Article Image

ಪೆನುಕೊಂಡ: ಶ್ರೀ ಪಚ್ಚೆ ಪಾರ್ಶ್ವನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

Article Image

ಪೆನುಕೊಂಡ: ಶ್ರೀ ಪಚ್ಚೆ ಪಾರ್ಶ್ವನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

ಪ್ರಾಚೀನ ಜೈನ ಕ್ಷೇತ್ರ ಹಾಗೂ ಅಮೂಲ್ಯವಾದ ಪಚ್ಚೆ ಪಾರ್ಶನಾಥ ಸ್ವಾಮಿಯ ಮತ್ತು ಮಹಾಮಾತೆ ಪದ್ಮಾವತಿ ದೇವಿಯ ಪರಿವಾರ ದೇವತೆಗಳ ವಿಗ್ರಹಗಳು ಪ್ರತಿಷ್ಠಾಪನೆಯಾಗಿರುವ ಬಸದಿಯಲ್ಲಿ ತಾ. 25-01-2026 ರಂದು ವಾರ್ಷಿಕ ಪೂಜಾ ಮಹೋತ್ಸವವು ತುಂಬಾ ವೈಭವದಿಂದ ನೆರವೇರಿತು. ಸಿಂಹನಗದ್ದೆಯ ಪರಮಪೂಜ್ಯ ಸ್ವಸ್ತಿಶ್ರೀ ಲಕ್ಷ್ಮೀಸೇನಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ನಡೆಯಿತು. ಸಾನಿಧ್ಯ ವಹಿಸಿದ್ದ ಸ್ವಸ್ತಿಶ್ರೀ ಲಕ್ಷ್ಮೀಸೇನಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ ಜೈನ ಪರಂಪರೆಯು ರಾಷ್ಟ್ರೀಯ ಚಿನ್ನೆಗಳ ಆಯ್ಕೆಯ ಮೇಲೆ ಬೀರಿರುವ ಪ್ರಭಾವವನ್ನು ವಿವರಿಸಿ, ನಾವು ಜೈನರು ಎಂಬದನ್ನು ಹೆಮ್ಮೆಯಿಂದ ಹೇಳಿಕೊಳ್ಳುವಂತೆ ಕರೆ ನೀಡಿದರು. ಅಲ್ಲದೆ ಪೂಜ್ಯ ಶಾಂತಿಸಾಗರರು ಹೇಳಿದ ಮಾರ್ಗದಲ್ಲಿ ಬಸದಿಯಲ್ಲಿ ಪೂಜೆಗಳನ್ನು ನಡೆಸುವಂತೆ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ವಿದ್ವಾಂಸ ಡಾ. ಎಸ್.ಪಿ. ಪದ್ಮಪ್ರಸಾದ್ ಅವರು ಮಾತನಾಡಿ ಪೆನುಕೊಂಡ ಕ್ಷೇತ್ರದ ಜೈನ ಇತಿಹಾಸದ ಮಹತ್ವವನ್ನು ವಿವರಿಸಿ ಹೇಳಿದರು. ಅವರನ್ನು ಬಸದಿ ಟ್ರಸ್ಟ್ ಪರವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪೆನುಕೊಂಡ ತಾಲ್ಲೂಕಿನ ತಹಶೀಲ್ದಾರ್ ಸ್ವಾತಿರವರನ್ನು ಹಾಗೂ ಮುಖಂಡರಾದ ವೆಂಕಟೇಶ್ವರಲು ರಾವ್ ಮತ್ತು ಸ್ಥಳೀಯ ಮುಖಂಡರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹಿರಿಯ ಅಭಿಯಂತರರಾದ ಹೆಚ್.ಡಿ. ಪಾರ್ಶ್ವನಾಥರವರನ್ನು ಸನ್ಮಾನಿಸಲಾಯಿತು. ನೂತನವಾಗಿ ಆಯ್ಕೆಗೊಂಡ ಬಸದಿ ಸಮಿತಿಯ ಪದಾಧಿಕಾರಿಗಳು, ಸ್ವಾಮೀಜಿಯವರ ಸಮ್ಮುಖದಲ್ಲಿ ತಾವು ಬಸದಿ ಅಭಿವೃದ್ಧಿಗೆ ತ್ರಿಕರಣಪೂರ್ವಕವಾಗಿ ಶ್ರಮಿಸುವುದಾಗಿ ಪ್ರತಿಜ್ಞೆ ಕೈಗೊಂಡರು. ಆರಂಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಆರ್.ಎ. ಸುರೇಶ್‌ ಕುಮಾ‌ರ್‌ರವರು ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. 108 ಕಳಶಾಭಿಷೇಕ ಮತ್ತು ಪಂಚಾಮೃತ ಅಭಿಷೇಕಗಳ ಮೂಲಕ ವಾರ್ಷಿಕೋತ್ಸವ ಪೂಜೆಯು ಎಲ್ಲರೂ ಮೆಚ್ಚುವಂತೆ ನಡೆಯಿತು. ಆಗಮಿಸಿದ್ದ ಭಕ್ತರಿಗೆ ಉಪಹಾರ ಮತ್ತು ಭೋಜನ ವ್ಯವಸ್ಥೆಯನ್ನು ಸಮರ್ಪಕವಾಗಿ ಏರ್ಪಡಿಸಲಾಗಿತ್ತು.

ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು ದೇಶದ 77ನೇ ಗಣರಾಜ್ಯೋತ್ಸವ ಆಚರಣೆ

Article Image

ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು ದೇಶದ 77ನೇ ಗಣರಾಜ್ಯೋತ್ಸವ ಆಚರಣೆ

ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು ದೇಶದ 77ನೇ ಗಣರಾಜ್ಯೋತ್ಸವವನ್ನು ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ, ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಮತ್ತು ಮುಖ್ಯ ಅತಿಥಿಗಳಾದ ವೈದ್ಯಕೀಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಪಿ. ವಿಠ್ಠಲ್ ರಾವ್ ಅವರು ದ್ವಜಾರೋಹಣವನ್ನು ಮಾಡಿದರು. ಮುಖ್ಯ ಅತಿಥಿಗಳಾದ ಡಾ. ಪಿ. ವಿಠ್ಠಲ್ ರಾವ್ ಅವರು ತಮ್ಮ ಸಂದೇಶ ಭಾಷಣದಲ್ಲಿ ಮಾತನಾಡುತ್ತಾ: ಗಣರಾಜ್ಯೋತ್ಸವವು ಸಮಾನತೆ ಮತ್ತು ನ್ಯಾಯದ ತತ್ವಗಳನೊಳಗೊಂಡ ಸಂವಿಧಾನವನ್ನು ಅಂಗೀಕರಿಸಿದ ದಿನವಾಗಿದೆ. ಭಾರತದಲ್ಲಿ ಶಿಕ್ಷಣವು ರಾಷ್ಟ್ರೀಯ ಅಭಿವೃದ್ದಿಯ ಅಡಿಪಾಯದೊಂದಿಗೆ ವೈವಿಧ್ಯತೆಯೇ ಶಕ್ತಿ ಹೊಂದಿದೆ. ಪ್ರತಿಯೊಬ್ಬರು ತಮ್ಮ ಉತ್ತಮ ಆರೋಗ್ಯ ಮತ್ತು ಆಧ್ಯಾತ್ಮಿಕ ಬೆಳವಣಿಗೆಯ ಕಡೆಗೆ ಗಮನಹರಿಸಬೇಕು. ವಿದ್ಯಾರ್ಥಿಗಳು ಪೌರತ್ವ ಮತ್ತು ನೈತಿಕ ನಾಯಕತ್ವದ ಜವಾಬ್ದಾರಿಗಳಿಗೆ ಸಿದ್ದವಾಗಬೇಕು. ವಿಜ್ಞಾನ, ತಂತ್ರಜ್ಞಾನ, ನಾವೀನ್ಯತೆ ಮತ್ತು ಉದ್ಯಮಶೀಲತೆ ಭಾರತದಲ್ಲಿ ವೇಗವಾಗಿ ಪ್ರಗತಿ ಸಾಧಿಸುತ್ತಿವೆ. ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ್, ಉಪ ಕುಲಸಚಿವರಾದ ಡಾ. ಅಜಂತಾ ಜಿ.ಎಸ್, ಹಣಕಾಸಿನ ಅಧಿಕಾರಿಗಳಾದ ವಿ. ಜಿ. ಪ್ರಭು, ಅಂಗ ಸಂಸ್ಥೆಗಳ ಮುಖ್ಯಸ್ಥರು, ಉಪ ಪ್ರಾಂಶುಪಾಲರುಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ ಅತಿಥಿಗಳನ್ನು ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಡಾ. ಕಿರಣ ಐತಾಳ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು.. ಡಾ. ಆದಿತ್ಯಾ ಅಗ್ನಿಹೋತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಸುನಿಲ್ ಕುಮಾರ್ ಕೆ. ಎಸ್. ವಂದಿಸಿದರು

ಧಾರವಾಡದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Article Image

ಧಾರವಾಡದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಧಾರವಾಡದ ಹೊಸಯಲ್ಲಾಪುರದ ದಿಗಂಬರ ಜೈನ್ ಸಮಾಜ ಟ್ರಸ್ಟ್ ವತಿಯಿಂದ ಶ್ರೀ ಆದಿನಾಥ ಜೈನ ಬಸದಿಯಲ್ಲಿ 77ನೆಯ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಟ್ರಸ್ಟ್‌ನ ಉಪಾಧ್ಯಕ್ಷರಾದ ಡಾ. ಆರ್. ಎ. ಬಾಳಿಕಾಯಿ ಅವರು ಧ್ವಜ ಅನಾವರಣ ಮಾಡಿ, ಭಾರತೀಯ ಸಂವಿಧಾನವು: ಎಲ್ಲ ನಾಗರಿಕರಿಗೆ ಸಮಾನ ಹಕ್ಕುಗಳನ್ನು ನೀಡುತ್ತದೆ. ಜಾತಿ, ಧರ್ಮ, ಲಿಂಗ ಆಧಾರಿತ ಭೇದಭಾವವನ್ನು ತಿರಸ್ಕರಿಸುತ್ತದೆ. ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನಿರ್ದಿಷ್ಟಪಡಿಸುತ್ತದೆ. ಇದು ಕೇವಲ ಕಾನೂನು ಪುಸ್ತಕವಲ್ಲ, ಒಂದು ಸಾಮಾಜಿಕ ಒಪ್ಪಂದವಾಗಿದೆ. ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದು ಮಾತ್ರವಲ್ಲದೆ ಸಾಮಾಜಿಕ ಸಾಮರಸ್ಯ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯಲ್ಲಿ ಬೆಳೆಯುತ್ತಿರುವ ಭಾರತಕ್ಕಾಗಿ ಕೆಲಸ ಮಾಡಲು ನಾವು ಇಂದು ಪ್ರತಿಜ್ಞೆ ಮಾಡೋಣ, ಎಂದು ತಿಳಿಸುತ್ತ, ಟ್ರಸ್ಟಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಟ್ರಸ್ಟಿನ ಕಾರ್ಯದರ್ಶಿ ಅರುಣ ಬ್ಯಾಡಗಿ, ಸಹ ಕೋಶಾಧ್ಯಕ್ಷ ಯಲ್ಲಪ್ಪ ಜೈನರ ಮತ್ತು ಆಡಳಿತ ಮಂಡಳಿ ಸದಸ್ಯರಾದ ಶ್ರೀಧರ ಬಸ್ತಿ, ಶ್ರಾವಕ-ಶ್ರಾವಕಿಯರು ಹಾಗೂ ಇತರರು ಉಪಸ್ಥಿತರಿದ್ದರು. ಡಾ. ಆರ್. ಎ. ಬಾಳಿಕಾಯಿ ಉಪಾಧ್ಯಕ್ಷರು, ದಿಗಂಬರ ಜೈನ್ ಸಮಾಜ ಟ್ರಸ್ಟ್, ಹೊಸಯಲ್ಲಾಪುರ, ಧಾರವಾಡ

ಸಿಂದಿಗೆರೆಯ ವಾರ್ಷಿಕ ಪೂಜಾ ಮಹೋತ್ಸವ ಕಾರ್ಯಕ್ರಮದಲ್ಲಿ ವೀರೇಂದ್ರಕುಮಾರ್ ಬೇಗೂರುರವರ ಬಿಡುಗಡೆ

Article Image

ಸಿಂದಿಗೆರೆಯ ವಾರ್ಷಿಕ ಪೂಜಾ ಮಹೋತ್ಸವ ಕಾರ್ಯಕ್ರಮದಲ್ಲಿ ವೀರೇಂದ್ರಕುಮಾರ್ ಬೇಗೂರುರವರ ಬಿಡುಗಡೆ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಹಾಗೂ ಪ್ರಾಚೀನ ಜೈನ ಕ್ಷೇತ್ರ ಬ್ರಹ್ಮಯಕ್ಷನ ಮಹೋನ್ನತ ಮಹಿಮಾ ಕ್ಷೇತ್ರ ಸಿಂದಿಗೆರೆಯ ವಾರ್ಷಿಕ ಪೂಜಾ ಮಹೋತ್ಸವ ಕಾರ್ಯಕ್ರಮದಲ್ಲಿ ವೀರೇಂದ್ರಕುಮಾರ್ ಬೇಗೂರುರವರ ಜೈನ ಸಮಾಜದ ನಿರೀಕ್ಷಿತ ಸಂಶೋಧನಾ ಕೃತಿಯಾದ "ಕರ್ನಾಟಕ ಜೈನ ಪರಂಪರೆಯಲ್ಲಿ ಬ್ರಹ್ಮಯಕ್ಷ" ಹಾಗೂ "ನಿರಂಜನ ವೈಭವ" ಎಂಬ ಎರಡು ಕೃತಿಗಳನ್ನು ನಿವೃತ್ತ ಇಂಜಿನಿಯರ್ ಹಾಗೂ ಹಾಸನ ಮಹಾವೀರ ಜೈನ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ನಾಗೇಂದ್ರಯ್ಯರವರು ಬಿಡುಗಡೆಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಕೃತಿಯನ್ನು ಕುರಿತು ವೃಷಬ್ ಕುಮಾರ್ ರವರು ಮಾತಾನಾಡಿದರು. ಕೃತಿಕಾರರಾದ ವೀರೇಂದ್ರ ಕುಮಾರ್ ರವರು ಜೈನ ಯಕ್ಷಯಕ್ಷಿಯರ ಮಹತ್ವ ಹಾಗೂ ಬ್ರಹ್ಮ ಯಕ್ಷರ ಆರಾಧನೆಯ ಕುರಿತು ಉಪನ್ಯಾಸ ಮಾಡಿದರು. ಈ ಕೃತಿಯ ಪ್ರಕಾಶಕರಾದ ಸಿಂದಗೆರೆ ಸುಪಾರ್ಶ್ವ ತೀರ್ಥಂಕರ ಹಾಗೂ ಬ್ರಹ್ಮ ಯಕ್ಷ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾದ ನಾಗರತ್ನರಾಜಯ್ಯ ಹಾಗೂ ಕಾರ್ಯದರ್ಶಿಗಳಾದ ಪಾರ್ಶ್ವನಾಥಯ್ಯರವರು, ವಿಪುಲ್ ಜೈನ್ ಅತುಲ್ ಜೈನ್ ಚಂದ್ರಕೀರ್ತಿ, ಹಾಸನ ದ ಧನಪಾಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.ನಾಡಿನ ತುಮಕೂರು ಮೈಸೂರು ಹಾಸನ ಬೆಂಗಳೂರು ಅಡಗೂರು ಮಾಯಸಂದ್ರ ಶ್ರವಣಬೆಳಗೊಳ ದಿಂದ ಜನರು ಆಗಮಿಸಿ ಈ ಕಾರ್ಯಕ್ರಮ ಕ್ಕೆ ಸಾಕ್ಷಿಯಾದರು.

ಡಾ. ನಿರಂಜನ್ ಕುಮಾರ್ ಅವರಿಗೆ ಡಾ. ಮುರಳಿ ಮನೋಹರ ಜೋಶಿ ಜೀವಮಾನ ಸಾಧನಾ ಪ್ರಶಸ್ತಿ

Article Image

ಡಾ. ನಿರಂಜನ್ ಕುಮಾರ್ ಅವರಿಗೆ ಡಾ. ಮುರಳಿ ಮನೋಹರ ಜೋಶಿ ಜೀವಮಾನ ಸಾಧನಾ ಪ್ರಶಸ್ತಿ

ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರಿಗೆ ಪದ್ಮವಿಭೂಷಣ ಡಾ. ಮುರಳಿ ಮನೋಹರ ಜೋಶಿ ಜೀವಮಾನ ಸಾಧನಾ ಪ್ರಶಸ್ತಿಯನ್ನು ನೀಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿದ ಶ್ರೇಷ್ಠ ಶಿಕ್ಷಕರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಜೀವಮಾನ ಸಾಧನೆ ಪ್ರಶಸ್ತಿಯನ್ನು ಅಕ್ಟೋಬರ್ 31, 2025 ರಂದು ನವದೆಹಲಿಯಲ್ಲಿ ನಡೆದ ವಿಶ್ವ ಶೈಕ್ಷಣಿಕ ಒಕ್ಕೂಟದ ((Federation of World Academics)) ಸಮಾರಂಭದ 8ನೇ ವಾರ್ಷಿಕ ಸಮ್ಮೇಳನದಲ್ಲಿ ನೀಡಲಾಯಿತು. ಮಾಜಿ ಮಾನವ ಸಂಪನ್ಮೂಲ ಸಚಿವರು ಹಾಗೂ ಶ್ರೇಷ್ಠ ಶಿಕ್ಷಕರು ಆದ ಡಾ. ಮುರಳಿ ಮನೋಹರ ಜೋಶಿ ಅವರು ಈ ಪ್ರಶಸ್ತಿಗಳನ್ನು ನೀಡಿದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Article Image

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ (ಅಕ್ಟೋಬರ್ 24 ಶುಕ್ರವಾರ) ಇಂದು ಮತ್ತು 25 ಶನಿವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ರವರೆಗೆ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಾ ತಜ್ಞರುಗಳಾದ ಡಾ| ಪ್ರತೀಕ್ಷ್.ಪಿ, ಡಾ| ಹರೀಶ್ ಬಿ.ಎಸ್, ಡಾ| ದೇವೇಂದ್ರ ಕುಮಾರ್. ಪಿ, ಡಾ| ಶತಾನಂದ ಪ್ರಸಾದ್ ರಾವ್, ಡಾ| ರಜತ್ ಹೆಚ್.ಪಿ ಭಾಗವಹಿಸಲಿದ್ದಾರೆ. ಮೂಳೆಗಳ ತಪಾಸಣೆ, ಸಂಧಿವಾತ ಆರೈಕೆ, ಮೊಣಕಾಲಿನ ಆಥ್ರೋಸ್ಕೋಪಿಕ್ ಲಿಗಮೆಂಟ್‌ಗಳ ತಪಾಸಣೆ, ಬೆನ್ನುಮೂಳೆ ಮತ್ತು ಕುತ್ತಿಗೆ ನೋವಿನ ತಪಾಸಣೆ, ಭುಜದ ನೋವಿನ ತಪಾಸಣೆ, ಶಸ್ತ್ರಚಿಕಿತ್ಸೆ ರಹಿತ ಮೂಳೆಯ ಆರೈಕೆ, ಮೊಣಗಂಟು ಮತ್ತು ಸೊಂಟ ನೋವಿನ ತಪಾಸಣೆ, ಪಾದ ಮತ್ತು ಮೊಣಕಾಲಿನ ತಪಾಸಣೆ, ಸ್ಪೋರ್ಟ್ಸ್ ಇಂಜುರಿ ತಪಾಸಣೆಗಳನ್ನು ನಡೆಸಲಾಗುವುದು. ಉಚಿತ ವೈದ್ಯರ ಸಮಾಲೋಚನೆ, ಉಚಿತ ಮೂಳೆ ಸಾಂದ್ರತೆ ಪರೀಕ್ಷೆ, ಉಚಿತ ಎಕ್ಸ್ರೇ, ಒಳರೋಗಿ ವಿಭಾಗದಲ್ಲಿ ಸರ್ಜರಿ ಮೇಲೆ 10% ರಿಯಾಯಿತಿ, ಹೊರರೋಗಿ ವಿಭಾಗದಲ್ಲಿ ರಕ್ತ ಪರೀಕ್ಷೆ ಮತ್ತು ರೆಡಿಯೋಲಾಜಿ ಪರೀಕ್ಷೆಯಲ್ಲಿ 20% ರಿಯಾಯಿತಿ, ಔಷಧದಲ್ಲಿ 10% ರಿಯಾಯಿತಿ ದೊರೆಯಲಿದೆ. ಕೀಹೋಲ್ ಸರ್ಜರಿ, ಪಾದದ ಸರ್ಜರಿ, ಎಂಡೋಸ್ಕೋಪಿ ಸರ್ಜರಿ, ಲೇಸರ್ ಸರ್ಜರಿ, ಎಲ್ಲಾ ತರಹದ ಆರ್ಥೋಸ್ಕೋಪಿಕ್ ಲಿಗ್‌ಮೆಂಟ್ ಸರ್ಜರಿ, ಸಂಪೂರ್ಣ ಮಂಡಿ ಮತ್ತು ಸೊಂಟದ ಬದಲಾವಣೆ ಮತ್ತು ಡಿಸ್ಕ್ ಸರ್ಜರಿಯಲ್ಲಿ ವಿಶೇಷ ರಿಯಾಯಿತಿ ದೊರೆಲಿದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಹೆಸರು ನೋಂದಾಯಿಸಲು 7760397878 ಅಥವಾ 8073349216 ಈ ದೂರವಾಣಿಗಳನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದ್ದಾರೆ.

ಮೈಸೂರು: ಕರ್ನಾಟಕ ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಾದ ದೇವರಾಜ್ ಅವರ ಭೇಟಿ

Article Image

ಮೈಸೂರು: ಕರ್ನಾಟಕ ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಾದ ದೇವರಾಜ್ ಅವರ ಭೇಟಿ

ಮೈಸೂರು, ಅ.10: ಕರ್ನಾಟಕ ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಾದ ದೇವರಾಜ್ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಬಸದಿಗಳ ಸಂರಕ್ಷಣೆಯ ಬಗ್ಗೆ ವಿವರವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಇದಕ್ಕೆ ಉತ್ತರಿಸಿದ ಆಯುಕ್ತರು ಬಸದಿಗಳಿಗೆ ಯಾವುದೇ ರೀತಿಯ ತೊಂದರೆಗಳನ್ನು ಮಾಡುವುದಿಲ್ಲ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ಬಂದ ನಂತರ ಒಂದೆರಡು ದಿನದಲ್ಲಿ ಲಿಖಿತವಾಗಿ ಉತ್ತರ ನೀಡುವುದಾಗಿ ಭರವಸೆ ನೀಡಿದರು. ಎಲ್ಲಾ ಬಸದಿಗಳನ್ನು ಸಂರಕ್ಷಣೆ ಮಾಡಲು ಇಲಾಖೆ ಒತ್ತು ನೀಡಲಿದೆ ಎಂಬುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಡಾ. ಕೆ ಜಯಕೀರ್ತಿ ಜೈನ್, ವಿಜಯಕುಮಾರ್. H, ಸುರೇಂದ್ರ ಕುಮಾರ್ ಜೈನ್, ಅಜಿತ್ ಕುಮಾರ್ ಜೈನ್ ಮುಂತಾದವರು ಉಪಸ್ಥಿತರಿದ್ದರು

ಭರತೇಶ ವೈಭವ ಕಾವ್ಯ ವಾಚನ ಪ್ರವಚನ ಸಪ್ತಾಹ ಸಂಭ್ರಮ

Article Image

ಭರತೇಶ ವೈಭವ ಕಾವ್ಯ ವಾಚನ ಪ್ರವಚನ ಸಪ್ತಾಹ ಸಂಭ್ರಮ

ಮಂಗಳೂರು: ಬಹುಜನರ ಅಪೇಕ್ಷೆಯ ಮೇರೆಗೆ ಮಂಗಳೂರು ನಗರದಲ್ಲಿ ದ್ವಿತೀಯ ಬಾರಿಗೆ ಲಾರ್ಡ್ ಮಹಾವೀರ ಜೈನ್ ಬೋರ್ಡಿಂಗ್ ಪ್ರಸ್ತುತ ಪಡಿಸುವ ವಿಶೇಷ ಕಾರ್ಯಕ್ರಮ ಮಹಾಕವಿ ರತ್ನಾಕರ ವರ್ಣಿವಿರಚಿತ ಮಹಾಕಾವ್ಯ ಭರತೇಶ ವೈಭವ ಕಾವ್ಯ ವಾಚನ - ಪ್ರವಚನ ಸಪ್ತಾಹ ಸಂಭ್ರಮವು ದಿನಾಂಕ 05-10-2025 ರಿಂದ ತಾ. 12-10-2025ರ ವರೆಗೆ ಪ್ರತಿದಿನ ಸಂಜೆ ಗಂಟೆ 6.00 ರಿಂದ 8.00ರ ವರೆಗೆ ವರ್ಧಮಾನ ಸಿದ್ದಾರ್ಥ ಭವನ, ಲಾರ್ಡ್ ಮಹಾವೀರ ಜೈನ್ ಬೋರ್ಡಿಂಗ್‌ ಇಲ್ಲಿ ಜರುಗಲಿದೆ. ಉದ್ಘಾಟನೆ : ಶ್ರೀ ಅಭಿಷೇಕ್ ಬಿ.ಎಸ್., BE, MBA ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಮೆಸ್ಕಾಂ ಸಬ್‌ಡಿಸನ್, ಕಾವೂರು, ಮಂಗಳೂರು ಕಾವ್ಯವಾಚನ : ಶ್ರೀ ಸಾತ್ವಿಕ್ ಜೈನ್ ಎನ್., ಬಜಗೋಳಿ ಎಂ.ಸಿ.ಎ. ವಿದ್ಯಾರ್ಥಿ, ಎನ್.ಐ.ಟಿ.ಕೆ. ಪ್ರವಚನ : ಶ್ರೀ ಮುನಿರಾಜ ರೆಂಜಾಳ, ಕಾರ್ಕಳ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು

ಮಂಗಳೂರಿನ ಹೃದಯಭಾಗ ಪಾಂಡೇಶ್ವರದಲ್ಲಿ ಐಷಾರಾಮಿ ಅಭಿಷ್ ವಿಸ್ಟಾ ಸೀ ವ್ಯೂ ಅಪಾರ್ಟ್ಮೆಂಟ್

Article Image

ಮಂಗಳೂರಿನ ಹೃದಯಭಾಗ ಪಾಂಡೇಶ್ವರದಲ್ಲಿ ಐಷಾರಾಮಿ ಅಭಿಷ್ ವಿಸ್ಟಾ ಸೀ ವ್ಯೂ ಅಪಾರ್ಟ್ಮೆಂಟ್

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಭಿಷ್ ಬಿಲ್ರ‍್ಸ್ ಸಂಸ್ಥೆಯ ನೂತನ ಐಶಾರಾಮಿ ವಸತಿ ಸಮುಚ್ಚಯ ಅಭಿಷ್ ವಿಸ್ಟಾವನ್ನು ಅನಾವರಣಗೊಳಿಸಿದ್ದು, ಯೋಜನೆಗೆ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ನಗರದ ಹೃದಯ ಭಾಗವಾದ ಪಾಂಡೇಶ್ವರದಲ್ಲಿ ನಿರ್ಮಾಣವಾಗುತ್ತಿರುವ ಅಭಿಷ್ ವಿಸ್ಟಾ ಅಪಾರ್ಟ್ಮೆಂಟ್ ವಸತಿ ಸಮುಚ್ಚಯ ನಿರ್ಮಾಣವಾಗುತ್ತಿದೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಪುಷ್ಪರಾಜ್ ಜೈನ್ ತಿಳಿಸಿದ್ದಾರೆ. ಆಧುನಿಕ ಸೌಕರ್ಯಗಳನ್ನು ಒಳಗೊಂಡಿರುವ ಈ ಪ್ರೀಮಿಯಂ ಅಪಾರ್ಟ್ಮೆಂಟ್ ತನ್ನ ವಿಶಿಷ್ಟ ಸ್ಥಳ ಮತ್ತು ಆಕರ್ಷಕ ವಿನ್ಯಾಸದಿಂದ ವಿಶಿಷ್ಟತೆ ಸಾಧಿಸಿದೆ. ಮೂರನೇ ಮಹಡಿಯ ಮೇಲ್ಭಾಗದಿಂದಲೇ ಸಮುದ್ರ ಹಾಗೂ ಪಶ್ಚಿಮ ಘಟ್ಟದಿಂದ ಹರಿದು ಬರುವ ನೇತ್ರಾವತಿ ಹಾಗೂ ಪಲ್ಗುಣಿ ನದಿಯ ಸಂಗಮದ ವಿಹಂಗಮಕ ನೋಟ ಕಣ್ಣು ಸೆಳೆಯುತ್ತದೆ. ನೈಸರ್ಗಿಕ ಸೌಂದರ್ಯದೊಂದಿಗೆ ನಗರದ ಚೈತನ್ಯವನ್ನೂ ಅನುಭವಿಸಲು ಸಾಧ್ಯವಾಗುವ ಈ ವಾಸಸ್ಥಳವು `ಗುಡ್ ಲೊಕೇಶನ್ - ರಿಚ್ ಲೊಕೇಶನ್' ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಗರದ ಪ್ರಮುಖ ಭಾಗ ಎಂದರೆ ಪ್ರೆಮ್ ಲೊಕೇಷನ್‌ನಲ್ಲಿ ಒಂದಾಗಿರುವ ಪಾಂಡೇಶ್ವರ - ಮಂಗಳಾದೇವಿ ದೇವಸ್ಥಾನ ಮುಖ್ಯ ರಸ್ತೆಯಲ್ಲೆ ಅಭಿಷ್ ವಿಸ್ಟಾ ನಿರ್ಮಾಣವಾಗುತ್ತಿದೆ. ಈ ಯೋಜನೆಯ ಕಾಮಗಾರಿ ಭರದಿಂದ ಸಾಗುತ್ತಿದ್ದು, ಎರಡುವರೆ ವರ್ಷದಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಹಣಕಾಸು ಸೌಲಭ್ಯ: ಈ ಯೋಜನೆಯಲ್ಲಿ ಮನೆ ಖರೀದಿಗೆ ಸಂಬಂಧಿಸಿದಂತೆ ಬ್ಯಾಂಕ್‌ಗಳೊಂದಿಗೆ ಅಭಿಷ್ ಬಿಲ್ರ‍್ಸ್ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡಿದ್ದು, ಇದರಿಂದಾಗಿ ಮನೆ ಖರೀದಿಗೆ ಸುಲಭವಾಗಿ ಗ್ರಾಹಕರಿಗೆ ಹಣಕಾಸು ಸೌಲಭ್ಯ ಸಿಗಲಿದೆ. ಸಾರ್ವಜನಿಕ ಸಾರಿಗೆ, ಉತ್ತಮ ಪರಿಸರ, ಶಾಪಿಂಗ್ ಮಾಲ್, ದೇವಸ್ಥಾನ, ಮಸೀದಿ, ಚರ್ಚ್, ಶಿಕ್ಷಣ ಸಂಸ್ಥೆ, ವೃತ್ತಿಪರ ಶಿಕ್ಷಣ ಸಂಸ್ಥೆ, ವೈದ್ಯಕೀಯ ಕಾಲೇಜುಗಳು ಆಸುಪಾಸಿನಲ್ಲಿರುವ, ಬಸ್ ನಿಲ್ದಾಣ, ವಿಮಾನ ನಿಲ್ದಾಣ, ರೈಲು ನಿಲ್ದಾಣವನ್ನು ಸುಲಭವಾಗಿ ತಲುಪುವಂತಿರುವ ಅಭಿಷ್ ವಿಸ್ಟಾದಲ್ಲಿ ಗ್ರಾಹಕರು ಮನೆ ಬುಕ್ ಮಾಡಬಹುದಾಗಿದೆ. 1660 ಚದರ ಅಡಿಯಿಂದ 1875 ಚದರ ಅಡಿ ವರೆಗಿನ ಮೂರು ಬೆಡ್ ರೂಂನ ಮನೆ ನಿರ್ಮಾಣವಾಗಲಿದೆ. ಪ್ರತಿ ಮಹಡಿಯಲ್ಲಿ ಐದು ಮನೆ ಇದ್ದು, ಗಾಳಿ ಬೆಳಕಿಗೆ ತೆರೆದುಕೊಂಡಿದೆ. ಒಟ್ಟು 17 ಮಹಡಿಯ ಈ ವಸತಿ ಸಮುಚ್ಚಯದಲ್ಲಿ ಎರಡು ಮಹಡಿ ಕಾರು ನಿಲುಗಡೆ, 14 ಮಹಡಿಯಲ್ಲಿ 70 ಮನೆಗಳು ಹಾಗೂ ಟಾಪ್ ಫ್ಲೋರ್‌ನಲ್ಲಿ ಕ್ಲಬ್ ಹೌಸ್ ನಿರ್ಮಾಣವಾಗಲಿದೆ. ಈ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಅತೀ ಎತ್ತರದ ಹಾಗೂ ಬೃಹತ್ ವಸತಿ ಸಮುಚ್ಚಯ ಇದಾಗಿದ್ದು, ಅಭಿಷ್ ವಿಸ್ಟಾ ಕೇವಲ ವಾಸಸ್ಥಳವಲ್ಲ, ಬುದ್ಧಿವಂತ ಹೂಡಿಕೆದಾರರಿಗಾಗಿ ಭವಿಷ್ಯದ ಮೌಲ್ಯವರ್ಧಿತ ಆಸ್ತಿ ಕೂಡ ಹೌದು. ಆಧುನಿಕ ಜೀವನಶೈಲಿಯ ಕನಸನ್ನು ನನಸು ಮಾಡುವ ಅಭಿಷ್ ವಿಸ್ಟಾ ಇಂದು ನಗರದ ಅತ್ಯಂತ ಆಕರ್ಷಕ ಪ್ರೀಮಿಯಂ ಅಪಾರ್ಟ್ಮೆಂಟ್ ಯೋಜನೆಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ. ಅಭಿಷ್‌ನ ವಿಸ್ತಾದ ವಿಶೇಷತೆ: ಪ್ರೆಮ್ ಲೊಕೇಷನ್ 17 ಮಹಡಿ – 70 ಮನೆ ಚತುಷ್ಪಥ ಕಾಂಕ್ರೀಟ್ ರಸ್ತೆಗೆ ತಾಗಿಕೊಂಡು ವಸತಿ ಸಮುಚ್ಚಯ ಮೂರನೇ ಮಹಡಿಯ ಬಳಿಕ ನೇತ್ರಾವತಿ, ಪಲ್ಗುಣಿ ನದಿ ಹಾಗೂ ಸಮುದ್ರದ ಸಂಗಮದ ವಿಹಂಗಮ ನೋಟ ಅತ್ಯಾಧುನಿಕ ಸೌಲಭ್ಯ, ಟ್ರಾಫಿಕ್ ಜಂಜಾಟದಿಂದ ಮುಕ್ತಿ ಸ್ವಚ್ಛಂದ ಜೀವನಕ್ಕೆ ಪರಿಪೂರ್ಣ ಸಮುಚ್ಚಯ ಎಲ್ಲ ಮನೆಗಳನ್ನು ವಾಸ್ತು ಪ್ರಧಾನವಾಗಿಸಿಕೊಂಡು ವಿನ್ಯಾಸ ಮಲ್ಟಿ ಜಿಮ್, ಮೆಡಿಟೇಶನ್ ಸೆಂಟರ್, ಪಾರ್ಟಿ ಹಾಲ್ ಚಿ‌ಲ್ಡ್ರನ್ಸ್ ಪ್ಲೇ ಏರಿಯಾ. ವಾಕಿಂಗ್‌ಗಾಗಿ ಫೂಟ್ ರಿಫ್ಲೆಕ್ಸೋಲಜಿ ಪಥ ಅತಿಥಿಗಳು ಹಾಗೂ ಮಾಲೀಕರಿಗೆ ಪ್ರತ್ಯೇಕ ಕಾರು ಪಾರ್ಕಿಂಗ್ ಆಧುನಿಕ ಪರಿಕರಗಳೊಂದಿಗೆ ಆಕರ್ಷಕ ವಿನ್ಯಾಸ ಕಡಿಮೆ, ಮಧ್ಯಮ ಆದಾಯದ ಕುಟುಂಬಕ್ಕೆ ಸೂಕ್ತ ಟೆರೆಸ್‌ನಲ್ಲಿ ಲ್ಯಾಂಡ್ ಸ್ಕೇಪ್.

