Article Image

ನೆಲ್ಲಿಕಾರು: ಬೃಹತ್ ಸಿದ್ಧಚಕ್ರ ಮಹಾಮಂಡಲ ವಿಧಾನ

Article Image

ನೆಲ್ಲಿಕಾರು: ಬೃಹತ್ ಸಿದ್ಧಚಕ್ರ ಮಹಾಮಂಡಲ ವಿಧಾನ

ಮೂಡುಬಿದಿರೆ: ತಾಲೂಕಿನ ನೆಲ್ಲಿಕಾರು ಗ್ರಾಮದ ಅತಿಶಯ ಕ್ಷೇತ್ರ ಭ| ಶ್ರೀ ಅನಂತನಾಥ ಸ್ವಾಮಿ ಸನ್ನಿಧಿಯಲ್ಲಿ ಕಾರ್ಕಳ ಶ್ರೀ ಜೈನ ಮಠದ ಪ.ಪೂ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ ಮತ್ತು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರಿ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಶುಭಾಶೀರ್ವಾದಗಳೊಂದಿಗೆ ಬೃಹತ್ ಸಿದ್ಧಚಕ್ರ ಮಹಾಮಂಡಲ ವಿಧಾನವು ಇದೇ ಬರುವ ಅ. 29ರಿಂದ ನ. 05ರವರೆಗೆ ಜರಗಲಿದೆ

ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪುಣ್ಯತಿಥಿ ಆಚರಣೆ

Article Image

ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪುಣ್ಯತಿಥಿ ಆಚರಣೆ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ತಂದೆ ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪುಣ್ಯತಿಥಿ ಆಚರಣೆಯನ್ನು ಸೋಮವಾರ ಧರ್ಮಸ್ಥಳದಲ್ಲಿ ನಡೆಸಲಾಯಿತು. ಬೀಡಿನಿಂದ ಭಗವಾನ್ ಚಂದ್ರನಾಥಸ್ವಾಮಿ ಬಸದಿಯವರೆಗೆ ಮೌನ ಮೆರವಣಿಗೆಯಲ್ಲಿ ಹೋಗಿ ಪೂಜ್ಯರ ಪುಣ್ಯಸ್ಮರಣೆ ಮಾಡಲಾಯಿತು.

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Article Image

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

.ಧರ್ಮಸ್ಥಳ: ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರವಾಗಿದ್ದು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೮ನೇ ವರ್ಧಂತ್ಯುತ್ಸವ ಸಂದರ್ಭದಲ್ಲಿ ಆಶೀರ್ವಚನ ನೀಡಿದರು. ಪೂಜ್ಯರ ತಾತರಾಗಿದ್ದ ಕೀರ್ತಿಶೇಷ ಮಂಜಯ್ಯ ಹೆಗ್ಗಡೆಯವರ ಕನಸು ಹಾಗೂ ತಂದೆ ರತ್ನವರ್ಮ ಹೆಗ್ಗಡೆಯವರ ಮನಸನ್ನು ಅನುಸರಿಸಿ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದ ಸರ್ವತೋಮುಖ ಪ್ರಗತಿಯೊಂದಿಗೆ ಸಮಾಜಕ್ಕೂ ಅನುಪಮ ಸೇವೆ ನೀಡಿದ್ದಾರೆ. ಮಹಾತ್ಮ ಗಾಂಧೀಜಿಯವರ ಗ್ರಾಮರಾಜ್ಯದ ಮೂಲಕ ರಾಮರಾಜ್ಯದ ಕನಸನ್ನು ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮನಪರಿವರ್ತನೆ ಮೂಲಕ ಮದ್ಯವರ್ಜನ ಶಿಬಿರದೊಂದಿಗೆ ನನಸಾಗಿ ಮಾಡಿದ್ದಾರೆ. ಪ್ರಧಾನಿ ಮೋದಿಯವರ ವಿಕಸಿತ ಭಾರತ ಕಲ್ಪನೆಯನ್ನು ಅನುಷ್ಠಾನಗೊಳಿಸಿದ್ದಾರೆ. ಅನೇಕ ದೀನ-ದಲಿತರ, ಮಹಿಳೆಯರ ಬದುಕಿಗೆ ತಾಯಿ-ತಂದೆ ಹಾಗೂ ಪೋಷಕರಂತೆ ಪ್ರೀತಿಮತ್ತು ವಿಶ್ವಾಸದಿಂದ ನಿರಂತರ ಪ್ರೇರಣೆ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿ ನವ ಚೈತನ್ಯದೊಂದಿಗೆ ಸ್ವಾವಲಂಬಿ ಜೀವನ ಮಾಡಲು ದಾರಿದೀಪವಾಗಿದ್ದಾರೆ. ಮಹಿಳಾ ಸಬಲೀಕರಣ, ಧಾರ್ಮಿಕ ಸಂಸ್ಕಾರ, ಭಜನಾ ತರಬೇತಿ ಮೂಲಕ ಸಮಾಜದ ಸರ್ವರೂ ಸುಖ-ಶಾಂತಿ ಮತ್ತು ನೆಮ್ಮದಿಯಿಂದ ಬದುಕುವಂತೆ ಎಲ್ಲರಿಗೂ ಕಾಯಕಲ್ಪ ನೀಡಿದ್ದಾರೆ. ಪುರಾತನ ದೇವಾಲಯಗಳ ಜೀರ್ಣೋದ್ಧಾರ, ಕೆರೆಗಳಿಗೆ ಕಾಯಕಲ್ಪ, ಆಧುನಿಕ ತಂತ್ರಜ್ಞಾನ ಬಳಸಿ ಸರದಿಸಾಲಿನಲ್ಲಿ ದೇವರದರ್ಶನದ ಸೌಲಭ್ಯ ಇತ್ಯಾದಿ ಅನುಪಮ ಕಾರ್ಯಗಳನ್ನು ಮಾಡಿದ್ದಾರೆ ಎಂದು ಅಭಿನಂದಿಸಿದರು. ಹೊಸ ಯೋಜನೆಗಳು: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೊಸ ಯೋಜನೆಗಳನ್ನು ಪ್ರಕಟಿಸಿದರು. ಉಜಿರೆಯಲ್ಲಿ ನರ್ಸಿಂಗ್ ಕಾಲೇಜು ಪ್ರಾರಂಭ, ಎಂ.ಆರ್.ಐ. ಘಟಕ, 2000ನೇ ಮದ್ಯವರ್ಜನ ಶಿಬಿರ ಧರ್ಮಸ್ಥಳದಲ್ಲಿ ನವಂಬರ್ 6ರಂದು ನಡೆಯಲಿದ್ದು, ವ್ಯಸನಮುಕ್ತರು ಭಾಗವಹಿಸಲಿದ್ದಾರೆ ಎಂದು ಹೆಗ್ಗಡೆಯವರು ಪ್ರಕಟಿಸಿದರು. ಧರ್ಮಸ್ಥಳದ ಅಶೋಕನಗರದಲ್ಲಿ 2 ಕೋಟಿ 41 ಲಕ್ಷ ರೂ. ರಾಜ್ಯಸಭಾ ಸದಸ್ಯರ ಅನುದಾನದಿಂದ ರಸ್ತೆ, ಚರಂಡಿ, ತಡೆಗೋಡೆ ನಿರ್ಮಾಣ, ಬೀದಿದೀಪಗಳ ಅಳವಡಿಕೆ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಧರ್ಮೋತ್ಥಾನ ಟ್ರಸ್ಟ್ ಆಶ್ರಯದಲ್ಲಿ ಈಗಾಗಲೇ 300 ಪ್ರಾಚೀನ ದೇವಾಲಯಗಳ ಜೀರ್ಣೋದ್ಧಾರ ಪೂರೈಸಿದ್ದು, ಮುಂದಿನ ವರ್ಷ 13 ದೇವಾಲಯಗಳನ್ನು ಜೀರ್ಣೋದ್ಧಾರಕ್ಕಾಗಿ ಗುರುತಿಸಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 25,500 ಕೋಟಿ ರೂ. ಬಿ.ಸಿ. ಟ್ರಸ್ಟ್ ಮೂಲಕ ವಿತರಿಸಲಾಗಿದೆ ಎಂದರು. ೨೦೨೬ರ ಮಾರ್ಚ್ ಒಳಗೆ 1000 ಕೆರೆಗಳಿಗೆ ಕಾಯಕಲ್ಪ ನೀಡಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದರು. ಬೆಳ್ತAಗಡಿಯಲ್ಲಿ 7 ಎಕ್ರೆ ಜಾಗದಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಗೆ ನೂತನ ಕಟ್ಟಡ ನಿರ್ಮಿಸಲಾಗಿದೆ ಎಂದರು. ಕ್ಷೇತ್ರದ ಎಲ್ಲಾ ಭಕ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು “ನಾವು ಸದಾ ನಿಮ್ಮೊಂದಿಗಿದ್ದೇವೆ” ಎಂದು ತಮಗೆ ಭರವಸೆ ನೀಡಿರುವುದರಿಂದ ಇನ್ನೂ ಹೆಚ್ಚಿನ ಸೇವಾ ಕಾರ್ಯಗಳನ್ನು ಮಾಡಲು ಉತ್ಸಾಹ ಮೂಡಿಬಂದಿದೆ ಎಂದರು. ನೀವೆಲ್ಲರೂ ತೋರಿಸಿದ ಭಕ್ತಿ, ಪ್ರೀತಿ-ವಿಶ್ವಾಸ ಮತ್ತು ಗೌರವವನ್ನು ಶ್ರೀ ಸ್ವಾಮಿಗೆ ಅರ್ಪಿಸುವುದಾಗಿ ಹೆಗ್ಗಡೆಯವರು ತಿಳಿಸಿದರು. ತನ್ನ ಸೇವಾಕಾಯಕದಲ್ಲಿ ಪತ್ನಿ ಹಾಗೂ ಕುಟುಂಬದ ಎಲ್ಲಾ ಸದಸ್ಯರ ಸಕ್ರಿಯ ಸಹಕಾರವನ್ನು ಧನ್ಯತೆಯಿಂದ ಸ್ಮರಿಸಿದರು. ಶಾಸಕ ಹರೀಶ್ ಪೂಂಜ ಶುಭಾಶಂಸನೆ ಮಾಡಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರೈತರ ಆರ್ಥಿಕ ಸ್ವಾವಲಂಬನೆಗೆ ಹೆಗ್ಗಡೆಯವರು ಸೇವಾಕಾರ್ಯಗಳ ಮೂಲಕ ನೀಡಿದ ಪ್ರೋತ್ಸಾಹವನ್ನು ಸ್ಮರಿಸಿದರು. ಸತ್ಯ, ಧರ್ಮ, ನ್ಯಾಯ-ನೀತಿಯ ಸನ್ಮಾರ್ಗದಲ್ಲಿ ನಡೆದು ಆದರ್ಶ ಸಮಾಜ ಸುಧಾರಕರಾಗಿ ಎಲ್ಲರಿಗೂ ಶಾಂತಿ ಮತ್ತು ಪ್ರೀತಿಯ ಸಂದೇಶ ನೀಡುವ ಹೆಗ್ಗಡೆಯವರು ಸರ್ವರ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದರು. ಕಂಚಿಕಾಮಕೋಟಿ ಪೀಠದ ಪ್ರತಿನಿಧಿ ಗುರುಚರಣಮೂರ್ತಿ ಶುಭಾಶಂಸನೆ ಮಾಡಿದರು. ಡಾ. ವಿಘ್ನರಾಜ ಮತ್ತು ಡಾ. ಪವನ್ ಸಂಪಾದಿಸಿದ “ವೃಷಭೇಶ್ವರ” ಗ್ರಂಥವನ್ನು ಸ್ವಾಮೀಜಿ ಲೋಕಾರ್ಪಣೆ ಮಾಡಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಪ್ರಾಂಶುಪಾಲ ಸುನಿಲ್ ಪಂಡಿತ್ ಕಾರ್ಯಕ್ರಮ ನಿರ್ವಹಿಸಿದರು.

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Article Image

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

ಭಗವಾನ್ ೧0೦೮ ಶ್ರೀ ವರ್ಧಮಾನ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣೋತ್ಸವವು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಇತ್ತೀಚೆಗೆ ವಿಜ್ರಂಭಣೆಯಿಂದ ಜರಗಿತು. ಭಗವಾನ್ ತೀರ್ಥಂಕರರಿಗೆ ಹಾಲು, ಗಂಧ, ಸಿಯಾಳ ಚಂದನ ಮುಂತಾದ ದೃವ್ಯಗಳಿಂದ ಅಭಿಷೇಕಗಳನ್ನು ಮಾಡಿ ಮಹಾಮತೆ ಶ್ರೀ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆಗಳನ್ನು ನೆರವೇರಿಸಿ ಸಾಮೂಹಿಕ ಆರತಿ ಬೆಳಗುದರೊಂದಿಗೆ ಜಿನ ಭಜನೆಯೊಂದಿಗೆ ಪೂಜಾ ಮಹೋತ್ಸವ ನಡೆಯಿತು. ಈ ಸಂದರ್ಭದಲ್ಲಿ ವಿದ್ಯುತ್ ಚಾಲಿತ ಬ್ಯಾಂಡ್ ಸೆಟ್‌ನ್ನು ಶ್ರೇಯ ವಿಶಾಲ್ ಹೆಗಡೆ ಕಾಯರ್ತಡ್ಕ ಇವರು ದಾನ ನೀಡಿದರು ಎಲ್ಲರ ಸಹಕಾರದಿಂದ ದೋಸೆ ಹಬ್ಬವನ್ನು ಆಚರಿಸಲಾಯಿತು. ಅತಿ ಹೆಚ್ಚು ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದು ಡಾ. ಕೆ. ಜಯಕೀರ್ತಿ ಜೈನ್, ಹೆಚ್. ವಿಜಯಕುಮರ್, ಫಣಿರಾಜ್ ಜೈನ್, ಯುವರಾಜ್ ಜೈನ್, ಸಂತೋಷ್ ಜೈನ್, ಅತಿಶಯ ಜೈನ್, ವಿಜೇಶ್ ಜೈನ್, ಭುವನ್ ಜೈನ್, ಪ್ರೀತಮ್ ಜೈನ್ ಹಾಗೂ ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಕಾರ್ಯಕ್ರಮದಲ್ಲಿ ಸಹಕರಿಸಿದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Article Image

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ (ಅಕ್ಟೋಬರ್ 24 ಶುಕ್ರವಾರ) ಇಂದು ಮತ್ತು 25 ಶನಿವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ರವರೆಗೆ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಾ ತಜ್ಞರುಗಳಾದ ಡಾ| ಪ್ರತೀಕ್ಷ್.ಪಿ, ಡಾ| ಹರೀಶ್ ಬಿ.ಎಸ್, ಡಾ| ದೇವೇಂದ್ರ ಕುಮಾರ್. ಪಿ, ಡಾ| ಶತಾನಂದ ಪ್ರಸಾದ್ ರಾವ್, ಡಾ| ರಜತ್ ಹೆಚ್.ಪಿ ಭಾಗವಹಿಸಲಿದ್ದಾರೆ. ಮೂಳೆಗಳ ತಪಾಸಣೆ, ಸಂಧಿವಾತ ಆರೈಕೆ, ಮೊಣಕಾಲಿನ ಆಥ್ರೋಸ್ಕೋಪಿಕ್ ಲಿಗಮೆಂಟ್‌ಗಳ ತಪಾಸಣೆ, ಬೆನ್ನುಮೂಳೆ ಮತ್ತು ಕುತ್ತಿಗೆ ನೋವಿನ ತಪಾಸಣೆ, ಭುಜದ ನೋವಿನ ತಪಾಸಣೆ, ಶಸ್ತ್ರಚಿಕಿತ್ಸೆ ರಹಿತ ಮೂಳೆಯ ಆರೈಕೆ, ಮೊಣಗಂಟು ಮತ್ತು ಸೊಂಟ ನೋವಿನ ತಪಾಸಣೆ, ಪಾದ ಮತ್ತು ಮೊಣಕಾಲಿನ ತಪಾಸಣೆ, ಸ್ಪೋರ್ಟ್ಸ್ ಇಂಜುರಿ ತಪಾಸಣೆಗಳನ್ನು ನಡೆಸಲಾಗುವುದು. ಉಚಿತ ವೈದ್ಯರ ಸಮಾಲೋಚನೆ, ಉಚಿತ ಮೂಳೆ ಸಾಂದ್ರತೆ ಪರೀಕ್ಷೆ, ಉಚಿತ ಎಕ್ಸ್ರೇ, ಒಳರೋಗಿ ವಿಭಾಗದಲ್ಲಿ ಸರ್ಜರಿ ಮೇಲೆ 10% ರಿಯಾಯಿತಿ, ಹೊರರೋಗಿ ವಿಭಾಗದಲ್ಲಿ ರಕ್ತ ಪರೀಕ್ಷೆ ಮತ್ತು ರೆಡಿಯೋಲಾಜಿ ಪರೀಕ್ಷೆಯಲ್ಲಿ 20% ರಿಯಾಯಿತಿ, ಔಷಧದಲ್ಲಿ 10% ರಿಯಾಯಿತಿ ದೊರೆಯಲಿದೆ. ಕೀಹೋಲ್ ಸರ್ಜರಿ, ಪಾದದ ಸರ್ಜರಿ, ಎಂಡೋಸ್ಕೋಪಿ ಸರ್ಜರಿ, ಲೇಸರ್ ಸರ್ಜರಿ, ಎಲ್ಲಾ ತರಹದ ಆರ್ಥೋಸ್ಕೋಪಿಕ್ ಲಿಗ್‌ಮೆಂಟ್ ಸರ್ಜರಿ, ಸಂಪೂರ್ಣ ಮಂಡಿ ಮತ್ತು ಸೊಂಟದ ಬದಲಾವಣೆ ಮತ್ತು ಡಿಸ್ಕ್ ಸರ್ಜರಿಯಲ್ಲಿ ವಿಶೇಷ ರಿಯಾಯಿತಿ ದೊರೆಲಿದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಹೆಸರು ನೋಂದಾಯಿಸಲು 7760397878 ಅಥವಾ 8073349216 ಈ ದೂರವಾಣಿಗಳನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದ್ದಾರೆ.

