ಜೈನ ಶೋಭಾನೆ ಹಾಡುಗಳ ಪುಸ್ತಕ ಬಿಡುಗಡೆ


Logo

Published Date: 03-Jun-2025 Link-Copied

ಜೈನ ಧರ್ಮದ ಸಂಪ್ರದಾಯದಲ್ಲಿ ಶೋಭಾನೆಗೆ ಬಹಳ ಮಹತ್ವವಿದೆ ಈ ಶೋಭಾನೆಗಳನ್ನು ಪಂಚಕಲ್ಯಾಣದ ವಿಧಿ-ವಿಧಾನಗಳಲ್ಲಿಯೂ ಕೂಡಾ ಹಾಡುತ್ತಾರೆ ಮದುವೆ, ಸೀಮಂತ, ನಾಮಕರಣ, ಉಪನಯನದ ಕಾರ್ಯಕ್ರಮಗಳಲ್ಲಿ ಶೋಭಾನೆ ಹಾಡುಗಳು ಬಹಳ ಪ್ರಾಮುಖ್ಯತೆಯನ್ನು ಪಡೆದಿರುತ್ತದೆ ಎಂದು ಮೂಡಬಿದಿರೆಯ ಪರಮಪೂಜ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಸ್ವಾಮಿಜೀಯವರು ಪುಸ್ತಕವನ್ನು ಶ್ರುತ ಪಂಚಮಿಯ ದಿನದಂದು ಶ್ರೀ ಜೈನ ಮಠ ಮೂಡಬಿದಿರೆಯಲ್ಲಿ ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ಶೋಭಾನೆ ಹಾಡುಗಳ ಪುಸ್ತಕವನ್ನು ರಚಿಸಿದ ವಾಣಿಶ್ರೀ ಅಭಯ ಕುಮಾರ್ ಮೂಡಬಿದಿರೆ ಇವರನ್ನು ಶಾಲು ಹೊದಿಸಿ ಗೌರವಿಸಿದರು ಈ ಸಂದರ್ಭದಲ್ಲಿ ಪಟ್ನ ಶೆಟ್ಟಿ ಸುಧೇಶ್ ಕುಮಾರ್, ಬಾಹುಬಲಿ ಪ್ರಸಾದ್, ಅಭಯ ಕುಮಾರ್, ವೀಣಾ ರಘ ಚಂದ್ರ, ವೃಂದಾ ರಾಜೇಂದ್ರ, ರೇಖಾ ಸುಧೇಶ್ ಕುಮಾರ್, ಮಂಜುಳ ಅಭಯ ಚಂದ್ರ, ಶ್ಚೇತಾ ಜೈನ್, ಉಷಾ ಜಯ ವೀರ್, ಮಂಜುಳ ಯಶೋಧರ್, ರಾಜೇಶ್ವರಿ ಶಂಭವ ಕುಮಾರ್, ಸುಧಾ ಪೃಥ್ವಿರಾಜ್ ಶಕುಂತಳಾ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img