Article Image

ಮೈಸೂರು: ಜೈನಾಲಜಿ ಮತ್ತು ಪ್ರಾಕೃತ ವಿಭಾಗ ಮುಂದುವರಿಸುವಂತೆ ಆಗ್ರಹ

Article Image

ಮೈಸೂರು: ಜೈನಾಲಜಿ ಮತ್ತು ಪ್ರಾಕೃತ ವಿಭಾಗ ಮುಂದುವರಿಸುವಂತೆ ಆಗ್ರಹ

ಮೈಸೂರು ವಿಶ್ವವಿದ್ಯಾಲಯದಲ್ಲಿ ಜೈನಾಲಜಿ ಮತ್ತು ಪ್ರಾಕೃತ ವಿಭಾಗವನ್ನು ಮುಂದುವರಿಸುವಂತೆ ಆಗ್ರಹಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ ಹೆಗಡೆ ನೇತೃತ್ವದಲ್ಲಿ ಇಂದು ಉಪಕುಲಪತಿ ಲೋಕನಾಥ್ ರವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು. ನಿಯೋಗದಲ್ಲಿ ಜಯಶ್ರೀ, ಪದ್ಮಪ್ರಸಾದ್, ಭಾರತೀಯ ಜೈನ್ ಮಿಲನ್ ಅಧ್ಯಕ್ಷ ಯುವರಾಜ್ ಭಂಡಾರಿ, ಗೌರವ ಅಧ್ಯಕ್ಷರಾದ ಶೀಲಾ ಅನಂತರಾಜು, ಪ್ರಧಾನ ಕಾರ್ಯದರ್ಶಿ ರತ್ನರಾಜು, ಖಜಾಂಚಿ ಚಂದ್ರಶೇಖರ ಅರಿಗ, ಜಂಟಿ ಕಾರ್ಯದರ್ಶಿ ಪ್ರಶಾಂತ್, ಮೈಸೂರು ವಿಭಾಗದ ಉಪಾಧ್ಯಕ್ಷ ನಾಗರಾಜು, ಕಾರ್ಯದರ್ಶಿ ಚಂದ್ರು ಪ್ರಕಾಶ್, ಅರುಣಾಚಂದ್ರ ಪ್ರಕಾಶ್, ಪದ್ಮಶ್ರೀ ಮಹಿಳಾ ಸಮಾಜದ ಅಧ್ಯಕ್ಷರಾದ ಲತಾ ಸುದರ್ಶನ್, ಜಂಟಿ ಕಾರ್ಯದರ್ಶಿ ಸಿಂಧೂ ಅರುಣ್, ಕರ್ನಾಟಕ ಜೈನ ತೀರ್ಥಕ್ಷೇತ್ರ ಕಮಿಟಿ ಅಧ್ಯಕ್ಷ ವಿನೋದ್ ಬಾಕ್ಲಿವಾಲ, ಶ್ವೇತಾಂಬರ ಮೂರ್ತಿ ಪೂಜಕ್ ಸಂಘದ ಅಧ್ಯಕ್ಷ ಬೇರು ಲಾಲ್, ಟ್ರಸ್ಟಿಗಳಾದ ಹನ್ಸರಾಜ್, ದೇವಿ ಚಂದ, ಚಂಪಾಲಾಲ್, ಪ್ರೊ. ಶುಭಚಂದ್ರ ಭಾಗವಹಿಸಿದ್ದರು. ಜೆ.ರಂಗನಾಥ ತುಮಕೂರು

ರತ್ನತ್ರಯ ಜೈನ ಮಿಲನ್ ಮಾಸಿಕ ಸಭೆ

Article Image

ರತ್ನತ್ರಯ ಜೈನ ಮಿಲನ್ ಮಾಸಿಕ ಸಭೆ

ಬೆಂಗಳೂರು: ರತ್ನತ್ರಯ ಜೈನ ಮಿಲನ್ ಮಾಸಿಕ ಸಭೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪ, ಬೆಂಗಳೂರಿನಲ್ಲಿ ಇತ್ತೀಚೆಗೆ ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎ.ವಿ. ಪದ್ಮನಿಯವರು "ಲೇಶ್ಯಗಳ" ಬಗ್ಗೆ ಉಪನ್ಯಾಸ ನೀಡಿದರು. ಶೋಭಿತ ನವೀನ್ ಅವರು ಪರ್ವವಾಚನ ಮಾಡಿದರು. ಸುಗುಣರವರು ರತ್ನತ್ರಯ ಮಿಲನದ ಉದ್ದೇಶಗಳನ್ನು ತಿಳಿಸಿದರು. ಪದ್ಮಾ ಸೂರಿಯವರು. ವಿವಾಹ ವಾರ್ಷಿಕ ಹಾಗೂ ಹುಟ್ಟುಹಬ್ಬ ಆಚರಿಸಿಕೊಂಡ ರತ್ನತ್ರಯ ಮಿಲನ ಸದಸ್ಯರಿಗೆ ಶುಭ ಕೋರಿದರು. ಶೋಭಾ ಪಾಟೀಲ್, ತ್ರಿಕಾಲ ತೀರ್ಥಂಕರರ ಹೆಸರುಗಳನ್ನು ವಾಚಿಸಿದರು. ಮಹಾವೀರ ಕುಮಾರವರು ರತ್ನತ್ರಯ ಮಿಲನಿನ ನಡಾವಳಿಯನ್ನು ವಾಚಿಸಿದರು. ರಾಣಿ ಪ್ರಫುಲ್ಲ ಅವರು ಅತಿಥಿಗಳನ್ನು ಪರಿಚಯ ಮಾಡಿದರು. ಅನಂತಕುಮಾರಿಯವರು, ಅಗಲಿದ ಕಮಲಾ ಹಂಪನಾ ಅವರ ಕುರಿತಾದ ಸ್ವರಚಿತ ಕವನ ವಾಚನ ಮಾಡುವುದರ ಮುಖೇನ ಶ್ರದ್ಧಾಂಜಲಿ ಅರ್ಪಿಸಿದರು. ನವೀನ್ ಕುಮಾರ್ ಗುಬ್ಬಿಯವರು ಅಧ್ಯಕ್ಷರ ನುಡಿಗಳನ್ನಾಡಿದರು. ಚಂದನ ಸುರೇಂದ್ರ ಅವರು ಕಾರ್ಯಕ್ರಮದ ಆತಿಥ್ಯವನ್ನು ವಹಿಸಿಕೊಂಡಿದ್ದರು. ಚಂದನಾದೇವಿ ಅವರು ಪಾರ್ಥಿಸಿ, ಶಿಲ್ಪಾ ಸುರೇಂದ್ರ ಅವರು ಸ್ವಾಗತಿಸಿದರು, ಉಷಾ ಮಹಾವೀರ್ ಅವರು ವಂದಿಸಿದರು. ಅನಂತಕುಮಾರಿ ಅವರು ಕಾರ್ಯಕ್ರಮ ನಿರೂಪಿಸಿದರು.

ಸತ್ತೂರು, ಧಾರವಾಡ: ಡಾ. ಎಸ್.ಕೆ ಜೋಶಿ ಅವರಿಗೆ ಬಿಳ್ಕೋಡುಗೆ ಸಮಾರಂಭ

Article Image

ಸತ್ತೂರು, ಧಾರವಾಡ: ಡಾ. ಎಸ್.ಕೆ ಜೋಶಿ ಅವರಿಗೆ ಬಿಳ್ಕೋಡುಗೆ ಸಮಾರಂಭ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಹಿರಿಯ ರೇಡಿಯಾಲಜಿ ಪ್ರಾಧ್ಯಾಪಕರು ಮತ್ತು ಮಾಜಿ ಪ್ರಾಂಶುಪಾಲರು ಹಾಗೂ ವಿಶ್ವವಿದ್ಯಾಲಯದ ಸಹ ಉಪ ಕುಲಪತಿಗಳಾದ ಡಾ. ಎಸ್.ಕೆ ಜೋಶಿಯವರು ಸೇವಾ ನಿವೃತ್ತಿ ಹೊಂದಿದ ಸಂಧರ್ಭದಲ್ಲಿ ಇತ್ತೀಚಿಗೆ ಅವರನ್ನು ಬೀಳ್ಕೋಡಲಾಯಿತು. ಸುಮಾರು 21 ವರ್ಷಗಳ ಕಾಲ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಹಾಗೂ ಸಹ ಉಪ ಕುಲಪತಿಗಳಾಗಿ ಅನನ್ಯ ಕೊಡುಗೆಯನ್ನು ನೀಡಿದ ಡಾ. ಎಸ್.ಕೆ ಜೋಶಿ ಅವರ ಸೇವೆಯನ್ನು ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಶ್ಲಾಘಿಸಿದರು ಮತ್ತು ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಬೆಳವಣಿಗೆಗೆ ಅವರ ಸೇವೆ ಅಪಾರ ಕೊಡುಗೆ ನೀಡಿದೆ ಎಂದು ಹೇಳಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪಕುಲಪತಿಗಳಾದ ವಿ. ಜೀವಂಧರ ಕುಮಾರ, ಹಣಕಾಸು ಅಧಿಕಾರಿಯಾದ ವಿ. ಜಿ. ಪ್ರಭು ಅವರು ಡಾ. ಎಸ್.ಕೆ ಜೋಶಿ ಅವರಿಗೆ ಸನ್ಮಾನ ಪತ್ರ, ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು. ಡಾ. ಎಸ್.ಕೆ ಜೋಶಿಯವರು ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ತಾವು ಎಸ್.ಡಿಎಂ. ಸಂಸ್ಥೆಗೆ ಸೇರುವಾಗ ಆಡಳಿತ ಮಂಡಳಿಯವರ ಮಾಡಿದ ಸಹಕಾರವನ್ನು ಸ್ಮರಿಸಿಕೊಂಡರು. ತಮ್ಮ ಸುದೀರ್ಘ 21 ವರ್ಷಗಳ ಸೇವೆಗೆ ಅನುವು ಮಾಡಿಕೊಟ್ಟ ಕುಲಪತಿಗಳು, ಉಪ ಕಲಪತಿಗಳು ಮತ್ತಿತರೆಲ್ಲರಿಗೂ ತಮ್ಮ ಕೃತಜ್ಞತೆಯನ್ನು ಹೇಳಿದರು. ತಾವು ಸಂಸ್ಥೆಯಿಂದ ನಿರ್ಗಮಿಸುತ್ತಿರುವ ಈ ಸಂದರ್ಭದಲ್ಲಿ ಎಸ್.ಡಿಎಂ. ಸಂಸ್ಥೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳು, ವೈದ್ಯಕೀಯ ಅಧೀಕ್ಷಕರು, ಉಪ ವೈದ್ಯಕೀಯ ಅಧೀಕ್ಷಕರು, ಶೂಶ್ರುಷಕ ಅಧೀಕ್ಷಕರು ಮತ್ತು ವೈದ್ಯಕೀಯ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ ಮತ್ತು ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಡಾ. ನರೇಂದ್ರ ಶಾ ಅವರು ಡಾ. ಎಸ್.ಕೆ. ಜೋಶಿ ಅವರ ಸಮರ್ಪಣಾ ಸೇವೆ ಮತ್ತು ಅವರು ಕಾಲೇಜಿನಲ್ಲಿ ಅನುಸರಿಸಿದ ಶಿಸ್ತು ಬದ್ದತೆಯನ್ನು ಸ್ಮರಿಸಿದರು. ಉಪ ಕುಲಸಚಿವರಾದ ಡಾ. ಅಜಂತಾ ಜಿ.ಎಸ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ವಿನುತಾ ಚಿಕ್ಕಮಠ್ ಕಾರ್ಯಕ್ರಮವನ್ನು ನಿರೂಪಿಸಿದರು. ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಬಾಬಣ್ಣ ಶೆಟ್ಟಿಗಾರ್ ವಂದನಾರ್ಪಣೆ ಸಲ್ಲಿಸಿದರು.