ಮೈಸೂರು: ಕರ್ನಾಟಕ ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಾದ ದೇವರಾಜ್ ಅವರ ಭೇಟಿ

Article Image

ಮೈಸೂರು: ಕರ್ನಾಟಕ ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಾದ ದೇವರಾಜ್ ಅವರ ಭೇಟಿ

ಮೈಸೂರು, ಅ.10: ಕರ್ನಾಟಕ ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಾದ ದೇವರಾಜ್ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಬಸದಿಗಳ ಸಂರಕ್ಷಣೆಯ ಬಗ್ಗೆ ವಿವರವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಇದಕ್ಕೆ ಉತ್ತರಿಸಿದ ಆಯುಕ್ತರು ಬಸದಿಗಳಿಗೆ ಯಾವುದೇ ರೀತಿಯ ತೊಂದರೆಗಳನ್ನು ಮಾಡುವುದಿಲ್ಲ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ಬಂದ ನಂತರ ಒಂದೆರಡು ದಿನದಲ್ಲಿ ಲಿಖಿತವಾಗಿ ಉತ್ತರ ನೀಡುವುದಾಗಿ ಭರವಸೆ ನೀಡಿದರು. ಎಲ್ಲಾ ಬಸದಿಗಳನ್ನು ಸಂರಕ್ಷಣೆ ಮಾಡಲು ಇಲಾಖೆ ಒತ್ತು ನೀಡಲಿದೆ ಎಂಬುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಡಾ. ಕೆ ಜಯಕೀರ್ತಿ ಜೈನ್, ವಿಜಯಕುಮಾರ್. H, ಸುರೇಂದ್ರ ಕುಮಾರ್ ಜೈನ್, ಅಜಿತ್ ಕುಮಾರ್ ಜೈನ್ ಮುಂತಾದವರು ಉಪಸ್ಥಿತರಿದ್ದರು

ಕನ್ನಡ ಸಾಹಿತ್ಯಕ್ಕೆ ಜೈನರ ಕೊಡುಗೆ ಹೆಚ್ಚು: ಪ್ರಶಸ್ತಿ ಪ್ರದಾನದಲ್ಲಿ ಎನ್. ಮುಕುಂದರಾಜ್ ಅಭಿಮತ

Article Image

ಕನ್ನಡ ಸಾಹಿತ್ಯಕ್ಕೆ ಜೈನರ ಕೊಡುಗೆ ಹೆಚ್ಚು: ಪ್ರಶಸ್ತಿ ಪ್ರದಾನದಲ್ಲಿ ಎನ್. ಮುಕುಂದರಾಜ್ ಅಭಿಮತ

ಕನ್ನಡ ಸಾಹಿತ್ಯಕ್ಕೆ ಜೈನ ಸಾಹಿತಿಗಳ ಕೊಡುಗೆ ದೊಡ್ಡದಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ.ಎಲ್. ಎನ್. ಮುಕುಂದರಾಜ್ ಅಭಿಪ್ರಾಯಪಟ್ಟಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಸಾಲಿಗ್ರಾಮ ಜೈನ ಮಿತ್ರ ಮಂಡಳಿ ಭಾನುವಾರ ಹಮ್ಮಿಕೊಂಡಿದ್ದ 24ನೇ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನದಲ್ಲಿ ಮಾತನಾಡಿದರು. ಪಂಪ, ರನ್ನ, ಪೊನ್ನ, ಜನ್ನ, ನಾಗಚಂದ್ರ ಸೇರಿದಂತೆ ಹಲವು ಜೈನ ಸಾಹಿತಿಗಳು ಕನ್ನಡ ಸಾಹಿತ್ಯ ಪರಂಪರೆಯನ್ನು ಶ್ರೀಮಂತಗೊಳಿಸಿದ್ದಾರೆ. ಈ ಪರಂಪರೆ ಹಾಗೆಯೇ ಮುಂದುವರಿದಿದೆ. ಸಂವಿಧಾನದಲ್ಲಿರುವ ಜಾತ್ಯಾತೀತ ತತ್ವವನ್ನು ಮೊದಲು ಸಾರಿದವನು ಜೈನ ಕವಿ ಪಂಪ. ಮನುಷ್ಯ ಜಾತಿ ತಾನೊಂದೆ ವಲಂ ಎಂದು ಹೇಳುವ ಮೂಲಕ ಮನುಷ್ಯ ಜಾತಿ ಒಂದೇ ಎಂದು ಸಾರಿದ್ದ ಎಂದು ಮುಕುಂದರಾಜ್ ಸ್ಮರಿಸಿದರು. 11ನೇ ಶತಮಾನಕ್ಕೂ ಮೊದಲು ಈ ನಾಡಿನ ಒಕ್ಕಲಿಗರೆಲ್ಲರೂ ಜೈನ ಸಮುದಾಯಕ್ಕೆ ಸೇರಿದ್ದರು. ಆದರೆ ಹೊಯ್ಸಳ ದೊರೆ ಜೈನ ಸಮುದಾಯ ಪರಂಪರೆಗೆ ಸೇರಿದ ಬಿಟ್ಟಿದೇವ (ವಿಷ್ಣುವರ್ಧನ) ರಾಮಾನುಜಚಾರ್ಯರಿಂದಾಗಿ ವೈಷ್ಣವ ದೀಕ್ಷೆ ಪಡೆಯುತ್ತಾನೆ. ಆತ ಮುಂದೆ ಹಲವು ಜೈನರನ್ನು ವೈಷ್ಣವ ಪರಂಪರೆಗೆ ಮತಾಂತರಿಸುತ್ತಾನೆ. ಹೀಗೆ ಮತಾಂತರರಾದವರು ಈಗ ಒಕ್ಕಲಿಗರಾಗಿದ್ದಾರೆ ಎಂದರು. ಸಾಲಿಗ್ರಾಮ ಜೈನ ಮಿತ್ರ ಮಂಡಳಿಯ ಕಾರ್ಯದರ್ಶಿ ಡಾ.ಪದ್ಮನಿ ನಾಗರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕದಲ್ಲಿ ಎರಡು ಪ್ರಮುಖ ಸಾಲಿಗ್ರಾಮಗಳಿವೆ. ಒಂದು ಶಿವರಾಮ ಕಾರಂತರ ಸಾಲಿಗ್ರಾಮ ಇನ್ನೊಂದು ನಟ ರಾಜಕುಮಾರ್ ಅವರ ಪತ್ನಿ ಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ಊರು, ಆ ಸಾಲಿಗ್ರಾಮದವರು ನಾವು. ರಾಜಕುಮಾರ ನಮ್ಮೂರಿನ ಅಳಿಯ ಎನ್ನಲು ನಮಗೆ ಹೆಮ್ಮೆ ಆಗುತ್ತಿದೆ. ಮುಂದಿನ ವರ್ಷ ಸಂಘದ ಬೆಳ್ಳಿ ಹಬ್ಬ ಆಚರಿಸಲಾಗುವುದು ಎಂದರು. ಈ ವೇಳೆ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಅವರಿಗೆ ಸುಮಾ ವಂಸತ ಪ್ರಶಸ್ತಿ ಮತ್ತು ಶಿಲ್ಪ ಕಲಾವಿದ ಚಿತ್ತ ಜಿನೇಂದ್ರ ಅವರಿಗೆ ಶ್ರೇಯೋಭದ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಲಿಗ್ರಾಮ ಜೈನ ಮಿತ್ರ ಮಂಡಳಿ ಅಧ್ಯಕ್ಷೆ ಡಾ.ನೀರಜಾ ನಾಗೇಂದ್ರಕುಮಾರ್ ಅಜಿತ್ ಮುರುಗುಂಡೆ ಹಾಗೂ ಅಶೋಕ್ ಕುಮಾರ್ ಉಪಸ್ಥಿತರಿದ್ದರು.

ರೂ. 54 ಲಕ್ಷದ ಪ್ಯಾಕೇಜ್ ಧಿಕ್ಕರಿಸಿ ವೈರಾಗ್ಯದ ಮಾರ್ಗ ಹಿಡಿದ 24ರ ಸಾಫ್ಟ್ವೇರ್ ಇಂಜಿನಿಯರ್

Article Image

ರೂ. 54 ಲಕ್ಷದ ಪ್ಯಾಕೇಜ್ ಧಿಕ್ಕರಿಸಿ ವೈರಾಗ್ಯದ ಮಾರ್ಗ ಹಿಡಿದ 24ರ ಸಾಫ್ಟ್ವೇರ್ ಇಂಜಿನಿಯರ್

ಅಶೋಕನಗರ (ಮಧ್ಯ ಪ್ರದೇಶ )- ಆತ 24ರ ಹರಯದ ಯುವಕ, ಹೆಸರು ಪಿಯುಷ್ ಜೈನ, ಸಾಫ್ಟ್ ವೇರ್ ಇಂಜಿನಿಯರ್ ಆಗಿ ಪುಣೆಯ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಕಾರ್ಯನಿರತ. ತಂದೆ ತಾಯಿಗಳು ಬಹು ಕನಸು ಹೊತ್ತು ಮಗನ ಭವಿಷ್ಯ ಉಜ್ವಲವಾಗಲಿ ಎಂದು ಆತನನ್ನು ಈ ಹಂತಕ್ಕೆ ಬೆಳೆಸಿದ್ದರು. ಮಗನಿಗೆ ಮದುವೆ ಮಾಡುವುದು ಎಂದು ಯೋಚಿಸಿದ ತಾಯಿ ಸೀಮಾ ಜೈನ್ ಹೆಣ್ಣನ್ನು ಕೂಡ ನೋಡಿ ಮಗನಿಗೆ ತಿಳಿಸಿದ್ದರು. ಬಾಲ್ಯದಿಂದ ಧಾರ್ಮಿಕ ಪರಿಸರ, ಜಿನ ಮುನಿಗಳ ಸಂಪರ್ಕದಲ್ಲಿ ಬೆಳೆದಿದ್ದ ಪಿಯುಷ್ ಮನಸ್ಸು ವೈರಾಗ್ಯದ ಕಡೆ ಮುಖ ಮಾಡಿತ್ತು. ಮಧ್ಯಪ್ರದೇಶದ ಅಶೋಕನಗರದಲ್ಲಿ ಚಾತುರ್ಮಾಸ ಆಚರಿಸುತ್ತಿರುವ ಶ್ರಮಣ ಶಿರೋಮಣಿ, ಮುನಿಪುಂಗವ ಸುಧಾಸಾಗರರ ಕಡೆಗೆ ಆತನ ಮನಸ್ಸು ಓಡುತ್ತಿತ್ತು. ಹೆಣ್ಣು ನೋಡಲು ಬರುವಂತೆ ತಾಯಿ ಕರೆ ಮಾಡಿದಾಗ ಮಗ ಹೇಳಿದ - ಅಮ್ಮ ನಾನು ನಿಮ್ಮ ಮಗನಾಗಿ ಇನ್ನು ಮುಂದೆ ನಿಮ್ಮ ಎದುರು ಬರಲಾರೆ, ಆದರೆ ಶ್ರಮಣ ಜೀವನದ ಪಥಿಕನಾಗಿ ನಿಮಗೆ ಕಾಣಿಸಿಕೊಳ್ಳುತ್ತೇನೆ. ಹೀಗೆ ಹೇಳಿದ ಪಿಯೂಷ್ ತನ್ನ 54 ಲಕ್ಷದ ಪ್ಯಾಕೇಜ್‌ಗೆ ವಿದಾಯ ಹೇಳಿ ನೇರವಾಗಿ ಮುನಿಗಳ ಚಾತುರ್ಮಾಸ ಸ್ಥಾನಕ್ಕೆ ತೆರಳಿ ತನಗೆ ಸನ್ಯಾಸ ಮಾರ್ಗದ ಮೊದಲ ಹೆಜ್ಜೆ ಬ್ರಹ್ಮಚರ್ಯ ವ್ರತವನ್ನು ನೀಡುವಂತೆ ನಿವೇದಿಸಿಕೊಂಡ. ಮುನಿಗಳು ಆತನನ್ನು ಪರಾಮರ್ಶೆಸಿ, ಚರ್ಚಿಸಿ ವ್ರತ ನೀಡಲು ಒಪ್ಪಿದರು. ವಿಜಯದಶಮಿಯ ಶುಭದಿನ, ಚಾತುರ್ಮಾಸ ಕಾರ್ಯಕ್ರಮಗಳಿಗಾಗಿ ಹಾಕಿದ್ದ ವಿಶಾಲ ಪೆಂಡಾಲನಲ್ಲಿ ಸಹಸ್ರಾರು ಜನರ ಉಪಸ್ಥಿತಿಯಲ್ಲಿ ಭವ್ಯ ವೇದಿಕೆಯಲ್ಲಿ ಕಾರ್ಯಕ್ರಮ ಆರಂಭಗೊಂಡಿತು. ಪಿಯುಷನ ತಂದೆ ತಾಯಿಗಳನ್ನೂ ಕರೆಸಲಾಗಿತ್ತು. ಪಿಯುಷನಿಗೆ ಸನ್ಯಾಸ ನೀಡುವ ಬಗ್ಗೆ ಅವರ ಅನುಮತಿಯನ್ನೂ ಪಡೆಯಲಾಗಿತ್ತು. ವೇದಿಕೆಗೆ ಬರುತ್ತಿದ್ದಂತೆ ತಂದೆ ತಾಯಿಯರ ಕಣ್ಣೀರ ಕಟ್ಟೆ ಒಡೆಯಿತು. ಮಗನಿಗೆ ವಿದಾಯ ಹೇಳಬೇಕಾದ ಹೃದಯದ ತಾಪ ಅಶ್ರುವಿನ ರೂಪದಲ್ಲಿ ಧಾರೆಯಾಗಿ ಹರಿಯಿತು. ಈ ಅಶೃಧಾರೆ ಸಂಪೂರ್ಣ ಸಭೆಯನ್ನು ವ್ಯಾಪಿಸಿತು. ನೆರೆದ ಸಭಿಕರೆಲ್ಲರ ಕಣ್ಣುಗಳಿಂದ ಅಶ್ರು ಸುರಿಯುವಿಕೆಯನ್ನು ತಡೆಯಲಾಗಲಿಲ್ಲ. ತಮ್ಮ ಮನೆಯ ಮಗನನ್ನೇ ಬಿಟ್ಟುಕೊಡುತ್ತಿದ್ದೇವೆ ಎನ್ನುವ ನೋವು ಎಲ್ಲರಲ್ಲೂ ಕಾಣುತ್ತಿತ್ತು. ಸಂಪೂರ್ಣ ಪೆಂಡಾಲ್ ಸoವೇದನೆ ಮತ್ತು ಶ್ರದ್ಧೆಯಲ್ಲಿ ನೆನೆದು ಹೋಯಿತು. ಆಗ ಮುನಿ ಶ್ರೀ ಹೇಳಿದರು ಈ ಬಾಲಕನಿಗೆ ಸನ್ಯಾಸ ನೀಡುವ ಮುನ್ನ ಆತನಿಗೆ ಸಾಕಷ್ಟು ತಿಳಿಸಿ ಹೇಳಿದ್ದೇವೆ, ಚರ್ಚಿಸಿದ್ದೇವೆ, ಮೋಕ್ಷ ಮಾರ್ಗ ಸುಲಭವಲ್ಲ, ಇದು ಕತ್ತಿಯ ಅಲಗಿನ ಮೇಲೆ ನಡೆದಂತೆ ಇರುವುದು, ಎಂದೆಲ್ಲ ಹೇಳಿದರೂ ಈ ಬಾಲಕ ಹೆದರಲಿಲ್ಲ, ಹಿಂಜರಿಯಲಿಲ್ಲ, ಯಾವಾಗ ಸಂಸಾರದ ಬಂಧನಗಳು ಸಡಿಲುಗೊಳ್ಳುವವೋ ಆಗ ಈ ಜೀವ ಕಠಿಣ ಮಾರ್ಗದಲ್ಲಿ ಮುನ್ನಡೆಯುತ್ತದೆ. ಇಂದು ವಿಜಯದಶಮಿಯ ಈ ಶುಭ ದಿನ ಪಿಯುಷ್ ವೈರಾಗ್ಯ ಮಾರ್ಗವನ್ನು ಸ್ವೀಕರಿಸಿದ್ದಾನೆ, ಈತ ಸಮಗ್ರ ಸಮಾಜದ ಗೌರವವಾಗಿದ್ದಾನೆ. ಇಂದು ಮಗ ಮನೆಯಿಂದ ದೂರವಾಗುತ್ತಿದ್ದಾನೆ ಎಂದು ತಾಯಿ ಸುರಿಸುತ್ತಿರುವ ಕಣ್ಣೀರು ಮುಂದೊಂದು ದಿನ ಸಂತೋಷದ ಕಣ್ಣೀರಾಗಿ ಪರಿವರ್ತನೆಗೊಳ್ಳಲಿದೆ". ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪಿಯುಷ್ ಬ್ರಹ್ಮಚಾರಿ ವ್ರತಧಾರಿಯಾಗಿ ಮುನಿ ಸಂಘ ಸೇರಿದನು. ಹಂತ ಹಂತವಾಗಿ ದಿಗಂಬರತ್ವ ಸ್ವೀಕರಿಸುವನು. ಇಲ್ಲಿಯವರೆಗೆ ಮುನಿ ಸಂಫದಲ್ಲಿ 17 ಬ್ರಹ್ಮಚಾರಿಗಳು ಇದ್ದು ಅವರಲ್ಲಿ ಡಾಕ್ಟರ್, ಇಂಜಿನಿಯರ್, ಸಿ ಎ ಮತ್ತಿತರ ಉನ್ನತ ಶಿಕ್ಷಿತರು ಇದ್ದು ಇದೀಗ ಅವರೊಂದಿಗೆ ಪಿಯುಷ್ ಸೇರ್ಪಡೆಯಾಗಿದೆ. 54 ಲಕ್ಷದ ಪ್ಯಾಕೇಜ್ ಪಡೆದು ಭೋಗ ಜೀವನ ಕೈಗೆಟುಕಿತ್ತಾದರೂ ಅದನ್ನು ಬದಿಗಿಟ್ಟು ಕಠಿಣ ಮಾರ್ಗವನ್ನು ಆಯ್ಕೆ ಮಾಡಿಕೊಂಡು, ಸಭಿಕರ ಅಶ್ರು ಧಾರೆಯ ತೇವದಲ್ಲಿ ವೈರಾಗ್ಯದ ಮಹಿಮೆ ಮತ್ತು ತ್ಯಾಗದ ಹೊಳಪು ಸೇರಿಕೊಂಡ ಸಂದೇಶವನ್ನು ಈ ಪ್ರಸಂಗ ನೀಡುತ್ತಿತ್ತು. ಜೀವನದ ನಿಜಸುಖ ತ್ಯಾಗದಲ್ಲಿದೆ, ವೈರಾಗ್ಯದಲ್ಲಿದೆ ಮತ್ತು ಈ ಮಾರ್ಗವೇ ಅಂತಿಮವಾಗಿ ಆತ್ಮನನ್ನು ಪರಮಶಾಂತಿಯ ಕಡೆಗೆ ಕೊಂಡೊಯ್ಯುತ್ತದೆ ಎಂದು ಹೇಳುತ್ತಿತ್ತು. ಇದೇ ಸಂದರ್ಭದಲ್ಲಿ ವಿದ್ವಾಂಸರ ಸಮ್ಮೇಳನ ವೂ ಆಯೋಜಿತವಿದ್ದುದರಿಂದ 550 ಕ್ಕೂ ಹೆಚ್ಚು ವಿದ್ವಾಂಸರು ಕೂಡ ಪಿಯುಷ್ ವೈರಾಗ್ಯ ಪ್ರಸಂಗಕ್ಕೆ ಸಾಕ್ಷಿ ಆದರು. ಶಾಂತಿನಾಥ ಕೆ. ಹೋತಪೇಟಿ

