Article Image

ಲಂಡನ್: ಜೈನ್ ಮಿಲನ್ ಮಾಸಿಕ ಸಭೆ

Article Image

ಲಂಡನ್: ಜೈನ್ ಮಿಲನ್ ಮಾಸಿಕ ಸಭೆ

ಇಂಗ್ಲೆಂಡ್: ಸ್ಲೋಘ್‌ನಲ್ಲಿರುವ ಶಾಂತಿನಾಥ ದಿಗಂಬರ ಜೈನ ಬಸದಿಯಲ್ಲಿ ಮೊದಲಿಗೆ ಪೂಜಾ ಕಾರ್ಯಕ್ರಮಗಳು ನಡೆದು, ನಂತರ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಆಚಾರ್ಯ ಶ್ರೀ ವಿದ್ಯಾಸಾಗರ ದಿಗಂಬರ ಜೈನ ಚಾರಿಟೇಬಲ್ ಟ್ರಸ್ಟ್ ಲಂಡನ್ ಇದರ ಟ್ರಸ್ಟಿ ಸಂತೋಷ್ ಕುಮಾರ್ ಜೈನ್ ಅವರು ಟ್ರಸ್ಟ್ ಬೆಳೆದು ಬಂದ ದಾರಿ , ಬಸದಿಯ ನಿರ್ಮಾಣ, ಉದ್ದೇಶ ಹಾಗೂ ಆಶಯಗಳ ಬಗ್ಗೆ ಮಾಹಿತಿ ನೀಡಿದರು. ಮಿಲನ್ ಉಪಾಧ್ಯಕ್ಷ ನಿಖಿಲ್ B.A ಅವರು ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವ ಆಚರಿಸುವ ಮಿಲನ್ ಸದಸ್ಯರಿಗೆ ಶುಭ ಹಾರೈಸಿ, ಮುಂದಿನ ಜೈನ್ ಮಿಲನ್ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಜೈನ್ ಮಿಲನ್ ಲಂಡನ್ ಅಧ್ಯಕ್ಷ Dr. ನರೇಂದ್ರ ಅಳದಂಗಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಜೈನ ಧರ್ಮದ ತತ್ವ ಸಿದ್ಧಾಂತಗಳ ಪಾಲನೆ ಮತ್ತು ಆಚರಣೆಯಿಂದ ಜೀವನದಲ್ಲಿ ಆರೋಗ್ಯಕರವಾಗಿ ಹಾಗೂ ನೆಮ್ಮದಿಯನ್ನು ಕಂಡುಕೊಳ್ಳಲು ಸಾಧ್ಯ ಎಂದು ತಿಳಿಸಿದರು. ಕೈವಲ್ಯ ಜೈನ್, ಕೇವಲ್ ಜೈನ್, ಧೀಮನ್ ಬಲ್ಲಾಳ್ ಜಿನ ಭಜನೆ ಹಾಡಿದರು. ಅಕ್ಷಯ , ಸಂಪದ , ದೀಕ್ಷಾ ಮತ್ತು ಸಂಧ್ಯಾ ಅವರ ತಂಡ ಜಿನ ಭಜನೆ ಹಾಡಿದರು. ಸಾರ್ಥಕ್ ಜೈನ್ ಬಾಹುಬಲಿ ಸ್ವಾಮಿಯ ಕಥೆ ಹೇಳಿದರು. ದೀಕ್ಷಾ ಜೈನ್ ಅವರು ಜೈನ ಧರ್ಮದಲ್ಲಿ ಹಿಂಸೆ ಅಥವಾ ಅಹಿಂಸೆ ಎಂದು ಪರಿಗಣಿಸುವ ಕರ್ಮಗಳು ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಬಳಿಕ ಜಿನ ಭಜನೆ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ ಮಿಲನ್ ಸದಸ್ಯರಿಗೆ ಮತ್ತು ಸಾಧಕರಿಗೆ ಪ್ರಶಸ್ತಿ ಪತ್ರ ಗಳನ್ನು ನೀಡಿ ಗೌರವಿಸಲಾಯಿತು. ಆರವ್ ಜೈನ್ ಅವರು ಗಿಟಾರ್ ಮೂಲಕ ಪಂಚ ನಮಸ್ಕಾರ ಮಂತ್ರವನ್ನು ನುಡಿಸಿ ಮತ್ತು ಆಖ್ಯ ಹೆಗ್ಡೆ ಅವರು ಗಿಟಾರ್ ನುಡಿಸುತ್ತಾ ಪಾರ್ಶ್ವನಾಥ ಸ್ತುತಿಯೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಯಿತು . ಕೋಶಾಧಿಕಾರಿ Dr. ವೈಶಾಕ್ ವಿದ್ಯಾಧರ್ ವಂದಿಸಿದರು. ಮಿಲನ್ ಕಾರ್ಯದರ್ಶಿ ಅಶ್ವಿನಿ ಚಂದ್ರ ಪ್ರಭು ಅವರು ಕಾರ್ಯಕ್ರಮ ನಿರೂಪಿಸಿದರು, ಸಭಾ ಕಾರ್ಯಕ್ರಮ ದ ನಂತರ ಸದಸ್ಯರಿಗೆ ಮೋಜಿನ ಸ್ಪರ್ಧೆಗಳನ್ನು ನಡೆಸಿಕೊಟ್ಟರು . ಕಾರ್ಯಕ್ರಮದ ಆತಿಥೇಯರಾಗಿ ಸಾಯಿನಾಥ್ ಹೆಗ್ಡೆ, ಉಜ್ವಲ್ ಶ್ರೇಯಸ್, Dr.ವೈಶಾಕ್ ವಿದ್ಯಾಧರ್, ದಯಾನಂದ ಪಾಟೀಲ್ ಕುಟುಂಬದವರು ಸಹಕರಿಸಿದರು. ವರದಿ ಧೀರೇಂದ್ರ ಬಲ್ಲಾಳ್

