ದಶಲಕ್ಷಣ ಮಹಾಪರ್ವ ಆಚರಣೆ- ಉದ್ಘಾಟಣಾ ಸಮಾರಂಭ


Logo

Published Date: 29-Aug-2025 Link-Copied

ವೇಣೂರು: ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ಪ್ರತಿವರ್ಷ ನಡೆಯುವ ದಶಲಕ್ಷಣ ಮಹಾಪರ್ವ ಆಚರಣೆಯ ಉದ್ಘಾಟನಾ ಸಮಾರಂಭವು ಆ. 28ರಂದು ನಡೆಯಿತು. ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ಮಧುರಾ ಪಿ. ಅಜಿಲರವರು ನೆರವೇರಿಸಿದರು. ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಪಾವನ ಸಾನ್ನಿಧ್ಯ ವಹಿಸಿ ದಶಲಕ್ಷಣ ಮಹಾಪರ್ವದ ಮೊದಲನೇ ದಿನದ ಉತ್ತಮ ಕ್ಷಮಾ ಧರ್ಮದ ಬಗ್ಗೆ ಪ್ರವಚನ ನೀಡುತ್ತಾ, ನಾವು ನಮ್ಮ ಜೀವನದಲ್ಲಿ ಕ್ಷಮಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಕ್ರೋಧವನ್ನು ನಿಗ್ರಹಿಸಿಕೊಳ್ಳಬೇಕು. ಕ್ಷಮಿಸುವ ಗುಣ ದೇವರಗುಣ. ಮನುಷ್ಯನ ಸ್ವಭಾವಗಳಲ್ಲಿ ಕ್ರೋಧವು ಕೂಡ ಒಂದು. ಸಿಟ್ಟು ಬಾರದಿರುವ ಹಾಗೆ ಪ್ರಯತ್ನಿಸೋಣ ಎಂದು ಹೇಳಿದರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಶ್ರೀಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಉಪಾಧ್ಯಕ್ಷರು, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು, ಹಬ್ಬಗಳ ರಾಜ, ದಶಲಕ್ಷಣ ಪರ್ವ, ಆತ್ಮಶುದ್ಧೀಕರಣದ ಪವಿತ್ರ ಹಬ್ಬವೇ ದಶಲಕ್ಷಣ ಮಹಾಪರ್ವ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲರು ಆಗಮಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಮೂಡುಬಿದಿರೆಯ ಸಂಜಯಂತ್‌ ಕುಮಾರ್‌ ಶೆಟ್ಟಿ, ಶಂಭವ ಕುಮಾರ್‌, ಸುದೇಶ್‌ ಕುಮಾರ್‌ ಮತ್ತಿತರ ಗಣ್ಯರು ಸೇರಿದಂತೆ ಶ್ರಾವಕ-ಶ್ರಾವಕಿಯರು ಪಾಲ್ಗೊಂಡಿದ್ದರು. ಸಮಿತಿಯ ಪ್ರದಾನ ಕಾರ್ಯದರ್ಶಿ ವಿ. ಪ್ರವೀಣ್‌ ಕುಮಾರ್‌ ಇಂದ್ರರವರು ಸ್ವಾಗತಿಸಿದರು. ಅಳದಂಗಡಿ ಅರಮನೆ ಶಿವಪ್ರಸಾದ್‌ ಅಜಿಲರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನು ಸಮಿತಿಯ ಜೊತೆ ಕಾರ್ಯದರ್ಶಿ ಮಹಾವೀರ್‌ ಜೈನ್‌ ಮೂಡುಕೋಡಿರವರು ನಿರೂಪಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img