಹಿರಿಯರ ಒಪ್ಪಿಗೆ ಹಾಗೂ ಅವಿವಾಹಿತನೆಂಬುದಕ್ಕೆ ಅವಶ್ಯ ದೃಢಪತ್ರಿಕೆ ಮತ್ತು ವಧೂ-ವರರ ಇತ್ತೀಚಿನ ಭಾವಚಿತ್ರ 1+1 (ಪಾಸ್‌ಪೋರ್ಟ್ ಅಳತೆ) ತರಬೇಕು. ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆಕಣ ಮತ್ತು ಮಂಗಲಸೂತ್ರವನ್ನು ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ: ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರಿನ ಪ್ರವಚನ ಮಂಟಪದಲ್ಲಿರುವ ಸಾಮೂಹಿಕ ವಿವಾಹ ನೋಂದಣಿ ಕಚೇರಿಯನ್ನು ಸಂಪರ್ಕಿಸಿ: 9663464648/8147263422/08256 - 266644 ಅರ್ಜಿ ಮತ್ತು ಹೆಚ್ಚಿನ ಮಾಹಿತಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ: www.shridharmasthala.org ವಿ.ಸೂ.: ಯಾವುದೇ ಸಂದರ್ಭದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ.

ನಾರಾವಿ ಮಾಗಣೆ ಬಸದಿಯಲ್ಲಿ ಪೂಜಾ ಕಾರ್ಯಕ್ರಮ

Article Image

ನಾರಾವಿ ಮಾಗಣೆ ಬಸದಿಯಲ್ಲಿ ಪೂಜಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ನಾರಾವಿ ಮಾಗಣೆ ಭ| ೧೦೦೮ ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಏ.15(ನಾಳೆ )ರಂದು ಶ್ರೀ ಸ್ವಾಮಿಯ ಜಿನ ಬಿಂಬಕ್ಕೆ "ವಜ್ರ ಲೇಪನಾ "ಪ್ರಕ್ರಿಯೆ ಜರುಗಲಿರುವುದು. ಆ ಪ್ರಯುಕ್ತ ಬೆಳಿಗ್ಗೆ 8 ಗಂಟೆಯಿಂದ "ಚೌವ್ವೀಸ ತೀರ್ಥಂಕರ"ರ ಸಾಮೂಹಿಕ ಆರಾಧನಾ ಪೂಜಾ ವಿಧಾನ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Article Image

ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

ಬೆಳ್ತಂಗಡಿ ತಾಲೂಕಿನ ವೇಣೂರಿನ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕವು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. “ಭಾರತ ಭೂಷಣ” ಜಗದ್ಗುರು ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಏ. 13ರಂದು ಜರಗಲಿರುವುದು. ನಿರೀಕ್ಷಾ ಜೈನ್ ಇವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ವಿ. ಸೂ.: ವಿವಿಧ ದ್ರವ್ಯಗಳ ಅಭಿಷೇಕ ಮತ್ತು ಜಲಾಭಿಷೇಕ ಮಾಡಲಿಚ್ಚಿಸುವ ಧರ್ಮ ಬಂಧುಗಳು ಯಾತ್ರಿನಿವಾಸದಲ್ಲಿರುವ ಕಚೇರಿ ದೂರವಾಣಿ: 9606356288ನ್ನು ಸಂಪರ್ಕಿಸಬಹುದು.

ಶ್ರೀ ಕ್ಷೇತ್ರ ಕತ್ತೋಡಿಯಲ್ಲಿ ಸಂಕ್ರಮಣ

Article Image

ಶ್ರೀ ಕ್ಷೇತ್ರ ಕತ್ತೋಡಿಯಲ್ಲಿ ಸಂಕ್ರಮಣ

ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಶ್ರೀ ಕ್ಷೇತ್ರ ಕತ್ತೋಡಿಯ ಶಿವಭುವನೇಶ್ವರಿ ದೇಗುಲದಲ್ಲಿ ಮೇಷ ಸಂಕ್ರಮಣವು ಏ.13ರಂದು ನಡೆಯಲಿದೆ. ವಿ. ಸೂ.: ತುಪ್ಪದ ಸೇವೆ, ಹೂವಿನ ಪೂಜೆ ಹಾಗೂ ಮತ್ತಿತರ ಸೇವೆಗಳು ಇರಲಿದೆ. ಈ ಎಲ್ಲಾ ಸೇವೆಗಳನ್ನು ಮಾಡಲಿಚ್ಚಿಸುವವರು ಧರ್ಮದರ್ಶಿಗಳು: 94449714337 ನ್ನು ಸಂಪರ್ಕಿಸಬಹುದು.

ಭಾರತೀಯ ಜೈನ್ ಮಿಲನ್ ಕಾರ್ಕಳ ಇದರ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

Article Image

ಭಾರತೀಯ ಜೈನ್ ಮಿಲನ್ ಕಾರ್ಕಳ ಇದರ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಕಳ : ಭಾರತೀಯ ಜೈನ್ ಮಿಲನ್ ಕಾರ್ಕಳ ಇದರ 2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಾಹುಬಲಿ ಅರ್ಥ್ ಮೂವರ್ಸ್ ಮಾಲಕ ಅಶೋಕ್ ಎಚ್. ಎಂ., ಕಾರ್ಯದರ್ಶಿಯಾಗಿ ವಕೀಲ ವಿಖ್ಯಾತ್ ಜೈನ್ ಆಯ್ಕೆಯಾಗಿದ್ದಾರೆ. ಎ. 7ರಂದು ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅರ್ಥ್ ಮೂವರ್ಸ್ ಯೂನಿಯಾನ್ ಕಾರ್ಯದರ್ಶಿಯಾಗಿರುವ ಅಶೋಕ್ ಅವರು ಈ ಹಿಂದೆ ಜೈನ್ ಮಿಲನ್ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ವಿಖ್ಯಾತ್ ಅವರು ಜೈನ್ ಯುವ ಬ್ರಿಗೇಡ್ ಸಂಚಾಲಕರಾಗಿದ್ದಾರೆ. ಉಪಾಧ್ಯಕ್ಷರಾಗಿ ಪ್ರಮತ್ ಕುಮಾರ್ ಬಂಗ ಹಾಗೂ ಖಜಾಂಚಿಯಾಗಿ ಸುರೇಶ್ ಇಂದ್ರ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಜೈನ ಜೀರ್ಣೋದ್ದಾರ ಸಂಘದ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್, ಕಾರ್ಯದರ್ಶಿ ಎಂ. ಕೆ. ವಿಜಯ ಕುಮಾರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಅನಂತನಾಥಸ್ವಾಮಿ ಮತ್ತು ಶ್ರೀ ಬ್ರಹ್ಮಯಕ್ಷ ದೇವರ ಮಹಾರಥಯಾತ್ರಾ ಮಹೋತ್ಸವ

Article Image

ಶ್ರೀ ಅನಂತನಾಥಸ್ವಾಮಿ ಮತ್ತು ಶ್ರೀ ಬ್ರಹ್ಮಯಕ್ಷ ದೇವರ ಮಹಾರಥಯಾತ್ರಾ ಮಹೋತ್ಸವ

ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರು ಬಸದಿ ಭಗವಾನ್ ೧೦೦೮ ಶ್ರೀ ಅನಂತನಾಥಸ್ವಾಮಿ ಮತ್ತು ಶ್ರೀ ಬ್ರಹ್ಮಯಕ್ಷ ದೇವರ ಮಹಾರಥಯಾತ್ರಾ ಮಹೋತ್ಸವ 09-04-2024ನೇ ಮಂಗಳವಾರ ಮೊದಲ್ಗೊಂಡು 15-04-2024ನೇ ಸೋಮವಾರ ಪರ್ಯಂತ ನಡೆಯಲಿದೆ. 14-04-2024ನೇ ಭಾನುವಾರ ಮಹಾರಥಯಾತ್ರಾ ಮಹೋತ್ಸವ ಜರಗಲಿರುವುದು.

