ಬೆಂಗಳೂರಿನ ಯಲಹಂಕದಲ್ಲಿ ನೂತನ ಜೈನ್ ಮಿಲನ್ ಶಾಖೆ ಪ್ರಾರಂಭ
Published Date: 18-Mar-2025 Link-Copied
ಬೆಂಗಳೂರು ಭಾರತೀಯ ಜೈನ್ ಮಿಲನ್ ವಲಯ ಎಂಟರ ಅಡಿಯಲ್ಲಿ ನೂತನವಾಗಿ ಬೆಂಗಳೂರಿನ ಯಲಹಂಕದಲ್ಲಿ ಜೈನ್ ಮಿಲನ್ ಶಾಖೆ ಪ್ರಾರಂಭಿಸಲಾಗಿದೆ. ಯಲಹಂಕ ಜೈನ್ ಮಿಲನ್ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಂಬದಹಳ್ಳಿ ಜೈನಮಠದ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಗಳವರು ಪಾವನ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅಬ್ಬಕ್ಕ ರಾಣಿ ಪ್ರಶಸ್ತಿ ಪುರಸ್ಕೃತರು, ಬೆಂಗಳೂರು ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರು ಆದ ಅನಿತಾ ಸುರೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಉಪಾಧ್ಯಕ್ಷರು, ರತ್ಮಾತ್ರಯ ಧಾರವಾಹಿಯ ನಿರ್ದೇಶಕರಾದ ಡಾ. ನೀರಜಾ ನಾಗೇಂದ್ರ ಕುಮಾರ್ ಉಪನ್ಯಾಸ ನೀಡಿದರು. ಪ್ರೇಮ ಸುಖಾನಂದ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು ಕಾರ್ಯಕ್ರಮದಲ್ಲಿ ಭಾರತೀಯ ಜೈನ್ ಮಿಲನ್ ವಲಯ 8 ರ ಪ್ರದೀಪ್, ಶ್ಯಾಮಲಾ ಪ್ರಸಾದ್, ವಿಲಾಸ್ ಪಾಸಣ್ಣನವರ್, ಪಿ.ಚರಣ್, ವೃಷಭರಾಜು, ರೇಷ್ಮಾ, ಚಂದ್ರನಾಥ ಟ್ರಸ್ಟ್ ಭೀಮಣ್ಣ ಕೋಟೆ, ಜೈನ್ ಮಿಲನ್ ವಲಯ 8 ರ ಜoಟಿ ಕಾರ್ಯದರ್ಶಿ ಸುಖಾನಂದ, ಇನ್ನಿತರರು ಭಾಗವಹಿಸಿದ್ದರು.