“ಕರ್ನಾಟಕದ ಪ್ರಾಣೋಪಾಸಕ” ಆಲೂರು ವೆಂಕಟರಾವ ಅವರ 61ನೇ ಪುಣ್ಯಸ್ಮರಣೆ ಕಾರ್ಯಕ್ರಮ


Logo

Published Date: 25-Feb-2025 Link-Copied

ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಅವರ 61ನೇ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು (ಫೆ. 25)ನಗರದ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಸರಳ, ಸುಂದರವಾಗಿ ಸಂಪನ್ನಗೊಂಡಿತು. ಕಾರ್ಯಕ್ರಮದ ಮೊದಲು ವಿಶೇಷ ಅತಿಥಿಗಳಾಗಿ ಆಗಮಿಸಿದ್ದ ಪ್ರೇಸ್‌ ಇನ್ಫಾರ್ಮೇಶನ ಬ್ಯೂರೊ ಭಾರತ ಸರ್ಕಾರದ ನಿವೃತ್ತ ಪ್ರಿನ್ಸಿಪಲ್ ಡಿ. ಜಿ.ಮನೀಶ ದೇಸಾಯಿಯವರು ಹಾಗೂ ಇತರ ಗಣ್ಯರು ಭವನದ ಆವರಣದೊಳಗಿರುವ ಆಲೂರು ವೆಂಕಟರಾವ ಅವರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಪಣೆ ಮಾಡಿ ನಮನ ಸಲ್ಲಿಸಿದರು. ಮನೀಶ ದೇಸಾಯಿಯವರು ಮಾತನಾಡಿ ಕನ್ನಡದ ಮೂಲ ಕೃಷಿಕ ಆಲೂರು ವೆಂಕಟರಾವ ಅವರ ಹೆಸರಿನ ಮಾತ್ರದಿಂದಲೇ ಪುಳಕಿತಗೊಂಡ ಆ ಕಾಲದ ವಿದ್ಯಾರ್ಥಿಗಳಾದ ನಾವು ಅವರನ್ನು ನೋಡಿರದಿದ್ದರು. ಅವರ ಕನ್ನಡದ ಕಾವ್ಯಗಳಿಂದ ಪ್ರೇರಿತರಾಗಿ ಸಾಧನೆಕೇರಿಯಲ್ಲಿ ಸರ್‌ಕ್ಯೂಲೇಟಿಂಗ್‌ ಲೈಬ್ರರಿ ಪ್ರಾರಂಭಿಸಿ ಅಲ್ಲಿ ಕರ್ನಾಟಕ ಗತವೈಭವ, ಲೋಕಮಾನ್ಯ ತಿಲಕರ ಕನ್ನಡ ಗೀತಾರಹಸ್ಯ ಕನ್ನಡ ಅನುವಾದ ಹಾಗೂ ಇನ್ನಿತರ ಮಹತ್ವದ ಕನ್ನಡ ಕೃತಿಗಳನ್ನು ಸಂಗ್ರಹಿಸಿ ವಿತರಿಸಿದ್ದು ಇಂದಿಗೂ ನನ್ನ ನೆನಪಿನಲ್ಲಿದೆ ಎಂದು ಆಲೂರರ ಕನ್ನಡ ಕಟ್ಟುವ ಕಾರ್ಯಗಳನ್ನು ಸ್ಮರಿಸಿಕೊಂಡರು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಪ್ರಾಧ್ಯಾಪಕ, ಸಾಹಿತಿ, ಡಾ. ಜಿನದತ್ತ ಹಡಗಲಿಯವರು ಮಾತನಾಡಿ, ಒಂದು ಕಾಲಕ್ಕೆ ವೈಭವಯುತ ಸಾಮ್ರಾಜ್ಯವೆಂದೇ ಗುರುತಿಸಿಕೊಂಡಿದ್ದ ವಿಜಯನಗರದ ಹಂಪಿಯ ಭಗ್ನಾವಶೇಷಗಳು, ಪಳೆಯುಳಿಕೆಗಳು ತಮ್ಮ ಹೃದಯವನ್ನು ಕಲಕಿ ಬಿಟ್ಟಾಗ ತೀವ್ರ ಹತಾಶೆಯನ್ನುಭವಿಸಿದ ಆಲೂರರು ಆ ದಿನವನ್ನು ತಮ್ಮ ಜೀವನದಲ್ಲಿ ಕ್ರಾಂತಿ ಮಾಡಿದ ದಿನವೆಂದೇ ಭಾವಿಸುತ್ತಾರೆ. ಆ ಕ್ಷಣದಿಂದ ವಿಜಯನಗರದ ಪುನರುತ್ಥಾನ, ಕನ್ನಡ ಕರ್ನಾಟಕತ್ವ, ಕರ್ನಾಟಕ ಏಕೀಕರಣಗಳ ಹೊಸ ಹೊಳಪುಗಳನ್ನು ಕಂಡು ಅವುಗಳ ಸಾಕ್ಷಾತ್ಕಾರವಾಗಿ ಪಣತೊಡುತ್ತಾರೆ. ವಂಗಭಂಗ ಚಳುವಳಿಯ ಕಾವು ಇವರನ್ನು ತಟ್ಟಿ ಮತ್ತಷ್ಟು ದು:ಖವಾಗಿ ನಿಸ್ವಾರ್ಥ ಭಾವನೆಯಿಂದ ಈ ನಾಡು ನನ್ನ ಮನೆ, ಈ ದೇಶ ನನ್ನ ಕುಟುಂಬವೆಂಬ ಸೂತ್ರವನ್ನು ಮೂಲವಾಗಿಸಿಕೊಂಡು ತಮ್ಮ ಹೊರಾಟಕ್ಕೆ ಶ್ರೀಕಾರ ಹಾಕುತ್ತಾರೆ. ಕನಾಟಕ ವಿದ್ಯಾವರ್ಧಕ ಸಂಘ, ವಾಗ್ಬೂಷಣ ಪತ್ರಿಕೆಯ ಸಂಪಾದಕತ್ವ ಮುಂತಾದವುಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಾರೆ, ಧಾರವಾಡದಲ್ಲಿ 1907ರಲ್ಲಿ ಮೊದಲಬಾರಿ ಕನ್ನಡ ಗ್ರಂಥಕರ್ತರ ಸಮ್ಮೇಳನ ನಡೆಸುತ್ತಾರೆ ಇದರ ಮುಂದುವರಿಕೆಯಾಗಿ ಜರುಗಿದ 3ನೇಯ ಸಮ್ಮೇಳನವು ಈ ನಾಡಿನ ಪ್ರತಿಷ್ಠಿತ ಸಂಸ್ಥೆ “ಕನ್ನಡ ಸಾಹಿತ್ಯ ಪರಿಷತ್ತಿನ" ಹುಟ್ಟಿಗೆ ನಾಂದಿಯಾಗುತ್ತದೆ. ಕರ್ನಾಟಕ ಗತವೈಭವ, ಕರ್ನಾಟಕ ವೀರರತ್ನಗಳಂತಹ ಪುಸ್ತಕಗಳನ್ನು ಪ್ರಕಟಿಸಿ ಮಲಗಿದ ಕನ್ನಡಿಗರತ್ತ ಚಾಟಿ ಬೀಸುತ್ತಾರೆ. ಆಲೂರರ ಇಂಥ ಕ್ರಾಂತಿಕಾರಿ ಹೆಜ್ಜೆಗಳನ್ನು ಸರಿಯಾಗಿಯೇ ಗುರುತಿಸಿದ ವರಕವಿ ಬೇಂದ್ರೆ ಅಲೂರರನ್ನು “ಕರ್ನಾಟಕ ಪ್ರಾಣೋಪಾಸಕ"ರೆಂದು ಹೆಮ್ಮೆಯಿಂದ ಕೊಂಡಾಡುತ್ತಾರೆ. ಹೀಗೆ ಆಲೂರುರೆಂದರೆ ಅದೊಂದು ಕನ್ನಡ ಗುಡಿಯ ಗೋಪೂರವಾಗಿದ್ದು ಕನ್ನಡಗಿರಲ್ಲರ ಪ್ರಾತ: ಸ್ಮರಣೀಯರಾಗಿದ್ದಾರೆ ಎಂದು ಡಾ. ಜಿನದತ್ತ ಹಡಗಲಿಯವರು ಆಲೂರರ ಸಾಧನೆಗಳನ್ನು ಸ್ಮರಿಸಿಕೊಂಡರು. ಟ್ರಸ್ಟ್ ಅಧ್ಯಕ್ಷ ಡಾ. ಪ್ರಮೋದ ಗಾಯಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಎಚ್. ಎ ಕಾಖಂಡಕಿ, ಕವಿ ನರಸಿಂಹ ಪರಾಂಜಪೆ, ಎಸ್.ಎಮ್ ದೇಶಪಾಂಡೆ, ಎಮ್. ಎಮ್ ಚಿಕ್ಕಮಠ, ರಮೇಶ ಪರ್ವತಿಕರ, ಅನಿಲ ಕಾಖಂಡಕಿ, ಮುರಳಿ ಹುಯಿಲಗೋಳ, ಭಾರತಿ ದೇಸಾಯಿ, ಶ್ರೀಕಾಂತ ದೇಸಾಯಿ ಮುಂತಾದವರು ಉಪಸ್ಥಿತರಿದ್ದರು. ಗೀತಾ ಆಲೂರ ಪ್ರಾರ್ಥಿಸಿದರು. ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಟ್ರಸ್ಟಿ ಡಾ. ದೀಪಕ ಆಲೂರ ಕಾರ್ಯಕ್ರಮ ನಿರೂಪಿಸಿದರು, ಶ್ರೀನಿವಾಸ ವಾಡಪ್ಪಿ ವಂದಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img