ಬೈಪಾಡಿ : ಭಗವಾನ್ 1008 ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣೆ

Article Image

ಬೈಪಾಡಿ : ಭಗವಾನ್ 1008 ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣೆ

ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬೈಪಾಡಿಯಲ್ಲಿರುವ ಭಗವಾನ್ 1008 ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣೆ ಮತ್ತು ನೂತನ ಏಕಶಿಲಾ ಮಾನಸ್ತಂಭೋಪರಿ ಚತುರ್ಮುಖ 1008 ಶ್ರೀ ಶಾಂತಿನಾಥ ತೀರ್ಥಂಕರರ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಕಾರ್ಕಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ನೇತೃತ್ವದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಜೈನ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಎ. 1 ರಂದು ಪ್ರಾರಂಭಗೊಂಡು ಎ.3ರ ತನಕ ನೆರವೇರಲಿರುವುದು.

ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ವಾರ್ಷಿಕ ರಥಯಾತ್ರಾ ಮಹೋತ್ಸವ

ನರಸಿಂಹರಾಜಪುರ, ಶ್ರೀಕ್ಷೇತ್ರ ಸಿಂಹನಗದ್ದೆ ಬಸ್ತಿಮಠದ ಭಗವಾನ್ ಶ್ರೀ 1008 ಚಂದ್ರಪ್ರಭ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಜ್ವಾಲಾಮಾಲಿನಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಪ.ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಮಾ.31ರಂದು ಪ್ರಾರಂಭಗೊಂಡು ಎ. 4ರವರೆಗೆ ಜರಗಲಿದೆ.

ವಾಲ್ಪಾಡಿ ಗ್ರಾಮದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವ

Article Image

ವಾಲ್ಪಾಡಿ ಗ್ರಾಮದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವ

ದ.ಕ ಜಿಲ್ಲೆಯ ಮೂಡಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವವು ಮೂಡಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ, ನೇತೃತ್ವ ಮತ್ತು ಪಾವನ ಸಾನ್ನಿಧ್ಯದಲ್ಲಿ, ಮಂಡ್ಯ ಶ್ರೀ ಕ್ಷೇತ್ರ ಆರತಿಪುರದ ಸ್ವಸ್ತಿಶ್ರೀ ಸಿದ್ಧಾಂತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಉಪಸ್ಥಿತಿಯೊಂದಿಗೆ ಮಾ.28ರಿಂದ ಮೊದಲ್ಗೊಂಡು ಮಾ.30ರವರೆಗೆ ಜೈನ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಜರಗಲಿರುವುದು.

ವೇಣೂರು : ಮಾ. 25ರಂದು ಭಗವಾನ್‌ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ, ಮಹೋತ್ಸವ ಹಾಗೂ ಮಹಾಪೂಜೆ

Article Image

ವೇಣೂರು : ಮಾ. 25ರಂದು ಭಗವಾನ್‌ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ, ಮಹೋತ್ಸವ ಹಾಗೂ ಮಹಾಪೂಜೆ

ಬೆಳ್ತಂಗಡಿ ತಾಲೂಕಿನ ವೇಣೂರಿನ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕವು ಇತ್ತೀಚೆಗೆ ಸಂಪನ್ನಗೊಂಡಿದ್ದು, ಇದೀಗ ಮಾ. 25ರಂದು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವದ ದಿನವಾಗಿದ್ದು, ಆ ಪ್ರಯುಕ್ತ ನಾಳೆ (ಮಾ. 25)ರಂದು ಸಾಯಂಕಾಲ ಗಂಟೆ 6.00ರಿಂದ ಭ|| ಶ್ರೀ ಬಾಹುಬಲಿ ಸ್ವಾಮಿಗೆ ೫೪ ಕಲಶಗಳಿಂದ ಪಾದಾಭಿಷೇಕ, ಮಹೋತ್ಸವ ಹಾಗೂ ಮಹಾಪೂಜೆಯು ನೆರವೇರಲಿದೆ ಎಂದು ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಪ್ರಕಟಣೆ ತಿಳಿಸಿದೆ.

ದರೆಗುಡ್ಡೆ: ಶ್ರೀ ೧೦೦೮ ಅನಂತನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಸಿದ್ಧರ ಪಂಚಾಮೃತ ಅಭಿಷೇಕ

Article Image

ದರೆಗುಡ್ಡೆ: ಶ್ರೀ ೧೦೦೮ ಅನಂತನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಸಿದ್ಧರ ಪಂಚಾಮೃತ ಅಭಿಷೇಕ

ದ.ಕ.ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕೆಲ್ಲಪುತ್ತಿಗೆ- ದರೆಗುಡ್ಡೆ ಗ್ರಾಮದ ಭಗವಾನ್ ಶ್ರೀ ೧೦೦೮ ಅನಂತನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಸಿದ್ಧರ ಪಂಚಾಮೃತ ಅಭಿಷೇಕ ಮತ್ತು ಅಷ್ಟಮ ನಂದೀಶ್ವರದ ಐವತ್ತೆರಡು ನೂತನ ಜಿನ ಬಿಂಬಗಳಿಗೆ ಮಹಾಭಿಷೇಕವು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ನೇತೃತ್ವ ಮತ್ತು ಆಶೀರ್ವಚನದೊಂದಿಗೆ ಮಾ.24 ರಂದು ನೆರವೇರಲಿರುವುದು.

