ಕರಿಮಣೇಲು ಗುತ್ತು ಸನತ್ ಕುಮಾರ್ ಸೇಮಿತ ಅವರಿಗೆ ಸನ್ಮಾನ
Published Date: 10-Jun-2025 Link-Copied
ನಾರಾವಿ ಜೂ. 7: ನಾರಾವಿ ರಾಮೇರುಗುತ್ತು ಪದ್ಮರಾಜ ಅಧಿಕಾರಿ ಮತ್ತು ಕರಿಮಣೇಲುಗುತ್ತು ಅನಂತಮತಿಯವರ ದ್ವಿತೀಯ ಪುತ್ರರಾದ ಕರಿಮಣೇಲುಗುತ್ತು ಕೆ. ಸನತ್ ಕುಮಾರ್ ಸೇಮಿತರವರ 96ನೇ ಹುಟ್ಟುಹಬ್ಬದ ಪ್ರಯುಕ್ತ ಭ| ಶ್ರೀ ೧೦೦೮ ಧರ್ಮನಾಥ ಸ್ವಾಮಿಯಲ್ಲಿ ನವಗ್ರಹ ಶಾಂತಿ ಮತ್ತು ಪದ್ಮಾವತಿ ಅಮ್ಮನವರಿಗೆ ಲಕ್ಷ ಹೂವಿನಪೂಜೆ ನಡೆದು ಬಳಿಕ ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳು, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಮತ್ತು ಬಸದಿಯ ಆಡಳಿತ ಮಂಡಳಿಯ ಸರ್ವ ಸದಸ್ಯರ ಸಮ್ಮುಖದಲ್ಲಿ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಊರ-ಪರವೂರ ಗಣ್ಯರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.