ಮೂಡುಬಿದಿರೆ: ಶ್ರೀ ದಿಗಂಬರ ಜೈನ ಮಠದಲ್ಲಿ ಸಾಮೂಹಿಕ ಪ್ರಾರ್ಥನೆ
Published Date: 12-May-2025 Link-Copied
ನಮ್ಮ ರಾಷ್ಟ್ರದ ಯುದ್ಧ ಸನ್ನಿವೇಶದ ಸಂದರ್ಭದಲ್ಲಿ ಜೈನ ಕಾಶಿ ಶ್ರೀ ದಿಗಂಬರ ಜೈನ ಮಠದಲ್ಲಿ 11.5.2025 ರಂದು ಬೆಳಿಗ್ಗೆ 8.45ಕ್ಕೆ ಸಾಮೂಹಿಕ ಪ್ರಾರ್ಥನೆಯನ್ನು ಮಾಡಲಾಯಿತು ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ, ಉಪಸ್ಥಿತಿಯಲ್ಲಿ ಭಗವಾನ್ ಪಾರ್ಶ್ವನಾಥ ಸ್ವಾಮಿಗೆ ಕ್ಷೀರ ಅಭಿಷೇಕ ನೆರವೇರಿಸಿ, ಪಟ್ಟದ ಮಹಾ ಮಾತೆ ಅಭಿಷ್ಟವರ ಪ್ರಧಾಯಿನಿ ಯಕ್ಷಿ ಕೂಷ್ಮಾoಡಿನೀದೇವಿ, ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಮಾಡಿ, ಯುದ್ಧ ಸಂಧರ್ಭ ಎಲ್ಲಾ ಭಯೋತ್ಪದನೆ ದೂರವಾಗಲಿ ಸರ್ವ ಧರ್ಮಿಯರು ಸರ್ವ ಭಾಷೆಯವರು ನಾವೆಲ್ಲರೂ ಐಕ್ಯತೆಯಿಂದ ಭಾರತ ದೇಶದ ವಿಜಯ ಪ್ರಾಪ್ತಿಗಾಗಿ ಪ್ರಾರ್ಥಿಸೋಣ ಲೋಕದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಯಾಗಲಿ ಇಂತಹ ವಿಷಮ ಸ್ಥಿತಿಯಲ್ಲಿ ರಾಷ್ಟ್ರ ಧರ್ಮದ ಏಕತೆಗಾಗಿ ಶ್ರಮಿಸೋಣ ಭಾರತ ಸರಕಾರ ಹಾಗೂ ಸೈನಿಕರ ಆತ್ಮ ಸ್ಥೈರ್ಯ ಹೆಚ್ಚಿಸೋಣ ಎಂದು ಶ್ರೀ ಗಳವರು ನುಡಿದರು ಅಭಯ ಚಂದ್ರ ಜೈನ್, ದಯಾನಂದ ಪೈ, ವಿಜಯ ಕುಮಾರ್, ಬಾಹುಬಲಿ ಪ್ರಸಾದ್, ಎ ಗುಣಪಾಲ್ ಹೆಗ್ಡೆ, ಗುಣಪಾಲ್ ಮುದ್ಯ ನಿರಂಜನ್, ರಾಘವೇಂದ್ರ ಭಂಡಾರ್ಕರ್, ಶ್ರೀಧರ್ ಅರಮನೆ, ವೃoದ ರಾಜೇಂದ್ರ, ಶ್ವೇತಾ ಜೈನ್ ,ವೀಣಾ, ಸುದಾ, ಮಂಜುಳಾ ಅಭಯ ಚಂದ್ರ ಮೊದಲಾದವರಿದ್ದರು ವರದಿ: ಸಂಜಯಂತ ಕುಮಾರ್ ಶೆಟ್ಟಿ ವ್ಯವಸ್ಥಾಪಕರು, ಸ್ವಸ್ತಿಶ್ರೀ ಭಟ್ಟಾರಕ ನಗರ, ಶ್ರೀ ದಿಗಂಬರ ಜೈನ ಮಠ ಮೂಡುಬಿದಿರೆ