ಕಾರ್ಕಳ: ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣೆ ಮತ್ತು ಶ್ರೀ ಜೈನ ಮಠದ ನೂತನ ಕಟ್ಟಡದ ಪ್ರವೇಶೋತ್ಸವ
Published Date: 23-Jan-2024 Link-Copied
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪ್ರಾಚೀನ ಕಾರ್ಕಳ ಶ್ರೀ ಜೈನ ಮಠವು ಬೈರವದೇವ ಅರಸರಿಂದ ಸ್ಥಾಪನೆಯಾಗಿದ್ದು, ಇದೀಗ ಶಿಥಿಲಗೊಂಡ ಕಾರಣ ಪೀಠಾಧೀಶರಾಗಿರುವ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಅಪೇಕ್ಷೆಯನ್ನು ಸಾಕಾರಗೊಳಿಸುವ ದೃಷ್ಠಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆ ಹಾಗೂ ನೇತೃತ್ವದಲ್ಲಿ ಮತ್ತು ಸಮಾಜ ಬಾಂಧವರ ಸಹಕಾರದೊಂದಿಗೆ ಸುಂದರವಾದ, ವಿಶಾಲವಾದ ಹಾಗೂ ಆಗಮೋಕ್ತ ಪದ್ಧತಿಯಂತೆ ವಾಸ್ತುವಿನ್ಯಾಸ ಹೊಂದಿರುವ ಮಠದ ನೂತನ ಕಟ್ಟಡದ ನಿರ್ಮಾಣ ಕಾರ್ಯವು ದಿನಾಂಕ 20-08-2022ರಂದು ಶಿಲಾನ್ಯಾಸ ಪೂರ್ವಕ ಪ್ರಾರಂಭಗೊಂಡು ಇದೀಗ ಲೋಕಾರ್ಪಣೆಗೆ ಸಿದ್ಧವಾಗಿದೆ. ಪ.ಪೂ. ೧೦೮ ಶ್ರೀ ಅಮೋಘಕೀರ್ತಿ ಮುನಿಮಹಾರಾಜರು ಮತ್ತು ಪ.ಪೂ. ೧೦೮ ಶ್ರೀ ಅಮರಕೀರ್ತಿ ಮುನಿಮಹಾರಾಜರ ಪಾವನ ಸಾನ್ನಿಧ್ಯದಲ್ಲಿ, ಕಾರ್ಕಳ ಶ್ರೀ ಜೈನ ಮಠದ ಪ.ಪೂ. ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಮತ್ತು ಸಮಸ್ತ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಭ| ಶ್ರೀ ಚಂದ್ರನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣಾ ಮತ್ತು ಶ್ರೀ ಮಠದ ನೂತನ ಕಟ್ಟಡದ ಪ್ರವೇಶೋತ್ಸವ ಕಾರ್ಯಕ್ರಮವು ದಿನಾಂಕ 24-01-2024ನೇ ಬುಧವಾರದಿಂದ ಮೊದಲ್ಗೊಂಡು ದಿನಾಂಕ 26-01-2024ನೇ ಶುಕ್ರವಾರದ ಪರ್ಯಂತ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರಗಲಿದೆ.