Article Image

ವಾರ್ಷಿಕೋತ್ಸವ ಕಾರ್ಯಕ್ರಮ

Article Image

ವಾರ್ಷಿಕೋತ್ಸವ ಕಾರ್ಯಕ್ರಮ

ಕಾರ್ಕಳ: ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಮತ್ತು ಸಮಾಜ ಬಾಂಧವರ ಸಹಕಾರದೊಂದಿಗೆ ನಿರ್ಮಾಣಗೊಂಡ ಶ್ರೀ ಜೈನ ಮಠದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಕಾರ್ಯಕ್ರಮವು ನಾಳೆ(ಜ.26) ಜರುಗಲಿದೆ. ನರಸಿಂಹರಾಜಪುರ, ಶ್ರೀ ಸಿಂಹನಗದ್ದೆ ಬಸ್ತಿಮಠದ ಪ.ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

ವಾರ್ಷಿಕ ಪೂಜಾ ಮಹೋತ್ಸವ ಮತ್ತು ಕಲಿಕುಂಡ ಯಂತ್ರಾರಾಧನೆ, ಅಷ್ಟಾವಧಾನ ಪೂಜೆ ಹಾಗೂ ಧಾರ್ಮಿಕ ಪ್ರವಚನ

Article Image

ವಾರ್ಷಿಕ ಪೂಜಾ ಮಹೋತ್ಸವ ಮತ್ತು ಕಲಿಕುಂಡ ಯಂತ್ರಾರಾಧನೆ, ಅಷ್ಟಾವಧಾನ ಪೂಜೆ ಹಾಗೂ ಧಾರ್ಮಿಕ ಪ್ರವಚನ

ವೇಣೂರು: ಬಜಿರೆ ಹಲ್ಲಂದೋಡಿ ಬಸದಿ ಭಗವಾನ್ 1008 ಶ್ರೀ ವರ್ಧಮಾನ ಸ್ವಾಮಿ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ ವಾರ್ಷಿಕ ಪೂಜಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ “ಭಾರತಭೂಷಣ” ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಆಶೀರ್ವಚನಗಳೊಂದಿಗೆ 108 ಕಲಶ ಮಹಾಭಿಷೇಕ, ಕಲಿಕುಂಡ ಯಂತ್ರಾರಾಧನೆ, ಶ್ರೀ ಸರ್ವಾಹ್ಣಯಕ್ಷ ಅಷ್ಟಾವಧಾನ ಪೂಜೆ, ಮಹೋತ್ಸವ, ಮಹಾಪೂಜೆ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಲಕ್ಷ ಹೂವಿನ ಪೂಜೆ ಮುಂತಾದ ಧರ್ಮಕಾರ್ಯಗಳೊಂದಿಗೆ ನಾಳೆ(ಜ.26) ನೆರವೇರಲಿದೆ.

ವಾರ್ಷಿಕ ಪೂಜಾ ಮಹೋತ್ಸವ ಮತ್ತು ಕಲಿಕುಂಡ ಯಂತ್ರಾರಾಧನೆ ಅಷ್ಟಾವಧಾನ ಪೂಜೆ ಹಾಗೂ ಧಾರ್ಮಿಕ ಪ್ರವಚನ

Article Image

ವಾರ್ಷಿಕ ಪೂಜಾ ಮಹೋತ್ಸವ ಮತ್ತು ಕಲಿಕುಂಡ ಯಂತ್ರಾರಾಧನೆ ಅಷ್ಟಾವಧಾನ ಪೂಜೆ ಹಾಗೂ ಧಾರ್ಮಿಕ ಪ್ರವಚನ

ವೇಣೂರು: ಬಜಿರೆ ಹಲ್ಲಂದೋಡಿ ಬಸದಿ ಭಗವಾನ್ 1008 ಶ್ರೀ ವರ್ಧಮಾನ ಸ್ವಾಮಿ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ ವಾರ್ಷಿಕ ಪೂಜಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ “ಭಾರತಭೂಷಣ” ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಆಶೀರ್ವಚನಗಳೊಂದಿಗೆ 108 ಕಲಶ ಮಹಾಭಿಷೇಕ, ಕಲಿಕುಂಡ ಯಂತ್ರಾರಾಧನೆ, ಶ್ರೀ ಸರ್ವಾಹ್ಣಯಕ್ಷ ಅಷ್ಟಾವಧಾನ ಪೂಜೆ, ಮಹೋತ್ಸವ, ಮಹಾಪೂಜೆ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಲಕ್ಷ ಹೂವಿನ ಪೂಜೆ ಮುಂತಾದ ಧರ್ಮಕಾರ್ಯಗಳೊಂದಿಗೆ ನಾಳೆ(ಜ.26) ನೆರವೇರಲಿದೆ.

ಪೂಜಾ ಕಾರ್ಯಕ್ರಮಗಳು

Article Image

ಪೂಜಾ ಕಾರ್ಯಕ್ರಮಗಳು

ಕಾರ್ಕಳ ತಾಲೂಕಿನ ಬಜಗೋಳಿ ಧರ್ಮಶಾಲೆ ತೀರ್ಥಕ್ಷೇತ್ರದಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ, ಭಗವಾನ್ ಶ್ರೀ ಮುನಿಸುವ್ರತ ಸ್ವಾಮಿ ಮಂದಿರದ ವಾರ್ಷಿಕೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಹಾಗೂ ದಿವ್ಯ ನೇತೃತ್ವದಲ್ಲಿ ಭಗವಾನ್ ಶ್ರೀ ಮುನಿಸುವ್ರತ ಸ್ವಾಮಿಯ ವಿಶೇಷ ಉತ್ಸವ, ಅಭಿಷೇಕ, ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕವು ವಿವಿಧ ಧಾರ್ಮಿಕ ವಿಧಿ- ವಿಧಾನಗಳೊಂದಿಗೆ ನಾಳೆ(ಜ.26) ಜರುಗಲಿದೆ.

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ

Article Image

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿರುವ ಭಗವಾನ್ ಬಾಹುಬಲಿಮೂರ್ತಿಗೆ ಫೆ. 2 ರಂದು ಭಾನುವಾರ ಬೆಳಿಗ್ಯೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು. ಇದಕ್ಕೆ ಪೂರ್ವಭಾವಿಯಾಗಿ ಫೆ. ಒಂದರಂದು ಶನಿವಾರ ಬೆಳಿಗ್ಗೆ ಗಂಟೆ 9 ರಿಂದ ರತ್ನಗಿರಿಯಲ್ಲಿ ತೋರಣಮುಹೂರ್ತ, ವಿಮಾನಶುದ್ಧಿ ಷೋಡಶ ಕಲಶಾಭಿಷೇಕ ಮತ್ತು ಸಂಜೆ ನಾಲ್ಕು ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.

ಕುಂದಾದ್ರಿ ವಾರ್ಷಿಕ ಜಾತ್ರ ಮಹೋತ್ಸವ

Article Image

ಕುಂದಾದ್ರಿ ವಾರ್ಷಿಕ ಜಾತ್ರ ಮಹೋತ್ಸವ

ತೀರ್ಥಹಳ್ಳಿ :- ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಶಾಖಾ ಕ್ಷೇತ್ರ ಶ್ರೀ ಕುಂದ ಕುಂದರ ತಪೋಭೂಮಿ ಶ್ರೀ ಕ್ಷೇತ್ರ ಕುಂದಾದ್ರಿ ವಾರ್ಷಿಕ ಜಾತ್ರ ಮಹೋತ್ಸವ ಶ್ರೀ ಕ್ಷೇತ್ರ ಹೊಂಬುಜ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ಪಾವನ ಸಾನಿಧ್ಯದಲ್ಲಿ 14-1-2025 ನೇ ಮಂಗಳವಾರ ಅತ್ಯಂತ ವೈಭವದಿಂದ ಜರುಗಿತು. ಈ ಸಂದರ್ಭದಲ್ಲಿ ಮಕ್ಕಿಮನೆ ಕಲಾವೃಂದ ಬಳಗದ ಸಂಯೋಜನೆಯಲ್ಲಿ ಜಿನ ಭಜನೆ ಕಾರ್ಯಕ್ರಮ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

"ಮಾನವೀಯ ಮೌಲ್ಯಗಳು ಪಸರಿಸಬೇಕು : ಅನಿತಾ ಸುರೇಂದ್ರ ಕುಮಾರ್"

Article Image

"ಮಾನವೀಯ ಮೌಲ್ಯಗಳು ಪಸರಿಸಬೇಕು : ಅನಿತಾ ಸುರೇಂದ್ರ ಕುಮಾರ್"

ಬೆಂಗಳೂರು: ಮಾನವನಲ್ಲಿರುವ ಮಾನವೀಯ ಮೌಲ್ಯಗಳು ನಿಂತ ನೀರಾಗದೆ ಸದಾ ಹರಿಯುವ ನೀರಿನಂತೆ ಪಸರಿಸಬೇಕು ಇದರಿಂದ ಜನ ಮಾನವೀಯ ಮೌಲ್ಯಗಳು ರೂಡಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಭಾರತೀಯ ಜೈನ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಬೆಂಗಳೂರು ತ್ಯಾಗಿ ಸೇವಾ ಸಮಿತಿ ಅಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ತಿಳಿಸಿದರು. ಅವರು ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥ ಕಲ್ಯಾಣ ಮಂದಿರದಲ್ಲಿ ನಡೆದ ಬೆಂಗಳೂರು ವಿಭಾಗೀಯ ಹೊಂಗಸಂದ್ರದ ಶ್ರೀ ಶಾಂತಿನಾಥ ಜೈನ್ ಮಿಲನ್ , ವಿಲ್ಸನ್ ಗಾರ್ಡನ್ ರತ್ನತ್ರೆಯ ಜೈನ್ ಮಿಲನ್ ಹಾಗೂ ಬನಶಂಕರಿ ಜೈನ್ ಮಿಲನ್ ಗಳ ಮಾಸಿಕ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದರು. ಧಾರ್ಮಿಕವಾಗಿ ನಾವು ಹಿಂದೆ ಬಿದ್ದಿಲ್ಲ, ಇಂದು ಕರ್ಮ ಸಿದ್ದಾಂತದಿಂದ ಎಲ್ಲರೂ ಸೇರಿದ್ದೇವೆ ನಮ್ಮಲ್ಲಿರುವ ಸಿದ್ಧಾಂತ ತತ್ವ ನೀತಿಗಳು ಮಾನವೀಯ ಮೌಲ್ಯಗಳು ಇತರರಿಗೆ ತಿಳಿಯಬೇಕಿದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಂಚಕಲ್ಯಾಣಗಳಲ್ಲಿ ಜಿನ ಭಜನೆಗೆ ಆದ್ಯತೆ ನೀಡಲಾಗುತ್ತಿದೆ. ಈ ಹಿಂದೆ ತಿರಸ್ಕರಕೊಂಡಿದ್ದ ಜಿನಭಜನೆಗೆ ಇಂದು ಹೆಚ್ಚಿನ ಬೇಡಿಕೆ ಬಂದಿದೆ , ಉತ್ತಮ ಗುಣಗಳನ್ನು ಪಸರಿಸಿದಾಗ ಸಮಾಜದಲ್ಲಿ ಉತ್ತಮ ಕರ್ಮಗಳಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು, ನಾವು ಮಾಡುವ ಕೆಲಸ ಶಾಶ್ವತವಾಗಿರಬೇಕು, ಸಮಾಜದ ಋಣ ತೀರಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು. ಧಾರ್ಮಿಕ ಉಪನ್ಯಾಸ ನೀಡಿದ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಉಪಾಧ್ಯಕ್ಷರು ಹಾಗೂ ಕರ್ನಾಟಕ ಜೈನ ಅಸೋಸಿಯೇಷನ್ ಸಹಕಾರ್ಯದರ್ಶಿಗಳಾದ ಡಾ. ನೀರಜಾ ನಾಗೇಂದ್ರ ಕುಮಾರ್ ಮಾತನಾಡಿ, ಮನಸ್ಸನ್ನು ನಿಗ್ರಹಿಸಲು ಧ್ಯಾನ ,ಯೋಗ ಅಗತ್ಯ. ಜೈನ ತತ್ವ ,ವಿದ್ಯೆಗಳು, ಕನ್ನಡದಲ್ಲಿ ಅನುವಾದವಾಗಿವೆ. ಧರ್ಮ ಬದುಕುವ ರೀತಿ ,ಇದರಿಂದ ಮೋಕ್ಷ ಪ್ರಾಪ್ತಿಯಾಗಲಿದೆ ಎಂದರು. ಅರ್ದ್ಯ ಧ್ಯಾನ , ರೋದ್ರ ಧ್ಯಾನ, ಧರ್ಮ ಧ್ಯಾನ, ಶುಕ್ಲ ಧ್ಯಾನ, ಇವು ಸೌಖ್ಯ ವಾಗಿದ್ದರೆ ಜೀವನದ ಪ್ರಸಂಗಗಳು ದುಃಖಕ್ಕೆ ದೂಡುತ್ತವೆ ,ಇಷ್ಟ -ಅನಿಷ್ಟಗಳನ್ನು ಮೀರಿ ಸಲ್ಲಬೇಕು ಎಂದರು. ಮಾನಸಿಕವಾಗಿ ಯಾವುದನ್ನು ಚಿಂತಿಸಬಾರದು ಎಂದವರು, ಹೆಚ್ಚು ಯೋಚನೆ ಮಾಡಬಾರದು. ಅನುಮಾನಾಸ್ಪದವಾಗಿ ಚಿಂತಿಸಬಾರದು ಎಂದರು, ಯಾವುದೇ ಕಾರ್ಯದಲ್ಲಿ ಚಿಂತನೆಗಳ ಅಗತ್ಯವಿಲ್ಲ, ನಿಧಾನವು ಇರಬಾರದು, ಮನಸ್ಸಿನಲ್ಲಿ ಯಾವುದೇ ಆಸೆ ಆಕಾಂಕ್ಷೆಗಳಿರಬಾರದು ಎಂದರು. ನಾವು ಹೆಚ್ಚು ಪ್ರೀತಿ ಮಾಡುವವರೇ ನಮಗೆ ಕಷ್ಟ ನೀಡುತ್ತಾರೆ, ಅತಿ ಪ್ರೀತಿಸಲ್ಲದು ಎಂದರು. ಕ್ರೂರ -ಕ್ರೌರ್ಯ ಭಾವನೆ ಹಿಂಸಾತ್ಮಕವಾದದ್ದು ಇದನ್ನು ನೋಡಿ ಕೆಲ ಜನ ಸಂತೋಷ ಪಡುತ್ತಾರೆ ,ನಾಲಿಗೆ ರುಚಿಗೆ ಪ್ರಾಣಿಗೆ ಹಿಂಸೆ ನೀಡಿ ಸಂತಸ ಅನುಭವಿಸುವವರು ಇದ್ದಾರೆ ಎಂದರು. ಕಳ್ಳತನದಿಂದ ಆನಂದ ಪಡುವವರಿದ್ದಾರೆ ಎಲ್ಲವೂ ಇದ್ದರೂ ಕಳ್ಳತನವನ್ನು ಹವ್ಯಾಸ ಮಾಡಿಕೊಂಡಿರುವವರು ಇದ್ದಾರೆ ,ಕೆಲ ಜನ ವಸ್ತುಗಳನ್ನು ಸಂಗ್ರಹಿಸಿ ಇಡುತ್ತಾರೆ ಬೇಡ ಎಂದರು ಖರೀದಿಸಿ ಸಂಗ್ರಹಿಸುತ್ತಾರೆ ಇದನ್ನು ಅನುಭವಿಸಲು ಸಮಯವಿರುವುದಿಲ್ಲ ಇದರಿಂದ ದುಶ್ಚಟಗಳಿಗೆ ಬಲಿಯಾಗಲಿದ್ದಾರೆ ಎಂದರು. ಎಲ್ಲಾ ಕಷ್ಟ ಮತ್ತು ನಷ್ಟಗಳ ನಿವಾರಣೆಗೆ ಧರ್ಮಧ್ಯಾನ ಅಗತ್ಯ ಎಂದರು. ಕೆಲ ಜನ ಆಟ, ಪಾಠ, ವಿನೋದ, ನೋಟ ಗಳಲ್ಲಿ ಕಾಲ ಕಳೆಯುತ್ತಾರೆ ,ವ್ಯಸನಗಳ ಮೂಲಕ ಕಾಲ ಕಳೆಯುತ್ತಾರೆ, ಕೆಲವರು ಕಲಹ ನಿದ್ರೆಗಳಿಂದ ಸಂತಸ ಪಡುತ್ತಾರೆ ಎಂದು ಅವರು, ಈ ವಿಚಾರಗಳಿಗೆ ಧರ್ಮದಲ್ಲಿ ಪರಿಹಾರವಿದೆ ಎಂದರು. ಧರ್ಮ ಧ್ಯಾನದಿಂದ ಶಾಂತಿ ದೊರೆಯಲಿದ್ದು ಯಾವುದೇ ವಿಚಾರವನ್ನು ಅರ್ಥ ಮಾಡಿಕೊಂಡು ನಡೆದಾಗ ಸ್ವಾಧ್ಯಾಯದಿಂದ ಸಾಧ್ಯವಾಗಲಿದೆ ಇದರಿಂದ ನಮಗೆ ಉಚ್ಚಗತಿಗಳು ಪ್ರಾಪ್ತಿಯಾಗಲಿವೆ ತೀರ್ಥಂಕರರ ದಿವ್ಯ ಧ್ಯಾನದಿಂದ ಎಲ್ಲವೂ ಲಿಪಿ ಬದ್ಧವಾಗಿ ದೊರೆಯಲಿದೆ ಎಂದರು. ಕುಟುಂಬವೇ ಮೋಹದ ಜಾಲದಲ್ಲಿ ಬಿದ್ದರೆ ಇಂತಹ ಅನಾಹುತಗಳ ಬಗ್ಗೆ ಚಿಂತನೆ ಅಗತ್ಯ ರಾಗ ದ್ವೇಷ ತರವಲ್ಲ ಎಂದರು. ಕಾಲ ಸಿದ್ದಾಂತ ಕರ್ಮ ಪ್ರಕೃತಿಗಳ ಬಗ್ಗೆ ತಿಳಿದಾಗ ನಿಜವಾದ ಜ್ಞಾನಿಯಾಗಲು ಸಾಧ್ಯ. ಶುಕ್ಲಜ್ಞಾನ ಮನಸ್ಸು ನಿರ್ಮಲವಾದಾಗ ಸಾಧ್ಯ ಇದರಿಂದ ಯಾವುದೇ ಕಷ್ಟಗಳು ಬರುವುದಿಲ್ಲ ಯೋಗಕ್ಕೆ ಇವೆಲ್ಲ ಸಹಕಾರಿಯಾಗಲಿವೆ ಎಂದರು. ಧಾರ್ಮಿಕ ಉಪನ್ಯಾಸ ನೀಡಿದ ಮದನ ಪಂಡಿತ್ ಮಾನವ ಮುನಿಗಳಿಗೆ ಆಹಾರ ಸ್ವಾಧ್ಯಾಯ ಮಾಡುವುದರಿಂದ ಸೌಮ್ಯ, ಶಾಂತಿ ,ಭಕ್ತಿ ಹೆಚ್ಚಾಗಲಿದೆ ಧ್ಯಾನ ಮಾಡುವುದರಿಂದ ಮೋಕ್ಷ ಪ್ರಾಪ್ತಿಯಾಗಲಿದೆ ಎಂದರು. ಭಾರತೀಯ ಜೈನ್ ಮಿಲನ್ ವಲಯ - 8 ರ ಕಾರ್ಯದರ್ಶಿ ವಿಲಾಸ್ ಪಾಸಣ್ಣನವರ್ ಮಾತನಾಡಿ ಇಂತಹ ವೇದಿಕೆಗಳನ್ನು ಸಂಘಗಳು ಬಳಸಿಕೊಂಡು ಸಂಘಟಿತರಾಗಬಹುದು ಯಾವುದೇ ವ್ಯಕ್ತಿ ಗಟ್ಟಿಯಾಗಿ ನಿಂತಾಗ ಜೀವನ ಸಾಧ್ಯವಾಗಲಿದೆ, ಸಿರಿವಂತರಾದ ಜೈನ ಧರ್ಮೀಯರು, ಜನಸಂಖ್ಯೆಯಲ್ಲಿ ಕ್ಷೀಣಿಸುತ್ತಿದ್ದು ಕನಿಷ್ಠ ಕುಟುಂಬಕ್ಕೆ ಮೂರು ಮಕ್ಕಳನ್ನು ಪಡೆದು ಜೈನ ಧರ್ಮ ಉಳಿಸಿ, ಬೆಳೆಸಿ, ಸಂಘಟಿತರಾಗಬೇಕೆಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ. ಭರತೇಶ್ ಜಗ ಶೆಟ್ಟಿ ಮಾತನಾಡಿ ನಮ್ಮ ಜನಸಂಖ್ಯೆ ಕುಂಠಿತವಾಗುತ್ತಿದ್ದು ,ಮುಂದಿನ ಪೀಳಿಗೆಗೆ ಬಗ್ಗೆ ಚಿಂತಿಸಬೇಕಿದೆ. ಧರ್ಮ, ಜನಸಂಖ್ಯೆಯ ಬೆಳವಣಿಗೆ ಪ್ರತಿ ಕುಟುಂಬ ಮೂರು ಮಕ್ಕಳ ಅಗತ್ಯವಿದೆ ಎಂದರು. ಪ್ರತಿ ಮಿಲನ್ ಗಳು ಸರಿಯಾದ ಮೀಟಿಂಗ್ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ಪ್ರತಿ ತಿಂಗಳು ವರದಿ ನೀಡುವಂತೆ ತಿಳಿಸಿದರು. ಪ್ರತಿ ಜೈನ್ ಮಿಲನ್ ಗೆ 25 ಜನರನ್ನು ನೇಮಿಸಿ ಹೆಚ್ಚು ಹೆಚ್ಚು ಮಿಲನ್ ಗಳನ್ನು ಪ್ರಾರಂಭಿಸುವಂತೆ ತಿಳಿಸಿದರು. ಮಿಲನ್ ನಿಂದ ಒಂದು ವರ್ಷ ಕಾರ್ಯಕ್ರಮಗಳ ಯೋಜನೆಯನ್ನ ಸಿದ್ಧಪಡಿಸಿಕೊಳ್ಳುವಂತೆ ಕರೆ ನೀಡಿದ ಅವರು ,ಯಾವುದಕ್ಕೂ ಸಮಯಪ್ರಜ್ಞೆ ಅಗತ್ಯ ಎಂದರು. ಸಭೆಯ ಪ್ರಾರಂಭದಲ್ಲಿ ಧ್ಯೇಯಗೀತೆ ಆಡಬೇಕು ಎಂದು ಸಲಹೆ ನೀಡಿದರು. ಸಾಮೂಹಿಕ ದೀಪ ಪ್ರಜ್ವಲನೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಜಯ್ ರವಿರಾಜ್ ಹಿಂದಿನ ಸಾಲಿನ ವರದಿ ಮಂಡಿಸಿದರು. ರಾಣಿ ಪ್ರಫುಲ್ಲ ರತ್ನತ್ರೆಯ ಜೈನ್ ಮಿಲನ ವರದಿ ಮಂಡಿಸಿದರು. ಅನಂತ ಕುಮಾರಿ ಮಕರ ಸಂಕ್ರಮಣದ ಬಗ್ಗೆ ತಿಳಿಸಿದರು. ಶ್ವೇತ ನವೀನ ರತ್ನತ್ರೆಯ ಜೈನ್ ಮಿಲನ ಬಗ್ಗೆ ವಾರ್ಷಿಕ ವರದಿ ಮಂಡಿಸಿದರು. ಇದೇ ಸಂದರ್ಭದಲ್ಲಿ ಮೂರು ಜೈನ್ ಮಿಲನ್ ಸದಸ್ಯರುಗಳು ಹುಟ್ಟುಹಬ್ಬ, ಮದುವೆ, ವಾರ್ಷಿಕೋತ್ಸವಗಳನ್ನು ಆಚರಿಸಿಕೊಂಡರು. ಕಾರ್ಯಕ್ರಮದಲ್ಲಿ ಕರ್ನಾಟಕ ಜೈನ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಸದಸ್ಯರಾದ ಕಲಾವಿದ ಚಿತ್ತಾ. ಎಂ. ಜಿನೇಂದ್ರ, ಕೋಮಲ ಬ್ರಹ್ಮದೇವಯ್ಯ, ಡಾ.ನಾಗೇಂದ್ರ ಕುಮಾರ್, ಪ್ರೀತಮ್ ಹರ್ಷ, ಡಾ. ನವೀನ್ ಕುಮಾರ್ ಜೈನ್ ಇನ್ನಿತರರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕರ್ನಾಟಕ ಜೈನ್ ಅಸೋಸಿಯೇಷನ್ ಗೆ ಆಯ್ಕೆಯಾದ ಗಣ್ಯರನ್ನು ಸನ್ಮಾನಿಸಲಾಯಿತು. ಅವನಿ ಜೈನ್ ಪ್ರಾರ್ಥಿಸಿದರು. ಸುಧ ಸುರೇಶ್ ಸ್ವಾಗತಿಸಿದರು. ಸುಖಾನಂದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರೇಮಾ ಸುಖಾನಂದ ಕಾರ್ಯಕ್ರಮ ನಿರೂಪಿಸಿದರು. ವಾಣಿ ಭರತ್ ವಂದಿಸಿದರು. ವರದಿ - ಜೆ ರಂಗನಾಥ, ತುಮಕೂರು

