ಅನಿತಾ ಸುರೇಂದ್ರ ಕುಮಾರ್ರವರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ 2025
Published Date: 10-Mar-2025 Link-Copied
ಸಮಾಜ ಸೇವಕಿ, ಮುನಿಗಳ ಚಾತುರ್ಮಾಸದ ರುವಾರಿ, ಪ್ರತಿಯೊಂದು ಮನೆ ಮನೆಯಲ್ಲಿ ಜಿನಭಜನೆಯ ಮುಖಾಂತರ ಮನೆ ಮಾತಾಗಿರುವ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ರವರಿಗೆ ಬೆಂಗಳೂರಿನ ರಾಣಿ ಅಬ್ಬಕ್ಕ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ "ವೀರರಾಣಿ ಅಬ್ಬಕ್ಕ ಪ್ರಶಸ್ತಿ"ಯನ್ನು ಮಹಾಲಕ್ಷ್ಮೀ ಲೇಔಟ್ನಲ್ಲಿ ಭಾನುವಾರ ಆಯೋಜಿಸಿದ್ದ ರಾಣಿ ಅಬ್ಬಕ್ಕ ಉತ್ಸವ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.