ಭರತೇಶ ವೈಭವ ಕಾವ್ಯ ವಾಚನ ಪ್ರವಚನ ಸಪ್ತಾಹ ಸಂಭ್ರಮ

Article Image

ಭರತೇಶ ವೈಭವ ಕಾವ್ಯ ವಾಚನ ಪ್ರವಚನ ಸಪ್ತಾಹ ಸಂಭ್ರಮ

ಮಂಗಳೂರು: ಬಹುಜನರ ಅಪೇಕ್ಷೆಯ ಮೇರೆಗೆ ಮಂಗಳೂರು ನಗರದಲ್ಲಿ ದ್ವಿತೀಯ ಬಾರಿಗೆ ಲಾರ್ಡ್ ಮಹಾವೀರ ಜೈನ್ ಬೋರ್ಡಿಂಗ್ ಪ್ರಸ್ತುತ ಪಡಿಸುವ ವಿಶೇಷ ಕಾರ್ಯಕ್ರಮ ಮಹಾಕವಿ ರತ್ನಾಕರ ವರ್ಣಿವಿರಚಿತ ಮಹಾಕಾವ್ಯ ಭರತೇಶ ವೈಭವ ಕಾವ್ಯ ವಾಚನ - ಪ್ರವಚನ ಸಪ್ತಾಹ ಸಂಭ್ರಮವು ದಿನಾಂಕ 05-10-2025 ರಿಂದ ತಾ. 12-10-2025ರ ವರೆಗೆ ಪ್ರತಿದಿನ ಸಂಜೆ ಗಂಟೆ 6.00 ರಿಂದ 8.00ರ ವರೆಗೆ ವರ್ಧಮಾನ ಸಿದ್ದಾರ್ಥ ಭವನ, ಲಾರ್ಡ್ ಮಹಾವೀರ ಜೈನ್ ಬೋರ್ಡಿಂಗ್‌ ಇಲ್ಲಿ ಜರುಗಲಿದೆ. ಉದ್ಘಾಟನೆ : ಶ್ರೀ ಅಭಿಷೇಕ್ ಬಿ.ಎಸ್., BE, MBA ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಮೆಸ್ಕಾಂ ಸಬ್‌ಡಿಸನ್, ಕಾವೂರು, ಮಂಗಳೂರು ಕಾವ್ಯವಾಚನ : ಶ್ರೀ ಸಾತ್ವಿಕ್ ಜೈನ್ ಎನ್., ಬಜಗೋಳಿ ಎಂ.ಸಿ.ಎ. ವಿದ್ಯಾರ್ಥಿ, ಎನ್.ಐ.ಟಿ.ಕೆ. ಪ್ರವಚನ : ಶ್ರೀ ಮುನಿರಾಜ ರೆಂಜಾಳ, ಕಾರ್ಕಳ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು

ಮಂಗಳೂರಿನ ಹೃದಯಭಾಗ ಪಾಂಡೇಶ್ವರದಲ್ಲಿ ಐಷಾರಾಮಿ ಅಭಿಷ್ ವಿಸ್ಟಾ ಸೀ ವ್ಯೂ ಅಪಾರ್ಟ್ಮೆಂಟ್

Article Image

ಮಂಗಳೂರಿನ ಹೃದಯಭಾಗ ಪಾಂಡೇಶ್ವರದಲ್ಲಿ ಐಷಾರಾಮಿ ಅಭಿಷ್ ವಿಸ್ಟಾ ಸೀ ವ್ಯೂ ಅಪಾರ್ಟ್ಮೆಂಟ್

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಭಿಷ್ ಬಿಲ್ರ‍್ಸ್ ಸಂಸ್ಥೆಯ ನೂತನ ಐಶಾರಾಮಿ ವಸತಿ ಸಮುಚ್ಚಯ ಅಭಿಷ್ ವಿಸ್ಟಾವನ್ನು ಅನಾವರಣಗೊಳಿಸಿದ್ದು, ಯೋಜನೆಗೆ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ನಗರದ ಹೃದಯ ಭಾಗವಾದ ಪಾಂಡೇಶ್ವರದಲ್ಲಿ ನಿರ್ಮಾಣವಾಗುತ್ತಿರುವ ಅಭಿಷ್ ವಿಸ್ಟಾ ಅಪಾರ್ಟ್ಮೆಂಟ್ ವಸತಿ ಸಮುಚ್ಚಯ ನಿರ್ಮಾಣವಾಗುತ್ತಿದೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಪುಷ್ಪರಾಜ್ ಜೈನ್ ತಿಳಿಸಿದ್ದಾರೆ. ಆಧುನಿಕ ಸೌಕರ್ಯಗಳನ್ನು ಒಳಗೊಂಡಿರುವ ಈ ಪ್ರೀಮಿಯಂ ಅಪಾರ್ಟ್ಮೆಂಟ್ ತನ್ನ ವಿಶಿಷ್ಟ ಸ್ಥಳ ಮತ್ತು ಆಕರ್ಷಕ ವಿನ್ಯಾಸದಿಂದ ವಿಶಿಷ್ಟತೆ ಸಾಧಿಸಿದೆ. ಮೂರನೇ ಮಹಡಿಯ ಮೇಲ್ಭಾಗದಿಂದಲೇ ಸಮುದ್ರ ಹಾಗೂ ಪಶ್ಚಿಮ ಘಟ್ಟದಿಂದ ಹರಿದು ಬರುವ ನೇತ್ರಾವತಿ ಹಾಗೂ ಪಲ್ಗುಣಿ ನದಿಯ ಸಂಗಮದ ವಿಹಂಗಮಕ ನೋಟ ಕಣ್ಣು ಸೆಳೆಯುತ್ತದೆ. ನೈಸರ್ಗಿಕ ಸೌಂದರ್ಯದೊಂದಿಗೆ ನಗರದ ಚೈತನ್ಯವನ್ನೂ ಅನುಭವಿಸಲು ಸಾಧ್ಯವಾಗುವ ಈ ವಾಸಸ್ಥಳವು `ಗುಡ್ ಲೊಕೇಶನ್ - ರಿಚ್ ಲೊಕೇಶನ್' ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಗರದ ಪ್ರಮುಖ ಭಾಗ ಎಂದರೆ ಪ್ರೆಮ್ ಲೊಕೇಷನ್‌ನಲ್ಲಿ ಒಂದಾಗಿರುವ ಪಾಂಡೇಶ್ವರ - ಮಂಗಳಾದೇವಿ ದೇವಸ್ಥಾನ ಮುಖ್ಯ ರಸ್ತೆಯಲ್ಲೆ ಅಭಿಷ್ ವಿಸ್ಟಾ ನಿರ್ಮಾಣವಾಗುತ್ತಿದೆ. ಈ ಯೋಜನೆಯ ಕಾಮಗಾರಿ ಭರದಿಂದ ಸಾಗುತ್ತಿದ್ದು, ಎರಡುವರೆ ವರ್ಷದಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಹಣಕಾಸು ಸೌಲಭ್ಯ: ಈ ಯೋಜನೆಯಲ್ಲಿ ಮನೆ ಖರೀದಿಗೆ ಸಂಬಂಧಿಸಿದಂತೆ ಬ್ಯಾಂಕ್‌ಗಳೊಂದಿಗೆ ಅಭಿಷ್ ಬಿಲ್ರ‍್ಸ್ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡಿದ್ದು, ಇದರಿಂದಾಗಿ ಮನೆ ಖರೀದಿಗೆ ಸುಲಭವಾಗಿ ಗ್ರಾಹಕರಿಗೆ ಹಣಕಾಸು ಸೌಲಭ್ಯ ಸಿಗಲಿದೆ. ಸಾರ್ವಜನಿಕ ಸಾರಿಗೆ, ಉತ್ತಮ ಪರಿಸರ, ಶಾಪಿಂಗ್ ಮಾಲ್, ದೇವಸ್ಥಾನ, ಮಸೀದಿ, ಚರ್ಚ್, ಶಿಕ್ಷಣ ಸಂಸ್ಥೆ, ವೃತ್ತಿಪರ ಶಿಕ್ಷಣ ಸಂಸ್ಥೆ, ವೈದ್ಯಕೀಯ ಕಾಲೇಜುಗಳು ಆಸುಪಾಸಿನಲ್ಲಿರುವ, ಬಸ್ ನಿಲ್ದಾಣ, ವಿಮಾನ ನಿಲ್ದಾಣ, ರೈಲು ನಿಲ್ದಾಣವನ್ನು ಸುಲಭವಾಗಿ ತಲುಪುವಂತಿರುವ ಅಭಿಷ್ ವಿಸ್ಟಾದಲ್ಲಿ ಗ್ರಾಹಕರು ಮನೆ ಬುಕ್ ಮಾಡಬಹುದಾಗಿದೆ. 1660 ಚದರ ಅಡಿಯಿಂದ 1875 ಚದರ ಅಡಿ ವರೆಗಿನ ಮೂರು ಬೆಡ್ ರೂಂನ ಮನೆ ನಿರ್ಮಾಣವಾಗಲಿದೆ. ಪ್ರತಿ ಮಹಡಿಯಲ್ಲಿ ಐದು ಮನೆ ಇದ್ದು, ಗಾಳಿ ಬೆಳಕಿಗೆ ತೆರೆದುಕೊಂಡಿದೆ. ಒಟ್ಟು 17 ಮಹಡಿಯ ಈ ವಸತಿ ಸಮುಚ್ಚಯದಲ್ಲಿ ಎರಡು ಮಹಡಿ ಕಾರು ನಿಲುಗಡೆ, 14 ಮಹಡಿಯಲ್ಲಿ 70 ಮನೆಗಳು ಹಾಗೂ ಟಾಪ್ ಫ್ಲೋರ್‌ನಲ್ಲಿ ಕ್ಲಬ್ ಹೌಸ್ ನಿರ್ಮಾಣವಾಗಲಿದೆ. ಈ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಅತೀ ಎತ್ತರದ ಹಾಗೂ ಬೃಹತ್ ವಸತಿ ಸಮುಚ್ಚಯ ಇದಾಗಿದ್ದು, ಅಭಿಷ್ ವಿಸ್ಟಾ ಕೇವಲ ವಾಸಸ್ಥಳವಲ್ಲ, ಬುದ್ಧಿವಂತ ಹೂಡಿಕೆದಾರರಿಗಾಗಿ ಭವಿಷ್ಯದ ಮೌಲ್ಯವರ್ಧಿತ ಆಸ್ತಿ ಕೂಡ ಹೌದು. ಆಧುನಿಕ ಜೀವನಶೈಲಿಯ ಕನಸನ್ನು ನನಸು ಮಾಡುವ ಅಭಿಷ್ ವಿಸ್ಟಾ ಇಂದು ನಗರದ ಅತ್ಯಂತ ಆಕರ್ಷಕ ಪ್ರೀಮಿಯಂ ಅಪಾರ್ಟ್ಮೆಂಟ್ ಯೋಜನೆಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ. ಅಭಿಷ್‌ನ ವಿಸ್ತಾದ ವಿಶೇಷತೆ: ಪ್ರೆಮ್ ಲೊಕೇಷನ್ 17 ಮಹಡಿ – 70 ಮನೆ ಚತುಷ್ಪಥ ಕಾಂಕ್ರೀಟ್ ರಸ್ತೆಗೆ ತಾಗಿಕೊಂಡು ವಸತಿ ಸಮುಚ್ಚಯ ಮೂರನೇ ಮಹಡಿಯ ಬಳಿಕ ನೇತ್ರಾವತಿ, ಪಲ್ಗುಣಿ ನದಿ ಹಾಗೂ ಸಮುದ್ರದ ಸಂಗಮದ ವಿಹಂಗಮ ನೋಟ ಅತ್ಯಾಧುನಿಕ ಸೌಲಭ್ಯ, ಟ್ರಾಫಿಕ್ ಜಂಜಾಟದಿಂದ ಮುಕ್ತಿ ಸ್ವಚ್ಛಂದ ಜೀವನಕ್ಕೆ ಪರಿಪೂರ್ಣ ಸಮುಚ್ಚಯ ಎಲ್ಲ ಮನೆಗಳನ್ನು ವಾಸ್ತು ಪ್ರಧಾನವಾಗಿಸಿಕೊಂಡು ವಿನ್ಯಾಸ ಮಲ್ಟಿ ಜಿಮ್, ಮೆಡಿಟೇಶನ್ ಸೆಂಟರ್, ಪಾರ್ಟಿ ಹಾಲ್ ಚಿ‌ಲ್ಡ್ರನ್ಸ್ ಪ್ಲೇ ಏರಿಯಾ. ವಾಕಿಂಗ್‌ಗಾಗಿ ಫೂಟ್ ರಿಫ್ಲೆಕ್ಸೋಲಜಿ ಪಥ ಅತಿಥಿಗಳು ಹಾಗೂ ಮಾಲೀಕರಿಗೆ ಪ್ರತ್ಯೇಕ ಕಾರು ಪಾರ್ಕಿಂಗ್ ಆಧುನಿಕ ಪರಿಕರಗಳೊಂದಿಗೆ ಆಕರ್ಷಕ ವಿನ್ಯಾಸ ಕಡಿಮೆ, ಮಧ್ಯಮ ಆದಾಯದ ಕುಟುಂಬಕ್ಕೆ ಸೂಕ್ತ ಟೆರೆಸ್‌ನಲ್ಲಿ ಲ್ಯಾಂಡ್ ಸ್ಕೇಪ್.

ಬೆಳಗಾವಿ: ನವರಾತ್ರಿ ಉತ್ಸವ

Article Image

ಬೆಳಗಾವಿ: ನವರಾತ್ರಿ ಉತ್ಸವ

ಬೆಳಗಾವಿ: ನಗರದ ಮಜಗಾವಿ ಗ್ರಾಮದ ಭಗವಾನ್ ಶ್ರೀ 1008 ಆದಿನಾಥ್ ದಿಗಂಬರ ಜೈನ ಮಂದಿರದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿನಿತ್ಯ ಜಿನಭಗವಂತರ ಅಭಿಷೇಕ ಮತ್ತು ಶಾಂತಿಧಾರ ಅತ್ಯಂತ ಅದ್ಧುರಿಯಾಗಿ ನಡೆಯುತ್ತಿದೆ. ಪರಮ ಪೂಜ್ಯ 108 ಮಹಾನಸಾಗರ್ ಮುನಿಗಳು ಸಾನಿದ್ಯ ವಹಿಸಿ ತಮ್ಮ ಪ್ರವಚನದಲ್ಲಿ ಮಾತನಾಡುತ್ತ ವರ್ಷಕ್ಕೊಮ್ಮೆ ಬರುವ ಜೈನ ಧರ್ಮದ ಈ ಉತ್ಸವದಲ್ಲಿ ಧರ್ಮ ಬಂಧುಗಳು ತಮ್ಮ ಪಾಪ ಕರ್ಮಗಳನ್ನು ಕಳೆಯಲು ಇದನ್ನು ಸದುಪಯೋಗ ಪಡೆಸಿಕೊಳ್ಳಬೇಕು. ಪ್ರತಿನಿತ್ಯ ಮಡಿ ಬಟ್ಟೆ ಧರಿಸಿ ಜಿನಭಗವಂತರ ಪೂಜಾ ಅಭಿಷೇಕ ಮಾಡಬೇಕು. ಜೈನ ಧರ್ಮದ ಪ್ರಭಾವನೆ ಮಾಡಬೇಕು ಎಂದು ತಿಳಿಸಿದರು. 9 ದಿನಗಳ ಕಾಲ ನಡೆಯುವ ಈ ಉತ್ಸವದ ನಿಮಿತ್ಯ ಮಂದಿರದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ, ಮುನಿ ಮಹಾರಾಜರ ಸಾನಿಧ್ಯದಲ್ಲಿ ಬೃಹತ್ ಧಾರ್ಮಿಕ ಸಂಸ್ಕಾರ ಶಿಬಿರವನ್ನು ಆಯೋಜಿಸಲಾಗಿದೆ, ಇದರಲ್ಲಿ ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ಹಾಕುವದು, ವ್ಯಸನದಿಂದ ಮುಕ್ತ ಮಾಡುವುದು, ಗುರು ಹಿರಿಯರಿಗೆ ಗೌರವ ಕೊಟ್ಟು, ಭಗವಂತರ ಪೂಜೆಯ ವಿಧಿ, ವಿಧಾನಗಳನ್ನು ಕಲಿಸುವದು ಈ ಶಿಬಿರದ ಉದ್ದೇಶವಾಗಿದ್ದು ಪರಿವಾರ ಸಮೇತ ಭಾಗವಹಿಸಿ ಪುಣ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ಎಲ್ಲಾ ಜೈನ ಬಂಧುಗಳು ಭಕ್ತಿಯಿಂದ ನೃತ್ಯ ಮಾಡಿ ಭಗವಂತರಿಗೆ ಪೂಜೆ ಸಲ್ಲಿಸಿದರು. ಮಜಗಾವಿ ಗ್ರಾಮದ ಪಂಚ್ ಕಮಿಟಿ ಚತುರ್ಮಾಸ್ ಕಮಿಟಿ ಎಲ್ಲ ಯುವಕ ಮಂಡಳ ಮಹಿಳಾ ಮಂಡಳ ಹಾಗೂ ಪಾಠಶಾಲೆಯ ಬಾಲಕ ಮತ್ತು ಬಾಲಕಿಯರು ಉಪಸ್ಥಿತರಿದ್ದರು.

ಪುರಾತತ್ವ ಇಲಾಖೆ ನಿರ್ಧಾರದ ಪರಿಶೀಲನೆಗೆ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಅವರಿಗೆ ಮನವಿ

Article Image

ಪುರಾತತ್ವ ಇಲಾಖೆ ನಿರ್ಧಾರದ ಪರಿಶೀಲನೆಗೆ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಅವರಿಗೆ ಮನವಿ

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಪುರಾತನ ಬಸದಿಗಳ ಮಾಹಿತಿಗಳನ್ನು ಕೇಳಿದ್ದು ಕೆಲವೊಂದು ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದು ತಿಳಿದು ಬಂದಿದ್ದು ಇದನ್ನು ನಾವು ತೀವ್ರವಾಗಿ ವಿರೋಧಿಸುತಿದ್ದೇವೆ. ಎಲ್ಲಾ ಬಸದಿಗಳಲ್ಲಿ ನಿತ್ಯ ಪೂಜೆಗಳು ನಡೆಯುತ್ತಿದ್ದು ಜೈನ ಸಮಾಜದ ಶ್ರದ್ದಾ ಕೇಂದ್ರಗಳಾಗಿದ್ದು ಪುರಾತತ್ವ ಇಲಾಖೆ ನಿರ್ಧಾರದಿಂದ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಲಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಅವರಿಗೆ ಮನವಿ ನೀಡಿ ಎಲ್ಲ ಬಸದಿಗಳ ಸ್ಥಳ ಪರಿಶೀಲನೆ ಮಾಡಿ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗದಂತೆ ಹಾಗೂ ಪುರಾತತ್ವ ಇಲಾಖೆಗೆ ಸೇರಿಸುವ ಅಗತ್ಯ ಇಲ್ಲದಿರುವ ಬಗ್ಗೆ ಪುರಾತತ್ವ ಇಲಾಖೆಗೆ ವರದಿ ನೀಡಬೇಕಾಗಿ ಮನವಿ ಮಾಡಲಾಯಿತು. ಸಂದರ್ಭದಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಯಶೋಧರ್ ಬಳ್ಳಾಲ್ ಬಂಗಾಡಿ ಅರಮನೆ, ವಿಜಯಕುಮಾರ್ ಸಿದ್ದಾರ್ಥ್ ನಿಲಯ, ಯುವರಾಜ್ ಪೂವಣಿ, ಜಿನರಾಜ ಪೂವಣಿ, ಪಣಿರಾಜ್ ಜೈನ್, ಸುರಭಿ, ಅಭಿನಂದನ್, ವೀರೇಂದ್ರ ಜೈನ್, ಸುರೇಂದ್ರ ಕುಮಾರ್ ಧರ್ಮಸ್ಥಳ, ವಿನಯ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Article Image