ಮುನಿಶ್ರೀ ಪುಣ್ಯಸಾಗರ ಮಹಾರಾಜರ ಆಶೀರ್ವಾದ ಪಡೆದ ಧರ್ಮಸ್ಥಳದ ಹೆಗ್ಗಡೆ ಸಹೋದರರು

Article Image

ಮುನಿಶ್ರೀ ಪುಣ್ಯಸಾಗರ ಮಹಾರಾಜರ ಆಶೀರ್ವಾದ ಪಡೆದ ಧರ್ಮಸ್ಥಳದ ಹೆಗ್ಗಡೆ ಸಹೋದರರು

ಹುಬ್ಬಳ್ಳಿ ದಿಗಂಬರ ಜೈನ ಬೋರ್ಡಿಂಗಿನಲ್ಲಿ ಚಾತುರ್ಮಾಸ ನಿರತ ಮುನಿಶ್ರೀ ಪುಣ್ಯಸಾಗರ ಮಹಾರಾಜರ ದರ್ಶನಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ ವೀರೇಂದ್ರ ಹೆಗ್ಗಡೆ ಮತ್ತು ಶ್ರೀ ಸುರೇಂದ್ರ ಹೆಗಡೆಯವರು ಇಂದು ನಗರಕ್ಕೆ ಆಗಮಿಸಿ ಪೂಜ್ಯರಿಂದ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಧಾರ್ಮಿಕ ಚರ್ಚೆಗಳನ್ನೂ ಮಾಡಿದ ಹೆಗ್ಗಡೆ ಸಹೋದರರು ಇಲ್ಲಿ ನಡೆದಿರುವ ವರ್ಷಾಯೋಗ ಧಾರ್ಮಿಕ ಪ್ರಭಾವನೆಗೆ ಪ್ರೇರಕವಾಗಿದೆ ಎಂದು ತಿಳಿಸಿ ಅತ್ಯಂತ ಹರ್ಷ ವ್ಯಕ್ತಪಡಿಸಿದರು. ಪೂಜ್ಯ ಶ್ರೀ ಹೆಗ್ಗಡೆ ಸಹೋದರರನ್ನು ದಿಗಂಬರ ಜೈನ ಬೋರ್ಡಿಂಗ ಆಡಳಿತಮಂಡಳಿ ಸದಸ್ಯರು ಸನ್ಮಾನಿಸಿ ಗೌರವಿಸಿದರು, ಈ ಸಂದರ್ಭದಲ್ಲಿ ದಿಗಂಬರ ಜೈನ ಬೋರ್ಡಿಂಗ ಅಧ್ಯಕ್ಷ ವಿದ್ಯಾಧರ್ ಪಾಟೀಲ, ಆರ್ ಟಿ ತವನಪ್ಪನವರ, ದೇವೇಂದ್ರಪ್ಪ ಕಾಗೇನವರ, ಜಿ ಜಿ ಲೋಗೋಳ, ವಿಮಲಚಂದ ಸಂಗಮಿ, ಪ್ರಶಾಂತ್ ಬಿಶೆಟ್ಟಿ, ಮಹಾವೀರ ಮಣಕಟ್ಟಿ, ಸಂತೋಷಕುಮಾರ ಮುರಗಿ ಪಾಟಿಲ, ಭರತ ಬೀಳಗಿ, ಮಹಿಳಾ ಅಧ್ಯಕ್ಷರಾದ ಸ್ಮಿತಾ ವಾಕಳೆ, ಎ ಎಸ್ ಪಾಟೀಲ, ಮನ್ಮತ ಕ್ಯಾಸಾ, ತ್ರಿಶಲಾ ಮಾಲಗತ್ತಿ ಮತ್ತು ಎಸ್ ಡಿ ಎಂನ ಕಾರ್ಯದರ್ಶಿ ಜೀವoದರಕುಮಾರ ಹಾಗೂ ಹಲವಾರು ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದರು. ವರದಿ: ಎಸ್ ಆರ್ ಮಲ್ಲಸಮುದ್ರ

ಉಜಿರೆ: ಜೈನ್ ಮಿಲನ್ ಆಹಾರೋತ್ಸವ

Article Image

ಉಜಿರೆ: ಜೈನ್ ಮಿಲನ್ ಆಹಾರೋತ್ಸವ

ಭಾರತೀಯ ಜೈನ್ ಮಿಲನ್,ಬೆಳ್ತಂಗಡಿ ಹಾಗೂ ಧೀಮತಿ ಮಹಿಳಾ ಸಂಘ , ಉಜಿರೆ ಜಂಟಿ ಆಶ್ರಯದಲ್ಲಿ ನಡೆದ ಆಷಾಡ ಮಾಸದ ವಿಶೇಷ ಆಹಾರೋತ್ಸವ ಕಾರ್ಯಕ್ರಮ ಅರ್ಥ ಪೂರ್ಣವಾಗಿ ಜರಗಿತು, ಈ ಕಾರ್ಯಕ್ರಮವನ್ನು ಎರಡೂ ಸಂಸ್ಥೆಗಳ ಗೌರವ ಸಲಹೆಗಾರ ರಾಗಿರುವ ಸೋನಿಯಾ ಯಶೋವರ್ಮ ಅವರು ಚೆನ್ನೆ ಮಣೆ ಆಡುವ ಮೂಲಕ ಉದ್ಘಾಟಿಸಿ, ನಮ್ಮ ಸಂಸ್ಕೃತಿ, ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನ ಈ ಕಾರ್ಯಕ್ರಮದ ಮೂಲಕ ಆಗುತ್ತಿದೆ, ಔಷಧೀಯ ಗುಣ ಇರುವ ಕಾಲ ಕಾಲಕ್ಕೆ ಹೊಂದುವ, ದೊರೆಯುವ ಪದಾರ್ಥ ವಸ್ತುಗಳನ್ನು ಉಪಯೋಗಿಸುವಂತೆ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಲಯ ನಿರ್ದೇಶಕರಾದ ಬಿ. ಪ್ರಮೋದ್ ಕುಮಾರ್, ಪ್ರಾಂಶುಪಾಲರು ಮಾತನಾಡಿ ವರ್ಷದ ಪ್ರತಿ ತಿಂಗಳಿಗೂ ಅದರದ್ದೇ ಆದ ಮಹತ್ವ ಇದೆ, ಆಷಾಡ ಮಾಸದ ವಿಶೇಷ ಗಳನ್ನು,ಮುಂದಿನ ಜನಾಂಗ ಅರಿತು ನಮ್ಮ ಪರಂಪರೆಯನ್ನು ಬೆಳೆಸಿಕೊಂಡು ಹೋಗಲು ಇಂತಹ ಕಾರ್ಯಕ್ರಮ ಅವಶ್ಯಕ ಎಂದು ತಿಳಿಸಿದರು. ಇನ್ನೋರ್ವ ವಲಯ ನಿರ್ದೇಶಕರಾದ B.ಸೋಮಶೇಖರ ಶೆಟ್ಟಿ ಅವರು ಮಾತನಾಡಿ, ಹಿಂದಿನ ಕಾಲದಲ್ಲಿ ಅನಿವಾರ್ಯವಾಗಿದ್ದ ಆಷಾಡ ಮಾಸದ ತಿಂಡಿ ತಿನಸುಗಳು ಇಂದು ಆಹಾರೋತ್ಸವವಾಗಿ ಆಚರಿಸಲ್ಪಡುತ್ತದೆ, ಆರೋಗ್ಯಕ್ಕೆ ಪೂರಕವಾದ ಆಹಾರ ಪದ್ಧತಿಯನ್ನು ನಾವು ಅನುಸರಿಸುವುದರಿಂದ ಅನೇಕ ಬಗೆಯ ಕಾಯಿಲೆಗಳಿಂದ ದೂರ ಇರಬಹುದು, ಇಂತಹ ಆಹಾರ ವಸ್ತುಗಳಲ್ಲಿ ಇರುವ ಆರೋಗ್ಯಪೂರಕ ಮಹತ್ವದ ಅರಿವು ಮೂಡಿಸಲು ಮತ್ತು ಹಿಂದಿನ ಕಾಲದ ಜನಜೀವನದ ಪರಿಚಯ ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಈ ಕಾರ್ಯ ಕ್ರಮ ಯಶಸ್ವಿ ಆದ ಬಗ್ಗೆ ಮತ್ತು ಅಪಾರ ಸಂಖ್ಯೆಯಲ್ಲಿ ಸೇರಿದ ಸದಸ್ಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಧೀಮತಿ ಮಹಿಳಾ ಸಮಾಜದ ಅಧ್ಯಕ್ಷೆ ರಜತ ಪಿ. ಶೆಟ್ಟಿ ಮಾತನಾಡಿ ಈ ಕಾರ್ಯ ಕ್ರಮವನ್ನು ವಿಶೇಷ ರೀತಿಯಲ್ಲಿ ಆಯೋಜಿಸಿದ ಹಿನ್ನಲೆಯನ್ನು ವಿವರಿಸಿದರು, ಪ್ರಕೃತಿಯಲ್ಲಿ ದೊರೆಯುವ ಆಹಾರ ಪದಾರ್ಥಗಳನ್ನು ಉಪಯೋಗಿಸುವಾಗ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರಿಸಿ ತಿಳಿಸಿದರು. ಜೈನ್ ಮಿಲನ್ ಅಧ್ಯಕ್ಷರಾದ ಡಾ, ನವೀನ್ ಕುಮಾರ್ ಜೈನ್ ಅವರು ಮಾತನಾಡಿ, ಆಹಾರ ಪದ್ಧತಿಯ ಹಿನ್ನೆಲೆಯನ್ನು ವೈಜ್ಞಾನಿಕವಾಗಿ ವಿವರಿಸಿ, ಉಪ್ಪಿನ ಕಾಯಿಯಂತಹ ವಸ್ತುಗಳನ್ನು ಪ್ಲಾಸ್ಟಿಕ್ ಡಬ್ಬಗಳಲ್ಲಿ ತುಂಬಿಸಿ ಇಟ್ಟು ಉಪಯೋಗಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ, ಆಹಾರ ಪದಾರ್ಥಗಳು ಮತ್ತು ಅದನ್ನು ತಯಾರಿಸುವ ಬಗ್ಗೆ ಸಂಗ್ರಹಿಸಿ ಇಡುವ ವಸ್ತುಗಳ ಬಗ್ಗೆ ವಿಶೇಷ ಮಾಹಿತಿಯನ್ನು ವೈಜ್ಞಾನಿಕ ಅಧ್ಯಯನ ಹಿನ್ನೆಲೆಯಲ್ಲಿ ವಿವರಿಸಿ ತಿಳಿಸಿದರು. ಈ ದಿನದ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಧೀಮತಿ ಮಹಿಳಾ ಸಮಾಜದ ಸರ್ವರಿಗೂ ಮಿಲನ್ ನ ಸರ್ವಸದಸ್ಯರಿಗೂ ಕೃತ್ತಜ್ಞತೆ ಸಲ್ಲಿಸಿದರು, ಧೀಮತಿ ಮಹಿಳಾ ಸಮಾಜದ ಕಾರ್ಯದರ್ಶಿ ಪ್ರಾಧ್ಯಾಪಕಿ ದಿವ್ಯ ಪ್ರಧಾನ್ ಪ್ರಾಸ್ತಾವಿಕ ಮಾತಿನೊಂದಿಗೆ ಸರ್ವರನ್ನೂ ಸ್ವಾಗತಿಸಿದರು. ಜೈನ್ ಮಿಲನ್ ಕಾರ್ಯದರ್ಶಿ ಸಂಪತ್ ಕುಮಾರ್ ಜೈನ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ನಿಖಿತ್ ಕುಮಾರ್ ವಂದಿಸಿದರು. ಸ್ಮಿತಾ ಪ್ರಶಾಂತ್ ಶಾಂತಿ ಮಂತ್ರ ಪಠಿಸಿದರು, ವಿಶೇಷ ಖಾದ್ಯಗಳನ್ನು ಅಳದಂಗಡಿಯ ಸುನಿಲ್ ಕುಮಾರ್ ಜೈನ್ ತಯಾರಿಸಿದ್ದು ಎಲ್ಲರ ಪ್ರಶಂಸೆಗೆ ಪಾತ್ರರಾದರು.