ಮಾ. 24 : ಕಣ್ಣಿನ ಉಚಿತ ತಪಾಸಣೆ - ಪೊರೆ ಶಸ್ತ್ರಚಿಕಿತ್ಸಾ ಶಿಬಿರ

Article Image

ಮಾ. 24 : ಕಣ್ಣಿನ ಉಚಿತ ತಪಾಸಣೆ - ಪೊರೆ ಶಸ್ತ್ರಚಿಕಿತ್ಸಾ ಶಿಬಿರ

ಕಾರ್ಕಳ : ಜಿನವಾಣಿ ಮಹಿಳಾ ಸಂಘ ದಾನಶಾಲೆ ಮತ್ತು ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಾ. 24ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಾರ್ಕಳ ಜೈನ ಮಠದ ಬಳಿಯಿರುವ ಸಭಾಂಗಣದಲ್ಲಿ ಕಣ್ಣಿನ ಉಚಿತ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ: 9880015655 (ಸುಮನಾಜಿ), 9844511211 (ಹರ್ಷ) ಅಥವಾ 9591918216 (ವಿಶುಕುಮಾರ್) ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಡುಬಿದ್ರೆ: ಗುರುಗಳ ಬಸದಿಯ ಎಂಟನೇಯ ವಾರ್ಷಿಕೋತ್ಸವ

Article Image

ಮೂಡುಬಿದ್ರೆ: ಗುರುಗಳ ಬಸದಿಯ ಎಂಟನೇಯ ವಾರ್ಷಿಕೋತ್ಸವ

ಮೂಡುಬಿದ್ರೆ ಗುರುಗಳ ಬಸದಿ ಭಗವಾನ್ ಶ್ರೀ 1008 ಪಾರ್ಶ್ಶ್ವನಾಥ ಸ್ವಾಮಿ ತೀರ್ಥಂಕರ ಬಸದಿಯ ಎಂಟನೇಯ ವಾರ್ಷಿಕೋತ್ಸವವು ಜಗದ್ಗುರು ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ, ನೇತೃತ್ವ, ಪಾವನ ಸಾನಿಧ್ಯದಲ್ಲಿ ಮಾ.16 ಜರುಗಿತು. ಕಾರ್ಯಕ್ರಮದ ಅಂಗವಾಗಿ ತೋರಣ ಮಹೂರ್ತ, ನಾಗ ಕ್ಷೇತ್ರಪಾಲ ಪೂಜೆ, ಶ್ರೀ ಸರಸ್ವತಿ ಪೂಜೆ, ಪದ್ಮಾವತಿ ಯಕ್ಷಿ ಷೋಡಶೋಪಚಾರ ಪೂಜೆ, ಬ್ರಹ್ಮ ದೇವರ ಪೂಜೆ, ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿತು. ಆಶೀರ್ವಚನ ನೀಡಿದ ಪ.ಪೂ ಸ್ವಾಮೀಜಿಗಳವರು ಇಂದಿನಿಂದ ಜೈನರ ಎಂಟು ದಿನಗಳ ಪಾಲ್ಗುಣ ಮಾಸದ ಪರ್ವ ಅಷ್ಟಮ ನಂದಿಶ್ವರ ದ್ವೀಪಗಳ ಐವತ್ತ ಎರಡು ಜಿನಲಾಯಗಳ ಅಕೃತಿಮ ಜಿನ ಮಂದಿರ ಪೂಜೆ ನೆರವೇರಲಿದೆ. ಪ್ರಾರಂಭದ ದಿನ ಗುರು ಬಸದಿ ವಾರ್ಷಿಕೋತ್ಸವದ ನಿಮಿತ್ತ ಜಿನ ಭಗವಂತರ ಕೇವಲ ಜ್ಞಾನದಿಂದ ಪಡೆದ ದಿವ್ಯ ಸಂದೇಶ ತಿಳಿದುಕೊಳ್ಳಲು ಪ್ರಯತ್ನ ಮಾಡುವ ದಿನ ಲೋಕಕಲ್ಯಾಣ ಭಾವನೆಯಿಂದ ಜಿನ ಭಗವಂತ ನೀಡಿದ ಸಂದೇಶ ಅಳವಡಿಸಿ ಜೀವನ ಪಾವನವಾಗುವುದು ಎಂದರು ಹಾಗೂ ಪೂಜಾ ಸೇವಾದಾತರನ್ನು ಹರಸಿ ಆಶೀರ್ವಾದ ಮಾಡಿದರು. ಬಸದಿ ಮೋಕ್ತೆಸರರಾದ ಪಟ್ಣ ಶೆಟ್ಟಿ ಸುದೇಶ್ ಕುಮಾರ್, ದಿನೇಶ್ ಕುಮಾರ್, ಆದರ್ಶ್, ಮಂಜುಳಾ ಅಭಯ ಚಂದ್ರ ಜೈನ್, ವೀಣಾ ರಘುಚಂದ್ರ ಶೆಟ್ಟಿ, ಬಿ.ವಿಮಲ್ ಕುಮಾರ್, ವೀರೇಂದ್ರ ಕುಮಾರ್, ವೀರೇಂದ್ರ ಇಂದ್ರ, ಶ್ರೀನಾಥ್ ಬಲ್ಲಾಳ್, ಎಸ್. ಪಿ. ವಿದ್ಯಾಕುಮಾರ್, ಜ್ಞಾನ ಚಂದ್ರ, ಅಜಿತ್ ಪ್ರಸಾದ್, ನವೀನ್ ಲಂಡನ್ ಉಪಸ್ಥಿತರಿದ್ದರು. ವ್ಯವಸ್ಥಾಪಕ ಸಂಜಯಂತ ಕುಮಾರ್ ವಂದಿಸಿದರು.

ಲೋಕ ಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Article Image

ಲೋಕ ಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

ಶಿಶಿಲದ ಚಂದ್ರಪುರ ಭಗವಾನ್ ಶ್ರೀ, ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ ನಡೆಯಿತು. ಕಾರ್ಕಳ ಜೈನಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ, ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಅಮ್ಮನವರ ಮಾರ್ಗದರ್ಶನದೊಂದಿಗೆ ಕಾರ್ಯಕ್ರಮ ನಡೆಯಿತು. ಶಶಿಪ್ರಭ ಉಜಿರೆ, ಚಂಚಲ ಕೃಷ್ಣರಾಜ ಧರ್ಮಸ್ಥಳ, ಶಕುಂತಲಾ ಡಾ. ಜಯಕೀರ್ತಿ ಜೈನ್, ಶೋಭಾ ಸಂತೋಷ್ ಜೈನ್, ಚಂದನ ವೃಷಭ, ವಿಮಲ ವಿಜಯ್ ಕುಮಾರ್, ಶಾಂತಿ ರಾಜೇಂದ್ರ ಕುಮಾರ್ ಮುಡಾರು, ಪ್ರೇಮ ವಸಂತ್ ಕುಮಾರ್ ಉಜಿರೆ, ರೇಷ್ಮಾ ಫಣಿರಾಜ್, ಸುರಭಿ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಜಯಕುಮಾರ್ ಮತ್ತಿತರರು ಪೂಜೆ ನೆರವೇರಿಸಿದರು. ಪ್ರಧಾನ ಪುರೋಹಿತರಾಗಿ ಪ್ರತಿಷ್ಠಾಚಾರ್ಯ ಜಯರಾಜ್ ಇಂದ್ರ ಬೆಳ್ತಂಗಡಿ, ಅರಹಂತ ಇಂದ್ರ ಶಿಶಿಲ, ಕೀರ್ತಿ ಇಂದ್ರ ಬೈಲಂಗಡಿ, ಚಿತ್ತರಂಜನ್ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಾಲ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