ಜನವರಿ 14 ಕ್ಕೆ ಅತಿಶಯ ಶ್ರೀ ಕ್ಷೇತ್ರ ಕುಂದಾದ್ರಿಯಲ್ಲಿ ವಾರ್ಷಿಕ ಜಾತ್ರ ಮಹೋತ್ಸವ

Article Image

ಜನವರಿ 14 ಕ್ಕೆ ಅತಿಶಯ ಶ್ರೀ ಕ್ಷೇತ್ರ ಕುಂದಾದ್ರಿಯಲ್ಲಿ ವಾರ್ಷಿಕ ಜಾತ್ರ ಮಹೋತ್ಸವ

ತೀರ್ಥಹಳ್ಳಿ : ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಶಾಖಾ ಕ್ಷೇತ್ರ ಅಚಾರ್ಯ ಶ್ರೀ ಕುಂದ ಕುಂದಾಚಾರ್ಯ ತಪೋಭೂಮಿ ಶ್ರೀ ಕ್ಷೇತ್ರ ಕುಂದಾದ್ರಿಯಲ್ಲಿ ಭಗವಾನ್ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ವಾರ್ಷಿಕ ಜಾತ್ರ ಮಹೋತ್ಸವ 14-1-2025ನೇ ಮಂಗಳವಾರ ಪರಮಪೂಜ್ಯ ಜಗದ್ಗುರು ಸ್ವಸ್ತೀಶ್ರೀ ಡಾ‌. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ಪಾವನ ಸಾನಿಧ್ಯದಲ್ಲಿ ಜರುಗಲಿದೆ. ಕಲಿಕುಂಡ ಯಂತ್ರಾರಾಧನೆ, ಬ್ರಹ್ಮ ಯಕ್ಷ ಆರಧಾನೆ, ವಿಶೇಷ ಅಭಿಷೇಕ ಪೂಜೆ ಸಹಿತ ಅನೇಕ ದಾರ್ಮಿಕ ವಿಧಿಗಳ ಜೊತೆಗೆ ಜಿನ ಭಜನೆ, ಸಾಂಸ್ಕ್ರತಿಕ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭೆ, ದೀಪೋತ್ಸವ ನಡೆಯಲಿದೆ. ಶ್ರೀ ಕ್ಷೇತ್ರ ಕುಂದಾದ್ರಿ ವಾರ್ಷಿಕ ಜಾತ್ರ ಮಹೋತ್ಸವ ಇದು ಕುಂದಾದ್ರಿ ಬೆಟ್ಟದ ಸುಂದರ ಮನಮೋಹಕ ದೃಶ್ಯ. ಈ ಬೆಟ್ಟವು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿದೆ. ತೀರ್ಥಹಳ್ಳಿಯಿಂದ ಆಗೊಂಬೆ ಕಡೆಗೆ ಪಯಣಿಸಿದಾಗ ಗುಡ್ಡಕೇರಿ ಗ್ರಾಮಕ್ಕೆ ತಲುಪುತ್ತೇವೆ. ಅಲ್ಲಿಂದ 9ಕಿ. ಮೀ ಮುಂದುವರಿದರೆ ಕುಂದಾದ್ರಿ ಬೆಟ್ಟವನ್ನು ಸೇರುತ್ತೇವೆ. ಈ ಬೆಟ್ಟವು 1343ಮೀ ಎತ್ತರವಿದ್ದು, ಬೆಟ್ಟವನ್ನು ತಲುಪಲು ಡಾಂಬರು ರಸ್ತೆಯಿದೆ. ಕಾಲುನಡಿಗೆಯಲ್ಲಿ ಬೆಟ್ಟದೆಡೆ ಬರುವವರಿಗೆ ಬಹು ಹತ್ತಿರದ ಕಾಲುದಾರಿಯೂ ಇದೆ. ಬೆಟ್ಟದ ಮೇಲೆ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿ ಇದ್ದು, ಹತ್ತಿರದಲ್ಲಿ ಬೆಟ್ಟದ ಕಲ್ಲಿನಲ್ಲಿಯೇ ಕೊರೆದ ವರ್ಷ ಪೂರ್ತಿ ನೀರು ತುಂಬಿರುವ ಕೆರೆಯೂ ಇದೆ. ಇವುಗಳನ್ನು ನೋಡಲೆಂದೇ ಪ್ರತಿ ವರ್ಷ ಸಾವಿರಾರು ಪ್ರವಾಸಿಗರು, ಭಕ್ತರು ಭೇಟಿ ನೀಡುತ್ತಾರೆ. ಇದು ಚಾರಣ ಪ್ರಿಯ ಸ್ಥಳವೂ ಹೌದು. ಬೆಟ್ಟದ ಮೇಲಿಂದ್ದ ಕಾಣುವ ಪ್ರಕೃತಿ ಸೌಂದರ್ಯ ಕಣ್ಣಿಗೆ ಬಹು ಹಬ್ಬವಾಗುತ್ತದೆ. ಮನಸ್ಸಿಗೆ ಮುದವಾಗುತ್ತದೆ. ಸೂರ್ಯೋದಯ ಮತ್ತು ಸೂರ್ಯಾಸ್ತ ನೋಡುವುದಕ್ಕೆ ವಿಸ್ಮಯವೋ ವಿಸ್ಮಯ. ಜೈನ ಮುನಿ ಶ್ರೇಷ್ಠರಾದ ಕುಂದಕುಂದಾಚಾರ್ಯರ ತಪೋ ಭೂಮಿಯಾಗಿದ್ದರಿಂದ ಈ ಬೆಟ್ಟಕ್ಕೆ ಕುಂದಾದ್ರಿ ಬೆಟ್ಟ ಎಂಬ ಹೆಸರು ಬಂದಿದೆ ಎನ್ನಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ‘ಶ್ರೀಸಾನ್ನಿಧ್ಯ’ ಕ್ಯೂಕಾಂಪ್ಲೆಕ್ಸ್‌ ಉದ್ಘಾಟನೆ

Article Image

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ‘ಶ್ರೀಸಾನ್ನಿಧ್ಯ’ ಕ್ಯೂಕಾಂಪ್ಲೆಕ್ಸ್‌ ಉದ್ಘಾಟನೆ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ಸುಸಜ್ಜಿತ ಸೌಕರ್ಯಗಳೊಂದಿಗೆ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಗಳನ್ನೊಳಗೊಂಡ ನೂತನ ಸಂಕೀರ್ಣ ‘ಶ್ರೀಸಾನ್ನಿಧ್ಯ’ ಮತ್ತು 2024-25ರ ಜ್ಞಾನದೀಪ ಕಾರ್ಯಕ್ರಮದ ಶುಭಾರಂಭ ನೆರವೇರಿಸಿ ಅವರು ಮಂಗಳವಾರ ಇಲ್ಲಿನ ಅಮೃತವರ್ಷಿಣಿ ಸಭಾಭವನದಲ್ಲಿ ಮಾತನಾಡಿದರು. ಧಾರ್ಮಿಕ ಸಂಸ್ಥೆಗಳೇ ಈ ದೇಶದ ಗ್ರಾಮೀಣ ಪ್ರದೇಶದ ಶಕ್ತಿಯಾದರೆ, ಶಿಕ್ಷಣವೇ ದೇಶದಲ್ಲಿ ಸಮಾನತೆ ತರುವ ಮುಖ್ಯ ಸಾಧನವಾಗಿದೆ. ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು ಎಂದು ಅಭಿಪ್ರಾಯಪಟ್ಟರು. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ್ಯ ಇದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆ ಇದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಸಂವಿಧಾನವೇ ನಮ್ಮಲ್ಲಿ ಪರಮೋಚ್ಛವಾದುದು. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದು ಅವರು ಹೇಳಿದರು. ದೇಸ ಸೇವೆಗೆ ಮುಂದೆ ಬನ್ನಿ: ನಾವು ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು. ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕು. ಮೆಸಪಟೋಮಿಯಾ, ಚೀನಾ ನಾಗರಿಕತೆ ನಾಶವಾಗಿದೆ. ಆದರೆ ನಮ್ಮ ನಾಗರಿಕತೆ ಮಾತ್ರ ಇನ್ನೂ ಬೆಳೆಯುತ್ತಿದೆ. ಬಾಹ್ಯ ಶಕ್ತಿಗಳು ನಮ್ಮನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಸಾರ್ವಜನಿಕ ಸೊತ್ತುಗಳನ್ನು ನಾಶಮಾಡುವಂತಹ ವೈಪರೀತ್ಯಗಳು ಸಂಭವಿಸುತ್ತಿವೆ. ಇವುಗಳಿಗೆ ಪೂರ್ಣ ತಿಲಾಂಜಲಿ ನೀಡಬೇಕು. 2047ರ ವೇಳೆಗೆ ಪರಿಪೂರ್ಣ ಸಶಕ್ತ ಭಾರತದ ಗುರಿಯನ್ನು ತಲುಪಬೇಕಾಗಿದೆ. ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ. ದೇಶದ ಸೇವೆಗಾಗಿ ಜನತೆ ಮುಂದೆ ಬರಬೇಕಿದೆ ಎಂದರು. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು. ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಮರೆಯಬಾರದು. ದಿನದ 24 ಗಂಟೆಯೂ ರಾಜಕಾರಣವೇ ಮುಖ್ಯವಾಗಿರಬೇಕೇ ? ದೇಶ ಸೇವೆಗೆ ಸಮಯ ವಿನಿಯೋಗ ಮಾಡುತ್ತಿದ್ದಾರೆಯೇ ? ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ ಇತ್ಯಾದಿ ಬಗ್ಗೆ ಯೋಚಿಸಬೇಕು. ಅತ್ಯುನ್ನತ ನಾಗರಿಕತೆ ನಮ್ಮದು. ಯಾವುದಕ್ಕೂ ದ್ವೇಷ ಉತ್ತರವಲ್ಲ. ದೇಶದಲ್ಲಿ ಸಮಗ್ರತೆ, ವೈವಿಧ್ಯತೆಯನ್ನು ಉಳಿಸಿಕೊಳ್ಳಬೇಕಾಗಿದೆ. ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ. ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಮೂಡಬೇಕಾಗಿದೆ. ಸಾಮಾಜಿಕ ಸದ್ಭಾವ ಬರಬೇಕಾದರೆ ಭಾರತಮಾತೆ ಒಂದೇ ಎಂದು ಭಾವಿಸಿದಾಗ ಈ ಭಾವನೆ ಬರುತ್ತದೆ. ನಾವು ದೇಶಕ್ಕಾಗಿ ಕೆಲಸ ಮಾಡಬೇಕಿದೆ. ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ಅವರು ಆಶಿಸಿದರು. ಭಾರತೀಯ ಕಾರ್ಪೊರೇಟ್‌ ಸಂಸ್ಥೆಗಳು ಧಾರ್ಮಿಕ ಸಂಸ್ಥೆಗಳ ಮೂಲಸೌಕರ್ಯ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಉತ್ತೇಜಿಸಲು ಸಿಎಸ್‌ಆರ್‌ ನಿಧಿಯನ್ನು ಕಾಣಿಕೆಯಾಗಿ ನೀಡುತ್ತಿವೆ. ಈ ಭೂಮಿಯನ್ನು ಪರಿಸರಸ್ನೇಹಿಯಾಗಿ ಕಾಣುವುದರ ಜೊತೆಗೆ ಎಳವೆಯಲ್ಲೇ ಮಕ್ಕಳು ಧಾರ್ಮಿಕತೆಗೆ ತೆರೆದುಕೊಳ್ಳುವಂತೆ ಮಾಡಬೇಕು. ದೇಶಕ್ಕಾಗಿ ಕೆಲಸ ಮಾಡುವ ಮಾನಸಿಕತೆಯನ್ನು ಎಲ್ಲರಲ್ಲೂ ಬೆಳೆಸಬೇಕು ಎಂದು ಅವರು ಆಶಿಸಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ,.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ, ಜ್ಞಾನವಿಕಾಸ ಮಹಿಳಾ ಸಬಲೀಕರಣ ಕಾರ್ಯಕ್ರಮಗಳ ಅಧ್ಯಕ್ಷೆ ಡಾ.ಹೇಮಾವತಿ ಹೆಗ್ಗಡೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್‌, ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್‌ ವೇದಿಕೆಯಲ್ಲಿದ್ದರು. ಉಪನ್ಯಾಸಕ ಡಾ.ಶ್ರೀಧರ ಭಟ್‌ ನಿರೂಪಿಸಿದರು.

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Article Image

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

ಉಜಿರೆ: ಯುವಜನತೆ ಸಮಾಜದ ಅಮೂಲ್ಯ ಮಾನವಸಂಪನ್ಮೂಲವಾಗಿದ್ದು, ವಿದ್ಯಾವಂತರು ವಿಚಾರವಂತರಾಗುವುದರೊಂದಿಗೆ ಪರಿಶುದ್ಧ ಆಚಾರವಂತರು ಆಗಬೇಕು ಎಂದು ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಅವರು ಶನಿವಾರ ಸುಲ್ಕೇರಿಯಲ್ಲಿ ಭಗವಾನ್ ಶ್ರೀ ನೇಮನಾಥಸ್ವಾಮಿ ಬಸದಿ ವಠಾರದಲ್ಲಿ ನಿರ್ಮಿಸಲಾದ ಶ್ರೀ ನೇಮಿನಾಥಸ್ವಾಮಿ ಸಭಾಭವನವವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಯಾವುದೇ ಸತ್ಕಾರ್ಯ ನಡೆಯಬೇಕಾದರೆ ಯೋಗ ಮತ್ತು ಸಂದರ್ಭ ಒದಗಿ ಬರಬೇಕು ಕಟ್ಟಡ ನಿರ್ಮಾಣದಲ್ಲಿ ವಾಸ್ತುವಿನ ಪ್ರಭಾವ ಇರುತ್ತದೆ. ಧರ್ಮಸ್ಥಳದ ವತಿಯಿಂದ ಕಾರ್ಕಳದಲ್ಲಿರುವ ಜೈನಮಠವನ್ನು ನವೀಕರಣಗೊಳಿಸಿ ಸಮಾಜಕ್ಕೆ ಅರ್ಪಿಸಿದ ಬಳಿಕ ಕಾರ್ಕಳ ಸೀಮೆಯ ಅನೇಕ ಪ್ರಾಚೀನ ಬಸದಿಗಳು ಜೀರ್ಣೋದ್ಧಾರಗೊಂಡು ಪಂಚಕಲ್ಯಾಣ ಸಹಿತ ಪ್ರತಿಷ್ಠಾ ಮಹೋತ್ಸವಗಳು ನಡೆಯುತ್ತಿರುವುದು ಶುಭದಾಯಕವಾಗಿದೆ. ದಾನ - ಧರ್ಮಾದಿ ಸತ್ಕಾರ್ಯಗಳಲ್ಲಿ ಯುವಜನತೆ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಸ್ತುತ್ಯಾರ್ಹವಾಗಿದೆ ಎಂದರು. ಆಶೀರ್ವಚನ ನೀಡಿದ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಧರ್ಮದ ಮರ್ಮವನ್ನರಿತು ಆಚರಣೆ ಮಾಡಿದಾಗ ಪಾಪಕರ್ಮಗಳ ಕ್ಷಯವಾಗಿ ಅಕ್ಷಯ ಸುಖವನ್ನೀಯುವ ಮೋಕ್ಷಪ್ರಾಪ್ತಿ ಸಾಧ್ಯವಾಗುತ್ತದೆ. ನಿತ್ಯವೂ ಮಂದಿರಗಳಿಗೆ ಹೋಗಿ ದೇವರದರ್ಶನ, ಜಪ, ತಪ, ಧ್ಯಾನ ಮಾಡಬೇಕು. ಮಕ್ಕಳಿಗೆ ಉತ್ತಮ ಧಾರ್ಮಿಕ ಸಂಸ್ಕಾರ ನೀಡಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ವಿಧಾನಪರಿಷತ್ತಿನ ಮಾಜಿಸದಸ್ಯ ಕೆ. ಹರೀಶ್‌ಕುಮಾರ್ ಮಾತನಾಡಿ ಅಲ್ಪಸಂಖ್ಯಾತರಾದರೂ ಜೈನರ ಶಿಸ್ತು, ಶ್ರದ್ಧೆ, ಭಕ್ತಿ, ಅಹಿಂಸೆ ಹಾಗೂ ಸಮಾಜ ಸೇವಾಕಳಕಳಿಯನ್ನು ಶ್ಲಾಘಿಸಿದರು. ಸರ್ಕಾರದಿಂದ ಈಗಾಗಲೇ ಸಭಾಭವನಕ್ಕೆ 50 ಲಕ್ಷ ರೂ. ಮಂಜೂರಾಗಿದ್ದು ಸದ್ಯದಲ್ಲೇ ಇನ್ನೂ 30 ಲಕ್ಷ ರೂ. ಅನುದಾನ ದೊರಕಲಿದೆ ಎಂದರು. ಕೆ. ಹರೀಶ್‌ಕುಮಾರ್ ಅವರನ್ನು ಗೌರವಿಸಲಾಯಿತು. ಶಾಸಕ ಹರೀಶ್ ಪೂಂಜ, ತುಮಕೂರಿನ ಉದ್ಯಮಿ ಜಿ. ಎಸ್. ರಾಜೇಂದ್ರ ಕುಮಾರ್ ಮತ್ತು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ಶುಭಾಶಂಸನೆ ಮಾಡಿದರು. ಅಧ್ಯಕ್ಷತೆ ವಹಿಸಿದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ ಮಾತನಾಡಿ, ಪಂಚಕಲ್ಯಾಣ ಮತ್ತು ಬಸದಿ ಜೀರ್ಣೋದ್ಧಾರ ಕಾರ್ಯದಲ್ಲಿ ಯುವಜನತೆಯ ಸಕ್ರಿಯ ಸಹಕಾರಕ್ಕೆ ಅಭಿನಂದಿಸಿದರು. ಬಸದಿಯ ಆಡಳಿತ ಮೊಕ್ತೇಸರ ಎನ್. ರವಿರಾಜ್ ಹೆಗ್ಡೆ ನಾವರಗುತ್ತು ಉಪಸ್ಥಿತರಿದ್ದರು. ಪ್ರಾಂಜಲಿ, ಪಿಲ್ಯ ಪ್ರಾರ್ಥನೆ ಹಾಡಿದರು ವಕೀಲರಾದ ಅಜಿತ್, ನಾವರಗುತ್ತು ಸ್ವಾಗತಿಸಿದರು. ಉಜಿರೆಯ ಎಸ್.ಡಿ.ಎಮ್. ಸ್ವಾಯತ್ತ ಕಾಲೇಜಿನ ಉಪನ್ಯಾಸಕ ಪ್ರೊ. ನವೀನ್‌ಕುಮಾರ್ ಜೈನ್ ಧನ್ಯವಾದವಿತ್ತರು. ಶಿಕ್ಷಕ ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರ್ವಹಿಸಿದರು. ಬಸದಿಯಲ್ಲಿ ಋಷಿಮಂಡಲ ಆರಾಧನೆ, ಕೂಷ್ಮಾಂಡಿನಿ ಆರಾಧನೆ, ಪದ್ಮಾವತಿದೇವಿಗೆ ಕುಂಕುಮಾರ್ಚನೆ, ಕ್ಷೇತ್ರಪಾಲ ಮತ್ತು ನಾಗದೇವರಿಗೆ ನವಕಲಶ ಅಭಿಷೇಕ ನಡೆಯಿತು.

ಧಾರ್ಮಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಅವರಿಗೆ ಸನ್ಮಾನ

Article Image

ಧಾರ್ಮಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಅವರಿಗೆ ಸನ್ಮಾನ

ಮೈಸೂರಿನ ಗೊಮ್ಮಟಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಮೃತ ಮಹೋತ್ಸವ ಕಾರ‍್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಅವರನ್ನು ಹೊಂಬುಜ ಹಾಗೂ ಕನಕಗಿರಿ ಜೈನ ಮಠದ ಸ್ವಾಮೀಜಿಗಳು ಅಮೃತ ಮಹೋತ್ಸವದ ಪದಾಧಿಕಾರಿಗಳ ಜೊತೆ ಸನ್ಮಾನಿಸಿದರು.

ಭ. ಶ್ರೀ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ 2024ರ ಲೆಕ್ಕ ಪತ್ರ ಮಂಡಣೆ

Article Image

ಭ. ಶ್ರೀ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ 2024ರ ಲೆಕ್ಕ ಪತ್ರ ಮಂಡಣೆ

ವೇಣೂರು: ಭ| ಶ್ರೀ ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ-2024ರ ಲೆಕ್ಕ ಪತ್ರ ಮಂಡಣೆಯು ನಾಳೆ(ಡಿ.15) ಅಪರಾಹ್ನ ಗಂಟೆ 4.30ಕ್ಕೆ ಸರಿಯಾಗಿ ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ಜರುಗಲಿರುವುದು. ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ ಭಾರತಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಪಾವನ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ಮಹಾಮಸ್ತಕಾಭಿಷೇಕ ಮಹೋತ್ಸವ-2024ರ ಅಧ್ಯಕ್ಷರೂ ಆಗಿರುವ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಗೌರವ ಮಾರ್ಗದರ್ಶನ ನೀಡಲಿದ್ದಾರೆ. ಅಳದಂಗಡಿ ಅರಮನೆಯ ತಿಮ್ಮಣ್ಣರಸರು, ಮಹಾಮಸ್ತಕಾಭಿಷೇಕ ಮಹೋತ್ಸವದ 2024ರ ಕಾರ್ಯಧ್ಯಕ್ಷರಾಗಿರುವ ಡಾ. ಪದ್ಮಪ್ರಸಾದ ಅಜಿಲರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿರುವರು. ಮಾಜಿ ಸಚಿವರು, ಮಹಾಮಸ್ತಕಾಭಿಷೇಕ ಮಹೋತ್ಸವದ 2024ರ ಉಪಾಧ್ಯಕ್ಷರು ಹಾಗೂ ಸರಕಾರಿ ಸಂಪರ್ಕ ಸಮಿತಿಯ ಸಂಚಾಲಕರಾಗಿರುವ ಕೆ. ಅಭಯಚಂದ್ರ ಜೈನ್‌ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವೇಣೂರಿನ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿಗಳು, ಮಹಾಮಸ್ತಕಾಭಿಷೇಕ ಮಹೋತ್ಸವ-2024ರ ಪ್ರಧಾನ ಕಾರ್ಯದರ್ಶಿಗಳಾಗಿರುವ ವಿ. ಪ್ರವೀಣ್ ಕುಮಾರ್ ಇಂದ್ರರವರು ತಿಳಿಸಿರುತ್ತಾರೆ.

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Article Image

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಈಗ ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಸಂಭ್ರಮ, ಸಡಗರ. ದೇವಸ್ಥಾನ, ಬೀಡು, ವಸತಿಛತ್ರಗಳು, ಬಾಹುಬಲಿಬೆಟ್ಟ, ಪ್ರವೇಶದ್ವಾರ ಮೊದಲಾದ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನಾಡಿನೆಲ್ಲೆಡೆಯಿಂದ ಪ್ರತಿದಿನ ಸಹಸ್ರಾರು ಭಕ್ತಾದಿಗಳು ಹಾಗೂ ಪ್ರವಾಸಿಗರು ಬರುತ್ತಿದ್ದು, ದೇವರ ದರ್ಶನದ ಬಳಿಕ ಮಂಜೂಷಾ ವಸ್ತುಸಂಗ್ರಹಾಲಯ, ಕಾರ್‌ಮ್ಯೂಸಿಯಂ, ಲಲಿತೋದ್ಯಾನ, ರತ್ನಗಿರಿ (ಬಾಹುಬಲಿಬೆಟ್ಟ) ವೀಕ್ಷಿಸಿ ಸುಂದರ ಪ್ರಾಕೃತಿಕ ಪರಿಸರದ ಸೊಗಡನ್ನು ಸವಿಯುವುದರೊಂದಿಗೆ ತಮ್ಮ ಜ್ಞಾನಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ರೇಕ್ಷಕರನ್ನು ಸೆಳೆಯುವ ವಸ್ತುಪ್ರದರ್ಶನ: ಪ್ರೌಢಶಾಲಾ ವಠಾರದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ವಸ್ತುಪ್ರದರ್ಶನದಲ್ಲಿ ಮುನ್ನೂರಕ್ಕೂ ಮಿಕ್ಕಿ ಮಳಿಗೆಗಳಿದ್ದು, ಪ್ರೇಕ್ಷಕರ ಕಣ್ಮನ ಸೆಳೆಯುತ್ತಿವೆ. ಪುಸ್ತಕಮಳಿಗೆಗಳು, ಕೃಷಿ, ವಿಜ್ಞಾನ, ಕಲೆ, ಸಂಸ್ಕೃತಿ ಹಾಗೂ ಗ್ರಾಮೀಣ ಕರಕುಶಲ ಕಲೆಗಳಿಗೆ ಸಂಬAಧಪಟ್ಟ ಮಳಿಗೆಗಳು ಪ್ರೇಕ್ಷಕರ ಗಮನ ಸೆಳೆಯುತ್ತಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಳಿಗೆ, ಪುಸ್ತಕದ ಮಳಿಗೆಗಳು, ಮಡಿಕೆ ತಯಾರಿ, ಹಾಳೆತಟ್ಟೆಗಳ ಮಳಿಗೆ, ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಮಳಿಗೆ, ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯ ಮಳಿಗೆ ಪ್ರೇಕ್ಷಕರ ಕಣ್ಮನ ಸೆಳೆಯುತ್ತವೆ. ಕರ್ನಾಟಕ ಬ್ಯಾಂಕ್, ಕೆನರಾ ಬ್ಯಾಂಕ್, ಜೀವವಿಮೆ, ಸರ್ಕಾರದ ವಿವಿಧ ಇಲಾಖೆಗಳ ಮಳಿಗೆಗಳು ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ, ಮಾರ್ಗದರ್ಶನ ನೀಡುತ್ತಿವೆ. ಕೆ.ಎಸ್.ಆರ್.ಟಿ.ಸಿ. ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಹಲವಾರು ಮಂದಿ ಭಕ್ತರು ಪಾದಯಾತ್ರೆಯಲ್ಲಿ, ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬರುತ್ತಿದ್ದಾರೆ. ಭಕ್ತರು ತಾವು ಬೆಳೆದ ತರಕಾರಿ, ಹಣ್ಣುಹಂಪಲು, ಅಕ್ಕಿ, ದವಸಧಾನ್ಯಗಳನ್ನು ಕೂಡಾ ಕಾಣಿಕೆಯಾಗಿ ಅರ್ಪಿಸುತ್ತಿದ್ದಾರೆ. ಎಲ್ಲೆಲ್ಲೂ ಸೊಬಗಿದೆ, ಸೊಗಸಿದೆ. ಶಿಸ್ತು, ಸ್ವಚ್ಛತೆ, ದಕ್ಷತೆ ಹಾಗೂ ದೇವಳ ಸಿಬ್ಬಂದಿ ಮತ್ತು ಸ್ವಯಂ ಸೇವಕರ ನಗುಮೊಗದ ಸೇವೆ ಭಕ್ತರ ಮುಕ್ತ ಪ್ರಶಂಸೆಗೆ ಪಾತ್ರವಾಗಿದೆ. ವಸ್ತುಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30 ರಿಂದ ರಾತ್ರಿ 10.30ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇಂದು ಶುಕ್ರವಾರ ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 92ನೆ ಅಧೀವೇಶನವನ್ನು ಗೃಹಸಚಿವ ಡಾ. ಜಿ.ಪರಮೇಶ್ವರ ಉದ್ಘಾಟಿಸುವರು. ಬೆಂಗಳೂರಿನ ಕೈಲಾಸ ಆಶ್ರಮದ ಜಯೇಂದ್ರಪುರಿ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಡಾ. ಜಿ.ಬಿ. ಹರೀಶ್, ಡಾ. ಜೋಸೇಫ್, ಎನ್. ಎಂ. ಮತ್ತು ಬಿಜಾಪುರದ ಮೆಹತಾಬ ಇಬ್ರಾಹಿಂ ಸಾಬ ಕಾಗವಾಡ ಧಾರ್ಮಿಕ ಉಪನ್ಯಾಸ ನೀಡುವರು.

