ಮೂಡುಬಿದಿರೆ: ವಿಶೇಷ ಅಭಿಷೇಕ ಹಾಗೂ ಕರ್ಮ ದಹನ ಆರಾಧನೆ
Published Date: 21-Jul-2025 Link-Copied
ಧರ್ಮ ಬಂಧು, ಶ್ರೀ ದಿಗಂಬರ ಜೈನ ಮಠದಲ್ಲಿ ಪ.ಪೂ ಆಚಾರ್ಯ ೧0೮ ಗುಲಾಬ್ ಭೂಷಣ ಮುನಿ ಮಹಾರಾಜ್ ಉಪಸ್ಥಿತಿ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾ ಚಾರ್ಯವರ್ಯ ಮಹಾಸ್ವಾಮೀಜಿ ಮಾರ್ಗದರ್ಶನದಲ್ಲಿ ಇಂದು ಮಧ್ಯಾಹ್ನ ಗಂಟೆ 2.00 ರಿಂದ 20.07.2025 ವಿಶೇಷ ಅಭಿಷೇಕ ಹಾಗೂ ಕರ್ಮ ದಹನ ಆರಾಧನೆ ಜರುಗಿತು. ಆಚಾರ್ಯರ ಉಪಸ್ಥಿತಿಯಲ್ಲಿ ಪ್ರವಚನ ನೀಡಿದ ಪ.ಪೂ ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಪ್ರತಿ ಸಂಸಾರಿ ಜೀವಿಗಳು ದರ್ಶನಾವರಣಿಯ ಜ್ಞಾನಾವರಣಿಯ ವೇದನಿಯ, ಮೋಹನೀಯ, ಆಯು, ನಾಮ,ಗೋತ್ರ ಅಂತರಾಯ ಎಂಬ ಎಂಟು ಕರ್ಮಗಳನ್ನು ನಾಶ ಮಾಡ ದ ಹೊರತು ಮುಕ್ತಿ ಸಿಗದು ಮುಕ್ತಿ ಸಿಗಲು ಉತ್ತಮ ಮನಸ್ಸು ರತ್ನತ್ರಯ ಅವಲಂಬನೆ ಮುಖ್ಯ ಇಂದಿನ ಆರಾಧನೆ ಮೂಲ ಎಂಟು ಕರ್ಮ ದ ಭೇದ ಗಳಾದ 148 ಕರ್ಮ ನಾಶ ಪಡಿಸಿದ ಸಿದ್ದ ಭಗವಂತರ ಗುಣಗಾನ ಎಂದು ಆಶೀರ್ವಾದ ನೀಡಿದರು ಬಳಿಕ ಆಚಾರ್ಯರ ಸ್ವಾಮೀಜಿ, ಗಳ ಪಾದಪೂಜೆ, ಆರತಿ ಜರುಗಿತು.