ವೇಣೂರು: ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ


Logo

Published Date: 08-Mar-2025 Link-Copied

ವೇಣೂರು: ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವವು ದಿನಾಂಕ 11-03-2025 ಮಂಗಳವಾರದಿಂದ ಮೊದಲ್ಗೊಂಡು 15-03-2025ರ ಶನಿವಾರದವರೆಗೆ ಜರುಗಲಿದೆ. ದಿನಾಂಕ 14-03-2025ರ ಶುಕ್ರವಾರ ರಾತ್ರಿ ಗಂಟೆ 7-00ರಿಂದ ಭಗವಾನ್‌ ಶ್ರೀ ೧೦೦೮ ಬಾಹುಬಲಿ ಸ್ವಾಮಿ ಸನ್ನಿಧಿಯಲ್ಲಿ ರಥಯಾತ್ರಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಭಾರತಭೂಷಣ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಜರಗಲಿರುವುದು. ರಾತ್ರಿ ಗಂಟೆ 7-30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ: ಆಶೀರ್ವಚನ: ಪ. ಪೂ. ಭಾರತಭೂಷಣ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಶ್ರೀ ಜೈನ ಮಠ ಮೂಡುಬಿದಿರೆ ಅಧ್ಯಕ್ಷತೆ: ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ ಅರಮನೆ, ಉಪಾಧ್ಯಕ್ಷರು, ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ, ವೇಣೂರು ಮುಖ್ಯ ಅತಿಥಿಗಳು: ಕೆ. ಅಭಯಚಂದ್ರ ಜೈನ್‌, ಮಾಜಿ ಸಚಿವರು, ಕರ್ನಾಟಕ ಸರಕಾರ ಪ್ರತಿಭಾ ಪುರಸ್ಕಾರ: 2024ರ ಎಸ್.ಎಸ್.‌ಎಲ್‌.ಸಿ. ಮತ್ತು ಪಿ.ಯು.ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಅಭಿನಂದನೆ: 90 ವರ್ಷ ದಾಟಿದ ಹಿರಿಯ ಶ್ರಾವಕ/ಶ್ರಾವಕಿಯರಿಗೆ. ಯಾತ್ರಿ ನಿವಾಸದಲ್ಲಿ ನೂತನ ಶ್ರುತ ಭಂಡಾರ (ಸ್ವಾಧ್ಯಾಯ ಕೇಂದ್ರ) ಉದ್ಘಾಟನಾ ಸಮಾರಂಭ: ಸಂಜೆ ಗಂಟೆ 6-00ಕ್ಕೆ ಪಾವನ ಸಾನ್ನಿಧ್ಯ: ಪ. ಪೂ. ಭಾರತಭೂಷಣ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಶ್ರೀ ಜೈನ ಮಠ ಮೂಡುಬಿದಿರೆ ಉಪಸ್ಥಿತಿ: ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ ಅರಮನೆ ಉದ್ಘಾಟನೆ: ಕೆ. ಅಭಯಚಂದ್ರ ಜೈನ್‌, ಮಾಜಿ ಸಚಿವರು, ಕರ್ನಾಟಕ ಸರಕಾರ

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img