ಇಂದು ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Article Image

ಇಂದು ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

ಬೆಳ್ತಂಗಡಿ ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿ ವೇಣೂರು [ರಿ]. ವತಿಯಿಂದ ಇಂದು ಸಂಜೆ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ಜರಗಲಿರುವುದು. ಫೆ.22 ರಿಂದ ಮಾ. 01ರವರೆಗೆ ಜರಗಿದ ಮಹಾಮಸ್ತಕಾಭಿಷೇಕದ ಯಶಸ್ವಿಗೆ ಸಹಕರಿಸಿದ ಶ್ರಾವಕ ಶ್ರಾವಕಿಯರ ಅಭಿನಂದನಾ ಕಾರ್ಯಕ್ರಮವು ಮೂಡಬಿದ್ರೆ ಶ್ರೀ ಜೈನ ಮಠದ ಪರಮಪೂಜ್ಯ ‘ಭಾರತಭೂಷಣ' ಜಗದ್ಗುರು ಸ್ವಸಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್‌ರವರ ಗೌರವ ಉಪಸ್ಥಿತಿಯಲ್ಲಿ, ಅಪರಾಹ್ನ ಗಂಟೆ 3-30 ಕ್ಕೆ ಶ್ರೀ ಭರತೇಶ ಸಮುದಾಯ ಭವನದಲ್ಲಿ ನಡೆಯಲಿದೆ. ಸಂಜೆ 5-00 ರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಶ್ರೀ ಕೊಡಮಣಿತ್ತಾಯ ದೈವ ಹಾಗೂ ಕಲ್ಕುಡ-ಕಲ್ಲುರ್ಟಿ ದೈವಗಳ ಭಂಡಾರಗಳ ಆಗಮನ. 6-00 ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಜಲಾಭಿಷೇಕ ಪ್ರಾರಂಭ. ರಾತ್ರಿ 7-00 ರಿಂದ ಶ್ರೀ ಮಹಾಲಿಂಗೇಶ್ವರ ದೇವರಿಗೆ ರಂಗ ಪೂಜೆ, 7-30 ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ವಿವಿಧ ದ್ರವ್ಯಗಳಿಂದ ಮಹಾಮಸ್ತಕಾಭಿಷೇಕ, 8-00 ರಿಂದ ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಕುಡ ಕಲ್ಲುರ್ಟಿ ದೈವಗಳ ನೇಮ. ಈ ಎಲ್ಲ ಕಾರ್ಯಕ್ರಮಗಳು ಜರಗಲಿದೆ. ವಿ.ಸೂ: ಶ್ರಾವಕ ಬಂಧುಗಳು ರೂ.3000. ರೂ.5000, ರೂ.10000 ಕಲಶಗಳನ್ನು ಪಡೆದು ಅಭಿಷೇಕ ಮಾಡಬಹುದು. ದ್ರವ್ಯಾಬಿಷೇಕ ಮಾಡಲಿಚ್ಚಿಸುವ ಬಂಧುಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು. ಮೊ: 9606356288

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರಕ್ಕೆ ಪೂಜ್ಯ ಹೆಗ್ಗಡೆಯವರ ಭೇಟಿ

Article Image

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರಕ್ಕೆ ಪೂಜ್ಯ ಹೆಗ್ಗಡೆಯವರ ಭೇಟಿ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಜಿನಮಂದಿರದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ. ಕೆ. ಜಯಕೀರ್ತಿ ಜೈನ್, ವಿಜಯ ಕುಮಾರ್, ಯುವರಾಜ್ ಪೂವಣಿ, ಫಣಿರಾಜ್ ಜೈನ್, ಜಿನರಾಜ್ ಪೂವಣಿ, ರಾಜೇಂದ್ರ ಕುಮಾರ್, ಪಿ. ಏನ್. ರವಿರಾಜ್, ಸಂತೋಷ ಜೈನ್, ವೀರೇಂದ್ರ ಕುಮಾರ್, ಜಿತೇoದ್ರ, ಸುದೀಂದ್ರ ಗುಣವರ್ಮ ಜೈನ್, ಅಜಿತ್ ಕುಮಾರ್, ಶ್ರೀ ಪಾರ್ಶ್ವ ಹಾಗೂ ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ನಾಗಕನ್ನಿಕಾ, ಶಕುಂತಲಾ ಜೈನ್, ವತ್ಸಲಾ, ಅಪೂರ್ವ, ವಿಮಲಾ, ಮಂಜುಳಾ, ಶೋಭಾ, ಸುರಭಿ, ಚಂಪಾ ಮುಂತಾದವರು ಉಪಸ್ಥಿತರಿದ್ದರು.

ವಾರ್ಷಿಕೋತ್ಸವ

Article Image

ವಾರ್ಷಿಕೋತ್ಸವ

ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಚಂದ್ರಪುರದ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕೋತ್ಸವವು ಕಾರ್ಕಳ ಜೈನ ಮಠದ ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಮತ್ತು ರಾಜಸ್ಥಾನ ತೀಜಾರ ಸಂಸ್ಥಾನ ಮಠದ ಪ.ಪೂ. ಸ್ವಸ್ತಿಶ್ರೀ ಸೌರಭಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಮಾ.11ರಂದು ನೆರವೇರಲಿರುವುದು.

ದ.ಕ.ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ಸೇವಾ ನಿವೃತ್ತಿಗೊಂಡ ಡಾ.ಕೆ.ಜಯಕೀರ್ತಿ ಜೈನ್ ಅವರಿಗೆ ಸನ್ಮಾನ

Article Image

ದ.ಕ.ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ಸೇವಾ ನಿವೃತ್ತಿಗೊಂಡ ಡಾ.ಕೆ.ಜಯಕೀರ್ತಿ ಜೈನ್ ಅವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಪಶುವೈದ್ಯಕೀಯ ಪರಿಕ್ಷಕರ ಸಂಘದಿಂದ ಜಿಲ್ಲಾ ಸಂಘದ ಅಧ್ಯಕ್ಷ ರಾಗಿ 30 ವರ್ಷ ಸೇವೆ ಸಲ್ಲಿಸಿದ ಡಾ.ಕೆ. ಜಯಕೀರ್ತಿ ಜೈನ್ ಅವರನ್ನು ಪಶು ಸಂಗೋಪನೆ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಡಾ.ಅರುಣ್ ಕುಮಾರ್ ಶೆಟ್ಟಿ ಯವರು ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಮಂಗಳೂರಿನಲ್ಲಿ ಸನ್ಮಾನಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೃಷ್ಣಮೂರ್ತಿ.ಜಿ. ವಹಿಸಿದ್ದರು. ಈ ಸಂದರ್ಭದಲ್ಲಿ ಪುಷ್ಪರಾಜ್ ಶೆಟ್ಟಿ, ಪ್ರಶಾಂತ್ ಕುಮಾರ್, ಶ್ರೀಮಂದರ ಜೈನ್, ಮೋಹನ್ ದಾಸ್, ಡಾ. ವಸಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Article Image

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

ಧರ್ಮಸ್ಥಳ,ಮಾ.7: ಶಿವರಾತ್ರಿ ಎಂಬುದು ತಾಳ್ಮೆ. ಸಂಯಮ, ಜಾಗರಣೆ, ಉಪವಾಸ, ವ್ರತ - ನಿಯಮಗಳ ಪಾಲನೆಯೊಂದಿಗೆ ಪಂಚೇಂದ್ರಿಯಗಳ ನಿಯಂತ್ರಣ ಮಾಡಿ ಎಲ್ಲರಿಗೂ ಮಾನಸಿಕ ಪರಿವರ್ತನೆಯ ಶುಭರಾತ್ರಿಯಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಕಳೆದ 45 ವರ್ಷಗಳಿಂದ ಶಿವರಾತ್ರಿ ಸಂದರ್ಭ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರತಿವರ್ಷ ಪಾದಯಾತ್ರೆಯನ್ನು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಆಯೋಜಿಸುತ್ತಿರುವ ಹನುಮಂತಪ್ಪ ಸ್ವಾಮೀಜಿ ಮತ್ತು ಅವರ ಶಿಷ್ಯರನ್ನು ಗೌರವಿಸಿ ಅಭಿನಂದಿಸಿದರು. ಮುಂದೆ ನಿರ್ಧಿಷ್ಠ ಗುರಿ ಮತ್ತು ಹಿಂದೆ ಆದರ್ಶ ಗುರು ಇದ್ದಾಗ ಯಾವುದೇ ಕಾರ್ಯ ಯಶಸ್ವಿಯಾಗುತ್ತದೆ. ಪಾದಯಾತ್ರೆಯಲ್ಲಿ ಶ್ರದ್ಧಾ - ಭಕ್ತಿಯಿಂದ ಭಗವಂತನ ನಾಮಸ್ಮರಣೆಯೊಂದಿಗೆ ಕೆಟ್ಟ ಅಭ್ಯಾಸಗಳನ್ನು ಬಿಟ್ಟು ತ್ಯಾಗ ಮನೋಭಾವ ಮತ್ತು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಯುವಜನರು ಹೆಚ್ಚಾಗಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಚಲನಚಿತ್ರ ನಿರ್ದೇಶಕ ಶಶಿಕುಮಾರ್, ನಾಗರಾಜ ರೆಡ್ಡಿ, ಕಮಲಾ. ಮೋಹನ ಗೌಡ, ಚಂದ್ರಪ್ಪ, ಹನುಂತರಾಯಪ್ಪ, ನರಸಿಂಹಪ್ಪ ಮತ್ತು ಮರಿಯಪ್ಪ ಅವರನ್ನು ಸನ್ಮಾನಿಸಲಾಯಿತು. ಪಾದಯಾತ್ರಿಗಳ ಕ್ಷೇತ್ರದರ್ಶನ ಸುಗಮವಾಗಲು ಸಹಕರಿಸಿದ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರನ್ನು ಪಾದಯಾತ್ರಿಗಳ ಪರವಾಗಿ ಗೌರವಿಸಲಾಯಿತು.

ಶಿವನಾಮ ಸ್ಮರಣೆಯಿಂದ ಸಕಲದೋಷಗಳ ಪರಿಹಾರ

Article Image

ಶಿವನಾಮ ಸ್ಮರಣೆಯಿಂದ ಸಕಲದೋಷಗಳ ಪರಿಹಾರ

ಧರ್ಮಸ್ಥಳ,ಮಾ. 8: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ಎಲ್ಲಾ ಮನೋವಿಕಾರಗಳನ್ನು ದೂರಮಾಡಿ ಸಕಲ ಜೀವಿಗಳಿಗೆ ಲೇಸನ್ನೆ ಬಯಸಿ ಉನ್ನತ ಸಾಧನೆ ಮಾಡಬೇಕು. ಶಿವನ ಜೊತೆಗೆ ಶಿವಭಕ್ತರ ಸೇವೆ ಮಾಡಿದರೂ ಪುಣ್ಯ ಬರುತ್ತದೆ ಎಂದು ಅವರು ಹೇಳಿದರು. ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರು ನೊಂದು ಕಣ್ಣೀರು ಹಾಕಿದರೂ ಅದು ಶಾಪವಾಗಿ ಪರಿಣಮಿಸುತ್ತದೆ. ಹಿತ-ಮಿತ, ಸುಮಧುರ ಮಾತುಗಳನ್ನಾಡಬೇಕು. ಮಾತೇ ಮಾಣಿಕ್ಯ. ಮಾತು ಬಿಡ ಮಂಜುನಾಥ ಎಂಬ ಮಾತನ್ನು ಎಲ್ಲರೂ ಸದಾ ನೆನಪಿಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು. ಮನ, ವಚನ, ಕಾಯದಿಂದ ಪರಿಶುದ್ಧ, ದೃಢಸಂಕಲ್ಪ ಮತ್ತು ಪರಿಶುದ್ಧ ಭಕ್ತಿಯಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಿ ಉನ್ನತ ಸಾಧನೆ ಮಾಡಬಹುದು. ಶಿವರಾತ್ರಿ ಒಂದೇ ರಾತ್ರಿಗೆ ಸೀಮಿತವಾಗದೆ ಪ್ರತಿ ರಾತ್ರಿಯೂ ಶಿವರಾತ್ರಿಯಾಗಿ, ಶುಭರಾತ್ರಿಯಾಗಿ ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲೆಂದು ಅವರು ಹಾರೈಸಿದರು. ಬಳಿಕ ಡಾ. ಪವನ್ ಸಂಪಾದಿಸಿದ “ವೈದ್ಯಾಮೃತ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ, ಮರಿಯಪ್ಪ ಉಪಸ್ಥಿತರಿದ್ದರು. ಶಿವರಾತ್ರಿ ಪ್ರಯುಕ್ತ ಆಹೋರಾತ್ರಿ ಜಾಗರಣೆಯಿಂದಾಗಿ ಧರ್ಮಸ್ಥಳ ಅನ್ನಛತ್ರದ ಸೇವೆ ಇರುವುದಿಲ್ಲ. ಈ ಹಿನ್ನಲೆಯಲ್ಲಿ ಭಕ್ತರು ಭಕ್ತರಿಗಾಗಿ ವಿವಿಧ ಉಪಾಹಾರ ವ್ಯವಸ್ಥೆ ಕಲ್ಪಿಸಿರುವುದು ವಿಶೇಷ. ಈ ಬಾರಿ ಧರ್ಮಸ್ಥಳದಲ್ಲಿ ಧರ್ಮಶಾಸ್ತ ಅನ್ನದಾನ ಸಮಿತಿ, ಶ್ರೀ ಪಾಪಣ್ಣ ಗೆಳೆಯರ ಬಳಗ, ತಿಮ್ಮಾರೆಡ್ಡಿ, ಯಲಹಂಕ, ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಅನ್ನಸಂತರ್ಪಣಾ ಸಮಿತಿ, ನಾಗರಬಾವಿ, ಬೆಂಗಳೂರು, ಜನಜಾಗೃತಿ ವೇದಿಕೆ, ಹೊಸಪೇಟೆ, ವಿಜಯನಗರ, ಶ್ರೀ ಮಂಜುನಾಥ ಸ್ವಾಮಿ ಸೇವಾ ಸಮಿತಿ, ಬೆಂಗಳೂರು ಇನ್ನು ಹಲವಾರು ಸಂಘಟನೆಗಳು ಸೇರಿ ಶುಕ್ರವಾರ ರಾತ್ರಿ ಭಕ್ತರಿಗೆ ಉಪಾಹಾರ ನೀಡಿದರು.

