ಎಕ್ಸಲೆಂಟ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ


Logo

Published Date: 11-Sep-2025 Link-Copied

ಮೂಡುಬಿದಿರೆ: ಮೂಡುಬಿದಿರೆಯ ಎಕ್ಸಲೆ0ಟ್ ವಿದ್ಯಾ ಸ0ಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಪ್ರಾ0ಶುಪಾಲರಾದ ದಿನೇಶ್ ಚೌಟ ಮಾತನಾಡುತ್ತಾ, ಶಿಕ್ಷಕರ ದಿನಾಚರಣೆ ವಿದ್ಯಾರ್ಥಿಗಳ ಪ್ರೀತಿ ಮತ್ತು ಅಭಿಮಾನಗಳ ಧ್ಯೋತಕವಾಗಿದೆ. ಡಾ. ರಾಧಾಕೃಷ್ಣ ಅವರ ಜ್ಞಾನ ಮತ್ತು ಸಾಧನೆ ಶಿಕ್ಷಣ ವೃತ್ತಿಯಲ್ಲಿರುವ ನಮಗೆಲ್ಲರಿಗೂ ಮಾದರಿ. ಅವರು ಮೇಧಾವಿಗಳಾಗಿದ್ದರೂ ತಮ್ಮ ವಿದ್ಯಾರ್ಥಿಗಳೊಂದಿಗೆ ಸರಳತೆ ಮತ್ತು ಸಜ್ಜನಿಕೆಯೊ0ದಿಗೆ ನಡೆದುಕೊಳ್ಳುತ್ತಿದ್ದರು. ಅವರ ವಿದ್ಯಾರ್ಥಿಗಳಿಂದ ಅವರಿಗೆ ಸಿಕ್ಕ ಪ್ರೀತಿ ಮತ್ತು ಗೌರವ ಎಲ್ಲಾ ಶಿಕ್ಷರಿಗೂ ಸಲ್ಲಬೇಕೆನ್ನುವ ಅವರ ಆಶಯವೇ ಅವರ ಜನ್ಮ ದಿನದಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲು ಕಾರಣವಾಯಿತು ಎಂದರು. ಒಬ್ಬ ಉತ್ತಮ ಶಿಕ್ಷಕ ಒಬ್ಬ ಶ್ರೇಷ್ಟ ಶಿಷ್ಯ ವೃಂದವನ್ನು ಹುಟ್ಟು ಹಾಕುತ್ತಾನೆ. ಅಂಥಹ ಶಿಕ್ಷಕರ ಸಾಲಿನಲ್ಲಿ ನನಗೆ ಅಗ್ರ ಪಂಕ್ತಿಯಲ್ಲಿ ಕಂಡು ಬರುವುದು ನೋಬಲ್ ಪ್ರಶಸ್ತಿ ವಿಜೇತ ಜೆ ಜೆ ಥಾಮ್ಸನ್. ಕೇವಲ ಆತನಷ್ಟೇ ಅಲ್ಲದೆ ಆತನಿಂದ ಪ್ರಭಾವಿತರಾಗಿ ಒಟ್ಟು ಏಳು ಜನ ಶಿಷ್ಯರು ತಮ್ಮ ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿ ನೋಬಲ್ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಅದು ಅತ್ಯಂತ ಶ್ಲಾಘನೀಯವಾದ ವಿಚಾರ. ಇಂದು ನನ್ನ ಶಿಷ್ಯರಲ್ಲೊಬ್ಬರಾದ ಯುವರಾಜ ಜೈನರ ಸಾಧನೆ ನನಗೆ ಅತ್ಯಂತ ಸಂತಸವನ್ನುಂಟು ಮಾಡಿದೆ. ಇವರ ಸಾಧನೆ ಇತರರಿಗೂ ಪ್ರೇರಣೆಯಾಗಲಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಮಾತನಾಡುತ್ತಾ ಒಳ್ಳೆಯ ಗುರುವನ್ನು ಪಡೆಯಲು ಹಾಗೂ ಒಳ್ಳೆಯ ಶಿಷ್ಯವೃಂದವನ್ನು ಪಡೆಯಲು ಯೋಗ ಬೇಕು. ನಾನು ಉಪನ್ಯಾಸಕ ವೃತ್ತಿಯನ್ನು ಆರಂಭಿಸಿದಾಗ ನನಗೆ ಪಾಠ ಮಾಡಿದ ಗುರುಗಳೇ ನನ್ನ ಸಹೋದ್ಯೋಗಿಗಳಾಗಿದ್ದರು. ಈ ರೀತಿ ನಮ್ಮ ವಿಭಾಗದಲ್ಲಿ ನಾಲ್ಕು ತಲೆಮಾರುಗಳ ಗುರು ಶಿಷ್ಯ ಪರಂಪರೆ ಇತ್ತು. ನನ್ನನ್ನು ಆಸಂದರ್ಭದಲ್ಲಿ ಕೈ ಹಿಡಿದು ನಡೆಸಿದ ಗುರುಗಳಿಗೆ ನಾನು ಋಣಿ ಎಂದರು. ನನ್ನ ಗುರುಗಳ ಕರ್ತವ್ಯ ಪ್ರಜ್ಞೆ, ಶಿಷ್ಯರೆಡೆಗೆ ಅವರು ತೋರುವ ಪ್ರೀತಿ ನನಗೆ ಪ್ರೇರಣೆಯಾಗಿದೆ. ಸಮಾಜದಲ್ಲಿ ಏನೇ ಕಷ್ಟ ಬಂದರೂ ಅದನ್ನು ಎದುರಿಸಲು ತಯಾರಿರಬೇಕು. ಅದು ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಸಾಧ್ಯ. ಕೊಡೆ ಮಳೆಯನ್ನು ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ ಮಳೆಯಿಂದ ರಕ್ಷಣೆ ನೀಡುತ್ತದೆ. ಈ ಸಂಸ್ಥೆಯಲ್ಲಿ ಶಿಕ್ಷಣದೊಂದಿಗೆ ಸಿಗುವ ಸಂಸ್ಕಾರ ಮು0ದೆ ಬದುಕನ್ನು ಎದುರಿಸಲು ನಿಮಗೆ ದಾರಿದೀಪವಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಹೇಳಿದರು. ಸಭೆಯಲ್ಲಿ ಉಪಸ್ಥಿತರಿದ್ದ ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ ಮೂಡು ಮಾರ್ನಾಡಿನ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಡಾ. ರಾಜಶ್ರೀ ಬಿ. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ಧನಕನಕಾದಿಗಳಿಂದ ಬದುಕು ಭವ್ಯವಾಗಬಲ್ಲದೇ ಹೊರತು ದಿವ್ಯವಾಗುವುದಿಲ್ಲ. ಜೀವನದಲ್ಲಿ ಹಣ ಗಳಿಸುವುದು ಇದ್ದೇ ಇದೆ. ಆದರೆ ಸಮಾಜಕ್ಕೆ ಕೊಡುಗೆ ನೀಡುವುದರ ಕುರಿತು ಕೂಡ ತಮ್ಮ ಗಮನವಿರಲಿ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯಿಂದ ಜೀವನವನ್ನು ಬೆಳಗಿಸಿಕೊಂಡು ಹೋಗುವುದೇ ಗುರುಗಳಾದವರಿಗೆ ಕೊಡಬಹುದಾದ ದೊಡ್ಡ ಗುರುದಕ್ಷಿಣೆ ಎಂದರು. ಸನ್ಮಾನಕ್ಕೆ ಉತ್ತರಿಸಿದ ರಾಷ್ಟ್ರ ಮಟ್ಟದ ವಿಕಸನ ತರಬೇತುದಾರರು ಹಾಗೂ ಪ್ರಶಸ್ತಿ ವಿಜೇತ ಶಿಕ್ಷಕರಾದ ಜೇಸಿ ರಾಜೇ0ದ್ರ ಭಟ್ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿ ತನ್ನ ಬುದ್ಧಿವಂತಿಕೆಯ ಅನುಸಾರ ತಾನು ಬೇರೆ ಕೋರ್ಸುಗಳನ್ನು ಆಯ್ಕೆ ಮಾಡಲು ಅವಕಾಶವಿದ್ದರೂ ಶಿಕ್ಷಕಿಯಾಗಿದ್ದ ತನ್ನ ತಾಯಿಗೆ ಸಮಾಜದಲ್ಲಿ ಸಿಗುತ್ತಿದ್ದ ಗೌರವಾದರಗಳನ್ನು ಕಂಡು ಶಿಕ್ಷಕ ವೃತ್ತಿಯನ್ನು ಆಯ್ದುಕೊಂಡೆ. ಭಾರತ ಗುರು ಪರಂಪರೆಗೆ ಹೆಸರುವಾಸಿಯಾಗಿದೆ. ಜಗತ್ತಿನ ಶ್ರೇಷ್ಟ ವಿಶ್ವ ವಿದ್ಯಾನಿಲಯಗಳಲ್ಲಿ ಹದಿನೆಂಟು ವಿಶ್ವವಿದ್ಯಾನಿಲಯಗಳು ಒಂದು ಕಾಲದಲ್ಲಿ ಭಾರತದಲ್ಲಿತ್ತು. ವಿದೇಶಿಗರ ಆಕ್ರಮಾಣದಿಂದ ಭಾರತದ ಜ್ಞಾನ ಸ0ಪತ್ತು ನಾಶವಾದರೂ ಗುರುವಿನ ಛಲದಿಂದ ಕೆಲವೇ ವರ್ಷಗಳಲ್ಲಿ ಅದನ್ನು ಮರುಕಳಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಇದು ಪ್ರಪಂಚದಲ್ಲಿ ಎಲ್ಲೂ ನಡೆದಿಲ್ಲ. ಅವತಾರ ಪುರುಷರಿಗೂ ಗುರುಗಳಿದ್ದರು ಎ0ಬುದೇ ನಮ್ಮ ದೇಶದ ಗುರುಪರಂಪರೆಯ ಮಹತ್ವಕ್ಕೆ ಸಾಕ್ಷಿ. ಕೇವಲ ಪಾಠಕ್ಕೆ ಸೀಮಿತವಾಗಿರದೆ ಜೀವನಕ್ಕೆ ಸಜ್ಜುಗೊಳಿಸುವವನೇ ನಿಜವಾದ ಗುರು ಎಂದರು. ಉಜಿರೆ ಎಸ್ ಡಿ ಎಂ ಕಾಲೇಜಿನ ಸಹ ಪ್ರಾಧ್ಯಾಪಕರಾದ ಗಜಾನನ ಆರ್ ಭಟ್ ಸನ್ಮಾನಕ್ಕೆ ಉತ್ತರಿಸುತ್ತಾ ತಾನು ಕರ್ತವ್ಯ ನಿಷ್ಠೆಗೆ ಹೆಸರಾದ ಅನೇಕ ಹಿರಿಯ ಶಿಕ್ಷಕರಿಂದ ಸ್ಪೂರ್ತಿಯನ್ನು ಪಡೆದುಕೊಂಡಿದ್ದೇನೆ. ಬದುಕಿನಲ್ಲಿ ಜ್ಞಾನವನ್ನು ಗಳಿಸಲು ಕಷ್ಟಪಡಲೇ ಬೇಕು. ಕಷ್ಟ ಸಹುಷ್ಣುತೆ ಇದ್ದಲ್ಲಿ ಆತ್ಮ ವಿಶ್ವಾಸ ಬೆಳೆಯುತ್ತದೆ. ಆಗ ಮಾತ್ರ ಸಾಧನೆ ಸಾಧ್ಯ. ಪ್ರಾಮಾಣಿಕತೆಯಿಂದ ಒಂದು ಸಂಸ್ಥೆಯನ್ನು ಎತ್ತರಕ್ಕೆ ಕೊಂಡೊಯ್ಯಬಹುದು ಅನ್ನುವುದಕ್ಕೆ ಎಕ್ಸಲೆಂಟ್ ವಿದ್ಯಾ ಸ0ಸ್ಥೆಯೇ ಸಾಕ್ಷಿ ಎಂದರು. ಸನ್ಮಾನಿತರಾದ ಎಸ್ ಡಿ ಎಂ ಕಾಲೇಜಿನ ಉಪಪ್ರಾ0ಶುಪಾಲರಾದ ನಂದಾ ಕುಮಾರಿ ಕೆ ಪಿ ಮಾತನಾಡುತ್ತಾ ಈ ಕಲ್ಲಬೆಟ್ಟುವಿನ ಕಲ್ಲು ಕಲ್ಲುಗಳಲ್ಲಿ ಹೂವುಗಳನ್ನು ಅರಳಿಸುವ ಕೆಲಸವನ್ನು ಯುವರಾಜ ಜೈನ್ ರಶ್ಮಿತಾ ಜೈನ್ ದ0ಪತಿಗಳು ಮಾಡಿದ್ದಾರೆ. ಈ ಸಂಸ್ಥೆ ಈಗಾಗಲೇ ರಾಜ್ಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ನನ್ನ ವಿದ್ಯಾರ್ಥಿಯ ಸಾಧನೆಗೆ ಹೃದಯ ತುಂಬಿ ಬಂದಿದೆ. ವಿದ್ಯೆಗೆ ವಿನಯವೇ ಭೂಷಣ ಅನ್ನುವ ಮಾತಿನ0ತೆ ಸಾಧನೆಗೆ ಗುರುಗಳೇ ಕಾರಣ ಅನ್ನುವ ಅವರ ಮನೋಭಾವವೇ ಅವರನ್ನು ಈ ಎತ್ತರಕ್ಕೇರಿಸಿದೆ. ಈ ಸ0ಸ್ಥೆ ಇನ್ನು ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟಗಳಲ್ಲೂ ಬೆಳಗಲಿ ಎಂದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡುತ್ತಾವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಸದಾ ಕಾರ್ಯಪ್ರವೃತ್ತರಾಗಿರುವ ಶಿಕ್ಷಕರು ಜಗತ್ತಿನಾದ್ಯಂತ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡುತ್ತಾ ಬಂದಿದ್ದಾರೆ. ತಂತ್ರಜ್ಞಾನ ಎಷ್ಟೇ ಮುಂದುವರೆದರೂ ವಿದ್ಯಾರ್ಥಿಯ ಉದ್ಧಾರ ಆಗಬೇಕೆಂದರೆ ಗುರುವಿನ ಸಾಂಗತ್ಯ ಇರಲೇಬೇಕು. ಹಾಗಾಗಿ ಗುರು ಶಿಷ್ಯ ಸಂಬಂಧ ಈ ಹಿಂದಿನಂತೆಯೇ ನಡೆದುಕೊಂಡು ಬಂದಿದೆ ಎಂದರು. ತಮ್ಮ ಬದುಕಿನಲ್ಲಿ ಮಾರ್ಗದರ್ಶನವನ್ನು ನೀಡುತ್ತಾ ಬಂದಿರುವ ಗುರುಗಳನ್ನು ಹಾಗೂ ಸಂಸ್ಥೆಯಲ್ಲಿ ಕಾರ್ಯನಿರತರಾಗಿರುವ ಗುರುಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಸ0ಸ್ಥೆಯ ಮಾಸ ಪತ್ರಿಕೆ “ಮನೋರಮಾ”ಈ ಸಂದರ್ಭದಲ್ಲಿ ಬಿಡುಗಡೆಯಾಯಿತು. 100 ಅಂಕ ತೆಗೆದ ವಿಷಯವಾರು ಶಿಕ್ಷಕರನ್ನು ಮತ್ತು ಉಪನ್ಯಾಸಕರನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಯಿತು. ಸಿಬಿಎಸ್ಸಿ ಶಾಲೆಯ ಪ್ರಾಂಶುಪಾಲರಾದ ಶ್ರೀಪ್ರಸಾದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪದವಿಪೂರ್ವ ಪ್ರಾ0ಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾರರಾದ ಶಿವಪ್ರಸಾದ ಭಟ್ ವಂದಿಸಿದರು.ಉಪನ್ಯಾಸಕರಾದ ಯಶಸ್ವಿನಿ ಮತ್ತು ದಿವ್ಯಾಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img