ನವನಗರ ಸೇವಾ ಸಂಘಕ್ಕೆ ಕಾರ್ಯಧ್ಯಕ್ಷರ ನೇಮಕ
Published Date: 06-Aug-2025 Link-Copied
ಹುಬ್ಬಳ್ಳಿ ನವನಗರದ ಅಲ್ಪಸಂಖ್ಯಾತ ಜೈನ ಸೇವಾ ಸಂಘದ ಕಾರ್ಯಧ್ಯಕ್ಷರಾಗಿ ಅಶೋಕ ಯೋಗಪ್ಪನವರ ಇವರನ್ನು ಸಂಘದ ಅಧ್ಯಕ್ಷರಾದ ಶಾಂತರಾಜ ಮಲ್ಲಸಮುದ್ರ ಇವರು ನೇಮಕ ಮಾಡಿದ್ದಾರೆ. ಇತ್ತೀಚೆಗೆ ನಡೆದ ಸಂಘದ ವಾರ್ಷಿಕ ಸರ್ವಸಾದಾರಣ ಸಭೆಯಲ್ಲಿ ಸರ್ವನುಮತದಿಂದ ಇವರನ್ನು ಆಯ್ಕೆ ಮಾಡಲಾಗಿದೆ. ಅಶೋಕ ಯೋಗಪ್ಪನವರ ಇವರು ಎರಡು ದಿನಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆಯಲ್ಲಿ 37 ವರ್ಷ ದಕ್ಷ ಪ್ರಾಮಾಣಿಕವಾಗಿ ಸುದೀರ್ಘ ಸೇವೆ ಸಲ್ಲಿಸಿ ಸಹಾಯಕ ನಿರ್ದೇಶಕರಾಗಿ ವಯೋನಿವೃತ್ತಿ ಹೊಂದಿದರು. ಕಳೆದ 12 ವರ್ಷಗಳಿಂದ ಸಮಾಜದ ಎಲ್ಲ ಕಾರ್ಯಗಳಲ್ಲಿ ಸಂಘದ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದು ಧಾರ್ಮಿಕ ಚಟುವಟಿಕೆಯಲ್ಲಿ ಕ್ರೀಯಾಶೀಲವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಎಸ್ ಆರ್ ಮಲ್ಲಸಮುದ್ರ