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

ಬೆಳ್ತಂಗಡಿ: ಜೈನ ಬಸದಿಗಳ ಮುಖ್ಯ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲ ಆಗುವಂತೆ ಮಾಸಿಕ ಗೌರವಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುದಾನವನ್ನು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಿಡುಗಡೆಗೊಳಿಸಿರುತ್ತಾರೆ. ಈ ಯೋಜನೆ ಪ್ರಥಮ ಬಾರಿಗೆ ಜಾರಿಯಾಗುತ್ತಿರುವುದು ನಮಗೆಲ್ಲ ಸಂತೋಷವನ್ನುಂಟು ಮಾಡಿದೆ. ಯೋಜನೆಯನ್ನು ಜಾರಿ ಮಾಡಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ರವರಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಝಮೀರ್ ರವರಿಗೆ ಹಾಗೂ ಈ ಯೋಜನೆಯನ್ನು ಜಾರಿಗೊಳಿಸುವಲ್ಲಿ ಶ್ರಮವಹಿಸಿದ ನಮ್ಮ ಸಮಾಜದ ಎಚ್. ನಾಭಿರಾಜ ಜೈನ್ ಹಾಗೂ ಕರ್ನಾಟಕ ಸರಕಾರಕ್ಕೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಂಚಾಲಕರಾದ ಡಾ. ಕೆ ಜಯಕೀರ್ತಿ ಜೈನ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸತ್ತೂರು, ಧಾರವಾಡ, ಸೆ.24: ಅಲೈಡ್ ಸೈನ್ಸಸ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Article Image

ಸತ್ತೂರು, ಧಾರವಾಡ, ಸೆ.24: ಅಲೈಡ್ ಸೈನ್ಸಸ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ, ಅಲೈಡ್ ಹೆಲ್ತ್ ಸೈನ್ಸಸ್ ಘಟಕವು ಸೆಪ್ಟೆಂಬರ್ 24, 2025 ರಂದು 7ನೇ ಬ್ಯಾಚ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಖ್ಯಾತ ಸಮಾಜ ಸೇವಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಅಧ್ಯಕ್ಷರು ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾದ ರಾಜಣ್ಣ ಕೊರವಿ ಅವರು ಮುಖ್ಯ ಅತಿಥಿಗಳಾಗಿದ್ದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಗೌರವ ಅತಿಥಿಗಳಾಗಿದ್ದು ದೀಪ ಬೆಳಗಿಸುವ ಮೂಲಕ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ ರಾಜಣ್ಣ ಕೊರವಿ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ: ಆರೋಗ್ಯ ವೃತ್ತಿಪರರು ಧೈರ್ಯ ಮತ್ತು ಸಹಾನುಭೂತಿಯಿಂದ ರೋಗಿಗಳ ಸೇವೆ ಮಾಡಬೇಕು. ಎಸ್.ಡಿ.ಎಂ ಸಂಸ್ಥೆಗಳು ಶ್ರೇಷ್ಠತೆಯೊಂದಿಗೆ ಮಾನವೀಯ ಸೇವೆಗಳಿಗೆ ಹೆಸರುವಾಸಿಯಾಗಿವೆ. ಹೊಸ ಹೊಸ ತಂತ್ರಜ್ಞಾನದ ಬಳಕೆಯೊಂದಿಗೆ ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸೆಯನ್ನು ನೀಡಬೇಕು. ಸಮಯಪಾಲನೆ, ಶಿಸ್ತು ಮತ್ತು ಒಗಟ್ಟಿಗೆ ಆರೋಗ್ಯ ವೃತ್ತಿಪರರು ಆದ್ಯತೆ ನೀಡಬೇಕು. ಮಾನವೀಯತೆಯಿಂದ ರೋಗಿಗಳ ಸೇವೆ ಮಾಡುವುದರೊಂಗೆ ಉತ್ತಮ ಸಂವಹನವನ್ನು ಹೊಂದಬೇಕು. ಪ್ರತಿದಿನ ನಾವು ದೊಡ್ಡ ಕನಸುಗಳನ್ನು ಕಾಣತ್ತಾ, ಅದನ್ನು ಸಾಧಿಸುವ ಗುರಿ ಹೊಂದಬೇಕು. ಎಸ್.ಡಿ.ಎಂ.ನ ಅತ್ಯುತ್ತಮ ಸೌಲಭ್ಯ ಮತ್ತು ನಿಮಗೆ ಲಭ್ಯವಿರುವ ವಿಫುಲ ಅವಕಾಶವನ್ನು ಬಳಸಿಕೊಳ್ಳಬೇಕು. ಎಸ್.ಡಿ.ಎಂ. ಸಂಸ್ಥೆಗಳು ಸದೃಢ ಕಟ್ಟಡಗಳನ್ನು ನಿರ್ಮಿಸುವುದಲ್ಲದೆ ಜ್ಞಾನದ ಬದ್ರಬುನಾದಿಯನ್ನು ಸಹ ನಿರ್ಮಿಸುತ್ತದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪ ಕುಲಪತಿಗಳಾದ ವಿ. ಜೀವಂಧರ್ ಕುಮಾರ್ ಮತ್ತು ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ವಿಶ್ವವಿದ್ಯಾಲಯದ ಇತರ ಅಧಿಕಾರಿಗಳು, ಅಂಗ ಸಂಸ್ಥೆಗಳ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಹೊಸ ವಿದ್ಯಾರ್ಥಿಗಳಿಗೆ ಬಿಳಿ ಕೋಟುಗಳನ್ನು ವಿತರಿಸಲಾಯಿತು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ಕೆ. ಕುಲಕರ್ಣಿ, ಕಾಲೇಜಿನ ವೈಶಿಷ್ಟ್ಯದ ಬಗ್ಗೆ ಪರಿಚಯ ಮಾಡಿಕೊಟ್ಟರು. ನೇಫ್ರಾಲಜಿ ವಿಭಾಗದ ಪ್ರಾಧ್ಯಾಪಕರಾದ ಡಾ. ನಾಗರಾಜ್ ನಾಯಕ್, ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಉಪ ಕುಲಸಚಿವರಾದ ಡಾ. ಅಜಂತಾ ಜಿಎಸ್, ವಿಶ್ವವಿದ್ಯಾಲಯದ ತತ್ವಗಳು ಮತ್ತು ನೀತಿಗಳ ಬಗ್ಗೆ ವಿವರಿಸಿದರು. ಅಂಗ ರಚನಾಶಾಸ್ತ್ರ ವಿಭಾಗದ ಅಧ್ಯಾಪಕಿ ಡಾ. ರೋಶನಿ ಸದಾಶಿವ, ಕಾರ್ಯಕ್ರಮವನ್ನು ನಿರೂಪಿಸಿದರು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರು ಮತ್ತು ಅಲೈಡ್ ಹೆಲ್ತ್ ಸೈನ್ಸ್ನ ಸಂಯೋಜಕಿಯವರಾದ ಡಾ. ವಿದ್ಯಾ ಎಸ್ ಪಾಟೀಲ್ ಅತಿಥಿಗಳನ್ನು ಸ್ವಾಗತಿಸಿದರು. ಉಪ ಸಂಯೋಜಕರಾದ ಡಾ. ಅನಿಲ್ ಬರ್ಗಲೆ, ಆಡಳಿತಾಧಿಕಾರಿಗಳು ಮತ್ತು ವಿಭಾಗಗಳ ಮುಖ್ಯಸ್ಥರನ್ನು ಪರಿಚಯಿಸಿದರು. ಡಾ. ಉಪೇಂದ್ರ ಜೋಯಿಶ್ ವಂದನಾರ್ಪಣೆ ಸಲ್ಲಿಸಿದರು.

ಪ್ರತಿಷ್ಠಿತ ರತ್ನಾಕರ ಬ್ಯಾಂಕ ನಿಂದ ಮೂರು ತಲೆಮಾರಿನ ಗ್ರಾಹಕರಿಗೆ ಸನ್ಮಾನ

Article Image

ಪ್ರತಿಷ್ಠಿತ ರತ್ನಾಕರ ಬ್ಯಾಂಕ ನಿಂದ ಮೂರು ತಲೆಮಾರಿನ ಗ್ರಾಹಕರಿಗೆ ಸನ್ಮಾನ

ಮಹಾರಾಷ್ಟ್ರ ಮೂಲದ ಪ್ರತಿಷ್ಠಿತರತ್ನಾಕರ ಬ್ಯಾಂಕ್ (RBL Bank) ಇದು ಹುಬ್ಬಳ್ಳಿಯಲ್ಲಿ ತನ್ನ ಶಾಖೆಯನ್ನು ಸುಮಾರು 42 ವರ್ಷಗಳ ಹಿಂದೆ ತೆರೆಯಿತು. ಆಗಿನಿಂದ ಇಂದಿನವರೆಗೂ ಈ ಬ್ಯಾಂಕು ಬ್ಯಾಂಕಿಂಗ್ ಸೇವೆಯಲ್ಲಿ ಸಾರ್ವಜನಿಕ ವಲಯದಲ್ಲಿಯೇ ತನ್ನದೇ ಆದ ಛಾಪು ಮೂಡಿಸಿದೆ. ಪ್ರಸ್ತುತ ಈ ರತ್ನಾಕರ ಬ್ಯಾಂಕ್ ಮೂರು ತಲೆಮಾರಿನಿಂದ ಈಗಲೂ ಅತ್ಯಂತ ಕ್ರೀಯಾಶೀಲವಾಗಿ ವ್ಯವಹರಿಸುತ್ತಿರುವ ಈಗ ಮೂರನೇ ಜನರೇಷನ್ ಗ್ರಾಹಕರನ್ನು ಗುರುತಿಸಿ ಗೌರವಿಸಲು ಮುಂದಾಗಿದೆ. ಇತ್ತೀಚಿಗೆ ಪ್ರತಿಷ್ಠಿತ ಖಾಸಗಿ ಹೋಟೆಲ್ ಒಂದರಲ್ಲಿ ಮೂರು ತಲೆಮಾರಿನ ಗ್ರಾಹಕರಲ್ಲಿ ಪ್ರಮುಖರಾದ ಹುಬ್ಬಳ್ಳಿ ಮಹಾವೀರ ಗಲ್ಲಿಯ ಪ್ರತಿಷ್ಠಿತ ಮೆ. ಎಸ್. ಬಿ. ಬೀಳಗಿ & ಸನ್ಸ್ ಹೆಸರಿನ ವ್ಯಾಪಾರಿ ಸಂಸ್ಥೆಯ ಮುಖ್ಯಸ್ಥ ಬ್ರಹ್ಮಕುಮಾರ ಎಸ್ ಬೀಳಗಿ, ಇವರ ಪುತ್ರ ಅಜಯ ಬಿ. ಬೀಳಗಿ ಹಾಗೂ ಇವರ ಪುತ್ರಿ ಪ್ರಣೀತ ಎ. ಬೀಳಗಿ ಇವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಯಶೀಲಾ ಬೀಳಗಿ ಮತ್ತು ಚಂದನಾ ಎ. ಬೀಳಗಿ ಇದ್ದರು. ಹಾಗೆಯೇ ಹುಬ್ಬಳ್ಳಿಯ ಇನ್ನೊರ್ವ ಗಿರಿಯ ಗ್ರಾಹಕ ಮೆ| ರಾಧಾಕೃಷ್ಣ ಇಂಡಸ್ಟ್ರೀಸ್ ಮಾಲೀಕರಾದ ಉದಯ ದಡೋತಿ ಮತ್ತು ಪ್ರತಿಭಾ ದಡೋತಿ ಮತ್ತು ಇವರ ಪುತ್ರ ಗುಣಧರ ದಡೋತಿ ಹಾಗೂ ಇವರ ಪತ್ನಿ ಶಲಾಖಾ ಇವರನ್ನು ಸನ್ಮಾನಿಸಿ ಗೌರವಿಸಿದರು ಜೊತೆಗೆ ಅತ್ಯಂತ ಹಿರಿಯ ಗ್ರಾಹಕರು ಬ್ಯಾಂಕನ ಹಿತೈಸಿಗಳೂ ಆದ 92 ವಸಂತಗಳನ್ನು ಕಂಡ ಸುರೇಂದ್ರ ನಾವಳ್ಳಿ ಇವರನ್ನೂ ಬ್ಯಾಂಕ್ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಬ್ಯಾಂಕು ತನ್ನ ಪ್ರತಿಷ್ಠೆಯನ್ನು ಹೆಚ್ಚಿಸಿಕೊಂಡಿದೆ. ಬ್ಯಾಂಕಿನ ಹಿರಿಯ ಅಧಿಕಾರಿ ನಂಜುಂಡ ಸ್ವಾಮಿ, ಬ್ರಾಂಚ್ ಮ್ಯಾನೇಜರ್ ಚಂದ್ರಗೌಡ ಪಾಟೀಲ್, ಟಾಸ್ಕ್ ಮ್ಯಾನೇಜರ್ - ಸಂಗಪ್ಪ ಉಕ್ಕಲಿ, ಸಿಬ್ಬಂದಿ ರತ್ನಾ ಉಪಾಧ್ಯೆ ಮತ್ತು ಕಾವೇರಿ ರಾಥೋಡ್ ಇವರು ಈ ಸನ್ಮಾನ ಸಮಾರಂಭವನ್ನು ನೆರವೇರಿಸಿದರು. ವರದಿ : ಎಸ್. ಆರ್. ಮಲ್ಲಸಮುದ್ರ

ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ನವರಾತ್ರಿ ಮಹೋತ್ಸವ-2025 ಸಾಂಸ್ಕ್ರತಿಕ ವೈಭವ

Article Image

ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ನವರಾತ್ರಿ ಮಹೋತ್ಸವ-2025 ಸಾಂಸ್ಕ್ರತಿಕ ವೈಭವ

ಮಠದಕಣಿ ಶ್ರೀ ವೀರಭದ್ರ - ಮಹಾಮಾಯಿ ದೇವಸ್ಥಾನದ ನವರಾತ್ರಿ ಮಹೋತ್ಸವದಲ್ಲಿ ಮಹಾಮಾಯಿ ಫ್ರೆಂಡ್ಸ್ ಎಸೋಸಿಯೇಶನ್ 48ನೇ ವಾರ್ಷಿಕೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಬುಧವಾರ(24-9-2025) ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಎಲ್ಲರ ಮೆಚ್ಚುಗೆ ಪಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಖ್ಯ ಅಥಿತಿಗಳಾಗಿ ಮಕ್ಕಳ ಕಲ್ಯಾಣ ಸಮಿತಿ ದ.ಕ ಜಿಲ್ಲಾ ಅಧ್ಯಕ್ಷೆ ಹಾಗೂ ವಕೀಲರಾದ ಡಾ. ಅಕ್ಷತಾ ಆದರ್ಶ್ ಮೂಡುಬಿದಿರೆ ಮತ್ತು ಸಂಪತ್ ಜೈನ್ ಮುಂಡೂರು, ಬಾಲಕೃಷ್ಣ ಕಲ್ಬಾವಿ, ವಿಶ್ವನಾಥ್ ಶೆಟ್ಟಿಗಾರ, ಸುದೇಶ್ ಜೈನ್ ಮಕ್ಕಿಮನೆ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೃತ್ಯ ನಿರ್ದೇಶಕರುಗಳಾದ ರೀಮಾ ಜಗನ್ನಾಥ್ ಮಾರ್ನಮಿಕಟ್ಟೆ , ವಿದುಷಿ ಪ್ರಾರ್ಥನಾ ರೋಹಿತ್ ಹೊಸಬೆಟ್ಟು , ವಂಸತ್ ಕುಮಾರ್, ಆಶಿಶ್ ಅಂಚನ್, ಹರೀಶ್ ಆಚಾರ್ಯ ಅವರನ್ನು ಸನ್ಮಾನಿಸಿಗೌರವಿಸಲಾಯಿತು. ಪ್ರಿಯಾ ಸುದೇಶ್ ಕುಮಾರ್ ಮಂಗಳೂರು ನಿರೂಪಿಸಿದರು. ಗೌರವ್ ಶೆಟ್ಟಿಗಾರ, ಉಷಾ ಅಶೋಕ್, ಧಾತ್ರಿ, ಕೃತಿ ಸನಿಲ್, ಪ್ರೇರಣ ಜೆ,ಅಪೇಕ್ಷಾ ಎ. ಮೊದಲಾದವರು ಸಹಕರಿಸಿದರು.

ಗರ್ಡಾಡಿ ಗುಂಡದ ಬಸದಿಯ : ಶಿಲಾನ್ಯಾಸ ಕಾರ್ಯಕ್ರಮ

Article Image

ಗರ್ಡಾಡಿ ಗುಂಡದ ಬಸದಿಯ : ಶಿಲಾನ್ಯಾಸ ಕಾರ್ಯಕ್ರಮ

ಗರ್ಡಾಡಿ ಗುಂಡದ ಬಸದಿಯ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರದ ನಿಮಿತ್ತ ನಿರ್ಮಾಣಗೊಂಡ ನೂತನ ಶಿಲಾಮಯ ಬಸದಿಯ ಮುಖ್ಯ ದ್ವಾರದ ಕಲ್ಲಿನ ದಾರಂದವನ್ನು ಕಾರ್ಕಳ ಶ್ರೀ ಜೈನಮಠದ ಪರಮ ಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಸೆ.24 ರಂದು ಬೆಳಗ್ಗೆ 8.45ಗಂಟೆಗೆ ನೆರವೇರಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ್ಯಕ್ರಮ

Article Image

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ್ಯಕ್ರಮ

ಮೂಡಬಿದಿರೆ: ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ನವರಾತ್ರಿಯ ಪ್ರಯುಕ್ತ “ನವರಾತ್ರಿ - ನವಶಕ್ತಿ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. “ಮಹಿಳಾ ಸ್ವಾವಲಂಬನೆ ಸಮಾಜದ ಪ್ರಗತಿಯ ಮೂಲವಾಗಿದೆ, ಹೆಣ್ಣುಮಕ್ಕಳಿಗೆ ಕನಸು ಕಾಣಲು ಹಕ್ಕು ಇದೆ ಸಾಧಿಸಲು ಶಕ್ತಿ ಎಂದರು ಜೊತೆಗೆ ಎಕ್ಸಲೆಂಟ್ ಸಂಸ್ಥೆಯ ಸ್ವಚ್ಛ ಪರಿಸರವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಇಂದು.ಎಂ. ಮುಖ್ಯ ಅಧಿಕಾರಿಗಳು ಮೂಡುಬಿದರೆ ಪುರಸಭೆ ಇವರು ಪ್ರಶಂಸಿಸಿದರು. ಈ ಕಾರ್ಯಕ್ರಮವು ನವರಾತ್ರಿಯ ಆಧ್ಯಾತ್ಮಿಕತೆಯ ಜೊತೆಗೆ ಹೆಣ್ಣಿನ ಮಹತ್ವವನ್ನು ಬಿಂಬಿಸುತ್ತದೆ.“ಹೆಣ್ಣು ತನ್ನ ಜೀವನದಲ್ಲಿ ಅನೇಕ ಪಾತ್ರಗಳನ್ನು ನಿರ್ವಹಿಸುತ್ತಾಳೆ. ನವರಾತ್ರಿಯು ಹೆಣ್ಣಿನ ಶಕ್ತಿಯ ಪ್ರತೀಕ” ಎಂದು ಸಂಸ್ಥೆಯ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ಮಾತನಾಡಿ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ನಕಾರಾತ್ಮಕತೆಯನ್ನು ನವಶಕ್ತಿಗಳು ಸಕಾರಾತ್ಮಕತೆಯನ್ನಾಗಿ ಪರಿವರ್ತಿಸಲಿ ಎಂದು ನವಶಕ್ತಿಯ ಮಹತ್ವವನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಯುವರಾಜ್ ಜೈನ್ ನವರು ತಿಳಿಸಿದರು. ಶಾರದಾದೇವಿಗೆ ಪುಷ್ಪ ಅರ್ಪಿಸಿ, ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ಸುಸಂದರ್ಭದಲ್ಲಿ ಅತಿಥಿಯಾಗಿ ಆಗಮಿಸಿದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ರವರ ಮಾತೃಶ್ರೀ ಪದ್ಮಾವತಿ ಅಮ್ಮನವರನ್ನು ವಿಶೇಷವಾಗಿ ಗೌರವ ಪೂರ್ವಕವಾಗಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಹಾಗೂ ನವಶಕ್ತಿ ಸ್ವರೂಪದ ನವನಾರಿಯರಾದ ಅಮರಾಜಿ, ಸುಮಿತ್ರಾ, ಚಂದನಾ, ದೀಪಾ ಉಮೇಶ್ ರಾವ್, ಅನಿತಾ ಸಿಕ್ವೇರಾ, ಸೌಮ್ಯ ಕುಲದೀಪ್, ದಿವ್ಯಾ ಪಡಿವಾಳ್, ರೇಷ್ಮಾ ವರ್ಮಾ ಹಾಗೂ ಪ್ರಿಯಾ ಕ್ವಿನಿ ರೋಡ್ರಿಗಸ್ ಇವರನ್ನು ಸನ್ಮಾನಿಸಲಾಯಿತು. ಸನ್ಮಾನಿತಗೊಂಡ ದೀಪಾ ಉಮೇಶ್ ರಾವ್ ಹಾಗೂ ಪ್ರಿಯಾ ಕ್ವಿನಿ ರೋಡ್ರಿಗಸ್ ಇಂದಿನ ಕಾರ್ಯಕ್ರಮದ ಕುರಿತು ಅನಿಸಿಕೆಗಳನ್ನು ಹಂಚಿಕೊಂಡರು. ಎಕ್ಸಲೆಂಟ್ ಸಿ ಬಿ ಎಸ್ ಇ ಶಾಲೆಯ ಪ್ರಾಂಶುಪಾಲರಾದ ಪ್ರಸಾದ್, ಅಪೇಕ್ಷರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನೆರವೇರಿಸಿಕೊಟ್ಟರು. ಈ ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿಯಾದ ಅರ್ಚನಾ ಹಾಗೂ ಸ್ವಾತಿಯಾವರು ನೆರವೇರಿಸಿ ಎಕ್ಸಲೆಂಟ್ ಸಿಬಿಎಸ್ಇ ಶಾಲೆಯ ಪ್ರಾಂಶುಪಾಲರಾದ ಪ್ರಸಾದ್ ರವರು ವಂದಿಸಿದರು.

