Article Image

ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Article Image

ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರನ್ನು ಆ.9 ರಂದು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿ ಶ್ರೀ ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು. ನಂತರ ಅನೇಕ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ ನಿಧಿಯನ್ನು ಹೆಗ್ಗಡೆಯವರು ಬೀದರ್‌ನಲ್ಲಿ ವಿನೂತನವಾಗಿ ವಿನಿಯೋಗಿಸಿ ಒಂದು ಕ್ಷೀರಕ್ರಾಂತಿಗೆ ನಾಂದಿ ಹಾಡಿರುವ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಇದು ಒಂದು ಮಾದರಿ ಸಂಸದರ ನಿಧಿಯ ಸದ್ವಿನಿಯೋಗ ಎಂದು ಪ್ರಧಾನಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೆಯೇ ರಾಜ್ಯದಾದ್ಯಂತ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ವಹಿಸಲ್ಪಡುತ್ತಿರುವ 10 ಸಾವಿರ ಸಿ.ಎಸ್.ಸಿ. ಕೇಂದ್ರಗಳ ಮೂಲಕ ಕೇಂದ್ರ ಸರಕಾರದ ಹಾಗೂ ಸಿ.ಎಸ್.ಸಿ.ಯ ಪ್ರಮುಖ ಸೇವೆಗಳನ್ನು ಗ್ರಾಮೀಣ ಜನತೆಯ ಮನೆ ಬಾಗಿಲಿಗೆ ತಲುಪಿಸುತ್ತಿರುವ ಬಗ್ಗೆ ಹೆಗ್ಗಡೆಯವರು ವಿವರಿಸಿದರು. ಇಲ್ಲಿಯವರೆಗೆ ಸುಮಾರು 3 ಕೋಟಿ ಸಿ.ಎಸ್.ಸಿ. ಸೇವೆಗಳು ಯೋಜನೆಯ ಮೂಲಕ ಜನಸಾಮಾನ್ಯರಿಗೆ ತಲುಪಿರುವ ಬಗ್ಗೆ ಪ್ರಧಾನಮಂತ್ರಿಗಳು ಅಚ್ಚರಿ ವ್ಯಕ್ತಪಡಿಸಿದರು. ಹೆಗ್ಗಡೆಯವರ ಈ ಎಲ್ಲಾ ಸೇವೆಗಳ ಚಿಂತನೆಯು ದೇಶಕ್ಕೆ ಮಾದರಿಯಾಗಲಿ ಎಂದು ಪ್ರಧಾನಮಂತ್ರಿಗಳು ಶ್ಲಾಘಿಸಿದರು. ಬೀದರ್‌ನಲ್ಲಿ ಕ್ಷೀರಕ್ರಾಂತಿ: ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಸಂಸದರ ನಿಧಿಯಿಂದ ಉತ್ತರ ಕರ್ನಾಟಕದ ಹಿಂದುಳಿದ ಜಿಲ್ಲೆಯಾದ ಬೀದರ್‌ನಲ್ಲಿ ಒಂದು ಕ್ಷೀರಕ್ರಾಂತಿಯನ್ನೇ ಮಾಡುವ ಯೋಜನೆ ಹಾಕಿಕೊಂಡು ಕೆ.ಎಂ.ಎಫ್. ಸಹಯೋಗದೊಂದಿಗೆ ಅನೇಕ ಹಾಲು ಒಕ್ಕೂಟಗಳನ್ನು ಅಭಿವೃದ್ಧಿಪಡಿಸಿ ಹೈನುಗಾರಿಕೆ ಮಾಡಲು ಅನೇಕ ಪ್ರೋತ್ಸಾಹಗಳನ್ನು ನೀಡಿದ್ದಾರೆ. ಸಂಸದರ ನಿಧಿಯಿಂದ ಹಾಲು ಸಂಗ್ರಹಣಾ ಕಟ್ಟಡಗಳನ್ನು ನಿರ್ಮಿಸಿದ್ದಲ್ಲದೆ, ಹಾಲು ಸಂಗ್ರಹವನ್ನು ಹೆಚ್ಚಿಸಿಕೊಳ್ಳಲು ಅತ್ಯಾಧುನಿಕ ಯಂತ್ರಗಳಾದ ಆಟೋಮ್ಯಾಟಿಕ್ ಮಿಲ್ಕ್ ಕಲೆಕ್ಟಿಂಗ್ ಯುನಿಟ್(ಎ.