ಸತ್ತೂರು,ಧಾರವಾಡ: ಕಳೆವರ ಶರೀರರಚನಾಶಾಸ್ತ್ರದ ಕಾರ್ಯಾಗಾರ

Article Image

ಸತ್ತೂರು,ಧಾರವಾಡ: ಕಳೆವರ ಶರೀರರಚನಾಶಾಸ್ತ್ರದ ಕಾರ್ಯಾಗಾರ

ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಶರೀರರಚನಾಶಾಸ್ತ್ರ ವಿಭಾಗವು “ಕೈ ಯ ಶರೀರರಚನಾಶಾಸ್ತ್ರ” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆ. 3 ರಂದು ಏರ್ಪಡಿಸಲಾಗಿತ್ತು. ಶರೀರರಚನಾಶಾಸ್ತ್ರವು ಎಲ್ಲಾ ಆರೋಗ್ಯ ವೃತ್ತಿಪರರಿಗೆ ಮಾನವ ದೇಹದ ರಚನೆಯ ಬಗ್ಗೆ ಮೂಲಭೂತ ಜ್ಞಾನವನ್ನು ಒದಗಿಸುತ್ತದೆ. ಮಾನವನ ಕೈಗಳ ಮೂಳೆಗಳು, ಸ್ನಾಯುರಜ್ಜುಗಳು, ನರಮಂಡಲದ ರಚನೆ ಇತ್ಯಾದಿಗಳನ್ನು ಒಳಗೊಂಡಿರುತ್ತದೆ. ನಾವು ಕೈಗಳನ್ನು ನಿರಂತರ ಎಲ್ಲಾ ಕೆಲಸಗಳಿಗೆ ಬಳಸುವುದರಿಂದ ಕೈಗಳ ಚಲನೆಯೂ ಮುಖ್ಯವಾಗಿರುತ್ತದೆ. ಕೈ ಯ ಶರೀರರಚನಾಶಾಸ್ತ್ರ ದ ಪರಿಶೋಧನೆ, ಅದರ ವೈದ್ಯಕೀಯ ಪ್ರಸ್ತುತತೆ ಮತ್ತು ಶಸ್ತ್ರಚಿಕಿತ್ಸಾ ಪರಿಣಾಮಗಳು ವೈದ್ಯರಿಗೆ ಅಪಾರ ಜ್ಞಾನವನ್ನು ನೀಡುತ್ತದೆ. ಈ ಕಾರ್ಯಾಗಾರವನ್ನು ವಿಶೇಷವಾಗಿ ಮಾನವರ ಕೈಯಿಯ ಬಗ್ಗೆ ತಮ್ಮ ಜ್ಞಾನವನ್ನು ನವೀಕರಿಸಲು ಬಯಸುವ ವೈದ್ಯಕೀಯ ವೃತ್ತಿಪರರು ಮತ್ತು ಆರೋಗ್ಯ ಸಂಸ್ಥೆಗಳ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿತ್ತು. ಸುಮಾರು 60ಕ್ಕೂ ಹೆಚ್ಚು ವೈದ್ಯರು ಮತ್ತು ವೈದ್ಯ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ್, ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ್, ಶರೀರರಚನಾಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರುಗಳಾದ ಡಾ. ಎ. ವಿ. ಕುಲಕರ್ಣಿ ಮತ್ತು ಡಾ. ಎಸ್. ಕೆ. ದೇಶಪಾಂಡೆ ಈ ಕಾರ್ಯಾಗಾರವನ್ನು ಉದ್ಘಾಟಿಸಿದರು. ಎಸ್.ಡಿ.ಎಂ. ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ಎಂ ದೇಸಾಯಿರವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಕಾರ್ಯಾಗಾರವು ನಮ್ಮ ವೃತ್ತಿಯಾದ್ಯಂತ ಉಪಯುಕ್ತವಾಗಿರುವುದರಿಂದ ವಿದ್ಯಾರ್ಥಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸುಧಾರಿತ ಸೌಲಭ್ಯಗಳು ಮತ್ತು ಜ್ಞಾನದ ನವೀಕರಣವನ್ನು ಬಳಸಿಕೊಂಡು, ನಮ್ಮ ಬೋಧನೆಯನ್ನು ವರ್ಧಿಸಿಕೊಳ್ಳಬೇಕು ಎಂದರು. ಡಾ. ನಿರಂಜನ್ ಕುಮಾರ್ ಅವರು ಮಾದರಿ ತಯಾರಿಕೆಯ ವಿಜೇತರಿಗೆ ಪ್ರಮಾಣ ಪತ್ರ ವಿತರಿಸಿದರು. ಶರೀರರಚನಾಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ವೀಣಾ ಕುಲಕರ್ಣಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ರೋಶನಿ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಡಾ. ವಿನಯ್ ಕುಲಕರ್ಣಿ ವಂದಿಸಿದರು

ಬೆಂಗಳೂರು: ಪೂಜಾ ಕಾರ್ಯಕ್ರಮ

Article Image

ಬೆಂಗಳೂರು: ಪೂಜಾ ಕಾರ್ಯಕ್ರಮ

ನೆಲಮಂಗಲ ತಾಲೂಕಿನ, ಸೋಂಪುರ ಹೋಬಳಿ ಎಲೇಕ್ಯಾತನಹಳ್ಳಿಯ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿಯ ಬಿಂಬಸ್ಥಾಪನೆ ಮಾನ ಸ್ಥಂಬೋಪರಿ ಚತುರ್ಮುಖ ಜಿನಬಿಂಬ ಸ್ಥಾಪನೆ ಮತ್ತು ನಾಗದೇವರ ಪ್ರತಿಷ್ಠಾಪನಾ ಪೂಜಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಜೈನ ಆಗಮೋಕ್ತ ವಿದಿವಿಧಾನಗಳೊಂದಿಗೆ ಜೂ. 29ರಿಂದ ಜೂ. 30ರವರೆಗೆ ಜರುಗಲಿದೆ.

ಧಾರವಾಡ: ಹೊರ ರೋಗಿ ವಿಭಾಗದ ನೊಂದಣಿ ಆ್ಯಪ್ ಉದ್ಘಾಟನೆ

Article Image

ಧಾರವಾಡ: ಹೊರ ರೋಗಿ ವಿಭಾಗದ ನೊಂದಣಿ ಆ್ಯಪ್ ಉದ್ಘಾಟನೆ

ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಇತ್ತೀಚಿಗೆ ಹೊರ ರೋಗಿಗಳ ಅನುಕೂಲಕ್ಕಾಗಿ ಆನ್‌ಲೈನ್‌ನಲ್ಲಿ ನೊಂದಣಿ ಮಾಡಲು ಮಾದರಿ(ಆ್ಯಪ್)ಅನ್ನು ಉದ್ಘಾಟಿಸಿದರು. ಈ ಮಾದರಿಯಲ್ಲಿ ಹುಬ್ಬಳ್ಳಿ ಮತ್ತು ಧಾರವಾಡದ ಪಾಲಿಕ್ಲಿನಿಕ್‌ಗಳಲ್ಲಿ ವೈದ್ಯರ ಲಭ್ಯತೆಯ ಬಗ್ಗೆ ಮಾಹಿತಿ ಮತ್ತು ರೋಗಿಗಳು ತಮಗೆ ಅನುಕೂಲದ ಸಮಯವನ್ನು ನಿಗದಿಪಡಿಸಿಕೊಳ್ಳಬಹುದು. ಇದು ಶೀಘ್ರದಲ್ಲೇ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಸ್ಟೋರ್‌ಗಳಲ್ಲಿ ಲಭ್ಯವಿರುತ್ತದೆ. ಎಸ್.ಡಿ.ಎಂ. ಪಾಲಿಕ್ಲಿನಿಕ್ ಧಾರವಾಡದಲ್ಲಿ ಜುಬಲಿ ಸರ್ಕಲ್ ಬಳಿಯ ವಿ.ಜೆ.ಹೌಸ್‌ನಲ್ಲಿ ಮತ್ತು ಹುಬ್ಬಳ್ಳಿಯಲ್ಲಿ ಎಸ್.ಡಿ.ಎಂ. ಪಾಲಿಕ್ಲಿನಿಕ್ ವಿದ್ಯಾನಗರದ, ಗುರುದತ್ತ ಭವನದ ಹತ್ತಿರ ಕಾರ್ಯನಿರ್ವಹಿಸುತ್ತದೆ. ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ಮಖ್ದೂಮ್ ಕಿಲ್ಲೆದಾರ ಅವರು ಪ್ರಾತ್ಯಕ್ಷಿಕೆಯೊಂದಿಗೆ ಆ್ಯಪ್ ಕುರಿತು ಕುಲಪತಿಗಳಿಗೆ ಮಾಹಿತಿ ನೀಡಿದರು. ಎಸ್.ಡಿ.ಎಂ. ಆಸ್ಪತ್ರೆಯ ಯುರಾಲಜಿ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಥುಲಿಯಮ್ ಲೇಸರ 60 ವ್ಯಾಟ್ ಯಂತ್ರ ಮತ್ತು ಫ್ಲೆಕ್ಸಿಬಲ್ ಯುರೆಟೆರೊಸ್ಕೋಪ್‌ಅನ್ನು ಉದ್ಘಾಟಿಸಿದರು. ಇದು ಪ್ರಸ್ತುತ ವಿಶ್ವದ ಆಧುನಿಕ ಲೇಸರ್ ತಂತ್ರಜ್ಞಾನವಾಗಿದ್ದು ಇದರ ಸಹಾಯದಿಂದ ಮೂತ್ರಪಿಂಡ ಕಲ್ಲುಗಳು, ಮೂತ್ರನಾಳದ ಕಲ್ಲುಗಳು, ಮೂತ್ರಪಿಂಡದ ಕ್ಯಾನ್ಸರ್, ವಿವಿಧ ಮೂತ್ರಶಾಶಸ್ತ್ರದ ಸಮಸ್ಯೆಗಳಿಗೆ ರಕ್ತಸ್ರಾವವಿಲ್ಲದೆ, ಕಡಿಮೆ ನೋವು, ಶಸ್ತ್ರ ಚಿಕಿತ್ಸೆಯ ನಂತರದ ಗಾಯಗಳಿಲ್ಲದೇ ಚಿಕಿತ್ಸೆ ನೀಡಬಹುದಾಗಿದ್ದು, ಶೀಘ್ರವಾಗಿ ಚೇತರಿಸಿಕೊಳ್ಳಲು ಇದು ಸಹಕಾರಿಯಾಗಿದೆ. ಅಷ್ಟೇ ಅಲ್ಲದೆ ಹೃದಯ ಸಂಬಂಧಿ ಕಾಯಿಲೆಗಳಿಗೂ ಈ ಯಂತ್ರವನ್ನು ಬಳಸಬಹುದು. ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ, ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ, ಕಾರ್ಯನಿರ್ವಾಹಕ ನಿದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪ ಕುಲಪತಿಗಳಾದ ವಿ. ಜೀವಂಧರ ಕುಮಾರ, ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ, ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ ಹೆಗ್ಡೆ, ಉಪಸ್ಥಿತರಿದ್ದರು. ಯುರಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀನಿವಾಸ ಕಲಭಾವಿ ಅವರು ಉಪಕರಣಗಳ ಕಾರ್ಯನಿರ್ವಹಿಸುವ ಕುರಿತು ಪ್ರಾತ್ಯಕ್ಷಿತೆ ನೀಡಿದರು.

