ವೇಣೂರು: ದಶಲಕ್ಷಣ ಮಹಾಪರ್ವ ಆಚರಣೆ
Published Date: 27-Aug-2025 Link-Copied
ಬೆಳ್ತಂಗಡಿ ತಾಲೂಕಿನ ವೇಣೂರಿನ ಶ್ರೀ ದಿಗಂಬರ ಜೈನ ತೀರ್ಥ ಸಮಿತಿ (ರಿ.) ವತಿಯಿಂದ ಇತಿಹಾಸ ಪ್ರಸಿದ್ಧ ಭ| ಶ್ರೀ ಬಾಹುಬಲಿ ಕ್ಷೇತ್ರದಲ್ಲಿ ಪರಮಪೂಜ್ಯ 'ಭಾರತಭೂಷಣ' ಜಗದ್ಗುರು ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು, ಶ್ರೀ ದಿಗಂಬರ ಜೈನ ಮಠ ಮೂಡುಬಿದಿರೆ ಇವರ ದಿವ್ಯ ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ಸಮಿತಿಯ ಅಧ್ಯಕ್ಷರಾದ ಪದ್ಮವಿಭೂಷಣ ರಾಜರ್ಷಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಪ್ರೇರಣೆ ಹಾಗೂ ಸಮಿತಿಯ ಉಪಾಧ್ಯಕ್ಷರಾದ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಅರಮನೆ ಇವರ ನೇತೃತ್ವದಲ್ಲಿ ಇಂದಿನಿಂದ ಮೊದಲ್ಗೊಂಡು ತಾ. 06-09-2025ನೇ ಶನಿವಾರದವರೆಗೆ ಪ್ರತಿದಿನ ಅಪರಾಹ್ನ ಗಂಟೆ 4-30ರಿಂದ 6-00ರ ವರೆಗೆ ದಶಲಕ್ಷಣ ಮಹಾಪರ್ವ ಆಚರಣೆಯು ಜರುಗಲಿದೆ. ವಿ.ಸೂ: ಪ್ರತೀ ದಿನ ಅಪರಾಹ್ನ ಗಂಟೆ 4-00ರಿಂದ ವೇಣೂರು ಬಸದಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಯಾತ್ರಿ ನಿವಾಸದಲ್ಲಿ ಉಪನ್ಯಾಸ ಕಾರ್ಯಕ್ರಮಗಳು ಇರುತ್ತದೆ.