ವಿದ್ಯಾರ್ಥಿಗಳ ಬದುಕಿಗೆ ವಿದ್ಯಾಪ್ರೋತ್ಸಾಹ ಧನ ಶೈಕ್ಷಣಿಕ ಅಡಿಗಲ್ಲು: ಅಜಿತ್ ಕುಮಾರ್ ಕೊಕ್ರಾಡಿ

Article Image

ವಿದ್ಯಾರ್ಥಿಗಳ ಬದುಕಿಗೆ ವಿದ್ಯಾಪ್ರೋತ್ಸಾಹ ಧನ ಶೈಕ್ಷಣಿಕ ಅಡಿಗಲ್ಲು: ಅಜಿತ್ ಕುಮಾರ್ ಕೊಕ್ರಾಡಿ

ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಪರಿಪೂರ್ಣತೆಯತ ಸಾಗಬೇಕಾದರೆ ಶಿಕ್ಷಣವು ಬಹಳ ಮುಖ್ಯವಾಗಿ ಬೇಕು. ಶಿಕ್ಷಣ ಎನ್ನುವುದು ಅವರ ಬದುಕಿಗೆ ಭದ್ರತೆಯ ಅಡಿಗಲ್ಲು ಆಗಬೇಕಾದರೆ ಇಂತಹ ವಿದ್ಯಾ ಪ್ರೋತ್ಸಾಹ ಧನದ ಅವಶ್ಯಕತೆ ಖಂಡಿತ ಇದೆ. ಅಂತಹ ಕಾರ್ಯವನ್ನು ಮಾಡುತ್ತಿರುವ ಕೆಲ್ಲಗುತ್ತು ಕಿನ್ಯಮ ಯಾನೆ ಗುಣಾವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ಹಾಗೂ ಬೆಳ್ತಂಗಡಿ ತಾಲೂಕಿನ ಸಮಸ್ತ ಶ್ರಾವಕ ಹಾಗೂ ಶ್ರಾವಿಕೆಯರ ಈ ಕಾರ್ಯವು ಮಹತ್ತರವಾಗಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳುವುದರೊಂದಿಗೆ ಮೌಲ್ಯಾಧಾರಿತ ಬದುಕನ್ನು ಕಟ್ಟಿಕೊಳ್ಳಿ. ಅಂತಹ ಮೌಲ್ಯವೇ ನಮ್ಮ ನಿಮ್ಮೆಲ್ಲರ ಬದುಕಿನ ಭೂಷಣವಾಗಲಿ ಎಂದು ಗೇರುಕಟ್ಟೆ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿರವರು ಮಾತಾಡಿದರು. ಅವರು ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಯ ಸಮುಚ್ಛಯದಲ್ಲಿ ಇರುವ ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮನವರ 36ನೇ ಪುಣ್ಯತಿಥಿಯ ಸಂದರ್ಭದಲ್ಲಿ ಶ್ರೀ ಅತಿಶಯ ಕ್ಷೇತ್ರ ಹುಂಬುಜ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಶ್ರೀಮದ್ದದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬೆಳ್ತಂಗಡಿಯ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಜಯವರ್ಮರಾಜ ಬಳ್ಳಾಲ್ ರವರು ವಹಿಸಿಕೊಂಡು ಸಭೆಯನ್ನು ಮುನ್ನಡೆಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಡಾ. ಪ್ರಿಯ ಬಳ್ಳಾಲ್ ರವರು ಟ್ರಸ್ಟ್ ವತಿಯಿಂದ ನೀಡುತ್ತಿರುವ ವೈದ್ಯಕೀಯ ನೆರವಿನ ಕುರಿತು ವಿವರವಾಗಿ ಮಾಹಿತಿಗಳನ್ನು ಹಂಚಿಕೊಂಡರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕೆ.ರಾಜವರ್ಮ ರಾಜ ಬಳ್ಳಾಲ್ ಹಾಗೂ ಮಾಲಾಡಿ ಗುತ್ತು ವಜ್ರ ಕುಮಾರ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಟ್ರಸ್ಟ ಹಾಗೂ ದಾನಿಗಳ ಸಹಕಾರದಿಂದ ಈ ವರ್ಷ 753 ವಿದ್ಯಾರ್ಥಿಗಳಿಗೆ 22,10,550 ರೂಪಾಯಿಯನ್ನು ವಿದ್ಯಾಪ್ರೋತ್ಸಾಹ ಧನವಾಗಿ ವಿತರಿಸಲಾಯಿತು. ಇದೇ ರೀತಿ ಈ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ಕಳೆದ 25 ವರ್ಷಗಳಿಂದ ನೀಡುತ್ತಾ ಬಂದಿರುವುದು ನಮ್ಮ ಸಮಾಜಕ್ಕೆ ಇದೊಂದು ಹೆಮ್ಮೆಯ ಸಂಗತಿಯಾಗಿದೆ. ಇಷ್ಟು ಮಾತ್ರವಲ್ಲದೆ 12 ಜನರಿಗೆ ಕ್ಯಾನ್ಸರ್ ಹಾಗೂ ಇನ್ನಿತರ ವೈದ್ಯಕೀಯ ಚಿಕಿತ್ಸೆಗಾಗಿ ನೀಡಿರುವ ಸಹಕಾರವನ್ನು ನೆನಪಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡು, ವಕೀಲರಾದ ಶಶಿಕಿರಣ್ ಜೈನ ಸ್ವಾಗತಿಸಿ, ಧವಳ ಸಹಕರಿಸಿ, ನಿರಂಜನ್ ಜೈನ್ ಧನ್ಯವಾದ ಸಲ್ಲಿಸಿ, ಧರಣೇಂದ್ರ ಕೆ ಜೈನ್ ಕಾರ್ಯಕ್ರಮ ಸಂಯೋಜಿಸಿ ನಿರ್ವಹಿಸುವುದರೊಂದಿಗೆ ಸಮಾಪನಗೊಂಡಿತು.

ಹೊಂಬುಜ ಶ್ರೀ ಜೈನ ಮಠದಲ್ಲಿ ಶ್ರೀಶರನ್ನವರಾತ್ರಿ ವಿಶೇಷ ಪೂಜಾ ಮಹೋತ್ಸವ

Article Image

ಹೊಂಬುಜ ಶ್ರೀ ಜೈನ ಮಠದಲ್ಲಿ ಶ್ರೀಶರನ್ನವರಾತ್ರಿ ವಿಶೇಷ ಪೂಜಾ ಮಹೋತ್ಸವ

ಶಿವಮೊಗ್ಗ: ಹೊಂಬುಜ ಶ್ರೀ ಜೈನ ಮಠದಲ್ಲಿ ಶ್ರೀಶರನ್ನವರಾತ್ರಿ ವಿಶೇಷ ಪೂಜಾ ಮಹೋತ್ಸವವು 22-09-2025 ರಿಂದ 02-10-2025 ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ವಿಜಯದಶಮಿಯವರೆಗೆ ಶಕ್ತಿ ದೇವಿಗೆ ವಿವಿಧ ಅಲಂಕಾರಗಳಿಂದ ವಿಶೇಷ ಪೂಜೆ ನೆರವೇರಲಿದೆ. 22-09-2025 ಸೋಮವಾರ ಘಟಸ್ಥಾಪನೆ: ಹೂವಿನ ಅಲಂಕಾರ 23-09-2025, ಮಂಗಳವಾರ ಭೈರವಿ ಪದ್ಮಾವತಿ ದರ್ಶನ 24-09-2025, ಬುಧವಾರ ಮುತ್ತಿನ ಅಲಂಕಾರ 25-09-2025, ಗುರುವಾರ ಹಣ್ಣಿನ ಅಲಂಕಾರ 26-09-2025, ಶುಕ್ರವಾರ (ಲಕ್ಷಹೂವಿನ ಪೂಜೆ) ಸುವರ್ಣ ಅಲಂಕಾರ 27-09-2025, ಶನಿವಾರ ಸೀರೆ ಅಲಂಕಾರ 28-09-2025, ಭಾನುವಾರ ಧಾನ್ಯಗಳ ಅಲಂಕಾರ 29-09-2025 ಸೋಮವಾರ (ಸರಸ್ವತಿ ಪೂಜೆ) ನವಿಲಿನ ಅಲಂಕಾರ 30-09-2025. ಮಂಗಳವಾರ (ಜೀವದಯಾಷ್ಟಮಿ) ಬಳೆ ಅಲಂಕಾರ 01-10-2025, ಬುಧವಾರ (ಆಯುಧ ಪೂಜೆ) ಸುವರ್ಣ ಅಲಂಕಾರ 02-10-2025, ಗುರುವಾರ (ವಿಜಯದಶಮಿ) ಸುವರ್ಣ ಅಲಂಕಾರ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಪಲ್ಲಕ್ಕಿ ಉತ್ಸವದೊಂದಿಗೆ ಬನ್ನಿ ಮಂಟಪದವರೆಗೆ ಸ್ಯಾಕ್ರೋಫೋನ್, ಚಂಡೆ, ಡೊಳ್ಳುಕುಣಿತ, ಸಕಲ ಮಂಗಲವಾದ್ಯಗಳೊಂದಿಗೆ ಸಾಲಾಂಕೃತ ಶೋಭಾಯಾತ್ರೆ ನಡೆಯಲಿದೆ.

ಧರ್ಮಸ್ಥಳದಲ್ಲಿ 27 ನೇ ವರ್ಷದ ಭಜನಾ ಕಮ್ಮಟ: ಉದ್ಘಾಟನಾ ಸಮಾರಂಭ

Article Image

ಧರ್ಮಸ್ಥಳದಲ್ಲಿ 27 ನೇ ವರ್ಷದ ಭಜನಾ ಕಮ್ಮಟ: ಉದ್ಘಾಟನಾ ಸಮಾರಂಭ

ಉಜಿರೆ: ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸಿನಿಂದ ರಾಗ, ತಾಳ, ಲಯಬದ್ಧವಾಗಿ ಭಜನೆ ಮಾಡುವುದರಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ 27 ನೇ ವರ್ಷದ ಭಜನಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು. ಭಜನೆಯಿಂದ ಸುಲಭದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು, ಭಜನೆಯಿಂದ ಜನಜಾಗೃತಿ ಉಂಟಾಗಿ ಎಲ್ಲರೂ ಸಮಾನರಾಗಿ, ಗುರು-ಹಿರಿಯರಿಂದ ಮಾರ್ಗದರ್ಶನ, ಪ್ರೇರಣೆ ಪಡೆದು ದೃಢಭಕ್ತಿ ಮತ್ತು ಪರಿಶುದ್ಧ ಮನಸಿನಿಂದ ಭಜನೆ ಮಾಡಿದಾಗ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ. ದಾಸರ ಪದಗಳು, ಭಾಗ್ಯದ ಲಕ್ಷ್ಮೀ ಬಾರಮ್ಮ ಮೊದಲಾದ ಭಜನೆಗಳು ನಮಗೆ ಸಾರ್ಥಕ ಜೀವನದ ಪಾಠವನ್ನು ಕಲಿಸುತ್ತವೆ ಎಂದು ಡಾ. ಮೋಹನ ಆಳ್ವ ಹೇಳಿದರು. ಮಾಣಿಲದ ಮೋಹನದಾಸ ಸ್ವಾಮೀಜಿ ಶುಭಶಂಸನೆ ಮಾಡಿ, ಭಜನಾ ತರಬೇತಿ ಪಡೆದವರು ತಮ್ಮ ಮಕ್ಕಳಿಗೂ ಭಜನೆಯ ಮೂಲಕ ಉತ್ತಮ ಸಂಸ್ಕಾರ ನೀಡಬೇಕು. ಭಜನೆ ಮಾಡುವಾಗ ನಿತ್ಯವೂ ಶಿವಪಂಚಾಕ್ಷರಿ ಪಠಣ ಮಾಡಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಭಜನಾ ತರಬೇತಿ ಪಡೆದವರು ಶಿಸ್ತು, ಸಮಯಪಾಲನೆ, ಸ್ವಚ್ಛತೆಯೊಂದಿಗೆ ನಾಯಕತ್ವಗುಣವನ್ನೂ ಬೆಳೆಸಿಕೊಂಡು ಪ್ರಗತಿಯ ರೂವಾರಿಗಳಾಗಬೇಕು. ಸಂಸ್ಕೃತಿ ಪ್ರಸಾರದ ರಾಯಭಾರಿಗಳಾಗಿ ಎಲ್ಲರನ್ನೂ ನಮ್ಮವರೇ ಎಂದು ಭಾವಿಸಿ ವಿಶ್ವಮಾನವರಾಗಿ ಸಮಾಜಸೇವೆ ಮಾಡಬೇಕು. ನೃತ್ಯ ಭಜನೆಗೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಭಜನಾ ಕಮ್ಮಟದ ಕಾಯದರ್ಶಿ ಎ.ವಿ. ಶೆಟ್ಟಿ ವರದಿ ಸಾದರ ಪಡಿಸಿದರು. ಭಜನಾಕಮ್ಮಟದ ಸಂಚಾಲಕ ಸುಬ್ರಹ್ಮಣ್ಯಪ್ರಸಾದ್ ಪ್ರಾಸ್ತಾವಿಕವಾಗಿ ಮಾತುಗಳೊಂದಿಗೆ ಸ್ವಾಗತಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಪದ್ಮರಾಜ್ ಧನ್ಯವಾದವಿತ್ತರು. ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪದ್ಮಶ್ರೀ ಕಾರ್ಯಕ್ರಮ ನಿರ್ವಹಿಸಿದರು. 111 ಪುರುಷರು ಹಾಗೂ 71 ಮಹಿಳೆಯರು ಸೇರಿದಂತೆ ಒಟ್ಟು 182 ಶಿಬಿರಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸುತ್ತಿದ್ದಾರೆ.

ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಸಂಸ್ಮರಣಾ ಸಮಾರಂಭ

Article Image

ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಸಂಸ್ಮರಣಾ ಸಮಾರಂಭ

ಮಂಗಳೂರಿನ ಧವಳ ಕೋ-ಆಪರೇಟಿವ್‌ ಸೊಸೈಟ (ರಿ.), ಇದರ ಆಶ್ರಯದಲ್ಲಿ 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ 300 ವರ್ಷಗಳ ಮೊದಲೇ ಸ್ವಾತಂತ್ರ್ಯದ ವೀರ ಕಹಳೆಯನ್ನು ಮೊಳಗಿಸಿ, ವಸಾಹತುಶಾಹಿಗಳ ಆಕ್ರಮಣವನ್ನು ನಾಲ್ಕು ದಶಕಗಳಕಾಲ ಹಿಮ್ಮೆಟ್ಟಿದ ಮೊಟ್ಟಮೊದಲ ಭಾರತೀಯ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ! ಅಚಲ ಧೈರ್ಯದ ಕಾರಣಕ್ಕೆ ಅವಳನ್ನು 'ಅಭಯ ರಾಣಿ' ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಸಂಸ್ಮರಣಾ ಸಮಾರಂಭವು ಮಂಗಳೂರಿನ ಜೈನ್ ಬೋರ್ಡಿಂಗ್ ಸಿದ್ಧಾರ್ಥ ಸಭಾಭವನದಲ್ಲಿ ಸೆ. 21ರಂದು ಭಾನುವಾರ, ಸಂಜೆ 4.30ಕ್ಕೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅತ್ಯಾಧುನಿಕ ನೇತ್ರ ಚಿಕಿತ್ಸೆ ಧಾರವಾಡದಲ್ಲಿ

