ಸತ್ತೂರು, ಧಾರವಾಡ, ಸೆ.24: ಅಲೈಡ್ ಸೈನ್ಸಸ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
Published Date: 25-Sep-2025 Link-Copied
ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ, ಅಲೈಡ್ ಹೆಲ್ತ್ ಸೈನ್ಸಸ್ ಘಟಕವು ಸೆಪ್ಟೆಂಬರ್ 24, 2025 ರಂದು 7ನೇ ಬ್ಯಾಚ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಖ್ಯಾತ ಸಮಾಜ ಸೇವಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಅಧ್ಯಕ್ಷರು ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾದ ರಾಜಣ್ಣ ಕೊರವಿ ಅವರು ಮುಖ್ಯ ಅತಿಥಿಗಳಾಗಿದ್ದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಗೌರವ ಅತಿಥಿಗಳಾಗಿದ್ದು ದೀಪ ಬೆಳಗಿಸುವ ಮೂಲಕ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ ರಾಜಣ್ಣ ಕೊರವಿ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ: ಆರೋಗ್ಯ ವೃತ್ತಿಪರರು ಧೈರ್ಯ ಮತ್ತು ಸಹಾನುಭೂತಿಯಿಂದ ರೋಗಿಗಳ ಸೇವೆ ಮಾಡಬೇಕು. ಎಸ್.ಡಿ.ಎಂ ಸಂಸ್ಥೆಗಳು ಶ್ರೇಷ್ಠತೆಯೊಂದಿಗೆ ಮಾನವೀಯ ಸೇವೆಗಳಿಗೆ ಹೆಸರುವಾಸಿಯಾಗಿವೆ. ಹೊಸ ಹೊಸ ತಂತ್ರಜ್ಞಾನದ ಬಳಕೆಯೊಂದಿಗೆ ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸೆಯನ್ನು ನೀಡಬೇಕು. ಸಮಯಪಾಲನೆ, ಶಿಸ್ತು ಮತ್ತು ಒಗಟ್ಟಿಗೆ ಆರೋಗ್ಯ ವೃತ್ತಿಪರರು ಆದ್ಯತೆ ನೀಡಬೇಕು. ಮಾನವೀಯತೆಯಿಂದ ರೋಗಿಗಳ ಸೇವೆ ಮಾಡುವುದರೊಂಗೆ ಉತ್ತಮ ಸಂವಹನವನ್ನು ಹೊಂದಬೇಕು. ಪ್ರತಿದಿನ ನಾವು ದೊಡ್ಡ ಕನಸುಗಳನ್ನು ಕಾಣತ್ತಾ, ಅದನ್ನು ಸಾಧಿಸುವ ಗುರಿ ಹೊಂದಬೇಕು. ಎಸ್.ಡಿ.ಎಂ.ನ ಅತ್ಯುತ್ತಮ ಸೌಲಭ್ಯ ಮತ್ತು ನಿಮಗೆ ಲಭ್ಯವಿರುವ ವಿಫುಲ ಅವಕಾಶವನ್ನು ಬಳಸಿಕೊಳ್ಳಬೇಕು. ಎಸ್.ಡಿ.ಎಂ. ಸಂಸ್ಥೆಗಳು ಸದೃಢ ಕಟ್ಟಡಗಳನ್ನು ನಿರ್ಮಿಸುವುದಲ್ಲದೆ ಜ್ಞಾನದ ಬದ್ರಬುನಾದಿಯನ್ನು ಸಹ ನಿರ್ಮಿಸುತ್ತದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪ ಕುಲಪತಿಗಳಾದ ವಿ. ಜೀವಂಧರ್ ಕುಮಾರ್ ಮತ್ತು ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ವಿಶ್ವವಿದ್ಯಾಲಯದ ಇತರ ಅಧಿಕಾರಿಗಳು, ಅಂಗ ಸಂಸ್ಥೆಗಳ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಹೊಸ ವಿದ್ಯಾರ್ಥಿಗಳಿಗೆ ಬಿಳಿ ಕೋಟುಗಳನ್ನು ವಿತರಿಸಲಾಯಿತು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ಕೆ. ಕುಲಕರ್ಣಿ, ಕಾಲೇಜಿನ ವೈಶಿಷ್ಟ್ಯದ ಬಗ್ಗೆ ಪರಿಚಯ ಮಾಡಿಕೊಟ್ಟರು. ನೇಫ್ರಾಲಜಿ ವಿಭಾಗದ ಪ್ರಾಧ್ಯಾಪಕರಾದ ಡಾ. ನಾಗರಾಜ್ ನಾಯಕ್, ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಉಪ ಕುಲಸಚಿವರಾದ ಡಾ. ಅಜಂತಾ ಜಿಎಸ್, ವಿಶ್ವವಿದ್ಯಾಲಯದ ತತ್ವಗಳು ಮತ್ತು ನೀತಿಗಳ ಬಗ್ಗೆ ವಿವರಿಸಿದರು. ಅಂಗ ರಚನಾಶಾಸ್ತ್ರ ವಿಭಾಗದ ಅಧ್ಯಾಪಕಿ ಡಾ. ರೋಶನಿ ಸದಾಶಿವ, ಕಾರ್ಯಕ್ರಮವನ್ನು ನಿರೂಪಿಸಿದರು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರು ಮತ್ತು ಅಲೈಡ್ ಹೆಲ್ತ್ ಸೈನ್ಸ್ನ ಸಂಯೋಜಕಿಯವರಾದ ಡಾ. ವಿದ್ಯಾ ಎಸ್ ಪಾಟೀಲ್ ಅತಿಥಿಗಳನ್ನು ಸ್ವಾಗತಿಸಿದರು. ಉಪ ಸಂಯೋಜಕರಾದ ಡಾ. ಅನಿಲ್ ಬರ್ಗಲೆ, ಆಡಳಿತಾಧಿಕಾರಿಗಳು ಮತ್ತು ವಿಭಾಗಗಳ ಮುಖ್ಯಸ್ಥರನ್ನು ಪರಿಚಯಿಸಿದರು. ಡಾ. ಉಪೇಂದ್ರ ಜೋಯಿಶ್ ವಂದನಾರ್ಪಣೆ ಸಲ್ಲಿಸಿದರು.