ವಾರ್ಷಿಕ ರಥಯಾತ್ರ ಮಹೋತ್ಸವದ ಇಂದಿನ ಕಾರ್ಯಕ್ರಮ
Published Date: 12-Mar-2025 Link-Copied
ವೇಣೂರು: ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರ ಮಹೋತ್ಸವವು ದಿನಾಂಕ 14.03.2025ನೇ ಶುಕ್ರವಾರ ಜರುಗಲಿರುವುದು. ಅದರ ಪೂರ್ವಭಾವಿಯಾಗಿ ಇಂದು ಬೆಳಿಗ್ಗೆ ಗಂಟೆ 10:00ಕ್ಕೆ ಬೆಟ್ಟದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ಶಾಂತಿಚಕ್ರ ಆರಾಧನೆ ನೆರವೇರಲಿದೆ. ಇಂದು ಸಾಯಂಕಾಲ ಗಂಟೆ 6:30 ರಿಂದ ರಥಯಾತ್ರ ಮಹೋತ್ಸವದ ಪ್ರಯುಕ್ತ ಶ್ರೀ ರಕ್ಷಾ ಯಂತ್ರಾರಾಧನೆ, ಶ್ರೀ ಬಲಿಪೂಜೆ, ವಸಂತಕಟ್ಟೆ ಪೂಜೆ, ಶ್ರೀ ವಿಹಾರ, ಶ್ರೀ ದೇವರ ಉತ್ಸವ ಹಾಗೂ ಶ್ರೀ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ ಜರಗಲಿರುವುದು.