ಅಷ್ಟಮ ನಂದೀಶ್ವರದ ೫೨ ಜಿನಬಿಂಬಗಳಿಗೆ ೫೪ ಕಲಶಗಳಿಂದ ಮಹಾಭಿಷೇಕ
Published Date: 19-Mar-2025 Link-Copied
ಮೂಡುಬಿದಿರೆ: ದರೆಗುಡ್ಡೆಯಲ್ಲಿರುವ ಶ್ರೀ ೧೦೦೮ ಅನಂತನಾಥ ಸ್ವಾಮಿ ಬಸದಿಯಲ್ಲಿ ಅಷ್ಟಮ ನಂದೀಶ್ವರದ ೫೨ ಜಿನಬಿಂಬಗಳಿಗೆ ೫೪ ಕಲಶಗಳಿಂದ ಮಹಾಭಿಷೇಕವು ಮೂಡುಬಿದಿರೆ ಶ್ರಿ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಮಾ. 23ರಂದು ನೆರವೇರಲಿದೆ. ದಿನಾಂಕ 22-03-2025ನೇ ಶನಿವಾರ ಗಂಟೆ 9ಕ್ಕೆ ನೂತನ ನಂದೀಶ್ವರ 52 ಅರಿಹಂತರ ಜಿನಬಿಂಬಗಳು ಪೂಜಾ ಸ್ಥಳಕ್ಕೆ ಆಗಮನ, ಗಂಟೆ 10ರಿಂದ ನಂದೀಶ್ವರರ 52 ಅರಿಹಂತರಿಗೆ ಪ್ರತ್ಯೇಕ ಪಂಚಾಮೃತ ಅಭಿಷೇಕ ನೆರವೇರಲಿರುವುದು ಎಂದು ಪ್ರಕಟಣೆ ತಿಳಿಸಿದೆ.