ಫೆ.29 : ಮಹಾಮಸ್ತಕಾಭಿಷೇಕದ 8ನೇ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Article Image

ಫೆ.29 : ಮಹಾಮಸ್ತಕಾಭಿಷೇಕದ 8ನೇ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಇಂದಿನ (9ನೇ ದಿನ) ಸೇವಾಕರ್ತರುಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ರಾಜರ್ಷಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಹಾಗೂ ಕುಟುಂಬಸ್ಥರು ಮಾಡಿಸುವ ನಿತ್ಯವಿಧಿ ಸಹಿತ, ಆಹಾರ ದಾನ ವಿಧಿ, ಗಂಧ ಯಾಂತ್ರಾರಾಧನಾ ವಿಧಾನ, ಬೆಳಿಗ್ಗೆ 11.28ರಿಂದ 11.40ರ ವೃಷಭ ಲಗ್ನದಲ್ಲಿ ಮಂತ್ರನ್ಯಾಸ ಪೂರ್ವಕ ಶ್ರೀ ಕೇವಲಜ್ಞಾನ ಕಲ್ಯಾಣ, ಮುಖವಸ್ತ್ರ ಉದ್ಘಾಟನೆ ಮಧ್ಯಾಹ್ನ ಗಂಟೆ 3.00ರಿಂದ ಸಮವಸರಣ ಪೂಜೆಯು ಯುಗಳ ಮುನಿಶ್ರೀಗಳಾದ ಪ.ಪೂ. 108 ಶ್ರೀ ಅಮೋಘಕೀರ್ತಿ ಮಹಾರಾಜರು ಹಾಗೂ ಪ.ಪೂ. 108 ಶ್ರೀ ಅಮರಕೀರ್ತಿ ಮಹಾರಾಜರುಗಳ ಪಾವನ ಸಾನ್ನಿಧ್ಯ ಮತ್ತು ಧರ್ಮೋಪದೇಶಗಳೊಂದಿಗೆ ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಕಾರ್ಕಳ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆದು ಬಳಿಕ ಅಗ್ರೋದಕ ಮೆರವಣಿಗೆ. ಸಂಜೆ ಗಂಟೆ 7.00ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ 504 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ಜರಗಲಿದೆ. ಭರತೇಶ ಸಮುದಾಯ ಭವನದ ಮುಖ್ಯ ವೇದಿಕೆಯಲ್ಲಿ ರಾತ್ರಿ 7.30 ರಿಂದ ಉಜಿರೆ ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳು (ರಿ.) ನ ಎಸ್.ಡಿ.ಎಮ್. ಕಲಾ ಕೇಂದ್ರದ ಕಲಾವಿದರಿಂದ ಕಲಾ ವೈಭವ, ರಾತ್ರಿ 9.30ರಿಂದ ಕಾರ್ಕಳದ ಶ್ರೀ ಲಲಿತಕೀರ್ತಿ ಯಕ್ಷಗಾನ ಕಲಾ ಮಂಡಳಿ ಇವರಿಂದ ಯಕ್ಷಗಾನ- ಕಮಠೋಪಸರ್ಗ ವಿಜಯಿ, ವಸ್ತು ಪ್ರದರ್ಶನ ವೇದಿಕೆಯಲ್ಲಿ ರಾತ್ರಿ 7.00ರಿಂದ ಗುಂಡೂರಿ ಸ್ಪೂರ್ತಿ ಭಟ್ ಬಳಗದವರಿಂದ ಭಕ್ತಿಗೀತೆ ಹಾಗೂ ಭಾವಗೀತೆ, ವೇಣೂರು ಶಿವಾಂಜಲಿ ಡ್ಯಾನ್ಸ್ ಇನ್‌ಸ್ಟಿಟ್ಯೂಟ್ ಇವರಿಂದ ನೃತ್ಯ ಪ್ರದರ್ಶನ ನಡೆಯಲಿದೆ

ಮಾ. 01: ಕೊನೆಯ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

Article Image

ಮಾ. 01: ಕೊನೆಯ ದಿನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

12 ವರ್ಷಗಳಿಗೊಮ್ಮೆ ನೆರವೇರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಸಂಭ್ರಮವು ವೇಣೂರಿನಲ್ಲಿ ಫೆ. 22ರಂದು ಮೊದಲ್ಗೊಂಡು, ಇಂದು(ಮಾ. 1) ಸಂಪನ್ನಗೊಳ್ಳಲಿದೆ. ಈ ದಿನದ ಸೇವಾಕರ್ತರಾದ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯಿಂದ 1008 ಕಲಶಾಭಿಷೇಕ ನಡೆಯಲಿದೆ. ಬೆಳಗ್ಗೆ 9.00ಕ್ಕೆ ನಿತ್ಯ ವಿಧಿ ಸಹಿತ ಸಿದ್ದಚಕ್ರ ಯಂತ್ರಾರಾಧನಾ ವಿಧಾನ, ಗಂಟೆ 10.15ರಿಂದ ಅಗ್ನಿತ್ರಯಾರ್ಚನಾ ಪೂರ್ವಕ ನಿರ್ವಾಣ ಕಲ್ಯಾಣ, ಅಗ್ರೋದಕ ಮೆರವಣಿಗೆ, ಸಂಜೆ ಗಂಟೆ 4.00ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ ಮಹೋತ್ಸವ, ಮಹಾಪೂಜೆ, ಸಂಘಪೂಜೆ, ಮಹಾಮಂಗಳಾರತಿ, ಕುಂಕುಮೋತ್ಸವ, ಅವಭೃತ ಸ್ನಾನ, ಧ್ವಜಾವರೋಹಣ, ತೋರಣ ವಿಸರ್ಜನೆ, ಮತ್ತು ಕಂಕಣ ವಿಸರ್ಜನೆ ಜರಗಲಿದೆ. ಅಪರಾಹ್ನ 3.00 ಗಂಟೆಗೆ ಯುಗಳ ಮುನಿಶ್ರೀಗಳಾದ, ಪ. ಪೂ. ೧೦೮ ಶ್ರೀ ಅಮೋಘಕೀರ್ತಿ ಮಹಾರಾಜರು ಹಾಗೂ ಪ. ಪೂ. ೧೦೮ ಶ್ರೀ ಅಮರ ಕೀರ್ತಿ ಮಹಾರಾಜರ ಪಾವನ ಸಾನಿಧ್ಯದಲ್ಲಿ, ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಮತ್ತು ಶ್ರೀ ಕ್ಷೇತ್ರ ಜಿನಕಂಚಿಯ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರ ಉಪಸ್ಥಿತಿಯಲ್ಲಿ, ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ಜರಗಲಿದೆ. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು, ಚಿತ್ರದುರ್ಗದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್ ಎಂ.ಎಲ್., ಎಂಎಲ್‌ಸಿ ಕೆ. ಪ್ರತಾಪಸಿಂಹ ನಾಯಕ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ನಾಗಪುರದ ಡಿ.ಪಿ. ಜೈನ್, ನಾಸಿಕ್‌ನ ರವೀಂದ್ರ ಪಾಟೀಲ್ ಉಪಸ್ಥಿತರಿರಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ ಭರತೇಶ ಸಮುದಾಯ ಭವನದ ಮುಖ್ಯ ವೇದಿಕೆಯಲ್ಲಿ ಸಂಜೆ 7.00ರಿಂದ ಸಾಲಿಗ್ರಾಮದ ಶ್ರೀ ಗುರು ಪ್ರಸಾದಿತ ಯಕ್ಷಗಾನ ಮಂಡಳಿ ಇವರಿಂದ ‘ಹೊಂಬುಜ ಕ್ಷೇತ್ರ ಮಹಾತ್ಮೆ'. ವಸ್ತುಪ್ರದರ್ಶನ ವೇದಿಕೆಯಲ್ಲಿ ರಾತ್ರಿ 7.00ರಿಂದ ವೇಣೂರಿನ ಅನುಸೂಯ ಫಾಟಕ ಮತ್ತು ತಂಡದವರಿಂದ ‘ಸಂಗೀತ ಕಾರ್ಯಕ್ರಮ’, ರಾತ್ರಿ 8.30ರಿಂದ ಮಂಜೇಶ್ವರದ ನಾಟ್ಯ ನಿಲಯಂ ತಂಡದವರಿಂದ ‘ನೃತ್ಯ ಕಾರ್ಯಕ್ರಮ’, ರಾತ್ರಿ 11.00ರಿಂದ ಪುಷ್ಕಳ್ ಕುಮಾರ್ ತೋನ್ಸ್‌ರವರ ತಂಡದವರಿಂದ ‘ಜಿನಕಥೆ-ಶ್ರೀ ಬಾಹುಬಲಿ ಚರಿತೆ’. ಈ ಎಲ್ಲಾ ಕಾರ್ಯಕ್ರಮಗಳು ಇಂದು ನಡೆಯಲಿದೆ.