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Article Image

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

ಬೆಳ್ತಂಗಡಿ: ಜೈನ ಬಸದಿಗಳ ಮುಖ್ಯ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲ ಆಗುವಂತೆ ಮಾಸಿಕ ಗೌರವಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುದಾನವನ್ನು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಿಡುಗಡೆಗೊಳಿಸಿರುತ್ತಾರೆ. ಈ ಯೋಜನೆ ಪ್ರಥಮ ಬಾರಿಗೆ ಜಾರಿಯಾಗುತ್ತಿರುವುದು ನಮಗೆಲ್ಲ ಸಂತೋಷವನ್ನುಂಟು ಮಾಡಿದೆ. ಯೋಜನೆಯನ್ನು ಜಾರಿ ಮಾಡಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ರವರಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಝಮೀರ್ ರವರಿಗೆ ಹಾಗೂ ಈ ಯೋಜನೆಯನ್ನು ಜಾರಿಗೊಳಿಸುವಲ್ಲಿ ಶ್ರಮವಹಿಸಿದ ನಮ್ಮ ಸಮಾಜದ ಎಚ್. ನಾಭಿರಾಜ ಜೈನ್ ಹಾಗೂ ಕರ್ನಾಟಕ ಸರಕಾರಕ್ಕೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಂಚಾಲಕರಾದ ಡಾ. ಕೆ ಜಯಕೀರ್ತಿ ಜೈನ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಪ್ರತಿಷ್ಠಿತ ರತ್ನಾಕರ ಬ್ಯಾಂಕ ನಿಂದ ಮೂರು ತಲೆಮಾರಿನ ಗ್ರಾಹಕರಿಗೆ ಸನ್ಮಾನ

Article Image

ಪ್ರತಿಷ್ಠಿತ ರತ್ನಾಕರ ಬ್ಯಾಂಕ ನಿಂದ ಮೂರು ತಲೆಮಾರಿನ ಗ್ರಾಹಕರಿಗೆ ಸನ್ಮಾನ

ಮಹಾರಾಷ್ಟ್ರ ಮೂಲದ ಪ್ರತಿಷ್ಠಿತರತ್ನಾಕರ ಬ್ಯಾಂಕ್ (RBL Bank) ಇದು ಹುಬ್ಬಳ್ಳಿಯಲ್ಲಿ ತನ್ನ ಶಾಖೆಯನ್ನು ಸುಮಾರು 42 ವರ್ಷಗಳ ಹಿಂದೆ ತೆರೆಯಿತು. ಆಗಿನಿಂದ ಇಂದಿನವರೆಗೂ ಈ ಬ್ಯಾಂಕು ಬ್ಯಾಂಕಿಂಗ್ ಸೇವೆಯಲ್ಲಿ ಸಾರ್ವಜನಿಕ ವಲಯದಲ್ಲಿಯೇ ತನ್ನದೇ ಆದ ಛಾಪು ಮೂಡಿಸಿದೆ. ಪ್ರಸ್ತುತ ಈ ರತ್ನಾಕರ ಬ್ಯಾಂಕ್ ಮೂರು ತಲೆಮಾರಿನಿಂದ ಈಗಲೂ ಅತ್ಯಂತ ಕ್ರೀಯಾಶೀಲವಾಗಿ ವ್ಯವಹರಿಸುತ್ತಿರುವ ಈಗ ಮೂರನೇ ಜನರೇಷನ್ ಗ್ರಾಹಕರನ್ನು ಗುರುತಿಸಿ ಗೌರವಿಸಲು ಮುಂದಾಗಿದೆ. ಇತ್ತೀಚಿಗೆ ಪ್ರತಿಷ್ಠಿತ ಖಾಸಗಿ ಹೋಟೆಲ್ ಒಂದರಲ್ಲಿ ಮೂರು ತಲೆಮಾರಿನ ಗ್ರಾಹಕರಲ್ಲಿ ಪ್ರಮುಖರಾದ ಹುಬ್ಬಳ್ಳಿ ಮಹಾವೀರ ಗಲ್ಲಿಯ ಪ್ರತಿಷ್ಠಿತ ಮೆ. ಎಸ್. ಬಿ. ಬೀಳಗಿ & ಸನ್ಸ್ ಹೆಸರಿನ ವ್ಯಾಪಾರಿ ಸಂಸ್ಥೆಯ ಮುಖ್ಯಸ್ಥ ಬ್ರಹ್ಮಕುಮಾರ ಎಸ್ ಬೀಳಗಿ, ಇವರ ಪುತ್ರ ಅಜಯ ಬಿ. ಬೀಳಗಿ ಹಾಗೂ ಇವರ ಪುತ್ರಿ ಪ್ರಣೀತ ಎ. ಬೀಳಗಿ ಇವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಯಶೀಲಾ ಬೀಳಗಿ ಮತ್ತು ಚಂದನಾ ಎ. ಬೀಳಗಿ ಇದ್ದರು. ಹಾಗೆಯೇ ಹುಬ್ಬಳ್ಳಿಯ ಇನ್ನೊರ್ವ ಗಿರಿಯ ಗ್ರಾಹಕ ಮೆ| ರಾಧಾಕೃಷ್ಣ ಇಂಡಸ್ಟ್ರೀಸ್ ಮಾಲೀಕರಾದ ಉದಯ ದಡೋತಿ ಮತ್ತು ಪ್ರತಿಭಾ ದಡೋತಿ ಮತ್ತು ಇವರ ಪುತ್ರ ಗುಣಧರ ದಡೋತಿ ಹಾಗೂ ಇವರ ಪತ್ನಿ ಶಲಾಖಾ ಇವರನ್ನು ಸನ್ಮಾನಿಸಿ ಗೌರವಿಸಿದರು ಜೊತೆಗೆ ಅತ್ಯಂತ ಹಿರಿಯ ಗ್ರಾಹಕರು ಬ್ಯಾಂಕನ ಹಿತೈಸಿಗಳೂ ಆದ 92 ವಸಂತಗಳನ್ನು ಕಂಡ ಸುರೇಂದ್ರ ನಾವಳ್ಳಿ ಇವರನ್ನೂ ಬ್ಯಾಂಕ್ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಬ್ಯಾಂಕು ತನ್ನ ಪ್ರತಿಷ್ಠೆಯನ್ನು ಹೆಚ್ಚಿಸಿಕೊಂಡಿದೆ. ಬ್ಯಾಂಕಿನ ಹಿರಿಯ ಅಧಿಕಾರಿ ನಂಜುಂಡ ಸ್ವಾಮಿ, ಬ್ರಾಂಚ್ ಮ್ಯಾನೇಜರ್ ಚಂದ್ರಗೌಡ ಪಾಟೀಲ್, ಟಾಸ್ಕ್ ಮ್ಯಾನೇಜರ್ - ಸಂಗಪ್ಪ ಉಕ್ಕಲಿ, ಸಿಬ್ಬಂದಿ ರತ್ನಾ ಉಪಾಧ್ಯೆ ಮತ್ತು ಕಾವೇರಿ ರಾಥೋಡ್ ಇವರು ಈ ಸನ್ಮಾನ ಸಮಾರಂಭವನ್ನು ನೆರವೇರಿಸಿದರು. ವರದಿ : ಎಸ್. ಆರ್. ಮಲ್ಲಸಮುದ್ರ

ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ನವರಾತ್ರಿ ಮಹೋತ್ಸವ-2025 ಸಾಂಸ್ಕ್ರತಿಕ ವೈಭವ

Article Image

ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ನವರಾತ್ರಿ ಮಹೋತ್ಸವ-2025 ಸಾಂಸ್ಕ್ರತಿಕ ವೈಭವ

ಮಠದಕಣಿ ಶ್ರೀ ವೀರಭದ್ರ - ಮಹಾಮಾಯಿ ದೇವಸ್ಥಾನದ ನವರಾತ್ರಿ ಮಹೋತ್ಸವದಲ್ಲಿ ಮಹಾಮಾಯಿ ಫ್ರೆಂಡ್ಸ್ ಎಸೋಸಿಯೇಶನ್ 48ನೇ ವಾರ್ಷಿಕೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಬುಧವಾರ(24-9-2025) ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಎಲ್ಲರ ಮೆಚ್ಚುಗೆ ಪಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಖ್ಯ ಅಥಿತಿಗಳಾಗಿ ಮಕ್ಕಳ ಕಲ್ಯಾಣ ಸಮಿತಿ ದ.ಕ ಜಿಲ್ಲಾ ಅಧ್ಯಕ್ಷೆ ಹಾಗೂ ವಕೀಲರಾದ ಡಾ. ಅಕ್ಷತಾ ಆದರ್ಶ್ ಮೂಡುಬಿದಿರೆ ಮತ್ತು ಸಂಪತ್ ಜೈನ್ ಮುಂಡೂರು, ಬಾಲಕೃಷ್ಣ ಕಲ್ಬಾವಿ, ವಿಶ್ವನಾಥ್ ಶೆಟ್ಟಿಗಾರ, ಸುದೇಶ್ ಜೈನ್ ಮಕ್ಕಿಮನೆ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೃತ್ಯ ನಿರ್ದೇಶಕರುಗಳಾದ ರೀಮಾ ಜಗನ್ನಾಥ್ ಮಾರ್ನಮಿಕಟ್ಟೆ , ವಿದುಷಿ ಪ್ರಾರ್ಥನಾ ರೋಹಿತ್ ಹೊಸಬೆಟ್ಟು , ವಂಸತ್ ಕುಮಾರ್, ಆಶಿಶ್ ಅಂಚನ್, ಹರೀಶ್ ಆಚಾರ್ಯ ಅವರನ್ನು ಸನ್ಮಾನಿಸಿಗೌರವಿಸಲಾಯಿತು. ಪ್ರಿಯಾ ಸುದೇಶ್ ಕುಮಾರ್ ಮಂಗಳೂರು ನಿರೂಪಿಸಿದರು. ಗೌರವ್ ಶೆಟ್ಟಿಗಾರ, ಉಷಾ ಅಶೋಕ್, ಧಾತ್ರಿ, ಕೃತಿ ಸನಿಲ್, ಪ್ರೇರಣ ಜೆ,ಅಪೇಕ್ಷಾ ಎ. ಮೊದಲಾದವರು ಸಹಕರಿಸಿದರು.

ಹೊಂಬುಜ ಶ್ರೀ ಜೈನ ಮಠದಲ್ಲಿ ಶ್ರೀಶರನ್ನವರಾತ್ರಿ ವಿಶೇಷ ಪೂಜಾ ಮಹೋತ್ಸವ

Article Image

ಹೊಂಬುಜ ಶ್ರೀ ಜೈನ ಮಠದಲ್ಲಿ ಶ್ರೀಶರನ್ನವರಾತ್ರಿ ವಿಶೇಷ ಪೂಜಾ ಮಹೋತ್ಸವ

ಶಿವಮೊಗ್ಗ: ಹೊಂಬುಜ ಶ್ರೀ ಜೈನ ಮಠದಲ್ಲಿ ಶ್ರೀಶರನ್ನವರಾತ್ರಿ ವಿಶೇಷ ಪೂಜಾ ಮಹೋತ್ಸವವು 22-09-2025 ರಿಂದ 02-10-2025 ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ವಿಜಯದಶಮಿಯವರೆಗೆ ಶಕ್ತಿ ದೇವಿಗೆ ವಿವಿಧ ಅಲಂಕಾರಗಳಿಂದ ವಿಶೇಷ ಪೂಜೆ ನೆರವೇರಲಿದೆ. 22-09-2025 ಸೋಮವಾರ ಘಟಸ್ಥಾಪನೆ: ಹೂವಿನ ಅಲಂಕಾರ 23-09-2025, ಮಂಗಳವಾರ ಭೈರವಿ ಪದ್ಮಾವತಿ ದರ್ಶನ 24-09-2025, ಬುಧವಾರ ಮುತ್ತಿನ ಅಲಂಕಾರ 25-09-2025, ಗುರುವಾರ ಹಣ್ಣಿನ ಅಲಂಕಾರ 26-09-2025, ಶುಕ್ರವಾರ (ಲಕ್ಷಹೂವಿನ ಪೂಜೆ) ಸುವರ್ಣ ಅಲಂಕಾರ 27-09-2025, ಶನಿವಾರ ಸೀರೆ ಅಲಂಕಾರ 28-09-2025, ಭಾನುವಾರ ಧಾನ್ಯಗಳ ಅಲಂಕಾರ 29-09-2025 ಸೋಮವಾರ (ಸರಸ್ವತಿ ಪೂಜೆ) ನವಿಲಿನ ಅಲಂಕಾರ 30-09-2025. ಮಂಗಳವಾರ (ಜೀವದಯಾಷ್ಟಮಿ) ಬಳೆ ಅಲಂಕಾರ 01-10-2025, ಬುಧವಾರ (ಆಯುಧ ಪೂಜೆ) ಸುವರ್ಣ ಅಲಂಕಾರ 02-10-2025, ಗುರುವಾರ (ವಿಜಯದಶಮಿ) ಸುವರ್ಣ ಅಲಂಕಾರ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಪಲ್ಲಕ್ಕಿ ಉತ್ಸವದೊಂದಿಗೆ ಬನ್ನಿ ಮಂಟಪದವರೆಗೆ ಸ್ಯಾಕ್ರೋಫೋನ್, ಚಂಡೆ, ಡೊಳ್ಳುಕುಣಿತ, ಸಕಲ ಮಂಗಲವಾದ್ಯಗಳೊಂದಿಗೆ ಸಾಲಾಂಕೃತ ಶೋಭಾಯಾತ್ರೆ ನಡೆಯಲಿದೆ.

ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಸಂಸ್ಮರಣಾ ಸಮಾರಂಭ

Article Image

ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಸಂಸ್ಮರಣಾ ಸಮಾರಂಭ

ಮಂಗಳೂರಿನ ಧವಳ ಕೋ-ಆಪರೇಟಿವ್‌ ಸೊಸೈಟ (ರಿ.), ಇದರ ಆಶ್ರಯದಲ್ಲಿ 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ 300 ವರ್ಷಗಳ ಮೊದಲೇ ಸ್ವಾತಂತ್ರ್ಯದ ವೀರ ಕಹಳೆಯನ್ನು ಮೊಳಗಿಸಿ, ವಸಾಹತುಶಾಹಿಗಳ ಆಕ್ರಮಣವನ್ನು ನಾಲ್ಕು ದಶಕಗಳಕಾಲ ಹಿಮ್ಮೆಟ್ಟಿದ ಮೊಟ್ಟಮೊದಲ ಭಾರತೀಯ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ! ಅಚಲ ಧೈರ್ಯದ ಕಾರಣಕ್ಕೆ ಅವಳನ್ನು 'ಅಭಯ ರಾಣಿ' ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಸಂಸ್ಮರಣಾ ಸಮಾರಂಭವು ಮಂಗಳೂರಿನ ಜೈನ್ ಬೋರ್ಡಿಂಗ್ ಸಿದ್ಧಾರ್ಥ ಸಭಾಭವನದಲ್ಲಿ ಸೆ. 21ರಂದು ಭಾನುವಾರ, ಸಂಜೆ 4.30ಕ್ಕೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅತ್ಯಾಧುನಿಕ ನೇತ್ರ ಚಿಕಿತ್ಸೆ ಧಾರವಾಡದಲ್ಲಿ

Article Image

ಅತ್ಯಾಧುನಿಕ ನೇತ್ರ ಚಿಕಿತ್ಸೆ ಧಾರವಾಡದಲ್ಲಿ

ಎಸ್‌ಡಿಎಮ್ ವಿಶ್ವವಿದ್ಯಾಲಯ ಧಾರವಾಡದ, ಎಸ್‌ಡಿಎಮ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನೇತ್ರ ಚಿಕಿತ್ಸಾ ವಿಭಾಗದಲ್ಲಿ 01.09.2025 ರಂದು ಅತ್ಯಾಧುನಿಕ ಕೋರ್ನಿಯಲ್ ಟೊಪೋಗ್ರಾಫಿ ಯಂತ್ರ ಹಾಗೂ ಸ್ಪೆಕ್ಯುಲರ್ ಮೈಕ್ರೋಸ್ಕೋಪ್ ಉಪಕರಣಗಳನ್ನು ಮಾನ್ಯ ಉಪ ಕುಲಪತಿಗಳಾದ ಹಾಗೂ ಪ್ರಸಿದ್ಧ ಪ್ಲಾಸ್ಟಿಕ್ ಸರ್ಜನ್ ಡಾ. ನಿರಂಜನ್ ಕುಮಾರ್ ಅವರು ಉದ್ಘಾಟಿಸಿದರು. ನೇತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ. ಅನುಪಮಾ ಎಸ್. ದೇಸಾಯಿ ಅವರು ಉಪಕರಣಗಳ ಉಪಯೋಗಗಳನ್ನು ವಿವರಿಸುತ್ತಾ ಕೋರ್ನಿಯಾ ಮೇಲ್ಮೆöÊ ನಿಖರ ನಕ್ಷೆ ತಯಾರಿಸಲು ನೆರವಾಗುತ್ತವೆ. ಕ್ಯಾರಟೊಕೋನಸ್, ಅಸ್ಟಿಗ್ಮಾಟಿಸಂ, ರೆಫ್ರಾಕ್ಟಿವ್ ಶಸ್ತ್ರಚಿಕಿತ್ಸೆ, ಡ್ರೈ ಐ ರೋಗಗಳ ತಪಾಸಣೆಗೆ ಸಹಾಯಕವಾಗುತ್ತವೆ” ಎಂದರು ತಿಳಿಸಿದರು. ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ ಮಾತನಾಡುತ್ತ ಈ ಸೌಲಭ್ಯದಿಂದ ಧಾರವಾಡ ಹಾಗೂ ಸುತ್ತಮುತ್ತಲಿನ ಜನತೆಗೆ ಜಾಗತಿಕ ಮಟ್ಟದ ನೇತ್ರ ಚಿಕಿತ್ಸಾ ಸೇವೆ ಲಭ್ಯವಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಹಣಕಾಸು ಅಧಿಕಾರಿಗಳಾದ ವಿ.ಜಿ. ಪ್ರಭು, ಎಸ್.ಡಿ.ಎಮ್. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿ.ಎಮ್. ಶೆಟ್ಟರ್, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗಡೆ, ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ಮಗ್ದುಮ್ ಕಿಲ್ಲೇದಾರ್, ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ, ಡಾ. ಶಂಕರಗೌಡಾ ಪಾಟೀಲ್ ಹಾಗೂ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಧು ವರರ ಅನ್ವೇಷಣೆಯಲ್ಲಿದ್ದ ಜೈನರಿಗೆ ಸುವರ್ಣಾವಕಾಶ

Article Image

ವಧು ವರರ ಅನ್ವೇಷಣೆಯಲ್ಲಿದ್ದ ಜೈನರಿಗೆ ಸುವರ್ಣಾವಕಾಶ

ಬದಲಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ವರನಿಗೆ ವಧು, ವಧುವಿಗೆ ವರ ಸುಲಭವಾಗಿ ಸಿಕ್ಕು ಮದುವೆಯಾಗುವದು ತುಂಬಾ ಕಷ್ಟಸಾದ್ಯವಾಗಿದೆ. ಅದರಲ್ಲೂ ಮುಖ್ಯವಾಗಿ ಹುಡುಗರಿಗೆ ಹುಡುಗಿಯರು ಸಿಗದಿರುವದೇ ಗಂಭೀರವಾದ ಸಮಸ್ಯೆಯಾಗಿದೆ. ಈ ಸಮಸ್ಯೆ ಎಲ್ಲಾ ಸಮುದಾಯದಲ್ಲೂ ಇದೆ ಆದರೆ ಜೈನ ಸಮುದಾಯದಲ್ಲಿ ತುಸು ಹೆಚ್ಚು ಎಂದೇ ಹೇಳಬೇಕು ( ಇದಕ್ಕೆ ಹಲವಾರು ಕಾರಣಗಳಿವೆ ಇವುಗಳನ್ನು ವಿಶ್ಲೇಶಿಸುವದು ಬೇಡ ಇದು ಎಲ್ಲರಿಗೂ ಗೊತ್ತಿದ್ದ ಸಂಗತಿ ) ಈ ವಿಷಯವಾಗಿ ಮಕ್ಕಳ ಪಾಲಕರು ಕಷ್ಟಪಡುತ್ತಿದಾರೆ ಅಷ್ಟೇ ಅಲ್ಲ ತುಂಬಾ ನೊಂದುಕೊಳ್ಳುತ್ತಿದ್ದಾರೆ. ಈ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಅನೇಕ ಮಾಹಿತಿ ಕೇಂದ್ರಗಳು, ಮೇಳಗಳು ಮತ್ತು ಮೆಟ್ರಿಮೊನಿ ಇತ್ಯಾದಿ ಸಂಸ್ಥೆಗಳು ಹುಟ್ಟಿಕೊಂಡಿವೆಯಾದರೂ ಅವೆಲ್ಲವೂ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ. "ಇಂಥ ಸಮಸ್ಯೆ ಪರಿಹಾರಕ್ಕೆ ಕಂಕಣಬದ್ದವಾಗಿದೆ ಬೆಳಗಾವಿಯ ಮಾಣಿಕಬಾಗ ದಿಗಂಬರ ಜೈನ್ ಬೋರ್ಡಿಂಗ್ ಸಂಸ್ಥೆ" ಇವೆಲ್ಲವನ್ನೂ ಗಮನಿಸಿದ ದಕ್ಷಿಣ ಭಾರತ ಜೈನ ಸಭಾದ ಅಂಗ ಸಂಸ್ಥೆ ಬೆಳಗಾವಿಯ ಮಾಣಿಕಭಾಗ ದಿಗಂಬರ ಜೈನ ಬೋರ್ಡಿಂಗಿನ ಆಡಳಿತ ಮಂಡಳಿ ಶ್ರೀ ಕುಂತಿನಾಥ ಕಲಮನಿ ಇವರ ಸಾರಥ್ಯದಲ್ಲಿ ಕಳೆದ 17 ವರ್ಷಗಳಿಂದ ಮದುವೆಗಾಗಿ ಸೂಕ್ತ ವಧು ಅಥವಾ ವರರನ್ನು ಹುಡುಕುವ ಪ್ರಕ್ರಿಯೆಯ ಭಾಗವಾಗಿ ಜೈನ್ ವಧು-ವರ ಪರಿಚಯ ಸಮಾವೇಶವನ್ನು ಅತ್ಯಂತ ಪ್ರಾಮಾಣಿಕವಾಗಿ ಹಾಗೂ ಯಶಸ್ವಿಯಾಗಿ ನಡೆಸುತ್ತಾ ಬಂದಿದೆ ಇದು ಎಷ್ಟು ಅದ್ಭುತವಾದ ಕಾರ್ಯಮಾಡುತ್ತಿದೆ ಎಂದರೆ ಪರಸ್ಪರ ಹೊಂದಾಣಿಕೆಯಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಮದುವೆಗಳು ಜರುಗಿವೆ ಹಾಗೂ ಅವರೆಲ್ಲ ಸುಖವಾಗಿ ಕೌಟುಂಬಿಕ ಜೀವನ ಸಾಗಿಸುತ್ತಾ ಈ ಸಂಸ್ಥೆಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಇದೀಗ ಈ ವರ್ಷದ 18 ನೇ ಜೈನ್ ವಧು-ವರ ಪರಿಚಯ ಸಮಾವೇಶ ಜರುಗಲಿದೆ. 17ನೇ ಸಮಾವೇಶದ ಭವ್ಯ ಯಶಸ್ಸಿನ ನಂತರ ಬಹಳಷ್ಟು ಶ್ರಾವಕ ಶ್ರಾವಿಕೆಯರ ಆಗ್ರಹ ಹಾಗೂ ವಿನಂತಿಯ ಮೇರೆಗೆ ಇದೀಗ 18ನೇ ಜೈನ್ ವಧು-ವರ ಪರಿಚಯ ಸಮಾವೇಶ ಮುಂಬರುವ ದಿನಾಂಕ 12-10-2025 ರಂದು ರವಿವಾರ ಬೆಳಗಾವಿಯ ಧರ್ಮನಾಥ ಭವನದಲ್ಲಿ ಬೆಳಿಗ್ಗೆ 9ರಿಂದ ಪ್ರಾರಂಭವಾಗಲಿದೆ. ನೋಂದಣಿ ಕಾರ್ಯ ಪ್ರಾರಂಭವಾಗಿದೆ: ಈ ಸಮಾವೇಶದಲ್ಲಿ ಭಾಗಿಯಾಗಲು ಹೆಚ್ಚಿನ ಸಂಖ್ಯೆಯ ಜನ ನೋಂದಣಿ ಮಾಡಿಸಿದ್ದಾರೆ. ಸಮಾವೇಶದ ಪ್ರಯೋಜನ ಪಡೆದುಕೊಳ್ಳಲು ತಾವೂ ರೂ 820/- ಶುಲ್ಕ ಪಾವತಿಸಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದಾಗಿದೆ. www.mdjbbelagavi.in ನೋಂದಣಿಗೆ ಕೊನೆಯ ದಿನಾಂಕ: 30/09/2025 ಇರುತ್ತದೆ. ಇದರ ಪ್ರಯೋಜನ ಪಡೆದುಕೊಳ್ಳಲು ಜೈನ ಧರ್ಮ ಬಂಧುಗಳಿಗೆ ಇದೊಂದು ದೊಡ್ಡ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 70226 91008, 94804 48108 ಈ ಸಂಖ್ಯೆಯಿಂದ ಪಡೆದುಕೊಳ್ಳಬಹುದು. ವರದಿ : ಶಾಂತರಾಜ ಮಲ್ಲಸಮುದ್ರ

ಜೈನ ತತ್ವ-ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತ : ಡಾ. ಅಪ್ಪಣ್ಣ ಹಂಜೆ

Article Image

ಜೈನ ತತ್ವ-ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತ : ಡಾ. ಅಪ್ಪಣ್ಣ ಹಂಜೆ