ತುಳುನಾಡಿನ ಸಾಂಸ್ಕೃತಿಕ ಅನನ್ಯತೆಗೆ ಜೈನ ಅರಸರ ಕೊಡುಗೆ ಅಪೂರ್ವವಾದದ್ದು: ಡಾ. ಪುಂಡಿಕಾಯಿ ಗಣಪಯ್ಯ ಭಟ್

Article Image

ತುಳುನಾಡಿನ ಸಾಂಸ್ಕೃತಿಕ ಅನನ್ಯತೆಗೆ ಜೈನ ಅರಸರ ಕೊಡುಗೆ ಅಪೂರ್ವವಾದದ್ದು: ಡಾ. ಪುಂಡಿಕಾಯಿ ಗಣಪಯ್ಯ ಭಟ್

ತುಳುನಾಡಿನ ಸಾಂಸ್ಕೃತಿಕ ಅನನ್ಯತೆಗೆ ಉದಾರವಾದಿ ನಿಲುಮೆಗೆ ಸ್ವಾಭಿಮಾನದ ಚಿಂತನೆಗಳಿಗೆ ಜೈನ ಅರಸರ ಕೊಡುಗೆ ಗಣನೀಯವಾದದ್ದು ಎಂಬುದಾಗಿ ಡಾ. ಪುಂಡಿ ಕಾಯಿ ಗಣಪಯ್ಯ ಭಟ್ ಅಭಿಪ್ರಾಯಪಟ್ಟರು. ಇಂದು ಮೂಡುಬಿದರೆ ಜೈನ್ ಮಿಲನ್ ಆಶ್ರಯದಲ್ಲಿ ಜೈನ ಹೈಸ್ಕೂಲಿನಲ್ಲಿ ನಡೆದ ಮಾಸಿಕ ಸಭೆಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಇವರು ತುಳುನಾಡಿಗೆ ಜೈನ ಅರಸರ ಕೊಡುಗೆಗಳು ಎನ್ನುವ ವಿಚಾರದಲ್ಲಿ ಉಪನ್ಯಾಸವನ್ನು ನೀಡಿದರು ಅಳುಪರ ನಂತರ ಸುಮಾರು ಐದು ಶತಮಾನಗಳಷ್ಟು ದೀರ್ಘಾವಧಿಗೆ ತುಳುನಾಡನ್ನು ಆಳ್ವಿಕೆ ಮಾಡಿದ ಸುಮಾರು 15 ಕಿಂತ ಹೆಚ್ಚು ರಾಜಮನೆತನಗಳು ಬೀಡು ಬಲ್ಲಾಳರು ತುಳುನಾಡಿನ ಸ್ವಾಭಿಮಾನಿ ಅಸ್ಮಿತೆಗೆ ಕಾರಣರಾಗಿದ್ದಾರೆ ಎಂಬುದಾಗಿ ತಿಳಿಸಿದರು ವಿಜಯನಗರ ಹಾಗೂ ಕೆಳಗೆ ಅರಸರೊಂದಿಗೂ ಸಂಘರ್ಷಕ್ಕೆ ಇಳಿದ ಇಲ್ಲಿನ ಅರಸರು ಇಲ್ಲಿಯ ವಿಶಿಷ್ಟ ಸಂಸ್ಕೃತಿಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು ತಮ್ಮೊಳಗೆ ಸಂಘರ್ಷಗಳು ನಡೆಸಿದ್ದರು ರಕ್ತಪಾತವಿಲ್ಲದೆ ಒಪ್ಪಂದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಿದ ಹತ್ತಾರು ಉದಾಹರಣೆಗಳನ್ನ ಜೈನ ಸಂಸ್ಕೃತಿಯ ಹಿನ್ನೆಲೆಯಲ್ಲಿ ಗಮನಿಸಬಹುದು ಹಿಂದೂ ದೇವಾಲಯಗಳ ಸ್ಥಾಪನೆ ಧರ್ಮ ಸಾಮರಸ್ಯದ ಮೂಲಕ ಬಹು ಜನರಿಗೆ, ಪ್ರಜೆಗಳಿಗೆ ಬೇಕಾದ ರೀತಿಯಲ್ಲಿ ಬದುಕಿ ಬಾಳಿದವರು ಇಲ್ಲಿಯ ಅರಸು ಮನೆತನದವರು ಎಂದು ಉದಾಹರಣೆಗಳ ಮೂಲಕ ವಿವರಿಸಿದರು ಸಭೆಯ ಅಧ್ಯಕ್ಷತೆ ವಹಿಸಿದ್ದ ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾತ್ ಬಲ್ನಾಡು ಅವರು ಸುಳ್ಯ ಭಾಗದಲ್ಲಿ ಆಳ್ವಿಕೆ ಮಾಡಿದ ಬಲ್ಲಾಳರ ಮತ್ತು ಉಳಿದಿರುವ ಬಸದಿಗಳ ಕುರುಹುಗಳನ್ನು ರಕ್ಷಿಸುವ ಅಗತ್ಯವನ್ನು ವಿವರಿಸಿದರು. ಸ್ವಧರ್ಮ ನಿಷ್ಠೆ ಪರಧರ್ಮ ಸಹಿಷ್ಣುತೆ ರಕ್ತಗತವಾಗಿ ಇರುವುದರಿಂದಲೇ ನೂರಾರು ದೇವಾಲಯಗಳನ್ನು ದೈವಸ್ಥಾನಗಳನ್ನು ಬಸದಿಗಳನ್ನು ನಿರ್ಮಾಣ ಮಾಡುವ ಆಶ್ರಯ ಕೊಡುವ ಪೋಷಕರಾಗಿ ಗುತ್ತು ಬೀಡು ಅರಮನೆಗಳು ಬೆಳೆದು ಬರಲು ಕಾರಣವಾಯಿತು ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಕಾರ್ಯಕ್ರಮದಲ್ಲಿ ಜೈನ್ ಮಿಲನ್ ಅಧ್ಯಕ್ಷರಾದ ಆನಡ್ಕ ದಿನೇಶ್ ಕುಮಾರ್ ಅವರ ಕಲ್ಪನೆಯ ಬೆಳ್ಳಿಯ ಚಿತ್ತಾರ ಸಹಿತದ ಸನ್ಮಾನ ಪತ್ರವನ್ನು ನೀಡಿ ವೀಣಾ ರಘು ಚಂದ್ರ ಶೆಟ್ಟಿ ಅವರನ್ನು ಅವರ ಸಾಹಿತ್ಯ ಸೇವೆಗಳಿಗಾಗಿ ಸನ್ಮಾನಿಸಲಾಯಿತು. ಕೃಷಿ ವಿಚಾರ ವಿನಿಮಯ ಕೇಂದ್ರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಭಯ್ ಕುಮಾರ್ ಅವರನ್ನು ಗೌರವಿಸಲಾಯಿತು. ಡಾ. ಬಿ.ಪಿ. ಸಂಪತ್ ಕುಮಾರ್ ಸ್ವಾಗತಿಸಿ ಅನಂತವೀರ ಜೈನ್ ವರದಿ ವಾಚಿಸಿ ವಂದಿಸಿದರು. ಖಜಾಂಜಿ ಪುಷ್ಪರಾಜ್ ಜೈನ್ ಮುಖ್ಯ ಅತಿಥಿಯವರ ಪರಿಚಯ ಮಾಡಿದರು. ವಲಯ ನಿರ್ದೇಶಕರಾದ ಜಯರಾಜ್ ಕಂಬಳಿ ಅತಿಥೇಯರ ಪರವಾಗಿ ಸಂಪತ್ ಸಾಮ್ರಾಜ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಿನ್ಮಯಿ ಪ್ರಾರ್ಥನೆ ನೆರವೇರಿಸಿ, ಅಪೇಕ್ಷ ಕಾರ್ಯಕ್ರಮ ನಿರ್ವಹಿಸಿದರು.

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ

Article Image

ತೌಳವ ಇಂದ್ರ ಸಮಾಜದ ವಾರ್ಷಿಕ ಮಹಾಸಭೆ

ತೌಳವ ಇಂದ್ರ ಸಮಾಜ(ರಿ) ಇದರ ಮಹಾಸಭೆ ದಿನಾಂಕ 3/11/2024ರಂದು ಮೂಡಬಿದ್ರೆಯ ಶ್ರೀ ಧವಲಾ ಕಾಲೇಜ್ ನ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. "ತುಳು ಇಂದ್ರರ ಜೀವನ ಶೈಲಿ, ಸಾಮಾಜಿಕ ಪರಂಪರೆ, ಪೌರೋಹಿತ್ಯದ ಮಾದರಿಗಳು ವಿಭಿನ್ನವಾಗಿಯೂ ಶಾಸ್ತ್ರೋಕ್ತವೂ ಆಗಿದ್ದು ಸರ್ವ ಜನಾಧರಣೆಗೆ ಪಾತ್ರವಾಗಿದೆ, ಈ ಉನ್ನತ ಪರಂಪರೆಯನ್ನು ಕಾಪಾಡುವುದು ಮತ್ತು ಪರಸ್ಪರ ಬಂಧುತ್ವ ಸಂವರ್ಧನೆ ಈ ಸಂಘಟನೆಯ ಉದ್ದೇಶ" ಎಂದು ಪ್ರಾಸ್ತಾವಿಕ ಮಾತುಗಳನ್ನು ಆಡುತ್ತಾ ಉಪಾಧ್ಯಕ್ಷರಾದ ಎಂ. ಅಕ್ಷಯ ಕುಮಾರ್ ರವರು ಅತಿಥಿಗಳನ್ನೂ, ಸನ್ಮಾನಗೊಳ್ಳಲಿರುವ ಮಹನೀಯರನ್ನೂ ಪದಾಧಿಕಾರಿಗಳನ್ನೂ ಸ್ವಾಗತಿಸಿದರು. ಸಭೆಯ ಅಧ್ಯಕ್ಷತೆಯನ್ನು ನಿವೃತ್ತ ಶಿಕ್ಷಕರಾಗಿರುವ ಮೂಡಬಿದ್ರೆ ಜ್ಞಾನಚಂದ್ರ ಇಂದ್ರರು ಮಾತಾಡುತ್ತ "ಹಿಂದೆ ಇಂದ್ರರ ಕುಲಕಸುಬು ಪೌರೋಹಿತ್ಯ ಆದರೂ ಇಂದು ಜೀವನ ನಿರ್ವಹಣೆಗಾಗಿ ಬೇರೆ ಬೇರೆ ಉದ್ಯೋಗ, ಬುಸ್ಸಿನೆಸ್ ಗಳನ್ನು ನೆಚ್ಚಿಕೊಂಡಿದ್ದಾರೆ. ಪೌರೋಹಿತ್ಯ ಈಗ ಮುಖ್ಯ ಕಸುಬಾಗಿ ಉಳಿದಿಲ್ಲಾ ಎಂದರಲ್ಲದೆ, ಸದಸ್ಯರೆಲ್ಲರೂ ಅಂಗಸಂಸ್ಥೆಯಾದ ಸದ್ಧರ್ಮ ಸೌಹಾರ್ದ ಸಹಕಾರಿ ಸಂಸ್ಥೆ ಲಾಭದಲ್ಲಿ ನಡೆಯುತ್ತಿದ್ದು, ಆ ಸಹಕಾರಿಯನ್ನು ಇನ್ನೂ ಚೆನ್ನಾಗಿ ಬೆಳೆಸಬೇಕಾಗಿದೆ"ಎಂದರು. ನಂತರ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ವಾನ್ ಡಾ I ಎಸ್.ಪಿ.ವಿಧ್ಯಾಕುಮಾರ್, ವಿಜ್ಞಾನಿ ಡಾI ಸುಕೇಶ್ ಕುಮಾರ್ ಬಜಿರೆ ಹಾಗೂ ಪ್ರಾಂಶುಪಾಲೆ ಆಶಾಲತಾ ದಾಂಡೇಲಿಯವರನ್ನೂ ಹಿರಿಯ ಪುರೋಹಿತರಾದ ಚಂದ್ರಶೇಖರ ಇಂದ್ರ ಬೋಳ ಬಸದಿ ಮತ್ತು ದೇವಕುಮಾರ್ ಇಂದ್ರ ಮುಳಿಕಾರು ಬಸದಿ ಇವರುಗಳನ್ನು ಶಾಲು, ಹಾರ, ಫಲ ಕಾಣಿಕೆ, ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು. ಹತ್ತನೇ ತರಗತಿ ಹಾಗೂ ದ್ವಿತೀಯ ಪಿ.ಯು.ಸಿ. ಯ ಪ್ರತಿಭಾವಂತ ಸಮಾಜದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಕಾರ್ಯದರ್ಶಿ ಬಿ. ಅಭಯ ಕುಮಾರ್ ಇಂದ್ರ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ವಿಜಯಕುಮಾರಿ ಯವರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಪ್ರತಿಷ್ಠಾ ಪುರೋಹಿತರಾದ ಪದ್ಮಪ್ರಭ ಇಂದ್ರ, ನಾಗೇಂದ್ರ ಇಂದ್ರ, ಅಜಿತಕುಮಾರ್ ಇಂದ್ರ, ಅರುಣಕುಮಾರ್ ಇಂದ್ರರವರನ್ನು ಗೌರವಿಸಲಾಯಿತು. ದಿವ್ಯಾ ವೀರೇಂದ್ರರವರು ಪ್ರಸ್ತುತ ವರ್ಷದಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಅರ್ಪಣಾ ಕಾರ್ಯಕ್ರಮ ನೆರವೇರಿಸಿದರು. ನಿರ್ದೇಶಕ ಶೀತಲ್ ಕುಮಾರ್ ಸರಕಾರದಿಂದ ಅಲ್ಪಸಂಖ್ಯಾತರಿಗೆ ಕೊಡಮಾಡಿದ ಸೌಲಭ್ಯಗಳ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಇಂದ್ರ ಸಮಾಜದ ಸದಸ್ಯರ ವಿಳಾಸದ ತಿದ್ದುಪಡಿ ಮಾಡಿದ ಡೈರೆಕ್ಟರಿ ಪ್ರತಿಯನ್ನು ಬಿಡುಗಡೆ ಗೊಳಿಸಲಾಯಿತು. ಆರತಿ ವಿರಾಜ್ ಪ್ರಾರ್ಥನೆ ಮಾಡಿದರು, ನಿರ್ದೇಶಕ ಹರಿಶ್ಚಂದ್ರ ಜೈನ್ ಸನ್ಮಾನಕಾರ್ಯಕ್ರಮದ ನಿರೂಪಣೆ ಮಾಡಿದರು. ಸದ್ಧರ್ಮ ಸೌಹಾರ್ಧ ಸಹಕಾರಿ ಅಧ್ಯಕ್ಷರಾದ ಪ್ರವೀಣ ಕುಮಾರ್ ಉಜಿರೆ, ನಿರ್ದೇಶಕರಾದ ವೃಷಭ ಕುಮಾರ್ ಇಂದ್ರ, ಅರ್ಕ ಕೀರ್ತಿ ಇಂದ್ರ, ಯುವತೌಳವ ಇಂದ್ರ ಸಮಾಜದ ಅಧ್ಯಕ್ಷರಾದ ಶ್ವೇತ ಪ್ರವೀಣ್ ಹಾಗೂ ಕಾರ್ಯದರ್ಶಿ ಅನಿತ್ ಕುಮಾರ್ ಬಿ. ಮತ್ತು ತೌಳವ ಇಂದ್ರ ಸಮಾಜದ ಎಲ್ಲಾ ನಿರ್ದೇಶಕರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿರ್ದೇಶಕ ಪ್ರಮೋದ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಜೊತೆ ಕಾರ್ಯದರ್ಶಿ ಸುವಿಧಿ ಇಂದ್ರರು ಧನ್ಯವಾದ ಅರ್ಪಿಸಿದರು. ಅರುಣಾ ಇಂದ್ರರ ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ಹುಬ್ಬಳ್ಳಿ ಜೈನ ಬೋರ್ಡಿಂಗ್ ನಲ್ಲಿ ರತ್ನತ್ರಯ ವಿಧಾನ ಮತ್ತು ಮೃತ್ಯುಂಜಯ ಆರಾಧನಾ ಕಾರ್ಯಕ್ರಮ

Article Image

ಹುಬ್ಬಳ್ಳಿ ಜೈನ ಬೋರ್ಡಿಂಗ್ ನಲ್ಲಿ ರತ್ನತ್ರಯ ವಿಧಾನ ಮತ್ತು ಮೃತ್ಯುಂಜಯ ಆರಾಧನಾ ಕಾರ್ಯಕ್ರಮ

ಹುಬ್ಬಳ್ಳಿ ಜೈನ ಬೋರ್ಡಿಂಗ್ ನಲ್ಲಿ ಚಾತುರ್ಮಾಸ ಅನುಷ್ಠಾನದಲ್ಲಿರುವ ಪರಮ ಪೂಜ್ಯ ವಾತ್ಸಲ್ಯ ಮೂರ್ತಿ ಪುಣ್ಯಸಾಗರ್ ಮಹಾರಾಜರ ಸಾನಿಧ್ಯದಲ್ಲಿ ರವಿವಾರ ಜರುಗಿದ "ರತ್ನತ್ರಯ ವಿಧಾನ ಮತ್ತು ಮೃತ್ಯುಂಜಯ ಆರಾಧನಾ" ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರಾದ ಸನ್ಮಾನ್ಯ ಡಿ. ಸುಧಾಕರ್ ಇವರು ಭಾಗಿಯಾಗಿ ಪೂಜ್ಯರ ಆಶೀರ್ವಾದ ಪಡೆದರು. ದಿಗಂಬರ ಜೈನ್ ಬೋರ್ಡಿಂಗ್ ವತಿಯಿಂದ ಅಧ್ಯಕ್ಷರಾದ ವಿದ್ಯಾದರ ಪಾಟೀಲ ಹಾಗೂ ಕಮಿಟಿ ಸದಸ್ಯರು ಸಚಿವರನ್ನು ಸನ್ಮಾನಿಸಿ ಜೈನ ಸಮುದಾಯದ ಬಹುದಿನಗಳ ಬೇಡಿಕೆಯಾದ "ಜೈನ್ ಅಭಿವೃದ್ಧಿ ನಿಗಮ" ಸ್ಥಾಪಿಸುವ ಕುರಿತು ಮನವಿ ಸಲ್ಲಿಸಿ ಆದಷ್ಟು ಬೇಗ ಅನುಷ್ಠಾನಗೊಳಿಸಲು ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಆರ್ ಟಿ ತನ್ನಪ್ಪನವರ, ಜಿ ಜಿ ಲೋಬೋಗೋಳ, ಸುಭದ್ರಮ್ಮ ಮುತ್ತಿನ, ದೇವೇಂದ್ರಪ್ಪ ಕಾಗೆನವರ, ವಿಮಲ ಚಂದ ಸಂಗಮಿ, ಪ್ರಶಾಂತ್ ಬಿ ಶೆಟ್ಟಿ , ಸ್ಮಿತಾ ವಾಕಳೆ, ಮಹಾವೀರ ಮಣಕಟ್ಟಿ, ಮಹಾವೀರ ಕಂಚಗಾರ ಉದಯ್ ಧಡೋತಿ, ಪಂಕಜಾ ಸೂಜಿ, ಹಾಗೂ ಸಮಾಜದ ಶ್ರಾವಕ-ಶ್ರಾವಕಿಯರು ಹಾಜರಿದ್ದರು. ವರದಿ : ಎಸ್. ಆರ್. ಮಲ್ಲಸಮುದ್ರ

ಭಗವಾನ್ ಮಹಾವೀರ ಸ್ವಾಮಿ ನಿರ್ವಾಣೋತ್ಸವ

Article Image

ಭಗವಾನ್ ಮಹಾವೀರ ಸ್ವಾಮಿ ನಿರ್ವಾಣೋತ್ಸವ

ಉಜಿರೆ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಗವಾನ್ ಮಹಾವೀರಸ್ವಾಮಿ ನಿರ್ವಾಣೋತ್ಸವದ ಪ್ರಯುಕ್ತ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ಶುಕ್ರವಾರ ಮುಂಜಾನೆ ಸಮಸ್ತ ಶ್ರಾವಕರು, ಶ್ರಾವಕಿಯರು ಅಷ್ಟವಿಧಾರ್ಚನೆ ಪೂಜೆ ಸಹಿತ ಅರ್ಘ್ಯವೆತ್ತಿದರು. ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಬಾಹುಬಲಿ ಸೇವಾಸಮಿತಿಯ ಸರ್ವಸದಸ್ಯರು ಹಾಗೂ ಊರಿನ ಶ್ರಾವಕರು, ಶ್ರಾವಕಿಯರು ಅಷ್ಟವಿಧಾರ್ಚನೆ ಪೂಜೆ ಸಹಿತ ಅರ್ಘ್ಯ ಎತ್ತುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದೇಶದ ಎಲ್ಲಾ ಜಿನಮಂದಿರಗಳಲ್ಲಿ ಶುಕ್ರವಾರ ಮುಂಜಾನೆ ಭಗವಾನ್ ಮಹಾವೀರ ಸ್ವಾಮಿಯ ನಿರ್ವಾಣಮಹೋತ್ಸವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಜೈನರು ಜಪ, ತಪ, ಧ್ಯಾನ, ಸ್ವಾಧ್ಯಾಯದೊಂದಿಗೆ ಉಪವಾಸ ಮೊದಲಾದ ವೃತ-ನಿಯಮಗಳನ್ನು ಪಾಲಿಸಿ ಪುಣ್ಯಸಂಚಯ ಮಾಡಿದರು.

