ದ ಕ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ
Published Date: 20-Jun-2025 Link-Copied
ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಶ್ರೀ ದಿಗಂಬರ ಜೈನ ಮಠ ಮೂಡುಬಿದ್ರೆ ಇವರ ಪಾವನ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರವು ಮೂಡಬಿದ್ರೆ ಜೈನ್ ಮಠದ ಶ್ರೀ ಭಟ್ಟಾರಕರ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಪೂಜ್ಯ ಸ್ವಾಮೀಜಿಯವರು ಉದ್ಘಾಟಿಸಿದರು. ಶಿಬಿರದಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯರಾದ ಪರಿಮಳ ಅವರು ದ ಕ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾದ ಜಿನೇಂದ್ರ ಕೋಟ್ಯಾನ್, ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಬಸದಿಯ ಆಡಳಿತ ಮಂಡಳಿಯ ಸಂಚಾಲಕರು ಡಾ. ಕೆ. ಜಯಕೀರ್ತಿ ಜೈನ್, ಶ್ರೀ ಜೈನ್ ಮಠದ ಸಲಹಾ ಸಮಿತಿ ಅಧ್ಯಕ್ಷರಾದ ಬಾಹುಬಲಿ ಪ್ರಸಾದ್, ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿಗಳು ಭಾಗವಸಿದ್ದರು. ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಸದಸ್ಯರಾದ ಪರಿಮಳರವರನ್ನು ಪೂಜ್ಯ ಸ್ವಾಮೀಜಿಯವರು ಸನ್ಮಾನಿಸಿದರು, ಜಿನೇಂದ್ರ ಕೋಟ್ಯಾನ್, ಡಾ. ಕೆ. ಜಯಕೀರ್ತಿ ಜೈನ್ ರವರನ್ನು ಪೂಜ್ಯ ಸ್ವಾಮೀಜಿಯವರು ಅಭಿನಂದಿಸಿದರು. ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪುರೋಹಿತರು ಹಾಗೂ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪುರೋಹಿತರುಗಳಿಗೆ ಧಾರ್ಮಿಕ ಪ್ರಮಾಣ ಪತ್ರವನ್ನು ನೀಡಲಾಯಿತು. ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ, ಬಾಹುಬಲಿ ಪ್ರಸಾದ್ ವಂದನಾರ್ಪಣೆ ಸಲ್ಲಿಸಿ, ಸೌಮ್ಯಶ್ರೀ ಪ್ರಾoಶುಪಾಲರು ಸ್ವಸ್ತಿಶ್ರೀ ಪದವಿ ಪೂರ್ವ ವಸತಿ ಕಾಲೇಜು ಮೂಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.