Article Image

ಕಾರ್ಕಳ : ಜಿನಭಜನಾ ಸ್ಪರ್ಧೆ ಸೀಸನ್-7ನ ಸೆಮಿಫೈನಲ್ಸ್ ಮತ್ತು ಫೈನಲ್ಸ್ ಸ್ಪರ್ಧೆ

Article Image

ಕಾರ್ಕಳ : ಜಿನಭಜನಾ ಸ್ಪರ್ಧೆ ಸೀಸನ್-7ನ ಸೆಮಿಫೈನಲ್ಸ್ ಮತ್ತು ಫೈನಲ್ಸ್ ಸ್ಪರ್ಧೆ

ಭಾರತೀಯ ಜೈನ್ ಮಿಲನ್, ವಲಯ-8ರ ಆಶ್ರಯದಲ್ಲಿ, ಮಂಗಳೂರು ವಿಭಾಗದ ಕಾರ್ಕಳ ಜೈನ್ ಮಿಲನ್ ಸಹಯೋಗದೊಂದಿಗೆ, ಯುಗಲ ಮುನಿಗಳಾದ ಪರಮಪೂಜ್ಯ ಮುನಿಶ್ರೀ ೧೦೮ ಅಮೋಘ ಕೀರ್ತಿ ಮಹಾರಾಜರು ಮತ್ತು ಪರಮಪೂಜ್ಯ ಮುನಿಶ್ರೀ ೧೦೮ ಅಮರ ಕೀರ್ತಿ ಮಹಾರಾಜರು, ಕಾರ್ಕಳ ಶ್ರೀ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಇವರ ಆಶೀರ್ವಾದಗಳೊಂದಿಗೆ, ಭಾರತೀಯ ಜೈನ್ ಮಿಲನ್‌ನ ಪರಮಸಂರಕ್ಷಕರಾದ ಡಾ|| ಹೇಮಾವತಿ ಹೆಗ್ಗಡೆ ಮತ್ತು ಡಾ|| ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬ ವರ್ಗದವರ ಮಾರ್ಗದರ್ಶನದೊಂದಿಗೆ ಜಿನಭಜನಾ ಸ್ಪರ್ಧೆ ಸೀಸನ್-7ನ ಸೆಮಿಫೈನಲ್ಸ್ ಫೆಬ್ರವರಿ 3ರಂದು ಮತ್ತು ಫೆಬ್ರವರಿ 4ರಂದು ಫೈನಲ್ಸ್ ಸ್ಪರ್ಧೆಯು ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರ ಕಾರ್ಕಳದಲ್ಲಿ ನಡೆಯಲಿದೆ.

ರಾಜ್ಯ ಬಜೆಟ್‌ನಲ್ಲಿ ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುದಾನ ಮೀಸಲಿಡುವಂತೆ ಸಚಿವ ಡಿ. ಸುಧಾಕರ್‌ ಅವರಿಂದ ಮನವಿ

Article Image

ರಾಜ್ಯ ಬಜೆಟ್‌ನಲ್ಲಿ ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುದಾನ ಮೀಸಲಿಡುವಂತೆ ಸಚಿವ ಡಿ. ಸುಧಾಕರ್‌ ಅವರಿಂದ ಮನವಿ