ಮಲೆನಾಡು ಜೈನ್ ಮಿಲನ್

Article Image

ಮಲೆನಾಡು ಜೈನ್ ಮಿಲನ್

ಕೊಪ್ಪ, ಶೃಂಗೇರಿ: ಇಲ್ಲಿನ ಮಲೆನಾಡು ಜೈನ್ ಮಿಲನ್ ವತಿಯಿಂದ ಜಯಪುರದ ಶಾಂತ ಕುಮಾರ್ ದಂಪತಿಗಳ ಶಿಕ್ಷಣ ಪ್ರೇಮವನ್ನು ಗುರುತಿಸಿ ಸನ್ಮಾನಿಸಲಾಯಿತು.

ಸತ್ತೂರು, ಧಾರವಾಡ: “ನೆನಪು ಮತ್ತು ಮರೆವು” ಕಾರ್ಯಾಗಾರ

Article Image

ಸತ್ತೂರು, ಧಾರವಾಡ: “ನೆನಪು ಮತ್ತು ಮರೆವು” ಕಾರ್ಯಾಗಾರ

ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಶರೀರ ಕ್ರೀಯಾ ಶಾಸ್ತ್ರ ವಿಭಾಗದಿಂದ “ನೆನಪು ಮತ್ತು ಮರೆವು” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವನ್ನು ಜೂ. 1ರಂದು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಕಾರ್ಯಾಗಾರವನ್ನು ಉದ್ಘಾಟಿಸಿದರು. ಅತಿಥಿಗಳಾದ ಡಾ. ರತ್ನಮಾಲಾ ಎಂ. ದೇಸಾಯಿ ಅವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ ನೆನಪು ಮಾನವನಿಗೆ ಅತೀ ಮೌಲ್ಯವಾದ ಆಯುಧವಾಗಿದೆ. ಕಹಿ ನೆನಪುಗಳನ್ನು ಮರೆಯುವುದು ಒಂದು ವರದಾನವಾಗಿದೆ. ಗೊಂದಲಗಳು ಹೆಚ್ಚಾಗುವುದು ಮತ್ತು ಏಕಾಗ್ರತೆ ಕಡಿಮೆಯಾಗುವುದು ಒಳ್ಳೆಯ ಲಕ್ಷಣವಲ್ಲಾ. ಉತ್ತಮ ಶಿಕ್ಷಣ ನೀಡುವುದಕ್ಕೆ ಶಿಕ್ಷಕರು ಒಳ್ಳೆಯ ನೆನಪಿನ ಶಕ್ತಿ ಹೊಂದಿರಬೇಕು. ಉತ್ತಮ ನೆನಪು ಮತು ಒಳ್ಳೆಯ ಜ್ಞಾನವು ಜೀವನದಲ್ಲಿ ಮರುಕಳಿಸುತ್ತಿರಬೇಕು ಎಂದು ಹೇಳಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ, ಕಾರ್ಯಾಗಾರದ ಸಂಘಟನಾ ಅಧ್ಯಕ್ಷರು ಮತ್ತು ಶರೀರ ಕ್ರೀಯಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ನಾಗಲಕ್ಷ್ಮೀ ಉಪಸ್ಥಿತರಿದ್ದರು. ಡಾ. ಗ್ರಾಮೋಪಾಧ್ಯಾಯ ಭೂಷಣ, ಡಾ. ನಾಗಲಕ್ಷ್ಮೀ , ಡಾ. ಸಚಿನ್ ಬಿ.ಎಸ್., ಡಾ. ಮಲ್ಲಿಕಾರ್ಜುನಗೌಡರ ಅವರು ವಿಷಯದ ಕುರಿತು ತಜ್ಞ ಉಪನ್ಯಾಸವನ್ನು ನೀಡಿದರು. ಈ ಕಾರ್ಯಾಗಾರದಲ್ಲಿ ಉತ್ತರ ಕರ್ನಾಟಕದ ಸುಮಾರು 200ಕ್ಕೂ ಹೆಚ್ಚು ಪ್ರಾಧ್ಯಾಪಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಘಟನಾ ಕಾರ್ಯದರ್ಶಿಗಳಾದ ಡಾ. ಶ್ವೇತಾ ಗೌಡಪ್ಪಣ್ಣವರ ಸ್ವಾಗತಿಸಿದರು. ವೈಷ್ಣವಿ ಕುಲಕರ್ಣಿ ಮತ್ತು ವೇಣು ಕಾರ್ಯಕ್ರಮವನ್ನು ನಿರೂಪಿಸಿದರು. ಸಹ ಸಂಘಟನಾ ಕಾರ್ಯದರ್ಶಿಗಳಾದ ಡಾ. ವಿದ್ಯಾ ನಾಡಗೇರ ಅವರು ವಂದನಾರ್ಪಣೆ ಸಲ್ಲಿಸಿದರು.

ರಜತ ರಥೋತ್ಸವ ಮತ್ತು ಮಹಾಮಸ್ತಕಾಭಿಷೇಕ

Article Image

ರಜತ ರಥೋತ್ಸವ ಮತ್ತು ಮಹಾಮಸ್ತಕಾಭಿಷೇಕ

ಕಾರ್ಕಳ ತಾಲೂಕಿನ ಶಿರ್ಲಾಲು ಬಸದಿಯ ಭಗವಾನ್ ಶ್ರೀ ಅನಂತನಾಥ ಸ್ವಾಮಿಯ ಮತ್ತು ಮಹಾಮಾತೆ ಶ್ರಿ ಪದ್ಮಾವತಿ ದೇವಿಯ ರಜತ ರಥಯಾತ್ರಾ ಮಹೋತ್ಸವ, ಸಿದ್ಧಗಿರಿ ಕ್ಷೇತ್ರದ ಭ|| ಶ್ರೀ ಆದಿನಾಥ ಸ್ವಾಮಿ ಮತ್ತು ಭ|| ಶ್ರೀ ಭರತ ಕೇವಲೀ ಸ್ವಾಮಿ ಹಾಗೂ ಭ|| ಶ್ರೀ ಬಾಹುಬಲಿ ಕೇವಲಿ ಸ್ವಾಮಿ ಜಿನ ಬಿಂಬಗಳಿಗೆ 108 ಕಲಶಗಳಿಂದ ಅಭಿಷೇಕ ಮತ್ತು ಮಸ್ತಕಾಭಿಷೇಕ ಮಹೋತ್ಸವವು ಶ್ರವಣಬೆಳಗೊಳ ಶ್ರೀ ಜೈನ ಮಠದ ಸ್ವರ್ಗೀಯ ಪ. ಪೂ. ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪ್ರೇರಣೆಯೊಂದಿಗೆ, ಕಾರ್ಕಳ ಶ್ರೀ ಜೈನ ಮಠದ ಪ. ಪೂ. ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ನೇತೃತ್ವದಲ್ಲಿ ಮತ್ತು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಭಾರತಭೂಷಣ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ಆಶೀರ್ವಚನದೊಂದಿಗೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ದಿನಾಂಕ 8-5-2024ನೇ ಬುಧವಾರ ಮೊದಲ್ಗೊಂಡು 10-5-2024ನೇ ಶನಿವಾರದಂದು ಸಂಪನ್ನಗೊಳ್ಳಲಿರುವುದು. ಅತಿಶಯ ಕ್ಷೇತ್ರ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಪರಿಸರದಲ್ಲಿ ಭ|| ಶ್ರೀ ಆದಿನಾಥ ಸ್ವಾಮಿ ಮತ್ತು ಭ|| ಶ್ರೀ ಭರತ ಕೇವಲೀ ಸ್ವಾಮಿ ಹಾಗೂ ಭ|| ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿಗಳನ್ನು ‘ಧರ್ಮರತ್ನಾಕರ’ ಶಿರ್ಲಾಲು ದೊಡ್ಡಮನೆ ಸ್ವರ್ಗಿಯ ರತ್ನವರ್ಮ ಪೂವಣಿ ದಂಪತಿಗಳು ದಿನಾಂಕ 18-02-2013ರಲ್ಲಿ ಪ್ರತಿಷ್ಠಾಪಿಸಿದ್ದಾರೆ

