ಸತ್ತೂರು, ಧಾರವಾಡ: 11ನೇ ಅಂತರರಾಷ್ಟ್ರೀಯ ಯೋಗ ದಿನ
Published Date: 21-Jun-2025 Link-Copied
ಎಸ್.ಡಿ.ಎಂ. ವಿಶ್ವವಿದ್ಯಾಲಯವು 11ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಎಸ್.ಡಿ.ಎಂ. ದಂತ ಮಹಾವಿದ್ಯಾಲಯದಲ್ಲಿ “ಒಂದು ಭೂಮಿ - ಒಂದು ಆರೋಗ್ಯ” ಎಂಬ ಧ್ಯೇಯವಾಕ್ಯದಡಿಯಲ್ಲಿ ಆಚರಿಸಲಾಯಿತು. ಹೆಸರಾಂತ ದಂತ ಚಿಕಿತ್ಸಕರು ಮತ್ತು ಯೋಗ ತಜ್ಞೆಯಾದ ಡಾ. ಕೃತಿಕಾ ಗುತ್ತಲ್ ಅವರು ಮುಖ್ಯ ಅತಿಥಿಯಾಗಿದ್ದರು. ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ಡಾ. ಕೃತಿಕಾ ಗುತ್ತಲ್, ಯೋಗದ ಮಹತ್ವವನ್ನು ತಿಳಿಸಿ ಮಾತನಾಡುತ್ತಾ: ಯೋಗವು ಆರೋಗ್ಯಕರ ಜೀವನಕ್ಕೆ ಸಮಗ್ರ ಜ್ಞಾನವನ್ನು ಒದಗಿಸುತ್ತದೆ, ಯೋಗಾಸನಗಳನ್ನು ಮಾಡುವ ಮೂಲಕ ನಮ್ಮ ದೇಹ ಮತ್ತು ಮನಸ್ಸು ಉಲ್ಲಾಸದಿಂದಿರುತ್ತದೆ, ಯೋಗವು ದೇಹ ಮತ್ತು ಮನಸ್ಸಿಗೆ ಸುಲಭವಾದ ವ್ಯಾಯಾಮವಾಗಿದ್ದು ಎಲ್ಲರೂ ಅದನ್ನು ರೂಢಿಸಿಕೊಳ್ಳಬಹುದು, ಯೋಗವು ದೇಹದ ಲವಲವಿಕೆಯನ್ನು ಹೆಚ್ಚಿಸಿ, ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ, ಮನಸ್ಸಿನ ಶಾಂತತೆಗೆ ಮತ್ತು ದಕ್ಷತೆಯ ಕಾರ್ಯನಿರ್ವಹಣೆಗೆ ಯೋಗಾಭ್ಯಸಗಳು ಅತ್ಯಾವಶ್ಯಕ, ನಿರಂತರ ಯೋಗ ಅಭ್ಯಾಸ ಹಾಗೂ ಪ್ರಾಚೀನ ಆಹಾರ ಸೇವನಾ ಪದ್ದತ್ತಿಯಿಂದ ಉತ್ತಮ ಜೀವನ ಶೈಲಿ ನಡೆಸಲು ಸಾಧ್ಯ ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪ ಕುಲಪತಿಗಳಾದ ವಿ. ಜೀವಂಧರ್ ಕುಮಾರ್, ಕುಲಸಚಿವರಾದ ಡಾ. ಚಿದೇಂದ್ರ ಎಂ ಶೆಟ್ಟರ್, ಡಾ. ಸತೀಶ್ ಪಾಟೀಲ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸುಮಾರು 300ಕ್ಕೂ ಅಧಿಕ ವೈದ್ಯರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಸ್.ಡಿ.ಎಂ ದಂತ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಲರಾಮ್ ಡಿ. ನಾಯ್ಕ ಅತಿಥಿಗಳನ್ನು ಸ್ವಾಗತಿಸಿದರು. ಡಾ. ಪ್ರಶಾಂತ್ ಮೋಗಿ ಧನ್ಯವಾದ ಅರ್ಪಿಸಿದರು ಮತ್ತು ಡಾ. ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು. ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತಂಡದವರು ದೇವರ ನಾಮ ಸ್ತುತಿಸಿ, ಯೋಗಾಸನಗಳನ್ನು ಪ್ರಸ್ತುತಿಪಡಿಸಿದರು.