ಕ್ರಿ.ಪೂ. 3ನೇ ಶತಮಾನದಿಂದ ಜೈನ ಧರ್ಮವು ಐತಿಹಾಸಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಸಾಹಿತ್ಯಕ ಕ್ಷೇತ್ರದಲ್ಲಿ ವಿಶಿಷ್ಟ ಕೊಡುಗೆಗಳನ್ನು ನಾಡಿಗೆ ನೀಡಿದ್ದು, ಕರ್ನಾಟಕ ರಾಜ್ಯವನ್ನು ಶ್ರೀಮಂತಗೊಳಿಸಿದೆ. ಪ್ರಸ್ತುತ ರಾಜ್ಯದಲ್ಲಿ 25-30 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಜೈನ ಸಮುದಾಯವು ಆರ್ಥಿಕವಾಗಿ ಹಿಂದುಳಿದಿರುತ್ತದೆ. ಕರ್ನಾಟಕದಾದ್ಯಂತ ಜೈನ ಸಮುದಾಯಕ್ಕೆ ಸೇರಿದ ಬಸದಿಗಳು, ಸ್ಮಾರಕಗಳು ತುಂಬಾ ಶಿಥಿಲಾವಸ್ಥೆಯಲ್ಲಿದ್ದು, ಅವುಗಳ ಜೀರ್ಣೋದ್ದಾರ ಆಗಬೇಕಿದೆ. ಕರುನಾಡಿನ ಇತಿಹಾಸ ಮತ್ತು ಸಾಹಿತ್ಯದ ಪುಟಗಳಲ್ಲಿ ಆನೇಕ ರಾಜರು, ಸಾಮಂತರು ಮತ್ತು ದಂಡನಾಯಕರ ಆಳ್ವಿಕೆಯಲ್ಲಿ ಜೈನ ಧರ್ಮವು ಕನ್ನಡ ನಾಡಿಗೆ ಅತ್ಯಮೂಲ್ಯವಾದ ಕಲೆ ಮತ್ತು ಸಾಹಿತ್ಯಗಳ ಮೂಲಕ ಅಪಾರ ಕೊಡುಗೆಯನ್ನು ನೀಡಿದೆ. ಆದ್ದರಿಂದ, ಜೈನ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ 2024-25ನೇ ಸಾಲಿನ ಆಯವ್ಯಯದಲ್ಲಿ "ಜೈನ ಅಭಿವೃದ್ಧಿ ನಿಗಮ"ವನ್ನು ಸ್ಥಾಪಿಸಲು ಘೋಷಣೆ ಮಾಡಿ ರೂ. 100 ಕೋಟಿಗಳ ಅನುದಾನವನ್ನು ಮೀಸಲಿಡಬೇಕೆಂದು ಹಾಗೂ ಶ್ರೀಕ್ಷೇತ್ರ ಶ್ರವಣಬೆಳಗೊಳವನ್ನು ಸಾಂಸ್ಕೃತಿಕ ಪಾರಂಪರಿಕ ನಗರವನ್ನಾಗಿ ಘೋಷಣೆ ಮಾಡಬೇಕೆಂದು ಜೈನ ಸಮುದಾಯದ ಪರವಾಗಿ ಕರ್ನಾಟಕ ಸರಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಿ. ಸುಧಾಕರ್‌ ಅವರು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಮನವಿಯನ್ನು ಜ. 31ರಂದು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಶ್ರೀ ಮಠದ ವತಿಯಿಂದ ರಾಜೇಶ ಖನ್ನಾ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಉಪಾಧ್ಯಕ್ಷ ಅಶ್ವಿತ್ ಜೈನ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿಕಟಪೂರ್ವ ನಿರ್ದೇಶಕ ಸುರೇಶ ತಂಗಾ, ಯೋಜನೆ ಮತ್ತು ಸಾಂಖ್ಯಿಕ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಅಜಿತ್ ಮುರಗುಂಡೆ, ಬೆಳಗಾವಿ ಜೈನ ಸಮಾಜದ ಮುಖಂಡರಾದ ನೇಮಿನಾಥ ಚೌಗಲೆ ಉಪಸ್ಥಿತರಿದ್ದರು.

ಬೆಂಗಳೂರು: ರಾಜ್ಯ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ ಕರ್ನಾಪೆಕ್ಸ್ 2024

Article Image

ಬೆಂಗಳೂರು: ರಾಜ್ಯ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ ಕರ್ನಾಪೆಕ್ಸ್ 2024