ನಾರಾವಿ ಬಸದಿ: ಧಾಮಸಂಪ್ರೋಕ್ಷಣಾ ಮತ್ತು ಪ್ರತಿಷ್ಠಾ ಮಹೋತ್ಸವ

Article Image

ನಾರಾವಿ ಬಸದಿ: ಧಾಮಸಂಪ್ರೋಕ್ಷಣಾ ಮತ್ತು ಪ್ರತಿಷ್ಠಾ ಮಹೋತ್ಸವ

ತಮ್ಮ ಪ್ರದೇಶದ ಮಠದ ಭಟ್ಟಾರಕರ ಅನುಮತಿ ಇಲ್ಲದೆ ಶ್ರಾವಕರು ಯಾವುದೇ ಸಂಪ್ರದಾಯ, ಪೂಜಾವಿಧಾನ, ಧಾರ್ಮಿಕ ಸಂಪ್ರದಾಯ ಬದಲಾಯಿಸಬಾರದು ಎಂದು ಮೂಡಬಿದಿರೆ ಶ್ರೀ ಜೈನ ಮಠದ ಪರಮ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಗಳವರು ಭಾನುವಾರ(ಮೇ 5) ನಾರಾವಿ ಬಸದಿಯಲ್ಲಿ ಜಿನಬಿಂಬ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ಮಂಗಲ ಪ್ರವಚನ ನೀಡಿದರು. ನಿರ್ಮಲ ಮನಸ್ಸಿನಿಂದ ದೇವರಪೂಜೆ, ಗುರುಗಳ ಸೇವೆ ಮಾಡಿ, ಸ್ವಾಧ್ಯಾಯದ ಮೂಲಕ ತಮ್ಮ ವರ್ತನೆಯಲ್ಲಿ ಪರಿವರ್ತನೆ ಮಾಡಿಕೊಳ್ಳಬೇಕು. ಪಂಚೇಂದ್ರಿಯಗಳನ್ನು ಸತ್ಕಾರ್ಯಗಳಲ್ಲಿ ಬಳಸಿ ಪುಣ್ಯ ಸಂಚಯ ಮಾಡಿಕೊಳ್ಳಬೇಕು ಎಂದು ಕಾರ್ಕಳ ಶ್ರೀ ಜೈನ ಮಠದ ಪರಮ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಆಶೀರ್ವಚನ ನೀಡಿದರು. ಧಾರ್ಮಿಕ ಉಪನ್ಯಾಸ ನೀಡಿದ ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳರವರು ಮಾತನಾಡಿ, ಧಾಮಸಂಪ್ರೋಕ್ಷಣೆ ಸಂದರ್ಭದಲ್ಲಿ ನಮ್ಮನ್ನು ನಾವು ಶುದ್ಧಿಕರಿಸಿಕೊಳ್ಳಬೇಕು. ಆಚಾರ್ಯರುಗಳು ಬರೆದ ಧಾರ್ಮಿಕ ಗ್ರಂಥಗಳ ಸ್ವಾಧ್ಯಾಯ ಮಾಡಿ, ಮಕ್ಕಳಿಗೂ ಉತ್ತಮ ಧಾರ್ಮಿಕ ಸಂಸ್ಕಾರ ನೀಡಬೇಕು ಎಂದು ಸಲಹೆ ನೀಡಿದರು. ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ ಅಹಿಂಸೆ ಮತ್ತು ತ್ಯಾಗ ಜೈನಧರ್ಮದ ವಿಶೇಷ ತತ್ವಗಳಾಗಿದ್ದು ಎಲ್ಲರೂ ಇದನ್ನು ಅನುಸರಿಸಬೇಕು. ಧರ್ಮದ ಚೌಕಟ್ಟಿನೊಳಗೆ ಪುರುಷಾರ್ಥಗಳನ್ನು ಸಾಧಿಸಬೇಕು ಎಂದು ಸಲಹೆ ನೀಡಿದರು. ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ, ಮಂಗಳೂರಿನ ಪುಷ್ಪರಾಜ ಜೈನ್, ಬಂಟ್ವಾಳದ ಸುದರ್ಶನ ಜೈನ್ ಮತ್ತು ನಿವೃತ್ತ ಪ್ರಾಂಶುಪಾಲರಾದ ರಾಜವೀರ ಇಂದ್ರ ಶುಭಾಶಂಸನೆ ಮಾಡಿದರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಅಧ್ಯಕ್ಷತೆ ವಹಿಸಿದ್ದರು. ರಾಜವೀರ ಜೈನ್ ಸ್ವಾಗತಿಸಿದರು. ಕರುಣಾಕರ ಜೈನ್ ಧನ್ಯವಾದವಿತ್ತರು. ನಿರಂಜನ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ಭವ್ಯ ಅಗ್ರೋದಕ ಮೆರವಣಿಗೆ: ಅರಸಕಟ್ಟೆಯಿಂದ ನಾರಾವಿ ಬಸದಿವರೆಗೆ ಮೂರು ಕಿ.ಮೀ. ದೂರ ನಡೆದ ಭವ್ಯ ಮೆರವಣಿಗೆಯಲ್ಲಿ 24 ತೀರ್ಥಂಕರರ ಬಿಂಬಗಳನ್ನು ಬಸದಿಗೆ ತರಲಾಯಿತು. ನಾರಾವಿ, ಹೊಸ್ಮಾರು, ರೆಂಜಾಳ, ಅಳದಂಗಡಿ, ಈದು, ನೂರಾಳಬೆಟ್ಟು ಮೊದಲಾದ 24 ಗ್ರಾಮಗಳ ಶ್ರಾವಕರು-ಶ್ರಾವಕಿಯರು ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದರು. ಬಸದಿಯಲ್ಲಿ ಭಗವಾನ್ ಧರ್ಮನಾಥ ಸ್ವಾಮಿಯ ಪ್ರತಿಷ್ಠೆ, ಶಿಖರಾರೋಹಣ, ಭಗವಾನ್ ಚಂದ್ರನಾಥ ಸ್ವಾಮಿಯ ಪ್ರತಿಷ್ಠೆ, ಶಾಂತಿಚಕ್ರ ಆರಾಧನೆ, 24 ತೀರ್ಥಂಕರರ ಆರಾಧನೆ, ಅಭಿಷೇಕ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ರಕ್ತೇಶ್ವರಿ ದೈವದ ನೇಮ ನಡೆಯಿತು.

ಎಳನೀರು: 20ನೇ ವಾರ್ಷಿಕೋತ್ಸವ

Article Image

ಎಳನೀರು: 20ನೇ ವಾರ್ಷಿಕೋತ್ಸವ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎಳನೀರು ಭ|| 1008 ಶ್ರೀ ಆದಿನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಬಿಂಬ ಪ್ರತಿಷ್ಠಾ ಮಹೋತ್ಸವದ 20ನೇ ವಾರ್ಷಿಕೋತ್ಸವವು ದಿನಾಂಕ 30-04-2024 ಮತ್ತು 01-05-2024 ರಂದು ಜರುಗಲಿದೆ. ವಿ.ಸೂ: ದಿನಾಂಕ 01-05-2024ನೇ ಬುಧವಾರ ಸಂಜೆ 7.00 ರಿಂದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದವರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ರಥೋತ್ಸವ ಮತ್ತು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು

Article Image

ರಥೋತ್ಸವ ಮತ್ತು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು

ಸಂಸೆ: ಇಲ್ಲಿಯ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ವಷ೯ಂಪ್ರತಿ ನಡೆಯುವ ಶ್ರೀ ಮನ್ಮಮಹಾರಥೋತ್ಸವದ ಪೂಜಾ ಮಹೋತ್ಸವಗಳು ಕಾಕ೯ಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾಯ೯ವಯ೯ ಮಹಾ ಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಏ. 18ರಿಂದ ಪ್ರಾರಂಭಗೊಂಡು ಏ. 24ರವರೆಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಲಿರುವುದು.

ಬೋಳ: ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ

Article Image

ಬೋಳ: ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಶ್ರೀ ವರ್ಧಮಾನ ಸ್ವಾಮಿ ಬಸದಿಯ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಪ.ಪೂ ಮುನಿಶ್ರೀ ೧೦೮ ಅಮರಕೀರ್ತಿ ಮಹಾರಾಜರು, ಪ.ಪೂ. ಮುನಿಶ್ರೀ ೧೦೮ ಅಮೋಘಕೀರ್ತಿ ಮಹಾರಾಜರು ಮತ್ತು ಪ.ಪೂ. ಮುನಿಶ್ರೀ ೧೦೮ ಪ್ರಸಂಗ ಸಾಗರ ಮಹಾರಾಜರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ಮಾರ್ಗದರ್ಶನದಲ್ಲಿ ಏ.22 ರಂದು ನೆರವೇರಲಿರುವುದು.

ಪ್ರೊ. ಡೇವಿಡ್ ಎ. ಕೋಲಾ ಅವರಿಗೆ ಬಿಳ್ಕೋಡುಗೆ ಸಮಾರಂಭ

Article Image

ಪ್ರೊ. ಡೇವಿಡ್ ಎ. ಕೋಲಾ ಅವರಿಗೆ ಬಿಳ್ಕೋಡುಗೆ ಸಮಾರಂಭ

ಸತ್ತೂರು, ಧಾರವಾಡ: ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡೇವಿಡ್ ಎ. ಕೋಲಾ ಅವರಿಗೆ ಏ.16 ರಂದು ಎಸ್.ಡಿ.ಎಂ. ವಿಶ್ವವಿದ್ಯಾಲಯದ ವತಿಯಿಂದ ಬಿಳ್ಕೋಡಲಾಯಿತು. ಸುಮಾರು 13 ವರ್ಷಗಳಿಗಿಂತ ಹೆಚ್ಚು ಕಾಲ ಪ್ರಾಂಶುಪಾಲರು ಮತ್ತು ನರ್ಸಿಂಗ್ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ ಪ್ರೊ. ಡೇವಿಡ್ ಎ. ಕೋಲಾ ಅವರ ಕೊಡುಗೆಗಳನ್ನು ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಶ್ಲಾಘಿಸಿದರು ಮತ್ತು ಎಸ್.ಡಿ.ಎಂ. ನರ್ಸಿಂಗ್ ಕಾಲೇಜಿನ ಬೆಳವಣಿಗೆಗೆ ಅವರ ಸೇವೆ ಅಪಾರ ಕೊಡುಗೆ ನೀಡಿದೆ ಎಂದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪ ಕುಲಪತಿಗಳಾದ ವಿ. ಜೀವಂಧರ ಕುಮಾರ, ಹಣಕಾಸು ಅಧಿಕಾರಿಯಾದ ವಿ.ಜಿ. ಪ್ರಭು, ಉಪ ಕುಲಸಚಿವರಾದ ಡಾ. ಅಜಂತಾ ಜಿ.ಎ ಸ್. ಅವರು ಪ್ರೊ. ಡೇವಿಡ್ ಎ. ಕೋಲಾ ಅವರಿಗೆ ಸನ್ಮಾನ ಪತ್ರ, ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳು, ವೈದ್ಯಕೀಯ ಅಧೀಕ್ಷಕರು, ಉಪ ವೈದ್ಯಕೀಯ ಅಧೀಕ್ಷಕರು, ಶೂಶ್ರುಷಕ ಅಧೀಕ್ಷಕರು ಮತ್ತು ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನರ್ಸಿಂಗ್ ಕಾಲೇಜಿನ ಹಿರಿಯ ಪ್ರಾಧ್ಯಾಪಕಿಯವರಾದ ಡಾ. ಗಂಗಾಬಾಯಿ ಕುಲಕರ್ಣಿ ಅವರು ಪ್ರೊ. ಡೇವಿಡ್ ಎ. ಕೋಲಾ ಅವರ ಸಮರ್ಪಣಾ ಸೇವೆ ಮತ್ತು ಅವರು ಕಾಲೇಜಿನಲ್ಲಿ ಅನುಸರಿಸಿದ ಶಿಸ್ತು ಬದ್ದತೆಯನ್ನು ಸ್ಮರಿಸಿದರು. ಡಾ. ನಾಗೇಶ ಅಜ್ಜವಾಡಿಮಠ ಅವರು ಸನ್ಮಾನ ಪತ್ರವನ್ನು ವಾಚಿಸಿದರು. ಡಾ. ಪ್ರಸನ್ನ ದೇಶಪಾಂಡೆ ಅತಿಥಿಗಳನ್ನು ಸ್ವಾಗತಿಸಿದರು. ಡಾ. ತಿಲಕ ಜೋಶಿ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರೊ. ಮೆಟಿಲ್ಡಾ ಬಿಜಾಪುರ ವಂದನಾರ್ಪಣೆ ಸಲ್ಲಿಸಿದರು.

ಆಚಾರ್ಯ ಪದರೋಹಣ ಶತಾಬ್ಧಿ ಮಹೋತ್ಸವ

Article Image

ಆಚಾರ್ಯ ಪದರೋಹಣ ಶತಾಬ್ಧಿ ಮಹೋತ್ಸವ

ಹುಬ್ಬಳ್ಳಿಯ ದಿಗಂಬರ ಜೈನ ಬೋರ್ಡಿಂಗ್ ಆಯೋಜಿಸಿರುವ ಚಾರಿತ್ರ ಚಕ್ರವರ್ತಿ ಪ. ಪೂ. ಪ್ರಥಮಾಚಾರ್ಯ ಶ್ರೀ ೧೦೮ ಶಾಂತಿಸಾಗರ ಮುನಿ ಮಹಾರಾಜರ ಆಚಾರ್ಯ ಪದರೋಹಣ ಶತಾಬ್ಧಿ ಮಹೋತ್ಸವ ಸಮಾರಂಭವು ಪ. ಪೂ. ಅಭಿಕ್ಷಜ್ಞಾನ ಬಾಸ್ಕರ ಶ್ರೀ ೧೦೮ ಪುಣ್ಯಸಾಗರ ಮುನಿಮಹಾರಾಜರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ಕ್ಷೇತ್ರ ವರೂರು ನವಗ್ರಹ ತೀರ್ಥದ, ಪ. ಪೂ. ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಮಹಾಸ್ವಾಮೀಜಿಗಳವರ ಮತ್ತು ಸೋಂದಾ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ಏ. 14 (ನಾಳೆ) ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸೋಂದಾ: ಶ್ರೀ ಸ್ವಾದಿ ದಿಗಂಬರ ಜೈನ ಮಠದ ಭೂಮಿಪೂಜೆ ಶಿಲಾನ್ಯಾಸ ಕಾರ್ಯಕ್ರಮ