ಸಿಂಗಾಪುರ: 24 ತೀರ್ಥಂಕರ ಜಿನ ಬಿಂಬ ಸ್ಥಾಪನೆ ಕಾರ್ಯಕ್ರಮ

Article Image

ಸಿಂಗಾಪುರ: 24 ತೀರ್ಥಂಕರ ಜಿನ ಬಿಂಬ ಸ್ಥಾಪನೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಪ್ರಥಮ ವಿದೇಶ ಪ್ರವಾಸ. ಸಿಂಗಾಪುರದಲ್ಲಿ ಹೊಸ ಜಿನಾಲಯದಲ್ಲಿ 24 ತೀರ್ಥಂಕರ ಜಿನ ಬಿಂಬ ಸ್ಥಾಪನೆ ಕಾರ್ಯಕ್ರಮ ವಿಧಿ ವಿಧಾನ ಪೂರ್ವಕ ಅದ್ದೂರಿಯಾಗಿ ಪೂಜ್ಯ ಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆಯಿತು. ಒಂದು ವಾರ ಸಿಂಗಾಪುರ ಮತ್ತು ಮಲೇಶಿಯಾ ಧಾರ್ಮಿಕ ವಿಜಯ ಯಾತ್ರೆಯನ್ನು ಮುಗಿಸಿ ಶ್ರವಣಬೆಳಗೊಳಕ್ಕೆ ಬಂದಾಗ ಸಿಂಗಾಪುರ ಜೈನ್ ಮಿಲನ್ ಅಧ್ಯಕ್ಷ ಸುಮಂತ್ ಪ್ರಕಾಶ್ ಮೈಸೂರಿನ ಪ್ರಕಾಶ್ ಮತ್ತು ಪ್ರಮೀಳಾ ಹಾಗೂ ಪ್ರಸನ್ನ ಕುಮಾರ್ ಮತ್ತು ನಾಗರತ್ನ ರವರು ಪೂಜ್ಯರನ್ನು ಭೇಟಿ ಮಾಡಿದ್ದರು. ಪೂಜ್ಯ ಸ್ವಾಮೀಜಿಯವರು ಸಿಂಗಾಪುರ ಜಿನಬಿಂಬ ಪ್ರತಿಷ್ಠಾ ಕಾರ್ಯಕ್ರಮದ ಸ್ಮರಣಿಕೆಯನ್ನು ನೀಡಿ ಆಶೀರ್ವದಿಸಿದರು.