ವೇಣೂರು ಭ|| ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಶುಭ ಸಂದರ್ಭದಲ್ಲಿ ಭಾರತೀಯ ಅಂಚೆ ಇಲಾಖೆಯು ಕರ್ನಾಟಕದಲ್ಲಿನ 10 ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿಗಳ ಪಿಕ್ಚರ್ ಪೋಸ್ಟ್ ಕಾರ್ಡ್ ಹಾಗೂ ಜೈನ ಧರ್ಮದ ಮಹತ್ವ ಸಾರುವ ವಿಶ್ವ ಶಾಂತಿ, ಬದುಕು ಮತ್ತು ಬದುಕಲು ಬಿಡು, ಸತ್ಯ ಅಹಿಂಸೆಯ ಸಂದೇಶದ ವಿಶೇಷ ಸರಕಾರಿ ಅಂಚೆ ಮುದ್ರೆಗಳನ್ನು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನ ಕರ್ನಾಪೆಕ್ಸ್ 2024ನಲ್ಲಿ ಲೋಕಾರ್ಪಣೆಗೊಳಿಸಲಾಯಿತು. ನಂತರ ಕರ್ನಾಟಕದ ಐತಿಹಾಸಿಕ ಭವ್ಯ ಸಂಸ್ಕೃತಿ, ಪರಂಪರೆ ಸಾರುವ ಪ್ರಮುಖ ಸ್ಥಳಗಳ ಕುರಿತು ಭಾರತೀಯ ಅಂಚೆ ಇಲಾಖೆ ಶಾಶ್ವತ ಮುದ್ರೆಗಳನ್ನು ಲೋಕಾರ್ಪಣೆ ಮಾಡುವ ಕಾರ್ಯದಲ್ಲಿ ವಿಶೇಷ ಶ್ರಮ ವಹಿಸಿದ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಸಂಸ್ಕಾರ ಸ್ಕೂಲ್ ಅಧ್ಯಕ್ಷ ಮಹಾವೀರ ಕುಂದೂರ ಅವರನ್ನು ಕರ್ನಾಟಕ ಅಂಚೆ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ ಅವರು ಗೌರವಿಸಿದರು.

ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

Article Image

ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

ಬೆಂಗಳೂರು: ಇಲ್ಲಿಯ ರತ್ನತ್ರಯ ಜೈನ್ ಮಿಲನಿನ ಮಾಸಿಕ ಸಭೆಯು ಶ್ರೀ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಜ. 6ರಂದು ಜರುಗಿತು. ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲರಾದ ನಾಗಶ್ರೀ ಮುಪ್ಪಾನೆ ಆಗಮಿಸಿದ್ದರು. ಗಣ್ಯರೆಲ್ಲರೂ ಸೇರಿ ದೀಪ ಪ್ರಜ್ವಲನೆ ಮಾಡುವುದರ ಮುಖಾಂತರ ಕಾರ್ಯಕ್ರಮ ಪ್ರಾರಂಭವಾಯಿತು. ಪೂರ್ಣಿಮಾರವರು ಡಿಸೆಂಬರ್ ತಿಂಗಳಲ್ಲಿ ವಿವಾಹ ವಾರ್ಷಿಕೋತ್ಸವ ಹಾಗೂ ಹುಟ್ಟುಹಬ್ಬವನ್ನು ಅಚರಿಸಿಕೊಂಡ ಮಿಲನ್ ಸದಸ್ಯರಿಗೆ ಶುಭಕೋರಿದರು. ಪದ್ಮಾ ಸೂರಿರವರು ಮಿಲನಿನ ನಡಾವಳಿಯನ್ನು ವಾಚಿಸಿದರು. ನಂತರ ಬೆಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದ ಮಿಲನಿನ ಸದಸ್ಯರನ್ನು ಅಭಿನಂದಿಸಲಾಯಿತು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಾಗಶ್ರೀ ಮುಪ್ಪಾನೆಯವರು, “ಜೈನ ಧರ್ಮದಲ್ಲಿ ಭಟ್ಟಾರಕ ಮಹತ್ವ, ಜೈನ ಮಠ ಮತ್ತು ಆಸ್ತಿ ಸಂರಕ್ಷಸಿಕೊಳ್ಳುವಲ್ಲಿ ನಮ್ಮ ಪಾತ್ರ” ಎಂಬ ವಿಷಯದ ಬಗ್ಗೆ ಕೂಲಂಕುಷವಾಗಿ ಮಾತನಾಡಿ ಅರಿವು ಮೂಡಿಸಿದರು. ನವೀನ್ ಕುಮಾರ್ ಗುಬ್ಬಿರವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಪ್ರೇಮಾ ಸುಖಾನಂದ ಉಪಸ್ಥಿತರಿದ್ದರು. ಅನಂತಕುಮಾರಿರವರು ಸ್ವಾಗತಿಸಿ, ಶ್ವೇತಾ ನವೀನ್ ವಂದಿಸಿದರು. ಧೀರಜ್ ಜೈನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಅತಿಥ್ಯವನ್ನು ಪದ್ಮರಾಜ್ ಹಾಗೂ ಅನಂತ ಕುಮಾರಿರವರು ವಹಿಸಿಕೊಂಡಿದ್ದರು.

First Previous

Showing 4 of 4 pages

Next Last