Article Image

ಸೋಂದಾ: ಶ್ರೀ ಸ್ವಾದಿ ದಿಗಂಬರ ಜೈನ ಮಠದ ಭೂಮಿಪೂಜೆ ಶಿಲಾನ್ಯಾಸ ಕಾರ್ಯಕ್ರಮ

ಮಲೆನಾಡಿನ ಶಿರಸಿ ತಾಲೂಕಿನ ಸೋಂದಾದ ಶ್ರೀ ಸ್ವಾದಿ ದಿಗಂಬರ ಜೈನ ಮಠದ ಅತೀ ಪ್ರಾಚೀನ ಬಸದಿಯಾದ ಮುತ್ತಿನಕೆರೆಯ ಶ್ರೀ ಆದಿನಾಥ ಸ್ವಾಮಿ ಬಸದಿಯು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಈ ಬಸದಿಯನ್ನು 10ನೇ ಶತಮಾನದಲ್ಲಿ ಶ್ರೀ ಜಿನದೇವಣ್ಣ, 16ನೇ ಶತಮಾನದಲ್ಲಿ ಶ್ರೀ ಅರಸಪ್ಪನಾಯಕ, 1996ರಲ್ಲಿ ಹಿಂದಿನ ಭಟ್ಟಾರಕರು ಶಿಥಿಲವಾದ ಬಸದಿಯನ್ನು ಜೀರ್ಣೋದ್ಧಾರ ಮಾಡಿಸಿದ್ದಾರೆ. ಈಗ ಪುನಃ ಶಿಥಿಲಗೊಂಡ ಬಸದಿಯನ್ನು ಸಂಪೂರ್ಣವಾಗಿ ಶಿಲಾಮಯವಾಗಿ ಜೀರ್ಣೋದ್ಧಾರ ಮಾಡಬೇಕೆಂದು ಸಂಕಲ್ಪ ಮಾಡಿ ಭಗವಂತರನ್ನು ಬಾಲಾಲಯದಲ್ಲಿ ಸ್ಥಾಪಿಸಲಾಗಿದೆ. ಈ ಬಸದಿಯ ಭೂಮಿಪೂಜೆ ಶಿಲಾನ್ಯಾಸ ಕಾರ್ಯಕ್ರಮವು ಯುಗಳ ಮುನಿಗಳಾದ ೧೦೮ ಮುನಿಶ್ರೀ ಅಮರಕೀರ್ತಿ ಮಹಾರಾಜರು ಮತ್ತು ೧೦೮ ಮುನಿಶ್ರೀ ಅಮೋಘಕೀರ್ತಿ ಮಹಾರಾಜರ ಪಾವನ ಸಾನಿಧ್ಯದಲ್ಲಿ ಹಾಗೂ ಪ. ಪೂ. ಸ್ವಸ್ತಿಶ್ರೀ ಭಟ್ಟಾಕಲಂಕ ಸ್ವಾಮೀಜಿಗಳವರ ಮಾರ್ಗದರ್ಶನ, ಪ. ಪೂ. ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ಏ.12ರಂದು (ನಾಳೆ) ನೆರವೇರಲಿದೆ.

ಹೊಂಬುಜ: ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ಹೊಂಬುಜ: ವಾರ್ಷಿಕ ರಥಯಾತ್ರಾ ಮಹೋತ್ಸವ

ಶ್ರೀ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಪರಂಪರಾನುಗತವಾಗಿ ನಡೆದು ಬಂದಿರುವ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಪ. ಪೂ. ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಇಂದಿನಿಂದ (ಮಾ. 29) ಮೊದಲ್ಗೊಂಡು ಏ.3ರವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರಗಲಿರುವುದು.

ಶ್ರೀ ಚಕ್ರೇಶ್ವರಿ ಮಹಿಳಾ ಸಮಾಜದ ವತಿಯಿಂದ ಸಂತೆ ಆಯೋಜನೆ

Article Image

ಶ್ರೀ ಚಕ್ರೇಶ್ವರಿ ಮಹಿಳಾ ಸಮಾಜದ ವತಿಯಿಂದ ಸಂತೆ ಆಯೋಜನೆ

ಬೆಂಗಳೂರಿನ ಶ್ರೀ ಚಕ್ರೇಶ್ವರಿ ಮಹಿಳಾ ಸಮಾಜದ ವತಿಯಿಂದ ಜಯನಗರದಲ್ಲಿ ಮಾ.31 ರಂದು ಸಂತೆ ಆಯೋಜನೆ ಮಾಡಲಾಗಿದೆ. ಈ ಸಂತೆಯಲ್ಲಿ ಕರಕುಶಲ ವಸ್ತುಗಳು, ರುಚಿಕರವಾದ ತಿಂಡಿ ತಿನಿಸುಗಳು (ಜೈನ ತಿಂಡಿ ತಿನಿಸುಗಳು), ವಿವಿಧ ವಸ್ತುಗಳು, ಸೀರೆಗಳು, ಇತರ ಯಾವದಾದರೂ ವಸ್ತುಗಳನ್ನು ಮಾರಾಟ ಮಾಡಲು ಮಳಿಗೆಯನ್ನು ಹಾಕಬಹುದು. ಒಂದು ಮಳಿಗೆಗೆ 200 ರೂಪಾಯಿ ಆಗಿರುತ್ತದೆ. ನೊಂದಾಯಿಸಲು ಕೊನೆಯ ದಿನಾಂಕ 29-03-2024. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9008817766, 9980875624

ಮಹಾವೀರ ತೀರ್ಥಂಕರರ 2550ನೇ ಜನ್ಮಕಲ್ಯಾಣದ ನಿಮಿತ್ತವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

Article Image

ಮಹಾವೀರ ತೀರ್ಥಂಕರರ 2550ನೇ ಜನ್ಮಕಲ್ಯಾಣದ ನಿಮಿತ್ತವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

ತೇರದಾಳ ಶ್ರೀ ವಾಸುಪೂಜ್ಯ ವೀತರಾಗ ದಿಗಂಬರ ಜೈನ ಮಂದಿರದ ವತಿಯಿಂದ ಭಗವಾನ ಶ್ರೀ 1008 ಮಹಾವೀರ ತೀರ್ಥಂಕರರ 2550ನೇ ಜನ್ಮಕಲ್ಯಾಣದ ನಿಮಿತ್ತವಾಗಿ ಪ.ಪೂ. ಸಂತ ಶಿರೋಮಣಿ ಆಚಾರ್ಯ ಶ್ರೀ ವಿದ್ಯಾಸಾಗರ ಮಹಾರಾಜರ ಜೀವನ, ತಪ, ತ್ಯಾಗ ಮತ್ತು ಪ್ರೇರಣಾ ಕಾರ್ಯಗಳು ಎಂಬ ವಿಷಯದ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವನ್ನು ಒಳಗೊಂಡಿರುತ್ತದೆ. ಸೂಚನೆಗಳು:- * ಪ್ರಬಂಧವನ್ನು A4 ಸೀಟ್‌ನಲ್ಲಿ ಒಂದೇ ಮಗ್ಗುಲಿನಲ್ಲಿ ಬರೆಯಬೇಕು. 10 ಪುಟ ಮೀರದಂತೆ ಇರಬೇಕು. * ಶುದ್ಧ ಕೈ ಬರಹ ಅಥವಾ ಟೈಪ್ ಮಾಡಬಹುದು. * ಪ್ರಬಂಧ ಬರೆಯಲು ವಯಸ್ಸಿನ ಮಿತಿ ಇಲ್ಲ. * ಪ್ರಬಂಧ ಬರೆಯುವವರ ಹೆಸರು, ವಿಳಾಸ, ವಾಟ್ಸ್ಆಪ್ ನಂಬರ್ ಕಡ್ಡಾಯವಾಗಿ ನಮೂದಿಸಬೇಕು. * ಪ್ರಬಂಧವನ್ನು ಕನ್ನಡ ಭಾಷೆಯಲ್ಲಿ ಮಾತ್ರ ಬರೆಯಬೇಕು. * ಆಯೋಜಕರ ತೀರ್ಮಾನ ಅಂತಿಮವಾಗಿರುತ್ತದೆ. * ಪ್ರಬಂಧ ಕಳುಹಿಸುವ ಕೊನೆಯ ದಿನಾಂಕ 16-04-2024 * ಪ್ರಬಂಧ ಕಳುಹಿಸುವ ವಿಳಾಸ- ಸಂತೋಷ ಶೆಟ್ಟಿ, ಗುರುಕುಲ ರೋಡ್, ಟೀಚರ್ ಕಾಲೋನಿ, A/Po ತೇರದಾಳ, 587315 ತಾ: ರಬಕವಿ-ಬನಹಟ್ಟಿ ಜಿ: ಬಾಗಲಕೋಟ * ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ- 9164896108, 7019326565, 8951742543 * ಪ್ರಬಂಧದಲ್ಲಿ ಭಾಗವಹಿಸುವ ಎಲ್ಲರಿಗೂ ಬಹುಮಾನ ನೀಡಲಾಗುವುದು.