ಧರ್ಮಸ್ಥಳ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೭ನೇ ವರ್ಧಂತ್ಯುತ್ಸವ

Article Image

ಧರ್ಮಸ್ಥಳ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೭ನೇ ವರ್ಧಂತ್ಯುತ್ಸವ

ಉಜಿರೆ: ರಾಷ್ಟ್ರಕವಿ ಕುವೆಂಪು ಸಾರಿದ ವಿಶ್ವಮಾನವ ಸಂದೇಶವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಕ್ಷರಶಃ ಸೇವಾ ರೂಪದಲ್ಲಿ ಮಾಡಿ ತೋರಿಸಿದ್ದಾರೆ. ಜೈನಧರ್ಮಕ್ಕೂ ಹಿಂದೂ ಧರ್ಮಕ್ಕೂ ಅವಿನಾಭಾವ ಸಂಬಂಧವಿದ್ದು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ – ಎಲ್ಲಾ ರಂಗಗಳಲ್ಲಿಯೂ ಹೆಗ್ಗಡೆಯವರು ಹೊಗಳಿಕೆಗೆ ಹಿಗ್ಗದೆ, ಟೀಕೆಗಳಿಗೆ ಅಂಜದೆ, ಸ್ಥಿತಪ್ರಜ್ಞೆಯಿಂದ ಎಲ್ಲಾ ಮಠ-ಮಂದಿರಗಳಿಗೂ ಮಾದರಿಯಾಗಿ ಅನವರತ ಸೇವೆ ಮಾಡಿ ಧರ್ಮಸ್ಥಳದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಪಸರಿಸಿದ್ದಾರೆ ಎಂದು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೭ನೆ ವರ್ಧಂತ್ಯುತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಜನರು ರಾಜಕಾರಣಿಗಳಿಗಿಂತಲೂ ಹೆಚ್ಚು ಧರ್ಮಾಧಿಕಾರಿಗಳಾದ ಹೆಗ್ಗಡೆಯವರಿಂದ ನಿರೀಕ್ಷೆ ಮಾಡುತ್ತಾರೆ. ಮಾತು ಬಿಡ ಮಂಜುನಾಥ ಎಂಬ ಮಾತಿನಿಂತೆ ಚತುರ್ವಿಧ ದಾನ ಪರಂಪರೆಯೊಂದಿಗೆ ಅರಿಷಡ್ವರ್ಗಗಳನ್ನು ಗೆದ್ದು ಬಹುಮುಖಿ ಸಮಾಜಸೇವಾ ಕಾರ್ಯಗಳಿಂದ ಇಂದು ಹೆಗ್ಗಡೆಯವರು ವಿಶ್ವ ಮಾನವರಾಗಿದ್ದಾರೆ ಎಂದು ಸ್ವಾಮೀಜಿ ಶ್ಲಾಘಿಸಿ ಅಭಿನಂದಿಸಿದರು. ಸರ್ವಜನಾಂಗದ ಶಾಂತಿಯ ತೋಟ ಧರ್ಮಸ್ಥಳ: ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪ್ರತಿಮೆ ಅನಾವರಣ ಮಾಡಿ ಶುಭಾಶಂಸನೆ ಮಾಡಿದ ಬೆಂಗಳೂರು ಗ್ರಾಮಾಂತರದ ಸಂಸದ ಡಾ. ಸಿ.ಎನ್. ಮಂಜುನಾಥ್ ಮಾತನಾಡಿ, ದೈಹಿಕ ಆರೋಗ್ಯಕ್ಕಿಂತಲೂ ಮಾನಸಿಕಆರೋಗ್ಯ ಮುಖ್ಯವಾದುದರಿಂದ ಸರ್ವಧರ್ಮೀಯರಿಗೂ ಶ್ರದ್ಧಾ-ಭಕ್ತಿಯ ಕೇಂದ್ರವಾದ ಧರ್ಮಸ್ಥಳವು ಮಾನಸಿಕ ಶಾಂತಿ-ನೆಮ್ಮದಿ ನೀಡುವ ಸರ್ವಜನಾಂಗದ ಶಾಂತಿಯ ತೋಟವಾಗಿದೆ ಎಂದು ಬಣ್ಣಿಸಿದರು. ಲಕ್ಷಾಂತರ ಮನೆಗಳಲ್ಲಿ ಇಂದು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ, ಉಚಿತ ಸಾಮೂಹಿಕ ವಿವಾಹ, ಸ್ವ-ಉದ್ಯೋಗ ತರಬೇತಿ ಕೇಂದ್ರ ಇತ್ಯಾದಿ ಯೋಜನೆಗಳಿಂದ ಜನರು ಸಾರ್ಥಕ ಬದುಕನ್ನು ಕಟ್ಟಿಕೊಂಡು ಎಲ್ಲಾ ಮನೆಗಳಲ್ಲಿ ನಂದಾದೀಪದಂತೆ ಬೆಳಗುತ್ತಿದ್ದಾರೆ. ಯಾವುದೇ ವ್ಯಾಪಾರೀಕರಣದ ಭಾವನೆಯಿಲ್ಲದೆ ನಿಸ್ವಾರ್ಥ ಸೇವಾ ಮನೋಭಾವದಿಂದ ಆರೋಗ್ಯ ಶಿಸ್ತು, ಸಂಯಮ, ಉತ್ತಮ ಸಂಸ್ಕಾರ ಮೂಡಿಸಿರುವುದು ಸಮಾಜಕ್ಕೆ ಕೊಟ್ಟ ಅಮೂಲ್ಯ ಕೊಡುಗೆಯಾಗಿದೆ. ಹುಂಡಿಯ ಹಣವನ್ನು ಲೋಕಕಲ್ಯಾಣಕ್ಕಾಗಿ ಬಳಿಸಿದ ಏಕೈಕ ಕ್ಷೇತ್ರ ಧರ್ಮಸ್ಥಳ ಆಗಿದೆ ಎಂದು ಅವರು ಶ್ಲಾಘಿಸಿದರು. ಅನುದಾನಕ್ಕಿಂತ ಅನುಷ್ಠಾನ ಮುಖ್ಯ. ಅನುಷ್ಠಾನಕ್ಕಿಂತ ನಿರ್ವಹಣೆ ಮುಖ್ಯ. ಧರ್ಮಸ್ಥಳದ ಸಮಾಜಮುಖಿ ಸೇವಾಕಾರ್ಯಗಳಿಂದಾಗಿ ಇಂದು ಕೂಲಿಕಾರ್ಮಿಕರು ಮಾಲಿಕರಾಗಿದ್ದಾರೆ. ಪೂಜಾ ಕ್ಷೇತ್ರವನ್ನು ಸೇವಾ ಕ್ಷೇತ್ರವಾಗಿ ರೂಪಿಸಿದ ಹೆಗ್ಗಡೆಯವರು ದೈವತ್ವ ಮತ್ತು ಮಾನವೀಯತೆಯೊಂದಿಗೆ ಬಡವರ ಕಣ್ಣೀರು ಒರೆಸುವ ಕಾಯಕ ಮಾಡಿದ್ದಾರೆ. ದೃಷ್ಠಿ ಇದ್ದರೆ ಸಾಲದು, ದೂರದೃಷ್ಠಿ ಇರಬೇಕು. ಜಾಣ್ಮೆ ಇದ್ದರೆ ಸಾಲದು, ತಾಳ್ಮೆ ಇರಬೇಕು. ಸಂಪತ್ತಿನಲ್ಲಿ ಸರಳತೆ, ಅಧಿಕಾರದಲ್ಲಿ ಸೌಮ್ಯ ಸ್ವಭಾವ ಹಾಗೂ ಕೋಪದಲ್ಲಿ ಮೌನ ಇರಬೇಕು ಎಂದು ಅವರು ಹೇಳಿದರು. ಕಾಲ ಬದಲಾಗಿಲ್ಲ ಆದರೆ ಜನರ ಆಸೆ-ಆಕಾಂಕ್ಷೆಗಳು, ನಿರೀಕ್ಷೆಗಳು ಹೆಚ್ಚಾಗಿವೆ. ಶೇ. 75ರಷ್ಟು ಜನ ಇಂದು ಮದ್ಯಪಾನಕ್ಕೆ ಬಲಿಯಾಗಿ ಅಧಿಕಾರ, ಆರೋಗ್ಯ, ಸ್ಥಾನ-ಮಾನ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಆದುದರಿಂದಲೇ ಕ್ಯಾನ್ಸರ್, ಮಧುಮೇಹ, ರಕ್ತದೊತ್ತಡದಂತಹ ಭೀಕರ ರೋಗಳಿಂದ ಎಳೆಯ ಪ್ರಾಯದವರೂ ಸಾವನ್ನಪ್ಪುತ್ತಿರುವುದು ಖೇದಕರವಾಗಿದೆ ಎಂದರು. ಇನ್‌ಕಮ್ ಇದ್ದವರನ್ನು ಮಾತ್ರ ಇಂದು ವೆಲ್‌ಕಮ್ ಮಾಡುತ್ತಾರೆ. ಅಧಿಕ ಹಣ ಮತ್ತು ಸಂಚಾರಿ ದೂರವಾಣಿ ಬಳಕೆಯಿಂದ ಇಡೀ ಸಮಾಜವೇ ಹಾಳಾಗುತ್ತಿದೆ. ಆದರ್ಶ ವ್ಯಕ್ತಿತ್ವದಿಂದ ಮಾತ್ರ ನಮಗೆ ಗೌರವ ಸಿಗುತ್ತದೆ. ಧರ್ಮಸ್ಥಳವು ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಂಜೀವಿನಿಯಾಗಿದೆ ಎಂದು ಅವರು ಅಭಿಪಾಯಪಟ್ಟರು. ಜಪ, ತಪ, ಉಪವಾಸ, ಧ್ಯಾನ, ವಿಶ್ರಾಂತಿ, ಒಳ್ಳೆಯ ನಿದ್ರೆ, ದಯೆ, ಅನುಕಂಪ, ಕೃತಜ್ಞತೆ ಮೊದಲಾದ ಮಾನವೀಯ ಮೌಲ್ಯಗಳಿದ್ದಾಗ ಮನೆಯೇ ಶಾಂತಿ, ನೆಮ್ಮದಿಯ ಸಾಂತ್ವನ ಕೇಂದ್ರವಾಗುತ್ತದೆ ಎಂದು ಅವರು ಹೇಳಿದರು. ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ಹೆಗ್ಗಡೆಯವರು ಮಾಡುತ್ತಿರುವ ಬಹಮುಖಿ ಸಮಾಜಸೇವೆಗೆ ಅಭಿನಂದಿಸಿದರು. ಹೆಗ್ಗಡೆಯವರಿಂದ ನೂತನ ಯೋಜನೆಗಳ ಪ್ರಕಟ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಧರ್ಮಸ್ಥಳದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆ ಮಾಡಿ ಭಕ್ತಾದಿಗಳಿಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು. ಇದೇ ನವೆಂಬರ್ 8ರಂದು ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಆರಾಮದಾಯಕ ಸರತಿ ಸಾಲಿನ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಿಸಿದರು. ಸೇವಾಕಾರ್ಯಗಳ ಮೂಲಕ ಜನರ ಹೃದಯ ಪರಿವರ್ತನೆಯ ಕಾರ್ಯಮಾಡಲಾಗುತ್ತದೆ. ತನ್ಮೂಲಕ ನವಚೈತನ್ಯದೊಂದಿಗೆ ಪರಿವರ್ತನೆ ಹಾಗೂ ಪ್ರಗತಿಯ ಹರಿಕಾರರನ್ನು ರೂಪಿಸಲಾಗುತ್ತದೆ. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ದೇಶದಲ್ಲಿ ಇನ್ನೂ 120 ಹೊಸ ರುಡ್‌ಸೆಟ್ ಸಂಸ್ಥೆಗಳನ್ನು ಸದ್ಯದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಹೆಗ್ಗಡೆಯವರು ತಿಳಿಸಿದರು. ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಸ್ವಾಗತಿಸಿದರು. ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿ ಸಂಚಾಲಕ ಹಾಗೂ ದೇವಳ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್ ಧನ್ಯವಾದವಿತ್ತರು. ಅನ್ನಪೂರ್ಣ ಛತ್ರದ ಪ್ರಬಂಧಕ ಸುಬ್ರಹ್ಮಣ್ಯ ಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.

ಧರ್ಮಸ್ಥಳ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Article Image

ಧರ್ಮಸ್ಥಳ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಕೆ.ಪಿ.ಸಿ.ಸಿ. ಜಿಲ್ಲಾ ಘಟಕದ ಅಧ್ಯಕ್ಷ ಕೆ. ಹರೀಶ್ ಕುಮಾರ್, ದ.ಕ. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಡಿ. ಸಂಪತ್‌ಸಾಮ್ರಾಜ್ಯ, ಶಿರ್ತಾಡಿ, ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಕೆ. ರಾಜವರ್ಮ ಬಲ್ಲಾಳ್, ವಿಜಯಾ ಬ್ಯಾಂಕ್ ನಿವೃತ್ತ ಪ್ರಬಂಧಕ ಎಮ್. ಜಿನರಾಜ ಶೆಟ್ಟಿ, ಮಂಗಳೂರು, ಪಿ. ಜಯರಾಜ ಕಂಬಳಿ, ಪೆರಿಂಜೆಗುತ್ತು, ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಮೊಕ್ತೆಸರ ಜೀವಂಧರ ಕುಮಾರ್, ಕೆ. ಪ್ರದೀಪ್‌ಕುಮಾರ್ ಕಲ್ಕೂರ, ಹರಿಕೃಷ್ಣ ಪುನರೂರು ಮೊದಲಾದ ಗಣ್ಯರು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿ ಅಭಿನಂದಿಸಿದರು. ಧರ್ಮಸ್ಥಳದಲ್ಲಿ ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ನಡೆದ ಛದ್ಮವೇಷ ಸ್ಫರ್ಧೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ತೃಷಿಕಾ ಡಿ. ಬಳಗ : ಪ್ರಥಮ, ಅವಿಷ್ಖಾರ್ ಶೆಟ್ಟಿ : ದ್ವಿತೀಯ, ದೃವಿ ದೊಂಡೋಲೆ : ತೃತೀಯ, ವಿರೂಷ್ ಗೌಡ. ಪ್ರೋತ್ಸಾಹಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಶಕ್ತಿಪ್ರಿಯ ತಂಡ : ಪ್ರಥಮ, ಮಹಿಳಾ ವಿಭಾಗದಲ್ಲಿ ವಿಮಲ ಮತ್ತು ಬಳಗ : ಪ್ರಥಮ, ಪುಷ್ಪಾ ಮತ್ತು ತಂಡ : ದ್ವಿತೀಯ, ವನಿತಾ ಮತ್ತು ತಂಡ : ತೃತೀಯ, ಸೀನಿಯರ್ ವಿಭಾಗದಲ್ಲಿ ದೇವಸ್ಥಾನ ಕೌಂಟರ್ ಬಳಗ : ಪ್ರಥಮ, ಜನಾರ್ದನ ಮತ್ತು ಬಳಗ : ದ್ವಿತೀಯ, ಸೂಪರ್ ಸೀನಿಯರ್ ವಿಭಾಗದಲ್ಲಿ ಸಾಮರ್ ಸೆಟ್ ತಂಡ ಹಾಗೂ ರಂಗಶಿವಕಲಾ ಬಳಗ : ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್ ವಲಯ 8 ಸಭೆ

Article Image

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್ ವಲಯ 8 ಸಭೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್ ವಲಯ 8-ಜಿನ ಭಜನಾ ಸೀಸನ್ 8 ಇದರ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ, ಶ್ರೀ ಮಂಜುನಾಥ ಸ್ವಾಮಿ ಕಲಾ ಮಂಟಪ ಬೆಳ್ತಂಗಡಿಯಲ್ಲಿ ನವೆಂಬರ್ ತಿಂಗಳ 24 ಭಾನುವಾರ ಜರಗಲಿದೆ. ಡಿ, ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಂತೆ ಸಮಾಲೋಚನಾ ಸಭೆ ಉಜಿರೆಯಲ್ಲಿ ಜರಗಿತು. ವಲಯ ಉಪಾಧ್ಯಕ್ಷರಾದ ಸುದರ್ಶನ್ ಜೈನ್, ಸೋನಿಯಾ ಯಶೋವರ್ಮ, ಪೂರನ್ ವರ್ಮ, ವಿಭಾಗ ಕಾರ್ಯದರ್ಶಿ ಸುಭಾಶ್ಚಂದ್ರ, ವೇಣೂರು ತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ಬಿ.ಸೋಮಶೇಖರ್ ಶೆಟ್ಟಿ, ಪ್ರಮೋದ್ ಕುಮಾರ್, ರಾಜಶ್ರೀ ಸುದರ್ಶನ್ ಮತ್ತು ತ್ರಿಶಾಲ ಉದಯಕುಮಾರ್ ಮಲ್ಲ, ರಜತ ಪಿ. ಶೆಟ್ಟಿ,ಪೂರ್ವ ಅಧ್ಯಕ್ಷರು, ವೀರ ವೀರಾಂಗನೆಯರು ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಡಾಕ್ಟರ್ ನವೀನ್ ಕುಮಾರ್ ಜೈನ್ ವಹಿಸಿದ್ದರು. ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಜಿ ನಿಖಿತ್ ಕುಮಾರ್, ಧೀಮತಿ ಮಹಿಳಾ ಸಮಾಜದ ಸದಸ್ಯೆಯರು ಭಾಗವಹಿಸಿ ಕಾರ್ಯಕ್ರಮ ಯಶಸ್ಸಿನ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು ಶಾಂತಿ ಮಂತ್ರದೊಂದಿಗೆ ಸಭೆ ಮುಕ್ತಾಯಗೊಂಡಿತು.