ಮಹಾಮಸ್ತಕಾಭಿಷೇಕದ 7ನೇ ದಿನ - ಫೆ. 28 : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

Article Image

ಮಹಾಮಸ್ತಕಾಭಿಷೇಕದ 7ನೇ ದಿನ - ಫೆ. 28 : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ 7ನೇ ದಿನವಾದ ಇಂದು (ಫೆ.28) ಸೇವಾಕರ್ತರಾದ ಸ್ವಸ್ತಿಕ್ ಜೈನ್ ಹಾಗೂ ಕುಟುಂಬಸ್ಥರು ಮಾಡಿಸುವ ನಿತ್ಯವಿಧಿ ಸಹಿತ, ಯಾಗಮಂಡಲ ಆರಾಧನಾ ವಿಧಾನ, ಮಧ್ಯಾಹ್ನ 2.00 ಗಂಟೆಗೆ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿಯ ರಾಜ್ಯಾಭಿಷೇಕ, ರಾಜ್ಯಭಾರ, ಸಂಜೆ ಗಂಟೆ 4.05ರ ಕರ್ಕಾಟಕ ಲಗ್ನದಲ್ಲಿ ವೈರಾಗ್ಯ ಪೂರ್ವಕ ದೀಕ್ಷಾ ವಿಧಿ, ಕೇಶಲೋಚನಾ ವಿಧಿ, ಪರಿಷ್ಕೃಮಣ ಕಲ್ಯಾಣ, ಅಗ್ರೋದಕ ಮೆರವಣಿಗೆ, ಬಳಿಕ ಸಂಜೆ ಗಂಟೆ 7.00ರಿಂದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ ಜರಗಲಿದೆ. ಭರತೇಶ ಸಮುದಾಯ ಭವನದ ಮುಖ್ಯ ವೇದಿಕೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮವು ಅಪರಾಹ್ನ 3.00 ಗಂಟೆಗೆ ಯುಗಳ ಮುನಿಶ್ರೀಗಳಾದ ಪ.ಪೂ. ೧೦೮ ಶ್ರೀ ಅಮೋಘಕೀರ್ತಿ ಮಹಾರಾಜರು ಮತ್ತು ಪ.ಪೂ. ೧೦೮ ಶ್ರೀ ಅಮರಕೀರ್ತಿ ಮಹಾರಾಜರ ಪಾವನ ಸಾನ್ನಿಧ್ಯದಲ್ಲಿ, ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ವರೂರು ಜೈನ ಮಠದ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಹಾಗೂ ಶ್ರೀಕ್ಷೇತ್ರ ಕೊಲ್ಲಾಪುರ ಜೈನಮಠದ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಜರಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಭಾ.ಜ.ಪ. ಅಧ್ಯಕ್ಷರು ಮತ್ತು ಶಾಸಕರಾದ ಬಿ.ವೈ. ವಿಜಯೇಂದ್ರ ಇವರು ವಹಿಸಲಿದ್ದು, ಐಪಿಎಸ್ ಪೋಲಿಸ್ ಆಯುಕ್ತರಾದ ಅನುಪಮ್ ಅಗ್ರವಾಲ್, ಚೆನ್ನೈನ ಐ.ಎ.ಎಫ್. ಗ್ರೂಪ್ ಕ್ಯಾಪ್ಟನ್ ವೀರಚಕ್ರ ಅಭಿನಂದನ್ ವರ್ಧಮಾನ್, ಜೈಪುರ್ ರಿಲಯನ್ಸ್ ಇಂಡಸ್ಟ್ರೀಸ್ ಲಿ. ನ ಅಧ್ಯಕ್ಷರಾದ ಉಮೇಶ ಭಂಡಾರಿ, ಬೆಂಗಳೂರು ಗ್ರೀನ್‌ಚೆಫ್‌ನ ಸ್ಥಾಪಕಾಧ್ಯಕ್ಷರಾದ ಸುಖಲಾಲ್ ಜೈನ್, ಬೆಂಗಳೂರು ಮೈಕ್ರೊ ಲ್ಯಾಬ್ ಅಧ್ಯಕ್ಷರು ಮತ್ತು ಎಂ.ಡಿ. ದಿಲೀಪ್ ಸುರಾನ್, ಉಜಿರೆ ಎಸ್.ಡಿ.ಎಮ್. ಸೊಸೈಟಿ (ರಿ.)ನ ಪ್ರಾಜೆಕ್ಟ್ ಡೈರೆಕ್ಟರ್ ಶ್ರೇಯಸ್ ಕುಮಾರ್ ಮತ್ತು ಉದ್ಯಮಿ ಕಿರಣ್ ಜೈನ್ ಉಪಸ್ಥಿತರಿರುವರು. ಬೆಂಗಳೂರಿನ ಲೇಖಕಿ, ಪ್ರಾಧ್ಯಾಪಕಿ ಡಾ. ಪದ್ಮಿನಿ ನಾಗರಾಜ್ ರವರು ವಿಶ್ವಧರ್ಮವಾದ ಜೈನಧರ್ಮದ ಪ್ರಸ್ತುತತೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿರುವರು. ಮುಖ್ಯ ವೇದಿಕೆಯಲ್ಲಿ ರಾತ್ರಿ 8.00ರಿಂದ ಹೊಸದೆಹಲಿಯ ಸ್ವಾತಿ ನಿಹಾಲ್ ಜೈನ್ ಮತ್ತು ಬಳಗದವರಿಂದ ಸಂಗೀತ ಸುಧೆ ಮತ್ತು ವಸ್ತು ಪ್ರದರ್ಶನ ವೇದಿಕೆಯಲ್ಲಿ ರಾತ್ರಿ 7.00ರಿಂದ ಧಾರವಾಡದ ಕು. ಪ್ರಾಪ್ತಿ ಜೈನ್ ಕೆ.ಎ. ಇವರಿಂದ ಭರತ ನಾಟ್ಯ, ವೇಣೂರು ತುಳುನಾಡ ಕಲಾವಿದರಿಂದ ತುಳುನಾಡ ವೈಭವ ನಡೆಯಲಿದೆ.

