ತುಂಗಭದ್ರ ಪ್ರೌಢಶಾಲೆಯಲ್ಲಿ ಎಸ್.ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ
Published Date: 02-Mar-2025 Link-Copied
ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ ಮತ್ತು ಶ್ರೀ ಜ್ವಾಲಮಾಲಿನಿ ಮಹಿಳಾ ಸಮಾಜ ಹೂವಿನಡಗಲಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತುಂಗಭದ್ರ ಪ್ರೌಢಶಾಲೆಯಲ್ಲಿ ಎಸ್.ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ, ಪರೀಕ್ಷೆ ಹೇಗೆ ಬರೆಯಬೇಕು, ಅದನ್ನು ಹೀಗೆ ಎದುರಿಸಬೇಕು ಎಂಬ ಬಗ್ಗೆ ಸಲಹೆ ಹಾಗೂ ಮಾರ್ಗದರ್ಶನ ನೀಡಲಾಯಿತು. ಪರೀಕ್ಷೆಯಲ್ಲಿ ಫೇಲಾದರೂ ವಿದ್ಯಾರ್ಥಿಗಳಲ್ಲಿರುವ ಸದಾವಕಾಶಗಳು, ಇನ್ನಿತರ ವಿಚಾರಗಳನ್ನು ಹಾಗೂ ಯಾವುದೇ ಅನಾಹುತಗಳಿಗೆ ಎಡೆ ಮಾಡಿಕೊಡದಂತೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಜ್ವಾಲಾಮಾಲಿನಿ ಮಹಿಳಾ ಸಮಾಜದ ಅಧ್ಯಕ್ಷ ಎಂ. ಡಿ. ಪದ್ಮಾವತಿ, ಉಪಾಧ್ಯಕ್ಷರಾದ ಜಯಶ್ರೀ ಮಂಜುನಾಥ್ ಜೈನ, ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಕಾರ್ಯಕಾರಿ ಸಮಿತಿಯ ಸೀಮಾ ಪ್ರಶಾಂತ್ ಹೊಳಲು ಕಾರ್ಯದರ್ಶಿ ಚಂಪಾರಾಯಪ್ಪ ಹೊಳಲು, ಖಜಾಂಚಿ ಮೇಘ ಬಾಗೇಶ ಜೈನರ್, ಸದಸ್ಯರಾದ ಪದ್ಮ ಅಜಿತ್ ಹೊಳಲು, ವೈಶಾಲಿ ಅಮಿತ್ ಹೊಳಲು, ಭಾಗವಹಿಸಿದ್ದರು ಇದೇ ಸಂದರ್ಭದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರುಗಳಿಗೆ ಪೆನ್ಸಿಲ್ ಗಳನ್ನು ವಿತರಿಸಲಾಯಿತು. ಜೆ ರಂಗನಾಥ- ತುಮಕೂರು