ಸತ್ತೂರು, ಧಾರವಾಡ: ವಿಶ್ವ ಶರೀರ ರಚನಾಶಾಸ್ತ್ರ ದಿನ ಆಚರಣೆ

Article Image

ಸತ್ತೂರು, ಧಾರವಾಡ: ವಿಶ್ವ ಶರೀರ ರಚನಾಶಾಸ್ತ್ರ ದಿನ ಆಚರಣೆ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಶರೀರ ರಚನಾಶಾಸ್ತ್ರ ವಿಭಾಗದಿಂದ “ವಿಶ್ವ ಶರೀರ ರಚನಾಶಾಸ್ತ್ರ ದಿನ”ವನ್ನು ಅಕ್ಟೋಬರ್ 18, 2024 ರಂದು ಆಚರಿಸಲಾಯಿತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ. ವೀರೇಶ ಕುಮಾರ ಶಿರೋಳ, ಹಿರಿಯ ಪ್ರಾಧ್ಯಾಪಕರು, ಶರೀರ ರಚನಾ ಶಾಸ್ತ್ರ ವಿಭಾಗ, ಜೆ.ಎನ್.ಎಂ.ಸಿ., ಬೆಳಗಾವಿ ಅವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದು ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ: ತಮ್ಮ ಕಲಿಕೆಗೆ ಮಿಸಲಿಟ್ಟ ಶವವನ್ನು ತಮ್ಮ ಶಿಕ್ಷಕರೆಂದು ಪರಿಗಣಿಸಬೇಕು, ಏಕೆಂದರೆ ಅದು ಮಾನವ ದೇಹದ ಒಳನೋಟಗಳನ್ನು ವಿದ್ಯಾರ್ಥಿಗಳಿಗೆ ಕಲಿಸುತ್ತದೆ. ದೇಹ ದಾನಿಗಳ ಅವರ ಉದಾತ್ತ ನಿರ್ಧಾರವನ್ನು ಗುರುತಿಸಿ ಗೌರವಿಸಬೇಕು. ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ವೃತ್ತಿಯನ್ನು ಆರಂಭದಿಂದಲೇ ಗಂಭೀರವಾಗಿ ಪರಿಗಣಿಸಬೇಕು. ವೈದ್ಯಕೀಯ ವಿದ್ಯಾರ್ಥಿಗಳ ಕಠಿಣ ಪರಿಶ್ರಮವು ಅವರನ್ನು ಉತ್ತಮ ವೃತ್ತಿಪರರನ್ನಾಗಿ ಮಾಡುತ್ತದೆ. ಈ ಸಂದರ್ಭದಲ್ಲಿ 3 ಹಿರಿಯ ಶರೀರ ರಚನಾ ಶಾಸ್ತ್ರಜ್ಞರಾದ ಡಾ. ವೀರೇಶ ಕುಮಾರ ಶಿರೋಳ, ಡಾ. ಎ. ವಿ. ಕುಲಕರ್ಣಿ ಮತ್ತು ಡಾ. ಎಸ್. ಕೆ. ದೇಶಪಾಂಡೆ ಅವರನ್ನು ಸನ್ಮಾನಿಸಲಾಯಿತು. ಶರೀರ ರಚನಾಶಾಸ್ತ್ರ ದಿನದ ಅಂಗವಾಗಿ ಶರೀರ ರಚನಾಶಾಸ್ತ್ರದ ಮಾದರಿ ಪ್ರದರ್ಶನ ಮತ್ತು ರಂಗೋಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪ ಕುಲತಿಗಳಾದ ವಿ. ಜೀವಂಧರ ಕುಮಾರ, ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ, ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ವೀಣಾ ಕುಲಕರ್ಣಿ, ಅತಿಥಿಗಳನ್ನು ಸ್ವಾಗತಿಸಿದರು. ಡಾ. ಸುರೇಶ ಮನಗುತ್ತಿ ಸನ್ಮಾನಿತರನ್ನು ಪರಿಚಯಿಸಿದರು. ಡಾ. ವಿನಯ ಕುಲಕರ್ಣಿ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ರೋಶನಿ ಸದಾಶಿವ ವಂದನಾರ್ಪಣೆ ಸಲ್ಲಿಸಿದರು.

ಲಂಡನ್: ಜೈನ್ ಮಿಲನ್ ಇದರ ವಾರ್ಷಿಕ ಸಭೆ

Article Image

ಲಂಡನ್: ಜೈನ್ ಮಿಲನ್ ಇದರ ವಾರ್ಷಿಕ ಸಭೆ

ಲಂಡನ್: ಜೈನ್ ಮಿಲನ್ ಇದರ ವಾರ್ಷಿಕ ಸಭೆಯು ಶಾಂತಿನಾಥ ದಿಗಂಬರ ಜೈನ ಬಸದಿ , Slough, ಇಂಗ್ಲೆಂಡ್ ನಲ್ಲಿ ಸೆ. 28 ಶನಿವಾರ ನಡೆಯಿತು. ಮೊದಲಿಗೆ ವಿಜಯ್ ಭಯ್ಯಾಜಿ ಅವರ ಮಾರ್ಗದರ್ಶನದಲ್ಲಿ ಅಭಿಷೇಕ, ಪೂಜಾ ಕಾರ್ಯಕ್ರಮಗಳು ನಡೆದವು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಜೈನ್ ಮಿಲನ್ ಅಧ್ಯಕ್ಷ ಡಾ. ನರೇಂದ್ರ ಅಳದಂಗಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸರ್ವರನ್ನು ಸ್ವಾಗತಿಸಿದರು .ಮಿಲನ್ ಸದಸ್ಯರು ಪ್ರಾರ್ಥನೆ ಹಾಗೂ ಸಾಮೂಹಿಕ ಪಂಚ ನಮಸ್ಕಾರ ಪಠಣದೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು .ಆರವ್ ಜೈನ್ ಅವರು ಜೈನ ಧರ್ಮದ ಮಹತ್ವದ ಬಗ್ಗೆ ಮಾತನಾಡಿದರು. ಕೈವಲ್ಯ ಮತ್ತು ಕೇವಲ್ ಜೈನ್ ಪಂಚ ಪರಮೇಸ್ಟಿ ಸ್ತುತಿ ಹಾಡಿದರು. ಸಾರ್ಥಕ್ ಜೈನ್ ಜಿನ ಭಜನೆ ಹಾಡಿದರು. ದೀಕ್ಷಾ ಜೈನ್ ಅವರು ಜೈನ ಧರ್ಮದಲ್ಲಿ ದೀಪಾವಳಿ ಆಚರಣೆ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಜಿನ ಭಜನೆ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ ಮಿಲನ್ ಸದಸ್ಯರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಮಿಲನ್ ಉಪಾಧ್ಯಕ್ಷ ನಿಖಿಲ್ B.A ಅವರು ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವ ಆಚರಿಸುವ ಮಿಲನ್ ಸದಸ್ಯರಿಗೆ ಶುಭ ಹಾರೈಸಿದರು. ಕೋಶಾಧಿಕಾರಿ ಡಾ. ವೈಶಾಕ್ ಬಲ್ಲಾಳ್ ವಂದಿಸಿದರು. ಮಿಲನ್ ಕಾರ್ಯದರ್ಶಿ ಅಶ್ವಿನಿ ಚಂದ್ರ ಪ್ರಭು ಅವರು ಕಾರ್ಯಕ್ರಮ ನಿರೂಪಿಸಿ, ಸಭಾ ಕಾರ್ಯಕ್ರಮದ ನಂತರ ಸದಸ್ಯರಿಗೆ ಸ್ಪರ್ಧೆಗಳನ್ನು ನಡೆಸಿಕೊಟ್ಟರು . ಕಾರ್ಯಕ್ರಮದ ಆತಿಥೇಯರಾಗಿ ಸಂಪತ್ ಕುಮಾರ್, ಶೀತಲ್ ಜೈನ್ ,ಧೀರೇಂದ್ರ ಬಲ್ಲಾಳ್ ಕುಟುಂಬದವರು ಸಹಕರಿಸಿದರು.

ನರಸಿಂಹರಾಜಪುರ: ಪೂಜಾ ಕಾರ್ಯಕ್ರಮ

Article Image

ನರಸಿಂಹರಾಜಪುರ: ಪೂಜಾ ಕಾರ್ಯಕ್ರಮ

ನರಸಿಂಹರಾಜಪುರ: ಸಿಂಹನಗದ್ದೆ ಬಸ್ತಿಮಠ, ಶ್ರೀ ಜ್ವಾಲಾಮಾಲಿನಿ ದೇವಿ ಅತಿಶಯ ಕ್ಷೇತ್ರದಲ್ಲಿ ಶ್ರೀ ಮತ್ ಶರನ್ನವರಾತ್ರಿ ಹಾಗೂ ವಿಜಯದಶಮಿಯ ಮಂಗಳ ಕಾರ್ಯಕ್ರಮಗಳು ಪ. ಪೂ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಇಂದಿನಿಂದ (ಅ. 03) ಅ. 12ರವರೆಗೆ ಪ್ರತಿ ನಿತ್ಯ ಬೆಳ್ಳಿಗ್ಗೆ 8-00ರಿಂದ ಶ್ರೀ ಕ್ಷೇತ್ರದ ಎಲ್ಲಾ ಬಸದಿಗಳಲ್ಲಿ ಪಂಚಾಮೃತ ಅಭಿಷೇಕ ಮತ್ತು ಸಂಜೆ 6-00ರಿಂದ ಅಮ್ಮನವರಿಗೆ ಶೋಡಷೋಪಚಾರ ಪೂಜೆ/ ಧರ್ಮೋಪದೇಶ/ ಮಹಾಮಂಗಳಾರತಿ ಜರುಗಲಿದೆ. ವಿಜಯದಶಮಿಯಂದು ಪೂರ್ವ ಪಟ್ಟಾಧೀಶರ ನಿಷದಿಯ ಪಾದುಕೆ ಪೂಜೆ ಮತ್ತು ಪೂರ್ವಾಚಾರ್ಯರ ಪಾದುಕೆಗಳ ಪೂಜೆ ಮತ್ತು ನಂತರ ಸರಿಯಾಗಿ ಮದ್ಯಾಹ್ನ 3-00 ಸಲ್ಲುವ ಕುಂಭ ಲಗ್ನದಲ್ಲಿ ಸ್ವಸ್ತಿಶ್ರೀಗಳ ಪರಂಪರಾಗತ ಸದ್ಧರ್ಮ ಸಿಂಹಾಸನ ಪೀಠಾರೋಹಣ ಮತ್ತು ಧರ್ಮೋಪದೇಶ, ಶ್ರೀ ಫಲ ಮಂತ್ರಾಕ್ಷತೆ ವಿತರಣೆ ನಡೆಯಲಿದೆ. ದಿನಾಂಕ 12-10-2024ನೇ ಶನಿವಾರ ಸಂಜೆ 5-00ಗಂಟೆಗೆ ರಾಜಬೀದಿಯಲ್ಲಿ ಮಹಾಮಾತೆ ಶ್ರೀ ಜ್ವಾಲಾಮಾಲಿನಿ ಅಮ್ಮನವರ ಉತ್ಸವ ಜರುಗಲಿದೆ.

ಧರ್ಮಸ್ಥಳದಲ್ಲಿ 26ನೆ ವರ್ಷದ ಭಜನಾ ತರಬೇತಿ: ಸಮಾರೋಪ ಸಮಾರಂಭ

Article Image

ಧರ್ಮಸ್ಥಳದಲ್ಲಿ 26ನೆ ವರ್ಷದ ಭಜನಾ ತರಬೇತಿ: ಸಮಾರೋಪ ಸಮಾರಂಭ

ಉಜಿರೆ: ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡದ ಸೇವೆ ಇಲ್ಲ. ಗ್ರಾಮಾಭಿವೃದ್ಧಿ, ಆರೋಗ್ಯ, ಶಿಕ್ಷಣ, ದೇವಸ್ಥಾನಗಳ ಜೀರ್ಣೋದ್ಧಾರ, ಶುದ್ಧನೀರಿನ ಘಟಕಗಳು, ಕೆರೆಗಳ ಪುನಶ್ಚೇತನ, ಮಹಿಳಾ ಸಬಲೀಕರಣ, ಜನಜಾಗೃತಿ ವೇದಿಕೆ ಮೂಲಕ ವ್ಯಸನಮುಕ್ತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಇತ್ಯಾದಿ ಸೇವಾಕಾರ್ಯಗಳು ವಿಶ್ವಮಾನ್ಯವಾಗಿವೆ ಎಂದು ಕುಂದಗೋಳ ಕಲ್ಯಾಣಪುರ ಮಠದ ಪೂಜ್ಯ ಬಸವಣ್ಣಜ್ಜನವರು ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ 26ನೆ ವರ್ಷದ ಭಜನಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಭಜನಾ ಸಂಸ್ಕ್ರತಿಯಿಂದ ನಮ್ಮ ಸನಾತನ ಧರ್ಮ ಮತ್ತು ಸಂಸ್ಕ್ರತಿಯ ರಕ್ಷಣೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ನಶಿಸಿ ಹೋಗುತ್ತಿರುವ ಭಜನಾ ಸಂಸ್ಕ್ರತಿಗೆ ನವಚೈತನ್ಯದೊಂದಿಗೆ ಜೀವಕಳೆ ನೀಡಿ ರಾಗ, ತಾಳ, ಲಯಬದ್ಧವಾಗಿ ಶಿಸ್ತಿನಿಂದ ಹೇಗೆ ಭಜನೆ ಮಾಡಬೇಕೆಂದು ಅವರು ಕಳೆದ 25 ವರ್ಷಗಳಿಂದ ತರಬೇತಿ ನೀಡಿ ವಿಶಿಷ್ಟ ಭಜನಾಪಟುಗಳನ್ನು ರೂಪಿಸಿದ್ದಾರೆ. ಇವರು ಧರ್ಮ ಮತ್ತು ಸಂಸ್ಕ್ರತಿಯ ಸಂರಕ್ಷಣೆಯ ರೂವಾರಿಗಳಾಗಿ ಆರೋಗ್ಯಪೂರ್ಣ ಸಮಾಜ ರೂಪಿಸಬೇಕೆಂದು ಸ್ವಾಮೀಜಿ ಸಲಹೆ ನೀಡಿದರು. ಸಂಸದ ಬ್ರಿಜೇಶ್ ಚೌಟ ಶುಭಾಶಂಸನೆ ಮಾಡಿ, ಭಜನೆಯಿಂದ ನಮ್ಮ ಭವ್ಯ ಪರಂಪರೆ ಮತ್ತು ಸಂಸ್ಕ್ರತಿಯನ್ನು ರಕ್ಷಿಸಬಹುದು. ತರಬೇತಿ ಪಡೆದ ಭಜನಾಪಟುಗಳು ಅವರವರ ಊರಿನಲ್ಲಿ ಭಜನಾ ಸಂಸ್ಕ್ರತಿಯನ್ನು ಮುಂದುವರಿಸಬೇಕೆಂದು ಸಲಹೆ ನೀಡಿದರು. ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹನಾಯಕ್ ಭಾಷಣದ ಬದಲು ಭಜನೆಯೊಂದನ್ನು ಸುಶ್ರಾವ್ಯವಾಗಿ ಹಾಡಿದರು. ಶಾಸಕ ಹರೀಶ್ ಪೂಂಜ ಮಾತನಾಡಿ, ಮಕ್ಕಳಲ್ಲಿ ಮತ್ತು ಯುವಜನತೆಯಲ್ಲಿ ಭಜನಾ ಸಂಸ್ಕ್ರತಿಯನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು. ಮುಂದೆ ತಾನು ಭಾಗವಹಿಸುವ ಎಲ್ಲಾ ಸಭೆ-ಸಮಾರಂಭಗಳಲ್ಲಿ ಭಜನೆಯ ಮಹತ್ವದ ಬಗ್ಗೆಯೂ ಉಲ್ಲೇಖಿಸುವುದಾಗಿ ತಿಳಿಸಿದರು. ರಾಸಾಯನಿಕಗಳನ್ನು ಬಳಸಿ ಬೆಳೆಸಿದ ವಿಷಪೂರಿತ ಆಹಾರಗಳ ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಹಾನಿಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಕ್ಯಾನ್ಸರ್ ರೋಗಿಗಳು ಇರುವ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದರು. ಸಾಧ್ಯವಾದಷ್ಟು ನಾವು ಹೊಲ, ತೋಟಗಳಲ್ಲಿ ಭತ್ತ, ತರಕಾರಿಗಳನ್ನು ಬೆಳೆಸಿ ಬಳಸಬೇಕೆಂದು ಅವರು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಎಲ್ಲರೂ ಅಂತರಂಗ ಮತ್ತು ಬಹಿರಂಗ ಶುದ್ಧಿಯೊಂದಿಗೆ ಭಜನೆ ಮಾಡಿದಾಗ ಆತ್ಮಶುದ್ಧಿಯಾಗುತ್ತದೆ. ಮಾನಸಿಕ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹೇಳಿದರು. ಭಜನೆ ಮಾಡುವವರು ಎಂದೂ ದುಶ್ಚಟಗಳಿಗೆ ಬಲಿಯಾಗದೆ ಆದರ್ಶ ಹಾಗೂ ಸಾರ್ಥಕ ಜೀವನ ನಡೆಸಬೇಕೆಂದು ಹೇಳಿ ಶುಭ ಹಾರೈಸಿದರು. ಶಿಬಿರಾರ್ಥಿಗಳ ಪರವಾಗಿ ಉಮೇಶ್ ಶೆಟ್ಟಿ ಅನಿಸಿಕೆ ವ್ಯಕ್ತಪಡಿಸಿದರು. ಭಜನಾಕಮ್ಮಟದ ಕಾರ್ಯದರ್ಶಿ ಎ.ವಿ.ಶೆಟ್ಟಿ ವರದಿ ಸಾದರಪಡಿಸಿದರು. ಮಾಣಿಲದ ಮೋಹನದಾಸ ಸ್ವಾಮೀಜಿ, ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಭಜನಾಕಮ್ಮಟದ ಸಂಚಾಲಕ ಸುಬ್ರಹ್ಮಣ್ಯಪ್ರಸಾದ್ ಸ್ವಾಗತಿಸಿದರು. ಧನ್ಯಕುಮಾರ್ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 7ನೇ ದಿನದ ಕಾರ್ಯಕ್ರಮ

