ಸವಣಾಲು : ಬಸದಿಯಲ್ಲಿ ಧಾಮ ಸಂಪ್ರೋಕ್ಷಣ ಮಹೋತ್ಸವ
Published Date: 25-Feb-2025 Link-Copied
ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯು ಊರ ಹಾಗೂ ಪರವೂರ ದಾನಿಗಳಿಂದ ಜೀರ್ಣೋದ್ಧಾರಗೊಂಡಿದ್ದು, ಧಾಮ ಸಂಪ್ರೋಕ್ಷಣ ಮಹೋತ್ಸವವು ಫೆ. 28 (ಶುಕ್ರವಾರ) ಹಾಗೂ ಮಾರ್ಚ್ 1 (ಶನಿವಾರ) ಮತ್ತು 2 ರಂದು (ಭಾನುವಾರ) ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ ಎಂದು ಬಸದಿಯ ಆಡಳಿತ ಮಂಡಳಿ ಅಧ್ಯಕ್ಷರಾದ ಕಿಶೋರ್ ಹೆಗ್ಡೆ, ಎರ್ಮೆದೋಡಿ ಗುತ್ತು ಮತ್ತು ಕಾರ್ಯದರ್ಶಿ ಸುರೇಶ್ ಕುಮಾರ್, ಉಜಿರೆ ತಿಳಿಸಿದ್ದಾರೆ. ಫೆ:28: ಶುಕ್ರವಾರ: ಬೆಳಿಗ್ಗೆ ಗಂಟೆ 8 ರಿಂದ ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ಧಿ, ಮುಖವಸ್ತ್ರ ಉದ್ಘಾಟನೆ. ಅಪರಾಹ್ನ ಗಂಟೆ 2.30ರಿಂದ ನಾಂದಿಮಂಗಲ ಪೂಜಾವಿಧಾನ, ಕ್ಷೇತ್ರಪಾಲ ಪ್ರತಿಷ್ಠೆ, ನಾಗಪ್ರತಿಷ್ಠೆ, ಭಗವಾನ್ ಆದಿನಾಥ ಸ್ವಾಮಿಗೆ 24 ಕಲಶ ಅಭಿಷೇಕ, ಮಹಾಪೂಜೆ ಮಾ. 1: ಶನಿವಾರ: ಬೆಳಿಗ್ಗೆ 8 ಗಂಟೆಯಿಂದ ನಿತ್ಯವಿಧಿ ಸಹಿತ ವಾಸ್ತು ಪೂಜಾವಿಧಾನ, ನವಗ್ರಹ ಶಾಂತಿ, ಅಪರಾಹ್ನ ಗಂಟೆ 2 ರಿಂದ ಪದ್ಮಾವತಿ ದೇವಿಗೆ ರಜತಕವಚ ಸಮರ್ಪಣೆ, ಆರಾಧನೆ, ಲಕ್ಷ ಹೂವಿನ ಪೂಜೆ, ಭಗವಾನ್ ಆದಿನಾಥ ಸ್ವಾಮಿಗೆ ೫೪ ಕಲಶ ಅಭಿಷೇಕ, ಮಹಾಪೂಜೆ ಮಾ. 2: ಭಾನುವಾರ: ಬೆಳಿಗ್ಗೆ ಗಂಟೆ 8 ರಿಂದ ಧಾಮ ಸಂಪ್ರೋಕ್ಷಣೆ, ಭಗವಾನ್ ಆದಿನಾಥ ಸ್ವಾಮಿ ಪ್ರತಿಷ್ಠೆ, ಶಿಖರಾರೋಹಣ. ಅಪರಾಹ್ನ ಗಂಟೆ 3.30 ರಿಂದ ಭಕ್ತಾಮರ ಆರಾಧನೆ. ಭಗವಾನ್ ಆದಿನಾಥ ಸ್ವಾಮಿಗೆ 108 ಕಲಶ ಅಭಿಷೇಕ, ಮಹಾಪೂಜೆ, ತೋರಣ ವಿಸರ್ಜನೆ. ಸೇವಾಕರ್ತೃಗಳು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬಸ್ಥರು. ಪ್ರತಿಷ್ಠಾಚಾರ್ಯ ಬೆಳ್ತಂಗಡಿ ಜಯರಾಜ ಇಂದ್ರರು, ಪುಷ್ಪರಾಜ ಇಂದ್ರರು ಮತ್ತು ಸ್ಥಳ ಪುರೋಹಿತ ವೃಷಭರಾಜ ಇಂದ್ರರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸುವರು. ಧಾರ್ಮಿಕ ಸಭೆ: ಮಾ. 2 ರಂದು ಭಾನುವಾರ ಸಂಜೆ 5 ಗಂಟೆಯಿಂದ ನಡೆಯುವ ಧಾರ್ಮಿಕ ಸಭೆಯಲ್ಲಿ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಅಧ್ಯಕ್ಷತೆ ವಹಿಸುವರು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಕಿಶೋರ್ ಹೆಗ್ಡೆ: ಮೊ: 9148659620