ಮರುಕಳಿಸಿದ ಹಂತೂರಿನ ಗತವೈಭವ: ಸರ್ವಧರ್ಮ ಸಮನ್ವಯತೆಯ ಕ್ಷೇತ್ರ

Article Image

ಮರುಕಳಿಸಿದ ಹಂತೂರಿನ ಗತವೈಭವ: ಸರ್ವಧರ್ಮ ಸಮನ್ವಯತೆಯ ಕ್ಷೇತ್ರ

ಮೂಡಿಗೆರೆ, ಮಾ. 22: ಹೊಯ್ಸಳ ಸಾಮ್ರಾಜ್ಯದ ನಾಡದ ಹಂತೂರು ವೈಭವದಿಂದ ಮೆರೆದ ನಾಡಾಗಿತ್ತು, ಶಿಲ್ಪಕಲೆಗೆ ಹೆಸರಾಗಿತ್ತು, ಹೊಯ್ಸಳ ಸಾಮ್ರಾಜ್ಯದ ಉಗಮ ಸ್ಥಾನ ಸಮೀಪದ ಅಂಗಡಿ ಗ್ರಾಮವೇ ಆಗಿತ್ತು, ಅಹಿಂಸಾ ವೈಭವದಿಂದ ಮೆರೆದ ನಾಡು, ಕಾಲಚಕ್ರಕ್ಕೆ ಸಿಲುಕಿ ಅವನತಿಯಾಯಿತು, ಸರ್ವಧರ್ಮ ಜನರ ಸಹಕಾರ, ಧಾರ್ಮಿಕ ಮನೋಭಾವ, ಶಾಂತಿ ಅಹಿಂಸೆ ಫಲವಾಗಿ ಇಂದು ಶಿಲ್ಪಕಲಾ ಬಸದಿಯ ಪುನರ್ ನಿರ್ಮಾಣದಿಂದ ಈ ಹಿಂದಿನ ಗತವೈಭವ ಮರುಕಳಿಸಿದೆ ಎಂದು ಶ್ರೀ ಕ್ಷೇತ್ರ ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಹೇಳಿದರು. ಅವರಿಂದು ಹಂತೂರಿನ ಶ್ರೀ ಪಾರ್ಶ್ವನಾಥ ಜಿನ ಮಂದಿರದ ಧಾಮಸಂಪ್ರೋಕ್ಷಣಾಪೂರ್ವಕ ಪಂಚಕಲ್ಯಾಣ ಮಹೋತ್ಸವ ಸಹಿತ ಮಾನಸ್ತಂಭೋಪರಿ ಚತುರ್ಮುಖ ಬಿಂಬ ಪ್ರತಿಷ್ಠಾಪನ ಮಹೋತ್ಸವ ಕಾರ್ಯಕ್ರಮದಲ್ಲಿ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇಲ್ಲಿನ ಜನ, ಧರ್ಮ ಕಾರ್ಯಕ್ಕೆ ಆದ್ಯತೆ ನೀಡುತ್ತಿದ್ದು, ಯಾವುದೇ ತಪ್ಪು ಒಪ್ಪುಗಳಿಗೆ ಜಟ್ಟಿಂಗರಾಯನ ಆಶ್ರಯಿಸುತ್ತಾರೆ. ಇಂತಹ ಧರ್ಮಭೂಮಿಯಲ್ಲಿ ಬಿಟ್ಟಿದೇವ, ಶಾಂತಲೆ, ಹರಿಯಲೇ, ಶಿಲ್ಪಕಲಾ ಬಸದಿ ಕಟ್ಟಿಸಿದರು, ಈ ಬಸದಿ ಸಂರಕ್ಷಣೆಯಲ್ಲಿ ಸ್ಥಳೀಯ ಗ್ರಾಮಸ್ಥರ ಕೊಡುಗೆ ಅಪಾರ. ಸ್ಥಳೀಯ ಜನರು ಹಾಗೂ ಕಳಸ ಭಾಗದ 8 ಸೀಮೆಯ ಜನರ ಸಹಕಾರದಿಂದ ಈ ಬಸದಿ ಜೀರ್ಣೋದ್ಧಾರಗೊಂಡಿದೆ ಎಂದರು. ಇಲ್ಲಿಯ ಜನ ಶ್ರೀಮಂತಿಕೆ ಜನರು ಇಲ್ಲಿನ ಪದ್ಮಾವತಿ ಮೂರ್ತಿ ಮನಮೋಹಕವಾಗಿದೆ. ಈ ಗತ ವೈಭವಕ್ಕೆ ಜನಸಾಗರವೇ ಹರಿದು ಬರುತ್ತಿದೆ ಎಂದು ಹೇಳಿದರು. ಬಳಿಕ ಕಂಬದಹಳ್ಳಿ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹೆಚ್.ಏನ್.ಸುಬ್ಬೆ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮೂಡಿಗೆರೆ ಹಂತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾನಾಗರಾಜ್, ಮಾಜಿ ಶಾಸಕ ಬಿ. ಬಿ. ನಿಂಗಯ್ಯ, ಅಶೋಕ್ ಗೌಡ, ಕೆ. ಸಿ. ಧರಣೇಂದ್ರಯ್ಯ, ವಿಮಲ್ ತಾಳಿಕೋಟೆ, ಶ್ರೀಪಾಲಯ್ಯ, ಎಚ್. ಕೆ. ಸುದರ್ಶನ್, ಪ್ರಶಾಂತ್ ಚಿತ್ರಗುತ್ತಿ, ತೇಜು ಕುಮಾರ್ ಕಟೋರಿಯ, ಪಾಶ್ವನಾಥ, ಜಿ. ಬಿ. ಸನ್ಮತಿ ಕುಮಾರ್, ಶೈಲಾ ಹರೀಶ್, ಭರತ್‌ರಾಜು, ಎಳನೀರು ಕೀರ್ತಿ ಜೈನ್, ಬಿ. ಎಲ್. ಜಿನರಾಜ ಇಂದ್ರ, ಬ್ರಹ್ಮಣ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕ್ಷೇತ್ರದ ಏಳಿಗೆಗೆ ಸಹಕರಿಸಿದ ಸ್ಥಳೀಯರನ್ನು, ಹಲವಾರು ಗಣ್ಯರನ್ನು ಸನ್ಮಾನಿಸಲಾಯಿತು. ಹೊರನಾಡು ಅರ್ಕಕೀರ್ತಿರವರು ಪ್ರಾರ್ಥಿಸಿದರು. ಎಚ್. ಸಿ. ಅಣ್ಣಯ್ಯ ಸ್ವಾಗತಿಸಿದರು. ಪ್ರದೀಪ್ ಕುಮಾರ್ ತಡಪಾಲು ಪ್ರಾಸ್ತಾವಿಕ ನುಡಿಗಳನ್ನಾಡಿದರು. -ಜೆ. ರಂಗನಾಥ, ತುಮಕೂರು

ಎಂ. ಎಂ. ಜಿನೇಂದ್ರರವರ ಜೀವನ ಯಶೋಗಾಥೆ ಕೃತಿ ಶ್ರೀಘ್ರದಲ್ಲಿ ಲೋಕಾರ್ಪಣೆ

Article Image

ಎಂ. ಎಂ. ಜಿನೇಂದ್ರರವರ ಜೀವನ ಯಶೋಗಾಥೆ ಕೃತಿ ಶ್ರೀಘ್ರದಲ್ಲಿ ಲೋಕಾರ್ಪಣೆ

ಇತ್ತೀಚೆಗೆ ರಚಿತಗೊಂಡಿರುವ ಖ್ಯಾತ ಛಾಯಾಗ್ರಾಹಕ ಚಿತ್ತ ಜಿನೇಂದ್ರರವರ ಜೀವನ ಯಶೋಗಾಥೆಯಾದ "ಸವ್ಯಸಾಚಿ ಕಲಾವಿದ ಜಿನೇಂದ್ರ" ಎಂಬ ಕೃತಿ ಕೆಲವೇ ದಿನಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ತುಮಕೂರಿನ ಹಿರಿಯ ಸಾಹಿತಿ ಡಾ. ಎಸ್. ಪಿ. ಪದ್ಮಪ್ರಸಾದ್ ಜೈನ್ ರವರಿಂದ ರಚಿತವಾದ ಈ ಕೃತಿಗೆ ಹಿರಿಯ ಸಾಹಿತಿ, ನಾಡೋಜ ಹಂಪ ನಾಗರಾಜಯ್ಯ (ಹಂಪನಾ) ಮುನ್ನುಡಿ ಬರೆದಿದ್ದು, ಈ ಕೃತಿಯನ್ನು ಬೆಂಗಳೂರಿನ ಕರ್ನಾಟಕ ಪುರಾತತ್ವ ಮತ್ತು ಸಾಹಿತ್ಯ ಪರಿಷತ್ ಹೊರತುರುತ್ತಿದ್ದು ವಿಶಿಷ್ಟ ಕಲ್ಪನೆಯಲ್ಲಿ ಮೂಡಿಬರುತ್ತದೆ. ಕೃತಿಯಲ್ಲಿ ಎಂ.ಎಂ. ಜಿನೇಂದ್ರ ಅವರ ಜೀವನ, ಸವೆಸಿದ ಹಾದಿ, ಬೆಳೆದ ನೋಟ, ಅವರು ರಚಿಸಿದ ಕಲಾಕೃತಿಗಳ ಗುಚ್ಛವೇ ಈ ಕೃತಿಯಲ್ಲಿ ಅಡಗಿದೆ. ಸಾಂಪ್ರದಾಯಿಕ ಚಿತ್ರಕಲೆ, ಶಿಲ್ಪಕಲೆ, ಜಲವರ್ಣ, ವರ್ಣ ಚಿತ್ರಗಳು, ರೇಖಾ ಚಿತ್ರಗಳು, ವ್ಯಕ್ತಿ ಚಿತ್ರಗಳು, ಸ್ತಬ್ಧಚಿತ್ರಗಳು, ಸೆರಾಮಿಕ ಕಲಾಕೃತಿಗಳು ಆಧುನಿಕ ತಂತ್ರಜ್ಞಾನದ ರೂಪದಲ್ಲಿ ಮೂಡಿಬಂದಿವೆ. ಇದರಲ್ಲಿ ಕಲಾವಿದ ಎಂ. ಎಂ. ಜಿನೇಂದ್ರ ಅವರ ಕಲಾ ನೈಪುಣ್ಯತೆ, ಚತುರತೆ, ಸೂಕ್ಷ್ಮತೆ, ಗ್ರಹಿಕೆ, ರಚನಾ ಶೈಲಿ, ರೇಖೆಗಳ ಮೋಡ, ಭಾವನಾ ಲಹರಿ, ವಿಸ್ಮಯಕಾರಿ ಆಲೋಚನೆಗಳು, ಬೃಹತ್ ಮೂರ್ತಿಗಳು ಈ ಕೃತಿಯಲ್ಲಿ ಮೂಡಿ ಬಂದಿವೆ, ಅಲ್ಲದೆ ಸಮಾಜಕ್ಕೆ ಅವರ ಕೊಡುಗೆ, ಅವರಿಗೆ ಸಂದ ಗೌರವಗಳು ಅಡಕವಾಗಿವೆ. ಈ ಕೃತಿಯನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಹೊರ ತರಲಾಗಿದೆ.

ಹಂತೂರಿನ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪಂಚಕಲ್ಯಾಣ ಮಹೋತ್ಸವ

Article Image

ಹಂತೂರಿನ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪಂಚಕಲ್ಯಾಣ ಮಹೋತ್ಸವ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಕೃತಿ ಸೌಂದರ್ಯದಿಂದ ಕೂಡಿದ ಮಲೆನಾಡ ಮಡಿಲಿನ ಹಂತೂರಿನ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪಂಚಕಲ್ಯಾಣ ಮಹೋತ್ಸವ ಸಹಿತ ಮಾನಸ್ಥಂಭೋಪರಿ ಚತುರ್ಮುಖ ಬಿಂಬದ ಪ್ರತಿಷ್ಠಾಪನೆಯು ನರಸಿಂಹರಾಜಪುರ, ಸಿಂಹನಗದ್ದೆ ಬಸ್ತಿಮಠದ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಮತ್ತು ಸಮಸ್ತ ಭಟ್ಟಾರಕ ಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಹಾಗೂ ಶೃಂಗೇರಿ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶ್ರೀ ಶ್ರೀ ಗುಣನಾಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ದಿನಾಂಕ 22.03.2024 ರಿಂದ ಪ್ರಾರಂಭಗೊಂಡು 24.03.2024 ರವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ.

ಹಂತೂರು ಜೈನ ಬಸದಿಯ ನೂತನ ಮಾನಸ್ತಂಭ ಸ್ಥಾಪನೆ

Article Image

ಹಂತೂರು ಜೈನ ಬಸದಿಯ ನೂತನ ಮಾನಸ್ತಂಭ ಸ್ಥಾಪನೆ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಇತಿಹಾಸ ಪ್ರಸಿದ್ಧ ನೂತನ ಶ್ರೀ ಪಾರ್ಶ್ವನಾಥ ಜಿನ ಮಂದಿರದ ಮಾನಸ್ಥಂಭ ಹಾಗೂ ಚತುರ್ಮುಖ ಜಿನಬಿಂಬ ಸ್ಥಾಪನ ಕಾರ್ಯಕ್ರಮವು ಶ್ರೀ ಕ್ಷೇತ್ರ ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿ ಮಠದ ಸ್ವಸ್ತಿಶ್ರೀ ಲಕ್ಷ್ಮಿಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳರ ಪಾವನ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳಿಂದ ಮಾ. 16ರಂದು ನೆರವೇರಿತು. ನೂತನ ಮಾನಸ್ತಂಭವು 31.4 ಅಡಿಗಳ ಎತ್ತರದಲ್ಲಿದೆ. ಇದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕಿನ, ಕೊಯ್ರಾ ಬಂಡೆಯಿಂದ ನಿರ್ಮಿಸಲಾಗಿದೆ. ಈ ಸಂದರ್ಭದಲ್ಲಿ ಮಾನಸ್ತಂಭದ ದಾನಿಗಳಾದ ಚಿತ್ರದುರ್ಗ ಜಿಲ್ಲೆ ಚಳ್ಳಕೆರಿಯ ಸವಿತಾ-ಗೌರಿಪುರ ಪಾರ್ಶ್ವನಾಥ ದಂಪತಿಗಳು, ಪುರೋಹಿತ ಬಿ. ಎಸ್. ಧರಣಿಂದ್ರ ಇಂದ್ರ, ಆರ್. ಕೆ. ಬ್ರಹ್ಮದೇವ್, ಬಸದಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಊರ-ಪರವೂರ ಜಿನ ಬಂಧುಗಳು, ಮತ್ತಿತರರು ಉಪಸ್ಥಿತರಿದ್ದರು.