Article Image

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 7ನೇ ದಿನದ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾಕಮ್ಮಟದ 7ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಮಕೃಷ್ಣ ಕಾಟುಕುಕ್ಕೆ, ಗಾಯಕರು ಕಾಸರಗೋಡು ಇವರು ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು. ಕಮ್ಮಟಕ್ಕೆ ಆಗಮಿಸಿದ ಪೂಜನೀಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಡಿ. ಸುರೇಂದ್ರ ಕುಮಾರ್‌ರವರು ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಪ್ರೇರೇಪಿಸಿದರು. ಮನೆಯಲ್ಲಿ ಧಾರ್ಮಿಕ ಸಂಸ್ಕಾರಕ್ಕೆ ಪೂರಕ ಭಜನೆ: ನಮ್ಮ ಆತ್ಮಸಾಕ್ಷಿಯೇ ನಮಗೆ ದೇವರಾಗಿದ್ದು ಆತ್ಮಸಾಕ್ಷಿಗೆ ಸರಿಯಾಗಿ ನಾವು ಕೆಲಸ ಮಾಡಬೇಕು ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟದಲ್ಲಿ ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರದ ಬಗ್ಗೆ ಉಪನ್ಯಾಸ ನೀಡಿದರು. ಒಬ್ಬರೆ ತಿಂದರೆ ಸುಖ, ಹಂಚಿ ತಿಂದರೆ ಸಂತೋಷ ಎಂಬ ಮಾತಿದೆ. ಸುಖಕ್ಕಿಂತ ನಮಗೆ ಹಂಚಿ ತಿಂದಾಗ ಬರುವ ಸಂತೋಷವೇ ಮುಖ್ಯ. ನೀ ನನಗಿದ್ದರೆ ನಾ ನಿನಗೆ ಎಂಬಂತೆ ಎಲ್ಲರೂ ಪರಸ್ಪರ ಪ್ರೀತಿ-ವಿಶ್ವಾಸ, ಗೌರವ, ಸಹಕಾರ, ಮಾನವೀಯ ಮೌಲ್ಯಗಳೊಂದಿಗೆ ಉತ್ತಮ ಜೀವನ ನಡೆಸಬೇಕು. ದಾಸರ ಹಾಡುಗಳು, ಶರಣರ ವಚನಗಳು, ಜೈನರ ಭಜನೆಗಳು, ತತ್ವ-ಸಿದ್ಧಾಂತಗಳು ನಮ್ಮ ಸಾರ್ಥಕ ಬದುಕಿಗೆ ಉತ್ತಮ ಸಂದೇಶ ನೀಡುತ್ತವೆ. ಪ್ರತಿ ಮನೆಯಲ್ಲಿ ತಾಯಿ-ತಂದೆಯನ್ನು ದೇವರಂತೆ ಕಾಣಬೇಕು. ಪುರುಷರು ಮಹಿಳೆಯರಿಗೆ ಗೌರವ ಕೊಡುವ ಸಂಸ್ಕಾರ ಮನೆಯಿಂದಲೆ ಆರಂಭವಾಗಬೇಕು. ಇಂದು ಪುರುಷರು ಮಾಡುವ ಎಲ್ಲಾ ಕೆಲಸಗಳನ್ನು ಮಹಿಳೆಯರು ಮಾಡುತ್ತಾರೆ. ಆದರೆ ಮಹಿಳೆಯರು ಮಾಡುವ ಅಡುಗೆ, ಸ್ವಚ್ಛತೆ ಇತ್ಯಾದಿಯನ್ನು ಪುರುಷರು ಯಾಕೆ ಮಾಡುವುದಿಲ್ಲ ಎಂದು ಅವರು ಯಕ್ಷಪ್ರಶ್ನೆ ಹಾಕಿದರು. ಸಿನೆಮಾ ತಾರೆಯರು, ರಾಜಕಾರಣಿಗಳು, ಮಠಾಧಿಪತಿಗಳು ನಮಗೆ ರೋಲ್ ಮೋಡೆಲ್‌ಗಳಲ್ಲ. ನಮಗೆ ನಾವೇ ರೋಲ್‌ಮೋಡೆಲ್‌ಗಳಾಗಬೇಕು. ದೈಹಿಕ ರೋಗಗಳಿಗೆ ನಮ್ಮ ಮನಸೇ ಮೂಲ ಕಾರಣ. ಮುಖದಲ್ಲಿ ಸದಾ ಮುಗುಳ್ನಗೆ ನಮ್ಮ ಮುಖ ಬೆಲೆಯನ್ನು ಹೆಚ್ಚಿಸುತ್ತದೆ. ಪರೋಪಕಾರ, ಪ್ರೀತಿ, ಸೇವೆ, ದಯೆ, ಅನುಕಂಪ, ಆತಿಥ್ಯ ಮೊದಲಾದ ಸತ್ಕಾರ್ಯಗಳಿಂದ ಮನಸು ತೃಪ್ತಿಯಿಂದ ಹಗುರವಾಗಿ ಶಾಂತಿ, ನೆಮ್ಮದಿ ಸಿಗುತ್ತದೆ. ಕೋಪ, ದ್ವೇಷ, ಚಿಂತೆ, ಟೀಕೆ ಮಾಡುವುದರಿಂದ ರಕ್ತದೊತ್ತಡ, ಮಧುಮೇಹ ಮೊದಲಾದ ರೋಗಗಳು ಕಾಡುತ್ತವೆ. ಪ್ರತಿಯೊಬ್ಬರೂ ವಾರದಲ್ಲಿ ಒಂದು ದಿನವಾದರೂ ಸಂಚಾರಿ ದೂರವಾಣಿ ಬಳಸದಿರುವ ವೃತ ಮಾಡಿದರೆ ಎಲ್ಲರಿಗೂ ಸತ್ಕಾರ್ಯ ಮಾಡಲು ಸಾಕಷ್ಟು ಸಮಯ ಸಿಗುತ್ತದೆ ಎಂದು ಅವರು ಹೇಳಿದರು. ಭಾವನೆ ಮತ್ತು ಸಾಹಿತ್ಯ ಇಲ್ಲದ ಭಜನೆ ನೀರಸವಾಗುತ್ತದೆ. ಉತ್ತಮ ಸಾಹಿತ್ಯ ಮತ್ತು ಭಾವನೆ ಹೊಂದಿರುವ ಭಜನೆಗಳನ್ನು ಬಾಯಿಪಾಠವಾಗಿ ಹಾಡಬೇಕು ಎಂದು ಅವರು ಸಲಹೆ ನೀಡಿದರು. ಶಿಬಿರಾರ್ಥಿಗಳು ತಮ್ಮ ದೋಷಗಳನ್ನೆಲ್ಲ ಇಲ್ಲೇ ಬಿಟ್ಟು ಹೋಗಿ. ಉತ್ತಮ ಅಭ್ಯಾಸಗಳನ್ನು ಹಾಗೂ ಸಂಸ್ಕಾರವನ್ನು ಬೆಳೆಸಿಕೊಳ್ಳಿ ಎಂದು ಅವರು ಕಿವಿಮಾತು ಹೇಳಿದರು. ಭಜನಾ ತರಬೇತಿ ಕಮ್ಮಟದ ಶಿಬಿರಾರ್ಥಿಗಳಿಂದ 4ನೇ ದಿನದ ನಗರ ಸಂಕೀರ್ತನೆ ಕಾರ್ಯಕ್ರಮ ನಡೆಯಿತು. ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಸುಬ್ರಹ್ಮಣ್ಯಪ್ರಸಾದ್, ಕಾರ್ಯದರ್ಶಿಗಳಾದ ವೀರು ಶೆಟ್ಟಿ, ಕೋಶಾಧಿಕಾರಿ ಧನ್ಯಕುಮಾರ್, ಸದಸ್ಯರಾದ ಶ್ರೀನಿವಾಸರಾವ್, ರತ್ನವರ್ಮ ಜೈನ್‌ರವರು ದಿನದ ಕಾರ್ಯಕ್ರಮವನ್ನು ಸಂಘಟಿಸಿದರು. ಭಜನಾ ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಸಾಲ್ಯಾನ್, ಉಪಾಧ್ಯಕ್ಷರಾದ ರಾಜೇಂದ್ರಕುಮಾರ್ ಸದಸ್ಯರಾದ ಪದ್ಮರಾಜ್ ಜೈನ್, ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಮಹಾವೀರ ಅಜ್ರಿ, ಭವಾನಿ, ಮೋಹನ್ ಶೆಟ್ಟಿ, ಸತೀಶ್ ಪೈ ಸಹಕರಿಸಿದರು. ಕುಣಿತ ಭಜನೆ ತರಬೇತಿಯನ್ನು ಸಂದೇಶ, ವಿನ್ಯಾಸ್, ನಾಗೇಶ್ ಹಾಗೂ ಚೈತ್ರ ನಡೆಸಿಕೊಟ್ಟರು. ಸಮನ್ವಯಾಧಿಕಾರಿಗಳಾಗಿ ಸಂತೋಷ್ ಪಿ. ಕರ್ತವ್ಯ ನಿರ್ವಹಿಸಿದರು.

‘ಸ್ವಸ್ಥ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಭಜನೆ ಪೂರಕ’ : ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ

Article Image

‘ಸ್ವಸ್ಥ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಭಜನೆ ಪೂರಕ’ : ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ

ದಿನಾಂಕ:27-9-2024ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆಯು ಶ್ರೀಕ್ಷೇತ್ರದ ವಸಂತ ಮಹಲ್‌ನಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ಶ್ರೀ ವೀರೇಂದ್ರ ಹೆಗ್ಗಡೆಯವರು ಮಾತನಾಡಿ ‘ಸ್ವಸ್ಥ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಭಜನೆ ಪೂರಕ’ ಎಂದು ಹೇಳಿದರು. ಮಕ್ಕಳಿಗೆ ಭಜನಾ ಸಂಸ್ಕಾರ ಕಲಿಸಿಕೊಡಲಾಗುತ್ತದೆ. ಭಜನೆಯ ಜೊತೆಗೆ ಶ್ಲೋಕಗಳು, ವಚನಗಳನ್ನು ಮುಂದಿನ ತಲೆಮಾರಿಗೆ ಕಲಿಸಬೇಕಾಗಿದೆ. ಸಮಾಜದಲ್ಲಿ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾಗಿದೆ. ಮದುವೆಯ ಮುಂಚಿನ ದಿನ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಗೃಹಪ್ರವೇಶ, ನಾಮಕರಣ ಕಾರ್ಯಕ್ರಮದಲ್ಲಿ ಭಜನೆ ನಡೆಯುತ್ತಿರುವುದು ಶ್ಲಾಘನೀಯವಾಗಿದೆ ಎಂದು ಪರಿಷತ್ ಸಭೆಯಲ್ಲಿ ಭಾಗವಹಿಸಿದ ಅವರು ಮಾರ್ಗದರ್ಶನ, ಪ್ರೇರಣೆ ನೀಡಿದರು. ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ ಭಜನಾ ಪರಿಷತ್ತಿನ ನಿರ್ವಹಣೆಗೆ 7 ಮಂದಿ ಸಮನ್ವಯಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಭಜನಾ ಮಂಡಳಿಗಳಿಗೆ ಗ್ರೇಡಿಂಗ್ ನೀಡಲಾಗುವುದು. ಭಜನಾ ಪರಿಷತ್ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್ ನ ಮೂಲಕ ನಡೆಯುತ್ತಿದೆ. ಸಂಖ್ಯೆಗೆ ಮಹತ್ವ ನೀಡದೆ ಗುಣಮಟ್ಟಕೆ ಆದ್ಯತೆ ನೀಡಬೇಕು. ಪ್ರಸ್ತುತ ಭಜನಾ ಮಂಡಳಿಗಳಲ್ಲಿ ಮಹಿಳೆಯರ ಸಂಖ್ಯೆ ಅಧಿಕವಾಗಿದೆ. ಪರಿಷತ್‌ನವರು ಉತ್ತಮವಾಗಿ ದುಡಿಯುತ್ತಿದ್ದಾರೆ ಎಂದು ಶ್ಲಾಘಿಸಿದರು. ಶ್ರೀ ಧಾಮ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಮಾತನಾಡಿ 25 ವರ್ಷಗಳಿಂದ ಭಜನೆ ಇತ್ತು. ಆದರೆ ರಾಗ, ತಾಳಗಳ ಜ್ಞಾನಗಳ ಕೊರತೆ ಇತ್ತು. ಭಜನಾ ಕಮ್ಮಟದ ಮೂಲಕ ಶಿಸ್ತು, ರಾಗ, ತಾಳದ ಜ್ಞಾನ ಬಂದಿದೆ. ಭಜನಾ ಮಂಡಳಿಗೆ ಸ್ವರೂಪ ಸಿಕ್ಕಿದೆ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದ ರೀತಿಯಲ್ಲಿ ಕುಣಿತ ಭಜನೆಯ ತರಬೇತಿ ನೀಡಬೇಕು. ಮನೆಮನೆಯಲ್ಲಿ ಭಜನೆ ನಡೆಯುತ್ತಿದೆ ಎಂದು ಮಾರ್ಗದರ್ಶನ ನೀಡಿದರು. ಸುಬ್ರಹ್ಮಣ್ಯ ಪ್ರಸಾದ್, ಸಂಚಾಲಕರು, ಭಜನಾ ಕಮ್ಮಟ ಇವರು ಪ್ರಸ್ತಾವನೆ ನೆರವೇರಿಸಿದರು. ವೀರು ಶೆಟ್ಟಿ, ಕಾರ್ಯದರ್ಶಿ, ಭಜನಾ ಕಮ್ಮಟ, ಮಹಾವೀರ ಅಜ್ರಿ, ಸದಸ್ಯರು, ಭಜನಾ ಕಮ್ಮಟ ಉಪಸ್ಥಿತರಿದ್ದರು. ಭಜನಾ ಪರಿಷತ್‌ನ ಅಧ್ಯಕ್ಷರಾದ ಚಂದ್ರಶೇಖರ ಸಾಲ್ಯಾನ್ ಇವರು ಸ್ವಾಗತಿಸಿ, ಸಮನ್ವಯಾಧಿಕಾರಿ ಸಂತೋಷ್ ಪಿ., ವರದಿ ವಾಚಿಸಿದರು. ಭಜನಾ ಪರಿಷತ್‌ನ ಉಪಾಧ್ಯಕ್ಷರಾದ ರಾಜೇಂದ್ರ ಕುಮಾರ್ ಇವರು ಧನ್ಯವಾದವಿತ್ತರು. ಭಜನಾ ಪರಿಷತ್‌ನ ಸಮನ್ವಯಾಧಿಕಾರಿ ರಾಘವೇಂದ್ರ, ಇವರು ಕಾರ್ಯಕ್ರಮ ನಿರ್ವಹಿಸಿದರು.

ಅಭಿನಂದನಾ ಕಾರ್ಯಕ್ರಮ

Article Image

ಅಭಿನಂದನಾ ಕಾರ್ಯಕ್ರಮ

ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದಿರೆ ಶಾಲೆಯ ಮುಖ್ಯೋಪಾಧ್ಯಯರಿಗೆ ಅಭಿನಂದನಾ ಕಾರ್ಯಕ್ರಮವು ಶಾಲಾ ಸಂಚಾಲಕರ ನೇತೃತ್ವದಲ್ಲಿ ಶಾಲೆಯ ಅಮೃತಮಹೋತ್ಸವ ಕಟ್ಟಡದಲ್ಲಿ ನೇರವೇರಿತು. ಶಶಿಕಾಂತ್ ವೈ ಇವರು ರಾಜ್ಯ ಅನುದಾನಿತ ಹಿರಿಯ ಪ್ರಾಥಮಿಕ ಶಿಕ್ಷಕರ ಸಂಘದ ವತಿಯಿಂದ ಕೊಡಲ್ಪಡುವ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರು ಕೆ. ಹೇಮರಾಜ್‌ರವರು ವಹಿಸಿದ್ದರು. ಸಂಚಾಲಕರು ಗಣ್ಯರೊಂದಿಗೆ ಸೇರಿ ಶ್ರೀಯುತರನ್ನು ಶಾಲು ಹೊದಿಸಿ ಫಲ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಶ್ರೀಯುತರ ಹುಟ್ಟೂರು ಮತ್ತು ಅವರ ವೃತ್ತಿ ಬದುಕಿನ ಜೊತೆಗಿನ ಅನುಭವನ್ನು ಶಾಲೆಯ ಹಿರಿಯ ಶಿಕ್ಷಕಿ ಮಂಜುಳಾ ಜೈನ್‌ರವರು ಹಂಚಿಕೊಂಡರು. ಶಾಲೆಯ ಮುಖ್ಯೋಪಾಧ್ಯಾಯರು ತಮ್ಮ ಸರಳ ಸಜ್ಜನ ವ್ಯಕ್ತಿತ್ವದಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರೆ ಮತ್ತು ಈ ಪ್ರಶಸ್ತಿ ಅವರಿಗೆ ಬಂದಿರುವುದು ನಮಗೆ ಅತೀವ ಸಂತೋಷವನ್ನು ತಂದಿದೆ. ಎಂದು ತಮ್ಮ ಅಭಿನಂದನಾ ಭಾಷಣದಲ್ಲಿ ತಿಳಿಸಿದ್ದರು. ಸನ್ಮನಿತರು ಈ ಅಭಿನಂದನಾ ಕಾರ‍್ಯಕ್ರಮಕ್ಕೆ ಸಂತೋಷ ವ್ಯಕ್ತಪಡಿಸಿದ್ದರು ಹಾಗೂ ಈ ಪ್ರಶಸ್ತಿ ಬರಲು ಸಹಕಾರ ನೀಡಿದ ಶಾಲಾ ಸಂಚಾಲಕರಿಗೆ, ಶಾಲಾ ಆಡಳಿತ ಮಂಡಳಿಯಗೆ ಶಿಕ್ಷಕ-ಶಿಕ್ಷಕೇತರಿಗೆ, ಹೆತ್ತವರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕೃತ್ಞಜತೆಯನ್ನು ಸಲ್ಲಿಸಿದ್ದರು. ಈ ಪ್ರಶಸ್ತಿಗೆ ಅಗೌರವವಾಗದಂತೆ ಮುಂದೆಯೂ ಸೇವೆಯನ್ನು ಸಲ್ಲಿಸುತ್ತೇನೆ ಎಂದು ಭರವಸೆಯ ಮಾತುಗಳನ್ನಾಡಿದರು. ಶಾಲಾ ಸಂಚಾಲಕರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಶಾಲಾ ಮುಖ್ಯೋಪಾಧ್ಯಯರ ಅವಿರತ ಪರಿಶ್ರಮ ಮತ್ತು ಅವರ ವ್ಯಕ್ತಿತ್ವವೇ ಈ ಪ್ರಶಸ್ತಿ ಬರಲು ಕಾರಣ ಎಂದು ಹೇಳಿದರು. ಈ ಪ್ರಶಸ್ತಿಯಿಂದ ನಮ್ಮ ಶಾಲೆಯಕೀರ್ತಿ ಗೌರವ ಇನ್ನಷ್ಟು ಹೆಚ್ಚಾಯಿತು ಎಂದು ಅಭಿಮಾನದ ಮಾತುಗಳನ್ನಾಡಿದ್ದರು. ಸಂಸ್ಥೆಯ ಸಿಬ್ಬಂದಿ ವರ್ಗದವರು ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಈ ಕಾರ‍್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಣೀತರವರು ಸ್ವಾಗತಿಸಿದರು, ಮಂಜುಳಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದ್ದರು. ದಿವ್ಯಾಶ್ರೀ ಧನ್ಯವಾದಗೈದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 6ನೇ ದಿನದ ಕಾರ್ಯಕ್ರಮ

