ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ
Published Date: 15-Aug-2025 Link-Copied
ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯವು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದಂತ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು. ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಬಲರಾಮ್ ನಾಯ್ಕ ಮುಖ್ಯ ಅತಿಥಿಯವರಾಗಿ ಧ್ವಜಾರೋಹಣ ಮಾಡಿದರು. ಮುಖ್ಯ ಅತಿಥಿಯವರಾದ ಡಾ. ಬಲರಾಮ್ ನಾಯ್ಕ ಅವರು ಮಾತನಾಡುತ್ತಾ: ದೇಶಕ್ಕೆ ಸ್ವಾತಂತ್ರ್ಯದ ಉಡುಗೊರೆ ತಂದು ಕೊಟ್ಟು ಕ್ರಾಂತಿಕಾರಿ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಜೀವನದಲ್ಲಿ ಗೆಲವು ಸಾಧಿಸಬೇಕೆಂದ್ದಿದರೆ ಭಾರತ ಇತಿಹಾಸವನ್ನು ಮರೆಯಬಾರದು. ಭಾರತದ ಸಂಪತ್ಭರಿತ ಹಾಗೂ ಸಡೃಡ ಸಂಪ್ರಧಾಯವನ್ನು ನಾವೆಲ್ಲರು ಗೌರವಿಸಬೇಕು. ಸಡೃಡ ದೇಶ ನಿರ್ಮಾಣಕ್ಕೆ ಆಂತರಿಕ ದ್ವೇಷ, ಅಸೂಯೆಗಳಂತ ದೌರ್ಬಲ್ಯಗಳಿಂದ ಮುಕ್ತರಾಗಬೇಕು. ಬಲಾಡ್ಯ ದೇಶ ನಿರ್ಮಾಣ ಮತ್ತು ಜನರ ಸಮಸ್ಯೆಗಳಿಗೆ ಆಧುನಿಕ ಕೌಶಲ್ಯ ಮತ್ತು ಜ್ಞಾನದ ಅವಶ್ಯಕವಿದೆ. ನಾವು ವೃತ್ತಿಪರರು ನಿಷ್ಠೆಯಿಂದ ಸೇವೆ ಸಲ್ಲಿಸುವುದರ ಮೂಲಕ ದೇಶ ನಿರ್ಮಾಣದಲ್ಲಿ ಪಾಲ್ಗೊಳ್ಳಬಹುದು. ಇಂದಿನ ಯುವಜನರು ಸರಿಯಾದ ಮಾರ್ಗವನ್ನು ಅನುಸರಿಸದರೊಂದಿಗೆ ತಮ್ಮನ್ನು ದೇಶ ಸೇವೆಗೆ ಅರ್ಪಿಸಿಕೊಳ್ಳಬಹುದು. ಈ ಸಂದರ್ಭದಲ್ಲಿ ಅಂಗ ಸಂಸ್ಥೆಗಳ ಪ್ರಥಮ ವರ್ಷದ ಒಬ್ಬ ಮತ್ತು ಅಂತಿಮ ವರ್ಷದ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಕಿರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ, ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪಕುಲಪತಿಯವರಾದ ವಿ. ಜೀವಂಧರ್ ಕುಮಾರ್, ಹಣಕಾಸು ಅಧಿಕಾರಿಗಳಾದ ವಿ ಜಿ ಪ್ರಭು, ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ್, ಸಂಸ್ಥೆಗಳ ಮುಖ್ಯಸ್ಥರು, ಉಪ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದಂತ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಆನಂದ್ ತಾವರಗೇರಿ ಅತಿಥಿಗಳನ್ನು ಸ್ವಾಗತಿಸಿದರು. ಡಾ. ವಿನಾಯಕ್ ಮತ್ತು ಡಾ. ಶ್ರೇಯಾ ಜಿ. ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಕಿರಣ ಕುಮಾರ್ ವಂದನಾರ್ಪಣೆಯನ್ನು ಮಾಡಿದರು.