ಜೈನ ಧರ್ಮವು ‘ಅಹಿಂಸಾ ಪರಮೋಧರ್ಮ’ ಎಂಬ ಧ್ಯೇಯ ವಾಕ್ಯದೊಂದಿಗೆ ಅಹಿಂಸೆ, ಅಪರಿಗ್ರಹ, ಅನೇಕಾಂತವಾದ ಮುಂತಾದ ಸಿದ್ಧಾಂತಗಳ ಮೂಲಕ ಇಂದಿಗೂ ವಿಶ್ವಹಿತವನ್ನು ಬಯಸುತ್ತ ಮುನ್ನಡೆದಿದ್ದು, ಜಗತ್ತಿನ ಎಲ್ಲ ಜೀವಿಗಳಿಗೂ ಬದುಕುವ ಸಮಾನವಾದ ಹಕ್ಕಿದೆ, ಎಲ್ಲ ಜೀವಿಗಳೂ ಇತರ ಎಲ್ಲ ಜೀವಿಗಳನ್ನು ಮನ್ನಿಸಬೇಕು, ಎಲ್ಲ ಜೀವಿಗಳೂ ಸೌಹಾರ್ದದಿಂದ ಬದುಕಬೇಕೆಂಬುದು ಈ ಧರ್ಮದ ಹೆಬ್ಬಯಕೆಯಾಗಿದೆ ಎಂದು ಡಾ. ಅಪ್ಪಣ್ಣ ಹಂಜೆ ಹೇಳಿದರು. ಅವರು ಗದಗ ಜಿಲ್ಲಾ ದಿಗಂಬರ ಜೈನ ಸಂಘವು ‘ದಶಲಕ್ಷಣ ಪರ್ವಾಚರಣೆ ಮತ್ತು ಸಮಾಜ ಸಂಪರ್ಕ ಸಭೆ’ ಕಾರ್ಯಕ್ರಮದ ನಿಮಿತ್ತ ಗದುಗಿನ ವಿದ್ಯಾದಾನ ಸಮಿತಿಯ ಬಾಲಕರ ಪ್ರೌಢ ಶಾಲೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಸಾಮೂಹಿಕ ಕ್ಷಮಾವಳಿ ಹಾಗೂ ಸಮಾರೋಪ ಸಮಾರಂಭ’ದಲ್ಲಿ ಉಪನ್ಯಾಸ ಮಾಡುತ್ತ, ಜೈನರು “ನಾನು ಲೋಕದ ಸಕಲ ಜೀವಿರಾಶಿಗಳನ್ನು ಕ್ಷಮಿಸುತ್ತೇನೆ, ಸಕಲ ಜೀವರಾಶಿಗಳೂ ನನ್ನನ್ನು ಕ್ಷಮಿಸಲಿ, ನಾನು ಎಲ್ಲ ಜೀವಿಗಳಲ್ಲಿ ಮೈತ್ರಿಯನ್ನು ಇರಿಸಿಕೊಳ್ಳಲು ಬಯಸುತ್ತೇನೆ, ಯಾವ ಜೀವಿಯಲ್ಲೂ ನನಗೆ ವೈರವಾಗಲಿ ಮತ್ಸರವಾಗಲಿ ಇಲ್ಲ” ಎಂಬ ಸೌಹಾರ್ದ ಮಂತ್ರವನ್ನು ಆರಂಭದಿಂದಲೂ ಅನುಸರಿಸುತ್ತ ಬಂದಿದ್ದು, ದಶಲಕ್ಷಣ ಪರ್ವವು ಒಂದು ಅರ್ಥದಲ್ಲಿ ಜೈನರಿಗೆ ವಿಧಿಸಲಾದ ನೀತಿ ಸಂಹಿತೆ, ಇದು ಜೈನರ ಬದುಕುವ ಕಲೆಯಾಗಿದೆ ಎಂದು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗಜೇಂದ್ರಗಡದ ಉದ್ಯಮಿ ಮತ್ತು ಭಗವಾನ ಮಹಾವೀರ ಜೈನ ಆಯುರ್ವೇದಿಕ ಮೆಡಿಕಲ್ ಕಾಲೇಜಿನ ಅಧ್ಯಕ್ಷ ಅಶೋಕಕುಮಾರ ಬಾಗಮಾರ ಅವರು ಜೈನ ಧರ್ಮವು ಅರಿವು, ವಿಚಾರ, ಆಚಾರಕ್ಕೆ ಒತ್ತು ಕೊಡುತ್ತ ಬಂದಿದ್ದು, ಇಂದು ಸಂಖ್ಯಾದೃಷ್ಟಿಯಿಂದ ಜೈನರು ಮತೀಯ ಅಲ್ಪಸಂಖ್ಯಾತರೆಂದು ಪರಿಗಣಿಸಲ್ಪಟ್ಟಿದ್ದರೂ ತತ್ವ-ಸಿದ್ಧಾಂತಗಳು ಮತ್ತು ಅರ್ಥಪೂರ್ಣ ಆಚರಣೆ-ಅನುಷ್ಠಾನಗಳ ದೃಷ್ಟಿಯಿಂದ ನಾಡಿನ ಪ್ರಜ್ಞಾವಂತರ ಪ್ರೀತಿಗೆ ಪಾತ್ರರಾಗಿದ್ದಾರೆಂದು ಹೇಳಿದರು. ಸಂಘದ ಅಧ್ಯಕ್ಷ ಪಿ.ಎ. ಕುಲಕರ್ಣಿ ಪ್ರಾಸ್ತಾವಿಕವಾಗಿ ಮತ್ತು ಅಧ್ಯಕ್ಷತೆ ವಹಿಸಿ ಮಾತನಾಡುತ್ತ ವಿದ್ಯಾದಾನ ಸಮಿತಿಯ ಅಧ್ಯಕ್ಷ ಡಿ.ಬಿ. ಹುಯಿಲಗೋಳ ಮತ್ತು ಕಾರ್ಯದರ್ಶಿ ಶ್ರೀನಿವಾಸ ಹುಯಿಲಗೋಳ ಅವರು ಗದುಗಿನ ದಿಗಂಬರ ಜೈನ ಸಮಾಜದ ಕಾರ್ಯಕ್ರಮಗಳ ಆಯೋಜನೆಗೆ ಕಳೆದ ಇಪ್ಪತ್ತೆರಡು ವರ್ಷಗಳಿಂದಲೂ ಶಾಲೆಯ ಸಭಾಂಗಣವನ್ನು ಯಾವುದೇ ಅಪೇಕ್ಷೆಯಿಲ್ಲದೆ ಕೊಡಮಾಡುತ್ತ ಬಂದಿದ್ದು, ಅವರ ‘ಅಭಯದಾನ’ಕ್ಕೆ ಜೈನ ಸಮಾಜವು ಯಾವತ್ತೂ ಋಣಿಯಾಗಿದ್ದು, ಸಾಧಕರ ಸನ್ಮಾನಕ್ಕೆ ಅವಶ್ಯವಿರುವ ಸಾಮಗ್ರಿಗಳನ್ನು ಗದುಗಿನ ಗಣ್ಯ ವ್ಯಾಪಾರಸ್ಥ ಸಂಜಯ ಬಾಗಮಾರ ಅವರು ಪ್ರತಿವರ್ಷ ದಾನಮಾಡುತ್ತ ಬಂದಿದ್ದು, ಅವರ ‘ಶಾಸ್ತ್ರದಾನ’ ಮೌಲ್ಯ ಸಮಾಜಕ್ಕೆ ಮಾದರಿಯಾಗಿದೆ. ಸಂಘಕ್ಕೆ ಗಣ್ಯ ವ್ಯಾಪಾರಸ್ಥರಾಗಿರುವ ಕುಷ್ಟಗಿಯ ಅಭಿನಂದನ ಗೋಗಿ ಮತ್ತು ಗಜೇಂದ್ರಗಡದ ಬಾಹುಬಲಿ ಹೂಲಿ ಅವರ ಉದಾರವಾದ ಮಾರ್ಗದರ್ಶನ, ಸೇವೆ ಸ್ಮರಣೀಯವಾಗಿದೆ. ಜಿಲ್ಲೆಯ ಸಮಸ್ತ ಜೈನ ಸಮಾಜದ ಸಹಾಯ-ಸಹಕಾರದಿಂದಲೇ ದಶಲಕ್ಷಣ ಪರ್ವದ ಆಚರಣೆ ಸಾಂಗವಾಗಿ ನಡೆಯುತ್ತ ಬಂದಿದೆ ಎಂದು ಹೇಳಿದರು. ಸಾಮೂಹಿಕ ಪಂಚ ನಮೋಕಾರ ಮಂತ್ರ ಪಠಣ, ಜ್ವಾಲಾಮಾಲಿನಿ ಸದರಣ್ಣವರ ಪ್ರಾರ್ಥನೆ, ಯಶವಂತ ಸಿದ್ದಣ್ಣವರ ಭಕ್ತಿಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲೆಯ ವಿದ್ಯಾರ್ಥಿಗಳು, ದಾನಿಗಳು ಮತ್ತು ಗಣ್ಯರನ್ನು ಸನ್ಮಾನಿಸಲಾಯಿತು. ಪ್ರಕಾಶ ಮುತ್ತಿನ ನಿರೂಪಣೆ ಮತ್ತು ಸಂಕಪ್ಪ ನಾವಳ್ಳಿ ವಂದನಾರ್ಪನೆಗೈದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳ ಮುನ್ನೂರಕ್ಕೂ ಹೆಚ್ಚು ಶ್ರಾವಕರು, ಶ್ರಾವಿಕೆಯರು ಭಾಗವಹಿಸಿದ್ದರು. ಎಲ್ಲರೂ ಸಾಮೂಹಿಕವಾಗಿ ಪರಸ್ಪರ ಕ್ಷಮೆ ಕೋರಿ, ಪಂಚ ನಮೋಕಾರ ಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಿದರು.

ದಶಲಕ್ಷಣ ಪರ್ವಾಚರಣೆ ಮತ್ತು ಸಮಾಜ ಸಂಪರ್ಕ ಸಭೆ

Article Image

ದಶಲಕ್ಷಣ ಪರ್ವಾಚರಣೆ ಮತ್ತು ಸಮಾಜ ಸಂಪರ್ಕ ಸಭೆ

‘ಬ್ರಹ್ಮ’ವೆಂದರೆ ‘ಆತ್ಮ’ ಮತ್ತು ‘ಚರ್ಯ’ ಎಂದರೆ ‘ಪಾಲನೆ’ ಎಂದರ್ಥ. ಆತ್ಮನಲ್ಲಿ ಲೀನವಾಗಿ ಕಾಮಾದಿ ವಿಕಾರಗಳನ್ನು ತೊರೆದು ಆತ್ಮನ ನೈಜ ಗುಣಗಳನ್ನು ಅರಿತು ಆತ್ಮೋನ್ನತಿಯನ್ನು ಸಾಧಿಸುವುದೇ ಬ್ರಹ್ಮಚರ್ಯ ಧರ್ಮವಾಗಿದ್ದು, ಕಾರ್ಯ-ವಚನ ಆಲೋಚನೆಗಳಲ್ಲಿ ಬ್ರಹ್ಮಚರ್ಯ ಪಾಲನೆಯಿಂದ ಪರಿಶುದ್ಧ ಜೀವನ ನಡೆಸಲು ಸಾಧ್ಯವೆಂದು ವಸಂತಮಾಲಾ ದೇಸಾಯಿ ಹೇಳಿದರು. ಅವರು ಗದಗ ಜಿಲ್ಲಾ ದಿಗಂಬರ ಜೈನ ಸಂಘವು ‘ದಶಲಕ್ಷಣ ಪರ್ವಾಚರಣೆ ಮತ್ತು ಸಮಾಜ ಸಂಪರ್ಕ ಸಭೆ’ ನಿಮಿತ್ತ ಸಂಘದ ಕಾರ್ಯಾಲಯದಲ್ಲಿ ಮಹಿಳಾ ಮಂಡಳದ ಸಹಯೋಗದಲ್ಲಿ ಆಯೋಜಿಸಿದ್ದ ‘ಉತ್ತಮ ಬ್ರಹ್ಮಚರ್ಯ ಧರ್ಮ’ ಕುರಿತು ಉಪನ್ಯಾಸ ಮಾಡುತ್ತ, ಆತ್ಮವು ಪರಿಶುದ್ಧ, ಪ್ರಬುದ್ಧ, ಶಾಶ್ವತ, ಆನಂದಯಮವಾಗಿದ್ದು, ಆತ್ಮನ ನಿಜವಾದ ಗುಣವನ್ನು ತಿಳಿಯುವುದರಿಂದ ಬದುಕು ಸುಂದರವಾಗುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶೋಭಕ್ಕ ಇಂಚಲ ಅವರು ಮಹಿಳೆಯನ್ನು ರಕ್ಷಿಸುವ ಅಭೇದ್ಯ ಬೇಲಿ ಅವಳ ಬ್ರಹ್ಮಚರ್ಯದ ಸದ್ಗುಣವಾಗಿದ್ದು, ಬೇರೆ ಯಾವುದೇ ಬೇಲಿಯೂ ಅವಳನ್ನು ರಕ್ಷಿಸಲು ಸಾಧ್ಯವಿಲ್ಲವೆಂದು ಹೇಳಿದರು. ಕಾರ್ಯಕ್ರಮದಲ್ಲಿ ಅಪ್ಪಣ್ಣ ಹಂಜೆ, ಪಿ.ಎ. ಕುಲಕರ್ಣಿ, ಯಶವಂತ ಸಿದ್ದಣ್ಣವರ, ಪ್ರಕಾಶ ಮುತ್ತಿನ, ಸಂಕಪ್ಪ ನಾವಳ್ಳಿ, ಸಂಜಯ ಪಾಂಡ್ರೆ, ಎಚ್.ಎ. ಕುಲಕರ್ಣಿ, ಸುಭಾಸ ಅಂಗಡಿ, ಪರಿಮಳಾ ಕುಲಕರ್ಣಿ, ಸಹನಾ ಹಂಜೆ, ಪದ್ಮಾವತಿ ತುಕೋಳ, ಸುಕನ್ಯಾ ಕುಲಕರ್ಣಿ, ಸುಪ್ರೀಯಾ ಪಾಂಡ್ರೆ ಸೇರಿದಂತೆ ಸ್ಥಳೀಯ ಶ್ರಾವಕರು, ಶ್ರಾವಿಕೆಯರು ಪಾಲ್ಗೊಂಡಿದ್ದರು. ಮಧುಮತಿ ಕಬ್ಬಿಣ ಭಕ್ತಿಗೀತೆ ಹಾಡಿದರು. ಸುಮನ ಮುತ್ತಿನ ನಿರೂಪಣೆ ಮತ್ತು ಸುಪ್ರೀಯಾ ನಾವಳ್ಳಿ ವಂದನಾರ್ಪಣೆಗೈದರು.

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Article Image

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದಂತ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು. ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಬಲರಾಮ್ ನಾಯ್ಕ ಮುಖ್ಯ ಅತಿಥಿಯವರಾಗಿ ಧ್ವಜಾರೋಹಣ ಮಾಡಿದರು. ಮುಖ್ಯ ಅತಿಥಿಯವರಾದ ಡಾ. ಬಲರಾಮ್ ನಾಯ್ಕ ಅವರು ಮಾತನಾಡುತ್ತಾ: ದೇಶಕ್ಕೆ ಸ್ವಾತಂತ್ರ್ಯದ ಉಡುಗೊರೆ ತಂದು ಕೊಟ್ಟು ಕ್ರಾಂತಿಕಾರಿ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಜೀವನದಲ್ಲಿ ಗೆಲವು ಸಾಧಿಸಬೇಕೆಂದ್ದಿದರೆ ಭಾರತ ಇತಿಹಾಸವನ್ನು ಮರೆಯಬಾರದು. ಭಾರತದ ಸಂಪತ್ಭರಿತ ಹಾಗೂ ಸಡೃಡ ಸಂಪ್ರಧಾಯವನ್ನು ನಾವೆಲ್ಲರು ಗೌರವಿಸಬೇಕು. ಸಡೃಡ ದೇಶ ನಿರ್ಮಾಣಕ್ಕೆ ಆಂತರಿಕ ದ್ವೇಷ, ಅಸೂಯೆಗಳಂತ ದೌರ್ಬಲ್ಯಗಳಿಂದ ಮುಕ್ತರಾಗಬೇಕು. ಬಲಾಡ್ಯ ದೇಶ ನಿರ್ಮಾಣ ಮತ್ತು ಜನರ ಸಮಸ್ಯೆಗಳಿಗೆ ಆಧುನಿಕ ಕೌಶಲ್ಯ ಮತ್ತು ಜ್ಞಾನದ ಅವಶ್ಯಕವಿದೆ. ನಾವು ವೃತ್ತಿಪರರು ನಿಷ್ಠೆಯಿಂದ ಸೇವೆ ಸಲ್ಲಿಸುವುದರ ಮೂಲಕ ದೇಶ ನಿರ್ಮಾಣದಲ್ಲಿ ಪಾಲ್ಗೊಳ್ಳಬಹುದು. ಇಂದಿನ ಯುವಜನರು ಸರಿಯಾದ ಮಾರ್ಗವನ್ನು ಅನುಸರಿಸದರೊಂದಿಗೆ ತಮ್ಮನ್ನು ದೇಶ ಸೇವೆಗೆ ಅರ್ಪಿಸಿಕೊಳ್ಳಬಹುದು. ಈ ಸಂದರ್ಭದಲ್ಲಿ ಅಂಗ ಸಂಸ್ಥೆಗಳ ಪ್ರಥಮ ವರ್ಷದ ಒಬ್ಬ ಮತ್ತು ಅಂತಿಮ ವರ್ಷದ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಕಿರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ, ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪಕುಲಪತಿಯವರಾದ ವಿ. ಜೀವಂಧರ್ ಕುಮಾರ್, ಹಣಕಾಸು ಅಧಿಕಾರಿಗಳಾದ ವಿ ಜಿ ಪ್ರಭು, ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ್, ಸಂಸ್ಥೆಗಳ ಮುಖ್ಯಸ್ಥರು, ಉಪ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದಂತ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಆನಂದ್ ತಾವರಗೇರಿ ಅತಿಥಿಗಳನ್ನು ಸ್ವಾಗತಿಸಿದರು. ಡಾ. ವಿನಾಯಕ್ ಮತ್ತು ಡಾ. ಶ್ರೇಯಾ ಜಿ. ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಕಿರಣ ಕುಮಾರ್ ವಂದನಾರ್ಪಣೆಯನ್ನು ಮಾಡಿದರು.