ವೇಣೂರು ಭಗವಾನ್‌ ಬಾಹುಬಲಿ ಕ್ಷೇತ್ರಕ್ಕೆ ಮೈಸೂರು ಮಹಾರಾಜರ ಭೇಟಿ

Article Image

ವೇಣೂರು ಭಗವಾನ್‌ ಬಾಹುಬಲಿ ಕ್ಷೇತ್ರಕ್ಕೆ ಮೈಸೂರು ಮಹಾರಾಜರ ಭೇಟಿ

ವೇಣೂರು ಭ| ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ 5ನೇ ದಿನದ ಕಾರ್ಯಕ್ರಮಕ್ಕೆ ಮೈಸೂರು ಅರಮನೆ, ಮೈಸೂರು ಮಹಾಸಂಸ್ಥಾನದ ಮಹಾರಾಜರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗಮಿಸಿದ್ದರು. ಮಹಾರಾಜರನ್ನು ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಸ್ವಾಗತಿಸಿ ಬಾಹುಬಲಿ ಕ್ಷೇತ್ರಕ್ಕೆ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು, ಸೇವಾಕರ್ತರಾದ ಎಕ್ಸಲೆಂಟ್‌ ವಿದ್ಯಾಸಂಸ್ಥೆಯ ಯುವರಾಜ್‌ ಜೈನ್ ದಂಪತಿಗಳು, ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ್‌ ಕುಮಾರ್‌ ಇಂದ್ರ, ಕೆ. ಕೃಷ್ಣರಾಜ್‌ ಹೆಗ್ಡೆ, ಮುಲ್ಕಿ ಅರಮನೆಯ ಎಂ. ಗೌತಮ್‌ ಜೈನ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಮೊದಲಿಗೆ ಭ| ಬಾಹುಬಲಿ ಸ್ವಾಮಿಗೆ ನಮಿಸಿ, ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಕೊನೆಗೆ ರಾತ್ರಿ ನಡೆದ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿಯೂ ಭಾಗವಹಿಸಿದ್ದರು. ಇದಕ್ಕೂ ಮೊದಲು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಅರಮನೆಗೆ ತಿಮ್ಮಣರಸರಾದ ಡಾ. ಪದ್ಮಪ್ರಸಾದ್ ಅಜಿಲರ ಆಹ್ವಾನದ ಮೇರೆಗೆ ಮೈಸೂರಿನ ಅರಮನೆಯ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿದರು. ಅಜಿಲರು ಮಹಾರಾಜರನ್ನು ಗೌರವಿಸಿದ ಸಂದರ್ಭದಲ್ಲಿ ಶಿವಪ್ರಸಾದ್ ಅಜಿಲರು, ದೇವೇಂದ್ರ ಹೆಗ್ಡೆ ಕೊಕ್ರಾಡಿ ಮತ್ತಿತರರು ಉಪಸ್ಥಿತರಿದ್ದರು.

ಫೆ. 26 : ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆದ 5ನೇ ದಿನದ ಮಹಾಮಸ್ತಕಾಭಿಷೇಕ

Article Image

ಫೆ. 26 : ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ನಡೆದ 5ನೇ ದಿನದ ಮಹಾಮಸ್ತಕಾಭಿಷೇಕ

ವೇಣೂರು ಭ| ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕದ 5 ದಿನವಾದ ಫೆ. 26ರಂದು ಶಾಂತಿಯ ಮೂರುತಿಗೆ ದ್ರವ್ಯಗಳ ಅಭಿಷೇಕ, ಭಕ್ತರಿಗೆ ಕಣ್ತುಂಬಿಕೊಳ್ಳುವ ಸಂಭ್ರಮ ಸಡಗರ. ಕಳೆದ ನಾಲ್ಕು ದಿನಗಳಿಂದ ಮಹಾಮಸ್ತಕಾಭಿಷೇಕವು ವೈಭವಪೋರಿತವಾಗಿ ನೆರವೇರಿ, ಸೋಮವಾರದಂದು ನಿತ್ಯವಿಧಿ ಸಹಿತ ಬೃಹತ್ ಯಾಂತ್ರಾರಾಧನಾ ವಿಧಾನ, ಮಂಟಪ ಪ್ರತಿಷ್ಠೆ, ವೇದಿ ಪ್ರತಿಷ್ಠೆ, ಅಗ್ರೋದಕ ಮೆರವಣಿಗೆ, ಜಲಯಾತ್ರಾ ಮಹೋತ್ಸವ ಮೊದಲಾದ ಧಾರ್ಮಿಕ ವಿಧಿ - ವಿಧಾನಗಳು ಜರುಗಿತು. ಗರ್ಭಾವತರಣ ಕಲ್ಯಾಣದ ದೃಶ್ಯ ರೂಪಕ ಎಲ್ಲರನ್ನು ಮಂತ್ರಮುಗ್ದರನ್ನಾಗಿಸಿತು. ಬಳಿಕ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಿತು. ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ ಮತ್ತು ರಶ್ಮಿತಾ ಜೈನ್ ಹಾಗೂ ಕುಟುಂಬಸ್ಥರು ದಿನದ ಸೇವಾಕೃರ್ತರಾಗಿದ್ದರು. ಭ| ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ವಿಶೇಷ ಗಣ್ಯರಾಗಿ ಮೈಸೂರು ಅರಮನೆ ಮಹಾರಾಜರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌, ಕಮಿಷನರ್‌ ಅನುಪಮ ಅಗರ್‌ವಾಲ್‌, ಐಜಿಪಿ ಬೋರಲಿಂಗಯ್ಯ ಪಾಲ್ಗೊಂಡರು.

First Previous

Showing 6 of 8 pages

Next Last