ಜೈನ ಸಮಾಜದ ಅಪರೂಪದ ರಾಜಕಾರಿಣಿ


Logo

Published Date: 10-Jul-2025 Link-Copied

ಶ್ರೀ ತವನಪ್ಪ ಅಷ್ಟಗಿ ಅವರ ೬೪ ನೇ ಜನ್ಮ ದಿನದ ಸಂಭ್ರಮ ಇಂದು ವಿಧಾನ ಪರಿಷತ್ ಸ್ಥಾನಕ್ಕೆ ನಾಮಕರಣಕ್ಕೆ ಸೂಕ್ತ ಅಭ್ಯರ್ಥಿ. ಜಾತಿ ಆಧಾರವೇ ನಿರ್ಣಾಯಕವಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಅಲ್ಪಸಂಖ್ಯಾತರಲ್ಲಿಯೇ ಅಲ್ಪಸಂಖ್ಯಾತ ಜೈನ ಸಮುದಾಯದ ನಾಯಕ ಧಾರವಾಡ ತಾಲೂಕು ಉಪ್ಪಿನ ಬೆಟಗೇರಿ ಗ್ರಾಮದ ಸ್ನೇಹ ಜೀವಿ ಶ್ರೀ ತವನಪ್ಪ ಅಷ್ಟಗಿಯವರು. ಸಾರ್ವಜನಿಕ ಕ್ಷೇತ್ರದಲ್ಲಿ ಇವರ ಜನಪರ ಕಾಳಜಿ, ಮೌಲ್ಯಾಧಾರಿತ ರಾಜಕೀಯ ಸಿದ್ದಾಂತ,ಸಾಮಾನ್ಯ ಜನರೊಂದಿಗೆ ನಿರಂತರ ಸಂಪರ್ಕ ಮತ್ತು ಸಮಸ್ಯೆ ಪರಿಹಾರದ ಬಗ್ಗೆ ಸ್ಪಂದನೆ ಪ್ರಾಮಾಣಿಕ ಪ್ರಯತ್ನ ಶುದ್ಧ ಚಾರಿತ್ಯ ಇವರ ಹುಟ್ಟುಗುಣ. ಈ ಕಾರಣದಿಂದಲೇ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಬಹಳ ಜನಪ್ರೀಯ ನಾಯಕರಾಗಿ ಹೊರಹೊಮ್ಮಿದ್ದಾರೆ ಹಾಗೂ ಒಂದೂ ವಿವಾದ ಇಲ್ಲದ ಅಪ್ಪಟ ನಾಯಕರು ಎನ್ನಬಹುದು. ಧಾರವಾಡ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದಲ್ಲಿ ಅಪಾರ ಜನ ಬೆಂಬಲ ಇದ್ದು ಅಪಾರವಾದ ಅಭಿಮಾನಿಗಳನ್ನು, ಹಿತ ಚಿಂತಕರನ್ನು ಹೊoದಿ ಅವರ ಆಶಯದಂತೆ ಜನರ ಸೇವೆಗಾಗಿ ರಾಜಕೀಯವನ್ನು ಬಳಸಿಕೊಳ್ಳುತ್ತಿವ ಅಪರೂಪದ ರಾಜಕಾರಣಿ ಇವರು. ಜೊತೆಗೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ಹಿಂದಿನ ಶಕ್ತಿ ಇವರೇ ಆಗಿದ್ದಾರೆ. ಹಿನ್ನಲೆ, ಕಾರ್ಯಾವಲೋಕನ ಮತ್ತು ಸಂಕ್ಷಿಪ್ತ ಪರಿಚಯ : ಶ್ರೀ ತವನಪ್ಪಾ ಅಷ್ಟಗಿಯವರು ಗ್ರಾಮೀಣ ಹಿನ್ನೆಲೆಯುಳ್ಳವರು ಧಾರವಾಡ ತಾಲೂಕು ಉಪ್ಪಿನ ಬೆಟಗೇರಿ ಗ್ರಾಮದ ರೈತ ಕುಟುಂಬದ ಶ್ರೀ ಪಾಯಪ್ಪ ಮತ್ತು ದ್ಯಾಮವ್ವ ದಂಪತಿಗಳ ಉದರದಲ್ಲಿ ಜನಿಸಿದ್ದು ದಿ 6-7-1961ರಲ್ಲಿ ಪಿಯುಸಿವರೆಗೆ ಶಿಕ್ಷಣ ಪಡೆದ ಇವರು ಸಮಾಜ ಸೇವೆಯನ್ನೇ ಗುರಿಯಾಗಿಟ್ಟುಕೊಂಡು ರಾಜಕೀಯ ಜೀವನವನ್ನು ಪ್ರಾರಂಭಿಸಿದರು ಮತ್ತು ಅದರಲ್ಲಿ ಸಾರ್ಥಕತೆಯನ್ನು ಕಂಡಿದ್ದಾರೆ. ಸಾರ್ವಜನಿಕ ಸೇವೆಯ ಮನೋಭಾವನೆಯಿಂದ ರಾಜಕೀಯ ಪ್ರವೇಶಿಸಿದ ಇವರು 2005 ರ ಜಿಲ್ಲಾ ಪಂಚಾಯತು ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾಯಿತರಾದರು ಹಾಗೂ 2008 - 2009 ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿಯ ಶಿಕ್ಷಣ ಮತ್ತು ಅರೋಗ್ಯ ಸಂಘಟನೆಯ ಅಧ್ಯಕ್ಷರಾಗಿ ಅತ್ಯಂತ ಸಮರ್ತವಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಧರ್ಮಪತ್ನಿ ಶ್ರೀಮತಿ ಕಸ್ತೂರಿ ಅಷ್ಟಗಿ ಕೂಡ ರಾಜಕೀಯದಲ್ಲಿ ಒಳ್ಳೆಯ ಹೆಸರು ಮಾಡಿದ್ದು ಇವರು ಕೂಡ ಉಪ್ಪಿನ ಬೆಟಗೇರಿ ಕ್ಷೇತ್ರದಿಂದ ಜಿಲ್ಲಾ ಪಂಚಾಯತಿ ಸದಸ್ಯರಾಗಿ 2011-2016 ರ ಅವಧಿಗೆ ಆಯ್ಕೆಯಾಗಿ 2016ರಲ್ಲಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. "ಇದುವರೆಗೂ ಎಲ್ಲಿಯೂ ಒಂದು ಪೈಸೆಯೂ ಭ್ರಷ್ಟಾಚಾರದ ಮಾಡಿದವನಲ್ಲ ಹಣಕ್ಕಾಗಿ ನನ್ನ ನಿಷ್ಠೆ ಹಾಗೂ ಕರ್ತವ್ಯ ಮರೆತವನಲ್ಲ" ಎಂದು ಶ್ರೀ ತವನಪ್ಪ ಹಲವಾರು ಬಾರಿ ಹೇಳಿಕೊಂಡಿದ್ದಾರೆ. ಇವರ ಮೂಲತ ಕೃಷಿ ಕುಟುಂಬದವರಾಗಿದ್ದು ಅತ್ಯಂತ ಪ್ರಗತಿಪರ ರೈತ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜೊತೆಗೆ ರೈತರಲ್ಲಿ ಆತ್ಮಸ್ಥರ್ಯ ತುಂಬಿ ಅವರನ್ನು ಸ್ವಾವಲಂಬರನ್ನಾಗಿ ಮಾಡಿ ಹೆಮ್ಮೆಯಿಂದ ಬದುಕಲು ಪ್ರೇರೇಪಿಸುತ್ತಾ ಅವರಿಗೆ ಪ್ರೀತಿ ಪಾತ್ರರಾಗಿದ್ದು ಉತ್ತಮ ಮಾರ್ಗದರ್ಶಕರಾಗಿದ್ದಾರೆ. ಇವರ ಕ್ಷೇತ್ರದಲ್ಲಿ ಸಣ್ಣವರಿರಲಿ ದೊಡ್ಡವರಲಿ ಪ್ರತಿಯೊಬ್ಬರ ಮನೆ ಮನೆಯಲ್ಲಿ ನಡೆಯುವ ಯಾವದೇ ಕಾರ್ಯಕ್ರಮವಿರಲಿ ಅಲ್ಲಿಗೆ ಬಿಡುವು ಮಾಡಿಕೊಂಡು ತಪ್ಪದೇ ಭಾಗವಹಿಸಿ ಅವರೊಂದಿಗೆ ಸ್ಪಂದಿಸುತ್ತಾರೆ ಇದೇ ಇವರ ದೊಡ್ಡಗುಣ. ಇವರದೇ ಮೇಲ್ವಿಚಾರಣೆಯಲ್ಲಿ ಧಾರವಾಡದಲ್ಲಿ ಕೃಷಿಗೆ ಪೂರಕ ಉದ್ದಿಮೆಯಾಗಿ ಪದ್ಮಾವತಿ ಕಾಟನ್ ಇಂಡಸ್ಟ್ರೀಸ್ ಫ್ಯಾಕ್ಟರಿಯನ್ನು ಪ್ರಾರಂಭಿಸಿ ರೈತರ ಆಶಾಕಿರಣವಾಗಿದ್ದಾರೆ. ಜನ್ಮ ದಿನದ ವಿಶೇಷ : ತವನಪ್ಪ ಅಷ್ಟಗಿ ಇವರಿಗೆ ಅಭಿಮಾನಿಗಳು ಸ್ನೇಹಿತರು, ಕಾರ್ಯಕರ್ತರ, ಹಿತೈಸಿಗಳ ದೊಡ್ಡ ಬಳಗವೇ ಇದೆ. ಇವರೆಲ್ಲರೂ ಸೇರಿ ಇವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಸಲು ರವಿವಾರ ದಿನಾಂಕ ೬ ರಂದು ಇಡೀ ದಿನ ರಕ್ತದಾನ ಶಿಬಿರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಲವಾರು ಪೂಜ್ಯರ ಆಶೀರ್ವಚನ, ಅನ್ನಸಂತರ್ಪಣೆ ಮುಂತಾದ ಜನಸ್ನೇಹಿ ಕಾರ್ಯಕ್ರಗಳನ್ನು ಸವದತ್ತಿ ರಸ್ತೆಯಲ್ಲಿ ರುವ ಪದ್ಮಾವತಿ ಕಾಟನ್ ಇಂಡಸ್ಟ್ರಿ ಯಲ್ಲಿ ಆಯೋಜಿಸಿದ್ದಾರೆ. ಮುಂದಿನ ಚಿಂತನೆಗಳು : ಕ್ಷೇತ್ರ ಸರ್ವಾoಗೀನ ಅಭಿವೃದ್ಧಿಗೆ ಶ್ರಮಿಸುವುದು, ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುವುದು. ಯುವಕರಲ್ಲಿ ನವೋತ್ಸಾಹ ತುಂಬಿ ಸ್ವಯಂ ಉದ್ಯೋಗಕ್ಕೆ ಪ್ರೇರೇಪಿಸುವುದು ನಿರುದ್ಯೋಗ ನಿವಾರಣೆ, ರಾಜಕೀಯದಲ್ಲಿ ಪ್ರಾಮಾಣಿಕ ಮೌಲ್ಯ ಆಧಾರಿತ ಕ್ರಮವನ್ನು ಅನುಸರಿಸುವುದು. ಇಂಥ ಒಬ್ಬ ನಿಷ್ಠಾವಂತ ರಾಜಕಾರಿಣಿಯನ್ನು ಈಗ ಖಾಲಿ ಇರುವ ವಿಧಾನ ಪರಿಷತ್ ಸ್ಥಾನಕ್ಕೆ ಸರಕಾರ ನಾಮಕರಣ ಮಾಡಬೇಕೆಂದು ಈ ಸಂಧರ್ಭದಲ್ಲಿ ಸರಕಾರವನ್ನು ಒತ್ತಾಯಿಸುತ್ತೇವೆ. ಇವರ ರಾಜಕೀಯ ಭವಿಷ್ಯ ಉಜ್ವಲವಾಗಲಿ ಈ ನಾಡಿಗೆ ಇವರ ಸೇವೆ ಮಾರ್ಗದರ್ಶನ ಸದಾ ಲಭಿಸಲಿ ಇವರ ಆದರ್ಶ ನಡೆ ನುಡಿ ಇತರರಿಗೆ ಮಾದರಿಯಾಗಲಿ ಎನ್ನುವ ಹಾರೈಕೆಗಳೊಂದಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಶಾಂತರಾಜ ಮಲ್ಲಸಮುದ್ರ ಲೇಖಕರು

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img