ಬೋಳಂಬಳ್ಳಿಯಲ್ಲಿ ತೌಳವ ಇಂದ್ರ ಸಮಾಜದ ಬಸದಿ ದರ್ಶನ ಹಾಗೂ ಆಟಿಕೂಟ

Article Image

ಬೋಳಂಬಳ್ಳಿಯಲ್ಲಿ ತೌಳವ ಇಂದ್ರ ಸಮಾಜದ ಬಸದಿ ದರ್ಶನ ಹಾಗೂ ಆಟಿಕೂಟ

ತೌಳವ ಇಂದ್ರ ಸಮಾಜದ 2025ನೆ ವರ್ಷದ ಕ್ಷೇತ್ರ ದರ್ಶನ ಮತ್ತು ಆಟಿ ಕೂಟ ಇತ್ತೀಚೆಗೆ ಕಂಬದಕೋಣೆಯ ಬೋಳಂಬಳ್ಳಿ ಯ ಶ್ರೀ ಪದ್ಮಾವತಿ ಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು. ಬಸದಿಗೆ ಬನ್ನಿ ಘೋಷವಾಕ್ಯದ ಅನುಷ್ಠಾನದ ನಿಟ್ಟಿನಲ್ಲಿ ನಗರದಿಂದ ದೂರವಿರುವ ಊರಿನ ಬಸದಿಗಳ ದರ್ಶನ ಪಡೆದು ಅಲ್ಲಿಯ ಪರಿಸರದಲ್ಲಿ ಕ್ರೀಡಾ ಕೂಟ ಹಾಗೂ ಸಭೆ ಮುಂತಾದ ಕಾರ್ಯಕ್ರಮ ಹಮ್ಮಿಕೊಂಡು, ಬಸದಿಗಳನ್ನೂ ಸಂದರ್ಶಿಸುವುದೇ ಇದರ ಮೂಲ ಉದ್ದೇಶ. ಈ ಆಚರಣೆಯೇ "ಕ್ಷೇತ್ರದರ್ಶನ ಹಾಗೂ ಆಟಿ ಕೂಟ"ಕಾರ್ಯಕ್ರಮ. "ಜೈನ ಬ್ರಾಹ್ಮಣರ(ಇಂದ್ರ) ಸಮಾಜ ಬಹಳ ಸಣ್ಣ ಸಮುದಾಯ, ಅದರಲ್ಲೂ ತುಳು ಮಾತಾಡುವ ಇಂದ್ರ ಸಮಾಜ ಎನ್ನುವ ಒಂದು ಸಂಘಟನೆ ಇದೆ ಎಂದು ನನಗೆ ತಿಳಿದಿರಲಿಲ್ಲ, ಈ ಜೈನ ಪುರೋಹಿತ ವರ್ಗ ನಮ್ಮ ಕ್ಷೇತ್ರಕ್ಕೆ ಬಂದದ್ದು ನನಗೆ ಬಹಳ ಸಂತಸವಾಗಿದೆ, ಅವರ ಈ ದಿನದ ಎಲ್ಲಾ ಕಾರ್ಯ ಚಟುವಟಿಕೆಗೆ ಇಲ್ಲಿರುವ ಎಲ್ಲಾ ಸೌಲಭ್ಯಗಳನ್ನು ಉಪಯೋಗಿಸಬಹುದು, ಮೇಲಾಗಿ ಏನಾದರೂ ವ್ಯವಸ್ಥೆ ಬೇಕಿದ್ದಲ್ಲಿ ಸಂತೋಷದಿಂದ ಪೂರೈಸಲು ಕ್ಷೇತ್ರ ಬದ್ಧವಾಗಿದೆ" ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾತನಾಡಿದ ಬೋಳಂಬಳ್ಳಿ ಶ್ರೀ ಪದ್ಮಾವತಿ ದೇವಿ ಕ್ಷೇತ್ರದ ಜ್ಯೋತಿಷ್ಯರೂ, ಧರ್ಮದರ್ಶಿಯೂ ಆದ ಧರ್ಮರಾಜ್ ಜೈನ್ ರವರು ಸಭೆಗೆ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊ.ಅಕ್ಷಯ ಕುಮಾರ್ ಮಳಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ತೌಳವ ಇಂದ್ರ ಸಂಘಟನೆಯು ಹದಿನೈದು ವರ್ಷಗಳಿಂದ ನಿರಂತರ ಸಮಾಜಮುಖಿ ಕೆಲಸ ಕಾರ್ಯದಲ್ಲಿ ತೊಡಗಿಸಿಕೊಂಡು, ಪುರೋಹಿತ ವರ್ಗದವರಿಗೆ ಸ್ವಲ್ಪ ಬಿಡುವುವಿರುವ ಆಟಿ ಮಾಸದಲ್ಲಿ ಇಂಥಹ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದ್ದು, ಈ ವರ್ಷ ಬಹಳ ಹಿಂದಿನ ಪುರಾತನ ಆಳುಪ ಅರಸರ ಕಾಲದಿಂದಲೂ ಪೂಜೆ ಗೊಳ್ಳುತ್ತಿರುವ ಶ್ರೀ ಪದ್ಮಾವತಿ ದೇವಿ ನೆಲೆಸಿರುವ ಬೋಳಂಬಳ್ಳಿ ಬಸದಿಯ ದರ್ಶನ ಮಾಡಿ, ಸ್ಥಳದಲ್ಲಿಯೇ ಸದಸ್ಯರಿಗೆ ಕೆಲ ಕ್ರೀಡೆಗಳನ್ನು ಏರ್ಪಡಿಸಿ ಕ್ಷೇತ್ರದ ಪ್ರಸಾದ ಸ್ವೀಕರಿಸಲು ನಿರ್ಧರಿಸಲಾಯಿತು" ಎಂದರಲ್ಲದೆ ಅತಿಥಿಗಳನ್ನೂ ಸ್ವಾಗತಿಸಿ ಮುಂದುವರಿದು ಕಾರ್ಯಕ್ರಮಕ್ಕೆ ಅನುಮತಿ ನೀಡಿ ಸಹಕರಿಸಿದ ಕ್ಷೇತ್ರದ ಆಡಳಿತ ಮಂಡಳಿಯನ್ನು ಶ್ಲಾಘಿಸಿದರು. ಅನಂತರ ಇನ್ನೋರ್ವ ಅತಿಥಿ ಧರ್ಮರಾಜ ಜೈನ್ ರವರ ಪುತ್ರ ಡಾಕ್ಟರ್ ಆಕಾಶ್ ರಾಜ್ ರವರೂ ಮನೋರಂಜನೆಯ ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸುತ್ತಾ ಸಂಘದ ಚಟುವಟಿಕೆಗಳನ್ನು ಹೊಗಳುತ್ತಾ,ಪುರೋಹಿತರ ಸಂಘಟನೆ ಇಲ್ಲಿಗೆ ಬಂದುದು ನಮ್ಮ ಭಾಗ್ಯ ಎಂದು ತಿಳಿಯುತ್ತೇವೆ ಎಂದರು ಹಾಗು ಮುಂದಕ್ಕೂ ಪ್ರೋತ್ಸಾಹ ನೀಡುವ ಭರವಸೆ ನೀಡಿದರು. ಅನಂತರ ಧರ್ಮರಾಜ ಜೈನ್ ರವರನ್ನು ಶಾಲು, ಹಾರ, ಫಲ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು ಹಾಗೂ ಇಂದ್ರ ಸಮಾಜದ ವತಿಯಿಂದ ಕ್ಷೇತ್ರಕ್ಕೆ ದೇಣಿಗೆಯನ್ನು ನೀಡಲಾಯಿತು. ಕ್ಷೇತ್ರದ ವತಿಯಿಂದ ಹಿರಿಯ ಪುರೋಹಿತರಾದ ಪಡೆಂಗಡಿ ಅರುಣಾ ಕುಮಾರ್ ಇಂದ್ರ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಇಂದ್ರ ಸಮಾಜದ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಎರ್ಮಾಳು ಸುಧೀರ್ ಕುಮಾರ್ ಇಂದ್ರರವರನ್ನೂ ಶಾಲುಹಾಕಿ ಅಭಿನಂದಿಸಲಾಯಿತು. ಉಪಾಧ್ಯಕ್ಷರಾದ ದಿವ್ಯಾವಿರೇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆರಂಭದಲ್ಲಿ ವಾಣಿಶ್ರೀ ಪ್ರಾರ್ಥನೆ ನೆರವೇರಿಸಿದರು. ಕಾರ್ಯದರ್ಶಿ ಅಭಯ ಕುಮಾರ್ ಧನ್ಯವಾದ ಸಮರ್ಪಿಸಿದರು, ಆಹ್ಲಾದ ಜೈನ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು. ಸುಜಾತ, ಶ್ರೇಯಶ್ರೀ, ಮೇಘನಾರವರು ಕ್ರೀಡಾ ನಿರ್ಣಾಯಕರಾಗಿ ಸಹಕರಿಸಿದರು. ವಿಜೇತರ ಪಟ್ಟಿಯನ್ನು ಸುಜ್ಞಾನ ಇಂದ್ರ ವಾಚಿಸಿದರು. ಶಾಂತಿ ಮಂತ್ರದೊಡನೆ ಕಾರ್ಯಕ್ರಮಕ್ಕೆ ಮುಕ್ತಾಯ ಮಾಡಿ ಪ್ರವಾಸಿ ತಂಡ ಮೂಡುಬಿದಿರೆಗೆ ಹಿಂದಿರುಗಿತು.

ಭಾರತೀಯ ಸೇನೆಯಲ್ಲಿ ವಿಪುಲ ಅವಕಾಶ ನಿವೃತ್ತ ಯೋಧ ಕಾರ್ಗಿಲ್ ವೀರ ನಾಯಕ್ ಲೀಲಾದರ್ ಕಡಂಬೋಡಿ

Article Image

ಭಾರತೀಯ ಸೇನೆಯಲ್ಲಿ ವಿಪುಲ ಅವಕಾಶ ನಿವೃತ್ತ ಯೋಧ ಕಾರ್ಗಿಲ್ ವೀರ ನಾಯಕ್ ಲೀಲಾದರ್ ಕಡಂಬೋಡಿ

ಭಾರತೀಯ ಸೇನೆ ವಿಶ್ವದ ಅತ್ಯಂತ ಶಿಸ್ತಿನ ಮತ್ತು ಶಕ್ತಿಶಾಲಿ ಸೈನ್ಯಗಳಲ್ಲಿ ಒಂದು. ದೇಶದ ರಕ್ಷಣೆಯೊಂದಿಗೆ ಸೇನೆ ತನ್ನ ಸದಸ್ಯರಿಗೆ ವೈವಿಧ್ಯಮಯ ಅವಕಾಶಗಳನ್ನು ವೃತ್ತಿಪರ ಬೆಳವಣಿಗೆ, ಶಿಸ್ತು ಹಾಗೂ ಗೌರವದ ಜೀವನವನ್ನು ಒದಗಿಸುತ್ತದೆ. ಎಂದು ಭಾರತೀಯ ಸೇನೆಯ ನಿವೃತ್ತ ಯೋಧ ನಾಯಕ್ ಲೀಲಾದರ್ ಕಡಂಬೋಡಿ ಅವರು ಹೇಳಿದರು. ಮೂಡುಬಿದಿರೆಯ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜರಗಿದ ವೀರ ಯೋಧರಿಗೆ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಭಾರತೀಯ ಸೇನೆಯಲ್ಲಿ ಇರುವಂತಹ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ, ಕಾರ್ಗಿಲ್ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಯೋಗೇಂದ್ರ ಸಿಂಗ್ ಯಾದವ್ ಅವರ ಹೋರಾಟವನ್ನು ಸ್ಮರಿಸಿದರು. ನಿವೃತ್ತಿಯ ನಂತರವೂ ನಾವೂ ದೈಹಿಕವಾಗಿ ಸದೃಡರಾಗಿದ್ದರೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಗೌರವ ಅವಕಾಶಗಳು ಸಿಗುತ್ತವೆ. ಸೈನಿಕರನ್ನು ಗುರುತಿಸುವ ಕಾರ್ಯಕ್ರಮ ಮುಂದೆ ಕೂಡ ಈ ಸಂಸ್ಥೆಯಿಂದ ನಡೆಯಲಿ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಸೇನೆಗೆ ಸೇರಿ ಈ ಸಂಸ್ಥೆಯಿಂದ ಗೌರವಿಸುವಂತಾಗಲಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಮಾತನಾಡಿ ಎಲ್ಲರಿಗೂ ಭಗವಂತ ಪ್ರತಿಭೆಯನ್ನು ಕೊಟ್ಟಿದ್ದಾನೆ ಅದನ್ನು ಬಳಸಿಕೊಂಡು ಜೀವನವನ್ನು ರೂಪಿಸಿಕೊಳ್ಳಬೇಕು, ನಾವೆಲ್ಲರೂ ಸುಖ ಶಾಂತಿ ನೆಮ್ಮದಿಯಿಂದ ಇರಲು ಭಾರತೀಯ ಸೇನೆ ಕಾರಣ. ಸೇನೆಗೆ ಸೇರಲು ದೈಹಿಕ ಸಾಮರ್ಥ್ಯ ಬಹುಮುಖ್ಯ. ದೇಶ ಸೇವೆಗೆ ಎಲ್ಲರೂ ಸೇರಬೇಕು. ದೇಶ ಕಾಯುವ ಸೈನಿಕರ ಬಗ್ಗೆ ನಮಗೆ ಗೌರವ ಇರಬೇಕು, ಎಲ್ಲರಲ್ಲೂ ದೇಶ ಪ್ರೇಮವನ್ನು ಹುಟ್ಟಿಸಬೇಕು, ಎಂದು ಹೇಳಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧ ನಾಯಕ್ ಲೀಲಾಧರ ಕಡಂಬೋಡಿಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು ವೇದಿಕೆಯಲ್ಲಿ ದೇಶದ ವೀರಯೋಧರ ಸೇವೆಯನ್ನು ಅವರ ತ್ಯಾಗ ಬಲಿದಾನವನ್ನು ನೃತ್ಯದ ಮೂಲಕ ಬಿಂಬಿಸಲಾಯಿತು. ಭಾರತೀಯ ಧೀರ ಯೋಧ ಮೇಜರ್ ಆಶಾರಾಮ್ ತ್ಯಾಗಿ ಅವರ ಹೋರಾಟದ ದೃಶ್ಯ ರೂಪಕವನ್ನು ಅಭಿನಯಿಸಲಾಯಿತು. ಇದೇ ಕಾರ್ಯಕ್ರಮದಲ್ಲಿ ಸಂಸ್ಥೆಯ ಎನ್‌ಸಿಸಿ ವಿದ್ಯಾರ್ಥಿಗಳಿಗೆ ಶಿಸ್ತು, ಜವಬ್ದಾರಿ ಹಾಗೂ ರಾಷ್ಟ್ರಭಕ್ತಿ ನೈತಿಕತೆಯ ಮೌಲ್ಯ ಸಾರುವ ಎನ್‌ಸಿಸಿ ಬ್ಯಾರೆಟ್‌ಗಳನ್ನು ನೀಡಲಾಯಿತು. ಶಿಸ್ತು, ಶಾರೀರಿಕ ಕ್ಷಮತೆ ಹಾಗೂ ರಾಷ್ಟ್ರಭಕ್ತಿಯ ಅಭಿವ್ಯಕ್ತಿಗಾಗಿ ಎನ್‌ಸಿಸಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಸಂಪತ್‌ಕುಮಾರ್ ಜೈನ್, ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದ ಈ ಕಾರ್ಯಕ್ರಮವನ್ನು ಶಾಶ್ವತ್ ಮತ್ತು ಆರ್ಯನ್ ಶಿಂಧೆ ನಿರೂಪಿಸಿದರು. ದಕ್ಷ ಸ್ವಾಗತಿಸಿ, ಚಾರ್ವಿ ವಂದಿಸಿದರು.

