ತೋವಿನಕೆರೆ ಜೈನ ಮಂದಿರದಲ್ಲಿ ಚಾತುರ್ಮಾಸ
Published Date: 18-Jul-2025 Link-Copied
ತೋವಿನಕೆರೆ: ಗ್ರಾಮದ ಚಂದ್ರನಾಥ ದೇವಾಲಯದಲ್ಲಿ ದಿಗಂಬರ ಜೈನ ಮುನಿ ಪಾಯಸಾಗರ ಮುನಿ ಚಾತುರ್ಮಾಸ ಕೈಗೊಂಡಿದ್ದು, ಇಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಜುಲೈ 14ರಿಂದ ಇಲ್ಲಿ ಚಾತುರ್ಮಾಸ ಆಚರಣೆ ಕೈಗೊಂಡಿದ್ದಾರೆ. ಅಕ್ಟೋಬರ್ 21ರವರೆಗೆ ಮುಂದುವರೆಯುತ್ತದೆ. 20ರಂದು ಮಂಗಳ ಕಳಸ ಪ್ರತಿಷ್ಠಾಪನೆ ಸಲುವಾಗಿ ವಿಶೇಷ ಸಮಾರಂಭ ದೇವಾಲಯದ ಅವರಣದಲ್ಲಿ ನಡೆಯುತ್ತದೆ ಎಂದು ಚಂದ್ರನಾಥ ಸ್ವಾಮಿ ದಿಗಂಬರ ಜೈನ ಸಂಘದವರು ತಿಳಿಸಿದ್ದಾರೆ. ಪ್ರತಿ ದಿನ ಸಂಜೆ 6ರಿಂದ ಮುನಿಗಳಿಂದ ಉಪನ್ಯಾಸ ಹಾಗೂ ಭಕ್ತರಿಂದ ಅರತಿ ಕಾರ್ಯಕ್ರಮ ನಡೆಯುತ್ತದೆ.