ವೀರೇಂದ್ರ ಕುಮಾರ್ ಬೇಗೂರ್ ಅವರಿಗೆ ಗೌರವ ಸನ್ಮಾನ
Published Date: 12-May-2025 Link-Copied
ಜೈನಧರ್ಮ ಸಿದ್ಧಾಂತದ ಬಗ್ಗೆ ವೀರೇಂದ್ರ ಕುಮಾರ್ ಬೇಗೂರ್ ರವರು ಶಾಸನೋಕ್ತ ಮಾಹಿತಿಯ ಉಪನ್ಯಾಸವನ್ನು ದಿನಾಂಕ 10 -5- 2025 ಶನಿವಾರ ಹಾಗೂ 11-5-2025 ರ ಭಾನುವಾರ ನೀಡಿದರು. ಐತಿಹಾಸಿಕ ಜ್ಞಾನವನ್ನು ಪ್ರಶಂಸಿಸಿ ತ್ರಿಲೋಕ ಜೈನ್ ಮಿಲನ್ ಹಾಗೂ ಹಾಸನದ ಜೈನ ಸಮಾಜದ ವತಿಯಿಂದ ಗೌರವ ಸನ್ಮಾನ ಮಾಡಲಾಯಿತು. ತ್ರಿಲೋಕ್ ಜೈನ್ ಮಿಲನ್ ಹಾಸನದವರು ಈಎರಡೂ ದಿನದ ಕಾರ್ಯಕ್ರಮವನ್ನು ಹಿರಿಯ ಶ್ರಾವಕ ಶ್ರಾವಕೀಯರಿಗಾಗಿ ಹಾಸನ ಜೈನ್ ಭವನದಲ್ಲಿ ಹಮ್ಮಿಕೊಂಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ವಾಣಿ ರತ್ನಾಕರ್ ರವರು ನಿರ್ವಹಿಸಿದರು. ವೀರೇಂದ್ರ ಕುಮಾರ್ ಬೇಗೂರ್ ಮಿಲನ್ ವತಿಯಿಂದ ಡಾ. ಅಶ್ವಿನ್ ಕುಮಾರ್ ರವರು ಗೌರವಿಸಿದರು.