ಹೊಂಬುಜದ ಜೈನ ಮಠಕ್ಕೆ ಕಾಲ್ನಡಿಗೆಯಿಂದ ಶ್ರೀಕ್ಷೇತ್ರ ದರ್ಶನ ಮಾಡುವ ಸಂಕಲ್ಪ ಯಾತ್ರೆ

Article Image

ಹೊಂಬುಜದ ಜೈನ ಮಠಕ್ಕೆ ಕಾಲ್ನಡಿಗೆಯಿಂದ ಶ್ರೀಕ್ಷೇತ್ರ ದರ್ಶನ ಮಾಡುವ ಸಂಕಲ್ಪ ಯಾತ್ರೆ

ಜನರು ದೇವರಿಗೆ ಭಕ್ತಿ ಸಮರ್ಪಣೆ ಮಾಡಲು ವಿವಿಧ ವಿಧಾನಗಳನ್ನು ಅನುಸರಿಸುತ್ತಾರೆ. ಅದರಲ್ಲಿ ಕಾಲ್ನಡಿಗೆಯಿಂದ (ಪಾದಯಾತ್ರೆ) ಯಾತ್ರೆಯನ್ನು ಮಾಡುವ ಮೂಲಕ ದೇವರ ದರ್ಶನ ಮಾಡಿ ಧನ್ಯತಾ ಭಾವ ತೋರುವುದೂ ಕೂಡಾ ಒಂದು. ಈ ಪಾದಯಾತ್ರೆಯ ಉದ್ದೇಶ ದೇವರ ದರ್ಶನ ಮಾತ್ರವಲ್ಲ, ಸಾಧನೆ, ಯುವ ಶಕ್ತಿಯ ಉತ್ಸಾಹ, ಯುವಕರ ಸಂಘಟನೆ, ಧರ್ಮಜಾಗ್ರತಿ, ಸಂಸ್ಕೃತಿ ಮತ್ತು ಪರಂಪರೆಯ ಅನಾವರಣ ಕೂಡಾ ಅಡಗಿದೆ ಎನ್ನಬಹುದು ಜೊತೆಗೆ ಒಗ್ಗಟ್ಟಿನ ಪ್ರದರ್ಶನವೂ ಹೌದು. ಈ ಹಿನ್ನಲೆಯಲ್ಲಿ ಹಾವೇರಿ ಜಿಲ್ಲಾ ಶಿಗ್ಗಾವಿ ತಾಲೂಕ "ಅ ಮ ಕೊಪ್ಪ ಮತ್ತು ದುಂಡಸಿ" ಗ್ರಾಮದ ಜೈನ ಸಮಾಜದ ಯುವಕರು ಪ್ರಶಾಂತ ಬಿಶೆಟ್ಟಿ, ಸಂತೋಷ ಧರಣಪ್ಪನವರ, ಭರತೇಶ ದೀಪಣ್ಣವರ, ಬ್ರಹ್ಮಾನಂದ ಪುಟ್ಟಣ್ಣವರ, ಭರಮಪ್ಪ ದೇ, ಧರನಪ್ಪನವರ, ಧರಣೇಂದ್ರ ಜ ಮನಕಟ್ಟಿ, ಬಾಬು ಭದ್ರಾಪುರ, ಚಂದ್ರು ವೈಗುಡ್ಡಿ ಮುಂತಾದ ಇತರ ಯುವ ಮುಖಂಡರು ಒಂದು ತಂಡವನ್ನು ಕಟ್ಟಿಕೊಂಡು ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ದರ್ಶನ ಮಾಡುವ ಸಂಕಲ್ಪ ಮಾಡಿ ಯಾತ್ರೆಗೆ ಸನ್ನದ್ದರಾದರು. ಪ್ರಾರಂಭದಲ್ಲಿ 20 ಜನರಿದ್ದ ಈ ತಂಡದಲ್ಲಿ ಈಗ ನೂರರ ಸಂಖ್ಯೆ ದಾಟಿದೆ. ಈ ತಂಡವು ಪ್ರತಿವರ್ಷ ಶ್ರಾವಣ ಮಾಸದ ಕೊನೆಯ ಶುಕ್ರವಾರದಂದು ಹೊಂಬುಜದ ಶ್ರೀಕ್ಷೇತ್ರದ ಇಷ್ಟಾರ್ಥ ಫಲಪ್ರದಾಯಿನಿ ಮಹಾಮಾತೆ ಪದ್ಮಾವತಿ ಅಮ್ಮನವರ ದರ್ಶನಮಾಡುವ ಉದ್ದೇಶದಿಂದ ನಾಲ್ಕು ವರ್ಷಗಳಿಂದ ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಇದು ಈ ತಂಡದ ನಾಲ್ಕನೇ ವರ್ಷದ ಪಾದಯಾತ್ರೆ. ಇದೇ ಆಗಸ್ಟ್ 17 ರಿಂದ 21 ರವರೆಗೆ ಕೈಗೊಂಡಿದ್ದು ಸುಮಾರು 200 ಕೀ ಮೀ ದಾರಿಯನ್ನು 5 ದಿನಗಳಲ್ಲಿ ಕ್ರಮಿಸಿ ಕ್ಷೇತ್ರವನ್ನು ತಲುಪಲಿದ್ದಾರೆ. ಶ್ರಾವಣ ಮಾಸದ ಕೊನೆಯ ಸಂಪತ್ ಶುಕ್ರವಾರ ದಿ 22ರಂದು ದೇವಿ ದರ್ಶನ ಮಾಡಿ ಪೂಜಾದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಸಂಕಲ್ಪ ಯಾತ್ರೆಯಲ್ಲಿ ಜಾತ್ಯತೀತವಾಗಿ ಸರ್ವಧರ್ಮದವರು ಕೂಡಾ ಭಾಗೀಗಳಾಗುತ್ತಿರುವದು ವಿಶೇಷವಾಗಿದೆ. ಅತ್ಯಂತ ಶ್ರದ್ದಾ ಭಕ್ತಿಯಿಂದ ದೇವಿ ದರ್ಶನ ಮಾಡಿ ಪಾವನರಾಗಬೇಕೆಂಬ ಉದ್ದೇಶ ಹೊಂದಿದ ಈ ತಂಡದ ಪಾದಯಾತ್ರೆ ಫಲಪ್ರದವಾಗಿ ಯಶಸ್ವಿಯಾಗಲಿ, ಜಗದ್ ರಕ್ಷಕಿ ಮಹಾಮಾತೆಯ ಕೃಪಾಶೀರ್ವಾದ ಎಲ್ಲರ ಮೇಲಿರಲಿ ಹಾಗು ಸಕಲ ಇಷ್ಟಾರ್ಥಗಳು ಈಡೇರಲಿ ಎನ್ನುವ ಆಶಯಗಳೊಂದಿಗೆ ಶುಭ ಹಾರೈಕೆಗಳು ಮತ್ತು ಅಭಿನಂದನೆಗಳು. ವರದಿ: ಶಾಂತರಾಜ ಮಲ್ಲಸಮುದ್ರ

ಮೂಡುಬಿದಿರೆ: ಜೈನ್ ಮಿಲನ್ ಪದ ಸ್ವೀಕಾರ ಸಮಾರಂಭ

Article Image

ಮೂಡುಬಿದಿರೆ: ಜೈನ್ ಮಿಲನ್ ಪದ ಸ್ವೀಕಾರ ಸಮಾರಂಭ

ಭಾರತೀಯ ಜೈನ್ ಮಿಲನ್ ಮೂಡುಬಿದರೆ ವಲಯದ 25-27ನೇ ಸಾಲಿನ ಪದ ಸ್ವೀಕಾರ ಸಮಾರಂಭ ಜುಲೈ 27ರಂದು ಮಹಾವೀರಭಾನದಲ್ಲಿ ಜರಗಿತು. ನೂತನ ಅಧ್ಯಕ್ಷರಾಗಿ ಮಹೇಂದ್ರ ಕುಮಾ‌ರ್ ಜೈನ್, ಕಾರ್ಯದರ್ಶಿಯಾಗಿ ಶಶಿಕಾಂತ್ ಎ, ಕೋಶಾಧಿಕಾರಿಯಾಗಿ ಶ್ರೇಯಾಂಸ ಹೆಗ್ಡೆ, ಅಧಿಕಾರವನ್ನು ವಹಿಸಿಕೊಂಡರು. ಕಾರ್ಯಕ್ರಮದಲ್ಲಿ ದಿವ್ಯ ಉಪಸ್ಥಿತ ಪರಮಪೂಜ್ಯ ಆಚಾರ್ಯ ಗುಲಾಬ್ ಭೂಷಣ್ ಜಿ ಮಹಾರಾಜ್ ಅವರು: ಜೈನರು, ಬದುಕು ಬದುಕಲು ಬಿಡು ಎನ್ನುವ ಧೈಯವನ್ನು ಪಾಲಿಸಬೇಕು. ಶಾಂತಿ ಸುಖವನ್ನು ನೀಡುವ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಂಡು ಆಚಾರ್ಯರುಗಳ, ಗುರುಗಳ ಆಶೀರ್ವಾದವನ್ನು ಸದಾ ಪಡೆದುಕೊಳ್ಳಬೇಕು ಎಂದು ಕರೆ ಕೊಟ್ಟರು. ಮೂಡುಬಿದಿರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಮ್ಮ ಆಶೀರ್ವಚನದಲ್ಲಿ ಧರ್ಮವಾರ್ತೆಯನ್ನು ಕೇಳಿ ಜೈನ ಬಂಧುಗಳು ಸದುಪಯೋಗದ ಉತ್ತಮ ಕೆಲಸಗಳನ್ನು ಮಾಡಿ ಸಂಘಟನೆಯನ್ನು ಬಲಪಡಿಸಬೇಕು. ಅಸಹನೆಗೆ ಅವಕಾಶವನ್ನು ನೀಡದೆ ಆಚಾರ್ಯರಿಗೆ ಪೂಜ್ಯತೆಯಿಂದ ಒಗ್ಗಟ್ಟನ್ನು ತೋರಿಸಿಕೊಡಬೇಕಾಗಿದೆ ಎಂದು ಕೇಳಿಕೊಂಡರು. ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಮಾತನಾಡಿ ಜೈನ ಪರಂಪರೆಯನ್ನು ಯುವಕರಿಗೆ ತಿಳಿಸಿ ಕೊಡುವುದರೊಂದಿಗೆ ಮಕ್ಕಳನ್ನು, ಯುವಕರನ್ನು ಒಟ್ಟುಗೂಡಿಸಿ ಯುವ ಜೈನ್ ಸಂಘಟನೆ ರಚಿಸಬೇಕಾದ ಅಗತ್ಯವಿದೆ ಎಂದರು. ಸನ್ಮಾನಕ್ಕೆ ಉತ್ತರಿಸಿದ ಉಜಿರೆಯ ಸೋನಿಯಾ ವರ್ಮ ಅವರು. ಒಳ್ಳೆಯ ಸಮಯವನ್ನು ಹಾಳು ಮಾಡದೆ ಉತ್ತಮ ಕೆಲಸಗಳಿಗೆ ತೊಡಗಿಸಬೇಕೆಂದು ಕೇಳಿಕೊಂಡರು. 17 ಮಂದಿ ನೂತನ ಸದಸ್ಯರನ್ನು ಸಭೆಗೆ ಪರಿಚಯಿಸಲಾಯಿತು. ಅಭಯ ಚಂದ್ರ ಮಂಜುಳಾ ಜೈನ್ ದಂಪತಿಗಳನ್ನು ಸನ್ಮಾನಿಸಲಾಯಿತು. ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಮಾತನಾಡಿ ಜೈನ ಪರಂಪರೆಯನ್ನು ಯುವಕರಿಗೆ ತಿಳಿಸಿ ಕೊಡುವುದರೊಂದಿಗೆ ಮಕ್ಕಳನ್ನು, ಯುವಕರನ್ನು ಒಟ್ಟುಗೂಡಿಸಿ ಯುವ ಜೈನ್ ಸಂಘಟನೆ ರಚಿಸಬೇಕಾದ ಅಗತ್ಯವಿದೆ ಎಂದರು. ಸನ್ಮಾನಕ್ಕೆ ಉತ್ತರಿಸಿದ ಉಜಿರೆಯ ಸೋನಿಯಾ ವರ್ಮ ಅವರು. ಒಳ್ಳೆಯ ಸಮಯವನ್ನು ಹಾಳು ಮಾಡದೆ ಉತ್ತಮ ಕೆಲಸಗಳಿಗೆ ತೊಡಗಿಸಬೇಕೆಂದು ಕೇಳಿಕೊಂಡರು. 17 ಮಂದಿ ನೂತನ ಸದಸ್ಯರನ್ನು ಸಭೆಗೆ ಪರಿಚಯಿಸಲಾಯಿತು. ಅಭಯ ಚಂದ್ರ ಮಂಜುಳಾ ಜೈನ್ ದಂಪತಿಗಳನ್ನು ಸನ್ಮಾನಿಸಲಾಯಿತು. ವಲಯ ನಿರ್ದೇಶಕ ಜಯರಾಜ ಕಂಬಳಿ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಆಸ್ಪತ್ರೆಯಲ್ಲಿರುವ ಜೈನ್ ಮಿಲನ್ ನ ಅಧ್ಯಕ್ಷ ಅನಡ್ಕ ದಿನೇಶ್ ಕುಮಾರ್ ಅವರ ಆರೋಗ್ಯ ಸುಧಾರಿಸಲು ಎಲ್ಲರೂ ಭಗವಂತನಲ್ಲಿ ಪ್ರಾರ್ಥಿಸಿದರು. ಅವರ ಅನುಪಸ್ಥಿತಿಯಲ್ಲಿ ಪ್ರಭಾತ್ ಕುಮಾರ್ ಬಲ್ನಾಡ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶ್ವೇತಾ ಜೈನ್ ಉಪಸ್ಥಿತರಿದ್ದರು. ಅನಂತವೀರ ಜೈನ್ ಸ್ವಾಗತಿಸಿದರು. ಕಾರ್ಯದರ್ಶಿ ರಾಜೇಶ್ ಕುಮಾರ್ ವರದಿ ವಾಚಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಜೈನ್ ಲೆಕ್ಕಪತ್ರ ಮಂಡಿಸಿದರು. ನೂತನ ಅಧ್ಯಕ್ಷ ಮಹೇಂದ್ರ ಕುಮಾ‌ರ್ ಜೈನ್ ತಮ್ಮ ಎರಡು ವರ್ಷದ ಕಾಲಾವಧಿಯ ಕಾರ್ಯಸೂಚಿಯನ್ನು ಪ್ರಸ್ತುತಪಡಿಸಿದ್ದರು. ನಿತೀಶ್ ಕುಮಾರ್ ಬಲ್ಲಾಳ್ ಕಾರ್ಯಕ್ರಮ ನಿರ್ವಹಿಸಿದರು. ನೂತನ ಕಾರ್ಯದರ್ಶಿ ಶಶಿಕಾಂತ್ ಜೈನ್ ವರದಿ: ರಾಯಿ ರಾಜಕುಮಾರ ಮೂಡುಬಿದಿರೆ

ಶೀಘ್ರದಲ್ಲಿಯೇ ಧಾರ್ಮಿಕ ಪಾಠಶಾಲೆ ಪ್ರಾರಂಭ

Article Image

ಶೀಘ್ರದಲ್ಲಿಯೇ ಧಾರ್ಮಿಕ ಪಾಠಶಾಲೆ ಪ್ರಾರಂಭ

ಕೊಪ್ಪಳ: ಜೈನ ಕಾಶಿ ಕೊಪ್ಪಳ ತಾಲೂಕಿನ ಹುಲಗಿಯಲ್ಲಿ ಜೈನ ಧರ್ಮದ ತತ್ವಗಳನ್ನು ತಿಳಿಸುವ, ಮುಂದಿನ ಪಿಳಿಗೆಯು ಜೈನ ಧರ್ಮದ ಅಸ್ತಿತ್ವವನ್ನು ಉಳಿಸುವ ಉದ್ದೇಶದಿಂದ ಧಾರ್ಮಿಕ ಪಾಠಶಾಲೆ ಮಾಡಲು ಪ್ರಕ್ರೀಯೆ ಪ್ರಾರಂಭವಾಗಿದೆ. ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರ ನೇಮಕವನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಅದನ್ನು ಪ್ರಾರಂಭ ಮಾಡಲಾಗುವುದು ಎಂದು ಶ್ರಾವಕ ಸುಹಾಸ ಇಜಾರೆ ಹುಲಗಿ ಅವರು ತಿಳಿಸಿದ್ದಾರೆ. ಕೊಪ್ಪಳದಲ್ಲಿ ಸುಮಾರು ಏಳು ನೂರು ಜೈನ ಬಸದಿಗಳು ಅಸ್ತಿತ್ವದಲ್ಲಿದ್ದವು, ಕಾಲಕ್ರಮೇಣ ಅವು ಇತಿಹಾಸದ ಪುಟ ಸೇರಿದವು. ಮೂಲ ಇದು ಜೈನ ಸ್ಥಳವಾಗಿದ್ದು, ಅದರ ಪುನರ್ ಸ್ಥಾಪನೆ ಇದರ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಅಂಠರಣಾದಲ್ಲಿ ಆದಿನಾಥರ ವಿಗ್ರಹ ವಿದ್ದು, ಅಲ್ಲಿ ಜೈನರ ಉಪಸ್ಥಿತಿ ಇಲ್ಲದ ಕಾರಣ ಗ್ರಾಮಸ್ಥರು ಅದರ ಪೂಜೆ ಪುನಸ್ಕಾರ ಮಾಡುತ್ತಿದ್ದಾರೆ, ಅದನ್ನು ಕೊಪ್ಪಳ ಜೈನ ಬಸದಿಗೆ ಹಸ್ತಾಂತರ ಮಾಡಬೇಕು, ಹಾಗೇಯೇ ತಾಲೂಕಿನ ಜಬ್ಬಲಗುಡ್ಡದಲ್ಲಿ ಜೈನ ಬಸದಿಯ ಜಿರ್ಣೋದ್ಧಾರ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಬೇಕು ಎಂದು ಅವರು ತಿಳಿಸಿದರು. ಧಾರ್ಮಿಕ ಪಾಠಶಾಲೆಗೆ ಅಭಿನಂದನ ಗೋಗಿ, ಸಮೇದ ಜೈನ ಪದ್ಮ ಗೌಡ ಹೀರೆಗೌಡ್ರ, ಭುಜಬಲಿ ಪಾಟೀಲ್, ಉದಯರಾಜ ಕಾರಟಗಿ, ಉದಯ ಕುಮಾರ್ ಕಂಪಸಾಗರ, ಪಾಯಸಾಗರ, ಪದ್ಮಾವತಿ ಆನಂದ ಬಸ್ತಿ ನಿಲೋಗಲ್, ಗುರುರಾಜ್ ದೇಸಾಯಿ,ಅನಿಲ್ ಕುಮಾರ್ ಕಲ್ಯಾವಿ, ವಿನಯ ತುಂಬಳ, ಪುಷ್ಪದಂತ ಪಾಟೀಲ್‌, ಸನ್ಮತಿ ಇಜಾರೆ, ಶ್ರೀಕರ ಇಜಾರೆ, ಅನಿಲ್ ಕುಮಾರ್ ರೋಗೆ ಹೊಸಪೇಟೆ ಇವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದ್ದು, ಆಸಕ್ತ ಶ್ರಾವಕ, ಶ್ರಾವಕಿಯರು ಇದರ ಸದಸ್ಯತ್ವ ಪಡೆಯಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುರು ಪೂರ್ಣಿಮೆಯ ಅಂಗವಾಗಿ ಸನ್ಮಾನ ಕಾರ್ಯಕ್ರಮ

Article Image

ಗುರು ಪೂರ್ಣಿಮೆಯ ಅಂಗವಾಗಿ ಸನ್ಮಾನ ಕಾರ್ಯಕ್ರಮ

ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ವತಿಯಿಂದ ಗುರುಪೂರ್ಣಿಮೆ ಹಾಗೂ ಆಷಾಡ ಮಾಸದ ವಿಶೇಷತೆಯ ಕುರಿತು ಕಾರ್ಯಕ್ರಮ ಪೆರ್ವಾಜೆ ಶಾಲೆಯಲ್ಲಿ ನಡೆಯಿತು. ವಸುಧಾ ಶೆಣೈಯವರು ಆಷಾಡ ಮಾಸದ ವಿಶೇಷತೆಯ ಕುರಿತು ಮಾತನಾಡಿದರು. ಗುರು ಪೂರ್ಣಿಮೆಯ ಕುರಿತು ಸಾವಿತ್ರಿ ಮನೋಹರ ಮಾತನಾಡಿದರು. ಗುರು ಪೂರ್ಣಿಮೆಯ ಅಂಗವಾಗಿ ಡಾಕ್ಟರೇಟ್ ಪದವಿಯನ್ನು ಪಡೆದ ಸದಸ್ಯೆಯರಾದ ಡಾ. ಸುಮತಿ ಪ್ರಭು ಹಾಗೂ ಡಾ. ಮಾಲತಿ ಜಿ. ಪೈಯವರನ್ನು ಸನ್ಮಾನಿಸಲಾಯಿತು. ರೂಪ ಚಿಪ್ಲೂಂಕರ್ ಪ್ರಾರ್ಥಿಸಿ, ಜಾಗೃತಿಯ ಅಧ್ಯಕ್ಷೆ ಪ್ರೊ. ಮಿತ್ರಪ್ರಭಾ ಹೆಗ್ಡೆ ಸ್ವಾಗತಿಸಿ, ಸುಲೋಚನ ಬಿ.ವಿ. ಧನ್ಯವಾದವನ್ನಿತ್ತರು. ಶೈಲಜಾ ಹೆಗ್ಡೆ ನಿರೂಪಿಸಿದರು.