ಲಂಡನ್: ಜೈನ್ ಮಿಲನ್ ಇದರ ವಾರ್ಷಿಕ ಸಭೆ

Article Image

ಲಂಡನ್: ಜೈನ್ ಮಿಲನ್ ಇದರ ವಾರ್ಷಿಕ ಸಭೆ

ಲಂಡನ್: ಜೈನ್ ಮಿಲನ್ ಇದರ ವಾರ್ಷಿಕ ಸಭೆಯು ಶಾಂತಿನಾಥ ದಿಗಂಬರ ಜೈನ ಬಸದಿ , Slough, ಇಂಗ್ಲೆಂಡ್ ನಲ್ಲಿ ಸೆ. 28 ಶನಿವಾರ ನಡೆಯಿತು. ಮೊದಲಿಗೆ ವಿಜಯ್ ಭಯ್ಯಾಜಿ ಅವರ ಮಾರ್ಗದರ್ಶನದಲ್ಲಿ ಅಭಿಷೇಕ, ಪೂಜಾ ಕಾರ್ಯಕ್ರಮಗಳು ನಡೆದವು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಜೈನ್ ಮಿಲನ್ ಅಧ್ಯಕ್ಷ ಡಾ. ನರೇಂದ್ರ ಅಳದಂಗಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸರ್ವರನ್ನು ಸ್ವಾಗತಿಸಿದರು .ಮಿಲನ್ ಸದಸ್ಯರು ಪ್ರಾರ್ಥನೆ ಹಾಗೂ ಸಾಮೂಹಿಕ ಪಂಚ ನಮಸ್ಕಾರ ಪಠಣದೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು .ಆರವ್ ಜೈನ್ ಅವರು ಜೈನ ಧರ್ಮದ ಮಹತ್ವದ ಬಗ್ಗೆ ಮಾತನಾಡಿದರು. ಕೈವಲ್ಯ ಮತ್ತು ಕೇವಲ್ ಜೈನ್ ಪಂಚ ಪರಮೇಸ್ಟಿ ಸ್ತುತಿ ಹಾಡಿದರು. ಸಾರ್ಥಕ್ ಜೈನ್ ಜಿನ ಭಜನೆ ಹಾಡಿದರು. ದೀಕ್ಷಾ ಜೈನ್ ಅವರು ಜೈನ ಧರ್ಮದಲ್ಲಿ ದೀಪಾವಳಿ ಆಚರಣೆ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಜಿನ ಭಜನೆ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ ಮಿಲನ್ ಸದಸ್ಯರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಮಿಲನ್ ಉಪಾಧ್ಯಕ್ಷ ನಿಖಿಲ್ B.A ಅವರು ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವ ಆಚರಿಸುವ ಮಿಲನ್ ಸದಸ್ಯರಿಗೆ ಶುಭ ಹಾರೈಸಿದರು. ಕೋಶಾಧಿಕಾರಿ ಡಾ. ವೈಶಾಕ್ ಬಲ್ಲಾಳ್ ವಂದಿಸಿದರು. ಮಿಲನ್ ಕಾರ್ಯದರ್ಶಿ ಅಶ್ವಿನಿ ಚಂದ್ರ ಪ್ರಭು ಅವರು ಕಾರ್ಯಕ್ರಮ ನಿರೂಪಿಸಿ, ಸಭಾ ಕಾರ್ಯಕ್ರಮದ ನಂತರ ಸದಸ್ಯರಿಗೆ ಸ್ಪರ್ಧೆಗಳನ್ನು ನಡೆಸಿಕೊಟ್ಟರು . ಕಾರ್ಯಕ್ರಮದ ಆತಿಥೇಯರಾಗಿ ಸಂಪತ್ ಕುಮಾರ್, ಶೀತಲ್ ಜೈನ್ ,ಧೀರೇಂದ್ರ ಬಲ್ಲಾಳ್ ಕುಟುಂಬದವರು ಸಹಕರಿಸಿದರು.

First Previous

Showing 1 of 1 pages

Next Last