ಎಂ.ಸಿ.ಯು.), ಸ್ಪೈನ್‌ಲೆಸ್ ಸ್ಟೀಲ್ ಕ್ಯಾನ್, ಪ್ಯಾಟೋಮ್ಯಾಟಿಕ್ ಯಂತ್ರ, ಹಾಲು ತೂಕದ ಯಂತ್ರಗಳನ್ನು ಒದಗಿಸಿರುತ್ತಾರೆ. ಯೋಜನೆಯ ಕೃಷಿ ಅಧಿಕಾರಿಗಳನ್ನು ನಿಯೋಜಿಸಿ ಗ್ರಾಮೀಣ ರೈತರರಿಗೆ ಹೈನುಗಾರಿಕೆಯ ಬಗ್ಗೆ ಸೂಕ್ತ ತರಬೇತಿಯನ್ನು ನೀಡಿದ್ದಾರೆ. ಈ ಯೋಜನೆ ಪ್ರಾರಂಭವಾಗುವುದಕ್ಕಿಂತ ಮುಂಚೆ ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಪ್ರತಿನಿತ್ಯ 18 ಸಾವಿರ ಲೀಟರ್ ಮಾತ್ರ ಇತ್ತು. ಇದು ಯೋಜನೆಯಿಂದಾಗಿ ಪ್ರತಿ ದಿನ ಗರಿಷ್ಠ 60 ಸಾವಿರ ಲೀಟರ್‌ಗೆ ಏರಿಕೆ ಕಂಡಿದ್ದು ಕೆಲವೇ ತಿಂಗಳುಗಳಲ್ಲಿ ಪ್ರತಿನಿತ್ಯ 1 ಲಕ್ಷ ಲೀಟರ್ ಹಾಲು ಸಂಗ್ರಹದ ಗುರಿಯನ್ನು ತಲುಪಲಿದ್ದು ಇದೊಂದು ಐತಿಹಾಸಿಕ ಉತ್ಪಾದನೆಯಾಗಿರುತ್ತದೆ. ಸಂಸದರ ನಿಧಿಯ ಬಳಕೆಗೆ ಇದು ಒಂದು ಉತ್ತಮ ಮಾದರಿ ಎಂದು ಪ್ರಧಾನಮಂತ್ರಿಗಳು ಶ್ಲಾಘಿಸಿದರು. ಆಯುಷ್ಮಾನ್ ಸೇವೆಗೂ ಮೆಚ್ಚುಗೆ: ಡಿ. ವೀರೇಂದ್ರ ಹೆಗ್ಗಡೆಯವರು ಮುನ್ನಡೆಸುತ್ತಿರುವ ಗ್ರಾಮಾಭಿವೃದ್ಧಿ ಯೋಜನೆಯೊಂದಿಗೆ ಕೇಂದ್ರ ಸರಕಾರದ ತಂತ್ರಜ್ಞಾನ ಮತ್ತು ಮಾಹಿತಿ ವಿದ್ಯುನ್ಮಾನ ಸಚಿವಾಲಯದ ಮಹತ್ವದ ಕಾರ್ಯಕ್ರಮವಾದ ಸಿ.ಎಸ್.ಸಿ. ಸೇವೆಗಳನ್ನು ಜನ ಸಾಮಾನ್ಯರಿಗೆ ನೀಡುವ ಒಂದು ಪಾಲುದಾರಿಕಾ ಒಪ್ಪಂದವಾಗಿರುತ್ತದೆ. ರಾಜ್ಯಾದ್ಯಾಂತ ಯೋಜನೆಯು 10 ಸಾವಿರ ಗ್ರಾಹಕ ಸೇವಾಕೇಂದ್ರಗಳ ಮೂಲಕ ಸಿ.ಎಸ್.ಸಿ. ಸೇವೆಯನ್ನು ಯಶಸ್ವಿಯಾಗಿ ಜನಸಾಮಾನ್ಯರಿಗೆ ಯೋಜನೆಯಿಂದ ನೀಡಲಾಗುತ್ತಿದೆ. ‘ಆಯುಷ್ಮಾನ್ ಭಾರತ್’ ಸರಕಾರದ ಮಹತ್ವದ ಆರೋಗ್ಯ ವಿಮೆಯಾಗಿದ್ದು ಅರ್ಹ ಫಲಾನುಭವಿಗಳಿಗೆ ಇದನ್ನು ಉಚಿತವಾಗಿ ಸಿ.ಎಸ್.ಸಿ. ಕೇಂದ್ರಗಳ ಮೂಲಕ ವಿತರಿಸಿದ್ದು ಇಲ್ಲಿಯವರೆಗೆ 1.40 ಕೋಟಿಗೂ ಅಧಿಕ ಜನರು ‘ಆಯುಷ್ಮಾನ್ ವಿಮೆ’ಗೆ ನೋಂದಾಯಿಸಿಕೊಂಡಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಜನರಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇವೆ ನೀಡುವ ಬಗ್ಗೆಯೂ ಪ್ರಧಾನಮಂತ್ರಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ದೆಹಲಿ: ಜಿನ ಬಸದಿ 24 ತೀರ್ಥಂಕರರ ಪಂಚ ಕಲ್ಯಾಣ-ವಿವಿಧ ಜಿನ ಬಿಂಬಗಳ ಸ್ಥಾಪನೆ