ಕ ವಿ ವಿ ಕುಲಪತಿಯವರಿಗೆ ಗೌರವ ಸನ್ಮಾನ

Article Image

ಕ ವಿ ವಿ ಕುಲಪತಿಯವರಿಗೆ ಗೌರವ ಸನ್ಮಾನ

ಕರ್ನಾಟಕ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಎ ಎಮ್ ಖಾನ್ ಇವರನ್ನು ಇಂದು ಕ ವಿ ವಿ ಜೈನ ಅಧ್ಯಯನ ಪೀಠ ಮತ್ತು ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟ್ ವತಿಯಿಂದ ಅಭಿನಂದಿಸಿ ಸತ್ಕರಿಸಲಾಯಿತು. ಪೀಠದ ಸಂಯೋಜಕರು ಹಾಗೂ ಟ್ರಸ್ಟಿನ ಅಧ್ಯಕ್ಷರೂ ಆದ ಡಾ. ಜಿನದತ್ತ ಹಡಗಲಿ, ಜೈನ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾದ ಶಾಂತರಾಜ ಮಲ್ಲಸಮುದ್ರ,ದನಪಾಲ ಜೆ ಮುನ್ನೊಳ್ಳಿ, ಧರಣೇoದ್ರ ಜವಳಿ, ಡಾ. ಆರ್.ಎ. ಬಾಳಿಕಾಯಿ ಮುಂತಾದವರು ಭಾಗವಹಿಸಿದ್ದರು. ಕುಲಪತಿಗಳು ಜೈನ ಅಧ್ಯಯನ ಪೀಠದ ಅಭಿವೃದ್ಧಿಗೆ ಮತ್ತು ಕಾರ್ಯಾಚಟುವಟಿಕೆಗೆ ನನ್ನ ಸಹಾಯ ಸಹಕಾರ ನೀಡುವುದಾಗಿ ಹೇಳಿದರು. ವರದಿ : ಶಾಂತರಾಜ ಮಲ್ಲಸಮುದ್ರ

ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Article Image

ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ಜುಲೈ 1, 2025 ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಪಶ್ಚಿಮ ಬಂಗಾಳದ ಖ್ಯಾತ ವೈದ್ಯ ಮತ್ತು ಮುಖ್ಯಮಂತ್ರಿಯವರಾದ ಡಾ. ಬಿ. ಸಿ. ರಾಯ್ ಅವರ ಜನ್ಮದಿನವನ್ನು ಸ್ಮರಿಸಲು ಮತ್ತು ದೇಶದಲ್ಲಿ ವೈದ್ಯರನ್ನು ಸ್ಮರಿಸಲು ವೈದ್ಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಅವರ ಮನುಕುಲಕ್ಕೆ ನೀಡಿದ ಅಪಾರ ಸೇವೆಯನ್ನು ಪರಿಗಣಿಸಿ ಈ ದಿನವನ್ನು ಆಚರಿಸಲಾಗುತ್ತದೆ. ವೈದ್ಯರ ದಿನಾಚರಣೆಯ ಸಂದರ್ಭದಲ್ಲಿ, ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 3 ಖ್ಯಾತ ವೈದ್ಯರನ್ನು ಸನ್ಮಾನಿಸಲಾಯಿತು ಡಾ. ಪ್ರಕಾಶ ಜಿ. ಮಹಾಲಿಂಗಶೆಟ್ಟಿ, ಹಿರಿಯ ಶಸ್ತ್ರಚಿಕಿತ್ಸಾ ಪ್ರಾಧ್ಯಾಪಕರು ಡಾ. ಚಿದೇಂದ್ರ ಶೆಟ್ಟರ್, ಹಿರಿಯ ಎಲಬು ಮತ್ತು ಕೀಲು ಚಿಕಿತ್ಸಕರು ಮತ್ತು ಕುಲಸಚಿವರು ಡಾ. ಶೀಲಾ ಎಸ್. ಕುದರಿ, ನುರಿತ ವೈದ್ಯಕೀಯ ಚಿಕಿತ್ಸಕರು ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಅಧ್ಯಕ್ಷತೆಯನ್ನು ವಹಿಸಿ, ಮೂವರು ವೈದ್ಯರನ್ನು ಸನ್ಮಾನಿಸಿದರು. ವೈದ್ಯರ ದಿನದ ಪ್ರಶಸ್ತಿಯನ್ನು ಸ್ವೀಕರಿಸಿದ ಹಿರಿಯ ಶಸ್ತ್ರಚಿಕಿತ್ಸಾ ಪ್ರಾಧ್ಯಾಪಕರಾದ ಡಾ. ಪ್ರಕಾಶ ಜಿ. ಮಹಾಲಿಂಗಶೆಟ್ಟಿ ಅವರು ಮಾತನಾಡುತ್ತಾ ವೈದ್ಯರು ರೋಗಿಗಳ ಆರೋಗ್ಯ ಮತ್ತು ಸಾಮಾಜಿಕ ಮನಸ್ಥಿತಿಯನ್ನು ಅರ್ಥಮಾಡಿಕೊಂಡು ಚಿಕಿತ್ಸೆ ನೀಡಬೇಕು. ರೋಗಿಗಳ ಸಂತೃಪ್ತಿಯೇ ವೈದ್ಯರುಗಳ ತೃಪ್ತಿಯ ಮೂಲವಾಗಿರಬೇಕು. ಹೊಸವಿಷಯಗಳ ಅಧ್ಯಯನದೊಂದಿಗೆ ಉತ್ತಮ ಸಮಯ ಪಾಲನೆ ವೈದ್ಯರ ಜ್ಞಾನವನ್ನು ಹೆಚ್ಚಿಸುತ್ತದೆ. ಸರಳತೆ ಮತ್ತು ಕೃತಜ್ಞತಾ ಮನೋಭಾವ ಜೀವನದಲ್ಲಿ ಬಹಳ ಯಶಸ್ಸನ್ನು ತಂದುಕೊಡುತ್ತದೆ. ಎಸ್.ಡಿ.ಎಂ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ ಅವರು ಅಭಿನಂದನಾ ಭಾಷಣ ಮಾಡಿದರು. ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪ ಕುಲಪತಿಗಳಾದ ಜೀವಂಧರ್ ಕುಮಾರ, ಹಣಕಾಸು ಅಧಿಕಾರಿಗಳಾದ ವಿ.ಜಿ. ಪ್ರಭು, ಆಡಳಿತ ನಿರ್ದೇಶಕರಾದ ಸಾಕೇತ ಶೆಟ್ಟಿ ಮತ್ತು ಇತರ ವಿಶ್ವವಿದ್ಯಾಲಯದ ಅಧಿಕಾರಿಗಳು, ಸಂಸ್ಥೆಯ ಮುಖ್ಯಸ್ಥರು, ಎಲ್ಲಾ ವೈದ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಸ್.ಡಿ.ಎಂ ವೈದ್ಯಕೀಯ ಮಹಾವಿಧ್ಯಾಲಯದ ಉಪ ಪ್ರಾಂಶುಪಾಲರಾದ ಡಾ. ವಿದ್ಯಾ ಪಾಟೀಲ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ಸುರೇಶ ಬಡಿಗೇರ, ಡಾ. ಸುನಿಲ್ ಎಂ. ಮತ್ತು ಡಾ. ಕಿರಣ ಐತಾಳ್ ಮೂವರು ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಡಾ. ಪ್ರಿಯಾಂಕಾ ಮೋತಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಧ್ಯಾಪಕರಾದ ಡಾ. ಆಶಾ ನೆರವಿ ವಂದನಾರ್ಪಣೆ ಸಲ್ಲಿಸಿದರು.

ಚಾಮರಾಜನಗರ: 17ನೇ ವರ್ಷದ ವಾರ್ಷಿಕೋತ್ಸವ

Article Image

ಚಾಮರಾಜನಗರ: 17ನೇ ವರ್ಷದ ವಾರ್ಷಿಕೋತ್ಸವ

ದಿಗಂಬರ ಪಾರ್ಶ್ವನಾಥ ಜೈನ ಬಸದಿಯ ಜೀರ್ಣೋದ್ಧಾರದ 17ನೇ ವರ್ಷದ ವಾರ್ಷಿಕೋತ್ಸವದ ಪೂಜಾ ಕಾರ್ಯಕ್ರಮದಲ್ಲಿ ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು ಪಾವನ ಸಾನ್ನಿಧ್ಯ ವಹಿಸಿ, ಮಾತನಾಡಿದ ಅವರು ಧರ್ಮ, ರಾಜಕೀಯ, ಸಂಸ್ಕೃತಿಗೆ ಚಾಮರಾಜನಗರ ಪ್ರಸಿದ್ಧಿಯಾಗಿದ್ದು ಕರ್ನಾಟಕಕ್ಕೆ ಅದರ್ಶಪ್ರಾಯವಾಗಿದೆ. ಇಲ್ಲಿರುವ ಹರಳುಕೋಟೆ ಹಾಗೂ ಹರದವಹಳ್ಳಿಯಲ್ಲಿರುವ ದೇವಸ್ಥಾನಗಳು ಪುರಾತನವಾಗಿವೆ. ವಿಜಯ ಪಾರ್ಶ್ವನಾಥ ಸ್ವಾಮಿ ದೇವಸ್ಥಾನ 1116ರಲ್ಲಿ ನಿರ್ಮಾಣವಾಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಜನಪದ ಕಲೆಗೂ ಜಿಲ್ಲೆ ಪ್ರಸಿದ್ಧಿ ಪಡೆದಿದೆ ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜಿ. ಆರ್. ಆಶ್ವಥ್ ನಾರಾಯಣ್ ಮತ್ತು ವೆಂಕಟನಾಗಪ್ಪ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜೈನ ಸಮಾಜದ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್, ಜೈಶಾಮಾದೇವಿ ಸಂಘದ ಅಧ್ಯಕ್ಷೆ ಪದ್ಮಶ್ರೀ ಬ್ರಹ್ಮೇಶ್ ಉಪಸ್ಥಿತರಿದ್ದರು.

ಮುಸಕೊಂಡ್ಲಿ ಶ್ರೀ ಪಾರ್ಶ್ವನಾಥ - ಉಡೆದಾರ್ ಪದ್ಮಾವತಿ ವಾರ್ಷಿಕ ಪೂಜಾ ಸಂಪನ್ನ

Article Image

ಮುಸಕೊಂಡ್ಲಿ ಶ್ರೀ ಪಾರ್ಶ್ವನಾಥ - ಉಡೆದಾರ್ ಪದ್ಮಾವತಿ ವಾರ್ಷಿಕ ಪೂಜಾ ಸಂಪನ್ನ

ತುಮಕೂರು ಜಿಲ್ಲೆ, ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಮುಸಕೊಂಡ್ಲಿಯ ಇತಿಹಾಸ ಪ್ರಸಿದ್ಧ ಶ್ರೀ ಪಾರ್ಶ್ವನಾಥ ತೀರ್ಥಂಕರ, ಉಡೆದರ್ ಪದ್ಮಾವತಿ ಜೈನಬಸದಿಯ ವಾರ್ಷಿಕ ಪೂಜಾ ಮಹೋತ್ಸವ ಇಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಶ್ರೀ ಕ್ಷೇತ್ರ ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಜಿಗಳವರ ದಿವ್ಯ ಆಶೀರ್ವಾದದೊಂದಿಗೆ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಬೆಳಗ್ಗೆ ನಿತ್ಯ ಅಭಿಷೇಕ, ಪೂಜೆ, ಉತ್ಸವ, ಆರಾಧನೆಗಳು, 108 ಕಳಶಗಳ ಅಭಿಷೇಕಗಳು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶ್ರೀ ಪಾರ್ಶ್ವನಾಥ, ಉಡೆದರ್ ಪದ್ಮಾವತಿ ಜೈನ ಬಸದಿ ಸಮಿತಿಯ ಅಧ್ಯಕ್ಷ ಕಾಂತರಾಜು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತುಮಕೂರು ಶ್ರೀ ದಿಗಂಬರ ಜೈನ ಶ್ರೀ ಪಾರ್ಶ್ವನಾಥ ಜಿನಮಂದಿರ ಸಮಿತಿಯ ಮಹಾವೀರ್, ಮುಸಕೊಂಡ್ಲಿ ಜೈನ ಸಮಾಜದ ಎಂ.ಡಿ ಶಾಂತರಾಜು, ಪತ್ರಿಕಾ ವರದಿಗಾರ ಎಂ.ಡಿ. ಮೋಹನ್ ಎಂ.ಡಿ. ಚಂದ್ರಯ್ಯ. ಪಂಕಜ ಚಂದ್ರಯ್ಯ, ಉಡೆದರ್ ವಂಶಸ್ಥರಾದ ಧರಣಿಂದ್ರ, ಭರತ್ ಕುಮಾರ್, ಪದ್ಮಲತಾ, ಎಂ.ಎನ್. ಬಾಹುಬಲಿ, ಶ್ರೀ ಮಹಾವೀರ ಜೈ ನ ಬಸದಿ ಹಾಗೂ ಶ್ರೀ ಪಾರ್ಶ್ವನಾಥ- ಉಡೆದರ್ ಪದ್ಮಾವತಿ ಜೈನಬಸದಿಯ ಸದಸ್ಯರು, ಮುಸಕೊಂಡ್ಲಿ ಜೈನ ಸಮಾಜದ ಮುಖಂಡರು, ಪದ್ಮಾವತಿ ಮಹಿಳಾ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು, ಉಡೇದಾರ್ ವಂಶಸ್ಥರು, ಮೈಸೂರು, ಮುಸಕೊಂಡ್ಲಿ, ತುಮಕೂರು, ಕುಣಿಗಲ್, ಬೆಂಗಳೂರು, ಸೇರಿದಂತೆ ರಾಜ್ಯದ ವಿವಿಧಡೆಗಳಿಂದ ವಿವಿಧ ಜೈನ ಸಂಘಟನೆಗಳ ಪದಾಧಿಕಾರಿಗಳು, ಶ್ರಾವಕ- ಶ್ರಾವಕಿಯರು ಭಾಗವಹಿಸಿದ್ದರು. ಪ್ರತಿಷ್ಠಾಪನಾಚಾರ್ಯ ಅನಿಲ್ ಕುಮಾರ್ ಹಾಗೂ ಸ್ಥಳೀಯ ಪುರೋಹಿತರಾದ ಅಮೃತ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಜೆ. ರoಗನಾಥ, ತುಮಕೂರು.

ಜೈನ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Article Image

ಜೈನ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮೂಡುಬಿದರೆಯ ಜೈನ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಪ್ರಾಣಾಯಾಮ ಮತ್ತು ಯೋಗದ ಮಹತ್ವವನ್ನು ತಿಳಿಸಲಾಯಿತು. ಆಳ್ವಾಸ್ ನ್ಯಾಚುರೋಪತಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಪ್ರಜ್ಞ ಶೆಟ್ಟಿ ಹಾಗೂ ಡಾ. ಶಾಲಿನಿ ಅವರು ಪ್ರಾಣಾಯಾಮವನ್ನು ಮಾಡಿಸುವುದರ ಮೂಲಕ ಅದರ ಮಹತ್ವವನ್ನು ವಿವರಿಸಿದರು ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾತ್ ಬಲ್ನಾಡು ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ನೀಶಾ ಜೈನ್ ನಿರೂಪಿಸಿದರು

First Previous

Showing 1 of 4 pages

Next Last