ರಾಜರತ್ನ ಕೆ. ನಿಧನ
Published Date: 25-Jul-2025 Link-Copied
ಧಾರ್ಮಿಕ ಮುಖಂಡ, ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮ ಕೊಡಂಗೆ ಮನೆ, ಹಿರಿಯ ಮುತ್ಸದಿ ಶ್ರೀ ರಾಜರತ್ನ ಕೆ (74), ಇವರು 2025ನೇ ಜುಲೈ 24 ರಂದು ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ರಾಜೇಂದ್ರ ಜೈನ್ ಮತ್ತು ಸೊಸೆ, ಪುತ್ರಿ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಹಾಗೂ ಅಳಿಯ ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಮಾನ್ಯರು ಬಂಟ್ವಾಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಮ್ಯಾನೇಜರ್ ಆಗಿ ಸುಮಾರು 25 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿದ್ದರು. ಸಮಾಜದ ಎಲ್ಲ ವರ್ಗದ ಜನರ ಧಾರ್ಮಿಕ, ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾ ಪ್ರೀತಿಪಾತ್ರರಾಗಿ ಜನಾನುರಾಗಿಯಾಗಿದ್ದರು. ಬಾಳ್ತಿಲ ಗ್ರಾಮದ ಆದರ್ಶ ಪ್ರಗತಿಪರ ಕೃಷಿಕರಾಗಿ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿಯೂ ಹಲವಾರು ಜನಪರ ಕಾಳಜಿಯಿಂದ ಸೇವೆ ಸಲ್ಲಿಸಿದ ಅವರು ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ಟ್ರಸ್ಟಿಯಾಗಿದ್ದರು. ಜೈನ್ ಮಿಲನ್, ಪಂಚಕಲ್ಯಾಣದಂತಹ ಕಾರ್ಯಕ್ರಮಗಳಲ್ಲಿ ಪ್ರೇರಕರಾಗಿ ಕಾರ್ಯನಿರ್ವಹಿಸಿದ್ದರು.