ಜಾನುವಾರು ಅಧಿಕಾರಿಯವರಾದ ಸುಕೀರ್ತಿ ಜೈನ್ ವಯೋನಿವೃತಿ


Logo

Published Date: 03-Aug-2025 Link-Copied

ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿಯವರಾದ ಸುಕೀರ್ತಿ ಜೈನ್ ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು. ‌ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಪನಿರ್ದೇಶಕರಾದ ಡಾ. ಅರುಣ ಕುಮಾರ ಶೆಟ್ಟಿ ವಹಿಸಿದ್ದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ ಇವರು ಆಗಮಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ. ರವಿಕುಮಾರ್, ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್, ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ, ಡಾ| ಸಂತೋಷ್ ಗೌಡ, ಡಾ| ಯತೀಶ್, ಡಾ| ವಿನಯ್ ಕುಮಾರ್, ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ, ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು., ಜಾನುವಾರು ಅಧಿಕಾರಿಗಳವರಾದ ನಾಗಶಯನ, ಪ್ರಶಾಂತ್ ಕುಮಾರ್ ಮತ್ತು ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img