Article Image

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 6ನೇ ದಿನದ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 6ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಪ್ಪುಂದ ರಾಜೇಶ್ ಪಡಿಯಾರ್, ಮೈಸೂರು ಹಾಗೂ ರಾಮಕೃಷ್ಣ ಕಾಟುಕುಕ್ಕೆ, ಗಾಯಕರು ಕಾಸರಗೋಡು ಇವರು ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು. ಕಮ್ಮಟಕ್ಕೆ ಆಗಮಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಪ್ರೇರೇಪಿಸಿದರು. ಧರ್ಮಸ್ಥಳದಲ್ಲಿ 'ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ' ಕುರಿತು ಉಪನ್ಯಾಸ ಕಾರ್ಯಕ್ರಮ; ಧರ್ಮಸ್ಥಳದ 'ಮಹೋತ್ಸವ ಸಭಾಭವನ'ದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿದ್ದ 26ನೇ ವರ್ಷದ 'ಭಜನಾ ತರಬೇತಿ ಕಮ್ಮಟ' ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಶುಕ್ರವಾರ 'ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ' ಕುರಿತು ಉಪನ್ಯಾಸ ನೀಡಿದರು. ಉಪನ್ಯಾಸ ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಮುನಿರಾಜ ರೆಂಜಾಳ ಇವರು “ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ” ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಸಿಕೊಟ್ಟರು. ತಮ್ಮ ಉಪನ್ಯಾಸದಲ್ಲಿ ಸಾಮರಸ್ಯವೇ ಬದುಕಿನ ಮೂಲ ಗುರಿಯಾಗಿದ್ದು, ಭಜನೆಗೆ ಜಾತಿ, ಮತ, ಪಂಥಗಳು ಅಡ್ಡಿಯಾಗುವುದಿಲ್ಲ. ಹಾಗಾಗಿ ಭಜನೆಯ ಮೂಲವೇ ಸಾಮರಸ್ಯ ಮೂಡಿಸುವುದು ಎಂದು ನುಡಿದರು. ಭಜನೆಯು ಮನಸ್ಸಿನ ಮೇಲೆ ಪರಿಣಾಮ ಬೀರಲು ಅದರ ಅರ್ಥ ಗಮನಿಸುವುದು ಮುಖ್ಯವಾಗುತ್ತದೆ. ಸಮಾಜದಲ್ಲಿ ಒಳ್ಳೆಯ ದಾರಿಯಲ್ಲಿ ನಡೆಯುವಂತೆ ಎಚ್ಚರಿಕೆ ನೀಡುವ ಕೆಲಸವನ್ನು ಭಜನೆ ಮಾಡುತ್ತದೆ. ದೇವರ ಭಜನೆಯಷ್ಟೇ, ನೀತಿಯುಕ್ತ ಭಜನೆಗಳಿಗೂ ಮಹತ್ವ ನೀಡಬೇಕಾಗಿದೆ ಎಂದರು. ದೇವರ ಮೇಲೆ ಶ್ರದ್ಧೆ ಇದ್ದಾಗ ಅಹಂಕಾರ ಇರಲು ಸಾಧ್ಯವಿಲ್ಲ. ಹಾಗಾಗಿ, ಭಜನೆಯ ಮೂಲಕ ಭಗವಂತನ ಗೆಲ್ಲಲು ಸಾಧ್ಯ. ದೇಶಭಕ್ತಿ ಇದ್ದವರಲ್ಲಿ ದೈವ ಭಕ್ತಿಯೂ ಇರುತ್ತದೆ, ಮನುಷ್ಯನು ಎರಡನ್ನೂ ಅಳವಡಿಸಿಕೊಳ್ಳಬೇಕು. ಆಗ ಸಾಮರಸ್ಯ ಮೂಡುತ್ತದೆ ಎಂದು ಅಭಿಪ್ರಾಯಪಟ್ಟರು. ಎಸ್.ಡಿ.ಯಂ. ನ್ಯಾಚುರೋಪತಿ ಕಾಲೇಜು ಉಜಿರೆ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನಡೆಯಿತು. ಯೋಗ ತರಬೇತಿಯನ್ನು ಡಾ. ಐ. ಶಶಿಕಾಂತ್ ಜೈನ್ ನಡೆಸಿಕೊಟ್ಟರು. ಸೌಮ್ಯ ಸುಭಾಷ್, ಧರ್ಮಸ್ಥಳ ಇವರು ಸಾಂಪ್ರದಾಯಿಕ ಹಾಡುಗಳನ್ನು ಕಲಿಸಿಕೊಟ್ಟರು. ಭಜನಾ ತರಬೇತಿ ಕಮ್ಮಟದ ಶಿಬಿರಾರ್ಥಿಗಳಿಂದ 3ನೇ ದಿನದ ನಗರ ಸಂಕೀರ್ತನೆ ಕಾರ್ಯಕ್ರಮ ನಡೆಯಿತು. ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿಗಳಾದ ವೀರು ಶೆಟ್ಟಿ, ಕೋಶಾಧಿಕಾರಿ ಧನ್ಯಕುಮಾರ್, ಸದಸ್ಯರಾದ ಶ್ರೀನಿವಾಸರಾವ್, ರತ್ನವರ್ಮ ಜೈನ್‌ರವರು ದಿನದ ಕಾರ್ಯಕ್ರಮವನ್ನು ಸಂಘಟಿಸಿದರು. ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಸಾಲ್ಯನ್, ಉಪಾಧ್ಯಕ್ಷರಾದ ರಾಜೇಂದ್ರ ಕುಮಾರ್ ಸದಸ್ಯರಾದ ಪದ್ಮರಾಜ್ ಜೈನ್, ಪೂರ್ಣಿಮ ಜೋಶಿ ಕಾರ್ಯಕ್ರಮ ನಿರೂಪಿಸಿದರು. ಮಹಾವೀರ ಅಜ್ರಿ, ಭವಾನಿ, ಮೋಹನ್ ಶೆಟ್ಟಿ, ಸತೀಶ್ ಪೈ ಸಹಕರಿಸಿದರು. ಕುಣಿತ ಭಜನೆ ತರಬೇತಿಯನ್ನು ಸಂದೇಶ, ವಿನ್ಯಾಸ್, ನಾಗೇಶ್ ಹಾಗೂ ಚೈತ್ರ ನಡೆಸಿಕೊಟ್ಟರು. ಸಮನ್ವಯಾಧಿಕಾರಿಗಳಾಗಿ ರಾಘವೇಂದ್ರ, ಸಂತೋಷ್ ಪಿ. ಕರ್ತವ್ಯ ನಿರ್ವಹಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 5ನೇ ದಿನದ ಕಾರ್ಯಕ್ರಮ

Article Image

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 5ನೇ ದಿನದ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 5ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿದುಷಿ ಅನುಸೂಯ ಪಾಠಕ್, ಉಜಿರೆ ಹಾಗೂ ಉಪ್ಪುಂದ ರಾಜೇಶ್ ಪಡಿಯಾರ್, ಮೈಸೂರು ಇವರು ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು. ಕಮ್ಮಟಕ್ಕೆ ಆಗಮಿಸಿದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಪ್ರೇರೇಪಿಸಿದರು. ಭಜನೆಯು ಭಕ್ತಿಯನ್ನು ಉದ್ದೀಪನಗೊಳಿಸಿ, ಬದುಕನ್ನು ಕಟ್ಟಿಕೊಡುತ್ತದೆ. ಬದುಕಿಗಿಂತ ಭಜನೆಯು ದೊಡ್ಡದಾಗಿದ್ದು, ಮಾಡುವ ಕೆಲಸವೇ ಭಜನೆಯಾಗಬೇಕು. ಇಂತಹ ಉಪನ್ಯಾಸಗಳು ಆತ್ಮವಲೋಕನ ಮಾಡಿಕೊಳ್ಳುವುದಕ್ಕೆ ದಾರಿಯಾಗಿದೆ ಎಂದು ಅಸೆಮ್ಸ್ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಪವನ್ ಕಿರಣ್‌ಕೆರೆ ನುಡಿದರು. ಧರ್ಮಸ್ಥಳದ 'ಮಹೋತ್ಸವ ಸಭಾಭವನ'ದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿದ್ದ 26ನೇ ವರ್ಷದ 'ಭಜನಾ ತರಬೇತಿ ಕಮ್ಮಟ' ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಗುರುವಾರ 'ಭಜನೆ ಮತ್ತು ಬದುಕು' ಕುರಿತು ಉಪನ್ಯಾಸ ನೀಡಿದರು. ಭಜನೆಯಿಂದ ಮನಸ್ಸು ಶುದ್ದವಾಗುತ್ತದೆ, ಭಜನೆ ಮಾಡುವಾಗ ದೇವರ ಮೇಲೆ ನಂಬಿಕೆಯಿರಬೇಕು. ಸಾಮಾನ್ಯನನ್ನು ಅಸಾಮಾನ್ಯನನ್ನಾಗಿ ಮಾಡುವ ಶಕ್ತಿ ಭಜನೆಗಿದ್ದು, ಅದು ಪಾಪವನ್ನು ತೊಳೆಯುವ ಕೆಲಸ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು. ಮನುಷ್ಯನು ತನ್ನ ವಿವೇಕ ಹಾಗೂ ಚಿಂತನೆಯಿಂದ ಬೇರೆ ಪ್ರಾಣಿಗಳಿಗಿಂತ ಬೇರೆಯಾಗಿದ್ದಾನೆ. ಆದರೆ, ನಾನು ಎಂಬ ಅರಿವಿಲ್ಲದಿರುವುದು ಇಂದು ಮನುಷ್ಯನ ಬಹುದೊಡ್ಡ ಸಮಸ್ಯೆಯಾಗಿದೆ. ಭಜನೆಯು ಅರಿವನ್ನು ಮೂಡಿಸುವ ಕೆಲಸ ಮಾಡುತ್ತದೆ ಎಂದರು. ಎಸ್.ಡಿ.ಯಂ. ಕಲಾಕೇಂದ್ರ, ಉಜಿರೆ ಇವರಿಂದ ‘ಸುಧನ್ವ ಮೋಕ್ಷ’ ಯಕ್ಷಗಾನ ಪ್ರದರ್ಶನ ನಡೆಯಿತು. ಯೋಗ ತರಬೇತಿಯನ್ನು ಡಾ. ಐ. ಶಶಿಕಾಂತ್ ಜೈನ್ ನಡೆಸಿಕೊಟ್ಟರು. ಸೌಮ್ಯ ಸುಭಾಶ್, ಧರ್ಮಸ್ಥಳ ಇವರು ಸಾಂಪ್ರದಾಯಿಕ ಹಾಡುಗಳನ್ನು ಕಲಿಸಿಕೊಟ್ಟರು. ಭಜನಾ ತರಬೇತಿ ಕಮ್ಮಟದ ಶಿಬಿರಾರ್ಥಿಗಳಿಂದ 2ನೇ ದಿನದ ನಗರ ಸಂಕೀರ್ತನೆ ಕಾರ್ಯಕ್ರಮ ನಡೆಯಿತು. ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿಗಳಾದ ವೀರು ಶೆಟ್ಟಿ, ಕೋಶಾಧಿಕಾರಿ ಧನ್ಯಕುಮಾರ್, ಸದಸ್ಯರಾದ ಶ್ರೀನಿವಾಸರಾವ್, ರತ್ನವರ್ಮ ಜೈನ್‌ರವರು ದಿನದ ಕಾರ್ಯಕ್ರಮವನ್ನು ಸಂಘಟಿಸಿದರು, ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಸಾಲ್ಯನ್, ಉಪಾಧ್ಯಕ್ಷರಾದ ರಾಜೇಂದ್ರ ಕುಮಾರ್ ಸದಸ್ಯರಾದ ಪದ್ಮರಾಜ್ ಜೈನ್, ಮಹಾವೀರ ಅಜ್ರಿ ಸಹಕರಿಸಿದರು. ಕುಣಿತ ಭಜನೆ ತರಬೇತಿಯನ್ನು ಸಂದೇಶ, ವಿನ್ಯಾಸ್, ನಾಗೇಶ್ ಹಾಗೂ ಚೈತ್ರ ನಡೆಸಿಕೊಟ್ಟರು. ಸಮನ್ವಯಾಧಿಕಾರಿಗಳಾಗಿ ರಾಘವೇಂದ್ರ, ಸಂತೋಷ್ ಪಿ. ಕರ್ತವ್ಯ ನಿರ್ವಹಿಸಿದರು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ್ ಜೈನ್ ನಿರೂಪಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Article Image

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ರಾಘವೇಂದ್ರ ಆಚಾರ್ಯ, ಆಕಾಶವಾಣಿ ‘ಎ’ ಗ್ರೇಡ್ ಕಲಾವಿದರು ಹಾಗೂ ವಿದುಷಿ ಅನುಸೂಯ ಪಾಠಕ್, ಉಜಿರೆ ಇವರು ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು. ಕಮ್ಮಟಕ್ಕೆ ಆಗಮಿಸಿದ ಪೂಜ್ಯನೀಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿಯವರು ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಪ್ರೇರೇಪಿಸಿದರು. ಉಪನ್ಯಾಸ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಸಮಾಜಕ್ಕೆ ಧರ್ಮಸ್ಥಳದ ಬಹುಮುಖಿ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. 84 ಲಕ್ಷ ಜೀವರಾಶಿಗಳಲ್ಲಿ ಮಾನವಜನ್ಮ ದೊಡ್ಡದು. ಏಕೆಂದರೆ ಇತರ ಎಲ್ಲಾ ಪ್ರಾಣಿಗಳಿಗಿಂತ ಮನುಷ್ಯನಿಗೆ ವಿವೇಚನಾ ಶಕ್ತಿ ಅಂದರೆ ಯಾವುದು ಸರಿ, ಯಾವುದು ತಪ್ಪು ಎಂದು ನಿರ್ಧರಿಸುವ ಶಕ್ತಿ ಇದೆ. ಆದುದರಿಂದ ಎಲ್ಲರೂ ತಮ್ಮ ಆತ್ಮಸಾಕ್ಷಿಗೆ ಸರಿಯಾಗಿ ಕೆಲಸ ಮಾಡಿದಾಗ ಎಲ್ಲವೂ ಪರಿಶುದ್ಧವಾಗಿ ಮಾಡಿದ ಕೆಲಸ ಕೂಡಾ ಉತ್ತಮ ಪರಿಣಾಮವನ್ನು ಬೀರುತ್ತದೆ. ಭಗವಂತನ ಭಜನೆಯಿಂದ ನಮ್ಮ ಆತ್ಮ ಪರಿಶುದ್ಧವಾಗಿ, ನಾವು ಮಾಡುವ ಎಲ್ಲಾ ಕೆಲಸಗಳು ಕೂಡಾ ಪರಿಶುದ್ಧವಾಗಿರುತ್ತವೆ. ಇಂತಹ ಕಾರ್ಯಗಳಿಂದ ನಮಗೂ ಆತ್ಮತೃಪ್ತಿ ಸಿಗುತ್ತದೆ ಹಾಗೂ ಸಮಾಜಕ್ಕೂ ಒಳಿತಾಗುತ್ತದೆ. ಭಜನಾ ತರಬೇತಿ ಕಮ್ಮಟದಲ್ಲಿ ನೀಡಿದ ಎಲ್ಲಾ ಮಾಹಿತಿ ಮಾರ್ಗದರ್ಶನವನ್ನು ಮುಂದೆ ನೀವು ನಿತ್ಯವೂ ಜೀವನದಲ್ಲಿ ಅನುಷ್ಠಾನಗೊಳಿಸಿ, ಇತರರನ್ನೂ ಪ್ರೇರೇಪಿಸಿದಲ್ಲಿ ನಿಮಗೆ ಆತ್ಮತೃಪ್ತಿಯೂ ಸಿಗುತ್ತದೆ. ಅಲ್ಲದೆ ರಾಮರಾಜ್ಯದ ಕನಸು ನನಸಾಗುತ್ತದೆ. ಈ ದಿಸೆಯಲ್ಲಿ ನೀವೆಲ್ಲರೂ ಸಿದ್ಧರಾಗಿ, ಬದ್ಧರಾಗಿ ಸಮಾಜ ಕಲ್ಯಾಣ ಕಾರ್ಯಗಳನ್ನು ಮಾಡಬಹುದು. ಇದರಿಂದಾಗಿ ಮಾನಸಿಕ ನೆಮ್ಮದಿ ಹಾಗೂ ಶಾಂತಿ ಸಿಗುವುದಲ್ಲದೆ ಸಮಾಜ ಸೇವೆ ಮಾಡಿದ ಸಂತೃಪ್ತಿಯೂ ನಿಮಗೆ ಸಿಗುತ್ತದೆ ಎಂದು ಹೇಳಿದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಶ್ರೀ ಹೆಗ್ಗಡೆಯವರು ಬಹುಮುಖಿ ಸಮಾಜ ಸೇವಾಕಾರ್ಯಗಳ ಮೂಲಕ ಮಾಡುತ್ತಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ನೀಡಿದರು. ಸಂಜೆ ಭಜಣಾ ತಂಡದಿಂದ ನಗರ ಭಜನೆ ನಡೆಯಿತು. ರಂಗಶಿವ ಕಲಾಬಳಗ, ಧರ್ಮಸ್ಥಳ ಇವರಿಂದ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ನಿರ್ದೇಶನದಲ್ಲಿ ಮೂಡಿಬಂದ “ಕೇಳೆಸಖಿ ಚಂದ್ರಮುಖಿ’ ನಾಟಕ ಪ್ರದರ್ಶನ ನಡೆಯಿತು. ಯೋಗ ತರಬೇತಿಯನ್ನು ಡಾ. ಐ. ಶಶಿಕಾಂತ್ ಜೈನ್ ನಡೆಸಿಕೊಟ್ಟರು. ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿಗಳಾದ ವೀರು ಶೆಟ್ಟಿ, ಕೋಶಾಧಿಕಾರಿ ಧನ್ಯಕುಮಾರ್, ಸದಸ್ಯರಾದ ಶ್ರೀನಿವಾಸರಾವ್, ರತ್ನವರ್ಮ ಜೈನ್‌ರವರು ದಿನದ ಕಾರ್ಯಕ್ರಮವನ್ನು ಸಂಘಟಿಸಿದರು, ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಸಾಲ್ಯನ್, ಉಪಾಧ್ಯಕ್ಷರಾದ ರಾಜೇಂದ್ರ ಕುಮಾರ್ ಸದಸ್ಯರಾದ ಪದ್ಮರಾಜ್ ಜೈನ್ ಸಹಕರಿಸಿದರು. ಕುಣಿತ ಭಜನೆ ತರಬೇತಿಯನ್ನು ಸಂದೇಶ, ವಿನ್ಯಾಶ್, ನಾಗೇಶ್ ಹಾಗೂ ಚೈತ್ರ ನಡೆಸಿಕೊಟ್ಟರು. ಶಿಬಿರಾರ್ಥಿಗಳಾಗಿ ರಾಘವೇಂದ್ರ, ಸಂತೋಷ್ ಪಿ. ಕರ್ತವ್ಯ ನಿರ್ವಹಿಸಿದರು.

First Previous

Showing 6 of 11 pages

Next Last