ವರಂಗ: ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ

Article Image

ವರಂಗ: ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಅತಿಶಯ ಶ್ರೀ ಕ್ಷೇತ್ರ ವರಂಗದಲ್ಲಿ ಪರಂಪರಾನುಗತವಾಗಿ ನೆರವೇರಿಸಿಕೊಂಡು ಬಂದಿರುವ ಭಗವಾನ್ ಶ್ರೀ ೧೦೦೮ ನೇಮಿನಾಥ ಸ್ವಾಮಿ ಮತ್ತು ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಹೊಂಬುಜ ಜೈನ ಮಠದ ಪ.ಪೂ. ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ದಿವ್ಯ ನೇತೃತ್ವದಲ್ಲಿ ಫೆ.24ರಿಂದ ಮೊದಲ್ಗೊಂಡು ಫೆ.28ರವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಧಾರವಾಡ : ವೇಣೂರು ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಆಹ್ವಾನ

Article Image

ಧಾರವಾಡ : ವೇಣೂರು ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಆಹ್ವಾನ

ಧಾರವಾಡ/ಸತ್ತೂರು: ವೇಣೂರಿನ ಮಹಾಮಸ್ತಕಾಭಿಷೇಕ ಸಮಿತಿಯ ಪದಾಧಿಕಾರಿಗಳು ಇಲ್ಲಿಯ ಎಸ್.ಡಿ.ಎಂ. ಮಹಾವಿದ್ಯಾಲಯದ ಉಪಕುಲಪತಿಗಳಾದ ಡಾ| ನಿರಂಜನ್ ಕುಮಾರ್ ಮತ್ತು ಪದ್ಮಲತಾ ನಿರಂಜನ್ ಕುಮಾರ್ ಧಾರವಾಡ ಇವರನ್ನು ಭೇಟಿ ಮಾಡಿ, ಅವರಿಗೆ ಮಹಾಮಸ್ತಕಾಭಿಷೇಕದ ಶ್ರೀಮುಖ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಆ ಸಂದರ್ಭದಲ್ಲಿ ಎಸ್.ಡಿ.ಎಂ. ಸೊಸೈಟಿಯ ಕಾರ್ಯದರ್ಶಿಗಳಾದ ವಿ. ಜೀವಂಧರ್ ಕುಮಾರ್, ಮಸ್ತಕಾಭಿಷೇಕ ಸಮಿತಿಯ ಕೋಶಾಧಿಕಾರಿ ಜಯರಾಜ್ ಕಂಬ್ಳಿ, ಕಾರ್ಯದರ್ಶಿಗಳಾದ ಮಹಾವೀರ ಜೈನ್ ಮೂಡುಕೋಡಿ ಮತ್ತು ಕೆ. ಪ್ರವೀಣ್ ಅಜ್ರಿ ಹಾಗೂ ಪ್ರಸ್ತುಥ್ ಕುಂಡದಬೆಟ್ಟು ಉಪಸ್ಥಿತರಿದ್ದರು.

ಬೆಳಗಾವಿಯ ಧರ್ಮನಗರಿ ಶಮನೇವಾಡಿಯಲ್ಲಿ ಜೈನ ಸಮ್ಮೇಳನ

Article Image

ಬೆಳಗಾವಿಯ ಧರ್ಮನಗರಿ ಶಮನೇವಾಡಿಯಲ್ಲಿ ಜೈನ ಸಮ್ಮೇಳನ

ಬೆಳಗಾವಿಯ ಧರ್ಮನಗರಿ ಶಮನೇವಾಡಿಯಲ್ಲಿ ಪರಮ ಪೂಜ್ಯ ರಾಷ್ಟ್ರಸಂತ ಆಚಾರ್ಯ ಶ್ರೀ ಗುಣಧರನಂದಿ ಮುನಿಮಹಾರಾಜರ 33ನೆಯ ದೀಕ್ಷಾ ಜಯಂತಿ ನಿಮಿತ್ತ ಇಂದು ಮಧ್ಯಾಹ್ನ 2:00 ಗಂಟೆಗೆ ಬೃಹತ್ ಜೈನ ಸಮ್ಮೇಳನ ನಡೆಯಲಿದೆ. ಜೈನ ಸಮ್ಮೇಳನದ ಉದ್ದೇಶ: ಸರಕಾರವು ಜೈನ ನಿಗಮ ಮಂಡಳಿಯನ್ನು ಸ್ಥಾಪಿಸಬೇಕು, ಮಹಾನಗರಗಳಲ್ಲಿ ಜೈನ್ ಹಾಸ್ಟೆಲ್‌ಗಳ ಸ್ಥಾಪನೆ ಆಗಬೇಕು, ಪ್ರತಿ ಜಿಲ್ಲೆಗಳಲ್ಲಿ ಬಡಜನರ ಉಚಿತ ಚಿಕಿತ್ಸೆಗಾಗಿ ಆಸ್ಪತ್ರೆಗಳ ಸ್ಥಾಪನೆ ಆಗಬೇಕು, ಜೈನ ಸಾಧುಗಳ ಸುರಕ್ಷತೆ ಆಗಬೇಕು, ಜೈನ ಬಡ ವಿದ್ಯಾರ್ಥಿಗಳಿಗೆ ನಿಶುಲ್ಕ (ಉಚಿತ) ವಿದ್ಯಾರ್ಜನೆ ಆಗಬೇಕು, ಪ್ರತಿ ಹಳ್ಳಿ ಹಳ್ಳಿಗೆ ಮುನಿ ನಿವಾಸ ಹಾಗೂ ಮಂಗಲ ಕಾರ್ಯಾಲಯಗಳು ನಿರ್ಮಾಣವಾಗಬೇಕು, ಕರ್ನಾಟಕ ಜೈನ ಸಂಸ್ಕೃತಿಯ ಸಂರಕ್ಷಣೆ ಆಗಬೇಕು. ಸಾಂಸ್ಕೃತಿಕ ಕಾರ್ಯಕ್ರಮ: ಇಂದು ಸಂಜೆ ನಟರಾಜ ಎಂಟಟೈನರ್ಸ್ ಅರ್ಪಿಸುವ ವಿಶ್ವ ಪ್ರಸಿದ್ದ ಕನ್ನಡ ಸಂಗೀತಗಾರ ರಾಜೇಶ್ ಕೃಷ್ಣನ್ ಇವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

ಅಂಕೋಲ, ಶಿರಗುಂಜಿ : ಭ. ಶ್ರೀ ಪಾರ್ಶ್ವನಾಥ ತೀರ್ಥಂಕರರ ಜನ್ಮ ಕಲ್ಯಾಣ ಮಹೋತ್ಸವ ಮತ್ತು ವಾರ್ಷಿಕ ಪೂಜಾ ಮಹೋತ್ಸವ

Article Image

ಅಂಕೋಲ, ಶಿರಗುಂಜಿ : ಭ. ಶ್ರೀ ಪಾರ್ಶ್ವನಾಥ ತೀರ್ಥಂಕರರ ಜನ್ಮ ಕಲ್ಯಾಣ ಮಹೋತ್ಸವ ಮತ್ತು ವಾರ್ಷಿಕ ಪೂಜಾ ಮಹೋತ್ಸವ

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರಗುಂಜಿಯ ಶ್ರೀ ಪಾರ್ಶ್ವನಾಥ ಹಾಗೂ ಶ್ರೀ ಜೋಡಿ ಪದ್ಮಾವತಿ ನಾಗರವಳ್ಳಿ ಕ್ಷೇತ್ರದಲ್ಲಿ ಭ|| ೧೦೦೮ ಶ್ರೀ ಪಾರ್ಶ್ವನಾಥ ತೀರ್ಥಂಕರರ ಜನ್ಮ ಕಲ್ಯಾಣ ಮಹೋತ್ಸವ ಮತ್ತು 12ನೇ ವಾರ್ಷಿಕ ಪೂಜಾ ಮಹೋತ್ಸವವು ಶ್ರೀ ಕ್ಷೇತ್ರ ಸ್ವಾದಿ ದಿಗಂಬರ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಜಗದ್ಗುರು ಅಕಲಂಕ ಕೇಸರಿ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಹಾಗೂ ಶ್ರೀ ಕ್ಷೇತ್ರ ಹೊಂಬುಜ ದಿಗಂಬರ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೆಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನಿಧ್ಯ ಹಾಗೂ ದಿವ್ಯ ನೇತೃತ್ವದಲ್ಲಿ ದಿನಾಂಕ 05-02-2024 ಮತ್ತು 06-02-2024ರ ರಂದು ನಡೆಯಲಿದೆ.

ಕಾರ್ಕಳ : ಜಿನಭಜನಾ ಸ್ಪರ್ಧೆ ಸೀಸನ್-7ನ ಸೆಮಿಫೈನಲ್ಸ್ ಮತ್ತು ಫೈನಲ್ಸ್ ಸ್ಪರ್ಧೆ

Article Image

ಕಾರ್ಕಳ : ಜಿನಭಜನಾ ಸ್ಪರ್ಧೆ ಸೀಸನ್-7ನ ಸೆಮಿಫೈನಲ್ಸ್ ಮತ್ತು ಫೈನಲ್ಸ್ ಸ್ಪರ್ಧೆ

ಭಾರತೀಯ ಜೈನ್ ಮಿಲನ್, ವಲಯ-8ರ ಆಶ್ರಯದಲ್ಲಿ, ಮಂಗಳೂರು ವಿಭಾಗದ ಕಾರ್ಕಳ ಜೈನ್ ಮಿಲನ್ ಸಹಯೋಗದೊಂದಿಗೆ, ಯುಗಲ ಮುನಿಗಳಾದ ಪರಮಪೂಜ್ಯ ಮುನಿಶ್ರೀ ೧೦೮ ಅಮೋಘ ಕೀರ್ತಿ ಮಹಾರಾಜರು ಮತ್ತು ಪರಮಪೂಜ್ಯ ಮುನಿಶ್ರೀ ೧೦೮ ಅಮರ ಕೀರ್ತಿ ಮಹಾರಾಜರು, ಕಾರ್ಕಳ ಶ್ರೀ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಇವರ ಆಶೀರ್ವಾದಗಳೊಂದಿಗೆ, ಭಾರತೀಯ ಜೈನ್ ಮಿಲನ್‌ನ ಪರಮಸಂರಕ್ಷಕರಾದ ಡಾ|| ಹೇಮಾವತಿ ಹೆಗ್ಗಡೆ ಮತ್ತು ಡಾ|| ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬ ವರ್ಗದವರ ಮಾರ್ಗದರ್ಶನದೊಂದಿಗೆ ಜಿನಭಜನಾ ಸ್ಪರ್ಧೆ ಸೀಸನ್-7ನ ಸೆಮಿಫೈನಲ್ಸ್ ಫೆಬ್ರವರಿ 3ರಂದು ಮತ್ತು ಫೆಬ್ರವರಿ 4ರಂದು ಫೈನಲ್ಸ್ ಸ್ಪರ್ಧೆಯು ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರ ಕಾರ್ಕಳದಲ್ಲಿ ನಡೆಯಲಿದೆ.

First Previous

Showing 1 of 2 pages

Next Last