ಪಂಚಾಮೃತ ಅಭಿಷೇಕ ಹಾಗೂ ಮಸ್ತಕಾಭಿಷೇಕ ಮತ್ತು ಮಹಾ ಶಾಂತಿಮಂತ್ರ ಪಠಣ
Published Date: 19-Mar-2025 Link-Copied
ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿಯಲ್ಲಿರುವ ಶ್ರೀ ಮದ್ದೇವಾಧಿದೇವ ಭ| ಶ್ರೀ ೧೦೦೮ ಮುನಿಸುವೃತನಾಥ ತೀರ್ಥಂಕರ ಜಿನಮಂದಿರದಲ್ಲಿ ಪಂಚಾಮೃತ ಅಭಿಷೇಕ ಹಾಗೂ ಮಸ್ತಕಾಭಿಷೇಕ ಮತ್ತು ಮಹಾ ಶಾಂತಿಮಂತ್ರ ಪಠಣ, ಶ್ರೀ ಜ್ವಾಲಮಾಲಿನಿ ದೇವಿ ಹಾಗೂ ಶ್ರೀ ಪದ್ಮಾವತಿ ದೇವಿಯವರ ಪೂಜಾ, ಶೃಂಗಾರ, ಉಡಿತುಂಬುವ ಕಾರ್ಯಕ್ರಮವು ಪ. ಪೂ. ಆಚಾರ್ಯ ಶ್ರೀ ೧೦೮ ಜಿನಸೇನ ಮಹಾರಾಜರು ಹಾಗೂ ಪ. ಪೂ. ೧೦೮ ಸಂಯಮ ಸಾಗರ ಮುನಿಮಹಾರಾಜರುಗಳ ಮಂಗಳ ಆಶೀರ್ವಾದಗಳೊಂದಿಗೆ ಮತ್ತು ನಾಂದಣಿ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಜಿನಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಕೊಲ್ಹಾಪುರ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯಸಾನ್ನಿಧ್ಯದಲ್ಲಿ ಮಾ. 29ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.