Article Image

ಅತ್ಯಾಧುನಿಕ ನೇತ್ರ ಚಿಕಿತ್ಸೆ ಧಾರವಾಡದಲ್ಲಿ

ಎಸ್‌ಡಿಎಮ್ ವಿಶ್ವವಿದ್ಯಾಲಯ ಧಾರವಾಡದ, ಎಸ್‌ಡಿಎಮ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನೇತ್ರ ಚಿಕಿತ್ಸಾ ವಿಭಾಗದಲ್ಲಿ 01.09.2025 ರಂದು ಅತ್ಯಾಧುನಿಕ ಕೋರ್ನಿಯಲ್ ಟೊಪೋಗ್ರಾಫಿ ಯಂತ್ರ ಹಾಗೂ ಸ್ಪೆಕ್ಯುಲರ್ ಮೈಕ್ರೋಸ್ಕೋಪ್ ಉಪಕರಣಗಳನ್ನು ಮಾನ್ಯ ಉಪ ಕುಲಪತಿಗಳಾದ ಹಾಗೂ ಪ್ರಸಿದ್ಧ ಪ್ಲಾಸ್ಟಿಕ್ ಸರ್ಜನ್ ಡಾ. ನಿರಂಜನ್ ಕುಮಾರ್ ಅವರು ಉದ್ಘಾಟಿಸಿದರು. ನೇತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ. ಅನುಪಮಾ ಎಸ್. ದೇಸಾಯಿ ಅವರು ಉಪಕರಣಗಳ ಉಪಯೋಗಗಳನ್ನು ವಿವರಿಸುತ್ತಾ ಕೋರ್ನಿಯಾ ಮೇಲ್ಮೆöÊ ನಿಖರ ನಕ್ಷೆ ತಯಾರಿಸಲು ನೆರವಾಗುತ್ತವೆ. ಕ್ಯಾರಟೊಕೋನಸ್, ಅಸ್ಟಿಗ್ಮಾಟಿಸಂ, ರೆಫ್ರಾಕ್ಟಿವ್ ಶಸ್ತ್ರಚಿಕಿತ್ಸೆ, ಡ್ರೈ ಐ ರೋಗಗಳ ತಪಾಸಣೆಗೆ ಸಹಾಯಕವಾಗುತ್ತವೆ” ಎಂದರು ತಿಳಿಸಿದರು. ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ ಮಾತನಾಡುತ್ತ ಈ ಸೌಲಭ್ಯದಿಂದ ಧಾರವಾಡ ಹಾಗೂ ಸುತ್ತಮುತ್ತಲಿನ ಜನತೆಗೆ ಜಾಗತಿಕ ಮಟ್ಟದ ನೇತ್ರ ಚಿಕಿತ್ಸಾ ಸೇವೆ ಲಭ್ಯವಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಹಣಕಾಸು ಅಧಿಕಾರಿಗಳಾದ ವಿ.ಜಿ. ಪ್ರಭು, ಎಸ್.ಡಿ.ಎಮ್. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿ.ಎಮ್. ಶೆಟ್ಟರ್, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗಡೆ, ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ಮಗ್ದುಮ್ ಕಿಲ್ಲೇದಾರ್, ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ, ಡಾ. ಶಂಕರಗೌಡಾ ಪಾಟೀಲ್ ಹಾಗೂ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Article Image

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

ಉಜಿರೆ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥಕ್ಷೇತ್ರದಲ್ಲಿ ಶನಿವಾರ ಚಂದನ ಷಷ್ಠಿ ನೋಂಪಿ ವಿಧಾನದ ಉದ್ಯಾಪನಾ ಕಾರ್ಯಕ್ರಮ ವಿಧಿ-ವಿಧಾನಗಳೊಂದಿಗೆ ಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಮೂರೂ ಬಸದಿಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಬಳಿಕ ಸಾಮೂಹಿಕ ಪಂಚನಮಸ್ಕಾರ ಮಂತ್ರ ಪಠಣದ ಬಳಿಕ ಸಾಮೂಹಿಕ ಅಷ್ಟವಿಧಾರ್ಚನೆ ಪೂಜೆ ನಡೆಯಿತು. ಚಂದ್ರಪ್ರಭ ತೀರ್ಥಂಕರರ ಪೂಜೆ, ಭಗವಾನ್ ಶಾಂತಿನಾಥ ಸ್ವಾಮಿ ಪೂಜೆ, ನವದೇವತೆಗಳ ಪೂಜೆ, ಪಂಚಪರಮೇಷ್ಠಿಗಳ ಪೂಜೆ, ಕ್ಷೇತ್ರಪಾಲಪೂಜೆ, ಪದ್ಮಾವತಿ ದೇವಿಪೂಜೆ, ಬ್ರಹ್ಮಯಕ್ಷ ಪೂಜೆ, ಭಗವಾನ್ ಬಾಹುಬಲಿ ಸ್ವಾಮಿ ಪೂಜೆ ಮತ್ತು ಶ್ರುತ ಪೂಜೆ ನಡೆಸಲಾಯಿತು. 108 ಮಂತ್ರಪುಷ್ಟ ಅರ್ಚನೆ ಬಳಿಕ ಜಯಮಾಲಾ ಅರ್ಘ್ಯ ಅರ್ಪಿಸಲಾಯಿತು. ಬಸದಿಯ ಪ್ರಧಾನ ಅರ್ಚಕ ಕೆ. ಜಯರಾಜ ಇಂದ್ರರ ನೇತೃತ್ವದಲ್ಲಿ ನವೀನ ಕುಮಾರ ಇಂದ್ರ ಮತ್ತು ಕೆ. ಮಹಾವೀರ ಇಂದ್ರರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಧರ್ಮಸ್ಥಳದ ಸೌಮ್ಯ ಸುಭಾಶ್ ಮತ್ತು ಬಳಗದವರ ಜಿನಭಜನೆಗಳ ಸುಶ್ರಾವ್ಯ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು. ಮೂಡಬಿದ್ರೆಯ ಸರ್ವೇಶ್ ಜೈನ್ ಮತ್ತು ಬಳಗದವರಿಂದ ಜಿನಭಕ್ತಿ ಗೀತೆಗಳ ಗಾಯನ ನಡೆಯಿತು. ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ್ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಶ್ರೀನಾಥ್ ಬಳ್ಳಾಲ್, ವಿನಯಾ ಜೆ. ಬಳ್ಳಾಲ್, ವೈಶಾಲಿ ಬಳ್ಳಾಲ್, ಡಾ. ಪ್ರಿಯಾ ಬಳ್ಳಾಲ್, ವಿಜಯಾ ಬ್ಯಾಂಕ್ ನಿವೃತ್ತ ಮೇನೇಜರ್ ಎಂ. ಜಿನರಾಜ ಶೆಟ್ಟಿ ಮತ್ತು ಬಳ್ಳಾಲ್ ಕುಟುಂಬಸ್ಥರು ಉಪಸ್ಥಿತರಿದ್ದರು. 18 ಮಂದಿ ಚಂದನ ಷಷ್ಠಿ ನೋಂಪಿ ವ್ರತಧಾರಿಗಳಲ್ಲಿ 8 ಮಂದಿ 6 ವರ್ಷಗಳನ್ನು ಪೂರೈಸಿದ್ದು ನೋಂಪಿ ಉದ್ಯಾಪನೆ ಮಾಡಿದರು. ನೋಂಪಿ ವ್ರತಧಾರಿಗಳಾದ ಕುಂಡದಬೆಟ್ಟು ವಿನಯಮ್ಮ, ಸಬ್ರಬೈಲು ಸುಮಲತಾ ಜೀವಂಧರ ಚೌಟ ಮತ್ತು ಸುಜಾತ ಧನಕೀರ್ತಿ ಆರಿಗ ಧರ್ಮಸ್ಥಳ ಪ್ರಕಟಿಸಿದ “ಚಂದನ ಷಷ್ಠಿ ನೋಂಪಿ ವಿಧಾನ” ಕೃತಿಯನ್ನು ಸ್ವಾಮೀಜಿ ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಕೃತಿಯನ್ನು ಎಲ್ಲರಿಗೂ ಶಾಸ್ತ್ರದಾನವಾಗಿ ವಿತರಿಸಲಾಯಿತು. ಸ್ವಾಮೀಜಿಯವರಿಂದ ಮಂಗಲಪ್ರವಚನ: ನೋಂಪಿಗಳಿಂದ ಕರ್ಮನಿರ್ಜರೆಯಾಗಿ ಮೋಕ್ಷ ಪ್ರಾಪ್ತಿ: ಉಪನ್ಯಾಸ ಹಾಗೂ ಕಠಿಣವ್ರತ ನಿಯಮಗಳ ಪಾಲನೆಯೊಂದಿಗೆ ಚಂದನ ಷಷ್ಠಿಯಂತಹ ಪವಿತ್ರ ನೋಂಪಿಗಳನ್ನು ಮಾಡಿದರೆ ನಮ್ಮ ಕರ್ಮಗಳ ನಿರ್ಜರೆಯಾಗಿ ರೋಗಗಳೂ ನಿವಾರಣೆಯಾಗಿ ಶಾಶ್ವತ ಸುಖವನ್ನೀಯುವ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ಮಂಗಲಪ್ರವಚನ ನೀಡಿದ ಶ್ರವಣಬೆಳಗೊಳದ ಸ್ವಾಮೀಜಿ ಹೇಳಿದರು. ಹೆಚ್ಚಾಗಿ ನೋಂಪಿಗಳನ್ನು ಚಾತುರ್ಮಾಸದ ಅವಧಿಯಲ್ಲಿ ಭಾದ್ರಪದ ಮಾಸದಲ್ಲಿ ಮಾಡುತ್ತಾರೆ. ಏಕೆಂದರೆ ಭಾದ್ರಪದ ಮಾಸ ಬಹಳ ಹಿತಕರವಾಗಿದ್ದು ಆಗ ನಾವು ಮಾಡಿದ ಭಾವನೆಗಳು ಭದ್ರವಾಗುತ್ತವೆ. ಪರಿಶುದ್ಧ ತನು, ಮನದೊಂದಿಗೆ ವೃತ ನಿಯಮಗಳ ಪಾಲನೆಯೊಂದಿಗೆ ದೇವರು ಮತ್ತು ಗುರುಗಳ ಸೇವೆ, ಆರಾಧನೆ ಮಾಡಬೇಕು. ಆಧುನಿಕತೆಯ ನೆಪದಲ್ಲಿ ಎಂದೂ ಅಪವಿತ್ರ, ಅವಿನಯ ಮಾಡಬಾರದು ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದರು. ಬಸದಿಯ ಅನುವಂಶೀಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ಅಧ್ಯಕ್ಷತೆ ವಹಿಸಿದರು. ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶಿಕ್ಷಕ ಧರಣೇಂದ್ರ ಕುಮಾರ್ ಕೊನೆಯಲ್ಲಿ ಧನ್ಯವಾದವಿತ್ತರು.

ವಧು ವರರ ಅನ್ವೇಷಣೆಯಲ್ಲಿದ್ದ ಜೈನರಿಗೆ ಸುವರ್ಣಾವಕಾಶ

Article Image

ವಧು ವರರ ಅನ್ವೇಷಣೆಯಲ್ಲಿದ್ದ ಜೈನರಿಗೆ ಸುವರ್ಣಾವಕಾಶ

ಬದಲಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ವರನಿಗೆ ವಧು, ವಧುವಿಗೆ ವರ ಸುಲಭವಾಗಿ ಸಿಕ್ಕು ಮದುವೆಯಾಗುವದು ತುಂಬಾ ಕಷ್ಟಸಾದ್ಯವಾಗಿದೆ. ಅದರಲ್ಲೂ ಮುಖ್ಯವಾಗಿ ಹುಡುಗರಿಗೆ ಹುಡುಗಿಯರು ಸಿಗದಿರುವದೇ ಗಂಭೀರವಾದ ಸಮಸ್ಯೆಯಾಗಿದೆ. ಈ ಸಮಸ್ಯೆ ಎಲ್ಲಾ ಸಮುದಾಯದಲ್ಲೂ ಇದೆ ಆದರೆ ಜೈನ ಸಮುದಾಯದಲ್ಲಿ ತುಸು ಹೆಚ್ಚು ಎಂದೇ ಹೇಳಬೇಕು ( ಇದಕ್ಕೆ ಹಲವಾರು ಕಾರಣಗಳಿವೆ ಇವುಗಳನ್ನು ವಿಶ್ಲೇಶಿಸುವದು ಬೇಡ ಇದು ಎಲ್ಲರಿಗೂ ಗೊತ್ತಿದ್ದ ಸಂಗತಿ ) ಈ ವಿಷಯವಾಗಿ ಮಕ್ಕಳ ಪಾಲಕರು ಕಷ್ಟಪಡುತ್ತಿದಾರೆ ಅಷ್ಟೇ ಅಲ್ಲ ತುಂಬಾ ನೊಂದುಕೊಳ್ಳುತ್ತಿದ್ದಾರೆ. ಈ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಅನೇಕ ಮಾಹಿತಿ ಕೇಂದ್ರಗಳು, ಮೇಳಗಳು ಮತ್ತು ಮೆಟ್ರಿಮೊನಿ ಇತ್ಯಾದಿ ಸಂಸ್ಥೆಗಳು ಹುಟ್ಟಿಕೊಂಡಿವೆಯಾದರೂ ಅವೆಲ್ಲವೂ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ. "ಇಂಥ ಸಮಸ್ಯೆ ಪರಿಹಾರಕ್ಕೆ ಕಂಕಣಬದ್ದವಾಗಿದೆ ಬೆಳಗಾವಿಯ ಮಾಣಿಕಬಾಗ ದಿಗಂಬರ ಜೈನ್ ಬೋರ್ಡಿಂಗ್ ಸಂಸ್ಥೆ" ಇವೆಲ್ಲವನ್ನೂ ಗಮನಿಸಿದ ದಕ್ಷಿಣ ಭಾರತ ಜೈನ ಸಭಾದ ಅಂಗ ಸಂಸ್ಥೆ ಬೆಳಗಾವಿಯ ಮಾಣಿಕಭಾಗ ದಿಗಂಬರ ಜೈನ ಬೋರ್ಡಿಂಗಿನ ಆಡಳಿತ ಮಂಡಳಿ ಶ್ರೀ ಕುಂತಿನಾಥ ಕಲಮನಿ ಇವರ ಸಾರಥ್ಯದಲ್ಲಿ ಕಳೆದ 17 ವರ್ಷಗಳಿಂದ ಮದುವೆಗಾಗಿ ಸೂಕ್ತ ವಧು ಅಥವಾ ವರರನ್ನು ಹುಡುಕುವ ಪ್ರಕ್ರಿಯೆಯ ಭಾಗವಾಗಿ ಜೈನ್ ವಧು-ವರ ಪರಿಚಯ ಸಮಾವೇಶವನ್ನು ಅತ್ಯಂತ ಪ್ರಾಮಾಣಿಕವಾಗಿ ಹಾಗೂ ಯಶಸ್ವಿಯಾಗಿ ನಡೆಸುತ್ತಾ ಬಂದಿದೆ ಇದು ಎಷ್ಟು ಅದ್ಭುತವಾದ ಕಾರ್ಯಮಾಡುತ್ತಿದೆ ಎಂದರೆ ಪರಸ್ಪರ ಹೊಂದಾಣಿಕೆಯಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಮದುವೆಗಳು ಜರುಗಿವೆ ಹಾಗೂ ಅವರೆಲ್ಲ ಸುಖವಾಗಿ ಕೌಟುಂಬಿಕ ಜೀವನ ಸಾಗಿಸುತ್ತಾ ಈ ಸಂಸ್ಥೆಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಇದೀಗ ಈ ವರ್ಷದ 18 ನೇ ಜೈನ್ ವಧು-ವರ ಪರಿಚಯ ಸಮಾವೇಶ ಜರುಗಲಿದೆ. 17ನೇ ಸಮಾವೇಶದ ಭವ್ಯ ಯಶಸ್ಸಿನ ನಂತರ ಬಹಳಷ್ಟು ಶ್ರಾವಕ ಶ್ರಾವಿಕೆಯರ ಆಗ್ರಹ ಹಾಗೂ ವಿನಂತಿಯ ಮೇರೆಗೆ ಇದೀಗ 18ನೇ ಜೈನ್ ವಧು-ವರ ಪರಿಚಯ ಸಮಾವೇಶ ಮುಂಬರುವ ದಿನಾಂಕ 12-10-2025 ರಂದು ರವಿವಾರ ಬೆಳಗಾವಿಯ ಧರ್ಮನಾಥ ಭವನದಲ್ಲಿ ಬೆಳಿಗ್ಗೆ 9ರಿಂದ ಪ್ರಾರಂಭವಾಗಲಿದೆ. ನೋಂದಣಿ ಕಾರ್ಯ ಪ್ರಾರಂಭವಾಗಿದೆ: ಈ ಸಮಾವೇಶದಲ್ಲಿ ಭಾಗಿಯಾಗಲು ಹೆಚ್ಚಿನ ಸಂಖ್ಯೆಯ ಜನ ನೋಂದಣಿ ಮಾಡಿಸಿದ್ದಾರೆ. ಸಮಾವೇಶದ ಪ್ರಯೋಜನ ಪಡೆದುಕೊಳ್ಳಲು ತಾವೂ ರೂ 820/- ಶುಲ್ಕ ಪಾವತಿಸಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದಾಗಿದೆ. www.mdjbbelagavi.in ನೋಂದಣಿಗೆ ಕೊನೆಯ ದಿನಾಂಕ: 30/09/2025 ಇರುತ್ತದೆ. ಇದರ ಪ್ರಯೋಜನ ಪಡೆದುಕೊಳ್ಳಲು ಜೈನ ಧರ್ಮ ಬಂಧುಗಳಿಗೆ ಇದೊಂದು ದೊಡ್ಡ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 70226 91008, 94804 48108 ಈ ಸಂಖ್ಯೆಯಿಂದ ಪಡೆದುಕೊಳ್ಳಬಹುದು. ವರದಿ : ಶಾಂತರಾಜ ಮಲ್ಲಸಮುದ್ರ