Article Image

ದೆಹಲಿ: ಜಿನ ಬಸದಿ 24 ತೀರ್ಥಂಕರರ ಪಂಚ ಕಲ್ಯಾಣ-ವಿವಿಧ ಜಿನ ಬಿಂಬಗಳ ಸ್ಥಾಪನೆ

ಮುಂಬಯಿ, ಏ.25: ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿಯಲ್ಲಿ 24 ತೀರ್ಥಂಕರರ ಪಂಚ ಕಲ್ಯಾಣವು ರಾಷ್ಟ್ರಸಂತ ೧೦೮ ಉಪಾಧ್ಯಾಯ ಗುಪ್ತಿ ಸಾಗರ ಮುನಿಮಹಾರಾಜರ ಮಾರ್ಗದರ್ಶನ, ಪಾವನ ಸಾನ್ನಿಧ್ಯದಲ್ಲಿ ಮೂಡಬಿದಿರೆ ಶ್ರೀ ದಿಗಂಬರ ಜೈನ ಮಠದ, ಭಾರತ ಭೂಷಣ ಜಗದ್ಗುರು ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಇಂದು ಜರುಗಿತು. ಮೂರು ಆಡಿ ಎತ್ತರದ ಪಂಚ ಲೋಹದ ಇಪ್ಪತ್ತನಾಲ್ಕು ತೀರ್ಥಂಕರರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ, ಮೋಕ್ಷ ಕಲ್ಯಾಣ ಪೂಜೆ, ನಂತರ ದೆಹಲಿ ವಿಶ್ವ ವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಿಂದ ಮೆರವಣಿಗೆ ಮೂಲಕ ಮೂರು ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆಯಿಂದ ಮಧ್ಯಾಹ್ನವರೆಗೂ ದೆಹಲಿ ರಾಣಾಪತ್ ನಗರದ ಬಸದಿಯಲ್ಲಿ ಮೂರ್ತಿ ಸ್ಥಾಪನೆ ಜರುಗಿತು. ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಸ್ತಿಶ್ರೀ ಡಾ|| ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರು ಜಿನ ಬಿಂಬ ಸ್ಥಾಪನೆಯಿಂದ ಆತ್ಮಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು, ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ಹೇಳುತ್ತಾ, ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಿ ಹರಸಿದರು. ರಾಷ್ಟ್ರಸಂತ ೧೦೮ ಗುಪ್ತಿ ಸಾಗರ ಮುನಿಮಹಾರಾಜರು ಮೂಡುಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿ ಹರಸಿ ಆಶೀರ್ವಾದಿಸಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ ರಾಷ್ಟ್ರಸಂತ ೧೦೮ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜರು ಶ್ರೀಗಳಿಗೆ ಗೌರವಾನ್ವಿತ ಪ್ರಧಾನ ಮಂತ್ರಿಗಳಿಂದ ಏ.21 ರ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂಪಾಯಿ 100ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದಕ್ಷೇತ್ರ ಫಸ್ಟೇಡ್ ಕವರ್ ನೀಡಿ ಹರಸಿದರು. ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿಯವರು ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಮುನಿಮಹಾರಾಜರ ಆಚಾರ್ಯ ಶತಾಬ್ಧಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣವನ್ನು ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.

First Previous

Showing 1 of 1 pages

Next Last