24 ತೀರ್ಥಂಕರರ ರತ್ನದ ಜಿನಬಿಂಬಗಳಿಗೆ ಕ್ಷೀರ ಅಭಿಷೇಕ ಹಾಗೂ ಮಹಾಪೂಜೆ
Published Date: 13-Mar-2025 Link-Copied
ವೇಣೂರು ಭಗವಾನ್ ಶ್ರೀ ಬಾಹುಬಲಿ ಬೆಟ್ಟದ ಬಲ ಭಾಗದಲ್ಲಿರುವ ಬಿನ್ನಾಣಿ ಬಸದಿ ಭ| ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯ ಗಂಧಕುಟಿಗೆ, ಎಡ ಭಾಗದಲ್ಲಿರುವ ಅಕ್ಕಂಗಳ ಬಸದಿ ಭ| ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯ ಗಂಧಕುಟಿಗೆ ಪರಮಪೂಜ್ಯ ಮುನಿಶ್ರೀ ೧೦೮ ಶ್ರೀ ಆದಿತ್ಯ ಸಾಗರ ಮುನಿ ಮಹಾರಾಜರ ಮಾರ್ಗದರ್ಶನದಲ್ಲಿ ದಾನವಾಗಿ ನೀಡಿದ 24 ತೀರ್ಥಂಕರರ ರತ್ನದ ಜಿನಬಿಂಬಗಳಿಗೆ ಭ| ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವದ ಶುಭ ಸಂದರ್ಭದಲ್ಲಿ ನಾಳೆ (ಮಾ. 14) ಬೆಳಿಗ್ಗೆ 9.00 ಗಂಟೆಗೆ ಕ್ಷೀರ ಅಭಿಷೇಕ ಹಾಗೂ ಮಹಾಪೂಜೆ ನೆರವೇರಲಿರುವುದು.