ಎಕ್ಸಲೆಂಟ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Article Image

ಎಕ್ಸಲೆಂಟ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಮೂಡುಬಿದಿರೆ: ಮೂಡುಬಿದಿರೆಯ ಎಕ್ಸಲೆ0ಟ್ ವಿದ್ಯಾ ಸ0ಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಪ್ರಾ0ಶುಪಾಲರಾದ ದಿನೇಶ್ ಚೌಟ ಮಾತನಾಡುತ್ತಾ, ಶಿಕ್ಷಕರ ದಿನಾಚರಣೆ ವಿದ್ಯಾರ್ಥಿಗಳ ಪ್ರೀತಿ ಮತ್ತು ಅಭಿಮಾನಗಳ ಧ್ಯೋತಕವಾಗಿದೆ. ಡಾ. ರಾಧಾಕೃಷ್ಣ ಅವರ ಜ್ಞಾನ ಮತ್ತು ಸಾಧನೆ ಶಿಕ್ಷಣ ವೃತ್ತಿಯಲ್ಲಿರುವ ನಮಗೆಲ್ಲರಿಗೂ ಮಾದರಿ. ಅವರು ಮೇಧಾವಿಗಳಾಗಿದ್ದರೂ ತಮ್ಮ ವಿದ್ಯಾರ್ಥಿಗಳೊಂದಿಗೆ ಸರಳತೆ ಮತ್ತು ಸಜ್ಜನಿಕೆಯೊ0ದಿಗೆ ನಡೆದುಕೊಳ್ಳುತ್ತಿದ್ದರು. ಅವರ ವಿದ್ಯಾರ್ಥಿಗಳಿಂದ ಅವರಿಗೆ ಸಿಕ್ಕ ಪ್ರೀತಿ ಮತ್ತು ಗೌರವ ಎಲ್ಲಾ ಶಿಕ್ಷರಿಗೂ ಸಲ್ಲಬೇಕೆನ್ನುವ ಅವರ ಆಶಯವೇ ಅವರ ಜನ್ಮ ದಿನದಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲು ಕಾರಣವಾಯಿತು ಎಂದರು. ಒಬ್ಬ ಉತ್ತಮ ಶಿಕ್ಷಕ ಒಬ್ಬ ಶ್ರೇಷ್ಟ ಶಿಷ್ಯ ವೃಂದವನ್ನು ಹುಟ್ಟು ಹಾಕುತ್ತಾನೆ. ಅಂಥಹ ಶಿಕ್ಷಕರ ಸಾಲಿನಲ್ಲಿ ನನಗೆ ಅಗ್ರ ಪಂಕ್ತಿಯಲ್ಲಿ ಕಂಡು ಬರುವುದು ನೋಬಲ್ ಪ್ರಶಸ್ತಿ ವಿಜೇತ ಜೆ ಜೆ ಥಾಮ್ಸನ್. ಕೇವಲ ಆತನಷ್ಟೇ ಅಲ್ಲದೆ ಆತನಿಂದ ಪ್ರಭಾವಿತರಾಗಿ ಒಟ್ಟು ಏಳು ಜನ ಶಿಷ್ಯರು ತಮ್ಮ ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿ ನೋಬಲ್ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಅದು ಅತ್ಯಂತ ಶ್ಲಾಘನೀಯವಾದ ವಿಚಾರ. ಇಂದು ನನ್ನ ಶಿಷ್ಯರಲ್ಲೊಬ್ಬರಾದ ಯುವರಾಜ ಜೈನರ ಸಾಧನೆ ನನಗೆ ಅತ್ಯಂತ ಸಂತಸವನ್ನುಂಟು ಮಾಡಿದೆ. ಇವರ ಸಾಧನೆ ಇತರರಿಗೂ ಪ್ರೇರಣೆಯಾಗಲಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಮಾತನಾಡುತ್ತಾ ಒಳ್ಳೆಯ ಗುರುವನ್ನು ಪಡೆಯಲು ಹಾಗೂ ಒಳ್ಳೆಯ ಶಿಷ್ಯವೃಂದವನ್ನು ಪಡೆಯಲು ಯೋಗ ಬೇಕು. ನಾನು ಉಪನ್ಯಾಸಕ ವೃತ್ತಿಯನ್ನು ಆರಂಭಿಸಿದಾಗ ನನಗೆ ಪಾಠ ಮಾಡಿದ ಗುರುಗಳೇ ನನ್ನ ಸಹೋದ್ಯೋಗಿಗಳಾಗಿದ್ದರು. ಈ ರೀತಿ ನಮ್ಮ ವಿಭಾಗದಲ್ಲಿ ನಾಲ್ಕು ತಲೆಮಾರುಗಳ ಗುರು ಶಿಷ್ಯ ಪರಂಪರೆ ಇತ್ತು. ನನ್ನನ್ನು ಆಸಂದರ್ಭದಲ್ಲಿ ಕೈ ಹಿಡಿದು ನಡೆಸಿದ ಗುರುಗಳಿಗೆ ನಾನು ಋಣಿ ಎಂದರು. ನನ್ನ ಗುರುಗಳ ಕರ್ತವ್ಯ ಪ್ರಜ್ಞೆ, ಶಿಷ್ಯರೆಡೆಗೆ ಅವರು ತೋರುವ ಪ್ರೀತಿ ನನಗೆ ಪ್ರೇರಣೆಯಾಗಿದೆ. ಸಮಾಜದಲ್ಲಿ ಏನೇ ಕಷ್ಟ ಬಂದರೂ ಅದನ್ನು ಎದುರಿಸಲು ತಯಾರಿರಬೇಕು. ಅದು ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಸಾಧ್ಯ. ಕೊಡೆ ಮಳೆಯನ್ನು ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ ಮಳೆಯಿಂದ ರಕ್ಷಣೆ ನೀಡುತ್ತದೆ. ಈ ಸಂಸ್ಥೆಯಲ್ಲಿ ಶಿಕ್ಷಣದೊಂದಿಗೆ ಸಿಗುವ ಸಂಸ್ಕಾರ ಮು0ದೆ ಬದುಕನ್ನು ಎದುರಿಸಲು ನಿಮಗೆ ದಾರಿದೀಪವಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಹೇಳಿದರು. ಸಭೆಯಲ್ಲಿ ಉಪಸ್ಥಿತರಿದ್ದ ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ ಮೂಡು ಮಾರ್ನಾಡಿನ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಡಾ. ರಾಜಶ್ರೀ ಬಿ. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ಧನಕನಕಾದಿಗಳಿಂದ ಬದುಕು ಭವ್ಯವಾಗಬಲ್ಲದೇ ಹೊರತು ದಿವ್ಯವಾಗುವುದಿಲ್ಲ. ಜೀವನದಲ್ಲಿ ಹಣ ಗಳಿಸುವುದು ಇದ್ದೇ ಇದೆ. ಆದರೆ ಸಮಾಜಕ್ಕೆ ಕೊಡುಗೆ ನೀಡುವುದರ ಕುರಿತು ಕೂಡ ತಮ್ಮ ಗಮನವಿರಲಿ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯಿಂದ ಜೀವನವನ್ನು ಬೆಳಗಿಸಿಕೊಂಡು ಹೋಗುವುದೇ ಗುರುಗಳಾದವರಿಗೆ ಕೊಡಬಹುದಾದ ದೊಡ್ಡ ಗುರುದಕ್ಷಿಣೆ ಎಂದರು. ಸನ್ಮಾನಕ್ಕೆ ಉತ್ತರಿಸಿದ ರಾಷ್ಟ್ರ ಮಟ್ಟದ ವಿಕಸನ ತರಬೇತುದಾರರು ಹಾಗೂ ಪ್ರಶಸ್ತಿ ವಿಜೇತ ಶಿಕ್ಷಕರಾದ ಜೇಸಿ ರಾಜೇ0ದ್ರ ಭಟ್ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿ ತನ್ನ ಬುದ್ಧಿವಂತಿಕೆಯ ಅನುಸಾರ ತಾನು ಬೇರೆ ಕೋರ್ಸುಗಳನ್ನು ಆಯ್ಕೆ ಮಾಡಲು ಅವಕಾಶವಿದ್ದರೂ ಶಿಕ್ಷಕಿಯಾಗಿದ್ದ ತನ್ನ ತಾಯಿಗೆ ಸಮಾಜದಲ್ಲಿ ಸಿಗುತ್ತಿದ್ದ ಗೌರವಾದರಗಳನ್ನು ಕಂಡು ಶಿಕ್ಷಕ ವೃತ್ತಿಯನ್ನು ಆಯ್ದುಕೊಂಡೆ. ಭಾರತ ಗುರು ಪರಂಪರೆಗೆ ಹೆಸರುವಾಸಿಯಾಗಿದೆ. ಜಗತ್ತಿನ ಶ್ರೇಷ್ಟ ವಿಶ್ವ ವಿದ್ಯಾನಿಲಯಗಳಲ್ಲಿ ಹದಿನೆಂಟು ವಿಶ್ವವಿದ್ಯಾನಿಲಯಗಳು ಒಂದು ಕಾಲದಲ್ಲಿ ಭಾರತದಲ್ಲಿತ್ತು. ವಿದೇಶಿಗರ ಆಕ್ರಮಾಣದಿಂದ ಭಾರತದ ಜ್ಞಾನ ಸ0ಪತ್ತು ನಾಶವಾದರೂ ಗುರುವಿನ ಛಲದಿಂದ ಕೆಲವೇ ವರ್ಷಗಳಲ್ಲಿ ಅದನ್ನು ಮರುಕಳಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಇದು ಪ್ರಪಂಚದಲ್ಲಿ ಎಲ್ಲೂ ನಡೆದಿಲ್ಲ. ಅವತಾರ ಪುರುಷರಿಗೂ ಗುರುಗಳಿದ್ದರು ಎ0ಬುದೇ ನಮ್ಮ ದೇಶದ ಗುರುಪರಂಪರೆಯ ಮಹತ್ವಕ್ಕೆ ಸಾಕ್ಷಿ. ಕೇವಲ ಪಾಠಕ್ಕೆ ಸೀಮಿತವಾಗಿರದೆ ಜೀವನಕ್ಕೆ ಸಜ್ಜುಗೊಳಿಸುವವನೇ ನಿಜವಾದ ಗುರು ಎಂದರು. ಉಜಿರೆ ಎಸ್ ಡಿ ಎಂ ಕಾಲೇಜಿನ ಸಹ ಪ್ರಾಧ್ಯಾಪಕರಾದ ಗಜಾನನ ಆರ್ ಭಟ್ ಸನ್ಮಾನಕ್ಕೆ ಉತ್ತರಿಸುತ್ತಾ ತಾನು ಕರ್ತವ್ಯ ನಿಷ್ಠೆಗೆ ಹೆಸರಾದ ಅನೇಕ ಹಿರಿಯ ಶಿಕ್ಷಕರಿಂದ ಸ್ಪೂರ್ತಿಯನ್ನು ಪಡೆದುಕೊಂಡಿದ್ದೇನೆ. ಬದುಕಿನಲ್ಲಿ ಜ್ಞಾನವನ್ನು ಗಳಿಸಲು ಕಷ್ಟಪಡಲೇ ಬೇಕು. ಕಷ್ಟ ಸಹುಷ್ಣುತೆ ಇದ್ದಲ್ಲಿ ಆತ್ಮ ವಿಶ್ವಾಸ ಬೆಳೆಯುತ್ತದೆ. ಆಗ ಮಾತ್ರ ಸಾಧನೆ ಸಾಧ್ಯ. ಪ್ರಾಮಾಣಿಕತೆಯಿಂದ ಒಂದು ಸಂಸ್ಥೆಯನ್ನು ಎತ್ತರಕ್ಕೆ ಕೊಂಡೊಯ್ಯಬಹುದು ಅನ್ನುವುದಕ್ಕೆ ಎಕ್ಸಲೆಂಟ್ ವಿದ್ಯಾ ಸ0ಸ್ಥೆಯೇ ಸಾಕ್ಷಿ ಎಂದರು. ಸನ್ಮಾನಿತರಾದ ಎಸ್ ಡಿ ಎಂ ಕಾಲೇಜಿನ ಉಪಪ್ರಾ0ಶುಪಾಲರಾದ ನಂದಾ ಕುಮಾರಿ ಕೆ ಪಿ ಮಾತನಾಡುತ್ತಾ ಈ ಕಲ್ಲಬೆಟ್ಟುವಿನ ಕಲ್ಲು ಕಲ್ಲುಗಳಲ್ಲಿ ಹೂವುಗಳನ್ನು ಅರಳಿಸುವ ಕೆಲಸವನ್ನು ಯುವರಾಜ ಜೈನ್ ರಶ್ಮಿತಾ ಜೈನ್ ದ0ಪತಿಗಳು ಮಾಡಿದ್ದಾರೆ. ಈ ಸಂಸ್ಥೆ ಈಗಾಗಲೇ ರಾಜ್ಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ನನ್ನ ವಿದ್ಯಾರ್ಥಿಯ ಸಾಧನೆಗೆ ಹೃದಯ ತುಂಬಿ ಬಂದಿದೆ. ವಿದ್ಯೆಗೆ ವಿನಯವೇ ಭೂಷಣ ಅನ್ನುವ ಮಾತಿನ0ತೆ ಸಾಧನೆಗೆ ಗುರುಗಳೇ ಕಾರಣ ಅನ್ನುವ ಅವರ ಮನೋಭಾವವೇ ಅವರನ್ನು ಈ ಎತ್ತರಕ್ಕೇರಿಸಿದೆ. ಈ ಸ0ಸ್ಥೆ ಇನ್ನು ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟಗಳಲ್ಲೂ ಬೆಳಗಲಿ ಎಂದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡುತ್ತಾವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಸದಾ ಕಾರ್ಯಪ್ರವೃತ್ತರಾಗಿರುವ ಶಿಕ್ಷಕರು ಜಗತ್ತಿನಾದ್ಯಂತ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡುತ್ತಾ ಬಂದಿದ್ದಾರೆ. ತಂತ್ರಜ್ಞಾನ ಎಷ್ಟೇ ಮುಂದುವರೆದರೂ ವಿದ್ಯಾರ್ಥಿಯ ಉದ್ಧಾರ ಆಗಬೇಕೆಂದರೆ ಗುರುವಿನ ಸಾಂಗತ್ಯ ಇರಲೇಬೇಕು. ಹಾಗಾಗಿ ಗುರು ಶಿಷ್ಯ ಸಂಬಂಧ ಈ ಹಿಂದಿನಂತೆಯೇ ನಡೆದುಕೊಂಡು ಬಂದಿದೆ ಎಂದರು. ತಮ್ಮ ಬದುಕಿನಲ್ಲಿ ಮಾರ್ಗದರ್ಶನವನ್ನು ನೀಡುತ್ತಾ ಬಂದಿರುವ ಗುರುಗಳನ್ನು ಹಾಗೂ ಸಂಸ್ಥೆಯಲ್ಲಿ ಕಾರ್ಯನಿರತರಾಗಿರುವ ಗುರುಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಸ0ಸ್ಥೆಯ ಮಾಸ ಪತ್ರಿಕೆ “ಮನೋರಮಾ”ಈ ಸಂದರ್ಭದಲ್ಲಿ ಬಿಡುಗಡೆಯಾಯಿತು. 100 ಅಂಕ ತೆಗೆದ ವಿಷಯವಾರು ಶಿಕ್ಷಕರನ್ನು ಮತ್ತು ಉಪನ್ಯಾಸಕರನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಯಿತು. ಸಿಬಿಎಸ್ಸಿ ಶಾಲೆಯ ಪ್ರಾಂಶುಪಾಲರಾದ ಶ್ರೀಪ್ರಸಾದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪದವಿಪೂರ್ವ ಪ್ರಾ0ಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾರರಾದ ಶಿವಪ್ರಸಾದ ಭಟ್ ವಂದಿಸಿದರು.ಉಪನ್ಯಾಸಕರಾದ ಯಶಸ್ವಿನಿ ಮತ್ತು ದಿವ್ಯಾಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

ಜೈನ ತತ್ವ-ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತ : ಡಾ. ಅಪ್ಪಣ್ಣ ಹಂಜೆ

Article Image

ಜೈನ ತತ್ವ-ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತ : ಡಾ. ಅಪ್ಪಣ್ಣ ಹಂಜೆ

ಜೈನ ಧರ್ಮವು ‘ಅಹಿಂಸಾ ಪರಮೋಧರ್ಮ’ ಎಂಬ ಧ್ಯೇಯ ವಾಕ್ಯದೊಂದಿಗೆ ಅಹಿಂಸೆ, ಅಪರಿಗ್ರಹ, ಅನೇಕಾಂತವಾದ ಮುಂತಾದ ಸಿದ್ಧಾಂತಗಳ ಮೂಲಕ ಇಂದಿಗೂ ವಿಶ್ವಹಿತವನ್ನು ಬಯಸುತ್ತ ಮುನ್ನಡೆದಿದ್ದು, ಜಗತ್ತಿನ ಎಲ್ಲ ಜೀವಿಗಳಿಗೂ ಬದುಕುವ ಸಮಾನವಾದ ಹಕ್ಕಿದೆ, ಎಲ್ಲ ಜೀವಿಗಳೂ ಇತರ ಎಲ್ಲ ಜೀವಿಗಳನ್ನು ಮನ್ನಿಸಬೇಕು, ಎಲ್ಲ ಜೀವಿಗಳೂ ಸೌಹಾರ್ದದಿಂದ ಬದುಕಬೇಕೆಂಬುದು ಈ ಧರ್ಮದ ಹೆಬ್ಬಯಕೆಯಾಗಿದೆ ಎಂದು ಡಾ. ಅಪ್ಪಣ್ಣ ಹಂಜೆ ಹೇಳಿದರು. ಅವರು ಗದಗ ಜಿಲ್ಲಾ ದಿಗಂಬರ ಜೈನ ಸಂಘವು ‘ದಶಲಕ್ಷಣ ಪರ್ವಾಚರಣೆ ಮತ್ತು ಸಮಾಜ ಸಂಪರ್ಕ ಸಭೆ’ ಕಾರ್ಯಕ್ರಮದ ನಿಮಿತ್ತ ಗದುಗಿನ ವಿದ್ಯಾದಾನ ಸಮಿತಿಯ ಬಾಲಕರ ಪ್ರೌಢ ಶಾಲೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಸಾಮೂಹಿಕ ಕ್ಷಮಾವಳಿ ಹಾಗೂ ಸಮಾರೋಪ ಸಮಾರಂಭ’ದಲ್ಲಿ ಉಪನ್ಯಾಸ ಮಾಡುತ್ತ, ಜೈನರು “ನಾನು ಲೋಕದ ಸಕಲ ಜೀವಿರಾಶಿಗಳನ್ನು ಕ್ಷಮಿಸುತ್ತೇನೆ, ಸಕಲ ಜೀವರಾಶಿಗಳೂ ನನ್ನನ್ನು ಕ್ಷಮಿಸಲಿ, ನಾನು ಎಲ್ಲ ಜೀವಿಗಳಲ್ಲಿ ಮೈತ್ರಿಯನ್ನು ಇರಿಸಿಕೊಳ್ಳಲು ಬಯಸುತ್ತೇನೆ, ಯಾವ ಜೀವಿಯಲ್ಲೂ ನನಗೆ ವೈರವಾಗಲಿ ಮತ್ಸರವಾಗಲಿ ಇಲ್ಲ” ಎಂಬ ಸೌಹಾರ್ದ ಮಂತ್ರವನ್ನು ಆರಂಭದಿಂದಲೂ ಅನುಸರಿಸುತ್ತ ಬಂದಿದ್ದು, ದಶಲಕ್ಷಣ ಪರ್ವವು ಒಂದು ಅರ್ಥದಲ್ಲಿ ಜೈನರಿಗೆ ವಿಧಿಸಲಾದ ನೀತಿ ಸಂಹಿತೆ, ಇದು ಜೈನರ ಬದುಕುವ ಕಲೆಯಾಗಿದೆ ಎಂದು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗಜೇಂದ್ರಗಡದ ಉದ್ಯಮಿ ಮತ್ತು ಭಗವಾನ ಮಹಾವೀರ ಜೈನ ಆಯುರ್ವೇದಿಕ ಮೆಡಿಕಲ್ ಕಾಲೇಜಿನ ಅಧ್ಯಕ್ಷ ಅಶೋಕಕುಮಾರ ಬಾಗಮಾರ ಅವರು ಜೈನ ಧರ್ಮವು ಅರಿವು, ವಿಚಾರ, ಆಚಾರಕ್ಕೆ ಒತ್ತು ಕೊಡುತ್ತ ಬಂದಿದ್ದು, ಇಂದು ಸಂಖ್ಯಾದೃಷ್ಟಿಯಿಂದ ಜೈನರು ಮತೀಯ ಅಲ್ಪಸಂಖ್ಯಾತರೆಂದು ಪರಿಗಣಿಸಲ್ಪಟ್ಟಿದ್ದರೂ ತತ್ವ-ಸಿದ್ಧಾಂತಗಳು ಮತ್ತು ಅರ್ಥಪೂರ್ಣ ಆಚರಣೆ-ಅನುಷ್ಠಾನಗಳ ದೃಷ್ಟಿಯಿಂದ ನಾಡಿನ ಪ್ರಜ್ಞಾವಂತರ ಪ್ರೀತಿಗೆ ಪಾತ್ರರಾಗಿದ್ದಾರೆಂದು ಹೇಳಿದರು. ಸಂಘದ ಅಧ್ಯಕ್ಷ ಪಿ.ಎ. ಕುಲಕರ್ಣಿ ಪ್ರಾಸ್ತಾವಿಕವಾಗಿ ಮತ್ತು ಅಧ್ಯಕ್ಷತೆ ವಹಿಸಿ ಮಾತನಾಡುತ್ತ ವಿದ್ಯಾದಾನ ಸಮಿತಿಯ ಅಧ್ಯಕ್ಷ ಡಿ.ಬಿ. ಹುಯಿಲಗೋಳ ಮತ್ತು ಕಾರ್ಯದರ್ಶಿ ಶ್ರೀನಿವಾಸ ಹುಯಿಲಗೋಳ ಅವರು ಗದುಗಿನ ದಿಗಂಬರ ಜೈನ ಸಮಾಜದ ಕಾರ್ಯಕ್ರಮಗಳ ಆಯೋಜನೆಗೆ ಕಳೆದ ಇಪ್ಪತ್ತೆರಡು ವರ್ಷಗಳಿಂದಲೂ ಶಾಲೆಯ ಸಭಾಂಗಣವನ್ನು ಯಾವುದೇ ಅಪೇಕ್ಷೆಯಿಲ್ಲದೆ ಕೊಡಮಾಡುತ್ತ ಬಂದಿದ್ದು, ಅವರ ‘ಅಭಯದಾನ’ಕ್ಕೆ ಜೈನ ಸಮಾಜವು ಯಾವತ್ತೂ ಋಣಿಯಾಗಿದ್ದು, ಸಾಧಕರ ಸನ್ಮಾನಕ್ಕೆ ಅವಶ್ಯವಿರುವ ಸಾಮಗ್ರಿಗಳನ್ನು ಗದುಗಿನ ಗಣ್ಯ ವ್ಯಾಪಾರಸ್ಥ ಸಂಜಯ ಬಾಗಮಾರ ಅವರು ಪ್ರತಿವರ್ಷ ದಾನಮಾಡುತ್ತ ಬಂದಿದ್ದು, ಅವರ ‘ಶಾಸ್ತ್ರದಾನ’ ಮೌಲ್ಯ ಸಮಾಜಕ್ಕೆ ಮಾದರಿಯಾಗಿದೆ. ಸಂಘಕ್ಕೆ ಗಣ್ಯ ವ್ಯಾಪಾರಸ್ಥರಾಗಿರುವ ಕುಷ್ಟಗಿಯ ಅಭಿನಂದನ ಗೋಗಿ ಮತ್ತು ಗಜೇಂದ್ರಗಡದ ಬಾಹುಬಲಿ ಹೂಲಿ ಅವರ ಉದಾರವಾದ ಮಾರ್ಗದರ್ಶನ, ಸೇವೆ ಸ್ಮರಣೀಯವಾಗಿದೆ. ಜಿಲ್ಲೆಯ ಸಮಸ್ತ ಜೈನ ಸಮಾಜದ ಸಹಾಯ-ಸಹಕಾರದಿಂದಲೇ ದಶಲಕ್ಷಣ ಪರ್ವದ ಆಚರಣೆ ಸಾಂಗವಾಗಿ ನಡೆಯುತ್ತ ಬಂದಿದೆ ಎಂದು ಹೇಳಿದರು. ಸಾಮೂಹಿಕ ಪಂಚ ನಮೋಕಾರ ಮಂತ್ರ ಪಠಣ, ಜ್ವಾಲಾಮಾಲಿನಿ ಸದರಣ್ಣವರ ಪ್ರಾರ್ಥನೆ, ಯಶವಂತ ಸಿದ್ದಣ್ಣವರ ಭಕ್ತಿಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲೆಯ ವಿದ್ಯಾರ್ಥಿಗಳು, ದಾನಿಗಳು ಮತ್ತು ಗಣ್ಯರನ್ನು ಸನ್ಮಾನಿಸಲಾಯಿತು. ಪ್ರಕಾಶ ಮುತ್ತಿನ ನಿರೂಪಣೆ ಮತ್ತು ಸಂಕಪ್ಪ ನಾವಳ್ಳಿ ವಂದನಾರ್ಪನೆಗೈದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳ ಮುನ್ನೂರಕ್ಕೂ ಹೆಚ್ಚು ಶ್ರಾವಕರು, ಶ್ರಾವಿಕೆಯರು ಭಾಗವಹಿಸಿದ್ದರು. ಎಲ್ಲರೂ ಸಾಮೂಹಿಕವಾಗಿ ಪರಸ್ಪರ ಕ್ಷಮೆ ಕೋರಿ, ಪಂಚ ನಮೋಕಾರ ಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಿದರು.

ವೇಣೂರು: ದಶಲಕ್ಷಣ ಪರ್ವದ ಸಮಾರೋಪ ಸಮಾರಂಭ

Article Image

ವೇಣೂರು: ದಶಲಕ್ಷಣ ಪರ್ವದ ಸಮಾರೋಪ ಸಮಾರಂಭ

ಉಜಿರೆ: ದಶಲಕ್ಷಣ ಪರ್ವವು ಸರ್ವ ಪರ್ವಗಳ ರಾಜನಾಗಿದ್ದು, ಉತ್ತಮ ಕ್ಷಮಾ, ಮಾರ್ದವ, ಆರ್ಜವ, ಶೌಚ, ಸತ್ಯ, ಸಂಯಮ, ತಪ, ತ್ಯಾಗ, ಅಕಿಂಚನ್ಯ ಮತ್ತು ಬ್ರಹ್ಮಚರ್ಯ ಎಂಬ ದಶಧರ್ಮಗಳ ಪಾಲನೆಯಿಂದ ಮುನಿಯಾಗುವ ಯೋಗವೂ, ಭಾಗ್ಯವೂ ಪ್ರಾಪ್ತಿಯಾಗುತ್ತದೆ ಎಂದು ಮೂಡಬಿದ್ರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಶನಿವಾರ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ಯಾತ್ರಿನಿವಾಸದಲ್ಲಿ ಕ್ಷಮಾವಳಿಯೊಂದಿಗೆ ದಶಲಕ್ಷಣ ಪರ್ವದ ಸಮಾರೋಪ ಸಮಾರಂಭದಲ್ಲಿ ಮಂಗಲ ಪ್ರವಚನ ನೀಡಿದರು. ದಶಧರ್ಮಗಳು ಮನಸ್ಸನ್ನು ಸುಂದರಗೊಳಿಸಿ ವಿವೇಕ ಪ್ರಾಪ್ತಿಗೆ ಪ್ರೇರಕವಾಗಿವೆ. ಅನುಕಂಪ ಮತ್ತು ಕರುಣೆಯೊಂದಿಗೆ ಅಹಿಂಸೆಯ ಪಾಲನೆ ಮಾಡಿದಾಗ ಕ್ಷಮಾ ಗುಣವನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಅಜ್ಞಾನ ಮತ್ತು ಮಿಥ್ಯತ್ವವನ್ನು ತ್ಯಜಿಸಿ, ದರ್ಶನಗಳಲ್ಲಿ ಸಮನ್ವಯತೆಯನ್ನು ಸಾಧಿಸಿ, ವಿವೇಕದೊಂದಿಗೆ ಸರ್ವಜೀವಿಗಳಲ್ಲಿಯೂ ಅಹಿಂಸೆಯನ್ನು ತೋರಿದಾಗ ಮೋಕ್ಷ ಪ್ರಾಪ್ತಿ ಸಾಧ್ಯವಾಗುತ್ತದೆ. ಸದಾ ಸತ್ಯ, ಧರ್ಮ, ನ್ಯಾಯ, ನೀತಿಯ ಪಾಲನೆಯೊಂದಿಗೆ ಸದಾಚಾರದೊಂದಿಗೆ ವರ್ತಮಾನದ ಬದಕಿನ ಸವಾಲುಗಳನ್ನು ಕ್ಷಮಾಗುಣದೊಂದಿಗೆ ತಾಳ್ಮೆ ಮತ್ತು ಸಂಯಮದಿಂದ ಸುಲಭದಲ್ಲಿ ಪರಿಹರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಸ್ವಾಮೀಜಿಯವರ ನೇತೃತ್ವದಲ್ಲಿ ಸರ್ವರೂ ಪರಸ್ಪರ ಕ್ಷಮೆ ಯಾಚಿಸಿ ಎಲ್ಲರಿಗೂ ಶುಭ ಹಾರೈಸಿ ಕ್ಷಮಾವಳಿ ಆಚರಿಸಿದರು. ಧಾರ್ಮಿಕ ಉಪನ್ಯಾಸ ನೀಡಿದ ಮೂಡಬಿದ್ರೆ ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಭಾತ್ ಬಲ್ನಾಡ್, ಜೈನ ಧರ್ಮ ಅತ್ಯಂತ ಪ್ರಾಚೀನ ಧರ್ಮವಾಗಿದ್ದು, ವೇದಗಳ ಕಾಲದಲ್ಲಿಯೂ ಆಚರಣೆಯಲ್ಲಿತ್ತು. ಕರ್ಮಸಿದ್ಧಾಂತದ ಪ್ರಕಾರ ನಾವು ಮಾಡಿದ ಕರ್ಮವನ್ನು ಅನುಭವಿಸಲೇಬೇಕು. ಆಧ್ಯಾತ್ಮಿಕ ಚಿಂತನೆಯೊಂದಿಗೆ ಜಪ-ತಪ, ನೋಂಪಿ, ಆರಾಧನೆ ಮಾಡಿ ಪಂಚಾಣುವೃತಗಳ ಪಾಲನೆಯೊಂದಿಗೆ ಸರಳ ಜೀವನ ನಡೆಸಿ ಧರ್ಮದ ಅನುಷ್ಠಾನ ಮಾಡಬೇಕು. ದಾನ-ಧರ್ಮಾದಿ ಸತ್ಕಾರ್ಯಗಳಿಂದ ಆತ್ಮನಿಂಗಟಿದ ಕರ್ಮದ ಕೊಳೆಯನ್ನು ಕಳೆದಾಗ ಆತ್ಮನೇ ಪರಮಾತ್ಮನಾಗಿ ಮೋಕ್ಷ ಪ್ರಾಪ್ತಿ ಸಾಧ್ಯವಾಗುತ್ತದೆ ಎಂದು ಹೇಳಿದರು. ಕ್ಷಮಾಗುಣ ನಮ್ಮ ದೌರ್ಬಲ್ಯ ಅಲ್ಲ, ವೀರರಿಗೆ ಭೂಷಣವಾಗಿದೆ. ಸಂಯಮದೊಂದಿಗೆ ದೈನಂದಿನ ವ್ಯವಹಾರದಲ್ಲಿ ಕ್ಷಮಾ ಧರ್ಮ ಪಾಲನೆ ಮಾಡಿದರೆ ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಅಶ್ವಿನಿ ಪ್ರವೀಣ್ ಕುಮಾರ್ ಇಂದ್ರ ಧನ್ಯವಾದವಿತ್ತರು. ಮಹಾವೀರ ಜೈನ್ ಮೂಡುಕೋಡಿಗುತ್ತು ಕಾರ್ಯಕ್ರಮ ನಿರ್ವಹಿಸಿದರು. ಡಾ. ವರ್ಷಾ ಮತ್ತು ಸತ್ಯಪ್ರಸಾದ್ ವಿ. ಜೈನ್ ಸಮಾರಂಭದ ಪ್ರಾಯೋಜಕರಾಗಿ ಸಹಕರಿಸಿದರು.

ದಶಲಕ್ಷಣ ಪರ್ವಾಚರಣೆ ಮತ್ತು ಸಮಾಜ ಸಂಪರ್ಕ ಸಭೆ

Article Image

ದಶಲಕ್ಷಣ ಪರ್ವಾಚರಣೆ ಮತ್ತು ಸಮಾಜ ಸಂಪರ್ಕ ಸಭೆ

‘ಬ್ರಹ್ಮ’ವೆಂದರೆ ‘ಆತ್ಮ’ ಮತ್ತು ‘ಚರ್ಯ’ ಎಂದರೆ ‘ಪಾಲನೆ’ ಎಂದರ್ಥ. ಆತ್ಮನಲ್ಲಿ ಲೀನವಾಗಿ ಕಾಮಾದಿ ವಿಕಾರಗಳನ್ನು ತೊರೆದು ಆತ್ಮನ ನೈಜ ಗುಣಗಳನ್ನು ಅರಿತು ಆತ್ಮೋನ್ನತಿಯನ್ನು ಸಾಧಿಸುವುದೇ ಬ್ರಹ್ಮಚರ್ಯ ಧರ್ಮವಾಗಿದ್ದು, ಕಾರ್ಯ-ವಚನ ಆಲೋಚನೆಗಳಲ್ಲಿ ಬ್ರಹ್ಮಚರ್ಯ ಪಾಲನೆಯಿಂದ ಪರಿಶುದ್ಧ ಜೀವನ ನಡೆಸಲು ಸಾಧ್ಯವೆಂದು ವಸಂತಮಾಲಾ ದೇಸಾಯಿ ಹೇಳಿದರು. ಅವರು ಗದಗ ಜಿಲ್ಲಾ ದಿಗಂಬರ ಜೈನ ಸಂಘವು ‘ದಶಲಕ್ಷಣ ಪರ್ವಾಚರಣೆ ಮತ್ತು ಸಮಾಜ ಸಂಪರ್ಕ ಸಭೆ’ ನಿಮಿತ್ತ ಸಂಘದ ಕಾರ್ಯಾಲಯದಲ್ಲಿ ಮಹಿಳಾ ಮಂಡಳದ ಸಹಯೋಗದಲ್ಲಿ ಆಯೋಜಿಸಿದ್ದ ‘ಉತ್ತಮ ಬ್ರಹ್ಮಚರ್ಯ ಧರ್ಮ’ ಕುರಿತು ಉಪನ್ಯಾಸ ಮಾಡುತ್ತ, ಆತ್ಮವು ಪರಿಶುದ್ಧ, ಪ್ರಬುದ್ಧ, ಶಾಶ್ವತ, ಆನಂದಯಮವಾಗಿದ್ದು, ಆತ್ಮನ ನಿಜವಾದ ಗುಣವನ್ನು ತಿಳಿಯುವುದರಿಂದ ಬದುಕು ಸುಂದರವಾಗುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶೋಭಕ್ಕ ಇಂಚಲ ಅವರು ಮಹಿಳೆಯನ್ನು ರಕ್ಷಿಸುವ ಅಭೇದ್ಯ ಬೇಲಿ ಅವಳ ಬ್ರಹ್ಮಚರ್ಯದ ಸದ್ಗುಣವಾಗಿದ್ದು, ಬೇರೆ ಯಾವುದೇ ಬೇಲಿಯೂ ಅವಳನ್ನು ರಕ್ಷಿಸಲು ಸಾಧ್ಯವಿಲ್ಲವೆಂದು ಹೇಳಿದರು. ಕಾರ್ಯಕ್ರಮದಲ್ಲಿ ಅಪ್ಪಣ್ಣ ಹಂಜೆ, ಪಿ.ಎ. ಕುಲಕರ್ಣಿ, ಯಶವಂತ ಸಿದ್ದಣ್ಣವರ, ಪ್ರಕಾಶ ಮುತ್ತಿನ, ಸಂಕಪ್ಪ ನಾವಳ್ಳಿ, ಸಂಜಯ ಪಾಂಡ್ರೆ, ಎಚ್.ಎ. ಕುಲಕರ್ಣಿ, ಸುಭಾಸ ಅಂಗಡಿ, ಪರಿಮಳಾ ಕುಲಕರ್ಣಿ, ಸಹನಾ ಹಂಜೆ, ಪದ್ಮಾವತಿ ತುಕೋಳ, ಸುಕನ್ಯಾ ಕುಲಕರ್ಣಿ, ಸುಪ್ರೀಯಾ ಪಾಂಡ್ರೆ ಸೇರಿದಂತೆ ಸ್ಥಳೀಯ ಶ್ರಾವಕರು, ಶ್ರಾವಿಕೆಯರು ಪಾಲ್ಗೊಂಡಿದ್ದರು. ಮಧುಮತಿ ಕಬ್ಬಿಣ ಭಕ್ತಿಗೀತೆ ಹಾಡಿದರು. ಸುಮನ ಮುತ್ತಿನ ನಿರೂಪಣೆ ಮತ್ತು ಸುಪ್ರೀಯಾ ನಾವಳ್ಳಿ ವಂದನಾರ್ಪಣೆಗೈದರು.

ನಾರಾವಿ : ಶ್ರೀ ಅನಂತ ನೋಂಪಿ ಆರಾಧನಾ ಪೂಜಾ ವಿಧಾನ

Article Image

ನಾರಾವಿ : ಶ್ರೀ ಅನಂತ ನೋಂಪಿ ಆರಾಧನಾ ಪೂಜಾ ವಿಧಾನ

ನಾರಾವಿ ಮಾಗಣೆ ಭ। ೧೦೦೮ ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಕಾರ್ಕಳ ದಾನಶಾಲೆ ಶ್ರೀ ಜೈನ ಮಠದ, ಪರಮ ಪೂಜ್ಯ ರಾಜಯೋಗಿ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನಿಧ್ಯ ಮತ್ತು ಆಶೀರ್ವಚನದೊಂದಿಗೆ ದಿನಾಂಕ 5-9-2025ನೇ ಶುಕ್ರವಾರದಿಂದ 7-9-2025ನೇ ಆದಿತ್ಯವಾರದ ಪರ್ಯಂತ 14ನೇ ವರ್ಷದ ಶ್ರೀ ಅನಂತ ನೋಂಪಿ ಆರಾಧನಾ ಪೂಜಾ ವಿಧಾನವು ಜರಗಲಿರುವುದು. ಕಾರ್ಯಕ್ರಮ : 1. ದಿನಾಂಕ 5-9-2025ನೇ ಶುಕ್ರವಾರ, ಅನಂತ ತ್ರಯೋದಶಿ, ಬೆಳಿಗ್ಗೆ ಗಂಟೆ 8.00ರಿಂದ ಜಿನಾಭಿಷೇಕದೊಂದಿಗೆ ಆರಾಧನಾ ಪೂಜಾ ಆರಂಭ. 2. ದಿನಾಂಕ 6-9-2025ನೇ ಶನಿವಾರ, ಅನಂತ ಚತುರ್ದಶಿ, ಬೆಳಿಗ್ಗೆ ಗಂಟೆ 8.00ರಿಂದ ಜಿನಾಭಿಷೇಕದೊಂದಿಗೆ ಆರಾಧನಾ ಪೂಜಾ ಆರಂಭ. ಮಧ್ಯಾಹ್ನ 1.00 ಗಂಟೆಗ ಮಹಾ ಅರ್ಥ್ಯ ಮತ್ತು ಜಿನ ಚೈತ್ಯಾಲಯಗಳಿಗೆ ಆರತಿ. 3. ದಿನಾಂಕ 7-9-2025ನೇ ಆದಿತ್ಯವಾರ, ಅನಂತ ಹುಣ್ಣಿಮೆ, ಬೆಳಿಗ್ಗೆ ಗಂಟೆ 8.00ರಿಂದ ಪರಮ ಪೂಜ್ಯ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಯವರ ಉಪಸ್ಥಿತಿಯೊಂದಿಗೆ ಆರಾಧನಾ ಪೂಜಾ ವಿಧಾನ ಆರಂಭ. ವಿ.ಸೂ.: * ದಿನಾಂಕ 6-9-2025 ಮತ್ತು 7-9-2025ರಂದು ಸರ್ವೆಶ್ ಜೈನ್ ಮತ್ತು ಬಳಗ, ಮೂಡುಬಿದ್ರೆ ಇವರಿಂದ ಸಂಗೀತ ಪೂಜಾಷ್ಟಕ. * ಪ್ರತಿ ದಿನ ಮಧ್ಯಾಹ್ನ ಗಂಟೆ 1.30ಕ್ಕೆ ಕಂದಮೂಲ ರಹಿತ ಶುದ್ಧ ಭೋಜನದ ವ್ಯವಸ್ಥೆ ಇದೆ. * ದಿನಾಂಕ 7-9-2025ನೇ ಆದಿತ್ಯವಾರ “ಶ್ರೀ ಜಿನ ಪ್ರಸಾದ” ಸಮರ್ಪಣೆ ಇದೆ.

First Previous

Showing 2 of 11 pages

Next Last